ಒಟ್ಟು 4835 ಕಡೆಗಳಲ್ಲಿ , 124 ದಾಸರು , 3413 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ನೀನಲ್ಲದಿನ್ನಾರು ಸಲಹುವರೊ ಎನ್ನ ಪ ನಾನು ನನ್ನದು ಎಂಬ ದುರಭಿಮಾನಿಯನ್ನಅ.ಪ. ಶ್ರೀಮದಾಚಾರ್ಯರ ಪುಸ್ತಕ ಭಂಡಾರವನು ಪ್ರೇಮದಿಂ ಧರಿಸುತ ವೃಷಭನಾಗಿರ್ದು ಚರಿಸಿ ಕಾಮಪಿತನೊಲಿಮೆಯಿಂ ಮರಳಿ ಜನಿಸಿ ಗುರುಗಳ ಆ ಮಹಾಭಾಷ್ಯವರುಹಿದ ಜಯತೀರ್ಥ ಗುರುವೆ 1 ಬಾಲತನದಲಿ ಸಕಲ ಲೀಲೆಗಳ ತೊರೆದು ಕಾಲುಂಗುಟಾಗ್ರದಿ ನಿಂದು ತಪವಗೈದು ಶ್ರೀಲೋಲನ ಮೆಚ್ಚಿದಂಥ ಧೀರ ದೈವ ಭೂ- ಪಾಲನಂಶದ ಶ್ರೀಪಾದರಾಜ ಗುರುವೆ2 ಪಿತನ ಮತ ಧಿಕ್ಕರಿಸಿ ಶ್ರೀಪತಿಯೆ ಪರನೆಂಬ ಮತಿಪÉೂಂದಿ ಶಿಶುತನದಲಿ ನರಹರಿಯ ಒಲಿಸಿ ಅತಿಹಿತನಾದ ಪ್ರಹ್ಲಾದದೇವನಂಶದಿಂ ಕ್ಷಿತಿಯೊಳುದ್ಭವಿಸಿದ ವ್ಯಾಸರಾಜ ಗುರುವೆ 3 ಈ ಧರೆಯೊಳೆಸೆಯುತಿಹ ಉಡುಪಿಯೊಳು ನೆಲಸಿರ್ಪ ಯಾದವ ತೀರ್ಥಾಯ ಪದ ಸರಸಿರುಹ ಭೃಂಗ ಮೋದ ತೀರ್ಥಾರ್ಯರ ಪದಕರುಹನಾದಂಥ ಸೋದೆಯೊಳ್ರಾಜಿಸುವ ವಾದಿರಾಜ ಗುರುವೇ 4 ಕಂತುಜನಕನಿಗತ್ಯಂತ ಪ್ರಿಯನಾದ ಮತಿ ವಂತನಾ ವ್ಯಾಸಮುನಿಯೆ ನೀನಾಗಿ ಬಂದು ಸಂತಸದಲಿ ಸಾಧು ಜನರಿಷ್ಟ ಪೂರೈಸುತ ಮಂತ್ರಾಲಯದಿ ಮೆರೆವ ರಾಘವೇಂದ್ರ ಗುರುವೆ 5 ಜಲಜಭವನೂರುಭವನಂಶದಲಿ ಜನಿಸಿ ಕಲಿಯುಗದಿ ಹರಿನಾಮವೆ ಗತಿಯೆಂದು ಸಾರಿ ಹಲವು ಪದ ಸುಳಾದಿಗಳ ರಚಿಸಿ ಸಜ್ಜನರ ಕಲುಷಗಳ ಕಳೆದ ಪುರಂದರದಾಸರಾಯ 6 ಸಕಲ ಋಷಿಗಳ ಸಂಶಯವ ಪರಿಹರಿಸಿ ವೇದ ಉಕುತಿಗಳಿಂದ ಹರಿಯೆ ಪರನೆಂದು ಸ್ಥಾಪಿಸಿ ಭಕುತಿ ವೈರಾಗ್ಯನಿಧಿ ಭೃಗುಮುನಿಯೆಂದೆನಿಸಿದ ಮುಕುತಿಪಥ ತೋರಿಸಿದ ವಿಜಯದಾಸರಾಯ 7 ಸೂತ್ರ ಪುರಾಣಗಳ ರಚಿಸೆ ದಾಸತ್ವವಹಿಸಿ ಸಕಲ ಗ್ರಂಥಗಳ ಬರೆದು ಶ್ರಿಶಗರ್ಪಿಸುತ ಲೇಸು ಜಗಕೆಗೈದಂಥ ಗ ಣೇಶಾವತಾರಿ ಗೋಪಾಲದಾಸರಾಯ 8 ಸಿರಿ ರಂಗೇಶವಿಠಲನ ಕಾಂಬ ತೃಷೆಯಲಿ ಹರಿಗೆ ಹರಿಕಥಾಮೃತಸಾರ ಪಾನಗೈಯಲಿತ್ತ ನರಹರಿಯ ಕೃಪಾಪಾತ್ರ ಸಹ್ಲಾದನಂಶದ ಗುರುವರ ಶ್ರೀ ಜಗನ್ನಾಥದಾಸರಾಯ 9
--------------
ರಂಗೇಶವಿಠಲದಾಸರು
ನೀನಹುದೊ ನಮ್ಮೊಡಿಯ ಘನ ಗುರು ನಾ ನಿಮ್ಮ ಕಂಡೆ ಅಯ್ಯ ಧ್ರುವ ನಾ ನಿಮ್ಮ ಪರಿವಾರ ನಾ ನಿಮ್ಮ ಕಿಂಕರ ನೀ ನಮ್ಮ ಸಹಕಾರ ಬಡಿವಾರ 1 ನಾ ನಿಮ್ಮ ಬಾಲಕ ನೀ ನಮ್ಮ ಪಾಲಕ ನಾ ನಿಮ್ಮ ಸೇವಕ ನೀ ನಮ್ಮ ರಕ್ಷಕ 2 ನಾ ನಿಮ್ಮ ಉದ್ಧೇಶ ನೀ ನಮ್ಮ ಪ್ರಾಣೇಶ ನಾ ನಿಮ್ಮ ಸಹವಾಸ ನೀ ನಮ್ಮ ಅಭ್ಯಾಸ 3 ನಾ ನಿಮ್ಮ ಅಣುಗ ನೀ ನಮ್ಮ ಸರ್ವಾಂಗ ನಾ ನಿಮ್ಮ ಬಳಗ ನೀ ನಮ್ಮ ಬಳಗ 4 ನಾ ನಿಮ್ಮ ಶರಣ ನೀ ನಮ್ಮ ಕರುಣ ನಾ ನಿಮ್ಮ ನಿರ್ಗುಣ ನೀ ನಮ್ಮ ಭೂಷಣ 5 ನಾ ನಿಮ್ಮ ನಿರ್ಮಿತ ನೀ ನಮ್ಮ ಸಹಿತ ನಾ ನಿಮ್ಮ ಆಶ್ರಿತ ನೀ ನಮ್ಮ ಸುದಾತ 6 ನಾ ನಿಮ್ಮ ಅಂಕಿತವೃತ್ತಿ ನಿಮ್ಮ ನಮ್ಮ ವಸ್ತುಗತಿ ನಾ ನಿಮ್ಮ ಮಹಿಪತಿ ನೀ ನಮ್ಮ ಶ್ರೀಪತಿ 7
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ನೀನಾರು ಪೇಳೆನಗೆ ನಿರುಪಮ ಬಲಪೂರ್ಣ ಮಾನವರೊಳೀ ಪರಿಯ ಶೌರ್ಯವುಂಟೆ ಪ ದಾನವಂತಕನೆಂದು ಮಾನಸಕೆ ತೋರುತಿದೆ ಪ್ರಾಣಿಗಳಿಗೆಲ್ಲಾ ನೀ ತ್ರಾಣದಾಯಕನೆ ಅ.ಪ. ಆಕಾರದಲಿ ನೋಡೆ ನರವೇಷಧಾರಿ ಪ ರಾಕ್ರಮದಿ ಪರಿಕಿಸಲು ಪರಮಪುರುಷ ಶ್ರೀಕಂಠಚಾಪವನು ಖಂಡಿಸಿದ ಕಡುಧೀರ ಕಾಕುತ್ಸ್ಥ ಶ್ರೀರಾಮನೆಂದು ತೋರುವುದೆನಗೆ 1 ಕೋದಂಡಧರ ನಿನ್ನ ಕ್ರೋಧಾಗ್ನಿಗಂಜುತ ಮ ಪಥ ಬಿಡಲು ಲಂಕೆಗೈದಿ ಆ ದಶಾಸ್ಯನ ಕಂಠಪಂಕ್ತಿಯನು ಕಳಚಿಸಿದ ಆ ದಾಶರಥಿಯು ನೀನಲ್ಲದೆ ಬೇರಿಲ್ಲ 2 ಲೋಕಕಾರಣ ನೀನೆ ಲೋಕೇಶ ಲೋಕಧರ ಲೋಕಾಂತರಾತ್ಮಕನು ಲೋಕಜನಕ ಲೋಕರಕ್ಷಕ ಸಕಲ ಲೋಕನಿಯಾಮಕನು ಏಕಮೇವಾದ್ವಿತೀಯನು ಕರಗಿರೀಶನು ನೀನೆ 3
--------------
ವರಾವಾಣಿರಾಮರಾಯದಾಸರು
ನೀನುಪೇಕ್ಷೆಯ ಮಾಡೆ ಬೇರೆ ಗತಿಯಾರೆನಗೆನಿಗಮಗೋಚರ ಮುಕುಂದ ಪ ಗಾನರಸಲೋಲ ಆಗಮಶೀಲ ಭಕ್ತಪರಿಪಾಲಸನ್ನುತ ಗೋಪಾಲ ಬಾಲ ಅ ಸಿರಿನಲ್ಲ 1 ದಿವಿಜ ಮುನಿವಂದ್ಯ ಅಭಿಮಾನಿ ಎನ್ನನೂ ಸಲಹದೆ - ಬರಿದೆ 2 ಈಶಣತ್ರಯದ ಬಯಲಾಸೆಯಲಿ ಭ್ರಮೆಗೊಂಡುಬೇಸರದಿ ಮನದಿ ನೊಂದುಹೇಸಿಗೆಯ ಸಂಸಾರ ಮಾಯಕ್ಕೆ ಸಿಲುಕಿ ನಾಘಾಸಿ ಪಡಲಾರೆನಿಂದುವಾಸುದೇವನೆ ನಿನ್ನ ಪೊಂದಿ ಬದುಕುವೆನೆಂದುಆಸೆ ಪಡುತಿಹೆನು ಇಂದುದಾಸನೆಂದೆನಿಸಿ ಡಂಗುರ ಹೊಯ್ಸಿ ಬಡದಾದಿಕೇಶವನೆ ಕರುಣಿಸಯ್ಯಾ ಬಂದು3
--------------
ಕನಕದಾಸ
ನೀನೆ ಎನಗಾಗಿ ಬಂದು ನೀನೆ ನೀನಾಗೆನಗಿಂದು ಧ್ರುವ ಅಪ್ಪನಾಗೆನಗೆ ನೀ ಬಂದು ತಪ್ಪು ಕ್ಷಮೆ ಮಾಡಿದಿಂದು ಒಪ್ಪಿಸಿಕೊಳಲೆನ್ನ ಬಂದು ಅಪ್ಪಳಿಸಿದೆ(?) ಜನ್ಮವಿಂದು 1 ಅಮ್ಮನಾಗೆನಗೆ ನೀ ಬಂದು ರಂಬಿಸಿದೆ ಎನಗಿಂದು ಸಮ್ಯಜ್ಞಾನದಲಿ ನೀ ಬಂದು ಸುಮ್ಮನÉದೋರಿದೆನಗಿಂದು 2 ಅಣ್ಣನಾಗೆನಗೆ ನೀ ಬಂದು ಕಣ್ಣಿನೊಳಗೆ ಸುಳಿದಿಂದು ಸುಗುಣ ಸಹಕಾರದಲಿ ಬಂದು ಪುಣ್ಯಚರಣದೋರಿದಿಂದು 3 ಅಕ್ಕನಾಗೆನಗೆ ನೀ ಬಂದು ಅಕ್ಕಿದೆ ಆತ್ಮದಲಿಂದು ಸಾಕಿ ಸಲಹಲೆನ್ನ ಬಂದು ಸಿಕ್ಕಿದಕ್ಕಿದೆ ಎನಗಿಂದು 4 ತಮ್ಮನಾಗೆನಗೆ ನೀ ಬಂದು ತಮ್ಮೊಳರ್ಪಿಸಿಕೊಂಡೆ ಇಂದು ತಮ್ಮ ನಿಜವಾದಾರ(?) ಬಂದು ತನುವಿನೊಳಗೆ ಸುಳಿದಿಂದು 5 ತಂಗಿಯಾಗೆನಗೆ ನೀ ಬಂದು ಹಿಂಗಿಸಿದೆ ಭವವಿಂದು ಸಂಗ ಸುಖವದೋರ ಬಂದು ಅಂತರಂಗದಿ ಸುಳಿದಿಂದು 6 ಈಸು ಪರಿಯಲೆನಗಿಂದು ಆಶೆಪೂರಿಸಿದೆನಗಿಂದು ಭಾಸ್ಕರ ಗುರುವಾಗಿ ಬಂದು ಭಾಸಿ ಪಾಲಿಸಿದೆನಗಿಂದು 7
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ನೀನೆ ಕಾಮಿಸಿ ನಿರುತವು ಕೆಡುವೆ ಪ ಸ್ವರೂಪವರಿಯದೆ ನೀ ಕರೆಕರೆ ಪಡುವೆ 1 ಭ್ರಾಂತಿಯಪಡುತಲಿ ಬಾಯಿ ಬಾಯಿ ಬಿಡುವೆ 2 ನಾಯಂದದಿ ಪರಸ್ತ್ರೀಯರ ಬಯಸುತ ಹೇಯನೆನಿಸಿಕೊಂಡು ನೊಯ್ಯುವೆಯಲ್ಲದೆ 3 ಮಲಮೂತ್ರದಿ ನೀ ಮಲಗಿರಲಿಲ್ಲವೇ ಮರೆತು ಯೌವ್ವನ ಗರ್ವದಲಿ ತಲೆ ತೂಗುತ4 ಪರಿಪರಿವಿಧದಲಿ ಭಕ್ತರ ಪಾಲಿಪ ಗುರುರಾಮವಿಠಲನ ಚರಣವ ನಂಬದೆ 5
--------------
ಗುರುರಾಮವಿಠಲ
ನೀನೆ ಗತಿ ಎನಗಿನ್ನು ಕರುಣಿಸು ಮಾಧವ ದೀನನ ಮರೆಯದಿರು ಸಿರಿಯರ ಜೀವ ಪ ನೀನೆ ಕರುಣಾಳು ಭಕ್ತಜನರಭಿಮಾನಿ ನೀನೆನ್ನ ಬಿಟ್ಟ ಬಳಿಕ ಕಾಮಿತವ ಪೂರೈಸಿ ಕಾಯ್ವರಕಾಣೆನಾರನು ಕಮಲನಾಭ ಅ.ಪ ಎಡಬಿಡದೆನ್ನನು ಕಾಡುತಿರುವ ಅತಿ ಜಡಭವ ಕಡುದು:ಖ ತಡಿಲಾರೆನಭವ ಅಡರಿಕೊಂಡೆನ್ನ ಸುಡುತಲಿರುವ ಒಡಲತಾಪ ಗಡನೆ ಬಿಡಿಸಿ ಬಿಡದೆ ಎನ್ನನು ಪಿಡಿದು ರಕ್ಷಿಸು ಮಡದಿಗಕ್ಷಯದುಡುಪು ಇತ್ತನೆ 1 ಶರಧಿಸಂಸಾರದ ಉರುತರ ಪರಿಬಾಧೆ ಕಿರಿಕಿರಿ ಪರಿಹರಿಸಿ ಪೊರೆಯಯ್ಯ ಜವದಿ ಶರಣುಮಾಡುವೆ ಶರಣಜನರ ಕರುಣಮಂದಿರ ಮರೆಯದಿರೆಲೊ ತರಳ ನಿರುತದಿ ಚರಣಸ್ಮರಿಸಿ ಕರೆಯೆ ಕಂಬದಿ ಭರದಿ ಬಂದನೆ 2 ಮುಂದೆನಗೆ ಭವಬಂಧ ಎಂ ದೆಂದಿಗಿಲ್ಲದಂತೆ ತಂದೆ ಕರುಣಿಸು ದಯಾ ಸಿಂಧು ಶ್ರೀರಾಮ ವಂದಿ ಭಜಿಸುವೆ ಮಂದರಾದ್ರಿ ಮಂದಿರನೆ ತ್ವರ ಬಂದು ಕಾಯೊ ಬಂಧನದಿ ಜಗ ತಂದೆ ನಿಮ್ಮ ಪಾದಕೆಂದು ಪೂವಗೆ (?) ಬಂದು ಪೊರೆದನೆ 3
--------------
ರಾಮದಾಸರು
ನೀನೆ ಗತಿ ಮುಕುತೆನೆಗೆ ಅನಂತ ಜನುಮಗಳಲಿ ಪ ಆನೇನರಿಯೆ ಗರುಡಗಮನ ಸಿರಿಕೃಷ್ಣ ರಾಯಾ ಅ.ಪ ಅನ್ಯವಾರ್ತೆ ಅನ್ಯಸಂಗ ಅನ್ಯಜನರಾರಾಧನೆಅನ್ಯಸತಿ ಅನ್ಯಕರ್ಮ ಮೊದಲು ಸಕಲತನ್ನು ಮನ್ನ(=ತನುಮನ) ವಾಕ್ಯಗಳಿಂದ ಜರಿದೆ ನಿನ್ನವರೊಳುಎನ್ನ ಕೂಡಿಸೊ ನಿನ್ನ ಚರಣ ಭಕುತಿಯಲಿ ಶ್ರೀಶ 1 ಅಂದು ವೇದೋದ್ಭವಳ ಮೊರೆಯನು ಕೇಳಿ ಕಾಯ್ದಂತೆಮಂದ ಗಜೇಂದ್ರನಿಗೊಲಿದು ರಕ್ಷಿಸಿದ ಪರಿಯಂತೆತಂದೆತಾಯಿ ಬಂಧುಬಳಗ ಎಂದೆಂದು ನೀನೇ ದಯಾ-ಸಿಂಧು ನಿನ್ನ ದಾಸರ ದಾಸನೆಂದೆನಿಸೆನ್ನ2 ಪಾದ ಜಂಘೆ ಜಾನೂರುಕಟಿಘನ್ನ ಬಾಹು ಉದರವಕ್ಷ ಭುಜ ಕುಂತಳದಿಚನ್ನ ಕಿರೀಟ ಸರ್ವಾಲಂಕಾರದಿಂ ಶೋಭಿಸುವನಿನ್ನ ಮೂರ್ತಿಯನ್ನೆ ತೋರೊ ಭಕ್ತವತ್ಸಲ ಸಿರಿಕೃಷ್ಣ3
--------------
ವ್ಯಾಸರಾಯರು
ನೀನೆ ಗತಿಯೊ ಎನಗೆ ಜಾನಕೀಶನೆ ಎನ್ನ ಮಾನದಿಂ ಕಾಯಲಿಕ್ಕೆ ಪ ದೀನರ ಸಮಯಕ್ಕೆ ನೀನಾಗದಿರ್ದರೆ ಜ್ಞಾನಿಗಳೊಪ್ಪುವರೇ ಜಾಹ್ನವೀಜನಕ 1 ಮೃತ್ತಿಕೆ ಬಾಯೊಳು ತತ್ತರಬಹುತಿಹ್ಯೆ ಭಕ್ತನ ಪಿಡಿದೆತ್ತಿ ತುರ್ತು ಸಲಹು ದೇವ 2 ಉಗ್ರತಾಪದಿ ಸಮಗ್ರ ಪರಿಹರಿಸೆನ್ನ ಶೀಘ್ರದಿ ಬಾ ಭಕುತಾಗ್ರಣಿ ಶ್ರೀರಾಮ 3
--------------
ರಾಮದಾಸರು
ನೀನೆ ದಯಾನಿಧಿಯು ಶ್ರೀ ಗುರುರಾಯ ನೀನೆ ದಯಾನಿಧಿಯು ಧ್ರುವ ಕರುಣದಿ ಕುಂತಿಯ ಪುತ್ರರಿಗೆ ಒಲಿದು ಕಾಳ ನಿರ್ಮಿಸಿ ಕೌರವರಳಿದು ಉಳಿಯದೆ ಇಳೆಯೊಳು ವಂಶವ ಸವರಿದ ಶೇಷಶಯನ ಶ್ರೀ ಕೇಶವ ನೀನೆ 1 ನರಗೊಲಿದು ನರಕಾಸುರನ ಮರ್ದಿಸಿ ನಾರಗನೆಂದಜಮಿಳನ ನೀ ತಾರಿಸಿ ನಾರದಗೊಲಿದು ನಾಟ್ಯವನಾಡಿದ ನರಹರಿಯು ನಾರಾಯಣ ನೀನೆ 2 ವೇದವ ಕದ್ದೊಯಿದಸುರನ ಸೀಳಿ ಮಚ್ಛವತಾರದ ರೂಪವ ತಾಳಿ ಮಾವನ ಕೊಂದ ಮಾನ್ಯರ ಮಡುಹಿದ ಮಾಧವ ನೀನೆ 3 ಗೋಕುಲದಲಿ ಪುಟ್ಟಿ ಧರೆಯೊಳು ಬೆರಳಲಿ ಗೋವರ್ಧನ ಗಿರಿಯನೆತ್ತಿ ಗೋಕುಲ ಕಾಯ್ದಿ ಗೋಪಿಯರಿಗೊಲಿದ ಗೋಪಾಲಕೃಷ್ಣ ಗೋವಿಂದನು ನೀನೆ4 ಸೃಷ್ಟಿನೆಲ್ಲ ಬೆನ್ನಿಲಿ ತಾಳಿದ ಶೇಷನ ಸಂ ಕಷ್ಟವ ಪರಿಹರಿಸಿದ ಶಿಷ್ಟ ವಿಭೀಷಣಗೊಲಿದು ಪಟ್ಟವಗಟ್ಟವು ವಿಷ್ಣವು ನೀನೆ 5 ಮದನನೊಲಿದು ಕಾಳಿಂಗನ ತುಳಿದು ಕದನದಲಿ ಬಾಣಾಸುರನಳಿದು ಮೇದಿನಿಯೊಳು ಮರೆ ಇಲ್ಲದೆ ದೈತ್ಯರ ಮರ್ದಿಸಿದ ಮಧುಸೂದನನು ನೀನೆ 6 ತ್ರಿಪುರವನಳಿದು ತ್ರಿಗುಣವ ತಾಳಿದ ತೆತ್ತೀಸ ಕೋಟಿ ದೇವರುಗಳಿಗಾಳಿದ ಅಕ್ರೂರಗೊಲಿದು ಚರಿತ್ರವದೋರಿದ ತ್ರಿಜಗಪತಿ ತ್ರಿವಿಕ್ರಮ ನೀನೆ7 ವಾಲಿಯನಳಿದು ವಾಲ್ಮೀಕಿಗೊಲಿದು ಬಲಿಚಕ್ರನ ಮುನಿಮುಂದಲಿ ಸುಳಿದು ಬ್ರಾಹ್ಮಣನಾಗಿ ದಾನವ ಬೇಡಿದ ಮಾನ್ನವಗೊಲಿದ ಶ್ರೀ ವಾಮನ ನೀನೆ 8 ಸೃಷ್ಟಿನೆಲ್ಲ ನಿರ್ಮಿಸಿ ವಕ್ಷ ಸ್ಥಳದಲಿ ಶ್ರೀ ಮಹಾಲಕ್ಷ್ಮಿಯ ಧರಿಸಿದ ಶ್ರೀನಿಧಿ ಶ್ರೀಪತಿ ಶ್ರೀಗುರುಮೂರುತಿ ಶ್ರೀದೇವಿಗೊಲಿದಿಹ ಶ್ರೀಧರ ನೀನೆ 9 ದಾಸರ ಕ್ಲೇಶಕಿಲ್ಮಿಷಗಳ ತೊಳೆದು ಅಂಬರಿಷ ರುಕ್ಮಾಂಗದಗೊಲಿದು ಶುಕ ಶೌನಕ ಪರಾಶರ ಮುನಿಗಳಿಗೆ ಹರುಷನಿತ್ತ ಹೃಷಿಕೇಶನು ನೀನೆ 10 ಕ್ಷಿತಿಯೊಳು ದೃಢ ಪತಿವ್ರತೆಗೊಲಿದು ಯತಿ ಮುನಿಗಳಿಗಿನ್ನು ಗತಿಗಳನಿತ್ತು ಪತಿತರ ತಾರಿಸಿ ಪಾವನಗೈಸಿದ ಪರಂಜ್ಯೋತಿ ಪದ್ಮನಾಭನು ನೀನೆ 11 ದೇವಕಿಗೊಲಿದು ಸ್ಥಾಪಿಸಿ ಧರೆಯೊಳು ದ್ವಾರಕಿಯಲಿ ನಿಜ ಲೀಲೆಯು ತೋರಿದ ದುರಿತ ವಿಧ್ವಂಸನ ದೇವಕಿ ಪುತ್ರ ದಾಮೋದರ ನೀನೆ 12 ಸಿದ್ದ ಶರಣರಿಗೊಲಿದ ಸದ್ಗತಿ ಸುಖಸಾಧನ ಸಹದೇವಗದೋರಿದ ಸಂಭ್ರಮದಿ ಸುಧಾಮಗ ಒಲಿದು ಸಂತೋಷವನಿತ್ತ ಸಂಕರುಷಣ ನೀನೆ 13 ವಸುಧಿಯೊಳು ಭಸ್ಮಾಸುರನ ಮರ್ದಿಸಿ ಭಾಷೆಯನಿತ್ತು ಭಕ್ತರ ಪಾಲಿಸಿ ಋಷಿ ವೇದವ್ಯಾಸಗೊಲಿದಾತನು ವಸುದೇವಸುತ ವಾಸುದೇವನು ನೀನೆ 14 ವಿದುರುದ್ಧವ ಗರುಡಗೊಲಿದು ಭೃಗುಮುನಿ ಕಪಿಲ ಯೋಗೇಂದ್ರನ ಸಲಹಿದ ಸ್ಥಿರಪದವಿತ್ತರೊಂದು ಮಂದಿಗೆ ಪ್ರಸನ್ನವಾದ ಪ್ರದ್ಯುಮ್ನನು ನೀನೆ 15 ಸೀತಾ ಸುದ್ದಿಯ ತಂದವಗೊಲಿದು ಹತ್ತು ತಲೆಗಳ ಇದ್ದವನಳಿದು ಕದ್ದುಬೆಣ್ಣೆಯ ಮುದ್ದೆಯ ಮೆದ್ದು ಉದ್ದವಗೊಲಿದ ಅನಿರುದ್ಧನು ನೀನೆ 16 ಸೋಕಿಸಿ ಪೂತಣಿಯ ಕಾಯವು ಹೀರಿದ ಭಕ್ತ ಪುಂಡಲೀಕನ ಸಲಹಿದ ಭಕ್ತಿಗೆ ಒಲಿದು ಮುಕ್ತಿಯನಿತ್ತ ಪರಮ ಪರುಷ ಪುರುಷೋತ್ತಮನು ನೀನೆ 17 ಅಕ್ಷಯವೆಂದು ರಕ್ಷಿಸಿ ಸಭೆಯೊಳು ದ್ರೌಪದಿ ಕರುಣಕಟಾಕ್ಷದಿ ಸಲಹಿದ ಭಕ್ತವತ್ಸಲನಾಗಿ ಗಜೇಂದ್ರಗೆ ಅಧೋಕ್ಷಜ ನೀನೆ 18 ನರನಾರಿಯು ನಾಂಟೀಶರನಾಗಿ ನಖಮುಖದಲಿ ಹಿರಣ್ಯಕನ ಸೀಳಿ ಭಕ್ತಪ್ರಹ್ಲಾದಗ ಒಲಿದು ಸ್ತಂಭದಿ ಪ್ರಕಟಿಸಿದ ನರಸಿಂಹನು ನೀನೆ 19 ಅನಿಳ ಸ್ನೇಹಿತ ಅಜಗ್ನಾನಗ ಒಲಿದು ಅಹಲ್ಯಾ ಶಾಪ ವಿಮೋಚನ ಮಾಡಿದ ನೆಚ್ಚಿದ ಧ್ರುವನ ನಿಜ ಭಕ್ತಿಗೆ ಒಲಿದು ಅಚಲ ಪದವಿತ್ತುಚ್ಯುತ ನೀನೆ 20 ಜಗದೊಳು ಭಕ್ತಜನರಿಗೆ ಒಲಿದು ಜಾಹ್ನವಿ ನಿರ್ಮಿಸಿ ಜನಕನ ಸಲಹಿದ ಸಾಧು ಸಜ್ಜನ ಮುನಿ ಸಂಜೀವನ ಜಾನಕೀಪತಿ ಜನಾರ್ಧನನು ನೀನೆ 21 ಅಂಗದಗೊಲಿದಾನಂದವನಿತ್ತು ಕುಂದದೆ ಕರೆದುಪಮನ್ಯುನ ಸಲಹಿದ ದಿನಕರ ಚಂದ್ರ ಕಳಿಯಗಳಿತ್ತು ಇಂದ್ರಗೆ ಒಲಿದ ಉಪೇಂದ್ರನು ನೀನೆ 22 ಧರೆಯೊಳು ಭಕ್ತನ ಜನ್ಮವು ಹರಿಸಿ ಹರಿಶ್ಚಂದ್ರನ ಕ್ಲೇಶವು ಪರಿಹರಿಸಿದ ಸುರಮುನಿಗೊಲಿದ ಶ್ರೀ ಹರಿಯು ನೀನೆ 23 ಕಾಳಿ ಮಥನವು ಮಾಡಿ ಕರುಣದಿ ಸುರರಿಗೆ ಅಮೃತವನಿತ್ತು ಸಲಹಿದ ಕಲ್ಕ್ಯಾವತಾರದ ಲೀಲೆಯ ತೋರಿದ ಕಪಟ ನಾಟಕ ಶ್ರೀ ಕೃಷ್ಣನು ನೀನೆ 24 ಸಂಧ್ಯಾನದ ಸಾಹಾಯವನಿತ್ತು ಕಾಯದಿ ಸದ್ಗತಿ ಸಾಧನದೋರಿದ ನರಕೀಟಕ ಮಹಿಪತಿ ತಾರಕ ಗುರುಮೂರ್ತಿಯ ಪರಮ ದಯಾನಿಧಿಯು ನೀನೆ 25
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ನೀನೆ ಪಾಲಿಸೊ ಎನ್ನ ಮಾರುತಿರಾಯ ಪ ನೀನೆ ಪಾಲಿಸೊ ಮಹಾನುಭಾವನೆ ಸದಾ ಙÁ್ಞನ ಭಕುತಿನಿತ್ತು ಮಾನಾದಿ ನೀ ವೇಗ ಅ.ಪ ನಿನ್ನ ಆಧಾರ ಲೋಕಾ ಜನರು ಸದಾ ನಿನ್ನ ಭಜಿಸುವೊರೇಕಾ ಪ್ರಕಾರದಿ ನಿನ್ನ ಸೇವಿಪರನೀಕಾ ಸಂಗಾವಿತ್ತು ನಿನ್ನ ಧ್ಯಾನಿಪ ವಿವೇಕಾ ಮತಿಯನಿತ್ತು ಮನ್ನಿಸೊ ಮಜ್ಜನಕಾ ನಿನ್ನಾ ಭಜಿಪರಿಗೆ ಅನ್ಯಾಲೋಕಗಳುಂಟೆ ಘನ್ನಾ ಹರಿಯ ಲೋಕವನ್ನೆ ಸೇರುವರಯ್ಯಾ 1 ರಂತರ ದೊಳಗಿಹನು ಎಂದು ನಿನ್ನಾ ನಂತ ರೂಪಗಳನ್ನು ಭಜಿಸುವ ಗಂತು ಜ್ಞಾನವನ್ನು ನೀಡುತ ಜನ ರಂತರದಲಿ ನೀನು ನಿಂತು ಪಾಲಿಸಿ ಜೀವರಂತೆ ಗತಿಯನಿತ್ತು ಕಂತುºರಾದ್ಯರ ಸಂತತಿ ವಂದ್ಯನೆ 2 ಸೀತಾರಾಮನ ಪಾದವಾ ಸೇವಿಸಿ ನಿತ್ಯ ಪಾತಕಾಂಬುಧಿಗೆ ದಾವಾನಂತೆ ಜಗದಿ ಈ ತೆರದಲಿ ಮೆರೆವಾನೆಂದು ಈಗ ಸೋತು ನಾ ಬಂದೆ ದೇವಾ ನೀನೇ ಎನ್ನ ಮಾತು ಲಾಲಿಸೊ ದ್ಯುಧವಾ ಮಾತರಿಶ್ವ ನಿಜ ದೂತಾನು ನಾನಯ್ಯ ನೀತ ಗುರು ಜಗನ್ನಾಥವಿಠಲಪ್ರಿಯ 3
--------------
ಗುರುಜಗನ್ನಾಥದಾಸರು
ನೀನೆ ರಕ್ಷಿಸಬೇಕು ಹೀನಬುದ್ಧಿಯ ನರನ ಪಯೇನೆಂಬೆ ವಿಷಯಗಳೊಳು ಮನಮುಳುಗಿ ಧ್ಯಾನವನೊಮ್ಮೆಯು ಮಾಡದ ಮರುಳ ಅ.ಪಕಂಡುದನೆಲ್ಲವ ಬಯಸಿ ದಂಡಿಸಲಾರದೆ ಮನವಕೆಂಡಕೆ ಮುತ್ತುವ ಶಲಭನ ತೆರದಿ ಕಂಡು ನೊಂದು ಮತ್ತದ ಬಿಡದಿರಲು 1ಕಾಯವ ನಿತ್ಯವಿದೆಂದು ಹೇಯದಿ ತೋರಲು ಕಂಡು ನೋಯದೆ ತಾಪತ್ರಯಗಳನುಂಡು ಆಯಸಗೊಳುತಿರಲಿದ ನೀ ಕಂಡು 2ದುಃಖದಿ ನೋವರ ನೋಡಿ ಸುಕ್ಕುತಲಾಕ್ಷಣದೊಳಗೆದುಃಖವು ಬಂದರೆ ಪರಿಹರವಾಗದೆ ಸಿಕ್ಕಿರೆ ಬಲೆಯೊಳು ದುಃಖಿಸುತಿರಲು 3ಪ್ರಾಚೀನ ಕರ್ಮಗಳು ವೀಚಿಗಳಂದದಿ ಬರಲುಸೂಚಿಸಿ ಶಿಕ್ಷಿಪ ಶಾಸ್ತ್ರದ ನೆಳಲೊಳು ಚಾಚದೆ ತಾವೆ ತಾವಾಗಿರಲು 4ದುರಿತಗಳೆ ಬಹುವಾಗಿ ಸ್ಫುರಿಸುತ್ತಲಿರಲಾಗಿಮರುಗುವ ರಕ್ಷಕ ನೀನಿರಲಾಗಿ ಮರೆಯೊಗದಿರಲೀ ದುರಿತವ ನೀಗಿ 5ದ್ವಂದ್ವಗಳೊಂದೆಂದೊಮ್ಮೆ ನಿಂದಿರೆ ಕರ್ಮದ ಹೆಮ್ಮೆಹೊಂದದು ಎಂದಿಗು ಅದು ತನ್ನ ಸೊಮ್ಮೆಯೆಂದಿಗೆ ಹೃದಯದಿ ನಿಲುವೆ ನೀನೊಮ್ಮೆ 6ಮಾನವ ಬಿಟ್ಟರೆ ಬುದ್ಧಿ ಜ್ಞಾನದ ಸಾಧನ ಸಿದ್ಧಿತಾನೇ ಬರುವುದು ಪುಣ್ಯಸಮೃದ್ಧಿ ಜ್ಞಾನಾತ್ಮಕ ಕೃಷ್ಣ ನೀನಿರು ಹೊದ್ದಿ 7ಭಜಿಸಿದನೆ ಭಕ್ತಿಯಲಿ ಯಜಿಸಿದನೆ ಯಾಗದಲಿದ್ವಿಜತನವನ್ನಾದರು ಬಿಡದಿದ್ದನೆ ಅಜಮಿಳನೆ ನಿನ್ನೊಲವಿಗೆ ಸಾಕ್ಷಿ 8ಕರುಣಕಟಾಕ್ಷವ ನೀನು ುರಿಸಲು ಧನ್ಯನು ನಾನುತಿರುಪತಿ ನಿಲಯ ಶ್ರೀ ವೆಂಕಟ ಕಾಣು ಗುರು ವಾಸುದೇವರೂಪಿನ ಚಿದ್ಭಾನು 9ಓಂ ದಾನವೇಂದ್ರ ವಿನಾಶಕಾಯ ನಮಃ
--------------
ತಿಮ್ಮಪ್ಪದಾಸರು
ನೀನೆ ಸಜ್ಜನರ ಬಂಧು ಪ ಕರಿಮರಿಬಳಗ ಬಂದೊದಗಿದರೇನು ಪರಿಪರಿ ಕ್ಲೇಶವ ಬಿಡಿಸಲಿಲ್ಲ ಹರಿ ನೀನೆ ಗತಿಯೆಂದರೆ ಆ ಕ್ಷಣದಲ್ಲಿ ಕರಿಬಂಧನ ಪರಿಹರಿಸಿದೆ ಕೃಷ್ಣ 1 ಪಿತರು ಮಾತೆಯರಿದ್ದರೇನು ಸುತರಾಪತ್ತಿಗೊದಗಲಿಲ್ಲ ಗತಿ ನೀನೆಂದರೆ ಧ್ರುವ ಪ್ರಹ್ಲಾದರಿ- ಗ್ಹಿತ ಮಾಡಿದೆ ಶ್ರೀಪತಿ ಪರಮಾತ್ಮ 2 ವಲ್ಲಭರೈವರಿದ್ದರೇನು ವಸನ ದ್ರೌಪದಿಗುಡಿಸಲಿಲ್ಲ ಫುಲ್ಲಾಕ್ಷನೆ ಗತಿಯೆಂದರೆ ನೀ ತಡ- ವಿಲ್ಲದಲಕ್ಷಯ ನೀಡಿದೆ ದೊರೆಯೆ 3 ಮನೆಧನ ಧಾನ್ಯಗಳಿದ್ದರು ಧನಂಜಯ- ನ್ವನವಾಸಗಳನು ಬಿಡಿಸಲಿಲ್ಲ ವನಜಾಕ್ಷನೆ ವಾರಣಾವತಿ ದೊರೆತನ ವಿನಯದಿ ಕೊಟ್ಟಿದ್ದಿಂದಿರಾಪತಿಯೆ 4 ಭವ ಘೋರ ದುರಿತ ಯಮಬಾಧೆಗಳ ತಪ್ಪಿಸುವೋರಿಲ್ಲ ಶ್ರೀರಮಣನೆ ಭೀಮೇಶಕೃಷ್ಣನೆಂದು ಸಾರುವರಿಗೆ ಕರುಣಾವಾರಿಧಿ ಹರಿಯೆ 5
--------------
ಹರಪನಹಳ್ಳಿಭೀಮವ್ವ
ನೀನೆ ಸರ್ವ ಸೂತ್ರಧಾರನು ಪ ಕರ್ತು ನೀನೆ ಆದಿಶಕ್ತಿ ವಸ್ತು ಅ.ಪ ಮೂರು ಗುಣಗಳಲ್ಲಿ ನಿಲ್ಲಿಸಿ|| ಸಾರ ಮೂರು ಆರು ದೋಷದೂರ | ಮೂರು ಸುಖಕ್ಕೈಕ್ಯನೆನಿಸೊ 1 ತರಳ ಧ್ರುವನ ಮನವ ಪರಿಕಿಸಿ | ಮೇಲ್ ಲೋಕವಿತ್ತೆ | ನಿರತ ಭಕ್ತಿ ಪಾಲಿಸಿದ | ದುರಿತಹರನೆ ಶರಣು ಶರಣು 2 ಕರೆದು ಪತ್ನೀಸುತರನಿತ್ತು | ನಿಲದೆ ಮೋಕ್ಷದೊಳಗೆ ಪೊರೆದೆ 3 ಭೋಗದೀಶರಾಗಿ ಸುಖದ | ಸಾಗರದೊಳು ಮೆರೆದರಯ್ಯ 4 ತಂದೆ ಶ್ರೀನಿವಾಸ ನಿನ್ನ | ಮಂದಿರದೊಳೆನ್ನ ಸಲಹೊ 5
--------------
ಸದಾನಂದರು
ನೀನೇ ಅನಾಥ ನಾನೇ ಸನಾಥ ಪ ಜ್ಞಾನಿಗಳಾಡುವರು ಯೀಪರಿ ಮಾತಾ ಅ.ಪ ನಂಬಿರುವುದೆ ಸುಳ್ಳು ನಂಬಿದಿರುವದೆ ನಿಜ ಹಂಬಲಿಸಿದರೇನು ತುಂಬುವುದಿಲ್ಲ 1 ಇಲ್ಲಾ ಎಂಬೋದುಂಟು ಉಂಟೂ ಎಂಬೋದಿಲ್ಲ ಬಲ್ಲರು ಸರ್ವರು ಬಾಯಿಮಾತಲ್ಲ 2 ಮಾನಾಭಿಮಾನ ನಿನ್ನಧೀನವು ಹರಿಯೇ 3 ಕಾಣೋದು ಕೇಳೋದು ಮಾಣಾದೆ ಮಾಡೋದು ನೀನೆ ಯನ್ನೊಳಗಿದ್ದು ನಡೆಸುತ್ತಲಿರುವೆ 4 ಎನಗೇ ನೀನೆ ತಂದೆ ನಿನಗೇ ತಂದೆ ಕಾಣೆ ಸಿರಿನಲ್ಲ 5 ನಿನ್ನೊಳಗೆ ಜಗವು ಜಗದೊಳಗೆ ನೀನೆ ಪನ್ನಗ ಶಯನಾ ಪಾವನ ಚರಿತನೆ 6 ಸರುವಾರೊಳಗೂ ಗುರುರಾಮ ವಿಠ್ಠಲ ಪರಿಪೂರ್ಣನೆಂಬೋದು ಪ್ರಹ್ಲಾದ ಬಲ್ಲ7
--------------
ಗುರುರಾಮವಿಠಲ