ಒಟ್ಟು 2773 ಕಡೆಗಳಲ್ಲಿ , 112 ದಾಸರು , 1907 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಸಾಗಿ ಬಾರಯ್ಯ ನೀ | ಬಾಗಿ ನಮಿಸುವೇಯೋಗಿಗಳರಸನೇ ಶ್ರೀನಿವಾಸ ಪ ಭೋಗಿಶಯನನೆ ನಿನ್ನ ಭಾಗವತರು ಬಂದುಜಾಗು ಮಾಡದೆ ನಿನ್ನ ಬಾಗಿಲೊಳು ನಿಂತಿಹರೋ ಅ.ಪ. ಇಂದಿರೇ ರಮಣಗೋವಿಂದ ನೀನೇ ಗತಿಯೆಂದು ಭಜಿಸುತಿರಲುಆನÀಂದದಿಂದತÀಂದೆಯ ಬಾಧೆಗೆ ತಂದು ತೋರಲು ಸ್ತಂಭ ತಂದೆ ತಾಡನೆಯ ಮಾಡಲುಬಂದೆಯಾ ಪರಿಪರಿ ವಿಧ ಭಯದಿಂದವೋಡಲು ಬಂದು ಅಸುರನ್ನಆರ್ಭಟಿಸಿ ಕೆಡಹುತಛಂದದಲಿ ಬಗೆಯುತಸುರನ್ನ ಕೊರಳೊಳು ಮಾಲೆ ಅಂದು ಧರಿಸಿದ ಅಧಿಕ ಸಂಪನ್ನಪ್ರಳಯಾಗ್ನಿಯಂತಿರೆ ನಿನ್ನ ಸ್ತುತಿಸಲು ಅರಿಗೊಸೆದಿನ್ನು ಅನುತಿರಲುನಿನ್ನಯಮುಂದೆ ಭಜಿಸುತ ಕಂಡು ಬರಲಾನಂದದಿಂದಲಿ ಚಂದದಿ ಸಲಹಿದಾನಂದದಲಿ ಮಂದರೋದ್ಧರ ಎನ್ನ ಸಲಹೋ 1 ಮೃಗ ಬೇಡಲು ಬಾಣ ಎಸೆಯಲು ಅದು ಲಕ್ಷ್ಮಣಾಯೆಂದು ಕೂಗಲುಮತ್ತಾತ ಪೋಗಲು ಇತ್ತ ರಾವಣನು ಕರೆದೊಯ್ಯೆ ಸತಿಯಳ ವಾತಸುತ ತಾನೆನಿಸೇ ನೀ ಮುನ್ನಾ ಅವ ಪೋಗೆ ಉಂಗುರ ಖ್ಯಾತಿಯಿಂದಲಿನೀಡಲದಕಿನ್ನು ತನುಮನದ-ಲತಿ ಭೋಗದಿ ಶಿಖೆಯ ಶಿರೋಮಣಿಯನ್ನೆ ಕೊಡಲನುಗ್ರಹದಲಿಛಾತಿಯಿಂದಲಿ ಅವಗೆ ವಿಧಾತ ಪದವಿಯ ಪಾಲಿಸಿದೆ ಜಗನ್ನಾಥಇಂದ್ರಾದ್ಯಮರ ವಂದಿತ ವೀತಭಯ ಜಗನ್ನಾಥ ಸಲಹೋ2 ಮಂಗಳಾಂಗನೆ ನಿನ್ನ ಸುಖವ ಕೊಟ್ಟು ಅಂಗನೆಯರಬಾಧೆಬಿಡಿಸೊ ಇಂದುಅಂಗನೇಯರು ಬಂದು ಭಂಗಪಡಿಸಲದಕೆ ಪೋಗುತಾ ಮಾರನ್ನಬಾಧೆಯ ಕಳೆಯುತಾಪರಿಪರಿಯ ಸುಖಗಳ ಸಂಗಡಿಲ್ಲದೇ ನೀಡಿಯೊ ಮಲ್ಲಮರ್ದನನೇ ಎನುತಿರೆಬೇಗದಿಂದಲಿ ಓಡಿಪೋದೆಲ್ಲೊ ಭಕ್ತರನು ಸಲಹುವೆನೆಂಬೋಬಿರುದು ನಿನಗೆ ಉಂಟಲ್ಲಾಅನುತಿರಲು ನಿನ್ನಯ ಎನ್ನ ಮನ ಉತ್ತಂಗಸುತಸತ್ಸಂಗ-ವೀವುದು ವಿಹಿತ ದೇವನೇತುರಂಗನಾಥನೇ ರಂಗವಿಠಲನೆ ದೇವ ದೇವರ ದೇವ ಸಲಹೋ3
--------------
ಶ್ರೀಪಾದರಾಜರು
ಸಾಧನಕ್ಕೆ ಬಗೆಗಾಣೆನೆನ್ನಬಹುದೆ ಸಾದರದಿ ಗುರುಕರುಣ ತಾ ಪಡೆದ ಬಳಿಕ ಪ ಕಂಡಕಂಡದ್ದೆಲ್ಲ ಕಮಲನಾಭನ ಮೂರ್ತಿ ಉಂಡು ಉಟ್ಟದ್ದೆಲ್ಲ ವಿಷ್ಣು ಪೂಜೆ ತಂಡತಂಡದ ವಾರ್ತೆ ವಾರಿಜಾಕ್ಷನ ಕೀರ್ತಿ ಹಿಂಡು ಮಾತುಗಳೆಲ್ಲ ಹರಿಯ ನಾಮ 1 ವಾಗತ್ಯಪಡುವದೆ ವಿಧಿನಿಷೇಧಾರಚರಣೆ ರೋಗಾನುಭವವೆಲ್ಲ ಉಗ್ರತಪವು ಆಗದವರಾಡಿಕೊಂಬುವುದೆ ಆರ್ಶೀವಾದ ಬೀಗುರುಪಚಾರವೇ ಭೂತದಯವು 2 ಮೈಮರೆತು ಮಲಗುವುದೆ ಧರಣಿ ನಮಸ್ಕಾರ ಕೈಮೀರಿ ಹೋದದ್ದೆ ಕೃಷ್ಣಾರ್ಪಣ ಮೈ ಮನೋವೃತ್ತಿಗಳೆ ವಿಷಯದಲಿ ವೈರಾಗ್ಯ ಹೋಯ್ಯಾಲಿತನವೆಲ್ಲ ಹರಿಯ ವಿಹಾರ 3 ಹಿಡಿದ ಹಟ ಪೂರೈಸಲದು ಹರಿಯ ಸಂಕಲ್ಪ ನಡೆದಾಡುವೋದೆಲ್ಲ ತೀರ್ಥಯಾತ್ರೆ ಬಡತನವು ಬರಲದೇ ಭಗವದ್ಭಜನೆಯೋಗ ಸಡಗರದಲ್ಲಿಪ್ಪುದೆ ಶ್ರೀಶನಾಜ್ಞಾ 4 ಬುದ್ಧಿಸಾಲದೆ ಸುಮ್ಮನಿರುವುದೇ ಸಮ್ಮತವು ಯದೃಚ್ಛಾಲಾಭವೇ ಸುಖವುಯೆನಲು ಮಧ್ವಾಂತರ್ಗತ ಶ್ರೀ ವಿಜಯವಿಠ್ಠಲರೇಯ ಹೃದ್ಗತಾರ್ಥವ ತಿಳಿದು ಒಪ್ಪಿಸಿಕೊಳನೆ 5
--------------
ವಿಜಯದಾಸ
ಸಾಧಿಸಿ ಗುರುಗುಟ್ಟು ಭೇದಿಸಿ ಮನವಿಟ್ಟು ವೇದಕೆ ನಿಲುಕದ ಹಾದಿಯದೋರುವ ಸದ್ಗುರು ದಯಗೊಟ್ಟು ಧ್ರುವ ಮಾತಿಲೆ ಆಡುವ ಙÁ್ಞನ ಯಾತಕ ಬಾಹುದೇನ ಆತ್ಮಕದೋರುವ ನಿಜಖೂನ ಪ್ರತ್ಯೇಕವಾದ ಸ್ಥಾನ 1 ಮಾತೆ ಆಗೇದ ಮುಂದೆ ರೀತ್ಯಡಗೇದ ಹಿಂದೆ ನೀತಿಯ ತೋರುವ ಗುರುತಂದೆ ಜ್ಯೋತಿಸ್ವರೂಪೊಂದೆ 2 ತಾಯಿತವಾಗೆದ ಗುಟ್ಟು ಧ್ಯಾಯಿಸಿ ರೀತಿ ಇಟ್ಟು ಆಯಿತು ನಿಜಗುಣ ಬಿಟ್ಟು ಹೋಯಿತು ಜನ ಕೆಟ್ಟು 3 ಗುಟ್ಟು ಕೇಳಿ ಪೂರ್ಣ ಮುಟ್ಟಿ ಮಾಡಿ ಮನ ಇಟ್ಟುಕೋ ಮಹಿಪತಿಗುರುಬೋಧ ನಿಜಧನ 4
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಸಾಧಿಸಿ ನೋಡಿ ಸುವೃತ್ತಿ ಭೇದಿಸಿಕೂಡಿ ಸುಮುಕ್ತಿ ಧ್ರುವ ಹಿಡಿದು ಸಾರುವ ಶ್ರುತಿ ನಿಜಗೂಡಿ ಗೂಡಿನೊಳಗೆ ಬೆರೆದಾಡಿ ಇಡಾಪಿಂಗಳ ನಾಡಿ ನಡುವಾವಿನ ಜಾಡೆ ಹಿಡಿದು ಘನಗೂಡಿ 1 ಏರಿನೋಡಲು ಆರು ಚಕ್ರತಾಂ ದೋರುತದೆ ಸುಪಥ ತಿರುಗಿನೋಡಲು ತನ್ನೊಳು ತಾ ಅಮೃತ 2 ಹಿಡಿದು ಗುರುಪಾದಾರವಿಂದ ಪಡೆದ ಮಹಿಪತಿ ಅನಂದ ಗೂಢ ಗುರುತವಾಯಿತು ಬಲು ಚಂದ ಕಡಿದ್ಹೋಯಿತು ಭವಬಂಧ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಸಾಧಿಸು ಪರಲೋಕ ಮನವೆ ನೀ ಸಾಧಿಸು ಪರಲೋಕ ಪ ಮಾಧವನ ಮಹ ಪಾದದಾಸರಿಂದ ಶೋಧಿಸಿ ನಯದಿ ಸಂಪಾದಿಸಿ ಜ್ಞಾನವ ಅ.ಪ ಭೇದಬುದ್ಧಿ ಬಿಡೋ ಸುಜನರಿಂ ವಾದಿಸಿ ಕೆಡಬೇಡೋ ಆದರದಿಂದಲಿ ಸಾಧು ಸಂತರ ಸು ಬೋಧ ವಾಕ್ಯಗಳ ಮೋದದಿಂ ಕೇಳುತ 1 ರಾಗರಹಿತನಾಗೋ ಸಂಸಾರ ಭೋಗದಾಸೆ ನೀಗೋ ಯೋಗಿಗಳಿಗೆ ತಲೆವಾಗಿ ದಿಟದಿ ನೀ ಹೋಗಲಾಡಿಸಿ ಭವಬೇಗ ಸುಪಥಕ್ಹತ್ತಿ 2 ಕಾಮಿತಂಗಳ ಅಳಿಯೋ ತನುಧನ ಪ್ರೇಮಮೋಹ ಕಳೆಯೋ ಕಾಮಜನಕ ನಮ್ಮ ಭೂಮಿಜೆಪತಿ ಶ್ರೀ ರಾಮನಾಮಬೆಂಬ ವಿಮಾನವೇರಿ 3
--------------
ರಾಮದಾಸರು
ಸಾನುರಾಗ ಯತಮಾನಸ ಮೇರೆ ಪ ಹೃದಯಪರಿಪದ ಮಿಳನಾರೆ 1 ಜಪಕಾಮುಕರೋರೆ2 ದೇಹಗೇಹಧನ ಮೋಹನ ಲೇರೆ ಶ್ರೀಹರಿ ಸ್ಮರಣ ಕಾಂಹಿ ಚಲೇರೆ3 ಪುತ್ರ ಮಿತ್ರ ಬಹು ಶತ್ರುಕುಮಾರವೃತ್ರ ವೈರೀಸುತ ಮಿತ್ರನಗಾರೆ4 ನರಸಿಂಹ ಭಜೊರೆ 5 ಕಮಲಾಕ್ಷಕುಲಾರೆ 6 ವಾಸುದೇವ ನಿಜ ದಾಸಕು ಹೊರೆ 7 ಚಿದ್ರೂಪಕ ಹೋರೆ 8 ಪರಮ ಪುರುಷ ನರಹರಿ ಕರುಣೀರೆ- ವರದವಿಠಲ ಕರಿವರ ಧಣೀರೆ 9
--------------
ಸರಗೂರು ವೆಂಕಟವರದಾರ್ಯರು
ಸಾಮಗಾಯನ ಲೋಲ ವಿಠ್ಠಲನೆ ಸಲಹೋ ಪ ಕಾಮಿತಾರ್ಥಗಳಿವಗೆ ಪ್ರೇಮದಲಿ ಕೊಡುತಲಿಶ್ರೀ ಮನೋಹರ ಹರಿಯೆ ಕಾಪಾಡೊ ಇವನಾ ಅ.ಪ. ಹರಿಗುರೂ ಸದ್ಭಕ್ತಿ | ತರತಮದ ಸುಜ್ಞಾನನಿರುತ ಕರುಣಿಸಿ ಅರಿಪು | ಮೂರೆರಡು ಭೇದಾಹರುಷ ಕ್ಷೇಶಾದಿಗಳು | ಹರಿಯಧೀನಗಳೆಂಬಅರಿವಿನಿಂದಲಿ ದ್ವಂದ್ವ | ಸಹನೆಗಳನೀಯೊ 1 ಲೌಕಿಕದಿ ನಿನ್ನಾನೇಕ ಬಗೆ ವ್ಯಾಪ್ತಿಗಳ ತೋಕನಿಗೆ ತಿಳಿಸುತ್ತ ಸಾಕಬೇಕಿವನಾಪ್ರಾಕ್ಕು ಕರ್ಮವ ಕಳೆದು ಗೋಕುಲಾನಂದ ಹರಿನೀಕೊಡು ಸತ್ಸಂಗ | ಏಕಾಂತಿಕರ ಪ್ರಿಯನೆ 2 ಎಲ್ಲ ಬಲ್ಲವಗಿನ್ನು ಸೊಲ್ಲುಂಟೆ ನಾಪೇಳಿಮಲ್ಲ ಮರ್ಧನ ದೇವ | ಪ್ರಹ್ಲಾದ ವರದಾಕ್ಷುಲ್ಲಕನ ಕರಪಿಡಿದು | ಬಲ್ಲಿದನ ಮಾಡೆಂದುಚೆಲ್ವ ಗುರು ಗೋವಿಂದ ವಿಠಲ ಪ್ರಾರ್ಥಿಸುವೇ 3
--------------
ಗುರುಗೋವಿಂದವಿಠಲರು
ಸಾಯವಲ್ಲದೋ ಮನಸು | ಕಾಯದೊಳಗೆ ಕುಳಿತುಕೊಂಡು | ಬಾಯ ಬಿಡಿಸುತಿಹುದು ಜನಕೆ ಪ ಕಾಲಿಲ್ಲದೆ ಆಡುತಿಹುದು | ನಾಲಿಗಿಲ್ಲದೆ ನುಡಿಯುತಿಹುದು |ಕಣ್ಣಿಲ್ಲದೆ ನೋಡುತಿಹುದು | ಕರ್ಣವಿಲ್ಲದೆ ಕೇಳುತಿಹುದು 1 ಎತ್ತ ಹೋದರೆನ್ನ ಬೆನ್ನ | ಹತ್ತಿಬಂದು ಕಾಡುತಿಹುದು |ಕಿತ್ತಿ ಇದರ ಬೇರನೆನಗೆ ಮತ್ತೆ ತೋರಿಸುವವರ ಕಾಣೆ 2 ಇಂದು ಶರಣು ಹೊಕ್ಕು ಅವರ | ಹಿಂದೆ ಕಳೆಯಬೇಕಿದನ 3
--------------
ಭಾವತರಕರು
ಸಾರ ಪ ಧರೆಯನಾಳಿದ ತ್ರಿಶಂಕು ದೊರೆಯು ತಾನೆಲ್ಲಿಹರಿಶ್ಚಂದ್ರ ಮೊದಲಾದ ಚಕ್ರವರ್ತಿಗಳೆಲ್ಲಿಶರಧಿ ಮಧ್ಯದೊಳಿದ್ದ ರಾವಣಾಸುರನೆಲ್ಲಿಸಿರಿಯುಳ್ಳ ಕೌರವರು ಪಾಂಡವರು ತಾವೆಲ್ಲಿಧರೆಗಿಳಿದು ಪೋದಾತ ವಾಲಿಯು ತಾನೆಲ್ಲಿಸುರರೊಡನೆ ಹೋರಿದಾ ಬಲಿಯು ತಾನೆಲ್ಲಿ 1 ದಶರಥ ಮೊದಲು ಷೋಡಶ ರಾಯರುಗಳೆಲ್ಲಿಅಸಹಾಯ ಶೂರ ವೀರ ವಿಕ್ರಮರೆಲ್ಲಿಅಸಮಬಲ ವಸುಮತಿಯ ಹಿರಣ್ಯಾಕ್ಷನೆಲ್ಲಿವಸುಧೆಯೊಳಗಿದ್ದ ಹದಿನಾರು ಸಾವಿರರೆಲ್ಲಿಕುಸುಮ ಬಾಣನ ಪಡೆದ ದೇವ ತಾನೆಲ್ಲಿಸುಶರೀರ ಎನಿಸಿದ ಅಭಿಮನ್ಯು ತಾನೆಲ್ಲಿ 2 ಈ ಪರಿಯೆ ಈ ಧರೆಯನಾಳಿ ಹೋದವರೆಷ್ಟುಈ ಪರಿಯೆ ಸ್ವರ್ಗಕ್ಕೆ ಇಂದ್ರಾದಿಗಳು ಎಷ್ಟುಈ ಪರಿಯೆ ಹರಬ್ರಹ್ಮರಾದವರು ತಾವೆಷ್ಟುಈ ಪರಿಯೆ ಯುಗಪ್ರಳಯವಾಗಿ ಹೋದವು ಎಷ್ಟುಈ ಪರಿಯೆ ಜಲ ಪ್ರಳಯವಾಗಿ ಹೋದವು ಎಷ್ಟುಶ್ರೀಪತಿ ಕೇಶವನಲಿಡು ಭಕುತಿ - ಕೊಡುವ ಮುಕುತಿ 3
--------------
ಕನಕದಾಸ
ಸಾರ ಸರ್ವಸ್ವವನುತಿಳಿಯಾದ ಭಾಷೆಯಲಿ ತಿಳಿಸಿದ ಸಮರ್ಥನಿಗೆ 1ಪಾಂಡಿತ್ಯ ಮದದಿ ಸ್ವೋತ್ತವರ ದ್ರೋಹವಮಾಡಿತತ್ಫಲವನುಂಡು ಮನಗಂಡು ಬೆಂದುಬೆಂಡಾಗಿಬಂದು ಶರಣೆಂದು ಪಾದಕೆಬೀಳೆ'ಜಯ ಗೋಪಾಲ ದಾಸರು ಅನುಗ್ರ'ಸಿದರು 2ಸದ್ಭಕ್ತ ಸುಜ್ಞಾನ ವೈರಾಗ್ಯ ಆಯುಷ್ಯದಯಪಾಲಿಸಿದು ದಾಸ ದ್ವಯರಿಗೆವೈರಾಗ್ಯ ಒಡಮೂಡಿ ಪಾಂಡಿತ್ಯ ಮದ ಓಡಿಹರಿದಾಸ ದಿಕ್ಷೆಯನು ಪಡೆದಾಗ ಶ್ರೀನಿವಾಸಚಾರ್ಯ ಹರಿದಾಸ ನಾದ 3ಗುರು ಆಜ್ಞೆ ಕೊಡಲು ಪಂಢರಿಗೆ ಹೋದರು ಅಲ್ಲಿರುಕ್ಮಿಣಿ ಪಾಂಡುರಂಗನ ಔತಣಚಂದ್ರಭಾಗಿಯಲಿ 'ಜಗನ್ನಾಥ'ಠಲ'ನೆಂಬ ಅಂಕಿತವು ದೊರಕಿತು ಸ್ನಾನಕಾಲದಲಿ 4ನಿತ್ಯ ಹರಿನಾಮ ಸಂಕೀರ್ತನವು ಹಗಲಿರಳು ನಿತ್ಯನೂತನ ಪದ ಸುಳಾದಿಗಳ ಸುಗ್ಗಿನಿತ್ಯ ಸದ್ಭಕತರಿಗೆ ಪಾಠ ಪ್ರವಚನಭಕ್ತರಾಧೀನ ಭೂಪತಿ'ಠ್ಠಲನು ಕುಣಿದ 5
--------------
ಭೂಪತಿ ವಿಠಲರು
ಸಾರಿ ಸಾರಿ ಹೇಳು ತೀನಿ ಕಡ್ಡಿ ಮುರಿದು ನಾನು ಬಾರಿ ಬಾರಿಗೆ ಸತ್ತು ಹುಟ್ಟತಲಿಹೆ ನೀನು ಪ ಇರುಳು ವಿಷಯದೊಳಗೆ ಮನವ ನಿರಿಸಿ ಮಡದಿ ಮಕ್ಕಳೆಂಬಲೆಯಲಿ ಪರಿಯನರಿಯದಿದು ಇನ ಸುತನ ದೂತರೊಡನೆ ಕೊಲಿಸಿ ಕೊಳದಿರು 1 ನೀನು ಹುಟ್ಟಿ ಬರುವ ಮುನ್ನ ಇವರಿಗೆಲ್ಲ ವಾಸವೆಲ್ಲಿ ನೀನದೆಲ್ಲಿ ನಟ್ಟನಡುವೆ ಬಂದ ಸಿರಿಯಿದು ಕಾನ ಕಪಿಗಳಂತೆ ನೆರೆದು ಮಡದಿ ಮಕ್ಕಳೆಂದು ಈಗ ಪ್ರಾಣವನ್ನು ತಿನಲು ಬಂದ ನರಿಗಳಿವದಿರು 2 ದಾರಿ ಹೋಕರಿವರು ನಿನ್ನ ಋಣವು ತೀರಿ ಹೋದ ಬಳಿಕ ಯಾರಿಗಾರು ಇಲ್ಲ ನಿನಗೆ ನೀನದಲ್ಲದೆ ವೈರಿ ಕೋಣೆಲಕ್ಷ್ಮೀಪತಿಯ ಸೇರಿ ನಾಮ ಸ್ಮರಣೆಯಿಂದ ಮುಕ್ತಿ ಪಡೆದಿರು 3
--------------
ಕವಿ ಪರಮದೇವದಾಸರು
ಸಾರಿಭಜಿಸಿರೋ 'ಜಯರಾಯರಂಘ್ರಿಯಪಾರುಮಾಳ್ಪರಾ ಸಂಸಾರಸಾಗರಾ ಪದೇಶ ದೇಶವಾ ಪರದೇಶಿಯಂದದಿಬ್ಯಾಸರಿಲ್ಲದೆ ತಿರುಗಿ ಕಾಶಿಗ್ಹೋದರು 1ಸಪ್ನದಲ್ಲಿ ಶ್ರೀ ಪುರಂದರದಾಸರಾಯರುವ್ಯಾಸಕಾಶಿಯಲ್ಲಿ ದಾಸ ದೀಕ್ಷೆಕೊಟ್ಟರು2ಬಾು ತೆರೆುತು ನಾಲಿಗೆ ಮೇಲೆ ದಾಸರು'ಜಯ'ಠ್ಠಲಾ ಎಂದು ಬರೆದು ಬಿಟ್ಟರು 3ಎಚ್ಚರಾುತು ದಿವ್ಯ ಜ್ಞಾನ ಹುಟ್ಟಿತು ಧೈನ್ಯ ಓಡಿತು ಹರಿಯ ಧ್ಯಾನ ಹತ್ತಿತು 4ದಾಸರಾದರು ಹರಿಯ ದಾಸರಾದರು ಕೂಸೀಮಗ ದಾಸ 'ಜಯದಾಸರಾದರು 5ಹರಿಯ ಶ್ರೇಷ್ಠತೆ 'ಂದೆ ಒರೆಗೆ ಹಚ್ಚಿದಾಭೃಗುಮರ್ಹಯೇ ನಮ್ಮ 'ಜಯದಾಸರು6ಪಾಪಕಳೆವರು ಭಕ್ತರ ತಾಪಕಳೆವರುಭೂಪತಿ'ಠ್ಠಲನ ಅಪರೋಕ್ಷ ಮಾಳ್ಪರು 7
--------------
ಭೂಪತಿ ವಿಠಲರು
ಸಾಲವನು ಕೊಳುವಾಗ ಸಡಗರದ ಸಿರಿಯೋ ಸಾಲಿಗನು ಬಂದು ಕೆಳಲಾಗಡರಿತುರಿಯೋ ಪ ಡಬ್ಬುಗೈದಿದ್ದವನೊಳ್ ಎಬ್ಬಿಸಿ ಹಣತಂದು ಉಬ್ಬುಬ್ಬಿ ಸತಿಮುಂದೆ ಹೆಬ್ಬುಲಿಯ ತೆರದಿ ಒಬ್ಬರೀಡಿಲ್ಲೆನಗೆಂದಬ್ಬರಿಸುತ್ಹೇಳುವನು ತಬ್ಬಲು ಧಣಿಬಂದು ಮಬ್ಬಿನೊಳೆದ್ದೋಡ್ವ 1 ಹಣತಂದ ದಿನ ಅವನ ಮನೆಯೊಳಗೆ ಹಬ್ಬೂಟ ವನಿತೆಯೊಳೆನುತಿಹ್ಯನು ನನಗಾರು ಸರಿಯೆ ಹಣಕೊಟ್ಟ ಧಣಿಬಂದು ಮನೆಮುಂದೆ ಕುಳ್ಳಿರಲು ಹೆಣಇರುವ ಮನೆಗಿಂತ ಘನದು:ಖಕೇಳೊ 2 ಕಡುಹಿಗ್ಗಿನಿಂದೊಸನ ಒಡವೆ ಉದ್ದರಿತಂದು ಬಡಿವಾರ ಬಿಂಕ ಕೊಡುವ ವಾಯಿದೆ ಕಳೆದು ಬಡಿಗೆಯು ಬರಲಾಗ ಮಡದಿ ಸತ್ತವನಂತೆ ಇಡುವ ತಲಿ ಬುವಿಗೆ 3 ಅಕ್ಕಿಬೇಳೆ ಬೆಲ್ಲತಂದು ಅಕ್ಕರದಿಂ ಸತಿಸುತರಿ ಗಿಕ್ಕುವಾಗ ನೋಡವನವಕ್ಕರಂಗಳನು ಮಕ್ಕಮಾರಿಯಂದದಿ ತಿಕ್ಕುವಾಗಕೊಟ್ಟವರು ಸಿಕ್ಕದೆ ತಿರುಗುವನು ಬಿಕ್ಕೆ ಬೇಡುಣುತ 4 ಮನೆಮುರಿದು ಹೋಗಲಿ ವನಿತೆಯರು ಜರಿಯಲಿ ಎನಗೆಡರು ಬಂದೊದಗಿ ಅನ್ನ ಸಿಗದಿರಲಿ ಘನಮಹಿಮ ಶ್ರೀರಾಮ ಮಣಿದುಬೇಡುವೆ ನಿನಗೆ ಋಣದ ಬಾಳುವೆ ಬೇಡ ಜನಮಜನುಮಗಳಲಿ 5
--------------
ರಾಮದಾಸರು
ಸಾಸಿರ ಮಾತುಗಳ್ಯಾಕೊ ಎಲೆಮನ ಕೇವಲ ಹರಿನಾಮವೊಂದೆ ಸಾಕೊ ಪ ಸ್ನಾನವುಯಾಕೊ ಮೌನವುಯಾಕೊ ದಾನವಾರಿಯಧ್ಯಾನವೊಂದೆ ಸಾಕೊ 1 ಮಂತ್ರವುಯಾಕೊ ತಂತ್ರವುಯಾಕೊ ಮಂತ್ರಮೂರ್ತಿ ಚಿಂತೆಯೊಂದೆ ಸಾಕೊ 2 ಹೋಮವುಯಾಕೊ ನೇಮವುಯಾಕೊ ಸ್ವಾಮಿ ಶ್ರೀರಾಮನ ಭಕ್ತಿಯೊಂದೆ ಸಾಕೊ 3
--------------
ರಾಮದಾಸರು
ಸಾಸಿರನಾಮ ಪೂಜೆಸಾಸಿರ ನಾಮ ಪೂಜೆಯ ಸಮಯಾ ಶ್ರೀವಾಸುದೇವನೆ ರಕ್ಷಿಪ ಸಮಯಾ ಸ್ವಾಮಿ ಪಸಾಸಿರ ದಳ ಪದ್ಮ ಮಧ್ಯಕೆ ಶ್ರೀ ವೇದವ್ಯಾಸ ಗುರುವು ಬಂದಿಹ ಸಮಯಾ ಭಾಸುರ ಛಂದಸ್ಸು ಮುಖಮಂಡಲದಿ ಪ್ರಕಾಶಿಸಿ ಮಂತ್ರ ಸಿದ್ಧಿಪ ಸಮಯಾ ಸ್ವಾಮಿ 1ಶ್ರೀರಮೆ ಧರೆ ಸಹ ಹೃದಯಮಧ್ಯದಿ ಶ್ರೀಮನ್‍ನಾರಾಯಣ ನೀನಿಹ ಸಮಯಾತೋರುತಿದಿರೆ ಪೀಠದಿ ಪೂಜೆಗೊಳುತೆನ್ನಸ್ಮೇರಾಸ್ಯದಿಂ ನೋಡುವ ಸಮಯಾ ಸ್ವಾಮಿ 2ಬೀಜನಾಮವು ದಕ್ಷಿಣ ಸ್ತನ ದೇಶದಿಭ್ರಾಜಿಸಿ ಭಕ್ತಿಗೂಡುವ ಸಮಯಾರಾಜಿಪ ಶಕ್ತಿ ನಾಮವು ವಾಮದಿ ಫಲರಾಜಿಯ ಬೆಳಸುತಿರುವ ಸಮಯಾ ಸ್ವಾಮಿ 3ಹೃದಯದಿ ಕೀಲಕ ನಾಮವು ನಿನ್ನಯಪದಸನಿಯವ ಸೇರಿಪ ಸಮಯಾಪದರದೆ ವಿಘ್ನತತಿಗೆ ಭಜಿಸೆನ್ನುತಸದಯ ಸದ್ಗುರು ನಿಯಮಿಪ ಸಮಯಾ ಸ್ವಾಮಿ 4ಅಂಗುಲಿಗಳು ನಿನ್ನ ಮಂಗಳ ನಾಮಗಳಸಂಗದಿ ಶುದ್ಧಿವಡೆದಿಹ ಸಮಯಾಗಂಗೆಯ ಪಡೆದ ನಿನ್ನಡಿಗೆ ತುಲಸಿ ಕುಸುಮಂಗಳನರ್ಪಿಸುತಿಹ ಸಮಯಾ ಸ್ವಾಮಿ 5ಅಂಗಗಳಾರು ಶುಭಾಂಗಗಳಾಗಿ ನಿನ್ನಮಂಗಳ ತನುವ ಧ್ಯಾನಿಪ ಸಮಯಾತೊಂಗದೆ ವಿಷಯಗಳೊಳು ನಿನ್ನ ಪದದುಂಗುಟದುದಿಯ ಸೇರಿಹ ಸಮಯಾ ಸ್ವಾಮಿ 6ದಶನಾಮ ದಶಕ ದಶಕ ಸಮಯದಿ ದಿವ್ಯದಶವಿಧ ಭೋಜ್ಯ ಭೋಜಿಪ ಸಮಯಾದಶವಿಧದಾರತಿಗಳ ಬೆಳಕಿಗಿಂದ್ರಿಯದಶಕವು ವಶಕೆ ಬಂದಿಹ ಸಮಯಾ ಸ್ವಾಮಿ 7ಮೀನ ಕಮಠ ಬುದ್ಧ ಕಲ್ಕಿನೀನಾಗಿ ಭಕತರಿಷ್ಟವನಿತ್ತೆ ನನ್ನಯದೀನತೆಯಳಿವರಿದೇ ಸಮಯಾ ಸ್ವಾಮಿ 8ಅನುಗ್ರಹಶಕ್ತಿಯೊಳಿರುತಷ್ಟಶಕ್ತಿಗಳನು ನೋಡಿ ಸೇವೆಗೊಳುವ ಸಮಯಾಸನಕಾದಿಗಳು ಶ್ರುತಿ ಸ್ಮøತಿ ಪುರಾಣಂಗಳುವಿನಮಿತರಾಗಿ ನುತಿಪ ಸಮಯಾ ಸ್ವಾಮಿ 9ವರ ಸಿಂಹಾಸನದಗ್ನಿ ದಿಕ್ಕಿನೊಳ್ ಧರ್ಮನುಹರುಷದಿಂ ಸೇವೆಗೈಯುವ ಸಮಯಾನಿರುರುತಿ ದೇಶದಿ ಜ್ಞಾನನು ತಾಮಸಬರದಂತೆ ಕಾದು ನಿಂದಿಹ ಸಮಯಾ ಸ್ವಾಮಿ 10ವೈರಾಗ್ಯ ವಾಯವ್ಯದೊಳು ನಿಂದು ದುಃಖವಹಾರಿಸುತಲಿ ಸೇವಿಪ ಸಮಯಾಸಾರಿರುತೈಶ್ವರ್ಯನೀಶನೆಡೆಯೊಳ್ ನೀನುತೋರಿದೂಳಿಗ ಗೈಯುವ ಸಮಯಾ ಸ್ವಾಮಿ 11ಸುರಪತಿ ದೆಶೆಯೊಳಧರ್ಮನು ಬೆದರುತಕರವ ಮುಗಿದು ನಿಂದಿಹ ಸಮಯಾಇರುತ ದಕ್ಷಿಣದಲಜ್ಞಾನನು ಚೇಷ್ಟೆಯತೊರೆದು ಭಯದಿ ಭಜಿಸುವ ಸಮಯಾ ಸ್ವಾಮಿ 12ವರುಣದಿಕ್ಕಿನೊಳವೈರಾಗ್ಯನು ನಿನ್ನಡಿಗೆರಗುವವರ ನೋಡುವ ಸಮಯಾಇರುತಲುತ್ತರದಲನೈಶ್ವರ್ಯ ಮಂತ್ರದುಚ್ಚರಣೆಯ ತಪ್ಪನೆಣಿಪ ಸಮಯಾ ಸ್ವಾಮಿ 13ಕಾಮಾದಿಗಳು ಪೀಠಸೀಮೆಯೊಳಗೆ ನಿಂತು ಕೈಮುಗಿದಲುಗದಿರುವ ಸಮಯಾತಾಮಸ ರಾಜಸ ಸಾತ್ವಿಕಗಳು ನಿನ್ನನಾಮದ ಬಲುಹ ತಿಳಿವ ಸಮಯಾ ಸ್ವಾಮಿ 14ಎಂಟು ದಿಕ್ಕಿನ ದೊರೆಗಳು ಪರಿವಾರ ಸಹಬಂಟರಾಗಿಯೆ ಕಾದಿಹ ಸಮಯಾಎಂಟು ಬಗೆಯ ಸಿರಿದೇವಿಯರೊಂದಾಗಿನಂಟುತನವ ಬಳಸಿಹ ಸಮಯಾ ಸ್ವಾಮಿ 15ಮೊದಲ ನಾಮವು ವಿಶ್ವಮಯ ನಿನ್ನ ನಿರ್ಗುಣಪದವ ಸೂಚಿಸಿ ಸಲಹುವ ಸಮಯಾತುದಿಯ ನಾಮದಿ ಭಕತರಿಗಾಗಿ ತನುದಾಳಿಒದೆದು ದುರಿತವ ರಕ್ಷಿಪ ಸಮಯಾ ಸ್ವಾಮಿ 16ದೂರಕೆ ದುರಿತವು ಹಾರಿ ಹೋಗಿಯೆ ಭಕ್ತಿಸೇರಿ ನಿನ್ನೆಡೆಯೊಳಾನಿಹ ಸಮಯಾದಾರಿದ್ರ್ಯ ದುಃಖವು ತೋರದಾನಂದವ ಸಾರಿ ನಿನ್ನನು ನುತಿಸುವ ಸಮಯಾ ಸ್ವಾಮಿ 17ಸಾಸಿರ ತಾರಕ ಜಪ ಮೊದಲು ಲಭಿಸಿಸಾಸಿರ ನಾಮ ಜಪವು ಮಧ್ಯದಿಸಾಸಿರ ವಂದನೆ ಕುಸುಮ ತುಲಸಿಗಳಸಾಸಿರದಿಂದೊಪ್ಪುವ ಸಮಯಾ ಸ್ವಾಮಿ 18ಸಾಸಿರ ಸಾಸಿರ ಜನ್ಮ ಜನ್ಮಗಳೊಳುಸಾಸಿರ ಸಾಸಿರ ತಪ್ಪುಗಳಾಸಾಸಿರ ಬಾರಿ ಮಾಡಿದ್ದರು ನಾಮದಸಾಸಿರ ಪ್ರಭೆಯೊಳಳಿವ ಸಮಯಾ ಸ್ವಾಮಿ 19ಮುಂದೆನ್ನ ಕುಲವೃದ್ಧಿಯೊಂದಿ ನಿನ್ನಯ ಕೃಪೆುಂದ ಭಕತಮಯವಹ ಸಮಯಾುಂದೆನ್ನ ಭಾಗ್ಯಕೆಣೆಯ ಕಾಣದೆ ನಿನ್ನಮುಂದೆ ನಾ ನಲಿದು ಕುಣಿವ ಸಮಯಾ ಸ್ವಾಮಿ 20ಗುರುವÀರನುಪದೇಶಿಸಿದ ಮಂತ್ರಕೆ ಸಿದ್ಧಿಬರುವ ನಿನ್ನಯ ಕೃಪೆಗಿದು ಸಮಯಾಕರುಣದಿಂ ನೋಡಿ ಕೈವಿಡಿದಭಯವನಿತ್ತುಪೊರೆವದಕೆನ್ನನಿದೇ ಸಮಯಾ ಸ್ವಾಮಿ 21ಧನ್ಯನು ಧನ್ಯನು ಧನ್ಯನು ನಾನೀಗಧನ್ಯನು ಮತ್ತು ಧನ್ಯನು ವಿಭುವೆಧನ್ಯರು ಜನನೀ ಜನಕ ಬಾಂಧವರೆಲ್ಲಧನ್ಯರೆಮ್ಮನು ನೋಡುವ ಸಮಯಾ ಸ್ವಾಮಿ 22ಮೂಲ ಮಂತ್ರಾಕ್ಷರ ಮೂಲ ನೀನಾಗಿಯೆಮೂಲಾವಿದ್ಯೆಯ ತೊಲಗಿಪ ಸಮಯಾಮೂಲೋಕನಾಯಕ ಮುಕ್ತಿ ಮಾರ್ಗಕೆುದೆಮೂಲವಾಗಿಯೆ ಬದುಕುವ ಸಮಯಾ ಸ್ವಾಮಿ 23ಮುರಹರ ಮಾಧವ ತಿಮಿರ ಭಾಸ್ಕರ ಕೃಷ್ಣಶರಣುಹೊಕ್ಕೆನು ನಿನ್ನ ಚರಣ ಪಂಕಜಗಳಪೊರೆಯುವರೆನ್ನನಿದೆ ಸಮಯಾ ಸ್ವಾಮಿ 24ತಿರುಪತಿಯೊಡೆಯನೆ ಶ್ರೀ ವಾಸುದೇವಾರ್ಯಗುರುವಾಗಿ ಕಾವೇರಿ ತೀರದಲಿಕರುಣದಿಂ ಪಾದುಕೆಗಳನಿತ್ತ ಭಾಗ್ಯವುಸ್ಥಿರವಾಗಿ ಭಕತಿ ಹೆಚ್ಚುವ ಸಮಯಾ ಸ್ವಾಮಿ 25 ಓಂ ಶಕಟಾಸುರಭಂಜನಾಯ ನಮಃ
--------------
ತಿಮ್ಮಪ್ಪದಾಸರು