ಒಟ್ಟು 7615 ಕಡೆಗಳಲ್ಲಿ , 131 ದಾಸರು , 4494 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ದ್ಯಾವಿ ನಮ್ಮ ದ್ಯಾವರು ಬಂದರು ಬನ್ನೀರೆ, ನೋಡ ಬನ್ನಿರೆ ಪ ಕೆಂಗಣ್ಣ ಮೀನನಾಗಿ ನಮ ರಂಗಗುಂಗಾಡು ಸೋಮನ ಕೊಂದಾನ್ಮ್ಯಾಗುಂಗಾಡು ಸೋಮನ ಕೊಂದು ವೇದವನುಬಂಗಾರದೊಡಲನಿಗಿತ್ತಾನ್ಮ್ಯಾ1 ದೊಡ್ಡ ಮಡುವಿನೊಳಗೆ ನಮ ರಂಗಗುಡ್ಡವ ಹೊತ್ಕೊಂಡು ನಿಂತಾನ್ಮ್ಯಾಗುಡ್ಡವ ಹೊತ್ಕೊಂಡು ನಿಂತು ಸುರರನುದೊಡ್ಡವರನ್ನ ಮಾಡ್ಯಾನ್ಮ್ಯಾ 2 ಚೆನ್ನ ಕಾಡಿನ ಹಂದಿಯಾಗಿ ನಮ ರಂಗಚಿನ್ನದ ಕಣ್ಣನ ಕೊಂದಾನ್ಮ್ಯಾಚಿನ್ನದ ಕಣ್ಣನ ಕೊಂದು ಭೂಮಿಯವನಜಸಂಭವಗಿತ್ತಾನ್ಮ್ಯಾ 3 ಸಿಟ್ಟಿಂದ ಸಿಂಹನಾಗಿ ನಮ ರಂಗಹೊಟ್ಟೆಯ ಕರುಳ ಬಗೆದಾನ್ಮ್ಯಾಹೊಟ್ಟೆಯ ಕರುಳ ಹಾರವ ಮಾಡಿ ಪುಟ್ಟಗೆ ವರವ ಕೊಟ್ಟಾನ್ಮ್ಯಾ4 ಹುಡುಗ ಹಾರುವನಾಗಿ ನಮ ರಂಗಬೆಡಗಲಿ ಮುಗಿಲಿಗೆ ಬೆಳೆದಾನ್ಮ್ಯಾಬೆಡಗಲಿ ಮುಗಿಲಿಗೆ ಬೆಳೆದು ಬಲಿಯನ್ನಅಡಿಯಿಂದ ಪಾತಾಳಕೊತ್ತ್ಯಾನ್ಮ್ಯಾ 5 ತಾಯ ಮಾತನು ಕೇಳಿ ಸಾಸಿರ ತೋಳಿನಆವಿನ ಕಳ್ಳನ ಕೊಂದಾನ್ಮ್ಯಾಆವಿನ ಕಳ್ಳನ ಕೊಂದು ಭೂಮಿಯಅವನಿಸುರರಿಗೆ ಇತ್ತಾನ್ಮ್ಯಾ 6 ಪಿಂಗಳ ಕಣ್ಣಿನ ಕೊಂಗಗಳ ಕೂಡಿಛಂಗನೆ ಲಂಕೆಗೆ ಪೋದಾನ್ಮ್ಯಾಛಂಗನೆ ಲಂಕೆಗೆ ಪೋಗಿ ನಮ ರಂಗಹೆಂಗಸುಗಳ್ಳನ ಕೊಂದಾನ್ಮ್ಯಾ7 ಕರಿಯ ಹೊಳೆಯ ಬಳಿ ತುರುಗಳ ಕಾಯುತಉರಗನ ಮಡುವ ಧುಮುಕ್ಯಾನ್ಮ್ಯಾಉರಗನ ಹೆಡೆ ಮೇಲೆ ಹಾರ್ಹಾರಿ ಕುಣಿವಾಗವರವ ನಾರೇರ್ಗೆ ಕೊಟ್ಟಾನ್ಮ್ಯಾ 8 ಭಂಡನಂದದಿ ಕುಂಡೆಯ ಬಿಟುಗೊಂಡುಕಂಡ ಕಂಡಲ್ಲಿಗೆ ತಿರುಗ್ಯಾನ್ಮ್ಯಾಕಂಡ ಕಂಡಲ್ಲಿಗೆ ತಿರುಗಿ ತ್ರಿಪುರರಹೆಂಡಿರನೆಲ್ಲ ಕೆಡಿಸ್ಯಾನ್ಮ್ಯಾ 9 ಚೆಲುವ ಹೆಂಡತಿಯ ಕುದುರೆಯ ಮಾಡಿಒಳ್ಳೆ ರಾಹುತನಾದಾನ್ಮ್ಯಾಒಳ್ಳೆ ರಾಹುತನಾಗಿ ಮ್ಲೇಚ್ಛರಡೊಳ್ಳು ಹೊಟ್ಟೆಯ ಮ್ಯಾಲೊದ್ದಾನ್ಮ್ಯಾ 10 ಡೊಳ್ಳಿನ ಮ್ಯಾಲ್ ಕೈ ಭರಮಪ್ಪ ಹಾಕ್ಯಾನುತಾಳವ ಶಿವನಪ್ಪ ತಟ್ಟಾನ್ಮ್ಯಾಒಳ್ಳೊಳ್ಳೆ ಪದಗಳ ಹನುಮಪ್ಪ ಹಾಡ್ಯಾನುಚೆಲುವ ಕನಕಪ್ಪ ಕುಣಿದಾನ್ಮ್ಯಾ11
--------------
ಕನಕದಾಸ
ದ್ಯುಮಣಿ ಮಂಡಲವ ತುಡುಕಲು ಹವಣಿಸಿದ ಹಸ್ತ ವಿಮಲ ಮುದ್ರಿಕೆ ಜನನಿಗಿತ್ತ ಹಸ್ತ ಕ್ರಮದಿ ಚೂಡಾಮಣಿಯ ಹರಿಗೆ ತೋರಿದ ಹಸ್ತ ಸುಮನ ಸಾರ್ಚಿತ ಹನುಮಾ ನಿಮ್ಮಹಸ್ತವನು ದೋರೈ 1 ಹಿಡಿಗಲ್ಲಿನಂತೆ ಪರ್ವತಗಳ ನೆರೆದ ಹಸ್ತ ಪಾದ ಪುಣ್ಯಹಸ್ತ ವಡನೆ ಭೂಭಾರವ ನೀ ಳಹಿದ ಶ್ರೀ ಗದೆ ಹಸ್ತ ಕಡುಗರುಣಿ ಭೀಮಶೇನಾ ನಿಮ್ಮ ಹಸ್ತವನು ದೊರೈ 2 ಹರಿ ಪರಂದೈವೆಂದು ತತ್ವ ಭೋಧಿಪ ಹಸ್ತ ವಜ್ರ ಹಸ್ತ ಸಿರಿ ವೇದ ವ್ಯಾಸರು ತಂದು ತೋರಿದ ಹಸ್ತ ಗುರು ಪೂರ್ಣ ಪ್ರಜ್ಞ ನಿಮ್ಮ ಅಭಯ ಹಸ್ತವನು ದೋರೈ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ದ್ರೌಪದಿ ಸುಳಾದಿ ಪುರಂದರ ಗುರು ನಾಗೇಶಾವೇಶ ಗುರು ಶ್ರೀಪಾದ ರಾಯ ಗುರು ಯೋಗಿ ಟೀಕಾರ್ಯ ಗುರು ಶ್ರೀಮದಾಚಾರ್ಯ ಗುರು ನಾಗಶÀಯನ ನೀನು ಸಕಲ ಜಗದ್ಗುರು ಈತ ಗುರು ಸಂತತಿಗೆ ವಂದೀಸಿ ತಾತ್ವಿಕರ ಜಾಗು ಮಾಡದೆ ನಮಿಪೆ ಜ್ಞಾನ ಪ್ರದಾತರೆಂದು ಆಗಮ ಪೌರಾಣ ಶೃತಿ ತತಿಗಳೊಳೆಲ್ಲ ಆಗುವಳಭಿಮಾನಿ ಭಾರತೀದೇವಿ ಎಂದು ಈಗ ಈ ಮಹಿಮಳ ಚರಿತೆ ಬುದ್ಧಿಗೆ ದೇವಿ ತಾಗಿಸಿದಂದದಿ ಸಾಗಲಿ ನುಡಿವುದು ನಾಗರಾಜನ ಜನನಿ ಸ್ವಪ್ನದಿ ಸುಳಿದಳು ಕೂಗಿದೆ ಅಯೋನಿಜೆ ದುಃಖರಹಿತಳೆಂದು ಭಾಗವತರ ಕಾಯ್ವ ಭಾಗ್ಯ ಸಂಪನ್ನದೇವಿ ಯೋಗಿ ಜನರಿಗೆಲ್ಲ ಗುರುಪತ್ನಿ ಎಂದೆನಿಪೆ ಆಗಾಗ ಅವತರಿಸಿ ಅನಿಲನ ಕಾರ್ಯಕ್ಕೆ ಆಗುವೆ ಸಹಕಾರಿ ಅಸುರರ ಸಂಹಾರಿ ಶ್ರೀ ಗುರೋರ್ಗುರು ಹರಿ ಗೋಪಾಲಕೃಷ್ಣವಿಠಲ ಭಾಗವತರ ಕಾಯ್ವ ನಿನ್ನದ್ವಾರದಿ ಸ್ಮರಿಸೇ 1 ಕೃತಿಸುತೆ ಕೊಂಡದಿ ಉದಿಸಿ ಸುತೆ ಎನಿಸಿದೆ ದ್ರುಪದನಿಗೆ ಚ್ಯುತರಹಿತ ಯೌವನಯುತೆ ಐವರಿಗರಸಿಯು ಆದೆ ಪ್ರತಿಯಿಲ್ಲದ ಪತಿವ್ರತೆ ಸುರತತಿ ಜನನಿಯು ನೀನೌ ಮಾ- ರುತ ಸುತನಲ್ಲದೆ ನಿನಗಿನ್ನಿತರರ ಸಂಗವು ಉಂಟೆ ಸುತರಂದದಿ ನಾಲ್ವರ ತಿಳಿದತಿಶಯದಲಿ ಅವರವರಾ ಸತಿಯರ ನಿನ್ನೊಳಗಡಿಗಿಸಿ ರತಿ ಕಾಲದಲೊಲಿದಿತ್ತೆ ಮತಿವಂತರಿಗಲ್ಲದೆ ಪ್ರತಿ ಜನರಿಗೆ ಮೋಹಕವು ಕ್ಷಿತಿಯೊಳು ನೀನವತರಿಸೀ ಕ್ಷಿತಿಗೇ ತೋರಿದ ಲೀಲೆ ಅತಿ ಸೌಭಾಗ್ಯದಿ ಮೆರೆದೆ ಕ್ಷಿತಿಪತಿಸೂಯಾಗದಲಿ ಖತಿಗೊಳ್ಳಲು ಖಳ ಜನರು ಸ್ಥಿತ ಸಾಮ್ರಾಜ್ಯವ ಕಂಡು ಕ್ಷಿತಿಭಾರವನಿಳುಹಲು ಶ್ರೀಪತಿ ಪತಿಮನವರಿಯುತ ಕುರು ಪತಿಸಭೆಯಲಿ ಭ್ರಮಿಸುತ ಜಾರುತ ಸರಸಿಯೋಳ್ ಬೀಳುತಿರೆ ಪತಿ ಶ್ರೀಪತಿ ಮೊಗವೀಕ್ಷಿಸಿ ಅತಿ ಹಾಸ್ಯದಿ ನೀ ನಗಲು ಖತಿಗೊಳ್ಳಲು ಕುರುಪತಿ ಕಲಕಿತು ದ್ವೇಷದ ಭಾವಗಳು ಪತಿ ಭಾರದ ಹರಣಕೆ ಮೂಲಾಯಿತು ನಿನ್ನಯ ನಗೆ ಕಿಡಿ ತಾ ಕಾತುರಕ್ಕಸ ತರುಗಳಿಗೆ ಸೋಕಿತು ಕಾಮನ ಬಿಸಿಯು ಮತಿಹೀನರು ನಿನ್ನನು ಬಯಸುತ ಬರೆ ದ್ವೇಷಾಗ್ನಿ ಜ್ವಲಿ ಸುತ ವಾಯು ಸಹಾಯದಲಿ ಹುತಗೈಸಿದೆ ಖಳತತಿಯ ಪತಿಯಂತರ್ಗತ ಕೃಷ್ಣನ ನುತಿಸುತ ಭಕ್ತ್ಯಾಜ್ಯಾಹುತಿ ಕ್ಷಿತಿ ಭಾರವನಿಳುಹಿಸಿದೆ ಹಿತತಂಗಿಯೆ ಗೋಪಾಲಕೃಷ್ಣವಿಠ್ಠಲಗೇ ನೀ ಪ್ರತಿಯುಂಟೆ ನಿನಗೆ ಈ ಕ್ಷಿತಿಯೊಳು ನಾಕಾಣೆ 2 ಮಡಿಯದೆ ದುರ್ಯೊüೀಧನನು ಮುಡಿಯನು ಕಟ್ಟೆನು ಎಂಬ ದೃಢ ಸಂಕಲ್ಪಳೆ ಪುಷ್ಪ ಮುಡಿಯಲಪೇಕ್ಷಿಸಿದೆ ನೀ ಒಡೆಯುವರುಂಟೇ ಇದರ ಒಡಲಿನ ಮರ್ಮವ ದೇವಿ ಒಡೆಯ ವೃಕೋದರ ನಿನ್ನ ನುಡಿ ಕೇಳುತ ವನ ಪೊಕ್ಕು ಮಡುಹುತ ಯಕ್ಷರ ತಂದು ಮುಡಿಸಿದ ಸೌಂಗಂಧಿಕವ ಪೊಡವಿಯೊಳ್ಹರಡಿತು ವಾರ್ತೆ ಒಡಲರಿಯದೆ ಜನತತಿಗೆ ಪಿಡಿಯುತ ಕರದಲಿ ಪುಷ್ಪ ಒಡೆಯನ ಪ್ರೇಮದಿ ನೋಡಿ ಮುಡಿಸಿದೆ ಸಿರಿಹರಿ ಮುಡಿಗೆ ಕಡು ಭಕ್ತಿಯೊಳಂತರದಿ ಬಿಡುಬಿಡು ಬಿಂಕವ ಲೀಲೆ ಕೊಡು ಕೊಡು ಭಕ್ತಿಯ ಬಾಲೆ ಪಡಿಸಾನಂದವ ಶೀಲೆ ನುಡಿಸಡಿಗಡಿಗ್ಹರಿ ಲೀಲೆ ಒಡಗೂಡತ ಪತಿಯೊಡನೆ ನಡೆಸಿದ ಚರಿತೆಗಳೆಲ್ಲ ಕಡು ಮೋಹವು ರಜ ತಮರಿಗೆ ಕೊಡುವುದು ಸುಖ ಸುಜನರಿಗೆ ಪೊಡವಿಪತಿ ಗೋಪಾಲಕೃಷ್ಣವಿಠಲ ನಿನ್ನ ನಡೆನುಡಿ ಮೆಚ್ಚುತ ನಡೆಸಿದ ಭಾರತ ನಾಟಕವÀ 3 ಆನಂದ ಜ್ಞಾನಪೂರ್ಣೆ ಆಗಾಗ ಒದಗಿದ ಹೀನ ದುಃಖದ ಸÉೂೀಂಕು ಉಂಟೆ ನಿನಗೆ ಇನ್ನು ಪ್ರಾಣಪತಿಗಳೈವರೆದುರಲಿ ಖಳ ನಿನ್ನ ಮಾನ ಹಾನಿಯ ಗೈಸೆ ಜಗವೆ ತಲ್ಲಣಿಸಿತು ಮಾನಾಭಿಮಾನ ಬಿಟ್ಟು ಶ್ರೀನಿಧಿ ಗತಿ ಎನ್ನೆ ಅಕ್ಷಯ ವಸನವು ಪ್ರಾಣಪಂಚಕ ಹರಿಯಾಧೀನವೆಂಬುವ ತತ್ವ ಪ್ರಾಣಕ್ಕೆ ಪ್ರಾಣಬಿಂಬ ಸ್ವಾಮಿ ಎಂಬುವ ತತ್ವ ಮಾನಾಭಿಮಾನ ತೊರೆದು ಪ್ರಾಣೇಂದ್ರಿಯವ ಜರಿದು ಮಾನಸದಲಿ ಹರಿಯ ಸ್ಮರಿಸಿದರಕ್ಷಯ ಸ್ಥಾನಪ್ರಾಪ್ತಿಯು ಎಂಬ ತತ್ವರಹಸ್ಯಗ- ಳಾನು ಸೂಚಿಸೆ ನಿನ್ನ ಕೃತಿಯಲ್ಲದಿನ್ನಿಲ್ಲ ದಾನವರೆಲ್ಲ ನಿನ್ನ ಕಾಮಿಸಿ ನೋಡಲವರು ಏನೆಂಬೆ ಮಾಡಿದಂಥ ಅಲ್ಪಸ್ವಲ್ಪದ ಪುಣ್ಯ ಕ್ಷೀಣಗೈಸುತ ಸೆಳೆದು ಹೀನ ಪಾಪದಿ ನೂಕಿ ಹಾನಿಗೈಸಿದೆ ಪವಮಾನಸುತನಿಂದಲಿ ಮಾನುನಿಮಣಿ ಸರ್ವಕ್ಷೇಮ ಪಾಲಿಪ ಭಕ್ತ- ರಾನನದಲಿ ನೋಡೆ ಜ್ಞಾನಾನಂದವನಿತ್ತು ಹೀನ ನರಕದಿ ಬಿದ್ದ ಭ್ರಾತೃಸಹಿತದಿ ಕುರುಪ ಕಾಣದೆ ನಿನ್ನ ಮಹಿಮೆ ಜ್ಞಾನರಹಿತನಾಗಿ ಜಾಣೆ ಶ್ರೀ ಗೋಪಾಲಕೃಷ್ಣವಿಠ್ಠಲನ ನಿಜ ಜ್ಞಾನ ಪಾಲಿಸಿ ಕಾಯೆ ಭೀಮಸೇನನ ಜಾಯೆ 4 ಮುಕ್ತರ ಬಂಧುವೆ ನೀನು ಭಕ್ತಿಯದಾತಳÉ ನೀನು ತತ್ವ ತಿಳಿಸುವೆ ನೀನು ಚಿತ್ತದೆ ನೆಲಸುವೆ ನೀನು ಹತ್ತದು ದುಃಖವು ನಿನಗೆ ಸುತ್ತದು ಶೋಕವು ನಿನಗೆ ಮುಕ್ತಾರ್ಥವ ಕೊಡುವವಳೆ ಮತ್ತೆ ಅಯೋನಿಜಹಳೆ ಮುತ್ತು ಮಾಣಿಕ್ಯವು ನವರತ್ನದ ಆಭರಣಗಳ ಕಂಚುಕ ನೆತ್ತಿಲಿ ಮಕುಟವನಿಟ್ಟು ಚಿತ್ತದೊಲ್ಲಭನಂಕದಲಿ ಹತ್ತಿ ಸಿಂಹಾಸನದಲಿರೆ ಸುತ್ತಲು ಸೌಪಣ್ರ್ಯಾದಿ ಸುರಸ್ತ್ರೀಯರು ಓಲೈಸೆ ಚಿತ್ತದಿ ಸಿರಿಹರಿಯನು ಭಕ್ತಿಲಿ ಭಜಿಸುತ ಮುಕ್ತಾ- ಮುಕ್ತರ ಕೃಪಪಾಂಗದಲಿ ಸುತ್ತಲೀಕ್ಷಿಸಿ ಕಾವೆ ಭಕ್ತಿಲಿ ದ್ರೌಪದಿ ಎಂದು ಎತ್ತಿದ ಸ್ವರದಲಿ ಕೂಗೆ ಚಿತ್ತದೊಲ್ಲಭನೊಡನೆ ಚಿತ್ತೈಸೆನ್ನಯ ಮನಕೆ ಹತ್ತಿಕಾಡುವ ಎನ್ನ ದುಷ್ಕøತ ಕರ್ಮಗಳೆಲ್ಲ ಕತ್ತರಿಸುತ ಕಾಯಮ್ಮ ಸತ್ಯಾಪ್ರಿಯನನು ತೋರೆ ಆರ್ತಜನರ ಪಾಲ ಗೋಪಾಲಕೃಷ್ಣವಿಠ್ಠಲನ್ನ ಅರ್ಥಿಯಿಂದಲಿ ಎನ್ನ ಚಿತ್ತದಿ ತೋರೆಲೆ ಜನನಿ 5 ಜತೆ ತತ್ವದೇವತೆಗಳ ಜನನಿ ತತ್ವಾರ್ಥ ತಿಳಿಸೇ ಆಪ್ತ ಗೋಪಾಲವಿಠ್ಠಲನೆಂದೆನಿಸೇ
--------------
ಅಂಬಾಬಾಯಿ
ದ್ವಾದಶನಾಮ ಸ್ತುತಿ ನಿನ್ನ ನೋಡಿ ಧನ್ಯನಾದೆನು ಶ್ರೀರಂಗನಾಥ ಪ ನಿನ್ನ ನೋಡಿ ಧನ್ಯನಾದೆ ಪನ್ನಗಶಯನ ರಂಗ ಮನ್ನಿಸಿ ರಕ್ಷಿಸು ಎನ್ನ ಮುನ್ನಜನ್ಮ ಬಾರದಂತೆ ಅ.ಪ. ಅರ್ಚ ಶೇಷಶಯನ ಲಕ್ಷ್ಮಿಗೆರಗಿ ಕೇಶವ ನಿಮ್ಮ ಸ್ತುತಿಸುವೆ 1 ಆದಿಸೃಷ್ಟಿಯಲ್ಲಿ ಬ್ರಹ್ಮನ ನಾಭಿಕಮಲದಲ್ಲಿ ಸೃಷ್ಟಿಸಿ ವೇದಸಾರವಾದ ಪ್ರಣವ ಓದಿ ಪೇಳಿದ ನಾರಾಯಣ 2 [ಆರ್ತಿ]ಯಿಂದ ಅಜನು ನಿಮ್ಮ ಮೂರ್ತಿಗಾಗಿ ತಪವ ಮಾಡೆ ಮಧುವೈರಿ ಮಾಧವಾ 3 ಪ್ರಣವಾಕಾರ ವಿಮಾನದಲ್ಲಿ ನಾಲ್ಕು ವೇದಶೃಂಗವಿರಲು [ವಿಷ್ಣು] ಪರವಾಸುದೇವರಿಂದ ಬಂದ ಶ್ರೀಗೋವಿಂದ 4 ಸತ್ಯಲೋಕದಲ್ಲಿ ನಿಂತು ನಿತ್ಯಪೂಜೆಯನ್ನು ಗ್ರಹಿಸಿ ಮತ್ತೆ ಇಕ್ಷ್ವಾಕುಗೊಲಿದ ವಿಶ್ವಮೂರುತಿ ವಿಷ್ಣುವೇ 5 ಸರಯು ತಮಸ ತೀರಮಧ್ಯದಿ ಹರಿಯೆ ನಿಮ್ಮನಿರಿಸಿ ದೊರೆಯು ಪರಮಪುರುಷನಿಂದ ಪೂಜೆ ಗ್ರಹಿಸಿದ ಮಧುಸೂದÀನ 6 ರಾಜ್ಯಾಭಿಷೇಕ ಕಾಲದಲ್ಲಿ ರಾಮಚಂದ್ರರು ರಾಕ್ಷಸೇಂದ್ರಗೆ ಕೊಡಲು [ರಾಜ್ಯವ] ಕಾವೇರಿ ಮಧ್ಯದಿನಿಂದು ತ್ರಿಜಗವಳೆದ ತ್ರಿವಿಕ್ರಮ 7 ಫಾಲ್ಗುಣ ಮೀನ ಉತ್ತರ ಫಲ್ಗುನೀ ನಕ್ಷತ್ರದಲ್ಲಿ ಬಾಲನಾಗಿ ಚಂದ್ರಪುಷ್ಕರಿಣಿ ತೀರದಿ ನಿಂದ ವಾಮನ 8 ಜಾಮಾತನೆನಿಸಿ ಗ್ರಹಿಸಿ[ದ] ಶ್ರೀದೇವಿ ಸಹಿತ ಶ್ರೀಧರ 9 ಮಳೆಯನಿಟ್ಟು ಧ್ವಜವಕಟ್ಟಿ ಸುರರ ಕರದು ಯಾಗವ ಮಾಡಿ ಯಾತ್ರದಾನದ [ತಳೆದ] ಹೃದಯವಾಸ ಹೃಷಿಕೇಶವ 10 ವೀರ ಮರುದಿನದಿ ಜಟಾಶೋಧಕರ ಮಂಟಪದಿ ನಿಂದು (?) [ಧೀರ] ಮುದುಕಿಗೊಲಿದು ದಧ್ಯಾನ್ನವ ಉಂಡ ಶ್ರೀಪದ್ಮನಾಭ 11 ನಾಲ್ಕು ದಿವಸದಲ್ಲಿ ನಾಗವೈರಿಯನ್ನು ಏರಿಬಂದು ಕಲ್ಪವೃಕ್ಷವು ಸರ್ಪವಾಹನ ಏರಿದ ದಾಮೋದರ 12 ಆರು ದಿವಸದಲ್ಲಿ ವರಿಯೂರಿಗೆ ಹೋಗಿ ನಿಮ್ಮ ಸಂತೈಸಿ ಮಾಲೆಧರಿಸಿದ ಸಂಕರ್ಷಣ 13 [ಮಾರನೆ] ದಿವಸದಲಿ ಚೂರ್ಣಾಭಿಷೇಕವನು ಧರಿಸಿ ವಾಸುದೇವ 14 ಎಲ್ಲೇಕೆರೆಗೆ ಪೋಗಿ ಭೂಮಿಯೆಲ್ಲ ನೋಡಿ ಹರುಷದಿಂದ ಅ[ಲ್ಲೆ] ತೇಜಿಯನೇರಿ ತೇರಿನೆದುರೆ ಪೇರಿಬಿಟ್ಟ ಪ್ರದ್ಯುಮ್ನ 15 ಪಂಗುನ್ಯತ್ತರವು ಬರಲು ಉಂಗುರವನು ಬೇಡಿತಂದು ಅನಿರುದ್ಧ 16 ತಿಂದ ಪಂಜಿನಪ್ರಹಾರ ಹರುಷದಿಂದ ಪುರುಷೋತ್ತಮ 17 ಪತ್ನಿಯೊಡನೆ ಪ್ರೇಮಕಲಹ ಅರ್ತಿಯಿಂದ ಮಾಡುತಿರಲು ವಿಷ್ಣು ಚಿತ್ತರ ವಾಕ್ಯದಿಂದ ಅರಸಿಗೇರಿದಾ ಅಧೋಕ್ಷಜಾ 18 ಮಂದರೋದ್ಧರ ತನ್ನ ಇಂದಿರೆಸಹಿತವಾಗಿ ಬಂದು ಗೋರಥವನೇರಿ ನಾಲ್ಕುಬೀದಿ ಮೆರೆದ ನಾರಸಿಂಹ 19 ವಾರಿಜಾಕ್ಷ ರಥವನಿಳಿದು ಕಾವೇರಿಯಲ್ಲಿ ತೀರ್ಥವಿತ್ತು ದರ್ಪಣದ ಗೃಹದಿ ನಿಂದ ಅರ್ತಿಯಿಂದ ಅಚ್ಚುತ 20 ಸಪ್ತ ಆವರಣವೆಲ್ಲ ಶಬ್ದವಿಲ್ಲದೆ ಸುತ್ತಿ ಬಂದು ಭಕ್ತ ಭಾಷ್ಯಕಾರರಿಗೊಲಿದ ದುಷ್ಟಮರ್ದನ ಜನಾರ್ಧನ 21 ಪೃಥವಿಯೊಳಗಾಶ್ಚರ್ಯವಾದ ಪ್ರತಿಯಿಲ್ಲದ ಪಲ್ಲಕ್ಕಿಯೇರಿ ಅತಿಶಯದಿಂದ ಬಂದ ಉರಗಶಯನ ಉಪೇಂದ್ರ 22 ಅಂದು ಸುರರ ಛಂದದಿಂದ ಮಂದಿರಕ್ಕೆ ಕಳುಹಿ ರಂಗ ಬಂದು ಭಕ್ತರ ಪಾಪ[ವ] ಪರಿಹರಿಸಿದಾ ಶ್ರೀಹರಿ 23 ಅಷ್ಟು ಚರಿತ್ರೆಯನ್ನು ಕೇಳಿ ಕಟ್ಟಿದ ಕಂಕಣವ ಬಿಚ್ಚಿ ಶ್ರೇಷ್ಠವಾದ ಸ್ಥಾನದಲ್ಲಿ ಮಂತ್ರಿ ಸಹಿತನಿಂದ ಶ್ರೀಕೃಷ್ಣ 24 ದಕ್ಷಿಣಗಂಗೆಯಾಗಿ ನಿಂದು ಭಕ್ತನ ದ್ವೀಪವನ್ನು ನೋಡುತ ಮುಕ್ತಿಮಾರ್ಗವನ್ನು ತೋರಿದ ಭಕ್ತವತ್ಸಲ ವೆಂಕಟರಂಗ 25
--------------
ಯದುಗಿರಿಯಮ್ಮ
ದ್ವಾರಕೆಯ ಅರಸಗೆ ಪ. ಸುರೂಪಿಸೀರೆಯನುಟ್ಟು ಥೋರ ಮುತ್ತನೆ ಕಟ್ಟಿ ತೇರಿನಾರುತಿಯ ಮುರಾರಿಯ ಮುಂದೆತ್ತುವರು1 ರಂಜಿಸೊಸೀರೆಯನುಟ್ಟು ಪಂಜರ ದ್ವಾಲೆನಿಟ್ಟು ನೀರಾಂಜನ ಎತ್ತಿದರು 2 ತಾಕೀತೆಂದು ಕೆಲರು ಓಕುಳಿ ನಿವಾಳಿಸುವರು ಲೋಕನಾಯಕಗೆ 3 ಕೃಷ್ಣರಾಯನ ಮುಖಕೆ ದೃಷ್ಟಿ ನೆಟ್ಟೀತೆಂದು ಕೆಲರು ಬಟ್ಟು ಮುತ್ತು ನಿವಾಳಿಸಿ ಇಟ್ಟು ಕಸ್ತೂರಿ ಕಪ್ಪು 4 ಕದಳಿ ಸಾಲು ಜಗಲಿ ತೋರಣ ವಿಶಾಲ ಬೀದಿಯೊಳು 5 ನಿವಾಳಿಸಿ ನಿವಾಳಿಸಿ ನಾಲ್ಕು ಕಡೆಗೆ ಒಗೆದು6 ಶ್ರೀಲೋಲ ರಾಮೇಶನ ಭಕ್ತರು ವಾಲೈಸುವರು ಹೀಗೆ7
--------------
ಗಲಗಲಿಅವ್ವನವರು
ಧಣೀ ಧಣೀ ಧಣೀ ಧಣೀ ಗುರುರಾಯ ನೀನೆ ಧಣೀ ಧಣೀ ಪ ನಿತ್ಯ ನೆನೆವರ ಪೊರೆವಂಥ ಅ.ಪ ಆದಿಯುಗದಿ ಪ್ರಹ್ಲಾದರಾಯನೆನಿಸಿ ಮಾಧವನುತ್ತಮನೆಂದು ಸಾಧಿಸಿದಂಥಾ 1 ತ್ರೇತಾಯುಗದಿ ರಘುನಾಥನನುಜನೆನಿಸಿ ಪಾದ ಈತೆರ ಭಜಿಸಿದಂಥ 2 ದ್ವಾಪರ ಯುಗದಲ್ಲಿ ಭೂಪ ಬಾಹ್ಲೀಕÀನೆನಿಸಿ ಶ್ರೀ ಪನಾಙ್ಞ ದಿಂದಲೀಪರಿ ಜನಿಸಿದಂಥ 3 ಕಲಿಯುಗದಲ್ಲಿ ನೀ ಚಲುವ ವ್ಯಾಸನೆನಿಸಿ ಇಳೆಯೊಳು ಗ್ರಂಥರಚಿಸಿ ಜಲಜನಾಭನೊಲಿಸಿದಂಥ 4 ಎರಡನೆ ಜನುಮದಿ ಗುರುರಾಘವೇಂದ್ರನಾಗಿ ! ಕಮಲ ಭಜಿಸಿದಂಥ 5
--------------
ಗುರುಜಗನ್ನಾಥದಾಸರು
ಧನುರ್ಮಾಸದ ಸೇವೆಯ ಗೀತೆ ಧನುರ್ಮಾಸದ ಸೇವೆಯ ನೋಡುವ ಬನ್ನಿ ದಾನವಾಂತಕ ರಂಗನ ಪ. ಶ್ರೇಯೋನಿಧಿಗಳಿಗೆರಗಿ ಶ್ರೀವೇದಾಂತ ಗುರುಗಳಿಗೆ ವಂದಿಸಿ ಶ್ರೀ ಭಾಷ್ಯಕಾರ ಶಠಗೋಪರಿಗೆ ವಂದಿಸಿ ಶ್ರೀರಂಗೋತ್ಸವವ ಸಂಕ್ಷೇಪದಿಂ ಪೇಳುವೆ 1 ಮಾರ್ಗಶಿರ ಮಾಸದಲಿ ಮಹಾನುಭಾವ ಶ್ರೀರಂಗನಾಥನಿಗೆ ಮಹದುತ್ಸವವನ್ನು ನಡೆಸಬೇಕೆನುತಲೆ ಮಹಾಪುರುಷರು ಸಂಕಲ್ಪವ ಮಾಡಿದರು 2 ಕೇಶವ ಮಾಸದಲಿ ಎದ್ದು ದಾಸರು ಮೂರನೆ ಜಾವದಲಿ ಭೂಸುರರಿಗೆ ಎಚ್ಚರವಾಗಬೇಕೆಂದು ಬಾ ರೀಸಿದರು ಭೇರಿ ದುಂದುಭಿ ವಾದ್ಯಗಳ 3 ಕನಕಿ ಸುಜೋತಿ ಹೇಮಾವತಿಯ ಕಪಿಲೆ ಕಾವೇರಿ ತೀರ್ಥದಲಿ ಸ್ನಾನವ ಮಾಡಿ ತೀರ್ಥವ ತಂದು ನೇಮದಿ ನೀಲವರ್ಣನಿಗಭಿಷೇಕವ ಮಾಡಿದರು 4 ಛಳಿಗೆ ಕುಲಾವಿಯನಿಟ್ಟು ಶಾಲುಗಳ ಹೊದಿಸಿ ನಳಿನನಾಭ ರಂಗಗೆ ಪರಿಪರಿ ಪುಷ್ಪದ ಸರಗಳ ಧರಿಸಿಯೆ ಶ್ರೀಮೂರ್ತಿಯ ಸರವನು ಧರಿಸಿದರಾಗ 5 ತಾಪಹರವಾದ ಸೂಕ್ಷ್ಮದ ದಿವ್ಯ ಧೂಪವನು ಬೆಳಗಿದರು ವ್ಯಾಪಿಸುವ ತಿಮಿರವ ಪರಿಹರಿಸಿ ರಂಜಿಸುವ ದೀಪವ ಬೆಳಗಿದರು ಶ್ರೀಪತಿಗೆ 6 ಋಗ್ವೇದ ಯಜುರ್ವೇದವು ಸಾ ಮವೇದ ಅಥರ್ವಣವೇದಂಗಳು ದ್ರಾವಿಡವೇದ ಪುರಾಣಶಾಸ್ತ್ರಗಳನು ಬಾಗಿ ಲಾ ವೊಳಗೆ ನಿಂತು ಭಕ್ತರು ಪೇಳಿದರು 7 ವಾರಾಂಗನೆಯರಾಗ ವೈಯ್ಯಾರದಿಂದ ಆರತಿಗಳನೆ ತಂದು ವಾರಿಜನಾಭಗೆ ನೇಮದಿಂದಲೆ ಗುಂ ಭಾರತಿಗಳನೆತ್ತಿ ನೈವೇದ್ಯವ ತಂದರು 8 ಮುದ್ಗಾನ್ನ ಘಮಘಮಿಸುವ ಪಾಯಸ ದಧ್ಯೋದನಗಳು ಪರಿಪರಿ ಶಾಕಪಾಕವು ಆ ದಿವ್ಯ ಭಕ್ಷ್ಯನೈವೇದ್ಯವ ಪರಮಪುರುಷಗೆ [ಆದ್ಯರು] ಆರೋಗಣೆ ಮಾಡಿದರು 9 ಕಳಿಯಡಿಕೆ ಬಿಳಿಯೆಲೆಯು ಕರ್ಪೂರದ ಹಿಟ್ಟಿನ ಮಂಗಳಾರತಿಯನೆತ್ತಿದರಾಗ 10 ಆ ಮಹಾ ಶ್ರೀನಿವಾಸ ರಂಗ ನೈವೇದ್ಯವ ಶ್ರೀಮಧ್ರಾಮಾನುಜರ ಮತದಿ ನೇಮದಲಿ ವಿನಿಯೋಗವ ಮಾಡಲು ಪಾವ ನಾಮಾದೆವೆಂದೆನುತ ಪೋದರು ಎಲ್ಲ 11
--------------
ಯದುಗಿರಿಯಮ್ಮ
ಧನ್ಯ ಧನ್ಯವಾಯಿತು ಎನ್ನ ಜನುಮ ತನ್ನಿಂದ ತಾನೊಲಿದ ಘನ ಮಹಿಮ ಎನ್ನೊಳಗೆ ದೋರಿತಾನಂದೊ ಬ್ರಹ್ಮ ಕಣ್ಣಾರೆ ಕಂಡೆನು ಸದ್ಗುರು ಧರ್ಮ 1 ಬ್ರಹ್ಮಸುಖ ಹೊಳೆಯಿತು ಸಾಧುಸಂಗ ಚುಮು ಚುಮು ಕೊಡುತಿದೆಕೊ ಸರ್ವಾಂಗ ಧಿಮಿ ಧಿಮಿಗುಡುತ ತಾಲ ಮೃದಂಗ ಸಮಾರಂಭವಾಯಿತು ಬಾಹ್ಯಂತರಂಗ 2 ಎದುರಿಟ್ಟು ಬಂತು ಪುಣ್ಯ ಪೂರ್ವಾರ್ಜಿತ ಒದಗಿ ಕೈಗೂಡಿತೆನಗೆ ತ್ವರಿತ ಸಾಧಿಸಿತು ಮಹಿಪತಿಯ ಮನೋರಥ ಸದ್ಗುರು ಕೃಪೆಯಾಯಿತು ತಾ ಸದೋದಿತ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಧನ್ಯನಲ್ಲವೇ ಅವನು ಧನ್ಯನಲ್ಲವೆ ಪ ಪನ್ನಗಾರಿ ಧ್ವಜನ ಮಹಿಮೆಯನ್ನು ಪೊಗಳುತಿರುವ ನರನು ಅ.ಪ. ಅರುಣ ಉದಯದಲ್ಲಿ ಎದ್ದು ದುರಿತದೂರವನ್ನು ಸ್ಮರಿಸಿ ಹರುಷದಿಂದ ಶೌಚ ಕರ್ಮ ಅರಿತು ನಿರುತ ಚರಿಸುವರನು 1 ಸತ್ಯಮತದ ಪದ್ಧತಿಯನು ಚಿತ್ತವಿಟ್ಟು ಆಚರಿಸುತ ಭೃತ್ಯನೆಂದು ಪೇಳಿಕೊಳುವ ನಿತ್ಯ ತೃಪ್ತನಾದವರನು2 ಸಿರಿಯುತ ರಂಗೇಶವಿಠಲ ಸರುವ ದೇವರೊಡೆಯನೆಂದು ಸ್ಥಿರದಿ ನಂಬಿ ಅವನ ಪಾದ ಮರೆಯ ಹೊಕ್ಕ ಜಾಣ ನರನು 3
--------------
ರಂಗೇಶವಿಠಲದಾಸರು
ಧನ್ಯನಾದೆ ಪಾಂಡುರಂಗನ ಕಣ್ಣಾರೆ ಕಂಡು¥ತಂದೆತಾುಯ ಸೇವೆ ಮಾಡಿಪುಂಡಲೀಕನ ಭಕ್ತಿಗೊಲಿದುಚಂದ್ರಭಾಗಾ ತೀರದಲ್ಲಿಬಂದು ನಿಂತ 'ಠ್ಠಲನ ಕಂಡು 1ವೆಂಕಟೇಶ ಅಲ್ಲಿರುವಶಂಖಚಕ್ರ ಪಿಡಿದ ಕರವಟೊಂಕದ ಮೇಲಿಟ್ಟುಕೊಂಡುನಿಂತು ಇಲ್ಲಿ 'ಠಲನಾದ 2ಕಡಗೋಲಿಂದ ಗಡಿಗೆ ಒಡೆದುತುಡುಗು ಮಾಡಿದ್ಹುಡುಗ ಬಂದಉಡುಪಿಯಲ್ಲಿ ಕೃಷ್ಣನಾಗಿಓಡಿಬಂದಿಲ್ಲಿ 'ಠಲನಾದ 3ಎಷ್ಟು ಜನ್ಮದ ಸುಕೃತವೊ ಶ್ರೀ-ಕೃಷ್ಣ 'ಠಲರೂಪದಿಂದಭಕ್ತಜನರಿಗಾಲಿಂಗನಭೆಟ್ಟಿ ಕೊಡುತ ನಿಂತುಬಿಟ್ಟ 4ಅನ್ನಬ್ರಹ್ಮ ಉಡುಪಿಯಲ್ಲಿಚಿನ್ನ ಬ್ರಹ್ಮ ಬೆಟ್ಟದಲ್ಲಿಸಣ್ಣ ತುಳಸಿಮಾಲೆ ಸಾಕುನಾದಬ್ರಹ್ಮ ಭೂಪತಿ'ಠಲಗೆ 5ಗಲಗಲಿ ವಾಸಸ್ಥ ಶ್ರೀ ಪಾಂಡುರಂಗ
--------------
ಭೂಪತಿ ವಿಠಲರು
ಧನ್ಯನಾದೆನು ನಾಂ ಪ ಘನ್ನಮಹಿಮ ಶ್ರೀನಿವಾಸ ಕರುಣದಿಂದ ಒಲಿದನಿನ್ನು ಅ.ಪ ದೇಶದೇಶದಿಂದ ಸಕಲ ದಾಸಜನರು ಬಂದು ಸದಾ ಶ್ರೀಶ ಸಲಹೆಂದು ಕೂಗುವ ಘೋಷ ಕೇಳಿ ಕರ್ಣಗಳಿಂ 1 ವೈರಿ ವಿನುತ ಅರ್ಥ ಗಳಿಸುವವನ ಕಂಡು2 ಸತಿಯರೆಲ್ಲ ಮುತ್ತಿನಾ- ರತಿಯ ಬೆಳಗುವುದು ಕಂಡು 3 ಸಂತಸದಿ ಮಹಂತರು ಶ್ರೀ- ಕಾಂತನ ಗುಣರಾಸಿ ಪೊಗಳಿ ಸ್ವಾಂತನಿರ್ಮಲರಾಗಿ ಭಜಿಪ- ರಂತರಾತ್ಮನ ಕಂಡು 4 ಭೂಮಿಗಧಿಕ ಶೇಷಗಿರಿ ಧಾಮಪೂರ್ಣಕಾಮ ಭಕ್ತ- ಸ್ತೋಮವನ್ನು ಪಾಲಿಪ ಗುರು- ರಾಮವಿಠಲನ್ನ ಕಂಡು 5
--------------
ಗುರುರಾಮವಿಠಲ
ಧನ್ಯನಾದೆನು ವಿಠಲನ ಕಂಡು ಓಡಿತು ಅಘದ್ಹಿಂಡು ಪ ಧನ್ಯನಾದೆನೂ ಕಾಮನ್ನ ಪಿತನ ಲಾ ವಣ್ಯ ಮೂರುತಿಯ ಕಣ್ಣಿಲೆ ಕಂಡು ಅ.ಪ. ದೇವವರೇಣ್ಯ ಸದಾ ವಿನೋದಿ ವೃಂ ದಾವನ ಸಂಚರ ಗೋವನ ಕಂಡು 1 ಮಂಗಳಾಂಗ ಕಾಳಿಂಗ ಮಥsÀನ ಮಾ ತಂಗವರ ವರದ ರಂಗನ ಕಂಡು 2 ಹಾಟಕಾಂಬರ ಕಿರೀಟ ಸಾರಥಿ ತಾಟಕಾರಿ ವೈರಾಟನ ಕಂಡು 3 ಚಿಂತಿತ ಫಲವ ಕೃತಾಂತನಾತ್ಮಜಾ ದ್ಯಂತರಹಿತ ನಿಶ್ಚಿಂತನ ಕಂಡು 4 ಮಾತುಳಾಂತಕ ವಿಧಾತಪಿತ ಜಗ ನ್ನಾಥ ವಿಠಲ ವಿಖ್ಯಾತನ ಕಂಡು 5
--------------
ಜಗನ್ನಾಥದಾಸರು
ಧನ್ಯನೋ ಶೇಷಗಿರಿದಾಸ ನೀನೂ ನಿತ್ಯ ಪ ಮುಂಗೈಯ ಮ್ಯಾಲಿನ ಗಿಳಿ ಹಾರಿಹೋದಂತೆ ರಂಗ ಮಧ್ವನ ಸ್ಮರಣೆ ಮಾಡಿಕೊಳುತ ಮಂಗಳಾಂಗನಾಗಿ ಸ್ವರ್ಗಸ್ಥನಾದಿ ಕ್ಷಣ ಭಂಗುರವೆಂಬ ಪ್ರಮಾಣ ಸಿದ್ಧಿಸಿತು ಗಡ 1 ಸತ್‍ಶಿಷ್ಯನೆಂದೆನಿಸಿಕೊಂಡದಕೆ ಎನ್ನ ಮ ನೋತ್ಸಾಹ ಮಾತ್ರ ಬಂದಾಗಲಿಲ್ಲಾ ವತ್ಸ ಕೇಳು ಉಪಸರ್ಗ ಕೂಡಿದ ನಾಭಿ ತತ್ಸಮಾನಾಯಿತೊ ಇಂದಿನಾರಭ್ಯವೂ2 ಒಂದೆ ಪ್ರವಾಹದೊಳು ಈಸು ಬೀಳಲು ಸುಳಿ ಯಿಂದ ಹಿಂದಕೆ ಒಬ್ಬನಿಂದಂತೇವೆ ಇಂದು ಎನಗಾಯಿತೊ ಭೂಮಿಯೊಳಗೆ ಋಣಾನು- ಬಂಧ ಇಂತಿರಲಿಕ್ಕೆ ಯತ್ನ ಒಬ್ಬರದಿಲ್ಲ3 ಪರಿಣಾಮಕೆ ನಿನಗೆ ಸಾನುಕೂಲಾವಾಗಿ ಅನಿಲದೇವನು ಒಲಿದು ಹರಿಯ ಕೂಡಾ ಪ್ರಣಮಪೂರ್ವಕದಿಂದ ಪಂಚತ್ವ ಐದಿದೆ ಸಾ- ಧನ ಪೂರ್ತಿಕಾಲ ಎಳ್ಳನಿತು ಉಳದಿಪ್ಪದೊ 4 ವಿಧಿ ಸಂವತ್ಸರ ಭಾದ್ರಪದ ಶುಕ್ಲದ ಭಾನು ಬಿದಿಗೆಯಲಿ ಪ್ರವರ ಗೌತಮ ಸಂಗಮಾ ನಿಧಿಯಲಿ ವಿಜಯವಿಠ್ಠಲನಂಘ್ರಿಯುಗಳವನು ಹೃದಯದಲಿ ಇಟ್ಟು ದೇಹವ ತ್ಯಾಗಮಾಡ್ದೆ 5
--------------
ವಿಜಯದಾಸ
ಧನ್ಯರಾದರು ಗುರುಗಳನು ಪೂಜಿಸುತ ಇನ್ನಿವರ ಪಾತಕವು ತೊಲಗಿತು ಜಗದಿ ಪ. ತಂದೆ ಮುದ್ದುಮೋಹನದಾಸ ರಾಯರನು ಚಂದದಿಂ ಸತಿಸಹಿತ ಕರೆತಂದು ಮನೆಗೆ ಮಂದರೋದ್ಧರನ ಪದಸೇವೆ ಇದು ಎಂದರಿತು ಮಂದಹಾಸದಲಿ ನಸುನಗುತ ಸದ್ಭಕ್ತರು 1 ಮಂಗಳೋದಕದಿಂದ ಮಜ್ಜನವಗೈಸುತಲಿ ಅಂಗಗಳನೊರೆಸುತಲಿ ನಾಮಗಳನ್ಹಚ್ಚಿ ರಂಗನಾಥನಿಗರ್ಪಿಸುತ ಪುಷ್ಪಹಾರವನ್ಹಾಕಿ ಶೃಂಗಾರವನೆಗೈದು ಶ್ರೀ ಗುರುಗಳನ್ನು 2 ಪಚ್ಚೆಕರ್ಪೂರ ಕೇಸರಿಯಿಂದ ಕೂಡಿದ ಅಚ್ಚ ಗಂಧವನ್ಹಚ್ಚಿ ಅಕ್ಷತೆಯನಿಟ್ಟು ಮಚ್ಛರೂಪಿಯ ನೆನೆದು ಪಾದಕಮಲವ ತೊಳೆದು ನಿಚ್ಚಳದ ಭಕ್ತಿಯಲಿ ನಿಜ ಭಕ್ತರೆಲ್ಲ 3 ಸತಿಸಹಿತ ಕುಳ್ಳಿರಿಸಿ ಗುರುಗಳನು ಪೀಠದಲ್ಲಿ ಅತಿಶಯದಿ ಕುಡಿಬಾಳೆ ಎಲೆಗಳನೆ ಹಾಕಿ ಮತಿಯಿಂದ ರಂಗೋಲೆಗಳನ್ಹಾಕಿ ಲವಣ ಸ- ಪರಿಯಂತ ಬಡಿಸುತಲಿ 4 ಅನ್ನಾದಿ ಸಕಲ ಷಡ್ರಸಗಳನೆ ಬಡಿಸುತ್ತ ಘನ್ನ ಮಹಿಮರಿಗೆ ಭಕ್ಷಾದಿಗಳ ಬಡಿಸಿ ಸನ್ನುತಿಸುತಲಿ ತೀರ್ಥ ಆಪೋಷನವನ್ಹಾಕಿ ಪನ್ನಗಶಯನನಿಗೆ ಅರ್ಪಿಸುತ ಮುದದಿ 5 ಘೃತಶರ್ಕರಾದಿಗಳನಡಿಗಡಿಗೆ ಬಡಿಸುತಲಿ ನುತಿಸಿ ಗಾನಗಳಿಂದ ಗುರುಮಹಿಮೆಯ ದಧಿ ಕ್ಷೀರದನ್ನಗಳನುಣಿಸುತಲಿ ಘೃತ ಕ್ಷೀರದಿಂದ ಕೈ ತೊಳೆದು ಸಂಭ್ರಮದಿ 6 ಯಾಲಕ್ಕಿ ಕರ್ಪೂರ ಮಿಳಿತ ವೀಳೆಯವನಿತ್ತು ವೇಳೆವೇಳೆಗೆ ತಪ್ಪು ಕ್ಷಮೆಯ ಬೇಡುತಲಿ ವ್ಯಾಳಶಯನಗರ್ಪಿಸುತ ಉಡಿಗೆ ತೊಡಿಗೆಗಳನಿತ್ತು ಮಾಲೆಹಾಕುತ ಆರತಿಯನೆತ್ತಿ ಮುದದಿ 7 ಹರಿಪ್ರೀತನಾಗುವನು ಗುರು ಹೃದಯದಲಿ ನಿಂತು ಕರ್ಮ ತೊಡಕುಗಳು ಸರಸಿಜಾಕ್ಷನು ತಾನು ಹರುಷಪಡುವನು ದಯದಿ ಕರಕರೆಯ ಸಂಸಾರ ಕಡಿದು ಗತಿ ಈವ 8 ಗುರುದ್ವಾರ ಒಲಿಯುವನು ಹರಿಯು ಮೋಕ್ಷಾರ್ಥಿಗಳ ಅರಘಳಿಗೆಯಗಲದಲೆ ಕಾಯುವನು ಸತತ ಗುರು ಅಂತರ್ಯಾಮಿ ಶ್ರೀ ಗೋಪಾಲಕೃಷ್ಣವಿಠ್ಠಲ ತ್ವರಿತದಿಂ ಹೃದಯದಲಿ ತೋರ್ವನು ತನ್ನ9
--------------
ಅಂಬಾಬಾಯಿ
ಧನ್ವಂತ್ರಿ ನಿನ್ನ ಸ್ಮರಿಸಿ ಧನ್ಯರಾಗಿಹರ ಪಾದ ಧ್ಯಾನದೊಳಿರೆಸೆನ್ನ ಧನ್ಯನೆಂದೆನಿಸೊ ಪ ನಿನ್ನ ದಾಸರ ಕೀರ್ತಿ ನಿನ್ನ ದಾಸರ ವಾರ್ತೆ ನಿನ್ನ ನಾಮಾಮೃತವು ಎನ್ನ ಕಿವಿ ತುಂಬಿರಲಿ ಅ.ಪ ನಿನ್ನ ಪಾದದ ಸ್ಮರಣೆಯನ್ನು ಮಾಳ್ಪರ ಸಂಗ ಇನ್ನು ಪಾಲಿಸು ದೇವನೆ ಘನ್ನ ಮಹಿಮನೆ ಪರಮ ಪುಣ್ಯಶೀಲರ ಸೇವೆ ಇನ್ನು ಕರುಣಿಸೊ ಕೇಶವಾ ಸನ್ನುತಾಂಗನೆ ಭವಭಯವನ್ನು ಬಿಡಿಸೆಂದು ನಾ ನಿನ್ನ ಮೊರೆಯಿಡುವೆ ಹರಿಯೇ ಚನ್ನ ಶ್ರೀಗೋಪಾಲ ಗೋವಿಂದ ಕೇಶವ ನಿನ್ನ ನಾಮನಿರಂತರವು ಪಾ- ವನ್ನ ಮಾಡಲಿ ಎನ್ನ ಜಿಹ್ವೆಯಾ 1 ಆದರದಿ ನಿನ್ನ ಸ್ಮರಿಪ ಸಾಧುಜನರ ಸಂಗ ಭೇದವಿಲ್ಲದೆ ಕರುಣಿಸೊ ಆದಿ ಮೂರುತಿ ನಿನ್ನ ಆದರದಿ ಸ್ಮರಿಪ ಪರ- ಮಾದರವ ನಿತ್ತು ಸಲಹೊ ಮೋದ ಪಡುವ ಭಾಗ್ಯ ಮಾಧವನೆ ದಯಪಾಲಿಸೋ ಮಾಧವ ಜನಾರ್ದನ ಕ್ರೋಧಿ ಸಂವತ್ಸರವು ಭಕುತರ ಕ್ರೋಧಗಳ ಕಳೆಯುತ್ತ ಸಲಹಲಿ2 ಶರಣೆಂದು ಬೇಡುವೆ ಪರಿಪರಿ ಅಘಗಳ ಪರಿಹರಿಸೆಂದು ನಾ ಸ್ಮರಿಸಿಬೇಡುವೆನು ಸರಸಿ ಜೋದ್ಭವÀಪಿತನೆ ಸರಸಿಜಾಕ್ಷಿಯ ಕೂಡಿ ಹರುಷದಿ ನೆಲಸೆನ್ನ ಹೃದಯದಲಿ ದೇವ ಸರಸಿಜನೇತ್ರನೆ ಬಿಡದೆ ನಿನ್ನನು ಸ್ಮರಿಪ ಕಡುಭಾಗವತರ ಸಂಗವನೆ ನೀಡೈ ಮೃಡನ ಸಖನೆ ನಿನ್ನಂಘ್ರಿ ಸ್ಮರಿಸುವ ಭಾಗ್ಯ ತಡೆಯದಲೆ ಪಾಲಿಸುತ ಪೊರೆ ಶ್ರೀ ಕಮಲನಾಭ ವಿಠ್ಠಲನೆ ದಯದಲಿ 3
--------------
ನಿಡಗುರುಕಿ ಜೀವೂಬಾಯಿ