ಒಟ್ಟು 143 ಕಡೆಗಳಲ್ಲಿ , 48 ದಾಸರು , 135 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಪಾಲಿಸೈ ವಿಶಾಲಗುಣಭರಿತ ನಿನ್ನಯ ಚರಿತಕಾಲಭೈರವ ನುತಿಪೆ ನಾ ಸತತಕಾಲಕಲ್ಪಿತ ಲೀಲೆಯರಿತು ಸು-ಶೀಲತನವನು ಮೆರೆಯಲೋಸುಗಸ್ಥೂಲಸೂಕ್ಷ್ಮಾಕೃತಿಯ ಧರಿಸಿದಮೂಲಿಕಾ ಶ್ರೀನಿವಾಸ ಭೈರವ 1ಪರಮಪಾವನ ಕ್ಷೇತ್ರದಲ್ಲಿರುತ ಐತಂದು ಮತ್ತಾ-ವೀರ ಶ್ರೀರಾಮನ ಸೇತು ನೋಡುತ್ತಧರೆಯ ಸಂಚರಿಸುತ್ತ ಬರುತಿರೆಮಿರುಪ ಶೇಷಾಚಲ ನಿರೀಕ್ಷಿಸಿಭರದಿ ಗಿರಿಮೇಲಡರಿ ಶ್ರೀಶನಚರಣಕಾನತನಾಗಿ ಸ್ತುತಿಸಿದೆ 2ಸುರವರೇಶನು ನಿನಗೆ ಪ್ರೀತಿಯಲಿ ಮಂತ್ರತ್ವದಲ್ಲಿಇರಿಸಿ ಮೆರೆಸಿದೆ ಕೀರ್ತಿಕರವಲ್ಲಿತ್ವರಿತದಿಂ ನೀನೆಲ್ಲ ದೇಶದಪರಿಪರಿಯ ಕಾಣಿಕೆಯ ತರಿಸುತಹರಿಯ ದರುಶನಗೈವ ಮೊದಲೆಹರುಷದಿಂದಲಿ ಪೂಜೆಗೊಂಬುವೆ 3ಶರಣರನು ನೀ ಕಾಯ್ವೆ ಮಮತೆಯಲಿ ಅಲ್ಲಲ್ಲಿರುತಲಿಧರಿಸಿ ಮೃದುತರವಾದ ವಾಕ್ಯದಲಿಕರೆಸಿ ಒಬ್ಬೊಬ್ಬರ ವಿಚಾರಿಸಿಸರಸದಿಂದಲಿ ಪೊಗಳಿಕೊಳ್ಳುತನರರ್ಗೆ ಸೋಂಕಿದೆ ಭೂತಪ್ರೇತದಭಯಗಳನು ಪರಿಹರಿಸಿ ಪಾಲಿಪೆ 4ಭೂತಳದೊಳಧಿಕವಾಗಿರ್ಪ ಕಾರ್ಕಳಕಧಿಪಖ್ಯಾತ ವೆಂಕಟಪತಿಗೆ ಸಖಿಯಷ್ಪಖ್ಯಾತಿಯಿಂ ದೊರೆಯಿದಿರಿನಲಿ ಸಂ-ನಿಧಿಸನ್ನುತನಾಗಿ ಮೆರೆದಿಹೆಓತು ಕರುಣದೊಳೊಲಿದು ಪಾಲಿಪದಾತಲಕ್ಷ್ಮೀನಾರಾಯಣಾಪ್ತನೆ5
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ಪೊಗಳಲೆನ್ನಳವೆ ನಿನ್ನ ಗುರುಗಳ ರನ್ನಪೊಗಳಲೆನ್ನಳವೆ ನಿನ್ನಗಣಿತಮಹಿಮೆಯವಸುಧೆಯ ಮೇಲೇಸೊ ಅಸುರರು ಪುಟ್ಟಿ ತ್ರಿ-ಕಂಜಮಿತ್ರನ ಸುತನೊಡನೆ ಸಖ್ಯವ ಮಾಡಿವಾನರನಿಕರವ ನೆರಹಿ ಸೇತುವೆಕಟ್ಟಿಕೃಷ್ಣನ ಸೇವೆಗೋಸುಗವೆ ಕುಂತಿಜನಾಗಿವೀರರಾಯರನೆಲ್ಲ ಸೆರೆಯನಾಳುವಂಥನಡುರಣದಲಿ ಬಂದು ಘುಡುಘುಡಿಸುತನಿಂದುಮಾಯಿಗಳುಹೆಚ್ಚಿ ಮಹಿಯೆಲ್ಲ ವ್ಯಾಪಿಸೆದಶಉಪನಿಷತ್ತುಗಳಿಗೆ ಟೀಕವಮಾಡಿವಾಲುಕ ಮುಷ್ಟಿ ಅಷ್ಟವು ದಿಗ್ವಿಜಯ ರಾಮ-ಮೂರ್ಹತ್ತು ಎರಡು ಲಕ್ಷಣವುಳ್ಳ ಕಾಯನೆಆನಂದತೀರ್ಥ ನಿಜಾನಂದಚರಿತ ಪಂ-
--------------
ಗೋಪಾಲದಾಸರು
ಪ್ರಾಚೀನ ಕರ್ಮವು ಬಿಡಲರಿಯದುಯೋಚನೆಯ ಮಾಡಿ ನೀ ಬಳಲಬೇಡ ಪ.ಮುನ್ನಮಾಡಿದಕರ್ಮ ಬೆನ್ನಟ್ಟಿ ಬರುತಿರಲುತನ್ನಿಂದ ತಾನೆ ತಿಳಿಯಲರಿಯದೆಇನ್ನು ದೇಹವನು ಆಶ್ರಯಿಸಿ ಫಲವೇನುಉನ್ನತ ಹರುಷದಲಿ ಮನದಿ ಯೋಚಿಸುವ 1ಲೋಕಾದಿ ಲೋಕಗಳ ತಿರುಗುವರವಿ ರಥಕೆಏಕಗಾಲಿಗೆ ಏಳು ಕುದುರೆಕಟ್ಟಿಆಕಾಶ ಮಾರ್ಗದಲಿ ತಿರುಗುವ ಅರುಣನಿಗೆಬೇಕಾದ ಚರಣಗಳ ಕೊಡಲಿಲ್ಲ ಹರಿಯು 2ಸೇತುವೆಯುಕಟ್ಟಿ ಲಂಕೆಗೆ ಹಾರಿ ಹನುಮಂತಖ್ಯಾತಿಯನೆ ಮಾಡಿ ರಾವಣನ ಗೆದ್ದುಸೀತೆಯನು ತಂದು ಶ್ರೀರಾಮನಿಗೆ ಕೊಡಲಾಗಿಪ್ರೀತಿಯಿಂ ಕೌಪೀನವ ಬಿಡಸಲಿಲ್ಲ ಹರಿಯು 3ನಿತ್ಯದಲಿ ಗರುಡ ಸೇವೆಯ ಮಾಡಿ ವಿಷ್ಣುವನುಹೊತ್ತುಕೊಂಡು ಇದ್ದ ಜಗವರಿಯಲುಅತ್ಯಂತ ಸೇವಕನೆಂದು ಮೂಗಿನಡೊಂಕುಎತ್ತಿ ನೆಟ್ಟಗೆ ಮಾಡಲಿಲ್ಲ ಶ್ರೀ ಕೃಷ್ಣ 4ಇಂತೆಂದು ಈಪರಿ ತಮ್ಮೊಳಗೆ ತಾವು ತಿಳಿದುಭ್ರಾಂತನಾಗದೆ ಬಯಕೆಗಳನುಜರಿದುಶಾಂತ ಮೂರುತಿಸಿರಿ ಪುರಂದರವಿಠಲನ
--------------
ಪುರಂದರದಾಸರು
ಮಂಗಳಂಜಯಮಂಗಳಂ ಪ.ವಾತಸುತ ಹನುಮನ ಒಡೆಯಗೆ ಮಂಗಳದಾತ ಶ್ರೀ ರಘುಪತಿಗೆ ಮಂಗಳ ||ಸೇತುವೆಗಟ್ಟಿದ ರಾಯಗೆ ಮಂಗಳಸೀತಾರಮಣಗೆಶುಭಮಂಗಳ1ಬಿಲ್ಲ ಹಿಡಿದು ಬಲು ಬಿಂಕದ ದೈತ್ಯರಹಲ್ಲ ಮುರಿದವಗೆ ಮಂಗಳ |ಕಲ್ಲಾದಹಲ್ಯೆಯನುದ್ಧಾರ ಮಾಡಿದಬಲ್ಲಿದದಾಶರಥಿಗೆ ಮಂಗಳ2ಹರಧನು ಮುರಿದ ವಿನೋದಿಗೆ ಮಂಗಳವರದ ತಿಮ್ಮಪ್ಪಗೆ ಮಂಗಳ ||ಪುರಂದರವಿಠಲರಾಯಗೆ ಮಂಗಳಸರುವೋತ್ತಮನಿಗೆ ಶುಭಮಂಗಳ 3
--------------
ಪುರಂದರದಾಸರು
ಮಾರುತನೆ ಏಳೆಂದು ಎಬ್ಬಿಸಿದಳಂಜನೆಯುಶ್ರೀ ರಾಮ ಸೇವೆಗೆ ತಡವಾಯಿತೇಳು ಪ.ಸೇತುಗಟ್ಟಲು ಬೇಕುಶರಧಿ ದಾಟಲು ಬೇಕುಮಾತೆಗೆ ಉಂಗುರವ ಕೊಡಲು ಬೇಕು ||ಪಾತಕಿ ರಾವಣನ ಶಿರವನ್ಹರಿಯಲು ಬೇಕುಸೀತೆಪತಿ ರಾಮರಿಗೆ ನಮಿಸಬೇಕು 1ಇಂತು ಕಳಿಯಲು ಬೇಕು ಅಙ್ಞÕತವಾಸವನುಪಂಥದಲಿ ಕೀಚಕರ ಒದೆಯಬೇಕು ||ತಂತ್ರದಲಿ ಗೆಲಬೇಕು ಶಕುನಿ ದುರ್ಯೋಧನರಕುಂತಿನಂದನನೆಂದು ಹೆಸರಾಗಬೇಕು 2ಮಧ್ವರಾಯರು ಎಂದು ಪ್ರಸಿದ್ಧರಾಗಲು ಬೇಕುತಿದ್ದಿ ಹಾಕಲು ಬೇಕು ಸಕಲಗ್ರಂಥಗಳ ||ಅದ್ವೈತವಾದಿಗಳ ಗೆದ್ದು ಕೆಡಹಲು ಬೇಕುಮುದ್ದು ಪುರಂದರವಿಠಲ ದಾಸನೆನಿಸಲು ಬೇಕು 3
--------------
ಪುರಂದರದಾಸರು
ರಂಗನಹುದೋ ನೀನು ಕನಕಾಚಲರಂಗನಹುದೋ ನೀನುತುಂಗಮಹಿಮ ಕೃ-ಪಾಂಗ ಚೆಲುವ ಮುದ್ದು ರಂಗಲಕ್ಷ್ಮಿಯ ರಮ-ಣಾಂಗ ಜಪಿತಮೂರ್ತಿಪದುರುಳರಕ್ಕಸನು ವೇದ ಕದ್ದೊಯ್ಯೆಮೀನಾಗಿ ತಂದೆಯದನ ಕೂರ್ಮನಾಗಿಗಿರಿಯ ಪೊತ್ತು ಎರೆದೆ ಸುರರಿಗೆ ಅಮೃತವವರಾಹನಾಗಿ ಧರೆಯ ಕದ್ದವನಶಿರವ ಖಂಡಿಸಿ ನೃಕೇಸರಿಯಾಗಿಯೆಕಂಬವನೊಡೆದು ನಿಶಾಚರನ ಸಂಹ-ರಿಸಿದೆ ರಣಧೀರಮಾಧವ1ಪುಟ್ಟ ಮಾನವನಾಗಿ ಬಲಿಯ ದಾನವ ಬೇಡಿಅಷ್ಟು ಬ್ರಹ್ಮಾಂಡವನೆಲ್ಲಈರಡಿಮಾಡಿತುಟ್ಟ ತುದಿಗೆ ಅವನ ಶಿರದ ಮೇ-ಲಿಟ್ಟು ದ್ವಾರವ ಕಾಯ್ದನಾ ಭೂಸುರರಿಗೆಕೊಟ್ಟ ಮೇದಿನಿಯ ದಾನವ ಭಳಿರೆ ಜಗಜಟ್ಟಿ ಪರಶುರಾಮ ಕ್ಷತ್ರಿಯ ಛೇದನ2ದಶರಥನ ಸುತನಾಗಿ ವಸುಧಜೆಯ ಕಳೆದುಅಸಮ ಕಪಿವೀರರ ನೆರಪಿ ಸೇತುವೆಕಟ್ಟಿಅಸದಳ ರಾಕ್ಷಸರ ಇಂದ್ರಜಿತುದಶಶಿರಅತಿಕಾಯರ ಕುಂಭಕರ್ಣಅಸಹಾಯ ರಣಶೂರರ ಛೇದಿಸಿ ಸೀತಾಶಶಿಮುಖಿಯ ಕರೆತಂದ ರಘುರಾಮಕಂಠೀರವ3ದೇವಕೀಸುತನಾಗಿ ಬಾಣನ ಭಂಗಿಸಿಮಾವ ಕಂಸನ ಶಿಶುಪಾಲ ನರಕಾಸುರ ಕೌ-ರವ ವೀರರನು ಕೊಂದು ಪಾಂಡುರಾಜನ ಪುತ್ರ-ರನು ಪಾಲಿಸಿ ಪೃಥವಿ ಪಾವನರಾದರನು ರಕ್ಷಿಸಿ ಬೌ-ದ್ಧಾವತಾರ ತಾನಾಗಿ ವ್ರತ ಭಂಗಿಸಿದೆ ನೀನು4ತೇಜಿಯನೇರಿ ನೇಣನೆ ಹಿಡಿದು ಪಾಪದಬೀಜವನುರುಪಿ ಪುಣ್ಯದ ಬಿತ್ತನುರುಹಿಯೆಸೋಜಿಗಸಹಸ್ರರ ಕನಕಗಿರಿಮೂಜಗದೊಳು ವಿಸ್ತಾರವಾಗಿಹಘನತೇಜೋ ಮೂರುತಿ ಗಂಭೀರ ಸಿದ್ಧ ಪರ್ವತರಾಜ ಸದ್ಗುರು ಚಿದಾನಂದಾವಧೂತ5
--------------
ಚಿದಾನಂದ ಅವಧೂತರು
ರಾಮ ಶ್ರೀರಾಮ ಸೀತಾರಾಮ ಶ್ರೀರಾಮರಾಮನೆ ರವಿಕುಲಸೋಮಶ್ರೀರಾಮಪರಾಮ ರಾಮ ರಘುರಾಮನೆ ದಶರಥರಾಮನೆ ಗುಣಗಣಧಾಮನೆ ಶ್ರೀರಘು ಅ.ಪಕೌಸಲ್ಯಾದೇವಿಯ ಕಂದನೆ ರಾಮಕೌಶಿಕಯಜÕವ ಕಾಯ್ದ ಶ್ರೀರಾಮಹಿಂಸಿಸಿದ ತಾಟಕಿಯನು ಕೊಂದರಾಮಧ್ವಂಸಮಾಡಿದೆ ಶಿವಧನು ಮುರಿದುರಾಮಸಂಶಯವಿಲ್ಲದೆ ಸೀತೆಕರವಪಿಡಿದುತನ್ನಂಶದ ಪರಶುರಾಮನಿಗೊಲಿದನೆ ಶ್ರೀ 1ದಶರಥರಾಮ ನೀನರಸನಾಗೆನಲುಅಸುರಾವೇಶದಿ ಕೈಕೆ ವರವ ಯಾಚಿಸಲುಎಸೆವ ಸಿಂಹಾಸನ ತೊರೆದು ಪೊರಮಾಡಲುಶಶಿಮುಖಿಸೀತಾಲಕ್ಷ್ಮಣರ ಕೂಡಿ ಬರಲುಭರತಗೆ ಪಾದುಕೆ ಕೊಡುತಲಿ ಕಳುಹಿಸಿಗುಹನ ಮನ್ನಿಸಿ ವನರಾಜ್ಯದೊಳ್ ಮೆರೆದೆ 2ವನದೊಳುಮಾಯಾಮೃಗವ ಕಂಡು ಸತಿಯುಮನದಿ ಚಿಂತಿಸಿರಾಮ ತೆರಳೆ ರಕ್ಕಸನುವನಜಾಕ್ಷಿ ಸೀತೆಯ ಕಳವಿನಿಂ ತರಲುವನವನಚರಿಸಿ ಪುಡುಕೆ ಕಂಡು ಕಪಿವರನುಶರಧಿಲಂಘಿಸಿ ಸೀತೆಯನು ಕಂಡು ಹನುಮನುಕುರುಹು ಪಡೆದು ಲಂಕೆ ದಹಿಸುತ ಬರಲು 3ಸೇತುಬಂಧನ ಮಾಡಿ ಕಪಿಗಳ ಕೂಡಿನೀತಿ ಪೇಳಿದ ವಿಭೀಷಣಗಭಯ ನೀಡಿಭೂತ ರಾವಣನ ದಶಶಿರವ ಚಂಡಾಡಿಸೀತಾಸಹಿತ ರಾಮ ಪುಷ್ಪಕವನೇರಿಆತುರದಿಂದಿಹ ಭರತನಿಗ್ವಾರ್ತೆಯಪ್ರೀತಿಲಿ ಕಳುಹಿದ ಶ್ರಿ ರಘುರಾಮ 4ಬಂದ ಶ್ರೀರಾಮಚಂದ್ರ ಬಹುಪ್ರೀತಿಯಿಂದಛಂದದಿಂ ಭರತನ ಮನ್ನಿಸಿ ಮುದದಿಂದಕುಂದಣಮಯದ ಸಿಂಹಾಸನ ಚಂದ-ದಿಂದಲೇರುತ ರಾಮ ನಸುನಗೆಯಿಂದಇಂದಿರಾಸೀತಾ ಸಹಿತ ಅಯೋಧ್ಯದಿಬಂದು ಪೊರೆವ ಕಮಲನಾಭ ವಿಠ್ಠಲನು 5
--------------
ನಿಡಗುರುಕಿ ಜೀವೂಬಾಯಿ
ಲಾಲಿ ತ್ರಿಭುವನಪಾವನಲಾಲಿ ಪ.ಗೋವಳ ಕುಲದೊಳು ಪುಟ್ಟಿದಗೆಲಾಲಿ <?xmಟ veಡಿsioಟಿ='1.0' eಟಿಛಿoಜiಟಿg='uಣಜಿ-8'?>ಗೋವರ್ಕಳನು ಸಲಹಿದೆಗೆಲಾಲಿ ||ಗೋವುಗಳನೆಲ ಕಾಯ್ದವಗೆಲಾಲಿಗೋವಿಂದ ಪರಮಾನಂದಗೆಲಾಲಿ..............ಲಾಲಿ1ನಖದಲಿ ಗಂಗೆಯ ಪಡೆದಗೆಲಾಲಿಶಕಟನ ಮುರಿದು ಒತ್ತಿದವಗೆಲಾಲಿ ||ಅಖಿಳ ವೇದಂಗಳ ತಂದಗೆಲಾಲಿರುಕುಮಿಣಿಯರಸ ವಿಠಲನಿಗೆಲಾಲಿ...........ಲಾಲಿ2ಗಗನವ ಮುರಿದು ಒತ್ತಿದಗೆಲಾಲಿನಿಗಮಗಳನು ತಂದಿತ್ತಗೆಲಾಲಿ ||ಹಗೆಗಳನೆಲ್ಲರ ಗೆಲಿದಗೆಲಾಲಿಜಗವನು ಉದರದಿ ಧರಿಸಿದಗೆಲಾಲಿ........ಲಾಲಿ3ಬೊಟ್ಟಿಲಿ ಬೆಟ್ಟವನೆತ್ತಿದಗೆಲಾಲಿಮೆಟ್ಟಿಲಿ ಭೂಮಿಯನಳೆದಗೆಲಾಲಿ ||ಜಟ್ಟಿಗರನೆಲ್ಲ ಗೆಲಿದಗೆಲಾಲಿಕಟ್ಟುಗ್ರ ಶ್ರೀ ನರಸಿಂಹಗೆಲಾಲಿ......................ಲಾಲಿ4ಶರಧಿಗೆ ಸೇತುವೆಗಟ್ಟಿದಗೆಲಾಲಿಸುರರ ಸೆರೆಯನು ಬಿಡಿಸಿದಗೆಲಾಲಿ ||ಕರಿಮೊರೆಯಿಡಲು ಬಂದೊದಗಿದಗೆಲಾಲಿವರದ ಪುರಂದರವಿಠಲಗೆಲಾಲಿ...........ಲಾಲಿ5
--------------
ಪುರಂದರದಾಸರು
ವಾಯುಕುಮಾರಗೆ ಮಂಗಳ - ರಘು - |ರಾಯಸೇವಕಗೆ ಮಂಗಳ ಪ.ಅಂಜನಿಗರ್ಭಸಂಜಾತಗೆ ಮಂಗಳ |ರಂಜಿತ ದಿವ್ಯ ಮೂರ್ತಿಗೆ ಮಂಗಳ ||ಮಂಜುಳ ಕೀರ್ತಿ ಮಾಹತ್ಮ್ಯಗೆ ಮಂಗಳ |ಸಂಜೀವರಾಯಗೆ ಮಂಗಳ 1ದನುಜನಿಕರ ಸಂಹಾರಗೆ ಮಂಗಳ |ಜಾನಕಿಶೋಕ ವಿನಾಶಗೆ ಮಂಗಳ ||ವನಧಿ ವಿರೋಧಿಗೆ ಮಂಗಳ ಜಯ |ಹನುಮವಿಲಾಸಗೆ ಮಂಗಳ 2ಸೇತುವೆಗಟ್ಟಿದಾತಗೆ ಮಂಗಳ |ಸೀತೆಯ ತಂದ ಬಂಟಗೆ ಮಂಗಳ ||ಖ್ಯಾತ ಪುರಂದರವಿಠಲನ ಕರುಣೆಗೆ |ಪಾತ್ರನಾದ ಭಕುತೆಗೆ ಮಂಗಳ 3
--------------
ಪುರಂದರದಾಸರು
ಶ್ರೀ ನರಹರಿ ತೀರ್ಥವಿಜಯ99ಪ್ರಥಮ ಕೀರ್ತನೆಯೋಗಾನಂದ ನರಹರಿ ರಾಮಪ್ರಿಯತಮರುಯೋಗಿವರ ನರಹರಿತೀರ್ಥರಪಾದಯುಗ್ಮವನರುಹದಿ ನಾ ಶರಣಾದೆ ಸಂತತಅಗಲದೇ ಎನ್ನ ಬದಿ ಇದ್ದು ರಕ್ಷಿಪರು ಪಅಶೇಷ ಗುಣಗಣಾಧಾರ ವಿಭು ಶ್ರೀ ರಮಣಹಂಸ ನಾಮಕ ಪರಮಾತ್ಮನಿಗೆ ನಮಿಪೆಹಂಸ ಬೋಧಿತ ವಿಧಿಗೆ ತತ್ ಶಿಷ್ಯ ಸನಕಾದಿವಂಶಜ ಗುರುಗಳು ಸರ್ವರಿಗು ನಮಿಪೆ 1ಅಚ್ಯುತಪ್ರೇಕ್ಷಾಖ್ಯ ಪುರುಷೋತ್ತಮಾರ್ಯಕರತೋಯಜೋತ್ಪನ್ನ ಆನಂದ ತೀರ್ಥರಿಗೆಕಾಯವಾಙÕನದಿಂದ ಶರಣಾದೆ ಸಂತತತೋಯಜಭವಾಂಡದ ಸಜ್ಜನೋದ್ಧಾರ2ಶ್ರೀವರ ವೇದವ್ಯಾಸನವತಾರಕನುಸರಿಸಿಭಾವಿ ಬ್ರಹ್ಮನು ಮುಖ್ಯ ವಾಯುದೇವದೇವೀಜಯಾಸಂಕರ್ಷಣಾತ್ಮಜನು ಈಭುವಿಯಲ್ಲಿ ತೋರಿಹ ಆನಂದ ತೀರ್ಥ 3ಮಾಲೋಲ ಶ್ರೀ ರಾಮಕೃಷ್ಣ ಪ್ರೀತಿಗಾಗಿಯೇಬಲ ಕಾರ್ಯ ಮಾಡಿದ ಹನುಮಂತ ಭೀಮಕಲಿಯುಗದಿ ಈ ಭೀಮ ಅವತಾರ ಮಾಡಿಹನುಕಲಿಮಲಾಪಹ ಜಗದ್ಗುರು ಮಧ್ವನಾಗಿ4ಶ್ರೀ ಮಧ್ವ ಅನಂತ ತೀರ್ಥಕರ ಅಬ್ಜಜರುಪದ್ಮನಾಭನೃಹರಿ ಮಾಧವಾಕ್ಷೋಭ್ಯಈ ಮಹಾ ಗುರುಗಳು ಸರ್ವರಿಗು ಆ ನಮಿಪೆಸುಮನಸಶ್ರೇಷ್ಠರು ಮಹಿಯಲ್ಲಿ ಪುಟ್ಟಿಹರು5ಶ್ರೀ ಮಹಾ ಪುರುಷೋತ್ತಮದಾಸರೆಂದೆನಿಪಶ್ರೀ ಮಧ್ವ ಮುನಿಗಳ ಶಿಷ್ಯ ಸಂತತಿಗೂಸುಮಹಿಮ ಹರಿದಾಸವರ್ಯರು ಸರ್ವರಿಗುಸನ್ಮನದಿ ಆ ನಮಿಪೆ ಸಂತೈಪರೆಮ್ಮ 6ಆ ಸೇತು ಹಿಮಗಿರಿ ಬದರಿಕಾಶ್ರಮಕ್ಷೇತ್ರವಸುಧೆಯ ಸಮಸ್ತಕಡೆ ಪೋಗಿ ಅಲ್ಲಲ್ಲಿದುಸ್ತರ್ಕ ದುರ್ಮತ ಅಟವಿಗಳ ಛೇದಿಸಿದಶಪ್ರಮತಿ ಮಧ್ವಮುನಿ ಒಲಿದರು ಸುಜನರ್ಗೆ 7ಈ ರೀತಿ ದಿಗ್ವಿಜಯ ಮಾರ್ಗದಲಿ ಮಧ್ವರಾಯರ ಸಂಗಡ ವಾದಕ್ಕೆ ನಿಂತು |ಭಾರಿಪಂಡಿತರತ್ನಶೋಭನ ಭಟ್ಟನುಶರಣಾಗಿ ಮಧ್ವರಾಯರ ಶಿಷ್ಯನಾದ 8ಶೋಭನ ಭಟ್ಟಾಖ್ಯ ಈಗುಣಗ್ರಾಹಿಯುಶುಭಪ್ರದೆ ಲೋಕಪಾವನಿವೃದ್ಧ ಗಂಗೆಎಂಬುವ ಗೋದಾವರೀ ತೀರದಲಿ ಮಧ್ವಅಬ್ಜಹಸ್ತದಿಕೊಂಡ ತುರ್ಯಾಶ್ರಮ 9ಸತ್ತತ್ವವಾದದ ಸೊಬಗನ್ನ ಮಧ್ವವದನಾಂಬುಜದಿಂದಕೇಳಿಸುಪವಿತ್ರಪದ್ಮನಾಭತೀರ್ಥಾಖ್ಯ ನಾಮವ ಹೊಂದಿದಮುದದಿಂದ ಈ ಮಹಾತ್ಮನು ಶೋಭನನು 10ಕಳಿಂಗ ರಾಜನ ಮಂತ್ರಿಯ ಕುಮಾರನುಶೀಲತಮ ಹರಿಭಕ್ತಸ್ವಾಮಿ ಶಾಸ್ತ್ರಿಬಾಲ ವಯಸ್ಸಲ್ಲೇವೆ ಸಿರಿತನದಾಮೋಹಾದಿಲೀಲಾವಿನೋದ ಚಟುವಟಿಕೆ ತೊರೆದವನು 11ವಿಧಿಯುಕ್ತ ಉಪನಯನ ಶಾಸ್ತ್ರಾಭ್ಯಾಸವವೇದ ವೇದಾಂತವಿದ್ಯೆಸರ್ವ ಹೊಂದಿಗೋದಾವರಿ ಕ್ಷೇತ್ರ ಎಲ್ಲೆಲ್ಲೂ ಈತನುವಿದ್ವಚ್ಛಿರೋಮಣಿ ಎಂದೆನಿಸಿಕೊಂಡ 12ರಾಮ ಮಹೇಂದ್ರಪುರಪ್ರಾಂತ್ಯಸ್ಥವಾದಿಗಜಸಿಂಹ ಶೋಭನ ಭಟ್ಟನು ಈಗತ್ರಿಜಗದ್ಗುರು ಮಧ್ವರಿಂ ಅನುಗ್ರಹವಕೊಂಡದ್ದುನಿಜ ಹರುಷದಿ ಕೇಳಿದ ಶ್ಯಾಮ ಶಾಸ್ತ್ರಿ 13ಹಿತಕರ ಈಸುದ್ದಿ ಕೇಳಲಿಕ್ಕೇವೆಕಾದಿದ್ದ ಶ್ರೀಮಂತ ಈ ಶ್ಯಾಮ ಶಾಸ್ತ್ರಿಬಂದು ಶ್ರೀಮಧ್ವರಲಿ ಕರಮುಗಿದು ಸನ್ನಮಿಸಿಒದಗಿ ಪಾಲಿಸಿ ಸೇವೆ ಕೊಳ್ಳಬೇಕೆಂದ 14ಉತ್ತಮ ದೇವಾಂಶನು ನಿಜ ಸಹಜ ಭಕ್ತಿಮಾನ್ಸುದೃಢ ಜ್ಞಾನಿಯು ಋಜುಮಾರ್ಗ ಚರಿಪಕ್ಷಿತಿಯಲ್ಲಿ ಜನಿಸಿಹ ವೈರಾಗ್ಯನಿಧಿ ಇವಹೊಂದಿದ ತುರ್ಯಾಶ್ರಮ ಮಧ್ವ ಮುನಿದಯದಿ 15ನರಹರಿ ತೀರ್ಥಾಖ್ಯ ಶುಭತಮನಾಮವಶಾಸ್ತ್ರಿಗೆ ಇತ್ತರು ಆನಂದ ಮುನಿಯುಹರಿಸೇವಾ ಕಾರ್ಯಸಿದ್ಯರ್ಥ ಆದೇಶದಲೆಇರುವುದು ಎಂದರು ಸರ್ವಜÕ ಮುನಿಯು 16ಸಾಮ್ರಾಜ್ಯ ಅಧಿಪತ್ಯ ಕಳಿಂಗ ದೇಶದಲಿಚರಿಸುವ ಕಾಲವು ಬರಲಿಕ್ಕೆ ಇದೆಯುಶ್ರೀರಾಮ ಸೀತಾ ಮೂರ್ತಿಗಳ ಅಲ್ಲಿಂದತರಲಿಕ್ಕೆ ಇರಬೇಕು ಅಲ್ಲಿಯೇ ಎಂದರು 17ಗಜಪತಿ ರಾಜನ ಅರಮನೆಯಲ್ಲಿರಾಜೀವೇಕ್ಷಣ ಮೂಲರಾಮನು ಸೀತಾರಾಜಭಂಡಾರದಲ್ಲಿ ಮಂಜೂಷದಲಿರಾಜಿಸುತ ಇಹರುಮೂರ್ತಿರೂಪದಲಿ18ಕಳಿಂಗದೇಶಾಧಿಪ ಗಜಪತಿಯ ವಂಶದಲಿಬಾಲರಾಜನು ಅವನ ಪ್ರತಿನಿಧಿಯಾಗಿಆಳುವುದು ರಾಜ್ಯವ ಎಂದು ಆಚಾರ್ಯರುಪೇಳಿದರು ನರಹರಿ ತೀರ್ಥ ಆರ್ಯರಿಗೆ 19ಬಾಲರಾಜನು ಯುವಕನಾಗಿ ರಾಜ್ಯವನ್ನುಆಳುವ ಯೋಗ್ಯತೆ ಹೊಂದಿದ ಮೇಲೆಅಲ್ಲಿಂದ ರಾಮ ಸೀತಾ ಮೂರ್ತಿರಾಜನ್ನಕೇಳಿತರಬೇಕು ಎಂದರು ಲೋಕ ಗುರುವು 20ಗೋದಾವರಿ ಕ್ಷೇತ್ರದೇಶ ಸುತ್ತು ಮುತ್ತುಸಾಧುಜನ ಉದ್ಧಾರ ಬೋಧಕ್ಕೆಪದ್ಮನಾಭತೀರ್ಥರ ತತ್ಕಾಲ ನಿಲ್ಲಿರಿಸಿಬಂದರು ಉಡುಪಿಗೆ ಪೂರ್ಣ ಪ್ರಮತಿಗಳು 21ಶ್ರೀ ಮಧ್ವಾಚಾರ್ಯರು ಅರುಹಿದ ಪ್ರಕಾರದಲೇಸಮಯ ಒದಗಿತು ರಾಣಿ ಬಿನ್ನೈಸಿದಳುಸ್ವಾಮಿ ತಾವೇ ರಾಜ್ಯ ಆಳಬೇಕೆಂದಳುಸಮ್ಮತಿಸಿದರು ಶ್ರೀ ನರಹರಿ ಮುನಿಯು 22ಮಂತ್ರಿಪದವಿಪರಂಪರೆ ಪ್ರಾಪ್ತವಾಗಿತಂದೆ ವಹಿಸಿದ್ದರುಅವರಮುಖದಿಂದಹಿಂದೆ ಪೂರ್ವಾಶ್ರಮದಿ ರಾಜ್ಯ ಆಡಳಿತದರೀತಿಯ ಅರಿತವರು ಈ ಹೊಸಯತಿಯು 23ನರಹರಿ ತೀರ್ಥರ ರಾಜ್ಯ ಆಡಳಿತದಲಿಪರಿಪರಿ ರಾಜತಂತ್ರಗಳ ಕೌಶಲ್ಯಸರಿಯಾದ ಧಾರ್ಮಿಕ ರಾಜನೀತಿಯ ದುಷ್ಟಶತ್ರು ನಿಗ್ರಹ ಶಿಷ್ಟಪಾಲನಏನೆಂಬೆ24ದಂಡೆತ್ತಿ ಆಗಾಗ ಬರುತಿದ್ದ ಶಬರಾದಿತುಂಟ ಶತ್ರುಗಳನ್ನ ಜಯಿಸಿ ರಾಜ್ಯವನ್ನಕಂಟಕದುರ್ಮತಿಗಳಿಂದ ಕಾಪಾಡಿದರುಎಂಟು ದಿಕ್ಕಲು ಹಬ್ಬಿತಿವರ ಕೀರ್ತಿ 25ಆಶ್ರಮೋಚಿತನಿತ್ಯಜಪಪೂಜ ಕಾರ್ಯಗಳುಶಿಷ್ಯ ಸಜ್ಜನರಿಗೆ ಉಪದೇಶಾನುಗ್ರಹಲೇಶವೂ ಕೊರತೆ ಇಲ್ಲದೆ ಮುದದಿಈಶನ ಪ್ರೀತಿಗೆ ರಾಜಕಾರ್ಯಗಳ ಮಾಡಿದರು 26ವಾಗೀಶಪಿತ ಶ್ರೀ ಪ್ರಸನ್ನ ಶ್ರೀನಿವಾಸಯೋಗಾನಂದ ನರಹರಿ ಮೂಲ ರಾಮನಿಗೆ ಪ್ರಿಯತಮರು ನರಹರಿ ತೀರ್ಥರಲ್ಲಿಬಾಗಿ ಶರಣಾದೆ ನಾ ಸದಾ ಪೊರೆವರೆನ್ನ 27- ಇತಿ ಶ್ರೀ ಪ್ರಸನ್ನ ನರಹರಿತೀರ್ಥವಿಜಯಪ್ರಥಮೋದ್ಯಾಯಃ -ದ್ವಿತೀಯಕೀರ್ತನೆಯೋಗಾನಂದ ನರಹರಿ ರಾಮಪ್ರಿಯತಮರುಯೋಗಿವರ ನರಹರಿತೀರ್ಥರಪಾದಯುಗ್ಮವನರುಹದಿ ನಾ ಶರಣಾದೆ ಸಂತತಅಗಲದೇ ಎನ್ನ ಬದಿ ಇದ್ದು ರಕ್ಷಿಪರು ಪಶ್ರೀಕೂರ್ಮಕ್ಷೇತ್ರದಲಿ ಕೂರ್ಮೇಶ್ವರಾಲಯದಿಯೋಗಾನಂದ ನರಸಿಂಹಗೆ ಗುಡಿಯಯೋಗಿವರ ನರಹರಿತೀರ್ಥರು ಕಟ್ಟಿಸಿಯೋಗಾನಂದ ನರಸಿಂಹನ ಸ್ಥಾಪಿಸಿದರು 1ಯುಕ್ತ ಕಾಲದಿ ರಾಜನಿಗೆ ರಾಜ್ಯ ಒಪ್ಪಿಸಲುಕೃತಜÕ ಮನದಿಂದ ಆ ಯುವಕರಾಜಇತ್ತನು ಸನ್ನಮಿಸಿ ನರಹರಿತೀರ್ಥರಿಗೆಸೀತಾರಾಮ ವಿಗ್ರಹದ ಮಂಜೂಷ 2ನರಹರಿತೀರ್ಥರು ಶ್ರೀಮದಾಚಾರ್ಯರಲಿನೇರವಾಗಿ ಪೋಗಿ ಸಮರ್ಪಿಸಲು ಆಗಶ್ರೀರಾಮ ಸೀತಾದೇವಿಯ ಮಧ್ವಮುನಿಕ್ಷೀರಾದಿ ಪಂಚಾಮೃತದಿ ಪೂಜಿಸಿದರು 3ಶ್ರೀರಾಮಸೀತಾ ಪ್ರತಿಮೆಗಳೊಳು ಹರಿರಮಾಆರಾಧನಾರ್ಚನೆ ಮೂರು ತಿಂಗಳು ಹದಿ -ನಾರುದಿನ ತಾಮಾಡಿ ಪದ್ಮನಾಭತೀರ್ಥರುತರುವಾಯ ಪೂಜಿಸಲು ಆಜೆÕ ಮಾಡಿದರು 4ಮೂರನೇಬಾರಿ ಬದರಿಗೆ ಆಚಾರ್ಯರುತೆರಳಲು ಪದ್ಮನಾಭರು ತಾವು ಪೂಜೆಚರಿಸಿ ನಿಯಮನದಂತೆ ಆರು ವರ್ಷ ತರುವಾಯನರಹರಿತೀರ್ಥರಿಗೆ ಇತ್ತರು ಮೂರ್ತಿಗಳ 5ಈ ಮೂರ್ತಿಗಳೊಳ್ ಇರುವ ಸೀತಾರಾಮಾರ್ಚನೆಬ್ರಹ್ಮದೇವರು ಮಾಡಿ ಸೂರ್ಯವಂಶಭೂಮಿಪಾಲಕ ಕೈಯಿಂದ ಪೂಜೆಯ ಕೊಂಡುಕ್ರಮದಿ ದಶರಥರಾಜ ಕರಕೆ ಲಭಿಸಿದವು 6ಶ್ರೀ ರಾಮಚಂದ್ರ ಪ್ರಾದುರ್ಭಾವಕು ಮೊದಲೇದಶರಥ ಆರಾಧಿಸಿದ ತರುವಾಯಶ್ರೀ ರಾಮತಾನೇ ಸ್ವಯಂ ಪೂಜೆ ಮಾಡಿದನುಶಿರಿಸೀತ ತಾ ಕೊಂಡಳು ಪೂಜೆಗಾಗಿ 7ರಾಮಚಂದ್ರನು ಸೇವೆ ಸಾಕ್ಷಾತ್ ಮಾಡುವಸೌಮಿತ್ರಿ ಆ ಮೂರ್ತಿಗಳನ್ನು ತಾನುಸಮ್ಮುದದಿ ತನ್ನ ಅರಮನೆಯಲ್ಲಿಟ್ಟುಕೊಂಡುನೇಮದಿ ಪೂಜಿಸುತ್ತಿದ್ದನು ಬಹುಕಾಲ 8ದ್ವಿಜನರ ಶ್ರೇಷ್ಠನು ರಾಮನಲಿ ಬಹುಭಕ್ತಿನಿಜಭಾವದಲಿ ಮಾಳ್ಪಅನುದಿನಅವನುರಾಜೀವೇಕ್ಷಣ ರಾಮನನ್ನು ತಾ ನೋಡದಲೆಭೋಜನ ಮಾಡಲಾರನು ಅಂಥಭಕ್ತ 9ವಿಪ್ರವರ ಅವಾತ ವೃದ್ಧಾಪ್ಯದಲಿಅರಮನೆ ದರ್ಬಾರ ಮಂಟಪಕೆ ಬಂದಶ್ರೀರಾಮಚಂದ್ರನು ರಾಜಕಾರ್ಯೋದ್ದೇಶಹೊರಗೆ ಹೋಗಿದ್ದನು ಏಳುದಿನ ಹೀಗೆ 10ಏಳು ದಿನವೂ ಆ ವಿಪ್ರೋತ್ತಮ ಊಟಕೊಳ್ಳದೇ ದೇಹಬಲ ಬಹು ಬಹುಕುಗ್ಗಿಮೆಲ್ಲನೆ ಎಂಟನೆ ದಿನ ಬಂದುಕುಳಿತಿದ್ದ ಶ್ರೀ ರಾಮಚಂದ್ರ ಸಭೆಯಲ್ಲಿ 11ಕಣ್ಣಿಗೆ ಏಳುದಿನ ಕಾಣದ ಶ್ರೀರಾಮಆನಂದಮಯಶ್ರೀನಿಧಿಯ ಕಂಡಲ್ಲೇಬ್ರಾಹ್ಮಣನು ಆನಂದ್ರೋದೇಕವು ಉಕ್ಕಿಸನ್ನಮಿಸುವಲ್ಲೇಯೇ ಬಿದ್ದನು ಕೆಳಗೆ 12ಏಳುದಿನ ಉಪವಾಸದಿಂದಲೇ ತನುವಿನಬಲಹೀನತೆ ಹೊಂದಿ ಆ ಬ್ರಾಹ್ಮಣ ಬೀಳೆ ಕೆಳಗೆಕನಕಆಸನದಿಂದಲಿ ರಾಮಇಳಿದುಬಂದು ಆಶ್ವಾಸಿಸಿದ ವಿಪ್ರನÀನ್ನ 13ವಿಪ್ರಶ್ರೇಷ್ಠನ ನಿವ್ರ್ಯಾಜ ಭಕ್ತಿಯ ಮೆಚ್ಚಿಕರುಣಾಬ್ಧಿ ಭಕ್ತವತ್ಸಲ ರಾಮಚಂದ್ರಕ್ಷಿಪ್ರದಲೆ ಲಕ್ಷ್ಮಣನ ಕಡೆಯಿಂದ ಪ್ರತಿಮೆಗಳತರಿಸಿಕೊಟ್ಟನು ಆ ದ್ವಿಜಶ್ರೇಷ್ಠನಿಗೆ 14ಅನುದಿನವೃದ್ಧ ದೆಶೆಯಲ್ಲಿ ಬರಬೇಡವುಅನಾಯಾಸದಿ ತನ್ನ ಪ್ರತಿಮೆಯಲ್ಲಿಕಾಣಬಹುದು ಎಂದು ಶ್ರೀರಾಮ ಪೇಳಿದನುಆನಂದದಿಕೊಂಡಬ್ರಾಹ್ಮಣ ಮೂರ್ತಿಗಳ15ಪ್ರತಿನಿತ್ಯ ವಿಧಿಪೂರ್ವಕ ಅರ್ಚಿಸಿದವಿಪ್ರಯುಕ್ತ ಕಾಲದಿ ತನು ಬಿಡುವ ಸಮಯದಲಿವಾಯುಸುತ ಹನುಮನ ಕೈಯಲ್ಲಿ ಅರ್ಪಿಸಿದಸೀತಾರಾಮ ಪ್ರತಿಮೆಗಳ ಭಕ್ತಿಯಲಿ 16ಸಮಸ್ತ ಜೀವರುಮಾಳ್ಪ ಭಕ್ತಿಗೆ ಅಧಿಕಸುಮಹಾಭಕ್ತಿಯ ಮಾಳ್ಪ ಹನುಮಂತಈ ಮೂರ್ತಿಗಳ ತಾಕೊಂಡು ಮುದದಲಿ ಕುಣಿದಸಮ್ಮುದದಿ ಅರ್ಚಿಸಿದ ಸೀತಾರಾಮನ್ನ 17ಸೌಗಂಧಿಕಾಪುಷ್ಪತರಲು ಭೀಮನು ಪೋಗಿಮಾರ್ಗದಲಿ ತನ್ನಯ ಪ್ರಥಮಾವತಾರಸಾಕೇತರಾಮಪ್ರಿಯತಮ ಅಂಜನಾಸುತನಸಂಗಡವಾದಿಸಿದ ಲೋಕರೀತಿಯಲ್ಲಿ 18ನರಾಧಮರ ಮೋಹಿಸುವ ಸಜ್ಜನರ ಮೋದಿಸುವಚರ್ಯಸಂವಾದ ತೋರಿಸಿ ರೂಪದ್ವಯದಿತರುವಾಯು ಹನುಮನು ಭೀಮನಿಗೆ ಕೊಟ್ಟನುಶ್ರೀರಾಮಸೀತಾ ಮೂಲಪ್ರತಿಮೆಗಳ 19ಭೀಮಸೇನನು ಆನಂದದಿ ಅರ್ಚಿಸಿದಸುಮನೋಹರ ರಾಮಸೀತಾದೇವಿಯನ್ನಈ ಮಹಾಹರಿಭಕ್ತ ಪಾಂಡವರ ವಂಶದಿಕ್ಷೇಮಕ ರಾಜನು ಕಡೆಯಾಗಿ ಬಂದ 20ಮೂಲರಾಮಸೀತೆಯ ಮುದದಿಂದ ಪೂಜಿಸಿದಶೀಲಭಾವದಲಿ ಆ ಕ್ಷೇಮಕಾಂತಮೂಲ ವಿಗ್ರಹಗಳು ತರುವಾಯ ಲಭಿಸಿದವುಕಳಿಂಗ ದೇಶಾಧಿಪ ಭಕ್ತನ ಕೈಯಲ್ಲಿ 21ಆಗಿನಕಾಲದಲ್ಲಿಪೀತಾಪುರವಿಜಯನಗರಎಂಬುವ ಪಟ್ಟಣದ ಮತ್ತುಜಗನ್ನಾಥಕ್ಷೇತ್ರ ದಕ್ಷಿಣ ಕಳಿಂಗಾಧಿಪರುಭಕುತಿ ಬೆಳೆಸಿದರು ಶ್ರೀರಾಮನಲ್ಲಿ 22ಆಗಾಗ ಹಸ್ತಿನಾಪುರ ಪೋಗುತಿದ್ದರುಗಂಗಾದಿಸ್ನಾನ ಕ್ಷೇತ್ರಾಟನ ಮಾಡಿಭಕ್ತಿಯಿಂ ಶ್ರೀರಾಮಚರಿತೆ ಕೇಳುವವರಲ್ಲಿವಿಗ್ರಹಗಳು ಲಭಿಸಿದವು ರಾಮನ ಕೃಪದಿ 23ಕಳಿಂಗದೇಶಾಧಿಪ ಗಜಪತಿ ರಾಜನುಬಲುಶ್ರದ್ಧೆ ಭಕ್ತಿಯಲಿ ಆರಾಧಿಸಿಕಾಲದೀರ್ಘದಿ ಸಂತತಿ ಪೂಜಿಸದಲೆಕೀಲುಹಾಕಿ ರಕ್ಷಿಸಿದರು ಬೊಕ್ಕಸದಿ 24ಹಿಂದೆ ತಾ ಭೀಮಾವತಾರದಲಿ ಪೂಜಿಸಿದ್ದುಎಂದು ಆನಂದಮುನಿಇಂದುವಿಗ್ರಹಗಳಹೊಂದಲು ನರಹರಿ ತೀರ್ಥರ ಕಳಿಂಗದಿನಿಂದಿರಿಸಿ ತರಿಸಿಕೊಂಡರು ಮೂರ್ತಿಗಳನು 25ಶ್ರೀಮದಾಚಾರ್ಯರು ಆರ್ಚಿಸಿ ತರುವಾಯಪದ್ಮನಾಭತೀರ್ಥರು ಆರುವರ್ಷಗಳು ಆರಾಧಿಸಿ ನರಹರಿ ತೀರ್ಥರು ಒಂಭತ್ತು ವರ್ಷಗಳುಮುದದಿಂ ಪೂಜಿಸಿದರು ಮೂಲ ರಾಮನ್ನ 26ಒಂಭತ್ತು ವರ್ಷಗಳು ಒಂದು ತಿಂಗಳು ದಿನಇಪ್ಪತ್ತ ಮೂರು ಈಕಾಲಸಂಸ್ಥಾನಶ್ರೀಪನಿಗೆ ಪ್ರಿಯತರದಿ ಆಡಳಿತ ಮಾಡಿಶ್ರೀಪನ್ನ ಧ್ಯಾನಿಸುತ ಹರಿಪುರ ಐದಿದರು 27ಶಾಲಿಶಕ ಹನ್ನೊಂದು ನೂರು ಮೂವತ್ತಾರುಶೀಲತಮ ಶ್ರೀಮುಖ ಪುಷ್ಯ ಕೃಷ್ಣಏಳನೇ ದಿನದಲ್ಲಿ ಹರಿಪುರ ಯೈದಿದರುಮಾಲೋಲ ಪ್ರಿಯತಮ ನರಹರಿ ತೀರ್ಥರು 28ಮತ್ತೊಂದು ಅಂಶದಲಿ ವೃಂದಾವನದಲಿವೃತತಿಜನಾಭ ತೀರ್ಥರ ಸಮೀಪಉತ್ತುಂಗಮಹಿಮ ತುಂಗಾನದಿ ಚಕ್ರತೀರ್ಥದಹತ್ತಿರ ಕುಳಿತಿಹರು ಸ್ಮರಿಸೆ ರಕ್ಷಿಪರು 29ಶ್ರೀರಾಮನರಹರಿ ಶ್ರೀ ಶ್ರೀನಿವಾಸನುನೇರಲ್ಲಿ ಪ್ರಸನ್ನನಾಗಿ ಈಗ ಈ ನುಡಿಗಳ್ಬರೆಸಿಹನು ಸಜ್ಜನರು ಓದಲು ಕೇಳಲುಗುರುಗಳಂತರ್ಯಾಮಿ ವಾಂಛಿತಗಳೀವ 30ಅರಸಿಕರಿಗೂ ಅಧಮ ಮಂದರಿಗು ಈವಿಜಯಬರೆಯಲಿಕು ಕೇಳಲಿಕು ಅವಕಾಶ ಕೊಡದೆಭಾರಿ ಪಂಡಿತರುಗಳೂ ಸಾಮಾನ್ಯ ಸುಜನರೂಸುಶ್ರಮಣ ಮಾಳ್ಪುದು ಹರಿಪ್ರೀತಿಗಾಗಿ 31ವಾಗೀಶಪಿತ ಶ್ರೀ ಪ್ರಸನ್ನ ಶ್ರೀನಿವಾಸಯೋಗಾನಂದ ನರಹರಿ ಮೂಲ ರಾಮನಿಗೆ ಪ್ರಿಯತಮರು ನರಹರಿ ತೀರ್ಥರಲ್ಲಿಬಾಗಿ ಶರಣಾದೆ ನಾ ಸದಾ ಪೊರೆವರೆನ್ನ 32ಶ್ರೀ ನರಹರಿತೀರ್ಥವಿಜಯಸಂಪೂರ್ಣಂ|| ಶ್ರೀ ಕೃಷ್ಣಾರ್ಪಣಮಸ್ತು ||
--------------
ಪ್ರಸನ್ನ ಶ್ರೀನಿವಾಸದಾಸರು
ಶ್ರೀ ಮಧ್ವರಾಯರ ಸೇವೆ ದೊರಕುವುದುಜನುಮ ಸಫಲ ಕಾಣಿರೋ ಪಶ್ರೀಮದಾನಂದ ತೀರ್ಥರ ಪಾದವ ನೆನೆವರುಸಾಮಾನ್ಯಸುರರುಕಾಣಿ-ಬೊಮ್ಮನಆಣಿಅ.ಪಜಗತು ಸತ್ಯವು ಅಲ್ಲ ಜಡ-ಜೀವ ಭೇದವಲ್ಲಅಗುಣನು ಪರಬೊಮ್ಮನು-||ಹೀಗೆ ನುಡಿವ ಜನರ ನಿಗಮಶಾಸ್ತ್ರದಿ ಗೆದ್ದುಜಗ ಸತ್ಯ ಸಗುಣ ಬ್ರಹ್ಮ ಎಂದು ಪೇಳುವ 1ಹರಿಸರ್ವೋತ್ತಮನಿತ್ಯತರುವಾಯ ರಮಾದೇವಿತರುವಾಯ ವಿಧಿಪ್ರಾಣರುಸರಸ್ವತಿಭಾರತಿಗರುಡ ಅನಂತ ರುದ್ರತರುವಾಯ ಆರು ದೇವಿಗಳು 2ಸೌಪರ್ಣಿವಾರುಣಿದೇವಿ ಅಪರ್ಣಾದೇವಿಯರು ಸಮರುದ್ವಿಪದಿ ಮನ್ವಾದಿಗಳು ||ಈಪರಿತಾರತಮ್ಯ ಜಪ-ಧ್ಯಾನಾರ್ಚನೆಯಿಂದಅಪವರ್ಗದನ ಸೇವೆಯ ಮಾಡಿರೊ ಎಂಬ 3ಒಂದೊಂದು ಯುಗದಲಿ ಅನಂತ ಸೇವೆಯ ಮಾಡಿಚೆಂದದಿಂದಲಿ ಲಾಲಿಸಿ ||ಇಂದಿರಾರಮಣ ಗೋವಿಂದನೇ ದೈವವೆಂದು |ಸಂದೇಹವಿಲ್ಲದೆ ಸಾಧಿಸಿ-ಮಾಯೀ ಸೋಲಿಸಿ 4ಹಿಮಗಿರಿಯಿಂದ ಸೇತುವೆಯ ಪರ್ಯಂತರಭ್ರಮಿಸುತ ಸುಜನರಿಗೆ ||ಕ್ರಮತತ್ತ್ವ ಬೋಧಿಸಿ ಕಮಲನಾಭನಮೂರ್ತಿಕ್ರಮವರಿತು ಸ್ಥಾಪಿಸಿ ಪೂಜಿಸಿರೆಂದ 5ಭೂತಳದೊಳು ರೌಪ್ಯಪುರದಿ ನೆಲಸಿ ಗೆದ್ದುಧಾತ್ರೀ ಮುದ್ರೆಯ ತೋರಿಸಿ ||ಈತನೇ ಹನುಮಂತ ಈತನೇ ಭೀಮಸೇನಈತನೇ ಭವಿಷ್ಯದ ಬ್ರಹ್ಮಜೀವೋತ್ತಮ6ಶ್ರೀಮದನಂತನೆ ಅನಂತಕಾಲಕೆಯೆಂದುಯಮಕ ಭಾರತ ತೋರಿಸಿಸ್ವಾಮಿ ಸರ್ವಾಂತರ್ಯಾಮಿ | ಸರ್ವಗುಣಪೂರ್ಣನೆಂದುಪ್ರೇಮಿಪುರಂದರವಿಠಲನ ದಾಸನಾದ7
--------------
ಪುರಂದರದಾಸರು
ಶ್ರೀ ಸೌಭಾಗ್ಯ ಪ್ರದ ಹನುಮಂತ(ಅಣು ಸುಂದರ ಕಾಂಡ)67ಶರಣು ಪಾಲಿಸೋ ಹನುಮ |ಕರುಣಾಳು ಅಂಜನಾಸೂನು ನಿನ್ನ ಮಹಿಮೆವರ್ಣಿಸಲು ನಾಬಲ್ಲೆನೆ ಹೇ ವಾಯು ಪುತ್ರನೇ ಅಸಮಬಲಜ್ಞಾನ ರೂಪನೆ ನಿನಗೆ ಇಷ್ಟ ಶ್ರೀರಾಮಜೀವರಲಿ ನೀ ಉತ್ತಮ |ಶರಣು ಫಲ್ಗುಣಸಖಪಿಂಗಾಕ್ಷನೇಶರಿಧಿ ದಾಟಿದಿಅಮಿತವಿಕ್ರಮವಾರ್ತೆ ಸೀತೆಗೆ ಪೇಳಿ ದಶಮುಖಸರ್ವತರದಿ ಸೌಮಿತ್ರಿ ಪ್ರಾಣ ಪ್ರ -ದಾತಹರಿವರಶರಣು ಶರಣು ಮಹಾತ್ಮ ಸಹೃದನೇಶರಣು ಪಾಲಿಸೋ ಹನುಮ ಪಪೂರ್ಣಪ್ರಜÕನೀನೆಂದು ಬಹು ಹರುಷ ತೋರಿದ |ರಾಘವನ ಕರೆತಂದು ರವಿಜನಿಗೆ ಸಖ್ಯ | ಮಾಡಿಸಿ ನೀಸಿಂಧು|ದಾಟುತ್ತ ಮೈನಾಕನ್ನೇ | ಶ್ಲೇಷಿಸಿನಿಂದುವಿಶ್ರಾಂತಿ ಕೊಳ್ಳದೆ ಮುಂದು |ಹಾರಿ ಸುರ ಸೆಯೊಳ್ ಲೀಲೆಯಿಂದಲಿ ಹೊಕ್ಕು ಹೊರಟು -ಸುರರುಪೂಮಳೆಕರಿಯೇ ಸಿಂಹಿಕಾ ಉದರ ಸೀಳಿ ದ್ವಾರ ಪಾಲಕೆಯನ್ನ ಜಯಿಸಿಪುರಿ ಪ್ರವೇಶವ ಮಾಡಿ ಸೀತಾಕೃತಿಯ ಕಂಡುಂಗರುವ ಕೊಟ್ಟುಕ್ರೂರ ರಾಕ್ಷಸ ಅಕ್ಷಾದಿಗಳ ಕೊಂದು ಲಂಕಾಪುರಿಯ ಸುಟ್ಟುಭರದಿ ತಿರುಗಿ ಬಂದು ರಾಘವನಂಘ್ರಿಯಲಿ ಸನ್ನಮಿಸಿ ಸೀತೆಯಚೂಡಾರತ್ನವನಿಟ್ಟು ರಾಮಾಲಿಂಗನ ನೀಕೊಂಡಿಯೋ ಸೌಭಾಗ್ಯ ನಿಧಿಯೇಶರಣು ಪಾಲಿಸೋ ಹನುಮ 1ಜಯತು ಶರಣು ಶ್ರೀರಾಮ | ಶರಣೆಂದವಿಭೀಷಣನನ್ನ | ಅತಿ ಪ್ರೇಮದಿಂದ ನೀ ಸ್ವೀಕರ್ಯನೆನಲು ಶ್ರೀರಾಮ |ಬಂದು ಅಭಯವ ನಿತ್ತ ಪೂರ್ಣಕಾಯ |ಅಮಿತ ಸುಗುಣ ಸುಧಾಮ|ಮಾರ್ಜಗಾರಿ ಸಸೈನ್ಯ ರಾವಣ ನನ್ನ ಜಹಿಯಲು | ಸೇತು ಕಟ್ಟಿಸಿ |ಸುಜನರಕ್ಷಕ ಉರುಪರಾಕ್ರಮ ಅಜಿತರಾಮನು ಪೋಗೆ ಲಂಕೆಗೆ |ಜಾಂಬವಾನ್ ಸುಗ್ರೀವ ಸಹ ನೀ ಜಾನಕೀಶಗೆ ಸೇವೆ ಸಲ್ಲಿಸಿ |ಸಂಜೀವಿನಿಗಳ ತಂದು ರಾಮಾನುಜಗೆ ಪ್ರಾಣವನಿತ್ತು ರಾವಣಭಂಜನವ ರಘುರಾಮ ಮಾಡಿ ಅಯೋಧ್ಯೆಬರುವುದು ಪೇಳಿ ಭರತಗೆ |ನಿಜ ಸಂತೋಷದಿ ಸೀತಾರಾಮಗೆ ರಾಜ್ಯ ಪಟ್ಟಾಭಿಷೇಕ ಗೈಸಿದಿ -ಶುಭಸುಚರಿತನೆ ಶರಣು ಪಾಲಿಸೋ ಹನುಮ2ರಾಮಭದ್ರನು ನಿನ್ನ | ಅನುಪಮೋತ್ತಮ ಸೇವೆ ಮೆಚ್ಚಿ ಏನನ್ನ |ನೀನಗೀವುದು ನಿನ್ನ ಸೇವೆ ಸಮ ಬಹುಮಾನ |ಮೋಕ್ಷ ಸಾಲದು ಪೇಳು ಬೇಕಾದ್ದನ್ನ | ಎನಲು ನೀ ರಾಮನ್ನ |ನಮಿಸಿ ಪ್ರೇಮದಿ ರಾಮಚಂದ್ರನೆ ನಿನಗೆ ಇಷ್ಟ ಸರ್ವಜೀವರುರಾಮನಲ್ಲಿ ಮಾಳ್ಪ ಭಕ್ತಿಗೆ ಅಧಿಕನಿತ್ಯಪ್ರವೃದ್ಧವಾದಪರಮಭಕ್ತಿವೊಂದನ್ನೇ ಈವುದು ಎಂದು ನೀ ಕೇಳೆ ವಿನಯದಿಪ್ರೇಮದಿಂದ ತಥಾಸ್ತು ಎನ್ನುತ ಬ್ರಹ್ಮಪದ ಸಹಭೋಗ ಸಾಂಪ್ರತಸಮಸ್ತವಾದ ಸೌಭಾಗ್ಯ ಸಮೃದ್ಧಿಯ ಇತ್ತು ಒಲಿದನು ಅಜನಪಿತ ಶ್ರೀರಮೆಯ ಅರಸ ಪ್ರಸನ್ನ ಶ್ರೀನಿವಾಸ ಭೂಮ ಏಕಾತ್ಮ ರಾಮಪ್ರಮೋದಿ ವಿಭುವು _ ಶರಣು ಪಾಲಿಸೋ ಹನುಮ 3
--------------
ಪ್ರಸನ್ನ ಶ್ರೀನಿವಾಸದಾಸರು
ಸ್ನಾನ ಮಾಡಿರಯ್ಯ ಜಾÕನತೀರ್ಥದಲಿನಾನು ನೀನೆಂಬಹಂಕಾರವ ಬಿಟ್ಟು ಪ.ತನ್ನೊಳು ತಾನೆ ತಿಳಿದರೊಂದು ಸ್ನಾನಅನ್ಯಾಯಗಾರಿ ಕಳೆದರೊಂದು ಸ್ನಾನಅನ್ಯಾಯವಾಡದಿದ್ದರೊಂದು ಸ್ನಾನಚೆನ್ನಾಗಿ ಹರಿಯ ನೆನೆದರೊಂದು ಸ್ನಾನ 1ಪರಸತಿಯ ಬಯಸದಿದ್ದರೆ ಒಂದು ಸ್ನಾನಪರನಿಂದೆ ಮಾಡದಿದ್ದರೆ ಒಂದು ಸ್ನಾನಪರದ್ರವ್ಯ ಅಪಹರಿಸದಿರೆ ಒಂದು ಸ್ನಾನಪರತತ್ವತಿಳಿದುಕೊಂಡರೆ ಒಂದು ಸ್ನಾನ2ತಂದೆತಾಯಿಗಳ ಸೇವೆ ಒಂದು ಸ್ನಾನಮುಂದಿನಮಾರ್ಗ ತಿಳಿದರೊಂದು ಸ್ನಾನಬಂಧನವನು ಬಿಡಿಸಿದರೊಂದು ಸ್ನಾನಸಂಧಿಸಿ ತಿಳಿದುಕೊಂಡರೆ ಸೇತು ಸ್ನಾನ 3ಅತ್ತೆ ಮಾವನ ಸೇವೆಯೊಂದು ಸ್ನಾನಭರ್ತನ ಮಾತು ಕೇಳುವುದೊಂದು ಸ್ನಾನಕ್ಷೇತ್ರಪಾತ್ರರ ಸಹವಾಸ ಒಂದು ಸ್ನಾನಪಾರ್ಥಸಾರಥಿ ನಿಮ್ಮ ಧ್ಯಾನವೆ ಧ್ಯಾನ 4ವೇದ ಶಾಸ್ತ್ರಗಳನೋದಿದರೊಂದು ಸ್ನಾನಭೇದಾಭೇದ ತಿಳಿದರೊಂದು ಸ್ನಾನಸಾಧು ಸಜ್ಜನರ ಸಂಗ ಒಂದು ಸ್ನಾನಪುರಂದರವಿಠಲನ ಧ್ಯಾನವೆ ಸ್ನಾನ 5
--------------
ಪುರಂದರದಾಸರು
ಸ್ಮರಿಸುವೆ ನಾ ನಿಮ್ಮ ಚರಣಕಮಲಗುರುವಿಜಯರಾಯಜನ್ಮಾರಭ್ಯವು ನಿಮ್ಮ ಗುಣಕರ್ಮಗಳೆಲ್ಲ ವಿಜಯರಾಯದಿವಿಜರ ವೇಷದಿಂದವನಿಯೊಳುದಿಸಿದ್ಯೊ ವಿಜಯರಾಯಭಾಗವತಧರ್ಮವಹಿಸಿ ತ್ರಿರಾವರ್ತಿ ವಿಜಯರಾಯಕಂಚಿಕಾಳ್ಹಸ್ತಿ ಶ್ರೀರಂಗ ಸೇತುಯಾತ್ರೆ ವಿಜಯರಾಯಮರಿಯಾದೆಯಿಲ್ಲದೆ ವರಗಿರಿಯಾತ್ರೆಯ ವಿಜಯರಾಯಮಹಿಯಲ್ಲಿ ತಿರುಗಿ ಸರ್ವಕ್ಷೇತ್ರದಿ ವಿಜಯರಾಯಗುರೂಪದೇಶಕನಾಗಿ ವ್ಯಾಸಕಾಶಿಯಲ್ಲಿದ್ಯೊ ವಿಜಯರಾಯಸ್ವಚ್ಛವಾಗಿ ಗಂಗಾತೀರ ವಾಸಮಾಡಿ ವಿಜಯರಾಯತುಂಗಾತೀರದಿ ಕುಳಿತು ಗಂಗೆ ಪೆಚ್ಚಿಸಿದಿ ವಿಜಯರಾಯಮಧ್ವಮತದಸಾರಕವನದಿ ರಚಿಸಿದ್ಯೊ ವಿಜಯರಾಯಶುದ್ಧ ತತ್ವಸಾರ ಸುಳಾದಿ ಪದಮಾಡಿ ವಿಜಯರಾಯಸದಾಚಾರಸಂಪತ್ತು ಮಧುಕರವೃತ್ತಿಯು ವಿಜಯರಾಯಭಕ್ತರ ಅಪಮ್ಯತ್ಯುಬಿಡಿಸಿ ಆಯುನಿತ್ತೆ ವಿಜಯರಾಯನಿತ್ಯಾನ್ನ ಪುತ್ರೋತ್ಸವಗಳು ಭೃತ್ಯರಿಗೆ ವಿಜಯರಾಯಭಕ್ತಜನರಿಗೆ ತತ್ವೋಪದೇಶವ ಮಾಡಿ ವಿಜಯರಾಯಎಲ್ಲರಲಿ ಸಿರಿನಲ್ಲನ ಅಂಶವ ವಿಜಯರಾಯಬಲ್ಲಿದನೀನೊಂದುರೂಪದಿ ಎನ್ನಲ್ಲಿ ವಿಜಯರಾಯನಿಮ್ಮ ಪುಣ್ಯದ ಶೇಷವಿನ್ನು ಉಂಬೆವೊ ನಾವು ವಿಜಯರಾಯಎನ್ನಿಂದ ಆಗೋ ಸಾಧನವೆಲ್ಲ ನಿನ್ನದೊ ವಿಜಯರಾಯಈಗ ಈ ಯುಗದಿ ಸಾಧನವೆಂಬುದು ಕಾಣೆ ವಿಜಯರಾಯಗುರುನಿನ್ನ ಕರುಣಕವಚತೊಟ್ಟ ಭಕುತರ್ಗೆ ವಿಜಯರಾಯ
--------------
ಗೋಪಾಲದಾಸರು
ಸ್ವಾಮಿ ಮುಖ್ಯಪ್ರಾಣ-ನೀ-ಮಲೆವರ ಗಂಟಲಗಾಣ ಪಸಕಲ ವಿದ್ಯಾ ಪ್ರವೀಣ-ನೀ-ಹಿಡಿದೆಯೋ ರಾಮರಚರಣಅ.ಪಏಕಾದಶೀಯ ರುದ್ರ-ನೀ-ಹಿಡಿದೆಯೊ ರಾಮರ ಮುದ್ರಾಸೇತುವೆಗಟ್ಟಿ ಸಮುದ್ರ-ನೀ-ಹಾರಿದೆಯೋ ಬಲಭದ್ರ 1ಸಂಜೀವಿನಿ ಪರ್ವತವನ್ನು-ಅಂಜದೆ ತಂದೆಯೊ ನೀನು |ಅಂಜನೆತನುಸಂಭವನು-ನಿನ್ನ-ಬೇಡಿಕೊಂಬೆನೋ ನಾನು2ವೈಕುಂಠಸ್ಥಳದಿಂದ ಬಂದು-ಪಂಪಾಕ್ಷೇತ್ರದಿನಿಂದು|ಯಂತ್ರೋದ್ಧಾರಕನೆಂದು-ಪುರಂದರ ವಿಠಲನೆ ಸಲಹೆಂದು 3
--------------
ಪುರಂದರದಾಸರು