ಒಟ್ಟು 170 ಕಡೆಗಳಲ್ಲಿ , 53 ದಾಸರು , 157 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಹಿಗ್ಗಿದಳು ನಂದನ ಸತಿ ಮುಗ್ಧೆ ತನ್ನಯ ಸುತನ ಮುದ್ದು ಮುಖವ ನೋಡಿ ಅ.ಪ ಪಾಲು ಬೆಣ್ಣೆ ಕಳ್ಳ ತಾಳು ಕಟ್ಟುವೆ ನಿನ್ನ ಕಾಲುಗಳನೆಂದು ಕರಗಳಲಿ ಪಿಡಿದು ನೀಲಮೇಘಶ್ಯಾಮ ಶ್ರೀಲಕುಮಿಯರಸನನು ಬಾಲನೆಂದರಿತು ಆಲಿಂಗನದಿ ಮೈ ಮರೆತು1 ಅಂಬುಜೋದ್ಭವನಯ್ಯ ಅಂಬೆಗಾಲಿಡುವುದನು ನಂಬಬಹುದೇ ಮೋಹಜಾಲವಿರಲು ಸಂಭ್ರಮದಿ ಸುತನನ್ನು ಚುಂಬಿಸುತ ರಭಸದಲಿ ಮೋದ ಕಂಬನಿಯ ಸುರಿಸುತ್ತ 2 ಓರೆಗಣ್ಣಿನ ನೋಟ ನಾರಿಯರ ಪೇಚಾಟ ಮೂರು ಲೋಕಕೆ ಹರ್ಷಕರ ಮಂದಹಾಸ ಸೇರಿಸಿದ ಮುಕ್ತಗಳ ಮೀರಿ ಪೊಳೆಯುವ ದಂತ ಚಾರುಮುಖಿ ಸುತನ ಮನಸಾರ ದರುಶನದಿಂದ 3 ಭೃಂಗಗಳ ಧಿಕ್ಕರಿಪ ಮಂಗುರುಳು ಮಸ್ತಕದಿ ರಂಗಿನಾ ಕಸ್ತೂರಿತಿಲಕ ಪಣೆಯಲ್ಲಿ ಸಿಂಧು ಶ್ರೀರಂಗನ್ನ ನೋಡುತಲಿ ಅಂಗನಾಮಣಿ ಅಂತರಂಗ ಪ್ರೇಮದ ಭರದಿ 4 ತನ್ನ ಉದರದಿ ನಳಿÀನಜಾಂಡವನೆ ಪೊತ್ತಿರುವ ಉನ್ನತೋನ್ನತ ಸುಗುಣ ಜ್ಞಾನಮಯನ ತನ್ನ ಮಗನೆಂದರಿತು ಸ್ತನ್ಯಪಾನದಿ ಸುಪ್ರ ಸನ್ನಮುಖಿ ಹರುಷ ಪುಳಕಿತಳಾಗಿ ಹೆಮ್ಮೆಯಲಿ 5
--------------
ವಿದ್ಯಾಪ್ರಸನ್ನತೀರ್ಥರು
ಹಿಡಿ ಹಿಡಿರಿಂದು ಸಿಕ್ಕಿದ ಕಳ್ಳನಾ ಬಿಡಬ್ಯಾಡಿರೆಂದಿಗೆ ಹಜ್ಜೆನೆಲಿಗೆ ತಾರನಾ | ಮೈಯ್ಯ ದೋರನಾ ಪ ಹೃದಯದೋಳಗಿನಾ ಗಂಟವ ಬಿಡುತಾ ಮುದದಿಕುಳ್ಳಿರಲಲ್ಲಿ ಬಂದು ನೋಡುತಾ ಇದರ ಚಿತ್ತ ಪೇಠಾರಿಗೆ ಕೈಯ್ಯಾನೀಡುತಾ ಒದಗಿಕದ್ದೊಯ್ದತಿರಗದೆ ಧನಿ ಮಾಡುತಾಧನಿ ಮಾಡುತಾ 1 ಖೂನ ತನ್ನಯ ಬಲ್ಲಾಸಾಧುಜನವಾ ಕಾಣುತಾರ್ಜಿತ ಶೆಳೆದು ಕೊಂಡು ಧನವಾ ಏನ ಹೇಳಲಿ ಬಿಡನು ಅವರ ಪ್ರಾಣವಾ ವನವಾಕೊಂಡು ಗೋಧನವಾ 2 ಅಡದಾರಿಯಾ ನಡದು ಹೋಗಿ ಬಿದ್ದನಾ ನಡುವೆ ತೊಳಲಿಸುವನು ವಿರುದ್ಧನಾ ಹಿಡಿ ಗುರು ಮಹಿಪತಿ ಪ್ರಭು ಪ್ರಸಿದ್ಧನಾ ಬಿಡದೆ ಭಂಡಾರಕಾಯಲಿಡುವ ಪ್ರಬುದ್ಧನಾ ವಾಜಿಲಿದ್ದನಾ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಇಂದಿನ ದಿನ ಸುದಿನವಾಯಿತು ಪಇಂದಿರೇಶ ಮೂಲರಾಮಚಂದ್ರನ ಪದಕಮಲಗಳ-ಸು- |ರೇಂದ್ರತೀರ್ಥಮುನಿಯು ತೋರಲು ಅ.ಪಈತನ ಪದಕಮಲಗಳವಿಧಾತ ತನ್ನ ಭವನದೊಳಗೆ |ಸೀತೆಯ ಸಹ ಪೂಜಿಸಿ ಇಕ್ಷ್ವಾಕು ನೃಪಗಿತ್ತನು ||ಆತನನ್ವಯ ನೃಪರೆಲ್ಲರು ಪ್ರೀತಿಯಿಂದಲಿ ಭಜಿಸಿ ರಘು- |ನಾಥ ವೇದಗರ್ಭಗಿತ್ತ ಮೂರ್ತಿಯ ಪದಕಮಲ ಕಂಡೆ 1ಗಜಪತಿ ಭಾಂಡಾರದಲ್ಲಿ ಅಜಕರತಮಲಾರ್ಚಿತ ಭೂ - |ಮಿಜೆ ಸಹಿತದಿ ರಾಮನಿರಲು ನಿಜಜಾÕನದಿ ತಿಳಿದು ಬೇಗ ||ದ್ವಿಜವರಗುರುವೆನಿಸುತಿಪ್ಪ ಸುಜನವಂತ ನರಹರಿಮುನಿ |ರಜನಿಯಲ್ಲಿ ತಂದ ಸುಲೋಹಜಮಯಅಂದವುಳ್ಳ ಮೂಲರಾಮಚಂದ್ರನ ಪದಕಮಲಗಳನು |ವೃಂದಾರಕವೃಂದ ವಂದ್ಯನೆಂದೆನಿಸುವ ಪವನನಾ ||ನಂದನಗುರು ಶ್ರೀಮದಾನಂದ ತೀರ್ಥರರ್ಚಿಸಿ ನಿಜ |ಅಂದದನ್ವಯದೊಳಿಟ್ಟಪುರಂದರ ವಿಠಲನ ಕಂಡು3
--------------
ಪುರಂದರದಾಸರು
ಇಂದ್ರಸೇನ ನಾಥ ಹೋ, ತ್ರೈಲೋಕ್ಯ ವಿಖ್ಯಾತ ಹೋ |ಸವ್ಯಸಾಚಿ ಪ್ರೀತ ಹೋಮಧ್ಯಗೇಹಜಾತ ಹೋ ಪತರಣಿಬಿಂಬಕೆ ಜಿಗಿದೆ ಗದೆಯನು ವಗೆದೆಅಸುರಗ ಕರವನು ಮುಗಿದೆ |ಹರಿಗೆ ವಾರ್ತೆಯ ತಂದೆ ಜರಿಜನ ಕೊಂದೆನೀಂ ಬದರಿಯೊಳ್ನಿಂದೆ ಖಳಕುಲ |ತರಿದೆ,ವಜ್ರಶರೀರ, ಧರಣಿಯಭಾರವಿಳುಹಿದುದಾರಮತಿ, ಕಪಿ |ವರನೊಳತಿ ಕೃಪೆ ಮಾಡಿದೆ ದಾನವ |ಬೇಡಿದೆ ಸುಮತಿಯ ನೀಡಿದೆ 1ದಂಡ ಮೇಖಲ ಧಾರ ಕುಜನಕುಠಾರ|ಬ್ರಹ್ಮ ಶರೀರ ಜೈಸಿದೆಮಂಡೋದರಿ ವಲ್ಲಭನ ಚರಿಸಿದೆಯೋವನ|ತಂದೆ ಮಾಧವನ ಉಡುಪಿಲಿಚಂಡವಿಕ್ರಮರಾಮ ಸೇವಕ ಭೀಮ |ಸದಾಚಾರಧಾಮಯತಿ ಮೇ |ಷಾಂಡನ ಮೊರೆ ಕೇಳ್ದೆ ಕೀಚಕನನು ಸೀಳ್ದೆ ದ್ವಿಜಕುಲವಾಳ್ದೆ 2ಲಕುಮಿಗುಂಗುರವ ಕೊಟ್ಟಿ ರಣಕತಿ ಗಟ್ಟಿಶಾಟಿಯನುಟ್ಟಿ ಶರಧಿಯ ತ |ವಕದಿ ಕ್ಷಣದೊಳು ಹಾರಿದೆ ಉಗ್ರವ ತೋರಿದೆಜ್ಞಾನವ ಬೀರಿದೆ ಲಂಕೆಯ |ಸಕಲ ಸೌಖ್ಯವ ಕೆಡಿಸಿ ಪುಷ್ಪವ ಮುಡಿಸಿಐಕ್ಯವ ಬಿಡಿಸಿ, ವಟುವಪು |ಮುಕುತಿಪತಿಪ್ರಾಣೇಶ ವಿಠಲನದಾಸ ಸಲಹೋ ನಿರ್ದೋಷ3
--------------
ಪ್ರಾಣೇಶದಾಸರು
ಜಯ ಜಯತು ಹನುಮಂತ ಪವಿತ ಸಿಖ ಸಹಜಾತಜಯತು ಕಪಿರಾಜ ಯುವರಾಜ ಯತಿರಾಜ ಜಯತು ಪ.ಸುರರಿಗುತ್ತಮ ಜಗದಾಭರಣ ಶಿರೋಮಣಿ ಜಯತುಪರಮಅದ್ಭುತಚರಿತ ಸುವಟು ಜಯತುಧರಜೆಶೋಧಕ ನಿಶಾಚರಪುರದಹಕ ಜಯತುಜಯತು ವೈರಾಗಿ ಮಹಭೋಗಿ ಶುಭಯೋಗಿ ಜಯತು 1ಸುರರಿಪುಮಥÀನ ರಾಮಕಾರ್ಯಧುರಂಧರ ಜಯತುಚಿರಪ್ಲವಗ ಭವರೋಗಭೇಷಜ ಜಯತುಕರಿರಕರ್ಣ ದಶಮುಖಾಂಗ ಗಿರಿವರಕುಲಿಶ ಜಯತುಜಯತು ಅಕ್ಷಹರ್ತಾ ಕ್ರತುಕರ್ತಸುಖತೀರ್ಥಜಯತು2ತ್ರಿಕೋಟಿ ಪವನಾಖ್ಯರೂಪ ಪ್ರಕಟಾಪ್ರಕಟ ಜಯತುಅಕಳಂಕಾಮಿತರೂಪ ಮುಖ್ಯೇಶ ಜಯತುಶ್ರೀಕರ ಪ್ರಸನ್ವೆಂಕಟ ರಘುವೀರಾನುಮತ ಮತ ಜಯತುಜಯತು ಪರಸಿದ್ಧ ಬಕಮರ್ದ ಗುರುಮಧ್ವ ಜಯತು 3
--------------
ಪ್ರಸನ್ನವೆಂಕಟದಾಸರು
ತುಂಬಿಕೊಂಡಿರುತಿಹನೊಬ್ಬ ಜಗವಿಂಬಿಲ್ಲದೆಲ್ಲವ ಸಕಲವೆಲ್ಲವತುಂಬಿಪಆರರೊಳಗೆತುಂಬಿಅತ್ತತ್ತಲುತುಂಬಿಮೂರು ಠಾವಲಿತುಂಬಿಮೂರುಮನೆತುಂಬಿಬೇರೆ ಮೇಲಕೆತುಂಬಿಬೆಳಗಿನೊಳಗೆತುಂಬಿಸಾರಾಮೃತದಿತುಂಬಿಸಾಕ್ಷಾತ್ಕಾರದಲಿತುಂಬಿ1ಮನಸಿನೊಳಗೆತುಂಬಿಮನವರ್ತನದಿತುಂಬಿತನುವಿನಲ್ಲಿಯೆತುಂಬಿಸರ್ವಾಯವತುಂಬಿತನುತ್ರಯದಲಿತುಂಬಿತನುವಿನಲ್ಲಿಯೆತುಂಬಿಘನಸುಖದಿತುಂಬಿ2ಇಳೆಯ ಒಳಗೆತುಂಬಿಇಹಜಂಗಮದಿತುಂಬಿಬಲು ಸ್ಥಾವರದಿತುಂಬಿಬಯಲಿನಲ್ಲಿಯೆತುಂಬಿಕೆಳಗೆ ನಡುವೆತುಂಬಿಕೇವಲ ಕೊನೆಯತುಂಬಿಚಲಿಸದಂದದಿತುಂಬಿಚಿದಾನಂದನೇತುಂಬಿ3
--------------
ಚಿದಾನಂದ ಅವಧೂತರು
ತೋರುವದುಘನತೋರದಡಗದುಸಹಜವಾದುದೆಪxmಟ veಡಿsioಟಿ='1.0' eಟಿಛಿoಜiಟಿg='%SಔUP-ಇಓಅಔಆIಓಉ%'ಶ್ರೋತೃವಕ್ತ್ರವೆಂಬ ಬರಣಿಗಳು |ಸೂತ್ರಸುಮನದಿ ಮಂಥನ ಮಾಡಲು1ಸಂತ ಸಾಧು ಮಹಂತಸಿದ್ಧ ವೇ-ದಾಂತ ಚರ್ಚದಿ ಭಕುತಿ ನೋಡಲು2ಆದಿನಾಥ ಪರಂಪರೆ ಶಂಕರಬೋಧಸದ್ಗುರು ಸತ್ಸೀಲದಲ್ಲಿ3
--------------
ಜಕ್ಕಪ್ಪಯ್ಯನವರು
ನಂಬು ನಂಬೆಲೊ ಮನುಜಾ ಹರಿಚರಣಾಂಬುಜಯುಗಳ ಸಹಜನಂಬಿದರೊಲಿವ ದಯಾಂಬುಧಿ ನಿಶ್ಚಯ ಪ.ತಂದೆಯ ನುಡಿಗೇಳದೆ ತನ್ನ ಕೊಲ್ಲಬಂದ ದುರಿತಕಂಜದೆಇಂದಿರೇಶನೆ ಗತಿಯೆಂದೇಕ ನಿಷ್ಠೆಯಹೊಂದಿದಸುರಜಗೆ ಬಂದ ನೃಹರಿಯ 1ಅಣ್ಣನಿಲ್ಲದೆ ರಾಜ್ಯವನೊಲ್ಲೆನೆಂದುಣ್ಣದೆ ಭರತನಿರೆಚಿನ್ಮಯ ಹನುಮನ ಮುಂದಟ್ಟಿ ಬಂದ ರಾಮೆನ್ನಿಸಿ ಭರತಗೆ ತನ್ನಿತ್ತ ರಾಮನ 2ದ್ರೌಪದಿಯಳ ವಸನವ ಸಭೆಯೊಳುಪಾಪಿ ತಾ ಸೆಳೆಯುತಿರೆಶ್ರೀ ಪ್ರಸನ್ವೆಂಕಟ ಭೂಪತಿ ಸಲಹೆನ್ನೆಆಪತ್ತಿಗಾದ ಯದುಪತಿ ಕೃಷ್ಣನ್ನ 3
--------------
ಪ್ರಸನ್ನವೆಂಕಟದಾಸರು
ನಂಬೊ ನಂಬೊ ಹರಿಪದವ ನಂಬೊ ಪ.ಮಾತುಳನಚಂದನಪ್ರೀತಿಲಿ ಕೊಟ್ಟ ಮನಸೋತವಳಂಗಪುನೀತಮಾಡಿದನಂಘ್ರಿಯ1ಅಜಾಮಿಳ ಸಹಜ ತನುಜನ ಕರೆಯಲಾಗಿನಿಜಭಟರಟ್ಟಿದ ಸುಜನೇಶನಂಘ್ರಿಯ 2ನಂಬಿದರವಗುಣಕುಂದನೋಡದೆಹೊರೆವತಂದೆ ಪ್ರಸನ್ನವೆಂಕಟೇಶನಂಘ್ರಿಯ 3
--------------
ಪ್ರಸನ್ನವೆಂಕಟದಾಸರು
ಪಾಲಿಸು ಪರಮಪಾವನ ಪದ್ಮಾವತೀರಮಣಪಾಲಿಸು ಪಯವಾರಿಧಿವಾಸ ಪದ್ಮಗದಾಧರ ಕೌಸ್ತುಭಭೂಷ ಪ.ನೀಲನಿಭಾಂಗನಿಖಿಲಸುರ ಮುನಿಜನಜಾಲಪಾಲಪಾಹಿಪಾರ್ಥಸಾರಥಿ ಅ.ಪ.ಮದನಜನಕ ಮಹಿಮಾಂಬುಧಿ ನಿನ್ನಪದಕಮಲವ ನಾ ಸ್ಮರಿಸದೆ ಎನ್ನಮದಮುಖತನವನು ಒದರುವದೆನ್ನಪದುಮನಾಭ ರಕ್ಷಿಸು ನೀ ಮುನ್ನಸದಯಾಂಬುಧಿ ನೀನಲ್ಲವೆ ನಿನ್ನೊಳು ಕ್ರೋಧಉದುಭವಿಸುವುದು ನಿಜವೇ ಭಕ್ತವಾತ್ಸಲ್ಯಇದಕೆ ನೀ ಊನ ತರುವೆ ಸಾಕು ಈ ಮರವೆಒದಗಿಸು ಸರ್ವಮನಸಿನೊಳ್ ಪುದು-ಗಿದಿಷ್ಟಾರ್ಥಗಳ ನೀ ದಯವಿಡುತ ಇಹಪರಗತಿಗಾ-ಸ್ಪದವಾದ ಸಂಪದವ ನೀ ಕೊಡು ತ್ವರಿತ ತ್ರೈಲೋಕ್ಯದಾತಮಧುಸೂದನ ಮಂದರಗಿರಿಧರ ನೀ-ರದ ನಿಭ ನಿರ್ಮಲ ನಿಜರೂಪಗುಣಸದನಾಚ್ಯುತ ರವಿಕುಲದೀಪ ನಿರ-ವಧಿ ಆನಂದ ರಸಾಲಾಪಬುಧಜನೋಪಲಾಲಿತ ಲೀಲಾಯತಉದಧಿಶಾಯಿ ಮಾನದ ಮಧುಸೂದನ 1ನಾಮಸ್ಮರಣೆಯೆ ನರಕೋದ್ಧಾರನೇಮವಿಲ್ಲೆಂಬುದು ನಿನ್ನ ವಿಚಾರಸಾಮಾರ್ಥದ ಗುಣಕೆಲ್ಲನುಸಾರಪಾಮರಮನಕಿದು ಈ ಗುಣಭಾರಶ್ರೀಮನೋಹರನೆ ಲಾಲಿಸೊ ಚಾತುರ್ಥಿಕ ಜ್ವರದಿಭ್ರಾಮಕನಾದೆ ಪಾಲಿಸೊ ದಾರಿದ್ರ್ಯವೆಂಬಸೀಮೆಯಿಂದಲಿ ದಾಟಿಸೊ ಸುಕೀರ್ತಿಯ ಮೆರೆಸೊಸಾಮಗಾನಲೋಲಸುಜನಸ್ತೋಮಭಾಗ್ಯನಿಧಿಯೆ ಎನ್ನ ಮನದ ಅಜ್ಞಾನವೆಂಬತಾಮಸಪರಿಹರಿಸಿ ಜ್ಞಾನೋದಯದ ಸದಾನಂದಈ ಮಹಾಭಾಗ್ಯಗಳೆಲ್ಲ ನೀನಿತ್ತಿರೆನೀ ಮಾಡುವುದೆಲ್ಲವು ಸಹಜಗುಣಧಾಮಾಶ್ರಿತ ನಿರ್ಜರಭೂಜಸುಜನಸ್ತೋಮಾರ್ಕಾಮಿತ ವಿಭ್ರಾಜಶ್ರೀಮಚ್ಛೇಷಾಚಲ ಮಂದಿರ ಸು-ತ್ರಾಮಾರ್ಚಿತ ಸದ್ರಾಮ ಶ್ರೀರಾಮ 2ಉಡುವ ಸೀರೆಯ ಸೆಳೆಯಲು ದ್ರುಪಜೆಯಕೊಡಲಿಲ್ಲವೆ ಬಹುವಸನ ಸಂತತಿಯಹಿಡಿಯವಲಕ್ಕಿಗೆ ದ್ವಾರಕ ಪತಿಯಕಡು ಸರಾಗವಾಯ್ತಿಂದಿನ ಪರಿಯಬಿಡುತ ಬೆಟ್ಟದ ಮಧ್ಯದಿ ನಿಂತರೆ ನಿನ್ನಬಿಡುವರ್ಯಾರಯ್ಯ ಶೀಘ್ರದಿ ಮನಸಿನಿಷ್ಟಕೊಡು ದಯವಿಟ್ಟು ಮುದದಿ ಕರುಣಾವುದಧಿಕಡುಲೋಭಿತನ ಬಿಡು ಮಹರಾಯಅಡಿಗಳಿಗೆರಗುವೆನು ಜಗದಯ್ಯ ಪೂರ್ವಾರ್ಜಿತಕರ್ಮವಡಂಬಡಿಸಿ ರಕ್ಷಿಸು ದಮ್ಮಯ್ಯ ಪಂಢರಿರಾಯಒಡೆಯ ಶ್ರೀ ಲಕ್ಷ್ಮೀನಾರಾಯಣನಡುನೀರೊಳು ಕೈಬಿಡುವೆಯ ನೀತೊಡಕೊಂಡ ಬಿರುದೇನಯ್ಯ ಈಕಡು ಕೃಪಣತನ ಸಾಕಯ್ಯಪೊಡವಿಯೊಳಗೆ ಪಡುತಿರುಪತಿಯೆಂಬದೃಢಕಾರ್ಕಳದೊಡೆಯ ಶ್ರೀನಿವಾಸನೆ 3
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ಪಾಲಿಸು ಪರಮೇಶಾ ಪಾಪವಿನಾಶಾಪಾಲಿಸು ಪಾರ್ವತೀಶಾಫಾಲಲೋಚನಫಣಿಭೂಷಣ ನತಜನಪಾಲನೆ ಪಾಪವಿಹಾರಣ ಕಾರಣ ಪನಿತ್ಯನಿರ್ಮಲ ಚಿತ್ತನೀಕ್ಷಿಸೋ ಎನ್ನನಿತ್ಯತೃಪ್ತನೆ ಖ್ಯಾತ ನಿತ್ಯನಂದನೆನೀಲಕಂಧರಶಶಿಧರನಿರ್ಮಲರಜತಾದ್ರಿ ನಿಲಯನೆ ವಿಲಯನೆ 1ಅಂಬಾ ವರದೇವ ಜಯ ಜಯವಿಶ್ವಕು-ಟುಂಬಿಲ ಸದ್ಭಾವಲಂಬೋದರ ಗುಹಜನಕ ಸದಾಶಿವನಂಬಿದೆ ಸಲಹೊ ಪ್ರಸೀತ ಸತ್ಪಾತ್ರ 2ಆಗಮಶ್ರುತಿಸಾರ ಭಕ್ತರಭವರೋಗಶೋಕವಿದೂರಯೋಗಿಗಳ ಹೃದಯ ಸಂಚಾರನೆ ಭವಬಂಧನೀಗಿಸು ಗೋವಿಂದ ದಾಸನ ಪೋಷನೆ 3
--------------
ಗೋವಿಂದದಾಸ
ಬಗಳೆ ತಾನಾದವಗೆ ಏನು ಚಿಂತೆನಿಗಳಬಂಧನದ ಮತ್ತಗಜದಂತೆಪನಿದ್ರೆಯೊಳಗಣ ನಿದ್ರೆ ನಿತ್ಯದಿ ತಾಳ್ದಿಳಿದುನಿದ್ರೆ ದೃಷ್ಟಿಯೊಳಗೆ ದೃಷ್ಟಿಯಿಟ್ಟುನಿದ್ರೆಯನು ಸೋಂಕದಲೆನಿಂದುನಿದ್ರೆಯ ಸುಖವನಿದ್ರೆಯೊಳಗನುಭವಿಸಿನಿತ್ಯತಾನಾದ1ಕುಣಿಯುತಿಹ ಚಿತ್ಕಳೆಯ ಮನಕೆ ತಾ ತೋರುತಲಿಘಣ ಘಣಿಪ ಘಂಟೆ ನಾದವನಾಲಿಸಿಎಣಿಕೆಯಿಲ್ಲದಸೂರ್ಯಚಂದ್ರ ಬೆಳಗನೆ ಬೆಳಗಿಮನ ಸುಖಿಸಿ ಮನವಳಿದು ಮಹಿಮ ತಾನಾದ2ನಿಂದ ನಿಜದಲಿ ಬೆರತು ಬಾಹ್ಯಾಂತರವ ಮರೆತುಹೊಂದದಲೆ ದುರ್ಗುಣದ ವಾಸನೆಗಳಾಬಂಧನಂಗಳ ಕಳೆದು ಬವಣೆಗಳ ತಾನೀಗಿಸುಂದರಾತ್ಮನೆ ಆಗಿಶೂನ್ಯತಾನಾದ3ಎಲ್ಲೆಲ್ಲಿ ತಾನುಂಡು ಎಲ್ಲೆಲ್ಲಿ ತಾ ಮಲಗಿಎಲ್ಲ ಸ್ಥಳದೊಳು ತಾನು ಚರಿಸಿಎಲ್ಲ ಜನ ಬೆರಗಾಗೆ ತನ್ನ ದರುಶನ ನೀಡಿಸೊಲ್ಲುಡುಗಿ ಸಾಕ್ಷಾತ್ತು ಸಹಜ ತಾನಾದ4ತೂಗಾಡುತ ಕಣ್ಣ ಮುಚ್ಚಿ ತೆರೆಯುತ್ತಆಗಜರೆಜನನ ಮರಣಂಗಳಳಿದುಯೋಗಿಚಿದಾನಂದಗುರುತಾನಾದಬಗಳಾಂಬ ತಾನಾಗಿ ಪೂರ್ಣಬ್ರಹ್ಮ ತಾನಾದ5
--------------
ಚಿದಾನಂದ ಅವಧೂತರು
ಬಿನ್ನಹಕೆ ಬಾಯಿಲ್ಲ ಎನಗೆ ಅದರಿಂದ |ನಿನ್ನ ಮರೆದೆನೊ ಸ್ವಾಮಿ ಎನ್ನ ಕಾಯಯ್ಯ ಪಅನ್ನಮದ ಅರ್ಥಮದಅಖಿಳವೈಭವದ ಮದ |ಮುನ್ನ ಪ್ರಾಯದ ಮದವುರೂಪಮದವು ||ತನ್ನ ಸತ್ವದ ಮದ ಧರಿತ್ರಿ ವಶವಾದ ಮದ |ಇನ್ನು ಎನಗಿದಿರಿಲ್ಲವೆಂಬ ಮದದಿ 1ಶಶಿವದನೆಯರ ಮೋಹಜನನಿ- ಜನಕರ ಮೋಹ |ರಸಿಕ ಭ್ರಾಂತಿಯ ಮೋಹ ರಾಜಮನ್ನಣೆ ಮೋಹ ||ಪಶು ಮೋಹ ಶಿಶುಮೋಹ ಬಂಧುವರ್ಗದ ಮೋಹ |ಹಸನುಳ್ಳ ವಸ್ತ್ರ ಆಭರಣಗಳ ಮದದಿ 2ಇಷ್ಟ ದೊರಕಿದರೆ ಮತ್ತಿಷ್ಟು ಬೇಕೆಂಬಾಸೆ |ಅಷ್ಟು ದೊರಕಿದರೆ ಮತ್ತಷ್ಟರಾಸೆ ||ಕಷ್ಟ ಜೀವನದಾಸೆಕಾಣಾಚಿಕೊಂಬಾಸೆನಷ್ಟ ಜೀವನ ಬಿಡಿಸೆಪುರಂದರವಿಠಲ3
--------------
ಪುರಂದರದಾಸರು
ಭಾವಿಸಮೀರಶ್ರೀ ವಾದಿರಾಜ ಸ್ವಾಮಿ ಸ್ತೋತ್ರ108ಪಾಲಿಸೋ ಗುರುರಾಜ ಪಾಲಿಸೋಪಾಲಿಸೋಗುರುವಾದಿರಾಜ || ಪೊಗಳ-ಲಳವೇ ನಿನ್‍ಮಹಿಮೆ ಮಹೋಜ || ಅಹಹಂಸಹಯಾಸ್ಯವರಾಹಕೇಶವ ಪ್ರಿಯಹಂಸಾರೂಡ್ಯನೆ ನಮೋ ಶರಣು ಮಾಂಪಾಹಿ ಪವಾಗ್ವಿಭವನು ಗುರುವರ್ಯ || ಮಹಾಯೋಗಿವರನು ಯತಿವರ್ಯ || ಶಿರಿವಾಗೀಶಕರಪದ್ಮದುದಯ || ನಾಗಿಜಗತ್ತಲ್ಲಿ ಮಾಡಿ ದಿಗ್ವಿಜಯ || ಅಹಜಗವನಳೆದಮೂರ್ತಿತರಿಸಿ ನಿಲ್ಲಿರಿಸಿಪೊಗಳೆ ಮುಕ್ಕಣ್ಣಾದಿ ಸುರರೇಬಲ್ಲರು 1ಜೀವೋತ್ತಮವಿದ್ಯುತ್ಪತಿಯ ||ನಿತ್ಯಅವೇಶಯುತ ವ್ಯಾಸರಾಯ || ಮುನಿಸರ್ವಾಭೌಮರ ಸೇರಿ ದಿವ್ಯ || ವಾದಮಾಧ್ವ ವೈದಿಕ ಬ್ರಹ್ಮವಿದ್ಯ || ಅಹಸುವಿಚಾರ ಪ್ರವಚನರತನಾಗಿ ಭುವಿತತ್ವವಶ್ರುತಿಯುಕ್ತಿ ಯುಕ್ತದಿ ಬೋಧಿಸಿದ2ಕೂರ್ಮತೀರ್ಥವು ಧವಳಗಂಗೆ || ಅದರನಿರ್ಮಲ ಲಲಿತತರಂಗ|| ಲಿಪ್ತಚರ್ಮ ತೊಳೆದು ಪಾಪಭಂಗ || ಮಾಡಿಧರ್ಮ ಆಚರಣೆ ನಿಸ್ಸಂಗ || ಅಹ ||ಬುದ್ದಿಯ ಒದಗಿಸಿಗುರುಸೇವಾರತಿಯಿತ್ತುಮಧ್ವಾಂತರ್ಗತ ಶ್ರೀಶನಲಿ ಭಕ್ತಿ ತೋರ್ಪುದು 3ಧವಳಗಂಗೆಗೆ ಪೂರ್ವಾದೇಶ || ದಲ್ಲಿದೇವದೇವೋತ್ತಮ ವ್ಯಾಸ || ದೇವಅವಲೋಕಿಸುತ ಇಹ ಪಂಚ || ವೃಂದಾವನಮಧ್ಯದಲ್ಲಿ ಪ್ರವೇಶ || ಅಹ ||ಮಾಡಿದಿರಿ ತ್ರಿವಿಕ್ರಮನನಂತ ಗುಣಕ್ರಿಯದೃಢಧ್ಯಾನೋಪಾಸನ ಮಾಳ್ಪಮಹಂತ4ಪೂರ್ಣೇಂದು ಪೋಲುವ ಮುಖವ ||ಕಮಲಕರ್ಣಿಕೆವರ್ಣದಿ ಪೊಳೆವ ||ಗಾತ್ರಪೂರ್ಣಲಕ್ಷಣ ಸಂಯುತವ || ದಿವ್ಯಫಣಿಯಲ್ಲಿ ಪುಂಡ್ರವು ಊಧ್ರ್ವ || ಅಹಪೀತ ಸುವರ್ಣ ಸುರೇಶ್ಮಿವಸನಉಟ್ಟಪದ್ಮಜ ಪಾದಾರ್ಹನೆ ನಿನ್ನ ಕಂಡೆ ನಾ ಶರಣು 5ಗುರುವಾದಿರಾಜ ನಿನ್ ದೂತ || ವೀರಭದ್ರನೋಪಮ ಬಲವಂತ || ಬಾಧೆವಿದ್ರಾವ ಕ್ಷಣದಿ ಮಾಳ್ಪಂತ || ಅತಿಶೂರ ಅದ್ಬುತ ಶಕ್ತಿಮಂತ || ಅಹ ||ನಾರಾಯಣಾಹ್ವಯ ಭೂತರಾಜನು ಎನ್ನಸಂರಕ್ಷಿಸುವ ಗುರುರಾಜ ನಿನ್ ದಯದಿ 6ಒಡೆಯ ಶ್ರೀಪತಿಹಯವದನ || ತಾನೇಕಡಲೆ ಮಡ್ಡಿಯನ್ನು ನಿನ್ನ || ಕೈಯಿಂದಉಂಡದ್ದು ಚತುರ್ದೇಶಭುವನ|| ಖ್ಯಾತಿಈಡಿಲ್ಲ ಸ್ಮರಿಸೆಪಾವನ್ನ|| ಅಹ ||ಕುಸುಮಜಪಿತ ಉಕ್ತಅಭಯಪ್ರಸನ್ನ ಶ್ರೀನಿವಾಸನ್ನೊಲಿಸೋ ಎನಗೆ 7 ಪ
--------------
ಪ್ರಸನ್ನ ಶ್ರೀನಿವಾಸದಾಸರು
ಮಂಗಲಾ ಸ್ವಸಿದ್ದ ಸಿದ್ಧಗೆ ಮಂಗಲಾ ಸ್ವಶುದ್ಧ ಶುದ್ಧಗೆ |ಮಂಗಲಾ ಸ್ವಬುದ್ಧ ಬುದ್ಧಗೆ ಸದ್ಗುರೇಂದ್ರನಿಗೆಜಯ ಮಂಗಲಾಪ<?xmಟ veಡಿsioಟಿ='1.0' eಟಿಛಿoಜiಟಿg='uಣಜಿ-8'?>ಆದಿಮಧ್ಯಾವಸಾನವಿಲ್ಲದೆ ನಾದ ಬಿಂದು ಕಳಾ ವಿಹೀನಗೆ |ವೇದ ವೇದಾಂತದ ವಿಚಾರವ ತಿಳಿದ ನಿಶ್ಚಲಗೆ |ಸಾಧು ಸಂತ ಮಹಾನುಭವಿಗಳು ಸಾಧಿಸುವವರಬೋಧ ಬೋಧಗೆ | ವಾದ ಮನಬುದ್ಧ್ಯಾದಿ ಉದಯಾದಿಕವ ಲಕ್ಷಿಪಗೆ1ವಿಶ್ವತೋ ಮುಖ ವಿಶ್ವನೇತ್ರನು ವಿಶ್ವಪಾಣಿಪಾದಶೀರಿಷ | ವಿಶ್ವದೊಳಹೊರಗೇಕ |ಮಯನಾ ಸೂತ್ರನು ಮಣಿಯಂತೆ | ವಿಶ್ವವನ್ನುದ್ಧರಿಸ-ಲೋಸುಗ ವಿಶ್ವದೊಳಗವತರಿಸಿ ಸಾಕ್ಷಾದೀಶ್ವರನುಕಲಿಯುಗದಿ ವಿಶ್ವಾಮಿತ್ರ ಗೋತ್ರದೊಳು2ಪರಮಪುರುಷನು ಸ್ವಪ್ರಕಾಶನು ನರಾಕೃತಿಗೆತಾ ಬಂದು ಶಿಂಧಾಪುರದಿ ಗುರುನಾಥನು-ದರದಿ ಕರಣಿಕನ್ವಯದಿ | ಸರಸ ಲೀಲಾ ನಟನೆನಟಿಸುತ ತೆರಳಿ ಭ್ರಮರಾಪುರಕೆ ಸದ್ಗುರುವರಕೃಪೆಯತಾ ಪಡೆದು ಜಗದೊಳು ಖ್ಯಾತಿ ಪಡೆದಂಗೆ3ಅಂತು ಇಂತೆನಬಾರದಾ ನಿಶ್ಚಿಂತ ರೂಪನು ಬಳಿಕ | ಸಂತಮಹಾಂತನು ಸ್ತುತಿಸಲಾತ್ಮ ಸುಬೋಧ ಬೋಧಿಯಲಿ ||ಅಂತರಂಗದ ಭ್ರಮೆಯನಳಿದೇಕಾಂತ ಭಾವಿಕ ಭಕ್ತರಿಗೆ ವಿ-ಶ್ರಾಂತವಾದ ಸ್ವ-ಪದದೊಳುದ್ಧರಿಸಿದಾತಂಗೆ4ಸ್ಪರ್ಶ ದರ್ಶನದಿಂದೆ ಝಗ ಝಗ ಧರಿಸುತಲಿ ನಾನಾ ವಿ-ಚಿತ್ರಾಚರಣವನು ಚರಿಸುತ್ತ ಸದ್ಗುರು ರಾಯ ಕಡೆಯಲ್ಲಿ,ಪರಮಹಂಸಾಶ್ರಮವ ಕೈಕೊಂಡಿನಿತುಕೆಲಕಾಲದಲಿ ಶಿಂಧಾಪುರದಿಸ್ವ-ಸ್ಥಾನ ದೊಳು ಸಹಜಸಮಾಧಿಸ್ಥಳದಲ್ಲಿ5ಶಾಲಿವಾಹನ ಶಕೆಯ ಶತಕತಿ ಮೇಲೆ ಐವತ್ತಾಗೆ ಮೂರನು |ಕಾಲು ದಕ್ಷಿಣ ಅಯನ ಸಂವತ್ಸರ ವಿರೋಧಿಕೃತು |ಕಾಳ ದ್ವಿತಿಯಾಮಾಸ ಆಶ್ವೀನ ಮೇಲೆ ಶಿವ ಬುಧವಾರಕರ್ಣವಿಶಾಲಿ ಗರ್ಜಾ ಭರಣೆ ಪ್ರಥಮಪ್ರಹರಸಮಯದೊಳು6ಆ ಸುದಿನದೊಳಗಾ ಮಹಾ ಸಂತೋಷ ಕಾಲದಿಸುರರುಪೂಮಳೆ ಸೂಸುತಿರೆ ಬ್ರಹ್ಮಾದಿಕರು ಸ್ವಸುಖದಿನಲಿದಾಡಿ |ಏಸುಕಾಲದಸುಕೃತಫಲವಿದು ವಸ್ತುಕಣ್ಣಲಿ ಕಂಡೆವೈ ಉಲ್ಲಾಸವೆನುತ ಸಮಸ್ತ ಸುರಜಯ ಘೋಷ ಮಾಡುತಲಿ7ನಿಜ ಪರಂಧಾಮಕ್ಕೆ ಸದ್ಗುರು ಬಿಜಯಮಾಡಿದನೆಂಬ ಮಹಾಶಯ | ಸುಜನರೆಲ್ಲರುಬಲ್ಲರಿದನು ಲೋಕಕಿದು ಸತ್ಯ || ತ್ರಿಜಗವೇಪುಸಿಯೆಂಬ ಮಹಾತ್ಮಗೆ ತ್ಯಜನವೆಲ್ಲಿ ಉದಾರ ಮಹಿಮಗೆ |ನಿಜವು ಜಲ ದೊರೆತಿಲ್ಲ ತೋರಲು ಕರಗಲೆರಡಹುದೇ8ನಿರಾಕಾರಾಕಾರ ವ್ಯಕ್ತಿಗೆಚರಣಒಂದೆ ಭೇದ ಮಿಥ್ಯೆಯು |ಚರಣಯುಗಕೆರಡುಂಟೆ ಈಪರಿಶರೀರ ಶರಣಂಗೆ ||ಹಿರಿದ ಕಿರಿದ ದರದರ ಹಂಗನು ಹರಿದು ಬಿಸುಟುವಶ್ರೀ ಮಹಾಶಂಕರಾನಂದ ಸರಸ್ವತೀ ಯತಿವರ್ಯ ಗುರುವರಗೆಜಯ ಜಯ ಮಂಗಲಾ ಜಯ ಜಯ ಮಂಗಲಾ9
--------------
ಜಕ್ಕಪ್ಪಯ್ಯನವರು