ಒಟ್ಟು 4163 ಕಡೆಗಳಲ್ಲಿ , 122 ದಾಸರು , 2494 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಬಿಡೆನು ನಿನ್ನಯ ಪಾದವಾ ಮುಖ್ಯ ಪ್ರಾಣ ಬಿಡೆನು ನಿನ್ನ ಪಾದಾ ಕಡಲ ಹಾರಿದೆನೆಂಬ ಸಡಗರದಿಂದೆನ್ನ ಕಡೆಹಾಯಿಸದೆ ಬೇಗ ಪ. ಹದಿನಾಲ್ಕು ಲೋಕದೊಳು ವ್ಯಾಪಕವಾಗಿ ಮುದದಿಂದ ಹಂಸ ಮಂತ್ರವ ಜಪಿಸುತ ಮಧುವೈರಿಯನು ಒಲಿಸಿ ಕಡೆಗೆ ಅಜ- ಪದವನೈದುವಿ ಸುಖದಿ ವಿಧುಕಳಾಧರ ವಾಸವಾದ್ಯರ ಮುದದಿ ರಕ್ಷಿಸಿ ದೈತ್ಯ ಪುಂಜವ ವಿಬುಧ ಗಣಾರ್ಚಿತ 1 ಮತಿವಂತನಾದಮ್ಯಾಲೆ ತ್ವತ್ಪಾದವೇ ಗತಿಯೆಂದು ನಂಬಿಹೆನು ನೀ- ನಿತ್ತ ಶಕುತಿಯಿಂದ ಪೂಜೆಯನು ಮಾ- ಡುತ ನಿನ್ನ ಪ್ರತಿಮೆಯ ನಮಿಸುವೆನು ವಿತತ ಮಹಿಮನೆ ಪೂರ್ವಭವ ದುಷ್ಕøತಗಳೆನ್ನನು ಪತನಗೊಳಿಪದನತುಳ ನೀ ನೋಡುತ್ತ ಎನ್ನನು ಜತನಮಾಡದೆ ವಿತಥ ಮಾಳ್ಪರೆ 2 ಹಿಂದೆ ತ್ರೇತಾಯುಗದಿ ಈ ಧರಣಿಗೆ ಬಂದು ನೀ ಕಪಿರೂಪದಿ ಅರ- ವಿಂದ ಬಾಂಧವನನು ಸೇರಿದಿ ಇಂದ್ರ ನಂದನನಿಂಗೆ ರಾಜ್ಯವ ಇಂದಿರೇಶನ ದಯದಿ ಕೊಡಿಸಿ ಪು- ರಂದರಗೆ ವರವಿತ್ತ ಬಲದಶ ಕಂಧರನ ಜವದಿಂದ ಗೆಲಿದನೆ 3 ಭೀಮನನೆನಿಸಿ ಕೀಚಕರ ನಿ- ರ್ನಾಮ ಗೊಳಿಸಿ ಜಯಿಸಿ ಕಿಮ್ಮೀರ ಬಕಮಾಗಧರ ಸೀಳಿಸಿ ಸಾಮಗಾಯನ ಲೋಲಕೃಷ್ಣನ ಪ್ರೇಮ ರಸಪೂರ್ಣೈಕ ಪಾತ್ರನಿ- ರಾಮಯನೆ ಧೃತರಾಷ್ಟ್ರತನಯಸ್ತೋಮವನು ತರಿದಮಲರೂಪ 4 ಕಡೆಯಲಿ ಕಲಿಯುಗದಿ ನೀ ಯತಿಯಾಗಿ ಮೃಡನ ತರ್ಕವ ಖಂಡಿಸಿ ಜ್ಞಾನಾ ನಂದಕದಲಿ ಕೃಷ್ಣನ ಸ್ಥಾಪಿಸಿ ಮಾಯಿಗಳನ್ನು ಬಡಿದು ದೂರದಲೋಡಿಸಿ ಪೊಡವಿಗಧಿಪತಿ ಪಾವನಾತ್ಮಕ ಒಡೆಯ ಶೇಷಾಚಲನಿವಾಸನ ಮೆರದನೆ ತಡವ ಮಾಡದಲು 5
--------------
ತುಪಾಕಿ ವೆಂಕಟರಮಣಾಚಾರ್ಯ
ಬಿಂದುಮಾಧವ ಮಾಡÀದಿರೆನಗೆ ತಂದೆ ಭೇದವಕಂದುಗೊರಳಾಧೀಶ ಕಾಶಿಯ ಪುರವಾಸಕಂದನ್ನ ತಡೆಯದೆ ಕಾಯನುದ್ಧರಿಸೊ ಪ. ಮೋಕ್ಷದಾಯಕ ರಕ್ಷಿಸೊ ಎನ್ನ ಲಕ್ಷ್ಮೀನಾಯಕಕುಕ್ಷಿಯೀರೇಳು ಭುವನವ ತಾಳ್ವನಭಿಕ್ಷಾಪಾತ್ರ ಶಿವನ ಧ್ಯಾನದೊಳಿರಿಸೊ 1 ಪಾಪನಾಶನ ಪಾಲಿಸೊ ಎನ್ನಸಪರ್Àಭೂಷಣ ತಾತನೆಂದೆನಿಸಿ ತವ-ನಾಮಸ್ಮರಣೆಯ ಪಾರ್ವತೀಪತಿ ಯತಿ ಧ್ಯಾನದೊಳಿರಿಸೊ 2 ಆದಿಮೂರುತಿ ವಿಶ್ವೇಶ ವಿಷ್ಣು-ಪಾದವೆ ಗತಿ ವೀರನೆಂದೆನಿಸುವಸೋದೆಯ ಪುರವಾಸ ವಾದಿರಾಜವರದವಂದೇ ಹಯವದನ 3
--------------
ವಾದಿರಾಜ
ಬಿದ್ದ ಹುಣ್ಣು ಮಾಯವಲ್ಲದವ್ವಾ ಹ್ಯಾಂಗೆ ಸಹಿಸಲಸಾಧ್ಯ ಬೇನೆ ನಿದ್ರೆ ಬರದವ್ವಾ ಪ ಬಿದ್ದ ಹುಣ್ಣು ಮಾಯವಲ್ಲದು ಮುದ್ದು ಮುಖ ನಿನ್ನಪಾದ ಪದ್ಮಕೆ ಬಿದ್ದು ಬೇಡುವೆ ಸದ್ದು ಮಾಡದೆ ಅಬ್ದಿಶಯನನೆಂಬ್ವೈದ್ಯನ್ನ್ಹಿಡಿತಾ ಅ.ಪ ಮುತ್ಯ ಅಜ್ಜರನಳೀತು ಯೀ ಹುಣ್ಣು ಮತ್ತು ಎನ್ನ ಹೆತ್ತ ತಾತ ಮಾತಾ ಪಿತರನು ಹತ್ತಿಕೊಂಡು ಭ್ರಾತೃ ಬಂಧುವನು ಗೊತ್ತಿಗ್ಹಚ್ಚಿತು ಎತ್ತಪೋದರೊ ಪತ್ತೆಗಾಣೆನು ಅತ್ತು ಅತ್ತು ಇದರ ಬೇನೆಗೆ ಸತ್ತು ಸತ್ತು ಹೋದರೆಲ್ಲರು ಪುತ್ರ ಮಿತ್ರ ಕÀ ಳತ್ರರೆಲ್ಲರ ವ್ಯರ್ಥಕೊಲ್ಲಿ ಬೆನ್ಹತ್ತಿದೆನ್ನಗೆ 1 ಎಷ್ಟು ಬಂಧುಬಳಗವನೀ ಹುಣ್ಣು ನುಂಗಿಬಿಟ್ಟಿದೆ ಇಷ್ಟು ಖೂನಕ್ಕುಳಿಸಿಲ್ಲೋರ್ವರನು ಶಿಷ್ಟಜನರಿಗೆ ಮೃತ್ಯು ಕಾಣ್ಹುಣ್ಣು ಬಿಟ್ಟಿಲ್ಲಾರನು ಎಷ್ಟು ಪೇಳಲಿ ನಷ್ಟಸುದ್ದಿಯನು ದುಷ್ಟಶಿಷ್ಟರೆಂಬರೆಲ್ಲರ ಕಟ್ಟಿ ಮುರಿದು ಮುಟ್ಟಿಗಿಯಮಾಡಿ ಮೊಟ್ಟೆಕಟ್ಟಿ ಕೊಟ್ಟು ಮೃತ್ವಿಗೆ ಕಟ್ಟಕಡಿಗೆ ಬೆನ್ನಟ್ಟಿದೆನಗೆ 2 ಕುಂತೆನೆಂದರೆ ಕುಂದ್ರಗೊಡದಮ್ಮ ಸಂತಜನರೊಳು ನಿಂತೆನೆಂದರೆ ನಿಂದ್ರ ಗೊಡದಮ್ಮ ಸಂತಸೆಂಬುದು ಇನಿತು ಇಲ್ಲಮ್ಮ ಅಂತರಂಗದಿ ನಿಂತು ಸುಡುವುದು ತಾಳಲೆಂತಮ್ಮ ಅಂತ:ಕರಣದಿ ಪೋಗಿ ಎನ್ನಯ ಅಂತ್ಯಕ್ವೈದ್ಯನಾದಂಥ ಪ್ರಾಣದ ಕಾಂತ ಶ್ರೀರಾಮನನ್ನು ಕರೆತಂದು ಕಾಂತೆ ಈ ಹುಣ್ಣು ಮಾಯ್ಸೆ ಬೇಗನೆ 3
--------------
ರಾಮದಾಸರು
ಬಿನ್ನಪ ಕೇಳಯ್ಯಾ ಬಡವನ ಮನ್ನಿಸು ಮಹರಾಯ ಪ ಎನ್ನ ಭವಗುಣಗಳನ್ನು ಕಳೆದು ಪೊರೆ ಸನ್ನುತಾಂಗ ಹರಿ ಉನ್ನತ ಮಹಿಮ ಅ.ಪ ತೊಳಲಿಬಳಲಿ ಬಂದೆ ಸಂಸಾರದ್ಹೊಲಸಿ ನೊಳಗೆ ನಿಂದೆ ಅಳಿಯುವ ದೇಹಕೆ ಕಳವಳಿಸುವ ಮನ ಮಲಿನತೊಳೆದು ನಿರ್ಮಲ ಮಾಡು ತಂದೆ 1 ಹುಟ್ಟಿ ನೀ ಸಾಯ್ವುದಕೆ ಬಂದಿಲ್ಲ ಗಟ್ಟ್ಯಾಗಿರಲಿಕ್ಕೆ ಸಠೆ ಈ ಲೋಕವು ದಿಟವಲ್ಲೆನಗೆ ಬಟ್ಟೆ ತಪ್ಪಿಸು ತಂದೆ 2 ಇಷ್ಟುದಿನವು ಕಳೆದು ತಿಳಿಯದೆ ಭ್ರಷ್ಟತನದಿ ಬಾಳ್ವೆ ಇಷ್ಟು ದಿನ ದಿನಗಳ್ವ್ಯರ್ಥ ಕೆಟ್ಟಿದ್ದೆ ಸಾಕಯ್ಯ ಶಿಷ್ಟಗುಣವಕೊಟ್ಟು ಸಲಹೊ ಶ್ರೀರಾಮ3
--------------
ರಾಮದಾಸರು
ಬಿನ್ನಪವ ಕೇಳು ಜೀಯಾ ಬನ್ನಬಡಿಸುವ ಮಾಯಾ ಬೆನ್ನು ಬೀಳದಂತೆ ಮಾಡು ಎನ್ನ ಕೂಡಾಡು ಪ ಹತ್ತದ ಜನಕೆ ನೀನು ಹತ್ತಿಲಿ ಇದ್ದರೆ ಏನು ಉತ್ತರ ಲಾಲಿಸದಿಪ್ಪ ಉತ್ತಮ ಶ್ಲೋಕಾ ತತ್ವ ಬಲ್ಲವಂಗೆ ದೂರತ್ತಲಿದ್ದರೇನು ಅವನ ಪತ್ತಿಗೆ ಬಂದೊದಗುವ ಚಿತ್ತಜನಯ್ಯಾ 1 ಇಂದೆ ಕೈವಲ್ಯವ ಕೊಡುವೆ ಒಂದು ಕ್ಷಣ ಮಾಯಿಗಳ ಮಂದಿರದಲ್ಲಿ ಜನಿಸಿ ಎಂದು ನುಡಿದಡೆ ಮಂದರಧರನೆ ಕೇಳು ಎಂದೆಂದಿಗೆ ಎನ್ನ ನರಕ ಬಂಧನದಲ್ಲಿಡು ಅಲ್ಲಿ ಪೊಂದುವರಾರೊ 2 ಸೂಕರ ಗಾರ್ಧಭ ನಾನಾ ಕೆಟ್ಟ ಜಾತಿಯವರ ಯೋನಿಯೊಳು ಕಟ್ಟಿಹಾಕಿ ಹೀನಾಯ ಉಣಸೀ ಅನಂತ ಕಲ್ಪಕ್ಕೆ ಪವಮಾನ ಮತ ಪೊಂದಿಸಿ ನಿರ್ವಾಣವೀವೆನೆಂದರಾಗೆ ನಾನಾದಿ ಬಯಿಪೆ 3 ಗುರುಪ್ರಸಾದದಿಂದಲಿ ಪರಮ ಸದ್ಗತಿ ಎನ ಗರಿದಲ್ಲ್ಯಾವಾಗಾದರು ಸ್ಥಿರವೆ ಸಿದ್ಧ ನಿರಯ ದುರಾತ್ಮಗಿಲ್ಲ ಕರವ ಮುಗಿದು ಒಂದು ವರ ಬೇಡುವೆ 4 ಭಾಗವತರ ಸಹವಾಸ ಭಾಗವತರ ಕಥಾಗುಣ ಭಾಗ ಗುಣಿಸುವ ಮತಿ ಭಾಗೀರಥಿ ಯಾತ್ರೆ ಭಾಗ್ಯವೆ ಪಾಲಿಸು ದುಷ್ಟ ಭಾಗಾದಿಯರೋಡಿಸಿ ಕಡೆ ಭಾಗಕ್ಕೆ ಎನ್ನೆಡಬಲ ಭಾಗದಲಿ ಸುಳಿಯೊ 5 ಕಾಣಿಕಾಣೆ ಙÁ್ಞನವಿಲ್ಲ ತುತಿಪುದಕ್ಕೆ ಧ್ಯಾನವÀರಿಯೆ ನಿನ್ನನೆ ನಿದಾನಿಸಲಿಕ್ಕೆ ನಾನಾಪರಾಧವ ಮಾಡಿದ ಮಾನವನೋ ದೀನಬಂಧೊ ನೀನೊಲಿದು ಎನ್ನ ಮನಕೆ ಆನಂದ ತೋರೋ 6 ರಜತಪೀಠ ಪುರನಿವಾಸಾ ರಜನಿಪತಿ ಸಂಕಾಶಾ ರಜನಿಚರ ವಿನಾಶಾ ಸುಜನಮಾನಸಹಂಸ ರಜದೂರ ಮಂದಹಾಸಾ ವಿಜಯವಿಠ್ಠಲ ಶ್ರೀಶಾ ಭಜಿಪೆ ಲೇಶಾ 7
--------------
ವಿಜಯದಾಸ
ಬಿನ್ನಹಕೆ ಬಾಯಿಲ್ಲ ಭೂತನಾಥ ಪ ನಿನ್ನ ಪದರಜ ಸ್ನಾನ ನೀಡೆನ್ನ ಉದ್ಧರಿಸು ಅ.ಪ. ಹೀನ ಯೋಗ್ಯತೆಗಿನ್ನು ಏನು ಮಾಡಲೊ ಸ್ವಾಮಿ ಧೇನು ವತ್ಸನ ತೆರದಿ ಪಾಲಿಸೆನ್ನ ವೇಣುಗೋಪಾಲನಾ ಧ್ಯಾನ ನಿಲ್ಲದು ಮನದಿ ನಾನು ನನ್ನದು ಬಿಡದು ಎನಗಾವ ಗತಿಯಿನ್ನು 1 ನೀಲಕಂಠನೆ ನಿನ್ನ ನೀಳಪಾದದ ಧೂಳಿ ಮೂರ್ಲೋಕದಘತೂಲಕಗ್ನಿ ಸತತ ಫಾಲಾಕ್ಷ ಪತಿತ ಪರಿಪಾಲಕನು ನೀನೊಬ್ಬ ಹಾಲಲ್ಲಿ ಅದ್ದೆನ್ನ ಹರಿಭಕ್ತರ ಬಂಧು 2 ಮನಕರಣ ತನು ವಿಷಯ ಘನಪಾಶದಲಿ ಸಿಕ್ಕಿ ಉಣಿಸುವುವು ಮಹದುಃಖ ಎನ್ನ ಮೀರಿ ತುಂಬಿ ಎನಿತು ನಿನ್ನಲಿ ನಿಂದು ಪೊರೆಯೆಂದು ಮೊರೆ ಇಡಲಿ 3 ದುಷ್ಟವಾಸನೆ ಶಕ್ತಿ ಮೆಟ್ಟಿ ಆಳುವುದೆನ್ನ ವೃಷ್ಟೀಶನಲಿ ಎನ್ನ ಪೋಗಬಿಡದೊ ದುಷ್ಟನಕ್ರಗೆ ಸಿಕ್ಕ ಕರಿಯಂತೆ ಬಾಯ್ಬಿಡುವೆ ಕಷ್ಟ ಪರಿಹರಿಸಯ್ಯ ಹರಿನಿಷ್ಠಧ್ಯಾನವನಿತ್ತು 4 ಶತಕೋಟಿ ಶ್ರುತಿಯಲಿ ಜಯೇಶವಿಠಲ ನತಬಂಧು ಎಂತೆಂದು ಸಾರುತಿಹುದು ಹಿತಭಕ್ತ ನೀ ಹರಿಗೆ ಹರಿಮೀರ ನಿನ್ನುಕ್ತಿ ಪತಿತಪಾವನ ನನ್ನ ಹರಿಭಕ್ತನ ಮಾಡು5
--------------
ಜಯೇಶವಿಠಲ
ಬಿನ್ನೈಸಲೇನಿನ್ನು ಎನ್ನ ಗುರುವೇ ನಿ ಮ್ಮ ನಿತ್ಯಾನಂದನಿರುವ ಬಗೆಯನ್ನ ಪ. ತನ್ನ ಕಾರ್ಯಗಳನ್ನು ನಿಮ್ಮ ಮೇಲೊರಗಿಸಿ ಬೆನ್ನಿನಂದದಿ ನಿಮ್ಮ ಕಾಡುತಿಹನು ತನ್ನಿಂದಲಾಗದ ಕಾರ್ಯಗಳು ಇನ್ನುಂಟೆ ತನ್ನನೆ ತಾನು ಮರೆತಂತೆ ಇರುತಿಹನು 1 ತನ್ನ ಮಾರ್ಗಕೆ ಬರುವ ಜೀವರುಗಳೆಲ್ಲರನು ನಿಮ್ಮ ವಶಕೊಪ್ಪಿಸಿ ಓರೆಯಾಗಿಹನು ತಾನೊಬ್ಬ ನಿಮ್ಮಿಂದ ತೇರ್ಗಡೆಯಾದಮೇಲ್ ತನ್ನವರ ತಾನು ಸಲಹದಲೆ ಇರುತಿಹರೆ 2 ಬನ್ನಬಡುತಲಿ ಇರುವ ಘನ್ನ ಜೀವರುಗಳನು ಮನ್ನಿಸಿ ಕರೆದು ಅಂಕಿತವಿತ್ತಿರಿ ಇನ್ನಾದರೂ ತಾನು ನಿಮ್ಮ ಕಾರ್ಯಕೆ ನಿಂತು ನಿಮ್ಮ ಸೇವೆಯನು ಮಾಡದಲೆ ಇರುತಿಹನು 3 ಒಂದೊಂದು ಸೇವೆಗೆ ಒಬ್ಬೊಬ್ಬರಿಹರೆಂದು ಮುಂದೆ ತನಗಾವುದೂ ತಿಳಿಯದೆಂದು ಇಂದು ಈ ಪರಿಯಿಂದ ಇರುತಿಹುದು ನ್ಯಾಯವೆ ತಂದೆ ಮುದ್ದು ಮೋಹನಗುರುವೆ ನೀವ್ ಪೇಳಿ 4 ಸಾಕು ನಿಮ್ಮಯ ಶ್ರಮವ ನೋಡಲಾರೆ ನಾನು ಈ ಕಂದನಿಗೆ ಇನ್ನು ವರವ ಕೊಟ್ಟು ಲೋಕಕಾರ್ಯವ ನಡೆಸಿ ನೋಡಿ ಸಂತಸಪಡಿರಿ ಲೋಕೇಶ ಗೋಪಾಲಕೃಷ್ಣವಿಠ್ಠಲ ಪ್ರಿಯರೆ 5
--------------
ಅಂಬಾಬಾಯಿ
ಬಿರದುದಾರದು ಗೋವಿಂದ ಅರಿತು ನೋಡಯ್ಯ ಶ್ರೀ ಹರಿ ಮುಕುಂದ ಧ್ರುವ ಪತಿಯ ಕಣ್ಣಿನ ಮುಂದೆಳಿಯಲು ಸತಿಯ ಗತಿಗೊತ್ತಿಹ್ಯದು ದಾರಿಗೆ ಕೊರತಿಯ (ತೆಯು?) 1 ಒಡಿಯನ ಮುಂದೆ ಬಂಟಗಾಗಿರೆ ಕುಂದು ಒಡನೆ ಬೀಳುದು ತೊಡಕಾರಿಗೆ ಬಂದು 2 ನಿನ್ನವನೆನಿಸಿ ಮಹಿಪತಿಗೆ ಪೂರ್ಣ ಇನ್ನರಹುವರೆ ಎನ್ನವಗುಣ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಬುದ್ಧಿಮಾನಿಯೆ ಎನ್ನ ಉದ್ಧರಿಸು ತಾಯೆ ಪ ಶ್ರದ್ಧಾದೇವಿ ನಿನ್ನ ಕೃಪೆಯಾಗೆ ಹರಿ ನಲಿವ ಅ.ಪ. ಮಧ್ವಮುನಿ ಮನದೈವನತಿ ಮುದ್ದು ಪರಿಸರಳೆ ವಿದ್ಯಾ ಅಸಾದ್ಯ ಕರುಣಾಬ್ಧಿ ದೇವಿ ಪ್ರಧ್ವಂಸ ಮಾಡು ಮಮ ಹೃದ್ರೋಗ ಮೂಲ ಪ್ರ ಬುದ್ಧರಲಿ ಪದವಿತ್ತು ಉದ್ಧಾರ ನೀ ವಹಿಸು 1 ನಿನ್ನ ಕೃಪೆಯಮೃತ ರಸವಿನ್ನು ದೊರೆಯಲು ನಾವು ಧನ್ಯ ಧನ್ಯರು ಮಾತೆ ಭಕ್ತಿಮೂರ್ತೆ ವಿಧಿ ರುದ್ರಸೇವ್ಯ ಪದ ಪುಷ್ಕರಳೆ ಪುಣ್ಯ ಪುರುಷ ಸಮೀರ ಸಂತ ಸಂಸ್ತುತೆ ಪಾಹಿ 2 ನೀನೊಲಿಯದ ಜೀವ ಏನು ಸಾಧನೆ ಮಾಡೆ ಪ್ರಾಣವಿಲ್ಲದ ದೇಹ ಶೃಂಗರಿಸಿದಂತೆ ವಾನರ ಪ್ರತಿಬಿಂಬ ಜಯೇಶವಿಠಲ ತಾನೊಲಿಯ ಅವಗೆಂದು ನಿನ್ನವರ ಕರವಶನು 3
--------------
ಜಯೇಶವಿಠಲ
ಬುದ್ಧಿಯ ನಾನೇ ಹೇಳುವೆ ಎಲೆ ಎಂಗರವಟ್ಟೆಬುದ್ಧಿಯ ನಾನು ಹೇಳುವೆಬುದ್ಧಿಯ ನಾನು ಹೇಳುವೆ ಶುದ್ಧ ಬ್ರಹ್ಮನು ನೀನು ಎಲೆ ಎಂಗರವಟ್ಟೆ ಪ ಸತಿ ಎಲ್ಲಿ ಹಿಂದಣ ಸುತರೆಲ್ಲಿಹಿಂದಾದುದನು ಬಿಟ್ಟು ಇಂದಿದು ನನ್ನದೆಂಬೆ ಎಲೆ ಎಂಗರವಟ್ಟಿ 1 ಮುಂದಾವ ಜನ್ಮ ಭೋಗಿಪೆಯೋ ಎಲೆ ಎಂಗರವಟ್ಟೆಮುಂದಾರ ಮದುವೆಯಹೆ ಎಲೆ ಎಂಗರವಟ್ಟೆಮುಂದಣ ತಾಯಿ ಯಾರು ಮುಂದಣ ತಂದೆ ಯಾರುಮುಂದಣ ಹಿಂದಣದರಿಯೆ ಇಂದಿನದು ಎನ್ನದೆಂಬೆ ಎಲೆ ಎಂಗರವಟ್ಟಿ2 ಭಿಕ್ಷವ ಹಾಕಲಾರಿ ಎಲೆ ಎಂಗರವಟ್ಟೆ ಕುಕ್ಷಿಗೆ ತಿನ್ನಲಾರಿಲಕ್ಷ ಹೊನ್ನುಗಳನ್ನು ನೆತ್ತಿಗೆ ಇಟ್ಟುಕೊಂಬೆಯಾ ಎಲೆ ಎಂಗರವಟ್ಟೆ 3 ತನುವಿದು ತನ್ನದೆಂಬೆ ಎಲೆ ಎಂಗರವಟ್ಟೆ ತನುವನು ನೋಡಿಕೊಂಬೆನಿನ್ನ ಮುಂದೆಯೇ ತನು ತಾನು ಹೋಗುವುದುತನುವದು ನಿನಗಿಲ್ಲ ತನು ಸಂಬಂಧವೆಂತೋ ಎಲೆ ಎಂಗರವಟ್ಟೆ4 ಹಿಡಿಯೋ ಗುರುಪಾದವನು ಎಲೆ ಎಂಗರವಟ್ಟೆ ಪಡೆಯೋ ಕಟಾಕ್ಷವನುಸಡಿಲದೇ ದೃಷ್ಟಿಯನು ತಿರುಹಿ ನಿನ್ನೊಳಗಿಟ್ಟುಒಡೆಯ ಚಿದಾನಂದನು ನೀನಾಗಿ ನೀನಿರು 5
--------------
ಚಿದಾನಂದ ಅವಧೂತರು
ಬೆಂಬಿಡದಲೆ ಪೊರೆ | ಅಂಬಿಕಾತನಯನೆ ಪ ವಾಸುಕಿ ಭೂಷಣ 1 ನಾಕೇಶವಂದಿತ | ಆಖುವಾಹನ ಎನ್ನ |ಕಾಕುಮತಿ ಕಳೆದು ನೀಕಾಯೊ ಕರುಣದಿ 2 ಶ್ರೀಮನೋಹರ ಸ್ವಾಮಿ | ಶಾಮಸುಂದರ ಸಖಕಾಮಹರಸುತ | ಸಾಮಜವದನನೆ 3
--------------
ಶಾಮಸುಂದರ ವಿಠಲ
ಬೆಳಗಿನೊಳು ಬೆಳಗಾಯಿತು ನೋಡಿ ಥಳಥಳಿಸುತ ಮನದೊಳಗೆ ಝಳಿಸುತಿಹದು ಜಗದೊಳಗೆ ಧ್ರುವ ಬೆಳಗಾಯಿತು ಎನ್ನೊಳಗೆ ಸುಳಿವು ದೋರಿದ ಸದ್ಗುರು ಕೃಪೆಯ ಹೇಳಲಿನ್ನೇನದರ ಖೂನ ತಿಳಿದೇನೆಂದರೆ ಎಳೆಯು ಸಿಲುಕದು ಬಲು ಸೂಕ್ಷ್ಮ ಸುಜ್ಞಾನ ಹೇಳಿ ಕಿತ್ಯಾಡುವ ಮರುಳರಿಗೆ ತಿಳಿಯದಿದರನುಸಂಧಾನ ಕಳೆಯದ ಕಲ್ಪನೆ ಅನುಮಾನಿಗಳಿಗೆ ತಿಳಿಯುವುದೆ ಸದ್ಗತಿ ಸಾಧನ 1 ಬೆಳಗಿ ಬೆಳಗು ಬೆರೆದವನೆ ತಾ ಕುಲಕೋಟಿಗಳು ಧನ್ಯ ಮಳೆಮಿಂಚಿನ ಕಳೆಕಾಂತಿಗಳಿಡುತದೋರಿದ ಸದ್ಗುರು ಪುಣ್ಯ ಗುಹ್ಯ ತಾರ್ಕಣ್ಯ ಬೆಳಗು ಬೈಗಿಲ್ಲದ ಬೆಳಗಿನ ಪ್ರಭೆ ತಿಳಿದವನೆ ಮೂಲೋಕದೊಳಗೆ ಮಾನ್ಯ 2 ಬೆಳಗಿನೊಳು ಬೆರಗಾದನು ಮಹಿಪತಿ ಅತಿ ಆಶ್ಚರ್ಯವ ನೋಡಿ ತೊಳಲಿ ಬಳಲುವ ನಿದ್ರೆಯಗಳೆದನು ತಾ ಈ ಡ್ಯಾಡಿ ನಿಜ ಒಡಮೂಡಿ ಭವ ಪಾದವ ಕೂಡಿ3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಬೆಳೆಗಿಂಝಾವದಿ ಬಾರೊ ಹರಿಯೆ ನಿನ್ನ ಕಳೆಕಳೆ ರೂಪ ನೋಡುವೆ ಮುಕುಂದ ಪ. ಭಕ್ತರ ಭಯ ನಿವಾರಣನೆ ಭಕ್ತಿಲಿ ಕರೆವೆ ಗೋವಿಂದ ನಿನ್ನನೆ ಭಕ್ತವತ್ಸಲ ನೀನಲ್ಲವೇ ಸ ದ್ಭಕ್ತರ ಸಲಹೆ ಕಂಕಣ ಧರಿಸಿಹನೆ 1 ಶ್ರೀ ತುಳಸಿಯ ವನಮಾಲ ಶ್ರೀ ಕೃಷ್ಣ ನಿನ್ನ ದರ್ಶನದ ಲಾಭ ಶ್ರೀಶನೆ ಬಯಸುವೆ ದೇವ ಶ್ರೀರಮೆಯರಸ ದಯಪಾಲಿಸೊ ಕೃಷ್ಣ 2 ಒಮ್ಮೆಯಾದರೂ ತೋರೊ ರೂಪ ಎನ್ನ ಕರ್ಮ ಖಂಡನವಹ ತೆರೆದೊಳು ಶ್ರೀಪ ಬೊಮ್ಮನೈಯ್ಯ ನಿನ್ನ ನೋಡ್ವೆ ಸುಮ್ಮಾನವ್ಯಾಕೊ ಶ್ರೀ ಶ್ರೀನಿವಾಸ 3
--------------
ಸರಸ್ವತಿ ಬಾಯಿ
ಬೇಗ ನೀಗಿಸು ದುರ್ಭೋಗದ ಸೆರೆಯ ನಾಗಶಯನ ಬಾಗಿ ಬೇಡುವೆ ಪ ನೀತಿಗೆಡಿಸಿ ಮಂಗನೆನಿಸಿ ಮಾತುಮಾತಿಗೆ ಭಂಗಬಡಿಸಿ ಪಾತಕನೆನಿಸಿ ದಂಗು ಹಿಡಿಸಿ ಘಾತಮಾಳ್ಪ ಹೊನ್ನಿನಾಸೆ 1 ಕುನ್ನಿಯಂದದಿ ಕುಣಿಸಿ ಕುಣಿಸಿ ಬನ್ನ ಬಡಿಸಿ ಬನ್ನಂಗನೆನಿಸಿ ಉನ್ನತ ಸುಖಗೆಲಿಪ ಹೇಸಿ ಗನ್ನಗತಕ ಹೆಣ್ಣಿನಾಸಿ 2 ಮೋಸಪಾಶದೊಳಗೆ ಮುಳುಗಿಸಿ ದೋಷದೆಳಸಿ ಮುತಿಯಕೆಡಸಿ ನಾಶ ಯಮನ ಕೊಲೆಗೀಡೆನಿಸಿ ಘಾಸಿ ಮಾಳ್ಪ ಹೆಣ್ಣಿನಾಸಿ 3 ಇಷ್ಟೆ ಜಗದ ಸುಖವಿದನು ಎಷ್ಟುನಂಬಿ ಫಲವೇನು ಅಷ್ಟು ಮಾಯವೆನಿಸಿ ಎನ್ನನು ನಷ್ಟಗೊಳಿಪ ಕೆಟ್ಟಾಸಿಯನು 4 ಮೀರಿ ಮಹ ಘೋರಬಡಿಸಿ ಸಾರಸುಖದ ಮಾರ್ಗ ಕೆಡಸಿ ಧೀರ ಶ್ರೀರಾಮ ನಿನ್ನ ಮರೆಸಿ ಗಾರುಮಾಳ್ಪ ಪಾಪರಾಸಿ 5
--------------
ರಾಮದಾಸರು
ಬೇಗ ಮಾಡೋ ಭಕುತಿ ಆಗುವುದು ಮುಕುತಿಆಗ ಈಗ ಎನ್ನದಿರು ಇದೆ ನಿನಗೆ ಮುಕುತಿ ಪ ಧ್ಯಾನ ಹಲವ ಬಿಡು ಧ್ಯಾನ ಆತ್ಮನ ಮಾಡುಧ್ಯಾನ ಧಾರಣ ಸಮಾಧಿಯಂಗಳ ನೋಡು ನಿಜವ ಕೂಡು 1 ಎಚ್ಚರ ಬಾಹಿರ ಮರೆತು ಎಚ್ಚರ ಅಂತರವರಿತುಎಚ್ಚರ ಬಾಹಿರ ಅಂತರ ಮರೆತು ಎಚ್ಚರ ಬೇರರಿತು 2 ನಿತ್ಯ ಬಿಡದೆ ವಾದಕೆ ಮಯ್ಯ ಕೊಡದೆಸಾಧಿಸು ನಿತ್ಯಾನಿತ್ಯಾ ವಸ್ತುವ ಸಾಧಿಸು ಗುರುವ ಹಿಡಿದೇ 3 ಬೇರೆ ಎಂಬುದ ಮಾಣು ಎಲ್ಲವ ನಿನ್ನಲೆ ಕಾಣು ನಾಬೇರೆಯೆಂಬ ಮತಿಯ ಮಾಣು ಬಳಿಕ ಜಾಣ 4 ಬೋಧ ಬೋಧ ಗುರಿವಿಡಿಯೋ 5
--------------
ಚಿದಾನಂದ ಅವಧೂತರು