ಒಟ್ಟು 370 ಕಡೆಗಳಲ್ಲಿ , 76 ದಾಸರು , 337 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ನಂಬಿ ತುತಿಸಿರೋ ರಾಘವೇಂದ್ರ ಧ್ವರಿಯಾ ಸನ್ಮುನಿ ಕುಲವರಿಯಾ ಪ ಅಂಬುಜನಾಭನಿಗತಿ ಪ್ರೀಯಾ ಸಜ್ಜನರಿಗೆ ಸಹಾಯ ಅ.ಪ ಕನಕಶಯ್ಯನ ತನುಜನಾಗಿ ಜನಿಸಿ ನರಹರಿಯನ್ನೆ ಒಲಿಸಿ ಅನುಜರಿಗನುದಿನ ತತ್ತ್ವವ ತಾಕಲಿಸಿ ಮನದಲಿ ಶ್ರೀಹರಿ ಪದವನ್ನೇ ಭಜಿಸಿ ವರ ಕರುಣವನೇ ಸಲಿಸಿ ವನಜಭವಾಂಡದಿ ಬಹು ಬಲ್ಲಿದನೆನಿಪ ನತಜನರಿಗೆ ಸುರÀ 1 ಕಾಮಧೇನು ಸುರತರುವಿಗೆ ಸಮನೀತ ಕಾಮಿತ ಫಲ ದಾತಾ ರಾಮ ನರಹರಿ ಕೃಷ್ಣರ ಪದ ದೂತ ಲೋಕದಿ ಬಹು ಖ್ಯಾತ ಕಾಮಿನಿ ಸುತ ಧನ ಧಾನ್ಯದ ವ್ರಾತ ನೀಡುವೊನತಿ ಪ್ರೀತ ಪ್ರೇಮದಿ ನಿಜಜನಸ್ತೋಮಕೆ ಬಹು ದಾತ ಯತಿವರ ಕುಲನಾಥ 2 ಪಾತಕವನಕುಲ ವೀತಿಹೋತ್ರನೆನಿಸಿ ಭೂತಪ್ರೇತ ಮಹ ಭೀತಿಯನೇ ಬಿಡಿಸಿ ರೋಗವಪರಿಹರಿಸಿ ಮಾತಪಿತರ ತೆರ ದೂತರ ರಕ್ಷಿಸಿ ಮನೋಚಿಂತೆಯನೆ ಬಿಡಿಸಿ ದಾತಗುರುಜಗನ್ನಾಥವಿಠÀಲ ಪದದೂತ ದಾತ 3
--------------
ಗುರುಜಗನ್ನಾಥದಾಸರು
ನಮಿಸುವೆನು ನಮಿಸುವೆನು | ವಿಜಯದಾಸರಿಗೇ ಪ ಅಮಮ ಮಹಿಮೆಗಳ್ನಿಮ್ಮ | ವರ್ಣಿಸಲು ಅಳವೇ ಅ.ಪ. ಕವಚ ವಿಜಯವ ಪಠಿಸಿ | ಅವನಿಯೊಳು ಸಜ್ಜನರುಬವಣೆಗಳ ಕಳಕೊಂಡು | ಸುಖದಿಂದ ಜೀವಿಪರೋ |ಅವರನುಗ್ರಹದಿಂದ | ಭವಣೆ ಎನೆ ಮದ್ಭಯವುಸವೆದು ಪೋಗುತ ಗ್ರಂಥ | ಮುದ್ರಣವ ಮುಂಬರಿಸಿದೆ 1 ಹಯಾಸ್ಯ ನಂಘ್ರಿಯಲಿಕಾರ್ಯಮುಂಬರಿಸಿರುವ | ಮಹ ಕಾರುಣ್ಯ ಮೂರ್ತೇ 2 ಹರಿಗುರು ಗೋವಿಂದ | ವಿಠಲ ಚರಣಬ್ಜವನುಪರಿಪರಿಯಲಿಂದತುತಿಸಿ | ಮರಳಿ ಕಾಂಬುವ ಸುಹವನಾವರ ವಿಜಯ ದಾಸಾರ್ಯಾ | ಕರುಣಿಸೆನೆ ಬಿನ್ನಪವಕರಗತವ ಮಾಡುವುದು | ಉರುಕರುಣ ಸಂಪನ್ನಾ 3
--------------
ಗುರುಗೋವಿಂದವಿಠಲರು
ನವವಿಧ ಭಕುತಿ ಶ್ರವಣದಿಂದಲಿ ಪಾಪಹರಣವಾಗುವುದೆಂದು ಕವಿಗಳೆಲ್ಲರು ಕೂಗಿ ಒದರುತಿಹರು ಕಿವಿಗಳಿಗಾನಂದದಾಭರಣದಂತಿಹುದು ಶ್ರೀ- ಹರಿಯ ದಿವ್ಯನಾಮಾಮೃತದರಸವು ಮಾಧವನ ಮೂರ್ತಿಯನು ನೋಡದಿಹ ಕಂಗಳು ನವಿಲು ಕಣ್ಣುಗಳೆಂದು ಪೇಳುತಿಹರು ಕಮಲನಾಭ ವಿಠ್ಠಲನ ಮಹಿಮೆ ಪೊಗಳೆ ಫಣಿರಾಜನಿಗೆ ವಶವಲ್ಲ ದೇವಾ 1 ಕೀರ್ತನವು ಮಾಡಲು ಪಾತಕವು ಪರಿಹರವು ಮಾತುಳಾಂತಕನ ಮಹಿಮೆ ಘನವು ಶ್ರೀಶನನು ಮನದಣಿಯ ಸ್ತೋತ್ರವನು ಮಾಡಲು ನಾಶಗೈವನು ದುರಿತರಾಶಿಗಳನು ಮಾಡಿದಪರಾಧಗಳ ಮಾಧವನು ಮನ್ನಿಸುವ ಶ್ರೀಧರನ ಸ್ತುತಿಸಿ ಕೊಂಡಾಡುತಿಹರ ಕರುಣಾಕರ ಕಮಲನಾಭವಿಠ್ಠಲ ದುರಿತದೂರನು ಕಾಯ್ವ ಶರಣಜನರ 2 ಸ್ಮರಣೆಯನು ಮಾಡುತಿಹ ಮನುಜರಿಗೆ ಇಹಪರದಿ ಪರಮ ಮಂಗಳನೀವ ಪರಮಾತ್ಮನು ದುರಿತ ದೂರನ ಪಾದಸ್ಮರಣೆ ಮಾಡುವರಿಗೆ ಪರಿಪರಿಯ ಸೌಖ್ಯಗಳ ಕೊಡುವ ದೇವ ಮಧುವೈರಿಯನು ಸ್ಮರಿಸೆ ಮುದದಿ ಸಂಪದವೀವ ಮೂರ್ತಿ ಶ್ರೀಮಾಧವ ಕನಕಗರ್ಭನ ಪಿತನು ಕರುಣಾನಿಧಿಯು ಕಮಲನಾಭ ವಿಠ್ಠಲ ಕಾಯ್ವ ಸುಜನರ3 ಶಿಲೆಯಾದ ಅಹಲ್ಯೆಯ ಪರಿಪಾಲಿಸಿದ ಪಾದ ಧರಣಿ ಈರಡಿಗೈದ ದಿವ್ಯಪಾದ ಫಣಿ ಹೆಡೆಯ ತುಳಿದ ಪಾದ ವರ ಋಷಿಗಳೆಲ್ಲ ವಂದಿಸುವ ಪಾದ ಇಂದಿರಾದೇವಿ ಬಹುಚಂದದಿಂದೊತ್ತುತ ಕಂದರ್ಪನಯ್ಯನಿಗೆ ಪಾದಸೇವ ಚಂದದಿಂದಲಿ ಮಾಡಿ ಮಾಧವನಿಗೆ ನಂದಗೋಪಿಯ ಕಂದ ಸಲಹುಎನಲು ಸುಂದರ ಶ್ರೀ ಕಮಲನಾಭ ವಿಠ್ಠಲನು ಒಲಿವ 4 ಅರ್ಚಿಸುತ ಮೆಚ್ಚಿಸುತ ಸಚ್ಚಿದಾನಂದನನು ಸ್ವಚ್ಛ ಭಕುತಿಲಿ ಸ್ತೋತ್ರ ಮಾಡುತಿಹರ ಅಷ್ಟ ಐಶ್ವರ್ಯಪ್ರದನು ನಿತ್ಯಮುಕ್ತಳ ಕೂಡಿ ಭಕ್ತರ ಹೃದಯದಲಿ ಪೊಳೆವ ದೇವ ಸತ್ಯ ಸಂಕಲ್ಪನಿಗೆ ಕಸ್ತೂರಿ ತಿಲಕವು ಮತ್ತೆ ಪಾವಡಿ ಥಳಥಳನೆ ಹೊಳೆಯೆ ಸುತ್ತ ಬ್ರಹ್ಮಾದಿಗಳ ಸ್ತುತಿಗೆ ದೇವ ಚಿತ್ತವಿಟ್ಟು ಕೇಳ್ವ ಮಾಧವನು ಮುದದಿ ಕರ್ತೃ ಕಮಲನಾಭ ವಿಠ್ಠಲನು ಕಾಯ್ವ 5 ವಂದನೆಯನು ಮಾಡೆ ಮುಕುಂದನು ಒಲಿವನು ಮುದದಿ ಕಂದರ್ಪನಯ್ಯ ಕಮಲಾಕ್ಷ ಹರಿಯೂ ಸುಂದರಾಂಗ ಶ್ರೀಹರಿಗೆ ಗಂಧ ಪೂಸಿದಳಾಗ ಇಂದೀವರಾಕ್ಷಿ ನಸುನಗುತ ಬೇಗ ಇಂದ್ರಾದಿ ಸುರರೆಲ್ಲ ಕೊಂಡಾಡೆ ಮಾಧವನ ವಂದಿಸುತ ಸಿರಬಾಗಿ ಚಂದದಿಂದ ಮಂದಾರ ಪಾರಿಜಾತಗಳ ತಂದು ತಂದೆ ಕಮಲನಾಭ ವಿಠ್ಠಲನ ಮುಡಿಗೆ ಸಂಭ್ರಮದಿ ಮಳೆಗರೆಯೆ ಚಂದದಿಂದ 6 ದಾಸ್ಯವನು ಕೈಕೊಂಬ ದಾಸ್ಯಜನರನು ಪೊರೆವ ಮೀಸಲಾಗಿಹನು ಹರಿದಾಸ ಜನಕೆ ಪೋಷಿಸೆಂದೆನುವವರ ದೋಷಗಳನೀಡಾಡಿ ದೋಷರಹಿತನು ಪೊರೆವ ಸರ್ವಜನರ ಪೂಸಿ ಪರಿಮಳ ದ್ರವ್ಯ ಶ್ರೀಸಹಿತ ಮೆರೆವ ವಾಸುಕೀಶಯನ ಸಜ್ಜನರ ಪೊರೆವ ಮುರಳೀಧರ ಮಾಧವನು ಕರುಣದಿಂದ ಶರಣ ಜನರನು ಪೊರೆವ ಮರೆಯದೀಗ ಕಮಲನಾಭವಿಠ್ಠಲನು ಕಾಯ್ವದೇವ 7 ಸಖ್ಯ ಸ್ನೇಹಗಳಿಂದ ಮುತ್ತಿನ್ಹಾರಗಳನು ಕೃಷ್ಣನ ಕೊರಳಿಗ್ಹಾಕುತಲಿಬೇಗ ಅರ್ಥಿಯಿಂದಲಿ ರತ್ನ ಮುತ್ತಿನ ಚಂಡುಗಳ ವಿಚಿತ್ರದಿಂದಾಡುತಿರೆ ನೋಡಿ ಸುರರು ಮುತ್ತಿನಕ್ಷತೆಗಳನು ಮಾಧವನ ಸಿರಿಮುಡಿಗೆ ಅರ್ಥಿಯಿಂದ ಸುರಿಸುತಿರೆ ಹರುಷದಿಂದ ಅಪ್ರಮೇಯನು ಶ್ರೀಶ ಶ್ರೀನಿವಾಸ ಸರ್ಪಶಯನನು ಕಮಲನಾಭ ವಿಠ್ಠಲ ನಿತ್ಯ ತೃಪ್ತನು ಪೊಳೆವ ಭಕ್ತರ ಹೃದಯದಲಿ 8 ನಿತ್ಯ ತೃಪ್ತಗೆ ಮಾಡಿ ಅರ್ಥಿಯಲಿ ಅಪ್ರಮೇಯನನು ಸ್ತುತಿಸಿ ಮುತ್ತು ಮಾಣಿಕ್ಯ ಬಿಗಿದ ತಟ್ಟೆಯಲಿ ತಾಂಬೂಲ ಅಚ್ಚುತಾನಂತನಿಗೆ ಅರ್ಪಿಸುತಲಿ ಭಕ್ತಿಯಲಿ ವಂದನೆಯ ಭಕ್ತವತ್ಸಲನಿಗೆ ನಿತ್ಯ ಮುಕ್ತಳು ಮಾಡಿ ಹರುಷದಿಂದ ಸತ್ಯ ಸಂಕಲ್ಪ ಶ್ರೀ ಮಾಧವನಿಗೆ ಮುತ್ತಿನಾರತಿ ಬೆಳಗಿ ಅರ್ಥಿಯಿಂದ ಕರ್ತೃ ಶ್ರೀ ಕಮಲನಾಭ ವಿಠ್ಠಲನ ಕೊಂಡಾಡಿ9
--------------
ನಿಡಗುರುಕಿ ಜೀವೂಬಾಯಿ
ನಾನೇ ಸಜ್ಜನನಾದಡೆ ಇಂಥ ಹೀನ ವಿಷಯಗಳಿಗೆರಗುವೆನೇನಯ್ಯ ಪ. ನಿರುತದಿ ಪರರ ನಿಂದಿಸುತಿಹೆನೆಗುರುಹಿರಿಯರು ಸಜ್ಜನರೆನ್ನದೆಹರಿ ಪರದೈವವೆಂದರಿತು ಭಜಿಸದೆಪರರ ವಡವೆಗಳ ಬಯಸುವೆನೇನಯ್ಯ 1 ಚಿತ್ತವ ಪುರುಷೋತ್ತಮನ ಮನದಲ್ಲಿಡದೆಉತ್ತಮರಾದವರೊಡನಾಡದೆತತ್ವ ವಿಚಾರವ ಮಾಡದೆ ನಾನು ನ್ಮತ್ತರ ಸಂಗವ ಮಾಡುವೆನೇನಯ್ಯ 2 ಹೇಯ ಶರೀರವ ಪೋಷಿಸಿಕೊಂಡುಪಾಯವ ಚಿಂತಿಸಿ ಬಳಲುವೆನುರಾಯರ ಶರಣರ ಸಲಹುವರಂಗವಿಠಲನ ಬಿಡುವೆನೇನಯ್ಯ 3
--------------
ಶ್ರೀಪಾದರಾಜರು
ನಾರಾಯಣ ಎನ್ನಿರೊ ಸಜ್ಜನರೆಲ್ಲಪ. ಸಾರರಹಿತ ಸಂಸಾರದಲಿ ಪರಸಾರ ಇದು ಎಂದು ಸಂಸಾರಿ ನೀವೆಲ್ಲ ಅ.ಪ. ಇಹಪರ ಸುಖವುಂಟೋ ಇದರ ಫಲಬಹಳ ಕಟ್ಟಿದ ಗಂಟೋ ಘನಮಹಿಮಗೆ ಇದುಮಹಮಹಿಮೆ ಇದಲ್ಲದೆ ಮಹಿಮೆಯೊಳಗಿದುಮಹಾರಸವಾದಂಥ ಮಂತ್ರ ಮಹಭಕುತಿಪೂರ್ವಕವಾಗಿ ಒಮ್ಮೆ 1 ಹಸಿವೆಯ ಶ್ರಮವಿರಲಿ ಹಸಿವಿರದೆ ಹ-ರುಷವು ತಾನಿರಲಿ ರಸಿಕಶ್ರಮ ಕೆರಳಿ ಮಾ-ನಸ ವಶವು ಆಗಲಿ ಆಗದಿರಲಿದೋಷವಾಗಲಿ ಶುದ್ಧವಾಗಲಿ ಶ್ರೀಶನ ಮರೆಯದೆ ಹಾಂಗೆ 2 ಚೋರನೆಂದೆನದೆ ಚಿತ್ತದಲಿಜಾರನೆಂದೆಣಿಸದೆ ಸ್ಮರಣೆ ಮಾತ್ರದಿ ಬಹಳಪಾರರಹಿತ ಅನರ್ಥಸಂಚಿತಹರಣ ಮಾಡುವ ಪವನ ಪ್ರಿಯ ಸರ್ವರಂತÀರ ಹಯವದನ 3
--------------
ವಾದಿರಾಜ
ನಾರಾಯಣ ನಾರಾಯಣ ನಾರಾಯಣ ನಾರಾಯಣ ನಾರಾಯಣ ಲಕ್ಷುಮಿ ಅರಸನೇ ಪ. ನಾರಾಯಣ ಲಕ್ಷುಮಿಅರಸನೆ ಹಯವದನ ಸ್ವಾಮಿ ನೀ ಒಲಿದು ದಯವಾಗು ಅ.ಪ. ಕೊಂಡ ಕ್ರೋಧವೆಂಬ ಕನ್ನಡಿ (ಕೆಂಗಿಡಿ?) ಲೋಭಮೋಹಗಳನುವಾದೊ ಲೋಭಮೋಹಗಳನುವಾದೊ ಹಯವದನ ಸ್ವಾಮಿ ನೀ ಒಲಿದು ದಯವಾಗು 1 ಮನುಗಳ ಕಾಲದಲ್ಲಿ ಜಲದೊಳಗವತರಿಸಿ ಜಗವೇಳು ಧರೆಯ ನೆಗಹಿದೆ ಜಗವೇಳು ಧರೆಯ ನೆಗಹಿದೆ ಹಯವದನ ಮತ್ಸ್ಯವತಾರ ದಯವಾಗು 2 ಕೂರ್ಮಾವತಾರದಲಿ ಭೂಮಿಯ ನೆಗಹಿದೆ ಕೂಡೆ ಸಜ್ಜನರ ಸಲಹಿದೆ ಕೂಡೆ ಸಜ್ಜನರ ಸಲಹಿದೆ ಹಯವದನ ಕೂರ್ಮಾವತಾರ ದಯವಾಗು 3 ದುರುಳ ದಾನವಗಂಜಿ ಕೋರೆದಾಡೆಯಲಿ ನೆಗಹಿದೆ ಕೋರೆದಾಡೆಯಲಿ ನೆಗಹಿದೆ ಹಯವದನ ವರಾಹಾವತಾರ ದಯವಾಗು 4 ಸೊಕ್ಕಿದ ಅಸುರನ ಕರುಳ ಕುಕ್ಕಿ ಮಾಲೆಯ ಮಾಡಿ ಭಕ್ತನಿಗಭಯ ಸಲಿಸಿದೆ ಭಕ್ತನಿಗಭಯ ಸಲಿಸಿದೆ ಹಯವದನ ಅಪ್ಪ ನರಸಿಂಹ ದಯವಾಗು 5 ವಾಮನನಾಗಿ ನೀ ಭೂಮಿದಾನವ ಬೇಡಿ ಭೂಮಿ ಪಾದದಲಿ ಅಳೆದೆಯೊ ಭೂಮಿ ಪಾದದಲಿ ಅಳೆದೆಯೊ ಹಯವದನ ವಾಮನಾವತಾರ ದಯವಾಗು 6 ಹೆತ್ತವಳ ಶಿರ ಕಡಿದು ಕ್ಷತ್ರಿಯಕುಲ ಸವರಿ ಮತ್ತೆ ಕೊಡಲಿಯ ಪಿಡಿದೆಯೊ ಮತ್ತೆ ಕೊಡಲಿಯ ಪಿಡಿದೆಯೊ ಹಯವದನ ಅಪ್ಪ ಭಾರ್ಗವನೆ ದಯವಾಗು 7 ಸೀತೆಗೋಸ್ಕರವಾಗಿ ಸೇತುವೆ ಕಟ್ಟಿಸಿದೆ ಪಾತಕಿ ರಾವಣನ ಮಡುಹಿದೆ ಪಾತಕಿ ರಾವಣನ ಮಡುಹಿದೆ ಹಯವದನ ಖ್ಯಾತ ರಘುನಾಥ ದಯವಾಗು 8 ಕೃಷ್ಣಾವತಾರದಲಿ ದುಷ್ಟಕಂಸನ ಕೊಂದೆ ಹೆತ್ತವಳ ಬಂಧನ ಬಿಡಿಸಿದೆ ಹೆತ್ತವಳ ಬಂಧನ ಬಿಡಿಸಿದೆ ಹಯವದನ ಕೃಷ್ಣಾವತಾರ ದಯವಾಗು 9 ಉತ್ತಮ ಸತಿಯರ ಹೆಚ್ಚಿನ ವ್ರತ ಸವರಿ ಮತ್ತೆ ಹಯವೇರಿ ಮೆರೆದೆಯೊ ಮತ್ತೆ ಹಯವೇರಿ ಮೆರೆದೆಯೊ ಹಯ[ವದನ ಉತ್ತಮ ಬೌದ್ಧ ಕಲ್ಕಿ ದಯವಾಗು] 10 ಅಂಗಜನಯ್ಯನೆ ಮಂಗಳಮಹಿಮನೆ ಗಂಗೆಯ ಪೆತ್ತ ಗರುವನೆ ಗಂಗೆಯ ಪೆತ್ತ ಗರುವನೆ ಹಯವದನ ಮಂಗಳ ಮಹಿಮ ದಯವಾಗು 11 ವಾದಿರಾಜರಿಗೊಲಿದೆ ಸ್ವಾದೆಪುರದಲಿ ನಿಂತೆ ವೇದಾಂತ ಕಥೆಯ ಹರಹಿದೆ ವೇದಾಂತ ಕಥೆಯ ಹರಹಿದೆ ಹಯವದನ ವೇದಮೂರುತಿಯೆ ದಯವಾಗು 12
--------------
ವಾದಿರಾಜ
ನಾರಾಯಣ ಪರಿಪಾಹಿ-ನರಹರಿಯೆ ಪ ನಿನ್ನೊಳು ನಿರುತನಾನಪರಾಧಿ ನಾರಾಯಣ ಅ.ಪ ಹೇಸಿಕೆಯಿಂದ ಮನಕಾಸುವೀಸಕೆ ಸೋತು ಮೋಸಹೋದೆ ನಿನ್ನ ನೆನೆಯದೆ ಕೇಶವ 1 ನಿರುತ ನಿನ್ನಯ ನಾಮಸ್ಮರಣೆಯ ಬಿಟ್ಟು ಘೋರನರಕಕ್ಕೆ ಗುರಿಯಾದೆ ಪೊರೆಯೊ ನಾರಾಯಣ2 ಮುದದಿಂದ ನಾ ಹದಿಬದೆಯರ ಮುಖನೋಡಿ ಮದದಿಂದ ನಿನ್ನನು ಮರೆದೆನೊ ಮಾಧವಾ3 ಸವನತ್ರಯದಿ ಅವ್ಯವಹಿತ ಕಾರ್ಯವ ಲವಲೇಶ ಬಿಡದೆ ನಾನೆಸಗಿದೆನೋ ಗೋವಿಂದ 4 ಕ್ಷಣ ಬಿಡದಲೆ ದುಷ್ಕರ್ಮದಿಂದಲಿ ದಣಿದು ತೃಣಕೆಣೆಯಾಗಿ ನಿರ್ವಿಣ್ಣನಾದೆ ಹೇವಿಷ್ಣು 5 ಹೃದಯದೊಳಿಲ್ಲದ ಮಧುರ ನುಡಿಗಳ ಮುದದಿ ನುಡಿದೆನೋ ಮಧುಸೂದನನೇ 6 ಅವನಿಯೊಳಗೆ ಎನಗೆಣೆಯಿಲ್ಲವೆನುತ ಅವಗುಣಪ್ರತಿಮೆ ನಾನಾದೆ ತ್ರಿವಿಕ್ರಮ 7 ಅನುದಿನ ನಿಂದಿಸಿ ಯಮನ ಮಂದಿರದಿ ನಾ ನಿಂದೆನೊ ವಾಮನ8 ಬುಧನೆಂದು ಮೆರೆದು ನಾ ಆಧಮರಸೇವಿಸಿ ಅಂಧತಮಕೆ ಗುರಿಯಾದೆನೋ ಶ್ರೀಧರ 9 ವಿಷಯವೆ ಜೀವನದ ಕೃಷಿಯಾಯಿತೆನಗೆ ತೃಷೆಯ ಮೀರದೆ ನಿನ್ನ ಮರೆದೆನೊ ಹೃಷಿಕೇಶನೆ 10 ಉದುಭವಿಸಿದೆ ಈ ವಸುಧೆ ಭಾರಕ್ಕಾಗಿ ಬಾಧಕನಾದೆನೊ ಪದುಮನಾಭನೆ 11 ತಾಮಸಕೃತ್ಯದಿಂದುದರ ಪೋಷಣೆಗಾಗಿ ಪ್ರೇಮದಿ ತಿರುಗಿದೆ ದಾಮೋದರ ದೇವ 12 ಶಂಕೆಯಿಲ್ಲದ ದುರುಳಕಿಂಕರಸೇವೆಯಿಂದ ಸಂಕಟಪಟ್ಟೆನೊ ಸಂಕುರುಷಣ ದೇವ 13 ಕಾಸಿನಾಶೆಗೆ ನಾ ಹೇಸಿಕಿಲ್ಲದೆ ಮನ ಹೇಸದೆ ಯಾಚಿಸಿದೆ ವಾಸುದೇವನೇ 14 ಸದ್ಯಫಲವೆ ಮುಖ್ಯವು ಉದ್ಯೋಗವೆಂದು ಉಬ್ಬಿ ಒದ್ಯಾಡುತಿಹೆ ಪ್ರದ್ಯುಮ್ನದೇವನೆ15 ಸತಿ ಅನುಗಾಲ ಬಂಧು ಎಂದು ಅನವರತ ನಂಬಿದೆನು ಅನಿರುದ್ಧದೇವನೆ 16 ಪರಿಪರಿ ಕ್ರೀಡೆಯಿಂ ಪರಪೀಡಕನಾಗಿ ಪರರನು ಸ್ತುತಿಸಿ ಬೆಳೆದೆ ಪುರುಷೋತ್ತಮ17 ಸಾಧು ಸಜ್ಜನರೊಳು ಭೇದ ವಂಚನೆ ಮಾಡಿ ಅಧೋಕ್ಷಜ ಮೂರ್ತೇ 18 ಬಾರಿಬಾರಿಗೆ ಪರಾನ್ನವನುಂಡು ಘೊರ ದುರಿತಕ್ಕೆ ಗುರಿಯಾದೆ ಶ್ರೀ ನರಸಿಂಹನೇ19 ಕೆಚ್ಚೆದೆಯಿಂದ ನಾನು ಸ್ವೇಚ್ಛೆಯಿಂದಲಿ ಚರಿಸಿ ಹುಚ್ಚು ಹಿಡಿದಂತಾದೆ ಅಚ್ಯುತಮೂರ್ತೇ20 ಮಾನಿಗಳಿಗೆ ಅವಮಾನ ಮಾಡಿ ನಾ ಜ್ಞಾನಿ ಎಂದೆನಿಸಿದೇ ಜನಾರ್ದನನೇ ಕಾಯೊ 21 ಕೋಪತಾಪಗಳಿಂ ಪಾಪಕೃತ್ಯವೆಸಗಿ ತಾಪ ಪಡುತಲಿಪ್ಪೆನಯ್ಯ ಉಪೇಂದ್ರನೆ 22 ಕರಚರಣಗಳಿಂದ ಕಳ್ಳನಾಗಿಹೆನು ತೊರೆದೆನೊ ಹರಿಗುರು ಯಾತ್ರೆಯ ಶ್ರೀಹರೇ 23 ಶಿಷ್ಟರನ್ನೆಲ್ಲ ನಿಕೃಷ್ಟತನದಿ ನೋಡಿ ಭ್ರಷ್ಟನಾಗೀಜಗದಿ ಮೆರೆದೆ ಶ್ರೀಕೃಷ್ಣನೇ 24 ಸಂಕಟಪಡುತಿಹ ಕಿಂಕರನೊಳಿಹ ಮಂಕು ಹರಿಸಿ ಕಾಯೋ ಶ್ರೀ ವೇಂಕಟೇಶನೇ25
--------------
ಉರಗಾದ್ರಿವಾಸವಿಠಲದಾಸರು
ನಾರಾಯಣ ರಕ್ಷಿಸೊ ನಮ್ಮನು ಲಕ್ಷ್ಮೀನಾರಾಯಣ ರಕ್ಷಿಸೋ ಪ ಭವ ದೂರ ನಿತ್ಯೋದಾರ ಕರುಣದಿ ಅ.ಪ. ಶ್ರೀಶ ನಿನ್ನರ್ಚಿಸದೆ ಶ್ರೇಯಸ್ಸುಖದಾಶಯನೇ ತೊರೆದೆ ಕಳತ್ರ ನಿವೇಶ ತನುಜ ಮಾಯಾ ನಿಖಿಲಸುರೇಶ ಕಮಲ ಭವ ಭಯ ಪಾಶ ಹರಪರಮೇಶ ವಂದಿತ||ನಾರಾಯಣ|| 1 ದೇಹಾಭಿಮಾನದಲ್ಲಿ ತೀವಿದಭೂತ ದ್ರೊಹವನಾಚರಿಸುತಲಿ ಸಿಲುಕಿ ದಾಸೋಹಮೆನ್ನದೆ ದೈವ ವಿದೇಹ ಜಾವರಿಗೂಹನೋಚಿತದೇಹ ವಿಜಿತವಿದೇಹ ಖಗವರವಾಹ ಶುಭಪರಿವಾಹ ನಿಖಿಲ ನಿರೀಹ ಲೋಕವಿ ಮೋಹನಾಚ್ಯುತ ||ನಾರಾಯಣ|| 2 ಧರ್ಮಾಚರಣೆಯನೆರೆತೊರೆದು ದುರುಳರ ಸಂಗದಿ ಜರಿದು ಸಜ್ಜನರನು ಜರಿದು ದುರ್ಗತಿಗೆ ನಾ ಗುರಿಯಾದೆನು ಹರಿ ಪರಮ ಪುರುಷ ಪರಮ ಪಾವನ ಭವ ಸಂಹರಣ ವಿಶ್ವಂಭರಣ ಪುಲಿಗಿರಿ ವರದ ವಿಠಲ ||ನಾರಾಯಣ|| 3
--------------
ಸರಗೂರು ವೆಂಕಟವರದಾರ್ಯರು
ನಿತ್ಯ ಶುಭಮಂಗಲಂ ಪ ವಾತಜಾತನು ಆಗಿ ಖ್ಯಾತಿಯಲಿ ಮೆರೆದಗೆಸೇತುವೆಯ ಭರದಿಂದ ಲಂಘಿಸಿದಗೆಸೀತೆಯನು ವಂದಿಸುತೆ ಉಂಗುರವನಿತ್ತವಗೆದೈತ್ಯಪುರವನು ಭರದಲುರಿಸಿದವಗೆ 1 ವಸುಧೆಯಲಿ ಕುಂತಿನಂದನನಾಗಿ ಉದಿಸಿದಗೆಕುಸುಮವನು ತಂದು ದ್ರೌಪದಿಗಿತ್ತಗೆಕುಶಲತನದಲಿ ಕೌರವಾದಿಗಳ ಸಂಹರಿಸಿ-ದಸಹಾಯ ವೀರ ಶ್ರೀ ಭೀಮಸೇನಗೆ 2 ಮಧ್ಯಗೃಹದಾತನಾ ಸತಿಯಲ್ಲಿ ಉದಿಸಿದಗೆಬೌದ್ಧ ಚಾರ್ವಾಕ ಮಾಯ್ಗಳ ಜರಿದಗೆಮಧ್ವಶಾಸ್ತ್ರವನೆಲ್ಲ ಸಜ್ಜನರಿಗೊರೆದಗೆಮುದ್ದು ಶ್ರೀಆದಿಕೇಶವನ ಭಜಕಗೆ 3
--------------
ಕನಕದಾಸ
ನಿತ್ಯ ಸೋಧಿಸಿ ಭಕ್ತಿ ರಸÀ ಸ್ವಾದ ಮಾಡುವ ಸಾಧುಗಳೊಳಗಿಡೊ ಶ್ರೀಶಾ ರಮೇಶ ಪ ಬೋಧಿಸಿ ತತ್ತ್ವರಸ ಸ್ವಾದ ನೀಡುವ ಮಾಧವ ಶ್ರೀಶನೆ ಮೋದ ಬೀರುತ ನಿನ್ನ ಪಾದವ ತೋರುವ ಸಾಧುಗಳೊಳಗಿಡೊ ಅಗಾಧ ಮಹಿಮನೆ ಅ.ಪ ಭವÀಸಂಸಾರದೊಳಿರಲು ಸಜ್ಜನರು ಅರುಣೋದಯದೊಳೆದ್ದು ನಿನ್ನ ಚರಣಪಲ್ಲವವನ್ನು ಕೃಷ್ಣಾ ಸ್ಮರಿಸುತಲಿರುವರೊ ಪರಮಪುರುಷಕೇಳೊ ಅಂಥಾ ವರ ಭಾಗವತರನು ಕರುಣದಿ ತೋರೋ ಶ್ರೀಶಾ ವರ ನೂಪುರಗೆಜ್ಜೆ ಧರಿಸಿ ಮೆರೆವ ದೇವಾ ವರ ಭಕ್ತರು ಕರೆ ಕರೆದಲ್ಲಿಗೆ ಬಹ ಶರಧಿ ಶಯನ ನಿನ್ನ ಬಿರುದಲ್ಲವೆ ಕೃಷ್ಣಾ ತ್ಪರಿತದಿ ನಿನ್ನಡಿ ಸ್ಮರಿಸುವರನೆ ತೋರೊ 1 ಅಗರು ಚಂದನ ಗಂಧ ಸೊಗವಿಲಿ ಧರಿಸುತ ಮಿಗೆ ಪೀತಾಂಬರದುಡಿಗೆಯನುಟ್ಟು ಕೃಷ್ಣಾ ಸಿರಿ ಸಹಿತಿರೆ ಸೊಗವಿಲಿ ಕರಿರಾಜನ ಸ್ವರ ಆಲಿಸಿ ಅಗಹರ ಸಿರಿಗ್ಹೇಳದೆ ಬಂದೆ ಶ್ರೀಧರ ಝಗಝಗಿಸುತ ನಿನ್ನ ಪದರುಹಗಳನಿಟ್ಟು ಮಿಗೆ ವೇಗದಿ ಬಂದು ಕರಿಯನುದ್ಧರಿಸಿದೆ ಈಗ ಬೇಗ ನಿನ್ನ ಭಕ್ತರ ಸೊಗವಿಲಿ ತೋರೋ ಕೃಷ್ಣಾ 2 ಯತಿ ಮುನಿ ಹೃದಯಾನಂದ ಶ್ರೀಕೃಷ್ಣ ಸತತದಿ ನಿನ್ನ ನಾಮ ಜತನ ಮಾಡುತ ತಮ್ಮ ಮತಿಭ್ರಮಣೆಯಲು ನಿನ್ನಾಕೃತಿ ನೋಡುತ ಸ್ತುತಿಪ ಯತಿಕುಲ ತಿಲಕಾಗ್ರಣಿ ಶ್ರೀ ಶ್ರೀನಿವಾಸ ಎನ್ನ ಮತಿಭ್ರಮಣೆಯನು ನೀಗಿಸುವಂಥಾ ಸುಜನರ ಸತತದಿ ತೋರಿಸೋ ಕ್ಷಿತಿಯೊಳು ವೆಂಕಟ ಪತಿತ ಪಾಮರರನು ಗತಿಕಾಣಿಸೆ ಕೃಷ್ಣಾ3
--------------
ಸರಸ್ವತಿ ಬಾಯಿ
ನಿತ್ಯ ಪರಿಪೂರ್ಣ ಕಾಮ ಪಟ್ಟಾಭಿರಾಮ ತನ್ನ ಸ್ಮರಿಸುವ ಜನಕೀವನು ಕ್ಷೇಮ ಪ ಭಾಸ್ಕರವಂಶ ಭೂಷಣ ತರಣಿಜಮಿತ್ರ ಭವ್ಯ ಚರಿತ್ರ | ದಾಶರಥಿ ಕರುಣಾಳು ಸರೋಜನೇತ್ರ ಅ.ಪ ಜಡಮತಿಯಾದರೂ ಇವನ | ಮರೆಯಾ ಇನ್ನು ಧೃಢಮತಿಗೆ ತನ್ನನೇ ಕೊಡುವೆನೈಯ್ಯಾ 1 ತಮ್ಮೋಳು ತಾವು ತಿಳಿದು | ಭಜಿಸುವರು ಇನ್ನು ಹೆಮ್ಮೆಯ ಮಾತುಗಳು ಬಿಡಿರಿ ಜನರು 2 ರಾಮನು ನರನೆಂಬ ಪಾಮರನ ಬಾಯಲಿ ಮಣ್ಣು ಸೋಮಶೇಖರ ತನ್ನ ಸತಿಗೆ | ಪೇಳಿದ ಇವನ ನಾಮದ ಮಹಿಮೆ ಕುಣಿಕುಣಿದು 3 ನಿರುತಾ ಪೊಗಳುವವಿವನ ವೇದ | ಇವನಾ ಚರಣೆ ಸಜ್ಜನರಿಗೆ ಬಲುಸ್ವಾದ 4 ಸೇತುವೆ ಕಟ್ಟುವುದುಂಟೆ ಕೋತಿದಂಡುಗಳೆಲ್ಲಾ ವ್ರಾತ ರಹಸ್ಯವೇತಕೆ ಚಿಂತೆ 5 ಹೊರಗಿನ ಕಣ್ಣಿಂದ ಅರಿಯಲು ಸಾಧ್ಯವಲ್ಲಾ ನೆರೆ ಒಳಗಣ್ಣಲಿ ನೋಡಬೇಕು | ಸ ದ್ಗುರು ಕಟಾಕ್ಷವಾದವಗೆ ಜೋಕು 6 ಪ್ರತ್ಯಕ್ಷವಾದಿಗಳಿಗೆ ಮೃತ್ಯುವಿನ ಬಾಯೊಳು ಸತ್ತು ಹುಟ್ಟುವುದು ತಪ್ಪುವುದಿಲ್ಲಾ | ಆ ಪತ್ತು ಇದೇ ದುರ್ಜನಿರಿಗೆಲ್ಲಾ 7 ಮಗನು ಬ್ರಹ್ಮನು ಮೊಮ್ಮಗನು ರುದ್ರನು ಮೂ ಜಗವನಾಳುವ ನಾರಾಯಣನಿವನು | ತಾನು ಮಗುವಾಗಿ ದಶರಥಗುದಿಸಿದನು 8 ಮುನಿ ಯಾಗವ ಪಾಲಿಸಿ ವನಿತೆಯ ಶಾಪ ಬಿಡಿಸಿ ತನ್ನೊಳಗಿಟ್ಟು ತಾ ಹುಡುಕಿದನು 9 ನರನಾಗಿ ದೈತ್ಯರ ಮುರಿದು ದೇವತೆಗಳಿಗೆ ಗರಸನಾಗಿ ಸಾಕೇತಪುರದಿ ಪೊಳೆದ 10 ನರನು ಪಾಮರನು ಹ್ಯಾಗೆ ತಿಳಿಯುವನು | ಸಂಸೃತಿ ಶರಧಿಯೊಳು ಬಿದ್ದು ಬಳಲುವನು11
--------------
ಗುರುರಾಮವಿಠಲ
ನಿತ್ಯ ಶುಭ ಮಂಗಲಂ ಮಂಗಲಂ ಮಾರುತಿಯ ಪೆಗಲೇರಿ ಬರುವನಿಗೆ ಪ. ಮಂಗಲಂ ಮಾರೀಚ ವೈರಿಹರಿಗೆ ಮಂಗಲಂ ಸೀರಜಾ ಮುಖಪದ್ಮ ಭೃಂಗನಿಗೆ ಮಂಗಲಂ ವೀರ ರಾಘವ ದೇವಗೆ ಅ.ಪ. ರಾವಣಾದಿಗಳಿಂದ ಲಾಹವದಿ ಬಹು ನೊಂದ ದೇವತೆಗಳನು ಬೇಗ ಕಾವೆನೆಂದು ತಾ ಒಲಿದು ಕೌಸಲ್ಯದೇವಿ ಗರ್ಭದಿ ಬಂದು ಸಾವಧಾನದಿ ಸಕಲ ಸಜ್ಜನರ ಸಲಹಿದಗೆ 1 ಮಂದಮತಿಗಳೊಳಧಿಕ ತುಂಡಿಲನು ಮಾತ್ಸರ್ಯ ದಿಂದ ಮಾಡಿರುವ ಪ್ರತಿ ಬಂಧಕವನು ಇಂದಿಲ್ಲಿ ಬರಲು ಸಮಂಧಗೈಸದೆ ದಾಸ ನೆಂದೆನ್ನ ಮೇಲೆ ದಯದಿಂದಲೊಲಿದವಗೆ 2 ಇಂಗಿತಾಭೀಷ್ಟದ ಕುರಂಗ ಮರ್ದನ ರಾಮ ಶೃಂಗರಿಸಿ ಸರ್ವಪರಿವಾರ ಸಹಿತಾ ಮಂಗಲಾರತಿ ಕೊಂಡು ಮಂಗಳವ ಬೆಳೆಸುವ ಭು ಜಂಗ ರಾಜೇಂದ್ರ ಗಿರಿಶೃಂಗನಾಥನಿಗೆ 3
--------------
ತುಪಾಕಿ ವೆಂಕಟರಮಣಾಚಾರ್ಯ
ನಿತ್ಯ ಶುಭಮಂಗಳಂ ಪ ವೇದಾಂತ ವೇದ್ಯನಿಗೆ ಆದಿನಾರಾಯಣಗೆ ಸಾದು ಸಜ್ಜನರ ಸಂರಕ್ಷಣಗೆ ಯಾದವಾಧಿಪ ಕೃಷ್ಣ ದನುಜರೆದೆ ದಲ್ಲಣಗೆ ಮಾಧವ ಮುಕುಂದ ಮುರಮರ್ಧನನಿಗೆ ನಿತ್ಯ ಶುಭಮಂಗಳಂ 1 ಶ್ರೀ ವತ್ಸಲಾಂಛನಗೆ ಶ್ರೀ ಕೇಶವಾಚ್ಯುತಗೆ ಭವ ಭಂಜನನಿಗೆ ಗೋವರ್ಧನವ ನೆತ್ತಿ ಗೋವುಗಳ ಕಾಯ್ದವಗೆ ಮಾವ ಕಂಸನ ಕೊಂದ ಗೋವಿಂದಗೆ 2 ನೀಲ ಮೇಘಾಂಗನಿಗೆ ನಿಜಶರಣ ಸಂಗನಿಗೆ ಕಾಲ ಭಯ ಶಿಕ್ಷನಿಗೆ ಕಮಲಾಕ್ಷಗೆ ಬಾಲಾರ್ಕ ಚಂದ್ರ ರವಿಕೋಟಿ ತೇಜನಿಗೆ ಮೂಲೋಕ ದೊಡೆಯನಿಗೆ ಮುರವೈರಿಗೆ 3 ಕಾಮಪಿತ ಕೃಷ್ಣನಿಗೆ ಕಡುಚೆಲ್ವಮಾಧವಗೆ ಸಾಮಗಾನ ವಿಲೋಲ ಸರ್ವೇಶಗೆ ವಾಮ ದೇವನ ಮಿತ್ರ ವಸುದೇವ ಪುತ್ರನಿಗೆ ಶ್ರೀ ಮಹಾಗೋವಿಂದ ಗೋಪಾಲಗೆ 4 ದುರಿತ ಸಂಹಾರಗೆ ಪರಮ ಪಾವನನಿಗೆ ಪಾಪವಿನಾಶಗೆ ಘೋರ ದುರಿತಾರಣ್ಯ ದಹನ ದೈತ್ಯಾಂತಕಗೆ ಪಾರ ಮಹಿಮಾನಂದ ಸುರವಂದ್ಯಗೆ 5 ನಾಗೇಂದ್ರ ಶಯನನಿಗೆ ನಿಗಮಾಗಮ ಸ್ತುತಗೆ ನಾಗಭೂಷಣ ನಮಿತಗೆ ಭಾಗೀರಥೀಪಿತಗೆ ಭಾಗವತ ಹಿತಕರಗೆ ಭಾಮೆಯರರಸ ಶ್ರೀ ಗೋಪಾಲಕೃಷ್ಣಗೆ 6 ವರಮತ್ಸ್ಯರೂಪನಿಗೆ ಕೂರ್ಮಾವತಾರನಿಗೆ ವರಹದಾಕೃತಿಯವಗೆ ನರಸಿಂಹಗೆ ವರದ ವಾಮನನಿಗೆ ವರ ಪರಶುರಾಮನಿಗೆ ಬುದ್ಧ ಶ್ರೀ ಕಲ್ಕಿಗೆ 7 ಇಂದಿರಾರಮಣಗೆ ಚಂದ್ರಶೇಖರ ಪ್ರಿಯಗೆ ನಂದಗೋಕುಲದರಸ ಗೋಪಾಲ ಕೃಷ್ಣಗೆ ಮಂದಮಾರುತ ತನಯ ಕೋಣೆ ನಿಜವಾಸಗೆ ಆ ನಂದ ಮೂರುತಿ ಶ್ರೀ ಲಕ್ಷ್ಮೀನಾರಾಯಣಗೆ 8
--------------
ಕವಿ ಪರಮದೇವದಾಸರು
ನಿನ್ನನಗಲಿ ಪೋಗಲಾರೆವೋ ನೀರಜಾಕ್ಷ ನಿನ್ನ ಸೇರಿ ಸುಖಿಸ ಬಂದೆವೊ ಪ ಮನ್ನಿಸದೆ ಮಮತೆಯಿಂದ ಭಿನ್ನ ನುಡಿಗಳಾಡಿ ನಮಗೆ ಹಣ್ಣು ತೋರಿ ಕಾಳಕೂಟವನ್ನು ಕೊಡುವರೇನೊ ಕೃಷ್ಣ ಅ ಐದುವದಕೆ ಶಕ್ಯವಲ್ಲದ ಅಪ್ರಮೇಯ ಆದಿಪುರುಷ ಅಮರಸನ್ನುತ ಶ್ರೀದ ನಮ್ಮ ಕೈಯ ಬಿಡದೆ ಆದರಿಸಬೇಕು ಪರವ- ರಾದರೇನು ನಿನ್ನ ಶರಣರಾದ ಮೇಲೆ ಬಿಡುವುದುಂಟೆ1 ಬಂಧುವರ್ಗವನ್ನು ಬಿಡುವುದು ಸ್ತ್ರೀಯರಿಗೆ ನಿಂದ್ಯವೆಂದು ಶಾಸ್ತ್ರ ಪೇಳ್ವುದು ಎಂದೆಗೆಂದಿಗೆಮಗೆ ನೀನೆ ಬಂಧುವೆಂದು ಬಂದಿಹೆವೊ ಇಂದು ಹೋಗಿರೆಂಬೆ ನೀನು2 ಶಮದಮಾದಿ ಗುಣಗಳಿಂದಲಿ ಸಜ್ಜನರು ಮೂರ್ತಿ ಮನದಲಿ ಮಮತೆಯಿಂದ ಪೂಜಿಸುತ್ತ ಗಮಿಸುವರೊ ನಿನ್ನ ಪುರಕೆ ನಮಗೆ ಮಾತ್ರ ಪತಿಸುತಾದ್ಯರಮಿತ ಸುಖವ ಕೊಡುವರೇನೊ 3 ಮೋಕ್ಷ ಇಚ್ಛೆಯಿಂದ ನಿನ್ನನು ಭಜಿಪ ಜನರಾ ಪಕ್ಷ ವಹಿಸಿದಂತೆ ನಮ್ಮನು ರಕ್ಷಿಸದೆ ಬಿಡುವರೇ ಕಟಾಕ್ಷದಿಂದ ಈಕ್ಷಿಸದೆ ಲಕ್ಷ್ಮೀದೇವಿ ನಿಮಗೆ ಬಹಳಾಪೇಕ್ಷೆಯಿಂದ ಮೋಹಿಸಿದಳೆ 4 ಅನಘ ನಿನ್ನ ನೋಡಿ ಮೋಹಿಸಿ ಅಂತರಾತ್ಮ ತನುವು ಮನವು ನಿನಗೆ ಅರ್ಪಿಸಿ ಜನನ ಮರಣದಿಂದ ಜನರು ದಣಿವರೇನೂ ಕಾಂತ ನಮ್ಮ ಮನಸಿನಂತೆ ಒಲಿದು ಸಲಹೊ ವನಜನಾಭ ವಿಜಯವಿಠ್ಠಲ 5
--------------
ವಿಜಯದಾಸ
ನಿನ್ನನೆ ನಂಬಿದೆ ಅನ್ಯರೊಬ್ಬರ ಕಾಣೆ | ಮಧ್ವರಾಯಾ ಪ ನಿಮ್ಮ ಸಿದ್ಧಾಂತದಿ ಮನವ ನಿಲ್ಲಿಸಯ್ಯ | ಮಧ್ವರಾಯಾ ಅಪ ಪತಿತ ಸಂಕರ ಪುಟ್ಟಿ ಮತವೆಲ್ಲ ಕೆಡಿಸಲು || ಮಧ್ವರಾಯಾ || ಗತಿಯ ಕಲ್ಪಿಸಿ ಸಜ್ಜನರ ತತಿಗಳ ಕಾಯಿ || ಮಧ್ವರಾಯಾ 1 ತಂದೆ ತಾಯಿ ಬಂಧು ಬಳಗವೆಲ್ಲವು ನೀನೆ | ಮಧ್ವರಾಯಾ | ಎಂದೆಂದಿಗು ನಿಮ್ಮ ಪೋದಿರುವಂತೆ ಮಾಡೈ | ಮಧ್ವರಾಯಾ 2 ಬಾಲಕೃಷ್ಣನ ಸೇವೆ ಮೇಲಾಗಿ ಮಾಡುವ | ಮಧ್ವರಾಯಾ | ಮೂಲ ಮೂವತ್ತೇಳು ಮೇಲು ಗ್ರಂಥಗಳಿತ್ತೆ | ಮಧ್ವರಾಯಾ 3 ಶ್ರೀನಿಧಿ ಕೃಷ್ಣನೆ ಜಗಕೆಲ್ಲ ದೊರೆಯೆಂಬ | ಮಧ್ವರಾಯಾ | ಹೆಸರು ಪೊತ್ತೆ | ಮಧ್ವರಾಯಾ 4 ಅಜಪದಕೆ ಬಂದು ಅಖಿಲರ ಪಾಲಿಪ | ಮಧ್ವರಾಯಾ |ವಿಜಯಸಾರಥಿ ಕೃಷ್ಣ ವಿಜಯವಿಠ್ಠಲಪ್ರಿಯ | ಮಧ್ವರಾಯಾ 5
--------------
ವಿಜಯದಾಸ