ಒಟ್ಟು 2434 ಕಡೆಗಳಲ್ಲಿ , 116 ದಾಸರು , 1874 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಶ್ರೀರಂಗ ಯಾತ್ರೆಯನು ಮಾಡಿಬಾರೆಂದೆನ್ನ ಈ ರೀತಿಯನುವ ಮಾಡಿದೆಯ ಸ್ವಾಮಿ ಪ ಕಾರುಣ್ಯನಿಧಿಯೆ ವೇಲಾಪುರಾಧೀಶ್ವರನೆ ಆರುಣ್ಯದೊಳು ಕೆಡಹಿದೆಯ ಸ್ವಾಮಿ ಅ.ಪ ದಾರಿಯನು ತೋರಲೈತಂದ ಶ್ರೀವೈಷ್ಣವನು ಸೇರಿಸಿದ ನೀಯಡವಿಯಸ್ವಾಮಿ ಕಾರುಗತ್ತಲೆ ಸುರಿವ ಮಳೆಯ ಸಿಡಿಲಿನ್ನೆಲ್ಲಿ ಸೇರುವೆನು ಈ ಗಿರಿಯೊಳೂ ಸ್ವಾಮಿ 1 ನಾರಿ ಮಕ್ಕಳು ಭೃತ್ಯರೆಲ್ಲಿ ಪೋದರೋ ಯೇನು ಕಾರಣಬಂದೆನಯ್ಯ ಸ್ವಾಮಿ ಭೂರಮಣ ತ್ರಿಭುವನಾಧಾರ ನೀ ನಲ್ಲದಿ ನ್ನಾರು ಕಾವರೆನ್ನನು ಸ್ವಾಮಿ 2 ಘುಡಿಘುಡಿಸುತಲಿವೆ ಪುಲಿ ಕರಡಿ ಸುತ್ತಲು ಭೋ ರಿಡುತಲಿವೆ ಭಕ್ಷಿಸುವಡೇ ಸ್ವಾಮಿ ಬಿಡದೆ ಕರಿಗಳು ಕೂಗಿ ಕಂಗೆಡಿಸುತಲಿವೆ ಇದೇ ಕಡೆಗಾಲವಾಯಿತೆಲ್ಲೋ ಸ್ವಾಮಿ 3 ನಡೆವರೆಡೆಗಾಣೆ ಇಲ್ಲಿರುವುದಾಗ ದಾಗದು ಕಷ್ಟ ಬಡುವುದಕೆ ಗುರಿಯಾದೆನೇ ಸ್ವಾಮಿ ಎಡಬಲಕ್ಕೊಲೆಯೆ ಕಪ್ಪು ಕಲ್ಲು ಮುಳ್ಳುಗಳಿದೆಕೋ ಒಡೆಯ ಕೈವಿಡದೆ ಸಲಹು ಸಲಹೋ ಸ್ವಾಮಿ 4 ಒಂದೆಸಗಲೇಳಡಸಿತೆಂದು ಪೇಳುವ ನುಡಿಗೆ ಸಂದು ಬಸವಳಿದೆನೆಲೋ ಸ್ವಾಮಿ ಇಂದು ಸಂಧ್ಯಾ ಗಾಯತ್ರಿ ಕರ್ಮವುಳಿದುದರ ವಿಂದಾಕ್ಷ ಸುಮ್ಮನಿಹರೇ ಸ್ವಾಮೀ 5 ಎಂದೆಂದು ಮಾತನಾಡುವನಾಥರಕ್ಷಕನೆ ಬಂದುದೀಗೇನು ಸಿರಿಯು ನಿನಗೇ ಬಂಧನವ ಬಿಡಿಸು ದುರ್ಮರಣದಲಿ ಕೊಲ್ಲದಿರು ತಂದೆ ವೈಕುಂಠ ರಮಣಾ ಸ್ವಾಮೀ 6
--------------
ಬೇಲೂರು ವೈಕುಂಠದಾಸರು
ಶ್ರೀರಂಗನಾಥಾ ಶ್ರಿತ ಸೌಖ್ಯದಾತ ಪ ದಾತ ಅ.ಪ ಬ್ರಹ್ಮಕರಾರ್ಚಿತ ಪಾದಾರವಿಂದ ಬ್ರಹ್ಮಜನಕ ಪೂರ್ಣಾನಂದ ಮುಕುಂದಾ 1 ರಾವಾಣಾನುಜಗೆ ಒಲಿದು ನೀ ಬಂದೆ 2 ಕಾವೇರಿ ತಪಗೈಯೆ ಕರುಣದಿ ನೀ ನೋಡಿ ದೇವ ತನ್ಮಧ್ಯದಿ ನೆಲೆಸಿದೆ ಹೂಡಿ 3 ಏಳು ಪ್ರಾಕಾರ ಮಧ್ಯದಲ್ಲಿರುವವನೆ ಫಾಲನಯನ ಸಖ ಪತಿತ ಪಾವನನೆ 4 ನಿನ್ನ ಸಂದರುಶನ ಮಾಡಿದ ಜನರು ಧನ್ಯರಾಗುತಯಿಹಪರ ಪಡೆಯುವರು 5 ಚಂದ್ರ ಪುಷ್ಕರಣಿಯೋಳ್ಮಿಂದ ತಕ್ಷಣದಿ ಬೆಂದು ಪೋಗುವುದಘವೃಂದವು ಭರದಿ 6 ಗುರುರಾಮ ವಿಠ್ಠಲ ವರಮುನಿ ಪಾಲ ಶರಣಜನಾಧಾರ ಶ್ರೀ ತುಲಸೀ ಮಾಲಾ 7
--------------
ಗುರುರಾಮವಿಠಲ
ಶ್ರೀರಂಗೇಶವಿಠಲ | ಪೊರೆಯೆನ್ನ ಹೃದಯಾ- ಧಾರನೆ ಮಾಲೋಲ | ಸ್ಮರಕೋಟಿ ಸುಂದರಾ- ಕಾರ ನತಜನಪಾಲ | ಅರಿಮಸ್ತಕ ಶೂಲ ಪ ಆರು ಅರಿಗಳ ಗೆಲಿಸಿಯೆನ್ನಿಂ- ದಾರು ಎರಡನು ಮುರಿಸಿ ನಿನ್ನೊಳು ಆರು ಮೂರನೆಯಿತ್ತು ಸರ್ವದ ಪಾರುಗೈಯ್ಯಬೇಕೆಂಬೆ ದೇವ ಅ.ಪ. ಆನೆಗೊಂದಿ ನಿವಾಸ | ಭಕುತರ ನಿರಂತರ ಮಾನದಿಂ ಪೊರೆವ ಶ್ರೀಶ | ಎಂದೆಂದಿಗು ನಾನಿನ್ನ ದಾಸರ ದಾಸ | ನೆಂದು ಕರುಣಿಸು ನೀನೆನಗೆ ಲೇಸ | ಭಾನುಕೋಟಿ ಪ್ರಕಾಶ ಮಾನ ಅವಮಾನಗಳು ನಿನ್ನಾ- ಧೀನವೆಂದೇ ನಂಬಿಕೊಂಡಿಹ ದೀನನೆನ್ನನು ದೂರ ನೋಡದೆ ಸಾನುರಾಗದಿ ಪೊರೆವುದೈಯ್ಯಾ ನಳಿನಭವ ಅಂಡದೊಳಗೆ ದಾನಿ ನೀನಲ್ಲದನ್ಯರುಂಟೆ ಏನ ಬೇಡೆನು ನಿನ್ನ ಬಳಿಯಲಿ ಜ್ಞಾನ ಭಕುತಿ ವೈರಾಗ್ಯವಲ್ಲದೆ1 ವರಾಹ ಜನ ತಾಪ | ತ್ರಯ ದೂರ ವಾಮನ ಮಾನವೇಂದ್ರರ ಪ್ರತಾಪ | ವಡಗಿಸಿದೆ ಪ್ರಬಲ ದಾನವೇಂದ್ರನ ಶಾಪ | ನೀನೆ ಕಳೆದೆಯೊ ಶ್ರೀಪಾ ವಾನರ ಬಲ ನೆರಹಿಕೊಂಡು ನೀನು ರಾವಣನನ್ನು ಕೊಂದು ಮಾನಿನಿಯ ಪೊರೆದು ಶರಣಗೆ ನಿ ದಾನ ಮಾಡದೆ ಪಟ್ಟಗಟ್ಟಿದೆ ದಾನವಾಂತಕನೆಂಬ ನಾಮವ- ನ್ಯೂನವಿಲ್ಲದೆ ಪರಸತಿಯರಭಿ ಮಾನ ಕಳುಪಿದ ಜಾಣ ಕಲ್ಕಿಯೆ 2 ಸೂರಿಜನ ಪರಿಪಾಲ ಸದ್ಗುಣಗಣನಿಲಯ ಘೋರರಕ್ಕಸಕಾಲ | ವರಶೇಷತಲ್ಪವ ನೇರಿ ನಿರುಪಮ ಬಾಲ | ನಂದದಿ ನಿರುತ ನೀ ತೋರುತಿರುವೆಯೊ ಲೀಲ | ಶ್ರೀ ರಂಗೇಶವಿಠಲ ಮಾರ ಜನಕನೆ ಮಂಗಳಾಂಗನೆ ಕ್ರೂರ ಕುಲವನದಾವ ಅನಲನೆ ಭೂರಿ ಕರುಣವ ಬೀರಿ ಎನ್ನಸು ಭಾರ ನಿನ್ನದು ವಾರಿಜಾಕ್ಷನೆ ಎನ್ನ ಹೃದಯದಿ ಚಾರು ಬಿಂಬವ ಸಾರಿ ಬೇಡುವೆ ಬಾರಿ ಬಾರಿಗೆ ಶರಧಿ ಬಡಬನೆ3
--------------
ರಂಗೇಶವಿಠಲದಾಸರು
ಶ್ರೀರಮಣಿ ದಯದೋರು ಬ್ರಹ್ಮ ಸಮೀರಜನ ನೀ ಬೇಗ ಮೂರುತಾಪದ ದೂರಗೈಸಿ ಸರೋರುಹಾಕ್ಷನ ಸಾರಗೈಸುತ ಪ. ಶ್ರೀನಿವಾಸನ ಸರ್ವಸೇವೆಯ ತಾನೆ ಮಾಳ್ಪೆನೆಂದು ಭಾನುಕೋಟಿ ಸಮಾನಭಾಸ ವಿಮಾನವಾಗಿ ನಿಂದು ಮಹಾನಭೀಯ ಸಮಸ್ತ ವಸ್ತು ವಿ- ಧಾನರೂಪಿಣಿಯಾಗಿ ಭಕ್ತಜನಾನುವರ್ತಿಯ ಭಾವ ಗ್ರಹಿಸಿದ 1 ಹಾರಕಟಕ ಕಿರೀಟವರ ಕೇಯೂರ ಬಾಹುಪುರಿಯು ಚಾರುತರ ಗಂಭೀರರವ ಶೃಂಗಾರದ ನೂಪುರವ ಮಾರನೈಯ್ಯನ ಮುದ್ದು ಹಸ್ತದಿ ವಾನೈಜಾರಿಗದಾಬ್ಜರೂಪದಿ ಸೇರಿ ಶೋಭಿಪ ಶಕ್ತಿ ನಿನ್ನ ಪದಾರವಿಂದವ ನಂಬಿ ನಮಿಪೆನು 2 ಕುಂದ ನೋಡದಿಂದೂ ಹರಿ ಚಂದನಾತ್ಮಕ ವೆಂಕಟೇಶನು ಬಂದಿಲ್ಲಿಹನೆಂದು ಮುನಿಜನವೆಂದ ಮಹಿಮೆಯ ನಿಂದು ತೋರುತ ಸನ್ನಿಹಿತಳಾಗೆಂದು ಚರಣದ್ವಂದ್ವ ಪೊಗಳುವೆ 3 ,
--------------
ತುಪಾಕಿ ವೆಂಕಟರಮಣಾಚಾರ್ಯ
ಶ್ರೀರಮಾಧವಾಶ್ರೀತಜನಪಾಲಿತ ಮಾರಕೋಟಿರೂಪ ವಾರಿಧಿಶಯನ ಮುರಾರಿ ಕೇಶವ ಶ್ರೀಮ- ನ್ನಾರಾಯಣ ನೀರಜದಳಲೋಚನಪ. ಮಾನುಷತ್ವವಾಂತ ಸಮಯದಿ ಹೀನ ಭೋಗದ ಚಿಂತೆ ನಾನು ನೀನೆಂಬಾಭಿಮಾನದಿ ಮನಸು ನಿ- ಧಾನವಿಲ್ಲದೆ ಅನುಮಾನದಿಂದಿಹುದೈ ಏನು ಕಾರಣ ಹೃದಯನಳಿದೊಳು ನೀನೆ ನೆಲಸಿಕೊಂಡೀ ನರಯೋನಿಗೆ ನೀನೆ ಬರಿಸಿಯವಮಾನ ಬಡಿಸುವದು ಊನವಲ್ಲವೆ ಪದದಾಣೆ ಸತ್ಯವಿದು1 ಬಾಲಕತನದೊಳಗೆ ಕಾವ್ಯದ ಶೀಲವಿತ್ತೆಯೆನಗೆ ಕೀಳುಮಾಡದೆ ಯೆನ್ನ ಬಾಲಭೂಷಿತಂಗಳ ಕೇಳೈ ಶ್ರೀಲಕ್ಷ್ಮೀಲೋಲ ವೆಂಕಟರಾಯ ಕಾಲಕಾಲಪ್ರಿಯ ಪಾಲಿಸೊಲಿದು ಕರು- ಣಾಲವಾಲ ನತಪಾಲಶೀಲ ಮುನಿ ಜಾಲವಂದ್ಯ ವನಮಾಲದಾರಿ ಜಗ ಮೂಲಸ್ವರೂಪ ವಿಶಾಲ ಗುಣಾರ್ಣವ2 ಹಿಂದಾದುದನರಿಯೆ ಇದರಿಂ ಮುಂದಾಗುವುದು ತಿಳಿಯೆ ಹಿಂದು ಮುಂದಿಲ್ಲದೆ ಬಂಧನದೊಳು ಬಲು ನೊಂದೆನೈ ನಿನಗಿದು ಚಂದವೆ ಶ್ರೀಹರಿ ತಂದೆ ತಾಯಿ ಬಂದು ಬಾಂಧವ ಬಳಗ ನೀ ನೆಂದು ನಿನ್ನಯ ಪದದ್ವಂದ್ವವ ಭಜಿಪಾ ನಂದಸುಜ್ಞಾನದಿಂದೆಂದಿಗೂ ಸುಖ ದಿಂದಿರುವಂದದಿ ತಂದೆ ನೀ ಪಾಲಿಸು3 ಧಾರಿಣಿಗಧಿಕವಾದ ಮೆರೆವ ಕು ಮಾರಧಾರೆಯ ತಟದ ಚಾರುನೇತ್ರಾವತಿ ತೀರ ಪಶ್ಚಿಮ ಭಾಗ ಸಾರಿ ತೋರುವ ವಟಪುರದೊಳು ನೆಲಸಿಹ ವೀರ ವೆಂಕಟಪತಿ ವಾರಿಜನಾಭ ಖ- ರಾರಿ ತ್ರಿದಶಗಣವಾರವಂದ್ಯ ಭಾ- ಗೀರಥೀಪಿತ ದುರಿತಾರಿ ದೈತ್ಯಸಂ- ಹಾರಿ ಶ್ರೀಲಕ್ಷ್ಮೀನಾರಾಯಣ ಹರಿ4
--------------
ತುಪಾಕಿ ವೆಂಕಟರಮಣಾಚಾರ್ಯ
ಶ್ರೀವಧು ನಯನಾಬ್ಜ ವಿಲೋಚನಾ ದಾವನಾಗಿಹ ಪಂಕಜಲೋಚನಾ ದೇವನಂಘ್ರಿಯ ಚರಿತದ ಸೂಚನಾ ಪಾತಕ ಮೋಚನಾ 1 ಮತಿ ಮಂತಾಂಭುನಿಧಿ ದ್ವಿಜರಾಜ ದಿತಿ ಸುತಾಹಿ ಕುಲದ್ವಿಜರಾಜಾ ಸುತ ಮುನಿಹೃದಯಾಬ್ಜದಿನೇಶಾ ಸತತ ದುಷ್ಕøತ ತರುರದನೇಶಾ2 ಆವನೀಭುವ ನತ್ರಯವ ಪಾಲಕಾ ದೇವಕೀತಪದಲಾದನು ಬಾಲಕಾ ದೇವನಾಡಿದ ಮನಿಲಿಯ ಶೋದಾ ಭಾವಿಸಲ್ಕವಗ ಗತಿ ಶ್ರೀಯಶೋದಾ3 ಪರಮ ಸುಂದರ ನಂದ ಕುಮಾರಾ ಅರಿತು ಬಂದನುಗರ್ಭದಿ ಮಾರಾ ಧರಿಯೊಳಾವನ ಮನಿ ಕಾಪುರದ್ವಾಶಕಾ ಸ್ಮರಸಲೀ ಜಗದ ಪಾವಿದಾರಕಾ4 ಮಾನವ ತಂದಿಯಾ ಸುಗಮದಿಂದರಿದ ಬಂಧನ ತಂದಿಯಾ ಮಗನ ಕಾಯಿದಾ ಶಿಕ್ಷಿಸಿ ತಂದಿಯಾ ಮಗನ ಶಿಕ್ಷಿಸಿ ಕಾಯಿದಾತಂದಿಯಾ5 ವನಧಿ ವಂಧಿಸಿ ತೇಲಿಸಿ ಪರ್ವತಾ ಜನಪದಾಟಿಸಿ ವಾನರ ಪರ್ವತಾ ಘನಮಹಿಮನು ಜಾನಕಿ ಕಾಂತಾ ನೆನಹುತಿಹನು ಸಹಶಿವಕಾಂತಾ 6 ಸೇವಿಗಂಡೊಲಿದು ರಾಘವ ತಮ್ಮನಾ ರೇವತೀರಮಣಗೆಂಬನುತಮ್ಮನಾ ಜೀವಗಾಯಿದಾ ಭೀಮನತಮ್ಮನಾ ಪಾವನಂಘ್ರಿಯ ನೆನಿಸತತಂಮನಾ7 ಕುದಿಪುತಿರ್ಪುದು ಮಡು ಪವನಾಶನಾ ವಿದಿತೆ ಘಾಳಿಗೆ ಜೀವನ ನಾಶನಾ ಅದರೊಳಗಡಲು ತಾಜಗ ಜೀವನಾ ಸುಧಿಯ ರೂಪವ ಆಯಿತು ಜೀವನಾ8 ಜಲದಲೀ ನೆನಿಯಲು ಮದವಾರಣಾ ವಲಿದು ಮಾಡಿದ ಬಂಧ ನಿವಾರಣಾ ಸತಿಸ್ವರೂಪದ ನೀಡಿದ ಮುಕ್ತಿಯಾ ನಲಿದು ಮಾಡಲಿ ಶ್ರೀ ಹರಿ ಭಕ್ತಿಯಾ9 ದಾವ ತೇಲಿಸಿದ ನಚ್ಚಿಲಿ ಗೋಕುಲಾ ದೇವ ಕಾವನು ನೋಡಿರಿ ಗೋಕುಲಾ ಜೀವಜಾಲದ ಬೇಡಿ ಪ ಗೋಕುಲಾ ತಾವಿಹರಿಸುತಿಹನು ಗೋಕುಲಾ 10 ಸ್ಮರಿಸಿ ಗೋಕುಲಲ್ಯಾಕಳ ಕಾವನಾ ಧರೆಯೊಳೊಪ್ಪುವ ಕಾಟಿಯ ಕಾವಳಾ ಚರಣ ಗೋಚರ ಮುನಿಮನ ಕಾವನಾ ಶರಣ ಹೋಗದು ಸಕಲಿ ಕಾವನಾ11 ಅವನಂಘಿಯ ಸೇರೆ ವನೌಕಸಾ ಜೀವರಾದರು ಸಾಮದಿವೌಕಸಾ ಭಾವಿಸಲ್ಕಾರಿಯದಾದಳು ಶ್ರೀರಮಾ ದೇವನಾಸ್ತುತಿಸಿ ಬಣ್ಣಿಪ ರಾರಮಾ12 ಮುನಿ ಬಂದನೆಂದು ಸ್ಮರಿಸಲು ಕೃಷ್ಣಾ ಮನಸ್ನೇ ಹದಿಂದೋಡಿ ಬಂದನು ಕೃಷ್ಣ ಅನೇಕ ಪದಾರ್ಥದಿಂ ದುಣಿಸುತಾ ಘನಾನಂದ ನೀಡಿದ ಪಾರ್ಥನ ಸೂತಾ13 ಸುರಗಂಗಿಯ ಪಡದ ದಾವನ ಚರಣ ಅರಿಮರ್ದನಾಗಿಹ ದಾಪಾಣಿ ಚರಣಾ ಸರಿಜಾರ ನಖದಾ ತೇಜಕ್ಕ ತರಣೀ ಇಂದಿರೆ ತರುಣಿ14 ಚರಣಧ್ಯಾಯಿಪದಾವನು ಮಾಧವಾ ಸುರನರೋರಗ ಪೂಜಿ ಮಾಧವಾ ಧರಿಯೊಳಾದನು ಬಾಲಕ ನಂದನಾ ಚರಿತ ಪಾಡಿದ ಮಹಿಪತಿ ನಂದನಾ15
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಶ್ರೀವಾಸಾನತಮಾಕಲಯಾಚ್ಯುತ ಶ್ರೀವಾಸುಕಿಶಯಮಾಮನಿಶಂಹೃದಾ ಪ ಪುಂಡರೀಕ ನಯನಾಂಡಜವಾಹನ ಕುಂಡಲಶಯ ಮಾಂಡವ್ಯಸೇವ್ಯಪದ 1 ಪುಂಡರೀಕ ಸುಮಂಡಿತಾಂಗಪದ ಪುಂಡರೀಕಶ್ರಿತ ಪಾಂಡುತನಯ ಭೋ 2 ನಂದಗೋಪವರ ನಂದಸುಮನೋ ನಂದನಮುನಿಜನ ವಂದಿತಪದಯುಗ 3 ಧರ್ಮತನಯ ಸಹಧರ್ಮಚಾರಿಣಿ ವರ್ಮಪಾಲ ಸದ್ಧರ್ಮ ಶ್ರೀಲಹರಿ 4 ವ್ಯಾಘ್ರನಾಮ ದೈತ್ಯಾಗ್ರನಿಗ್ರಹ- ಣೋಗ್ರಸೇನ ತನಯಾಗ್ರವಿದಾರಣ 5 ಬಾಲಭಕ್ತ ಪರಿಪಾಲ ಹೇಮಮಯ ಚೇಲ ವಿಧೃತ ವನಮಾಲ ನರಹರೆ 6 ಮಾರಜನಕ ಸುರವಾರವಂದ್ಯ ಮಂ ದಾರ ಹಾರ ಸುಕುಮಾರಶರೀರ 7 ಮಂದರಧರ ಪೂರ್ಣೇಂದು ವದನ ಗೋ ವಿಂದ ಮುಕುಂದ ಸನಂದವಂದಿತ 8 ಖಂಡಪರಶು ಕೋದಂಡ ವೇ ತಂಡ ಹಸ್ತಭುಜದಂಡ ರಘೂದ್ವಹ 9 ಅಂಬರೀಷ ವರದಂಬುಜಾಸನಾ ಲಂಬಮಾನ ಚರಣಾಂಬುಜ ಕೇಶವ 10 ಸಾರವಸ್ತು ಪರಿಪೂರ ವ್ಯಾಘ್ರನಗ ಪಾರಿಜಾತ ವರದಾರ್ಯವಿಠಲ ಶ್ರೀ 11
--------------
ವೆಂಕಟವರದಾರ್ಯರು
ಶ್ರೀವೆಂಕಟೇಶ ಪಾಹಿ ತಾವಕ ಭಕ್ತಿಂ ದೇಹಿ ಪ ವಾರಿಜನೇತ್ರಾ ವಾರಿದಗಾತ್ರಾ ನಾರದಸನ್ನುತಪಾತ್ರ ನರಮಿತ್ರ ಸುಚರಿತ್ರ 1 ಅಂಡಜಯಾನ ಕುಂಡಲಿಶಯನ ಖಂಡಪರಶು ಪರಿಪಾಲನ ಮುನಿಲಾಲನ ಸುರಖೇಲನ 2 ಪಂಕಜ ಚರಣ ಸಂಕಟಮೋಚನ ಕಾರಣ ಭವತಾರಣ ಗುಣಪೂರಣ 3 ದಶರಥಬಾಲಾ ದಶಮುಖಕಾಲ ದಶಶತಲೋಚನಪಾಲಾ ಭೂಪಾಲಾ ಸುರಮುನಿಲೋಲ4 ನವನೀತ ಚೋರ ಬೃಂದಾವನವಿಹಾರ ಬಹುದಾರಾ ಧುರಧೀರ 5 ಅಜನುತಪಾದ ಅಪಹೃತ ಖೇದ ಕಲುಷ ನಿರ್ಭೇದ ನುತವೇದ ಸುರಮೋದ 6 ವರವ್ಯಾಘ್ರಾಚಲ ವಿಹರಣ ಶೀಲ ವರದವಿಠಲ ಗೋಪಾಲ ಶ್ರೀಲೋಲ ಬಹುಲೀಲಾ 7
--------------
ವೆಂಕಟವರದಾರ್ಯರು
ಶ್ರೀಶ ಬ್ರಹ್ಮ ಸದಾಶಿವಾದಿ ಸುರಾರ್ಚಿತ ದಾಶರಥಿ ತವ ದಾಸರೊಳಗಿಟ್ಟು ನೀ ಸಲಹೊ ವಿಷಯಾಶೆಗಳ ಬಿಡಿಸಿ ಪ ಲೋಕನೀಯ ವಿಶೋಕ ಭಕ್ತರ ಶೋಕ ಮೋಹವ ನೀ ಕಳೆದು ಸುಖ ವೇ ಕರುಣಿಸು ಕೃಪಕಟಾಕ್ಷದಿ ಅಕೂತಿತನಯ ವಾಕುಮನ್ನಿಸನೇಕ ಮಹಿಮ ವಿ ವೇಕ ಬುದ್ದಿಯ ನೀ ಕೊಡೆನೆಗೆ ಪಿ ನಾಕಿಸುತ ಪರಲೋಕದಾಯಕ ಲೌಕಿಕವ ಬಿಡಿಸೊ1 ವೈರಿವರ್ಗಗಳಾರು ಇಂದ್ರಿಯ ದ್ವಾರದೊಳು ಪೊಕ್ಕು ಚಾರುಧರ್ಮದ ದಾರಿ ಮನಸಿಗೆ ತೋರ ಗೊಡದಲೆ ನಾರಿ ಧರಣಿ ಧನಾ ಹಾರಯಿಸುತಿದ್ದು ಘೋರಿಸುತಿವೆ ಮುರಾರಿ ತವಚರ ಣಾರವಿಂದವ ತೋರಿ ಮನದಿ ಸಂ ಸಾರ ಶರಧಿಯ ತಾರಿಸನುದಿನ2 ತರಣಿ ನವ ಪೋತ ಕಾಲವ ಭೀತಿ ಬಿಡಿಸು ಪುರು ಹೂತನ ಪ್ರಿಯ ಮಾತುಳಾಂತಕ ಮಾತುಗಳನೆ ಮನ್ನಿಸಿ ಶ್ವೇತವಾಹನ ಸೂತಸುಖಮಯ ವಾತಪಿತ ಜಗನ್ನಾಥವಿಠ್ಠಲ ಪಾತಕಾರಣ್ಯ ವೀತಿಹೋತ್ರ ನಾ ತುತಿಪೆನೆ ನಿನ್ನಾ 3
--------------
ಜಗನ್ನಾಥದಾಸರು
ಶ್ರೀಶ ವೇದವ್ಯಾಸನಾದನು ಪ ಶ್ರೀಶ ವೇದವ್ಯಾಸನಾಗಲು ಸಾಸಿರ ನಯನ ಸಾಸಿರ ವದನ ಕರ ಮಿಕ್ಕ ಸುರರೆಲ್ಲ ತು- ತಿಸಿ ಹಿಗ್ಗುತ ಹಾರೈಸಲಂದು ಅ.ಪ. ದರ್ಪಕ ಜನಕ ಸರ್ಪತಲ್ಪನಾಗಿ ತಪ್ಪದನುಗಾಲ ಇಪ್ಪ ವಾರಿಧೀಲಿ ಕಂದರ್ಪ ಹರನೈಯ ಸುಪರ್ಣರಥನಾಗಿ ಒಪ್ಪಿಕೊಂಡು ಇಪ್ಪತ್ತು ಲಕ್ಷಗಲಿಪ್ಪ ಯೋಜನದ ಅಪ್ಪನ ಅರಮನೆ ದರ್ಪಣದಂತೆ ತಾ ರಪ್ಪಥ ಮೀರಿದಂತಿಪ್ಪದು ನೋಡಿ ಸಾ- ಮೀಪಕ್ಕೆ ವಾಣೀಶ ಬಪ್ಪ ಬೇಗಾ 1 ಬಂದು ಬೆನ್ನೈಸಿದ ಮಂದಮತಿ ಕಲಿ- ಯಿಂದ ಪುಣ್ಯಮೆಲ್ಲ ಹಿಂದಾಯಿತೆನೆ ಮು ಕುಂದ ಭಕ್ತನಿಗೆ ಒಂದೆ ಮಾತಿನಲಾ- ನಂದ ಬಡಿಸಿ ಪೋಗೆಂದು ಪೇಳೆ ಅಂದು ಸುಯೋಜನಗಂಧಿ ಗರ್ಭದಲ್ಲಿ ನಿಂದವತರಿಸುತ ಪೊಂದಿದ ಅಜ್ಞಾನ ಅಂಧಕಾರವೆಲ್ಲ ಹಿಂದು ಮಾಡಿ ಸುರ- ಸಂದಣಿ ಪಾಲಿಸಿ ನಿಂದ ದೇವ 2 ಕೆಂಜೆಡೆವೊಪ್ಪ ಕೃಷ್ಣಾಜಿನ ಹಾಸಿಕೆ ಕಂಜಾಪ್ತನಂದನದಿ ರಂಜಿಸುವ ಕಾಯ ಮಂಜುಳ ಸುಜ್ಞಾನ ಪುಂಜನು ವಜ್ಜರ- ನಿತ್ಯ ಅಂಜಿದಗೆ ಸಂಜೆಯ ತೋರಿ ಧನಂಜಯ ಶಿಷ್ಯ ನೀ- ಗಂಜದಂತೆ ಕರಕಂಜವ ತಿರುಹಿ ನಿರಂಜನ ಪೇಳಿದ ಕುಂಜರ ವೈರಿಯ ಭಂಜನನು 3 ಗಂಗಾತೀರದಲಿ ಶೃಂಗಾರ ಉಪವ- ನಂಗಳದರೊಳು ಶಿಂಗಗೋಮಾಯು ಭು ಮೂಷಕ ಮಾತಂಗ ಸಾರಮೇಯ ಕೊಂಗಹಂಗ ಸರ್ವಾಂಗ ರೋಮ ಶರಭ ವಿಹಂಗ ಶಾರ್ದೂಲ ಸಾ- ರಂಗ ಕುರಂಗ ಕುಳಿಂಗ ಪಾಳಿಂಗ ಪ್ಲ ವಂಗ ತುರಂಗ ಪತಂಗ ಭೃಂಗಾದಿ ತು- ರಂಗವು ತುಂಬಿರೆ ಮಂಗಳಾಂಗ 4 ಬದರಿ ಬೇಲವು ಕಾದರಿ ಕಾಮರಿ ಮಧುಮದಾವಳಿ ಅದುಭುತ ತೆಂಗು ಕದಳಿ ತಪಸಿ ಮದಕದಂಬ ಚೂ- ತದಾರು ದ್ರಾಕ್ಷಿಯು ಮೃದು ಜಂಬೀರವು ಬಿದಿರು ಖರ್ಜೂರ ಮೋದದಿ ದಾಳಿಂಬ ತುದಿ ಮೊದಲು ಫ ಲದ ನಾನಾವೃಕ್ಷ ಪದಲತೆಯ ಪೊದೆಯು ಫಲ್ಲಸೈ ಇದೆ ಆರು ಋತು ಸದಾನಂದ 5 ವನದ ನಡುವೆ ಮುನಿಗಳೊಡೆಯ ಕಾನನ ಸುತ್ತಲು ಆ- ನನ ತೂಗುತ್ತ ಧ್ವನಿಯೆತ್ತಿ ಬಲು- ಗಾನ ಪಾಡಿದವು ಗುಣದಲ್ಲಿ ಕುಣಿದು ಖಗಾದಿ ಗಣಾನಂದದಿಂದಿರೆ ವನನಿಕರ ಮೆಲ್ಲನೆ ಮಣಿದು ನೆ- ಲನ ಮುಟ್ಟುತಿರೆ ಅನಿಮಿಷರು ನೋ ಡನಿತಚ್ಚರಿಯನು ಪೇಳೆ 6 ಮೌನಿ ನಾರದನು ವೀಣೆ ಕೆಳಗಿಟ್ಟು ಮೌನವಾದನು ಬ್ರಹ್ಮಾಣಿ ತಲೆದೂಗಿ ಗೀರ್ವಾಣ ಗಂಧರ್ವರು ಗಾನ ಮರೆದು ಇದೇನೆನುತ ಮೇನಕೆ ಊರ್ವಸಿ ಜಾಣೀರು ತಮ್ಮಯ ವಾಣಿ ತಗ್ಗಿಸಿ ನರ್ತನೆಯ ನಿಲ್ಲಿಸಿ ದೀನರಾದರು ನಿಧಾನಿಸಿ ಈಕ್ಷಿಸಿ ಎಣಿಸುತ್ತಿದ್ದರು ಶ್ರೀನಾಥನ 7 ನಮೋ ನಮೋಯೆಂದು ಹಸ್ತ- ಕಮಲ ಮುಗಿದು ನಮಗೆ ನಿಮ್ಮಯ ಅಮಲಗುಣ ನಿಗಮದಿಂದೆಣಿಸೆ ಕ್ರಮಗಾಣೆವು ಉತ್ತಮ ದೇವ ಕೂರ್ಮ ಖಗಮೃಗ ಸಮವೆನಿಸಿ ಅ- ಚಮತ್ಕಾರದಲ್ಲಿ ನಾಮಸುಧೆಯಿತ್ತ ರಮೆಯರಸ ಆಗಮನತ8 ಇದನು ಪಠಿಸೆ ಸದಾ ಭಾಗ್ಯವಕ್ಕು ಮದವಳಿ ದಘವುದದಿ ಬತ್ತೋದು ಸಾಧನದಲ್ಲಿಯೆ ಮದುವೆ ಮುಂಜಿ ಬಿಡದಲ್ಲಾಗೋದು ಶುಭದಲ್ಲಿ ಪದೆಪದೆಗೆ ಸಂಪದವಿಗೆ ಜ್ಞಾನ- ನಿಧಿ ಪೆಚ್ಚುವುದು ಹೃದಯ ನಿರ್ಮಲ ಬದರಿನಿವಾಸ ವಿಜಯವಿಠ್ಠಲ ಬದಿಯಲ್ಲೆ ಬಂದೊದಗುವ 9
--------------
ವಿಜಯದಾಸ
ಶ್ರೀಶ ಶ್ರೀ ಕೇಶವನೆ ಬಾ ಪರುಮ ಪುರುಷ ಶೇಷರಾಯನ ಮುಕುಂದ ಶರಣರಾನಂದ ಪ ಭೂಸುರರು ನಡೆಮುಡಿದು ಪೂರ್ಣಕುಂಭವು ವೇದ ಓಲಗ ಛತ್ರ ಚಾಮರ ದಿಮಿಗೆ ಅ.ಪ ಸುತ್ತಿಬರುತಿಹ ದನುಜ ವೃಂದವೆಲ್ಲವ ತರಿದು ಮುತ್ತಿನಂಥಾ ತನುವು ಧೂಳಾಗಿರುವುದೋ ಒತ್ತುತೆಣ್ಣೆಯ ನಿನಗೆ ಮತ್ತೆಬಿಸಿನೀರೆರೆದು ಕತ್ತುರಿಯ ಹಣೆಗಿಟ್ಟು ನುಡಿಯನುಡಿಸುವೆನೋ 1 ಸರಸಿ ಪೀತಾಂಬರ ಶಿರಕೆ ಮಣಿಯಳವಡಿಸಿ ಕೊರಳಿನೊಳುಹಾಕಿ ತುಳಸೀಮಾಲೆಯ ಕರಕೆ ಕಂಕಣ ಶಂಖ ಚಕ್ರಗಧೆಯಾ ಕಮಲ ದೊರೆನಡುವಿಗೊಡ್ಯಾಣ ಸಿರಿಪದಕೆ ಕಡಗ 2 ಅಂಗಕ್ಕೆ ಶ್ರೀಗಂಧ ಅಗರುಚಂದನ ಧೂಪ ಮಂಗಳದ ದೀಪವೂ ಮಂತ್ರಪುಷ್ಪ ಶೃಂಗಾರ ಮೂರ್ತಿಗೆ ಕನ್ನಡಿಯು ಬೀಸಣಿಗೆ ಸಂಗೀತ ನರ್ತನವು ಸ್ತುತಿಸೇವೆಯೂ 3 ವಸುಮತೀಪಾಲನೆಯ ಸತತ ನೀಗೈಯುತ್ತ ಹಸಿದು ಬಳಲುತ್ತಿರುವೆ ಕೃಷ್ಣಪರಮಾತ್ಮ ಬಿಸಿಯಹೋಳಿಗೆ ತುಪ್ಪ ಹಸುನಿನಾ ಬಿಸಿಹಾಲು ಮೊಸರು ಶಾಲ್ಯನ್ನ ಫಲಪಾನಕದ ಸುಖಹೀರಿ 4 ಶ್ರೀದೇವಿ ಭೂನೀಳ ಇವರೊಡನೆ ತೃಪ್ತಿಯಂ ಶ್ರೀಧರ ಮೂರುತಿ ಹೃದಯ ಕಮಲದಲಿ ಕೂಡೋ ಸಾದರದಿ ಕರ್ಪೂರ ತಾಂಬೂಲವನು ಸದಿಯೋ ಮೋದದಿಂದಾರತಿಯ ಬೆಳಗುವೆನೋ ರಂಗಾ 5 ಜಯತು ಜಗದಾಧಾರ ಪುಷ್ಪಾಂಜಲಿಯೊಧೀರ ಜಯ ಸಾಧು ಹೃದ್ಭಾಸ ಹೆಜ್ಜಾ ಜಿವಾಸ ಜಯತು ಮಂಗಳ ನಾಮ ಶ್ಯಾಮಂಗೆ ಪ್ರಣಾಮ ಜಯತು ಕರುಣಾಸಿಂಧು ಜಯಭಕ್ತ ಬಂಧು 6
--------------
ಶಾಮಶರ್ಮರು
ಶ್ರೀಹರಿ ಮೂಜಗದೊಳು ನೀನು ತೇಜವುಳ್ಳವನಾಗಿ ಪ ಕಾಲದಿ ನಿನ್ನಯ ಮೇಲಿಹ ನಿರ್ಮಾಲ್ಯ ಮಾಲೆಯನೆಲ್ಲ ವಿಸರ್ಜಿಸಿ ತೊಳೆದು ನೀಲಮಾಣಿಕ ವಜ್ರಮಯವಾದ ಪೀಠದ ಮೇಲೆ ವಾಲಗವಾಗಿ ಲೀಲೆಯ ತೋರುತ1 ಮೊದಲು ಸಂಕಲ್ಪಿಸಿ ತುಳಸಿ ಶ್ರೀಗಂಧದಿ ಉದಕ ಶುದ್ಧವ ಮಾಡಿ ಅದರೊಳು ಬಳಿಕ ವಿಧಿಸಿಯೆ ಮತ್ತೇಳು ನದಿಯನುಚ್ಚರಿಸಲು ಒದಗಿ ಬಾರೆಲೊ ಕರಚರಣ ಮಜ್ಜನಕೀಗ 2 ಮಾನಸದಘ್ರ್ಯವು ಆಚಮನಗಳು ನಾನಾ ಪಂಚಾಮೃತ ಫಲವಭಿಷೇಕವು ಗಾನ ಸೂಕ್ತಗಳಿಂದ ಮಧುಪರ್ಕಾದಿಗಳು 3 ವಸ್ತ್ರವಾಭರಣವು ಯಜ್ಞಸೂತ್ರವ ತೊಡಿಸಿ ಚಿತ್ರವಾಗಿಹ ಗಂಧ ಅಕ್ಷತೆವಿಡಿಸಿ ಪತ್ರಪುಷ್ಪವು ಶ್ರೀತುಳಸಿ ಮಾಲೆಗಳಿಂದ ಸ್ತೋತ್ರವು ಸಾಹಸ್ರನಾಮಗಳಾಯಿತು 4 ಧೂಪಮಾಧ್ರೂಪಯ ದೀಪದ ದರುಶನವು ಆದಷ್ಟು ಸರ್ವೋಪಚಾರಗಳು ಕದಳಿ ನಾರಿಕೇಳÀವು ಪರಿ ನೈವೇದ್ಯ ದಯಾಪರಮೂರ್ತಿ 5 ಆಗರದೊಳು ಬೆಳೆದ ನಾಗವಲ್ಲಿಯ ದಳ ಪೂಗಿಯಫಲ ಸಹ ನಾಗಶಯನಗಿಟ್ಟು ಬೇಗದಿ ಮಂಗಳ ಪದಗಳ ಹೇಳಿ ಲೇ ಸಾಗಿ ಎತ್ತುವ ಅಮೋಘದಾರತಿಗಳ 6 ಮಾಡಿದ ಪೂಜೆಯ ನೋಡಿ ಕರುಣದಿಂದ ಬೇಡಿದಿಷ್ಟವನೀಯೊ ರೂಢಿಯ ಒಡೆಯ ಪಾಡಿ ಪೊಗಳುವೆ ನಿನ್ನ ಪಂಥ ಬೇಡೆನ್ನೊಳು ಅನುದಿನ ವರಾಹ ತಿಮ್ಮಪ್ಪ 7
--------------
ವರಹತಿಮ್ಮಪ್ಪ
ಶ್ರೀಹರಿ ಸ್ತವನ ಅರ್ಜುನಗಾನಂದಾ ಮಾಡಿದ ಗೋವಿಂದಾ ಪ ರಥದಿ ಮಂಡಿಸಿ ಚತುರತನದಲಿಂದಾ ಚತುರ ಹಸ್ತದಿಂ ವಾಜಿಯಂ ಪಿಡಿದು ರಥಕನ ಬೆನ್ಹಿಂದಿಟ್ಟುಕೊಂಡು ಸಾ- ರಥಿಯು ತಾನೆ ಅಶ್ವವ ನಡಿಸುತಲಿ ರತಿಪತಿಪಿತನತಿಚಮತ್ಕಾರದಿಂ ಪೃಥಿವಿಯ ಮೇಲೆ ನರನಟನ ತೋರುತಲಿ ಪತಿತ ಪಾವನನು ಫಲ್ಗುಣ ಸಖನು ನುತಿಸಿದವರ ನೆರೆ ಪಾಲಿಸುತಿಹನು ಅತುಳ ಶಂಖದಿಂ ಭೌಂ ಭೌಂ ಎನಿಸುತ ರಥದ ಗಾಲಿ ಛಿಟ್ ಛಿಟ್ ಛಿಟಿಲೆನುತ ಕುದುರೆ ಖುರಪುಟಧ್ವನಿ ಫಳ್ ಫಳ್ ಫಳ್ಳೆ ಗೋವಿಂದನು ರಭಸದಿ ಭಕ್ತನೂಳಿಗಾ1 ಮಂದಜಭವ ಮುಖ್ಯಾಮರ ವೃಂದವು ನಂದತನುಜನಾರಂದಲೀಲೆಯಂ ಛಂದದಿ ನೋಡುತ ನಭೋಮಾರ್ಗದೊಳ್ ಬಂದು ಕುಸುಮಗಳ ವೃಷ್ಟಿಯ ಸುರಿದು ಸಿಂಧುಶಯನ ನಾಮಾಮೃತ ಸುರಿದು ಬೃಂದಾರಕ ನಿಕರವು ಕೈಯೆತ್ತಿ ಇಂದುಕಲಾಧಿಪ ಪ್ರಾರ್ಥನೆ ಸೈ ಸೈ ಎಂದು ದೇವದುಂದುಭಿ ಧೋಂ ಧೋಂ ಕಂಸಾ- ಳದರವ ಖಿಣಿಖಿಣಿ ಖಿಣಿ ಭೇರಿ ನಾದ ಖಡ್ ಖಡ್ ಖಡಲ್ ಭಾರಿ ತಾ- ಹತಜಂತರಿಧೂಂ ನರ್ತನಗೈವುತ ತೆರಳುತ 2 ಮಂಗಳ ರವದಿಂ ಜಯಜಯ ಎನಿಸುತ ಮಂಗಳಾಂಗಿ ರುಕ್ಮಿಣಿ ವಲ್ಲಭನು ರಂಗಿನಿಂದ ರಥವಿಳಿದು ಗೆಳೆಯನ ಮುಂಗೈಯನೆ ಪಿಡಿದು ಅಂಗಜನಯ್ಯ ರಂಗುಮಣಿಯ ಉಂಗುರದಿ ಒಪ್ಪುತಲಿ ಭಂಗಾರಕೆ ಮಿಗಿಲೆನಿಪ ದುಕೂಲದಿ ಶೃಂಗರದಲ್ಲಿ ಉತ್ತುಂಗ ಪರಾಕ್ರಮ ಅಂಗಳದೋಳ್ ನಲಿದಾಡುತ ರಂಗನು ತಿಂಗಳ ಕುಲದೀಪನ್ನ ನೋಡುತಲಿ ರಂಗ ಕದರುಂಡಲಗೀಶನ ಒಡೆಯನು ತಾ 3
--------------
ಕದರುಂಡಲಗೀಶರು
ಶ್ರೀಹರಿಯು ದಾಸರಿಗೆ ಒಲಿದ ಸ್ತೋತ್ರ ನೀನಾಗಿ ನೀಎನಗೆ ಒಲಿಯೋ ಸರ್ವೇಶ ಪ ದೀನ ವತ್ಸಲ ವೇಧಪಿತ ಶ್ರೀದ ಶ್ರೀಶ ಅ.ಪ ಕರಿಯಂತೆ ನಿನ್ನರಿತು ಕರೆಯಲರಿಯೆನು ನಾನು | ನಾರಿಯಂತೆ ಸವಿದು ಕೊಡಲರಿಯೆ ಪಣ್ಣು || ತರುಗಳಂತೆ ತಪಸ್ಸು ಸಂಸ್ಮರಣೆ ನಾನರಿಯೆ ಕರುಣಾಭ್ಧಿ ನೀನೇ ಪೊರೆ ಎನ್ನ ಶ್ರೀಹರಿಯೆ 1 ಹೇಮ ಕಾಮಿನಿ ಭೂಮಿ ಸಾಧನಕ್ಕೊದಗಬೇಕು | ಮಮ ಅಹಂಕಾರ ದುಷ್ಟದಿ ರತಿ ಸಾಕು || ಭೂಮನಿನಗೆ ಪ್ರಿಯ ಸೇವೆಯಾಗಲಿ ಸರ್ವ | ಕಾಯ ಕ್ರಿಯೆಗಳು ದೇವ ದೇವ 2 ಎನ್ನ ಸರ್ವಾಭೀಷ್ಟಗಳು ಸಿಧ್ಧಿ ಆಗುವವು | ನಿನ್ನ ಔದಾರ್ಯ ಕೃಪೆಯಿಂದ ಎಂದೆಂದೂ || ನಿನ್ನಧೀನವು ನಾನುರಕ್ಷಕನು ನೀ ಶ್ರೀಶ || ಎನ್ನುವದೊಂದೇ ಬಲ್ಲೆ ಪ್ರಸನ್ನ ಶ್ರೀನಿವಾಸ 3
--------------
ಪ್ರಸನ್ನ ಶ್ರೀನಿವಾಸದಾಸರು
ಶ್ರೀಹರಿಸ್ತುತಿ ಜೈ ಹರಿ ವಿಠ್ಠಲ ಪಾಂಡುರಂಗ 1 ರಕುಮÁಯೀಧವ ಪಾಂಡುರಂಗ 2 ಸಾಧುಜನಾರ್ಚಿತ ಪಾಂಡುರಂಗ 3 ಕಾಲಾಂತಕಪ್ರಿಯ ಪಾಂಡುರಂಗ 4 ಕರಿರಾಜವರದ ಪಾಂಡುರಂಗ 5 ವನಜಾಸನನುತ ಪಾಂಡುರಂಗ 6 ಕುಟಿಲಾಂತಕಹರೆ ಪಾಂಡುರಂಗ 7 ಭಾವಜಪಿತಹರೆ ಪಾಂಡುರಂಗ 8 ಫಣಿಪತಿಶಯನ ಪಾಂಡುರಂಗ9 ದುರಿತವಿದೂರ ಪಾಂಡುರಂಗ 10 ವನಜನಾಭಹರೆ ಪಾಂಡುರಂಗ 11 ವಾತಾತ್ಮಜನುತ ಪಾಂಡುರಂಗ 12 ಜಗದೋದ್ಧಾರ ಪಾಂಡುರಂಗ 13 ಪುಂಡರೀಕವರದ ಪಾಂಡುರಂಗ 14 ದೀನಮಂದಾರ ಪಾಂಡುರಂಗ 15 ಸಿಂಧುಶಯನಹರೆ ಪಾಂಡುರಂಗ 16 ಶ್ರೀಕರಸೇವಿತ ಪಾಂಡುರಂಗ 17 ನರಕಾಂತಕಹರೆ ಪಾಂಡುರಂಗ 18 ಸಾಮಗಾನಪ್ರಿಯ ಪಾಂಡುರಂಗ 19 ಕ್ಷಾತ್ರಕುಲಾಂತಕ ಪಾಂಡುರಂಗ | ಧಾತ್ರೀರಮಣ ಪಾಂಡುರಂಗ 20 ಕಾಮಿತಫಲದ ಪಾಂಡುರಂಗ 21 ಪಾವನಚರಿತ ಪಾಂಡುರಂಗ 22 ಉತ್ತಮದೇವನೆ ಪಾಂಡುರಂಗ 23 ಸೋಜಿಗಪುರುಷನೆ ಪಾಂಡುರಂಗ24 ಭಾನುಪ್ರಕಾಶ ಪಾಂಡುರಂಗ 25 ಸುರಭಿನಿವಾಸ ಪಾಂಡುರಂಗ 26 ಭಕುತಪೋಷಕ ಪಾಂಡುರಂಗ27 ತ್ರಿಗುಣಾತೀತಾ ಪಾಂಡುರಂಗ 28 ಚಂದ್ರಮೌಳಿಹಿತ ಪಾಂಡುರಂಗ26 ಸುರಮುನಿಸನ್ನುತ ಪಾಂಡುರಂಗ30 ದಾನವಾಂತಕ ಪಾಂಡುರಂಗ 31 ಭೂಸುರವಂದಿತ ಪಾಂಡುರಂಗ32 ಸೃಷ್ಟಿಗೊಡೆಯ ಶ್ರೀ ಪಾಂಡುರಂಗ 33 ಉರ್ವಿರಮಣ ಪಾಂಡುರಂಗ 34 ಶೃತಿತತಿವಿನುತ ಪಾಂಡುರಂಗ 35 ಜೀವೋತ್ತಮನುತ ಪಾಂಡುರಂಗ36 ನಾಕಾಧಿಪನುತ ಪಾಂಡುರಂಗ 37 ಮೋದದಾಯಕ ಪಾಂಡುರಂಗ38 ಭಾಗವತಪ್ರಿಯ ಪಾಂಡುರಂಗ39 ಕರುಣಿಗಳರಸನೆ ಪಾಂಡುರಂಗ40 ತಾಪತ್ರಯಹರೆ ಪಾಂಡುರಂಗ41 ಕರ್ಮಾಧಿಪತೆ ಪಾಂಡುರಂಗ42 ಕಪಟನಾಟಕ ಪಾಂಡುರಂಗ43 ಬಾದರಾಯಣ ಪಾಂಡುರಂಗ44 ಮುಂದೆ ದಾರಿಯೇನೋ ಪಾಂಡುರಂಗ 45 ಪಾಶಪರಿಹರಿಸೊ ಪಾಂಡುರಂಗ 46 ಎಷ್ಟು ಪೊಗಳಲೋ ಪಾಂಡುರಂಗ 47 ಇಷ್ಟದಾಯಕ ಪಾಂಡುರಂಗ 48 ಜನುಮ ನೀಗಿಸೊ ಪಾಂಡುರಂಗ 49 ಘನ್ನಮಹಿಮನೆ ಪಾಂಡುರಂಗ 50 ದೀನವತ್ಸಲನೆ ಪಾಂಡುರಂಗ 51 ಪಾದ ಪಾಂಡುರಂಗ52 ಶುಭಮಂಗಳಹರೆ ಪಾಂಡುರಂಗ 53 ಶ್ರೀಶಕೇಶವ ಪಾಂಡುರಂಗ 54
--------------
ಶ್ರೀಶ ಕೇಶವದಾಸರು