ಒಟ್ಟು 10544 ಕಡೆಗಳಲ್ಲಿ , 133 ದಾಸರು , 5597 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಗುರು ಹೊಂದಿದವನೀಗ ಎಂದಿಗೂ ಕೆಡನುಮರಳಿ ಹುಟ್ಟಿದರೇನು ಗುರುವು ಕಾಯುವನು ಪ ಗುರು ಹೇಳಿದಂತಿರದೆ ಗುರು ಆಜ್ಞೆಯಂತಿರದೆಬರಿಯ ಪ್ರಾಪಂಚದ ನಡೆಯನೆ ನಡೆದುಮರೆತೆಯಾದರೇನು ಗುರು ಕರುಣ ತಾನದುವೆನರಕಕ್ಕೆ ಕಳುಹದೋ ಯಮನ ಸೇರಿಸದೋ 1 ತನ್ನ ಅವಗುಣದಿ ಜನ್ಮಗಳ ಸೇರಿದರೇನುಅನ್ಯಕೆ ಎಳಸದದು ಸೋಂಕಿನಲಿ ಮನವುಚೆನ್ನಾಗಿಯೇ ಗುರುದ್ವಾರವನು ಕಾದಿಹನುಭಿನ್ನಿಸದೆ ಪರತತ್ವ ಬೋಧೆ ಹೇಳುವನು 2 ಭ್ರಷ್ಟತ್ವದಿಂ ತನ್ನ ಪಾಪವನು ಉಣುತಲಿಹುಟ್ಟುತಿಹ ಹಂದಿ ಪಶುವಾಗಿ ತಾನುಘಟ್ಯಾಗಿ ನರಜನ್ಮ ಧರಿಸುತ್ತ ಕಡೆಯಲಿಶಿಷ್ಟ ಚಿದಾನಂದ ಬಗಳೆಯನು ಕೂಡುವನು 3
--------------
ಚಿದಾನಂದ ಅವಧೂತರು
ಗುರುಕೂರ್ಮಚಾರ್ಯರ ಚರಣಕಮಲಯುಗ್ಮ ಮಾನವ ಪ ಧರಣಿಯೊಳಗೆ ಸುಕ್ಷೇತ್ರಗಾಲವ ಪುರದಿ ಶ್ರಿ ನರಶಿಂಹಾ ಚಾರ್ಯರ ತರುಣಿಯಳ ಗರ್ಭಾಬ್ಧಿಯಲಿಹಿಮ ಕರನ ತೆರದಲಿ ಜನಿಸಿಮೆರೆದ ಅ.ಪ ವರಕೊಲ್ಹಾಪುರದಿ ಪೋಗಿರಲು ಸುಂದರವಾದ ಸಿರಿಯರೂಪವ ಕಾಣುತ್ತ ಅರಿತು ಪ್ರಾರ್ಥಿಸಲು ಶ್ರೀ ನರಶಿಂಹಾರ್ಯರಿಗೊಲಿದು ಕರುಣದಿಂದಲಿ ಕೊಟ್ಟಂಥ ಚರಣಕವಚ ಸ್ವರಣ ಸಂಪುಟದಲ್ಲಿ ನಿರುತ ಪೂಜೆಯ ಮಾಡುತ್ತ ಪ್ರವಚನಾಸಕ್ತ ಧರೆಯೊಳಗೆ ಬಹು ಶರಣು ಜನ ರಘ ತರಿದು ಸೌಖ್ಯವ ಗರಿವುದಕೆ ಸಂ ಚರಿಸುತಲಿ ಸಚ್ಛಾಸ್ತ್ರ ಮರ್ಮವ ನರುಹಿಜನರನುದ್ಧರಿಸಿದಂಥ 1 ಪೊಳೆವ ಫಾಲದಿ ಪುಂಡ್ರ ತಿಲಕ ಮುದ್ರಾಕ್ಷತಿ ವಿಲಸಿತ ಶುಭಗಾತ್ರದಿ ಅಲವ ಬೋಧರ ಮತದೊಳು ತತ್ವಬೋಧಕ ಸುಲಲಿತೋಪನ್ಯಾಸದಿ ಬಲು ವಿಧಾರ್ಥವ ಪೇಳಿಕುಳಿತಪಂಡಿತರನ್ನು ಒಲಿಸುತಿರೆ ಪೂರ್ವದಿ ಪಂಢರಪುರದಿ ಭವ ಮುದ್ಗಲಾಚಾರ್ಯರಿ ಗೊಲಿದು ಬಂದಿಹ ಚಲುವ ವಿಠ್ಠಲ ಮೂರುತಿಯ ಪದ ಜಲಜ ಮಧುಕರರೆನಿಸಿದಂಥ 2 ಜಡಜಾಪ್ತನುದಯದಿ ನಡೆದು ದ್ವಿಜಗೃಹದೇವ ರಡಿ ಗೊಂದನೆಯ ಮಾಡುತ್ತ ಎಡೆಬಿಡದಲೆ ತಮ್ಮ ಅಡಿಗೊಂದಿಸುವ ಭಕ್ತ ಗಡಣವ ಮನ್ನಿಸುತ ಬಿಡದೆ ಶತತ್ರಯ ಕೊಡ ಜಲದಲಿ ಸ್ನಾನ ದೃಢಮನದಲಿ ಮಾಡುತ್ತ ತಂತ್ರ ಸಾರೋಕ್ತ ಎಡಬಲದಿ ಶೇವೆಯನು ಮಾಡುವ ಪೊಡವಿಸುರಕೃತ ವೇದ ಘೋಷದಿ ಜಡಜನಾಭನ ಪೂಜಿಸುವ ಬಹು ಸಡಗರವ ನಾನೆಂತು ಬಣ್ಣಿಪೆ 3 ಭೂತಲದಲಿ ಶ್ರೇಷ್ಠವಾತ ಮಾತಾಂಬುಧಿ ಶೀತ ಕಿರಣನೆನಿಸಿ ಪ್ರಾತರಾರಭ್ಯ ಶ್ರೀನಾಥನೆ ಪರನೆಂಬೊ ಶಾಸ್ತ್ರದಿ ಮನವಿರಿಸಿ ಖ್ಯಾತ ಸತ್ಯಧ್ಯಾನ ತೀರ್ಥರೆಂಬುವ ಗುರು ಪ್ರೀತಿಯ ಸಂಪಾದಿಸಿ ಪುತ್ರರಿಗೆ ಬೋಧಿಸಿ ಪ್ರೀತಿಯಲಿ ಶಿಷ್ಯರಿಗೆ ಭಗವ ದ್ಗೀತೆಯನು ಪ್ರತಿದಿನದಿ ಪೇಳುತ ಪಾತಕವ ಪರಿಹರಿಸಿ ಪರಮ ಪು- ನೀತ ಗಾತ್ರರ ಮಾಡಿ ಸಲಹಿದ 4 ಧರೆಯೊಳಧಿಕಮಾದ ಗಿರಿ ವೇಂಕಟೇಶನ ದರುಶನವನೆ ಕೊಳ್ಳುತ ಗುರುವಾಜ್ಞೆಯಲಿ ಬಂದು ವರ ಸಭೆಯೊಳು ತಮ್ಮ ಪರಿವಾರದಿಂದಿರುತ ವರಷ ಶಾರ್ವರಿಯೊಳು ವರ ಮಾಘ ಪ್ರತಿಪದ ಬರಲು ಧ್ಯಾನವ ಮಾಡುವ ಹರಿಪದಾಸಕ್ತ ಪರಮ ಭಕುತಿಯಲಿಂದ ಶೇವಿಪ ಶರಣು ಜನ ಮಂದಾರ ನೆನಿಸುತ ಮೆರೆವ ಕಾರ್ಪರ ನಿಲಯ ಶಿರಿನರ ಹರಿಯ ಪುರವನು ತ್ವರದಿ ಶೇರಿದ 5
--------------
ಕಾರ್ಪರ ನರಹರಿದಾಸರು
ಗುರುಗಳ ನೆರೆ ನಂಬಿರೊ ಪರಿಪಾಲಿಪ ಗುರುಗಳ ನೆರೆ ನಂಬಿರೊ ಪ ಪರಿ ಅಘದೊಳು ತೊಳಲುವ ಮನು ಜರ ಬವಣೆಗಳರಿತು ಸಜ್ಜನರ ಪಾಲಿಸುವಂಥ ಅ.ಪ ಚಿಂತೆಯೆಲ್ಲವು ನೀಗಿಸಿ ಮನಸಿಗೆ ಬಹು ಸಂತೋಷವನು ಸೂಚಿಸಿ ಪಾದ ಚಿಂತನೆ ಮಾಡುವ ಅಂತರಂಗದ ಭಕ್ತರೊಡನೆ ಮೆರೆವ ದಿವ್ಯ1 ಬೆಟ್ಟದೊಡೆಯನ ಪೂಜಿಸಿ ಭಕುತರ ಮನ ದಿಷ್ಟಗಳನು ಸಲ್ಲಿಸಿ ಸೃಷ್ಟಿಕರ್ತನ ಗುಣ ಸ್ವಚ್ಛ ತಿಳಿದು ಸರ್ವ ಕಷ್ಟಗಳ್ಹರಿಸಿ ಸಂತುಷ್ಟಿಪಡಿಸುವಂಥ 2 ಸರಿಯುಂಟೆ ಧರೆಯೊಳಗೆ ಗುರುಗಳ ಪೋಲ್ವ ನರರುಂಟೆ ಭುವಿಯೊಳಗೆ ಸಿರಿ ಉರಗಾದ್ರಿವಸ ವಿಠ್ಠಲದಾಸರ ಕೂಡಿ ವರಗಳ ಕೊಡುವಂಥ ಪರಮ ಸಾತ್ವಿಕರಾದ 3 ಪರಮ ಮಂಗಳ ಮೂರ್ತಿಯ ರೂಪವ ಹಗ ಲಿರುಳು ಧ್ಯಾನವ ಮಾಳ್ಪರ ಪರಮ ಗುರುಗಳ ಪರಮ ಪ್ರೀತಿಯ ಪಡೆದಂಥ ಉರಗಾದ್ರಿವಾಸ ವಿಠ್ಠಲದಾಸರೆಂಬಂಥ4 ಕರುಣದಿ ಸಲಹುವರು ಭಕ್ತರನೆಲ್ಲ ಕರೆದು ಬೋಧನೆ ಮಾಳ್ಪರು ವರ ಕಮಲನಾಭ ವಿಠ್ಠಲನ ಭಜಿಸುತ್ತ ಸಿರಿ ಶ್ರೀನಿವಾಸನ ನಿರುತ ಪೂಜಿಸುವಂಥ 5
--------------
ನಿಡಗುರುಕಿ ಜೀವೂಬಾಯಿ
ಗುರುಚರಣ ಪೂಜೆಯನು 'ರಚಿಸುವೆನೀಗಪರಮಾತ್ಮನೆಂದೆಂಬ ಸ್ಥಿರಮನದಿ ಬೇಗ ಪವರಮಂತ್ರರೂಪದಲಿ ಗುರು ತಾನು ದಯದಿಂದಭರದಿಂದ ಹೃದಯಮಂದಿರಕೆ ಬರಲಾಗಿಗುರುತರದಹಂಕಾರಶಯನದಿಂ ಮುರಿದೆದ್ದುಬರುವೆನಿದಿರಾಗಿ ಕರೆತರುವೆನೊಡಗೂಡಿ 1ಬ್ರಹ್ಮಕಮಲದಲೊಡೆದು ಜ್ಞಾನನಾಳದಿ ಕೂಡಿರಮ್ಯದಳವೆಂಟುಳ್ಳ ಕಮಲ ಮಧ್ಯದಲಿನಮ್ಮ ಗುರುಮೂರ್ತಿಯನು ಸಂಭ್ರಮದಿ ಕುಳ್ಳಿರಿಸಿವೊಮ್ಮನದಲಘ್ರ್ಯಾದಿಗಳನು ಭಕುತಿಯಲಿತ್ತು 2ಕರಗಳೆರಡುಳ್ಳ ಹರಿ ನಯನವೆರಡರ ಹರನುವರಮುಖ'ದೊಂದರಲಿ ವಾಗೀಶನೆನಿಸಿಪರಿಹರಿಸಿ ಗುಣಗಳನು ಪರಬ್ರಹ್ಮವಾಗಿರುವಗುರುವರನ ಮೂರ್ತಿಯನು ನೆರೆ ನೋಡಿ ಮನದೊಳಗೆ 3ಅ'ವೇಕವಂ ಪರಿದ ಗುರುಪದಕೆ ಪಾದ್ಯವನುಸು'ವೇಕವೆಂಬಘ್ರ್ಯವನು ಸ'ತ ಕೊಟ್ಟುಅ'ವೇಕದಿಂ ಬಂದ ಜೀವಭಾವವ ಬಿಡಿಸಿಕ'ವರನು ನೀನೆಂಬ ಶುದ್ಧಾಚಮನದಿಂದ 4ಪರಮಪಾವನರೂಪ ಸ್ನಾನದುಪಚಾರದಲಿಎರಡಿಲ್ಲವೆಂದೆಂಬ ಶುಭ್ರ ವಸ್ತ್ರದಲಿಬರೆದು ತಾ ಜೀವರೊಳು ಸೂತ್ರಾತ್ಮನಾದಡೆಯು ಬೆರೆಯದಿಹನೆಂತೆಂಬ ಸೂತ್ರೋಪಚಾರದಲಿ 5ಶರಣಾಗತರ ಕಾಯ್ವ ಗುಣಗಣಗಳಾಭರಣಪರಿಪರಿಯ ಕಾಮಗಳ ಹೊದ್ದದನುಲೇಪನೆರೆ ನಿವಾರಿತವಾದ ವಾಸನಾಕ್ಷಯ ಪುಷ್ಪಸರಗಳೀ ಪರಿಭಾವನೆಗಳೆಂಬ ಭಕ್ತಿಯಲಿ 6ಜಡ ದುಃಖ ಪುಸಿಗಳಿಗೆ ಬೇರೆಂಬ ಧೂಪದಲಿಎಡೆಬಿಡದ ಜ್ಯೋತಿಃಸ್ವರೂಪ ದೀಪದಲಿಬಿಡದ ಸುಖದನುಭವದ ದಿವ್ಯ ನೈವೇದ್ಯದಲಿಜಡಕೆ ಮಂಗಳ'ತ್ತ ಬಗೆಯ ತಾಂಬೂಲದಲಿ 7ನಿತ್ಯ ಪ್ರಕಾಶದಲಿ ಪೊಳೆವ ಮಂಗಳ ದೀಪಸತ್ಯದಾಧಾರದಲಿ ಸುಳಿವ ಕರಣಗಳಮತ್ತೆ ಸತ್ಯದೊಳಿರಿಸುತಿಹ ಮಂತ್ರಪುಷ್ಪದಲಿಸುತ್ತುವರಿದಿಹ ವಸ್ತುವೆಂದು ಬಲವಂದು 8ಘನ ಮ'ಮನಂಘ್ರಿಯಲಿ ತನು ಮನಾದಿಗಳನ್ನುನಿನಗೆ ಸಂದುದೆನುತ್ತಲಿತ್ತು ನ'ುಸುತ್ತಾಕನಕಮಯವಾದ ಶ್ರೀ ತಿರುಪತಿಯ ವೆಂಕಟನತನುರೂಪ ನೀಲಕಂಠಾರ್ಯರನು ಬಿಡದೆ 9ಓಂ ಸನಾತನಾಯ ನಮಃ
--------------
ತಿಮ್ಮಪ್ಪದಾಸರು
ಗುರುದತ್ತ ದಿಗಂಬರ ಸ್ತುತಿ ಈಸಲಾರೆ ಗುರುವೆ ಸಂಸಾರಶರಧಿಯ ಮೋಸದಿಂದ ಬಿದ್ದು ನಾನು ಘಾಸಿಯಾಗಿ ನೊಂದೆ ಗುರುವೆ ಪ ಗುರುವೆ ಬೇರೆ ಗತಿಯ ಕಾಣೆ ನೀನೆಗತಿ ದಿಗಂಬರೇಶ ಮರಯ ಹೊಕ್ಕೆನಿಂದು ನಿಮ್ಮ ಚರಣ ಕಮಲವ ತರುಣ ದಿಂದಲೆನ್ನ ಭವದ ಶರಧಿಯನ್ನು ದಾಟುವಂಥ ಪರಿಯನೊರೆದು ನಾವೆಯಿಂದ ದಡವ ಸೇರಿಸೋ 1 ಮಡದಿ ಮಕ್ಕಳೆಂಬುದೊಂದು ನೆಗಳುಖಂಡವನ್ನು ಕಚ್ಚಿ ಮಡುವಿಗೆಳೆದು ತಿನ್ನು ತಾವೆ ತಡೆಯಲಾರೆನು ನಡುವೆ ಸೊಸೆಯು ಎಂಬನಾಯಿ ಜಡಿದು ಘೋರ ಸರ್ಪದಂತೆ ಕಡಿಯೆ ವಿಷಮ ನೆತ್ತಿಗಡರಿ ಮಡಿವಕಾಲ ಬಂದಿತು 2 ಹಲವು ಜನ್ಮದಲ್ಲಿ ಬಂದು ಹಲವು ಕರ್ಮವನು ಮಾಡಿ ಹಲವು ಯೋನಿಯಲ್ಲಿ ಹುಟ್ಟಿ ಹಲವು ನರಕವ ಹಲವು ಪರಿಯ ಲುಂಡು ದಣಿಯ ನೆಲೆಯ ಗಾಣದೆನ್ನಜೀವ ತೊಳಲಿತಿನ್ನುಗತಿಯ ಕಾಣೆ ಗುರು ಚಿದಂಬರ 3 ಕಾಲವೆಲ್ಲಸಂದು ತುದಿಯಕಾಲ ಬಂತು ಕಂಡ ಪರಿಯೆ ತಾಳಿ ಕಿವಿಗೆ ಊದ್ರ್ವಗತಿಗೆ ಪೋಪಮಂತ್ರವನ್ನು ತಿಳಿಸಿ ನಿರಾಳ ವಸ್ತುವನ್ನು ತೋರೋವರ ದಿಗಂಬರಾ 4 ಆಸೆಯೆಂಬ ನಾರಿಯನ್ನು ನಾಶಗೈದು ಗುರುವಿನಡಿಗೆ ಹಾಸಿತನುವ ದಡದಂತೆ ಬೇಡಿಕೊಂಡೆನು ಈಸ ಮಸ್ತಲೋಕವನ್ನು ಪೋಷಿಸುವ ಲಕ್ಷ್ಮೀಪತಿಯ ದಾಸಗಭಯವಿತ್ತು ಕಾಯೋವರ ದಿಗಂಬರ 5
--------------
ಕವಿ ಪರಮದೇವದಾಸರು
ಗುರುನಾಮ ಸ್ಮರಿಸಿರೊ ಶ್ರೀಗುರುನಾಮ ಸುರುಮುನಿಜರ ಪ್ರಿಯವಾದ ನಾಮ ದ್ರುವ ಬ್ರಹ್ಮ ವಿಷ್ಣುರುದ್ರರಿಗಿದೆ ನಿಜನಾಮ ಪ್ರೇಮದಿಂದ ಸ್ಮರಿಸುವರು ಇದೆ ನಾಮ ಸಮಸ್ತ ಲೋಕಕ್ಕೆ ಸಾರವಾದ ನಾಮ ನೇಮದಿಂದ ತಾರಿಸುವ ದಿವ್ಯನಾಮ 1 ಸಕಲಾಗಮ ಪೂಜಿತರಿದೆ ನಾಮ ಏಕೋಮಯವಾಗಿ ದೋರುವದಿದೆನಾಮ ಶುಕವಾಮ ದೇವರಿಗಿದೆ ನಿಜ ನಾಮ ಸುಖ ಸರ್ವರಿಗೆ ದೋರುವ ಗುರುನಾಮ 2 ಕರ್ಮಬಂಧನ ಛೇದಿಸುವದಿದೆ ನಾಮ ಕರ್ಮದೋರಿ ಕೊಡುವದೀ ಗುರುನಾಮ ಬ್ರಹ್ಮಾನಂದ ಸುಖದೊರುವಾನಂದ ನಾಮ ಧರ್ಮ ಜಾಗಿಸಿಕೊಡುವದೀ ಗುರುನಾಮ 3 ಅಜಮಿಳಗೆ ತಾರಿಸಿದಿದೇ ನಾಮ ಗಜಭಯ ಪರಿಹರಿಸಿದಿದೆ ನಾಮ ಸುಜನರಿಗೆ ಸುಪ್ರಸನ್ನವಾದ ನಾಮ ಮೂಜಗಕೆ ತಾಮುಖ್ಯವಾದ ಗುರುನಾಮ 4 ಅಹಲ್ಯ ಉದ್ಧರಣ ಮಾಡಿದುದಿದೆ ನಾಮ ಪ್ರಲ್ಹಾದÀನ ಪ್ರಾಣಗಾಯಿದಿದೆ ನಾಮ ಫಲುಗುಣ ತಾ ಪಕ್ಷವಾದದುದಿದೆ ನಾಮ ಒಲಿದು ಧ್ರುವಗಥಳವಿತ್ತ ಗುರುನಾಮ 5 ಅಗಣಿತ ಗುಣ ಪರಿಪೂರ್ಣವಾದ ನಾಮ ಸುಗಮ ಸುಪಥಸಾಧನ ಇದೆ ನಾಮ ಯೋಜನ ಸೇವಿಸುವ ನಿಜನಾಮ ನಿರ್ಗುಣಾನಂದವಾಗಿಹ್ಯ ಗುರುನಾಮ6 ಸೂರ್ಯಚಂದ್ರ ಸಮಸ್ತವಂದ್ಯ ಇದೆ ನಾಮ ಕಾರ್ಯಕಾರಣವಾಗಿಹ್ಯ ವಿದೆ ನಾಮ ತೂರ್ಯಾವಸ್ಥೆ ಯೊಳಗೆ ಸೂರಿಗೊಂಬು ನಾಮ ತರಳಮಹಿಪತಿ ತಾರಕ ಗುರುನಾಮ 7
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಗುರುಭಕ್ತಿ ಮನವೆ ನೀ ಮಾಡು ಸ್ಥಿರ ಗುರುತಿಟ್ಟು ಬಾಹುದು ಪರಾತ್ಪರ ಸರಿಗಾಣೆನೊ ಪುಣ್ಯಕೆ ನೋಡಿದರ ಕರಕೊಂಬುದಿದೆ ಸುಖ ಸಜ್ಜನರ 1 ಹಿಡಿಬೇಕು ಸದಾ ಗುರುಭಾವದೃಢ ಉಪಾಧಿ ಜಡ ಪಡಕೊಂಬುದು ಮಾಡಬಾರದು ತಡ ಒಡಲ ಹೊಕ್ಕರ ಸದ್ಗುರು ಕೈಯಬಿಡ 2 ಗುರುನಾಮ ನಿಧಾನ ನೆನಿಯೊ ಸದ ಸುರಲೋಕಕೆ ಪಾವನ ಮಾಡುವದ ಪರತತ್ವಕೆ ಪಾರನೆದೋರುವದ ಸ್ಮರಿಸಿನ್ನು ಮಹಿಪತಿ ಮುಖ್ಯವಿದ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಗುರುಮಧ್ವಮುನಿರಾಯಾ ಎನಗೊಂಬೊದಗಿದಾನು ಸಹಾಯ ಪ ಕತ್ತಲೆ ಕವಿದಿತ್ತು ಸುತ್ತಲೆ ಕಾಣದಂತೆ ಇತ್ತು ಬಟ್ಟೆ ದೃಶ್ಯವಿತ್ತು ಮತ್ತುರೆ ಭವತಮ ಸುತ್ತಲೆ ಮುಸುಕಿರೆ ಉತ್ತಮಾನಂದತೀರ್ಥ ಬಿಡು ಉದಯಸಿದಾ 1 ಹರಿಬೀಜಾವರಿ ಅಲ್ಲಾ ಧರೆಯೊಳು ಸದ್ಗತಿ ದೊರಿಲಿಲ್ಲಾ ಗುರುವೇ ಇರಲಿಲ್ಲಾ ಧರೆಯೊಳು ಹರಿಯನಾವ ಬಲ್ಲ ಸುರರೊಳು ಸುರತರುವರ ವಾಡ ಸೂನು ಧರೆಯೊಳವತರಿಸಿ ಹರಿಪಥ ತೋರಿದಾ 2 ಎಲ್ಲ ರೋಗಕೆ ಮದ್ದು ಸಲ್ಲುವದಿವರ ನಾಮ ಮುದ್ದು ಹುಲ್ಲಜನರ ಸದ್ದು ನಿಲ್ಲದೆ ಪೋದಿ ತಡವಿ ಬಿದ್ದು ಬಲ್ಲಿದ ನರಸಿಂಹ ವಿಠಲನ ನೆನೆಯಲು ಎಲ್ಲ ಕಾಮಿತಫಲ ನಿಜವೆಂದರುಹದಾ 7
--------------
ನರಸಿಂಹವಿಠಲರು
ಗುರುರತ್ನ ಪರಮ ಪ್ರಿಯ ಕರುಣಾನಿಧೆ ನಿಮ್ಮ ಶರಣು ಹೊಕ್ಕೆನು ಪೊರೆಯಬೇಕೆನ್ನ ದೊರೆಯೆ ಪ. ವರ ತಂದೆ ಮುದ್ದುಮೋಹನ ದಾಸಾರ್ಯರೆ ಪರಿಪರಿಯಿಂದ ಭಕ್ತರನು ಪೊರೆಯುವರೆ ಪರಮಾರ್ಥ ಚಂದ್ರೋದಯದ ಪ್ರಕಾಶಕರೆ ಪರಿಮಳ ಸುನಾಮದಲಿ ಸರ್ವತ್ರವ್ಯಾಪಕರೆ 1 ತರತರದ ಸುಗುಣ ಮಣಿಮಾಲೆಯಿಂ ಶೋಭಿಪರೆ ವರಶಿಷ್ಯ ರತ್ನಪದಕಗಳಿಂದಲೊಪ್ಪಿಹರೆ ಸುರರಗಣ ಮಧ್ಯದಲಿ ಪರಿಶೋಭಿಸುತಲಿಹರೆ ಮೊರೆಹೊಕ್ಕವರ ಕಾಯ್ವ ಪರಮ ಕರುಣಾಕರರೆ 2 ಕನಸಿನಲಿ ಮನಸಿನಲಿ ಕಳವಳವ ಹರಿಸುವರೆ ಮನಸಿಜಪಿತನನ್ನು ಮನದಿ ನೆನೆಯುವರೆ ಇನಕೋಟಿತೇಜ ಶ್ರೀ ಶ್ರೀನಿವಾಸನ ಕೃಪೆಗೆ ಅನುಮಾನವಿಲ್ಲದೆಲೆ ಅರ್ಹತೆಯ ಕೊಡಿಸುವರೆ 3 ಭಕ್ತರನು ಪೊರೆಯುವ ಕಾರುಣ್ಯನಿಧಿ ಎಂದು ಪಾದ ನಂಬಿರುವೆ ಭಕ್ತವತ್ಸಲ ಶೇಷಶಯನನಾ ಸೇವೆಯನು ನಿತ್ಯ ಮಾಳ್ಪಂಥ ಸೌಭಾಗ್ಯ ನೀಡುವುದು 4 ಕವಿದಿರುವ ಅಜ್ಞಾನಪರೆಯನ್ನು ಛೇದಿಸುತ ಸವಿಯಾದ ಹರಿಯ ನಾಮಾಮೃತ ಉಣಿಸಿ ಪವನನಂತರ್ಯಮಿ ಗೋಪಾಲಕೃಷ್ಣವಿಠ್ಠಲ ತವಕದಿಂದಲಿ ಪೊಳೆವ ಸುಜ್ಞಾನ ನೀಡುವುದು 5
--------------
ಅಂಬಾಬಾಯಿ
ಗುರುರಾಘವೇಂದ್ರ ಶರಣರ ಸುರ ತರುವೆ ಕರುಣಸಾಂದ್ರ ಪ ಧರೆಯೊಳು ನಿನ್ನ ಶ್ರೀ ಚರಣಕಮಲ ಪ್ರಭೆ ಪರಿ ಉದ್ಧರಿಸು ಈ ಶರಣನ್ನ ಅ.ಪ. ಸುಕೃತ ಸ್ವರೂಪ ದರುಶನ ಮಾತ್ರದಿ ಭವ ಶ್ರಮ ಹರಿಸುವ ಪ್ರತಾಪ ರಮೆ ಅರಸನ ಗುಣ ಸಮುದಾಯದೊಳು ಮಗ್ನ ಭ್ರಮೆರಹಿತ ಸ್ಥಿರಚಿತ್ತ ನಮೋ ನಮೋ ನಿನಗೆ ಅಮಿತ ಮತಿಯ ಕರುಣ ಕವಚವ ಅಮಿತಕಾಲದಿ ಕೊಟ್ಟು ಮೆರೆಯುವ ಅಮಿತ ಮಂಗಳದಾಯಿ ತತ್ವದ ಕಮಲ ವೈಭವ ಸಲಹಲೆನ್ನನು 1 ಪಾವನ ಸುಯತಿ ರನ್ನ ಲಾಲಿಸು ವಾಕು ಸಾವಧಾನದಿ ಘನ್ನ ಭವ ಭವಣೆ ದಾವಾಗ್ನಿಯೊಳು ನೊಂದೆ ಶ್ರೀ ವರನ ದಾಸ ಕಾವ ದೃಷ್ಟಿಯಲಿ ನೋಡೊ ನಿತ್ಯ ಮಂಗಳ ಭಾವರೂಪ ಗುಣತ್ರಯಗಳ ಆವ ಕಾಲಕು ಬಿಡದೆ ನೋಡುವ ಭೂವಿ ಬುಧಮಣಿ ಪಾಲಿಸೆನ್ನನು 2 ತುಂಗಾತೀರ ನಿವಾಸ ರಾಘವೇಂದ್ರ ಗುರು ತುಂಗ ಮಹಿಮ ನಿರ್ದೋಷ ಮಂಗಳಾಸಮಹರಿ ಗಂಗಾಪಿತನ ಕೂಡಿ ತುಂಗಪೂಜೆಯ ಕೊಂಡ್ವರಂಗಳ ಬೀರುವ ಪಾದ ತೀರ್ಥದಿ ಭವ ಭಂಗ ಬಗೆಯನು ಬಲ್ಲ ಮಹಾತ್ಮ ರಂಗ ಜಯೇಶವಿಠಲ ದೇವನ ಸಂಗ ನೀಡುವ ಕೃಪೆಯ ಮಾಳ್ಪ 3
--------------
ಜಯೇಶವಿಠಲ
ಗುರುರಾಘವೇಂದ್ರರ ಚರಣವ ಸ್ಮರಿಸಿರೊ ಪ ಗುರುರಾಘವೇಂದ್ರರ ಚರಣವ ಸ್ಮರಿಸಲು ದುರಿತ ರಾಶಿಗಳೆಲ್ಲ ಕರಗಿ ಪೋಗುವುವುಅ.ಪ. ಮಧ್ವ ಮತಾಬ್ಧಿಯೊಳುದ್ಭವಿಸಿದಂಥ ಶುದ್ಧ ಪೂರ್ಣಿಮ ಚಂದ್ರ ಸದ್ಗುಣ ಸಾಂದ್ರ 1 ಸುಧೀಂದ್ರ ಯತಿಕರ ಪದುಮ ಸಮುದ್ಭವ ಸದೆಯ ಸದಾರ್ಚಿತ ಪದ ನುತ ಖ್ಯಾತ2 ಬಂದಂಥ ಭಕುತರ ವೃಂದವ ಪೊರೆಯಲು ಕುಂದದೆ ವರಮಂತ್ರ ಮಂದಿರದೆಸೆವ 3 ನಿರುತದಿ ಭಜಿಸುವ ವರಗಳ ಕೊಡುವ 4 ಸಕಲಾತರ್ಯಾಮಿಯು ಲಕುಮಿಕಾಂತನೆಂದು ಪ್ರಕಟಿಸಿ ಮೆರೆದರ್ಭಕನಂಶಜರೆಂದು 5
--------------
ಲಕ್ಷ್ಮೀನಾರಯಣರಾಯರು
ಗುರುರಾಜ | ನಮಿಪರ ಸುರಭೋಜ ಗುರುರಾಜ ಪ. ವರತಂದೆ ಮುದ್ದುಮೋಹನರೆಂದೆನಿಸುತ ಮೆರೆಯುತ ಜಗದೊಳು ಪೊರೆಯುವ ಕರುಣಿ 1 ಅಜ್ಞತೆ ತೊಲಗಿಸಿ ಸುಜ್ಞತೆ ಕೊಡುತಲಿ ವಿಘ್ನವ ತರಿಯುವ ಪ್ರಾಜ್ಞ ಮೂರುತಿಯೆ 2 ಸರಸಿಜಾಕ್ಷನ ಪದ ಹರುಷದಿ ಭಜಿಸುವ ಪರಮಪ್ರಿಯರು ಎಂದು ಬಿರುದು ಪೊತ್ತಿಹರೆ 3 ನಾಗಶಯನನಿಗೆ ಭೋಗವಪಡಿಸುವ ಆಗಮಜ್ಞರೆ ನಿಮಗೆ ಬಾಗುವೆ ಸತತ 4 ಸಾಸಿರ ಫಣೆಯಿಂದ ಸೂಸುವ ಕಾಂತಿಯೊಳ್ ವಾಸವ ವಿನುತ 5 ದೇವತಾಂಶದ ಗುರು ಪವಮಾನಿಗೆ ಪ್ರಿಯ ಭಾವಿಸಿ ಭಜಿಪರ ಕಾವ ಕರುಣಾಳು 6 ಶಾಂತಚಿತ್ತದಿ ಬಹು ಸಂತೋಷಪಡುತಲಿ ಅಂತರಂಗದಿ ಹರಿಯ ಚಿಂತಿಸುತಿರುವ 7 ಉದ್ಭವಿಸಿ ಜಗದಿ ಅಧ್ಭುತ ಮಹಿಮೆಯ ಒಬ್ಬೊಬ್ಬರಿಗೆ ತೋರಿ ಹಬ್ಬಿಪೆ ಹರುಷ 8 ಸೃಷ್ಟೀಶ ಗೋಪಾಲಕೃಷ್ಣವಿಠ್ಠಲನನು ದೃಷ್ಟಿಗೆ ತೋರಿಸಿ ಕಷ್ಟ ಬಿಡಿಸಿರಿ 9
--------------
ಅಂಬಾಬಾಯಿ
ಗುರುರಾಜ ಕರುಣದಿ ನೋಡಯ್ಯ ಪ ಸುರಗಣ ಒಡೆಯನೆ ಕರವೆತ್ತಿ ಮುಗಿಯುವೆ ಕರೆಕರೆ ಮಾಡದೆ ಚರಣವ ತೋರಿಸು ಅ.ಪ. ಭವ ಮೋಚಕನ ಬಿಟ್ಟು ಭವಣೇಗಳನೆಪಟ್ಟು ನಾ ಒದ್ದಾಡುವೆ ಇಂದು ಅವನಿಯ ಜನರೊಳು ಅವಗುಣ ಪ್ರತಿಮೆಯ ತವಕದಿ ಪೊರೆಯದೆ ಜವನಡಿಕಳಿಸೊದೇ 1 ಅನುದಿನದೀ ನಾನು ಅನುಮಾನದಿಂದಲಿ ನೊಂದೆ ಅನಿಲನ ಹಾದಿಯ ಬಿಟ್ಟು ಅನ್ಯರಾನಂಬೀ ಕೆಟ್ಟೆ ತನುಮನ ನಿನ್ನಡಿ ಅರ್ಪಿಸಿನಂಬಿದೆ ದಿನದಿನ ದಯದಿಂ ನಿನ್ನವರೊಳು ಸೇರಿಸೊ 2 ಕಾಮಕೇಳಿಯಲಿ ಮುಳುಗಿ ಕಾಮಿನಿಯರ ಬರೆದೆ ಕಾಮಜನಕನ ಮರೆತೆ ಸೋಮಶೇಖರ ಪ್ರಿಯನೆ ಶಮದಮಪಾಲಿಸಿ ತಾಮಸ ಓಡಿಸಿ ಸಾಮಜವರದನ ಪ್ರೇಮವ ಕೊಡಿಸೋ 3 ಜ್ಞಾನಶೂನ್ಯನು ಆಗಿ ಶ್ವಾನಂದದಿ ಇರುವೆ ಮಾನಾಭಿಮಾನವನ್ನು ನಿನಗೆ ಅರ್ಪಿಸಿದೆನೊ ಅನಿಲನಶಾಸ್ತ್ರದಿ ಜ್ಞಾನವ ನೀ ನೀಡಿ ಮನದಲಿ ನಲಿನಲಿ ಮುನಿಗಳ ಒಡೆಯಾ 4 ವಿಧವಿಧ ಟೀಕೆಗಳನು ಮುದದಿಂದಲಿ ಮಾಡಿ ಮೋದವಂತದ ತತ್ವಗಳ ಮುಂದಕ್ಕೆ ತಂದೆಯೋ ಸದಯದಿ ಜಯಮುನಿ ವಾಯ್ವಾಂತರ್ಗತ ಮಾಧವ ಕೃಷ್ಣವಿಠಲನ ತೋರುತ 5
--------------
ಕೃಷ್ಣವಿಠಲದಾಸರು
ಗುರುರಾಜ ಗುರುಸಾರ್ವಭೌಮ ಪ ಗುರುರಾಜ ತವ ಪಾದ ಸರಸಿಜಯುಗಲಕ್ಕೆ ಮೊರೆಪೊಕ್ಕ ಜನರನ್ನ ಪೊರೆ ಎಂದೇ ಅ.ಪ ಶರಣ ಪಾಲಕನೆಂಬೊ - ಬಿರುದು ಬೀರುತಲಿದೆ ಶರಣರ ಮರೆವೊದು ಥರವೇನೋ 1 ಸಾರಿದಜನರ‌ಘ ದೂರಮಾಡುವೆನೆಂಬೊ ಧೀರರ ವಚನವು ಸಾರುತಿದೆ 2 ದೂರದೇಶದಿ ಜನ - ಸಾರಿ ಬಂದರೆ ವಿ - ಚಾರಿಸಿ ಹರಕೆ ಪೊರೈಸುವೀ 3 ಕುಷ್ಟಾದಿ ಮಹರೋಗ ನಷ್ಟಮಾಡುತಲ - ಭಿಷ್ಟೇಯ ಪೂರ್ತಿಪ ಮಹ ಶ್ರೇಷ್ಠನೆ 4 ಆದಿವ್ಯಾಧಿ ಉ-ಪಾಧಿ ಸಂಘಗಳನ್ನು ಮೋದ ಸಲಿಸುವಿ 5 ಸತಿಜನರಿಗೆ ಅತಿ ಹಿತದಿಂದ ಸುತರನ್ನ ಸತತ ನೀಡುವಿ ಯತಿ ಕುಲನಾಥ 6 ಮತಿ ಹೀನ ಅತಿ ಮೂರ್ಖ ತತಿನಿನ್ನ ಭಜಿಸಲು ವಿತತ ಭಕುತಿ ಜ್ಞಾನ ನೀಡುವೀ 7 ಮೂಕ - ಬಧಿರ - ಪಂಗು - ಏಕೋಭಾವದಿ ಸೇವೆ ಏಕಮನದಿ ಮಾಡೆ ರಕ್ಷೀಪಿ 8 ಅವರ ಮನೋ ಬಯಕೆ ಹವಣಿಸಿ - ನೀಡುತ ಅವನಿಯೊಳಗೆ ನೀ ಮೆರೆಯುವೀ 9 ಅಂಧಜನಕೆÀ ಚಕ್ಷು - ವಂಧ್ಯಜನಕೆ ಸುತರು ಬಂದ ಬಂದವರರ್ಥ ಪೂರೈಸುವೀ 10 ಪರಮಂತ್ರ ಪರಯಂತ್ರ ಪರಕೃತ್ಯಪರಮಾಹಿ ಪರಿಪರಿ ವ್ಯಥೆಗಳ ಹರಿಸುವೀ 11 ದುರುಳಜನರ ಬಾಧೆ ಮೊರಳುಮಾಯದ ಮೊದ್ದು ಕಿರಳುಪದ್ರಗಳೆಲ್ಲ ಕಳೆಯುವೀ 12 ಕಾಮಿತ ಫಲಗಳ - ಕಾಮಿಪ ಜನರಿಗೆ ಪ್ರೇಮದಿ ನೀಡುವೊ ಧ್ವರಿ ನೀನೇ 13 ಅನ್ನ ವಸನ ಧನ - ಧಾನ್ಯ ಹೀನರಗಿನ್ನು ಮನ್ನಿಸಿ ನೀನಿತ್ತು ಸಲಹುವೀ 14 ಅಧಿಕಾರ ಕಳಕೊಂಡು ಬದಕಲಾರದ ಜನ ವದÀಗಿ ನಿನ್ನನು ಭಜಿಸೆ ಕರುಣಿಪೀ 15 ಮಾನವ ನಿನ್ನ ಸೇವೆ ಮಾಡುವನವ ಕೋವಿದನಾಗುವ ನಿಶ್ಚಯಾ 16 ಇನಿತೆ ಮೊದಲಾದ ಘನತರ ಮಹಿಮವು ಜನರಿಗೆ ಶಕ್ಯವೆ ಗುರುರಾಯಾ 17 ಸುರತರು ಸುರಧೇನು ವರಚಿಂತಾಮಣಿ ನೀನೆ ಶರಣವತ್ಸಲ ಬಹು ಕರುಣೀಯೇ 18 ದಿನ ದಿನ ಮಹಿಮವು ಘನ ಘನ ತೋರೋದು ಬಿನಗು ಮಾನವರಿಗೆ ತಿಳಿಯಾದೋ 19 ಕರುಣಾನಿಧಿಯೆ ನೀನು ಶರಣ ಮಂದಾರನೆ ಶರಣ ವತ್ಸಲ ನಿನಗೆ ಶರಣೆಂಬೆ 20 ವಸುಧಿತಳದಿ ನೀನೆ ವಶನಾಗೆ ಜನರಿಗೆ ವ್ಯಸನಗಳುಂಟೇನೊ ಪೇಳಯ್ಯಾ 21 ದುರಿತ ದುಷ್ಕøತವೆಲ್ಲ ದೂರದಲೋಡೋವು ಕರಿಯು ಸಿಂಹನ ಕಂಡತೆರನಂತೆ 22 ನಿನ್ನ ನಾಮದ ಸ್ಮರಣೆ ಘನ್ನ ರೋಗಗಳನ್ನು ಚೆನ್ನಾಗಿ ನಾಶನ ಮಾಳ್ಪೋದೋ 23 ರಾಘವೇಂದ್ರ ಗುರು ಯೋಗಿಕುಲಾಗ್ರಣಿ ವೇಗಾದಿ ಪೊರೆದೆನ್ನ ಪಾಲಿಪೆ 24 ಜನನಿ ಜನಕರು ತಮ್ಮ ತನಯರ ಪೊರೆದಂತೆ ದಿನದಿನ ನೀನೇವೆ ಸಲಹೂವಿ 25 ಅನಿಮಿತ್ತ ಬಾಂಧವ ಅನುಗಾಲ ನೀನಿರೆ ಜನರು ಮಾಡುವ ಬಾಧೆÉ ಎನಗೇನೋ 26 ಮನಸಿನೊಳಗೆ ನಿತ್ಯ ನೆನೆಯುತ ತವ ಪಾದ ವನಜ ಯುಗಳ ಮೊರೆ ಪೊಂದಿದೆ 27 ನಿನ್ನ ಮಹಿಮ ಶ್ರವಣ ನಿನ್ನ ಗುಣಕೀರ್ತನ ನಿನ್ನ ಮೂರ್ತಿಧ್ಯಾನ ನೀಡೈಯ್ಯಾ 28 ನಿನ್ನ ಉಪಾಸನ ನಿನ್ನ ದಾಸತ್ವವ ಚನ್ನಾಗಿ ಎನಗಿತ್ತು ಸಲಹೈಯ್ಯಾ 29 ನಿನ್ನನುಳಿದು ಈಗ ಮನ್ನಿಸಿ ಪೊರೆವಂಥ ಘನ್ನ ಮಹಿಮರನ್ನ ಕಾಣೆನೋ 30 ದಾತ ಗುರು ಜಗ ನ್ನಾಥ ವಿಠಲಗತಿ ಪ್ರೀತಿ ಪಾತ್ರನು ನೀನೆ ನಿಜವಯ್ಯೊ 31
--------------
ಗುರುಜಗನ್ನಾಥದಾಸರು
ಗುರುರಾಜ ವರದ ವಿಠಲ | ಪೊರೆಯ ಬೇಕಿವಳಾ ಪ ಮರುತಂತರಾತ್ಮಕನೆ | ಪ್ರಾರ್ಥಿಸುವೆ ಹರಿಯೇ ಅ.ಪ. ಸೃಷ್ಟಾದಿ ಸತ್ಕರ್ಮ | ಸುಗುಣಮೂರುತಿದೇವಕಷ್ಟಗಳ ಪರಿಹರಿಸಿ ಕಾಪಾಡೋ ಹರಿಯೇಕೃಷ್ಣಮೂರುತಿ ದೇವ | ಅಷ್ಟ ಸೌಭಾಗ್ಯಗಳಕೊಟ್ಟು ಸಂತೈಸುವುದು | ಕಾರುಣ್ಯ ಮೂರ್ತೇ 1 ಆ ಪನ್ನ ಜನಪಾಲ | ಗೋಪಿಜನಪ್ರಿಯತಾಪತ್ರಯ ಕಳೆದು | ಕಾಪಾಡೊ ಹರಿಯೇಶ್ರೀಪತಿ ನೀನಾಗಿ | ಕೋಪಾದಿಗಳ ಕಳೆದುಕೈಪಿಡಿದು ಸಲಹೆಂದು | ಪ್ರಾರ್ಥಿಸುವೆ ಹರಿಯೇ 2 ಪತಿಸುತರು ಹಿತರಲ್ಲಿ | ಹರಿಯುವ್ಯಾಪ್ತನು ಎಂಬಮತಿಯನ್ನೆ ಕರುಣಿಸುತ | ಕಾಪಾಡೊ ಹರಿಯೇಸುಪ್ತಿಜಾಗ್ರತ ಸ್ವಾಪ | ಮಾರವಸ್ಥಾ ಸ್ವಾಮೀಆಪ್ತ ಗುರು ಗೋವಿಂದ | ವಿಠಲೆಂದು ತಿಳಿಸೊ 3
--------------
ಗುರುಗೋವಿಂದವಿಠಲರು