ಒಟ್ಟು 2355 ಕಡೆಗಳಲ್ಲಿ , 108 ದಾಸರು , 1717 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಸ್ಥಿರ ನೀಡೆನ್ನ್ವದನಾಬ್ಜದಿ ಪರಮ ಪುರುಷ ನಿನ್ನ ಸ್ಮರಣೆ ಪ ಸೌಖ್ಯ ಸುಭೋಗದಿರಲಿ ಬೇನಿಯಿಂದ ಒರಲುತಿರಲಿ ತ್ರಾಣಗುಂದಿ ತೊಳಲುತಿರಲಿ ದಾನವಾಂತಕ ನಿನ್ನ ಧ್ಯಾನ 1 ಭೂಮಿಪರು ಸನ್ಮಾನ ಕೊಡಲಿ ಪಾಮರೆಂದು ಒದೆದು ನೂಕಲಿ ಭೂಮಿಜನರಪಹಾಸ್ಯ ಗೈಯಲಿ ಸ್ವಾಮಿ ನಿಮ್ಮ ಭಜನಾನಂದ 2 ಚಿಂತೆಯಿರಲಿ ಶ್ರೀಮಂತಿಕಿರಲಿ ಸಂತಸೆಂಬುದು ಸಿಗದ್ಹೋಗಲಿ ಅಂತಕಾರಿ ಶ್ರೀರಾಮ ನಿನ್ನ ಚಿಂತನೆ ಎನ್ನ ಅಂತ್ಯಕಾಲದಿ 3
--------------
ರಾಮದಾಸರು
ಸ್ಮರಿಸಿ ತೀರ್ಥಕ್ಷೇತ್ರ ಸಜ್ಜನರು ನಿತ್ಯದಲಿ ಅರಣೋದಯದಲೆದ್ದು ಭಕ್ತಿಪೂರ್ವಕವಾಗಿ ಕಠಿಣಶ್ರಮದಿ ಮಾಳ್ಪ ಪಾಪರಾಶಿಗಳ ಪರಿಹರಿಸುತ್ತ ಸಂತ್ಯೆಸುವಾ ಪ ಭಾಗೀರಥಿ ಸರಸ್ವತಿ ಯಮುನಾ ವಾರಾಣಾ ಶ್ರೀ ಗೋದ ಫಲ್ಗುಣಿ ಶೋಣಭದ್ರಾ ನರ್ಮ ದಾ ಗಂಡಕಿ ಭಿಮರಥಿ ತುಂಗಭದ್ರೆ ಪ್ರಯಾಗ ತ್ರಿವೇಣಿ ಹೇಮಾ ವೇಗವತಿ ಗಾಯತ್ರೀ ಕಾಶಿಮಣಿಕರ್ಣಿ ಕಾ ಗೌತಮಿ ವಿಯದ್ಗಂಗಾ ಕುಮುದ್ವತೀ ಸಿಂಧು ಪಾಪಾಘನಾಶಿನೀ 1 ಸರಯು ಜಯಮಂಗಳ ಜಮದಗ್ನಿ ವರತಾಮ್ರ ಪರಣಿ ಯೋಗಾನಂದ ಕೃತಮಾಲಕುಹು ಮಹೇ ಧುನಾಶಿ ಗರುಡ ಮದಿರಾ ಮರುದ್ವತಿ ಸ್ವರ್ಣಮುಖರಿ ವರ ಝರತಾಪಿನಿ ಕಾಳಿ ಸೌ ಪರಣಿ ದಕ್ಷಿಣೋತ್ತರಪಿನಾಕಿ ಕಪಿಲ ಶೀತಳ ಕಾನಂದ ಕುರಮುಖಿ ಪ್ರಣವಸಿದ್ಧ 2 ಕಾವೇರಿ ಸಿಧು ಮಾಲತಿ ಗಾರ್ಗಿಣಿ ಹರಿ ಕುಂದ ಕುಂದಿನಿ ಶೈವ ದೇವವತಿ ಪಾತಾಳ ಗಂಗಾ ಪುನಹ ನೀರಾ ಕುಮಾರಧಾರಾ ಸಾವಿತ್ರಿ ದಾನ್ಯಮಾಲಾ ಪುಷ್ಪವತಿ ಲೋಕ ಸಿಂಧು ಧರ್ಮಕು ಭವ ನಾಶಿನಿ ವರದಾ ಮಲಾಪಹಾರಿ 3 ಸ್ವಾಮಿ ಪುಷ್ಕರಣಿ ಮಾನಸ ಚಂದ್ರ ಪುಷ್ಕರಣಿ ಭೂಮಂಡಲದೊಳುತ್ತಮೋತ್ತಮ ತ್ರಿಪುಷ್ಕರಣಿ ನಿತ್ಯ ಪದ್ಮಸರ ಚಂದ್ರಭಾಗತೀರ್ಥ ವಾಮನ ಮಯೂರ ಪಂಪಾಸರೋವರ ಪುಣ್ಯ ಧಾಮ ವ್ಯಾಸ ಸಮುದ್ರ ಧವಳಗಂಗಾ ಸುಸಾ ರೋಮಹರ್ಷತೀರ್ಥ 4 ದ್ವಾರಕಾನಗರ ಸಾಲಗ್ರಾಮ ಟರರ ಬದರಿ ಕೇ ದಾರ ನರನಾರಾಯಣ ಶ್ರೀ ಮಜ್ಜಗನ್ನಾಥ ಶ್ರೀ ಮುಷ್ಣ ಮಂದರ ಮೈನಾಕ ಕೈಲಾಸ ಕಂಚಿ ಶ್ರೀರಂಗನಾಥ ನೈಮಿಷ ದ್ವೈತವನ ಚಂಪ ಕಾರುಣ್ಯ ಕಾಶಿ ಪಂಪಾವಂತಿಕಾ ಪುರಿ ಹರಿದ್ವಾರ ಛಾಯಾಪಿಪ್ಪಲ 5 ಕೇದಾರ ಸಾಗರ ಮಂದಾಕಿನಿ ಕುಸುಮವತಿ ಆದಿಸುಬ್ರಹ್ಮಣ್ಯ ಕೋಟೇಶ್ವರ ನಂದಿ ವೇದಪಾದ ಯಯಾತಿ ಗಿರಿ ಕಾಲಹಸ್ತಿ ಕೌ ಮೋದಕೀ ಪಾಡುರಂಗ ಕ್ಷೇತ್ರ ಶ್ರೀ ವಿಷ್ಣು ಪಾಟಲೀ ಮಂತ್ರಾಲಯ6 ಮಂದರ ಮಲಯ ಕೈವಲ್ಯನಾಥ ಕಾಶೀರ ಜಾಂಬವತಿ ವೃಂ ಶ್ರೀ ವಿರೂಪಾಕ್ಷ ಕುಂದರ ನಂದಪುರಿ ಮಾಯಾ ಶ್ರೀವತ್ಸ ಗಂಧಮಾದನ ಚಿತ್ರಕೂಟ ದ್ವಾ ನರಾಚಲಾಸೌಭದ್ರಿ ಆದಿನಾಥ 7 ಈ ಮಹಿಮಂಡಲದೊಳಿಪ್ಪ ತೀರ್ಥಕ್ಷೇತ್ರ ನಾಮಗಳ ಕಾಲತ್ರಯದಲ್ಲಿ ಸರಿಸುತಿಹ ಧೀಮಂತರಿಗೆ ಸಂಚಿತಾಪ ಪರಿಹರದಾನಂತರದಲಿ ಸೋಮಾರ್ಕರುಳನಕ ಸಕಲ ಭೋಗಗಳ ಸು ತ್ರಾಮಲೊಕದ ಲುಣಿಸಿ ಕರುಣಾಳು ಪ್ರಾತ್ಯಕೆ ಸ್ವ ಅಹುದೆಂದು ಸೂತ ಶೌನಕಣೆ ಪೇಳ್ದ8 ಈ ಭರತ ಖಂಡದೊಳಗುಳ್ಳ ತೀರ್ಥಕ್ಷೇತ್ರ ವೈಭವಾಬ್ಜ ಭವಾಂಡ ಪಾರನದೊಳಗೆ ಹರಿ ಪರಮಕಾರುಣ ದಿಂದ ಸ್ತ್ರೀಬಾಲ ಗೋವಿಪ್ರಮಾತ ಪಿತೃಗಳ ಧನ ಲೋಭದಿಂದಲಿಕೊಂದ ಪಾತಕವ ಪರಿಹರಿಸಿ ಬೇಡಿದಿಷ್ಟಾರ್ಥಗಳನು 9
--------------
ಜಗನ್ನಾಥದಾಸರು
ಸ್ಮರಿಸಿ ಸುಖಿಸೊ ನರನೆ - ಗುರುರಾಯರನನುದಿನ ಪ ಶರಣು ಜನರ‌ಘ ತರಿದು ಕರುಣದಿ ಚರಣ ಸರಸಿಜ ಹರುಷದಿಂದಲಿ ಅ.ಪ ನಳಿನ ಬಾಂಧವ ಕುಲದಿ ಅವತಾರ ಮಾಡಿದೆ ಇಳಿಜರಮಣನಾಜ್ಞದಿ ಕಲಿಯುಗದಿ ದ್ವಿಜರನು ಸಲಹಲೋಸುಗ ಜಗದಿ ಜನಿಸಿ ಗುರುಗಳ || ವಲಿಮೆಯನು ತಾಪಡೆದು ಕೊರಳಲಿ ತುಲಸಿ ಮಾಲೆಯ ಧರಿಸಿ ಹರಿಯನು ವಲಿಸಿ ಥಳ ಥಳ ಪೊಳೆವವ ಸ್ತಂಬದಿ ಕುಳಿತ ಶ್ರೀರಂಗವಲಿದ ದಾಸರ 1 ಮಾನಿನಿಯಳ ಮಾನರಕ್ಷಿಸಿದೆ ಶ್ರೀ ಪವ ಮಾನನಯ್ಯನ ಕರುಣವನು ಪಡೆದು ಸ್ತುತಿಸಿದಿ ವನು ಪಾಲಿಸಿ ಗುರು ಭವ ಕಾನನಕೆ ಕೃಶಾನುವೆನಿಸಿದ ಮಾನವಿ ಪುರ ನಿಲಯರನು ಅನುಮಾನವಿಲ್ಲದೆ ಮಾನಸದಿನೀ 2 ಶ್ರೀಮಧ್ವಾಚಾರ್ಯ ಸುಮತ ಶರಧಿಗೆ ಹಿಮ ಧಾಮನೆನಿಸಿ ನಿರುತ ಸೇವಿಪರಿಗೆ ಕಾಮಿತಾರ್ಥಗಳಿಗೆ ತ್ವರಿತ ನೀಡಿ ಶಿರಿವರ ಶಾಮಸುಂದರ ಸ್ವಾಮಿ ಪರನೆಂಬೊ | ಪ್ರೇಮದಿಂದಲಿ ಹರಿಕಥಾಮೃತ ಈ ಮಹಾಸುಗ್ರಂಥ ರಚಿಸಿದ ಹೇಮ ಕಶ್ಯಪ ತನಯರನುಜರ 3
--------------
ಶಾಮಸುಂದರ ವಿಠಲ
ಸ್ಮರಿಸೊ ಮನವೆ ಸಿರಿಲೋಲ ಶ್ರೀ ಕೃಷ್ಣನ ಸ್ಮರಿಸಲೊದಗುವ ಸ್ವಾಮಿ ಶ್ರೀ ವಿಷ್ಣುವಿನ ಧ್ರುವ ಸ್ಮರಿಸಿ ಕರಿರಾಜ ಸೆರೆಯಿಂದ ಬಿಡಲಿಲ್ಲವೆ ದುರಿತವನು ಗೆದ್ದರುಷಬಡಲಿಲ್ಲವೆ 1 ಪರಿ ಹರಿ ಮಹಿಮೆ ತಿಳಿಯಲಿಲ್ಲವೆ2 ಸ್ಮರಿಸಿ ದ್ರೌಪದಿ ಅಪತ್ತುಗಳಿಲಿಲ್ಲವೆ ಮೊರೆಯಗೇಳಿ ಕೃಷ್ಣ ಸುಳಿಯಲಿಲ್ಲವೆ 3 ಸ್ಮರಿಸಿ ಪಾಂಡವ ಸತ್ವವು ನಡೆಲಿಲ್ಲವೆ ಅರಗಿನ ಮನೆಯೊಳು ಉಳಿಲಿಲ್ಲವೆ 4 ಸ್ಮರಿಸು ಮಹಿಪತಿ ಮನವ ನಿಜಗೊಲಿಲ್ಲವೆ ಗುರು ಚರಣ ಸ್ಮರಿಸಿ ನೆಲೆಗೊಳಲಿಲ್ಲವೆ5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಸ್ಮಾರ್ತರು ನಾಮವ ಧರಿಸಿ ಯಥಾರ್ಥವು ಹರಿನಾಮವ ಬಹಳ ವಿಸ್ತರಿಸಿ ಪ ಕಣ್ಣಿಗೆ ಕಾಣದೆ ಪೂರ್ಣವಾಗಿಹ ನಾಮ ಚನ್ನಕೇಶವ ರಾಯನೆಂದೆಂಬ ನಾಮ ಉನ್ನತವಾಗಿಹ ನಾರಾಯಣ ನಾಮ ಮಾಧವ ನಾಮವ 1 ಅಂತರಂಗದಿ ಗೋವಿಂದನ ನಾಮವ ಸಿರಿ ನಾಮವ ಸಂತತ ಮಧುಸೂದನನೆಂಬ ನಾಮವ ಪಂಥವಿಡಿದು ತ್ರಿವಿಕ್ರಮ ನಾಮವ 2 ಅನುದಿನ ವಾಮನ ನಾಮವ ವನಜಾಕ್ಷ ಶ್ರೀಧರ ಗುಣ ನಾಮವ ವಿನಯದಿ ಹೃಷಿಕೇಶನೆನುತಿಹ ನಾಮವ ತನುವಾದ ಪದುಮನಾಭನ ನಾಮವ 3 ಅಂದದೊಳು ಧರಿಸಿರುವ ದಾಮೋದರ ನಾಮ ಚಂದದಿ ವಾಸುದೇವನ ನಾಮವ ಕುಂದದೆ ಸಂಕರ್ಷಣನೆಂಬ ನಾಮವ ಬಂಧನ ಪರಿಹಾರ ಪ್ರದ್ಯುಮ್ನ ನಾಮವ 4 ಅರ್ಥಿಯಿಂದಲೆ ಅನಿರುದ್ಧನ ನಾಮವ ಉತ್ತಮ ಪುರುಷೋತ್ತಮ ನಾಮವ ಭಕ್ತಿಯಿಂದಲೆ ಅಧೋಕ್ಷಜನೆಂಬ ನಾಮವ ಮೃತ್ಯುವು ಕಾಣದ ನರಹರಿ ನಾಮವ 5 ಅಚ್ಯುತ ನಾಮವ ನಿಶ್ಚಯಿಸಿ ಜನಾರ್ದನ ನಾಮವ ಬಚ್ಚಿಡಬೇಡ ಉಪೇಂದ್ರನ ನಾಮವ ಸಿರಿ ನಾಮವ 6 ದುಷ್ಟನಿಗ್ರಹವಾದ ಕೃಷ್ಣನ ನಾಮವ ಬೆಟ್ಟದ ವರಾಹತಿಮ್ಮಪ್ಪನ ನಾಮವ ಅನುದಿನ ಘನ ನಾಮವ ಸೃಷ್ಟಿಯೊಳು ಉತ್ತಮ ಸ್ಮಾರ್ತನೆ ವೈಷ್ಣವ 7
--------------
ವರಹತಿಮ್ಮಪ್ಪ
ಸ್ವಸ್ತ ಮಾಡಿಕೊಳ್ಳಬೇಕು ವಸ್ತು ತನ್ನೊಳಾಗದ ಹಸ್ತ ನೀಡಲಿಕ್ಕೆ ಸ್ವಾಮಿ ವಿಸ್ತರಿಸಿ ತೋರುತದೆ ಧ್ರುವ ಸಾವಧಾನವಾಗಲಿಕ್ಕೆ ಸಾಧಿಸಿ ಬರುತದೆ ಭಾವ ಬಲಿದು ನೋಡಲಿಕ್ಕೆ ಕಣ್ಣಮುಂದೆ ಭಾಸುತದೆ ನಿವಾತ ಕೂಡಲಿಕ್ಕೆ ತಾನೆ ತಾನಾಗ್ಯದೆ ಆವಾಗ ನೋಡಿ ನಿಜ ಠವಠವಿಸುತದೆ 1 ಆರೇರಿವೆರದು ನೋಡಿ ಗುರುವಾಕ್ಯ ಮಿರಬ್ಯಾಡಿ ಸಾರವೆ ಆದೆ ನೋಡಿ ಗುರುಸೇವೆ ಪೂರ್ಣಮಾಡಿ ದೂರ ಹೋಗಿ ನೋಡಬ್ಯಾಡಿ ತಿರುಗಿ ನಿಮ್ಮೊಳು ನೋಡಿ2 ಇದ್ದಲ್ಲೆ ಅದ ಪೂರ್ಣ ಸದ್ಗುರು ಕರುಣ ಬಿದ್ದಲ್ಲೆ ಬಿದ್ದು ಘನ ಸತ್ಯವಾದ ನಿಜಘನ ಬುದ್ಧಿವಂತರ ಮನ ಗೆದ್ದು ಅಯಿತುನ್ಮನ ಸಿದ್ಧರ ನಿಜಸ್ಥಾನ ಶುದ್ಧ ಮಹಿಪತಿ ಸುಪ್ರಾಣ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಸ್ವಹಿತ ಸುಪಥ ಸಾಧನ ಪಡೆದು ಸ್ವಸುಖಗೂಡಿರೊ ವಿಹಿತ ಮರೆದು ವಿಭ್ರಮಾಚರಿಸಬ್ಯಾಡಿರೋ ಧ್ರುವ ದಾರು ತಿಳಿದು ನೋಡಿರೊ ಜ್ಞಾನ ಹೀನರಾಗಿ ಗರ್ವ ಹಿಡಿಯಬ್ಯಾಡಿರೊ ಸ್ವಾನುಭವಾಮೃತವನ್ನುಂಡು ಸವಿ ಸೂರ್ಯಾಡಿರೊ ನಾನು ನೀನು ಎಂಬ ಬಿನಗುಭ್ರಮ ಈಡ್ಯಾಡಿರೊ 1 ಮನದ ಕೊನಿಯಲಿದ್ದ ಘನದಾಶ್ರಯವು ಮಾಡಿರೊ ತನುವು ಲಂಪಟ್ಹಿಡಿದು ತನ್ನ ಮರಿಯಬ್ಯಾಡಿರೊ ಜನುಮ ಸಫಲವಾಗುವ ಸುಜಾಗ್ರತಿಯ ಪಡೆಯಿರೊ ನೆನವು ನೆಲೆಯಗೊಂಡು ನಿಜದಾಶ್ರಯದಲಿ ನಡೆಯಿರೊ2 ಮರ್ತು ಮೈಯ ವ್ಯರ್ಥ ದಿನವಗಳಿಯಬ್ಯಾಡಿರೊ ನಿರ್ತದಿಂದ ಅರ್ತ ಭಾವದರ್ಥಿ ನೋಡಿರೊ ಕರ್ತು ಭಾನುಕೋಟಿತೇಜನ ಗುರ್ತು ಮಾಡಿರೊ ಅರ್ತು ಮಹಿಪತಿ ಸ್ವಾಮಿಪಾದ ಬೆರ್ತುಕೂಡಿರೊ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಸ್ವಾನುಭವದ ಸುಖ ಸಾಧಿಸಿ ನೋಡಿರೋ ನೇಮದಿಂದ ಘನ ಗುರು ಕೃಪೆಯಿಂದ ಅನುಭವಿಸಲು ಬ್ರಹ್ಮಾನಂದ ಧ್ರುವ ಶಿಖಾಮಧ್ಯದಲಿ ಪೂರ್ಣ ಸುಖಗರವುತಲ್ಯದೆ ಸಂತ್ರಾಧಾರಿ ಸಕಲವೆಲ್ಲಕೆ ಸನ್ಮತವಾಗಿ ತೋರುವದೊಂದೇ ಪರಿ ಶುಕಾದಿ ಮುನಿಗಳು ಪ್ರಕಟಿಸಿ ಹೇಳಿಹರು ಖೂನದೋರಿ ಬೇಕಾದರೆ ಇದು ನೋಡಬೇಕು ಷಡುಚಕ್ರವೇರಿ 1 ಸಾಮಾನ್ಯವಲ್ಲವಿದು ಸಹಸ್ರ ಕೋಟಿಗೊಬ್ಬ ಬಲ್ಲ ಖೂನ ಕಾಮಾಂಧದೊಳಗಿದ್ದ ಮನುಜ ಪ್ರಾಣಿಗಳು ಬಲ್ಲವೇನ ತಾಮಸಿಗಳಿಗಿದು ತಾರ್ಕಣ್ಯವಾಗುವದಲ್ಲ ಗಮ್ಯಸ್ಥಾನ ಸ್ವಾಮಿ ಸದ್ಗುರು ದಯಮಾಡಿದರಹುದು ಸಮ್ಯಗಜ್ಞಾನ 2 ಶಿರೋರತ್ನವಾಗಿ ವಂದಿಸಿಕೊಂಬುವದಿದೆಲ್ಲಕೆ ಪೂಜ್ಯ ಹರುಷಗೈಸುವ ಪುಣ್ಯ ಪರಮ ಭಕ್ತರಿಗಿದೆವೆ ಸಾಯೋಜ್ಯ ತರಳ ಮಹಿಪತಿಗಿದೆ ಸ್ವ ಸುಖದೋರುವ ಸುಸಾಮ್ರಾಜ್ಯ ಶಿರದಲಿ ಕರವಿಟ್ಟು ತೋರಿದ ಗುರು ಭಾನುಕೋಟಿತೇಜ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಸ್ವಾಮಿ ಅವಧೂತ ಕಾವ ಕರುಣನೆ ಪೂರ್ಣ ನೀನೆ ಸದೋದಿತ ಧ್ರುವ ಕರುಣ ದಯದ ಹುದಯ್ಯ ನೀಆಧಾರ ಶರಣ ಜನರಿಗಹುದಯ್ಯ ನೀಆಧಾರ ತಾರಿಸುವ ಸ್ವಾಮಿ ಅಹುದಯ್ಯ ನೀ ನಿರ್ಧಾರ ಪರಮ ದಯಾನಿಧಿ ನೀ ಸುಙÁ್ಞನದ ಸಾಗರ 1 ಅನಾಥನಾಥನಹುದೊ ಪೂರ್ಣ ದೀನಾನಾಥ ಸನಾಥ ಮಾಡುತಿಹ್ಯ ಶ್ರೀಸದ್ಗುರು ನೀ ಸಾಕ್ಷಾತ ಅನಾದಿ ನಿಜವಸ್ತು ಅಹುದಯ್ಯ ನೀ ಪ್ರಖ್ಯಾತ ಮುನಿ ಜನರಿಗೆ ನೀ ಆನಂದ ಸುಪಥ 2 ದೇಶಿಕರ ದೇವನಹುದಯ್ಯ ಕೃಪಾಕರ ಲೇಸು ಲೇಸಾಗೆನ್ನ ಪಾಲಿಸುವ ನೀ ದಾತಾರ ಭಾಸುತಿಹ ಭಾನುಕೋಟಿತೇಜ ಮನೋಹರ ದಾಸ ಮಹಿಪತಿ ಗುರು ನೀನೆ ಸಹಕಾರ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಸ್ವಾಮಿ ಕ್ಷೇಮೇಂದ್ರರ ಪ್ರೇಮ ಭಜಕ ಶ್ಯಾಮಸುಂದರ ಪ ಅಷ್ಟಭೋಗ ಪಟ್ಟಾರೋಹಣ ನಿಷ್ಟಜನರ ಕಷ್ಟಹರಣ ಸೃಷ್ಟಿ ಈರೇಳು ಇಟ್ಟು ಹೃದಯದಿ ಮುಟ್ಟಿರಕ್ಷಿಪ ಅಷ್ಟಮೂರುತಿ 1 ಕಮಲನಾಭ ಕಮಲವದನ ಕಮಲಪಾಣಿ ವಿಮಲಚರಿತ ಕಮಲಪೀಠನಯ್ಯ ಸುದಯ ಕಮಲನೇತ್ರ ಕಮಲಪ್ರಿಯಾ2 ಭಕ್ತಜನರ ಪ್ರಾಣಧವ ನಿತ್ಯ ನಿರ್ಮಲ ಮುಕ್ತಿಪದವ ಭಕ್ತಗಿತ್ತು ನೀಡು ಕ್ಷೇಮ ನಿತ್ಯ ನಿರ್ಮಲಾತ್ಮ ಶ್ರೀರಾಮ 3
--------------
ರಾಮದಾಸರು
ಸ್ವಾಮಿ ಗುರು ಗೋವಿಂದ ವಿಠಲ ಪೊರೆ ಇವನಾ ಪ ಶ್ರೀಮನೋಹರನಂಘ್ರಿ | ಕಮಲಕಾಂಕ್ಷಿಪನಾ ಅ.ಪ. ಶರಧಿ | ಮೇಶ ಮಧ್ವೇಶಾ 1 ತುಂಗೆ ತೀರದಿ ಧವಳ | ಗಂಗೆ ತಟವಾಸಯತಿಪುಂಗವರ ಕರುಣಾ | ಪಾಂಗ ವೀಕ್ಷಣವಾಮಂಗಳ ಸ್ವಪ್ನದಲಿ | ಕಂಗಳಿಂದಲಿ ಕಂಡುಸಂಗ ಸಾಧುಗಳ ಉ | ತ್ತುಂಗ ಬಯಸುವನೋ 2 ಜಲಜನಾಭನ ಭಜಿಸೆ | ಕುಲವು ಪ್ರಾಧಾನ್ಯಲ್ಲಹಲವಾರು ದೃಷ್ಠಾಂತ | ಕೇಳಿ ಬರುತಿಹುದೋಸುಲಭ ನೀನೆಂತೆಂದು | ಬಲವಿನಿಂ ಪ್ರಾರ್ಥಿಸುವೆತಿಳಿಪುವುದು ಮರುತಮತ | ಹಲವು ತತ್ವಗಳಾ 3 ಪಾದ್ಯ | ಚೀರ್ಣ ಸತ್ಕತಿಯವನುಪೂರ್ಣಗೈಸಿವನ ಪ್ರಾಚೀನ ಕರ್ಮಗಳಾ 4 ನಾಮಾಧಿಕಾರಿ ಇವ | ನಾಮಸ್ಮøತಿ ಸರ್ವದಾನೇಮದಿಂ ಫಲಿಸಿವಗೆ | ಸೋಮಧರನುತನೇಕಾಮಜನಕನೆ ಗುರೂ | ಗೋವಿಂದ ವಿಠಲಯ್ಯಈ ಮಾತು ಸಲಿಸೆಂದು | ಸ್ವಾಮಿ ಪ್ರಾರ್ಥಿಸುವೇ 5
--------------
ಗುರುಗೋವಿಂದವಿಠಲರು
ಸ್ವಾಮಿ ತಪ್ಪಾರಿಸುವರೆ ನೀ ನಮ್ಮ ಸುಮ್ಮನುಂಡಾಡುವ ಬಾಲಕ ನಿಮ್ಮ ಅಮ್ಮ ಅಪ್ಪನೆಂದಾಡುದೆ ನಾ ತಮ್ಮ ಕಂ ಕಿಮೆಂದಾಡಕರಿಯೆ ನಾವಮ್ಮ 1 ಓದಿ ತಿಳಿಯಲರಿಯೆ ಶಾಸ್ತ್ರವೇದ ಭೇದಿಸಲರಿಯೆ ನಾ ನಿಮ್ಮ ಬೋಧ ಹಾದಿ ತಿಳಿಯುದೆ ಬಲು ತಾ ಅಗಾಧ ಇದೆ ಪಾಲಿಸಬೇಕಯ್ಯ ಸುಪ್ರಸಾದ2 ಭಕ್ತಿ ಮಾಡಲರಿಯೆ ನಿಮ್ಮ ದೃಢ ಯುಕ್ತಿ ತಿಳಿಯಲರಿಯದೆ ನಾ ಮೂಢ ಶಕ್ತಿ ಸಾಮಥ್ರ್ಯನ್ನೊಳು ನೋಡಬ್ಯಾಡ ಯುಕ್ತಾಯುಕ್ತ ನೋಡದಿರು ಎನ್ನ ಕೂಡ3 ಪತಿತಪಾವನನೆಂಬ ನಿನ್ನ ಬಿರುದು ಎತ್ತ ಓಡಿಹೋಗಬಲ್ಲದದು ಚಿತ್ತ ನೆಲೆಗೊಂಡು ಬಂದು ನಿಮ್ಮ ಬೆರೆದು ಮತ್ತ ಒರೆದು ನೋಡುವದಿದೆ ಅರೆದು 4 ಶರಣ ಹೊಕ್ಕ ಮ್ಯಾಲೆಲ್ಲಿಹುದೈಯ ಮರಣ ಚರಣಕಮಲಕ್ಕೊಪ್ಪಿಸಿಹೆ ನಾ ಹರುಣ ಅರಿತು ಮಾಡುವ ನಿಮ್ಮ ದಯ ಕರುಣ ತರಳ ಮಹಿಪತಿ ನಿಮ್ಮಣುಗ ಪೂರ್ಣ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಸ್ವಾಮಿ ನಮ್ಮ ದೇವದತ್ತ ಬ್ರಹ್ಮಾನಂದ ಅವಧೂತ ಸಮಸ್ತಜನದಾತ ಬ್ರಹ್ಮಾದಿಗಳೊಂದಿತ ಧ್ರುವ ಕುಡಲಿಕ್ಕೆ ತಾ ಉದಾರಿ ಬಲು ದೊಡ್ಡ ಉಪಕಾರಿ ಕಡೆಗಾಣಿಸುವ ಧೊರಿ ನಿಜ ನೀಡುತಿಹ್ಯ ಸಾರಿ ಬಡವರಿಗೆ ಆಧಾರಿ ಭಕ್ತಜನ ಸಹಕಾರಿ ಪರಿ ಮಾಡುತಿಹ್ಯ ಮನೋಹರಿ 1 ಬೀರುತಿಹ್ಯ ನಿಜನೋಡಿ ಕರದಲ್ಲಭಯ ನೀಡಿ ಗುರುತಿಟ್ಟಿದೆ ಸೂರ್ಯಾಡಿ ಶರಣರು ನಿಜಗೂಡಿ ಅರುವ್ಹೆ ಅಂಜನ ಮಾಡಿ ಕುರುವ್ಹೆದೋರುದಿದರಡಿ ಧರೆಯೊಳಿದೆ ಕೊಂಡಾಡಿ ಗುರುನಾಥನೆಂದು ಪಾಡಿ 2 ಅನಾಥ ಬಂಧುನೀತ ದೀನದಯಾಳು ಸಾಕ್ಷಾತ ಅನುದಿನದೆ ಪ್ರಖ್ಯಾತ ಘನಗುರು ಶ್ರೀನಾಥ ಮನೋಭಾವ ಪೂರಿತ ಎನಗುಳ್ಳ ದೇವದತ್ತ ದಾತ ಭಾನುಕೋಟಿ ಉದಿತ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಸ್ವಾಮಿ ನಿನಗೆ ಶರಣನೆಂಬೆ ಸೋಮನಾಥಾ ಸಕಲ ಕಾಮಿತಾರ್ಥವಿತ್ತು ಸಲಹೊ ಸೋಮನಾಥಾ ಪ. ಹರಿಯ ಕರುಣಾ ಬಲದಿ ನೀನು ಸೋಮನಾಥಾ ಸರ್ವ ಸುರರಿಗೆಲ್ಲ ಧೊರೆಯಾಗಿರುವಿ ಸೋಮನಾಥ ಪಾದ ನಂಬಿ ಸೋಮನಾಥ ಮೊರೆಯ ಹೊಕ್ಕೆ ನಿಂದು ಬಂದು ಸೋಮನಾಥ 1 ವಿಘ್ನರಾಜ ನಿನ್ನ ಮಗನು ಸೋಮನಾಥಾ ಬೇಗ ಭಸ್ಮಗೈಸು ವೈರಿಗಳನು ಸೋಮನಾಥಾ ಮಗ್ನನಾದೆ ಮಹಾಂಬುಧಿಯೊಳ್ ಸೋಮನಾಥಾ ಸರ್ವ ವಿಘ್ನವೋಡಿಸೈ ಕೃಪಾಳೊ ಸೋಮನಾಥ 2 ಶಂಕರ ಕೈಪಿಡಿಯೊ ತ್ರಿಪುರ ಬಿಂಕವಾರಿ ಶ್ರೀ- ವೆಂಕಟಾದ್ರಿನಾಥನ ಮನೋನುಸಾರೀ ಕಿಂಕರನೆಂದೆನಿಸೆನ್ನ ಮೃಗಾಂಕಧಾರೀ ಪಾದ- ಪಂಕಜವ ನೀಡು ಸರ್ವಾತಂಕಹಾರೀ 3
--------------
ತುಪಾಕಿ ವೆಂಕಟರಮಣಾಚಾರ್ಯ
ಸ್ವಾಮಿ ನಿಮ್ಮ ಕರುಣ ನಮ್ಮ ಸರ್ವಾಭರಣ ಸ್ವಾಮಿ ನಿಮ್ಮ ಚರಣ ನಮ್ಮ ಜನ್ಮೋದ್ಧಾರಣ ಧ್ರುವ ಸ್ವಾಮಿ ನಿಮ್ಮ ದಯ ನಮ್ಮ ಹಿತೋಪಾಯ ಸ್ವಾಮಿ ನಿಮ್ಮ ಭಯ ನಮ್ಮ ಪುಣ್ಯೋದಯ 1 ಸ್ವಾಮಿ ನಿಮ್ಮ ಖೂನ ನಿಜಸ್ಥಾನ ಸ್ವಾಮಿ ನಿಮ್ಮ ಙÁ್ಞನ ನಿಜಧ್ಯಾನ 2 ಸ್ವಾಮಿ ನಿಮ್ಮ ನೋಟ ನಮ್ಮ ಮನದೂಟ ಸ್ವಾಮಿ ನಿಮ್ಮ ಮಾಟ ನಮ್ಮ ಸುಖದಾಟ 3 ಸ್ವಾಮಿ ನಿಮ್ಮ ನಾಮ ನಮ್ಮ ಅತಿಪ್ರೇಮ ಸ್ವಾಮಿ ನಿಮ್ಮ ನೇಮ ನಮ್ಮ ನಿಜಾಶ್ರಮ 4 ಸ್ವಾಮಿ ನಿಮ್ಮ ಸೋಹ್ಯ ನಮ್ಮ ನಿಜಾಶ್ರಯ ಸ್ವಾಮಿ ನಿಮ್ಮ ಸಾಹ್ಯ ಮಹಿಪತಿ ಮನೋತ್ರಾಹ್ಯ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು