ಒಟ್ಟು 2143 ಕಡೆಗಳಲ್ಲಿ , 112 ದಾಸರು , 1724 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಸ್ಮರಿಸುವೆ ಹರಿಯನು ದುರಿತವ ಕಳಿವನು ಪ ಮರಿಯಾನು ಭಕುತರ ಜರಿವನು ದುರುಳರ ಪೊರೆವನು ಸುಜನರ ಭರದಿಂದ ಶಿರಿವರ 1 ಕರಿರಾಜಾನೀತನ ಕರಿಯಲು ಆ ಕ್ಷಣ ತ್ವರಿತಾದಿ ಈ ಜಾಣ ಪೊರೆದನು ಬಲು ಘನಾ 2 ಕರುಣಾಳು ಈತನು ಸುರರೊಳು ಮರಿಯಾನು ನಮ್ಮನು ಶ್ರೀವತ್ಸಾಂಕಿತನು 3
--------------
ಸಿರಿವತ್ಸಾಂಕಿತರು
ಸ್ಮರಿಸುವೆನು ಸದ್ಭಕ್ತಿಯಲಿ ಶ್ರೀರಾಮನ ಗುಣಧಾಮನ ಸಿರಿವಿರಿಂಚಾದ್ಯಮರಗಣ ಸಂಸ್ತುತ್ಯನ ಸಂತೃಪ್ತನಾ ಪ ಆದಿಯಲಿ ಝಷನಾಗಿ ನಿಗಮವ ತಂದನ ಮುನಿವಂದ್ಯನ ಭೂಧರಾಧರ ದಿವಿಜರಿಗೆ ಸುಧೆಗರೆದನ ಸುರವರದನ ಕಾದು ಕಿಟರೂಪದಲಿ ಭೂಮಿಯ ತಂದನ ಗುಣವೃಂದನ ಬಾಧಿಸಿದ ರಕ್ಕಸನ ತರಿದು ಪ್ರಲ್ಹಾದನ ತಾ ಪೊರೆದನ 1 ತುಳಿದನ ಅವಗೊಲಿದನ ಕೊಡಲಿ ಪಿಡಿದಾ ಕ್ಷತ್ರಿಕುಲ ವಿರಾಮನ ಭೃಗು ರಾಮನ ಮೃಡನೊರದಿ ಯುನ್ಮತ್ತ ದೈತ್ಯರು ಬಾಧಿಸೆ ಧರಿ ಪ್ರಾರ್ಥಿಸೆ ಜಡಜ ಪೀಠಾದ್ಯಮರರಾ ಮೊರೆ ಕೇಳ್ದನ ಧರೆಗಿಳಿದನ 2 ದಶರಥನ ಸತಿಯುದರದಲಿಯವತರಿಸಿದ ಮುದಗರಿಸಿದ ಬಿಸರುಹಾಪ್ತನ ವಂಶವನು ಉದ್ಧರಿಸಿದ ಮೈಮರಸಿದ ದಶದಿಶೆದಿ ಸುರರೆಲ್ಲ ಪೂಮಳೆಗರೆದರು ಸುಖಸುರಿದರು ಅಸಮಲೀಲೆಯ ತೋರ್ದರಘುಕಲಚಂದ್ರನ ಸುಖಸಾಂದ್ರನ 3 ಗಾಧಿಸುತನಧ್ವರವ ಕಾಯ್ದ ಸಮರ್ಥನ ಜಗಕರ್ತನ ವೇದಧನು ಮೊದಲಾದ ಕಲೆಗಳ ತಿಳಿದನ ಮುನಿಗೊಲಿದನ ಹಾದಿಯಲಿ ಶಿಲೆಯಾದ ಅಹಲ್ಯಳ ಪೊರೆದನ ಸಿರಿವರದನ ಮೋದದಲಿ ಹರಧನು ಮುರಿದ ಗಂಭೀರನ ಬಹುಶೂರನ 4 ಜನಕಭೂಪತಿ ತನುಜಳೆನಿಸಿದಸೀತೆಯ ಭೂಜಾತೆಯಾ ಘನಹರುಷದಲಿ ವಲಿಸಿಕರವನು ಪಿಡಿದನ ಯಶಪಡೆದನ ದನುಜರುಪಟಳತೋರಲಾಕ್ಷಣ ಸೀಳ್ಪನ ಸುರರಾಳ್ದನ ತನಗೆ ತಾನೇ ಸೋಲಿಸಿದ ಜನಮೋಹನ ಖಗವಾಹನ 5 ಜನಕನಾಜ್ಞವ ಪಾಲಿಸಿದ ದಯವಂತನ ಅಘಶಾಂತನ ಅನುಜಸತಿಸಹ ಪುರದಿ ತಾಪೊರಮಟ್ಟನ ಅತಿಧಿಟ್ಟನ ವನದಿ ಬಹು ಮುನಿಗಳ ಕಾರಾರ್ಚಿತನಾದನ ಸುಪ್ರಸಾದನ ಅನುಜ ಭರತಗೆ ದಯದಿ ಪಾದುಕೆ ಕೊಟ್ಟನ ಸಂತುಷ್ಟನ 6 ಮನುಜರಂದದಿ ಸತಿವಿಯೋಗವತೋರ್ದನ ಕುಜನಾರ್ದನ ವನಿತೆಯಂಜಲ ಫಲಗಳನು ತಾಮೆದ್ದನ ಶ್ರುತಿಸಿದ್ಧನ ದನುಜರಿಪು ಹನುಮಂತನನು ಸಾರೆ ಗರೆದನ ಕರುಣಿಸಿದನ ವನಜ ಸಖಸುತನೊಡನೆ ಸಖ್ಯವ ಮಾಡ್ಡನ ವರನೀಡ್ಡನ 7 ಲೀಲೆಯಿಂದಲಿ ತಾಳ ಮರಗಳ ಸೀಳ್ದನ ನೆರೆಬಾಳ್ದನ ವಾಲಿಯನು ಸಂಹರಿಸಿದತಿಬಲವಂತನ ಶ್ರೀಕಾಂತನ ಮೇಲೆನಿಪ ರಕ್ಕಸರನೆಲ್ಲರ ತುಳಿದನ ಅಸುಸೆಳೆದನ ಶ್ರೀಲತಾಂಗಿಯ ಕ್ಷೇಮವಾರ್ತೆಯ ಕೇಳ್ದನ ಮುದತಾಳ್ದನ 8 ಗಿರಿಗಳಿಂದಲಿ ಶರಧಿಯನು ಬಂಧಿಸಿದನ ಸಂಧಿಸಿದನ ಹರಿಗಳೆಲ್ಲರ ಕೂಡಿಲಂಕೆಯ ಸಾರ್ಧನ ರಣದಿರ್ದನ ಉರುಪರಾಕ್ರಮಿ ರಾವಣನ ಶಿರಕಡಿದನ ಹುಡಿಗೆಡೆದನ ವರವಿಭೀಷಣ ಭಕ್ತಗಭಿಷೇಚಿಸಿದನ ಪೋಷಿಸಿದನ 9 ಸಿರಿಸಹಿತ ಪುಷ್ಪಕವನೇರಿದ ಚಲುವನ ಅತಿ ಪೊಳೆವನ ತ್ವರದಿಶೃಂಗರಿಸಿದ ಅಯೋಧ್ಯಕೆ ಬಂದನ ಅಲ್ಲಿ ನಿಂದನ ಭರತ ಪ್ರಾರ್ಥಿಸಲಾಕ್ಷಣದಿ ಮೊರೆ ಕೇಳ್ದನ ಧರಿಯಾಳ್ದನ ಸರಸಿಜಾಸನ ಪ್ರಮುಖರಾರ್ಚನೆ ಕೊಂಡನ ಕೋದಂಡನ 10 ಮರುತಸುತನಿಗೆ ಅಜನ ಪದವಿಯನಿತ್ತನ ಬಹುಶಕ್ತನ ಚರಣಸೇವಕ ಜನಕಭೀಷ್ಟದಾತನ ವಿಖ್ಯಾತನ ನಿರುತ ಸನ್ಮುನಿಹೃದಯ ಮಂದಿರ ವಾಸನ ಜಗದೀಶನ ಸ್ಮರಣೆ ಮಾತ್ರದಿ ದುರಿತರಾಶಿಯ ತರಿದನ ಸುಖಗರೆವನ 11 ದೇವಕೀ ವಸುದೇವ ಸುತನೆಂದೆನಿಪನ ಜಗಕಧಿಪನ ಮಾವನನು ಸಂಹರಿಸಿ ಶಕಟನ ಕೊಂದನ ಆನಂದನ ಗೋವು ಕಾಯುತ ಗಿರಿಯ ಬೆರಳಲಿ ಆಂತನ ಬಹುಶಾಂತನ ಗೋವ್ರಜದಿ ಗೋಪಿಯರ ವಸನವ ಕಳೆದನ ಅಹಿತುಳಿದನ 12 ಲೋಕನಾಥನು ಪಾರ್ಥಸಾರಥಿಯಾದನ ಸುಪ್ರಮೋದನ ನೇಕ ಪರಿಭಗವತ್ಸುಗೀತೆಯ ಪೇಳ್ದನ ತಮಸೀಳ್ದನ ಆ ಕುರು ಕುಲವ ತರಿದ ಪಾಂಡವ ಪ್ರಾಣನ ಸುಪ್ರವೀಣನ ಆಕುರುಪ ಭೀಷ್ಮನಿಗೆ ಮುಕ್ತಿಯ ಕೊಟ್ಟನ ಅತಿಶ್ರೇಷ್ಟನ 13 ಕಪಟನಾಟಕ ನಗ್ನರೂಪದಿ ನಿಂತನ ನಿಶ್ಚಿಂತನ ತ್ರಿಪುರದಲಿ ಜಲಜಾಕ್ಷಿಯರ ವ್ರತ ಭÀಂಗನ ನಿಸ್ಸಂಗನ ಕೃಪಣವತ್ಸಲ ತುರಗವೇರಿ ತಾನಡೆದನ ಅಸಿಪಿಡಿದನ ಅಪರಿಮಿತ ಬಹುಕ್ರೂರ ಯವನ ವಿಘಾತನ ಪ್ರಖ್ಯಾತನ 14 ಈ ವಿಧದಿ ಬಹುಲೀಲೆ ಗೈವ ಸುಚರಿತನ ಜಗಭರಿತನ ಭಾವಶುದ್ಧಿಲಿ ಭಜಿಸುವವರಘಕಡಿವನ ಗತಿಕೊಡುವನ ಪಾವಮಾನಿ ಮತಾನುಗರ ಕರಪಿಡಿವನ ಭವತಡೆವನ ದೇವತತಿ ಸದ್ವಿನುತ ವರದೇಶ ವಿಠಲನ ನಿಷ್ಕುಟಿಲನ 15
--------------
ವರದೇಶವಿಠಲ
ಸ್ಮರಿಸೆನ್ನ ಮನವೇ ಯಾದವ ರಾಯನಾ| ಸರಸಿಜೊವನುತ ಭಕುತರ ಪ್ರೀಯನಾ ಪ ವರನಿಗ ಮೋಯಿದವನಾ ಶೀಳಿ ಎಳಹಿದವನಾ| ಶರಧಿ ಮಥನ ಗೋಸುಗನ ಪೊತ್ತನಾ ಧರಣಿಯಾ ತನ್ನ ಕೋರೆ ದಾಡಿಲಿರಿಸಿದಿಹನಾ| ಶರಣ ಪ್ರಲ್ಹಾದನ ಸುಸ್ಮರಣೆ ಗೊಲಿದನಾ1 ಭೂಸುರೋತ್ತಮನಾಗಿ ದಾನವ ಬೇಡಿದನಾ| ಹೇಸದೇ ಕ್ಷತ್ರಿಯರ ಕುಲ ಕೊಂದನಾ| ವಾಸು-ಕ್ಯಾ ಭರಣನ ಧನುವ ಮುರಿದವನಾ| ವಾಸವಾತ್ಮಜ ಮಿತ್ರ ದೇವಕಿ ಕಂದನಾ2 ಪತಿವೃತೆ ನಾರಿಯರ ವೃತಭಂಗ ಮಾಡಿದನಾ| ಸಿತ ಹಯವೇರಿದ ಶ್ರೀ ಜಗದೀಶನಾ| ಪತಿತ ಪಾವನನಾದಾ ಅನಂತಾವತಾರನ| ನುತ ಗುರು ಮಹಿಪತಿ ನಂದನ ಪ್ರೀನಾ3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಸ್ಮರಿಸೊ ಮಾನವನೆ ಗುರುಚರಣ ಅಂತ: ಕರಣ ಶುದ್ಧಿಯಲಿ ಮರೆಯದೆ ಪ್ರತಿದಿನ ಪ ದುರಿತ ಘನತತಿ ಮರುತ ಶ್ರೀ ರಘುದಾಂತ ತೀರ್ಥರ ಕರಜ ಶ್ರೀ ರಘುವೀರ ತೀರ್ಥರ ಚರಣಯುಗಲವ ಹರುಷದಿಂದಲಿ ಅ.ಪ ಧರೆಯೋಳ್ ಸುಂದರ ಸುರಪುರದಿ ಜನಿಸಿ ಗುರು ವಿಠ್ಠಲಾರ್ಯರ ಚರಣಾನುಗ್ರಹದಿ ವರ ಶಬ್ದ ಶಾಸ್ತ್ರವ ತ್ವರದಿ ಕಲಿತು ತುರಿಯಾ ಶ್ರಮವನೆ ಸ್ವೀಕರಿಸಿ ಗುರುಮುಖದಿ ಮರುತ ಶಾಸ್ತ್ರವನರಿತು ಧರ್ಮದೊಳಿರುತ ವಿಷಯದಿ ವಿರತಿಯಲಿ ಅನವರತ ಪ್ರವಚನ ನಿರತ ಸದ್ಗುಣ ಭರಿತ ಪಾವನ ಚರಿತರಂಘ್ರಿಯ 1 ಹೇಮಾಲಂಕೃತ ರತ್ನನಿಚಯಯುಕ್ತ ಹೇಮ ಮಂಟಪದಿ ಸುಂದರ ಶುಭಕಾಯಾ ಶ್ರೀ ಮನೋಹರ ಕವಿಗೇಯಾ ಬ್ರಹ್ಮ ವ್ಯೋಮ ಕೇಶಾದಿ ನಿರ್ಜರಗÀಣಶೇವ್ಯಾ ಭೂಮಿ ಸುರಜನ ಸ್ತೋಮಕನುದಿನ ಕಾಮಿತಾರ್ಥವ ಗರಿವ ಸೀತಾರಾಮರಂಘ್ರಿಯ ತಾಮರಸವನು ನೇಮದಿಂದರ್ಚಿಪರ ಶುಭಪದ2 ಪರಿಶೋಭಿಸುವ ಕಾಷಾಯ ವಸ್ತ್ರ ವರನಾಮ ಮುದ್ರಾಲಂಕೃತ ತನುಸಿರಿಯ ಗುರು ಅಕ್ಷೋಭ್ಯರ ಶುಭಚರಿಯ ಗ್ರಂಥ ವಿರಚಿಸಿದರು ನವರತುನ ಮಾಲಿಕೆಯ ಧರಣಿಯೊಳು ಸಂಚರಿಸುತಲಿ ಬಲು ಕರುಣದಿಂದಲಿ ಶರಣು ಜನರಘ ಭವ ಭಯಹರಣ ಗುರುವರ ಚರಣಯುಗಲವ3 ವಿನುತ ಸಮೀರ ಕೃತ ಸಾರಶಾಸ್ತ್ರವನೆ ಬೋಧಿಸುತ ಸಜ್ಜನರ ಘೋರ ಸಂಸೃತಿ ಭಯದೂರ ಮಾಡಿ ತೋರಿ ಸನ್ಮಾರ್ಗ ದೀಪಿಕೆಯ ಸುಸಾರ ಸೇರಿದವರಘ ದೂರ ಪರಮೋದಾರ ಗುಣ ಗಂ- ಸೂರಿಜನ ಪರಿವಾರನುತ ಜಿತ- ಮಾರ ಶ್ರೀ ರಘುವೀರ ತೀರ್ಥರ 4 ಶೇಷಾಚಲದಿ ಶಿಷ್ಯಗಣದಿ ಬಂದ ಶ್ರೀ ಸತ್ಯ ಪ್ರಮೋದ ತೀರ್ಥರ ಸ್ವರ್ಣೋತ್ಸವದಿ ತೋಷಬಡಿಸುತ ನಿರ್ಭಯದಿ ಉಪನ್ಯಾಸ ಮಾಡಿದರು ವೀಶಗಮನ ಸುರೇಶ ಭಕುತರ ಸಿರಿ ನರಕೇಸರಿಗೆ ಪ್ರಿಯದಾಸ ಕೊಡಲಿವಾಸ ಕರ್ಮಂದೀಶರಂಘ್ರಿಯ 5
--------------
ಕಾರ್ಪರ ನರಹರಿದಾಸರು
ಸ್ಮರಿಸೋ ಎಲೆ ಮನವೇ | ಜಗದಯ್ಯನಾ | ಸ್ಮರಿಸೋ ಶಿವಸುಖ ಬೆರಿಸೊ ಭವದಿಂದ | ತರಿಸೊ ಗಿರಿಜಾ ರಮಣನ ಪ ಫಣಿಯಾಗಣ್ಣಿ ನೋರಣಿಯಾ | ಸದಮಲ | ಫಣಿಯಾ ಭರಣ ಭೂಷಣಿಯಾ | ಮುಕುತಿಯಾ | ಹೋಣೆಯಾ ಕೊಡಲಿಕ್ಕೆ ದಣಿಯಾನೆಂದು ಬೇಡುವರಾ 1 ಒಡಿಯನೆನ್ನದೆ ನಡಿಯಾ | ಅಂಗಜನಾ | ಹುಡಿಯಾ ಮಾಡಿದ ನಡಿಯಾ ಶರಣೆಂದು | ಪಿಡಿಯಾಲವರಿಗೆ ಪಡಿಯಾ | ನಿತ್ತು ಹೊರೆವನಾ 2 ಯತಿಯಾ ಆನಂದ ಸ್ಥಿತಿಯಾ | ಪುಣ್ಯ | ಮೂರುತಿಯಾ ವಿಮಲ ಕೀರುತಿಯಾ | ಗುರುಮಹೀ | ಪತಿಯಾ ನಂದನ ಸಾರಥಿಯಾನಾದಿ ಮಹಿಮನಾ3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಸ್ವಸುಖ ನೋಡಿ ಸದ್ಗುರು ಕೃಪೆಯಿಂದ ವಿಶ್ವತೋಮುಖ ತೋರುವ ತಾಂ ಗೋವಿಂದ ಧ್ರುವ ಏನೆಂದ್ಹೇಳಲಯ್ಯ ಅನುಭವದ ಮಾತು ಖೂನಾಗ್ಯಾದೊಂದೇ ಶಾಶ್ವತ ಆನಂದೋಭರಿತ ಸ್ವಾನಂದ ಸುಖ ತಾನೆ ಆಗ್ಯದೆ ಸನ್ಮತ ಘನಬೆರೆದು ನೋಡುವದೀ ಸುಪಥ 1 ಮಲಕಿನ ಮನುಜರು ಮನವಿಡಬಲ್ಲರೇ ನಾಲ್ಕು ವೇದ ಸಾರುದಕ ಒಮ್ಮೆಯಾದರ ನಿಲುಕಿಸಿ ನಿಜ ನೋಡಿದರಸಾಧ್ಯ ಬೆಳಕೆ ಆಗ್ಯದ ನೋಡಿ ತಿಳಿಕೊಂಡರೆ 2 ಗುರುವಿನಿಂದಧಿಕಿಲ್ಲ ಅರಿತುಕೊಳ್ಳಿರೊ ಖೂನ ಪರಮಗತಿಯ ಸಾಧನ ಸುತತ್ವ ಜ್ಞಾನ ಬೆರೆದು ಮಹಿಪತಿ ಪೂರ್ಣ ಸದ್ಗುರು ಚರಣಕೆರಗಿ ಮನ ಪಡೆವದೀ ದಯಕರುಣಾ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಸ್ವಾ'ುಲಾಲೀ ತುಲಸೀ ರಾಮಲಾಲೀಪ್ರೇಮತುಲಸೀನಳಿನಾಕ್ಷಧಾಮ ಲಾಲೀ ಪಪ್ಲವಂಗಾಷಾಢಬಹುಳದಶಿ'ುಭಾರ್ಗ' ಲಾಲೀಭು'ಯವತಾರ ಸಾಯಂತ್ರಂ ಮೃಗಶಿರಯುತ ಲಾಲೀ 1ವೇಂಕಟಲಕ್ಷಾಂಬೋದರಪಯೋಧಿಸೋಮ ಲಾಲೀಪಂಕಜಲೋಚನ ಪ್ರಥಮಾಶ್ರಮವ್ರತನೇಮ ಲಾಲೀ 2ಸಿದ್ಧವಟಾ'ರ್ಭವ ವೈಷ್ಣವ ದೇವ ಲಾಲೀ ಇದ್ದರತುಲಸೀಕುಲಕೊಂಡಾರ್ಯಪ್ರಿಯಸುತ ಲಾಲೀ 3ಸಕಲಾಗಮ ಶಾಸ್ತ್ರಾರ್ಥಪರಿಶ್ರಮಸೇಯು ಲಾಲೀಶುಕವಾಗಝ ಸಂಶೋಭಿತ ಚರಿತ ಸತ್ಕ' ಲಾಲೀ 4ಶಮದಮಸದ್ಗುಣ ಶಾಂತಪ್ರತಿಭಸೂನೃತ ಲಾಲೀತೆಮಲಕನೆಪ್ಪುಡು ತಾರಕಮಂತ್ರುಪದೇಶಿ ಲಾಲೀ 5ಶ್ರೀಮದಹೋಬಿಲಸ್ವಾ'ುಯತೀಂದ್ರಸೇವಕ ಲಾಲೀಕೋಮಲಭಾತಕ'ಜನವಂದಿತ ಕೌಶಲ ಲಾಲೀ6ರಾಮಕೃಷ್ಣಪರಬ್ರಹ್ಮಮಹೋತ್ಸವರುಚಕೃತ ಲಾಲೀನೇಮರ'ತಮೂರ್ಖಾದಿಪತಿತೋದ್ಧಾರ ಲಾಲೀ 7ತವಗುಣಜಿತಕೇಯೂರಸತ್ವಾಭರಣ ಲಾಲೀಸುವರ್ಣಮಣಿಮಯಭೂಷಣ ಸ್ವಾರ್ಥತ್ಯಾಗ ಲಾಲೀ 8ಪುರಪುರಭಜನಾಗಾರಾ ಗಣಿತಸ್ಥಾಪಿತ ಲಾಲೀಪರಮೋದಾರಪರ ಚಿಂತನ ಕರುಣಾಕರ ಲಾಲೀ 9ಧರಮ'ಸೂರ್ಪುರವರ ಪ್ರಭುಪೂಜಿತ ಸ್ಮರಜಿತಲಾಲೀತಿರುರಾಮೋತ್ಸವ ತುಲಸೀವನಪ್ರತ್ಟಿತ ಲಾಲೀ 10ದುರಿತನಗಾಸಿನಿ ಸುಮತಮುಖ ಧಾರ್ಮಿಕಲಾಲೀಭರತಪುರಿಯರ್ಚಾವತಾರ ಭಾ'ಕ ಲಾಲೀ 11ಆಧಾರಭ್ರೂಮಧ್ಯಾಂತರ್ಬ' ವೇದ್ಯ ಲಾಲೀಖೇದಮೋದರ'ತ ಬ್ರಹ್ಮಾನಂದ ಲಾಲೀ 12ಪುತ್ತಡಿಗುರುಧರಲಕ್ಷ್ಮಿ ಸಂಪದ್ಯುಕ್ತ ಲಾಲೀಚಿತ್ತುಅಚಿತ್ತೀಶ್ವರ ತತ್ವತ್ರಯ ಶೇ ಲಾಲೀ 13ಸಿರಿಮುಳುಬಾಗಲಸನ್ನಿಧಿ ಸ್ಥಾಪನಚೇಯು ಲಾಲೀಧರರಂಗಸ್ವಾ'ುದಾಸ ಜೀವೋದ್ಧಾರಕ ಲಾಲೀ 14
--------------
ಮಳಿಗೆ ರಂಗಸ್ವಾಮಿದಾಸರು
ಸ್ವಾಗತವು ಸ್ವಾಗತವು ಯೋಗಿವರ್ಯಾ ಪ ಪಾದ ಪಂಕಜವಾ ಅ.ಪ. ಯೋಗಿ ಜನ ವಂದ್ಯ ಭವರೋಗಾಹಿ ಖಗನೆನಿಪನಾಗ ಭೂಷಣ ಸಖನ ಯೋಗ ನಿರತಾ |ಆಗು ಹೋಗುಗಳೆರಡು ಸಹಿಸುವಲಿ ನಿಷ್ಠಾತಕಾಗಿನಿಯ ತಟವಾಸ ರಚಿತ ಸುಧೆ ಭರಿತಾ 1 ನಿತ್ಯ ನಿಜಯತಿ ಚರ್ಯಸ್ತುತ್ಯ ಪರಮೌದಾರ್ಯ ಯೋಗ ಧುರ್ಯಾ |ಸತ್ಯಾತ್ಮ ಪರಯುಗ್ಮ ಭಕ್ತಿಯಲಿ ಚಾತುರ್ಯಪ್ರತ್ಯಹರ್ರಾಮ ಪದ ಅರ್ಥ ಕೈಂಕರ್ಯಾ 2 ಭಾವಜನಯ್ಯ ಗುರು ಗೋವಿಂದ ವಿಠಲ ಪದಭಾವದಲಿ ಭಜಿಪಂಥ ಗುರುವರೇಣ್ಯಾ |ಪಾವನವು ನಿಮ್ಮ ಪದ ತೊಳೆದುದಕ ಶಿರಧೃತವುಪಾವಿಸಿತು ನಮ್ಮ ಕುಲ ನಾ ಪರಮ ಧನ್ಯಾ 3
--------------
ಗುರುಗೋವಿಂದವಿಠಲರು
ಸ್ವಾಮಿ ನಿಮ್ಮ ಕರುಣ ನಮ್ಮ ಸರ್ವಾಭರಣ ಸ್ವಾಮಿ ನಿಮ್ಮ ಚರಣ ನಮ್ಮ ಜನ್ಮೋದ್ಧಾರಣ ಧ್ರುವ ಸ್ವಾಮಿ ನಿಮ್ಮ ದಯ ನಮ್ಮ ಹಿತೋಪಾಯ ಸ್ವಾಮಿ ನಿಮ್ಮ ಭಯ ನಮ್ಮ ಪುಣ್ಯೋದಯ 1 ಸ್ವಾಮಿ ನಿಮ್ಮ ಖೂನ ನಿಜಸ್ಥಾನ ಸ್ವಾಮಿ ನಿಮ್ಮ ಙÁ್ಞನ ನಿಜಧ್ಯಾನ 2 ಸ್ವಾಮಿ ನಿಮ್ಮ ನೋಟ ನಮ್ಮ ಮನದೂಟ ಸ್ವಾಮಿ ನಿಮ್ಮ ಮಾಟ ನಮ್ಮ ಸುಖದಾಟ 3 ಸ್ವಾಮಿ ನಿಮ್ಮ ನಾಮ ನಮ್ಮ ಅತಿಪ್ರೇಮ ಸ್ವಾಮಿ ನಿಮ್ಮ ನೇಮ ನಮ್ಮ ನಿಜಾಶ್ರಮ 4 ಸ್ವಾಮಿ ನಿಮ್ಮ ಸೋಹ್ಯ ನಮ್ಮ ನಿಜಾಶ್ರಯ ಸ್ವಾಮಿ ನಿಮ್ಮ ಸಾಹ್ಯ ಮಹಿಪತಿ ಮನೋತ್ರಾಹ್ಯ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಸ್ವಾಮಿ ಯಾತಕೆನ್ನೊಳುಪೇಕ್ಷೆ ಮಾಡುವಿ ದೀನನಾಥ ಸುಮ್ಮನೆ ನಿಂತು ನೋಡುವಿ ಪ. ನಡೆವನ ಕಣ್ಣ ಕಟ್ಟಿ ಕೆಡಹುವುದುಚಿತವೆ ಒಡೆಯ ನಿನ್ನಡಿಗಳ ಪೊಗಳುವ ಪಾಡಿ ನುಡಿವ ಕಾರ್ಯಕೆ ಬಾಡಿ ಬಳಲುತ ನಾ ನಿತ್ಯ ನೋಡುತ ಬಡವನ ಬಿಡದಿರು ಕಡಲಶಯನ ನಿಜ ಮಡದಿ ಸಹಿತನಾಗಿ ಶ್ರೀಶನೆ ಕೃಪೆ ಕಂಜಕರ ಶ್ರೀನಿವಾಸನೆ1 ಭಾವಜ ಪಿತ ನಿನ್ನ ಸೇವೆ ಮಾಳ್ಪರಿಗೆಂದು ನೋವ ನೀಡದೆ ಕಾವ ಬಿರುದನು ಭವ ಸಾರÀ ನೀ ಮರೆವುದು ನೀತಿಯೆ ಎನ್ನ ನೀ ವಿಧ ಮಾಳ್ಪುದು ಖ್ಯಾತಿಯೆ ಪಾವನ ಚರಿತ ಪುರಾಣ ಪುರುಷ ಮಹ ದೇವ ನೀ ಕರಪಿಡಿದೆನ್ನನು ಕರು- ಣಾವಲಂಬನವಿತ್ತು ಪೊರೆವುದು 2 ದುರುಳ ಭಾವನೆಯಿಂದ ಸರಿದು ಹೋಗುವ ಪಂಚ ಕರಣಕೆ ನೀನರಸನಲ್ಲವೆ ಭಕ್ತಾ- ಭರಣಕೆ ನಿನ್ನೊಳಿರಿಸು ಮಾರ್ಗವನಂತ:- ಕರಣಕೆ ತರಿದು ಪಾಪಗಳನು- ದ್ಧರಿಸೆನ್ನ ವೆಂಕಟಗಿರಿವರ ದೀನಾರ್ತಿ ಚಕ್ರಧರ ಸಕಲಾನಂದ ಕಾರಣ 3
--------------
ತುಪಾಕಿ ವೆಂಕಟರಮಣಾಚಾರ್ಯ
ಹಣವೆÉ ನಿನ್ನಯ ಗುಣವೇನು ಬಣ್ಣಿಪೆನೊ ಪ. ಹಣವಿಲ್ಲದವನೊಬ್ಬ ಹೆಣವೇ ಸರಿ ಕಂಡ್ಯಾ ಅ.ಪ. ಬೆಲೆಯಾಗದವನೆಲ್ಲ ಬೆಲೆಯ ಮಾಡಿಸುವಿ ಎಲ್ಲ ವಸ್ತುಗಳನಿದ್ದಲ್ಲೆ ತರಿಸುವಿ ಕುಲಗೆಟ್ಟವರ ಸತ್ಕುಲಕೆ ಸೇರಿಸುವಿ ಹೊಲೆಯನಾದರೂ ತಂದೊಳಗಿರಿಸುವಿ 1 ಅಂಗನೆಯರ ಸಂಗ ಅತಿಶಯದಿ ಮಾಡಿಸುವಿ ಶೃಂಗಾರಾಭರಣಂಗಳ ಬೇಗ ತರಿಸುವಿ ಮಂಗನಾದರೂ ಅನಂಗನೆಂದೆನಿಸುವಿ ಕಂಗಳಿಲ್ಲದವಗೆ ಮಗಳ ಕೊಡಿಸುವಿ 2 ಚರಣಕ್ಕೆ ಬಂದಂಥ ದುರಿತವನು ಬಿಡಿಸುವಿ ಸÀರುವರಿಗೆ ಶ್ರೇಷ್ಠನರನ ಮಾಡಿಸುವಿ ಅರಿಯದ ಶುಂಠನ ಅರಿತವನೆನಿಸುವಿ ಸಿರಿ ಹಯವದನನ ಸ್ಮರಣೆ ಮರೆಸುವಿ 3
--------------
ವಾದಿರಾಜ
ಹದಿನಾಲ್ಕು ಲೋಕವನಾಳುವ ತಂದೆಗೆ | ಮುದದಿಂದ ನಾನೊಬ್ಬ ಭಾರವಾದೆನೆ ಪ ಸುರಗಿರಿಯು ಶರಧಿಯೊಳು ಕಡೆವಾಗ ಮುಣಗಲಾ || ಭರದಿಂದ ಪೋಗಿ ಚೆನ್ನಾಂತು ಪೊತ್ತೆ || ಧರಣಿಯು ಮೊರೆಯಿಡಲು ತೆರಳಲ್ಲಿ ಬಂದು | ಭೂತರುಣಿಯನು ಸೆರೆಬಡಿಸಿ ಉಳುಹಿಕೊಳ್ಳಲಿಲ್ಲವೆ 1 ಸುರಪತಿ ಮುನಿದೇಳು ಹಗಲಿರುಳು ಮಳೆಗರೆಯೆ | ಬೆರಳಲಿ ಧರಿಸಿ ಕಾಯ್ದು ನಿಜದೆ || ವರಮುನಿ ಪಸವನು ಬೇಡಲಾಗಿ ಬೆದರಿ ನರ- | ನರಸಿ ನಿನ್ನ ಕರೆಯೆ ಕರುಣದಲಿ ಪಾಲಿಸಿದೆ 2 ಜಲಜಾಕ್ಷ ಬೆಟ್ಟವನು ಪೊತ್ತು ಬಳಲಿದಾಗ | ಸಲಹಬೇಕೆಂದು ಬೇಸರಿಸಲಿಲ್ಲಾ || ಸುಲಭದಲಿ ಶೇಷಾಚಲನಾಗಿಪ್ಪ | ಒಲಿದೆನ್ನ ಸಂರಕ್ಷಿಸೊ ವಿಜಯವಿಠ್ಠಲನೆ 3
--------------
ವಿಜಯದಾಸ
ಹನುಮ ಅಣಿಯಾರೊ ನಿನಗೆ ಈ ತ್ರಿಭುವನದೊಳಗೆಹಣಮಂತ ಗುಣವಂತ ಮಣಿಯುವೆನೊ ನಿನಗೆ ಪ ಗಡ್ ಗಡ್‍ಗಡನೆ ರಾಮನ ಪಾದಾಂಬುಜಕೆ ವಂದಿಸುತಖಡ್ ಖಡ್ ಖಡನೆ ಸಿಡಿಲಂತೆ ನಭದೊಳಗೆ ಗರ್ಜಿಸುತಧಡ್ ಧಡ್ ಧಡನೆ ಕಡಲನ್ನೆ ಜಿಗಿಯುತ್ತ ಭಡ್ ಭಡ್ ಭಡನೆ ಸೀತೆಯನು ಶೋಧಿಸುತ ಬಂದಿಯೋ 1 ಬರಬರನೆ ಬಿಂಕದಲಿ ಉರಿಯುತಿಹ ರಕ್ಕಸರದರ್ ದರ್ ದರನೆ ರಣರಂಗಕೊಬ್ಬನೇ ಎಳೆತಂದುಕರ್ ಕರ್ ಕರನೆ ಹಲ್ಗಿಡಿದು ತರಿಯುತ್ತ ಧರೆಯೊಳಗೆಭರ್ ಭರನೆ ಸಿರಿವರನ ಇಚ್ಛೆಯನು ಪೂರ್ತಿಸಿದಿ 2 ಖುದ್ ಖುದ್ ಖುದನೆ ನಗುತ ರಘುರಾಮನನು ಹೃದಯದೊಳುಖುದ್ ಖುದ್ ಖುದನೆ ಬಿಡದೇಳ್ವ ಭಕುತಿಯಲಿ ಸೇವಿಸುತಗದ್ ಗದ್ ಗದುಗಿನೊಳು ವೀರನಾರಾಯಣನಮುದ್ ಮುದ್ ವಂದಿಸಿ ಪರಬ್ರಹ್ಮನ ಪದವಿಯನೆ ಪಡೆಯೊ3
--------------
ವೀರನಾರಾಯಣ
ಹನುಮ - ಭೀಮ - ಮಧ್ವರು ಅಮಮ ಎನಿತÀದ್ಭುತಮಹಿಮೆ ಪೊಗಳನು ಪಮ ದೇವ ಜೀವೋತ್ತಮ ಸುರಸಾರ್ವಭೌಮ ಹನುಮ ಪ ಭೀಮ ರಿಪುಕುಲಧೂಮ ಯತಿಕುಲಸೋಮ ಶ್ರೀಮದಾನಂದ ಮುನಿಮಹಿಮಾಅ.ಪ ಜೀಯ ಈ ಪಯೋಜಾಂಡದೊಳಿನ್ನೆಣೆಯಿಲ್ಲ ಬಲದೊಳು ಶೌರ್ಯ ಕಾಯನೋಡಲು ಆಖಣಾಶ್ಮಸಮನು ನಿನ್ನೊಳು ಹರಿಯರೂಪಗಳೆನಿತು ಇಹುದಯ್ಯ ನಿನ್ನಲ್ಲಿಹುದು ಇನ್ನೆಷ್ಟಯ್ಯ ಶ್ರೀಯರಸ ಶ್ರೀ ಶಿಂಶುಮಾರನು ನಿನ್ನ ಮುಖಕಮಲದಲ್ಲಿಹನೂ ವಾಯುಮೂರುತಿ ನಿನ್ನ ನಾಸಾಗ್ರದೊಳು ಶೋಭಿಪ ಮತ್ಸ್ಯಮೂರುತಿಯು ಜೀಯ ನಿನ್ನಯ ನಾಸಪೃಷ್ಠದಿ ಕೂರ್ಮ ಮೂರುತಿಯು ಅಲ್ಲಿ ನೆಲೆಸಿಹನು ನಯನದ್ವಯದಿ ಕಪಿಲವಿಷ್ಣು ಶ್ರವಣದ್ವಯಗಳೊಳು ಕೃಷ್ಣರಾಮರು ನಾರಾಯಣ ಇಹನು 1 ಬಾಹುದ್ವಯಗಳೋಳ್ಕಲ್ಕಿ ಬುದ್ಧರೂಪಿರೆ ಬಾಹುಬಲವಿನ್ನೆಷ್ಟಯ್ಯ ಅಹುದು ಪವನಹಸ್ತದೊಳ್ ಪಾವನ್ನ ಶ್ರೀ ಬಾದಾರಾಯಣ ಕಂಗೊಳಿಪನಯ್ಯ ಶ್ರೀ ಹರಿಯು ನೆಲೆಸಿಹನು ಪಾದ ಮಧ್ಯಸ್ಥಾನದಲಿ ಸಲೆ ಬೆಳಗುತಿಹನು ಮಹಮಹಿಮ ನಿನ್ನಯ ಪಾದಪೃಷ್ಠದಿ ಹೃಷೀಕೇಶ ಹರಿಯು ನಿಂತಿಹನು ಇಹರಯ್ಯ ದಕ್ಷಿಣ ವಾಮಜಾನುಗಳಲಿ ಯಜ್ಞ ಶ್ರೀಧರರಿಹರು ಕಟಿ ಪ್ರದೇಶದಿ ದಿಟ್ಟರಾಗಿಹರು 2 ದಕ್ಷಿಣದಲ್ಲಿಹ ವನಮಾಲೆಯಲ್ಲಿಹರು ಗುಣನಿಧಿಯೆ ತದುಪರಿ ಸೂರ್ಯವರುಣಅಶ್ವಿನಿಗಳೆಲ್ಲ ನಿನ್ನಯ ವನಮಾಲೆಯಲಿಹರು ಎಣಿಸೆ ದಕ್ಷಪ್ರಜಾಪತಿಯು ನಿನ್ನ ವಾಮ ವನಮಾಲದೊಳಲ್ಲಿ ಇರುತಿಹನು ಮಣಿದು ಸೇವಿಪ ಜಯಂತ ಮನುಯಮ ತದನಂತರ ವನಮಾಲೆಯಲ್ಲಿಹರು ಜಾಣ ಬೃಹಸ್ಪತಿ ದಕ್ಷಿಣ ವನಮಾಲದೊಳು ಆಶ್ರಯಿಸಿ ತಾವಿಹರು ಪ್ರಾಣ ಅಪಾನ ವ್ಯಾನೋದಾನ ಸಮಾನ ವನಮಾಲದಲ್ಲಿಹರು 3 ಪದುಮನಾಭನು ಸಲೆ ಬೆಳಗುತಿಹನು ವಾಮದಕ್ಷಿಣ ಕುಕ್ಷಿಯೊಳಿಹರು ಹರಿಮೂರುತಿ ನಿನ್ನಾಂತರದಿಂದ ನಿಂತಿಹನು ಪಾದಪಾಶ್ರ್ವಗಳಲ್ಲಿ ಋಷಭ ಗೋವಿಂದ ಮೂರುತಿ ಅಲ್ಲೆ ಇರುತಿಹರು ಮುದದಿ ನಿನ್ನಯ ವಕ್ಷದೊಳು ಶ್ರೀ ವರಹಮೂರುತಿ ಅಲ್ಲೆ ನೆಲೆಸಿಹನು ಎದುರಿಲ್ಲ ನಿನಗೆ ಕಪೋಲದೊಳು ಶ್ರೀ ವಾಸುದೇವನು ಇಹನು ವಿಧಿವಾಯುಗಳು ನಿನ್ನಯ ವಾಮಭುಜದೊಳು ಮುದದಿ ನಲಿಯುತಿಹರು ವಿಧಿ ವಾಯುಸತಿಯರು ದಕ್ಷಿಣಭುಜದೊಳು ನುತಿಸುತಿಹರು 4 ಪವನಶಕ್ತಿ ಹನ್ನೆರಡೆಲ್ಲ-ನಿನ್ನಯ ಹೃದಯದಾಭರಣ ಪವನಿಸಿರ್ಪುದು ಕ್ರಮದಿ-ಶಕ್ತಿ ಪ್ರತಿಷ್ಠೆ ಸಂವಿತ್ ಸ್ಪೂರ್ತಿ ಭವಹಾರಿ ನಿನಗೆ ಕಲಾವಿದ್ಯಾಮತಿ ನಿಯತಿ ಮಾಯಾ ಕಾಲಪುರುಷ ಈ ಪರಿಯು ಜೀವೇಶ ನಿನ್ನಯ ಮಹಿಮ ಗುಣಗಳ ಪೊಗಳಲಳವೇ ಹರಮುಖಾದ್ಯರಿಗೆ ಜೀವರೆಸಗುವ ಕಾರ್ಯಗಳು ಲವಲೇಶ ನಿನ್ನ ಬಿಟ್ಟು ನಡೆಯದೊ ಪವಮಾನಮೂರುತಿ ಹರಿಯ ಕರುಣಾಕಟಾಕ್ಷ ನಿನ್ನೊಳು ಇಟ್ಟುಇರುವುದು ಇನ್ನೆಷ್ಟೊ ದೇವ ನಿನ್ನಯ ಖ್ಯಾತಿ ಎಷ್ಟೋ ಬಲದಿ ಶೇಷಶೈಲವ ತಂದೆ ಕಾವುದಯ್ಯ ಶ್ರೀ ವೇಂಕಟೇಶನ ಪ್ರೇಮದ ದೂತ 5
--------------
ಉರಗಾದ್ರಿವಾಸವಿಠಲದಾಸರು
ಹನುಮ ವರದ ವಿಠಲ | ಪೊರೆಯ ಬೇಕಿವಳಾ ಪ ಗುಣಪೂರ್ಣ ಶ್ರೀ ಹರಿಯ | ದಾಸ್ಯಕಾಂಕ್ಷಿಪಳಾ ಅ.ಪ. ವಿನಯ ಸದ್ಗುಣ ಭರಿತೆ | ಸುಜನಾಳಿಸೇವೇಷ್ಟೆಅನಿಲಮತ ಸದ್ಭೋದೆ | ಗಾನಂದ ಜಾತೇಅನಲಾಕ್ಷಾ ಸಖ ಹರಿಯ | ಗಾನಕಲೆ ಚತುರೆ ಎಂದೆನಿಸಿರುವ ಈ ಕನ್ಯೆ | ಮಣಿಯ ನೀ ಪೊರೆಯೋ 1 ಪಾದ | ವೈಕುಂಠ ರಮಣ 2 ಸಲ್ಲಲಿತ ಸನ್ಮಾರ್ಗ | ದಲ್ಲಿ ವಿಹರಿಸುವಂಥವಲ್ಲಭನ ದೊರಕಿಸುತ | ನಲ್ಮೆಯಿಂದಿವಳಾಸಲ್ಲಿಸೊ ಮನದಾಶೆ | ಮಲ್ಲಮರ್ಧನ ಕೃಷ್ಣಾಚೆಲ್ವ ಹಯಮುಖಹರಿಯೆ | ಪ್ರಾರ್ಥಿಸುವೆ ದೇವಾ 3 ಪತಿ ಗೊಡೆಯಾಶೌದ್ದೋದನೀಯ ಮತ | ಪ್ರಧ್ವಂಸಗೈದವನೆಬುದ್ದಾವತಾರಿ ಹರಿ | ಉದ್ದರಿಸೊ ಇವಳಾ 4 ಜೀವ ಅಸ್ವಾತಂತ್ರ್ಯ | ಭಾವದಲಿ ನಿಲ್ಪಪರಿದೇವ ನೀ ಗೈಯುತ್ತ | ಭಾವುಕಳ ಪೊರೆಯೊ
--------------
ಗುರುಗೋವಿಂದವಿಠಲರು