ಒಟ್ಟು 1976 ಕಡೆಗಳಲ್ಲಿ , 112 ದಾಸರು , 1583 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಚತುರ್ದಶಿಯ ದಿನ(ಹನುಮಂತನನ್ನು ಕುರಿತು)ರಂಭೆ : ಇವನ್ಯಾರೆ ದೂರದಿ ಬರುವವ ಇವನ್ಯಾರೆ ಪ.ಇವನ್ಯಾರೆ ಮಹಾಶಿವನಂದದಿ ಮಾ-ಧವನ ಪೆಗಲೊಳಾಂತು ತವಕದಿ ಬರುವವ 1ದಾಡೆದಂತಮಸಗೀಡಿರುವದು ಮಹಾಕೋಡಗದಂತೆ ಸಗಾಢದಿ ಬರುವವ 2ಕಡಲೊಡೆಯನು ಮೃದುವಡಿಯಡರಿಸಿ ಬಿಡದಡಿಗಡಿಗಾಶ್ರೀತರೊಡಗೂಡಿ ಬರುವವ 3ಊರ್ವಶಿ : ನಾರಿ ಕೇಳೆಲೆಗೆ ವೈಯಾರಿ ನೀ ಮುದದಿನಾರಾಯಣನಿಗೀತ ಬಂಟನಾದಾದರಿದಿವೀರ ರಾಮವತಾರದಿ ಹಿಂದೆ ಹರಿಯಚಾರಕನಾಗಿ ಸೇವೆಯ ಗೈದ ಪರಿಯಕ್ರೂರ ದಶಾಸ್ಯನ ಗಾರುಗೆಡಿಸಿನೃಪವೀರನ ಪೆಗಲಿನೊಳೇರಿಸಿ ದೈತ್ಯರಭೂರಿವಧೆಗೆ ತಾ ಸಾರಥಿಯಾದವಕಾರುಣೀಕ ಮಹಾವೀರ್ಹನುಮಂತ 1ಆಮೇಲೆ ವೀರಾವೇಶದಿ ವಾರಿಧಿಯನುರಾಮನಪ್ಪಣೆಯಿಂದ ದಾಟಿದನಿವನುಭೂಮಿಜೆಗುಂಗುರ ಕೊಟ್ಟ ನಂತರದಿಕಾಮುಕರನು ಸದೆಬಡಿದನಾ ಕ್ಷಣದಿಹೇಮಖಚಿತ ಲಂಕಾಮಹಾನಗರವಹೋಮವ ಗೈದು ಸುತ್ರಾಮಾರಿಗಳ ನಿ-ರ್ನಾಮಿಸಿ ಸೀತೆಗೆ ತಾ ಮಣಿಯುತ ಚೂ-ಡಾಮಣಿ ತಂದ ಮಹಾಮಹಿಮನು ಇವ 2ವಾರಿಮುಖಿ ನೀ ಕೇಳಿದರಿಂದ ಬಂದವೀರ ಹನುಮಂತನನೇರಿ ಗೋವಿಂದಸ್ವಾರಿಗೆ ಪೊರಟ ಚಾತುರ್ದಶಿ ದಿವಸಆರತಿಯನು ಕೈಕೊಳ್ಳುವ ಶ್ರೀನಿವಾಸಭೇರಿಮೃದಂಗ ಮಹಾರವದಿಂದ ಸ-ರೋರುಹನಾಭ ಮುರಾರಿ ಶರಣರುದ್ಧಾರಣಗೈಯುವ ಕಾರಣದಿಂದ ಪಾ-ದಾರವಿಂದಗಳ ತೋರಿಸಿ ಕೊಡುವ 3ಬಳಿಕ ಪಲ್ಲಂಕಿ ಏರಿದ ಕಾಣೆ ನಾರಿನಲವಿಂದ ವೇದಘೋಷವ ಕೇಳ್ವಶೌರಿಜಲಜಭವಾದಿ ನಿರ್ಜರರಿಗಸಾಧ್ಯಸುಲಭನಾದನು ಭಕ್ತಜನಕಿದುಚೋದ್ಯಸುಲಲಿತ ಮಂಟಪದೊಳೊ ನೆಲಸುತ ನಿ-ಶ್ಚಲಿತಾನಂದ ಮಂಗಲದ ಮಹೋತ್ಸವಗಳನೆಲ್ಲವ ಕೈಕೊಳುತಲಿ ಭಕ್ತರಸಲಹುವ ನಿರುತದಿ ಮಲಯಜಗಂಧಿನಿ 4ಶ್ರೀಕಾಂತ ಬಳಿಕ ಭಕ್ತರ ಒಡಗೂಡಿಏಕಾಂತ ಸೇವೆಯಗೊಂಡ ಕೃಪೆಮಾಡಿಸಾಕಾರವಾಗಿ ತೋರುವ ಕಾಣೆ ನಮಗೆಬೇಕಾದ ಇಷ್ಟವ ಕೊಡುವ ಭಕ್ತರಿಗೆಶ್ರೀಕರ ನಾರಾಯಣ ಶ್ರೀನಿವಾಸ ಕೃ-ಪಾಕರ ವಿಬುಧಾನೇಕಾರ್ಚಿತ ರ-ತ್ನಾಕರಶಯನ ಸುಖಾಕರ ಕೋಟಿ ವಿ-ಚಾರಕ ಭಾಸತ್ರಿಲೋಕಾಧಿಪನಿವ 5
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ಚೂರ್ಣಿಕೆಶ್ರಿ ಹರಿಯೇ ನಿನ್ನುಪಕೃತಿಯು ಮರೆಯದಂತಿರಿಸೆಮ್ಮಉರಗಾಧಿಶಯನಾ ಕೃಷ್ಣಾ ದ್ವಿಜರಾಜಗಮನಾಕಾಳಿಯ ದಮನಾ ಭುವನತ್ರಯಾಕ್ರಮಣಪದ್ಮಾಲಯಾ ರಮಣ 1ಧನದಮಾತಿರಲಿ ಗೋಧನದ ಮಾತಿರಲಿಭೂಧನದಮಾತಿರಲಿ ಶೌರೀಧನವೆಲ್ಲವೂ ಕರ್ಮವನು ಬೆನ್ಹಿಡಿದುಬಹದೆನುತಾಡುವರೊ ಮುರಾರಿತನುವು ನಿನ್ನಯ ಸೇವೆಯನು ಮಾಡುತಿರಲಿಕಂಸಾರಿಮನವು ನಿನ್ನಯರೂಪವನು ನೆನೆಯುತಿರಲಿ ದುರಿತಾರಿಈ ಕೃಪೆಯಭೂರೀ ದುರ್ಜನವಿದಾರೀಸುಜನೋಪಕಾರೀ ಗಿರಿನಾಥ ಧಾರೀಪಾಪಹಾರಿದಿತಿಜಾರಿನಿರ್ವಿಕಾರಿ ಉದಾರಿ2ನಾಕದೊಳಗಿರಲಿ ಭೂಲೋಕದೊಳಗಿರಲಿಅಧೋಲೋಕದೊಳಗಿರಲಿ ನಾನೂಶ್ರೀಕಾಂತ ನಿನಗೆ ಬೇಕಾದವನೆನುತ್ತಸಾಕಬೇಕೆನ್ನ ನೀನೂ ಭಕ್ತಜನಕಾಮಧೇನುಹೇಳಬೇಕಾದುದಿನ್ನೇನು 3ಬಿದ್ದಿರುವೆನೈ ರಜೋಗುಣದಿಒದ್ಯಾಡುತಿಹೆನೊ ಸಂಕಟದಿಇದ್ದು ಫಲವೇನೊ ಈ ಭವದಿಉದ್ಧರಿಸು ಕೃಪಾಜಲಧಿ 4ಬದ್ಧನಾನಯ್ಯ ಈ ಜಗದಿಶುದ್ಧಬುದ್ಧಿಯ ನೀಯೊ ಮುದದಿಕೃದ್ಧನಾಗದಿರೆನ್ನ ದುಷ್ಕøತದಿಎದ್ದು ಬಾರೆನ್ನಡಿಗೆ ದಯದಿಶ್ರೀ ತಂದೆಮುದ್ದುಮೋಹನ್ನವಿಠಲ ಭಾಗ್ಯನಿಧಿ 5
--------------
ತಂದೆ ಮುದ್ದುಮೋಹನ ವಿಠಲರು
ಚೆಂಡನಾಡುತ ಬಂದ ಪುಂಡ ಕೃಷ್ಣನು ತನ್ನ |ಹಿಂಡುಗೋಪಾಲಕರ ಕೊಂಡು ಯಮುನೆಯ ತಡಿಗೆಪಓರೆ ತುರುಬನೆಕಟ್ಟಿಗೀರುನಾಮವನಿಟ್ಟು |ಹಾರ ಕಂಕಣ ತೋಳಬಂದಿ ಘುಂಗುರ ಘನ-|ಸಾರಕುಂಕುಮ ಕೇಸರಿಗಂಧ ಕೂಡಿಸಿ |ಸೇರಿಸುತ ನಡುವಿಗೆ ಕಾಸಿದಟ್ಟಿಯನುಟ್ಟು |ಹಾರಾಡುತಲಿ ಬಂದ-ತೊಡರಗಾಲ |ತೋರ ಚಿನ್ಮಣಿಗಳಿಂದ. ಮುತ್ತಿನ ಚೆಂಡು |ಧಾರಿಣಿಗೆ ಪುಟಿಸಿ ನಿಂದ-ವಜ್ರದಖಣಿ|ತೋರಿ ಗೆಳೆಯರ ಕೂಡ ಬಂದರಾ ಮನೆಯಿಂದ 1ಕೊಂಡಾಲ ತಿಮ್ಮನು ಚೆಂಡನೆ ಹೊಡೆದನು |ಮಿಂಡೆಯರ ಮೊಲೆಗಾಗಿ ಹಾರಿಹರಿದು ಬೀಳೆ |ಹಿಂಡುನಾರಿಯರೆಲ್ಲ ಸುತ್ತಿಕೊಂಡಿರೆಅವರ|ಮುಂಡೆಗೆ ತಗುಲಿಸಿ ಪುರದ ಬಾಗಿಲ ಬಿಟ್ಟು |ಕಿಂಡಿಯಿಂದಲಿ ಬಂದನು-ನಾರಿಯರ |ಮಂಡೆಗೆ ಚೆಂಡಿಟ್ಟನು-ತೋರಿಸುವರ |ಕಂಡು ತಾ ನಗುತಿದ್ದನು-ಕೌತುಕವೆಂದು |ದಿಂಡೆಯರುಮಡುವಿನೊಳಗೆ ಹಾಕಿ ನಡೆದರು2ಗೆಳೆಯರೆಲ್ಲರು ಕೂಡಿ ಚೆಂಡು ತಾ ಎನಲಾಗಿ |ಗುಳುಗುಳಿಸುವ ವಿಷದ ಯಮುನಾ ತಡಿಯಲಿನಿಂದು|ಬಳಿಯ ವೃಕ್ಷದ ಮೇಲೇರಿ ತಾ ಧುಮುಕಲು |ಕಳಕಳಿಸುವ ಗೋಪಾಲರಳುತಿರೆ |ಇಳಿದ ನೀರೊಳಗಾಗಲು-ನಾಗರಫಣಿ|ತುಳಿದು ಕುಣಿಕುಣಿಯುತಿರಲು-ಬ್ರಹ್ಮನು ಬಂದು |ತಿಳಿದು ಮದ್ದಲೆ ಹೊಯ್ಯಲು-ಇಂದ್ರಾದ್ಯರು |ನಲಿದು ತಾಳವನಿಟ್ಟು ಕೊಂಡಾಡುತಿದ್ದರು 3ಮಗನ ಸುದ್ದಿಯಕೇಳಿಹರಿದು ಬಂದಳುಗೋಪಿ|ನಗರದ ಹೊರಗಾಗಿ ಬಾಯ ನಾದದಿಂದ |ವಿಗಡೆಯರು ಬಿಟ್ಟ ಮಂಡೆಯ ಜುಂಜು ಕೆದರುತ |ತೆಗೆದು ಮಣ್ಣನೆ ತೂರಿ ಕುಳಿತಲ್ಲಿಂದಲೆ ನಮ್ಮ-|ನ್ನಗಲಿ ಹೋಗುವರೆ ಹೀಗೆ-ರಂಗ ನಮ್ಮ |ಮೊಗವ ನೋಡುವುದೆಂದಿಗೆ-ನೋಡಿದ ಕಣ್ಣ |ತೆಗೆದು ಕೀಳುವೆನಿಂದಿಗೆ-ಪಡೆದ ಪೊಟ್ಟೆ |ದಗದಗಿಸಲು ಕೊಟ್ಟು ಮುನಿಯದೆ ಬಾ ಬೇಗ 4ಏನನೆಂಬೆನು ಕೃಷ್ಣ ನಿನ್ನ ಕಾಣದೆ ಪುರದ |ಮಾನಿನಿಯರು ಬೆರಗಾಗಿ ಬೀಳುತ ಕರುವ |ಕಾಣದಿರೆತ್ತಿಗೆ ಕರುವನು ಬಿಡುವರು |ಆ ನಾಸಿಕದ ಮೂಗುತಿ ಕಿವಿಗಿಡುವರು |ಧೇನುಮೇವನೆ ತೊರೆದುವು-ಗೋವುಗಳನ್ಯ-|ರಾಮನೆಗೋಡಿದುವು-ವತ್ಯಗಳೆಲ್ಲ |ಮೌನದಿ ಮೊಲೆ ತೊರೆದುವು ಕೃಷ್ಣಯ್ಯನ |ವೇಣುನಾದದ ಧ್ವನಿ ಕೇಳದೆ ಮೆಚ್ಚವು 5ದ್ವಾರಕಿ ಕೃಷ್ಣ ನೀ ಬಾಯೆಂದು ಕರೆವೆನೊ |ತೋರುವ ಸಮಪಾದ ವಿಠಲನೆಂಬೆನೊ |ಶ್ರೀರಮಣ ವೆಂಕಟನೆಂದು ಒದರುವೆನೊ |ಶ್ರೀರಂಗಶಯನನೆಂದೆನಲ್ಲದೆ ನಿನ್ನ |ಚೋರ-ಜಾರನೆಂದೆನೆ-ಹದ್ದಿನ ಮೇಲೆ |ಏರಿ ತಿರುಗುವನೆಂದೆನೆ-ಬೆಣ್ಣೆಯ ಕದ್ದು |ಸೂರೆ ಮಾಡುವನೆಂದೆನೆ-ಕೃಷ್ಣಯ್ಯ ನೀ |ಬಾರಯ್ಯ ಬಾರದಿದ್ದರೆ ಪ್ರಾಣ ನೀಗುವೆ 6ಕಣ್ಣೆತ್ತಿ ನೋಡಿದನೆಂದೆನೆ ಕಡೆಗೋಲ |ಬೆನ್ನಲಿ ಪಿಡಿದನೆಂದೆನೆ ಹಲ್ಲಳನೂರಿ |ಮಣ್ಣ ಕಚ್ಚಲು ಬಾಯ ತೆರೆಯುವನೆಂದೆನೆ |ಮಣ್ಣ ಬೇಡಲು ನಾ ಕೊಡಲಾರೆನೆಂದೆನೆ |ಎನ್ನ ಕುತ್ತಿಗೆ ಕೊಯ್ವರೆ-ಮಾತೆಯ ಮಾತು |ಮನ್ನಿಸಿ ವನಕೆ ಪೋಪರೆ-ಬಲಭದ್ರ |ಅಣ್ಣನಿಗೆ ಮುಖವ ತೋರೆ-ಕೃಷ್ಣಯ್ಯ ನೀ |ಸಣ್ಣವನೆನ್ನದೆ ಹರಿಯ ಕೊಂಡಾಡಿದೆ 7ಎಂದ ಮಾತನು ಕೇಳುವಾ ಸಮಯ ನಾಗಿಣಿ-|ವೃಂದವೆಲ್ಲವು ತಮ್ಮ ಕಂಠಭೂಷಣರಾಗಿ |ಅಂದದ ಮೇಲುದ ಸುತ್ತಿಕೊಂಡಿರೆ ಅರ-|ವಿಂದನಾಭಾಚ್ಯತ ಕೇಶವಮುರಹರ|ಮಂದರಧರಹರಿಯೆ-ನಿನಗೆ ನಾವು |ಮಂದಾಕಿನಿಯ ಸರಿಯೆ-ಮಾಂಗಲ್ಯದ |ಚೆಂದ ಕಾಯೈ ದೊರೆಯೆ-ಹರಿಯ ಕೃಪೆ-|ಯಿಂದ ಕರೆದು ನಮ್ಮ ಕಾಯಬೇಕೆಂದರು 8ಇಂತಿಂತು ಸ್ತವನವ ಮಾಡೆ ಕಾಳಿಂಗನ |ಕಾಂತೆಯರ ಸ್ತೋತ್ರಕ್ಕೆ ಮೆಚ್ಚಿ ನಾಗನ ಬಿಟ್ಟು |ಕಂತುಕ ಸಹಿತ ಪಂಕಜನಾಳವನೆ ಕೊಂಡು |ಸಂತಸದಲಿ ಇಕ್ಕುತ-ಶೋಕದಿ ನೀವು |ಭ್ರಾಂತಿ ಬಿಡಿರಿ ಎನ್ನುತ-ಬರಿದೆ ಎಲ್ಲ |ಸಂತೆ ಕೂಡಿದೆ ಎನ್ನುತ-ನಾ ಹಸಿದೆನು |ಪಂತಿಭೋಜನ ಕೊಂಡು ನಡೆಯಿರಿ ಮನೆಗೆಂದ 9ಸುರರಿಗೆಸುಧೆಮುಂಚೆ ಉಣಿಸಿದ ಪರಬ್ರಹ್ಮ |ಪರಿಪರಿ ಭೋಜನ ಮಾಳ್ಪ ಕಂಡುವರಾರು? |ಸುರದುಂದುಭಿ ಪೊಡೆದು ಪಾರಿಜಾತದ ಮಳೆ |ಸುರಿಸಿದರಾಕ್ಷಣಕೆ-ಬ್ರಹ್ಮನು ತಾನು |ತೆರಳಿದನಾಶ್ರಮಕೆ-ಪುರಂದರವಿಠಲ |ತಿರುಗಿದ ನಿಜಧಾಮಕೆ-ಕೃಷ್ಣನ ಲೀಲೆ |ಗುರುದಯೆಯಲಿ ನಮ್ಮ ಹರಿಯ ಕೊಂಡಾಡಿದೆ 10
--------------
ಪುರಂದರದಾಸರು
ಜಗದುದ್ಧಾರಕ ತನ್ನ ಮಗನೆಂದು ಬಗೆದು |ನಿಗಮಗೋಚರನ ಆಡಿಸಿದಳು ಯಶೋದೆ ಪವಟದೆಲೆಯ ಮೇಲು ಸಂಪುಟದ ಮೇಲೊರಗಿ ಉಂ-ಗುಟವ ಪೀರುವನ-ಆಡಿಸಿದಳು 1ವಿಶ್ವತಶ್ಚಕ್ಷುವ ವಿಶ್ವತೋಮುಖನ |ವಿಶ್ವವ್ಯಾಪಕನ-ಆಡಿಸಿದಳು 2ಅಣೋರಣಿಯನ ಮಹತೋಮಹೀಯನ |ಗಣನೆಯಿಲ್ಲದವನ-ಆಡಿಸಿದಳು 3ನಿಗಮಕೆ ಸಿಲುಕದಅಗಣಿತಮಹಿಮನ |ಮಗುಗಳ ಮಾಣಿಕ್ಯನ-ಆಡಿಸಿದಳು 4ಎಲ್ಲರೊಳು ಭರಿತನಾಗಿ ಇಪ್ಪ ಲಕುಮಿಯ |ವಲ್ಲಭಪುರಂದರವಿಠಲನ-ಆಡಿಸಿದಳು5
--------------
ಪುರಂದರದಾಸರು
ಜಯ ಜಯ ಶ್ರೀ ಮಹಾಲಿಂಗ ಗೋಪತುರಂಗಜಯ ಜಯ ಶ್ರೀ ಮಹಾಲಿಂಗ ಪ.ಜಯರಹಿತಾಚ್ಯುತಪ್ರಿಯ ಬುಧಾರ್ಚಿತದಯಾಸಾಗರ ಭಸಿತಾಂಗನಯನತ್ರಯ ನಮಿತಾಮರಸಂಘಾ-ಮಯಹರ ಗಂಗೋತ್ತುಮಾಂಗ 1ಭೂತೇಶಭೂರಿಭೂತಹೃದಿಸ್ಥಿತಭೂಷಣೀಕೃತಭುಜಂಗಪೂತಾತ್ಮ ಪರಮಜ್ಞಾನತರಂಗಪಾತಕತಿಮಿರಪತಂಗ 2ಲಂಬೋದರಗುಹಪ್ರಮುಖಪ್ರಮಥನಿಕು-ರುಂಬಾಶ್ರಿತ ಜಿತಸಂಗಗಂಭೀರಗುಮಕದಂಬೋತ್ತುಂಗ-ಸಂಭೃತ ಹಸ್ತಕುರಂಗ 3ಸೋಮಶೇಖರ ಮಹಾಮಹಿಮ ವಿಜಿತ-ಕಾಮ ಕಲಿಕಲುಷಭಂಗರಾಮನಾಮ ಸ್ಮರಣಾಂತರಂಗವಾಮಾಂಕಾಸ್ಥಿತ ಪಿಂಗ 4ದೇವ ಲಕ್ಷ್ಮೀನಾರಾಯಣ ಪದರಾ-ಜೀವನಿರತ ವನಭೃಂಗಪಾವಂಜಾಖ್ಯ ಗಿರೀಶ ಶುಭಾಂಗಕೇವಲ ಸದಯಾಪಾಂಗ 5
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ಜಯತು ಜಗದಾಧಾರ ಜಯತು ದೋಷ ವಿದೂರಕುಂದಕುಟ್ಮಲದಂತೆವದನಮಂದಹಾಸಇಂದಿರಾಲಯವಕ್ಷ ತುಲಸಿಮಾಲೆಸಿರಿಸ್ತಂಭ ಉರುಟುಕದಳಿಊರು ಜಾನುಜಂಘೆಶ್ರೀಪತಿ ಅನೇಕರೂಪನಾಗಿನಿಂದುಇಂದೀವರಾಕ್ಷಿಯರ ಮನದ ಹದನವನರಿತುಕೊಳ್ಳಲುಬಳಿಯಲೊಬ್ಬಳನೆ ನಿಲಿಸಿ ಹೆಗಲಲ್ಲಿಕರವಹಾಕಿಕುಳದಲ್ಲಿ (?) ಕೃಷ್ಣನ ಸ್ಥಳದಲ್ಲಿ ಹೆಜ್ಜೆಯೊಳುಘಲಕು ಘಲಕು ತಾಳಗತಿಗಳಿಂದಲಿ ಸುತ್ತಿದುಂದುಭಿವಾದ್ಯ ತಮ್ಮಿಂದ ತಾಂ ಬಾರಿಪವುಒಂದೊಂದು ದೋಷದಿಂದಿನ್ನು ಅಜಭವಸುರರುಶರಣು ಕರುಣಾನಿಧಿಯೆ ಶರಣು ಗುಣವಾರಿಧಿಯೆರಾಸಕ್ರೀಡೆಯಲಿ ತೋರಿಸಿದ ಗೋಪಿಯರ ಅಭಿ-
--------------
ಗೋಪಾಲದಾಸರು
ಜಯತು ಜಗನ್ಮಾತೆ ಪಾಲಿಸು ಜಯತು ಜಗದ್ಭರಿತೆಜಯತು ಜನಾರ್ದನ ಸ್ವಾಮಿಯ ಪ್ರೀತೆಜಯತು ಜನಾರ್ದನ ಮೋಹಿನಿ ಖ್ಯಾತೆ1ಪಂಕಜದಳ ನೇತ್ರೆ ಜಯಜಯಕಿಂಕರನುತಿ ಪಾತ್ರೆಕಂಕಣಕರಭವಬಿಂಕವಿಹಾರಿಣಿಕುಂಕುಮಗಂಧಿ ಶಶಾಂಕ ಪ್ರಕಾಶಿತೆ2ಲೋಕೋದ್ಧಾರಿಣಿಯೇಭವಭಯಶೋಕನಿವಾರಿಣಿಯೆಮೂಕಾಸುರನನು ಮರ್ದಿಸಿ ಲೋಕದಮೂಕಾಂಬಿಕೆಯೆಂಬ ನಾಮವ ಧರಿಸಿದ3ಸುಂದರಿಶುಭಸದನೇ ಸದ್ಗುಣಮಾದರಿ ಇಭಗಮನೆಕುಂದರದನೆಅಘವೃಂದ ನಿವಾರಿಣಿವಂದಿಸುವೆನುಪೊರೆಗೋವಿಂದದಾಸನ ಜಯತು4xmಟ veಡಿsioಟಿ='1.0' eಟಿಛಿoಜiಟಿg='%SಔUP-ಇಓಅಔಆIಓಉ%'
--------------
ಗೋವಿಂದದಾಸ
ಜಯತು ಜಯತು ಶ್ರೀ ಗಂಗಾದೇವಿಯೆಜಯತುಪಂಕಜಗಂಧಿಯೇಬಹು ಜಯತು ಶ್ವೇತಾಂಗ ರೂಪೆಯೆಜಯತು ವಕ್ರ ಸವಾರಿಯೆ ಜಯತು ಜಯತೂ 1ಪಾಹಿಶ್ರೀಹರಿ ಪಾದನಂದನೆಪಾಹಿಶಿವ ಶಿರವಾಸಿನಿಪಾಹಿಶ್ರೀಜಹ್ನುಮುನಿ ಹೃದಯ ಶೋಭಿತೆಪಾಹಿಧಾರುಣಿ ಪಾಲಿತೆಪಾಹಿಪಾಹಿ 2ಶರಣು ಭಗೀರಥ ಕುಲ ಉದ್ಧಾರಳೆಶರಣು ವರುಣನಮಾನಿನಿಶರಣು ಗೋವಿಂದನ ದಾಸನೊಡ
--------------
ಗೋವಿಂದದಾಸ
ಜಯಮಂಗಳಂನಿತ್ಯ ಶುಭಮಂಗಳಂ<?xmಟ veಡಿsioಟಿ='1.0' eಟಿಛಿoಜiಟಿg='uಣಜಿ-8'?>ಜಯತುಂಗಲಕ್ಷ್ಮೀಪತಿ ನರಸಿಂಹಗೆಪ.ಕಂದರ್ಪನಯ್ಯಗೆ ಕೋಟಿ ಲಾವಣ್ಯಗೆಮಂದರೋದ್ಧಾರ ಮಧುಸೂದನನಿಗೆ ||ಕಂದ ಪ್ರಹ್ಲಾದನನು ಕಾಯ್ದ ದೇವನಿಗೆ ಶ್ರೀ -ಇಂದಿರಾ ರಮಣ ಸರ್ವೋತ್ತಮನಿಗೆ 1ಕರಿರಾಜ ವರದನಿಗೆ ಕರುಣಾ ಸಮುದ್ರನಿಗೆಸರಸಿಜೋದ್ಭವ - ಭವವಂದ್ಯ ಹರಿಗೆ ||ಗಿರಿಯರಸು ಕಾವೇರಿಪುರದ ರಂಗಯ್ಯಗೆಗಿರಿರಾಜಪತಿವಂದ್ಯ ಸುರರ ನಿಧಿಗೆ 2ಅಂಬರೀಷನ ಶಾಪ ಅಪಹರಿಸಿದವನಿಗೆತುಂಬುರ ನಾರದ ಮುನಿವಂದ್ಯಗೆ ||ಕಂಬುಕಂಧರಪುರಂದರ ವಿಠಲರಾಯಗೆಅಂಬುಜನಾಭಗೆ ಅಜನಪಿತಗೆ 3
--------------
ಪುರಂದರದಾಸರು
ಜಯಮಂಗಳಂನಿತ್ಯಶುಭಮಂಗಳಂ ||ಪ.ಶ್ರೀ ವತ್ಸಲಾಂಛನಗೆ ಕ್ಷೀರಾಬ್ಧಿ ವಾಸಗೆ |ಗೋವರ್ಧನೋದ್ಧಾರ ಗೋವಿಂದಗೆ ||ಮಾವ ಕಂಸನ ಕೊಂದುಮಕರಕುಂಡಲ ಧರಿಸಿ |ಜೀವಾತ್ಮನಾದ ಚಿನ್ಮಯರೂಪಗೆ 1ಅಂಬುಧಿಯ ಶಯನಗೆ ಅಖಿಲ ಭೂತೇಶಗೆ |ತುಂಬುರ - ನಾರದ ಮುನಿವಂದ್ಯಗೆ ||ಎಂಭತ್ತನಾಲ್ಕು ಲಕ್ಷ ಯೋನಿಗಳ ರಾಶಿಯನು |ಗೊಂಬೆಯನು ಮಾಡಿ ಕುಣಿಸುವ ದೇವಗೆ 2ಕಂದರ್ಪನಯ್ಯನಿಗೆ ಕೋಟಿ ಲಾವಣ್ಯನಿಗೆಸುಂದರ ಮೂರುತಿಹರಿ ಸರ್ವೋತ್ತಮನಿಗೆ ||ಕಂದ ಪ್ರಹ್ಲಾದನ ಕಾಯ್ದ ದೇವನಿಗೆಅರ |............................................. 3ಪನ್ನಂಗಶಯನಗೆಪಾವನ್ನ ಚರಿತೆಗೆ |ಸನ್ನುತರಾದ ಸಜ್ಜನ ಪಾಲಿಗೆ ||ಎನ್ನೊಡೆಯ ಸಿರಿದೇವಿಯರಸು ಮುದ್ದುರಂಗಗೆ |ತನ್ನ ನಂಬಿದವರನು ಸಲಹುವವಗೆ 4ಕರಿರಾಜವರದಗೆ ಕರುಣಾಸಮುದ್ರಗೆ |ಗರುಡ ಗಮನನಿಗೆ ವೈಭವಹಾರಗೆ ||ವರಪುರಂದರವಿಠಲ ಕಂಬುಕಂದರನಿಗೆ |ಅರವಿಂದನಾಭನಿಗೆ ಅಜನ ಪಿತಗೆ 5
--------------
ಪುರಂದರದಾಸರು
ಜಯಮಂಗಳಂನಿತ್ಯಶುಭಮಂಗಳಂಪ.ದುರುಳತಮ ವೇದವನು ಕದ್ದು ವಾತಾಳದಲಿಇರಲವನ ಕೊಂದು ವೇದಾವಳಿಗಳಸರಸಿಜೋದ್ಭವಗಿತ್ತು ಸುರಮುನಿಗಳನ್ನೆಲ್ಲಪೊರೆದ ಶ್ರೀ ವತ್ಸಾವತಾರಿ ಹರಿಗೆ 1ಸುರರು ದೈತ್ಯರಕೂಡಿ ಸಿಂಧುವನು ಮಧಿಸುತಿರೆಗಿರಿಮುಳಗಿ ಪಾತಳಕಿಳಿದು ಪೋಗೆಭರದಿಂದ ತಾ ಬಂದು ಗಿರಿಯ ಬೆನ್ನಳಗಾಂತುಸುರರ ಸಂರಕ್ಷಿಸಿದ ಶ್ರೀಕೂರ್ಮಹರಿಗೆ2ಭೂಮಿಯನು ಹಿರಣ್ಯಕ್ಷನೆಂಬ ದೈತ್ಯನು ಸುತ್ತಿಭೀಮ ವಿಕ್ರಮನು ಪಾತಾಳಕೊಯ್ಯುತಾಮರಸ ಸಂಭವನು ಬಿನ್ನೈಸಲವನಳಿದುಭೂಮಿಯನು ತಂದು ಶ್ರೀ ಭೂ ವರಾಹನಿಗೆ 3ಪರಮಭಾಗವತ ಪ್ರಲ್ಹಾದನ ಹಿರಣ್ಯಕನುಪರಿಪರಿಯ ಭಾದೆಯಿಂದಲಿ ಪೀಡಿಸಿಕರುಣಾಳು ಕೋಪದಲಿ ದೈತ್ಯನುದರವ ಬಗೆದಶರಣ ರಕ್ಷಕನಾದ ಶ್ರೀ ನರಸಿಂಹಗೆ 4ಬಲಿಚಕ್ರವರ್ತಿ ಭೂಮಿಯ ಧಾರೆಯರೆಯಲುಇಳೆಯನಳೆದವನ ಸುತಳಕೆ ಕಳುಹಿಸಿದಸಿಲುಕಿಭಕುತಿಗೆ ಮೆಚ್ಚಿ ಬಾಗಿಲವಕಾಯ್ದ ಶ್ರೀಬಲವಂಥಹರಿವಾಮಾನಾವತಾರನಿಗೆ5ಕಾರ್ತವೀರ್ಯಾರ್ಜುನನ ಸಂಹರಿಸಿ ಮುದದಿಂದಕೀರ್ತಿಯನು ಲೋಕದೊಳು ವಿಸ್ತರಿಸಿದಪ್ರಾರ್ಥಿವಾಂತಕ ಬಾಹುಬಲದಿ ಪರಿಪೂರ್ಣಗೆಆರ್ತಬಾಂಧವಗೆಭಾರ್ಗವರಾಮಗೆ6ದಶರಥನ ಮನೆಯುದ್ಭವಿಸಿ ಆ ರಾವಣನದಶಶಿರವ ನೀಡಾಡಿ ಅವನನುಜಗೆವಸುಧಾಧಿಪತ್ಯವನು ಲಂಕೆಯೊಳಗವಗಿತ್ತಅಸಮವಿಕ್ರಮ ರಾಮಚಂದ್ರ ಹರಿಗೆ 7ಯದುಕುಲದಿ ತಾ ಬಂದು ಕೊಂದು ಕಂಸನನಂದುಮುದದಿಂದ ಪಾಂಡವರನುದ್ಧರಿಸಿದಒದೆಗೆ ಕೌರವ ಬಲವ ಸಂಹರಿಸಿ ಪದವಿತ್ತುಮುದದಿ ಮನ್ನಿಸಿದ ಶ್ರೀ ಕೃಷ್ಣ ಹರಿಗೆ 8ತ್ರಿಪುರದ ಮುರಾರಿಗಳ ಸತಿಯರ ಪತಿವ್ರತವಅಪಹರಿಸಿ ದಿವ್ಯ ಮೋಹಕರೂಪದಿತ್ರಿಪುರಹರಗಂಬಾಗಿ ಶಿವಗೆ ಕೀರ್ತಿಯನಿತ್ತಅಪರಮಿತ ಬುದ್ಧಾವತಾರ ಹರಿಗೆ 9ಕರಿಯುಗದ ಕಡಯಲಿ ಖಲನೃಪರನೆಲ್ಲರನುತುಳಸಿ ಕುದುರೆಯ ಖುರದ ಪುಟಗಳಿಂದಸುಲಭದಿಂ ನಡೆಸುತೀ ಕೃತಯುಗದ ಧರ್ಮವನುಒಲಿದಂಥ ಕಲ್ಕಿಯವತಾರ ಹರಿಗೆ 10ಮಂಗಳ ಪದಂಗಳನು ಭಕ್ತಿಯಲಿ ಮೋಹನತರಾಂಗನೆಯರೆಲ್ಲ ರಾಗದಿ ಪಾಡುತಮಂಗಳಾತ್ಮಕಗೆಸಿರಿ ಪುರಂದರವಿಠಲಗೆಅಂಗನೆಯರೆಲ್ಲ ಆರತಿಯೆತ್ತಿರೆ 11
--------------
ಪುರಂದರದಾಸರು
ಜಯಮಂಗಳಂನಿತ್ಯಶುಭಮಂಗಳಂಪ.ದುರುಳತಮ ವೇದವನು ಕದ್ದು ವಾತಾಳದಲಿಇರಲವನ ಕೊಂದು ವೇದಾವಳಿಗಳಸರಸಿಜೋದ್ಭವಗಿತ್ತು ಸುರಮುನಿಗಳನ್ನೆಲ್ಲಪೊರೆದ ಶ್ರೀ ವತ್ಸಾವತಾರಿ ಹರಿಗೆ 1ಸುರರು ದೈತ್ಯರಕೂಡಿ ಸಿಂಧುವನು ಮಧಿಸುತಿರೆಗಿರಿಮುಳಗಿ ಪಾತಳಕಿಳಿದು ಪೋಗೆಭರದಿಂದ ತಾ ಬಂದು ಗಿರಿಯ ಬೆನ್ನಳಗಾಂತುಸುರರ ಸಂರಕ್ಷಿಸಿದ ಶ್ರೀಕೂರ್ಮಹರಿಗೆ2ಭೂಮಿಯನು ಹಿರಣ್ಯಕ್ಷನೆಂಬ ದೈತ್ಯನು ಸುತ್ತಿಭೀಮ ವಿಕ್ರಮನು ಪಾತಾಳಕೊಯ್ಯುತಾಮರಸ ಸಂಭವನು ಬಿನ್ನೈಸಲವನಳಿದುಭೂಮಿಯನು ತಂದು ಶ್ರೀ ಭೂ ವರಾಹನಿಗೆ 3ಪರಮಭಾಗವತ ಪ್ರಲ್ಹಾದನ ಹಿರಣ್ಯಕನುಪರಿಪರಿಯ ಭಾದೆಯಿಂದಲಿ ಪೀಡಿಸಿಕರುಣಾಳು ಕೋಪದಲಿ ದೈತ್ಯನುದರವ ಬಗೆದಶರಣ ರಕ್ಷಕನಾದ ಶ್ರೀ ನರಸಿಂಹಗೆ 4ಬಲಿಚಕ್ರವರ್ತಿ ಭೂಮಿಯ ಧಾರೆಯರೆಯಲುಇಳೆಯನಳೆದವನ ಸುತಳಕೆ ಕಳುಹಿಸಿದಸಿಲುಕಿಭಕುತಿಗೆ ಮೆಚ್ಚಿ ಬಾಗಿಲವಕಾಯ್ದ ಶ್ರೀಬಲವಂಥಹರಿವಾಮಾನಾವತಾರನಿಗೆ5ಕಾರ್ತವೀರ್ಯಾರ್ಜುನನ ಸಂಹರಿಸಿ ಮುದದಿಂದಕೀರ್ತಿಯನು ಲೋಕದೊಳು ವಿಸ್ತರಿಸಿದಪ್ರಾರ್ಥಿವಾಂತಕ ಬಾಹುಬಲದಿ ಪರಿಪೂರ್ಣಗೆಆರ್ತಬಾಂಧವಗೆಭಾರ್ಗವರಾಮಗೆ6ದಶರಥನ ಮನೆಯುದ್ಭವಿಸಿ ಆ ರಾವಣನದಶಶಿರವ ನೀಡಾಡಿ ಅವನನುಜಗೆವಸುಧಾಧಿಪತ್ಯವನು ಲಂಕೆಯೊಳಗವಗಿತ್ತಅಸಮವಿಕ್ರಮ ರಾಮಚಂದ್ರ ಹರಿಗೆ 7ಯದುಕುಲದಿ ತಾ ಬಂದು ಕೊಂದು ಕಂಸನನಂದುಮುದದಿಂದ ಪಾಂಡವರನುದ್ಧರಿಸಿದಒದೆಗೆ ಕೌರವ ಬಲವ ಸಂಹರಿಸಿ ಪದವಿತ್ತುಮುದದಿ ಮನ್ನಿಸಿದ ಶ್ರೀ ಕೃಷ್ಣ ಹರಿಗೆ 8ತ್ರಿಪುರದ ಮುರಾರಿಗಳ ಸತಿಯರ ಪತಿವ್ರತವಅಪಹರಿಸಿ ದಿವ್ಯ ಮೋಹಕರೂಪದಿತ್ರಿಪುರಹರಗಂಬಾಗಿ ಶಿವಗೆ ಕೀರ್ತಿಯನಿತ್ತಅಪರಮಿತ ಬುದ್ಧಾವತಾರ ಹರಿಗೆ 9ಕರಿಯುಗದ ಕಡಯಲಿ ಖಲನೃಪರನೆಲ್ಲರನುತುಳಸಿ ಕುದುರೆಯ ಖುರದ ಪುಟಗಳಿಂದಸುಲಭದಿಂ ನಡೆಸುತೀ ಕೃತಯುಗದ ಧರ್ಮವನುಒಲಿದಂಥ ಕಲ್ಕಿಯವತಾರ ಹರಿಗೆ 10ಮಂಗಳ ಪದಂಗಳನು ಭಕ್ತಿಯಲಿ ಮೋಹನತರಾಂಗನೆಯರೆಲ್ಲ ರಾಗದಿ ಪಾಡುತಮಂಗಳಾತ್ಮಕಗೆಸಿರಿ ಪುರಂದರವಿಠಲಗೆಅಂಗನೆಯರೆಲ್ಲ ಆರತಿಯೆತ್ತಿರೆ 11
--------------
ಪುರಂದರದಾಸರು
ಜಯಮಂಗಳಂನಿತ್ಯಶುಭಮಂಗಳಂಪ.ಮಂಗಳ ಮಧು ಕೈಟಭಾಸುರ ಮರ್ದನಗೆಮಂಗಳಮದನ ಕೋಟಿ ಲಾವಣ್ಯಗೆ ||ಮಂಗಳ ಜಗದಂತರಂಗ ಕೃಪಾಂಗಗೆಮಂಗಳ ಯದುಕುಲೋತ್ತಮ ಸಾರ್ವಭೌಮಗೆ 1ಶ್ರೀವತ್ಸಲಾಂಛನಗೆ ಸಿರಿದೇವಿಯರಸಗೆಗೋವರ್ಧನೋದ್ಧಾರ ಗೋವಿಂದಗೆ ||ಮಾವ ಕಂಸನ ಕೊಂದಮಕರ ಕುಂಡಲಧರಭಾವಜನಯ್ಯ ಚಿನ್ಮಯ ಮೂರ್ತಿಗೆ 2ಅಂಬುಜನಾಭಗೆ ಅಖಿಳಲೋಕೇಶಗೆಶಂಭು -ಅಜ - ಸುರ - ಮುನಿವಂದ್ಯ ಹರಿಗೆ ||ಎಂಬತ್ತುನಾಲ್ಕು ಲಕ್ಷ ಜೀವರಾಶಿಗಳಬೊಂಬೆಯ ಮಾಡಿ ಕುಣಿಸುವ ದೇವಗೆ 3ಸಕಲಗುಣ ಪೂರ್ಣಗೆ ಸರ್ವಸ್ವಾತಂತ್ರ್ಯಗೆಅಕಳಂಕ ಆದಿನಿರ್ದೋಷ ಹರಿಗೆ ||ಭಕುತ ವತ್ಸಲನಿಗೆ ಭವರೋಗ ವೈದ್ಯಗೆನಿಖಿಳಜೀವದಯಾಪರಿಪೂರ್ಣಗೆ4ಪನ್ನಗಶಯನಗೆ ಪಾವನ ಮೂರ್ತಿಗೆಸನ್ನುತಾನಂತ ಸದ್ಗುಣ ಭರಿತಗೆ ||ಎನ್ನೊಡೆಯ ಪುರಂದರವಿಠಲ ರಾಯಗೆತನ್ನ ನಂಬಿದವರ ಸಲಹುವ ಮೂರ್ತಿಗೆ 5
--------------
ಪುರಂದರದಾಸರು
ಜಲಧಿಶಯನ ರವಿಚಂದ್ರ ವಿಲೋಚನ |ಜಜರುಹಭವನುತ ಚರಣಯುಗ ||ಬಲಿಬಂಧನ ಗೋವರ್ಧನಧಾರಿ |ನಳಿನೋದರ ತೇ ನಮೋ ನಮೋ 2ಆದಿದೇವ ಸಕಲಾಗಮ ಪೂಜಿತ |ಯಾದವಕುಲ ಮೋಹನರೂಪ ||ವೇದೋದ್ದರ ಶ್ರೀವೆಂಕಟನಾಯಕ |ಮೋದದಪುರಂದರವಿಠಲ ನಮೋ ನಮೋ3
--------------
ಪುರಂದರದಾಸರು
ತ್ರಿಜಗದ್ವಾ ್ಯಪಕಹರಿಎನುವರು ಸುಜನರುನಿಜದಲಿ ಪೇಳಿವದಾರಕ್ಕಾಅಜಭವಾದಿಗಳಿಗರಸನಾದಹದಿನಾಲ್ಕು ಲೋಕಕೆ ದೊರೆ ತಂಗಿ 1ನೀರೊಳು ಮುಳುಗುತ ಮೀನರೂಪದಿಸಾರುವ ಮಯ್ಯವದಾರಕ್ಕನೀರೊಳು ಮುಳುಗಿ ವೇದವ ತಂದು ಸುತಗಿತ್ತಧೀರ ಮತ್ಸ್ಯಮೂರುತಿ ತಂಗಿ 2ಭಾರಬೆನ್ನಿಲಿ ಪೊತ್ತು ಮೋರೆ ಕೆಳಗೆ ಮಾಡಿನೀರೊಳು ವಾಸಿಪದಾರಕ್ಕವಾರಿಧಿಮಥಿಸಿದಮೃತ ಸುರರಿಗೆ ಇತ್ತಧೀರಕೂರ್ಮಮೂರುತಿ ತಂಗಿ3ಕೋರೆದಾಡಿಯಲಿ ಧಾರುಣಿ ನೆಗಹಿದಫೋರನೆನುವರಿವದಾರಕ್ಕಕ್ರೂರ ಹಿರಣ್ಯಾಕ್ಷನ ಕೊಂದು ಭೂಮಿಯ ತಂದಶೂರ ವರಹ ಮೂರುತಿ ತಂಗಿ 4ಕ್ರೂರರೂಪತಾಳುತ ಕರುಳ್ವನಮಾಲೆ ಹಾಕಿದವದಾರಕ್ಕಪೋರನ ಸಲಹಲು ಕಂಬದಿಂದುಸಿದನಾರಸಿಂಹ ಮೂರುತಿ ತಂಗಿ 5ಮೂರಡಿ ಭೂಮಿಯ ದಾನವ ಬೇಡಿದಹಾರ್ವನೆನುವನಿವದಾರಕ್ಕಧೀರ ಬಲಿಯ ಭಕ್ತಿಗೆ ಮೆಚ್ಚಿ ಬಾಗಿಲು ಕಾಯ್ದವಾಮನ ಮೂರುತಿ ಇವ ತಂಗಿ 6ಮೂರು ಏಳುಬಾರಿಧಾರುಣಿ ಚರಿಸಿದಶೂರನೆನುವರಿವದಾರಕ್ಕವೀರ ಕ್ಷತ್ರಿಯರ ಮದವನಡಗಿಸಿದ ಪರಶು-ರಾಮ ಮೂರುತಿ ತಂಗಿ 7ಕೋತಿಗಳೊಡನಾಡಿ ಸೇತುವೆ ಕಟ್ಟಿದ ಪ್ರ-ಖ್ಯಾತನೆನುವರಿವದಾರಕ್ಕಮಾತರಿಶ್ವನಿಗೆ ಒಲಿದಂಥ ದಶರಥರಾಮ ಚಂದ್ರ ಮೂರುತಿ ತಂಗಿ 8ಗೋಕುಲದೊಳು ಪಾಲ್ಬೆಣ್ಣೆ ಮೊಸರುನವನೀತಚೋರನಿವದಾರಕ್ಕಲೋಕಗಳೆಲ್ಲಾ ತಾಯಿಗೆ ಬಾಯೊಳುತೋರ್ದಗೋಪಾಲಕೃಷ್ಣ ಮೂರುತಿ ತಂಗಿ 9ತ್ರಿಪುರರ ಸತಿಯರ ವ್ರತಗಳನಳಿದನುಗುಪಿತನೆನುವರಿವದಾರಕ್ಕಕಪಟನಾಟಕ ಸೂತ್ರಧಾರಿ ಶ್ರೀ-ಹರಿಬೌದ್ಧ ಮೂರುತಿ ತಂಗಿ10ಅಶ್ವುವನೇರುತ ಹಸ್ತದಿ ಖಡ್ಗ ಪುರು-ಷೋತ್ತಮನೆನುವರಿವದಾರಕ್ಕಸ್ವಸ್ತದಿ ಕಲಿಯೊಳು ಸುಜನರ ಪಾಲಿಪಕರ್ತೃ ಕಲ್ಕಿ ಮೂರುತಿ ತಂಗಿ 11ಶಂಖು ಚಕ್ರ ಗದೆ ಪದುಮವು ಸಿರದಿ ಕಿ-ರೀಟಧಾರಿ ಇವದಾರಕ್ಕಪಂಕಜಾಕ್ಷಿ ಪದ್ಮಾವತಿಪತಿಶ್ರೀ-ವೆಂಕಟೇಶ ಮೂರುತಿ ತಂಗಿ 12ಮಮತೆಲಿ ಸುಜನರ ಶ್ರಮ ಪರಿಹರಿಸುವಕಮಲಾಪತಿ ಇವದಾರಕ್ಕಕಮಲಪತ್ರಾಕ್ಷ ಶ್ರೀ ಕಮಲನಾಭ ವಿ-ಠ್ಠಲ ಮೂರುತಿ ಕೇಳಿವ ತಂಗಿ 13
--------------
ನಿಡಗುರುಕಿ ಜೀವೂಬಾಯಿ