ಒಟ್ಟು 645 ಕಡೆಗಳಲ್ಲಿ , 98 ದಾಸರು , 578 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕೃಷ್ಣರಾಯನೆ ನಿನ್ನ ಕೃತ್ಯಗಳೆಲ್ಲ ಸೃಷ್ಟಿಯೊಳಗೆ ನಾ ಬೀರಲ್ಯಾ ಪ ಕಷ್ಟ ಬಿಡಿಸದೆ ಸುಮ್ಮನಿದ್ದೆಯಾ ಸ್ವಾಮಿ ಅ.ಪ. ಜನನ ಮರಣ ಶೂನ್ಯನೆನಿಸಿಕೊಂಡು ಗೋಪಿ ತನಯನಗಿದ್ದುದ ಹೇಳಲ್ಯಾ ಸನಕಾದಿಸೇವ್ಯ ಪೂಜ್ಯನೆ ತುರುಗಳ ಹಿಂಡು ವನದಲ್ಲಿ ಕಾಯ್ದದ್ದು ಹೇಳಲ್ಯಾ ನಾನು 1 ದನುಜ ಭಂಜನನಾದ ‌ಘನ ಮಹಿಮನೆ ಮಾಗ ಧನಿಗಂಜಿ ಓಡಿದ್ದು ಹೇಳಲ್ಯಾ ಎಣೆಯಿಲ್ಲದಾ ಶೂರ ರಣದೊಳು ಪಾರ್ಥಗೆ ಅನುಗನಾಗಿದ್ದದ್ದು ಹೇಳಲ್ಯಾ ನಾನು 2 ಸತತ ತೃಪ್ತನಾಗಿ ಕ್ಷಿತಿಯೊಳು ಬೆಣ್ಣೆಯ ಮಿತವಾಗಿ ಕದ್ದದ್ದು ಹೇಳಲ್ಯಾ ಕೃತಿದೇವಿರಮಣನೆ ಅತಿ ಪ್ರೀತಿಯಲಿ ಗೋಪ ಸತಿಯರ ಕೂಡಿದ್ದು ಹೇಳಲ್ಯಾ ನಾನು 3 ಶ್ರುತಿತತಿಗಳಿಗಭೇದ್ಯ ಪ್ರತಿಯಿಲ್ಲದೆ ದೇವ ಸತಿಗೊಶನಾದದ್ದು ಹೇಳಲ್ಯಾ ಶತಕೃತು ವಿಧಿವಂದ್ಯ ಸುತರಾಪೇಕ್ಷಿಸಿ ಭೂತ ಪತಿಯನ್ನು ಬೇಡಿದ್ದು ಹೇಳಲ್ಯಾ ನಾನು 4 ಭೂತಳದೊಳು ದೇವತೆಗಳೊಡÀನೆ ಇಂಥ ರೀತಿಲಿ ಚರಿಸಿದ್ದು ಹೇಳಲ್ಯಾ ಭೀತಿರಹಿತ ಜಗನ್ನಾಥವಿಠ್ಠಲನೆ ಅ ದ್ಭುತ ಮಹಿಮನೆಂದು ಹೇಳಲ್ಯಾ ನಾನು 5
--------------
ಜಗನ್ನಾಥದಾಸರು
ಕೃಷ್ಣಲೀಲೆ ಆನೆ ಬರುತಾದೆ ನೋಡಮ್ಮ ಮದ್ದಾನೆ ಬರುತಾದೆ ಪ ಆನೆ ಬರುತಾದೆ ಎಲ್ಲರು ನೋಡಿರಿ ಒಂ-ದಾನೆಯ ಕೊಂದ ಮದ್ದಾನೆಏನೆಂದು ಪೇಳಲಿ ಎಲ್ಲ ದಿಕ್ಕುಗಳಲಿತಾನೇ ತಾನಾಗಿ ಮದ ಸೊಕ್ಕಿದಾನೆಅ ನೀರ ಮುಳುಗಿ ಖಳನ ಕೊಂದು ವೇದ ತಂದುಬರಮದೇವಗಿತ್ತ ಮದ್ದಾನೆಕ್ರೂರ ಚಿತ್ರಗುಪ್ತನೊಡನೆ ಕಾರುಬಾರಿಗಿಳಿದಜಾರ ಕೃಷ್ಣನೆಂಬ ಸೊಕ್ಕಿದಾನೆ 1 ದಶದಿಕ್ಕಿನೊಳು ಘಂಟೆ ಘಣಿರೆಂದು ಬರುತ್ತಿದೆಕುಸುಮಶರನ ಪೆತ್ತ ಮದ್ದಾನೆದಶಕಂಠನ ಕೊಂದು ಅನುಜಗೆ ಪಟ್ಟಗಟ್ಟಿದದಶರಥಸುತನೆಂಬ ಮದ ಸೊಕ್ಕಿದಾನೆ 2 ಗಂಧ ಕಸ್ತೂರಿ ಬೊಟ್ಟು ಗಮಕದಿಂದಲಿ ಇಟ್ಟುಗೊಂದಲಗಡಿಬಿಡಿ ಸುರಲೋಕ ಅಮ್ಮಮ್ಮಬೆಂಬಿಡದೆ ದೈತ್ಯರನು ಕೊಂದ ಗುಣ ಸಂಪನ್ನಸುಂದರ ಕೃಷ್ಣನೆಂಬ ಮದ ಸೊಕ್ಕಿದಾನೆ 3 ಸಾವಿರ ತೋಳವನ ಸರಸದಿಂದಲಿ ಕಡಿದಭುವನ ರಕ್ಷಕನಾದ ಮದ್ದಾನೆಯೌವನದ ಗೋಪಿಯರ ಕಣ್ಮಣಿ ಎನಿಪ ವಸುದೇವಸುತನೆಂಬ ಮದ ಸೊಕ್ಕಿದಾನೆ 4 ಗರುಡವಾಹನವೇರಿ ಧಿಮಕೆಂದು ಬರುತಾನೆಸರುವ ಲೋಕರಕ್ಷಕನೆಂಬ ಮದ್ದಾನೆಉರೆ ಪೂತನಿಯ ಹೀರಿ ಮಾವ ಕಂಸನ ಕೊಂದಸಿರಿಯಾದಿಕೇಶವನೆಂಬ ಮದ ಸೊಕ್ಕಿದಾನೆ 5
--------------
ಕನಕದಾಸ
ಕೃಷ್ಣಾತೀರದಿ ಕುಳಿತಿಷ್ಟವ ಸಲಿಸುವನ್ಯಾರೇ ಪೇಳಮ್ಮಯ್ಯ ಪ ಕಷ್ಟರಹಿತ ಸಂತುಷ್ಟರೆನಿಪ ಸತ್ಯೇಷ್ಟತೀರ್ಥ ಕರಜಪರಾಕ್ರಮರೇ ಅ.ಪ. ಬೋಧ ಮುನಿಯು ಮತ ಶುಭವಾರಿಧಿ ತಾರಕೆ ತಾರೆನೆನಿಪ ಜೀವತಾರ ಶಶಿಕಾಣಮ್ಮ 1 ಶುಭ ತಿಲುಕಾಂಕಿತದಿಂದೊಪ್ಪುವನ್ಯಾರೆ ಪೇಳಮ್ಮಯ್ಯಚಂದ್ರಕಂಠಮಾಲೆ ಕರದಿ ದಂಡವ ಧರಿಸಿಹನ್ಯಾರೆ ಪೇಳಮ್ಮಯ್ಯ ಚಂದ್ರಚರಣ ನಖಶಿಖ ಪರಿಪೂರ್ಣದಿಂದೊಪ್ಪುವ ಗುರುವರ್ಯ ಕಾಣಮ್ಮ 2 ವೃಂದಾವನವರ ಮಂದಿರ ಮಧ್ಯದಿ ರಾಜೀವನ್ಯಾರೇ ಪೇಳಮ್ಮಯ್ಯ ವೃಂದಾರಕ ವರವೃಂದ ವಿನುತನ್ಯಾರೆ ಪೇಳಮ್ಮಯ್ಯ ವೃಂದಾವನ ಸುಂದರ ಗುಣಗಳಿಂಧೊಳೆ ಯುವನ್ಯಾರೆ ಪೇಳಮ್ಮಯ್ಯ ವೃಂದಾವನದೊಳಗಾಶ್ರಿತ ತಂದೆವರದಗೋಪಾಲವಿಠಲನಸೇವಿಪರೇ 3
--------------
ತಂದೆವರದಗೋಪಾಲವಿಠಲರು
ಕೆಳದಿ ಕೇಳುವ ಬಾರೆ ನಳಿನಾಕ್ಷ ವನದಲ್ಲಿ ಕೊಳಲನೂದುವ ಬಗೆಯ ನಳಿನಜಾಂಡವು ತಾನೆ ತಲೆದೂಗುತಲಿದೆ ಕುಳಿತಿರೆ ವಶವಲ್ಲವೆ ಪ ಸರಸಿಜ ನಯನಾಳೆ ಧರೆಯ ಭಾಗ್ಯವ ನೋಡೆ ತರುಗುಲ್ಮಾಲತೆ ನೆವದಿ ಭರದಿ ಪುಲಕಿತಳಾಗೆ ಪರಿಪರಿ ಸುಮದಿಂದ ನೆರೆ ನಸುನಗುತಿಪ್ಪ ಮರುಳೆ ಕಣ್ಣಿಲಿ ನೋಡೆ ವರ ವಿಮಾನಗಳು ಸಂ- ಚರಿಸಿ ಮೆರೆವ ವೈಭವ ಧರೆಯೆಲ್ಲಾ ತಿಳಿಯದು ಲೋಲ್ಯಾಡದೆ ಬಿಡರು 1 ವಾಮಾಲೋಚನೆ ಸುರರ ಧಾಮಾವೆಂಬಿಯಾ ಇದು ಕಾಮತನಯ ಕಾಮದೇವ ಸೋಮಶೇಖರ ತಾನು ತಾಮರಸಾಸನ ಪ್ರೇಮಾದಿ ನಲಿಯುವ ಆ ಮಹರಾದಿ ಲೋಕವೆ ಸಾಮಜಗಮನೆ ಕೇಳೆ ನೀ ಮರುಳಾಗ ಬ್ಯಾಡಾ ಆ ಮುಕುತಿ ಸ್ಥಾನವೆ ಸೇವೆ ಮಾಡುವರು 2 ದೂರ ಜನರಿಗೆ ಸಾಲೋಕ್ಯ ಊರಲಿಪ್ಪರಿಗೆ ಸಾಮೀಪ್ಯ ಗೋರಕ್ಷಕರಿಗೆ ಸಾರೂಪ್ಯ ಸೇರಿದ ಯುವತಿಗೆ ಭರದಿ ಸಾಯುಜ್ಯವೆ ಮೀರಿದೆ ಮುಕುತಿಗಿದು ಭಾರಿ ಭಾರಿಗೆ ಸಾಮಾ ಪೂರೈಸಿ ಮುಕುತರು ತೋರುವರಿಲ್ಲಿ ಆನಂದ ಈ ರಭಸದಿ ವೇಣು ಪೂರೈಸಿ ಸುಖವೀವ ಧೀರ ವಾಸುದೇವವಿಠಲ 3
--------------
ವ್ಯಾಸತತ್ವಜ್ಞದಾಸರು
ಕೇಶವಾಚ್ಯುತ ಮಾಧವಾನಂತ|ಶ್ರೀ ಶಕಮಲದಳೇಕ್ಷಣಾ| ವಾಸುದೇವ ಮುಕುಂದ ಮುರಹರ ಕ್ಲೇಶಹರಣ ಜನಾರ್ಧನಾ|| ವಾಸುಕಿಯ ಪರಿಯಂಕನೆನುತಲಿ|ನೆನೆವನಾವ ನರೋತ್ತಮಾ| ಮೋಸಹೋಗದಿರವರೊಳೆಂದು|ಚರರಿಗ್ಹೇಳಿದನೈಯಮಾ 1 ರಾಮರಾಘವ ರಾಜಶೇಖರ|ರಾವಣಾಸುರಮರ್ದನಾ| ಶಾಮಸುಂದರ ಸಕಲ ಗುಣನಿಧಿ|ಶಬರಿಪೂರಿತ ವಾಸನಾ ಭೂಮಿಜಾಪತಿ ಭೂತನಾಥ|ಪ್ರಿಯನೆಂಬ ನರೋತ್ತಮಾ| ಪ್ರೇಮಿಕನ ನುಡಿಸದಿರಿಯೆಂದು|ಚರರಿಗ್ಹೇಳಿದನೈಯಮಾ 2 ಬಾಲಲೀಲವಿನೋದ ಶ್ರೀ ಗೋಪಾಲ ಗೋಕುಲ ಲಾಲನಾ| ಕಾಲಜಲಧರ ನೀಲಮುರಲೀ ಲೋಲಸುರವರ ಪಾಲನಾ| ಕಾಲಕಾಲನೆ ಕಂಸಹರನನು ತಾವ ನೆನೆವ ನರೋತ್ತುಮಾ| ಕಾಲಿಗೆರಗಿರಿ ಅವರಿಗೆಂದು|ಚರರಿಗ್ಹೇಳಿದನೈಯಮಾ 3 ಮಕರಕುಂಡಲ ಕಿರೀಟ ಕೌಸ್ತುಭ|ಕಟಕಕೇಯೂರ ಭೂಷಣಾ| ಅಖಿಲ ಜಗನುತ ಚರಣಪೀತಾಂಬರನೆ ಶ್ರೀವತ್ಸಲಾಂಭನಾ| ಪ್ರಕಟಿತಾಯುಧ ಶಂಖಚಕ್ರಗದಾಬ್ಜ ನೆನೆವನರೋತ್ತಮಾ| ಸುಖಿಸುವವರನು ತ್ಯಜಿಸಿರೆಂದು ಚರರಿಗ್ಹೇಳಿದನೈಯಮಾ 4 ಶ್ರವಣಪೂಜನೆ ಸ್ಮರಣಕೀರ್ತನೆ ವಂದನೆದಾಸ್ಯದಿ ಸಖ್ಯವಾ| ಬಿಡದನಾವನರೋತ್ತುಮಾ| ಅವನ ಸೀಮೆಯ ಹೋಗದಿರೆಂದು ಚರರಿಗ್ಹೇಳಿದನೈಯಮಾ 5 ಯಾರಮನೆಯಲಿ ತುಲಸಿವೃಂದಾವನದಿ ಶಾಲಿಗ್ರಾಮವು| ಚಾರುದ್ವಾದಶನಾಮ ಹರಿಚಕ್ರಾಂಕಿತದ ಶುಭಕಾಯವು| ಮೀರದಲೆ ಹರಿದಿನದ ವ್ರತದಲಿ ನಡೆವನಾವನರೋತ್ತಮಾ| ದಾರಿ ಮೆಟ್ಟದಿರೆಂದು ತನ್ನಯ ಚರರಿಗ್ಹೇಳಿದನೈಯಮಾ 6 ಸಾಧುಸಂತರು ಬಂದರೆರಗುತ ಪಾದೋದಕದಲಿ ಮೀವನು| ಆದಿನವಯುಗ ವಾದಿಚತುರ್ದಶ ಪರ್ವಕಾಲಗಳೆಂಬನು| ಸಾದರದಿ ಹರಿಪೂಜೆಯಿಂದರ್ಚಿಸುವ ನಾವನರೋತ್ತಮಾ| ಮೋದದಿಂದಲಿ ಬಾಗಿರೆಂದು ಚರರಿಗ್ಹೇಳಿದನೈಯಮಾ 7 ಅಂದು ಹೇಳಿದ ಕಥೆ ರಹಸ್ಯದ ಹರಿಯನಾಮದ ಮಾಲಿಕಾ| ತಂದೆ ಮಹೀಪತಿ ಎನ್ನ ಮುಖದಲಿ ನುಡಿಸಿದನು ಭೋಧಾಷ್ಟಕ| ತಂದು ಮನದಲಿ ಭಕುತಿಯಿಂದಲಿ ನೆನೆವನಾವನರೋತ್ತಮಾ| ಇಂದು ಜೀವನ್ಮುಕ್ತನಮಗಿನ್ನೇನು ಮಾಡುವನೈಯಮಾ 8
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಕೇಳಿದಾಗಲೇ ಹೇಳಬಹುದೇನೋ ಬ್ರಹ್ಮಾನುಭವಮಿದು ಪ ಹಾಳುವಾದವಲಾ ವಿಚಾರಿಸಲೇಳು ವ್ಯಸನಕೆ ಸಿಲ್ಕಿ ಕುಣಿಯುವ ಅ.ಪ ಖೂಳ ಕಪಟರಿಗೆಂತು ಅನುಭವಶಾಲಿಗಾಗಿಹ ಪರತರಾನ್ವಯ ಸುಳ್ಳಮಳ್ಳರಿಗಾಗದಹುದಣ್ಣ ವೇದಾಂತಸಾರಸ ಮೂಲ ಪ್ರಣವ ವಿಚಾರಕಹುದಣ್ಣ ಯಾರಾದಡಾಗಲೀ ನೀಲಜ್ಯೋತಿಯ ಕಾಣದೆ ಬರಿ ಶೂಲ ಶೀಲಕೆ ಸಿಲ್ಕಿ ಕುಣಿಯುತ ಆಲಿಸೆಂದು ನಮಸ್ಕರಿಸುತಿಹ ಜಾವಿದ್ಯದ ಪೋಲಿ ಜನಗಳು 1 ಪಂಡಿತರಿಗೇನದು ಕಂಡು ತಿಳಿಯಣ್ಣ ದೂರವಿಲ್ಲವು ಅಂಡದೊಳಗಿಹ ಪಿಂಡವೇ ಬ್ರಹ್ಮಾಂಡ ವೇದಾಂತಾರ್ಥ ಸಮ್ಮತಿ ಭಂಡರಿಗೆ ಬಹುಭಾಷೆಗಹುದೇನ ಕುಂಡಲೀಪುರ ತತ್ಪ್ರಯಾಣವು 2 ಓದಿ ವಿಕ್ರಯವನ್ನು ಮಾಡ್ಯಾರು ಓಂಕಾರ ಬೀಜದ ಹಾದಿಯನು ತಾವು ಕಾಣದೋಡ್ಯಾರೊ ರಾ ಜಾಧಿರಾಜರೂ ಕಾವಿ ಜಗಳವ ಕುಂತು ನೋಡ್ಯಾರು ವೇದಾಂತಿಗಳೂ ನಿಜ ಜ್ಞಾನಪುತ್ಥಳಿಯನ್ನು ಕಂಡ್ಯಾರು ಆದಿಮಧ್ಯಾಂತಗಳರಿಯದ ವಾದಿಗಳಿಗೆಂತಕ್ಕು ತತ್ವದ ಬೋಧೆಯೊಳಗಿಹುದು ಆದಿತತ್ವವು 3 ಕವಿಗಳೆಷ್ಟೋ ಕಷ್ಟಪಟ್ಯಾರು ಅವಸಾನಕರಂ ಭವದ ಬಲೆಯೊಳು ಕಟ್ಟಿಕುಟ್ಯಾರು ಆಗಲ್ಲಿ ಸುಜನರು ಜ್ಞಾ ನವೈರಾಗ್ಯವನು ಕೊಟ್ಯಾರು ಶಿವನು ತಾನೆಂತೆಂಬ ಅದ್ವೈತವನು ಆಡಲ್ಕಡಕಲಹುದೇ ಭುವನದೊಳು ಪಂಚಾಕ್ಷರೋ ನಿಜತ್ರಿಣೆಯಸತಿ ಮೋಕ್ಷೆಚ್ಛೆ ಕವಚಂ4 ನಾಗನಗರಿಪುರೀಶ ಕಾಣಣ್ಣ ಆಧ್ಯಾತ್ಮದನುಭವ ಕಾಗಿ ನಿನ್ನೊಳ ಹುಡುಕಬೇಕಣ್ಣ ಹಂಸಾಶ್ರಯದಿ ನಿನ್ನೊ ಳಗಿದೆಲ್ಲವು ಹುಡುಕಿ ನೋಡಣ್ಣ ಭೋಗಿಶಯನ ಶ್ರೀ ತುಲಸೀರಾಮನ ರಾಗವಿರಹಿತನಾಗಿ ಭಜಿಸಿದಡಾಗ ನಿನ್ನೊಳಗಂಕುರಿಪುದ 5
--------------
ಚನ್ನಪಟ್ಟಣದ ಅಹೋಬಲದಾಸರು
ಕೇಳಿದೆ ಏನೇ ಕೊಳಲ ದನಿಯ ಬಾಳಿಗೆ ಅಮೃತವ ಬೀರುವ ಸವಿಯ ಪ ಬೃಂದಾವನದಲಿ ನಂದಯಶೋದ ಕಂದನು ಮುರಳಿಯನೂದುತಿರೆ ಸುಂದರಿಯರು ಆನಂದದಿ ನರ್ತಿಸಿ ಇಂದಿರೆಯರಸನ ಹೊಗಳುವರು 1 ಕಿರುಗೆಜ್ಜೆಯ ದನಿ ಕಿಣಿಕಿಣಿಸುತಿರೆ ಕರದ ಕಂಕಣಬಳೆ ಗಣಗಣರೆನಲು ಚರಣದ ಕಡಗ ಝಣ್ ಝಣಿ ಝಣಿರೆನುತಿರೆ ಪರಮ ಸಂತೋಷದಲಿ ಹರಿಯರುಳುತಿರೆ 2 ಮರುಗ ಮಲ್ಲಿಗೆ ಪಾದರಿ ಸುಮ ಪರಿಮಳ ಭರಿತ ತಂಬೆಲರು ಪರಿಚರಿಸುತಿರೆ ಪರಮಾನಂದವೆ ಪುರುಷನಾಗಿರುವ ಮಾಂ ಗಿರಿಪತಿಯೊಲವನು ಪಡೆಯುವ ಗೆಳತಿ 3
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಕೇಳು ಒಳ್ಳೆವರ ಕೂಡಾ ನಿನ್ನ ಹಿತವ ಪ್ರಾಣೀ | ತಾಳಿ ನರದೇಹದಿಂದ ಮಾಡುವರೇ ಹಾನಿ ಪ ಮುತ್ತಿನಂಥಾ ದಿನವಿದು | ಸಿಕ್ಕದಣ್ಣಾ ಮುಂದ | ಚಿತ್ತ ಸ್ಥಿರವಾ ಮಾಡಿ ಹರಿಯ ನೆನೆಯಬೇಕು ಇಂದ 1 ಬಾಲನಾಗಿ ಕೆಲವು | ದಿನದಿಂದ ಯೌವನದಿ | ಮ್ಯಾಲ ಯೆಚ್ಚರವ ಬಿಟ್ಟು | ಹರಿಗೆ ವಿಮುಖನಾದಿ 2 ಜರೆಯು ಬಂದ ಕಾಲದಲ್ಲಿ | ತನುವು ತನ್ನದಲ್ಲಾ | ಸರಕು ಮನೆಯೊಳಿಲ್ಲಾ 3 ಈಗಳವೆ ಯಚ್ಚರಿತು | ಹರಿಯಾ ಬಲಗೊಂಡು | ಹಿಂಡು 4 ಶರಣು ಹೋಗುವಾ | ಭಾವಭಕ್ತಿಯಲ್ಲಿ ದಾವಪ್ರೇಮಿ | ತಾರಿಸುವಾ ಗುರು ಮಹಿಪತಿಸುತ ಸ್ವಾಮಿ 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಕೈವಲ್ಯ ಕೃಪೆಯ ಸುಜ್ಞಾನ ಸಾಧುಜನರ ನಿಜಸ್ಥಾನ ಅನುದಿನ 1 ವರ್ಣದೋರುವದನೇಕ ತುಂಬಿ ವರಮುನಿಗಳಿಗೆ ಕೌತುಕ ಪರಿಪೂರ್ಣಗಿಹ್ಯ ಮೂರು ಲೋಕ ದೋರುತಿಹದು ಬ್ರಹ್ಮಸುಖ 2 ಎನ್ನೊಳಗಾನಂದ ಭರಿತ ಜನವನದೊಳು ತಾ ಸಾಕ್ಷಾತ ತನ್ನೊಳಗದೆ ತಾ ಸ್ವಹಿತ ಕೈವಲ್ಯನಿಧಿ ಗುರುನಾಥ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಕೊಡು ಬೇಡುವೆನೊಂದ ಚಿದಾನಂದಕೊಡು ಬೇಡುವೆನೊಂದಕೊಡು ಬೇಡುವೆನೊಂದಕಡೆ ಹಾಯ್ದು ಹೋಗಿ ಮೆಲ್ಲಡಿಯಾದ ನಿಮ್ಮ ಪಾದದಡಿಯೊಳಡಗುವುದಾ ಪ ನಿತ್ಯ ನಿರಂಜನ ಕರ್ಮ ನಿರ್ಮಾಯವಾದ ಷ-ಡೂರ್ಮೆ ವಿರಹಿತೆಂಬ ಪೆರ್ಮೆಯೊಳಡಗುವುದ 1 ವಿಶ್ವಾತ್ಮ ವಿಶ್ವಾಧಾರ ವಿಶ್ವಹರ ವಿಶ್ವವಿಶ್ವದಾಕಾರ ಸ್ವಸ್ವ ನಿಸ್ವನದ ಸ್ವಸ್ವಪೂರಿತ ಮ-ಹಾಸ್ವಯಂ ಜ್ಯೋತಿಯೆ ಭಾಸ್ವ ಮೂರುತಿ ಈಗ 2 ಶತಕೊಟಿ ಸೂರ್ಯರಾಕಾರ ಶತಾಶತ ಶತವಿಂದು ಪ್ರಭಾವಕಾರಸ್ತುತಿಗೆ ಮೀರಿದ ದೊರೆಯೋಗಿ ಚಿದಾನಂದಪತಿಯ ಪಾದಪದ್ಮನುತಿಸಿ ಕೊಡುವುದೀಗ 3
--------------
ಚಿದಾನಂದ ಅವಧೂತರು
ಕೊರವಂಜಿ ಪದ ಬಾರೆ ಸತ್ಯಭಾಮೆ ತೋರೆ ನಿಮ್ಮ ಸುಹಸ್ತದ ಠೇವೆ ಧ್ರುವ ಸರ್ಕನೆ ಬಾರವ್ವಾ ಅರಿಕ್ಯುಳ್ಳ ಗರತಿ ಕರವ ಕೊರವತಿ ತಾರ್ಕಣ್ಯ ಬರುತಾದ ಪರಮ ಸುವಾರ್ತಿ ತರ್ಕರಹಿತ ವಸ್ತು ಕರಕೊ ಸುಮೂರ್ತಿ 1 ಓಯವ್ವ ಅವ್ವ ಬಾರೆ ನಮ್ಮವ್ವ ದೈವುಳ್ಳ ಗರತಿ ನೀನವ್ವ ದೈವ ಬರುದೆ ನಿನ್ನೊಳಗವ್ವ ಕೈದೋರೆ ಕೈದೋರೆ ಕೈದೋರೆ ನಿಮ್ಮ 2 ಕೈದೋರೆ ಕೈದೋರೆ ಕೈದೋರೆ ನಿಮ್ಮ ಕೈಯ ಲಕ್ಷಣ ನೋಡಿ ಹೇಳುವೆನಮ್ಮ ಅಯ್ಯ ಬರುತಾನೆ ಆಶೇಲಿ ನಿಮ್ಮ ಕೈಗೊಟ್ಟು ಕೇಳೆ ನಿಜ ಗುಹ್ಯವರ್ಮ 3 ಸುಳ್ಳು ಮಾತನಾಡಿ ಒಡಲ ಹೊರಳವಲ್ಲ ಬಲ್ಲಷ್ಟು ಬೊಗಳುವೆ ವಿಷಯ ದಾಸ್ಯವಳಲ್ಲ ಉಳ್ಳಷ್ಟು ಹೇಳುವೆ ಕೇಳೆ ಶಿವ ಸೊಲ್ಲ ಹೇಳುವ ಮಾತಿದು ಘನ ಗುರು ತಾ ಬಲ್ಲ 4 ಕೊರವಂಜಿ ಮಾತಿದು ಕಿವಿಗೊಟ್ಟು ಕೇಳಮ್ಮ ಬರುತಾನ ಉದರಲಿ ಹುಟ್ಟಿ ಸಗುಣ ನಿಮ್ಮ ತಾರಿಸುವ ಸ್ವಾಮಿ ಪತಿತ ಪಾವನ ನಿಮ್ಮ ಹರಷದೋರುವ ನಿತ್ಯಾನಂದೋ ಬ್ರಹ್ಮ 5 ಎಂದ ಮಾತನೆ ಕೇಳಿ ಬಂದಳು ಭಾವೆಮ್ಮ ಚೆಂದ ಉಳ್ಳ ಸುರಸ ವಾಕ್ಯ ಕೇಳಿದಳೊಮ್ಮೆ ಬಂದು ಹರುಷದಿ ಪೂರ್ಣ ಸಂದಿಸಿಟ್ಟಳು ಪ್ರೇಮ ಒಂದೆ ನಿಜಸುಮಾತ್ಹೇಳ್ಯೆಂದಳು ನೇಮ 6 ಎಲ್ಲಿಂದ ಬಂದೆವ್ವ ಸೊಲ್ಲ ಬೀರುತ ಶಿವ ಬಲ್ಲ ಮಹಿಮಳೆಂದು ನಾನರಿಯೆನವ್ವ ಇಲ್ಲೆವೆ ಕಂಡೆ ನಾ ಸೊಲ್ಲಿನ ಮಹಿಮರು ಎಲ್ಲ ನೆಲೆನಿಭೇಳೌವ್ವ 7 ಸರಿಯ ಬಂದರ ನಿನ್ನ ಮರಿಯೆನವ್ವ ಎಂದು ಖರೆ ಉಳ್ಳ ಮಾತನೆ ಹೇಳೆ ನಿಜ ಒಂದು ಹಿರಿಯರಗೀ ಮಾತು ಸರಿಯ ಬಾವ್ಹಾಂಗಿಂದು ಬೀರವ್ವ ನಿಜಸಾರವಿಂದು 8 ಲಕ್ಷ ಎಂಬತ್ತುನಾಲ್ಕು ಗ್ರಾಮವ ನೋಡಿ ಲಕ್ಷಿಸುತ ಬಂದ ಲಕ್ಷಣ ನಿಜಗೂಡಿ ಲಕ್ಷುಮಿ ಕರದೋರುತದ ನಿಮ್ಮೊಳೊಡಮೂಡಿ ಅಕ್ಷಯಾನಂದ ಬರುತಾನೆ ಇದರಿಡಿ 9 ಕರ ಕೊಟ್ಟಳು ಸುಶೀಲೆ ವರ ಕೃಪೆಯಲಿ ಕೊರವಂಜಿ ಮಾತಲಿ ಅರಿತಳು ತಾ ತನ್ನಲಿ ಪರಮಾನಂದ ಲೀಲೆ ಬೆರದಳು ಕೇಳಿ 10 ನುಡಿಯುವ್ವ ಸಲಲಿತವಾದ ನಿಜವಾಕ್ಯ ಬಡುವಂತೆ ಹರುಷವು ನೋಡಿ ತ್ರಯಲೋಕ್ಯ ಬಡಸವ್ವ ನನಗಿಂದು ಇದೆ ನಿಜ ಮುಖ್ಯ ಕುಡಲಿಕ್ಕೆ ನಿನಗಿದು ಶಕ್ಯ 11 ಮನದಂತೆಯಾದರ ನೆನದೇನವ್ವ ನಿಮ್ಮ ಅನುಕೂಲಾಗುವ ಪುಣ್ಯ ಪೂರ್ವಾರ್ಜಿತ ನಮ್ಮ ಸಾನುಕೂಲಾಗುವಂತೆ ಬೇಡಿಕೊಳ್ಳಮ್ಮ ನೆನಿ ಎಕನಾತಿ ಎಲ್ಲಮ್ಮ 12 ಒಡಮೂಡಿ ಬಂದರ ಉಡಿಯ ತುಂಬೇನವ್ವ ಜಡಿತಾಭರಣದುಡಿಗಟ್ಟೆ ನಿನಗವ್ವ ಹಿಡಿಯದೆ ಅನುಮಾನ ನುಡಿ ನಿಜ ಸಾರವ್ವ ಕುಡಲಿಕ್ಕೆ ನಿಧಾನದವ್ವ 13 ಕೈಯ ಲಕ್ಷಣದಲಿ ಶ್ರೇಯ ತೋರುತಲ್ಯದ ದಯ ಉಳ್ಳ ಮಹಿಮದ ಸೋಹ್ಯ ಬೀರುತಲ್ಯದ ಭಯವಿಲ್ಲದ ಭಾಗ್ಯ ಅಚಲ ತಾನಾಗ್ಯದ ಜಯಜಯಕಾರ ಭಾಸುತದ 14 ಪುಣ್ಯ ಪ್ರಭೆಯ ಚೆನ್ನಾಗಿ ಭಾಸುತಲ್ಯದೆ ಕಣ್ಣಿಗೆ ಸುಚಿನ್ಹ ಹೊಳವುತದೆ ಚಿನ್ನುಮಯದ ಸುಪುತ್ಥಳಿ ಬರುತದೆ ಬಣ್ಣ ಬಣ್ಣದ ಸುಖ ಬೀರುತದೆ 15 ಅಂಗದೊಳಗ ನಿಮ್ಮ ರಂಗ ಬರುತಾನಮ್ಮ ಕಂಗಳಿಗಿದರಿಡುತದೆ ಹರುಷವು ನಿಮ್ಮ ಭವ ಬಂಧದ ದುಷ್ಕರ್ಮ ಮಂಗಳಕರಾನಂದೊ ಬ್ರಹ್ಮ 16 ನಿನ್ನ ಭಾಗ್ಯಕ ಸರಿ ಇಲ್ಲೆ ಸಂಜೀವನಿ ಚೆನ್ನಾಗಿ ಕೇಳೆ ನೀ ಭಾವೆಗುಣಮಣಿ ಧನ್ಯವಾಯಿತು ನಿನ್ನಂದೆವೆ ಯತಿಮುನಿ ನಿನ್ನೊಳಗುಂಟು ದೇವಶಿಖಾಮಣಿ 17 ಭಾವೆ ನಿನ್ನಿಂದ ಪಾವನ್ನವಾಯಿತು ಜಗ ದೇವಾಧಿದೇವ ಮೂಡುವ ನಿನ್ನೊಳಗೀಗ ಕಾವಕರುಣ ಪ್ರತ್ಯಕ್ಷವಾಗುವ ಯೋಗ ಸುವಿದ್ಯ ಭಾಸುವ ದಿವ್ಯಭೋಗ 18 ಉಂಡ ಊಟ ಕಂಡ ಕನಸು ಪಿಂಡಲಕ್ಷಣ್ಹೇಳುವೆ ಮಂಡಲೊಳಗ ಮಂಡಿಸಿಹ್ಯ ಮಹಿಮೆ ನೀನಗ್ಹೇಳುವೆ ಹಿಂಡದೈವದೊಡಿಯ ನಿನ್ನೊಡಲೊಳಗ ತಾಳುವೆ ಪಂಡಿತರಿಗೆ ಪ್ರಿಯವಾದಾಗ್ಯ ಖಂಡನೀನೆ ಬಾಳುವೆ 19 ನೀನೆ ಜಗಕ ತಾರಿಸುವ ದೈವದೋರಿಕುಡುವೆ ನೀನೆ ಭಕ್ತಜನರ ಜನ್ಮಸಾರ್ಥಕವು ಮಾಡುವೆ ಜ್ಞಾನಗಮ್ಯವಾದ ವಸ್ತುಹಿಡದು ನೀನೆ ಕುಡುವೆ ನಿತ್ಯ ಆಡುವೆ 20 ಅಮ್ಮ ನಿಮ್ಮೊಳು ಘಮ್ಮನ್ಹೊಳುವ ತಮ್ಮ ಬರುತಾನ ಸುಮ್ಮಾನಿಹ್ಹಾ ಸಮೀಪಲೆ ಧಿಮ್ಮ ಹಿಡಿದ ಹಮ್ಮಿನೊಳು ಘುಮ್ಮವಾದರು ಬ್ರಹ್ಮಾದಿಗಳೆ ನಮ್ಮ ನಿಮ್ಮದೆಂಬು ಭ್ರಮೆ ಸುಮ್ಮನ್ಯಾಕಿದೊ ಅಮ್ಮಕೇಳೆ 21 ಬಯಕಿ ಲಕ್ಷಣ ನಿನ್ನ ಹೇಳ್ಹೆನವ್ವಾ ತಾಯಿ ಮಾಯಿಕ ಗುಣ ಸುಟ್ಟು ತಿಂದೇನೆಂಬುದು ಬಾಯಿ ಕೈಕಚ್ಚಿಲೆ ಶುದ್ದಿಲ್ಲಾದವರ ತಾಳದು ಸೋವಿ ಐರಾವತ ಬರುತಾನ ನಿನ್ನೊಳು ಪನ್ನಂಗಶಾಯಿ 22 ಬಾಹ್ಯನಿಷ್ಟರ ಕಂಡು ಬದಿಗೆ ಬರಗುಡಿ ನೀನು ಅಹಂಭಾವಕ ಹೇಸಿ ವಾಕರಿಸುವೆ ನೀನು ಗುಹ್ಯ ಹೇಳುವೆ ನಾನು ಸಾಹ್ಯ ಮಾಡುವ ಶ್ರೀಗುರು ತಾನು 23 ಕಾಮಕ್ರೋಧ ಕರದು ತಿಂದೇನೆಂಬುದು ಬಯಕಿ ನೇಮದಿಂದಲಿ ಮದ ಮತ್ಸರನೆ ನೂಕಿ ಪ್ರೇಮವಿಲ್ಲದವರ ಎಂದಿಗಾದರ ಸೋಕಿ ವರ್ಮಿಕರಿಗೆ ನೀ ಕೈಯಗುಡುವಾಕಿ 24 ಆಸಿ ಎಂಬುದು ಅಟ್ಟುಅರದೇನೆಂಬುದು ಬ್ಯಾಗ ಹುಸಿನುಡಿವೆಂಬದು ಹುರವಾದೀಗ ಹಸನಾದ ಬಯಕೀದು ಋಷಿ ಮುನಿಗಳ ಯೋಗ ಲೇಸು ಲೇಸು ನಿನ್ನ ಅಂತರಂಗ 25 ಧನ್ಯವಾದ ರಾಜಯೋಗವ ಬಯಸುದು ಉನ್ಮನವಾಗಿ ಊರ್ಜಿತವಾದೇನೆಂಬುದು ಸ್ವಾನುಭವದ ಸುಖ ಸೂರ್ಯಾಡೇನೆಂಬುದು ಭಿನ್ನ ಭೇದಕ ಕಣ್ಣ ತ್ಯರಿಯದಿದು 26 ವಾಸುದೇವನ ಭಕ್ತಿ ಆಶ್ರೈಸೇನೆಂಬುದು ಶ್ವಾಸೋಚ್ಛ್ವಾಸಕ ಒಮ್ಮೆ ಬಯಸುವುದು ವಿಷಯ ಪ್ರಪಂಚಕ ಹೇಸಿ ತಾ ಜರೆವುದು ಕುಸುಮನಾಭನ ಸೇವೆ ಇಚ್ಛಿಸುವದು 27 ಒಮ್ಮೆ ಸರಸ್ವತಿ ಕೂಡ ಸರಸಾಡೇನೆಂಬುದು ಒಮ್ಮೆ ಲಕ್ಷುಮಿ ಕೂಡ ಲೋಲಾಡೇನೆಂಬುದು ಒಮ್ಮೆ ಪಾರ್ವತಿ ಕೂಡ ಪವಡೀಸೆನೆಂಬುದು ಒಮ್ಮೆ ಏನುನೊಲ್ಲ್ಯೆನೆಂಬುದು 28 ಹೇಳೇನೆಂದರೆ ನಿನ್ನ ಬಯಕಿಯ ಉಲ್ಹಾಸ ತಿಳಿಯದಿನ್ನೊಬ್ಬರಿಗ ಗರ್ಭದ ಸುವಾಸ ಉಲವುತದೆ ನಿನ್ನೊಳು ಸುಪ್ರಕಾಶ ಥಳಥಳಗುಡುತಿಹ್ಯ ಬಾಲವೇಷ 29 ಧನ್ಯ ಧನ್ಯ ನಿನ್ನ ಗರ್ಭಹೊಳುವ ಹೊಂಬಣ್ಣವು ಒಡಲು ನಿನ್ನ ಪುಣ್ಯ ಪಾವನ್ನವು ಧನ್ಯ ಧನ್ಯ ನಿನ್ನ ದರುಷಣದ ಜೀವನವು ಧನ್ಯ ಧನ್ಯ ನಿನ್ನ ಕಂಡ ಜನರ ಜೀವಪ್ರಾಣವು 30 ಭಾವೆ ನಿನ್ನಿಂದ ಖ್ಯಾತಿಪಡೆದ ಪ್ರಹ್ಲಾದನು ದೇವ ದೇವ ಬಂದು ಸ್ತಂಭದೊಳು ಮೂಡಿದನು ಆವಾವ ಠಾವಿನೊಳು ಬಂದು ರಕ್ಷಿಸಿದನು ಜೀವ ಜೀವ ತಾನೆ ಅಗಿ ಪ್ರಾಣನುಳಹಿದನು 31 ನಿನ್ನ ಬಲಗೊಂಡು ದ್ರೌಪದಿಯ ಖ್ಯಾತಿಪಡೆದಳು ಪುಣ್ಯ ಉಳ್ಳ ಮಹಿಮನಂಘ್ರಿ ಕಣ್ಣಾರ ಕಂಡಳು ಚೆನ್ನಾಗಿ ಬಂದು ಸ್ವಾಮಿ ಲಜ್ಜೆಗಾಯ್ದು ಸಭೆಯೊಳು ಬಣ್ಣ ಬಣ್ಣ ವಸ್ತ್ರ ಪೂರಿಸಿದಾನೇಕಗಳು 32 ಸ್ತುತಿಯು ಮಾಡಲು ನಿನ್ನ ಯತಿಮುನಿಗಳವಲ್ಲ ಗತಿಯ ಪಡೆದರು ಸಕಲ ಮುನಿಜನರೆಲ್ಲ ಅತಿ ಹರುಷವು ಕೂಡಿದರು ಜಗದೊಳಗ್ಯಲ್ಲ ಹಿತದೋರುತಿದೆ ವಸ್ತು ಮಯವೆಲ್ಲ 33 ಹೊಳೆವ ಸುಳಿವ ಚೆಲುವ ನಿನ್ನೊಳಗ ನಲುವನೆ ಕಳವಿಲೊಯಿದ ವೇದನುಳುಹಿದವನು ಬೆಳೆವನೆ ಭಾರ ತಾಳಿದವನು ಉಲುವನೆ ನೆಲವ ಗೆದ್ದ ಬಲಿಯು ನಿನ್ನೊಳಗೆ ಒಲುವನೆ 34 ಸೀಳಿ ದೈತ್ಯನ ಕೊಂದ ಶೂರ ಘಮಗುಡತಾನೆ ಅಳದು ಭೂಮಿಯ ಕೊಂಡು ಬೆಳದವ ಬರುತಾನೆ ತಿಳಿದು ಪಿತರ ಸೂಡುಕೊಂಡವ ಬರುತಾನೆ ಬಲುಪರಾಕ್ರಮದವ ತೋಳುತಾನೆ 35 ತಾಂ ಸಂಚರಿಸ್ಹ್ಯಾನ ನಿನ್ನೊಳಗ ಮೂಡಿ ಬರುತಾನೆ ಬ್ಯಾಗೆ ನಗುತ ಬರುತಾನೆ ಈಗ ಕೈಯಗೊಟ್ಟು ಬರುತಾನೆ ನಿನಗೆ 36 ಸಾಧೀಸಿ ಕೇಳೆ ಕಿವಿಗೊಟ್ಟು ಒದುಗುವ ತಾಂ ಇದರಿಟ್ಟು ಉದಿಯವಾಗುವ ದಯವಿಟ್ಟು ಸದ್ಬಕ್ತರಿಗೆ ಕೈಯಗೊಟ್ಟು 37 ಹುಟ್ಟುವ ಶಿಶುವಿನ ಘಟಣಿಯ ಬಹಳ ಗುಟ್ಟೊಡಿಯಲು ತಾಂ ಮುಟ್ಟನು ತಾಳ ಕಟ್ಟುವ ದೈತ್ಯರ ದಿಟ್ಟ ಮಾ ಸಾಳ ದೃಷ್ಟಿಸಿ ನೋಡುವ ನಿಷ್ಠರ ಮೇಳ 38 ಶಿಶುವಿನ ಲಕ್ಷಣ ಬಲು ಅಗಾಧ ಪರಿ ಮಾಟವು ಋಷಿಗಳ ಬೋಧ ಹಸು ನೀರಡಿಸರವುದು ಶ್ರೀಪಾದ ಬಸುರಿನ ಬಯಕಿದು ಬಲುಸುಸ್ವಾದ 39 ಘಮಗುಡುತದೆ ಅನಾಹತದ ಧ್ವನಿಯು ಕ್ರಮ ತಿಳಿವದು ಸುಯೋಗದ ಮನಿಯು ಧಿಮಿಗುಡುತದ ಆನಂದದ ಖಣಿಯು ಭ್ರಮ ಬಿಡಿಸುವ ಘನ ಚಿಂತಾಮಣಿಯು 40 ಹುಟ್ಟಿ ಬರುತಾನಿವ ಶಿಷ್ಟರ ಮನಿಲಿವ ದುಷ್ಟ ಮರ್ದನ ದೇವ ನಿಷ್ಠರಿಗೆ ಕಾವ ಎಷ್ಟೆಂದ್ಹೇಳಲವ್ವ ಸೃಷ್ಟಿಗಧಿಕನಿವ ಮುಟ್ಟಿ ಮುದ್ರಿಸುವ ದಿಟ್ಟೆದೆ ಕೂಸವ್ವ 41 ವರ್ಣಿಸಲಾಗದು ಶಿಶುವಿನ ವಿವರಣ ದಣಿಯಿತು ಕೊಂಡಾಡಿ ವೇದಸುಪುರಾಣ ಖೂನ ತಿಳಿಯದು ತಾನು ಶಾಸ್ತ್ರಕ ಸಂಪೂರ್ಣ ದ್ಯಾನ ಮೋನಕ ದೂರಗಮ್ಯ ಸ್ಥಾನ 42 ಗುಟ್ಟು ತಿಳಿಯದ ವಸ್ತು ಹುಟ್ಟಿಬಾಹುದು ಕೇಳಿ ಉಂಟಾಗುವದು ನಿನ್ನೊಳು ನೆನದಾಗಳೆ ಘಟ್ಯಾಗಿ ಅನುಭವಿಸುತ ನೀನೆ ಬಾಳೆ ದೃಷ್ಟಿಯೊಳೀಗುಟ್ಟು ಆರೀಗ್ಹೇಳೆ 43 ಬಸುರು ಬಯಕೆಂಬುದು ಹೆಸರಿಸಲಳವಲ್ಲ ಹಸನಾಗಿ ಅನುಭವಿಸುವ ಪುರುಷನೆ ಬಲ್ಲ ವಾಸುದೇವನ ಕಾಣದಿಹ್ಯದೆ ಕಣ್ಣಲ್ಲ ಆಸಿ ಅಳಿದವರೆ ತಾಂ ತಿಳಿದರೆಲ್ಲ 44 ಹುಟ್ಟುವ ಲಕ್ಷಣ ಕೇಳೆ ನೀ ಕಿವಿಗೊಟ್ಟು ಮುಟ್ಟಿ ಮುದ್ರಿಸಿಹ್ಯ ಗುರು ಕಟಾಕ್ಷವ ಕೊಟ್ಟು ಇಟ್ಟುಕೊ ಈ ಮಾತು ಆರಿಗ್ಹೇಳೆ ಬಿಟ್ಟು ಗಂಟು ಕಟ್ಟಿದ ಮಾತು ಹೇಳೆಬಿಟ್ಟು 45 ಆಲಕ್ಷವೆಂಬ ಸುನಕ್ಷತ್ರದಲಿ ಪುಟ್ಟಿ ಸುಲಕ್ಷಣದಲಿ ಬರುತಾನೆ ಜಗಜಟ್ಟಿ ನೆಲಯುಗೊಂಡಾಡಿಸಿ ಮನಮುಟ್ಟಿ 46 ಜನ್ಮನಾಮೆಂಬುದು ಕೂಸಿನ ನಿರ್ಗುಣ ಸಮಸ್ತರಿಗೆ ನಡವ ನಾಮವೆ ಸಗುಣ ಬ್ರಹ್ಮಾನಂದದಿ ಲೋಲ್ಯಾಡುವ ಪರಿಪೂರ್ಣ ಕಮಲನಯನ ಸ್ವಾಮಿ ರಮಾರಮಣ 47 ಕೂಸು ಎಂದರ ತಾನು ಕೂಸು ಎನಲಾಗದು ವಾಸವಾಗ್ಯಾಡುದು ವಿಶ್ವಲಿದು ಹೆಸರನೇಕಪರಿಯಲಿ ಕರಿಸಿಕೊಂಡು ಲೇಸು ಲೇಸಾಗಿ ತಾ ಆಡುವುದು 48 ಹಿಂದ ಅಡಿದ ಆಟ ಮಂದದೆ ಆಡುದು ಎಂದಿಗ್ಯದರ ಗುಟ್ಟು ತಿಳಿಯಗುಡುದು ಒಂದಿಸಿದವರ ತನ್ನೊಳು ಕೂಡಿಕೊಂಬುದು ಒಂದೆ ವಸ್ತುವಾಗಿ ತೋರುವುದು 49 ಹೇಳುವೆ ಕೇಳೆ ಶಿಶುವಿನ ಆಟ ತಿಳಿಯಲು ಜಗದೊಳು ಬಲು ಅವ್ಹಾಟ ನೆಲಿ ತಿಳಿದವರಿಗೆ ತೋರುದದು ನೀಟ ನಲಿನಲಿದಾಡುವ ಸಲಲಿತದಾಟ 50 ಒಮ್ಮೆ ನೀರನೆ ಚಲಿಪಿಲಿ ಮಾಡುವ ಒಮ್ಮೆ ಬಾಗಿ ಜಗನೆಗುವ ಒಮ್ಮೆ ಹಲ್ಲಿಲೆ ಬೇರನೆ ಅಗಳುವ ಒಮ್ಮೆ ಬರುತಲಿ ಗುರುಗುಡುವ 51 ಒಮ್ಮೆ ಬಲು ಗಿಡ್ಡಾಗಿ ತೋರುವ ಒಮ್ಮೆ ಪರಾಕ್ರಮ ಹಿಡುವ ಒಮ್ಮೆ ವನದೊಳಗಾಡುತ ಹೋಗುವ ಒಮ್ಮೆ ಕಡವ ಬೆಣ್ಣೆಯ ಮೆಲುವ 52 ಒಮ್ಮೆ ಬತ್ತಲೆ ತ್ರಿಪುರದಲಿ ಸುಳಿವ ಒಮ್ಮೆ ಏರುವ ತಾ ಹಯವ ಒಮ್ಮೊಮ್ಮಾಗುವ ತಾನೆವೆ ಸಗುಣವ ಒಮ್ಮೊಮ್ಮಾಗುವ ನಿರ್ಗುಣವ 53
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಕೊಳಲನೂದುವ ಚದುರನ್ಯಾರೆ ಪೇಳಮ್ಮಯ್ಯತಳಿರಂದದಿ ತಾ ಪೊಳೆವ ಕರದಿ ಪಿಡಿದು ಪ ನಾದದಿ ತುಂಬಿತು ಗೋವರ್ಧನಗಿರಿಯಾದವಕುಲ ಘನ ಒರೆದಿತು ಖಗಕುಲ ಸಾಧಿಸಿ ನೋಡಲು ಕೃಷ್ಣನ ಈಗಲೆಸಾಧ್ಯವೆ ನೀ ಬೃಂದಾವನದೊಳು1 ಮೇವು ಮರೆತವು ಗೋವುಗಳೆಲ್ಲವುಸಾವಧಾನದಿ ಹರಿದಳು ಯಮುನಾಆವು ಕಾವುತಲಿ ಗೋವಳರೆಲ್ಲರಹಾವ ಭಾವದಲಿ ಬೃಂದಾವನದೊಳು 2 ಕದಂಬ ವನದೊಳು 3
--------------
ವ್ಯಾಸರಾಯರು
ಕೋಲು ಕೋಲೆ ಕೋಲು ಕೋಲನ್ನ ಕೋಲೆ ಮೂಲೆ ಮೂಲೆಯ ಹೊಕ್ಕು ಅಡಗಿರ್ದ ಕೋಲೆ ಪ ಕೆಂಜಿಗ ಉಡನು ಬಂದು ಮುಂಚಿಕವಲ ಕೊಟ್ಟು ಅಂಚೆಡೆಗಳನೆಲ್ಲ ಸುಲಿದರ್ದ ಕೋಲೆ 1 ಆನೆ ಕುದುರೆಯಿಲ್ಲ ಸೇನೆ ಬಹಳವಿಲ್ಲ ಏನೆಂದು ಬೆಸಗೊಂಬರಿಲ್ಲದ ಕೋಲೆ 2 ಮುನಿಯ ಭಾವನದಂಡು ಮನೆ ಮನೆಗಳ ಹೊಕ್ಕು ಧನಕನಕಂಗಳ ಸುಲಿದಿರ್ದ ಕೋಲೆ 3 ಮಕ್ಕಳು ಮರಿಗಳು ವೃದ್ಧ ಜವ್ವನರನ್ನು ದಿಕ್ಕುದಿಕ್ಕಿನ ಕಾನಿಗಟ್ಟಿದ ಕೋಲೆ 4 ಜನರನ್ನು ತರಿದು ಸುಲಿದು ಕರುಗಳ ತರುಗಳ ಹಿಂಡನು ಹೊಡೆದಿರ್ದ ಕೋಲೆ 5 ಕೊಟ್ಟ ಕಣ್ಣಿಯನೆಲ್ಲ ಕಿತ್ತೊಯ್ದು ಸೂಸ್ಯಾನು ಪಟ್ಟೆ ಪೀತಾಂಬರಗಳ ನೊಯ್ದ ಕೋಲೆ 6 ಕಾಣಿ ಜೀವರನೆಲ್ಲ ಹಾಡಿ ಹಿಳಿದು ಹಿಪ್ಪೆಹೀರಿದ ಕೋಲೆ 7 ಇಟ್ಟವಡವೆ ವಸ್ತು ಇಟ್ಟಲ್ಲಿ ಇಲ್ಲದೆ ಕೆಟ್ಟು ಜನರು ಹೊಟ್ಟೆ ಹೊಡಕೊಂಬರು 8 ಉಟ್ಟು ತೊಟ್ಟುದನೆಲ್ಲ ಸುಲಿದುಬೆತ್ತಲೆ ಮಾಡಿ ಬಿಟ್ಟು ಮನೆಗೆ ಬೆಂಕಿ ಕೊಟ್ಹೋದ ಕೊಲೆ 9 ಕೆಲರ ತಲೆಯ ಕುಟ್ಟಿ ಕೆಲರು ಸುಲಿದು ಬಿಟ್ಟು ಕೆಲರಿಗೆ ಮುರುವಾಳ ವಿಕ್ಕಿದ ಕೋಲೆ 10 ಅಟ್ಟಡಿಗೆಯ ನುಂಡು ಇಟ್ಟೊಡವೆಯ ಕೊಂಡು ಕುಟ್ಟಿ ಖಂಡವ ಚೂರು ಮಾಡಿದ ಕೋಲೆ 11 ಉಪ್ಪಿನಕಾಯಿ ಕೊಡ ತುಪ್ಪ ತೈಲದ ಪಾತ್ರೆ ಜಪ್ಪಿ ವಡೆದು ನೆಲ ಕುಣಿಸಿದ ಕೋಲೆ 12 ಚಿನ್ನ ಚಿಗುರು ಬೆಳ್ಳಿ ಕಂಚು ತಾಮ್ರಗಳನ್ನು ನುಣ್ಣಗೆ ಹೊರೆಗಟ್ಟಿ ಹೊತ್ತೊಯ್ದ ಕೋಲೆ 13 ಉಣ್ಣ ಉಡಲಿಕ್ಕಿಲ್ಲ ಹೊನ್ನು ಕೈಯೊಳಗಿಲ್ಲ ಎಣ್ಣೆ ಬೆಣ್ಣೆಗೆ ಬಾಲ ನಳಿಸಿದ ಕೋಲೆ 14 ಮುಂಜ ಮುಚ್ಚಲಿಕಿಲ್ಲ ಗಂಜಿಗೆ ಲವಣಿಲ್ಲ ಸಂಜೆ ದೀಪಕೆ ತೈಲವಿಲ್ಲದೆ ಕೋಲೆ 15 ಅತಿಥಿಗಿಕ್ಕಲಿಲ್ಲ ಪ್ರತಿಮೆ ಪೂಜೆಗಳಿಲ್ಲ ವ್ರತನೇಮಗಳನು ಕಟ್ಟಿರಿಸಿದ ಕೋಲೆ 16 ತೆಪಕಾರನ ಪದಾರ ಕಾಲಟದೊಳು ಜಪ ತಪಗಳಿಲ್ಲದೆ ಕೊಳ ತನ್ನಿಸಿದ ಕೋಲೆ 17 ನಗರದ ಕೋಲೆದ್ದು ತೆಪರಾರ ಮೇಲ್ಬಿದ್ದು ಜಿಗಿದು ಹಿಂದಕೆ ಜಾರಿ ಜುಣುಗಿದ ಕೋಲೆ 18 ಹಿಂದಣ ಬೆಳೆಮಣ್ಣ ಕೂಡಿತು ಕುಳಿಯಲಿ ಮುಂದಣ ದುದುರಿತು ಹಣ್ಣಾಗಿ ಕೋಲೆ 19 ಕೆಳಗು ಮೇಲಕು ದಂಡು ಬಳಪ್ರಾಂತ ದೊಳುದಂಡು ನೆಲೆಗೊಂಡು ಜನರು ತಲ್ಲಣಿಪರು ಕೋಲೆ 20 ಸುಬ್ಬರಾಯನ ವೀರಭದ್ರನ ಪ್ರಸಾದ ಸರ್ವಜನರ ಬಾಯ್ಗೆ ಬಿತ್ತಣ್ಣ ಕೋಲೆ 21 ನರರೂಪ ಧರಿಸಿ ಲಕ್ಷ್ಮೀಶನು ಹೊಯ್ಸೂವ ಕೋಲೆ 22
--------------
ಕವಿ ಪರಮದೇವದಾಸರು
ಕೋಲು ಕೋಲೆನ್ನಿ ಕೋಲೆ ಕೋಲೆ ಕೋಲೆನ್ನಿ ಮುತ್ತಿನ ಕೋಲನ್ಹೊಯ್ದು ಪಾಡಿರಮ್ಮ ಜಾಣ ರಂಗಗೆ 1 ನಿಗಮ ತಂದ ಶೂರನ್ಯಾರೆ ರುಕ್ಮಿಣಿ ಮೀನರೂಪ ಧರಿಸಿದ್ವಾರಿಜಾಕ್ಷ ಭಾಮಿನಿ 2 ಮಂದರ ಪೊತ್ತವನ್ಯಾರೆ ರುಕ್ಮಿಣಿ ತಂದು ಸುಧೆಯ ಸುರರಿಗೆರೆದ ಕೂರ್ಮ(ಅ)ವ ಭಾಮಿನಿ 3 ಆದಿದೈತ್ಯನಂಗ ಸೀಳಿದವನು ದಾರೆ ರುಕ್ಮಿಣಿ ವರಾಹ ಭಾಮಿನಿ 4 ತಂದೆ ಕೊಂದು ಕಂದನ ಸಲಹಿದವನದಾರೆ ರುಕ್ಮಿಣಿ ಕಂದರಾಕ್ಹಾಕಿದ ಕರುಳ ನಾರಸಿಂಹ ಭಾಮಿನಿ 5 ಇಳೆಯ ದಾನ ಬೇಡಿದಂಥ ತರಳನ್ಯಾರೆ ರುಕ್ಮಿಣಿ ಅಳೆದÀು ಭೂಮಿ ತುಳಿದ ಬಲಿಯ ವಾಮನ ಭಾಮಿನಿ 6 ಕ್ಷತ್ರ್ರೇರ್ಹತವ ಮಾಡಿದ ಸಮರ್ಥನ್ಯಾರೆ ರುಕ್ಮಿಣಿ ಹೆತ್ತ ತಾಯಿ ಕಡಿದ ಶೂರ ಭಾರ್ಗವ ಭಾಮಿನಿ 7 ಸೇತುಗಟ್ಟಿ ಸೀತೆಯ ತಂದಾತನ್ಯಾರೆ ರುಕ್ಮಿಣಿ ವಾತಸುತನಿಗೊಲಿದ ಶ್ರೀರಘುನಾಥ ಭಾಮಿನಿ 8 ಕÀಳ್ಳತನದಿ ಕಡೆದ ಬೆಣ್ಣೆ ಕದ್ದವನ್ಯಾರೆ ರುಕ್ಮಿಣಿ ಗೊಲ್ಲರೊಡೆಯ ಗೋವ್ಗÀಳ ಕಾಯ್ದ ಕೃಷ್ಣ ಭಾಮಿನಿ 9 ವಸನ ಬಿಟ್ಟು ನಾಚಿಕಿಲ್ಲದ ಪುರುಷನ್ಯಾರೆ ರುಕ್ಮಿಣಿ ಅಸುರರ್ವೈರಿ ಆದಿಪುರುಷ ಬೌದ್ಧ ಭಾಮಿನಿ 10 ಕುದುರೆನೇರಿ ಎದುರು ಬರುವ ಚೆದುರನ್ಯಾರೆ ರುಕ್ಮಿಣಿ ಮದನಮೂರುತಿ ಮುದ್ದು ಭೀಮೇಶಕೃಷ್ಣ ಭಾಮಿನಿ11
--------------
ಹರಪನಹಳ್ಳಿಭೀಮವ್ವ
ಕೋಸಲಾಧಿಪ ಶುಭವನು ದಾಶರಥೇ ಪ ದಾಸನಲ್ಲಿ ಕೃಪಾಲೇಶವ ಬೀರೆಲೊ ಅ.ಪ ಹರನ ಚಾಪವ ಮುರಿದು ಸ್ವಯಂ ಕರವ ಪಿಡಿದು ಸರಸಿಜಲೋಚನ ಕಾಯೊ ಕರುಣದಲಿ 1 ವನವ ಸೇರಿ ಮುನಿಗಳ ಶಂ ಸನವ ಪೊಂದಿದ ಜಾನಕೀಪತಿ ಮುನಿದು ದುರುಳರ ಹನನ ಮಾಡಿದ ಹನುಮನಿಗೆ ದರುಶನವಿತ್ತ 2 ವಾನರಬಲದಿಂದ ಕೂಡಿ ವನದಿ ಬಂಧಿಸಿ ಲಂಕೆ ಸೇರಿದ ಶಾನನ ಮುಖರನು ಕೊಂದು ಜಾನಕಿಯಲಿ ಪ್ರಸನ್ನನಾದ 3
--------------
ವಿದ್ಯಾಪ್ರಸನ್ನತೀರ್ಥರು