ಒಟ್ಟು 2964 ಕಡೆಗಳಲ್ಲಿ , 122 ದಾಸರು , 2123 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಯಾತವರ ನಾನಲ್ಲವೊ ಹರಿ ಬರಿದೆ ಖ್ಯಾತಿಯನು ತಂದಿತ್ತಿಯ ಪ ಮಾತುಗಳು ನಾಲುಕಾಡಿ ಸಭೆಯೊಳಗೆ ಪ್ರೀತಿ ಬಡಿಸುವೆನೊ ನರರ ರೀತಿಯಲಿ ಶ್ರುತಿ ಸ್ಮøತಿಗಳ ಪಠಿಸಿ ಶ್ರೀ- ನಾಥ ನಿನ್ನ ತೋಷಿಸಿದೆನೆ 1 ಜಪಮಣಿಗಳನು ತಿರುಹಿಸಿ | ಲೋಕರನ ಕಪಟಗೊಳಿಸುವೆನಲ್ಲದೆ ತಪ ಮಾಡಿದೆನೆ ಮನದಲಿ | ನಿನ್ನಯ ಕೃಪೆಯು ಉದಿಸುವ ತೆರದಲಿ 2 ದಾಸ ವೇಷವ ಧರಿಸಿದೆ ಕನಕದಾ- ವಾಸನೆಯಿಂದಲ್ಲದೆ ವಾಸುದೇವವಿಠಲ ಶರಣ ತಾ ಲೇಶವರಿಯೆನು ಕರುಣಿಸೊ 3
--------------
ವ್ಯಾಸತತ್ವಜ್ಞದಾಸರು
ಯಾಯಾ ವಾರವ ನೀಡಿ ಪ್ರೀಯದಿಂದಲಿ ಜನರು ಸ್ತ್ರೀಯರು ಮುದದಿಂದ ಪ ಸಾರುತ ಹರಿದಾಸ ಕೇರಿಯೊಳಗೆ ಬರಲು ಚೋರತನವ ಮಾಡಿ ಚುದಗು ಬುದ್ಧಿಯಲಿಂದ ದ್ವಾರವನಿಡದಿರಿ 1 ಬಂದಾ ಹರಿದಾಸನ ವಂದಿಸಿ ನಿಮ್ಮಯ ಮಂದಿರದೊಳು ಕರೆದು ತಂದಿಗಳೆಂದು ನಲು ವಿಂದಲಿ ಉಪಚರಿಸಿ 2 ಪರಲೋಕ ಬಂಧುಗಳೆ ಕರುಣವ ಮಾಡಿದಿರಿ ಕರ್ಮ ಪರಿಹರವೆಂದು ನಾ ಸಿರ ಬಗೆ ಕೊಂಡಾಡುತಾ 3 ಪತಿಮತೈಕ್ಯವಾಗಿ ಅತಿಶಯ ಭಕುತಿಯಲಿ ಗತಿಗೆ ಸಾಧನವೆಂದು ತಿಳಿದು ಈ ಧರ್ಮಕ್ಕೆ ಪ್ರತಿಕೂಲವಾಗದಲೆ 4 ವಕ್ಕಡತಿ ತಂಡುಲವ ಚಕ್ಕನೆ ನೀಡಲು ಮಕ್ಕಳು ಮರಿಗಳು ಸಹಿತ ನಿತ್ಯಾ ಸುಖವಕ್ಕು ಸಟಿಯಲ್ಲಾ 5 ಇಲ್ಲವೆಂದು ನುಡಿದರೆ ಪುಲ್ಲಲೋಚನವಪ್ಪಾ ಎಲ್ಲ ಕಾಲದಲಿ ನಿಮ್ಮಂಗಣದೊಳು ಇಲ್ಲವೆ ನಿಂತಿಪ್ಪದು 6 ಹಸ್ತು ಹರಿದಾಸ ಬಂದು ಹೊಸ್ತಿಲಿಂದಲೆ ತಿರಿಗಿ ವಿಸ್ತರಿಸುವೆ ಕೇಳು ಹರಿ ತೊಲಗುವಾ ದ್ವಿ ಮಸ್ತಕ ಭುಂಜಿಸುವಾ 7 ಒಂದೊಂದು ಕಾಳಿಗೆ ಒಂದೊಂದು ಕುಲಗೋತ್ರ ಮುಂದೆ ಉತ್ತಮ ದೇಹದಲಿ ಬಂದು ಸುಜ್ಞಾನದಿಂದಲೆ ಲೋಲಾಡುವರು 8 ಹಲವು ಪೇಳುವದೇನು ಸುಲಭಾವೆನ್ನು ಧರ್ಮ ಅಳಿದು ಹೋಗುವದಲ್ಲ್ಲ ಇದನು ವಿಜಯವಿಠ್ಠಲ ಬಲ್ಲ ಮಹಾಫಲವ9
--------------
ವಿಜಯದಾಸ
ಯಾರ ಕೃತಕವು ಇದು ವಿಚಾರವನು ಮಾಡಿ ಕಾರಣೀಕದ ಸ್ವಪ್ನ ಕಾಣುತಿದೆ ನೋಡಿ ಪ ಕಾಳ ಮೇಘಧ್ವನಿಯು ಗಾಳಿ ಮಳೆ ಮಿಂಚುಗಳು ಧಾಳಿ ಇಡುತಿಹ ಸಿಡಿಲು ಬಹಳ ಕತ್ತಲೆಯು ಹಾಳೂರ ಮಧ್ಯದೊಳು ಬೀಳುತಿಹ ವಾರಿಗಳು ಮೃಗ ಮೈಮೇಲೆ ಬೀಳುವುದ 1 ವೃಷ್ಟಿ ತೀರುವ ತನಕ ಇಟ್ಟೆಡೆಯೊಳಿರುತಿರ್ದು ಕೆಟ್ಟ ಪಥದಲಿ ಚಾರುಗಟ್ಟಿವಿಳಿದು ಗಟ್ಟಿಯಾಗಿಹ ಚಳಿಯು ಹುಟ್ಟಿ ಕೈಕಾಲುಗಳು ಒಟ್ಟಾಗಿ ಕೂಡಿರ್ದು ದೃಷ್ಟಿ ಬಿಡುತಿಹುದು 2 ಬಿಸಿನೀರ ಮಳೆಯೊಳಗೆ ನುಸಿತ ಗುಣೆಯಸೆಯೊಳಗೆ ಎಸೆದು ತೋರುವ ಉರಿಯ ಹಸಿಯ ಮೆಣಸಿನೊಳು ಗಸಣಿಯನು ಕೈಕೊಂಡು ಕಸಮುಸುರೆಯಾಗಿರ್ದು ಉಸುರಲಾರದೆ ತೃಷೆಯ ಹಸಿದ ಬಳಲಿಕೆಯ 3 ನಿಂದೆಯಾಗಿಹ ಮೃಗದ ಚಂದವನು ಮೈಗೊಟ್ಟು ಬಂದುದೆನಗೈಶ್ವರ್ಯ ಎಂದು ಹರುಷಿಸುತ ಮಂದಹಾಸದ ಒಳಗೆ ಬಂಧನದಲಿರುತಿರ್ದು ಮುಂದುವರಿದು ವ್ಯಸನದೊಳು ಬಂದಿರ್ದ ಬಗೆಯ 4 ಮೂರು ಮಂದಿಯು ಬಂದು ಸೇರಿದರು ದೂರಿಡುವ ಆರು ಕರೆದರು ತಾನು ಬಾರೆನೆಂಬ ಮೇರೆಯಾಗಿಯೆ ಬಪ್ಪ ಮೂರಾರು ತಾ ಬಿಡುವ ಸಾರಿ ಚೋರತ್ವದಲ್ಲಿ ಪರವೂರ ಸುಲಿವ 5 ಮೇಲು ದುರ್ಗವ ಕಂಡು ಗಾಳಿಗೋಪುರವನ್ನು ಆಳ ಬಲುಹುಳ್ಳವನು ಅವಸರದೊಳು ನೂಲಯೇಣಿಯನಿರಿಸಿ ಏರಿಳಿದು ಬಾಹಾಗ ಕಾಲು ಜಾರಿಯೆ ಬಸಿದ ಶೂಲದೊಳು ಬೀಳುವುದು 6 ಹೀಗಿರುವ ಕೃತ್ಯಗಳು ನಾಗಶಯನನಿಗರುಹು ಬೇಗದೊಳು ಪರಿಹರಿಪ ಯೋಗವನು ಕೊಡುವ ನಾಗಗಿರಿವಾಸನಹ ವರಾಹತಿಮ್ಮಪ್ಪ ತೂಗುವನು ತೊಟ್ಟಿಲೊಳು ಆಗುವುದನಿತ್ತು 7
--------------
ವರಹತಿಮ್ಮಪ್ಪ
ಯಾರ ಭಯವೇನಿಹುದು ಶ್ರೀವೇಂಕಟೇಶ ನೀನೆ ದಯವಾದ ಮೇಲ್ಯಾರ ಹಂಗೇನು ಪ ಪೊಡವಿಯಾಳುವ ದೊರೆಯು ಒಡವೆವೊಯ್ದರೆಯೇನು ಅಡವಿಯೊಳು ಮೃಗಬಂದು ತಡೆದರೇನು ತೊಡೆಯನೇರುವ ಮಗನ ಅಡವಿಗಟ್ಟಿದರೇನು ನೆಗಳು ಕಾಲ್ಪಿಡಿದರೇನು 1 ವ್ಯಾಳ ಬಹುರೋಷದಲಿ ಕಾಲು ಸುತ್ತಿದರೇನು ಕಾಳ ರಾಕ್ಷಸ ಕೈಯ ಪಿಡಿದರೇನು ಜ್ವಾಲೆ ನಾಲ್ದೆಸೆಯಿಂದ ಮೇಲೆ ಮುಸುಕಿದರೇನು ಹಗೆ ತನಗೆ ವಿಷವಿಕ್ಕಲೇನು 2 ಯಾಗಕೋಸುಗ ಮೃಗವ ಹೋಗಿ ತರುವೆನುಯೆಂದು ರಾಗದೊಳು ಬಲವಂತ ಕರೆಯಲಾಗಿ ಮೃಗ ಬಂದು ಬಾಗಿಲೊಳು ಕಾಲ್ಪಿಡಿಯೆ ಆಗ ಬಿಡಿಸಿದವರಾರು ನಾಗಗಿರಿವಾಸ 3 ಕಡುಗಲಿಯು ದ್ರೌಪದಿಯ ಉಡಿಮಡಿಯ ಸೆಳೆವಂದು ಒಡೆಯ ರಕ್ಷಿಸುಯೆಂದು ನಡುಗುತಿರಲು ಮಡದಿಗಕ್ಷಯವಿತ್ತು ನುಡಿದ ಭಾಷೆಯ ಸಲಿಸಿ ಕೊಡಲಿಲ್ಲವೆ ನೀನು ಒಡೆಯ ಗಿರಿವಾಸ 4 ಕೆಡೆನುಡಿದು ಬಾಲಕನ ಅಡವಿಗಟ್ಟಲು ಪಿತನು ಸಡಗರದ ಮಡದಿಯಳ ಮಾತ ಕೇಳಿ ಒಡೆಯ ನೀನೆಯೆಂದು ಕಡುತಪವನರ್ಚಿಸಲು ಉಡುಗಣಕೆ ಮೇಲಾದ ಪದವ ತೋರಿದೆಲಾ 5 ಮೃಗ ಜಲದ ಹೊಂಡದೊಳಗಾಡುತಿರೆ ಕಂಡು ಕಡು ರೋಷದಲಿ ಕಾಲ್ಪಿಡಿಯಲು ಪುಂಡರಿಕಾಕ್ಷನನು ಭಯಗೊಂಡು ಕರೆದರೆ ತುಂಡಿಸಿದೆ ಚಕ್ರದೊಳು ನೆಗಳ ಗಂಟಲನು 6 ಒಬ್ಬನೆ ಪಥದೊಳಗೆ ಸರ್ಬಬಲನೈದುತಿರೆ ಹೆಬ್ಬಾವು ಆತನನು ಮೈಸುತ್ತಲು ಗರ್ಭದೊಳು ನಡುನಡುಗಿ ಉಬ್ಬಸವ ಬಿಡುತಿರಲು ಎಬ್ಬಿಸಿದರಾರಲ್ಲಿ ನಿರ್ಭಯವ ತೋರಿ 7 ದುರುಳ ದೈತ್ಯನು ತನ್ನ ಕುವರನನು ಕೊಲುವುತಿರೆ ಭರದಿಂದ ಕಂಬದೊಳು ಹೊರಟು ಬಂದು ನರಹರಿಯ ರೂಪದಲಿ ಕರುಳ ಮಾಲೆಯ ಧರಿಸಿ ತರಳನನು ಕಾಯಿದವರಾರು ಶ್ರೀಹರಿಯೆ 8 ಉರಿಯ ಮನೆಯಂದರಿಯದರಸರೈವರ ಹೊಗಲು ಇರಿಸಿರ್ದ ಬಾಗಿಲೊಳು ಉರಿ ಮುಸುಕಲು ಬೆರಸಿರ್ದ ನಿದ್ರೆಯೊಳು ಇರಿಸಿ ಕಾಯಿದವರಾರು ಕರೆಸಿ ದ್ರೌಪದಿಯನ್ನು ಕೊಡಿಸಿದವರಾರು 9 ಚಂದ್ರಹಾಸನು ವಿಷವ ತಿಂದು ಸಾಯಲಿಯೆಂದು ತಂದೆ ಬರೆದಿಹ ಲಿಖಿತ ನಂದನನು ನೋಡಿ ಮಂದಗಮನೆಯ ಕೊಟ್ಟು ಚಂದ್ರಹಾಸನ ನಿಲಿಸಾ ನಂದಳಿದ ಮಾಯವೇನೆಂದು ಹೇಳಯ್ಯ 10 ಕಾಯ ಭಯ ಹೊರತಾಗಿ ಮೀರಿದಾಪತ್ತಿನಲಿ ಕಡೆ ಸೇರಿಸೊ ಭೂರಮಣ ವರಾಹತಿಮ್ಮಪ್ಪ ಚರಣವನು ಕುಲಿಶ ನೀನಾಗು 11
--------------
ವರಹತಿಮ್ಮಪ್ಪ
ಯಾರಿಗುಸುರಲಿ ಸಾರತತ್ವ ವಿ ಚಾರ ಭವದೂರಾ ಪ ಚಾರು ಸೇರಿ ಮುಕ್ತಿಯ ಸೊರೆವಿಡಿವುದಿನ್ಯಾರಿಗುಸುರಲಿ ಅ.ಪ. ಶ್ರೀ ಗುರುನಾಥನ ಕಟಾಕ್ಷದಿ ತ್ಯಾಗಿಸಿ ಸಂಸಾರದ ಗೊಡವೆಯ ಯೋಗಿಯಂದದೊಳಿದ್ದು ಆಗಮ ನಿಗಮಾರ್ಥಕೆ ಸಿಲುಕದ ಯೋಗ ಘನವನೊಳಗೊಂಡಿಹ ಅಂಗದ ಯೋಗಾನಂದದುಯ್ಯಾಲೆಯ ತೂಗಿ ನೆಲೆಗೆ ನಿಂದಿಹ ನಿಜಸುಖವಿನ್ಯಾರಿಗುಸುರಲಿ 1 ಉದರದ ನಾಭಿಯ ನೀಳದ ತುದಿ ಹೃದಯ ವಾರಿಜದೊಳಗಿಪ್ಪ ಶಿವ ಸದನ ಲಿಂಗವ ಕಂಡು ಅದು ಇದು ಬೇರ್ಪಡಿಸದೆ ಹೃದಯದಿ ಚದುರ ಸಾಧು ಸತ್ಪುರುಷರ ಮತದಲಿ ಮುದದಿ ಮುಕ್ತಿ ಮಾನಿನಿಗೆ ಮಂಗಲ ಮದುವೆಯಾದ ಮನಸಿನ ಮಹಾ ಗೆಲವಿನ್ಯಾರಿಗುಸುರಲಿ 2 ನೆತ್ತಿಯೊಳ್ ಹೊಳೆ ಹೊಳೆವ ಚಿದಾ ದಿತ್ಯನ ಪ್ರಕಾಶವ ಕಂಡು ಚಿತ್ತದಿ ನಲಿದಾಡಿ ಉತ್ತಮಾನಂದಾತ್ಮರಸ ಸವಿ ಯುತ್ತ ಚಪ್ಪರಿದು ಶರಣರ ಮೊತ್ತದೊಡನೆ ಕುಣಿಕುಣಿದು ಬ್ರಹ್ಮನ ಗೊತ್ತು ತಿಳಿದ ಗುರುತಿನ ವಿಸ್ತರವಿನ್ಯಾರಿಗುಸುರಲಿ 3 ಕುಂದುವ ಕಾಯದ ಸುಖಿಕೆಳೆಸದೆ ಹೊಂದಿದ ಸರ್ವಾಂಗದ ಶೋಧಿಸಿ ಒಂದೇ ದೇವನೊಳಾಡಿ ವಂದಿಸಿ ಗುರುಹಿರಿಯರ ಚರಣಕೆ ಹೊಂದಿ ಹೊಂದಿ ಓಲಾಡುವ ಅರಿಗಳ ಬಂದಿಯೊಳಗೆ ಸಿಲುಕದೆ ಬ್ರಹ್ಮಾ ನಂದರಸಾಮೃತ ಸವಿದಿಹ ಸುಖವಿನ್ಯಾರಿಗುಸುರಲಿ 4 ಹಲವು ಯೋನಿಯೊಳಗೆ ಹೊರಳ ಕುಲ ಛಲ ಶೀಲವ ಮೂರಡಗಿಸಿ ಸುಲಭ ವಂಶದೊಳುಂಡು ಮಲಿನ ಮಾಯಾಮೋಹಕೆ ಸಿಲುಕದೆ ಬಲೆಯ ಛೇದಿಸಿ ಮುಕ್ತಾಂಜ್ಯದ ಬಗೆ ಇನ್ಯಾರಿಗುಸುರಲಿ 5
--------------
ಭಟಕಳ ಅಪ್ಪಯ್ಯ
ಯಾರಿಗೆ ದೂರುವೆನು ವೆಂಕಟರಾಯ ಚಾರದ ಮಹಿಮೆಯನು ಪ ಈರಾರು ಸ್ಥಳವಲ್ಲಿ ಮೂರಾರು ಸೇರಿಸಿ ಹೋರಾಟವನಿತ್ತು ಮಾರಿದೆಯೆನ್ನನು ಅ.ಪ ತೇಜವುಳ್ಳವನೊಬ್ಬನು ಐದನೆಯಲ್ಲಿ ಮೋಜಾಗಿ ಒಳಹೊಕ್ಕನು ಹೂಜಿ ತುಂಬಿದ್ದುದ ಸೋಜಿಗದೊಳು ಕದ್ದು ಪಾಜಿ ಮಾಡಿದನೆನ್ನ ಮೂಜಗದೊಡೆಯ 1 ಸೀತವಾದವನೊಬ್ಬನು ಅಷ್ಟಮದದಲ್ಲಿ ಕಾತುರದೊಳು ಬಂದನು ಘಾತಕತನ ಮಾಡಿ ಭೀತಿಗಳನು ತೋರಿ ದಾತ 2 ಮೂರನೆಯವನೊಬ್ಬನು ಏಳನೆಯಲ್ಲಿ ಸೇರಿಯೆ ಕಳುತಿದ್ದನು ಏರಿ ಬಂದುದನೆಲ್ಲ ಆರಿಸಿ ಮಾರಿಸಿ ಸೂರೆಗೊಂಡನು ಎನ್ನ ವಾರಿಜನಾಭ 3 ಅತ್ರಿಯ ಮೊಮ್ಮಗನು ನಾಲ್ಕನೆಯಲ್ಲಿ ಶತ್ರುವಾಗಿಯೆ ನಿಂತನು ಗೋತ್ರದಿ ಕಲಹವ ಬೆಳಸಿಯೆಯಿದ್ದಂಥ ಪಾತ್ರವÀ ತೀರಿಸಿ ಗಾತ್ರವ ಕೆಡಸಿದ 4 ಸುರಗುರುವೆಂಬುವನು ಮೂರನೆಯಲ್ಲಿ ಸ್ಥಿರವಾಗಿ ನಿಂತಿಹನು ಗುರುಗಳ ಮುಖದಿಂದ ಕರಕರೆ ಹತ್ತಿಸಿ- ದರು ಪಾಡಿ ಹರಿಯನ್ನು ತಿರುಕನಾದೆನು ನಾನು 5 ಆರನೆ ಮನೆಯೊಳಗೆ ದೈತ್ಯರ ಆ- ಚಾರಿಯನು ನಿಂತಿಹನು ಹಾರುಮಾತುಗಳೇಕೆ ತೂರಿದನೆಲ್ಲವ ಪಾರಾದೆನು ನಾನು ವಾರಿಜನೇತ್ರ 6 ಆದಿತ್ಯ ಪುತ್ರನಾದ ಶನೈಶ್ವರ ಬಾಧಿಪ ಮನೆಗಳಾರು ದ್ವಾದಶ ಆದಿಯು ದ್ವಿತೀಯ ಪಂಚಮದಲ್ಲಿ ವೇದಗಳೆಲ್ಲವು ಏಳುಯೆಂಟಿರಲಿ 7 ನಾಡನಾಳುವ ರಾಯರ ಕೆಡಿಸಿ ಮುಂದೆ ಕಾಡಿಗೆ ಸೇರಿಸಿದ ಈಡಿಲ್ಲ ಈತಗೆ ಜೋಡಿಲ್ಲ ಗ್ರಹರೊಳು ಪಾಡೆಲ್ಲ ಕೆಡಿಸಿದ ರೂಢಿಗೆ ಒಡೆಯ 8 ವಾರಿಧಿ ಮಥನದಲಿ ಸುಧೆಯನ್ನುಂಡು ಸೇರಿದ ಗೃಹರೊಳಗೆ ಮೀರಿದರಿಬ್ಬರ ಪಾರುಪತ್ಯಗಳನ್ನು ಮಾರ ಸನ್ನಿಭನೆ 9 ಸಂಧಿ ಸಂಧಿಯಲಿವರು ಬಂದೆನ್ನನು ದಂದುಗ ಬಡಿಸುವರು ಇಂದ್ರಾದಿ ದೇವರಿಗಳವಲ್ಲ ಇವರೊಳು ಹಿಂದು ಮುಂದರಿಯೆನು ಬಂದ ಬವರವನ್ನು 10 ಶುಭದಲ್ಲಿ ಶುಭವಿತ್ತರು ವೆಂಕಟರಾಯ ಶುಭ ತೋರಿಸೊ ಅಭಯವನಿಪ್ಪಂಥ ವರಾಹತಿಮ್ಮಪ್ಪನೆ ಪ್ರಭುವೆಂದು ನೀ ಹೇಳಿ ವಿಭವಗಳೆನಗೀಯೊ 11
--------------
ವರಹತಿಮ್ಮಪ್ಪ
ಯಾರು ಇಕ್ಕುವರೆಂದು ಹಾರೈಸುವೈ ಆತ್ಮ ಸೋರುತಿದೆ ಮನೆಯೆಲ್ಲ ನಾರುತಿದೆ ಸ್ಥಳವು ಪ ಒಲೆಯೊಳಗೆ ಉರಿಯಿಲ್ಲ ಜಲವಿಲ್ಲ ಬಾವಿಯೊಳು ಕಲಹ ಮಾಳ್ಪಳು ತನ್ನ ಕುಲವನಿತೆಯು ಹೊಲುಬುದಪ್ಪಿಯೆ ಇಲ್ಲಿ ಬರಬಹುದೆ ನೀನೀಗ ಫಲವುಳ್ಳ ಮನೆಗಳನು ಸೇರೆಲವೊ ಆತ್ಮ 1 ಬಾಗಿಲಿಲ್ಲದ ಮನೆಯು ಬಹಳ ಕಗ್ಗತ್ತಲೆಯು ಕೂಗುವುದು ಹುಲಿ ಕರಡಿ ಇದಿರಿನೊಳಗೆ ಬೇಗದೊಳು ಇಲ್ಲಿಂದ ಸಾಗುವುದೆ ಸೌಖ್ಯಗಳು ನಾಗಶಯನನ ಗುಡಿಯ ಸೇರೆಲವೊ ಆತ್ಮ 2 ಒಟ್ಟೆಗಡಿಗೆಯ ಒಳಗೆ ಇಟ್ಟಿರ್ದ ಬುತ್ತಿಗಳು ಕೆಟ್ಟ ಕ್ರಿಮಿಗಳು ಬಂದು ಬಹಳ ಹಳಸಿದವು ಬಟ್ಟಲಿಡುವವರಿಲ್ಲ ಮುಟ್ಟಿ ಬಳಸುವರಿಲ್ಲ ಹೊಟ್ಟೆ ತುಂಬುವುದುಂಟೆ ದುಷ್ಟರೊಳು ಆತ್ಮ 3 ಹಾಳು ಮನೆಯನು ನಿನಗೆ ತೋರಿಕೊಟ್ಟವರಾರು ಬೀಳುವುದು ಮೇಲೆ ಹದಿನಾರು ಭಿತ್ತಿಗಳು ಏಳು ಇಲ್ಲಿರಬೇಡ ಕಾಳಸರ್ಪನು ಬಂದು ಕಾಲ ಕಚ್ಚ್ಚುವನಲ್ಲೊ ಎಲೆ ದುಷ್ಟ ಆತ್ಮ 4 ಮೂರು ಮಾತನು ಮೇಲೆ ಯಾರ ಕೂಡಾಡಿದೆಯೊ ಆರು ಪಥದಲಿ ನೀನು ಮೀರಿ ನಡೆದೆ ಕೇರಿಯಾಗಿರ್ದ ಹದಿನೆಂಟು ಅಂಗಡಿಯೊಳಗೆ ಆರ ವ್ಯಾಪಾರವನು ಕೇಳಿದೈ ಆತ್ಮ 5 ಹತ್ತು ತಾಸಿನ ಮೇಲೆ ತುತ್ತು ಕೊಡುವವರಾರು ಬತ್ತುವುದು ಕೈಕಾಲು ಬಳಲಿಕೆಯೊಳು ಮತ್ತೇಳು ಮಂದಿ ತಾವತ್ತತ್ತ ಸಾರುವರು ಕರ್ತುಗಳ ನಾ ಕಾಣೆ ನೀ ಕೇಳೊ ಆತ್ಮ 6 ಎಂಟು ಮಂದಿಯು ತನಗೆ ನೆಂಟರೆಂಬಾಶೆಯೊಳು ಗಂಟ ಕಟ್ಟಿಯೆ ಮನದಿ ಮರುಗುತಿರಲು ಗಂಟಲೊಣಗಿಯೆ ವಾಯು ಕಂಠದೊಳು ಪೋಪಾಗ ನಂಟರನು ನಾ ಕಾಣೆ ಆಲಿಸೈ ಆತ್ಮ 7 ಆಯವಿಲ್ಲದ ಮನೆಯು ಛಾಯೆ ಇಲ್ಲದ ಮಡದಿ ದಾಯವಿಲ್ಲದ ಊರು ಕರಕಷ್ಟವು ಬಾಯ ಹೊಯ್ಯೆಂಬರೊಳು ನ್ಯಾಯ ಸೇರುವುದೆ ಉ- ಪಾಯದಲಿ ಸಾರೆಲೆವೊ ಸಾರಿದೆನು ಆತ್ಮ 8 ಮೂಡಗಿರಿವಾಸನೊಳು ಬೇಡಿಕೊಂಡರೆ ನಿನಗೆ ನೀಡುವನು ಧರ್ಮವನು ಧೈರ್ಯನಾಗಿ ಬೀಡುಬಿಟ್ಟಲ್ಲಿಂದ ಓಡುವುದು ಸುಖದೊಳಗೆ ಕೂಡುವುದು ವರಾಹತಿಮ್ಮಪ್ಪನೊಳು ಆತ್ಮ 9
--------------
ವರಹತಿಮ್ಮಪ್ಪ
ಯಾರು ಬಲ್ಲರು ವೆಂಕಟೇಶ ನಿನ್ನೊಳಿಹ ಚಾರು ಗುಣಶೀಲವೆಂಬ ವಾರಿಧಿಯ ಚಿಪ್ಪಿನೊಳು ಮೊಗೆದು ಬತ್ತಿಸುವಂಥ ವೀರನಾವನು ಜಗದೊಳು ಪ ಹದಿನಾಲ್ಕು ಲೋಕವನ್ನು, ನೀ ನಿನ್ನ ಉದರದೊಳಗಿರಿಸಿಕೊಂಡು ಉದಧಿಮಯವಾಗಿರ್ದ ಕಾಲದೊಳು ನಿನಗೊಂದು ಉದುರಿದೆಲೆಯೊಳು ನಿದ್ರೆಯಂತೆ 1 ಮಾಯೆ ಕಮಲಾಕರದೊಳು, ನಿನ್ನುದರ- ದಾಯತದಿ ತೋರಿ ನಿಲಲು ಮೋಹಿಸಲು ಆ ಕ್ಷಣದಿ ಕಾಯವಾಗಲು ಮೇಲೆ ಬಾಯಿ ನಾಲ್ಕಾಯಿತಂತೆ 2 ಅಲ್ಲಿ ತೋರಿದ ಸೊಲ್ಲನು, ಖಳನೋರ್ವ ನೆಲ್ಲವನು ಸೂರೆಗೊಳಲು ಮಲ್ಲನಾಗಿಯೆ ಜಲದಿ ಘಲ್ಲಿಸಿಯೆ ದೈತ್ಯನನು ಚೆಲ್ವಸಾರವ ಸೆಳೆದೆಯಂತೆ 3 ಅದರ ಆಧಾರದಿಂದ, ಸನಕಾದಿ- ಗುದಯವಾದುದುಯೆಲ್ಲವೂ ಮೊದಲ ಕಾಣದೆ ವೃಕ್ಷವದುರಿ ಬಿದ್ದುದ ನೋಡಿ ತುದಿಯೊಳಗೆ ಕದನವಂತೆ 4 ಒಳ ಹೊರಗೆ ನೀನೊಬ್ಬನೆ, ಹೊಳೆ ಹೊಳೆದು ಸುಳಿವ ಪರಿಯನು ಕಾಣದೆ ಮಲತಾಯಿ ಮಗನೊಳಗೆ ಕಲಹವಿಕ್ಕುವ ತೆರದಿ ಹೊಲಬುದಪ್ಪಿಯೆ ನಡೆವರಂತೆ 5 ಒಂದಿದರಿಂದೆರಡಾದುದು, ಮೂರಾಗಿ ಬಂದು ಇದಿರೊಳು ನಿಂದುದು ಒಂದು ಮಾತಿನೊಳೆರಡು ಸಂದೇಹಗಳ ತೋರಿ ಮಂದ ಬುದ್ಧಿಯ ಕೊಡುವೆಯಂತೆ 6 ಜಡವಾದ ಅಡವಿಯನ್ನು ಸಂಚರಿಸಿ ಒಡಲ ಹೊರೆವುದು ಕಡೆಯೊಳು ಎಡೆಯೊಳೊಪ್ಪಿಸಿ ಕೊಡುವಿಯಂತೆ 7 ನಂಬಿ ಬಂದವರ ನೀನು, ಮನದೊಳಗೆ ಹಂಬಲಿಸಿಕೊಂಡಿರುತಲೆ ಇಂಬಾಗಿ ಇಹಪರದಿ ಉಂಬ ಸಂಭ್ರಮವನ್ನು ಸಂಭವಿಸಿ ತೋರ್ಪೆಯಂತೆ 8 ಭೂಮಿಗೆ ವೈಕುಂಠವೆಂದು, ನಿಂತಿರುವ ಸ್ವಾಮಿಯೆನ್ನೆಡೆಗೆ ಬಂದು ಕ್ಷೇಮವನು ವರಾಹತಿಮ್ಮಪ್ಪ ಕರುಣದಿ ಕಾಮಿತಾರ್ಥವನೀಯೊ ಎಮಗೆ 9
--------------
ವರಹತಿಮ್ಮಪ್ಪ
ಯಾರೊಡನುಸುರವೆನೋ ಕಡಲಶಾಯಿ ಬಿಡದೆ ನಿನ್ನನು ಅಡಿಗಡಿಗೆ ಕೊಂಡಾಡುವ ಹುಡಗನ ಮೇಲಿಷ್ಟು ಕರುಣವಿಲ್ಲದರಿಂದ ಪ ಪೊಡವಿಯೊಳಗೆ ಜನಿಸಿರುವರೊಳಗೆ ನಾನೆ ಕಡೆ ಈಗ ಬಸುರಿನೋಳ್ ಪಡೆದ ಮಗನು ತನ್ನ ಮಡದಿ ಮಕ್ಕಳನು ಎನ್ನೊಡನಿತ್ತು ನಾಕಕೆ ನಡೆದನೆನಗೆ ನಡುಮರಣವ ಹೊರಸಿ 1 ಕೆಟ್ಟ ಬದುಕ ಕಾಣಲಾರೆ ಮಾಳ್ಪರೆ ಎನ್ನ ರಟ್ಟೆ ಬಲವು ತಗ್ಗಿ ಹೋಯ್ತು ಮೊಮ್ಮಕ್ಕಳ ಅಟ್ಟುಳಿ ಬರಿಸನ್ನವಸ್ತ್ರಾಭರಣಕೆಂದು ಕುಟ್ಟಿ ಕೊಂಬರು ಎನಗಿದಿರಾಗಿ ಶಿವನೇ 2 ನಾನು ಎಂಬುವರಿಲ್ಲ ಗೃಹಕೃತ್ಯದೊಳಗೆನ್ನ ಮಾನಿನಿಯೊರ್ವಳುಂಟಿದರೊಳು ಸೊಸೆಯಷ್ಟು ಏಕೆಂದ ರೇನು ಸಂಸಾರವಿದನು ಪವಮಾನ ಸುತನ ಕೋಣೆ ಲಕ್ಷ್ಮೀಶ ನಡೆಸು 3
--------------
ಕವಿ ಪರಮದೇವದಾಸರು
ಯುಕ್ತಿ ಯುಕ್ತದಮಾತ ಕೇಳಬೇಕುಶಕ್ತಿಯನು ಮಾಡದಿರು ಮುಕ್ತಿಗನುವಾಗು ಪಚಿತ್ತಶುದ್ಧಿಯಲಿದ್ದು ಭಾವ ವಿಷಯದಿಕೂಡೆಮತ್ತೆ ಬಂಧಿಸಿ ಬಲಿದು ಮುಳುಗುತಿಹುದುಕಿತ್ತದನು ನಿಜದಲ್ಲಿ ನಿಲಿಸಿಯನುಸಂಧಾನವತ್ಯಧಿಕವಾದಡೆಯು ಮಿತನುಡಿ ಹಿತವೂ 1ಕಾರ್ಯಕಾರಣರೂಪನಾಗಿ ಜಗದೀಶ್ವರನುಧೈರ್ಯಗಳು ಬರುವಂತೆ ಪ್ರೇರಿಸುತ್ತಾಆರ್ಯರೊಳಗೆಣಿಕೆಯನು ಮಾಡಿಸುತಲಜ್ಞಾನಸೂರ್ಯನಾಗಿಯೆ ತಾನು ತೋರುತಿರ್ದಡೆಯೂ 2ಕರಣೇಂದ್ರಿಯಂಗಳಿವು ಜಡವಾಗಿ ವಿಷಯಗಳಬೆರೆಸಲರಿಯವು ತಾವು ಇಚ್ಛೆುಂದಾತಿರುಪತಿಯ ವೆಂಕಟನು ಸೂತ್ರಧಾರಕನಾಗಿಗುರುವಾಸುದೇವ ರೂಪದಿ ಸಲಹುತಿರಲು 3ತನುವನುಕೂಲಕೆ ಬಂದುದ ನೆನೆದುಸುರಿದ ಜೀವನಭಿಮಾನವ ಸಡಿಲಿಸುತಲಿ ವಿನಯದಿ ಗುರುವನು ಸೇರ್ವರೆ ನಿನಗೆರವಿಲ್ಲೆನ್ನುತಅನುಸರಿಸಿದ ಕಾರ್ಯವಾಸಿಗೋಸುಗ ಬಿಡದೆ 4
--------------
ತಿಮ್ಮಪ್ಪದಾಸರು
ಯೆಂದಿಗೆ ಬರುತೀಯೆ ಸುಂದರ ಭಾರತಿ ಮಂದರೋದ್ಧರನ ತೋರಿಸೆಂದೆ ನಾ ಬಂದೆ ಪ. ಅಂಧಕಾರಣ್ಯದೊಳು ನಿಂದು ತತ್ತರಿಸುವೆನು ತಾಯೆ ಕುಂದುಗಳೆಣಿಸಾದಿರು ಆನಂದ ತೋರು ಅ.ಪ. ಹರಿಗೆ ಕಿರಿಯ ಸೊಸಿ ವಾತನಸತಿಯು ನೀನು ಪ್ರಖ್ಯಾತಿವಂತಳೇ ಏಕಾಂತ ಭಕ್ತಳೇ ತ್ರಿವಿಧ ಜೀವರೊಳಗೆ ನಿಂತು ತ್ರೀವಿಧ ಪ್ರೇರಣೆ ಮಾಡುವಿ ದೇನಿ ನಿನ್ನಾ ಮಹಿಮೆಗೆ ನಮೋ ಎಂಬೆ ಪುತ್ಥಳಿಯಾ ಬೊಂಬೆ 1 ಮಂದರೋದ್ಧರನ ಪಾದಸೇವಕಳೇ ನಿನಗೀಡೆ ನಲಿದಾಡೆ ಒಂದನಾದರೂ ಮಾತನಾಡೆ ವರಗಳ ನೀಡೆ ದಯಮಾಡಿ ನೋಡೆ ತವಪಾದವ ಕೊಡೆ ಕರವ ಜೋಡಿಸಿ ಬೇಡುವೆನಿಂದು ನಾ ಬಂದು 2 ಗರುಡ, ಶೇಷ ರುದ್ರಾದಿಗಳೊಡೆಯಳೇ ನೀನು ನಿನ್ನಡಿಗಳಿಗೆರಗುವೆ ನಾನು ತಡಮಾಡ ಬ್ಯಾಡಮ್ಮಾ ನಡೆದು ಬಾರಮ್ಮ ಭವ ಮಡುವಿನೊಳಗಿರುವೆನು ತೋರಿಸೋ ದಯಪಾಲಿಸೋ 3
--------------
ಕಳಸದ ಸುಂದರಮ್ಮ
ಯೆಲ್ಲಿ ಭಯಗಳು ಹರಿಯ ಭಕುತರಿಗೆ ಇಲ್ಲಾ | ಇಲ್ಲವೋ ಕಾಣೋ ಯೆಂದಿಗಾದರು ಮರುಳೆ ಪ ಹುಲಿ ಇಲಿಯಾಗುವದು ತೋಳ ಕೋಳ್ಯಾಗುವುದು | ಕಲಿ ಬಂದು ಹಿತ್ತಿಲನ್ನೀಗ ಬಳಿವಾ || ಮೂಲ ಮಹಾಚೋರ ಚೊಚ್ಚಿಲ ಗೌಡಿಮಗನಾವಾ | ಜಲಜಾಕ್ಷನ ಕೃಪೆಯ ಪಡೆದ ದಾಸರಿಗೆ 1 ಕರಡಿ ಕರು ಆಗುವದು ಉರಿ ಮಂಜು ಆಗುವದು | ಕರಿ ನಾಯಿ ಆಗುವದು ಕಂಡವರಿಗೆ || ಭರದಿಂದ ಸುರಿವ ಮಳೆ ನಿಲ್ಲೆನಲು ನಿಲುವದು | ನರಹರಿಯ ನಾಮಗಳ ನಂಬಿ ಪಠಿಪರಿಗೆ 2 ಘಣಿ ಸರವೆ ಆಗುವದು ದಣುವಾಗುತಿಹ ಮಾರ್ಗ ಕ್ಷಣದೊಳಗೆ ಪೋದಂತೆ ಕಾಣಿಸುವದು || ಘನ ಪಾಷಾಣಗಳು ತೃಣ ಸಮವು ಯೆನಿಸುವವು ವನಜಾಕ್ಷನ ಕೃಪೆಯ ಪಡದ ದಾಸರಿಗೆ 3 ಕ್ಷುಧೆ ತೃಷೆಯಾಗದು ಕ್ಷುದ್ರ ಸಂಗ ಬಾರದು | ಪದೇ ಪದೆಗೆ ರೋಗಗಳು ಬೆನ್ನಟ್ಟವು || ಉದಯಾಸ್ತಮಾನವೆಂಬೋ ಭಯವು ಸುಳಿಯದು | ಪದುಮನಾಭನ ಕೃಪೆಯ ಪಡೆದ ದಾಸರಿಗೆ4 ಬಾರವು ಭಯಗಳು ಬಂದರು ನಿಲ್ಲವು | ಹಾರಿ ಹೋಗುವವು ದಶದಿಶಗಳಿಗೆ || ಘೋರ ದುರಿತಾರಿ ಶ್ರೀ ವಿಜಯವಿಠಲನಂಘ್ರಿ | ಸೇರಿದಾ ಜನರಿಗೆ ಇನಿತಾಹುದುಂಟೇ 5
--------------
ವಿಜಯದಾಸ
ಯೋಗಿ ವೇಷ ನೀಚನಾಯಿ ನಿನಗ್ಯಾತಕೆ ತತ್ವ ಭಾಷಾ ಹುಚ್ಚನಾಯಿ ನಿನಗೇತಕೆ ವಸ್ತ್ರ ಕಾಷಾ ಮುರುಕುನಾಯಿ ನಿನಗೇತಕೆ ಗುರುಪಾದವಾಸ ಹೊಲಸ ಪ ಕೊರಳಿಗೆ ಕಪನಿ ತೊಟ್ಟು ಜಪಸರವನೆ ಮುಂಗೈಯಲಿಟ್ಟು ತತ್ವಬರಿನುಡಿ ಸಾಲು ಸಾಲಿಟ್ಟು ಕಾಲಕೆರವನೆ ಇವನ ಬಾಯೊಳಗೆ ವಷಟ್ಟು ಭ್ರಷ್ಟಾ1 ನೀರೊಳಗೆ ನೆರಳನೆ ನೋಡಿ ಹಣೆಗೆಗೀರುವೆ ಗಂಧವ ತೀಡಿ ಪೋರಪೋರರ ಜೋಡನೆ ಕೂಡಿ ನಿನ್ನಮೋರೆಯ ಮೇಲೆ ಹುಯ್ಯಬೇಕು ಕಸ ಪುಡಿಕೆ ಕಡುಗ 2 ಅತ್ತ ಸಂಸಾರ ಕೆಟ್ಟುಮತ್ತಿತ್ತ ಗುರುಪಾದವ ಬಿಟ್ಟು ನೀನತ್ತತ್ತ ಉಭಯ ಭ್ರಷ್ಟಾ ನಿನಗೆಸತ್ತಿಹರು ಅರಮನೆಯ ಗೌಡೆಯರೆಷ್ಟು ಜಾಣ3 ಕಂಡ ಕಂಡಲ್ಲಿಯೇ ಉಂಡುದೊಡ್ಡ ಹೊಟ್ಟೆಯ ಬೆಳೆಸಿಕೊಂಡುಬಾಡದಂಡೆಯ ಮನೆಗಂಟಿಕೊಂಡು ನಿನ್ನಮಂಡೆಯ ಹೊಡಿಬೇಕು ಪಾಪಾರಿಕೊಂಡು ಹೊಲೆಯ 4 ಇಂದು ಕೆಟ್ಟಾ5
--------------
ಚಿದಾನಂದ ಅವಧೂತರು
ಯೋಗಿಯಾಗೆಲೆ ಇಲ್ಲ ತ್ಯಾಗಿಯಾಗೆಲೆ ಪ ಹಾಗೂ ಹೀಗೂ ಆಗದೆ ಭವ ರೋಗಿಯೆನಿಸದರೆಲೆ ಗೂಗಿ ಅ.ಪ ಮಾತುಮಾತಿಗೆ ನೀತಿವಚನ ಆತುರಕ್ಕಾಗಿ ಕೂಗಿ ಕೂಗಿ ಪಾತಕದೊಳಗೆ ಬಿದ್ದು ಯಮನ ಯಾತನಕಿಳಿಯಬೇಡ ಭವಿ 1 ಕಾವಿಕಪನಿಲಾಂಛನ್ಹೊದ್ದು ಸೇವೆಗೊಂಡು ಭಾವಗೆಟ್ಟು ಸಾವುಹುಟ್ಟು ಬಲೆಗೆ ಬಿದ್ದು ನೋಯಬೇಡೆಲೆ ನೀಚಮತಿ2 ನಿತ್ಯ ನಿತ್ಯವೆನಿಪ ಪರ ಮಾರ್ಥತತ್ತ್ವಗುರ್ತುಯಿಲ್ಲದೆ ಕತ್ತೆಯಂತೆ ಒದರಿ ವ್ಯರ್ಥ ಮೃತ್ಯುಹೊಂದ ಬೇಡ ಮೂರ್ಖ 3 ಸೋಗುಹಾಕಿ ಸಾಧುಯೆನಿಸಿ ಕಾಗೆಯಂದದಿ ತೀರ್ಥಮುಳುಗಿ ಜಾಗರ ಮಾಡಿ ಪೋಗದಿರಲೆ ನರಕಕಧಮ 4 ಭೂಮಿ ಪ್ರೇಮ ತಾಮಸ ನೀಗಿ ಕಾಮ ಕ್ರೋಧ ಲೋಭ ಜೈಸಿ ಭೂಮಿತ್ರಯಂಗಳೊಡೆಯ ಶ್ರೀ ರಾಮನಾಮ ಭಜಿಸಿ ಮುಕ್ತನಾಗೆಲೊ 5
--------------
ರಾಮದಾಸರು
ಯೋಗಿವರ್ಯ ಶಿರಬಾಗಿ ನಮಿಸುವೆನು ಶ್ರೀ ರಾಘವೇಂದ್ರನೆ ಪ ಹೇಳಿದ ವಚನವ ಕೇಳಿ ಮನದಲಿ ಬಹಳ ಸುಖಿಸುತಲಿಕಾಲಕಾಲಕೆ ಶ್ರೀ ಲಲಾಮನ ಲೀಲೆ ಪಾಡುತ ವ್ಯಾಳೆ ನೋಡುವಿ 1 ಸತ್ಯವಾಣಿಯು ಮಿಥ್ಯವಾಗದು ಮತ್ತೆ ಲೋಕದೊಳುಚಿತ್ತದೊಳು ಅನಿತ್ಯ ಚಿಂತಿಸಿ ವೃತ್ತಿ ಕೃಷ್ಣನೊಳು ಇತ್ತು ಪಾಡುವಿ 2 ಎಲ್ಲ ಬಿಟ್ಟವ ಸುಳ್ಳನಾಡೊದು ಎಲ್ಲಿ ಕಾಣಿಸದುಫುಲ್ಲನಾಭನ ಭಕ್ತನಲ್ಲಿ ಹೇಳಿದ ಸುಳ್ಳು ಕಾದುಕೋ 3 ಆಶೆ ತೋರಿಸಿ ನಿರಾಶೆ ಮಾಡುವುದು ದಾಸ ಜನರೊಳಗೆಈಶ ನಿಜ ಬಹು ತೋಷವೆಂಬುದು ಭಾಷಿಸದೆಯತಿವೇಷ ದಿವಿಜನೆ 4 ಶಕ್ತಿವಚನವ ಕೃತ್ಯಮಾಡಲು ಶಕ್ತನಾರದನು ಒತ್ತಿ ಪೇಳಿದಹತ್ತರಾತನ ಭೃತ್ಯರಾಶಯ ಪೂರ್ತಿಮಾಡಿಸು 5 ನೀನೇ ಬಾಂಧವ ನೀನೇ ದೈವತ ನೀನೇ ಗುರುಪಿತನುನಾನು ನಂಬಿದೆ ಮೌನಿ ತೋರಿಸು ವೇಣು ಬಾಲಕನ ಜವ 6 ಇಂದು ಎನ್ನೊಳುನಿಂದು ಪ್ರಾರ್ಥಿಸು 7
--------------
ಇಂದಿರೇಶರು