ಒಟ್ಟು 2406 ಕಡೆಗಳಲ್ಲಿ , 111 ದಾಸರು , 1903 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ವೇಣಿ ಮಾಧವನ ತೋರಿಸೆ ಜಾಣೆ ತ್ರಿವೇಣಿ ಕಾಣದೆ ನಿಲ್ಲಲಾರೆನೆ ಪ ಕಾಣುತ ಭಕುತರ ಕರುಣದಿ ಸಲಹುವ ಜಾಣೆ ತ್ರಿವೇಣಿ ಕಲ್ಯಾಣಿ ಸುಸನ್ನುತೆ ಅ.ಪ. ತರಣಿ ಒಂದು ಘಳಿಗೆ ನೀ ಹರಿಯ ಬಿಟ್ಟಿರಲಾರಿ ಮಂದಗಮನೆ ಎನ್ನ ಮುಂದಕ್ಕೆ ಕರೆಯೆ 1 ಕರುಣವಿಂದೆನ್ನ ಕರೆವುದು ಭವ ಸ್ಮರನಪಿತನ ಮುರಹರನ ಕರುಣದಿ 2 ಸುಜನರಿಗೆಲ್ಲ ದಾತಳೆ ಸುಶೀಲೆ ಕೇಳೆ ಕುಜನರ ಸಂಗದೂರಳೆ ನಿಜ ಪದವಿಯನಿತ್ತು ಸಲಹುವ ನಮ್ಮ ವಿಜಯವಿಠ್ಠಲ ನಿಜಪದ ತೋರಿಸೆ 3
--------------
ವಿಜಯದಾಸ
ವೇಣುಗೋಪಾಲದಾಸರ ಸ್ತೋತ್ರ ಕರೆದು ಕೈ ಪಿಡಿಯೊ ಎನ್ನ ವೇಣುದಾಸದೊರೆಯೆ ಪತಿತ ಪಾವನ್ನ ಪ ಕರೆದು ಕೈ ಪಿಡಿಯೊ ನೀ ಕರಬಿಡದೆ ನಿನ್ನಚರಣವೆ ಗತಿಯೆಂದು ಮರೆ ಬಿದ್ದ ಮನುಜನ್ನ ಅ.ಪ. ಸುಜನ ಪಿನಾಕ ಜನರ ಕೂಡಾ ಸಾ-ಹಜ ಭಕುತಿಯಲಿ ಯಜಿಸಿ ಮೋಹವೃಜನ ದಾಟಿ ದ್ವಿಜವರಾಗ್ರಣಿ 1 ಸಂತರ ಸಲಹುವನೇ ಸಂಗಡಲೇ ನಿ-ಶ್ಚಿಂತರ ಮಾಡುವುದೇಎಂತು ಪೇಳಲು ಎನಗಂತು ತೋರದು ದುಷ್ಟಭ್ರಾಂತಿಯಿಂದಲಿ ಮಾಳ್ಪ ಕಂತುಗಳಿಗೆ ಲೇಶಅಂತ ಕಾಲಕ್ಕೆ ಚಿಂತಾಕಾಲಯಾಪಂಥ ಸಾರುವದಿಂತು ಸರಿ ಜಗ-ದಂತು ರಂಗನ ಮುಂತು ತಿಳಿವ-ದೆಂತುಪಾಯವು ಶಾಂತದಾತನೆ 2 ಅರಿದೇನು ಆಪ್ತ ಬಂಧು ಪಾಮರನ ಉ-ದ್ಧರಿಪದು ನಿನಗೆ ಇಂದುಸರಿಸಾ ದೂರದಿ ನಿನ್ನ ಸ್ಮರಣೆ ಮಾಡುವೆ ಆ-ಲ್ಪಿರಿದು ಬಾಯಿ ಬಿಡುವೆನೊ ಮರೆಯಲಾಗದು ತಂದೆದುರುಳ ವಿಷಯಕ್ಕೆರಗುವೆ ಅಂತಃ-ಕರುಣ ನಿಲಿಸಿ ಪೊರೆವ ಭಾರವುನಿರುತ ನಿನ್ನದು ವ್ಯಾಸವಿಠಲನಭರದಿ ಪೊಗಳುವ ಪರಮ ಧನ್ಯಾನೆ 3
--------------
ವ್ಯಾಸವಿಠ್ಠಲರು
ವೇಣುಗೋಪಾಲನಿಲಯೇ ವೀಣಾವಿನೋದವಲಯೇ ಪ ವಾಣಿ ಗೌರಿನುತೆ ತಾಯೆ | ಪ್ರಾಣತ್ರಾಣದಾತೆ ಸದಯೆ ಅ.ಪ ಬೃಂದಾವನ ವನವಾಸಿನಿ ಮಂದಾಕಿನಿ ಪ್ರಿತಮೋಹಿನಿ ಮಂದಾತ್ಮಜ ಸಹಚಾರಿಣಿ ಬೃಂದಾರಕ ಸುಖವರ್ಧಿನಿ 1 ಇಂದೀವರ ಸುಮಭೂಷಿಣಿ ವಂದೇ ಮಾಂಗಿರೀಶ ತೋಷಿಣಿ 2
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ವೇದವ್ಯಾಸಾ ಶ್ರೀ ಹರೇ | ನಿನ್ನ ಶ್ರೀಪಾದಉದಕೇಜ - ತೋರಿಸೋ ಪ ಹರಣ ಪ್ರಬೋಧ ಮುದ್ರಾಂಕನ ಅ.ಪ. ಕಾಲ | ಸಕಲ ಸದ್ಗುಣಧಾಮ - ಶ್ರೀ ಭೂಮಿ ದುರ್ಗೆ ಲೋಲ ||ಧೃತ - ಕಾಮ ಜನಕ ನಿಸ್ಸೀಮ ಮಹಿಮ - ತ್ರಿಧಾಮದಲಿ ಭಕ್ತಸ್ತೋಮ ವಿರಿಸಿದೆ - ಶ್ರೀರಾಮಾ - ಸುಧಾಮ - ರಿಪು ಭೀಮಾ | ಸುರಸಾರ್ವಭೌಮ 1 ವಿಧಿ ಪುತ್ರಾನ್ವಿತಗೋತ್ರಾರಿ ಪ್ರಿಯ ಸತ್ಯಾವಲ್ಲಭಚಿತ್ರಾ - ಸುವಿಚಿತ್ರಾ - ಸಮಗಾತ್ರಾ | ತೋರಿಸುತವಗಾತ್ರ 2 ಚಿನುಮಯಗುಣ ವಪುಷಾ | ಅನಂತ ಶೀರ್ಷಾಅನಿಲ ಹೃದಯಾಂತರ್ಗತ ||ಧೃತ - ಮನಸಿಜ ಪಿತ ಗುರುಗೋವಿಂದ ವಿಠಲನೆತನುಮನಧನವೆಲ್ಲ ನಿನದಾಗಿರುವುದೊಮುನಿವಂದ್ಯಾ - ಮುಕುಂದ - ಗೋವಿಂದ | ಕೊಡು ಎನಗಾನಂದ3
--------------
ಗುರುಗೋವಿಂದವಿಠಲರು
ವೇಳೆಗೊದಗಯ್ಯ | ವೇಳೆ ಬಂದು ಒದಗಿದೆ | ಪರಿಹರಿಸೊ ನೀ ಪ ಬಳಗುಳ್ಳಿಭಕುತರು ಬಳಲು ತಿರುವದ ಕಂಡು |ಕಳವಳಿಕೆಯಿಲ್ಲದೆ ಕಳೆವರೆ ಕಾಲವ 1 ಮಳಲು ಹಸಿಯನಗಲಿದಂತೆ ದಾಸರಿಗತಿಶಯವ |ದಣಿಸಿದರೆ ಬಳಿಕಾರುಳಿಸುವರೊ ? 2 ಹಲವ ಹೆತ್ತ ತಾಯಿ ಮೊಲೆ ಹಾಲನುಣಿಸದೆ |ನೆಲೆಯ ದೋರಿ ನಿನ್ನಲಿ ನಿಲಿಸಯ್ಯ ರುಕ್ಮನ 3
--------------
ರುಕ್ಮಾಂಗದರು
ವೈಶಾಖದುತ್ಸವ ಗೀತೆ ವರ್ಣಿಸಲಳವೆ ವೈಶಾಖದುತ್ಸವವಾ ಪ. ವೃಷಭಸೇರಿದ ವೈಶಾಖಮಾಸದ ಶುಕ್ಲ ಪಕ್ಷದ ಷಷ್ಠಿಯಲಿ ಕಂಕಣವ ಕಟ್ಟಿ ಪಟ್ಟದರಸಿ ಯರ್ಸಹಿತ ದಿಟ್ಟತನದಲಿ ಪೊರಟು ಶ್ರೇಷ್ಠವಾದ ಮಧ್ಯಮಂಟಪಕೆ ನಡೆತಂದ 1 ಮುದ್ದುಮೊಖ ಮುಗುಳ್ನಗೆಯು ವಜ್ರದ ಕಿರೀಟವು ತಿದ್ದಿದ ಕಸ್ತೂರಿತಿಲಕ ಹೊಳೆವ ವಜ್ರದ ಪದಕಗಳು ನಾಲ್ಕು ಮೂರನೆ ಧರಿಸಿ ಪ್ರಜ್ವಲಿಸುತ ಬಂದ ಅರ್ಜುನ ಸಾರಥಿಯು 2 ಶಿರದಿ ಪುಷ್ಪವ ಧರಿಸಿ ಪರಮಪುರುಷನು ತಾನು ಕೊರಳಲ್ಲಿ ವೈಜಯಂತಿಮಾಲೆಯನು ಧರಿಸಿ ಕರದಲ್ಲಿ ಪರಿಮಳದ ಗಂಧವನು ಧರಿಸಿ ಪರಮ ಪುರುಷನು ಬರುವ ಪರಿಯನೇನೆಂಬೆ 3 ದಂತದ ಉಯ್ಯಾಲೆಮಂಟಪದಲಿ ನಿಂದು ಕಂತುಪಿತ ಕರ್ಪೂರದಚೂರ್ಣದಲಿ ಮಿಂದು ಅಂತರಂಗದಿ ಭಕ್ತರಿತ್ತ ನೈವೇದ್ಯ ಉಂಡ ಲಕ್ಷ್ಮೀ ಕಾಂತನು ನಡೆತರುವ ಪರಿಯನೇನೆಂಬೆ 4 ಮುಂದೆ ದ್ರಾವಿಡವೇದ ಹಿಂದೆ ವೇದಘೋಷಗಳು ಆ ನಂದದಿಂ ಭಕ್ತರೆಲ್ಲ ಮುಂದೆ ಬರುತಿರಲು ಛಂದದಿಂ ರಂಭೆಯರ ಕೋಲಾಟಗಳ ನೋಡಿ ಇಂದಿರೆಯಿದಿರು ಮಂಟಪಕೆ ನಡೆತಂದ 5 ಸೃಷ್ಟಿಪತಿ ರಂಗನಿಗೆ ದೃಷ್ಟಿ ತಾಕುವುದೆಂದು ಹಿಟ್ಟಿನಾರತಿಯಿಂದ ದೃಷ್ಟಿಯನು ತೆಗೆದು ಶ್ರೇಷ್ಠವಾದ ಕರ್ಪೂರದ ಆರತಿಯನೆತ್ತಲು ಥಟ್ಟನೆ ತಿರುಗಿದನು ಕೃಷ್ಣಮೂರುತಿ ತಾನು 6 ಸಪ್ತದಿನದಲಿ ರಂಗ ರತ್ನಮೌಳಿಯ ಧರಿಸಿ ಮುತ್ತಿನಾ ಹಾರವನು ಹಾಕಿ ರತ್ನದ ಉಡದಾರ ಉಡಗೆಜ್ಜೆಯನು ಧರಿಸಿ ಪತ್ನಿ ಸಹಿತಲೆ ಬಂದು ಭತ್ತವನಳಿಸುವ ಸೊಬಗ 7 ಮುತ್ತಿನ ಕಿರೀಟವಿಟ್ಟು ಮುದದಿ ನಿಲುವಂಗಿ ತೊಟ್ಟು ರತ್ನದಾ ಹಸ್ತದಲಿ ಅಭಯವನು ಕೊಟ್ಟು ಕತ್ತಿ ಈಟಿ ಗುರಾಣಿ ಬತ್ತಳಿಕೆ ಅಳವಟ್ಟು ಹಸ್ತದಲಿ ಕಡಿವಾಣವಿಟ್ಟು ಬರುವ ಸೊಬಗ 8 ಹತ್ತಿ ಹಯವನು ರಂಗ ಒಂಭತ್ತು ದಿನದಲಿ ಮತ್ತೆ ಪುಷ್ಕರಣಿಯ ತೀರ್ಥದಲ್ಲಿ ಮಿಂದು ಅರ್ತಿಯಿಂ ಬಂದ ನೀರಾಳಿಮಂಟಪಕೆ 9 ಮಿಂದು ಮಡಿಯನೆ ವುಟ್ಟು ಛಂದದಿಂದಲೆ ರಂಗ ಬಂದು ಕಂಕಣವನ್ನು ಬಿಚ್ಚಿ ಆ ಘೃತ ಚೂತಫಲಗಳ ಸವಿದು ನಿಂದ ವೆಂಕಟರಂಗ [ಕರುಣಾಂತರಂಗ] 10
--------------
ಯದುಗಿರಿಯಮ್ಮ
ವ್ಯರ್ತವಾಯಿತು ಜನುಮಾ | ಹರಿಭಕ್ತಿ | ಅರ್ಥಿಯ ನೆಲೆಗೊಳ್ಳದೇ ಪ ನೊಣ ಮಧು ಬಿಂದುದಲೀ ಕುಳಿತಂತೆ | ವಣ ವಿಷಯದ ಸುಖಕ | ಹೆಣಗುತ ನಿಶಿದಿನದೀ | ತಾಪತ್ರಯ | ಕುಣಿಯೊಳು ಹೊರಳುತಲೀ 1 ಅವನಿಲಿ ಸಂಸಾರದೀ ಸಂಟರ್ಘಾಳಿ | ರವದಿಯಾ ತೆರೆ ಶಿಲುಕೀ | ವಿಧಿ ಬರ | ಹ್ಯಾವ ತಿಳಿಯದೆ ಮರುಗೀ 2 ಭೋಗಿನಾ ತ್ಯಾಗಿಯಾಗಿ ಆಯುಷ್ಯ | ನೀಗಿ ಯಚ್ಚರವಿಲ್ಲದೇ | ಶ್ರೀ ಗುರುಮಹಿಪತಿ ಸುತಪ್ರಭು | ಭಾಗವತರ ಕೂಡದೇ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ವ್ಯರ್ಥದಲಿ ತೋರುವನೆ ತ್ರೈಲೋಕ್ಯಕರ್ತ ಭಕ್ತನಾದರೆ ಪರಮ ಮುಕ್ತಿ ಸೇರುವುದು ಪ ಉತ್ತಾನ ಭೂಪತಿಯ ಪುತ್ರನಂತಿರಬೇಕು ಸತ್ಯವೊಂದಿರಬೇಕು ಹರಿಶ್ಚಂದ್ರನಂತೆ ಭಕ್ತಿರಸವಿರಬೇಕು ಪ್ರಹ್ಲಾದನಂತೆ ಹಸ್ತವಿರಬೇಕು ಶ್ರೀರಾಮ ಭಕ್ತನಂತೆ 1 ವ್ರತವ ಮಾಡಲು ಬೇಕು ಅಂಬರೀಶನ ಪರಿಯ ಪಥವ ನಡೆಯಲು ಬೇಕು ವಿಹಗನಂತೆ ಶತಮುಖವ ರಚಿಸಿದರೆ ಪುರುಹೂತನಂತಿಹನು ಯತಿಯಾಗಬೇಕು ಗುರುಮಧ್ವಪತಿಯಂತೆ 2 ಗೀತಸೇವನೆ ಬೇಕು ನಾರದರ ತೆರನಂತೆ ಪ್ರೀತನಾಗಲು ಬೇಕು ಪಾರ್ಥನಂತೆ ನೀತಿಶಾಸ್ತ್ರವು ಬೇಕು ಶುಕಶೌನಕರಂತೆ ಖ್ಯಾತಿಯಿರಬೇಕು ರವಿಜಾತನಂತೆ 3 ಶುದ್ದನಾಗಿರಬೇಕು ಉದ್ಧವನ ತೆರನಂತೆ ಬದ್ಧನಾಗಿರಬೇಕು ಅಕ್ರೂರನಂತೆ ಹೊದ್ದಿಕೊಂಡಿರಬೇಕು ಫಣಿರಾಜನಂದದಲಿ ಮುದ್ದಾಗಿಯಿರಬೇಕು ಆ ವಿದುರನಂತೆ 4 ವೇದವೋದಲು ಬೇಕು ವ್ಯಾಸಮುನಿಯಂದದಲಿ ಆದರಿಸಬೇಕು ತಾ ಧರ್ಮನಂದದಲಿ ಪಾದಪೂಜೆಯು ಬೇಕು ಲಂಕಾಧಿಪತಿಯಂತೆ ಭೇದ ನೋಡಲು ಬೇಕು ವಸಿಷ್ಠನಂತೆ 5 ಸ್ಮøತಿಯ ನೋಡಲು ಬೇಕು ಪಾರಾಶರಂದದಲಿ ಮಿತಿಯಿರಲು ಬೇಕು ಆ ಭೀಷ್ಮನಂದದಲಿ ಜೊತೆಯಾಗಿಯಿರಬೇಕು ಪುಂಡರೀಕನ ತೆರದಿ ವ್ರತವಿರಲು ಬೇಕು ರುಕುಮಾಂಗನಂದದಲಿ 6 ದಾನ ಮಾಡಲು ಬೇಕು ಬಲಿಯ ಪ್ರೌಢಿಕೆಯಿಂದ ಧ್ಯಾನವಿರಬೇಕು ಋಷಿ ಗಾಗ್ರ್ಯನಂದದಲಿ ಪ್ರಾಣ ಸಂದೇಹದೊಳು ಕರಿರಾಜನಂದದಲಿ ಕಾಣಬೇಕಾ ಹರಿಯ ಅಜಮಿಳನ ತೆರದಿ 7 ಜಪಗಳನು ತಪಗಳನು ದಾನಧರ್ಮಂಗಳನು ಅಪರೂಪವಾಗಿರ್ದ ಪೂಜೆಗಳನು ಉಪವಾಸವನು ಮಾಡಿ ವ್ರತ ನೇಮ ನಿಷ್ಠೆಗಳ ಕಪಟವಿಲ್ಲದೆ ರಚಿಸಿ ಕಂಡರೈ ನಿನ್ನ 8 ಇವರಂತೆ ನೋಡುವರೆ ಸ್ಥಿರವಿಲ್ಲ ಬುದ್ಧಿಗಳು ಇವರ ದಾಸರ ದಾಸ ದಾಸ ನಾನು ನಿತ್ಯ ಮನದೊಳಗೆ ನಿಲುವಂತೆ ಭಾವಿಸೈ ಕೋನೇರಿ ವರಾಹತಿಮ್ಮಪ್ಪ 9
--------------
ವರಹತಿಮ್ಮಪ್ಪ
ವ್ಯಾಪಾರ ಉದ್ಯೋಗವನು ಮಾಡುವೆ | ಭೂಪಾಶದೊಳಗೆ ಎಲ್ಲರಿಗೆ ಬಲ್ಲಿದನಾಗಿ ಪ ಮುರಾರಿ ನಾಮವೆಂಬೊ ಮುಂಡಾಸವನೆ ಸುತ್ತಿ | ಅರವಿಂದನಾಭವೆಂಬೊ ಅಂಗಿಯ ತೊಟ್ಟು || ನರಹರಿನಾಮವೆಂಬೊ ನಡುಕಟ್ಟನೆ ಸುತ್ತಿ | ಕರುಣಾಸಾಗರನೆಂಬೊ ಕಠಾರಿಯನು ಸಿಕ್ಕಿಸಿ 1 ಕಮಲನಾಭವೆಂಬೊ ಕಮಲದಾನಿ ಪಿಡಿದು | ತಿಮಿರದೋಷವೆಂಬೊ ಪಾಯಿಪೋಸು ಮೆಟ್ಟಿ || ಶಮೆದಮೆಯೆಂಬೊ ಪರಿಚಾರಕರ ಒಡಗೊಂಡು ಗಮಿಸಿದ್ದೆನೊ ಹರಿದಾಸರಿದ್ದ ಚಾವಡಿಗೆ 2 ಪೋಗಿ ನಮಸ್ಕಾರವೆಂದು ತಲೆಬಾಗಿ ನಿಲ್ಲಲು | ಭಾಗವತರು ಕರೆದು ಇಂಬನಿತ್ತು || ಯೋಗಕ್ಷೇಮವೆಲ್ಲ ವಿಚಾರಿಸಿ ಪ್ರೀತಿಯಲಿ | ಈಗಳೆ ಕುಳಿತ ಅಚ್ಯುತನ ತೋರಿದರು 3 ಕಂಡು ಕರವನು ಮುಗಿಯೆ ಕರುಣಾಸಾಗರನೆಂಬೊ | ಮಂಡಲಾಧಿಪನು ಕರೆದು ಮನ್ನಿಸಿ || ಗಂಡುಗಲಿಯಾಗೆಂದು ಸಂಚುಗಾರಿಕೆ ತುಲಸಿ | ದಂಡೆ ಕೊರಳಿಗೆ ಹಾಕಿ ದಾಸರೊಳಗಿರಿಸಿದನು 4 ಘನವಾದ ಉದ್ಯೋಗ ದೊರಕಿತು ನನಗಿನ್ನು | ಅನುಮಾನವಿಲ್ಲವು ಎಂದೆಂದಿಗೂ || ದಿನದಿನಕೆ ಹರಿನಾಮವೆಂಬೊ ಲೆಖ್ಖ-| ವನು ಬರೆದು ತ್ರಿಲೋಕದರಸನಿಗೆ ಒಪ್ಪಿಸಿದೆ || 5 ಬರೆದು ಲೆಖ್ಖವ ನೋಡಿ ದಯಾಪಯೋವಾರಿಧಿ | ಹರುಷದಿಂದಲಿ ಎನಗೆ ಸಂಬಳಕ್ಕೆ || ಬರೆಸಿ ಕೊಟ್ಟನು ಸನದು ಕೇಶವಾದಿಯಂಬೊ | ವರಹಗಳು ಎಂದಿಗಾದರು ಅಳಿವಿಲ್ಲದೆ || 6 ಈಸು ದಿನ ಉದ್ಯೋಗ ಹೀನನಾಗಿ ನೊಂದೆ | ದಾಸರಾ ದಯದಿಂದ ದೊರೆಕಿತಿಂದು || ಸಂಚಿತ ಕರ್ಮ ಓಡಿಸಿ |ಶ್ರೀಶ ವಿಜಯವಿಠ್ಠಲನಲ್ಲಿ ಬಾಳಿದೆನೊ || 7
--------------
ವಿಜಯದಾಸ
ವ್ಯಾಸ ತತ್ವಜ್ಞರ ಚರಿಯಾ ಮನಕಾಶ್ಚರಿಯಾ ಪರಮಹಂಸ ಕುಲಜ ಭುವನೇಂಧ್ರರ ತನಯಾ ಪ ಶೇಷಗಿರೀಶ್ವರ ಕೃಪಯಾ ಐಜಿ ವ್ಯಾಸವೆಂಕಟ ನರ- ಸಿಂಹಾಭಿಧೇಯ ಭೂಸುರೋತ್ತಮರಿಗೆ ತನಯಾ ನೆನಿಸಿ ಭಾಸುರ ಕೀರ್ತಿಯ ಪಡೆದ ರಾಮಾರ್ಯ 1 ವೇಣಿ ಸೋಮಪುರ ನಿಲಯ ಪಾಹಿ ಆನತ ಜನಸುರಧೇನೋ ಮಾಂಕೃಪಯಾ ವೇಣು ಗೋಪಾಲನ ಪ್ರೀಯ ಎಂದು ಸೂರ್ಯ 2 ಕೇಳಿವರ ಮಹಿಮೆ ಅಪಾರ ಗದ್ ವಾಲ ಭೂಪಗೆ ಬಂದ ಭಯ ಪರಿಹಾರ ಪೇಳಲು ಶ್ಲೋಕಾರ್ಥಸಾರ ಕೃಷ್ಣಾ ಮೇಲೆ ಪ್ರವಹಿಸಲು ಓಡಿತು ಶತೃನಿಕರ 3 ಭೃಂಗ ತನ್ನ ನೇಮದಿಂದಲಿ ಶೇವಿಪರ ಭವಭಂಗ ಪರ ಬ್ರಹ್ಮ ನಾನೆಂಬೊ ದುರ್ಮತ ಗಜಸಿಂಗ4 ನಂದ ನಂದನ ಗುಣಸ್ತವನ ಮಾಳ್ಪ ನಂದ ತೀರ್ಥರ ಮತಾಂಬುದಿ ಶೀತ ಕಿರಣ ಒಂದಾರು ಜನರೊಳು ಕರುಣ ಕೃತ ಮಂದ ನಂದಿನಿ ವ್ಯಜನಾದಿ ವ್ಯಾಖ್ಯಾನ 5 ಘನ್ನ ಮಹಿಮ ಜಿತಕಾಮಾ ಅ- ರಣ್ಯ ಕಾಚಾರ್ಯ ಸೇವಿತ ಪದ ಪದುಮ ಶುಭ ಗುಣಸ್ತೋಮ ಮನವೇ ಬಣ್ಣಿಸಲೊಶವೆ ಪಂಚಾಮೃತ ಮಹಿಮಾ 6 ವಾಸುದೇವನ ಗುಣತತಿಯ ಪೇಳಿ ದಾಸ ಜನರಿಗೆ ಪಾಲಿಸಿದಿ ಸನ್ಮತಿಯಾ ಭಾಸುರ ಕುಸುಮೂರ್ತಿರಾಯ ನೆನಿಸಿ'ಶ್ರೀಶಕಾರ್ಪರ ನರಹರಿ’ ಗತಿ ಪ್ರೀಯ 7
--------------
ಕಾರ್ಪರ ನರಹರಿದಾಸರು
ವ್ಯಾಸಕೂಟ-ದಾಸಕೂಟದ ಇತರ ಗುರುಗಳ ವರ್ಣನೆ ಮುನಿವರ್ಯ ಶ್ರೀಕಾರ್ಪರ ಮುನಿವರ್ಯ ಪ ಗೃಂಥಾರ್ಥ ಜ್ಞಾನ ವಿಷಯವ ನೆನೆಸದಂದದಿ ಮಾಡೋ ವನಜನಾಭನ ಪ್ರೀಯ ಅ.ಪ ಮುನಿವರ್ಯ ಮನವಾಚಾಕಾಯಾ ದಿಂದ ಅನುದಿನ ನಡೆಯುವ ಕ್ರಿಯಾ ಶ್ರೀ ಕೃಷ್ಣನೆ ಮಾಡಿಸುವನೆಂಬೊ ಮತಿಯಾ ಕೊಡು ಯನಗೆಂದು ಮುಗಿವೆನು ಕೈಯಾ ಆಹಾ ಭವ ವನಧಿ ದಾಟಿಸುವ ಸಜ್ಜನರ ಸಂಗವ ಕೊಡು 1 ಶ್ರೀಕಾಂತನಶ್ವತ್ಥ ರೂಪ ದಿಂದ ಒಲಿದು ಬಂದು ನಿಂತು ಭಕ್ತ ವೃಂದವ ಪಾಲಿಪ ನಿರುತ ಆಹ ಇಂದುಮೌಲಿ ಮುಖರಿಂದ ಸಹಿತನಾಗಿ ಮಂದ ಜಾಸನನಿಲ್ಲಿ ಬಂದು ಪೂಜಿಪನಿತ್ಯ 2 ಶ್ರೀ ಕಾರ್ಪರಾಗಾರ ಬಹುಶರಣು ಜನರಿಗೆ ಮಂದಾರ ನರಹರಿಯನೊಲಿಸಿದಂಥ ಧೀರಾ ಆಹಾ ಕರುಣ ಶರಧೆಯನ್ನ ದುರಿತಗಳೋಡಿಸಿ ಹರಿಗುರು ಚರಣದಿ ಪರಮಭಕ್ತಿಯ ಕೊಡೊ 3
--------------
ಕಾರ್ಪರ ನರಹರಿದಾಸರು
ವ್ಯಾಸರಾಯರ ಚರಣವನೆ ಸೇವಿಸಿ ಪ ವ್ಯಾಸರಾಯರ ಚರಣ ಸರಸಿಜದ ಸೇವೆ ಬಲು ಮೀಸಲ ಮನದಿ ಮಾಡೆ ಆಶೆಪಾಶೆಯ ತೊರೆದು ಕ್ಲೇಶವೆಲ್ಲವ ಹರಿಸಿ ಭಾಸಿಸುವ ಬಿಡದಲೇ ಹೃದ್ದೇಶ ಖೇಶದೊಳಗೇ ಅ.ಪ. ಬನ್ನೂರು ಪುರದಲ್ಲಿ ಮುನ್ನೋರ್ವ ಬ್ರಾಹ್ಮಣನಮನ್ನೆಯೋಳ್ಳುದಿಸಲೂ ಸ್ವರ್ಣ ಪಾತ್ರೆಲಿ ತರಿಸಿಘನ್ನ ಮಹಿಮನ ತಂದು ಬ್ರಹ್ಮಣ್ಯ ಯತಿವರರು ತಮ್ಮ ಆಶ್ರಮದಿ ಪೊರೆಯೆ ||ಉನ್ನತದ ಗುಡ್ಡದಲಿ ಗವಿಯ ಮನೆಯಾಗಿರಲು ಚಿಣ್ಣನಾ ತೊಟ್ಟಿಲಿನ ಮೇಲಿನ ಗವಾಕ್ಷದಿಂಚೆನ್ನಗೋವ್ ದಿನದಿನದಿ ಪಾಲ ಕರೆಯುತ ಚಿಣ್ಣನನು ತಾ ಬಲು ಸಲಹಿತು 1 ತಾಪಸೋತ್ತಮರಾದ ಶ್ರೀಪಾದರಾಯರ ಸ-ಮೀಪದೊಳು ಆ ಪರಮ ಶಾಸ್ತ್ರ ವ್ಯಾಸಂಗದೀಭಾಪು ಭಾಪನೆ ಮೆರೆದು ಭಕ್ತಿ ಸುಪಥವ ಪಿಡಿದು ಮೈ ಮರೆದು ಕುಣಿಯುತಿರುವ ||ಶ್ರೀಪಾದ ಮುನಿಪ ತಾ ಮುಚ್ಚಳವ ತೆರೆಯದಿಹ ಸಂಪುಟವ ತೆರೆಯುತ್ತ ಶ್ರೀ ಪತಿಯನೆ ನೋದುತಶ್ರೀಪ ಶ್ರೀ ವೇಣುಗೋಪಾಲ ಕೃಷ್ಣನ್ನ ಕಾಣುತ್ತ ಕುಣಿ ಕುಣಿದಾಡಿದ 2 ಶಾಲಿಗ್ರಾಮವ ಪಿಡಿದು ತಾಳವನೆ ಹಾಕುತ್ತಬಲುಭಕ್ತಿ ಭರದಿಂದ ಘಲ್ಲು ಘಲ್ಲನೆ ಕುಣಿಯೆಖುಲ್ಲ ಜನರಿದರ ವಳ ಮರ್ಮವನೆ ತಿಳಿಯದಲೆ ಗುಲ್ಲುಗುಲ್ಲೆಂದು ನಗಲೂ || ಬಲ್ಲಿದ ಶ್ರೀಪಾದರಾಯರಿದ ಕೇಳಿ ಕಂಗಳಲಿ ಗಂಬನಿ ಗಲ್ಲದಲಿ ಕೈಯಿಡುತ ಸೊಲ್ಲ ಕೇಳಿರಿ ಸುಜನರೆಲ್ಲರು ಶ್ರೀ ಕೃಷ್ಣ ನಮ್ಮ ವ್ಯಾಸರೋಶನಾದನು 3 ಸಾರಥಿ ಹರಿಯನಿಜ ಮತವ ಬೋಧಿಸುತ ನಿಜ ಜನರ ಪೊರೆಯುತ್ತಕುಜನ ಕುತ್ಸಿತ ಮಾಯಿಮತ ಜೈಸಿಅಜನನಯ್ಯನ ಪ್ರೀತಿ ಸಂಪಾದಿಸಿ ||ಸುಜನ ಪಾಲಕ ಕೃಷ್ಣರಾಜನಿಗೆ ಕುಹುಯೋಗಗಜಬಜಿಸಿ ಬರುತಿರ್ಪುದನು ನಿಜ ಮನದಿ ತಿಳಿದುಗಜವರದ ನಂಘ್ರಿಯನೆ ಭಜಿಸುತ್ತ ವಿಜಯ ಪುರಿ ಸಿಂಹಾಸನವನೇರ್ಧರ 4 ಪರಿ ಗ್ರಂಥ ರಚನೆಯಲಿ ಕಳೆಯೆ ಕಾಲವಕಲು ಮನದ ಜನರಿವರ ಬಲು ಪರಿಯ ಮಹಿಮೆಗಳನೂ ತಾವ್ ತಿಳಿಯಲೊಶವೆ 5 ಇಂಪುಗೊಳ್ಳುತ ಮನದಿ ತಂಪಿನಿಂದಲಿ ಮೆರೆವಪಂಪೆ ಸುಕ್ಷೇತ್ರದಲಿ ಬಾಂಬೊಳೆಯ ಜನಕನ್ನಸಂಪ್ರೀತಿಯನೆ ಪಡೆದಿರುವ ಯಂತ್ರ ಉದ್ಧಾರರನ ಸ್ಥಾಪಿಸುತಲಿ||ನೋಂಪಿನಿಂದಲಿ ಬ್ರಾಹ್ಮಲಕ್ಷ ಗುಂಪಿಗೆ ಉಣಿಸಿ |ಸಂಪುಲ್ಲ ಲೋಚನನ ಶಂಫಲಿಯ ಪುರಗನನುಸಾಂಪ್ರದಾಯಕದಿಂದ ಸಂಪ್ರೀತಿ ಬಡಿಸಿದರ ಪದ ಪಾಂಸುವನೆ ಸಾರಿರೋ 6 ಪರಿ ಪರಿಯ ಪೂಜೆಯನೆ ಗೈಯ್ಯುತಲಿ ||ಶ್ರೀಶನ ಸುಪೂಜಾ ವಿಧಾನವನೆ ಗೈಸುತ್ತದೋಷದೂರನ ಸೇವೆ ಮೀಸಲಳಿಯದ ಮನದಿ ಒಸೆದು ತಾವ್ ಗೈಯ್ಯುತ ಭಾಸಿಸುವ ಸತ್ಕೀರ್ತಿಯುತರಾಗಿ ಮೆರೆಯುತಿಹರ 7 ಪುರಂದರ ವಿಠಲ ದಾಸನೆಂದೂದಾಸ ಪೀಠದಿ ನಿಲಿಸಿ ದಾಸ ಕೂಟವ ರಚಿಸಿ ಸತ್ಪಂಥವನೆ ಸಾರಿದ ||ಆಶುಕವಿತೆಯ ರಚಿಸಿ ಪ್ರಾಕೃತ ಸುಭಾಷೆಯಲಿಕೇಶವನ ಗುಣಧಿಯಲಿ ಲೇಸಾಗಿ ಈಸುತಲಿದಾಸರೊಡನಾಡುತಲಿ ಮೀಸಲಾಗಿರಿಸಿ ತನು ಕೇಶವನ ಗುಣ ಪೊಗಳಿದ 8 ಜಯ ಜಯತು ಶುಭಕಾಯ ಜಯ ಜಯತು ವ್ಯಾಸಾರ್ಯಜಯ ಮಧ್ವಮುನಿ ಪ್ರೀಯ ಜಯ ಚಂದ್ರಿಕಾಚಾರ್ಯಜಯತು ವಿದ್ವದ್ದಾರ್ಯ ಜಯತು ಸುರಮುನಿ ಪ್ರೀಯ ಜಯ ಜಯತು ಯತಿವರ್ಯನೆ ||ಕಾಯಭವ ಪಿತ ಗುರೂ ಗೋವಿಂದ ವಿಠ್ಠಲಗೆಪ್ರೀಯ ಗುರು ವ್ಯಾಸಾರ್ಯ ಸ್ತೋತ್ರವನು ಭಾವ ಶುದ್ಧಿಯೊಳಾವ ಭಜಿಸುವನವಗೆ ಭವವನಧಿ ಉತ್ತರಿಸೆ ನಾವೆಯೆನಿಸುವುದಿದು 9
--------------
ಗುರುಗೋವಿಂದವಿಠಲರು
ವ್ಯಾಸರಾಯರ ಸ್ಮರಿಸಿ ಏಸು ಜನ್ಮದ ಪಾಪ ನಾಶವಾಗುವುದು ನಿಮ್ಮಾಶೆ ಸಿದ್ಧಿಸುವುದು ಲೇಸಾಗಿ ಸುಖಿಸಿ ಆನಂದ ವೈಕುಂಠದಲಿ ವಾಸವಾಗುವುದು ನಿಜ ಭಕುತಿಯಲಿ ಬಿಡದೆ ಪ ಪಿತನಿಂದ ನೊಂದು ರತಿಪಿತನ ಸ್ಮರಿಸುತ ಪ್ರತಿಬಂಧಕಗಳ ಪ್ರತಿಯಾಗಿ ಬಂದಿರಲು ಬಲು ಮತಿವಂತನಾಗಿ ಮುದದೀ ಕ್ಷಿತಿಯ ಭಾರವ ವೊಹಿಸಿ ಕೃತಭುಜ ಮುನೀಶ್ವರನ ಸ್ತುತಿಸುತಲ್ಲಿದ್ದು ಮಿತಿಕಾಲ ಹಿಂಗಳದು ಅಚ್ಯುತನ ವರದಿಂದ ಬಂದು 1 ಅಲ್ಲಿ ತ್ರಿಣಿನೇತ್ರ ಶ್ರೀ ವಲ್ಲಭನ ಶ್ರೀಪಾದ ಪಲ್ಲವಾರುಣಿ ಚಿತ್ತದಲ್ಲಿ ಪ್ರತಿದಿವಸದಲಿ ನಿಲ್ಲಿಸಿ ನಿಗಮಾರ್ಥದಿಂದ ಪೂಜಿಸುತ್ತಿದ್ದ ಬಲ್ಲ ಭಕುತಿಂದ ಸತತ ಖುಲ್ಲನಲಿ ಪುಟ್ಟಿದ ಪ್ರಲ್ಹಾದ ದೇವನು ಬಲ್ಲಿದಾನಾಗೆಲ್ಲಿ ಸಂಸಾರನುತ್ತರಿಸಿ ಮುನಿ ಮೆಲ್ಲನೇ ನಡತಂದನು2 ಬಂದ ನಾರದಗೆ ಪ್ರಲ್ಹಾದ ದೇವನು ಎರಗಿ ನಿಂದು ಕಂಗಳ ಮುಗಿದು ತ್ರಾಹಿ ತ್ರಾಹಿ ಎಂದು ಇಂದು ನಿಮ್ಮಯಾ ದರುಶನಾ ಛಂದವಾಯಿತೆನಗೆತ್ತಲಿಂದ ಬಂದಿರಿ ಇತ್ತ ಬಂದ ವಿಚಾರ ಪೇಳೆಂದು ಬಿನ್ನೈಸಲು ನಂದದಲಿ ಹಾಹಾ ಎನುತಾ 3 ವೃಕೋದರನಿಂದ ನೊಂದು ದೇಹವನು ಬಿಡುವಾಗ ಬಾ ಲ್ಹಕರಾಯನಾಗಿ ಹುಟ್ಟಿದ ಪ್ರಲ್ಹಾದನು ವೈದಿಕ ಮಾರ್ಗವನ್ನೇ ಧರಿಸಿ ಉಕುತಿಯನೇ ಸಾಧಿಸಿ ಕಲಿಯೊಳಗೆ ನಿಮ್ಮ ಪೂ ಜಕನಾಗಿಪ್ಪೆನೆಂದು ತಲೆವಾಗಲು ಇಂದು ಪ್ರಕಟವಾಯಿತು ಧರೆಯೊಳು 4 ದಿಕ್ಕುಗಳಂ ಮರದು ಧಿಗಿಧಿಗಿನೆ ಚಿಗಿದಾಡುತ್ತ ಉಕ್ಕಿದವು ಕಣ್ಣಿಂದ ಅಶ್ರು ಜಲಧಾರೆ ತಾ ಮೈಮರೆದು ದೇವಕಿ ನಂದನನ ನೆನೆದು ನಕ್ಕು ಕಿಲಿಕಿಲಿ ರಾಹಸ್ಯಗಳನುಚ್ಚರಿಸುತಾ ತಕ್ರ್ಕೈಸಿ ತಿಳುಪಿದನು ಮುಂದಣಾಗಮವೆಲ್ಲ ವೃತ್ತಾಂತ ಅಕ್ಕಟ ಅದ್ಭುತವೇನೆಂಬೆ 5 ಬನ್ನೂರು ಗ್ರಾಮದಲಿ ಜನಿಸಿದನು ಭೂಸ್ವರೂಪ ಮುನ್ನಿಲ್ಲದೇ ಬೆಳೆದು ಮುನಿ ಸುಬ್ರಾಹ್ಮಣ ರನ್ನು ಪಾಲಿಸುವ ಪರಮಾನಂದವುಳ್ಳ ಬ್ರಹ್ಮಣ್ಯತೀರ್ಥರ ಕರದಿ ಚೆನ್ನಾಗಿ ಪೋಷಿಸಿಕೊಂಡು ಉಪನೀತವಾಗಿ ಸನ್ಯಾಸಿ ಪಟ್ಟವನೆ ಧರಿಸಿ ಧರ್ಮದಲಿ ಸ ವಿದ್ಯವನೋದಿ ಧನ್ಯ ಕೀರ್ತಿಯಲಿ ಮೆರೆದಾ 6 ರಾಯಗದ್ದುಗೆನೇರಿ ಅವನಿಗೆ ಬಂದ ಮಹಾ ಕುಹುಯೋಗವ ನೂಕಿ ರಾಜ್ಯದೊಳಗೆ ಇದ್ದ ಸುವರ್ಣ ಛಾಯದಂತೆ ಕಾಂತಿಲೀ ನ್ಯಾಯಾಮೃತ ತರ್ಕ ತಾಂಡವ ಚಂದ್ರಿಕೆ ಎಂಬ ಸ್ಥಾಯವಾದರು ಪೊಂಪದಿ7 ಯಂತ್ರೋದ್ಧಾರಕನ ಪ್ರತಿಷ್ಠಿಸಿ ವಿಜಯೀಂದ್ರ ಸಂತ ವಾದಿರಾಜಗೊಲಿದು ಪುರಂದರ ಮಂತ್ರ ಸಿದ್ಧಿಯನೆ ಕೊಟ್ಟು ಭ್ರಾಂತಗೊಳಿಸುವ ಮಹಾ ಅನ್ಯಾಯ ಮತವೆಂಬ ಕಾಂತಾರ ಪಾವಕನೆ ವ್ಯಾಸಾಬ್ಧಿಯನು ಬಿಗಿದು ಚಿಂತಿತಾ ಫಲದಾಯಕ 8 ಮಧ್ವಮತವೆಂಬ ದುಗ್ಧಾಬ್ಧಿಗೆ ಪೂರ್ಣೇಂದು ಹೃದ್ವನಜದೊಳಗಿರಿಸಿ ಕೃಷ್ಣನ ಪದಾಂಬುಜವ ಚಿದ್ವಾತ್ಯದಲಿ ನಿಲಿಸಿ ಕಾವ್ಯದಲಿ ಕೊಂಡಾಡಿ ಸದ್ವೀರ ವೈಷ್ಣವರಿಗೆ ಪದ್ಧತಿಯನು ಪೇಳಿ ತವಕದಿಂದಲಿ ತಾವು ಸದ್ವೈಷ್ಣವ ಲೋಕ ಸಿರಿಮರಳೈದಿದರು ಪಾದದ್ವಯವ ಭಜಿಸುವವರೂ ಕೇಳಿ 9
--------------
ವಿಜಯದಾಸ
ವ್ಯಾಸಾ ಬದರಿ ನಿವಾಸಾ | ಎನ್ನಯ | ಕ್ಲೇಶ ನಾಶನಗೈಸು ಮೌನೀಶಾ | ಸಾಸಿರ ಮಹಿಮನೆ | ದೋಷರಹಿತ ಸುರ ಭೂಸುರ ಪರಿಪಾಲ ಶಾಶ್ವತ ವೇದ ಪ ಸತ್ಯವತಿ ವರಸೂನು ಭವತಿಮಿರ ಭಾನು | ಭೃತ್ಯವರ್ಗದ ಸುರಧೇನು | ಸತ್ಯಮೂರುತಿಯೆ ನೀನು | ಸ್ತುತಿಪೆ ನಾನು || ಹೊತ್ತು ಹೊತ್ತಿಗೆ ಸೂಸುತ್ತಿರಲೆನಗದು | ಅತ್ಯಂತ ಸುಖತರ | ಸುತ್ತವ ಸುಳಿಯೆಂದೆತ್ತಿ ಕಡೆಗೆಯಿಡು | ಎತ್ತ ನೋಡಲು ವ್ಯಾಪುತ ಸದಾಗಮ 1 ಲೋಕ ವಿಲಕ್ಷಣ ಋಷಿ | ಗುಣವಾರಿ ರಾಸಿ | ವೈಕುಂಠ ನಗರನಿವಾಸಿ | ನಾಕಾರಿಗಳ ಕುಲದ್ವೇಷಿ ಚಿತ್ರ ಸನ್ಯಾಸಿ | ಬೇಕೆಂದು ಭಜಿಪೆ ನಿಲಸಿ | ಜೋಕೆ ಮಾಡುವುದ | ನೇಕ ಪರಿಯಿಂದ | ನಿಕರ ತರಿಸದೆ | ಭೂಕಾಂತರು ನೋಡೆ | ಸಾಕಾರ ದೇವ ಕೃಪಾಕರ ಮುನಿ ದಿವಾಕರ ಭಾಸಾ2 ನಿರುತ ಎನ್ನಯ ಅರಿಷ್ಟ | ಮೆರೆವ ಉನ್ನತ ವಿಶಿಷ್ಟ | ಉರಗ ಕಿನ್ನರ ಗಂಧರ್ವರ | ಕರಕಮಲಗಳಿಂದ | ವರಪೂಜೆಗೊಂಬ | ಸಿರಿ ಅರಸನೆ ನಮ್ಮ ವಿಜಯವಿಠ್ಠಲ ಪರಾ | ಶರಸುತ ಬಲು ವಿಸ್ತರ ಜ್ಞಾನಾಂಬುಧೆ || 3
--------------
ವಿಜಯದಾಸ
ಶಂಭೋ ಪಾಲಯ ಮಾಂವಿಭೋ ಶಂಭೋ ಪಾಲಯ ದಂಭೋಳಿಧರಾದಿ ಮೌಳಿಜೃಂಭಿತಾಂಘ್ರಿ ಸರೋರುಹ ಪ ಇಂದಿರಾವಲ್ಲಭ ಮಿತ್ರ ಕಂದರ್ಪಕೋಟಿಭಾಗಾತ್ರ ನಿಂದಿತಾಘ ಸುಪವಿತ್ರ ಬೃಂದಿತ ಭುವನಸೂತ್ರ 1 ಗಂಗೇಂದುಮೌಳೇ ತ್ರಿಣೇತ್ರ ಭೃಂಗೀಶ ನಾಟ್ಯ ವಿಚಿತ್ರ ತುಂಗ ರಜತಗಿರಿತ್ರ ಮಂಗಳಾನಂತಚರಿತ್ರ 2 ವೈಕುಂಠನಿಲಯ ಬಾಣ ಕಾಕೋಲ ಕಂಠಾಭರಣ ಕರ್ಣ ಆಕಲಿತ ಗಜಾಜಿನ 3 ಮಾಲಿತ ಕರೋಟಿಧರ ಪಾಲಿತ ಲೋಕಸಾಕಾರ ಆಲಿಂಗಿತಾಂಗನಾಕಾರ ಶೂಲಾದ್ಯುದಾಯುಧಕರ 4 ರಜತೇತರಾದ್ರೀಷ್ವಾಸ ಭಜಿತ ವೆಂಕಟಾದ್ರೀಶಸುಜನ ಹೃತ್ಪದ್ಮಾಧೀಶ ಅಜಿತ ಕಕುದ್ಗಿರಿವಾಸ 5
--------------
ತಿಮ್ಮಪ್ಪದಾಸರು