ಒಟ್ಟು 6481 ಕಡೆಗಳಲ್ಲಿ , 135 ದಾಸರು , 4307 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ದತ್ತ ದತ್ತೆನ್ನಲು ಹತ್ತಿ ತಾಂ ಬಾಹನು ಚಿತ್ತದೊಳಾಗುವಾ ಮತ್ತ ಶಾಶ್ವತನು ದತ್ತ ಉಳ್ಳವನ ಹತ್ತಿಲೇ ಈಹನು ವೃತ್ತಿ ಒಂದಾದರೆ ಹಸ್ತಗುಡುವನು 1 ಎತ್ತ ನೋಡಿದರೆ ಮೊತ್ತವಾಗಿಹ ತಾಂ ಉತ್ತಮೊತ್ತಮತಾನೆತ್ತುತಾ ಈತಾ ಅತ್ತಲಿತ್ತಾಗದೆ ಹತ್ತಿಲೆ ಸೂಸುತ ಮುತ್ತಿನಂತಿಹ್ವನು ನೆಲಿಲೆ ಭಾಸುತಾ 2 ದತ್ತನೆಂದೆನ್ನಲು ಕತ್ತಲೆಣ್ಯೋಗುದು ಮೃತ್ಯು ಅಂಜುತಲಿ ಭೃತ್ಯನಾಗಿಹುದು ಉತ್ತಮರಿಗೆ ತಾ ಸತ್ಯ ಭಾಸುದು 3 ಒತ್ತಿ ಉನ್ಮನಿಯಾವಸ್ಥಿ ಯೊಳಾಡುವದು ಸ್ವಸ್ತಮನಾದರೆ ವಸ್ತು ಕೈಗೂಡುದು ಬಿತ್ತಿ ಮನ ಗುರುಭಕ್ತಿ ಮಾಡುವದು ದತ್ತ ತನ್ನೊಳು ತಾನೆವೆ ಭಾಸುವದು 4 ದತ್ತ ದತ್ತೆಂದು ತಾ ಅರ್ತ ಮಹಿಪತಿಯ ಬೆರ್ತ ನೋಡಿದ ಮನವು ಸುಮೂರ್ತಿಯು ಮರ್ತದೊಳಿದುವೆ ಸುಖವಿಶ್ರಾಂತಿಯು ಮರ್ತುಹೊಗುವದು ಮಾಯದ ಭ್ರಾಂತಿಯು 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ದತ್ತ ದಿಗಂಬರನೇ ವಂದಿಪೆ ನಾ ಕಾಯೈ ನೀ ಕರುಣಾ ಸಾಗರ ವಲ್ಲಭರಾಮಾ ಪಾಡುವೆನಾ ಹೇ ಜಗದೀಶಾ ನೀಗುಸು ಆಶಾ ಬೇಡುವೆ ಶ್ರೀಶಾ ವಿಷಯದೊಳಿರುವಾ ಈ ಘನಪ್ರೇಮಾ ನಿನ್ನೊಳಗಿರಲೈ ನಿರ್ಗುಣಧಾಮಾ ಸದ್ಗುರುನಾಥಾ ಹೇ ಅವದೂತಾ ಸತ್ಯ ಸ್ವರೂಪಾ ನಿತ್ಯಾನಂದಾ
--------------
ಶಂಕರಭಟ್ಟ ಅಗ್ನಿಹೋತ್ರಿ
ದತ್ತವಧೂತ ಶ್ರೀ ಗುರು ಸಾಕ್ಷಾತ ನಿತ್ಯವಾಗಿಹ್ಯ ನಿಜ ನಿರ್ಗುಣನೀತ ಪ ನಿರ್ಗುಣ ನಿಶ್ಚಲ ಗಗನಾಕಾರ ಸುಗುಣದಲಿ ತಾನೆ ಸಹಕಾರ 1 ಸಹಕಾರನಹುದು ಸದ್ಗುರುನಾಥ ಬಾಹ್ಯಾಂತ್ರದಲಿ ತಾನೆ ಪ್ರಖ್ಯಾತ 2 ಪ್ರಖ್ಯಾತನಹುದು ತ್ರಿಗುಣರಹಿತ ಮುಖ್ಯಮುನಿಗಳಿಗೆ ಮೋಕ್ಷ ಸುದಾತ 3 ದಾತನಹುದು ತ್ರೈಲೋಕ್ಯದೊಳೀತ ಈತನೆ ವಿಶ್ವದೊಳಗೆ ದೈವತ 4 ದೈವತನಹುದು ದೇವಾದಿಗಳಾತ್ಮ ಮೂರ್ತಿ ಶ್ರೀಹರಿ ಸರ್ವಾತ್ಮ 5 ಹರಿ ಸರ್ವಾತ್ಮನಾಗಿಹ ನಿಜಪೂರ್ಣ ಪರಿಪರಿ ಆಗುವ ಅಗಣಿತಗುಣ 6 ಅಗಣಿತಗುಣ ಅಗಾಧ ಅಪಾರ ನಿಗಮಗೋಚರ ನಿರುಮಪ ನಿರ್ಧಾರ 7 ನಿರ್ಧಾರನು ನಿಜನಿಷ್ಟರಪ್ರಾಣ ಸಾಧಕರಿಗೆ ಸದ್ಗತಿ ಸಾಧನ 8 ಸಾಧನದೊಡೆಯನಹುದು ಶಾಶ್ವತ ಆದಿದೇವ ಸಕಲಾಗಮ ಪೂಜಿತ 9 ಪೂಜಿತ ಬ್ರಹ್ಮಾದಿಗಳ ಕೈಯ ಮೂಜಗದೊಳು ರಾಜಿಸುತಿಹ 10 ರಾಜಿಸುತಿಹ ತಾ ರಾಜರಾಜೇಂದ್ರ ಸುಜನರ ದೃಷ್ಟಿಯೊಳಿಡದಿಹ ಸಾಂದ್ರ 11 ಸಾಂದ್ರವಾಗಿಹನು ಸಾರ್ವಭೌಮ ಇಂದ್ರಾಧಿಕÀರೊಂದಿತ ಮಹಿಮ 12 ಮಹಿಮನಹುದು ಮುನಿಜನ ಮಂದಾರ ಧ್ಯಾಯಿಸುವರ ನಿಜ ಸಾಕ್ಷಾತಾರ 13 ಸಾಕ್ಷಾತಾರ ಶ್ರೀಗುರು ಜಗದೀಶ ಮೋಕ್ಷಾಧಿಕರಿಗಳಾತ್ಮ ಉಲ್ಹಾಸ 14 ಉಲ್ಹಾಸವೆ ನಿಜ ವಸ್ತುವೆ ತಾನು ಕಲ್ಪದ್ರುಮ ನಿಜ ಕಾಮಧೇನು 15 ಕಾಮಧೇನುವಾಗಿ ರಕ್ಷಿಸುವ ಬ್ರಹ್ಮನಿಷ್ಠರ ಹೃದಯದಲಿ ಭಾಸಿಸುವ 16 ಭಾಸುವ ಭಾಸ್ಕರಕೋಟಿ ಪ್ರಕಾಶ ಋಷಿ ಮುನಿಗಳ ನಿಜಮಾನಸ ಹಂಸ 17 ಹಂಸನಾಗಿ ವಿಶ್ವಂಭರಿತ ಸೂಸುವ ಸರ್ವಾಂತ್ರಲಿ ಅನಂತ 18 ಅನಂತ ಕೋಟಿ ಬ್ರಹ್ಮಾಂಡನಾಯಕ ಅನುಭವಿಗಳಿಗೆ ದೋರುವ ಕೌತುಕ 19 ಕೌತುಕದೋರಿದ ಕರುಣದಲ್ಯನಗೆ ಜೀವಪಾವನಗೈಸಿದ ಜಗದೊಳಗೆ 20 ಜಗದೊಳು ಸ್ತುತಿಸುವೆನು ಅನುದಿನ ಶ್ರೀಗುರು ದತ್ತವಧೂತ ಪೂರ್ಣ 21 ಪೂರ್ಣ ಸ್ಮರಿಸುವೆನು ಮನದೊಳು ನೋಡಿ ಪುಣ್ಯ ಪ್ರಭೆಯ ನಿಜ‌ಘನ ಒಡಗೂಡಿ22 ಒಡಗೂಡಿದ ನಿಜಾನಂದದ ಗತಿಯು ಕ್ಷಿತಿಯೊಳು ಕೊಂಡಾಡಿದ ಮಹಿಪತಿಯು 23
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ದಧಿ ಕಡೆವ ವೇಳೆಗೆ ಪ ಮಧುವೈರಿ ಬಂದನದಕೋ ಸಂಗಡಿಗರೊಂದಿಗೆ ವಿಧವಿಧ ರಾಗದಿ ಕೊಳಲನೂದುತ ತಾನು ಅ.ಪ. ಅರಳೆಲೆ ಮಾಗಾಯಿ ಕಿರುಗೆಜ್ಜೆ ಪಾಗಡ ಪರಿ ಪರಿಯಾಭರಣಗಳಿಟ್ಟು ಕಿರುನಗೆ ಮುಖದ 1 ವಾರಿಜನೇತ್ರನು ಓರೆನೋಟದಿ ಸಕಲ ನಾರೀಮಣಿಗಳ ಮನಸೂರೆಗೊಳ್ಳುತಲಿ 2 ಬಾಲನಂದದಿ ತಾನು ಲೀಲೆಯ ತೋರುತ ಮಾಲೋಲನು ಆಗ ಬೆಂಣೆ ಕೊಡೆನ್ನುತಲಿ 3 ಏನು ಪುಣ್ಯ ಯಶೋದೆ ತಾನು ಮಾಡಿರ್ದಳೊ ಶ್ರೀನಿಧಿ ಕೃಷ್ಣನು ಸಾನುರಾಗದಲಪ್ಪಿದ 4 ಮುಟ್ಟಿ ಭಜಿಸುವರಘ ಸುಟ್ಟು ಸಲಹು ದಿಟ್ಟ ಶ್ರೀ ರಂಗೇಶವಿಠಲ ನಲಿಯುತ 5
--------------
ರಂಗೇಶವಿಠಲದಾಸರು
ದನವ ಕಾಯ್ವೊನೆ ದೈನ್ಯ ಬಡುವವನೆ ವನಜಭವಾಂಡಕೆ ಒಡೆಯನಾಗೆಂದರೆಒಲ್ಲದೆ ವನವನ ತಿರುಗಿದನಮ್ಮ ನೋಡಮ್ಮಯ್ಯ ಪ. ದನಗಾಹಿ ಎಂದರೆ ಎನಗೇನು ಸಂಶಯವಿಲ್ಲಜನರೆಲ್ಲ ಬಲ್ಲರು ಈ ಮಾತು ಜನರೆಲ್ಲ ಬಲ್ಲರು ಈ ಮಾತು ಭಾವಯ್ಯನೆನಪಿಸಿ ಕೊಟ್ಟೆಲ್ಲೊ ಮರೆತಿದ್ದೆ 1 ಗೋಪಾಲ ಶಬ್ದಾರ್ಥ ನೀ ಕೇಳಿಶ್ರೀ ಕೃಷ್ಣ ಕೋಪವಿನ್ಯಾಕೊ ಎನಮ್ಯಾಲೆ ಕೋಪ ವಿನ್ಯಾಕೊ ಎನ ಮ್ಯಾಲೆ ಭಾವಯ್ಯನೀ ಪೇಳಿಕೊಂಡ್ಯೊ ನಿಷ್ಕಪಟಿ 2 ಕುದುರೆಯ ಮಾರಿಯ ಹೂವು ಗಣ್ಣಿನ ವರನಿಗೆ ಮದಗಜಗಮನೆ ಮನಸೋತುಮದಗಜಗಮನೆ ಮನಸೋತು ಮ್ಯಾಲಿನ್ನುಬದಲು ಮಾತಾಡಿ ಫಲವೇನೊ3 ನಾರುವ ಮೈಯವ ನೀರೊಳು ಅಡಗಿದ ಹಂದಿ ಮೈಯವನೆ ಮಹಾಕೋಪಿಹಂದಿ ಮೈಯವನೆ ಮಹಾಕೋಪಿ ತಿರುತಿಂಬೊಹಾರುವನ ಗೊಡವೆ ನಮಗ್ಯಾಕೊ 4 ಕೊಡಲಿಯ ಪಿಡಕೊಂಡ ಪಡೆದಮಾತೆಯಕೊಂದೆ ಒಡಲಿಗಿಕ್ಕದಲೆ ಮಡದಿಯಒಡಲಿಗಿಕ್ಕದಲೆ ಮಡದಿಯ ಕೊಂಡೊಯ್ದುಅಡವಿಗಟ್ಟಿದ ಮಹಾ ಮಹಿಮನೆ5 ಜಾರ ಚೋರನೆಂದು ಜಗದೊಳು ಹೆಸರಾದಿಅಪಾರವಾದ ವನಿತೆಯರುಅಪಾರವಾದ ವನಿತೆಯರ ಒಗೆತನಕೆನೀರು ತಂದಿದ್ದ ಮಹಾಮಹಿಮನೆ 6 ಭಂಡ ಗಾರನಂತೆ ದೇಹ ಕಂಡಜನಕೆಲ್ಲತೋರಿ ಪುಂಡಗಾರನಂತೆ ಹಯವೇರಿಪುಂಡಗಾರನಂತೆ ಹಯವೇರಿ ಹಾರಿಸುವ ಲೆಂಡ ರಾಮೇಶನ ಅರಿವೆನೊ7
--------------
ಗಲಗಲಿಅವ್ವನವರು
ದಯ ಮಾಡೊ ಪ್ರೀಯಾ ದಾಸರ ಶುಭೋ-ದಯ ವಿಜಯರಾಯ ಸಾ |ಹಯವಾಗಿ ಒದಗುವೋಭಯ ನಿವಾರಣ ಮಾಡಿ ಪ ಪ್ರಬಲವಾಗಿಹ ಮೋಹ ನಿಬಿಡವಾದದರಿಂದಅಭಯದಾಯಕ ನಿನ್ನ ಶುಭವಾದ ಪಾದಕ್ಕೆಅಭಿವಂದಿಸದಲೆ ಅಲ್ಪರ ಸೇರಿಅಬಲನಾಗುತಲೆ ಪಾಪದ ವನಧಿUಭೀರ ನೋಡದಲೆ ಬಾಳಿದೆ ಯನ್ನಅಭಿಮಾನದೊಡೆಯನೆ ಅಗಡು ಮಾಡದಲೆ 1 ದುರಿತ ಪರಿ ವರಗಳ ಗರೆವ ಕಾರಣ ನಿನ್ನಬಿರಿದು ನಾ ಬಲ್ಲೆ ಎನ್ನಯ ಭಾರಸರಿ ನಿನ್ನದಲ್ಲೆ ಲೌಕೀಕದಪರಿ ಮತ್ತೊಂದೊಲ್ಲೆ ಇಹಪರದಲ್ಲೆ ಪರಮ ಸೌಖ್ಯಕೆ ನಿನ್ನ ಸ್ಮರಣೆ ವಂದಲ್ಲೆ 2 ಪಾಮರ ಜನರಿಗೆ ಸುಮಾರ್ಗಗೋಸುಗಶ್ರೀಮನೋಹರ ನಿನ್ನ ಪ್ರೇಮದಿಂದಲಿ ಸೃಜಿಸಿಭೂಮಿಯೊಳಿಡಲೂ ಹರಿಯ ದಿವ್ಯನಾಮ ನಾ ಬಿಡಲು ದುರ್ವಿಷಯವಕಾಮಿಸಿ ಕೆಡಲೂ | ಸುಮ್ಮನಿರದೆಯಾಮ ಯಾಮಕೆ ನಿನಗೆ ನಾ ಮೊರೆಯಿಡಲೂ 3 ಜಗದಂತರ್ಯಾಮಿಯ ಹಗಲು ಇರುಳು ಬಿಡದೆಸುಗುಣ ಮಾರ್ಗದಲಿದ್ದು ಬಿಗಿಯಾದ ಕವನಕ್ಕೆಬಗೆ ತೋರಿದವನೆ ಹರಿಯ ಕ್ಷಣ ಅಗಲದಿದ್ದವನೆ ಕಾಮದ ಬಲಿಗೆಸಿಗದೆ ನಡೆವವನೆ ಅನುನಯದಿ ಕರವಮುಗಿದು ಬೇಡುವರಲ್ಲಿ ಮುದದಿಂದ ನಲಿವನೆ 4 ಎನ್ನೊಬ್ಬಗಲ್ಲ ಈ ಬಿನ್ನಪ ಕರುಣಾಳೆನಿನ್ನ ಪೊಂದಿದವರ ಮನ್ನಿಸಿ ಸಲಹಯ್ಯಾಬೆನ್ನು ಬಿಡದಲೆ ವ್ಯಾಸ ವಿಠ-ಲನ್ನ ಪಾಡುತಲೆ ಕಾಲವ ಕಳೆವ ಸನ್ಮಾರ್ಗವನೆ ತೋರೋ ತಡಮಾಡದಲೆ 5
--------------
ವ್ಯಾಸವಿಠ್ಠಲರು
ದಯ ಮಾಡೊ ರಂಗಾ ದಯ ಮಾಡೊ ರಂಗಾ ದಯ ಮಾಡೊ ನಾ ನಿನ್ನದಾಸನೆಂತೆಂದು ಪ ನಾನಾ ಜೀವಗಳ ಬಲೆದಾಟಿ ಬಂದೇ ಹೀನ ನರಜನ್ಮಕೆ ಬಂದು ಶರಣೆಂದೇ 1 ಪೋಗಲಾರೆನು ಪತ್ತೆ ಯೋನಿಜನ್ಮಕ್ಕೇ ಬೇಗದಿ ಪರಿಯೆನ್ನ ಸಲಹೊ ಶರಣೆಂದೇ 2 ಸರಸದಿ ಶ್ರೀಹರಿಯನ್ನು ಕೀರ್ತಿಸುವೆ ಸಿರಿ ಚನ್ನಕೇಶವಾ ಪೊರೆಯೊ ಶರಣೆಂದೇ 3
--------------
ಕರ್ಕಿ ಕೇಶವದಾಸ
ದಯದಿ ಎಮ್ಮನು ಸಲಹ ಬೇಕಯ್ಯ | ಮಳಖೇಡ ನಿಲಯ ದಯದಿ ಎಮ್ಮನು ಸಲಹ ಬೇಕಯ್ಯ ಪ ದಯದಿ ಎಮ್ಮನು ಸಲಹ ಬೇಕೈ | ವಿಯದಧಿಪ ಸದ್ದಂಶ ಸಂಭವ ಭಯ ವಿದೂರನ ತೋರು ಎನುತಲಿ | ಜಯ ಮುನೀಂದ್ರನೆ ಬೇಡ್ವೆ ನಿನ್ನನು ಅ.ಪ. `ಇಂದ್ರಸ್ಯನು ವೀರ್ಯಾಣ’ ಎಂದೆನುತ | ಇತ್ಯಾದಿಋಕ್ಕುಗಳಿಂದ ಬಹುತೆರೆ ನೀನು ಪ್ರತಿಪಾದ್ಯ ||ಅಂದು ಮೇಘದ ಜಲವು ಬೀಳದೆ | ಬಂಧಗೈದಹಿನಾಮ ದೈತ್ಯನಕೊಂದು ಉದ್ಧರಿಸಿರುವ ಪರಿಯಲಿ | ಮುಂದೆ ದುರ್ವಾದಿಗಳ ಖಂಡಿಪೆ 1 ವಾಲಿಯಂದದಿ ದೃಷ್ಟಿಮಾತ್ರದಲಿ | ಶತೃಗತಬಲಲೀಲೆಯಿಂದಪಹರಿಪೆ ನಿಮಿಷದಲಿ ||ಕಾಲ ತ್ರೇತೆಯಲಂದು ದುಷ್ಟರ | ವಾಲಿರೂಪದಿ ವಾರಿಸಿದ ಪರಿಕಾಲ ದ್ವಾಪರದಲ್ಲಿ ಪ್ರಾರ್ಥನೆ | ಲೀಲೆ ರೂಪಿಯು ಕೃಷ್ಣಸೇವಕ 2 ದೃಷ್ಟಿ ಮಾತ್ರದಿ ಕರ್ಣಗತ ಬಲವ | ಅಪಹರಿಸಿ ನೀನುಕ್ಲಿಷ್ಟ ಯುದ್ಧದಿ ಗಳಿಸಿ ನೀ ಜಯವ ||ಶ್ರೇಷ್ಠ ಕರ್ಣನ ಅಸುವ ಕೊಳ್ಳುತ | ಸುಷ್ಠು ಅರಿಬಲ ನಾಶಮಾಡುತಭ್ರಷ್ಟ ಕೌರವನೀಗೆ ದುಃಖದ | ಕೃಷ್ಣಗರ್ಪಿಸಿ ಕೈಯ್ಯ ಮುಗಿದೆಯೊ 3 ಕಾಲ ಕಲಿಯುಗದಲ್ಲಿ ಬಲ ಭೀಮ | ಮಧ್ವಾಭಿಧಾನದಿಮೂಲ ಮೂವತ್ತೇಳು ಸೂನಾಮ ||ಭಾಳ ಗ್ರಂಥಗಳನ್ನೆರಚಿಸೀ | ಕಾಲಟಿಜಕೃತಮಾಯಿ ಮತವನುಲೀಲೆಯಿಂದಲಿ ಖಂಡಿಸುತ್ತ | ಪಾಲಿಸುತ್ತಿರೆ ಸುಜನರನ್ನು 4 `ವೃಷಾಯ ಮಾಣೆಂಬ` ಋಕ್ಕಿನಲಿ ದೇವ ಇಂದ್ರಗೆವೃಷಭದಾಕೃತಿ ಪೇಳಿಹುದು ಅಲ್ಲಿ ||ವೃಷಭ ನೀನಾಗಂತೆ ಕಲಿಯಲಿ | ಎಸೆವ ಶ್ರೀ ಮನ್ಮಧ್ವ ಗ್ರಂಥದಹಸಿಬೆ ಚೀಲವ ಹೊತ್ತು ತಿರುಗುತ | ಅಸುಪತಿಯ ಸೇವಿಸಿದ ಮಹಿಮ5 ಅಗಸ್ತ್ಯ ಮುನಿ ಸಕಲ ತೀರ್ಥಗಳ | ಸಂಗ್ರಹಿಸಿ ಕರದಿಸಾಗಿ ಗಿರ್ಯಾನಂತ ಕಮಂಡೂಲ ||ವೇಗ ಕೆಳಗಿಟ್ಟಾಚಮನ ಅಲ್ಪ | ಕಾಗಿ ಸ್ವಲ್ಪವುದೂರ ಪೋಗಲುಕಾಗೆ ರೂಪದಿ ಬಂದು ಇಂದ್ರನು | ವೇಗ ಉರುಳಿಸೆ ಜಲವು ಹರಿಯಿತು 6 ದೆವರಾಜನು ಕಾಣಿಸಿ ಕೊಳಲು | ಮುನಿಯು ಆಕ್ಷಣದೇವ ಕಾರ್ಯದ ಭಾವ ತಿಳಿಯಲು ||ಓವಿ ತತ್ಕಾಗಿಣಿಯ ನಾಮದಿ | ಭೂವಲಯದೊಳ್ಬಾತಿಸಲಿ ಎನೆತೀವರಾಶೀರ್ವಾದ ದಿಂದಲಿ | ಪಾವನವು ತತ್ ಕ್ಷೇತ್ರ ವಾಯಿತು 7 ಪಾಂಡು ಮಧ್ಯಮನಾದ ಅರ್ಜುನನು | ಇಲ್ಯುದಿಸಿ ಪೊತ್ತಧೋಂಡು ರಘುನಾಥ ಪೆಸರನ್ನು || ಗೊಂಡು ನಾಯಕ ತನವ ಅಶ್ವಕೆ | ಅಂಡಲೆದು ಬರುತಿಲ್ಲಿ ಬಿಸಿಲಲಿ ಉಂಡು ಉಂಬುದ ಜಲವ ಪಶುಪರಿ | ಕಂಡು ಮುನಿ ಅಕ್ಷೋಭ್ಯ ಬೆಸಸಿದ 8 ಸ್ವಪ್ನ ಸೂಚಿಸಿದಂತೆ ಮುನಿಶ್ರೇಷ್ಠ | ನೀರ್ಗುಡಿದವ ನರೆ ಬಪ್ಪುವನು ತಮ ಪೀಠಕೆನ್ನುತ್ತ || ಸ್ವಲ್ಪ ಹಾಸ್ಯದಿ ಪಶುವು ಪೂರ್ವದಿ | ಒಪ್ಪುವೆಯಾ ನೀನೆನ್ನ ಸಾದಿಗೆ ನೆಪ್ಪು ಬಂದುದು ವೃಷಭ ಜನ್ಮದಿ | ಕೃಪ್ಪೆಗೈದಿಹ ಮಧ್ವರನುಗ್ರಹ 9 ಸಾದಿ ಭೂಪನು ಕಳುಹಿ ತನ್ನ ಸೈನ್ಯ | ಅಕ್ಷೋಭ್ಯ ಮುನಿಪರ ಪಾದಕೆರಗುತ ಆಶ್ರಮವು ತುರ್ಯ ||ಮೋದದಿಂದ್ಯಾಚಿಸಲು ಮುನಿವರ | ಆದಿಯಿಂದಲಿ ಬಂದ ಪೀಠಕೆಸಾದರದಿ ಪಟ್ಟಾಭಿಷಕ್ತನ ಗೈದು ಆಶೀರ್ವಾದ ಮಾಡಿದ 10 ಸುತನು ತುರ್ಯಾಶ್ರಮವ ಪೊತ್ತುದನ | ಕೇಳುತ್ತ ತಂದೆಅತುಳ ಕೋಪದಿ ನಿಂದಿಸಿದ ಮುನಿವರನ |ಸುತನ ಗೃಹ ಕೆಳತಂದು ಪತ್ನಿಯ | ಜೊತೆಯಲಿಡೆ ಏಕಾಂತ ಗೃಹದಲಿಅತುಳ ಸರ್ಪಾ ಕೃತಿಯ ಕಾಣುತ | ಭೀತಿಯಲಿ ಚೀರಿದಳು ಕನ್ಯೆಯು11 ಸೋಜಿಗದ ತನಯನ್ನ ಕೊಳ್ಳುತ್ತ | ಮುನಿವರರ ಬಳಿಗೆ ಯೋಜಿಸೀದನು ಕ್ಷಮೆಯ ಬೇಡುತ್ತ ||ಆರ್ಜವದ ಮುನಿ ಕ್ಷಮಿಸಿ ತಂದೆಯ | ಮಾಜದಲೆ ತಮ್ಮ ಶಿಷ್ಯಭೂಪಗೆಯೋಜಿಸಿದರನ್ವರ್ಥನಾಮವ | ಶ್ರೀ ಜಯಾಭಿಧ ತೀರ್ಥರೆನ್ನುತ 12 ಪರ ಕರಿ ಹರ್ಯಕ್ಷರಾದಿರಿ 13 ಮಧ್ವಭಾಷ್ಯಕೆ ಟೀಕೆ ರಚಿಸುತ್ತ | ಯರಗೋಳ ಗುಹೆಯಲಿಶುದ್ಧ ಭಾವದಿ ಇರಲು ಮದಮತ್ತ ||ವಿದ್ಯ ಅರಣ್ಯಭಿಧ ನೋಡೀ | ಮಧ್ವಕೃತ ಸನ್ಮಾನ ಲಕ್ಷಣಬುದ್ಧಿಗೇ ನಿಲುಕದಲೆ ಟೀಕೆಯ | ಪದ್ಧತಿಯ ಕಂಢರ್ಷಪಟ್ಟನು 14 ಮಾಧ್ವಭಾಷ್ಯವ ನೇರಿಸಿ ಗಜವ | ತಟ್ಟೀಕೆ ಅಂತೆಯೆಅದ್ಧುರೀಯಲಿ ಗೈದು ಉತ್ಸವವ ||ವಿದ್ಯವನ ಮುನಿಪೋತ್ತುಮನು ಬಹು | ಶುದ್ಧಭಾವದಿ ಗೈದು ಸಂತಸಬುದ್ಧಿಯಲಿ ಪರಿವಾರ ಸಹಿತದಿ | ಸದ್ದುಯಿಲ್ಲದೆ ಪೋದನಂದಿನ 15 ಹತ್ತೆರಡು ಮತ್ತೊಂದು ಕುಭಾಷ್ಯ | ವಿಸ್ತರದಿ ಖಂಡಿಸೆಕೃತ್ಯವೂ ಮಧ್ವಕೃತವನುವ್ಯಾಖ್ಯಾ ||ಮತ್ತಿದಕೆ ಸೂಧಾಖ್ಯ ಟೀಕವ | ವಿಸ್ತøತವು ನಿಮ್ಮಿಂದ ಜಯಮುನಿಮೊತ್ತದಿಂಧ್ಹತ್ತೆಂಟು ಗ್ರಂಥಕೆ | ಕೃತ್ಯವಾಯಿತು ನಿಮ್ಮ ಟೀಕೆಯು16 ಪಾದ ಪಾದ ತೋರ್ವುದು ||
--------------
ಗುರುಗೋವಿಂದವಿಠಲರು
ದಯದಿ ಪಾಲಿಸೋ ವಾದಿರಾಜ ಗುರುವೇ | ನತಜನ ಸುರತರುವೇ ಪ ಹಯಮುಖ ಪದ ಸದ್ವನಜ ಸುಭೃಂಗಾ | ಪಾಲಿಸು ದಯಾಪಾಂಗಾ ಅ.ಪ. ರಜತ ಪೀಠದೊಳು ಕೃಷ್ಣ ಪೂಜೆಗಳನ್ನು | ಪರಿಪರಿ ರಚಿಸಿನ್ನೂ |ಕುಜನರ ಭೇದಿಪ ಭಜನೆ ಪದಗಳನ್ನೂ | ಸುಜನಕಿತ್ತೆ ನೀನೂ ||ಭಜಿಸೆ ಬಂದವರಿಗನ್ನೋದಕಗಳನೂ | ಏರ್ಪಡಿಸಿನ್ನೂ |ನಿಜ ಜನರ ಪೊರೆವ ಸುವ್ಯವಸ್ಥೆಗಳನ್ನೂ | ರಚಿಸಿ ಮೆರೆದೆ ನೀನೂ 1 ಅಂತರಂಗದಿ ಪೂಜಿಪೆ ಹಯವದನನ್ನ | ಭಾವಿ ಮರುತ ಎನ್ನ|ಅಂತರಂಗದೊಳು ನೆಲಿಸುತ ನೀಯೆನ್ನ | ಸಂಚಿತಾದಿಯನ್ನ ||ಅಂತಗಾಣಿಪ ಶ್ರೀ ಅಂತರಾತ್ಮನನ್ನ | ಚಿಂತೆ ಪಾಲಿಸು ಮುನ್ನ |ಯೆಂತು ವರ್ಣಿಸಲಿ ತವ ಮಹಿಮೆಗಳನ್ನ | ನಿಂತು ನಲಿ ವದನದೊಳೆನ್ನ 2| ಭರತ ಖಂಡದಿ ತೀರ್ಥ ಕ್ಷೇತ್ರ ಚರಿಸೀ | ತತ್ಪ್ರಂಬಂಧ ರಚಿಸೀ |ವಿರಚಿಸಿದೆಯೋ ರುಕ್ಮಿಣೀಶ ಕಾವ್ಯಾ | ಯುಕ್ತಿಮಲ್ಲಿಕೇಯಾ ||ಸುರಸ ಪದಗಳಲಿ ತತ್ವ ಪುಂಜವನ್ನ | ರಚಿಸಿ ಮೆರೆದೆರನ್ನ |ನಿರಣಯಾದಿಗಳ ಭಾವಗಳನ್ನ | ಕನ್ನಡದಿ ರಚಿಸದೆ ಘನ್ನ 3 ಸ್ವಾದಿ ಪುರದಿ ಬಲು ಮುದದಲಿ ಮೆರೆದಾ | ಬಿರಿದು ಪೊತ್ತ ಶೈವಾವಾದಿಸೆ ನಿನ್ನೊಳು ಸೋತು ನಿಂತನವ | ಪಾದದಿ ಬಿದ್ದು ಅವ || ಮೇದಿನಿಯೊಳ್ ನಿಮಗೆ ಸಮರು ಆವ | ಎಂದೊಪ್ಪಿಸಿದನು ಅವ |ಮೋದದಿಂದಲಿ ಬಸವ ಚಿನ್ಹಿತನಾದ | ತವ ಚರಿತೆ ಆಗಾಧಾ 4 ಪಂಚ ಸುವೃಂದಾವನಗಳ ರಚಿಸುತ್ತಾ | ತಾವ್ನಡುವಿರ ಬೇಕೆನುತಾ |ಅಂಚೆಗಮನ ಪ್ರಾಣ ಗಂಗಾಧರನಾ | ಗುರು ಗೋವಿಂದ ವಿಠಲನಾ ||ಸಂಚಿಂತಿಸಿ ನಿಲಿಸುತ ನಾಲ್ಕರಲ್ಲೀ | ಚತುರ ದಿಕ್ಕಿನಲ್ಲೀ |ಪಂಚರೂಪಿ ನಿಷ್ಕಿಂಚಿನ ಪ್ರಿಯ ಹರಿಯಾ | ಪುರವ ಸೇರಿದಯ್ಯಾ 5
--------------
ಗುರುಗೋವಿಂದವಿಠಲರು
ದಯದಿ ವರಗಳ ನೀಡು ಮಮಸ್ವಾಮಿ ಸರ್ವಂತರ್ಯಾಮಿ ನಯದಿ ಬೇಡುವೆ ಭಕುತಜನ ಪ್ರೇಮಿ ಮಮ ಸರ್ವಸ್ವಾಮಿ ಪ ಸವಿನಯದಿ ಪ್ರಾರ್ಥಿಸುತ ಬೇಡುವೆ ಸುಮನರಸರ ಪ್ರಿಯ ಚಿತ್ಸುಖಪ್ರದ ಅಮಿತ ವಿಕ್ರಮ ಅಪ್ರಮೇಯನೆ ರಮೆಯರಮಣನೆ ರಕ್ಷಿಸೆನ್ನನು ಅ.ಪ ತೀರ್ಥ ಕ್ಷೇತ್ರಗಳನು ಚರಿಸುತಲೆ ಶ್ರೀ ಹರಿಯಗುಣ ಸ- ತ್ಪಾತ್ರರಿಂದನವರತ ತಿಳಿಯುತಲೆ ಶ್ರೋತ್ರಿಯನ ಸಂಗದೊಳು ನಲಿಯುತ್ತಾ ಮನನಲಿದು ನಿನ್ನಯ ಕೀರ್ತನೆಗಳನುದಿÀನದಿ ಕೀರ್ತಿಸುತ ಪಾರ್ಥಸಾರಥೆ ನಿನ್ನ ಪೊಗಳುತ ರಾತ್ರಿ ಹಗಲೆಡಬಿಡದೆ ಸ್ತುತಿಪರ ಗಾತ್ರಮರೆಯುತಲವರ ಸೇವಿಪ ಸಾರ್ಥಕದ ಸೇವೆಯನೆ ನೀಡೈ 1 ಗೋಕುಲಾಪತಿ ಹರಿಯೆ ಗೋವಿಂದ ನೀ ಕಡಿಯೋ ಬಂಧ ನೂಕಿ ಉದ್ಧರಿಸೆನ್ನ ಭವದಿಂದ ಕಾಕುಮತಿಗಳ ಬಿಡಿಸು ದಯದಿಂದ ನೀ ಪೊರೆಯದಿರಲು ಯಾತಕೀ ನರದೇಹ ಮುಕುಂದ ಮಾತುಮಾತಿಗೆ ನಿನ್ನ ಸ್ಮರಿಸದ ಮಾತುಗಳ ಫಲವೇನು ಕೇಶವ ಮದನ ಜನಕ ಮಾಧವ ಮುರಮರ್ದನ ಹರೇ 2 ಕರುಣಿಗಳೊಳು ದೇವನಿನಗೆಣೆಯೆ ದಯ ಮಾಡು ಹರಿಯೆ ಕರಿಯ ಪೊರೆದವನಲ್ಲೆ ನರಹರಿಯೆ ಕರೆಕರೆಯ ಸಂಸಾರ ಇದು ಖರೆಯ ಇದರೊಳಗೆ ಬಳಲಿದೆ ಕರೆದು ರಕ್ಷಿಪುದೆಂದು ಮೊರೆ ಇಡುವೆ ಕಮಲ ಮುಖಿ ಶ್ರೀ ಭೂಮಿ ಸಹಿತದಿ ಕಮಲನಾಭ ವಿಠ್ಠಲನೆ ಭಕುತರÀ ಮಮತೆಯಲಿ ಕೈ ಪಿಡಿದು ಪೊರೆಯುವ ಮನ್ಮಥನ ಪಿತ ಮನ್ನಿಸುತ ಪೊರೆ 3
--------------
ನಿಡಗುರುಕಿ ಜೀವೂಬಾಯಿ
ದಯಮಾಡಿ ಪಿಡಿ ಎನ್ನಕೈಯ್ಯಾ ಗುರುರಾಯಾ ಪಕರುಣಾಸಾಗರನೆಂಬ ಬಿರುದು ನಿನಗೆ ಉಂಟು ಅ.ಪನಾನು ನನ್ನದು ಎಂಬ 'ೀನ ಬುದ್ದಿಯ ಬಿಡಿಸುಸಾನುರಾಗದಿ ಮನಸನು ಧರ್ಮದಲ್ಲಿರಿಸುಮಾನಾಪಮಾನಕ್ಕೆ 'ಗ್ಗದೆ ಕುಗ್ಗದೆಧ್ಯಾನಾನಂದದೊಳೆನ್ನ ಇರಿಸಯ್ಯಾ ಸ್ವಾ'ು 1ದೇಹ ನನ್ನದು ಎಂಬ ದುರಭಿಮಾನವ ಬಿಡಿಸುದೇಹಾನುಬಂಧುಗಳ ಮೋಹಬಿಡಿಸುದೇಹಗೇಹಗಳೆಲ್ಲ ದೇವರ ಸ್ವತ್ತೆಂಬಸುಜ್ಞಾನವನು ಕೊಟ್ಟು ಸಲುಹಯ್ಯಾ ಸ್ವಾ'ು 2ದುಷ್ಟ ಬುದ್ಧಿಯು ಎನಗೆ ಹುಟ್ಟದಂತೆ ಮಾಡುಕೆಟ್ಟಜನರ ಗಾಳಿ ತಟ್ಟದಿರಲಿಎಷ್ಟು ಬೇಕಾದಷ್ಟು ಕಷ್ಟಬಂದರು ಸಹಗಟ್ಟ್ಯಾಗಿ ನಿನ್ನಲ್ಲಿ ಭಕ್ತಿಹುಟ್ಟಲಿ ಸ್ವಾ'ು 3ಭೇದ ಅಭೇದದ ಮರ್ಮವ ತಿಳಿಸಯ್ಯಾಸಾಧು ಸಜ್ಜನರ ಸಂಗದೊಳೆನ್ನ ಇರಿಸುಮೋದತೀರ್ಥರ ಮತದ ಸುಜ್ಞಾನವನು ಕೊಟ್ಟುಭೂದೇವ ವಂದ್ಯ ಭೂಪತಿ 'ಠ್ಠಲನ ತೋರು 4
--------------
ಭೂಪತಿ ವಿಠಲರು
ದಯಮಾಡು ದಯಮಾಡು ಎನ್ನ ಮೇಲೆ | ಅಂತರಂಗದೊಳಿಪ್ಪ ಅಚ್ಚುತಮೂರ್ತಿ ಪ ಕುಸುಮ ಜಾಜಿ ಮಲ್ಲಿಗೆ ಮಾಲೆ | ಮಂದಾರ ಹಾರ ಕೊರಳೊಳಿಡಲೂ || ಚಂದವಿಲ್ಲವೆಂದು ತೆಗೆದು ಬಿಸಾಟಿ ಊರ | ಹಂದಿಯಂದದಿ ಇಲ್ಲಿ ಇಪ್ಪ ನರಗೆ || 1 ಹೆತ್ತ ತುಪ್ಪ ಸಣ್ಣಶಾವಿಗೆ ಪರಮಾನ್ನ | ಹೆತ್ತತಾಯಿ ತಂದು ಉಣ್ಣ ಬಡಿಸಲು || ಅತ್ತ ಮೊಗವಗಬೆ ತೊತ್ತು ಉಣಬಡಿಸಿದ | ಓಗರ ತಿಂದು ಇಪ್ಪೆನೆಂಬ ನರಗೆ 2 ತುಂಬಿದ ಹೊಳೆಯಲ್ಲಿ ಹರಿಗೋಲಿಟ್ಟುಕೊಂಡು | ಅಂಬಿಗ ತಡೆಯದೆ ದಾಟಿಸಲು || ಅಂಬುವಾಸನೆ ನೋಡಿ ದಾಟಿ ಪೋಗುವೆನೆಂ | ದೆಂಬ ಮಾನವನಾದೆ ವಿಜಯವಿಠ್ಠಲ ಕರುಣೀ3
--------------
ವಿಜಯದಾಸ
ದಯವದೋರೋ ದೇವ ಭಕುತ ಭಯನಿವಾರ ಅಭವ ಪ ದಯವದೋರೋ ನಿನ್ನ ಪಾವನಪಾದ ಸು ಸೇವಕ ಜನಮಹಜೀವ ಜಾನಕೀಧವ ಅ.ಪ ಪಾಪಗೆಲಿಯ ಬಂದೆ ಸಂಸಾರ ಕೂಪದೊಳಗೆ ನಿಂದೆ ಕೋಪಜ್ವಾಲದಿ ಬೆಂದೆ ವಿಷಯ ತಾಪತ್ರಯದಿನೊಂದೆ ಆ ಪರಲೋಕದ ವ್ಯಾಪಾರ ಮರೆದಿಹ್ಯ ದ್ವ್ಯಾಪಕನಾಗಿ ಬಲುತಾಪಬಡುವೆ ತಂದೆ 1 ಅಂಗಮೋಹವ ಬಿಡಿಸೋ ನಿನ್ನವರ ಸಂಗವ ಕರುಣಿಸೊ ಭಂಗವ ಪರಹರಿಸೊ ಜಗದವ ರ್ಹಂಗಹನು ತಪ್ಪಿಸೊ ಮಂಗಳಾತ್ಮ ನಿನ್ನ ಮಂಗಳಾಮೂರ್ತಿ ಎನ್ನ ಕಂಗಳೋಳ್ನಿಲ್ಲಿಸಿ ಹಿಂಗದಾನಂದ ನೀಡು 2 ದೋಷದಾರಿದ್ರ್ಯ ಹರಿಸೊ ಮನದ ಅಶಾಪಾಶ ಬಿಡಿಸೊ ಹೇಸಿಪ್ರಪಂಚ ಗೆಲಿಸೊ ಸುಜನರಾ ವಾಸ ತೀವ್ರ ಪಾಲಿಸೊ ದೋಷನಾಶ ಜಗದೀಶ ಶ್ರೀರಾಮ ನಿನ್ನ ದಾಸಾನುದಾಸೆನಿಸಿ ಪೋಷಿಸು ಸತತ 3
--------------
ರಾಮದಾಸರು
ದಯವಿರಲಿ ದಯವಿರಲಿ ದಾಮೋದರ ಪ. ಸಯವಾಗಿ ಬಿಡದೆನ್ನ ಸಾಕುವ ಶ್ರೀಕೃಷ್ಣಅ.ಪ. ಹೋಗಿ ಬರುವೆನಯ್ಯ ಹೋದಹಾಂಗೆಲ್ಲಸಾಗುವವನಲ್ಲ ನಾ ನಿನ್ನ ಬಿಟ್ಟುತೂಗಿ ತೊಟ್ಟಿಲು ಕೊನೆಗೆ ಸ್ಥಳದಲ್ಲೆ ನಿಲ್ಲುವುದುಹ್ಯಾಗೆ ನೀ ನಡೆದಂತೆ ಹಾಗೆ ನಾ ನಡಕೊಂಬೆ 1 ಇದ್ದಲ್ಲೆ ಎನ್ನನುದ್ಧರಿಪ ಶಕ್ತಿ ಅ-ಸಾಧ್ಯ ನಿನಗೆಂದು ನಾ ಬಂದವನಲ್ಲನದ್ಯಾದಿ ಕ್ಷೇತ್ರಮೂರ್ತಿಗಳಲ್ಲಿ ನಿಜ ಜ್ಞಾನ-ವೃದ್ಧಜನರ ಹುಡುಕಿ ನಿನ್ನ ತಿಳಿಯಲು ಬಂದೆ 2 ಸತತ ಇದ್ದಲ್ಲೆ ಎನ್ನ ಸಲಹೊ ಅದರೊಳಗಾಗಿಅತಿಶಯವು ಉಂಟು ವಿಭೂತಿಯಲ್ಲಿಗತಿಯು ಸಾಧನಕೆ ಅಭಿವ್ಯಕ್ತ ಸಂದರ್ಶನದಿಸ್ಮøತಿಗೆ ವಿಶೇಷ ಮಾರುತಿರಮಣ ನಿನ್ನ 3 ನೋಡಿದೆನೆ ನಾ ನಿನ್ನ ನೋಡದೆ ಎಂದೆಂದುಪಾಡಿದೆನೆ ಆರಾರು ಪಾಡದೊಂದುಮಾಡಿದೆನೆ ಅರ್ಚನೆಯ ಮೀಸಲಾದುದು ಒಂದುಮೂಢಮತಿಯಲಿ ಮುಂದೆ ನಿಂದೆ ಕೈಮುಗಿದು 4 ಬಂದೆನೊ ನಾನಿಲ್ಲಿ ಬಹುಜನ್ಮದ ಸುಕೃತ-ದಿಂದ ನಿನ್ನ ಬಳಿಗೆ ಇಂದಿರೇಶಒಂದು ಮಾತ್ರವು ಇಟ್ಟು ಸಕಲವು ಅರ್ಪಿಸಿದೆಬಂಧನ ಕಡಿವ ಭಕುತಿಯು ಜ್ಞಾನ ನೀಡುವುದು 5 ಬಿನ್ನಪವ ಕೇಳು ಸ್ವಾಮಿ ಎನ್ನನ್ನೊಬ್ಬನ್ನೆ ಅಲ್ಲಎನ್ನ ಹೊಂದಿ ನಡೆವ ವೈಷ್ಣವರನಇನ್ನವರಿಗೆ ಬಾಹೊ ದುಷ್ಕರ್ಮಗಳ ಕೆಡಿಸಿಘನಗತಿಗೈದಿಸುವ ಭಕುತಿ ಕೊಡು ಕರುಣದಿ 6 ರಾಜರಾಜೇಶ್ವರ ರಾಜೀವದಳನಯನಮೂಜಗದೊಡೆಯ ಮುಕುಂದಾನಂದಈ ಜೀವಕೀದೇಹ ಬಂದದ್ದಕ್ಕು ಎನಗತಿ ನಿ-ವ್ರ್ಯಾಜದಿ ಸುರಗಂಗೆ ಸ್ನಾನವನು ಮಾಡಿಸೊ 7 ಎನಗೆ ಆವುದು ಒಲ್ಲೆ ಎಲ್ಲೆಲ್ಲಿ ಪೋದರುಕ್ಷಣ ಬಿಡದೆ ನಿನ್ನ ನೋಳ್ಪ ಜ್ಞಾನವ ಕೊಡೊಚಿನುಮಯಮೂರುತಿ ಗೋಪಾಲವಿಠಲಘನಕರುಣಿ ಮಧ್ವಮುನಿಮನಮಂದಿರನಿವಾಸ8
--------------
ಗೋಪಾಲದಾಸರು
ದರುಶನವಾಯಿತು ಪಂಢರೀಶನ ಪ ದರುಶನದಿಂದಲಿ ಧನ್ಯರಾದೆವು ಸರಸಿಜಭವನ ನಾಭಿಯಲಿ ಪಡೆದವನ ಅ.ಪ ತಂದೆತಾಯಿಯರ ಭಕ್ತಿಯಿಂದ ಸೇವಿಸುವರಿಗೊಲಿದಾ- ನಂದಪದವಿಯನಿತ್ತ ನಂದನ ಕಂದನ 1 ಇಷ್ಟ ಭಕುತ ಕೊಟ್ಟ ಇಟ್ಟಿಗೆ ಮೇಲೆ ನೆಲಸಿ ಶಿಷ್ಟರ ಸಲಹುವ ವಿಠ್ಠಲರಾಯನಂಘ್ರಿ 2 ಉರದಲಿ ಸಿರಿಯನು ಧರಿಸಿ ಸುರರ ಕಾರ್ಯ ನೆರವೇರಿಸುವ ಜಗದ್ಭರಿತನ ಶ್ರೀಪಾದ 3 ನಾಗಶಯನ ನಿಖಿಲಾಗಮವೇದ್ಯನ 4 ಮುಕುತಿದಾಯಕ ಗುರುರಾಮವಿಠಲ ಚರಣ5
--------------
ಗುರುರಾಮವಿಠಲ