ಒಟ್ಟು 784 ಕಡೆಗಳಲ್ಲಿ , 80 ದಾಸರು , 638 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಚತುರ್ದಶಿಯ ದಿನ (ಹನುಮಂತನನ್ನು ಕುರಿತು) ರಂಭೆ : ಇವನ್ಯಾರೆ ದೂರದಿ ಬರುವವ ಇವನ್ಯಾರೆಪ. ಇವನ್ಯಾರೆ ಮಹಾಶಿವನಂದದಿ ಮಾ- ಧವನ ಪೆಗಲೊಳಾಂತು ತವಕದಿ ಬರುವವ1 ದಾಡೆದಂತಮಸಗೀಡಿರುವದು ಮಹಾ ಕೋಡಗದಂತೆ ಸಗಾಢದಿ ಬರುವವ2 ಕಡಲೊಡೆಯನು ಮೃದುವಡಿಯಡರಿಸಿ ಬಿಡ ದಡಿಗಡಿಗಾಶ್ರೀತರೊಡಗೂಡಿ ಬರುವವ3 ಊರ್ವಶಿ :ನಾರಿ ಕೇಳೆಲೆಗೆ ವೈಯಾರಿ ನೀ ಮುದದಿ ನಾರಾಯಣನಿಗೀತ ಬಂಟನಾದಾದರಿದಿ ವೀರ ರಾಮವತಾರದಿ ಹಿಂದೆ ಹರಿಯ ಚಾರಕನಾಗಿ ಸೇವೆಯ ಗೈದ ಪರಿಯ ಕ್ರೂರ ದಶಾಸ್ಯನ ಗಾರುಗೆಡಿಸಿ ನೃಪ ವೀರನ ಪೆಗಲಿನೊಳೇರಿಸಿ ದೈತ್ಯರ ಭೂರಿವಧೆಗೆ ತಾ ಸಾರಥಿಯಾದವ ಕಾರುಣೀಕ ಮಹಾವೀರ್ಹನುಮಂತ1 ಆಮೇಲೆ ವೀರಾವೇಶದಿ ವಾರಿಧಿಯನು ರಾಮನಪ್ಪಣೆಯಿಂದ ದಾಟಿದನಿವನು ಭೂಮಿಜೆಗುಂಗುರ ಕೊಟ್ಟ ನಂತರದಿ ಕಾಮುಕರನು ಸದೆಬಡಿದನಾ ಕ್ಷಣದಿ ಹೇಮಖಚಿತ ಲಂಕಾಮಹಾನಗರವ ಹೋಮವ ಗೈದು ಸುತ್ರಾಮಾರಿಗಳ ನಿ- ರ್ನಾಮಿಸಿ ಸೀತೆಗೆ ತಾ ಮಣಿಯುತ ಚೂ- ಡಾಮಣಿ ತಂದ ಮಹಾಮಹಿಮನು ಇವ2 ವಾರಿಮುಖಿ ನೀ ಕೇಳಿದರಿಂದ ಬಂದ ವೀರ ಹನುಮಂತನನೇರಿ ಗೋವಿಂದ ಸ್ವಾರಿಗೆ ಪೊರಟ ಚಾತುರ್ದಶಿ ದಿವಸ ಆರತಿಯನು ಕೈಕೊಳ್ಳುವ ಶ್ರೀನಿವಾಸ ಭೇರಿ ಮೃದಂಗ ಮಹಾರವದಿಂದ ಸ- ರೋರುಹನಾಭ ಮುರಾರಿ ಶರಣರು ದ್ಧಾರಣಗೈಯುವ ಕಾರಣದಿಂದ ಪಾ- ದಾರವಿಂದಗಳ ತೋರಿಸಿ ಕೊಡುವ3 ಬಳಿಕ ಪಲ್ಲಂಕಿ ಏರಿದ ಕಾಣೆ ನಾರಿ ನಲವಿಂದ ವೇದಘೋಷವ ಕೇಳ್ವ ಶೌರಿ ಜಲಜಭವಾದಿ ನಿರ್ಜರರಿಗಸಾಧ್ಯ ಸುಲಭನಾದನು ಭಕ್ತಜನಕಿದು ಚೋದ್ಯ ಸುಲಲಿತ ಮಂಟಪದೊಳೊ ನೆಲಸುತ ನಿ- ಶ್ಚಲಿತಾನಂದ ಮಂಗಲದ ಮಹೋತ್ಸವ ಗಳನೆಲ್ಲವ ಕೈಕೊಳುತಲಿ ಭಕ್ತರ ಸಲಹುವ ನಿರುತದಿ ಮಲಯಜಗಂಧಿನಿ4 ಶ್ರೀಕಾಂತ ಬಳಿಕ ಭಕ್ತರ ಒಡಗೂಡಿ ಏಕಾಂತ ಸೇವೆಯಗೊಂಡ ಕೃಪೆಮಾಡಿ ಸಾಕಾರವಾಗಿ ತೋರುವ ಕಾಣೆ ನಮಗೆ ಬೇಕಾದ ಇಷ್ಟವ ಕೊಡುವ ಭಕ್ತರಿಗೆ ಶ್ರೀಕರ ನಾರಾಯಣ ಶ್ರೀನಿವಾಸ ಕೃ- ಪಾಕರ ವಿಬುಧಾನೇಕಾರ್ಚಿತ ರ- ತ್ನಾಕರಶಯನ ಸುಖಾಕರ ಕೋಟಿ ವಿ- ಚಾರಕ ಭಾಸತ್ರಿಲೋಕಾಧಿಪನಿವ5
--------------
ತುಪಾಕಿ ವೆಂಕಟರಮಣಾಚಾರ್ಯ
ಚಂದಲಾ ಪರಮೇಶ್ವರಿ ವಂದಿಸುವೆನು ಚಂದಲಾ ಪರಮೇಶ್ವರಿ ಪ ಚೆಂದಾಗಿ ಮನಸಿಗಾನಂದ ನೀಡುವ ನಿನ್ನಮುಂದೆಯೆ ಕಂದ ತಾ ಬಂದು ನಿಂದಿಹೆನವ್ವ ಅ.ಪ. ಘನದಯಾವಂತೆ ಕಾಯೆ ಇದು ನಿನ್ನಅನುಗ್ರಹವೆಂಬೆ ತಾಯೆಕನಸಿನೊಳಿರಲಿಲ್ಲ ಮನಸಿನೊಳಿರಲಿಲ್ಲಜನನಿ ನೀನೆ ಕರೆಸಿ ದರುಶನವಿತ್ತವ್ವ 1 ಸನಿತೆಯೊಳ್ಬಂದು ನಿಂತು ದಯಾಮೃತವಹನಿಸುವಿ ಜನರಿಂಗಿತುಜನರ ಪಾವನ ಮಾಡಿ ಘನ ಸಂತಸ ನೀಡಿಅನುದಿನ ಜನ ಪಾಡಿ ಕುಣಿಯುವಂತೆ ಕೃಪೆ ಮಾಡೆ 2 ಸದಯಾಮೂರ್ತಿಯು ನೀ ಸತ್ಯ ನಿನ್ನಯ ಪಾದಪದುಮಕೆ ಮಣಿಯುವೆ ನಿತ್ಯಗದುಗಿನ ವೀರನಾರಾಯಣನೆನ್ನಯಹೃದಯದಿ ಸತತ ನಿಲುವಂತೆ ಕರುಣಿಸೌ 3
--------------
ವೀರನಾರಾಯಣ
ಚರಣಕಮಲವನು ನೆನೆವೆ ನಾ ನಿನ್ನ ಪ. ಚರಣಕಮಲವನು ನೆನೆವೆ ನಾ ದುರಿತರಾಶಿಗಳ ಸಂಹರಿಪನ ಅ.ಪ. ಶ್ರುತಿಯನುದ್ಧರಿಸಿದುದಾರನ ಸಿಂಧು- ಮಥನಕೊದಗಿದ ಗಂಭೀರನ ಕ್ಷಿತಿಯನೆತ್ತಿದ ಬಲುಧೀರನ ಶಿಶು ಸ್ತುತಿಸೆ ಕಂಬದಿ ಬಂದ ವೀರನ 1 ಇಂದ್ರನ ಧಾರೆಯ ನಿಲಿಸಿದನ್ನ ತನ್ನ ತÀಂದೆಯ ಮಾತು ಸಲಿಸಿದನ್ನ ಕಂದರದಶನ ಸೋಲಿಸಿದನ್ನ ವ್ರಜ- ದಿಂದುಮುಖಿಯರ ಪಾಲಿಸಿದನ್ನ 2 ವಧುಗಳ ವ್ರತವ ಖಂಡಿಸಿದನ್ನ ದುಷ್ಟ ರುದಿಸಲು ತುದಿಯ ತುಂಡಿಸಿದನ್ನ ಇದಿರಾದ ಖಳರ ಖಂಡಿಸಿದನ್ನ ಹಯ ವದನಪೆಸರ ಕೊಂಡುದಿಸಿದನ್ನ 3
--------------
ವಾದಿರಾಜ
ಚಿಂತಯಾಮಿ ತಾರಕನಾಮಂ ಅಂತರಾತ್ಮ ರಘುರಾಮಂ ಪ ಸೇವ್ಯ ಸೀತಾರಾಮಂ ಅ.ಪ. ರಾಕ್ಷರ ರಹಿತಾಷ್ಟಾಕ್ಷರಿ ಶೂನ್ಯಂ ಮಾಕ್ಷರ ಲೋಪ ಪಂಚಾಕ್ಷರಿ ಶೂನ್ಯಂ ಸಾಕ್ಷರ ರಾಮಾದ್ವ್ಯಕ್ಷರಿ ಮಾನ್ಯಂ ರಾಕ್ಷಸನಾಶ ರಾಮಾಕ್ಷರ ಮಾನ್ಯಂ 1 ರವಿವಂಶಾಂಬುಧಿ ಚಂದ್ರಪ್ರದೀಪಂ ಭುವನಮನೋಹರ ದಿವ್ಯಸ್ವರೂಪಂ ಶಿವಧನುಭಂಜನ ವೀರಪ್ರತಾಪಂ ಅವನಿಜಾಲೋಲ ವೈಭವಯುತ ಭೂಪಂ 2 ಸತ್ಯಧರ್ಮ ಪರಾಯಣ ರಾಮಂ ನಿತ್ಯಮುಕ್ತ ಸೇವಿತ ರಘುರಾಮಂ ಸತ್ಯ ಪರಾಕ್ರಮ ಜಗದಭಿರಾಮಂ ಸ್ತುತ್ಯಚರಿತ್ರ ಮಾಂಗಿರಿವರಧಾಮಂ 3
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಚೌತಿಯ ದಿವಸ ರಂಭೆ : ವಾರಿಜಗಂಧಿನಿ ನೋಡಿತ್ತ ಶ್ರುತಿ- ಮೌರಿ ರಭಸದಿ ಲಕ್ಷ್ಮೀಕಾಂತ ಭೂರಿ ವೈಭವದಿ ಪೊರಟನೆತ್ತ ಯಾವ ಕಾರಣವೆಂದು ಪೇಳೆಲೆ ಸತ್ಯ 1 ಊರ್ವಶಿ : ದೇವಿ ಕೇಳೆಲೆ ಸುಮ್ಮಾನದಿಂದ ಕುಲ- ದೇವರ ಪೂಜೆಗೋಸುಗ ಬಂದ ಪಾವನಮೂರ್ತಿಯಾದುದರಿಂದ ನಮ್ಮ ಕಾವನು ಕರುಣಾಕಟಾಕ್ಷದಿಂದ2 ರಂಭೆ : ನೂತನವಾಯ್ತೆ ಕೇಳಲೆ ಜಾಣೆ ಜಗ- ನ್ನಾಥನಿಗ್ಯಾವ ಕುಲವು ಕಾಣೆ ರೀತಿಯನರುಹಬೇಕೆಲೆ ಬಾಲೆ ಸರ್ವ ಚೇತನಾತ್ಮನ ನಾಟಕದ ಲೀಲೆ3 ಊರ್ವಶಿ : ಪಾಂಡವರಾಯುಧಗಳನ್ನೆಲ್ಲ ಪೊತ್ತು- ಕೊಂಡ ಕಾರಣದಿ ಪೂಜೆಗಳೆಲ್ಲ ಕಂಡು ಪೊಗಳಲು ಕವಿಗು ಸಲ್ಲ ಇನ್ನು ಪುಂಡರೀಕಾಕ್ಷನವನೆ ಬಲ್ಲ4 ರಂಭೆ : ರಾಜವದನೆ ಪೂಜೆಯಾದ ಮೇಲೆ ಅಂ- ಭೋಜನಾಭನು ತಾಕ್ಷ್ರ್ಯನ ಮೇಲೆ ರಾಜಬೀದಿಯೊಳ್ ಬರುವದೇನೆ ಇಂಥ ಸೋಜಿಗವೇನು ಪೇಳೆಲೆ ಜಾಣೆ5 ಊರ್ವಶಿ : ಪಟಹ ಡಿಂಡಿಮವಾದ್ಯರವದಿಂದ ತಂ- ಬಟೆನಿಸ್ಸಾಳರವದಿ ಬರುವ ಚಂದ ಸಟೆಯಲ್ಲ ಕೇಳು ಕರುಣದಿಂದ ನಮ್ಮ ಕಟಕ ರಕ್ಷಿಸಲು ಬರುವ ಗೋವಿಂದ6 ರಂಭೆ : ಬಳಿಕ ಪಲ್ಲಂಕಿಯೇರಿದ ಕಾಣೆ ಜನ- ಗಲಭೆಗಳಿಂದ ಪೋಗುವದೇನೆ ನಲವಿನಿಂದಲಿ ಪೊರಟೆಲ್ಲಿಗೆನೆ ಮಹಾ- ಜಲಜನಾಭನ ಮಹಿಮೆಯ ಜಾಣೆ7 ಊರ್ವಶಿ :ಚಾಪಲನೇತ್ರೆ ಚೌತಿದಿನದಿ ಕೆರೆ- ದೀಪವೆಂದೆನುತ ಭಕ್ತರು ಮುದದಿ ಶ್ರೀಪರಮಾತ್ಮ ವಿಲಾಸದಿ ಭಕ್ತ- ರಾಪೇಕ್ಷೆಗಳನು ಸಲ್ಲಿಸುವಂದದಿ8 ರಂಭೆ : ಸೋಮಾರ್ಕಜ್ಯೋತಿಹಿಲಾಲುಗಳು ಜನ- ಸ್ತೋಮ ಜೇನುಂಡೆ ಬಿರುಸು ಮಿಗಿಲು ವ್ಯೋಮಕೇಶಗಳ ಪೊಗಳತೀರದು ಸರಿ ಭೂಮಿಯೊಳ್ ಕಾಣೆನೆಂಬಂತಾದುದು9 ಅಮಮ ಇದೇನೆ ಇಂದಿನ ಲೀಲೆ ಜನ- ರಮರಿಕೊಂಡಿಹರೇನಿದು ಬಾಲೆ ಸಮವಿಲ್ಲ ಇಂತೀ ವೈಭೋಗಕ್ಕೆಲೆ ನ- ಮ್ಮಮರಾವತಿಗಿಂತಧಿಕ ಬಾಲೆ10 ಊರ್ವಶಿ : ಸಾರ್ಥಕಾಗುವದು ಜನ್ಮವು ಕಾಣೆ ಸಕ- ಲಾರ್ತಿ ಹರಣವಾಗ್ವದು ಜಾಣೆ ಕೀರ್ತಿತರಂಗಮಾಗಿಹುದೇನೆ ಶೇಷ- ತೀರ್ಥವೆಂದರೆ ಕೇಳಿದು ಪ್ರವೀಣೆ11 ರಂಭೆ : ಏಸು ದೊಡ್ಡಿತೆ ಕೇಳಲೆ ಬಾಲೆ ಅನಂ- ತಾಸನದಂತೆ ಮರೆವುದಲ್ಲೇ ನಾಸಿರ ದೀಪಸೋಪಾನದಲೆ ಮಹಾ- ಶೇಷನಿಹನು ಮಧ್ಯದೊಳಿಲ್ಲೇ12 ಊರ್ವಶಿ : ಕರುಣಾಕರನು ನಮ್ಮೆಲ್ಲರನು ನಿತ್ಯ ಪೊರೆಯಲೋಸುಗ ಬಂದನು ತಾನು ಸುರುಚಿರ ಮಂಟಪವೇರಿದನು ಭೂ- ಸುರರಿಂದ ವೇದಘೋಷವ ಕೇಳ್ವನು13 ದೃಷ್ಟಾಂತವಾಗಿ ಪೇಳುವದೇನೆ ಬ್ರಹ್ಮ ಸೃಷ್ಟಿಗೆ ಪೊಸತಾಗಿಹುದು ಕಾಣೆ ಕಟ್ಟಿಸಿದವನು ಪುಣ್ಯೋತ್ತಮನು ಪರ- ಮೇಷ್ಠಿ ಜನಕನ ಕೃಪೆಯಿನ್ನೇನು14 ಭಜಕರ ಮುಖದಿಂದೆಲ್ಲ ತಾನು ಭೂ- ಭುಜನಾಗಿ ನಡೆಸುವನಿದನೆಲ್ಲನು ನಿತ್ಯ ಸಾಕಾರವನು ತೋರಿ ತ್ರಿಜಗವನೆಲ್ಲ ರಕ್ಷಿಸುತಿಹನು15 ರಂಭೆ : ಬಿಡದೆ ಇನ್ನೊಂದು ಕೇಳುವೆ ನಾರಿ ಜಗ- ದೊಡೆಯ ಪೊರಡುವ ಕಾಲದಿ ಭಾರಿ ಬೆಡಿಖಂಬ ಧ್ವನಿಯು ಇದೇನೆ ಪೇಳೆ ಇಂಥ ಕಡು ಬೆಡಗನು ಉಸುರೆಲೆ ಬಾಲೆ16 ಊರ್ವಶಿ: ಜನರು ಎಲ್ಯಾದರಂಜಿದÀ ಭಯವ ತಮ್ಮ ತನುವಿಗೆ ಸೋಂಕಲದನೆಲ್ಲವ ಮನದಿ ಝುಮ್ಮೆನಿಸಿ ಬೆಚ್ಚೋಡಿಸುವ ಖಂಬ- ಧ್ವನಿಯೆಸಗಿದರು ಕೇಳಿದರಂದವ17 ತಿರುಗಿಯೇರಿದನು ಪಲ್ಲಂಕಿಯಲ್ಲಿ ಸುತ್ತು- ಬರುವನು ವೇದನಿನಾದದಲಿ ವರರತ್ನ ಖಚಿತ ಮಂಟಪದಲ್ಲಿ ನಿಂತ ನಿರವದಿ ಸುಖದಾಯಕನಲ್ಲಿ18 ಶರಣರ ಪಾಪ ಮನಕೆ ತಾರ ದುಡಿದ ವರ ಭೇರಿಗೆರೆವ ಬಿಸಿನೀರ ವರಲಕ್ಷ್ಮೀನಾರಾಯಣಧೀರ ಸುರು- ಚಿರ ಸಿಂಹಾಸನವೇರಿದ ವೀರ19
--------------
ತುಪಾಕಿ ವೆಂಕಟರಮಣಾಚಾರ್ಯ
ಜಂಗಮರು ನಾವು ಲಿಂಗಾಂಗಿಯಾರುಮಂಗಳಾವಂತರು ಭವಿಗಳಂತಲ್ಲಾ ಪ ಶಿವ ಗುರುದೈವ ಕೇಶವ ನಮ್ಮ ಪರದೈವಭುವನ ಜೀವನ ನಮ್ಮ ಗುರು ಶಾಂತನೂ ||ಶಿವನ ದ್ರೋಹವ ಮಾಡುವನೆ ಅಪರಾಧಿಅವನೆ ಅದ ತಿಳಿಯುವನು ಶ್ರುತಿ ಸಮ್ಮತಾ 1 ಮಜ್ಜನ ಉಂಟುಸೌಭಾಗ್ಯವಿಹ ಮಹಾಂತನ ಮಠದವರೂ 2 ವಿರಕ್ತರಾವು ಸುಶೀಲವಂತರು ನಾವುವೀರಭದ್ರನ ಪ್ರೀಯ ಭಕ್ತರಾವೂ ||ಕಾರಣಾ ಕರ್ತ ಶ್ರೀ ಮೋಹನ ವಿಠಲನೆಕಾರುಣ್ಯ ಮಾಡು ದಮ್ಮಯ್ಯ ಎಂಬುವರಾವು 3
--------------
ಮೋಹನದಾಸರು
ಜನುಮದ ದಿವಸವಿದು ಹನುಮ ನಿನ್ನಜನುಮದ ದಿವಸವಿದೂ ಪ ಅನುದಿನ ನಿನ್ನನುನೆನೆಯುವ ಜನರಿಗೆ ಘನ ಮುದ ಕೊಡುವಂಥ ಅ.ಪ. ಯಾವಾಗಲೂ ಹರಿಯ ಭಕುತಿಯಲಿಸೇವೆಮಾಳ್ಪ ಪರಿಯಭಾವುಕರಿಗೆ ಕಲಿಸುವುದಕೆ ಗಡಜೀವಿಯಾಗಿ ಅವತರಿಸಿದ ನಿನ್ನದೂ 1 ಪೊಡವಿಯ ಮಾತೆಯನು ದನುಜಬ ಚ್ಚಿಡಲವಳಿರುವದನುಹುಡುಕಿ ತೆಗೆಯಲಾ ಕಡಲನೆ ಜಿಗಿಯುವಕಡುಶಕ್ತಿಯ ಗಡ ಪಡೆದ ನಿನ್ನಯ 2 ಧಾರುಣಿನ ಕಾರಣ ಗದುಗಿನವೀರನಾರಾಯಣಚಾರು ಚರಣದಿ ತೋರಿ ಭಕುತಿಯನುಸೂರೆಗೈಯ್ಯೆ ಮೈದೋರಿದ ನಿನ್ನನು 3
--------------
ವೀರನಾರಾಯಣ
ಜಯ ಕೊಲ್ಹಾಪುರ ನಿಲಯೇಶ್ರೀನಿವಾಸನ ಸತಿಯೇ ಸಾಗರರಾಜನ ಸುತೆಯೇನಾರಿಯರೆಲ್ಲದು ಕೂಡಿ ಆರತಿ ಬೆಳಗುವೆವು ಪ ಬಿಳಿಯ ಪತ್ತಲವುಟ್ಟು ಕಡಗ ಕಂಕಣ ತೊಟ್ಟುಜಡೆಗೆ ಮಲ್ಲೆಯ ಮಾಲೆ ಮುಡಿದಾ ವರಮಹಾಲಕ್ಷ್ಮಿಗೆ 1 ಮರುಗ ಮಲ್ಲಿಗೆ ಜಾಜಿ ಪಾರಿಜಾತದ ಕುಸುಮಸಿರಿಯ ಚರಣಕೆ ಅರ್ಪಿಸಲೆಂದು ಜಯ ಜಯ ಜಯ 2 ಬಡವರಾ ಮನೆತನಕೆ ಅಭಿಮಾನವನ್ನಿಟ್ಟುನಿರುತ ಕಳಶದಿ ಕುಳಿತ ಮಹಾಲಕ್ಷ್ಮೀಗೆ ಹಾಡುತ ಪಾಡುವೆವು 3 ಇಂದು ನಮ್ಮ ಸದನಕ್ಕೆ ಬಾ ಎಂದುಗದುಗಿನ ವೀರನಾರಾಯಣನ ಅರಸಿಗೆ ಹಾಡುತ ಪಾಡುವೆವು 4
--------------
ವೀರನಾರಾಯಣ
ಜಯ ಜನಕಜಾಪತೇ ರಾಮಾ ಜಯ ಪ ಜನಕಜಾಪತೇ ಜಲದಶ್ಯಾಮಾ ಜಯರಘುವಂಶಲಲಾಮ ಅ.ಪ. ಮದನಜನಕ ಮಧುಕೈಟಭ ಭೀಮ ಮದನ ಬಿಂಬಾರ್ಚಿತ ಕಾಮಾ 1 ರಾಮಚಂದ್ರ ರಘುವೀರ ಜಾನಕೀರಾಮ ರಾವಣವೈರಿ ಶ್ರೀರಾಮಾ 2 ವಿನುತ ಸೋಮ ಶ್ರೀದವಿಠಲ ಗುಣಧಾಮ 3
--------------
ಶ್ರೀದವಿಠಲರು
ಜಯ ಜಯ ಭೀಮಸೇನ ಪ. ಜಯ ಭೀಮಸೇನ ದುರ್ಜಯ ಪರಾಕ್ರಮ ಧೀರಾದಯಾಪಯೋನಿಧಿಯೆ ನಿರ್ಭಯ ವೈಷ್ಣವಾಗ್ರಣಿಅ.ಪ. ಅಂಬ ಪಾವಕ ದೀನೋದ್ಧಾರಿ1 ವೃಕೋದರ ವಿಷ್ಣುಸೇವಕ ವಿಜ್ಞಾನಾಂಬುಧಿಬಕಮದಧ್ವಂಸಿ ಜಟಾಸುರಾಂತಕ ಹಿಡಿಂ-ಬಕಾಸುರಗರ್ವಪರ್ವತ ಪವಿಧರ ಹಿಡಿಂಬಕಿ ಚಿತ್ತಕುಮುದಕೋರಕ ಪೂರ್ಣೋಡುಪರಾಜಅಕಳಂಕ ಧನುರಾಗಮಾಚಾರ್ಯ ನಿಪುಣ ಕೀ-ಚಕ ಬಲ ನಿರ್ಮೂಲನ ದ್ರೋಣಾದಿ ಸೈ-ನ್ಯ ಕುಮನ ಅಸುಹರಣ ಧಾರ್ತರಾಷ್ಟ್ರನಿಕರವಾರಣ ವಿದಾರಣ ಪಂಚವದನಾ 2 ಮಣಿಮಯರಥವೇರಿ ಫಣಿಕೇತನನನುಜನುನೆಣನು ದುರ್ಗುಣನು ಮಾರ್ಗಣಗಣದಿಂದಲಿರಣಾಂಗಣದಿ ನಿನ್ನ ಸೆಣಸಲಾಕ್ಷಣ ನೋಡಿತೃಣಮಾಡಿ ಗದೆಯಿಂದ ಹಣಿದು ಹಣೆಯ ಮೆಟ್ಟಿಪಣದಿ ನುಡಿದವರ ರಣವ ತಿದ್ದಿ ಅತ್ಯು-ಲ್ಬಣದಿಂದವಗೆ ಲಂಘಿಸಿ ವಕ್ಷದಿ ರಕ್ತಕೊಣನ ಶಸ್ತ್ರದಿ ನಿರ್ಮಿಸಿ ಕದಡಿಗೂಡಿರಣದೊಳೊಪ್ಪಿದ್ಯೊ ನಿನಗೆಣೆಯಿಲ್ಲವೆನಿಸಿ 3 ಮದ್ದಾನೆ ರೂಪ ಧರಿಸಿ ಮಾಯದಲಿ ಬಂದಾರುದ್ರಾನ ಯುದ್ಧದಿ ಗೆದ್ದುವೋಡಿಸಲಾಗಕೃದ್ಧನಾಗಿ ವ್ಯಾಘ್ರಸಿಂಹರೂಪದಿ ಬರೆಗುದ್ದಿ ಕೆಡಹಿ ವೇಗಕೆ ದಾರಿ ಕಟ್ಟಿದೆಯಿದ್ಧರೆಯೊಳು ನಿಮಗೆಣೆಯಾರು ಮಹಾಬಲಿಮದ್ರಾಧಿಪತಿಯ ಅಂಬರಕಟ್ಟಿ ರಾಜಸೂ-ಯಾಧ್ವರದಲಿ ಮಾಗಧನ ಸಂಹರಿಸಿದತಿಶುದ್ಧ ಸ್ವಭಾವ ಶೂರ ಸತತ ಸಾಧ್ಯಸಿದ್ಧೇಶನಿಲ ಕುಮಾರ ನಮಿಪೆಯೆನ್ನಉದ್ಧರಿಸುವುದಯ್ಯ ಶುದ್ಧ ಮನೋಹರ 4 ಸೂತ್ರ ಅಮಿತ ರೂಪ ಸದ್ಗುಣಗಣಧಾಮ ವೀರಪ್ರತಾಪ ಭಕುತಿ ಜ್ಞಾನಕಾಮಿತಾರ್ಥಗಳಿತ್ತು ಪೊರೆಯಯ್ಯ ಅಸುವ 5
--------------
ಗೋಪಾಲದಾಸರು
ಜಯ ಮಂಗಳಂ ಸತ್ಯಧೀರತೀರ್ಥರಿಗೆ ಶುಭಮಂಗಳಂ ಯತೀ ಗುಣಮಣಿಗೆ ಪ ಜಗದುದರಧರನಾದ ಜಗವ ಸೃಷ್ಟಿಸಿದಂಥ ಜಗವ ಪಾಲಿಸುವ ಶ್ರೀ ಜಗದೀಶನಾ ತ್ರಿಗುಣಮಾನಿಯಳಿಂದ ಬಗೆ ಬಗೆಯ ಸ್ತುತಿಗೋಳ್ವ ರಘುವರನ ದಿವ್ಯ ಚರಣಗಳ ಸೇವಿಪಗೆ 1 ಜಗದೀಶನಾಜ್ಞೆಯಿಂ ಜಗಕೆ ಗುರುವೆನಿಸಿ ನಾ- ಲ್ಮೊಗನೈಯ್ಯ ಸರ್ವಪರಿಹಾರನೆನಿಸಿದವಗೆ ಜಗದೊಳಿರುವ ಅಜ್ಞ ಜನರುಗಳಿಗೆ ಪಂಚಮು- ದ್ರೆಗಳನೇ ಇತ್ತು ಪಾಪಗಳ ತರಿದವಗೆ 2 ಸತ್ಯವೀರರು ಕರಗಳೆತ್ತಿ ಉತ್ತಮಪದವ ಇತ್ತದ್ದೆ ಪುಸಿಯೆಂದು ನುಡಿದವರ ಮುಖಕೆ ಮೃತ್ತಿಕೆಯನು ಹಚ್ಚಿ ಹತ್ತುಯಂಟೋ ರೂಪ ಸ- ರ್ವೋತ್ತಮನ ಪೂಜಿಸಿದ ಸತ್ಯಧೀರರಿಗೆ 3 ಪುರಕಾಶಿಯಿಂದ ರಾಮೇಶ್ವರದ ಪರಿಯಂತ ಇರುವ ಕ್ಷೇತ್ರಗಳಲ್ಲಿಯ ಮಹಿಮೆಯಾ ದುರುಳ ಕಲಿಯಲಿ ಕಡಿಮೆಯಾಗಬಾರದು ಮನುಜ ಸಿರಿರಾಮನಾಶ್ರಯದಿ ಜನಿಸಿ ಬಂದವಗೆ 4 ಕರುಣಾಸಾಗರನಿಗೆ ಕರೆದಲ್ಲಿ ಬರುವಗೆ ಶರಣುಬಂದವರ ಪರಿಪಾಲಿಸುವಗೆ ವರಗುರು ಮಧ್ವರಾಯರ ಪೀಠಪಾತ್ರಗೆ ಧೀರ ಹನುಮೇಶವಿಠಲ 5
--------------
ಹನುಮೇಶವಿಠಲ
ಜಯದೇವಿ ತನಯಗೆ ಮಂಗಳಂ ಶುಭ ಮಂಗಳಂ ಯುಗ ಯುಗದಿ ಪುಟ್ಟಿ | ಜಿಗಿದು ಗಗವ ಮೆಟ್ಟಿ ಹಗಲೊಡೆಯನ ಫಲ ಬಗೆಯ ಬಕ್ಷಿಸಿ ಮಿಗೆ ಭಕುತಿಲಿಂದ ರಘುಪನೊಲಿಸಿನಾ ಲ್ಮೊಗನ ಪದವಿ ಪಡೆದ ಸುಗುಣ ನಿಧಿಗೆ 1 ಪುನಃ ದ್ವಾಪರದಲ್ಲಿ ಇನಜನ ತನುಜಗೆ ಅನುಜನೆಂದೆನಿಸಿ ಹರಿಯಾಜ್ಞೆಯಿಂದಲಿ ಮಣಿಮಂತ ಮೊದಲಾದ ದನುಜರ ಗಣವೆಲ್ಲ ರಣದೊಳು ಹಣಿದಂಧ ಘವವೀರನೆ 2 ಬಂದು ಭೂಮಿಯಲ್ಲಿ ಮಧ್ಯಮಂದಿರ ನಂದನನಾಗಿ ಮಂದ ಮಾಯ್ಗಳ ಮತ ಖಂಡಿಸುತಲಿ ಶಿಂಧುತೀರದಿ ಮೆರೆವ ಇಂದುಕ್ಷೇತ್ರದಿ ಶಾಮ ಸುಂದರ ಸ್ಥಾಪಿಸಿದಾನಂದಮುನಿಗೆ 3
--------------
ಶಾಮಸುಂದರ ವಿಠಲ
ಜಯಮಂಗಳಂ ಪ ಬುದ್ಧಿಯನಾಳ್ವಂಗೆ ಸಿದ್ಧಿಯನೀವಂಗೆಉದ್ದನ್ನ ಒಡಲಿಂಗೆ ವಿಘ್ನಗಳ ಕೊಲ್ವಂಗೆಶುದ್ಧ ಹಿಮಗಿರಿಯ ಸುತೆಯ ಮುದ್ದಾದ ಕುವರಂಗೆಜಿದ್ದಿನಲಿ ಶಣ್ಮುಖನ ಗೆದ್ದಂಥ ಜಾಣಂಗೆ 1 ಶಂಕರನ ಕುವರನಿಗೆ ಓಂಕಾರ ರೂಪನಿಗೆಸಂಕಷ್ಟನಾಶನಿಗೆ ಅಂಕುಶಾಯುಧ ಧರಗೆಹೂಂಕರಿಪ ಜನಕುಳ್ಳ ಬಿಂಕವನು ತರಿದವಗೆಕಿಂಕರದ ನಿರುತದಲಿ ಕರುಣದಲಿ ಕಾಯ್ವನಿಗೆ 2 ಶುಭಕಾರ್ಯದಲಿ ಮೊದಲು ಪೂಜೆಗೊಂಬಾತನಿಗೆಅಭಯವನು ತೋರ್ಪನಿಗೆ ಇಭವದನ ಗಣಪಗೆಪ್ರಭುವಾಗಿ ಗಣಗಳಿಗೆ ಜಗದೊಳಗೆ ಮೆರೆವವಗೆವಿಭವದಲಿ ಬಿಡುವಿಲ್ಲದೆ ಭಾರತವ ಬರೆದಂಗೆ 3 ಸೂಕ್ಷ್ಮದಲಿ ಪರಿಕಿಸಲು ಸಣ್ಣ ಕಣ್ಣುಳ್ಳವಗೆಕಾಂಕ್ಷೆಗಳ ಕೇಳಲಿಕೆ ಮರದಗಲ ಕಿವಿಯವಗೆತೀಕ್ಷ್ಣತರ ಮತಿವಿಡಿದ ಘನವಾದ ತಲೆಯವಗೆಸುಕ್ಷೇಮ ಲಾಭಗಳ ಭಕ್ತರಿಗೆ ಕೊಡುವವಗೆ 4 ಇಲಿದೇರ ವೀರನಿಗೆ ಸುಲಿದೇಕದಂತನಿಗೆಎಲರುಣಿಯನುಪವೀತ ಮಾಡಿಕೊಂಡವಗೆನೆಲದೊಳಗೆ ಗದಗುಸಿರಿ ವೀರನಾರಾಯಣನನೊಲಿಸಿ ಕೊಡುವಂಥ ಮಂಗಳ ಮೂರುತಿಗೆ 5
--------------
ವೀರನಾರಾಯಣ
ಜಯಮಂಗಳೆನ್ನಿರೆ ದೇವಗೆ | ಸಂಗೀತದಿಂದಲಿ ಶ್ರೀಶಯನಿಗೆ ಪ ನಾಗವೇಣಿಯರು ನಾರದವರದಗೆ 1 ರಾವಣಾರಿ ರಘುವೀರನಿಗೆ 2 ಸೀಮಂತಿನಿಯರು ಕೋಮಲಾಂಗಗೆ 3
--------------
ಶಾಮಸುಂದರ ವಿಠಲ
ಜೈ ಜೈ ವೆಂಕಟರಾಯ ಸಲಹು ಗಡ ಪ ಶುಭ ಕಾಯ ಐಹಿಕ ಮಹಮಾಯವ ಬಿಡಿಸಯ್ಯಅ.ಪ ಪಂಕಜಾಕ್ಷ ಹರಿ ಸಂಕರುಷಣ ಭವ ಸಂಕಟ ಪರಿಹಾರ ಶುಭಕರ ಶಂಖಶಕ್ರಧರ ಮಂಕುದನುಜಹರ ಕಿಂಕರಘದೂರ ಶಂಖಸುರನ ಬಲು ಬಿಂಕಮುರಿದ ಬಲದಂಕ ಅದಟವೀರ ಶೂರ ಅಂಕುರಿಸೆನ್ನೊಳಾತಂಕತಾರದೆ ಪೊರೆ ಲಂಕಾ ವಿಜಯಕಾರ 1 ದಾತ ಮೂರುಜಗನಾಥ ಪರಮ ಅ ದ್ಭೂತ ಮಹಿಮೆಗಾರ ಚದುರ ಪ್ರೀತ ಭಕುತ ಭವಭೀತರಹಿತ ಮಾಯಾ ಪೂತನಿ ಸಂಹಾರ ನೀತಿಕೋವಿದ ವಿಧಿತಾತ ಅಸಮ ವಿ ಖ್ಯಾತ ಕರುಣನಿಕರ ಸುಂದರ ಘಾತಿಸಿ ಕಂಸನ ಮಾತಪಿತರ ಕಾಯ್ದ ಪಾತಕ ನಿವಾರ 2 ಬಾಲನಂತರಿಯದೆ ಆಲಯಗಳ ಪೊಕ್ಕು ಪಾಲು ಮೊಸರು ಕದಿದ ಸವಿದ ಬಾಲೆರುಡುವ ದುಕೂಲ ಕದಿದು ತಾ ಮೇಲು ಮರವನೇರ್ದ ಕಾಲಿಂದಿ ಧುಮಕಿದ ಕಾಳಿಯಮೆಟ್ಟಿದ ಕಾಳರಕ್ಕಸರೊದೆದ ಸದೆದ ಲೀಲಾ ಜಾಲ ನಂದ ಬಾಲನಾಗಿ ಬಲು ಬಾಲಲೀಲೆಗೈದ 3 ಪರಮ ಪರಾತ್ಪರ ಪರಮಪುರುಷ ಸಿರಿ ಪರಮ ಪಂಚಪ್ರಾಣ ದುರಿತ ಹರಣಜನನಮರಣ್ಹರಸುರವಿನಮಿತ ಧರಣಿಗಧಿಕ ತ್ರಾಣ ಕರಿಧ್ರುವರಿರ್ವರನು ಭರದಿ ನೀಡಿ ನಿಂತು ಪೊರೆದ ಪಾಂಚಾಲೀಮಾನ ಜಾಣ ಶರಣಜನರ ಮೈನೆರಳು ನಿಗಮಾತೀತ ನಿರಂಜನ 4 ಸೋಮವದನ ಸತ್ಯಭಾಮಾರಮಣ ಸುಖ ಧಾಮ ಸುಜನಹೃದಯನಿಲಯ ಕಾಮಜನಕ ಪುಣ್ಯನಾಮ ರಕ್ಕಸಕುಲ ಭೀಮ ಪಾಲಿಸಭಯ ಶಾಮವರ್ಣ ಮಮಸ್ವಾಮಿ ಭಜಿಪೆ ಶ್ರೀ ರಾಮಪಿಡಿಯೋಕಯ್ಯ ಸದಯ ಕಾಮಿತ ವರ ಸುಪ್ರೇಮದಿ ಇತ್ತೆನ್ನ ಪ್ರೇಮದುದ್ಧರಿಸಯ್ಯ 5
--------------
ರಾಮದಾಸರು