ಒಟ್ಟು 2143 ಕಡೆಗಳಲ್ಲಿ , 112 ದಾಸರು , 1724 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಸಿಂಧು ಶೋಷಿಪೇಕ್ಷಣ ಕಲ್ಯಾಣಗಾತ್ರ ಪ ಪವಮಾನ ಪ್ರಿಯ ಪುತ್ರ ಕಾರುಣ್ಯನೇತ್ರ ಅ.ಪ. ನಿರವದ್ಯ ಭೂದೇವ ನಿರುತ ಸುಖಭರಿತ ಭಾವ ಶರಣ ಜನರನು ಕಾವ ಶಪಥ ಭಾವ ಪರ ಸೇವಾ ನಿರುತ ಮಂಗಳ ಭಾವ ಸಂಜೀವ 1 ತನುಮನವ ಹರಿಗಿತ್ತ ಗುಣನಿಧಿ ಮಹಗುಪ್ತ ಅಣುಘನದಿ ಹರಿದೀಪ್ತ ತನುನೋಳ್ಪ ಶಕ್ತ ಘನ ಕೃಷ್ಣವರ್ಯಾಪ್ತ ಮನೋವಾಕ್ಕಾಯಸ್ತ ಗುಣಾಪೂರ್ಣಾ ಹರಿಕೃತ್ಯವನು ಎಣಿಪ ತೃಪ್ತ 2 ಬಲುಭಕ್ತಿ ಭಾರನತ ಬಲಿತ ವಿಜ್ಞಾನರತ ಲಲಿತ ಮಂಗಳಚರಿತ ನಲಿವನು ಪ್ರೀತ ಕ- ಮಲಾ ಅಪಹರ್ತ ಕಲ್ಯಾಣ ಸಂಭರಿತ ಪುಲ್ಲಾಕ್ಷ ಮಮನಾಥ ಕೃಷ್ಣಾಂಘ್ರಿದೂತ 3 ಪರಮ ಸೌಭಗ ಪೂಜ ಪರಭಕ್ತಿ ನಿವ್ರ್ಯಾಜ ಚರಿಸಿ ಶ್ರೀ ಗುರುರಾಜ ವರಕಲ್ಪಭೂಜ ಸರುವ ತತ್ವಗಳೋಜ ವಶಗೊಂಡ ಮಹರಾಜ ಸರುವ ಸಿದ್ಧಿಗೆ ದೊರಿ ಎನಿಪ ವಿರಜ 4 ಸಂತಾಪಹರ ಶಾಂತ ಸೌಭಾಗ್ಯಕರವಂತ ಸ್ವಾಂತದಲಿ ನಿಶ್ಚಿಂತ ಸರಸಿ ಶ್ರೀಮಂತ ಧ್ವಾಂತ ಹರ ಶ್ರೀ ಜಯೇಶವಿಠಲನ ಏಕಾಂತ ಪಂಥ ಬಿಡದಿರುವಂಥ ಪೂರ್ಣ ಜಯವಂತ 5
--------------
ಜಯೇಶವಿಠಲ
ಸಿರಿ ಪಾಂಡುರಂಗನಾ ಪಾಡಿದೆನೊ ಜಗದಂತರಂಗನ ಖಗ ತುರಂಗನ ಬೇಡಿದೆನೊ ಗುಣಾಂತರಂಗನಾ ಪ ಕಪಿಲ ವಿಭುಹರಿ ಸಾರ್ವಭೌಮ ಸು ತಪನಂದನ ಕೃಷ್ಣ ಕೃಷ್ಣ ಗೀರ್ವಾಣ ತಪಯಜ್ಞ ಜಿತದತ್ತ ಧನ್ವಂತ್ರಿ ವಿನುತ ವೃಷಭ ಹಯ ಲಪನ ವೈಕುಂಠ ಹಂಸ ತಪನಾ ಕುಪಿತ ಜಿತ ಮುನಿ ನರನಾರಯಣ ಅಪರಿಮಿತ ರೂಪ ಧರಿಸಿದಾನಂದ ಗುಪಿತ ಮಹಿಮನ 1 ಮುನಿವನ ಜಿತ ಚಿತ್ತ ಶುದ್ಧದಿ ಜನನಿ ಜನಕನ ಚರಣ ಸೇವೆಯ ಅನುದಿನದಿ ಘನವಾಗಿ ಮಾಡುತ ಗುಣಗಳಿಂದಲಿಯಿರಲು ಇತ್ತಲು ಮುನಿ ನಾರದನು ಗಾಯನವ ಗೈಯುತ ಇನಿತು ಸೋಜಿಗ ನೋಡಿ ತನ್ನಯ ಜನಕಗರುಹಲು ನಗುತಲಾ ಮನದಿ ಕೈಕೊಂಡ ಮೂಲ ಮೂರ್ತಿಯ 2 ಪೊಡವಿಯೊಳು ನೀನವತರಿಸಿ ಆ ದೃಢü ಬಕುತನಿಗೆ ದರುಶನವೆ ಇ ತ್ತಡಿಗಡಿಗೆ ಸುಖಬಡಿಸಿ ಅಲ್ಲಲ್ಲಿ ಬಿಡದೆ ನಿಲ್ಲುವೆ ನಿಮ್ಮ ಸಹಿತಲಿ ವಿನುತ ಕಳುಹಿದ ಒಡನೆ ಸಲ್ಲಿಪೆನೆಂದ ಯಮುನಾ ತಡಿಯ ಜನಿಸಿದ ಜಗನ್ಮೋಹನಾ 3 ನಿಧಿಯ ನೋಡುವೆನೆನುತ ಗೋವುಗಳ ಮುದದಿ ಮೇಯಿಸಿಕೊಳುತ ಕಾವುತ ಒದಗಿ ಗೋವಳರೊಡನೆ ಬಂದನು ವಿಧಿ ಸಂಭವಾದ್ಯ ಭಕ್ತನ ಎದುರಲಿ ನೋಡಿದನು ಹೋ ಹೋ ಇದೇ ಸಮಯವೆಂದು ನಿಂದಾ ಹಿಂಭಾ ಗದಲಿ ಭಕ್ತಿಗೆ ಮೆಚ್ಚಿ ಬಲು ವೇಗಾ4 ತಿರುಗಿ ನೋಡದಲಿರಲು ಭಕುತನ ಮರಳೆ ಮಾತಾಡಿಸಲು ಇಟ್ಟಿಗೆ ಭರದಿ ಹಿಂದಕೆ ಒಗಿಯೆ ವಿಠ್ಠಲ ಹರುಷದಲಿ ವಶವಾಗಿ ನಿಲ್ಲಲು ಕರುಣರಸ ಸಂಪೂರ್ಣ ದೇವನ ನಿರೀಕ್ಷಿಸಿದ ಜಯವೆಂದು ಪೊಗಳಿ ವರವ ಬೇಡಿದ ಪುಂಡರೀಕನು ಗಿರಿಯನೆತ್ತಿದ ಗೋಕುಲೇಶನ 5 ಭಕುತ ಮನೋರಥ ಎನ್ನ ಪೆಸರಿಲಿ ಸಕಲ ಲೋಕದೊಳಗೆ ನೀನೆ ಮುಕುತಿ ಕೊಡುತಲಿ ಇಲ್ಲೆ ನಿಲುವದು ಅಖಿಳ ಬಗೆಯಿಂದ ಭಜನೆಗೊಳುತ ನೀ ರುಕ್ಮಿಣಿಪತಿ ಒಲಿದು ಪಾಲಿಸಿ ವ್ಯಕುತವಾದನು ಪೂರ್ವಮುಖನಾಗಿ ಸುಖವಯೋನಿಧಿ ಮೆರೆಯುತಲಿ ಇಂದೂ 6 ಕ್ರೋಶ ಯೋಜನ ಯೋಜನತ್ರಯ ದೇಶ ಪರಿಮಿತ ಕ್ಷೇತ್ರವಿಪ್ಪುದು ವಾಸ ಒಂದಿನಮಲ ಮನುಜರನ ಲೇಸು ಪುಣ್ಯಗಳೆಣಿಸಿ ಸರಸಿ ಜಾಸನನು ಬೆರಗಾಗಿ ನಿಲ್ಲುವ ದೋಷ ವರ್ಜಿತ ಹರಿಯ ನೆನೆಸುತ ಆ ಸೇತು ಮಧ್ಯದಲಿ ವಿಶೇಷವಾಗಿದ್ದ ಈ ಕ್ಷೇತ್ರ ಮೂರ್ತಿಯಾ 7 ನಂದಾ ಮಂದಾಕಿನಿ ಮಧ್ಯಾಹ್ನಕೆ ನಿಂದಿರದೆ ಬರುತಿಪ್ಪ ಪ್ರತಿದಿನ ಚಂದ್ರಭಾಗಾ ಪ್ರಸೂನುವತಿ ಅರ ಕುಂಡಲ ಚತುರ ದಿಕ್ಕಿನಲಿ ಪೊಂದಿಪ್ಪವು ಓರ್ವನಾದರು ಮಿಂದು ತೀರ್ಥದಲಿ ಆ ನಂದ ಸತ್ಕರ್ಮ ಚರಿಸಲಾಕ್ಷಣ ಇಂದಿರೇಶನು ಒಲಿವ ನಿಶ್ಚಯಾ 8 ದ್ವಾರಸ್ಥ ಜಯ ವಿಜಯ ನಾರದ ಭಾರತಿ ಪಂಚ ಕೋಟಿ ದೇವರು ಶ್ರೀರಮಣಿ ಮಿಕ್ಕಾದ ಜನರೆಲ್ಲ ಈರೆರಡು ದಿಕ್ಕಿನಲಿಯಿಹರು ಸುತ್ತಲಿ ಪಾಡುತ್ತ ಕುಣಿಯುತ್ತ ಹಾರುತಲಿ ಹಾರೈಸಿ ನಾನಾ ವಿ ಹಾರದಲಿ ಪುರಿ ಪ್ರದಕ್ಷಣಿ ವಿ ಸ್ತಾರ ಮಾಡುತಲಿಪ್ಪ ಸೊಬಗನಾ 9 ಎರಡು ವಿಂಶತಿ ಗುದ್ದು ಮೊಳವೆ ಕರಿಸಿ ಕೊಂಬೊದೊಂದೆ ನಿಷ್ಕವು ಇರದೆ ಇವು ನಾನೂರುಯಾದಡೆ ವರಧನಸ್ಸು ಪ್ರಮಾಣವೆನಿಸೊದು ಗುರುತು ತಿಳಿವದು ಇಂಥ ಧನಸ್ಸು ಅರವತ್ತು ಪರಿಮಿತಾ ಈ ಭೀಮಾ ಸರಿತೆಗಳು ಪರಿಪರಿ ತೀರ್ಥಗಳಕ್ಕು ನಿರೀಕ್ಷಿಸಿ ವಂದನೆಯ ಮಾಡುತಾ 10 ಜ್ಞಾತಿ ಗೋತುರ ಹತ್ತದೊಂದೆ ಮಾತು ಮನ್ನಿಸಿ ಕೇಳಿ ಸುಜನರು ವಾತದೇವನ ಕರುಣತನವನು ನೀತಿಯಲಿ ಪಡಕೊಂಡು ಸತ್ವದಿ ಜ್ಞಾತ ಅನುಷ್ಠಾನದಲಿ ನಡೆದು ಪು ಮಾನವ ಬಂದರಾದಡೆ ಆತುಮದೊಳು ಹರಿ ಪೊಳೆದು ಬಲು ಕೌತುಕವ ತೋರಿಸುವ ರಂಗನಾ 11 ಶಯ್ಯಾ ಹರಿ ದಿನದಲಿ ಮಾನವ ಕಾಯ ನಿರ್ಮಳನಾಗಿ ಫಂಡರಿ ರಾಯ ರಾಜೀವನೇತ್ರ ತ್ರಿಭುವನ ನಾಯಕನ ಕ್ಷೇತ್ರಕ್ಕೆ ಮನಮುಟ್ಟಿ ಗಾಯನವ ಮಾಡುತಲಿ ಬಂದ ನಿ ರ್ಮಾಯದಲಿ ಕೊಂಡಾಡಿ ದಮ್ಮಯ್ಯ ಕೈಯ ಪಿಡಿಯನೆ ಕರುಣದಿಂದ ಸಾ ಹಾಯವಾಗುವ ವಾಣಿ ಜನಕನಾ 12 ಮಕುಟ ಕುಂಚಿ ಕುಲಾಯ ಕುಂತಳ ಕುಂಡಲ ಮಣಿ ಕಿರಣ ಸ ನ್ನುಖ ಮುಕರ ಸೋಲಿಸುವ ಕಾಂತಿ ಚಂ ನಾಸಿಕ ಮುಖ ಮೃಗನಾಭಿ ಸಣ್ಣ ತಿ ಲಕ ಕೌಸ್ತುಭಗಳ ತುಲಸಿ ಮಾಲಿಕಾ ನಖ ಪದಕ ಕಟೆಕಂಬು ಕರದ್ವಯ ನಖ ಪಾದ ಭೂಷಣ ಮಾ ಣಿಕ ಇಟ್ಟಿಗೆ ಮೇಲೆ ನಿಂದ ವಿಠ್ಠಲನ 12 ಸಂಗಮ ಸುರ ಮಥನ ಕಾಳಿಂಗ ಭಂಗ ಭಾವುಕ ಭಕ್ತಜನಲೋಲ ಶೃಂಗಾರಾಂಬುಧಿ ರೋಮ ಕೋಟಿ ಕೋಟಿ ಲಿಂಗಧರ ಗೌರೀಶ ಸುರಪ ನಂಗ ಮಿಗಿಲಾದ ಮುನಿವಂದಿತಾ ಮಾ ತುಂಗ ವರದ ಗೋವಿಂದ ವರದೇಶ ಸಂಗ ನಿಃಸಂಗ ಸುಪ್ರಸನ್ನ ನೀ ಅನುದಿನ 14 ಪೇಳಲೊಶವೇ ಲೋಹದಂಡಿ ಹಿ ಯ್ಯಾಳಿ ಕ್ಷೇತ್ರದ ಮಹಿಮೆ ಸಾವಿರ ನಾಲಿಗಿಂದಲಿ ಪೊಗಳಿ ಸುಮ್ಮನೆ ವ್ಯಾಳಪತಿ ಬೆರೆಗಾಗಿ ನಿಲ್ಲುವ ಸಲಿಗೆ ನಾ ಮಾಳ್ಪರು ವಿಲಿಂಗರು ಮೇಲು ಮೇಲೀ ಭುವನದೊಳಗಿದ್ದು ಹೇಳಿ ಕೇಳಿದ ಜನರಿಗಾನಂದಾ ಬಾಲಾ ವಿಜಯವಿಠ್ಠಲರೇಯನಾ 15
--------------
ವಿಜಯದಾಸ
ಸಿರಿ ಪಾರ್ಥಸಖನಾ ಗುಣಕೀರ್ತನೆ ಮಾಡಲು ಪ ಯಂಟೆಂಟೆರಡುನಾಲ್ಕು ಸಾವಿರ ನುಡಿಯಲಿ ಯಂಟೆಂಟೆರಡು ರೂಪದಲಿ ಯಂಟೆಂಟೆರಡು ಮೂರೈದು ವ್ಯಂಜನದಿ ಯಂಟೆಂಟು ಮತ್ತೆಂಟು ಸ್ವರವ ತಿಳಿ 1 ಕಮಲ ಕರ್ಣಿಕೆಯಲ್ಲಿ ಯಂಟೆಂಟೆರಡರ ನಾಲ್ಕು ಸ್ತಂಭರಥ ಮಂಟಪದೊಳಗಿನ ವೆಂಕಟನ ನೋಡು2 ಯಂಟೆಂಟು ಕರಗಳಲಿ ಯಂಟಾಯುಧ ಪಿಡಿದು ಯಂಟು ದಿಕ್ಕಿನಲಿ ತಿರುಗುತಲಿ ಯಂಟು ವಿಧದಿ ಪ್ರೇರಣೆ ಮಾಡುವ ನಮ್ಮಾ ನೆಂಟ ತಂದೆಗುರುಗೋಪಾಲವಿಠಲನು 3
--------------
ಗುರುತಂದೆವರದಗೋಪಾಲವಿಠಲರು
ಸಿರಿದೇವ ನಮ್ಮ ನಿದೈವನು ಶರಣರಕ್ಷಕವಾವನು ಪ ಆಲಯದೊಳುಛಲವಿಡಿದರೆ| ಪಾಲಗಡಲದೊಳಗಿಟ್ಟೀ ಹಾ 1 ವರದ ಮದದಿ ಭಸ್ಮಾಸುರ ಬೆನ್ನಟ್ಟಿ|ಗಿರಿಜೇಶನ ಪೀಡಿಸುತಿರೇ ಭರದಿಂದೊದಗಿ ಬಂದು ಮೋಹಕ ರೂಪದಿ| ದುರುತಳನ ಭಸ್ಮವ ಮಾಡಿದಾ 2 ಅಖಳ ದೊಳಗೆ ಅರಾರಾಧಿಸುವರು| ಭಕುತಿಯಂದದಿ ತನೊಲಿವನು ಪ್ರಕಟಿದಿ ಮಹಿಪತಿ ನಂದನಮುಖದೊಳು ಸಕಲಚರಿತೆಯನು ನುಡಿಸುವಾ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಸಿರಿಯು ಬರುವ ಸೊಬಗ ನೋಡಿರೆ ಭರದಿ ಬನ್ನಿರೆ ಶಿರವಬಾಗಿ ಚರಣಕೆರಗಿ ವರವಬೇಡಿರೆ ಪ. ಕಾಲೊಳಂದಿಗೆ ಗೆಜ್ಜೆ ಪಿಲ್ಲಿ ಘಲಿರುಘಲಿರೆನೆ ಬಾಲೆಯರ ಬಳಿಗೆ ಬರುವಳೊಲಿದಳೆಂಬೆನೇ 1 ಮಾತೆಗೆನಿತೋ ಪ್ರೀತಿಯೆಮ್ಮೊಳಗೈತಂದಳೀದಿನಂ ಪೂತುದರರೆ ಪೂರ್ವಪುಣ್ಯ ತರವಿದೆಂಬೆನಾಂ 2 ಪರಮಪುರುಷ ಶೇಷಶೈಲವರದನರಸಿಯಿಂ- ದರರೆ ಒಲಿದಳೆಮಗೆ ಧರೆಯೊಳರಿದುದಿನ್ನದೇನ್ 3
--------------
ನಂಜನಗೂಡು ತಿರುಮಲಾಂಬಾ
ಸೀತಾ ಕಲ್ಯಾಣ ಪಾಕ ಶೇಷಾದ್ರಿ ಬ್ರಹ್ಮಕೆ ಶರಣು ಲೋಕನಾಯಕ ಹೆಳವನಕಟ್ಟೆ ವೆಂಕಟ ನೀ ಕರುಣಿಸಿ ಸಲಹುವುದೆನಗೆ ಜಯ ಜಯ ಪ. ಮದುವೆಯ ನಾಲ್ಕು ದಿವಸದಲ್ಲಿ ಮದುವಣಿಗನು ರಾಮ ಜಾನಕಿಗೆ ಪದನ ಹೇಳುವೆ ಸುಜನರು ಕೇಳಿ ಜಯ ಜಯ 1 ಚಿತ್ತಜಪಿತ ಶ್ರೀರಾಮರಿಗೆ ಅರ್ತಿಯಿಂದರಿಷಿಣೆಣ್ಣೆಯ ಮಾಡ್ವ ಮಿತ್ರೆ ಕೌಸಲ್ಯದೇವಿ ಕೇರಿ ಕೇರಿಯ ಗುಂಟ ಮುತ್ತೈದೇರನು ಕರೆಸಿದಳು ಜಯ ಜಯ 2 ಪೀತಾಂಬರದುಡುಗೆಯನುಟ್ಟು ಜ್ಯೋತಿಯಂದದಿ ಥಳಥಳಿಸುತಲಿ ಜಾತಿಮಾಣಿಕದಾಭರಣವಿಟ್ಟು ರಾಮರ ಮಾತೆಯರೆಲ್ಲ ಶೃಂಗಾರವಾಗಿ ಜಯ ಜಯ 3 ಚೀಣ ಚೀಣಾಂಬರಗಳನುಟ್ಟು ವೇಣಿ ಕಸ್ತೂರಿಯ ಪಣೆಗಿಟ್ಟು ಜಾಣೆಯರೆಲ್ಲ ಶೃಂಗಾರವಾಗಿ ಮಲ್ಲಿಗೆ ಬಾಣನ ಪಟ್ಟದಾನೆಗಳಂತೆ ಜಯ ಜಯ 4 ಪೊಂಬಣ್ಣದ ಹಳದಿಯ ಕಲೆಸಿ ತುಂಬಿದ ಹರಿವಾಣದೊಳಗೆ ಅಂಬುಜನಾಭಗೆ ಅರಿಷಿಣೆಣ್ಣೆಯ ಮಾಡ್ವ ಸಂಭ್ರಮಕೆ ನಡೆತಂದರಾಗ ಜಯ ಜಯ 5 ಗರುಡನ್ವಲ್ಲಭ ಸೌಂದರದೇವಿ ವರುಣನ್ವಲ್ಲಭೆ ಕಾಳಕದೇವಿ ಹರನ್ವಲ್ಲಭೆ ಪಾಪ[ನಾ] ಶಿಗಂಗೆ ಸಹಿತಲಿ ಅರಿಷಿಣೆಣ್ಣೆಯ ಮಾಡಬಂದರಾಗ ಜಯ ಜಯ 6 ಬ್ರಹ್ಮವಲ್ಲಭೆ ಶಾರದಾದೇವಿ ವಾ- ಯುರಮಣಿ ಅಂಜನಾದೇವಿ ಹರುಷದಿ ಕೌಸಲ್ಯೆ ಕೈಕೆಸೌಮಿತ್ರೆಯರು ಅರಿಷಿಣೆಣ್ಣೆಯ ಮಾಡಬಂದರಾಗ ಜಯ ಜಯ7 ಅಲ್ಲಲ್ಲಿ ನಡೆವ ನಾಟಕಶಾಲೆ ಬಿಲ್ಲಾಳು ಬೆತ್ತ ಕಾಟನವರು ಸೊಲ್ಲುಸೊಲ್ಲಿಗೆ ಹಿಡಿಹೊನ್ನನು ತ್ಯಾಗವ ಚೆಲ್ಲುತ ದಶರಥ ನಡೆದನಾಗ ಜಯ ಜಯ 8 ಹೊಡೆವ ತಂಬಟೆ ಭೇರಿ ನಿಸ್ಸಾಳೆ ಬಿಡದೆ ಚೀರುವ ಹೆಗ್ಗಾಳೆಗಳು ಸಿಡಿಲು ಗರ್ಜಿಸುವಂತೆ ಪಂಚಮವಾದ್ಯದಿ ನಡೆದರು ಜನಕರಾಯನ ಮನೆಗೆ ಜಯ ಜಯ 9 ಕುಸುಮಬಾಣನ ಮಾರ್ಬಲದಂತೆ ಹಸುರು ಪಚ್ಚೆಯ ಪಲ್ಲಕ್ಕಿಗಳು ಮುಸುಕಿದ ಪರಿಮಳದೊಳಪ[ಸಾ]ತಕೆ ದಶರಥ ಬಂದನೆಂದರೆ ಜನರು ಜಯ ಜಯ 10 ಭರದಿಂದಲೆದ್ದು ಜನಕರಾಯ ತರಿಸಿ ನಿವಾಳಿಗಳನು ಹಾಕಿ ಹರುಷದಿ ಕೈಲಾಗವ ಕೊಟ್ಟಯೋಧ್ಯದ ಅರಸ[ನ] ಮನ್ನಿಸಿ ಒಡಗೊಂಡನಾಗ ಜಯ ಜಯ11 ಬೇಗದಿ ಗದ್ದುಗೆಯನು ಹಾಸಿ ಬೀಗನ ಉಪಚರಿಸಿದ ಜನಕ ಭಾಗೀರಥಿ ಪಾರ್ವತಿ ಗಂಗೆ ಸಹಿತಲಿ ನಾಗಭೂಷಣನು ಕುಳಿತನಾಗ ಜಯ ಜಯ 12 ಸುತ್ತಣ ರಾಯರಾಯರಿಗೆಲ್ಲ ರತ್ನಗಂಬಳಿಗಳ ಹರಹಿದರು ಅರ್ತಿಯಿಂದಲಿ ಸುರರೆಲ್ಲರು ಕುಳಿತರು ವಿಸ್ತರಿಸಿದ ಮಂಟಪದೊಳಗೆ ಜಯ ಜಯ 13 ಮಣಿಮಂಟಪದೊಳು ಹಸೆಹಾಸಿ ಕನಕ ಮಣಿಯ ತಂದಿಳುಹಿದರು ದಿನಕರಕುಲರಾಮ ಹಸೆಗೇಳೆನುತಲಿ ಗುಣಾವಳಿಗ[ಳ] ಕೊಂಡಾಡಿದರು ಜಯ ಜಯ 14 ಪೊಕ್ಕಳೊಳಜನ ಪೆತ್ತವನೇಳು ಅಕ್ರೂರಜನ ಪೆತ್ತವನೇಳು ಮುಕ್ಕಣ್ಣನ ರಿಪುಬಲವ ಸಂಹರಿಸಿದ ಭಕ್ತವತ್ಸಲ ಹಸೆಗೇಳೆಂದರು ಜಯ ಜಯ 15 ದಶರಥರಾಜನಂದನನೇಳು ಅಸುರಸಂಹಾರ ಕಾರಣನೇಳು ವಸುಧೆಗೊಡೆಯ ರಾಮ ಹಸೆಗೇಳೆನುತಲಿ ಋಷಿಗಳೆಲ್ಲರು ಶ್ರುತಿಗರೆದರಾಗ ಜಯ ಜಯ 16 ಋಷಿವಾಲ್ಮೀಕಿ[ಯ]ರೆಲ್ಲರು ಕೂಡಿ ಕುಶಲದ ಬಾಸಿಂಗವ ಪಿಡಿದು ಅಸುರಾರಿಯ ಮಸ್ತಕಕಳವಡಿಸೋರು ವಸುದೇವನಾಗೆಂದು ಹರಸುತಲಿ ಜಯ ಜಯ 17 ತಂಡತಂಡದ ರತ್ನ ಅಡಸಿದಾಗ ಮಣಿ ಬಿಗಿದಿದಾಗ ತೊಂಡಿಲ ಮುತ್ತೈದೇರಳವಡಿಸೋರು ಕೋ- ದಂಡ ಪಾಣಿಸತಿಜಾನಕಿಗೆ ಜಯ ಜಯ 18 ಬೆರಳಿಗೆ ಮುದ್ರೆ ಉಂಗುರವಿಟ್ಟು ಕೊರಳಿಗೆ ಏಕಾವಳಿಯನೆ ಹಾಕೋರು ತರಳಾಕ್ಷಿಯರಾ ಜಾನಕಿಗೆ ಜಯ ಜಯ 19 ಬೊಂಬೆಯ ತೊಂಡಿಲ ಮುಡಿದಿರ್ದು ಕುಂಭಿಣಿಸುತೆ ಕುಳ್ಳಿರಲಾಗಿ ಅಂಬುಜಾಂಬಕ ರಘುರಾಮನ ಹರುಷದಿ ರಂಭೆಯಿದ್ದೆಡೆಗೆ ಬಂದನೆ ನಗುತ [ಜಯ ಜಯ]20 ಬಂದನೆ ಭಾಗ್ಯಲಕ್ಷ್ಮೀರಮಣ ಬಂದನೆ ಭಕ್ತವತ್ಸಲ ಸ್ವಾಮಿ ಬಂದನೆ ಜಾನಕಿಯಡೆ ರಾಮನು ತಾ ಬಂದನೆ ಮಣಿಮಂಟಪದೆಸೆಗೆ [ಜಯ ಜಯ] 21 ಧೂರ್ಜಟಿ ಜಪಿಸುವ ನಾಮವಿಗ್ರಹ ಬಂದ ವಜ್ರಮಾಣಿಕದ್ಹಸೆಯಿದ್ದೆಡೆಗೆ ಜಯ ಜಯ 22 ಕೌಸಲ್ಯಸುತ ಕುಮಾರ ಬಂದ ಹಂಸವಾಹನಪಿತ ರಾಮ ಬಂದ ಕಂಸಾರಿ ದುಃಖವಿ [ನಾಶ] ರವಿಕುಲ ವಂಶೋದ್ಧಾರಕ ಬಂದನಾಗ [ಜಯ ಜಯ] 23 ಭಕ್ತವತ್ಸಲ ರಾಘವ ಬಂದ ಮುಕ್ತಿದಾಯಕ ಶ್ರೀರಾಮ ಬಂದ ಅರ್ಕನು ಶತಕೋಟಿತೇಜನು ಜಗಕತಿ- ಶಕ್ತ ತಾ ಬಂದನೆಂದವೆ ಕಹಳೆ ಜಯ ಜಯ 24 ಸಿಂಧುಬಂಧನ ರಾಘವ ಬಂದ ಪು- ರಂದರವರದ ಶ್ರೀರಾಮ ಬಂದ ಇಂದುವದನೆಪತಿ ರಾಮ ಬಂದನು ರಾಮ- ಚಂದ್ರ ತಾ ಬಂದನೆಂದವೆ ಕಹಳೆ ಜಯ ಜಯ 25 ಯಜ್ಞಶಿಕ್ಷಾಮಿತ್ರ ರಾಮ ಬಂದ ಸುಗ್ರೀವರಕ್ಷಕಾರಣ ಬಂದ ಲಕ್ಷ್ಮ- ಣಾಗ್ರಜ ಬಂದನೆಂದವೆ ಕಹಳೆ ಜಯ ಜಯ 26 ಯಂತ್ರವಾಹಕ ರಾಘವ ಬಂದ ಮಂತ್ರಮೂರುತಿ ರಾಮ ಬಂದ ಕಾಂತೆ ಶ್ರೀ ಜಾನಕಿರಮಣ ಬಂದನು ರಾಮ ತಂತ್ರಿ ತಾ ಬಂದನೆಂದವೆ ಕಹಳೆ ಜಯ ಜಯ 27 ದೂಷಕಹರಣ ಶ್ರೀರಾಮ ಬಂದ ವಿ- ಭೀಷಣವರದ ರಾಘವ ಬಂದ ಭಾಷೆ ಪಾಲಿಪ ರಾಮಚಂದ್ರ ಬಂದನು ಜಗ- ದೀಶ ತಾ ಬಂದನೆಂದವೆ ಕಹಳೆ ಜಯ ಜಯ 28 ತಾಟಕಪ್ರಾಣಾಪಹಾರ ಬಂದ ಜಟÁಯುಮುಕ್ತಿಕಾರಣ ಬಂದ [ತಾಟಂಕ] ಧರ ನಾರಾಯಣ ರವಿಕುಲ ಕೋಟಿ ತಾ ಬಂದನೆಂದವೆ ಕಹಳೆ ಜಯ ಜಯ 29 ವೀರ ವಿಕ್ರಮ ರಾಘವ ಬಂದ ಮಾರೀಚಮರ್ದನ ರಾಮ ಬಂದ ನಾರಿ ಶ್ರೀ ಜಾನಕಿರಮಣ ಬಂದನು ಹರಿ ರಾಮ ತಾ ಬಂದನೆಂದವೆ ಕಹಳೆ ಜಯ ಜಯ 30 ದೇವಕುಮಾರ ರಾಘವ ಬಂದ ದೇವರ ದೇವನು ರಾಮ ಬಂದ ಭಾವೆ ಶ್ರೀ ಜಾನಕಿರಮಣ ಬಂದನು ರಾಮಚಂದ್ರ ತಾ ಬಂದನೆಂದವೆ ಕಹಳೆ ಜಯ ಜಯ 31 ನಿರುಪಮಚರಿತ ರಾಘವ ಬಂದ ದುರಿತದಲ್ಲಣ ರಾಮದೇವ ಬಂದ ಭರತಶತ್ರುಘ್ನರ ಸಹೋದರಯೋಧ್ಯದ ಸುರಪತಿ ಬಂದನೆಂದವೆ ಕಹಳೆ ಜಯ ಜಯ 32 ಹೇಮಖಚಿತ ರತ್ನ ಪೀಠದಲಿ ಭೂಮಿಜೆ ಸಹಿತ ಕುಳಿತ ರಾಮ ವಾಮ ಭಾಗದಿ ಒಪ್ಪಿರ್ದಳು ಜಾನಕಿ ಆ ಮಹಾಸಭೆಯನು ಬೆಳಗುತಲಿ ಜಯ ಜಯ 33 ಕುಂದಣ ರತ್ನದಡ್ಡಿಕೆಯೊಳಗೆ ಹೊಂದಿಸಿ ನವರತ್ನ ಇರುವಂತೆ ಇಂದುವದನೆ ಜಾನಕಿ ಹರುಷದಿ ರಾಮ ಚಂದ್ರನ ಮಧ್ಯದೊಳೊಪ್ಪಿದಳು ಜಯ ಜಯ 34 ಹೇಮದ್ಹರಿವಾಣದೊಳಗ್ನಿಯನು ಕಾಮಿನಿಯರು ತಂದಿಳುಹಿದರು ರಾಮ ಮನ್ನಿಸಿ ಉಡುಗೊರೆಯಿತ್ತು ಅವರಿಗೆ ಹೇಮಾರ್ಚನೆಗಳ ತೊಡಗಿದನು ಜಯ ಜಯ 35 ಲಾಜತೊಂಡಿ[ತಂಡು?]ಲ ಆಹುತಿಗೊಟ್ಟು ಪೂಜಿಸಿದನೆ ವಿಘ್ನೇಶ್ವರನ ರಾಜವದನೆಯ ಒಡಗೊಂಡು ರಾಘವ ಪೂಜಿಸಿದನೆ ಋಷಿಮುನಿವರರ ಜಯ ಜಯ 36 ಇಂದ್ರಾದಿ ಮುನಿಗಳು ಕೈಹೊಡೆದು ಚಂದ್ರ ಸೂರ್ಯರು ಉಘೇಉಘೇಯೆನಲು ಮಂದಾರ ಮಲ್ಲಿಗೆ ಮಳೆಗಳ ಕರೆದರು ಅಂದದಿ ಸುರಜನರೆಲ್ಲರಾಗ ಜಯ ಜಯ 37 ಅರಳುವ ಕೆಂದಾವರೆ ಕುಸುಮ ಪರಿಮಳ ಸುರಮ್ಯ ಕಣ್ಗೆಸೆಯೆ ಎರಗುವ ಮರಿದುಂಬಿಗಳಂತೆ ರಾಘವ ಕರಗಳ ಪಿಡಿದೆÀತ್ತಿದ ಸತಿಯ [ಜಯ ಜಯ] 38 ಇಳೆಯ ಜಗಂಗಳನುದರದಲಿ ಅಳವಡಿಸಿದ ಮಹಾತ್ಮಕನು ಇಳೆಯ ಮಗಳನು ಎತ್ತಲಾರದೆ ರಾಮ ಬಳಲಿದನೆಂದು ನಕ್ಕರು ಜನರು ಜಯ ಜಯ 39 ಪರಾಕು ಸ್ವಾಮಿ ಪರಾಕು ದೇವ ಪಾದ ಎಚ್ಚರಿಕೆ ಸೀತಾಪತಿ ರಾಮನೆ<
--------------
ಹೆಳವನಕಟ್ಟೆ ಗಿರಿಯಮ್ಮ
ಸೀತಾಪತಿವಿಠಲ ದಾಸಳ ನಿರ್ಯಾಣ ಪದ ಮಾಧವನಾ ಪುರ ಸೇರಲು ಬೇಗ ಪ. ಪುಟ್ಟಿದಾರಭ್ಯದಿ ನಿಷ್ಟೆನೇಮದೊಳಿದ್ದು ಕಷ್ಟಪರಂಪರೆ ಸಹಿಸುತ ಜಗದಿ ಹರಿಯ ಕರುಣದಿ ಗುರುಕೃಪೆ ಪಡೆದಿ 1 ಹಿರಿಯೂರೆನ್ನುವ ಪುರ ವರ ವೇದಾವತಿ ತೀರ ಪರಮ ಸಾತ್ವಿಕರಲ್ಲಿ ಜನುಮ ತಳೆದಿ ತುಳಸಿಯ ವರದಿ ಮುದ್ದಿನಿಂ ಬೆಳೆದಿ 2 ಶಿಷ್ಟ ಸಂಪ್ರದಾಯ ಕಟ್ಟಿನೊಳಗೆ ನಿನ ಗಷ್ಟಮ ವರುಷದಿ ಮದುವೆಯ ಮಾಡಿ ಹರುಷವಗೂಡಿ ಹರಿಯ ಕೊಂಡಾಡಿ3 ಸತಿ ರುಕ್ಮಿಣೀಬಾಯಿ ಹೆಸರಿನಿಂ ಬಾಳ್ವೆಯ ಬಹು ಅಲ್ಪಕಾಲ ಕೊಟ್ಟನೆ ಸಿರಿಲೋಲ ಮುಸುಕಿತು ಮಾಯಜಾಲ 4 ಸಂಸಾರ ಕೈಕೊಂಡು ವಂಶಕೊಬ್ಬನ ಪಡೆದು ಕಂಸಾರಿ ಕರುಣದಿ ಇರುತಿರೆ ನೀನು ವಿಧಿ ತಂದೊಡ್ಡಿದನು 5 ಎರಡು ವರ್ಷದ ಮಗುವ ಕರದಲ್ಲಿ ಕೈಕೊಂಡು ಪರಿಪರಿ ಕಷ್ಟದಿ ಶಿಶುವ ಬೆಳೆಸಿದೆ ವಿದ್ಯೆ ಕಲಿಸಿದೆ ಪುತ್ರಗ್ಹರಸಿದೆ 6 ಒಬ್ಬ ಆ ಮಗನರ್ಥಿ ಸಂಸಾರವನೆ ಕಂಡು ಉಬ್ಬಿ ಹರುಷಾದಲ್ಲಿ ಇರುತಿರೆ ನೀನು ಮೊಮ್ಮಕ್ಕಳನು ಪಡೆದೆ ನಾಲ್ವರನು 7 ಘಟಿಸುತ ಸ್ವಪ್ನದಿ ಸೇವೆಗೈಯ್ಯೆಂದು ಅಭಯವನಂದು ಕೊಡಲು ದಯಸಿಂಧು 8 ಮರುದಿನ ಮನೆಯಲ್ಲೆ ಭರದಿ ಸೇವೆಯ ಕೊಂಡು ಹರಿವಾಯುಗಳನಿಟ್ಟು ಸುತ್ತುವರಿಯುತ್ತ ಎಡವಿ ಬೀಳುತ್ತ ಪ್ರದಕ್ಷಿಣೆ ಬರುತಾ 9 ಒಲಿದು ಆ ಭಕ್ತಿಗೆ ವರನೇತ್ರವಿತ್ತನು ನಳಿನನಾಭನ ಭಕ್ತ ಘಟಿಕಾಚಲನಿಲಯ ಭಾರತಿಪ್ರೀಯ ದಿವಿಜರ ಒಡೆಯ 10 ಭಕ್ತಿ ವಿರಕ್ತಿ ಜ್ಞಾನವು ಚಿತ್ತದಿ ಮೂಡಿ ಸೋತ್ತಮರಾದ ಶ್ರೀ ವಿಬುಧರ ದಯದಿ ಮೋಕ್ಷಸಾಧನದಿ ದಿನಗಳ ಕಳೆದಿ 11 ಶ್ರವಣ ಕೀರ್ತನ ಸ್ಮರಣೆ ಮನನಾದಿಗಳನೆಲ್ಲ ತವಕದಿ ಕೈಕೊಂಡು ಮೋದದಿ ಮೆರೆದಿ ಕಷ್ಟವ ಮೆರೆದಿ ಹರಿಗುರು ದಯದಿ 12 ಪ್ರಥಮ ಯಾಮದಲೆದ್ದು ಜಿತಮನದಿಂದ ಶ್ರೀ ಪತಿಯ ಸ್ತೋತ್ರಗಳನ್ನು ವದನದಿ ಸತತ ಪರಿಯಂತ 13 ಉಚ್ಛಸ್ವರದಿ ನೀನು ಪಾಡಿದ್ಹಾಡುಗಳಿಂದು ಅಚ್ಚಳಿಯದೆ ನಮ್ಮ ಸ್ಮರಣೆಯೊಳ್ನಿಂತು ಹರುಷವನಾಂತು ಮರೆಯುವುದೆಂತು 14 ವೃದ್ಧಾಪ್ಯ ತಲೆದೋರೆ ಇದ್ದೊಬ್ಬ ಪುತ್ರನು ಪದ್ಮನಾಭನ ಪುರ ಸೇರಿ ನಿನ್ನಗಲಿ ದುಃಖದಿ ಬಳಲಿ ತೊಳಲಿದೆ ಬಳಲಿ 15 ಪೌತ್ರರಿಬ್ಬರು ನಿನ್ನ ಹೆತ್ತಮ್ಮನಂದದಿ ಚಿತ್ತದಿ ತಿಳಿದಿನ್ನು ಸಲಹುತ್ತಿರಲು ಹರಿದಯ ಬರಲು ದುಃಖ ಮರೆಯಲು 16 ಕಲ್ಯಾಣನಗರದಿ ಕಿರಿಯ ಮೊಮ್ಮಗನಿರೆ ಆಹ್ಲಾದದಿಂದ ನೀನವನಲ್ಲಿ ಇರಲು ಸದ್ಗುರು ಬರಲು ಜ್ಞಾನವೆರೆಯಲು 17 ಹರಿದಾಸಕೂಟದ ವರ ಅಂಕಿತವ ಕೊಂಡು ಗುರುಕರುಣವ ಪೊಂದಿ ನೀ ನಮಗೆಲ್ಲ ಸನ್ಮಾರ್ಗಕ್ಕೆಲ್ಲ ಮೊದಲಾದೆಯಲ್ಲ 18 ಶ್ರೀ ತಂದೆ ಮುದ್ದುಮೋಹನದಾಸರ ದಯದಿ ಸೀತಾಪತಿವಿಠ್ಠಲನ್ನ ಒಲಿಸಿದೆ ಧ್ಯಾನದೋಳ್ತಂದೆ ಆನಂದಪಡೆದೆ 19 ಕಂಚಿ ಕಾಳಹಸ್ತಿ ಶ್ರೀ ರಂಗಯಾತ್ರೆಯ ಸಂಚಿಂತನೇಯಿಂದ ಗೈದೆಯೆ ನೀನು ಗಳಿಸಿದೆ ಇನ್ನು ಭಕುತಿಯ ಪೊನ್ನು 20 ಉಡುಪಿ ಮಂತ್ರಾಲಯ ಸೇತು ರಾಮೇಶ್ವರ ಕಡು ಭಕ್ತಿಯಲಿ ತಿರುಪತಿ ಕ್ಷೇತ್ರ ಚರಿಸಿ ಕಷ್ಟವ ಸಹಿಸಿ ಶ್ರೀ ಹರಿಗೆ ಅರ್ಪಿಸಿ 21 ಕಡುಕೃಪೆಯಿಂದಂದು ಕಣ್ಣನ್ನೆ ಕೊಟ್ಟಂತ ಮೃಡಪಿತ ಘಟಿಕಾಚಲೇಶನ್ನ ಕೂಡಿ ಕಣ್ತುಂಬ ನೋಡಿ ತನುವನೀಡಾಡಿ22 ಅಂತರಂಗದ ಬಿಂಬ ಸರ್ವಾಂತರ್ಯಾಮಿ ಎಂ ತೆಂಬಂಥ ಚಿಂತನೆ ಸಂತತಗೈದೆ ಅಭಿಮಾನ ತೊರೆದೆ ದ್ವಂದ್ವ ಸಹಿಸಿದೆ 23 ವ್ರತನೇಮ ಜಪತಪ ಸತತದಿಗೈಯ್ಯುತ್ತ ಕ್ಷಿತಿವಾರ್ತೆಗೆಳಸಾದೆ ಮನವನ್ನೆ ಸೆಳೆದು ಹರಿಪಾದಕ್ಕೆರದು ಹಿತವನ್ನೆ ಮರೆದು 24 ಭಾಗವತಾದಿ ಸಚ್ಛಾಶ್ತ್ರ ಶ್ರವಣಗೈದು ಜಾಗ್ರತಳಾದಿ ಭೂಸುರರ ಸೇವೆಯಲಿ ಸೂಕ್ಷ್ಮಧರ್ಮದಲಿ ಪುಣ್ಯಗಳಿಸುತಲಿ 25 ಸತತಬಿಂಬಕ್ರಿಯ ವ್ರತವಂದೆ ಕೈಕೊಂಡು ಜತನದಿ ಮರೆಯದೆ ಪ್ರತಿಕಾರ್ಯದಲ್ಲಿ ಅರ್ಪಿಸಿ ಹರಿಯಲ್ಲಿ ಇದ್ದೆ ಮೋದದಲಿ 26 ಮುಖ್ಯಪ್ರಾಣನ ದಯ ಮುಖ್ಯಮಾಡುತ ಇನ್ನು ಅಕ್ಕರೆ ಭಕ್ತಿಯ ತೋರಿದೆ ನೀನು ಬೆನ್ನು ಬಿಡದವನು ನಿನ್ನ ಸಲಹಿದನು 27 ಭಾರತಿಪತಿ ಮುಖ್ಯಪ್ರಾಣಾಂತರ್ಗತನೆಂಬ ವಾರುತಿ ಇಲ್ಲದ ವಚನವೆ ಇಲ್ಲಾ ನಿನ್ನ ಈ ಸೊಲ್ಲ ಮರೆಯಲೊಶವಲ್ಲ 28 ಶ್ರೀ ರಾಮಚಂದ್ರನ ಆರಾಧನೆಯಗೈದು ಸಾರತತ್ವವ ತಿಳಿದು ಸಾಧಿಸಿ ಪಥವ ಸಹಸ್ರಾರು ಜಪವ ಗೈದೆ ತಪವ 29 ನೀ ಹಾಡಿದ ಸ್ತೋತ್ರ ನಿನ್ನ ಸನ್ಮಾರ್ಗವ ನನ್ನೆಯಿಂದಲಿ ಎರೆದೆ ಹೆಣ್ಣು ಮಕ್ಕಳಿಗೆ ಸ್ಮರಿಸುವರೀಗೆ ಸತ್ಕೀರ್ತಿಯದಾಗೆ 30 ಹರಿ ಗುರು ವರತತ್ವ ದಿವಿಜರಭಿಮಾನಿಗಳ ನಿರುತದಿ ಚಿಂತಿಸಿ ಸಾಧನಗೈದೆ ಕಾಲವ ಕಳೆದೆ ಹರಿಪಾದಕ್ಕೆರೆದೆÀ 31 ಬಿಂಬಾನು ಸಂಧಾನ ಚತುರಳಾಗಿ ನೀನು ಸಂಭ್ರಮದಿಂದ ಶ್ರೀ ಮಧ್ವಶಾಸ್ತ್ರದಲಿ ಮನಸ ನೀಡುತಲಿ ಸುಖ ಸುರಿಯಲಿ 32 ಒದ್ದು ತಾಪತ್ರಯ ಸದ್ಗುರು ಕೃಪೆ ಪೊಂದಿ ಗೆದ್ದೆ ನೀ ಸುಲಭದಿ ಭವದ ಬಂಧನವ ಪಡೆದೆ ಹರಿ ದಯವ ಕೊಟ್ಟಿತೆ ಮುದವ 33 ಪೇಳಲೋಶವೆ ಹೇ ದಯಾಳು ನಿನ್ನಯ ಗುಣ ಬಾಳಿದೆ ಧರೆಯೊಳು ತೊಂಬತ್ತೈದೊರುಷ ವೃದ್ಧಾಪ್ಯದೋಷ ನಿನಗಿಲ್ಲ ಲೇಶ 34 ಇಂದ್ರಿಯಂಗಳು ಎಲ್ಲ ಒಂದು ಕುಗ್ಗದೆ ಒಬ್ಬ ರಿಂದಲು ಸೇವೆಯ ಕೊಳದೆ ಲವಲವಿಕೆ ಯಿಂದಿರುವ ಬಯಕೆ ಸಲಿಸೀತೆ ಮನಕೆ 35 ಕಿರಿಯ ಮೊಮ್ಮೊಗ ರಮಾಕಾಂತನಲ್ಲಿರುತಿರೆ ಕರೆಹೇಳಿ ಕಳುಹಿದ ಹರಿ ತನ್ನ ಪುರಕೆ ಕ್ಲಿಪ್ತಕಾಲಕ್ಕೆ ಆಗೆ ಮನವರಿಕೆ 36 ತೊರೆದೈದು ದಿನ ಅನ್ನ ಹರಿಧ್ಯಾನಂಗತಳಾಗಿ ವರ ಗಂಗೆ ವದನದಿ ಪ್ರಾಶನಗೈದು ಅಭಿಮಾನ ತೊರೆದು ಭ್ರಾಂತಿಯ ಮೆರೆದು 37 ವರಹಜೆ ತುಂಗ ತೀರದಿ ಪ್ರಾಣನಾಥನ ಚರಣಮೂಲದಿ ಶಿವಮೊಗ್ಗ ಕ್ಷೇತ್ರದಲಿ ಹರಿಸ್ಮರಣೆಯಲಿ ಪ್ರಾಣ ಸಲಿಸುತಲಿ 38 ಸ್ವಭಾನುವತ್ಸರ ಭಾದ್ರಪದ ಬಹುಳ ಇದ್ದ ದಶಮಿ ದಿನ ಗುರುವಾರದಲ್ಲಿ ಮಧ್ಯರಾತ್ರಿಯಲಿ ತನು ತೊರೆದಿಲ್ಲಿ 39 ಕೇಶವದೂತರು ಮೀಸಲಿಂದಲಿ ನಿನ್ನ ಘಾಸಿಗೊಳಿಸದೆ ಕರೆದೊಯ್ದರೇನಮ್ಮ ಪೇಳೆ ಎನ್ನಮ್ಮ ಎಲ್ಲಿ ಪೋದ್ಯಮ್ಮ 40 ಹೆತ್ತಮ್ಮಗಿಂತಲೂ ಹೆಚ್ಚಾಗಿ ನಮ್ಮನ್ನು ಅರ್ಥಿಯಿಂ ಬೆಳೆಸಿದೆ ಅಭಿಮಾನದಿಂದ ಅನುರಾಗದಿಂದ ಬಹುಮಾನದಿಂದ 41 ಮೊಮಕ್ಕಳೆಂದರೆ ಬಹು ಪ್ರೀತಿ ನಿನಗಲ್ಲೆ ಒಮ್ಮೆ ನಾಲ್ವರು ಬಂದು ಇರುವೆವು ನಾವು ಆಲ್ಪರಿಯುವೆವು ಅಗಲಿ ಸೈರಿಸೆವು 42 ಅರ್ಥಿಲಿ ರಮಾಕಾಂತ ವಿಠಲಾಂಕಿತ ಕೃಷ್ಣ ಮೂರ್ತಿಯು ಪುತ್ರಗಿಂತಧಿಕದಿ ನಿನ್ನ ಅಂತ್ಯಕ್ರಿಯವನ್ನ ಮಾಡಿದ ಧನ್ಯ 43 ಶ್ರದ್ಧೆಯಿಂದಗ್ರಜನಿಂದ ಕೂಡುತ ನಿನ್ನ ಶುದ್ಧಭಾವದಿಗೈದ ಅಂತ್ಯಸೇವೆಯನು ಸ್ವೀಕರಿಸಿ ನೀನು ಹರಸಿ ಹಿತವನ್ನು 44 ತಿಳಿದು ತಿಳಿಯದೆ ನಾನು ಗೈದಪರಾಧವ ನಲವಿಂದ ಕ್ಷಮಿಸಿ ನಮ್ಮನು ಮನ್ನಿಸಿದೆ ಸಹನವ ತಳದೆ ಬಹು ಪ್ರೀತಿಗೈದೆ 45 ಎಲ್ಲ ಪರಿಯಲಿ ನಮ್ಮ ಕ್ಷಮಿಸಿ ಕಾಪಾಡಮ್ಮ ಬಲ್ಲಿದಳು ನೀನು ಆಶೀರ್ವದಿಸುವುದು ಸುಖವ ತೋರುವುದು ಕೃಪೆಯ ಮಾಡುವುದು 46 ಅಂಜನೆಕಂದ ನಿನ್ನವನೆಂಬ ಅಭಿಮಾನ ರಂಜಿಸೆ ಸಹಜದಿ ನಿನ್ನೊಳು ಮಾತೆ ಜಗದಿ ವಿಖ್ಯಾತೆ ಹರಿಗತಿಪ್ರೀತೆ 47 ಪತಿಗುರು ಪವನ ಹೃದ್ಗತಮೂರ್ತಿ ಚಿಂತನ ರತಳೆ ನಿನ್ನಯ ಚರಿತೆ ಪೇಳ್ದೆ ತಿಳಿದನಿತು ತಪ್ಪನು ಮರೆತು ಲಾಲಿಸು ಮಾತು 48 ಗೋಪಾಲಕೃಷ್ಣವಿಠಲನ ಸದ್ಭಕ್ತಳೆ ಶ್ರೀ ಪಾದಕ್ಕೆರಗಿ ನಾ ಜಯವ ಪಾಡುವೆನು ಧನ್ಯಳೇ ನೀನು ಮಾನ್ಯಳೆ ನೀನು 49
--------------
ಅಂಬಾಬಾಯಿ
ಸೀತಾರಾಮ ಶ್ರೀರಘುರಾಮ ಕಾ ಕುತ್ಸ್ಥರಾಮ ಕರುಣಾಳು ರಾಮ ಪ ಉತ್ತಮ ಗುರುಗಳಿಗೆ ಭಕ್ತಿಯಿಂದಲೆ ಎರಗಿ ಭಕ್ತವತ್ಸಲನ ಚರಿತ್ರೆ ಪೇಳುವೆನು 1 ಆದಿಮೂರುತಿಮಹಿಮೆ ವೇದಂಗಳರಿಯದು ಎನ್ನ ಭೇದಬುದ್ಧಿಗೆ ಇದು ಬೋಧವಾಗುವುದೆ 2 ಪತಿತಪಾವನ ನಿಮ್ಮ ಸ್ತುತಿಯ ಮಾಡುವುದಕ್ಕೆ ಮತಿಯ ಪಾಲಿಸಿ ಸದ್ಗತಿಯ ಕೊಡೆನೆಗೆ 3 ಆದಿಸೃಷ್ಟಿಯಲಿ ಆದುದು ಈ ಆತ್ಮ ಬಾಧೆಯ ಪಡುತಿಹುದು ಭವರೋಗದಲಿ 4 ಜನನ ಮರಣವೆಂಬ ಜಾಡ್ಯವನು ಬಿಡಿಸಿ ನಿನ್ನ ಚರಣದೊಳಿರಿಸೆನ್ನ ಕರುಣವಾರಿಧಿಯೆ 5 ಹೃಷಿಕೇಶವ ಎನ್ನ ಹೃದಯದೊಳಗೆ ಇದ್ದು ವಿಷಯಕೆ ಎನ್ನನು ವಶವ ಮಾಡುವರೇ 6 ದೆ ಮನ್ನಿಸಿ ರಕ್ಷಿಸೊ ಪನ್ನಗಶಯನ 7 ಪಾರ್ಥಸಾರಥಿ ನಿಮ್ಮ ಪಾದವ ನಂಬಿದೆ [ಅರ್ಥಿಯಿಂ] ಪಾವನ ಮಾಡೆನ್ನ ಪರಮಪುರುಷನೆ 8 ನಿಮ್ಮ ಪಾದದ ಭಕ್ತಿ ನಿಮ್ಮ ಪಾದದ ಸ್ತುತಿ ನಿಮ್ಮ ಪೊಗಳುವ ಮತಿಗತಿಯ ಕೊಡೆನಗೆ 9 ತಂದೆತಾಯಿಯು ನೀನೇ ಬಂಧುಬಳಗವು ನೀನೆ ಆ ನಂದದಿಂದಲಿ ಕಾಯೊ ಇಂದಿರಾರಮಣ 10 ಸುರರೆಲ್ಲ ಪೋಗಿ ಮೊರೆಯಿಡಲಾಗಿ ಅರಿತನು ಭೋಗಿಶಯನ ತಾನಾಗಿ11 ವಸುಧೆಯ ಭಾರವನಿಳುಹುವೆನೆಂದು ದಶರಥನುದರದಿ ಜನಿಸಿ ತಾ ಬಂದು 12 ಪಂಕಜನೇತ್ರ ಪರಮಪವಿತ್ರ [ಸು]ಕೋಮಲಗಾತ್ರ ಕೌಸಲ್ಯಪುತ್ರ 13 ಪುತ್ರರ ನೋಡಿ ಸಂತೋಷಗೂಡಿ ಅರ್ತಿಯಿಂದಲೆ ಚೌಲ ಉಪನಯನ ಮಾಡಿ 14 ನೋಡಿ ಕೌಶಿಕನ ಚಿಂತೆಯ ಮಾಡಿ ಕೂಡಿ ಅನುಜನ ಮುನಿವರನೊಡನೆ ವೋಡಿ 15 ಕರೂಶದೇಶಕೆ ಬಂದು ತಾಟಕಿಯನು ಕೊಂದು ಮ ಹ ಸ್ತ್ರೀಯೆಂದು ಆನಂದದಿ ಗ್ರಹಿಸಿ 16 ಮಾರೀಚನ ಹಾರಿಸಿ ಕ್ರತುವನ್ನು ಪಾಲಿಸಿ ತೋರಿಸಿ ಗಂಗೆಯ ಆನಂದದಿಂ ಸ್ತುತಿಸಿ 17 ಮಾಡಿ ಶಿಲೆಯ ಪಾವನ ಮಿಥಿಲಪುರಕೆ ವೋಡಿ ನೋಡಿ ಧನುವ ಮುರಿದು ಜಾನಕಿ ಕೂಡಿ 18 ಮಾರ್ಗದಲ್ಲಾಗ ಭಾರ್ಗವನ ಆಗ್ರಹವ ಬೇಗ ಮುರಿದು ತಾ ಶೀಘ್ರದಿಂ ಬಂದ 19 ಸತಿ ಸಹಿತನಿಂದು ರಾಜ್ಯ ಗ್ರಹಿಸುವೆನೆಂದ ಮಾತೆಗಾನಂದ 20 ಮಾತೆಗೆ ವಂದಿಸಿ ಸೀತೆಯನೊಡಗೊಂಡು ಸು ಮಿತ್ರೆಜಾತನ ಸಹಿತ ರಘುನಾಥ ತಾ ಪೊರಟ 21 ಪೋಗಿ ಜನಕನಿಗಾಗಿ ವನಕೆ ತಾ ಯೋಗಿ 22 ಬೇಗ ಭರತನಿಗಾಗಿ ಪಾದುಕೆಗಳ ಅನು ರಾಗದಿಂದಿತ್ತು ಯೋಗದಿಂ ಪೋಗಿ 23 ಅತ್ರಿಮಹಾಮುನಿ ಇತ್ತ ಆಭರಣವ ವಸ್ತ್ರವ ಗ್ರಹಿಸಿದ ಪುರುಷೋತ್ತಮನು 24 ವಿರಾಧನ ಕೊಂದು ಹರುಷದಿಂ ಬಂದು ಕರುಣದಿಂದ ನಿಂದು ಋಷಿಗಳಿಗಭಯವ[ನಿತ್ತು] 25 ದನುಜೆನಾಸಿಕವರಿದು ಖರದೂಷಣರ ತರಿದು ತಾನೊಲಿದು ಸತಿಗೆ ಗುಹೆಯಲ್ಲಿ ನಲಿದು26 ಬಂದು ರಾವಣ ಜಾನಕಿಯ ಕದ್ದೊಯ್ಯಲಂದು ಕೊಂದು ಮಾರೀಚನ ಗೃಧ್ರಗೆ ಮೋಕ್ಷಾವ [ನಿತ್ತು] 27 ಕಬಂಧನ ಗೆಲಿದು ಪಂಪಾತೀರದಿ ನಲಿದು ಶಬರಿಯಿತ್ತ ಫಲವನ್ನು ಸವಿದು ಹರಿಗೆ ತಾನೊಲಿದು 28 ಕುಟ್ಟಿ ವಾಲಿಯ[ನು] ರವಿಜಗೆ ಪಟ್ಟವ ಕಟ್ಟಿ ಸೃಷ್ಟಿಜಾತೆಯನರಸಲು ಕಪಿಗಳನಟ್ಟಿ 29 [ಭರದಿವಾನರ] ಕೈಲಿ ಉಂಗುರವಿರಿಸೆ ಆ ಮಾರುತಿ ಕಪಿಗಳುವೆರಸಿ ಜಾನಕಿ[ಯ]ನರಸೆ 30 ಶರಧಿಯನ್ಹಾರಿ ಸೀತೆಯ ನೋಡಿ ಗುರುತನು ತೋರಿ ದುರುಳನೊಡನ್ಹೋರಿ ಮಣಿಯ ತಂದನಾಧಾರಿ 31 ವನವನ್ನು ಮುರಿದು ಅಕ್ಷನ ತರಿದು ಅಸ್ತ್ರಕ್ಕೆ ಅ [ವನೊ]ಲಿದು ರಾವಣನೆದುರಲ್ಲಿ ನಲಿದು 32 ಪುರವೆಲ್ಲ ಸುಟ್ಟು ವಿಭೀಷಣನ ಗುಟ್ಟು ಬಾಲ ಶರಧಿಯೊಳಿಟ್ಟು ಕಪಿಗಳ ಸೇರಿದನಷ್ಟು 33 ಭಂಗಿಸಿ ಮಧುವನವ ಭರದಿಂದ [ರಾಮನೆಡೆಗೆ] ಲಂಘಿಸಿ ಮಾತೆಯ ಕಂಡೆವೆಂದೊಂದಿಸಿ ಮಣಿಯನಿರಿಸೆ 34 [ವರರಾಮ] ತಾ ನೋಡಿ ವ್ಯಸ ಮಾಡಿ ಹರಿಯನ್ನು ಕೂಡಿ ಆಲಿಂಗನೆ ಮಾಡಿ 35 ಹರಿಗನ ಕೂಡಿ ಭರದಿಂದಲೋಡಿ ಶರಧಿಯ ನೋಡಿ ಯೋಚನೆ ಮಾಡಿ 36 ವರುಣನ ವಂದಿಸಿ ವಿಭೀಷಣನ ಮನ್ನಿಸಿ ಶರಧಿಯ ಬಂಧಿಸಿ ಅಂಗದನ ಸಂಧಿಗೆ ಕಳುಹಿಸಿ 37 ಇಂದ್ರಜಿತುವೊಡನೆ ಛಂದದಿಂದಲೆ ಕಾದಿ ಬಂದ ಸರ್ಪಾಸ್ತ್ರವ ಖಗನಿಂದ ಬಿಡಿಸಿ 38 ಹಂಗಿಸಿ ರಾವಣನಕಿರೀಟವ ಮೈಯೆಲ್ಲ ನಡುಗಿಸಿ ಭಂಗಿಸಿ ತಾ ಜಗದೊಡೆಯನೆಂದೆನಿಸಿ 39 ಕುಂಭನಿಕುಂಭ ಕುಂಭಕರ್ಣರ ಕೊಂದು ಕುಂಭಿನಿಯೊಳು ನಿಂದನಂಬುಜನಾಭ 40 ಪತಿತಪಾವನ [ನನುಜನ] ಪಿತಾಮಹಾಸ್ತ್ರದಿ ಕಟ್ಟೆ ಹಿತದಿಂದೌಷಧಿ ತಂದ ಮಾರುತನ ಕುಮಾರ 41 ಮಾಯೆ ಸೀತೆಯನರಿ[ಯದೆ] ಮೋಹಪಡು ತ ಉ ಪಾಯದಿಂದಲೆ ಬಂದ ಮಾಯಾವಿಯೆಡೆಗೆ 42 ತಮ್ಮ ಲಕ್ಷ್ಮಣ ತಾನು ಹೆಮ್ಮೆಯಿಂದಲೆ ಕಾದಿ ಒಮ್ಮೆ [ಲೆ] ಅಸ್ತ್ರಗಳ ಸುಮ್ಮಾನದಿಂ ಬಿಟ್ಟು 43 ಸತ್ಯಮೂರುತಿ ಪವಿತ್ರ ತಾನಾದರೆ ಅಸ್ತ್ರವೆ ಶತ್ರುವ ಜಯಿಸಲೆಂದನಾಗ 44 ಎಂದು ಬಾಣವಬಿಡೆ ಇಂದ್ರಜಿತುವ ಕೊಂದು ಆ ನಂದದಿಂ ಲಕ್ಷ್ಮಣನ ಹೊಂದಿತಾ ಬಾಣ 45 ವಿರೂಪಾಕ್ಷ ಯೂಪಾಕ್ಷ ಶೋಣಿತಾಕ್ಪನ ಕೊಂದು ಮ ಕರಾಕ್ಷನ ಕೊಂದ ಮಹಾನುಭಾವರಾವಣನ 46 ಮೂಲಬಲವನ್ನೆಲ್ಲ ಲೀಲೆಯಿಂದಲೆ ನಿ ರ್ಮೂಲನ ಮಾಡಿ[ದ] ಲೀಲಾವಿನೋದದಿ 47 ಬಂಧುಗಳೆಲ್ಲರು ಮರಣ ಪೋಗಲು ಕಂಡು ಬಂದ ರಾವಣನು ತಾನು ಒಂದೆಮನಸಿನಲಿ 48 ಯಾರು ಇಲ್ಲದಾಗ ಚೋರತನದಲ್ಲಿ ನಾರಿಯ ಕದ್ದೊಯ್ದ ಧೀರ ಬಾರೆಂದ [ರಾಮ] 49 ಅಸ್ತ್ರಕ್ಕೆ ಅಸ್ತ್ರವ ಒತ್ತಿ ಬಿಡಲು ಆಗ ಮತ್ತೆ ಆಕಾಶವ ಮುತ್ತಿತು ಬಾಣ 50 ರಾಮರಾವಣರ್ಯುದ್ಧ ನೋಡಿ ಮಹಾಸುರರೆಲ್ಲ ಪ್ರೇಮದಿಂದಲೆ [ಹರಸಿದರು] ಆನಂದಗೂಡಿ 51 ಕತ್ತರಿಸಿದ [ರಾವಣನ]ಶಿರ ಮತ್ತೆ ಬೆಳೆಯಲು ನೋಡಿ ಚಿತ್ತದಿಂ ನೆನೆದು [ರಾಮ] ಬ್ರಹ್ಮಾಸ್ತ್ರದಿಂ ಕಡಿದ 52 ದಶಕಂಠನೆಂತೆಂಬ ಹಸನಾದ ವೃಕ್ಷವ ದಶರಥಸುತವಾತ ಬಂದು ಮುರಿಯಿತು 53 ರಾವಣನೆಂತೆಂಬ ವಾರಣ[ದ ಕೋಡ] ವೀರ ರಾ ಘವನೆಂಬ ಕೇಸರಿಯು ಮುರಿಯಿತು 54 ಪುಲಸ್ತ್ಯಪುತ್ರನೆಂಬ ರಾಜವೃಷಭವನ್ನು ಇಕ್ಷ್ವಾಕು [ಕುಲದ] ವ್ಯಾಘ್ರವು ಭಕ್ಷಿಸಿತಾಗ 55 [ಆಮಹಾ] ರಾಕ್ಷಸೇಂದ್ರನೆಂಬ ಜ್ವಲಿಸುವ ಅಗ್ನಿಯ [ಶ್ರೀ] ರಾಮಜೀಮೂತವು ಬಂದು ಕೆಡಿಸಿತು 56 ಸುರರೆಲ್ಲ ಜಯವೆಂದು ಪುಷ್ಪಗಳರಳನ್ನು ಕರೆಯಲು ಶಿರದಲ್ಲಿ ಧರಿಸಿದ [ತಾ] ಪರಮಪುರುಷನು 57 ರಾಕ್ಷಸೇಂದ್ರ [ವಿಭೀಷಣ]ಗೆ ಮಾಡಿ ರಾಜ್ಯಾ ಭಿಷೇಕವ ಮೂರ್ಜಗದಲಿ ಕೀರ್ತಿ ಪಡೆದ ರಾಘವ 58 ತಂದೆಗೆರಗಿ ಅಗ್ನಿತಂದ ಸೀತೆಯ ನೋಡಿ ಆ ನಂದದಿಂದಲೆ ಕೂಡಿನಿಂದ ರಾಘವನು 59 ಅಜಭವಸುರರೆಲ್ಲ ಭುಜಗಶಯನನ ನೋಡಿ ನಿಜವಾಗಿ ಸ್ತೋತ್ರ ಮಾಡಿದರು ನಿರ್ಮಲದಿ 60 ವೇದವನಿತ್ತು ಅಜನಿಗೆ ಭಾರವ ಹೊತ್ತು [ಆ] ಧಾರುಣಿಯ ತಂದು ಕಂಬದಿಂ ಬಂದು 61 ದಾನವ ಬೇಡಿ ಕ್ಷತ್ರಿಯಕುಲವನೀಡಾಡಿ ಜಾನಕಿಯ ತಂದು ಪ್ರಲಂಬನ ಕೊಂದು 62 ಕಾಳಿಯ ಒತ್ತಿ ಕುದುರೆಯ ಹತ್ತಿ ಜಗ ವೆಲ್ಲ ಸುತ್ತಿ ನಿಮ್ಮ ದರ್ಶನ ಮುಕ್ತಿ 63 ಜಗದೋದ್ಧಾರ ದುರಿತಕ್ಕೆ ದೂರ ಜಗಕೆ ಆಧಾರ ದುಷ್ಟರಿಗೆ ಕ್ರೂರ 64 ಪೃಥುವಿಯ ಪಾಲ ದಿಟ್ಟಗೋಪಾಲ ಸತ್ಯದಲಿ ಶೀಲ ರುಕ್ಮಿಣೀಲೋಲ 65 ಅರಿ ನಿ ಸ್ಸೀಮ ಭಕ್ತರಾಪ್ರೇಮ 66 ವಿಶಾಲನೇತ್ರ ಪರಿಪೂರ್ಣಗಾತ್ರ [ವ ರ] ಸೀತಾಕಳತ್ರ ಸುಗ್ರೀವಮಿತ್ರ 67 [ರಾಜ] ದಶರಥ ಬಾಲ ಜಾನಕೀಲೋಲ ಮೂರ್ಜಗಪಾಲ ಕೀರ್ತಿವಿಶಾಲ 68 ಸತ್ಯಮೂರುತಿ ಪವಿತ್ರ ನೀನೆ ಜಗಕೆ ಕರ್ತನೂ ಕಾರಣಮೂರ್ತಿಯೂ ನೀನೆ 69 ನಂದನಕಂದ ಮುಕುಂದ ಗೋವಿಂದ ಇಂದಿರಾರಮಣ ನೀನೆಂದು ಪೊಗಳಿದರು 70 ಪುಷ್ಪಕವನು ಏರಿ ಲಕ್ಷ್ಮೀಸಹಿತವಾಗಿ [ರಾಮ]<
--------------
ಯದುಗಿರಿಯಮ್ಮ
ಸೀಸಪದ್ಯ ಮಕರ ಭಾದೆಗೆ ಸಿಲುಕಿ ಕರಿರಾಜ ತಾ ಕರೆಯೆ ಭರದಿ ನೀ ಬಂದೆ ತಂದೆ ಭಾಧಿಸುತಿರಲು ಕಂದ ಪ್ರಹ್ಲಾದನನು ಸಂದೇಹವಿಲ್ಲದೆಲೆ ಬಂದು ಕಾಯ್ದೆ ವಿಪಿನದಲಿ ಧ್ರುವರಾಯ ತಪವಗೈಯುತಲಿರಲು ಕೃಪೆಯಿಂದ ಮೈದೊರ್ದೆ ಕೃಪಣವತ್ಸಲನೇ ಮರಣ ಕಾಲದಿ ಮಗನ ಕರೆದಜಾಮಿಳನಂದು ಕರುಣದಿಂದಲಿ ಪೊರೆದೆ ಕರುಣ ಶರಧೆ ದುರುಳ ಸೆರಗ ಸೆಳೆಯುತಿರೆ ನೊಂದು ಚೀರಿಡಲಕ್ಷಯಾಂಬರವನಿತ್ತೆ ಇಂದು ನೀನಲ್ಲದೆಲೆ ಕಾಯ್ವರಿನ್ನಾರಿಹರು ತಂದೆ ನೀ ಮೈದೋರು ಶ್ರೀ ಕರಿಗಿರೀಶ
--------------
ವರಾವಾಣಿರಾಮರಾಯದಾಸರು
ಸುಕೃತ ಫಲಿಸಿತೆನಗೆ ಕೋವಿದಾಗ್ರಣಿ ವ್ಯಾಸತತ್ವಜ್ಞರ ಕಂಡೆ ಪ ಜೀವ ಸಾಮಾನ್ಯವೆಂದರಿಯದಿಲಿ ಶಾಸ್ತ್ರಗಳ ನಾವಲೋಕನದಿ ಪೇಳ್ವರು ನಿತ್ಯದಿ ದೇವಾಂಶರಿವರು ಸಂಶಯವು ಬಡಸಲ್ಲ ಮಾ ಯಾ ವಲ್ಲಭನು ಇವರ ಹೃದಯದೊಳಗಿರುತಿಪ್ಪ 1 ಕವಿ ಭರಿಡಿತ ಮಹಾಮುನಿ ವ್ಯಾಸಕೃತ ಸುಭಾ ಗವತಾದಿ ಗ್ರಂಥ ವ್ಯಾಖ್ಯಾನ ನೋಡಿ ಭುವನೇಂದ್ರರಾಯರ ಕರುಣದಲಿ ತುರೀಯಾ ಶ್ರ ಮನವಿತ್ತು ವ್ಯಾಸತತ್ವಜ್ಞ ರಹುದೆಂದು 2 ಈ ಜಗತ್ರಯ ದೊಳಗೆ ಪೂಜ್ಯ ಪೂಜಕರ ನಿ ವ್ರ್ಯಾಜದಲಿ ತಳುಪಿದನು ಭಕ್ತಜನಕೆ ಶ್ರೀ ಜಗನ್ನಾಥ ವಿಠಲನೊಬ್ಬ ಪೂಜ್ಯ ಪಂ ಭವ ಭವರು ಪೂಜಕರೆಂಬುವರ ನೋಡ್ಡೆ 3
--------------
ಜಗನ್ನಾಥದಾಸರು
ಸುಕೃತ ವಮ್ಮರಂಗನ ಕಾಂತೆಯರದಮ್ಮಅನಂತ ದೇಶಗಳು ಇವನಂತ ತಿಳಿಯವುಈ ಕಾಂತೆಯರುಒಲಿದರೆಂತು ಪೇಳಮ್ಮ ಪ. ಪಟ್ಟಾವಳಿ ಕೊಟ್ಟರು ರಂಗಗೆ ಇಟ್ಟರು ದಿವ್ಯ ಮುಕುಟವಇಟ್ಟರು ದಿವ್ಯ ಮುಕುಟ ಮುತ್ತಿನಹಾರ ಗಟ್ಟಿ ಕಂಕಣದ ಕೆಲದೆಯರು1 ಕೇಶರ ಬೆರೆಸಿದ ಮೀಸಲ ಶ್ರೀಗಂಧವಶ್ರೀಶನ ಸತಿಯರು ಹಿಡಕೊಂಡುಶ್ರೀಶನ ಸತಿಯರು ಹಿಡಕೊಂಡುರಂಗಗೆ ಲೇಪಿಸೆವೆಂಬೊ ಭರದಿಂದ2 ಸಾರ ತುಳಸಿಯು ಬೆರೆದ ಪಾರಿಜಾತದ ಮಾಲೆವಾರಿಜ ಮುಖಿಯರು ಹಿಡಕೊಂಡವಾರಿಜ ಮುಖಿಯರು ಹಿಡಕೊಂಡುರಂಗಗೆ ಏರಿಸೆವೆಂಬೊ ಭರದಿಂದ3 ಪಚ್ಚಮಾಣಿಕ ಬಿಗಿದ ಹೆಚ್ಚಿನ ಸರಗಳುಮಚ್ಛನೇತ್ರಿಯರು ಹಿಡಕೊಂಡುಮಚ್ಛನೇತ್ರಿಯರು ಹಿಡಕೊಂಡುರಂಗಗೆ ಏರಿಸೆವೆಂಬೊ ಭರದಿಂದ4 ಕೊರಳಲಿ ಸರಮಾಲೆ ಅರಳಿದ ಮುಖ ಕಮಲಎರಳೆ ನೋಟದಲಿ ಚಲುವನಎರಳೆ ನೋಟದಲಿ ಚಲುವ ಚನ್ನಿಗರಾಯನ ತರುವಳಿನೋಡಿ ಹರುಷಾಗಿ 5 ಹಸ್ತದಿ ಹಣಿಮ್ಯಾಲೆ ಕಸ್ತೂರಿ ಬಟ್ಟಿಟ್ಟುಉತ್ತಮ ತಿಲಕ ರಚಿಸುತಉತ್ತಮ ತಿಲಕ ರಚಿಸುತರಂಗನ ಹತ್ತಿರ ನಿಂತ ಕೆಲವರು6 ಇನ್ನೋರ್ವಳು ಬಂದು ಕನ್ನಡಿ ತೋರುತಕರ್ಣ ಕುಂಡಲವ ಸರಿಸುತಕರ್ಣ ಕುಂಡಲವ ಸರಿಸುತ ರಾಮೇಶನ ಚನ್ನಾಗಿ ನೋಡಿ ಸುಖಿಸುತ 7
--------------
ಗಲಗಲಿಅವ್ವನವರು
ಸುಜನ ಜನ ವತ್ಸಲನ ಸೋಮ ಸೂರ್ಯರ ನಯನ ಸುಗುಣಿ ಗುಣ ಗಂಭೀರನ |ಭುಜಗ ಭೂಷಣ ಕಂಕಣನ ಭುವನ ರಕ್ಷಕನ ಭುಜ ಚತುಷ್ಕಾಯುಧಗಳಿಂದೆಸೆವ ಶುಭ್ರ ರದನ ವಿಜಯ ಮೂರುತಿ ವಿಘ್ನವಿಪಿನ ದಾಹಕನ ವಿಘ್ನೇಶ್ವರಗೆ ಸಹಸ್ರನಮನ 1 ನೀನೆ ಶಾಶ್ವತ ರೂಪ ನಿನ್ನ ಕೀರ್ತಿ ಪ್ರತಾಪ ಖೂನ ಕಂಡುಉಸುರೆನೆಂದರೆ ಶ್ರುತಿಗಳಾಲಾಪ ಮೌನಗೊಂಡವು ಮಿಕ್ಕ ಶೇಷಾದಿಕರ ಸ್ಫೂರ್ತಿ ನಿಂತು ಹೋಗಿರಲು ಗಣಪ | ........................... ನಗೇಶನ ಮಾರ್ಗದ ಕೀಲ ಕೃಪೆ ಮಾಡಿ ತೋರಿದರು ಶ್ರೀನಾಥ ಶ್ರೀಹರಿಯ ಚಾರಿತ್ರ್ಯ ಪೇಳಿಸಲಿಕೆ ಆಧಾರ ನೀನೇ ಸತ್ಯ 2 ಇಂತು ವಿಘ್ನೇಶ್ವರನ ಬಲಗೊಂಡ ಬಳಿಕ ಸಮನಂತರದೊಳಾ ಶಾರದಾಂಬಿಕೆ ಶ್ರೀಪಾದ ಅಂತರಂಗದ ಪೀಠದಾಸನಕೆ ಕರಕೊಳಲು ಬಂದೊದಗು ಜಿವ್ಹಾಗ್ರದಿ | ನಿಂತು ನಡಿಸುವ ನಿನ್ನ ಶಕ್ತಿ..................................... ವಂತೆ ವಿಶ್ರಾಂತೆ ಪಾವನ ಮೂರ್ತೆ ಪ್ರಖ್ಯಾತೆ ವರದಾತೆ ಲೋಕ ಮಾತೆ 3 ಸುಜನ ಭುಜಗ ತ್ರಿಜಗ ಜೀವರ ಜನನಿ ತ್ರಿತಾಪ ಸಂಹಾರಿಣಿ ತ್ರಿದೇಹ ಸಂಚಾರಿಣಿ | ದ್ವಿಜತುರಂಗ ಗಮನಿ ದಿವ್ಯಾಂಬರಾಭರಣಿ ರಜ .........................ಗಜಗಮನಿ ಗಂಧರ್ವಗಾನ ಲೋಲಿನಿ ವಾಣೀ ರತ್ನ ಕೃತಾಂಗಿ ಅನುಕೂಲಿನಿ 4 ಹಸ್ತಿ ಕೃಮಿ ಕೀಟ ಭೃತ್ವಲಯದೊಳಗುಳ್ಳ ...................................... ಕೇವಲ ಪರಬ್ರಹ್ಮ ಸ್ಫುರಣಸ್ಫೂರ್ತಿಯು ತೋರದಾರಿಂದ ಗುರುವಿನ್ಹೊರತು 5 ಜಲಧಿ ಎಂದು ಮೊರೆ ಹೊಕ್ಕೆ ನಿನ್ನ ಶ್ರೀ ಚರಣ .......... ಮಾಡಿ ರಚಿಸುವ 6
--------------
ಭೀಮಾಶಂಕರ
ಸುತ್ತಬೇಕು ಜನ್ಮವೆತ್ತಬೇಕು ಪ ಕತ್ತಲೆ ಸಂಸಾರದೊಳು ಹೊತ್ತು ಹೊರೆಯ ನಿತ್ಯ ಅ.ಪ ಭರತಖಂಡದೊಳು ಪುಟ್ಟಿ ಮರುತ ಮತವ ಪೊಂದಿಕೊಂಡು ಗುರುಕೃಪೆಯನು ಪಡೆದು ಹರಿ ಸರ್ವೋತ್ತಮನೆಂದರಿಯೋ ತನಕ 1 ಅರಿಷಡ್ವರ್ಗವನ್ನೆ ತ್ಯಜಿಸಿ ದುರುಳರ ಸಂಗ ಕತ್ತರಿಸಿ ಪರಿ ಕಾರ್ಯ ಕರ್ಮದೊಳು ಹರಿಯು ತೋರುವ ತನಕ 2 ಬಿಂಬ ವಿಜಯ ರಾಮಚಂದ್ರ - ವಿಠಲರಾಯನು ಹೃದಯ ಅಂಬರದೊಳಗೆ ಪೊಳೆದು ಅಂಬವಿರಜೆಯಲಿ ಮುಳುಗೊ ತನಕ 3
--------------
ವಿಜಯ ರಾಮಚಂದ್ರವಿಠಲ
ಸುಂದರ ಮೂರುತಿ ಹರಿಯೆ ಬಾ- ರೆಂದು ಕಶ್ಯಪ ಋಷಿ ಅದಿತಿಯರು ಮಂದಹಾಸದಿ ನಮ್ಮ ಮಂದಿರಕೀಗ ಗೋ- ವಿಂದ ಬಾ ಶ್ರೀಮುಕುಂದ ಬಾ ಯಾದವ ವೃಂದ ಬಾ ಬಲುಮುದದಿಂದ ಬಾ ಬಾ- ರೆಂದು ಕರದಾರು ಶೋಭಾನೆ 1 ಅಚ್ಚುತಾನಂತ ಶ್ರೀಹರಿ ನೀನು ಸಚ್ಚಿದಾನಂತಾತ್ಮನೆ ನೀನು ಮಿತ್ರೆ ಲಕುಮಿ ಒಡಗೂಡುತ ಬಾರೆಂದು ಅತ್ರಿಯರು ಸ್ತುತಿಪರು ಮಿತ್ರೆಯರು ಪಾಡ್ವರು ಕೀರ್ತಿಪರು ಅನಸೂಯಾತ್ರಿಯರು ಬಾರೆಂದು ಕರೆದಾರು ಶೋಭಾನೆ 2 ಭಾಗವತರ ಪ್ರಿಯ ಬಾರೆಂದು ಭಾರದ್ವಾಜರು ಭಕ್ತಿಯಲಿ ಸತಿ ಸುಶೀಲೆ- ಯರು ಸುಂದರ ನಾರಿಯರು ಕರೆವರು ಕಂಸಾರಿ ಬಾರೆಂದು ಕರದಾರು ಶೋಭಾನೆ 3 ಹಸ್ತಿವರದ ಹರಿ ಬಾರೆಂದು ವಿಶ್ವಾಮಿತ್ರರು ಹರುಷದಲಿ ಸತಿ ಸಹಿತದಿ ಕರೆವರು ಭಕ್ತಿಯಲಿ ಪರಮಾಸಕ್ತಿಯಲಿ ಹರಿಯನು ಸ್ತೋತ್ರದಲಿ ಭೂ ರಮಾ ಪಾರ್ಥಸಾರಥಿಯ ಕರದಾರು ಶೋಭಾನೆ 4 ಕೌಶಿಕ ಯಜ್ಞಪಾಲನೆ ಬಾ ಕಂಸನ ಸಭೆಯಲಿ ಸೆಳೆದನೆ ಬಾ ಹಂಸವಾಹನಪಿತ ಬಾರೆಂದು ಕರೆವರು ಗೌತಮರು ಪತ್ನಿ ಅಹಲ್ಯೆಯರು ಪಾಡುತ ಪ್ರಾರ್ಥಿಪರು ಮುರಹರಿ ಗೋಪಾಲ ಬಾರೆಂದು ಕರದಾರು ಶೋಭಾನೆ 5 ಜಗದುದರನೆ ಶ್ರೀ ಹರಿಯೆ ಬಾ ನಿಗಮತಂದು ಸುತಗಿತ್ತನೆ ಬಾ ಝಗಿಝಗಿಸುವ ಆಭರಣಗಳ್ಹೊಳೆಯುತ ಬಾರೆಂದು ಜಯ ಜಯವೆನ್ನುವರು ಋಷಿ ಜಗದಗ್ನಿಯರು ರೇಣುಕ ಸಹಿತ ಶ್ರೀಶನ ಕರದಾರು ಶೋಭಾನೆ 6 ಮದನ ಗೋಪಾಲನಿಗೆ ಮಂಗಳ ಯದುಕುಲ ತಿಲಕನಿಗೆ ಮಂಗಳ ಕಮಲಾನಾಭ ವಿಠ್ಠಲನಿಗೆ ಸತಿ ಅ- ರುಂಧತಿಯರು ಜಯ ಜಯ ಮಂಗಳವೆಂದು ಕರದಾರು ಶೋಭಾನೆ7 ಶೋಭನವೆನ್ನಿರೆ ಶ್ರೀಹರಿಗೆ ಶೋಭನವೆನ್ನಿರೆ ಮಾಧವಗೆ ಶೋಭನವೆನ್ನಿರಿ ಸೊಬಗುಳ್ಳ ದೇವಗೆ ಶೋಭಾನೆ ಸಿರಿಯರಸಗೆ ದಿವ್ಯ ಶೋಭಾನೆ ಪರಮಪುರುಷನಿಗೆ ಶೋಭಾನೆ ಶೋಭನ ಗರುಡಗಮನಗÉಶೋಭನವೆನ್ನಿರೆ ಶೋಭಾನೆ 8
--------------
ನಿಡಗುರುಕಿ ಜೀವೂಬಾಯಿ
ಸುಂದರಾಂಗ ವಿಠಲ | ತಂದೆ ಪೊರೆ ಇವಳಾ ಪ ಭವ ಸಿಂಧು ಉತ್ತರಿಸೀ ಅ.ಪ. ಭವ | ವಾರಿಧಿಗೆ ನವ ಪೋತಚಾರುತವನಾಮ ಸ್ಮøತಿ | ಆರೈಸುವಂತೇಮೂರೆರೆಡು ಭೇದಗಳು | ತಾರತಮ್ಯದ ಬಗೆಯತೋರಿಪೊರೆ ಕನ್ಯೆಯನು | ಮಾ ರಮಣ ದೇವಾ 1 ಆವ ಸ್ವಪ್ನದಿ ವೃದ್ಧ | ಭಾವದ್ಯತಿಗಳ ಕಂಡುಭಾವಿ ಮರುತರು ಎಂಬ ಭಾವದಲಿ ನಮಿಸೀಭಾವ ಭಕುತಿಲಿ ಭೀತಿ | ಭಾವವನೆ ತೋರುತ್ತತೀವರದಿ ಸಂಸ್ತಬ್ಧ | ಭಾವದಿರುತಿಹಳಾ 2 ಪತಿತ ಪಾವನ ರಂಗ | ಕೃತ ಪೂರ್ವ ಪುಣ್ಯದಿಂಮತಿಮಾಡಿ ಹರಿದಾಸ್ಯ | ಹಿತದಿಕಾಂಕ್ಷಿಪಳೋ |ಪತಿಸೇವೆ ದೊರಕಿಸುತ | ಕೃತಕಾರ್ಯಳೆಂದೆನಿಸೊಕ್ಷಿತಿಯೊಳಿವಳನು ಮೆರೆಸೊ | ಪ್ರತಿರಹಿತ ದೇವಾ 3 ಕರ್ಮಪ್ರಾಚೀನಗಳ | ನಿರ್ಮಲಿನ ಮಾಡುತ್ತಧರ್ಮ ಸಾಧನ ಮಾರ್ಗ | ಪೇರ್ಮೆಯಿಂಕೆಡಿಸೋ |ಭರ್ಮಗರ್ಭನನಯ್ಯ | ಹಮ್ಮು ಕಳೆದಿವಳ ತವಸೊಮ್ಮು ನಾಮಾಮೃತದ | ಉಮ್ಮು ನೀ ಕೊಡಿಸೋ 4 ಗಾಮಲ್ಲಗಣಿಗೊಲಿದು | ಧೀವರಗೆ ದೂರಸ್ಥಆವಸಂಗದ ವಿವರ | ಕಾಣ್ವ ಬಲವಿತ್ತಾಮಾವಾರಿಯಾದ ಗುರು | ಗೋವಿಂದ ವಿಠ್ಠಲನೆನೀವೊಲಿಯ ದಿನ್ನಾರ | ಕಾವರನಕಾಣೇ 5
--------------
ಗುರುಗೋವಿಂದವಿಠಲರು