ಒಟ್ಟು 1021 ಕಡೆಗಳಲ್ಲಿ , 96 ದಾಸರು , 868 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಏಕಾರತಿ ನೋಡೈ ಜಗದೇಕನಾಥ ಪ ನಾಕೊಡುವೆನು ತ್ರಿಲೋ ಕೈಕ ರಕ್ಷಕ ಸ್ವಾಮಿ ಅ.ಪ ಘೃತವರ್ತಿತ್ರಯ ವಂಹ್ನಿಯುತವಾದ ಮಂಗಳಾ- ರತಿಯ ಸ್ವೀಕರಿಸು ಶ್ರೀಪತಿ ಪುರುಷೋತ್ತಮ 1 ಘೋರಾನರಕ ತ್ರಾತ ದಿವ್ಯ ಜ್ಯೋತಿ ರೂಪನೆ 2 ಮೋದವಿತ್ತೆಂಥಾ ಗುರುರಾಮ ವಿಠಲ ತಂದೆ 3
--------------
ಗುರುರಾಮವಿಠಲ
ಏಕೆ ಚಿಂತಿಪೆ ನೀ ಎಲೆ ಕೋತಿಮನವೆ ಪಾದ ಗಟ್ಟ್ಯಾಗಿ ನಂಬದಲೆ ಪ ಹಿತದ ಭಕ್ತನು ಎಂದು ಮತಿಹೀನ ಭಸ್ಮಗುರಿ ಹಸ್ತವರವಿತ್ತ್ಹರನು ಮತಿದಪ್ಪೋಡುತಿರೆ ಗತಿನೀನೆ ಹರಿಯೆನಲು ಅತಿದಯದಿಂ ಶಿವನ್ನುಳಿಸಿ ಕೃತ್ತಿಮನ್ನಳದ ಹರಿ ಪತಿತಮಹಾತ್ಮರಿಯೆ 1 ಘುಡುಘುಡಿಸಿ ಹಿರಣ್ಯನು ಜಡಮತಿ ಹರಿಯೆಲ್ಲಿ ಗಡ ತೋರೀ ಕಂಬದಿ ಎಂದಾರ್ಭಟಿಸಿ ಬರಸೆಳೆಯೆ ನಡುನಡುಗಿ ಪ್ರಹ್ಲಾದ ಜಡಜಾಕ್ಷ ಪೊರೆಯೆನಲು ಮೂಡಿ ಕಂಬದಿ ಖಳನ ಒಡಲ ಬಗೆದದ್ದರ್ಹಿಯೆ 2 ಕುರುಪನ ಸಭೆಯೊಳಗೆ ಮೊರೆಯಿಟ್ಟ ದ್ರೌಪದಿಗೆ ಕರುಣದಕ್ಷಯವಿತ್ತು ಪೊರೆದ ಪರಮಾತ್ಮ ಕರುಣಾಳು ಶ್ರೀರಾಮ ಚರಣದಾಸರ ನೆರ ಅರೆಘಳಿಗೆ ಬಿಟ್ಟಿರನು ನಿರುತ ನೀ ಸ್ಮರಿಸೋ 3
--------------
ರಾಮದಾಸರು
ಏನಿದೇನಿದನ್ಯಾಯ ಕೇಳಲಾಗದಯ್ಯ ಧ್ಯಾನದಿಂದಾನೆಂಬ ಹೀನ ಜನರ್ವಚನ ಪ ಪರಮಪುರುಷರ ಚರಿತ ಪರಮ ಭಕ್ತಿಯಲಿಂದ ಬರೆದೋದಿಕೇಳಿದರೆ ಪರಮಪದವೆನುತ ವರವೇದ ಸ್ಮøತಿವಾಕ್ಯ ಅರಿದರಿದು ಸಚ್ಚರಿತ ಬರೀಬಾರದೆನ್ನುವ ನರಗುರಿಗಳ ವಚನ 1 ಕನಸುಮನಸಿನೊಳೊಮ್ಮೆ ಜನಕಜೆಯವರನಂಘ್ರಿ ನೆನೆವರ್ಗೆ ಭವಬಂಧವಿನಿತಿಲ್ಲವೆನುತ ಮನುಮುನಿಗಳ್ಬರೆದಿಟ್ಟ ಘನತರದ ವಚನಗಳನು ಮನನ ಮಾಡಳಿವ ಬಿನಗುಜನರ್ವಚನ 2 ಬೀಳುತೇಳುತಲೊಮ್ಮೆ ನೀಲಶ್ಯಾಮನ ದಿವ್ಯ ಮೇಲು ಮಹಿಮೆಯ ಮನದಾಲಿಸಲು ಜವನ ದಾಳಿ ಸೋಂಕದು ಎಂದು ಶೀಲದೊರೆದ್ವಚನಗಳ ಕೇಳಿ ತಿಳಿಯದ ಮಹ ಕೀಳುಜನರ್ವಚನ 3 ಹರಿನಾಮ ಕೀರ್ತನೆಯಿಂ ಜರಾಮರಣ ಕಂಟಕª À ಕಿರಿದು ಮಾಡಿ ದಾಟಿದರು ಗುರುಹಿರಿಯರೆಲ್ಲ ನಿರುತ ನಿಜ ತಿಳಿಯದೆ ಹರಿಸ್ಮರಣೆ ಸ್ಮರಿಸದೆ ಬರಿದೆ ಬ್ರಹ್ಮೆಂಬ ಮಹನರಕಿಗಳ ವಚನ 4 ಪರಮ ಶ್ರೀಗುರುರೂಪ ವರದ ಶ್ರೀರಾಮನಂ ನೆರೆನಂಬಿ ಒಲಿಸದೆ ಗುರುವಾಗಿ ಜಗದಿ ಅರಿವಿತ್ತು ಆತ್ಮನ ಕರುಹು ತೋರಿಸಿ ಪರಮ ಪರತರದ ಮೋಕ್ಷಮಂ ಕರುಣಿಸುಯೆಂತು 5
--------------
ರಾಮದಾಸರು
ಏನು ಇದ್ದರೇನು ನಿನ್ನ ಸಂಗದ ಸಂಗಡ ಬಾರದೇನು ದಾನ ಧರ್ಮವ ಮಾಡಿದ್ದೊಂದು ಬೆನ್ನಬಿಡದದೇನು ಪ ಆಳು ಕಾಳು ಮಂದಿ ಮನುಷರು ಬಹಳವಿದ್ದರೇನು ಮಾಳಿಗೆ ಕೈಸಾಲೆ ಚಂದ್ರಶಾಲೆಯಿದ್ದರೇನು ನೀಲ ಮುತ್ತು ಕೆಂಪಿನುಂಗುರ ಕೈಯಲಿದ್ದರೇನು ಕಾಲನವರು ಎಳೆಯುತಿರಲು ನಾಲಗೆಗೆ ಬಾರದೇನು 1 ನೆಟ್ಟ ಹತ್ತಿಲು ತೋಟ ತೆಂಗು ಎಷ್ಟುತಾನಿದ್ದರೇನು ಮಹಿಷಿ ಸಾವಿರವಿದ್ದರೇನು ಪಟ್ಟೆ ಶಾಲು ಚಿನ್ನದ ಕುಳದ ಘಟ್ಟಿಯಿದ್ದರೇನು ಕಟ್ಟಿಯಿಟ್ಟ ಗಂಟುನಿನ್ನ ಸಂಗಡ ಬಾರದೇನು 2 ಲಕ್ಷವಿತ್ತ ಜಯಿಸಿ ರಾಜ್ಯ ಪಟ್ಟವಾದರೇನು ಕಟ್ಟಿದಾನೆ ಮಂದಿ ಕುದುರೆ ಹತ್ತಿರಿದ್ದರೇನು ನೆಟ್ಟನೆ ಜೀವಾತ್ಮ ಗೂಡ ಬಿಟ್ಟು ಪೋಗದೇನು ಕುಟ್ಟಿ ಕೊಂಡಳುವುದರೆ ಮಂದಿ ಎಷ್ಟು ಇದ್ದರೇನು 3 ಮಕ್ಕಳು ಮೊಮ್ಮಕ್ಕಳು ಹೆಮ್ಮಕ್ಕಳಿದ್ದರೇನು ಚಿಕ್ಕ ಪ್ರಾಯದ ಸತಿಯು ಸೊಸೆದಿಕ್ಕಳಿದ್ದರೇನು ಲೆಕ್ಕವಿಲ್ಲದ ದ್ರವ್ಯ ನಿನಗೆ ಸಿಕ್ಕುಯಿದ್ದರೇನು ಡೊಕ್ಕೆ ಬೀಳೆ ಹೆಣವ ಬೆಂಕಿಗಿಕ್ಕಿ ಬರುವರೋ 4 ಹೀಗೆ ಎಂದು ನೀನು ನಿನ್ನ ತಿಳಿದು ಕೊಳ್ಳಬೇಕೋ ಆಗೋದ್ಹೋಗೋದೆಲ್ಲ ಈಶ್ವರಾಜÉ್ಞ ಎನ್ನ ಬೇಕೋ ವೈರಿ ಕೋಣೆ ಲಕ್ಷ್ಮೀರಮಣನ ಭಜಿಸಬೇಕೋ ಯೋಗ ಮಾರ್ಗದಿಂದ ನೀನು ಮುಕ್ತಿ ಪಡೆಯ ಬೇಕೋ 5
--------------
ಕವಿ ಪರಮದೇವದಾಸರು
ಏನು ಕಾರಣ ಕೃಷ್ಣಾ ಏನು ಕಾರಣ ಪ ಏನು ಕಾರಣ ಎನ್ನ ಕಣ್ಣಿಗೆ ನೀನು ತೋರದಿರುವುದು ಇದು ಅ.ಪ ಖಗ ಮೃಗಾದಿಗಳಿಗೆ ನೀನು ರಘು ಕುಲೇಶ ದರ್ಶನವಿತ್ತೆಸೊಗಸು ಮೋಕ್ಷವಿತ್ತೆ ಅದಕುಖಗವರೂಢ ಕಡಿಮೆಯೇನು 1 ಶಬರಿ ಎಂಜಲುಂಡು ವನದಿಅಬುಜ ಶಯನ ದರುಶವಿತ್ತೆಕುಬುಜೆ ಕೂಡಿದೆಲ್ಲೊ ಅದಕುವಿಬುಧ ವಂದ್ಯ ಕಡಮೆನೋವಾ 2 ಮುರಲಿನೂದಿ ವನದಿ ಹರಿಯುತರುಲತಾದಿಗಳಿಗೆ ದರ್ಶನವಿತ್ತು ಕಾಯ್ದುಅದಕು ಪರಮ ಪುರುಷ ಕಡಿಮೆ ನೋವಾ3 ಹಾದಿಲ್ಹೋಗೋ ಕೀಟನಿಗೆವೇದನಾಥ ದರುಶನಿತ್ತಿಆದಿ ವರ್ಣದವನು ಅದಕುಬಾದರಾಯಣ ಕಡಿಮೆ ಏನೋ 4 ಎಷ್ಟು ಎಷ್ಟು ಜನರಿಗೀಗಭೆಟ್ಟಿ ನೀಡಿ ಸುಖವನಿತ್ತೆಶ್ರೇಷ್ಠನೆಂದು ಸ್ತುತಿಪೆ ನಿನ್ನ ಕೃಷ್ಣ ಕರುಣಿ ಬೇಗನೆ ಬಾ 5 ಇಂಥಾ ಜನುಮದಲ್ಲಿ ನಿನ್ನಕಂತು ಪಿತನೆ ಕಾಣದಿರಲುಪಂಥಗಾಣೆ ಮುಂದಿನ ತನುಎಂಥದಾಗುವುದೋ ತಿಳಿಯೆ 6 ಇಂದಿರೇಶ ಮುರಲಿ ಶೋಭಿತಇಂದು ಬಿಂಬ ವಿಜಯ ವದನತಂದು ತೋರಿಸೆನ್ನ ಮನಕಾ-ನಂದಿಸೀಗ ನಂದನಸುತ 7
--------------
ಇಂದಿರೇಶರು
ಏನು ಪವಮಾನಿ | ಏನು ಪವಮಾನಿ | ಈ ನಿಧಿಯಲಿ ಬಂದು ನಿಂದ ಕಾರಣ | ಮಾಣದೆ ಪೇಳು ನಿ | ದಾನದಿಂದಲಿ | ಮಾನಸದಲಿ | ದಾನವಾರಿಯ | ಧ್ಯಾನ ಮಾಡುವ ಜಾಣ ಜಗದ ಪ್ರಾಣ ಸುಂದರಾ | ನಾನಾ ಮಹಿಮಾ ಗುರುವೆ ಪ ಕೇಸರಿನಂದನ ಪಾಶವಿನಾಶ ನಿರ್ದೋಷ | ಭಾರತೀಶ ಈಶಾ | ಶೇಷಾದ್ಯರಿಗುಪದೇಶದ ಕರ್ತಾ | ಲೇಸು ಸದ್ಗುಣಗಣ ಕೋಶ ಸರಸಿಜಾಸನ ಪದವಿಗೆ ಸೇರುವಾತಾ || ದೇಶದೊಳು ಬಲುಭೂಷಣ ಪಾಕಶಾಸನ ಶರದ ಶರೀರ | ದಾಶರಥಿ ಪಾದಾಸರವಿಡಿ | ದೇಸು ಬಗೆಯಲಿ | ಮೋಸ ಪೋಗದಾಯಾಸಬಡದಲೆ | ಮೀಸಲ ಮನ ಸೂಸು ವನರಾಸಿ ಲಂಘಿಸಿ 1 ಪರಿಸರ ಪೋಗಲಾಸಮಯದಲ್ಲಿ | ಭಾಸುರ ಲಂಕೆ | ಯ ಶೋಧಿಸಿದನಾ ಗೋ | ಸಾಸಿರವಿತ್ತು ಕೂಸಿನಂದದಲಿ || ಭಾಷಿಯನಾಡಿ ಪದ್ಮಾಸನಿಗೆ ಸಂ | ಸವರಿ ಫಲ ಸವಿದು ಖಳನ ನಗುತ | ನಾಶಗೊಳಿಸಿದ ಸಮರ್ಥನೆ 2 ಹಿಂದೆ ಪ್ರಳಯದಲ್ಲಿಂದಿರೇಶನು ಸುರ್ವೃಂದ ಉದರದೊಳು | ಪೊಂದಿಟ್ಟುಕೊಂಡು ಆಗ | ಅಂದು ನೀನೊಬ್ಬನೇ ಮಂದನಾಗದೆ ನಯದಿಂದಲಿ ಎಚ್ಚತ್ತು | ಪೊಂದಿಕೊಂಡು ಇದ್ದೆ | ಇಂದು ಕದನದೊಳು ಇಂದ್ರಜಿತನು ಕರದಿಂದ ಸೆಳೆದÀ ಶರ | ದಿಂದಲಿ ಸಿಗಿಬಿದ್ದು | ಬಂಧಿಸಿಕೊಂಡಂಜಿನಿಂದಂತೆ ಮೈದೆಂದಿಗಿಲ್ಲದಂತೆ ನಂದವ ತೋರಿದೆ ಇಂದು ಮೌಳಿಯ ಪೊಂದಿದದಶ | ಕಂಧರನ ಮೊಗ ಮುಂದೆ ಭಂಗಿಸಿ | ಬಂದು ಗುದ್ದಿಲಿನೊದ್ದನು ಅವನಿರೆ | ಮಂದಹಾಸದಲಿಂದ ನಗುತ 3 ಪುರವನುರುಹಿ ಅಸುರರ ಸದೆದು ತೀ | ವರದಿಂದ ಶರಧಿಯ ಮರುಳೆ ಹಾರಿ ಬಂ | ದುರವಣಿಯಿಂದ ಶ್ರೀ | ಹರಿ ಚರಣಕ್ಕೆರಗಿ ಪೊಡಮಟ್ಟು | ಕರವನೆ ಮುಗಿದು | ಚೂಡಾಮಣಿ ಇಡೆ ಮುಂದೆ ವಿವರಿಸಿದೆ | ರಿಪುಗಳಾ | ಗರದ ವಿಸ್ತಾರ | ಸುರರು ಭಾಪುರೆ ಎಂದಂಬರದಲಿವಾದ್ಯ | ಬೆರೆದಲ್ಲಿ ಮೊರೆಯಾಗಿ ಅರಮರೆಯಿಲ್ಲದೆ | ತರಿಸಿ ಮಾರ್ಗವಸರದಲಿ ವಿಸ್ತರಿಸಿ | ಧುರದೊಳಗರಿಗಳಿಂದಲಿ ಮರಣವಾದವರನ ಎಬ್ಬಿಸಿ 4 ಪಾತಾಳದೊಳು ಹತ್ತು ತಲೆಯವನಿರಲು ಕಾತುರದಿಂದ ಹೋ ಮಾತುರಕಾರ್ಚಿಸೆ | ಮಾತು ಮುಂಚದ ಮುನ್ನ ಭೀತಿ ಇಲ್ಲದೆ ಪೋಗಿ | ಪಾತಕನವಧಾನ | ದಾತಗೆ ದಿವ್ಯವರೂಥವೆಂದೆನಿಸಿ ವಿ| ಧೂತ ರಾವಣನ ವಿ | ಪಾತನ ಗೈಸಿದೆ | ಪ್ರೀತಿ ಬಡಿಸಿ ನಿಜಾರಾತಿ ವಿಭೀಷಣಗೆ ತಪ್ಪದೆ ಲಂಕಾ | ನಾಥನ ಮಾಡಿ ನೀ | ರಘುನಾಥನ ಯಡೆ ನೀ ತೆಗೆದುಂಡೆ | ಶ್ರೀ ತರುಣೇಶ ವಿಜಯವಿಠ್ಠಲನ ದೂತಾ ಹನುಮಾ 5
--------------
ವಿಜಯದಾಸ
ಏನು ಮಾಡಿದರೇನು ಹೀನಮಾನವನು ಧಿನದಯಾಸಿಂಧು ಹರಿ ನೀನೊಲಿಯದಿರಲು ಪ ಸ್ನಾನ ಮಾಡಿದರೇನು ನಾನಾತೀರ್ಥವ ತಿರುಗಿ ಮೌನ ಮಾಡಿದರೇನು ನಯನಗಳು ಮುಚ್ಚಿ ದಾನ ಮಾಡಿದರೇನು ಧ್ಯಾನ ಮಾಡಿದರೇನು ಧ್ಯಾನದಾಯಕ ನಿನ್ನ ದಯವಾಗದಿರಲು 1 ಜಪವ ಮಾಡಿದರೇನು ಅಪರೂಪ ಮಡಿಯುಟ್ಟು ತಪವ ಮಾಡಿದರೇನು ವಿಪಿನವನು ಸೇರಿ ಗುಪಿತಶಾಸ್ತ್ರವ ಕಲಿತು ನಿಪುಣನೆನಿಸಿದರೇನು ಸುಫಲದಾಯಕ ನಿನ್ನ ಕೃಪೆಯಾಗದಿರಲು 2 ತತ್ವವನು ವಿಂಗಡಿಸಿ ಅರ್ಥಮಾಡಿದರೇನು ಪೃಥ್ವಿಬಿಡದ್ಯಾವತ್ತು ಸುತ್ತುಗಟ್ಟಿದರೇನು ಕುತ್ತಿಗೆಯ ಕೊಯ್ದಿಟ್ಟು ಮತ್ತೆ ಕಲೆಸಿದರೇನು ಚಿತ್ತಜಪಿತ ನಿನ್ನ ಚಿತ್ತಕ್ಕೆ ಬರದಿರಲು 3 ಯೋಗವನು ಕಲಿತು ಬಲುಯೋಗ ಮಾಡಿದರೇನು ಭಾಗವತವೋದಿ ಬಲು ಯಾಗ ಮಾಡಿದರೇನು ಭೋಗವನ್ನು ತ್ಯಜಿಸಿ ಬಲು ಜಾಗರಣ ಮಾಡಲೇನು ನಾಗಶಯನನೆ ನಿನ್ನ ನಿಗ ಬೀಳದಿರಲು 4 ಒಪ್ಪಿಡಿ ಅವಲಕ್ಕಿಗೊಪ್ಪಿ ಸಂಪದ ಕೊಟ್ಟು ತಪ್ಪುಗಾರನ ಕ್ಷಮಿಸಿ ಅಪ್ಪಿ ಪದವಿತ್ತಿ ಒಪ್ಪುಗಾರನೆ ನೀನು ಒಪ್ಪಿದ ಬಳಿಕಾವ ತಿಪ್ಪುಳದ ಗೋಜಿಲ್ಲೆನ್ನಪ್ಪ ಶ್ರೀರಾಮ 5
--------------
ರಾಮದಾಸರು
ಏನು ಮಾಯವೊ ಹರಿಯೆ ಶ್ರೀನಿವಾಸನೆ ನಿನ್ನ ಧ್ಯಾನಿಸುವವರನು ಪೊರೆವೆ ಸಾನುರಾಗದಲಿ ಪ ಜ್ಞಾನಿಗಳು ಹಗಲಿರುಳು ಮೌನದಿಂದಲಿ ಭಜಿಸಿ ದಾನವಾಂತಕ ನಿನ್ನ ಧ್ಯಾನ ಮಾಡುವರು ಅ.ಪ ಬಡತನದಿ ಬಹು ವ್ಯಥೆಯ ಪಡುತ ಸತಿಸುತರಿರಲು ನುಡಿಯೆ ಭಯ ಭಕ್ತಿಯಲಿ ಒಡೆಯರಿಲ್ಲೆಮಗೆ ಮೃಡಸಖನು ಇಹನೆನಲು ಹಿಡಿಯವಲಿಯ ಕೊಡಲು ಕೆಡದ ಸೌಭಾಗ್ಯವನು ಒಡನೆ ನೀಡಿದೆಯೊ 1 ಅಂದು ದುಶ್ಖಾಸನ ನೃಪನಂದನೆಯ ಬಾಧಿಸುತ ನಿಂದು ಸೀರೆಯ ಸೆಳೆಯೆನೊಂದು ದುಃಖಿಸುತ ಇಂದಿರಾಪತಿ ಕೃಷ್ಣ ಇಂದೆನಗೆ ನೀನೆ ಗತಿ ಎಂದೊಡಕ್ಷಯವಿತ್ತು ಅಂದು ಸಲಹಿದೆಯೊ 2 ಮಡುವಿನಲಿ ಗಜರಾಜ ಪಿಡಿದ ಮಕರಿಗೆ ಸಿಲುಕಿ ಮಡದಿ ಮಕ್ಕಳನಗಲಿ ಕಡೆಗೆ ಸೊಂಡಿಲಲಿ ಪಿಡಿದ ಕುಸುಮವನು ಜಗದೊಡೆಯಗರ್ಪಿತವೆನಲು ದಡದಡನೆ ಬಂದೆಯೊ ಮಡದಿಗ್ಹೇಳದಲೆ 3 ಅಂದು ದೂರ್ವಾಸಮುನಿ ಬಂದು ಶಿಷ್ಯರ ಸಹಿತ ಇಂದೆಮಗೆ ಹಸಿವೆನಲು ನೊಂದು ಶ್ರೀಹರಿಯೆ ತಂದೆ ನೀ ಸಲಹೆನಲು ಬಂದೆ ಬಹಳ್ಹಸಿವೆಯಲಿ ಒಂದು ಪತ್ರದ ಶಾಖ ಉಂಡು ಸಲಹಿದೆಯೊ 4 ಹಿಂದಜಾಮಿಳ ತನ್ನ ಬಂಧುಬಳಗವ ತ್ಯಜಿಸಿ ಅಂದು ಇಹಸುಖದಿ ಆನಂದ ಪಡುತಿರಲು ಬಂದರಾಗ ಯಮಭಟರು ನಿಂದು ಬಾಧಿಸುತಿರಲು ಕಂದನಾರಗನೆನಲು ಅಂದು ಸಲಹಿದೆಯೊ 5 ಚಿಕ್ಕವನು ಪ್ರಹ್ಲಾದ ಮಕ್ಕಳಾಟದ ಧ್ರುವನು ರಕ್ಕಸಾಂತಕನ ಮೊರೆ ಇಕ್ಕಿ ಪ್ರಾರ್ಥಿಸಲು ತಕ್ಕವರಗಳನಿತ್ತು ತಕ್ಕೈಸಿ ಅಣುಗನನು ಮಿಕ್ಕಭಕುತರ ಪೊರೆದೆ ಲಕ್ಕುಮಿಯ ರಮಣ 6 ಈ ಪರಿಯಲಿ ಬಹುಭಕುತರಾಪತ್ತುಗಳ ಹರಿಸಿ ಶ್ರೀಪತಿಯ ರಕ್ಷಿಸಿದಿ ಆಪನ್ನಜನರ ಗೋಪತಿ ಕೃಷ್ಣ ಜಗದ್ವ್ಯಾಪಕನೆ ನೀ ಸಲಹಿ ತಾಪಸರ ಒಡೆಯ ಹೃದ್ವ್ಯಾಕುಲವ ಕಳೆವೆ 7 ಕಾಳಿ ಮಡುವನೆ ಧುಮುಕಿ ಕಾಳಿಂಗನ್ಹೆಡೆ ತುಳಿದೆ ಕಾಳದೇವಿಯರಮಣ ಕಾಲಿಗೆರುಗುವೆನು ಕಾಳಯುಕ್ತಿನಾಮ ಸಂವತ್ಸರದಿ ಸುಜನರಿಗೆ ಭಾಳ ಸುಖಹರುಷಗಳ ಲೀಲೆ ತೋರಿಸುವ 8 ಭ್ರಮಿಸಿ ಇಹ ಸುಖದಿ ಮನ ಶ್ರಮ ಪಡುತಲಿರೆ ದೇವ ರಮೆಯ ರಮಣನೆ ಪೊರೆಯೊ ಮಮತೆಯನು ಬಿಡದೆ ಕಮಲಸಂಭವಜನಕ ಕಮಲನಾಭ ವಿಠ್ಠಲ ಸುಮನಸರ ಒಡೆಯ ಹೃತ್ಕಮಲದಲಿ ಪೊಳೆವ 9
--------------
ನಿಡಗುರುಕಿ ಜೀವೂಬಾಯಿ
ಏನೆ ಮನವಿತ್ತೆ ಲಲಿತಾಂಗಿ ಅಸ-ಮಾನ ಗೋವಳ ಕುಲವಿಲ್ಲದವನೊಳು ಪ ಮಗಗೆ ಮೈದುನನಾದ ಮಗಳಿಗೆ ಪತಿಯಾದ ಮಗಳಿಗಳಿಯನಾದ ಅಳಿಯಗಳಿಯನಾದ 1 ಮಗಳ ಮಗಗೆ ಮೈದುನನಾಗಿ ಮಾವನಜಗವರಿಯಲು ಕೊಂದ ಕುಲಗೇಡಿ ಗೋವಳ 2 ಅತ್ತೆಗೆ ವಲ್ಲಭನಾದ ಭೃತ್ಯರಿಗಾಳಾದಚಿತ್ತ ಒಲಿದು ಚೆನ್ನ ಆದಿಕೇಶವನೊಳು 3
--------------
ಕನಕದಾಸ
ಏನೆಂದು ಬಣ್ಣಿಪೆನೆ ಈ ನವ್ಯವಿಗ್ರಹನೆ ಮನದನ್ನನಾದನೆ ವನಜನಯನೆ ತೊಳೆದಕೆಂಡದ ಕಾಂತಿ ಮೊಳದುದ್ದ ಮೋರೆಯು ಕೊಳಗುಳದ ಮನವಿತ್ತು ಮೊಳಗುತಿಹನು ಕತ್ತಿಯನು ಪಿಡಿದೆತ್ತಿ ಉತ್ತಮಾಶ್ವವ ಹತ್ತಿ ಅತ್ಯಂತ ರೋಷದಿಂ ಸುತ್ತುತಿಹನು ಕೊಲೆಗೆ ಹೇಸದ ವÀರನೆ ಪಲಜನರ ಕಡಿದವನೆ ಕಲಿತಾನೆ ಎನುತಿಹನೆ ಕಲ್ಕಿಯಿವನೆ ಇಂತಿರ್ಪ ವರಗೆ ಮನಸೋತು ನಾನು ಕಾಂತನೆಂದಾಡಿದೆನು ಪೇಳ್ವುದೇನು ಶಾಂತಗುಣ ಶೇಷಾದ್ರಿನಿಲಯ ತಾನು ಸಂತತವು ಭಕ್ತರನು ಸಲಹನೇನು
--------------
ನಂಜನಗೂಡು ತಿರುಮಲಾಂಬಾ
ಏನೆಂದು ಸ್ತುತಿಸಲಿ ದೇವ ರಂಗಯ್ಯ ನಿನ್ನ ಜಾಣ- ತನವ ನೀನೆ ಬಲ್ಲೆ ಶ್ರೀ ರಂಗಯ್ಯ ಪ. ಮತ್ಸ್ಯನಾಗಿ ಶ್ರುತಿಯ ತಂದೆ ರಂಗಯ್ಯ ನೀನು ಕುತ್ಸಿತ ತಮನ ಕೊಂದೆ ರಂಗಯ್ಯ ಸ್ವಚ್ಛ ಕೂರುಮನಾದೆ ರಂಗಯ್ಯ ಭಕ್ತ ರಿಚ್ಛೆಯ ಪಾಲಿಸಿದೆ ಶ್ರೀ ರಂಗಯ್ಯ1 ಆದಿವರಾಹ ನೀನಾದೆ ರಂಗಯ್ಯ ನೀನು ಪೋದ ಮೇದಿನಿಯ ತಂದೆ ರಂಗಯ್ಯ ಭೇದಿಸಿ ಕಂಬದಿ ಬಂದೆ ರಂಗಯ್ಯ ಪ್ರ- ಹ್ಲಾದನ ಕಾಯ್ದೆ ಶ್ರೀ ರಂಗಯ್ಯ 2 ಬಲಿಯನ್ನು ವಂಚಿಸಿದಂಥ ರಂಗಯ್ಯ ನೀನು ನೆಲವ ಓರಡಿ ಮಾಡ್ದೆ ರಂಗಯ್ಯ ಬಲವಂತ ಭಾರ್ಗವನಾದೆ ರಂಗಯ್ಯ ನೀನು ಛಲದಿ ಕ್ಷತ್ರಿಯರ ಗೆದ್ದೆ ರಂಗಯ್ಯ 3 ಜಲಧಿಯನು ಕಟ್ಟಿದೆ ರಂಗಯ್ಯ ಹತ್ತು- ತಲೆಯವನ ಕುಟ್ಟಿದೆ ರಂಗಯ್ಯ ಮಲೆತ ಮಾವನ ಕೊಂದೆ ರಂಗಯ್ಯ ಯದು- ಕುಲವನುದ್ಧರಿಸಿದೆ ಶ್ರೀ ರಂಗಯ್ಯ 4 ಸತಿಯರ ಮೋಹಿಸಿದೆ ನೀನು ರಂಗಯ್ಯ ಬಲು ಚತುರ ಬೌದ್ಧನಾದೆ ರಂಗಯ್ಯ ಖತಿಯಿಂದ ಹಯವೇರಿದೆ ರಂಗಯ್ಯ ದು- ರ್ಮತಿಯ ಕಲಿಯ ಕೊಂದೆ ಶ್ರೀ ರಂಗಯ್ಯ 5 ತ್ರಿಭುವನದೊಳಧಿಕÀ ರಂಗಯ್ಯ ನೀನು ವಿಭೀಷಣನಿಗೆ ಪ್ರಸನ್ನ ರಂಗಯ್ಯ ನೀ- ನಭಯವಿತ್ತೆನ್ನ ಕಾಯೊ ಶ್ರೀ ರಂಗಯ್ಯ 6 ವಾದಿರಾಜಗೊಲಿದೆ ರಂಗಯ್ಯ ನೀನು ಮೋದಿ ಹಯವದನನಾದೆ ರಂಗಯ್ಯ ಸಾಧಿಸಿ ಖಳರ ಕೊಂದೆ ರಂಗಯ್ಯ ವಿ- ನೋದÀದಿ ವೇದವ ತಂದೆ ಶ್ರೀ ರಂಗಯ್ಯ 7
--------------
ವಾದಿರಾಜ
ಏನೆಂದೆ ಏನೆಂದೆ ಪ ನಾನೇನೆಂದೆನೆ ಗಾನಲೋಲಗವ ಮಾನದ ಮಾತಿಂಥ ಜೀನನ ಕಾಣೆನೆಂದೆ ಅ.ಪ ಕಾಲು ಇಲ್ಲದ ಹೆಳವನೆಂದೆ ತಲೆಯ ಕಾಣದ ಕುರೂಪಿಯೆಂದೆ ಚೆಲುವಿಕಿಲ್ಲದ ಕಾಡು ಹೀನಮೃಗವೆಂದೆ ಬಲಿಯ ಬಾಗಿಲ ಕಾಯ್ವ ಕೂಲಿಕಾರನೆಂದೆ1 ನಾಲಗೆ ಚಾಚಿ ರಕ್ತ ಕುಡಿದನೆಂದೆ ತಿಳಿದು ಜನನಿತಲೆ ಕಡಿದವನೆಂದೆ ಲಲನೆಯೊಡನೆ ವನವಾಸಕೆ ಪೋಗಿ ಬಳಲಿ ಬಳಲಿ ಬಾಯಾರಿದನೆಂದೆ 2 ಗೊಲ್ಲರ ಕುಲದಲಿ ಹುಟ್ಟಿದನೆಂದೆ ಗುಳ್ಳೆ ಗುಳ್ಳೆ ಬೆಣ್ಣೆ ಕದ್ದವನೆಂದೆ ಗೊಲ್ಲರ ಅಕಳ ಕಾಯುವ ಚರನೆಂದೆ ಫುಲ್ಲನಲನೆಯರ ವಸ್ತ್ರಗಳ್ಳನೆಂದೆ 3 ಬತ್ತಲೆ ಕುಣಿಕುಣಿದಾಡಿದನೆಂದೆ ಸತ್ಯಭ್ರಷ್ಟ ಮಹಕಲಿಯು ಈತನೆಂದೆ ಮತ್ತೆ ವೈಕುಂಠದಿ ಒದೆಸಿಕೊಂಡು ಇವ ವಿತ್ತದಾಸೆಗೆ ಮತ್ರ್ಯಲೋಕಕಿಳಿದವನೆಂದೆ 4 ಕುದುರೆ ನಡೆಸಿ ಒಬ್ಬನುಳಿಸಿದನೆಂದೆ ಕದನದ್ವೊಂಚಿಸಿ ಒಬ್ಬನಳಿದವನೆಂದೆ ಕುದುರೆ ಕಟ್ಟಿದ ವೀರ ತಾಮ್ರಧ್ವಜಗೆ ಸೋತು ಮುದುಕನಾಗಿ ಭಿಕ್ಷದಶ್ವ ತಂದವನೆಂದೆ 5 ಸೋದರಮಾವನ ಕೊಂದವನೆಂದೆ ಸೋದರಳಿಯರ ಜೀವ ಹೊಡೆಸಿದನೆಂದೆ ಭೇದದಿಂದ ಸಾಧು ಹನುಮನ ಸೋಲಿಸಿ ಸಾಧಿಸ್ವರೂಪಕ್ಕೆ ಪತಾಕೆನಿಸಿದನೆಂದೆ 6 ಜಾರ ಸಿರಿ ಸೊರೆಗೊಂಡವನೆಂದೆ ಮೀರಿದಂಥ ಮಹಮಾಯದ ಹೆಣ್ಣೆಂದೆ ಈರೇಳುಲೋಕದ ಕಪಟನಾಟಕನೆಂದೆ 7 ಮೊಚ್ಚೆಗಾರ ಕೈಯೊಳುಂಡವನೆಂದೆ ಉಚ್ಚಿಷ್ಟನಾಗಿ ಬಹಿಷ್ಕಾರ್ಹೊಂದಿದನೆಂದೆ ವೆಚ್ಚಮಾಡಿ ಮತ್ತು ಕುಲದಿ ಬಿದ್ದವನೆಂದೆ ನಿಶ್ಚಲ ಭಕ್ತರಿಗ್ಹುಚ್ಚ್ಹಿಡಿಸಿದನೆಂದೆ 8 ಪುಲ್ಲನಯನ ಸಿರಿರಾಮನ ಮುಂದೆ ಅಲ್ಲದ ಮಾತುಗಳ್ನಾನೇನೆಂದೆ ಬಲ್ಲಿದ ಹದಿನಾಲ್ಕು ಲೋಕ ಪೊತ್ತವನೆಂದೆ ಉಲ್ಲಾಸದಿ ನಿಮ್ಮ ಬಿರುದು ಸಾರುತ ಬಂದೆ 9
--------------
ರಾಮದಾಸರು
ಏಳು ನಾರಾಯಣ ಏಳು ಲಕ್ಷ್ಮೀರಮಣಏಳು ಬೆಳಗಾಯ್ತರುಣ ಬೀರುತಿದೆ ಕಿರಣ ಪ ರಂಗ ಬರುತಿಹನೆಂದು ಮಂಗಳಾಂಗಿಯರೆಲ್ಲಅಂಗಳ ಸಾರಿಸಿಸುತೆ ಮಂಗಳವ ಪಾಡುತ್ತೆರಂಗೋಲಿಯೊಳು ನಿನ್ನ ಚಿತ್ರವನು ರೇಖಿಸುತೆಶೃಂಗರಿಸುತಿಹರು ನೋಡೆದ್ದು ಬಾರೋ 1 ಹಿಂಡಿ ನೊರೆ ಹಾಲ್ಗಳನು ಗಿಂಡಿಯೊಳು ತಂದಿಟ್ಟುಕೊಂಡು ವದನವ ತೊಳೆಯ ಬಿಸಿ ನೀರು ತಂದಿಟ್ಟುತಂಡತಂಡದಿ ಭಕುತ ಮಂಡಲಿಯು ಕಾದಿಹುದು ಹೆಂಡತಿಯನೊಡಗೂಡಿಯುಂಡು ತಣಿಯು ಬಾರೋ2 ವೆಳ್ಳೆ ತುಂಬಿಗಳಾಡೆ ಮಂಗಳಾರತಿ ಮಾಡಿಬೆಳ್ಳಿ ಕಳಶಗಳೆನಲು ಅಮೃತವನು ತುಂಬಿಬೆಳ್ಳನೆಯ ಹೂಗಳನು ಮಡಿ ತಳಿಗೆಯೊಳು ಹಿಡಿದುಬಳ್ಳಿ ಮಲ್ಲಿಗೆ ತಾವು ಆತುರದಿ ನಿಂತಿಹವು 3 ಚಿಕ್ಕೆಗಳು ಬಾಡುತಿವೆ ಚೊಕ್ಕೆಲರು ತೀಡುತಿದೆಮಕ್ಕಳಾಡುಲೆವೆ ಕಕ್ಕುಲತೆಯೊಲಿ ನಮ್ಮ ರಕ್ಷಿಸಲು ನೀನೇಳು 4 ಕರ ಮಕದು ಭಕುತಿಯಿಂದಲಿ ಬೇಡುವರುಪಾವು ಮಂಚವ ಬಿಟ್ಟು ಬೇಗೆದ್ದು ಬಾರೋ 5 ಕಂಜದೆಲೆಯಲಿ ಬಿದ್ದ ಮಂಜುವನಿಗಳ ಮೇಲೆಕೆಂಜೆಡೆಯನಾಂಶುಗಳು ರಂಜಿಸಲು ದೀಪದೊಳುಕಂಜನಾಭ ನಿರಾಂಜನವ ಬೆಳಗಲಿಕೆಮುಂಜಾಮದಲೆ ಕಾಯುತಿಹಳೊ 6 ಶಿರಬಾಗಿ ನಿನ್ನ ಚರಣಗಳಿಗೆ ಬಂದಿದೆ ಶರಣನಿರುತ ಧನವಾರೋಗ್ಯವಿತ್ತು ದುರಿತಾಪಹರಣಪರಿಕಿಸದೆ ರಕ್ಷಿಸಲು ಬಾರೋ ಕರುಣಾಭರಣವರ ಗದುಗಿನಲಿ ಮೆರೆವ ವೀರನಾರಾಯಣ 7
--------------
ವೀರನಾರಾಯಣ
ಒಡವೆ ಹೋಯಿತು ಮನ ದೃಢವಾಯಿತು ಪ ಹಿಡಿದರೋಡುವ ಕಳ್ಳ ಬಿಡದೆ ಕದ್ದುಕೊಂಡು ಹೋದಅ ಆರು ಜೋಡಿನ ಓಲೆಯಿತ್ತು ಮೂರು ಮುತ್ತಿನ ಮೂಗುತಿಯಿತ್ತುಚಾರುತರದ ಇಪ್ಪತ್ನಾಲ್ಕೆಳೆಯ ಸರವು ಒಂದಿತ್ತುಈರೈದು ತಾಳಿಗಳಿತ್ತು ಬಿರುದಿನ ಕಪ್ಪೆಂಟಿತ್ತುದಾರಿ ನೋಡಿಕೊಂಡು ಇದ್ದ ಛಾಯನೆಂಬ ಕಳ್ಳ ಕದ್ದ 1 ಎಪ್ಪತ್ತೆರಡು ಸಾವಿರ ಸೂತ್ರದ ಹಸ್ತಕಟ್ಟು ಎರಡಿತ್ತುಕಪ್ಪು ಬಿಳುಪು ಕೆಂಪು ವರ್ಣದ ಪದಕ ಒಂದಿತ್ತುಒಪ್ಪವಿತ್ತ ಹಸ್ತಕಡಗ ಆಶಾಪಾಶವೆರಡಿತ್ತುಒಪ್ಪವನ್ನು ಸಾಧಿಸಿ ನೇತ್ರನೆಂಬ ಕಳ್ಳ ಕದ್ದ 2 ಹುಟ್ಟು ಸಾವು ಎರಡು ಎಂಬ ಘಟ್ಟಿ ತೂಕದ ನಗವಿತ್ತುಕಷ್ಟ ಸುಖ ಕರ್ಮಗಳೆಂಬ ಸಂಚಿಗಳಿತ್ತುಅಷ್ಟು ಇಷ್ಟು ಚಿಲ್ಲರೆ ಒಡವೆ ಪೆಟ್ಟಿಗೆಯಲಿ ತುಂಬಿತ್ತುದೃಷ್ಟಿ ನೋಡಿಕೊಂಡು ಇದ್ದ ಧರ್ಮನೆಂಬ ಕಳ್ಳ ಕದ್ದ 3 ಎಲ್ಲ ಒಡವೆ ಹೋಯಿತಾದರು ಪುಲ್ಲಳಾಗಿ ಮೆರೆಯುತಾಳೆಚೆಲ್ವನೊಬ್ಬ ಪುರುಷನ ಕಂಡು ತಾಳಲಾರದೆಬಲ್ಲಿದಳು ಈಕೆ ಎಂದು ಇವಳ ಬಗೆ ತಿಳಿಯಿತೆಂದುಕೊಲ್ಲಬಾರದೆನುತ ಹೇಳಿ ಮನೆಯ ಬಿಟ್ಟು ಹೊರಗಟ್ಟಿದ4 ಇಂಥ ಒಡವೆ ಹೋಯಿತೆಂದು ಚೋದ್ಯಪಟ್ಟು ನೋಡುತಿರಲುತಂತ್ರ ಮಾಡಿ ಆದಿಕೇಶವ ಶ್ರೀಹರಿಯು ತಾನೆ ಬಂದುತಂತ್ರವನ್ನು ಹೇಳಿ ಜ್ಞಾನ ಮಾರ್ಗವನ್ನು ಬಿಟ್ಟುಕೊಟ್ಟುಸಂತಸದಿಂದ ಇರು ಎಂದು ಚಿಂತೆ ಬಿಡಿಸಿ ಸಲೆ ಸಲಹಿದ 5
--------------
ಕನಕದಾಸ
ಒಡಿಯಾ ನಿನ್ನಡಿಗಳಿಗೆ ಬಿಡದೆ ನಾ ನಮೋ ಎಂಬೆ ಕೊಡು ಎನಗೆ ದೃಢ ಪದವಿ ಕಡಲಶಯನಾ ಪ ಪಿತನ ತೊಡಿಯ ಮೇಲೆ ಕುಳಿತಿರಲು ಮಲತಾಯಿ ಅತಿ ರೋಷದಿಂದವನ ಹೊಯಿದೆಬ್ಬಿಸೆ ಖತಿಯಿಂದ ವನಕೆ ಪೋಗಿ ನಿನ್ನ ಪೂಜಿಸಲು ಮತಿವಂತನ ಮಾಡಿ ಧ್ರುವಪದವಿ ಕೊಡಲಿಲ್ಲವೆ 1 ತಂದೆ ಬಾಧಿಸೆ ಧೃತಿಗೆಡದೆ ನರಹರಿ ಗೋ ವಿಂದ ನಾರಾಯಣ ಕೃಷ್ಣ ವಿಷ್ಣು ಇಂದಿರಾರಮಣ ಇನಕುಲತಿಲಕ ಎಂದೆನಲು ಕಂದನಿಗೆ ಕೈವಲ್ಯಪದವಿ ಕೊಡಲಿಲ್ಲವೇ2 ಜಾತಿಧರ್ಮವ ಬಿಟ್ಟು ಅಜಮಿಳನು ಚಂಡಾಲ ಜಾತಿ ವಧುವಿಗೆ ಸೋತು ಕೆಟ್ಟು ಯಮನ ದೂತರನ ನೋಡಿ ಕಂಗೆಟ್ಟು ಮಗನನು ಕರಿಯೆ ಪ್ರೀತಿಯಲಿ ವೈಕುಂಠ ಪದವಿ ಕೊಡಲಿಲ್ಲವೇ 3 ವನಿತೆ ಪತಿವ್ರತವಾನಂತನನುಚರಿಸಿ ಬಂದಿರಲು ಮನದ ಖೇದವ ತಾಳಿ ಹರಿದು ಬಿಸುಟೆ ಮುನಿಪುಂಗ ಅಡವಿಯನು ತೊಳಲಿ ನೆಂದು ಬಿದ್ದಿರಲು ಪುನರ್ವಸು ಸ್ಥಾನವು ಕೊಡಲಿಲ್ಲವೆ4 ಶೌರ್ಯದಲಿ ಅಬ್ಧಿಯನು ಹಾರಿ ಲಂಕೆಯ ಸುಟ್ಟು ಧೂರ್ಯದಲಿ ರಕ್ಕಸರನೊರಿಸಿ ಬಿಸುಟೂ ಕಾರ್ಯದಲಿ ಹನುಮಂತ ನಿನ್ನ ಮೆಟ್ಟಿಸೆ ಒಲಿದು ಸೂರ್ಯಭಾಂದವಗೆ ಜನಪದವಿ ಕೊಡಲಿಲ್ಲವೆ 5 ಸೋದರಗೆ ಬುದ್ದಿಯನು ಪೇಳೆ ಕೇಳದೆಯಿರಲು ಪಾಧಾರಿ ದಾಟಿ ನಿಮ್ಮ ಸೇವಿಸಿ ಕಾದಿ ರಾವಣನ ಛೇದಿಸಿ ಲಂಕಾಪುರ ಪದವಿ ಪರಿಯಂತ ಕೊಡಲಿಲ್ಲವೆ 6 ಚಿತ್ತದೊಳು ಆವಾಗ ನಿನ್ನ ಧ್ಯಾನವ ಮಾಡಿ ವಿತ್ತಾದಿ ದಾನಗಳು ಮಿತಿಯಿಲ್ಲದೇ ಅತ್ಯಂತ ಕೊಡುವವನ ಮೂರು ಪಾದವ ಬೇಡಿ ಭಕ್ತಗೆ ನಲಿದು ಸುರಪದವಿ ಕೊಡಲಿಲ್ಲವೆ 7 ಮಾನಿನಿಯ ಸೀರಿಯನು ಸಭೆಯೊಳಗೆ ದುರುಳರು ಅಭಿ ಮಾನ ಭಂಗವ ಮಾಡಿ ಸುಲಿವುತಿರಲು ಶ್ರೀನಾಥ ಕೇಶವ ಮುಕುಂದನೆಂದು ಮೊರೆ ಇಡೆ ನೀನರಿತು ಅಕ್ಷಯಾಂಬರ ಕೊಡಲಿಲ್ಲವೆ8 ಬಡತನ ಉಳ್ಳವನಾಗಿ ಕ್ಲೇಶದಲಿ ಸುಧಾಮ ನಡುಗುತಲಿ ನಿನ್ನ ಪಟ್ಟಣಕೆ ಬರಲು ಹಿಡಿತುಂಬಿ ಅವಲಕ್ಕಿಗೆ ಸಂತೃಪ್ತನಾಗಿ ಕಡೆಯಿಲ್ಲದೈಶ್ವರ್ಯ ಪದವಿ ಕೊಡಲಿಲ್ಲವೆ 9 ಸರಸಿಯೊಳು ಬಾಲಕನ ನೆಗಳಿ ಪಿಡಿದು ನುಂಗೆ ಗುರುದಕ್ಷಿಣವ ಬೇಡೆ ಸಾಂದೀಪನು ಭರದಿಂದ ಪೋಗಿ ಕೃತಾಂತನೊಳು ಭೂ ಸುರಗೆ ಸುಪುತ್ರ ಪದವಿ ಕೊಡಲಿಲ್ಲವೆ 10 ಭುಜಕರೆಲ್ಲರು ನಿನಗೆ ಭಾಗ್ಯವನು ಕೊಡಲಿಲ್ಲ ಭಜಿಸಿದರವರು ತಮ್ಮ ತಕ್ಕ ತೆರದಿ ಭಜಿಸುವೆನು ನಿನ್ನ ತಕ್ಕಂತೆ ದೃಢ ಪದವಿಕೊಡು ಸಿರಿ ವಿಜಯವಿಠ್ಠಲನೆ11
--------------
ವಿಜಯದಾಸ