ಒಟ್ಟು 2773 ಕಡೆಗಳಲ್ಲಿ , 112 ದಾಸರು , 1907 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಸುಳಾದಿ ಧ್ರುವತಾಳ ಶ್ರೀನಿವಾಸನೆ ನೀನು ಬ್ಯಾಗನೆ ಬಂದು ಸಾನುರಾಗದಿ ಸಂಸಾರ ಬಿಡಿಸೋ ಭಾನುಕೋಟಿ ಪ್ರಕಾಶಭಾಗ್ಯನಿಧಿಯೆನ್ನ ಮಾನವ ಕಾಯ್ವುದು ಮಂಗಳಾಂಗನೆ ಏನೇನು ಕಾರ್ಯಗಳು ನಿನ್ನಾಧೀನವಾಗಿರಲು ನಾನುನನ್ನದು ಎಂದು ಮಮತೆಯನೆ ಕೊಟ್ಟು ಅನ್ಯಾಯದಿಂದ ಎನ್ನzಣಿಸುವುದು ದಾನವಾಂತಕರಂಗ ಮುದ್ದುಮೋಹನವಿಠಲ ನೀನೆಗತಿಯೆಂದವಗೆ ನಿರ್ಭಯವೊ ಹರಿಯೆ 1 ಮಠ್ಯತಾಳ ಎನ್ನಪರಾಧಗಳು ಅನಂತವಿರುವದನ್ನು ನಿನ್ನಸ್ಮರಣೆ ಒಂದೆ ಸಾಕೊ ಹರಿಯೆ ಬನ್ನ ಬಡಿಸುವದ್ಯಾಕೊ ಮನ್ಮನದಲಿಪೊಳೆದು ಚೆನ್ನಾಗಿ ಸಲಹೋಘನ್ನಮಹಿಮಾ ಮುದ್ದುಮೋಹನವಿಠಲನೇ 2 ತ್ರಿವಿಡಿತಾಳ ಬಿಂಬನೆನೆಸಿಕೊಂಡು ಪ್ರತಿಬಿಂಬಗಳೊಳಗೆಕಾರ್ಯ ಅಂಭ್ರಣಿಸಹಿತವಾಗಿ ನೀಮಾಡಿ ಮಾಡಿ ಸೂವಿ ಅಂಬುಜನಾಭಾನೆ ಎನ್ನಾಡಂಭಕ ಭಕುತಿ ಬಿಡಿಸಿ ಸಂಭ್ರಮದಿಂದ ಕಾಯೊ ಕರುಣಾನಿಧೆ ಶಂಬರಾರಿಯಜನಕ ಮುದ್ದುಮೋಹನವಿಠಲ ಕಂಬದಿಂದಲಿ ಬಂದು ಭಕುತನ್ನಸಲಹಿದ ದೇವ 3 ಅಟ್ಟತಾಳ ಏನೇನುದಾನ ಅನಂತ ಮಾಡಲೇನು ಕಾನನದಲಿ ಪೋಗಿ ತಿರುಗಿತಿರುಗಿದಂತೆ ಜ್ಞಾನದಿಂದಲಿ ತಾರತಮ್ಯಾನುಸಾರ ನಿನ್ನ ಧ್ಯಾನವನ್ನ ಒಂದು ಕ್ಷಣವಾದರೂತೋರಿಸೊ ವಾನರ ವಂದ್ಯ ಮುದ್ದುಮೋಹನವಿಠಲ ನಾನಾವಿಧದಿಂದ ನಂಬಿದೆನೊ ಹರಿಯೇ4 ಆದಿತಾಳ ನೀನೆ ಅನಾಥಬಂಧು ನೀನೆ ಅದ್ಭುತಮಹಿಮ ನೀನೆ ಅಸುರಾಂತಕ ನೀನೆ ಅಮರಾದಿವಂದ್ಯ ನೀನೆ ಭವರೋಗ ವೈದ್ಯ ನೀನೆ ಭಕ್ತವತ್ಸಲ ನೀನೆ ಪರಿಪೂರ್ಣ ಸುಖ ನೀನೆ ಪರಂಜ್ಯೋತಿ ನೀನೆ ಪರಬ್ರಹ್ಮ ನೀನೆ ಪುರುಷೋತ್ತಮ ನೀನೆ ಪುಣ್ಯೈಶ್ವರ್ಯ ನೀನೆ ನಿರ್ಮಲ ಜ್ಞಾನ ನೀನೆ ಶಶಿ ಕೋಟಿಲಾವಣ್ಯ ನೀನೆ ಮುದ್ದುಮೋಹನ ವಿಠಲ ನೀನೆ ವೇಗದಿ ಬಂದು ನೀನೆ ರಕ್ಷಿಸು ಎನ್ನನು 5 ಜೊತೆ ಸ್ವಾಮಿ ಪುಷ್ಕರಣಿವಾಸ ಕಾಮಿತಫಲದಾನೆ ಶ್ರೀಮನೋಹರ ನಮ್ಮ ಮುದ್ದುಮೋಹನ ವಿಠಲ
--------------
ಮುದ್ದುಮೋಹನವಿಠಲದಾಸರು
ಸುಳ್ಳಿಗೆ ನಗರೇನೊರಂಗಯ್ಯನಿನ್ನ ಕಳ್ಳತನವ ನೋಡಿ ಪ. ಹಾರುವ ಹದ್ದನೇರಿ ತಿರುಗಾಡುವಿಜಾರಿಬಿದ್ದರೆ ತೆರನೇನೊ ಜಾರಿಬಿದ್ದರೆ ತೆರನೇನೊ ನಿನಗೆ ಬುದ್ಧಿಯಾರು ಹೇಳುವರೊ ಧರೆ ಮ್ಯಾಲ1 ಕ್ಷೀರ ಸಮುದ್ರಶಾಯಿ ಎಂದರೆ ಹಿಗ್ಗುವಿಯಾರು ಅರಿಯರು ನಿನ್ನ ಹುಳುಕುಯಾರು ಅರಿಯರು ನಿನ್ನ ಹುಳುಕು ಅತ್ತೆಮನೆ ಸೇರಿದವನೆಂದು ನಗತಾರೊ 2 ನೀರೊಳು ನಿನ್ನ ಮನೆ ಹಾವಿನ ಮ್ಯಾಲೆ ನಿದ್ರೆ ಹಾರುವ ಹದ್ದನೇರುವಿಹಾರುವ ಹದ್ದನೇರುವಿ ತಿರುತಿಂಬೊಮೂರು ಅಹಂಕಾರ ನಿನಗ್ಯಾಕೊ3 ಮಗಳ ಕೊಟ್ಟೆನೆಂದು ಮಮಕಾರದಿಂದಲೆಸುಗುಣ ಸಮುದ್ರ ಉಳುಹಿದಸುಗುಣ ಸಮುದ್ರ ಉಳುಹಿದ ಕಚ್ಚುವ ಶೇಷಖಗರಾಜನಿಂದ ಕೈಕಾಯ್ದ4 ಕರವ ಕರವ ನೆಗಹಿದ ಕಾರಣ ಹಾರುವ ಗರುಡ ಕೈ ಕಾಯ್ದ5 ಕಾಲ ಯವನನ ಕೂಡ ಕಲಹವ ಮಾಡಿಬಂದು ಮೂಲೆಲೆ ಹೋಗಿ ಅಡಗಿದಿಮೂಲೆಲೆ ಹೋಗಿ ಅಡಗಿದಿ ಮುಚಕುಂದ ರಾಯ ನಿಂತಾಗ ಉಳದೆಲ್ಲೊ6 ಮಧುವೈರಿ ನೀನು ಗೆಲಲಿಲ್ಲಮಧುವೈರಿ ನೀನು ಗೆಲಲಿಲ್ಲ ರಮಿಯರಸ ಮಧೂಕದಿಂದ ಅವರ ಮುಡುಹಿದ 7
--------------
ಗಲಗಲಿಅವ್ವನವರು
ಸುಳ್ಳೆಭ್ರಮಿಸಿ ಕೆಡಬೇಡವೋ ಹೇ ಮುಳ್ಳುಮನುಜ ಎಲ್ಲ ಮಿಥ್ಯೆಜಗದ ಬಾಳವ್ಯೋ ಪ ನಿಲ್ಲದಳಿಕೆ ಪೋಗ್ವುದಿದು ಜಲದಮೇಲಿನ ಲಿಖಿತತೆರದಿ ಪಾದ ದುರ್ಭವದ ಭಂಗವೋ ಅ.ಪ ಬಂಧುಬಳಗರೆಂಬರೆಲ್ಲರು ನಿನ್ನೊಳಿರುವತನಕ ತಿಂದು ಉಂಡು ಸೇವೆ ಮಾಳ್ಪರು ನೀನುಹೋಗುವಕಾಲ ಸಂದಿಸಲಾಗ ಆರುಬಾರರು ಹಿಂದೆ ಉಳಿವರು ಮಂದಗಮನೆ ಸತಿಯು ತನ್ನ ಮುಂದಿನ ಗತಿಗೆ ಅತ್ತುಕರೆದು ಮಿಂದು ಮುಟ್ಟುಚಟ್ಟು ತೊಳೆದು ಚಂದದ್ಹೋಳಿಗೆ ತುಪ್ಪ ಉಂಬಳು 1 ಜನರಗೋಣು ಮುರಿದು ಹಲವು ಹಂಚಿಕ್ಹಾಕಿ ಬಿಡದೆ ಬಿನುಗುಯೋಚನದನುದಿನವು ಶೋಧಮಾಡಿ ನಾನಾರೀತಿಯಲಿ ಗಳಿಸಿದ ಧನವು ನಿನಗೆ ಎರವು ಕನಿಕರಿಲ್ಲದೆ ಜವನದೂತರು ಹಣಿದು ಎಳೆದಾಡೊದೆಯುವಾಗ ಮನೆಯೊಳ್ಹೊಳಿದಳದೆ ಧನವು ಬಂದು ನಿನಗೆ ಸಹಾಯ ಮಾಳ್ಪುದೇನೋ 2 ಭೂಮಿಸೀಮೆ ತನ್ನದೆನುತ ಶಾಸನವ ಬರೆಸಿ ನೇಮವಿಲ್ಲದೆ ಕಷ್ಟಬಡುತ ನಿಜಸುಖವ ಮರೆದು ತಾಮಸದೊಳಗೆ ಮುಳುಗಿ ಕೆಡುತ ಪ್ರೇಮದೊರಲುತ ಭೂಮಿಗಧಿಕ ಭಕ್ತಜನರ ಪ್ರೇಮಮಂದಿರ ಸ್ವಾಮಿ ಶ್ರೀರಾಮ ಮುನಿದು ನೋಡಲಾಗ ಭೂಮಿ ಸೀಮೆ ಕಾಯ್ವುದೇನೋ 3
--------------
ರಾಮದಾಸರು
ಸೂಳೆಯನಿಟ್ಟದ್ದೇವೆ ಕೇಳೈ ಆಶಾ ಪ ಸೂಳೆ ಮಾತುಗಳನ್ನು ಕೇಳಿ ಕೇಳಿ ದೇಹ ಜಾಳಾಗಿ ಹೋಯಿತು ಬೀಳೋಕಾಲವು ಬಂತು ಅ.ಪ ಮನೆಯ ಯೋಚನೆ ಬಿಡಿಸಿ ವಿಧವಿಧ ತಿಂಡಿ- ಯನು ತಾತಂದು ಕೊಡಿಸಿ ಮನುಮಥನಾಟವೆಘನ ಬೋಧೆಯೆನ್ನಿಸಿ ಕೊನೆಗೆ ರೋಗಗಳಿತ್ತು ಗತಿಶೂನ್ಯ ಮಾಡುವ 1 ಸತಿಯ ಬಿಡಿಸಿ ಬಿಟ್ಟಳು ಆತ್ಮಜರಲ್ಲಿ ಅತಿದ್ವೇಷವೇ ಕೊಟ್ಟಳು ಪಿತೃಮಾತೃಗಳಿಗಿಲ್ಲ ವಡಹುಟ್ಟಿದವರಿಗಿಲ್ಲ ಪ್ರೀತಿ ಹುಟ್ಟಿಸಿಯಿದ್ದದ್ದೆಲ್ಲಾ ಸೆಳಕೊಂಬುವ 2 ಇತರ ಚಿಂತೆ ಹೋಯ್ತು ಕುಲದಪ- ಧ್ಧತಿಯ ಮರಿಯ ಲಾಯ್ತು ಹಿತವೇ ಪೇಳಿದರ ಹಿತವಾಗಿ ತೋರುವೆ 3 ವಡವೆ ವಸ್ತ್ರವು ಬೇಕಂತೆ ಕೇಳಿದ್ದನೆಲ್ಲ ಕಡುಚಲ್ವೆ ಅವಳೆಂದು ಕಥೆಗಳ ಹೇಳುತ್ತ ಮಡದಿ ಮಕ್ಕಳ ಬಿಟ್ಟುಮನಸು ಅವಳಿಗೆ ಕೊಟ್ಟು 4 ಸ್ಮರನಾಟಯಾವಾಗಲು ಅವಳನೋಡಿ ಕರಗುತ್ತ ಹಗಲಿರುಳು ಪರಗತಿ ಕೊಡುವಂಥ ಗುರುರಾಮ ವಿಠಲನೆ ಅರಿಯವ ಸಂಸಾರ ತೊರೆದು ತುಂಟರಾಗಿ 5
--------------
ಗುರುರಾಮವಿಠಲ
ಸೂಳೆವೆಂಗಳ ನಂಬಬೇಡಅವರ ಖೇಳಮೇಳವ ಬಿಡೋ ಮೂಢಬಲು ಜಾಲಗಾತಿಯರ ಬಲೆಗೆ ಸಿಕ್ಕದಿರುಯಮನಾಳೆ ಮುಡಿಸುವನೆ ಬಿಡುಬಿಡುಗಾಡ ಪ ಸುರತಸುಖವ ತೋರಿಸುವರುಮನೆಯೊಳಿರುವ ಧನವ ತರಿಸುವರುಪರಪುರುಷನಿದಿರು ಮಾಡುವರುಧನ ಬರಿದಾಗೆ ತಪ್ಪು ಹೊರಿಸುವರುಕಡೆಗೆ ತಿರಿದು ತಾರಂದು ಕೈಯಲಿ ತೂತುಗರಟವಕರೆದು ಕೊಡುವರು ಬೈವರು ದೂರುವರು1 ಗುರುಹಿರಿಯರ ತೊರೆಸುವರುಮನೆಯೊಳಿರುವ ಮಕ್ಕಳ ಮರಸುವರುಧನ ಬರುವತನಕ ನೋಡುವರುಬಾರದಿರೆ ಛಿ ಹೋಗೆಂದು ದೂಡುವರು ಗಂಧಪರಿಮಳ ತಿಲಕ ತಾಂಬೂಲ ಕ್ರಮುಕದೊಳುಮರುಳು ಮದ್ದಿಕ್ಕಿ ಕೈವಶವ ಮಾಡುವರು2 ಹೆಂಡತಿಯನು ತೊರಸುವರುಕಂಡ ಕಂಡ ಪುರುಷರ ಕೂಡುವರುಮಂಡೆಗೆ ಮದ್ದನೂಡುವರು ಕಡೆಗೆಭಂಡಾಟವ ಮಾಡುವರು...........(ಅಸಮಗ್ರ)
--------------
ಕೆಳದಿ ವೆಂಕಣ್ಣ ಕವಿ
ಸೃಷ್ಟಿಯೊಳಗೆಲ್ಲ ದುಷ್ಟರ ಪ್ರಭೆಯಾಗಿ ನಿಷ್ಠರುದೋರದಂತಾದರು ಮಾ ಧ್ರುವ ಭ್ರಷ್ಟರು ಬೂಟಿಕಿ ಶಿಷ್ಠರೆ ಕೈಕೊಂಡು ನಿಷ್ಠರಿಗಾಟ್ಲಿ ತಂದರು ಮಾ ತುಟ್ಟಿಲೆ ಮಿಸುಕದೆ ಗುಟ್ಟಿಲಿದ್ದವರ ಬಟ್ಟೆಗ್ಯಳದಿನ್ನು ತಾಹರು ಮಾ ಹೊಟ್ಟೆಯೊಳು ಹೊಕ್ಕು ಕಟ್ಟಲೆ ಕುಳಿತಿನ್ನು ನೆಟ್ಟ ನೇರಿಷ್ಟ ನೇಮಿಸುರು ಮಾ ಇಟ್ಟ ತೊಟ್ಟವರನು ಕೆಟ್ಟದೃಷ್ಟಿಲೆ ನೋಡಿ ದಿಟ್ಟತನದಿ ಪ್ರಾಣಕೊಂಬರು ಮಾ 1 ಕೊಟ್ಟು ಹಣಹೊನ್ನು ಇಟ್ಟದ್ದು ಬೇಡಲು ಕುಟ್ಟಿ ಅವನಬಾಯಿ ಹಾರರು ಮಾ ತುಟ್ಟಿಲೆ ವಂದಾಡಿ ಹೊಟ್ಟಲೆ ವಂದಿಟ್ಟು ನೆಟ್ಟನೆ ಘಾಸಿಮಾಡರು ಮಾ ಗಂಟುಳ್ಳವರ ಕಂಡು ಕಟ್ಟಿದಂಡಗಳನ್ನು ನಷ್ಟತನದಿ ಹೊಟ್ಟೆ ಹೊರುವರು ಮಾ ಬಟ್ಟಿಲೆ ತೋರಲು ಬಿಟ್ಟಿಯ ಹಿಡಿದಿನ್ನು ಹೆಟ್ಟಿ ಅವನ ಮುಂದೆ ನಡೆಸುರು ಮಾ 2 ಶುದ್ದಿಯು ಇಲ್ಲದೆ ರಾಜ್ಯಾಧಿಪತಿಗಳು ಇದ್ದು ಇಲ್ಲದಂತಾದರು ಮಾ ಮಂದಮತಿಗಳು ಅಂದಣವೇರಿನ್ನು ಬುದ್ಧಿವಂತರೀಗ್ಹೀನತಂದರು ಮಾ ಮುದ್ರಾಧಾರಿಗಳೆಲ್ಲ ಕ್ಷುದ್ರದೃಷ್ಟಿಯು ಮಾಡಿ ಕ್ಷುದ್ರತನದಿ ಕೆಡುತಿಹರು ಮಾ ಸಿದ್ಧಸಾಧಕರೆಲ್ಲ ಗುದ್ದನೇ ಹೊಕ್ಕರು ಇದ್ದರೆ ಬುದ್ಧಿಹೀನರು ಮಾ 3 ಉಳಿಯಮುಟ್ಟಿದ ದೈವ ಉಳಿಯದೇ ಹೋದವು ಉಳಿಗಾಲ ವಿಲ್ಲದಂತಾಯಿತು ಮಾ ತಿಳಿವಳಿಕುಳ್ಳವರೆಲ್ಲ ತಲೆಮುಸಕ್ಹಾಕಿನ್ನು ಕಳ್ಳರೆ ಸಾಜರು ಆದರು ಮಾ ಒಳ್ಳೆಯವರ ನುಡಿ ಎಳ್ಳಷ್ಟು ಮಾಡುತ ಸುಳ್ಳರು ನಿಜನುಡಿವೆಂಬುರು ಮಾ ಉಳ್ಳವರು ಖಳಬುದ್ಧಿ ಕೈಕೊಂಡು ಇಳೆಯೊಳು ಧರ್ಮವ ಜರೆದರು ಮಾ 4 ಸಾಧುಸಜ್ಜನರೆಲ್ಲ ಭೇದವ ಅಡಗಿಸಿ ಮೇಧಿನಿಯಲು ಗುಪ್ತರಾದರು ಮಾ ಇದ್ದರ ಘನಸುಖ ಸಿದ್ಧರ ನೆರೆಯಲಿ ಬುದ್ಧಿಹೀನರು ತಾವು ಅರಿಯರು ಮಾ ಸದ್ಗುರು ಕೃಪೆಯಿಂದ ಸದ್ಬ್ರಹ್ಮದ ನೆಲೆಯ ಸತ್ ಶಿಷ್ಯಮಹಿಪತಿ ತಿಳಿದನು ಮಾ ಎಂದಿಗೆ ಬೇಡಿನ್ನು ದುರ್ಜನರ ಸಂಗವು ತ್ರಾಹಿ ತ್ರಾಹಿ ತ್ರಾಹಿ ಎಂದನು ಮಾ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಸೈಯವ್ವ ಇದು ಸೈಯೆ, ಗೋಪಿ, ಸೈಯವ್ವ ಇದು ಸೈಯೆ ಪ ಸೈಯೆ ಗೋಪಿ, ನಿನ್ನ ಮಗರಾಮನಿಗೆ ಒಳ್ಳೆ ಬುದ್ಧಿ ಕಲಿಸಿದ್ದೀಯೆ ಅ ಸಂಜೆಯ ವೇಳೆಗೆ ಬಂದು - ಸಟೆಯಲ್ಲ - ಮನೆಯ ಒಳಗಡೆ ನಿಂದುಕುಂಜರಗಮನೆ ಬಾರೆಂದು ಎನ್ನ ಮುಂಗುರುಳ ತಿದ್ದಿದಗಂಜಿ ಶಲ್ಯವ ಎನಗೆ ಮುಸುಕಿಟ್ಟು ಮುದ್ದಾಡಿ ಕಡೆಗೆಕಂಜಲೋಚನೆ ಕುಚದ ಗಂಟು ಬಿಚ್ಚೆಂದ ನೋಡು 1 ಬಿಟ್ಟ ಮಂಡೆಯಲಿ ಗಂಡ ಮೈಮರೆತು ಮಲಗಿಹುದ ಕಂಡುಜುಟ್ಟನ್ನು ಬಿಚ್ಚಿ ಮಂಚದ ನುಲಿಗೆ ಬಿಗಿದು ಕಟ್ಟಿದಕೊಟ್ಟಿಗೆ ಸುಡುತಿದೆ ಏಳೆಂದು ಬೊಬ್ಬೆಯಿಟ್ಟುದ ಕೇಳಿಥಟ್ಟನೇಳಲು ಗಂಡ, ಜುಟ್ಟು ಕಿತ್ತು ಹೋಯಿತಮ್ಮ2 ಅಡವಿ ಜಟ್ಟಿಂಗನ ಮಾಡಲಿಕೆ ಒಳ್ಳೆ ಸಡಗರ ಸಂಭ್ರಮದಿಂದಹೆಡಗೆ ತುಂಬ ಹೋಳಿಗೆ ಮಾಡಿ ಕೊಡ ನೀರು ತರಲು ಹೋದೆನೆಕಡೆಗೊಂದು ಹೋಳಿಗೆ ಬಿಡದೆ ಕೊಡದುಪ್ಪ ಹಾಲ್ಮೊಸರು ಪಾಯಸಕಡು ಫಟಿಂಗ ತುಡುಗು ತಿಂದು ಮೀಸಲಳಿದು ಎಡೆಗೆಡಿಸಿ ಹೋದನೆ 3 ಊರೊಳಿಂತಾಯ್ತೆಂದು ಸಾರಿದೆವೆ ನಾರೇರುಅಡವಿಯಲಿ ಕೂಡಿದೆವೆ ಹಲವಾರು ಹೆಂಗಸರುನೂರಾರು ಗೆಳತೇರು ಉಳಿದ ಹಾಲನು ಮಾರಿದಾರಿ ಹಿಡಿದು ಬರುವಾಗೊಂದು ಕೊಳವ ಕಂಡೆವೆ ನೊಡು 4 ಓರಗೆ ಹೆಂಗಳು ನಾವು ನೀರಾಟವಾಡಲಿಕೆಸೀರೆ ಕುಬಸವ ದಡದೊಳಿಟ್ಟು ಕೊಳಕೆ ಧುಮುಕಿದೆವೆಚೋರ ನಿನ್ನ ಮಗ ಸೀರೆಕುಬಸವನೆಲ್ಲ ತಕ್ಕೊಂಡು ಹೋಗಿತೋರದುಂಚ ಕಡಹದ ಮರನೇರಿ ನೋಡುತ ಕುಂತನೆ 5 ನೆಟ್ಟನೆ ನೀರಾಟವಾಡಿ ನಾಲ್ಕೂ ದಿಕ್ಕಿನಲಿ ನಾವು ಅಡರಿದೆವೆಇಟ್ಟಲ್ಲಿ ಸೀರೆಕುಬಸಗಳಿಲ್ಲ ಕೆಟ್ಟೆವಯ್ಯಯ್ಯೋಕಿಟ್ಟನ ಕೈಚಳಕವೆಂದು ನಾವಷ್ಟದಿಕ್ಕುಗಳ ನೋಡಿದೆವೆತುಟ್ಟತುದಿ ಕೊಂಬೆಯಲಿ ಕುಂತಿರುವ ಪುಟ್ಟನ್ನ ಕಂಡೆವೆ 6 ಮುಂದೆ ಹಸ್ತದಿ ಮುಚ್ಚಿಗೊಂಡು ಕೃಷ್ಣನಿಗೆ ಗೋಗರೆದು ಕೇಳಲುವಂದನೆ ಮಾಡಿದರೆ ನಿಮಗೆ ಸೀರೆ ಕುಬಸವ ಕೊಡುವೆನೆಂದಒಂದು ಕರದಿ ಮುಗಿವೆವೆಂದರೆ ಎರಡು ಕರದಿ ಮುಗಿಯಿರೆಂದಬಂಧನಕ್ಕೊಳಗಾದೆವೆಂದು ವಿಧಿಯಿಲ್ಲದೆ ಮುಗಿದೆವೆ 7 ಪುಷ್ಪಗಂಧಿಯರೆ ಒಪ್ಪಿತವಾಗಲಿಲ್ಲ ನನ್ನ ಮನಕೆಚಪ್ಪಾಳೆ ಇಕ್ಕುತ ಮರದ ಸುತ್ತ ತಿರುಗಿರೆಂದತಪ್ಪದು ಎಷ್ಟೊತ್ತಾದರು ಬಿಡನೆಂದು ಜಯಜಯವೆನುತಚಪ್ಪಾಳೆ ಇಕ್ಕುತ ಮರದ ಸುತ್ತಲೂ ತಿರುಗಿದೆವೆ8 ಪಗಡೆಕಾಯಿ ಕುಚದ ದಗಡಿಯರೆ ಪುಗಡಿ ಹಾಕಿರಿ ಎನ್ನೆದುರುತೆಗೆದು ಕೊಡುವೆ ನಿಮ್ಮ ವಸ್ತ್ರಗಳ ಬಗೆಬಗೆಯಿಂದಜಗದೊಳು ನಗೆಗೇಡಾದೆವು ಇನ್ನು ನುಡಿದು ಫಲವಿಲ್ಲೆಂದುಪುಗಡಿ ಹಾಕಿದೆವೆ ನಾವು ಛೀ ಛೀ ಎನ್ನುತಲಿ 9 ಕಡೆಯಾಟ ಕಮಲನೇತ್ರೆಯರೆ ಎಡೆಯಾಗಿ ಹೋಗಿ ನಿಲ್ಲಿರಿಓಡಿಬಂದರೊಂಟಿಯಾಗಿ ಹಿಡಿದು ನೋಡಿ ಕೊಡುವೆ ಎಂದಕೋಡಗ ಕೊರವಂಗೆ ಸಿಕ್ಕಿ ಆಡಿದಂತೆ ನಾವಾಡಿದೆವೆಓಡಿ ಬಂದೊಬ್ಬೊಬ್ಬರಿಗೂ ಹಿಡಿದು ಸವರಿ ವಸ್ತ್ರವನಿತ್ತನೆ 10 ತಂಡತಂಡದ ನಮಗೆ ಬಣ್ಣಬಣ್ಣದ ಬಳೆಯನಿಟ್ಟುಮಂಡೆ ಬಾಚಿ ಕುರುಳ ತಿದ್ದಿ ಕುಂಕುಮವಿಟ್ಟನೆಪುಂಡ ನಿನ್ನಣುಗ ನೆಲೆಯಾದಿಕೇಶವರಾಯಬಂಡು ಮಾಡಿ ಬಳಲಿಸಿ ಕೊನೆಗೆ ರಮಿಸಿ ಕಳಿಸಿಕೊಟ್ಟನೆ 11
--------------
ಕನಕದಾಸ
ಸೋಜಿಗವಾಯಿತು ಸದ್ಗುರುವಿನ ಕೃಪೆ ಹೇಳಲೇನು ನಿಜಗುಹ್ಯದ ಮಾತು ಗುರುತವಾಗಿ ಹ್ಯ ಸಾಧು ಬಲ್ಲ ಖೂನ ಧ್ರುವ ನೀಗದ ನೀಗಿತು ಹೋಗದ ಹೋಯಿತು ತ್ಯಾಗಲ್ಯೊಂದು ಬಾಗದ ಬಾಗಿತು ಸಾಗದ ಸಾಗಿತು ಯೋಗಲ್ಯೊಂದು ಆಗದ ಆಯಿತು ಕೂಗದ ಕೂಗಿತು ಈಗಲ್ಯೊಂದು ತೂಗದ ತೂಗಿತು ಸುಗಮ ತಾ ತೋರಿತು ಜಗದೊಳೊಂದು 1 ಹುರಿಯಲೊಂದು ಅರಿಯಿತು ಅರಿವಿಲೊಂದು ಸುರಿಯದ ಸುರಿಯಿತು ಗರೆಯದ ಗರಿಯಿತು ತ್ಯರಿಯಲೊಂದು ಜರಿಯದ ಜರಿಯಿತು ಬೆರಿಯದೆ ಬೆರಿಯಿತು ಕುರಿವಿಲೊಂದು 2 ಜಾರದ ಜಾರಿತು ಮೀರದ ಮೀರಿತು ಹಾರಲೊಂದು ತೋರದ ತೋರಿತು ಸೇರದ ಸೇರಿತು ಸಾರಲೊಂದು ಬೀರದ ಬೀರಿತು ಸಾರಸದೋರಿತು ಕರದಲೊಂದು ತರಳ ಮಹಿಪತಿಗ್ಹರುಷವಾಯಿತು ಗುರುಕರುಣಲಿಂದು 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಸೋಜೀಗ ರೊಳಗತಿ ಸೋಜೀಗ ರಾಘವೇಂದ್ರಾ ಗುರು ಪ ಸೋಜೀಗ ವಲ್ಲವೆ ರಾಜಾ ಗುರುವು ನೀನು ನೈಜ ರೂಪದಿ ಬಂದು ಮಾಜಾದೆ ಪೊರೆವುದು ಅ.ಪ ಬೆಂಬಲ ನಿನಗೆಂದು ಸ್ತಂಭದಿ ಹರಿ ಬಂದ ಇಂಬು ಪಾಲಿಸು ಗುರುವೇ ನಂಬೀದ ಜನಗಣ ಡಿಂಭದಿ ನೀ ಮೂಡಿ ಅಂಬಕ ದೊಳು ಕಂಡೇ 1 ಇಲ್ಲ ಹರಿಯು ಎಂಬ ಕ್ಷುಲ್ಲ ಸಂಶಯ ವೆಂಬ ಹಲ್ಲು ಮುರಿದು ಭಕ್ತರಲ್ಲಿ ತುಂಬುವೆ ಭಕ್ತಿ ಇಲ್ಲದಿರಲು ನೀನು ಕಳ್ಳ ಕಲಿಯು ಜಗ ವೆಲ್ಲ ತುಂಬುತ ಶೃತಿ ಸುಳ್ಳು ಎನಿಸುತಿದ್ದಾ 2 ನಿರುತ ನೀಡುತ ಹರಿಕೆ ಕರೆದು ಪೊರೆವೆ ಜನರ ಸರಿಯು ಕಾಣೆನು ನಿನಗೆ ಹರಿಯ ಕಿಂಕರ ಶರಣು ಮರುತ ದೇವನ ಮತ ಮೆರೆಸಿ ಕುಣಿಸುತ್ತಿರುವೆ ಶರಣ ಜನರ ಪೊರೆವ ಪರಮಾಪ್ತ ಸಿದ್ಧವೋ 3 ಹುಣ್ಣು ಅಳಿಸಿ ಭಕ್ತಿ ಹಣ್ಣು ತಿನ್ನಿಸಿ ಜ್ಞಾನ ಕಣ್ಣು ಪಾಲಿಪ ಗುರು ಮಣ್ಣು ಗೂಡಿಸೊ ಭವವ ಸಣ್ಣವರೆಮ್ಮ ಶಂಕು ಕರ್ಣನೆ ಸಲಹೈಯ್ಯ ಗಣ್ಯರೊಳಗೆ ಗಣ್ಯ ಪೂರ್ಣ ಪ್ರಜ್ಞರ ಪ್ರೀಯಾ 4 ಹಿಂದೆ ಹೋಯಿತು ಹೊತ್ತು ಮುಂದೆ ಕಾದಿದೆ ಮೃತ್ಯು ಇಂದು ಭಾರವ ಪೊತ್ತು ಕಂದರೆಮ್ಮನು ಕಾಯೋ ಇಂದ್ರ ತಾತನ ಹೃದಯ ಮಂದೀರದಲಿ ನಲಿವ ಇಂದಿರೇಶ ಕೃಷ್ಣವಿಠಲ ರಾಯನ ತೋರು 5
--------------
ಕೃಷ್ಣವಿಠಲದಾಸರು
ಸೋತುಹೋಗಣ್ಣ ಮಾತುಬಂದಲ್ಲಿ ಜಾಣನಾಗಿ ಸೋತುಹೋಗಣ್ಣ ಮಾತುಬಂದಲ್ಲಿ ಪ ಸೋತುಹೋಗದೆ ಮಾತುಮಾತಿಗೆ ವಾದಿಸಲ್ಕೆ ಘಾತಕತನದ್ವಿಧಿಯು ಬಂದು ಆತುಕೊಂಡು ಕೂತುಕೊಳ್ವುದು ಅ.ಪ ಸೋತೆನೆನ್ನಲು ನಾಚಬೇಡಣ್ಣ ದೇವರು ಕೊಟ್ಟಿಹ್ಯ ಖ್ಯಾತಿಯೇನು ಹೋಗೋದಿಲ್ಲಣ್ಣ ಸುಳ್ಳಲ್ಲವಣ್ಣ ಸೋತೆನೆಂಬುದು ಜಯದ ಮಾತಣ್ಣ ಸತ್ಯ ತಿಳಿಯಣ್ಣ ನೀತಿಗಡಕರ ಮಾತಿನ ತಳ್ಳಿಗೋತ ಕುಣಿಯೊಳೆಳೆವ ಬಳ್ಳ್ಯೆಂದು ಮಾತನಾಡದೆ ಸುಮ್ಮನ್ಹೋಗಲು ನೀತಿವಂತರು ಮೆಚ್ಚುತಾರ 1 ದುಡುಕುಮಾತಿಗೆ ಮಿಡುಕಬೇಡಣ್ಣ ಸತ್ಯದ್ಹೇಳುವ ದೃಢತರ್ವಚನದ ಅಡಕು ತಿಳಿಯಣ್ಣ ಪಡಕೊ ಸುಖವಣ್ಣ ನೀ ತೊಡರಿಕೊಂಡರೆ ತಪ್ಪದು ಕಡೆಯತನಕ 2 ಸೋತೆನೆನದ್ಹತ್ತುವದನಂದೇನಾಯ್ತು ಸೋತು ಓಡಿದ ನೀತಿವಂತ ವಿಭೀಷಣಂದೇನಾಯ್ತು ಮತ್ತು ನಳರಾಜ ಸೋತ ರಾಜ್ಯ ಭಂಡಾರೆಲ್ಲ ಮುಳುಗಿತು ತಿಳಿ ನೀತಿ ಅರಿತು ಮಾತುಮಾತಿಗ್ವಾದಿಸಿ ಕುಲಘಾತಕ್ಕಾದನು ಕೌರವೇಂದ್ರನು ಸೋತಜನರಭಿಮಾನಿ ಶ್ರೀರಾಮ 3
--------------
ರಾಮದಾಸರು
ಸೋತುಹೋದೆ ನಾನು ಶ್ರೀಹರಿ ಸೋತುಹೋದೆ ನಾನು ಪ ಪತಿತ ಪಾವನ ಮೂರ್ತಿಯ ಪ್ರೀತಿಯ ಸತತ ಪಡೆಯಲು ಕೆಲಸವ ಮಾಡಿ ಅ.ಪ. ನಿತ್ಯದಿ ಭಜಿಸುತ ಹರಿನಾಮವನು ಸತ್ಯಧರ್ಮದಿ ನಡೆಯುತಲೀ ಭ್ಯತ್ಯರಂದದಿ ಸೇವೆಯ ಮಾಡುತ ನಿತ್ಯನೆನಾ ಧನ್ಯಾತ್ಮನಾಗದೆ 1 ಪರಮಾತ್ಮನ ಕೀರ್ತನೆಯನು ಮಾಡುತ ಹರುಷದಿ ದಾಸನಾಗುತಲೀ ಹರಿಯ ಸಾಸಿರ ನಾಮವ ಸ್ಮರಿಸುತ ಶರಣಾಗತ ಪರಿಪಾಲನ ನೋಡಿದೆ 2 ಹೊನ್ನು ಹÉಣ್ಣು ಮಣ್ಣಿಗೋಸುಗ ಜನ್ಮವ ಮೋಹದಿ ನವಿಸದಲೇ ಚಿನ್ಮಯ ರೂಪನ ಪೂಜೆಯ ಮಾಡುತ ಚನ್ನಕೇಶವ ಪಾದವ ಸೇರದೆ 3
--------------
ಕರ್ಕಿ ಕೇಶವದಾಸ
ಸ್ಥಿರ ನೀಡೆನ್ನ್ವದನಾಬ್ಜದಿ ಪರಮ ಪುರುಷ ನಿನ್ನ ಸ್ಮರಣೆ ಪ ಸೌಖ್ಯ ಸುಭೋಗದಿರಲಿ ಬೇನಿಯಿಂದ ಒರಲುತಿರಲಿ ತ್ರಾಣಗುಂದಿ ತೊಳಲುತಿರಲಿ ದಾನವಾಂತಕ ನಿನ್ನ ಧ್ಯಾನ 1 ಭೂಮಿಪರು ಸನ್ಮಾನ ಕೊಡಲಿ ಪಾಮರೆಂದು ಒದೆದು ನೂಕಲಿ ಭೂಮಿಜನರಪಹಾಸ್ಯ ಗೈಯಲಿ ಸ್ವಾಮಿ ನಿಮ್ಮ ಭಜನಾನಂದ 2 ಚಿಂತೆಯಿರಲಿ ಶ್ರೀಮಂತಿಕಿರಲಿ ಸಂತಸೆಂಬುದು ಸಿಗದ್ಹೋಗಲಿ ಅಂತಕಾರಿ ಶ್ರೀರಾಮ ನಿನ್ನ ಚಿಂತನೆ ಎನ್ನ ಅಂತ್ಯಕಾಲದಿ 3
--------------
ರಾಮದಾಸರು
ಸ್ಮರಿಸಿ ಬೇಡುವೆ ಗುರುವರರ ಪಾದ- ಸರಸಿಜ ಸ್ಮರಿಪರಘುಪರಿಹರಿಸುವರಪ ಇಂದಿರೇಶನ ಮಹಿಮೆ ಬಲ್ಲ ಭಕ್ತ ಸಂದಣಿಯೊಳು ಇವರಿಗೆ ಸಮರಿಲ್ಲ ತಂದೆ ವೆಂಕಟೇಶ ವಿಠ್ಠಲನೆಂದು ಸಂಭ್ರಮ ಪಡುವ ಶಿಷ್ಯರಿಗೆಣೆಯಿಲ್ಲ 1 ಸಿರಿವೆಂಕಟೇಶನ್ನ ಸ್ಮರಿಸಿ ಬಹು ಪರಿಯಿಂದ ಪಾಡಿ ಕೊಂಡಾಡಿ ಸ್ತುತಿಸಿ ಗಿರಿಯ ವೆಂಕಟನನ್ನು ಭಜಿಸಿ ನಮ್ಮ ಉರಗಾದ್ರಿವಾಸ ವಿಠ್ಠಲದಾಸರೆನಿಸಿ2 ಸದ್ವೈಷ್ಣವರ ಸುರಧೇನು ಸರ್ವ ರುದ್ಧಾರವಾಗಲು ಜನಿಸಿದರಿನ್ನು ಬುದ್ಧಿ ಶಿಷ್ಯರಿಗೊರೆದರಿನ್ನು ತಂದೆ ಮುದ್ದು ಮೋಹನ್ನ ವಿಠ್ಠಲದಾಸರನ್ನು 3 ಸುಂದರ ಮೂರ್ತಿಯ ತಂದು ದುರ್ಗ ಮಂದಿರದಲಿ ಸ್ಥಾಪಿಸಿದರೊ ಅಂದು ಛಂದದಿ ಸೇವಿಸಿರೆಂದು ಶಿಷ್ಯ ಮಂಡಲಿಗಳಿಗೆ ಬೋಧಿಸಿದರೆಂತೆಂದು 4 ಕಳವಳ ಪಡುತಿಹೆನಲ್ಲ ಕಾಲ ಕಳೆದು ಹೋಗುತಲಿದೆ ಅರಿವು ಬರಲಿಲ್ಲ ಪರಮ ಭಕ್ತರ ಪರಿಯನೆಲ್ಲ ತಿಳಿವಕಮಲನಾಭ ವಿಠ್ಠಲನಲ್ಲದಿಲ್ಲ 5
--------------
ನಿಡಗುರುಕಿ ಜೀವೂಬಾಯಿ
ಸ್ಮರಿಸು ಮನವೇ ನೀ ಪೂರ್ಣ ಕರುಣಾಸಾಗರ ದೇವನ್ನಾ ಪ ದಾವ ನಿಗಮಾಗಮ ಪೌರಣಿಕ ತಿಳಿಯದು ಮಹಿಮೆದಾವನ್ನ ಅವನ ನಖಕಾಂತಿಗೆ ಸರಿ ಪೊಲಿರು ಮಿತ್ರೆಂದು ಹವ್ಯವಾಹನ್ನಾ 1 ಭಕ್ತಿ ಭಾವಕ ಶಿಲ್ಕಅನುದಿನ ಬಲಿಬಾಗಿಲ ಕಾಯಿದಿಹನಾ| ಶಾಪದಿ ವಿರಹಿತ ಮಾಡಿದನಾ 2 ಹೋ ಹೋ ಎಂದು ಬಯಿವನಾ| ಎಣಿಕೆ ಇಲ್ಲದೆ ಪರಿಪರಿ ಯಿಂದಲಿ ಅಡಿಗಡಿಗೆ ರಕ್ಷಿಪನ್ನಾ 3 ಭಗದತ್ತನು ಗಜವೇರಿ ಬಾಣವ ಬಿಡಲಾಗಳೆ ಉರುವಾತನ್ನಾ | ಗೋಪಾಲರ ರಕ್ಷಿಸಲೋಸುಗ ಬೆರಳಲಿ ಗಿರಿ ಎತ್ತಿದನ್ನಾ 4 ಏಳದೆ ಗರ್ವದಿ ಕುಳಿತರೆ ದುರ್ಯೋಧನನ ಕೆಳಗೆಡಹಿದನ್ನಾ| ಶ್ರೀಲಲನೆಯ ಮನೋಭಾವನೆ ಪೂರಿತ ಮಹಿಪತಿ ನಂದನ ಜೀವನಾ 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಸ್ಮರಿಸೆಲವೋ ಸ್ಮರಿಸೆಲವೋ ಮನವೇ | ನಿರುತದಿ ಗುರುಮಹೀಪತಿ ಪಾದಾ ಪ ಆದ್ಯಾತ್ಮದಘನ ವಿದ್ಯೆಯ ಸಾಧಿಸಿ | ಸಿದ್ಧರ ನಡುವೆ ಪ್ರಸಿದ್ಧರಾದವರ 1 ನೆಟ್ಟನೆ ಶರಣರ ಪುಟ್ಟಿಸಿರಧಿಕಾ | ಬಿಟ್ಟುಪದೇಶವ ಕೊಟ್ಟು ಸಾಕುವರಾ 2 ಧಾರುಣಿಯೊಳು ಸಂಸಾರ ಮಾಡಿದರ | ಸಾರಸಜಲದಂತೆ ರಚಿಸಿದರಾ 3 ಯೋಗಧಾರುಣದಿ ಸಾಗಿಪದಿನಗಳು | ಭಾಗವತಾಗ್ರಣಿ ಎನಿಪಶ್ರೀಗುರುಪಾದಾ4 ವಿತ್ತಜನರು ತಂದಿತ್ತರೆ ಹಿಡಿಯದೆ | ನಿತ್ಯವ್ಯಯವ ಪವಡಿಸುತಿಹರವರಾ5 ಯುಕ್ತದಿ ವಿಷಯಾಸಕ್ತಿಯತ್ಯಜಿಸಿ | ವಿ ರಕ್ತಿ ಬೆಳಿಸಿ ಸುಮುಕ್ತಿ ಪಡೆದವರಾ 6 ಸ್ವಸ್ಥದಿ ನಾಲ್ಕು ಅವಸ್ಥೆಯ ಮೀರಿ | ಸ ಮಸ್ತರಲಿ ನಿಜ ವಸ್ತು ಕಂಡವರಾ7 ಕಾಖಂಡಕಿ ಸ್ಥಳ ಶ್ರೀಕರವಂದ್ಯೆ | ನಿ ರಾಕರಿಸದೆ ಅಂಗೀಕರಿಸಿದರಾ 8 ಎಂದೆಂದಿಗೂ ಹೊರಗೊಂದಿನ ಹೋಗದೆ | ಮಂದಿರದೊಳಗಾನಂದದಲಿಹರಾ9 ತಾಪತೃಯದಾ ಭವಪರಿಹರಿಸುತ | ತಾಪೋರೆದನು ಗುರು ಶ್ರೀಪತಿಗುರುಪಾದಾ 10 ಅಂಕಿತ-ಗುರುಶ್ರೀಪತಿ
--------------
ಕಾಖಂಡಕಿ ಶ್ರೀ ಕೃಷ್ಣದಾಸರು