ಒಟ್ಟು 3655 ಕಡೆಗಳಲ್ಲಿ , 119 ದಾಸರು , 2543 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಭಜಿಸೋ ಬೇಗ ಹರಿಯ ಅಜಭವಾಶ್ರಿತ ನಿಜ ದೊರೆಯ ಪ ಕಾಮಕ್ರೋಧವ ಬಿಟ್ಟು ಮನಸಿನೊಳಗೆ ರಾಮ ಮೂರುತಿಯಿಟ್ಟು ಪ್ರೇಮ ತಿಳಿದಷ್ಟು ಆದಷ್ಟು ಕಾಮಿತಾರ್ಥವ ಕೊಟ್ಟು ಹೇಮಗರ್ಭಭವ ಸೋಮ ಸೂರ್ಯರಿಗೆಲ್ಲ 1 ನಿಯಮನ ಮಾಡುವ ಮಹಾ ದೈವವ ಬಿಟ್ಟು ಇರಸಲ್ಲ ಜಗದೊಳಜಾಮಿಳ ಬಲ್ಲ ನಂಬಿ ಕೆಟ್ಟವರಿಲ್ಲ ಧ್ರುವಬಲ ಇಂಬುಗೊಂಡರಲ್ಲ ತುಂಬಿದ ಸಭೆಯೊಳಾಂಬುಜಾಕ್ಷಿ ಅಂಬರ ದೃಷ್ಟಿ ಸುರಿಸಿದ2 ಒಂದೇ ಮನದಿ ಭಜಿಸೆ ಭವವೆಂಬೋ ಬಂಧನವ ಬಿಡಿಸುವ ಮುಂದೆ ಮುಕ್ತಿಯ ಹರಿಸಿ ಕೊಡುವನು ಚಂದದಿ ಅನುಕರಿಸಿ ಬಂಧ ಮೋಕ್ಷಪ್ರದ ಮಾನಿಧಿವಿಠಲನ ಇಂದಿಗೂ ಮುಂದಿಗೂ ಬಿಡದೆ ನೀನೆಂದೆಂದಿಗೂ 3
--------------
ಮಹಾನಿಥಿವಿಠಲ
ಭಜಿಸೋ ಮೂಢ ಭಜಿಸದರಿಬೇಡಾ ತ್ರಿಜಗ ವಂದಿತನಾದ ಶ್ರೀಹರಿ ಗಾಢಾ ಪ ಛಂದದಿ ಧ್ಯಾನಾದಿಂದ ಉಲ್ಹಾಸಾ 1 ಗೋಪಿಯಕಂದಾ ಗೋಕುಲಾನಂದಾ ಭೂಪ ಗೋವಿಂದ ಯೆಂದೀಪರಿಯಿಂದಾ 2 ಸುಂದರ ಮೂರುತಿ ಸುಗುಣಾ ಪ್ರಖ್ಯಾತಿ ಮಂದರಗಿರಿ ಪೊತ್ತ ಪಾವನ ಕೀರುತಿ 3 ಮಂಗಳದಾಯಕಾ ಮನ್ಮಥ ಜನಕಾ ಗಂಗೆಯ ಪಡೆದಾ ಕರುಣಾನನೇ ಕಾ 4 ನಿಗಮಗೋಚರನಾ ನೀರಜನಾಭನಾ ಅಗಣಿತ ಮಹಿಮಾನಂತ ಅವತಾರನಾ 5 ಭಕುತ ವತ್ಸಲನ ಮುಕುತಿದಾಯಕನಾ ಅನುದಿನ ನಿಜ ಮುಕ್ಕುಂದನಾ 6 ಇಂದು ಬಿಡದೆ 'ಹೊನ್ನವಿಠ್ಠಲ' ಶ್ರೀ ಕೃಷ್ಣನಾ 7
--------------
ಹೆನ್ನೆರಂಗದಾಸರು
ಭಂಡನೆಂದು ಎನ್ನ ನೀ ತಿಳಿಯೋ ಅಖಿಲಾಂಡನಾಯಕ ಪ ತಂಡ ತಂಡದಿ ಒದಗಿ ಬರುತಿಹ ಗಂಡ ಸಂತತಿ ನಾ ಕಂಡು ಬೆದರುವ ಷಂಡನಲ್ಲವೊ ಪುಂಡರೀಕ ಲೋಚನನೇ ದೊಡ್ಡ 1 ಮಂದ ಮಾನವರಿಂದ ನುಡಿಸುವ ನಿಂದೆ ವಚನಗಳಿಂದ ಮನ ನೊಂದರೂ ಗೋವಿಂದ ನಿನ್ನನು ಬಂಧುವೆಂದು ನಂದದಿ ಪೊಗಳುವ 2 ದ್ವೇಷಿ ಜನಗಳೂ ರೋಷದಿಂದಲಿ ಶೋಷಿಸಿದರೂ ನೀ ಕಮ ಲೇಶ ಎನ್ನನು ಪೋಷಿಸುವನೆಂದು ಘೋಷಿಸುವೆನೋ ಶೇಷಶಯನನೇ 3 ಹೀನ ಮಾನವರಿಂದ ನೀ ಅವಮಾನ ನೀಡಿದರೂ ವರ ಜಾನಕೀಶನೆ ನೀನು ಎನ್ನಯ ಮಾನರಕ್ಷಕನೆಂದು ಅರಿಯುವ 4 ಸಣ್ಣ ಮಾನವರಿಂದ ಎನ್ನಯ ಸಕಲ ವೈಭವವು ದೊಡ್ಡ ಸೊನ್ನೆಯಾದರು ನಿನ್ನ ಪಾದಗ ಳನ್ನು ಬಿಡೆನೊ ಪ್ರಸನ್ನ ಮೂರುತಿ 5
--------------
ವಿದ್ಯಾಪ್ರಸನ್ನತೀರ್ಥರು
ಭದ್ರಾಮೂರುತಿ ನಿರ್ವಾತಾಂಹ್ವ ಪ ಹೃದ್ರೋಗ ಕಳೆದು ಜ್ಞಾನಾದ್ರ್ರ ಸ್ವಾಂತನ ಮಾಡು ಪದ್ರಾ ಸಾಮಗಾಘ ಸಮುದ್ರ ದಾಟಿಸಿ ಬೇಗ ಅ ಏಸೇಸು ಕಲ್ಪಗಳಲ್ಲಿ ನಿನ್ನಾ ದಾಸನೆಂದು ಎನ್ನ ಬಲ್ಲೀ ಈಶ ನೀನೆಂಬುದು ಲೇಶವರಿಯೆ ಕ್ಲೇಶನಾಶನ ಪ್ರಭುವೆ ವಾರಾಶಿಜೆ ವಲ್ಲಭ ವಾಸವಾನುಜ ವನಧಿಶಯನ ಮ ಹೇಶವಂದಿತ ವರದ ಹೇ ಕರು ಣಾ ಸಮುದ್ರ ಕರಾಳವದನನೆ ನೀ ಸಲಹದಿರೆ ಕಾಣೆ ಕಾಯ್ವರ 1 ಹೇಮ ಕಶ್ಯಪು ತನ್ನ ಸುತನಾ ನೋಯಿಸೆ ಶ್ರೀ ಮನೋಹರನೇ ಆನತನಾ ವ್ಯೋಮ ಪರ್ವತಾಂಬುಧಿ ಧಾಮದೊಳುಳುಹಿದ ಭೂಮ ಸನ್ಮುನಿ ಗಣಸ್ತೋಮ ವಂದಿತ ಪಾದ ಸಾಮಜೇಂದ್ರನನರಸಿಯೊಳು ಸು ತ್ರಾಮನಂದನನಾ ರಣದಿ ಕುರು ಭೂಮಿಪತಿ ಸಭೆಯೊಳಗೆ ದ್ರೌಪದಿ ಯಾ ಮಹಾತ್ಮರ ಕಾಯ್ದ ಕರುಣಿ 2 ವೇದಗಮ್ಯನೆ ವೇದ ವ್ಯಾಸ ಕಪಿಲ ಯಾದವೇಶ ಮಹಿದಾಸ ಶ್ರೀದ ಶ್ರೀಶ ಅ ನ್ನಾದಾ ಕಲ್ಕಿ ಧನ್ವಂತ್ರಿ ಮೇಧಾವಿ ಪತಿಯ ಏವ ಷಾದರೋಗಂಗಳನಳಿದು ಮಹ ದಾದಿದೇವ ಜಗನ್ನಾಥ ವಿಠ್ಠಲ ಆದರದಿ ಪ್ರಹ್ಲಾದವರ 3
--------------
ಜಗನ್ನಾಥದಾಸರು
ಭಯ ನಿವಾರಣವು ಶ್ರೀಗುರು ದಿವ್ಯನಾಮ ನಿಮ್ಮ ನಾಮ ಧ್ರುವ ಕ್ಲೇಶಪಾಶವು ಕತ್ತರಿಸಿ ದೋಷನಾಶವನು ಗೈಸಿ ಪೋಷಿಸುವ ಕೇಶವ ನಿಮ್ಮ ನಾಮ 1 ನರಕ ಘೋರದ ಘಟವೆಂಬ ನರಜನ್ಮದುರ್ಘಟ ತಾರಿಸುವ ನಾರಾಯಣ ನಿಮ್ಮ ನಾಮ 2 ಮದಮತ್ಸರವ ಜರಿಸಿ ಭೇದಾಭೇದವು ಹರಿಸಿ ಮಾಧವ ನಿಮ್ಮ ನಾಮ 3 ಭವ ಹಿಂಗಿಸುವ ಗೋವಿಂದ ನಿಮ್ಮ ನಾಮ 4 ಇಷ್ಟಾರ್ಥಗಳ ಕೊಟ್ಟು ಕಷ್ಟಾರ್ಥ ಪರಿಹರಿಸಿ ದೃಷ್ಟಾಂತದಲಿ ಹೊರೆವ ವಿಷ್ಣು ನಿಮ್ಮ ನಾಮ 5 ಮೊದಲು ಮೂವಿಧಿಯಗಳು ಜರಿಸಿ ಸದಮಲ ಪುಣ್ಯ ಪದವೀವ ಮಧುಸೂದನ ನಿಮ್ಮ ನಾಮ 6 ತ್ರಿವಿಧಾಧ್ಯಾತ್ಮ ಸ್ಥಿತಿಗತಿಯ ಈವ ಶಾಸ್ತ್ರಗಳನರಿಸಿ ಭಾವಭಕ್ತೀವ ತ್ರಿವಿಕ್ರಮ ನಿಮ್ಮ ನಾಮ 7 ವರ್ಮಧರ್ಮವನರಿಸಿ ಕರ್ಮಪಾಶವ ಹರಿಸಿ ಜನ್ಮ ತಾರಿಸುವ ವಾಮನ ನಿಮ್ಮ ನಾಮ 8 ಶ್ರೀಕರವನಿತ್ತು ಸಿರಿಸಕಲ ಸೌಭಾಗ್ಯದಲಿ ಸೃಷ್ಟಿಯೊಳು ಹೊರೆವ ಶ್ರೀಧರ ನಿಮ್ಮ ನಾಮ 9 ಹರಿಸಿ ಸಂದೇಹ ಸಂಕಲ್ಪ ಬಾಧೆಯಗಳು ಹರುಷ ಗತಿನೀವ ಹೃಷೀಕೇಶ ನಿಮ್ಮ ನಾಮ 10 ಪಾತಕ ಹರಿಸಿ ಪದ್ಮನಾಭ ನಿಮ್ಮ ನಾಮ 11 ದುರಿತ ವಿಧ್ವಂಸನಿಯ ಮಾಡಿ ಧರೆಯೊಳು ದ್ಧರಿಸುವ ದಾಮೋದರ ನಿಮ್ಮ ನಾಮ 12 ಸಕಲ ಪದವಿತ್ತ ಸುಖಸಾಧನವ ತೋರುತಿಹ್ಯ ಅಖಿಳದೊಳು ಸಂಕುರುಷಣ ನಿಮ್ಮ ನಾಮ 13 ವಾಸನೆಯು ಪೂರಿಸುತ ಭಾಷೆ ಪಾಲಿಸುತಿಹ ಲೇಸಾಗಿ ಶ್ರೀವಾಸುದೇವ ನಿಮ್ಮ ನಾಮ 14 ಪ್ರಾಣಪ್ರಿಯವಾಗಿ ಪ್ರಸನ್ನವಾಗುವ ಪೂರ್ಣ ಪ್ರತ್ಯಕ್ಷವಿದು ಪ್ರದ್ಯುಮ್ನ ನಿಮ್ಮ ನಾಮ 15 ಅನುಮಾನ ಪರಿಹರಿಸಿ ಅನುಭವಾಮೃತ ಸುರಿಸಿ ಅನಿರುದ್ಧ ನಿಮ್ಮ ನಾಮ 16 ಪೂರ್ವಕರ್ಮವ ಹರಿಸಿ ಪೂರ್ಣಕಳೆಯೊಳು ಬೆರೆಸಿ ಪುಣ್ಯಪದವೀವ ಪುರುಷೋತ್ತಮ ನಿಮ್ಮ ನಾಮ 17 ಅಧ್ಯಾತ್ಮ ಸುಖವರಿಸಿ ಸಿದ್ಧಾಂತವನು ತೋರಿ ಅಧ್ಯಕ್ಷವಾಗುವಾಧೋಕ್ಷಜ ನಿಮ್ಮ ನಾಮ 18 ನರಜನ್ಮವನು ಹರಿಸಿ ಹರಿಭಕ್ತಿಯೊಳು ಬೆರೆಸಿ ಅರುವು ಕುರ್ಹುವ್ಹಿಡಿದ ನರಸಿಂಹ ನಿಮ್ಮ ನಾಮ 19 ಅರ್ಚನೆಯು ಪ್ರಾರ್ಥನೆಯು ಪರಮಪೂಜೆಯನರಿಸಿ ಅಚ್ಯುತ ನಿಮ್ಮ ನಾಮ 20 ಜನನ ಮರಣವನಳಿಸಿ ತನುಮದೊಳು ಬೆರಿಸಿ ಜನುಮ ಹರಿಸುವ ಜನಾರ್ದನ ನಿಮ್ಮ ನಾಮ21 ಉಪಮೆಯ ರಹಿತ ವಸ್ತುವುಪಾಯದಲಿ ತೋರಿ ಕೃಪೆಯಿಂದ ಹೊರೆವ ಉಪೇಂದ್ರ ನಿಮ್ಮ ನಾಮ22 ಹರಿಸಿ ಅಹಂಭಾವ ಅರಿಸಿ ಅನುಭವ ಪೂರ್ಣ ಸುರಿಸುವ ಸುಖ ಶ್ರೀಹರಿ ನಿಮ್ಮ ನಾಮ 23 ಕರಕಮಲವಿಟ್ಟು ಶಿರದಲಿ ಸದ್ಗೈಸುತಿಹ ಕರುಣಾಳು ಮೂರುತಿ ಶ್ರೀಕೃಷ್ಣ ನಿಮ್ಮ ನಾಮ 24 ಸಾರ ಸಂಧ್ಯಾಯನದಿ ಮಹಿಪತಿಯ ಹೊರೆವ ಶ್ರೀಗುರು ನಿಮ್ಮ ನಾಮ 25
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಭಯ ನಿವಾರಿಸೋ ಜಯ ಶ್ರೀ ಹರಿಯೆ ಭಯ ನಿವಾರಿಸಯ್ಯ ದಯದಿ ಭಯ ನಿವಾರನೆನ್ನ ಪ ಮರವೆಯೆಂಬುವ ಇರುಳಿನಲ್ಲಿ ದುರಿತಯೆಂಬುವ ಗಿರಿಯಲ್ಲಿ ಪರನಿಂದೆಂಬುವ ಶರಧಿಯಲ್ಲಿ ಕರುಣವಿಲ್ಲದ ಕಾಯದುರ್ಗದರಣ್ಯಕಂಜಿ ಕೊರುಗುತಿರುವೆ ಹರಿಯೆ ನಿಮ್ಮ ಸ್ಮರಣವೆಂಬ ನಿರುತ ಧೈರ್ಯ ಕರುಣಿಸಭವ 1 ವ್ಯಸನವೆಂಬ ಮುಸುಕಿನಿಂದ ಪಿಸುಣತೆಂಬುವ ದಸಕಿನಿಂದ ಪುಸಿಯುಯೆಂಬುವ ಮಿಸುನಿಯಿಂದ ವಿಷಯದಾಸೆ ತಸ್ಕರಗಂಜಿ ದೆಸೆಗೆ ಬಾಯ ಬಿಡುವೆನಯ್ಯ ಅಸಮಮಹಿಮನ್ವ ಚಶ್ರವಣೆಂಬೆಸೆವ ಧೈರ್ಯ ಕರುಣಿಸಭವ 2 ಆರು ಹುಲಿಗಳ ಘೋರಿಸುವ ಮೂರು ಮರಿಗಳ ಹಾರುತಿರುವ ಮೂರೇಳು ನಾಯ್ಗಳ ಘೋರತಾಪ ಸೈರಿಸದೆ ಸಾರಸಾಕ್ಷ ಮರೆಯ ಹೊಕ್ಕೆ ಶ್ರೀರಾಮ ನಿಮ್ಮ ಚರಣ ಭಕ್ತೆಂ ಬ್ವೀರತನವ ಕರುಣಿಸಭವ 3
--------------
ರಾಮದಾಸರು
ಭವ - ಸಂಕಟ ಕಳೆ - ವೆಂಕಟೇಶ ||ಅ|| ಪಂಕ ಸಿರಿ ವೆಂಕಟೇಶ ಅ.ಪ. ಮಹ ವೇದಗಳನು ಕದ್ದ ದೈತ್ಯನ ಕೊಂದೆ ವೆಂಕಟೇಶಮಹ ಮೀನನಾಗಿ ನೀ ಸತ್ಯವ್ರತಗೆ ಒಲಿದೆ ವೆಂಕಟೇಶ 1 ಕೂರ್ಮ ನೀನಾಗುತ - ವೆಂಕಟೇಶಮಂದರಗಿರಿ ಪೊತ್ತು ಭಕ್ತರ ಸಲಹಿದೆ ವೆಂಕಟೇಶ 2 ಮತ್ತರಾದ ಮಧುಕೈಟಭರ - ಕೊಂದೆ ವೆಂಕಟೇಶಮತ್ತೆ ಭೂ ಚಾಪೆಯ ಮಾಡಿದವನ ಕೊಂದೆ ವೆಂಕಟೇಶ 3 ಕಶಿಪು ಬಾಧೆ ಕಳೆಯಲು - ತರಳಗೆ ವೆಂಕಟೇಶಕ್ಷಣದಿ ಕಂಭದಿ ಬಂದು ದುರುಳನ ಸವರಿದೆ ವೆಂಕಟೇಶ 4 ಮೂರು ಪಾದವ ಬೇಡಿ - ಬಲಿಯ ಭಂಜಿಸಿದೆ ವೆಂಕಟೇಶಪಾರಗಾಣದ ಮಹಿಮೆ ಬಾಗಿಲ ಕಾಯ್ದೆ ವೆಂಕಟೇಶ 5 ಹಂಚಿ ಮೆರೆದೆ ವೆಂಕಟೇಶ 6 ಮಡದಿಯ ಕದ್ದೊಯ್ದ ದೈತ್ಯನನ್ನಳಿದೆ ವೆಂಕಟೇಶಧೃಢ ಭಕುತಗೆ ಲಂಕೆಯ ಪಟ್ಟಣವಿತ್ತೆ ವೆಂಕಟೇಶ 7 ಗೋಪಿ ಜನರ ಪ್ರಿಯ | ಸುಪರ್ಣವರವಾಹ ವೆಂಕಟೇಶಪಾಪಿ ಕೌರವ ಕುಲಹರ ಧರ್ಮ ಸ್ಥಾಪಿ ವೆಂಕಟೇಶ 8 ಬೆತ್ತಲೆ ನೀ ನಿಂತು ಕುತ್ಸಿತ ಅಸುರರಸದೆದ್ಯೋ ವೆಂಕಟೇಶಕುತ್ಸಿತ ಅಸುರರ ಮೋಹಿಸುತಳಿದೆಯೊ ವೆಂಕಟೇಶ 9 ತುರಗನೇರಿ ಕಲ್ಕಿ ಎನಿಸಿಕೊಂಡೆಯೊ ವೆಂಕಟೇಶಉರಗಾದ್ರಿ ವಾಸ ಗುರು ಗೋವಿಂದ ವಿಠಲ ವೆಂಕಟೇಶ 10
--------------
ಗುರುಗೋವಿಂದವಿಠಲರು
ಭವ ಕೃತ ಪಾಪ ನಿಷ್ಕøತಿ ನಿನ್ನಚರಣಾಂಬುವೆಂದರುಹುತಲಿದೆ ಶ್ರುತಿತತಿ 1ಮೊದಲು ಪಾತ್ರಾಂತರದಲಿ ಗ್ರಹಿಸಿಯೆ ಯಂತ್ರವಿಧಿುಂದ ಬರೆದು ಬೀಜಾಕ್ಷರಂಗಳನುಹದಿನಾರೆಂಟಾವರ್ತಿ ಜಪಿಸಿ ಮೂಲವನೆತ್ತಿವದನದಿಂ ಬಿಂದು ಸೂಸದವೋಲ್ಸೇವಿಪ ಹಾಗೆ 2ಮೂರಾವರ್ತಿಯೊಳಿಂತು ಸೇವಿಸಿ, ಶಿರದಲ್ಲಿಸೇರಿಸಿ, ಬೇರೆ ಹಸ್ತವ ಮಾರ್ಜಿಸಿಸಾರಿಸಿ ತಡವಿ ತನುವ ಧನ್ಯನಹೆನು ಸಂಸಾರಸಾಗುವ ದಾಂಟಿಸುವರೆ ಜಗದೀಶ 3ಚರಣದಂಗುಟದಿಂದ ಚಿಮ್ಮಿದ ತುಲಸಿಯುಬೆರೆದ ಪುಷ್ಪವು ಬಂತೆನ್ನೊರೆಗೆ ಸರ್ವೇಶಹರುಷದಿಂ ನಿನ್ನಡಿ ಸರಸಿಜಯುಗಳವಮರೆಯೊಕ್ಕ ದೀನನೊಳ್ಕರುಣ ಬಂದುದೆ ಕೃಷ್ಣಾ 4ತಿರುಪತಿನೆಲೆವಾಸ ವರದವೆಂಕಟೇಶಗುರು ವಾಸುದೇವಾರ್ಯನಾಗಿಯೆ ನೀನೆಅರುಹಿದ ಮತ ಪಿಡಿದಿರುವೆನು ತ್ವನ್ನಾಮಸ್ಮರಣೆ ಮಾತ್ರವನಿತ್ತು ಪೊರೆಯಬೇಕೆನ್ನನು 5ಓಂ ಜಿಷ್ಣವೇ ನಮಃ
--------------
ತಿಮ್ಮಪ್ಪದಾಸರು
ಭವ ನಿಂದುದಗಣಿತ ಕರ್ಮವೆಂದು ನಿನ್ನವನೆನಿಪುದೊ ಹರಿಯೇ ಅ.ಪಸೂಸುತಿದೆಯಜ್ಞಾನ ಮಾಸುತಿದೆ ಸುಜ್ಞಾನದೋಷಗಳು ಬಹುವಾಗಿವೆ ಹರಿಯೇಆಶೆಯೆಂಬುದಕಂತವಿಲ್ಲ ಬಹುಬಗೆ ತರದಪಾಶದಲಿ ಬಿಗಿವಡೆದೆನೋ ಹರಿಯೇಈಶ ನಿನ್ನಯ ಮಾಯೆಯೆಂಬ ಬಲು ಹುರಿ ಬಲೆಯುಬೀಸಿ ಸೋವುತ್ತಲಿದೆಕೋ ಹರಿಯೇಕ್ಲೇಶಸಾಗರದಲ್ಲಿ ಮುಳುಗಿ ತಡಿಯನು ಕಾಣೆವಾಸುದೇವ ಕಡೆಹಾುಸೋ ಹರಿಯೇ 1ಆವರಣ ವಿಕ್ಷೇಪವೆಂದೊಂದು ಶಕ್ತಿ ತಾನಾವರಿಸಿ ಬ್ರಹ್ಮಾಂಡವ ಹರಿಯೇತೀವಿಕೊಂಡೊಳಹೊರಗೆ ವಿಕ್ಷೇಪ ಶಕ್ತಿ ತಾಜೀವಕೋಟಿಗಳ ಸೃಜಿಸಿ ಹರಿಯೇಠಾವುಗಾಣದ ತೆರದಿ ಬಹುವಿಧದ ಕರ್ಮದಲಿಜೀವರನು ಬಂಧಿಸಿಹುದು ಹರಿಯೇಈ ವಿಧದ ಮಾಯೆ ತಾ ಯೋಗಿಗಳಿಗಸದಳವುದೇವ ಕೃಪೆಮಾಡಿ ಸಲಹೋ ಹರಿಯೇ 2ಮೂರು ಗುಣ ಮೂಲದಲಿ ಮೂರು ಕರ್ಮಗಳುದಿಸಿಮೂರಾರು ಕವಲಾದುದೋ ಹರಿಯೇಸಾರಿ ವೃಕ್ಷವ ಬಳ್ಳಿ ಮೀರಿ ಮುಸುಕಿದ ತೆರದಿತೋರದಿದೆ ನಿನ್ನ ನಿಜವ ಹರಿಯೇಬೇರುವರಿದಿಹ ಕರ್ಮಲತೆಯ ಜಾರಿಸಿ ಗುಣವಮೀರುವ ಉಪಾಯವೆಂತೋ ಹರಿಯೇಸೇರಿದೆನು ನಿನ್ನ ಚರಣವನು ವೆಂಕಟರಮಣದಾರಿಯನು ತೋರಿ ಸಲಹೋ ಹರಿಯೇ 3ಕಂ||ಗುರುವಾರದರ್ಚನೆಯನಿದಗುರುವಾಗಿಯೆ ಪೇಳ್ದೆ ನೀನೆ ಮೂಢನ ಸಲಹಲ್‍ಗುರುಸೇವೆಯೆಂತೊ ತಿಳಿಯದುಗುರುವರ ಸಂಗತಿಯನರಿಯೆ ನೀನೇ ಗತಿಯೈಓಂ ದಾಮೋದರಾಯ ನಮಃ
--------------
ತಿಮ್ಮಪ್ಪದಾಸರು
ಭವ ಪರಿಹಾರ ಪಾವನನಾಮ ಪ ಕಮಲಜ ಜನಕಾ ಕಾಮಿತ ಫಲದಾಯಕಾ ಅಮಿತ ಪರಮಾನಂದ ಆದಿಮೂರುತಿ ಗೋವಿಂದಾ 1 ಸಕಲಗುಣ ಪರಿಪೂರ್ಣ ಶಾಶ್ವತ ಸಂಪನ್ನ ಮುಕುತಿ ರಾಮಕೃಷ್ಣ...............ರುತಿ ಮೋಹನಾ 2 ಸುಂದರರೂಪಾ ಸುಗುಣ ಪ್ರತಾಪ ಇಂದಿರೆ ರಮಣ ಶ್ರಿತ ಜನ ಪೋಷಣ 3 ದಶ ಅವತಾರಾ ದೈತ್ಯ ಸಂಹಾರಾ ಪಶುಪತಿ ಪಾಲಕಾ ಪಾವನೋದಕ ಜನಕಾ 4 ಹರಿ `ಹೆನ್ನ ವಿಠಲಾ ' ಅಧಿಕ ಸುಶೀಲಾ ಪರಮ ಭಕ್ತ ವಿಲಾಸಾ ಪಾಲಿತ ಜಗದೀಶಾ 5
--------------
ಹೆನ್ನೆರಂಗದಾಸರು
ಭವ ಭಯಂಕರ ಪ ಶಂಕರ ತ್ವತ್ಪದ ಪಂಕಜದಲಿ ಮನ ಶಂಕೆಯಿಲ್ಲದೆ ಕೊಟ್ಟು ಕಿಂಕರನನು ಪೊರೆ 1 ಮೃತ್ಯುಪಾಶಕೆ ಸಿಕ್ಕಿ ತತ್ತರಿಸುತಲಿದ್ದ ಭಕ್ತನ ಸಲಹಿದ ಮೃತ್ಯುಂಜಯ ಸಲಹೆನ್ನ 2 ವಿಷವು ಆವರಿಸಲು ತ್ರಿದಶರು ಬೇಡಲು ನಸುನಗುಗಲಿ ವಿಷ ಧರಿಸಿದ ಸದಾಶಿವ 3 ಶಿವಶಿವಾವಲ್ಲಭ ಭವಾಭವ ಪ್ರಭವನೆ ಭುವನ ಪವಿತ್ರನೆ ಭವಹರ ಸಲಹೆನ್ನ 4 ಅಂಬಿಕನಾಥನೆ ನಂಬಿದೆ ನಿನ್ನನೆ ಶಂಭುವೆ ಭಕ್ತನ ಬೆಂಬಿಡದೆಲೆ ಪೊರೆ 5 ಅಷ್ಟ ವಿಭೂತದ ಅಷ್ಟಮೂರ್ತಿಯೆ ಪದ ಮುಟ್ಟಿ ಭಜಿಪ ಮನ ಕೊಟ್ಟು ರಕ್ಷಿಸು 6 ದಿಗಂಬರ ದಯಾಕರ ಭಗೀರಥ ಹಿತಕರ ಅಘಹರ ಮೃಗಧರ ಹಗರಣಗೊಳಿಸಿದೆ 7 ವಿಘ್ನಪ ಜನಕನೆ ಅಜ್ಞತೆ ಬಿಡಿಸಯ್ಯ ಸುಜ್ಞನೆ ಭವಾಂಬುಧಿ ಮಗ್ನನನುದ್ಧರಿಸಯ್ 8 ಲಕುಮಿಕಾಂತನ ಪ್ರಿಯಸÀಖನೆ ಶ್ರೀಕಂಠನೆಭಕುತಿ ಭಾಗ್ಯವನೀಯೊ ಶಕುತ ಬಿಡದೆ ಕಾಯೊ 9
--------------
ಲಕ್ಷ್ಮೀನಾರಯಣರಾಯರು
ಭವ ಭಸಿ- ತಾಂಗನ ನೋಡಿದೆ ಪ. ರಂಗನ ತನ್ನಂಗದೊಳಗೆ ಇಟ್ಟು ಹಿಂಗದೆ ನೆನೆಯುವ ಮಂಗಳ ಮೂರುತಿ ಅ.ಪ. ತ್ಯಕ್ಷನ ನೋಡಿದೆ | ಕರುಣಕ- ಟಾಕ್ಷನ ನೋಡಿದೆ ವೀಕ್ಷಣದಿಂದ ಶ್ರೀ ವಕ್ಷನ ಸುತನನು ಶಿಕ್ಷಿಸಿದ ಫಾಲಾಕ್ಷನ ಶಿವನ 1 ಹರನನು ನೋಡಿದೆ | ಗಂಗಾ- ಧರನನು ನೋಡಿದೆ ಗಿರಿಜೆವಲ್ಲಭ ಭಾಸುರ ವಂದಿತನಾ ಸರಿತು ತುಂಗ ಪಂಪಾಪುರವಾಸನ 2 ಶೂಲಿಯ ನೋಡಿದೆ | ರುಂಡ ಮಾಲಿಯ ನೋಡಿದೆ ಕೈಲಾಸದಿ ಉಮೆ ಲೋಲನೆನಿಸಿ ಇಲ್ಲಿ ವ್ಯಾಳಭೂಷಣನಾಗಿ ಲೀಲೆಯೊಳ್ ಮೆರೆವನ 3 ಈಶನ ನೋಡಿದೆ | ನರಹರಿ ದಾಸನ ನೋಡಿದೆ ಪಾಶುಪತಾಸ್ತ್ರವ ವಾಸವಜನಿಗಿತ್ತ ಪೋಷಿಕಿರಾತನ ವೇಷನ ಹರುಷದಿ 4 ದಿಟ್ಟನ ನೋಡಿದೆ | ವೈಷ್ಣವ ಶ್ರೇಷ್ಠನ ನೋಡಿದೆ ವೃಷ್ಣೀಶ ಗೋಪಾಲಕೃಷ್ಣವಿಠ್ಠಲನಿಗೆ ಪುಟ್ಟ ಮೊಮ್ಮಗನಾಗಿ ತುಷ್ಟಿಪಡಿಸುವನ5
--------------
ಅಂಬಾಬಾಯಿ
ಭವ ಸಂಕಟ ಪರಿಹರಿಸೊ ಕಿಂಕರನೆಂದೆನಿಸೊ ಪ ಶಂಕೆಯಿಲ್ಲದೆ ಪಾದಪಂಕಜ ಪೂಜಿಸಲೂಮಂಕುಮತಿಯ ಕಳೆವಾ ಅಕಳಂಕನೆಂದೆನಿಸುವಾ ಅ.ಪ. ಕಲಿಯುಗದೊಳು ಕಲಿ ಬಾಧೆಗೆ ಒಳಗಾಗಿ ಬಹುವಿಧವಾಗಿಒಲಿಸದೆ ವರಗುರು ಹಿರಿಯರ ನಿಂದಿಸುತಾ ವೇಳೆಗಳೆಯುತಾಗಳಿಸಿದೆ ಪಾಪವ ಚರಿಸುತ ಧರೆಯೊಳಗೆ ತೊಳಲುವೆ ತಮದೊಳಗೇಘಳಿಲನೆ ರಕ್ಷಿಸೊ ಬಾಲಕರನು ದೇವಾ ಎನ್ನಯ ಕುಲದೈವಾ 1 ಸಾಧನೆಗೋಸುಗ ಮೇದಿನಿಗೆ ಬಂದು ಸಾಧಿಸದೆ ಬಂದುಶೋಧಿಸುವೆನು ಪುರುಷಾರ್ಥದ ಮಾರ್ಗವನು ಮೋದವ ಪೊಂದುವೆನುಭೇದವ ತಿಳಿಯದೆ ಹಾದಿಯ ತಪ್ಪಿರುವೆ ಖೇದವ ಪುಡುತಿರುವೆಸಾದರದಲಿ ತವ ಪಾದದಿ ಧ್ಯಾನವನು ಒದಗಿಸಬೇಕಿನ್ನು 2 ಮಂದ ತಾಪ ಬಿಡಿಸೊ ಕರುಣವ ತೋರಿಸೊಆರು ಮೂರು ವಿಧ ಭಕ್ತಿಯನೆ ಈಯೋ ಕರಪಿಡಿದು ಕಾಯೋಸಾರುವ ಭಕುತರ ಧೀರ ವೃಂದದೊಳಗೆ ಸೇರಿಸೊ ಜವದೊಳಗೆಧಾರುಣೀಶ ತಂದೆವರದವಿಠಲನೆ ಶರಣೆಂಬೆನು ನಾನೇ 3
--------------
ಸಿರಿಗುರುತಂದೆವರದವಿಠಲರು
ಭವ ಹರಿಸೊ ಕರುಣಾ ಜಲಧಿ ನೆಂಟ ನೀನಾಗಿ ಹೃನ್ಮಂಟಪದೊಳಗೆ ಪ. ಎಂಟಕ್ಷರ ನುತನೆ ಎಂಟು ರೂಪಾತ್ಮಕನೆ ಎಂಟು ಮೂರು ತತ್ವ ನಿರ್ಮಿಸಿಹನೆ ಎಂಟು ದಳದಲಿ ನಿಂತು ಎಂಟು ವಿಧ ಪ್ರೇರಿಸುತ ಎಂಟು ದಿಕ್ಪತಿಗಳಿಂ ಸೇವೆ ಕೊಳುತಿಹನೆ 1 ಎಂಟು ವಿಧ ಕರ್ತೃವೆ ಎಂಟು ಭಾಗ್ಯಯುತನೆ ಎಂಟು ಬಾಹು ಎಂಟು ಆಯುಧಧರನೆ ಎಂಟು ಪತ್ನಿಯರಿಂದ ಎಂಟನೇ ಅವತಾರಿ ನೆಂಟರೊಡನೆ ಜಗದ ಕಂಟಕರ ಸದೆದನೆ 2 ಎಂಟೆರಡು ಕಲೆಪೂರ್ಣ ವೆಂಕಟರಮಣನೆ ಎಂಟು ವಿಧ ಮದಗಳನು ಭೇದಿಸುತಲಿ ಎಂಟೆರಡು ಒಂದು ಇಂದ್ರಿಯ ನಿನ್ನ ಕಡೆ ಮಾಡಿ ಭಂಟನೆನಿಸೆನ್ನ ಶ್ರೀ ಗೋಪಾಲಕೃಷ್ಣವಿಠಲ3
--------------
ಅಂಬಾಬಾಯಿ
ಭವ ಶರಧಿ ತಾರಕನೇ - ನಾಕರವಾ ಮುಗಿವೆ - ಎನ್ನ ಕರುಣದಲ್ಲಿ ನೋಡೋ ಪ ಎರಡು ಭಾಗದಿ ಶ್ರೀ ಧರಣೇರಿಂದೊಪ್ಪುತತ್ವರಿತದಿ ದಯಮಾಡು ಉರಗಾಗಿರಿ ವೆಂಕಟ ಅ.ಪ. ತೇರಿನೊಳಿಪ್ಪ ಶೃಂಗಾರ ಪುರುಷನೆ ಬಂ-ಗಾರ ಮಾಣಿಕದಲಂಕಾರವ ಧರಿಸಿದಮಾರಮಣನೆ ವನಜಾರಿವದನ ಬಲು-ಶೂರ ಸಮರಧೀರ ನಾರಾಯಣ ಕಂಸಾರೇ ||ನರ ಕಂಠೀರವ ಕಮಲನಾಭನಾರದ ಮುನಿ ಪ್ರಿಯ ಚಾರು-ಚರಿತ ಪನ್ನಗಾರಿಗಮನ ಮದ-ನಾರಿಯ ಸಲಹಿದ ಧೀರ ಮುರಾರಿ 1 ನಿಂದರೆ ಬಪ್ಪುದು ಸಿಂಧುಶಯನ ದಯ-ದಿಂದ ಎನ್ನನು ನೋಡು-ಕಣ್ದೆರೆದೀಕ್ಷಿಸಿ |ಕಂದಗೊಲಿದು ಕಂಬದಿಂದ ಬಂದಸುರನಕೊಂದು ಕರುಳಹಾರ ಕಂಧರದಿ ತಾಳಿದೇ ||ಮಂದಮತಿವನೆಂದಲೇ ಗೋ-ವಿಂದ ಗೋವಳ ವೃಂದದೊಡನೆ ಕಾ-ಳಿಂದಿಯ ಧುಮುಕಿ-ಫಣೀಂದ್ರನ ಶಿರದಲಿಧಿಂ ಧಿಮಿ ಧಿಮಿಕೆಂದು ಕುಣಿದ ಹರಿ 2 ಜಲದೊಳ ಪೊಕ್ಕು ಆ ಇಳೆಯ ತಸ್ಕರನು ದುಂ-ಬಲಗೊಂಡು ಮಡುಹಿ ನಂಬಿದ ಪ್ರಹ್ಲಾದ ಹಂ-ಬಲಿಸೆ ಧರ್ಮದಿ ಕಾಯ್ದೆ ಸಲೆ ಕ್ಷತ್ರಿಯಕುಲವನಳಿದೆ-ನಿನ್ನೊಳು ನೀನೇ ಕಾಯ್ದೆ ||ಮಲೆತ ಮಾವನ ಕೊಂದೆ ಸಲೆಖಳ ತ್ರಿಪುರನ ಗೆದ್ದು ಕಲಿಯ ಸಂಹರಿಸಿದೆಸುಲಭ ಮೂರುತಿ ಮೋಹನವಿಠ್ಠಲಚೆಲುವ ತಿರುವೇಂಗಳ 3
--------------
ಮೋಹನದಾಸರು