ಒಟ್ಟು 2882 ಕಡೆಗಳಲ್ಲಿ , 122 ದಾಸರು , 2152 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ವ್ಯಾಸರಾಯರ ಚರಣವನೆ ಸೇವಿಸಿ ಪ ವ್ಯಾಸರಾಯರ ಚರಣ ಸರಸಿಜದ ಸೇವೆ ಬಲು ಮೀಸಲ ಮನದಿ ಮಾಡೆ ಆಶೆಪಾಶೆಯ ತೊರೆದು ಕ್ಲೇಶವೆಲ್ಲವ ಹರಿಸಿ ಭಾಸಿಸುವ ಬಿಡದಲೇ ಹೃದ್ದೇಶ ಖೇಶದೊಳಗೇ ಅ.ಪ. ಬನ್ನೂರು ಪುರದಲ್ಲಿ ಮುನ್ನೋರ್ವ ಬ್ರಾಹ್ಮಣನಮನ್ನೆಯೋಳ್ಳುದಿಸಲೂ ಸ್ವರ್ಣ ಪಾತ್ರೆಲಿ ತರಿಸಿಘನ್ನ ಮಹಿಮನ ತಂದು ಬ್ರಹ್ಮಣ್ಯ ಯತಿವರರು ತಮ್ಮ ಆಶ್ರಮದಿ ಪೊರೆಯೆ ||ಉನ್ನತದ ಗುಡ್ಡದಲಿ ಗವಿಯ ಮನೆಯಾಗಿರಲು ಚಿಣ್ಣನಾ ತೊಟ್ಟಿಲಿನ ಮೇಲಿನ ಗವಾಕ್ಷದಿಂಚೆನ್ನಗೋವ್ ದಿನದಿನದಿ ಪಾಲ ಕರೆಯುತ ಚಿಣ್ಣನನು ತಾ ಬಲು ಸಲಹಿತು 1 ತಾಪಸೋತ್ತಮರಾದ ಶ್ರೀಪಾದರಾಯರ ಸ-ಮೀಪದೊಳು ಆ ಪರಮ ಶಾಸ್ತ್ರ ವ್ಯಾಸಂಗದೀಭಾಪು ಭಾಪನೆ ಮೆರೆದು ಭಕ್ತಿ ಸುಪಥವ ಪಿಡಿದು ಮೈ ಮರೆದು ಕುಣಿಯುತಿರುವ ||ಶ್ರೀಪಾದ ಮುನಿಪ ತಾ ಮುಚ್ಚಳವ ತೆರೆಯದಿಹ ಸಂಪುಟವ ತೆರೆಯುತ್ತ ಶ್ರೀ ಪತಿಯನೆ ನೋದುತಶ್ರೀಪ ಶ್ರೀ ವೇಣುಗೋಪಾಲ ಕೃಷ್ಣನ್ನ ಕಾಣುತ್ತ ಕುಣಿ ಕುಣಿದಾಡಿದ 2 ಶಾಲಿಗ್ರಾಮವ ಪಿಡಿದು ತಾಳವನೆ ಹಾಕುತ್ತಬಲುಭಕ್ತಿ ಭರದಿಂದ ಘಲ್ಲು ಘಲ್ಲನೆ ಕುಣಿಯೆಖುಲ್ಲ ಜನರಿದರ ವಳ ಮರ್ಮವನೆ ತಿಳಿಯದಲೆ ಗುಲ್ಲುಗುಲ್ಲೆಂದು ನಗಲೂ || ಬಲ್ಲಿದ ಶ್ರೀಪಾದರಾಯರಿದ ಕೇಳಿ ಕಂಗಳಲಿ ಗಂಬನಿ ಗಲ್ಲದಲಿ ಕೈಯಿಡುತ ಸೊಲ್ಲ ಕೇಳಿರಿ ಸುಜನರೆಲ್ಲರು ಶ್ರೀ ಕೃಷ್ಣ ನಮ್ಮ ವ್ಯಾಸರೋಶನಾದನು 3 ಸಾರಥಿ ಹರಿಯನಿಜ ಮತವ ಬೋಧಿಸುತ ನಿಜ ಜನರ ಪೊರೆಯುತ್ತಕುಜನ ಕುತ್ಸಿತ ಮಾಯಿಮತ ಜೈಸಿಅಜನನಯ್ಯನ ಪ್ರೀತಿ ಸಂಪಾದಿಸಿ ||ಸುಜನ ಪಾಲಕ ಕೃಷ್ಣರಾಜನಿಗೆ ಕುಹುಯೋಗಗಜಬಜಿಸಿ ಬರುತಿರ್ಪುದನು ನಿಜ ಮನದಿ ತಿಳಿದುಗಜವರದ ನಂಘ್ರಿಯನೆ ಭಜಿಸುತ್ತ ವಿಜಯ ಪುರಿ ಸಿಂಹಾಸನವನೇರ್ಧರ 4 ಪರಿ ಗ್ರಂಥ ರಚನೆಯಲಿ ಕಳೆಯೆ ಕಾಲವಕಲು ಮನದ ಜನರಿವರ ಬಲು ಪರಿಯ ಮಹಿಮೆಗಳನೂ ತಾವ್ ತಿಳಿಯಲೊಶವೆ 5 ಇಂಪುಗೊಳ್ಳುತ ಮನದಿ ತಂಪಿನಿಂದಲಿ ಮೆರೆವಪಂಪೆ ಸುಕ್ಷೇತ್ರದಲಿ ಬಾಂಬೊಳೆಯ ಜನಕನ್ನಸಂಪ್ರೀತಿಯನೆ ಪಡೆದಿರುವ ಯಂತ್ರ ಉದ್ಧಾರರನ ಸ್ಥಾಪಿಸುತಲಿ||ನೋಂಪಿನಿಂದಲಿ ಬ್ರಾಹ್ಮಲಕ್ಷ ಗುಂಪಿಗೆ ಉಣಿಸಿ |ಸಂಪುಲ್ಲ ಲೋಚನನ ಶಂಫಲಿಯ ಪುರಗನನುಸಾಂಪ್ರದಾಯಕದಿಂದ ಸಂಪ್ರೀತಿ ಬಡಿಸಿದರ ಪದ ಪಾಂಸುವನೆ ಸಾರಿರೋ 6 ಪರಿ ಪರಿಯ ಪೂಜೆಯನೆ ಗೈಯ್ಯುತಲಿ ||ಶ್ರೀಶನ ಸುಪೂಜಾ ವಿಧಾನವನೆ ಗೈಸುತ್ತದೋಷದೂರನ ಸೇವೆ ಮೀಸಲಳಿಯದ ಮನದಿ ಒಸೆದು ತಾವ್ ಗೈಯ್ಯುತ ಭಾಸಿಸುವ ಸತ್ಕೀರ್ತಿಯುತರಾಗಿ ಮೆರೆಯುತಿಹರ 7 ಪುರಂದರ ವಿಠಲ ದಾಸನೆಂದೂದಾಸ ಪೀಠದಿ ನಿಲಿಸಿ ದಾಸ ಕೂಟವ ರಚಿಸಿ ಸತ್ಪಂಥವನೆ ಸಾರಿದ ||ಆಶುಕವಿತೆಯ ರಚಿಸಿ ಪ್ರಾಕೃತ ಸುಭಾಷೆಯಲಿಕೇಶವನ ಗುಣಧಿಯಲಿ ಲೇಸಾಗಿ ಈಸುತಲಿದಾಸರೊಡನಾಡುತಲಿ ಮೀಸಲಾಗಿರಿಸಿ ತನು ಕೇಶವನ ಗುಣ ಪೊಗಳಿದ 8 ಜಯ ಜಯತು ಶುಭಕಾಯ ಜಯ ಜಯತು ವ್ಯಾಸಾರ್ಯಜಯ ಮಧ್ವಮುನಿ ಪ್ರೀಯ ಜಯ ಚಂದ್ರಿಕಾಚಾರ್ಯಜಯತು ವಿದ್ವದ್ದಾರ್ಯ ಜಯತು ಸುರಮುನಿ ಪ್ರೀಯ ಜಯ ಜಯತು ಯತಿವರ್ಯನೆ ||ಕಾಯಭವ ಪಿತ ಗುರೂ ಗೋವಿಂದ ವಿಠ್ಠಲಗೆಪ್ರೀಯ ಗುರು ವ್ಯಾಸಾರ್ಯ ಸ್ತೋತ್ರವನು ಭಾವ ಶುದ್ಧಿಯೊಳಾವ ಭಜಿಸುವನವಗೆ ಭವವನಧಿ ಉತ್ತರಿಸೆ ನಾವೆಯೆನಿಸುವುದಿದು 9
--------------
ಗುರುಗೋವಿಂದವಿಠಲರು
ಶಂಕರ ಗುರುವರ ಮಹದೇವ ಭವ- ಸಂಕಟ ಪರಿಹರಿಸಯ್ಯ ಶಿವ ಪ. ಸಂಕಲ್ಪ ವಿಕಲ್ಪಮನೋನಿಯಾಮಕ ಕಿಂಕರಜನಸಂಜೀವ ಅ.ಪ. ಭಾಗವತರರಸ ಭಾಗೀರಥೀಧರ ಬಾಗುವೆ ಶಿರ ಶರಣಾಗುವೆ ಹರ ಶ್ರೀ ಗೌರೀವರ ಯೋಗಿಜನೋದ್ಧರ ಸಾಗರಗುಣಗಂಭೀರ 1 ರಾಯ ಲಕ್ಷ್ಮೀನಾರಾಯಣ ಭಕ್ತಿಪ- ರಾಯಣ ತ್ರಿನಯನ ಪುರಹನ ಕಾಯಜಮಥನ ಮುನೀಂದ್ರ ಸಿದ್ಧಜನ- ಗೇಯಸ್ವರೂಪೇಶಾನ 2
--------------
ತುಪಾಕಿ ವೆಂಕಟರಮಣಾಚಾರ್ಯ
ಶಂಕರ ಶಿವಶಂಕರ ಶಿವಶಂಕರ ಶಿವಶಂಕರ ಕಿಂಕರೇಷ್ಟಪ್ರಧಾನಶೀಲ ವೃಷಾಂಕ ಮಹಲಿಂಗೇಶ್ವರ ಪ. ವ್ಯೋಮಕೇಶ ಭವಾಬ್ಧಿತಾರಕ ರಾಮನಾಮೋಪಾಸಕ ಸಾಮಜಾಜಿನವಸನಮಂಡನ ಸ್ವಾಮಿ ತ್ರಿಜಗನ್ನಾಯಕ ಭೀಮಬಲ ಸುತ್ರಾಮಮುಖ ಸುರಸ್ತೋಮ ವಿನುತಪದಾಂಬುಜ ಸೋಮಸೂರ್ಯಾನಲಯನ ನಿಸ್ಸೀಮ ಮಹಿಮ ಮಹಾಭುಜ1 ಭಜಕಜನಸೌಭಾಗ್ಯದಾಯಕ ವಿಜಯಪಾಶುಪತಾಸ್ತ್ರದ ಭುಜಗಭೂಷಣ ಭುವನಪೋಷಣ ರಜತಗಿರಿಶಿಖರಾಸ್ಪದ ವೃಜಿನಹಾಮಲ ಸ್ಫಟಿಕಸನ್ನಿಭ ಕುಜನವಿಪಿನದವಾನಲ ವಿಜಿತಕಾಮ ವಿರಾಗಿಯೋಗಿ ವ್ರಜಕುಟುಂಬ ಮಹಾಬಲ 2 ನೀಲಕಂಠ ನಿರಾಮಯಾಭಯಶೂಲಧರ ಸುಮನೋಹರ ಶೈಲರಾಜಸುತಾಧರಾಮೃತಲೋಲ ಲೋಕಧುರಂಧರ ಕರುಣಾಲವಾಲ ಮಹೇಶ್ವರ ಪಾಲಿತಾಖಿಳಸಿದ್ಧ ಮುನಿಜನಜಾಲ ಜಾಹ್ನವಿಶೇಖರ 3 ಕೃತ್ತಿವಾಸ ಗಿರೀಶ ಶ್ರುತಿತತ್ತ್ವಾರ್ಥಬೋಧ ಗುಣೋದಯ ದೈತ್ಯಮೋಹಕ ಶಾಸ್ತ್ರಕೃತ್ಪ್ರಮಥೋತ್ತಮ ವಿರತಾಶ್ರಯ ಸತ್ಯಸಂಕಲ್ಪಾನುಸಾರ ನಿವೃತ್ತಿಮಾರ್ಗ ಪ್ರವರ್ತಕ ಮೃಡ ನಮೋ„ಸ್ತು ಸುಮನನಿಯಾಮಕ 4 ಪಂಡಿತೋತ್ತಮ ಪವನಶಿಷ್ಯ ಮೃಕಂಡುತನಯಭಯಾಪಹ ಚಂಡಿಕಾಧವ ಶಿವ ದಯಾರ್ಣವ ಖಂಡಪರಶು ಸುರಾರಿಹ ಚಂಡಭಾನುಶತಪ್ರಕಾಶಾಖಂಡವೈರಾಗ್ಯಾಧಿಪ ಕುಂಡಲೀಂದ್ರ ಪದಾರ್ಹನಗ ಕೋದಂಡವಿದೃಶ ಮಹಾನ್‍ತಪ 5 ಮಂಗಲಪ್ರದ ದಕ್ಷಕೃತಮುಖಭಂಗ ಭಾಗವತೋತ್ತಮ ಜಂಗಮಸ್ಥಾವರಹೃದಿಸ್ಥ ಶುಭಾಂಗ ಸತ್ಯಪರಾಕ್ರಮ ಲಿಂಗಮಯ ಜಯಜಯತು ಗಿರಿಜಾಲಿಂಗಿತಾಂಗ ಸದೋದಿತ ಸಂಗರಹಿತಾಚ್ಯುತಕಥಾಮೃತ ಭೃಂಗವತ್ಸೇವನರತ 6 ಭರ್ಗ ಭಾರ್ಗವ ಋಷಿಪ್ರತಿಷ್ಠಿತ ಸ್ವರ್ಗಮೋಕ್ಷ ಫಲಪ್ರದ ನಿರ್ಗತಾಖಿಲದುರಿತ ಭೂಸುರವರ್ಗಪಾಲನಕೋವಿದ ದುರ್ಘಟಿತಧುರಧೀರ ಭವಸಂಸರ್ಗದೂರ ಸನಾತನ ನಿರ್ಗುಣೈಕಧ್ಯಾನಪರ ಸನ್ಮಾರ್ಗಭಕ್ತಿನಿಕೇತನ 7 ಚಾರುಪಾವಂಜಾಖ್ಯಕ್ಷೇತ್ರಾಧಾರದಾಂತದಯಾಕರ ನೀರಜಾಸನತನಯ ಲಕ್ಷ್ಮೀನಾರಾಯಣಕಿಂಕರ ವಾರಿನಿಧಿಗಂಬೀರ ದೀನೋದ್ಧಾರ ಧಾರ್ಮಿಕಜನಹಿತ ವಾರಣಾಸ್ಯಕುಮಾರಗುರು ಗೌರೀರಮಣ ಸುದೃಢವ್ರತ 8
--------------
ತುಪಾಕಿ ವೆಂಕಟರಮಣಾಚಾರ್ಯ
ಶತ್ವ್ರಾಂತಕನು ಸುಜ್ಞಾನ ಭಕ್ತಿಯೇ ಕಾಂತೆ ಜನಕಜೆಜೀವಹನುಮನು ಸುಪಥಸುಗ್ರೀವ 1 ಸಾಧನಾತ್ಮಕಕೌಶಿಕನಮಖ ಕಾದುಸಲಹಿದವಿಘ್ನವೇದು ರ್ಮೇಧೆತಾಟಕಿದುಷ್ಟಸಂಗಸುಬಾಹುಮುಖಖಳರೂ ಸಾಧರವೆವರಯಜ್ಞಗೌತಮ ಭೂದಿವಿಜಸತಿಶಾಪಮೋಕ್ಷವೆ ಶೋಧನಿಷ್ಕøತಿತಾರ್ತಿಚಾಪವಧರ್ಮವೆನಿಸುವುದು 2 ಪರುಶುರಾಮ ಸಮಾಗಮವುವಿ ಸ್ತರಿಸಿನೋಡೆಸಮತ್ವವಿಪಿನಾಂ ತರವೆಕರ್ಮಸುವೃತ್ತಿಮುನಿಗಳು ರಾವಣನತಂಗಿ ಪರಿಕಿಸಲುದುರ್ವೃತ್ತಿಗಳುತತ್ ಪರಿಜನಖರಾದಿಗಳುಭ್ರಾಂತಿಯು ನೆರೆಕನಕಮೃಗದಶವದನನಿಂದ್ರಿಯಗಳೆನಿಸುವನು 3 ಅರುಣತನಯನುಧರ್ಮನೋಡೆ ಶ ಸುರಪಸುತದುಷ್ಕರ್ಮಚಪಲವೆಕಪಿಸಮೂಹಗಳು ಹಿರಿಯಮಗನೆಸಹಾಯವಾಸೆಯೆ ಶರಧಿಲಂಕೆಯೆದೇಹಲಂಕಿನಿಯೇದುರಭಿಮಾನ 4 ಮಣಿಯೆಜ್ಞಾಪಕಸ್ವಸ್ಥಚಿತ್ತತೆ ವನವಶೋಕವುತ್ರಿಜಟೆಕನಸೇ ಘನವೆನಿಪಸಂಸ್ಕಾರದುಷ್ಕರ್ಮಾಖ್ಯವನಭಂಗಾ ದನುಜಪತಿಸುತಮುಖರವಧೆಯೇ ಮುನಿಮತವುದುರ್ವೃತ್ತಿಪರಿಹರ ವನಜಸಂಭವನಸ್ತ್ರವೇಸನ್ಮಾರ್ಗವೆನಿಸುವುದು 5 ಮಮತೆಲಂಕೆಯದಹಿಸಿಮತ್ತೆಹ ಪಮಶರಧಿ ಬಂಧನವೆಯಾಸೆನಿರೋಧನಂತರವು ಕ್ರಮದಿಧರ್ಮವಿಭೀಷಣನಸುರ ದಮನವಿಂದ್ರಿಯಜಯವುಮಿಗೆ ಹೃ ತ್ಕಮಲವೇಸಾಕೇತಪುರವು ಸಮಾಧಿಯಭಿಷೇಕಾ 6 ವಧೆಯಗೈಸಿದಕಾಲಜ್ಞಾನದಿಲವಣ ಮುಖ್ಯರನು ವಿಧವಿಧದಯಜ್ಞಗಳವಿರಚಿಸಿ ಸದಮಲಾತ್ಮನುಸಕಲರಿಂದೈ ದಿದಸಹಸ್ರಪಾದನು ಶ್ರೀಗುರುರಾಮವಿಠ್ಠಲನು 7
--------------
ಗುರುರಾಮವಿಠಲ
ಶಂಭೋ ಪಾಲಯ ಮಾಂವಿಭೋ ಶಂಭೋ ಪಾಲಯ ದಂಭೋಳಿಧರಾದಿ ಮೌಳಿಜೃಂಭಿತಾಂಘ್ರಿ ಸರೋರುಹ ಪ ಇಂದಿರಾವಲ್ಲಭ ಮಿತ್ರ ಕಂದರ್ಪಕೋಟಿಭಾಗಾತ್ರ ನಿಂದಿತಾಘ ಸುಪವಿತ್ರ ಬೃಂದಿತ ಭುವನಸೂತ್ರ 1 ಗಂಗೇಂದುಮೌಳೇ ತ್ರಿಣೇತ್ರ ಭೃಂಗೀಶ ನಾಟ್ಯ ವಿಚಿತ್ರ ತುಂಗ ರಜತಗಿರಿತ್ರ ಮಂಗಳಾನಂತಚರಿತ್ರ 2 ವೈಕುಂಠನಿಲಯ ಬಾಣ ಕಾಕೋಲ ಕಂಠಾಭರಣ ಕರ್ಣ ಆಕಲಿತ ಗಜಾಜಿನ 3 ಮಾಲಿತ ಕರೋಟಿಧರ ಪಾಲಿತ ಲೋಕಸಾಕಾರ ಆಲಿಂಗಿತಾಂಗನಾಕಾರ ಶೂಲಾದ್ಯುದಾಯುಧಕರ 4 ರಜತೇತರಾದ್ರೀಷ್ವಾಸ ಭಜಿತ ವೆಂಕಟಾದ್ರೀಶಸುಜನ ಹೃತ್ಪದ್ಮಾಧೀಶ ಅಜಿತ ಕಕುದ್ಗಿರಿವಾಸ 5
--------------
ತಿಮ್ಮಪ್ಪದಾಸರು
ಶಂಭೋ ಸುರಗಂಗಾಧರನೆ ಪಾಲಿಸಂಬಾರಮಣ ಲಿಂಗ ಪ ರಂಭ ಜನಕ ಕರುಣಾಂಬುಧಿ ಗುರುವರ ಅ.ಪ. ಮುರಾರಿ ಮಹದೇವ ನಿನ್ನಯ ಪಾದ ವಾರಿಜದಳಯುಗವ ಸಾರಿದೆ ಸತತ ಸರೋರುಹೇಕ್ಷಣ ಹೃ ದ್ವಾರಿಜದೊಳು ತೋರು ಗಾರುಮಾಡದಲೆನ್ನ ಅಮಿತ ಗುಣಗುಣ ವಾರಿನಿಧಿ ವಿಗತಾಘ ವ್ಯಾಳಾ ಗಾರ ವಿತ್ತಪ ಮಿತ್ರ ಸುಭಗ ಶ ಪಾವಕ 1 ಇಂದು ಮೌಳೀ ಈಪ್ಸಿತಫಲ ಸಲಿಸುವ ಘನತ್ರಿಶೂಲೀ ಸಲೆ ನಂಬಿದೆನೊ ಹಾಲಾ ಹಲಕಂಠ ಎನ್ನ ನೀ ಸಲಹೋ ಸಂತತ ರೌಪ್ಯಾಚಲವಾಸ ವರಪಂಪಾ ನಿರ್ಜರ ಸೇವಿತಾನಲ ನಳಿನಸಖ ಸೋಮೇಕ್ಷಣನೆ ಬಾಂ ದಳಪುರಾಂತಕ ನಿಜಶರಣವ ತ್ಸಲ ವೃಷಾರೋಹಣ ವಿಬುಧವರ 2 ದೃತಡಮರುಗ ಸಾರಂಗ ನಿನ್ನಯಪಾದ ಶತಪತ್ರಾರ್ಚಿಪರ ಸಂಗ ಸತತ ಪಾಲಿಸೊ ಜಗನ್ನಾಥ ವಿಠ್ಠಲನ ಸ ನ್ನುತಿಸುವ ನೆರೆಧೀರ ಕ್ಷಿತಿಧರ ಧೃತಧನ್ವಿ ಶತಮಖನ ಜೈಸಿದನ ಪುತ್ರನ ಪಿತನ ಜನಕನ ಕೈಲಿ ಕೊಲಿಸಿದೆ ಅತುಳ ಭುಜಜಲ ಭೂತಪಡೆ ಪಾ ವನತಿ ಮುಖಾಂಭೋರುಹ ದಿವಾಕರ 3
--------------
ಜಗನ್ನಾಥದಾಸರು
ಶಂಭೋಶಿವಹರ ತ್ರಿಯಂಬಕ ಶ್ರೀಜಗ - ದಂಬಾರಮಣ ಪರಿಪಾಲಯಾ ಪ ಅಜಿನಾಂಬರಧರ ಭಜಿಪರಾರ್ತಿಹರ ತ್ರಿಜಗಪಾವನ ಗಂಗಾಧರ1 ನಂದಿವಾಹನ ಸುರವೃಂದ ಸುಪೂಜಿತ ಇಂದ್ರ ವಂದಿತ ಗರಕಂಧರ 2 ರುಂಡಮಾಲಧರ ಶÀುಂಡಾಲಮದಹರ ಚಂಡವಿಕ್ರಮ ಉಗ್ರೇಶ್ವರ 3 ದಕ್ಷಾಧ್ವರ ಹರದುಷ್ಟಶಿಕ್ಷಕ ವಿರೂ - ಪಾಕ್ಷನೆ ವೈರಾಗ್ಯನಿಧೆ 4 ವಾಮದೇವನೆ ಭಕ್ತಾಕಾಮಿತ ಫಲದನೆ ಕಾಮಸಂಹರ ಕರುಣಾಕರ 5 ಮೃತ್ಯುಂಜಯನೆ ಯನ್ನಪಮೃಹಾರಕಹರಿ ಭಕ್ತಾಗ್ರೇಸರ ಶಿವಶಂಕರ 6 ರಾಮನಾಮಲೋಲ ತಾಮಸಖಳಕಾಲ ಧಿಮಂತಜನ ಪರಿಪಾಲಕ 7 ಗಿರಿಜಾರಮಣ ನಿನ್ನ ಗುರುವೆಂದು ಮೊರೆಹೊಕ್ಕೆ ಹರಿಭಕ್ತಿಯಲ್ಲಿ ಮನನಿಲ್ಲಿಸೋ 8 ನಂಬಿದೆ ನಿನ್ನ ಪಾದಾಂಬುಜ ಯುಗಳ ಹೇ ರಂಭಜನಕ ಪೊರಿಯನ್ನನು9 ರಜತಾಚಲನಿವಾಸ ರಜನಿಚರ ವಿನಾಶ ಅಜನಸುತನೆ ದಿಗಂಬರ 10 ಸರ್ವಶ್ರೀ ವರದೇಶವಿಠಲನ ಸಖ ಮು - ಪ್ಪುರಹರ ಶ್ರೀ ಮಹಾದೇವ 11
--------------
ವರದೇಶವಿಠಲ
ಶರಣಜನೋದಧಿಚಂದ್ರಾ ಸಿರಿ ಯರಸ ದೇವ ದೇವ ಕರುಣಿ ಮುಕುಂದಾ ಪ ಹಾರದ ನಿಗದಿಯ ಬಿಟ್ಟು ಸೋತವನಾಗಿ ವ್ಯಾಸ ಭೀಷ್ಮನ ಗೆಲಿಸಿದೆ ಮುಕುಂದಾ 1 ಹಗಲೇ ಇರಳ ಮಾಡಿ ಸೈಂಧವನಸುವನು ತೆಗಿಸಿ ನರನ ವಾಸಿ ಕೊಂಡ್ಯೋ ಮುಕುಂದಾ 2 ಶರಧಿಯಂಜಿಸಿಕೊಂಡು ಪಕ್ಷಿಯ ಶಿಶುವಾಗಿ ಗರುಡನ ವಾಸಿಯ ಕೊಂಡ್ಯೊ ಮುಕುಂದಾ 3 ದಶಜನುಮವತಾಳಿ ಮುನಿಯ ಬೆದರಿಸ್ಯಂಬ ರಿಕ್ಷಣ ಫಲನಡಿಸಿದೆ ಮುಕುಂದಾ 4 ಗುರು ಮಹಿಪತಿ ಸ್ವಾಮಿ ಭಕ್ತ ವತ್ಸಲನೆಂಬ ಬಿರುದುವಾಳಿದರೆಂದು ಸಲಹೋ ಮುಕುಂದಾ 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಶರಣಾಗತರಕ್ಷಕ ಬೇಗದಿ ಬಂದು ಮನಮಂದಿರದಿ ನಿಲ್ಲೋ ಪ ಈ ಕರೆಕರೆ ಸಂಸಾರಶರಧಿಯೊಳು ನಿಂದೆ ಹರಿಯೆ ನಿಲ್ಲೊಂದರಘಳಿಗೆಯಾದರೂ ಮನದಿಅ.ಪ ತೋಯಜಾಂಬಕ ನಿನ್ನ ನಾನೆಂದಿಗೆ ಕಾಯದೊಳು ಕಾಂಬೆನೊ ಮಾಯಾರಮಣನೆ ನೀ ಮಾಯವ ಹರಿಸಯ್ಯ ಆಯಾಸಗೊಳಿಸದೆ ಕಾಯುವುದೀಗಲೆ 1 ನಾನಾಯೋನಿಗಳಲ್ಲಿ ನಾ ಬರಲಂಜೆನೋ ಶ್ವಾನಸೂಕರ ಜನ್ಮದಿ ನೀನಿಟ್ಟರಾದರು ಶ್ರೀನಿಧಿಯೆ ನಿನ್ನಯ ಸ್ಮ- ರಣೆ ಒಂದಿದ್ದರೆ ನಾ ಧನ್ಯ ಧನ್ಯನೋ2 ಲೋಕಾಲೋಕೋದ್ಧಾರನೆ ನಿನ್ನಾಜ್ಞೆಯಿಂ ನಾಕೇಶ ಮೊದಲಾದ ಪಿ- ನಾಕಿ ಪ್ರಮುಖರು ಅನೇಕ ಕಾರ್ಯವೆಸಗಿ ಶೋಕಪಡಿಸುವರಯ್ಯ 3 ದುರ್ಗಾಶ್ರೀರಮಣ ಎನ್ನ ಸಂಸೃತಿಯೆಲ್ಲ ದುರ್ಗಮವಾಗಿಹುದೊ ಸ್ವರ್ಗ ಅಪ- ವರ್ಗಪ್ರದನೆ ಎನ್ನಯ ಭವ- ದುರ್ಗಕಡಿದು ಸನ್ಮಾರ್ಗ ಕರುಣಿಸೊ 4 ಸ್ವಾಮಿತೀರ್ಥದಿವಾಸ ಶ್ರೀಜಗದೀಶ ಸ್ವಾಮಿ ಶ್ರೀ ವೆಂಕಟೇಶ ಪಾಮರನಾದೆನ್ನ ತಾಮಸ ಹರಿಸಿ ಹೃತ್ಕಮಲದಲಿ ನಿಲ್ಲೊ ಕಮಲಾಪತಿಯೆ ದೇವ 5
--------------
ಉರಗಾದ್ರಿವಾಸವಿಠಲದಾಸರು
ಶರಣಾಗು ಸಂಪೂರ್ಣ ಶರಣಾಗು ಜಿತಾರ್ಣ ಕರ ನೀಲವರ್ಣ ಪ ಅತಸೀ ಕುಸುಮಗಾತ್ರ ಅರವಿಂದ ನೇತ್ರ ಚಾರು ಚರಿತ್ರ ಧೃತ ಗೋವರ್ಧನ ಗೋತ್ರ ದಿವಿಜೇಂದ್ರ ಸ್ತೋತ್ರ ಶತಯಾಗಸುತಮಿತ್ರ ಸೌಪರ್ಣಯಾತ್ರ 1 ಸ್ಮರಕೋಟಿ ಲಾವಣ್ಯ ಪುರಜಿದ್ವರೇಣ್ಯ ಪುರುಹೂತಾದಿ ಶರಣ್ಯ ಪುರುಷಾಗ್ರಗಣ್ಯ ದುರಿತಾಪಹರೇಣ್ಯ ದಾನ ಸಾದ್ಗುಣ್ಯ ಪರಿಣತ ಲಾವಣ್ಯ ಪರಮಕಾರುಣ್ಯ 2 ಕಮಲರಮ್ಯವಿಲಾಸ ಕೌಸ್ತುಭೋದ್ಭಾಸ ಕಮನೀಯ ಸುವಿಭೂಪ ಕರಪೀತವಾಸ ಅಮಿತೇಂದು ರುಚಿಹಾಸ ಆದಿಶೇಷೋಲ್ಲಾಸ ಸುಮನಸಪುರವಾಸ ಪಾಹಿ ಲಕ್ಷ್ಮೀಶಾ 3
--------------
ಕವಿ ಲಕ್ಷ್ಮೀಶ
ಶರಣಾಗ್ರಣಿ ರಾಮ ಚರಣಾಂಬುಜ ಬಿಡೆ ನಳಿನ ಷಟ್ ಚರಣ ಬಿಡ ಬಲ್ಲದೆ ಪ ಹನುಮನ ಭಜನೆಂಬ ಘನವಾರಿ ಪೂರಿತ ಮನ ಸರೋವರ ಅಯನವಾಗಿಪ್ಪಾ ಜನಕಸುತೆ ಹಂಸಿ ಮನಸಾಪ ಹಾರಿ ದಿನಕರನ್ವಯದಿಂದ ವಿನುತವಾಗಿಪ್ಪ 1 ಅಮರರೋತ್ತಮರೆಂಬ ಭ್ರಮರರಾ ರವಗಳ ಸಮಯೋಚಿತ ಸಾಮಭಿ ಸೇವಿತ ವಿಮಲಾತಮದಿಂದ ಸಾಂದ್ರ ಶಮಲಾತಿ ದೂರ ಪಾದ 2 ಶಿಲೆಯ ಬಾಲೆಯ ಮಾಡಿ ಮಲವಳಿದು ಮುನಿ ಕುಲವಗೆಡಿಸಿ ಸತ್ಕುಲನೆನಿಸಿದೆ ಜಲಧಿಯೊಳಗೆ ಸೇತು ನಿಲಿಸಿ ಸಜ್ಜನರಿಗೆ ನೆಲೆ ವಾಸುದೇವವಿಠಲದೇವ ಪಾದಪದುಮ3
--------------
ವ್ಯಾಸತತ್ವಜ್ಞದಾಸರು
ಶರಣು ಶರಣು ಶ್ರೀ ದತ್ತಾತ್ರೇಯಾ ಶರಣು ಸಕಲಾ ಭುವನಾಶ್ರಯಾ ಶರಣೆಂಬೆ ಸಿಂಹಾಚಲ ನಿಲಯಾ ಸುರಜನ ರೇಯಾ ಸಲಹಯ್ಯಾ 1 ವನರುಹ ಸಂಭವ ತ್ರಿಲೋಚನ ಸನಕಾದಿ ಮುನಿ ವಂದಿತ ಚರಣ ಜನವನ ವಿಜನ ವ್ಯಾಪಕ ಘನ ಅನಸೂಯಾ ನಂದನ ಯೋಗೀಶಾ 2 ತತ್ವಯೋಗ ಸಿದ್ಧಿ ಬುದ್ಧಿ ದಾತಾರಾ ಸತ್ವ ಗುಣಾಲಂ ಕೃತ ಜ್ಞಾನ ಸಾಗರಾ ಸತ್ಯ ಸನಾತನೇ ಮುನಿ ದಿಗಂಬರಾ ಭಕ್ತ ಸಹಕಾರಾ ಅವಧೂತಾ 3 ಕಂದರ್ಪ ಕೋಟಿ ಸುಂದರಾಕಾರಾ ಹೊಂದಿದಾಭರಣಾನೇಕ ಶೃಂಗಾರಾ ಇಂದು ಸೂರ್ಯಾನಳ ತೇಜ ವ್ಯಾಪಾರಾ ಎಂದೆಂದೆಚ್ಚರಾ ಕಂಡು ನಿನ್ನಾ 4 ಮಂದಮತಿ ಬಾಲನ ಬಿನ್ನಾಹದ ಸ್ತುತಿ ಬಂದು ಅರ್ಪಿಸಿಕೋ ದುದಿ ಶ್ರೀಪತಿ ಇಂದು ಮೊರೆ ಹೊಕ್ಕೆನು ಅನನ್ಯಾಗತಿತಂದೇ ಮಹಿಪತಿ ಸುತ ಸ್ವಾಮೀ 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಶರಣು ಶ್ರೀ ಗುರುಲಿಂಗ ಶರಣು ಮುನಿಜನಸಂಗ ಶರಣುಭವ ಭಯ ವಿಭಂಗಾ ಪ ಪಾವನಿ ಜಾನ್ಹವಿಯ ತೀರದಲಿ ಕಾಶೀ | ಪುರ ವಿಶ್ವನಾಥನೆನಿಸೀ | ಹರುಷದಲಿ ನಿಂದು ಮತ್ತೊಂದು ರೂಪದಲಿ ತೆರಳಿ | ಧರೆಯ ದೇಶವ ನೋಡುತಾ ಬರುತಾ 1 ಮೊದಲೆ ತಾ ಕೃಷ್ಣ - ವೇಣಿ ಮ್ಯಾಲುತ್ತರವಾಹಿನಿ | ಸದಮಲ ಸುಖ ಕಾರಿಣೀ | ಇದ ನರಿತು ನಡಿ ಮಧ್ಯೆ - ಉತ್ತರೇಶ್ವರ ನೆನಸಿ | ಮುದದಿಂದ ಬಂದು ನಿಂದು || 2 ಸಖನ ದರುಶನ ನೆವದಿ ಬರುತಿರಲು ನಾ ನಿಮ್ಮ ಪ್ರಕಟದಲಿ ಕಂಡೆ ನಿಂದು | ಭಕುತಿಯಚ್ಚರ ನೀಡು ಗುರು ಮಹೀಪತಿ ಸ್ವಾಮಿ | ಸಕಲ ಸುರರಾಜ ಮಾದ್ಯ ಧನ್ಯಾ || 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಶರಧಿಸುತೆ ಮಾತೆ ಶರಧಿಸುತೆ ಮಾತೆ ಪ ಪೊರೆಯೇ ಜಗನ್ಮಾತೆ ಅ.ಪ ಸರಸಿಜಭವ ಶಿವ ಗರುಡ ಶೇಷ ಮುಖ ಸುಮನಸ ವಂದಿತ ಪದಯುಗಳೆ ಮನಸಿಜ ಜನಕನ ಕೋಮಲತಮ ಹೃತ್ಕಮಲದೊಳು ಸದಾ ನೆಲಸಿದ ಶುಭಗೆ 1 ವಂದಿಪೆ ನಿನ್ನಯ ಚರಣ ಕಮಲ ಎನಗೊಂದುಪಕಾರವ ದಯಮಾಡೆ ಒಂದನು ಅರಿಯದ ಭಕುತರೊಳಗೆ ಇವ ನೊಂದು ಎಂದು ಗೋವಿಂದನಿಗರುಹೆ 2 ತುಂಗಮಹಿಮನನು ಎಡಬಿಡದೆಲೆ ಅವ ನಿಂಗಿತವನು ನೀನರಿತಿರುವೆ ಮಂಗಳದೇವತೆ ಅದನರುಹಿ ಕೃಪಾ ಪಾಂಗವ ಬೀರೆ ಪ್ರಸನ್ನ ಸುವದನೇ 3
--------------
ವಿದ್ಯಾಪ್ರಸನ್ನತೀರ್ಥರು
ಶರ್ವೇಡ್ಯ ಮೋಹನ ವಿಠಲ ಪೊರೆ ಇವನ ಪ ಸರ್ವತ್ರ ಸರ್ವದಾ | ಸರ್ವ ಮಂಗಳನೇ ಅ.ಪ. ಸುಕೃತ | ರಾಶಿ ಫಲಿಸಿತೋ ಇವಗೆದಾಸ ದೀಕ್ಷೆಯಲಿ ಮನ | ಲೇಸುಗೈದಿಹನೋ |ವಾಸವಾದೀ ವಂದ್ಯ | ಭಾಸುರಾಂಗನೆ ದೇವದೋಷಾಗಳನಳಿದು ಸಂ | ತೋಷವನೆ ಪಡಿಸೋ1 ಹರಿದಾಸ ರೊಲಿದಿವಗೆ | ದರುಶನವನಿತ್ತಿಹರುಗುರು ರಘೋತ್ತಮರಂತೆ | ಬೃಂದಾವನಸ್ಥಾನರಹರಿಯು ಸ್ವಪ್ನದಲಿ | ಹರಿಹಯಾಸ್ಯವ ತೆರದಿದರುಶನಕೆ ಕಾರಣವು | ಪರಮ ಪ್ರಿಯರ್ದಯವೂ 2 ಅದ್ವೈತ ತ್ರಯಜ್ಞಾನ | ಸಿದ್ಧಿಸುತ ಸಂಸಾರಅಬ್ಧಿಯನೆ ಉತ್ತರಿಸೊ | ಮಧ್ವಾಂತರಾತ್ಮಾ 3 ಕಿಂಕಿಣಿಯ ಶೋಭಿತನೆ | ಶಂಕರೇಡ್ಯನೆ ನಿನ್ನಅಂಕಿತವ ನಿತ್ತಿಹೆನೊ | ಲೆಂಕತನದವಗೇವೆಂಕಟ ಕೃಷ್ಣ ಹೃತ್ | ಪಂಕಜದಿ ತವರೂಪಕಿಂಕರಗೆ ತೋರೆಂದು | ಶಂಕಿಸದೆ ಬೇಡ್ವೇ 4 ಸರ್ವಜ್ಞ ಸರ್ವೇಶ | ದುರ್ವಿಭಾವ್ಯನೆ ಹರಿಯೆದರ್ವಿಜೀವನ ಕಾವ | ಹವಣೆ ನಿನದಲ್ಲೇ |ಪರ್ವ ಪರ್ವದಿ ಇವಗೆ | ನಿರ್ವಿಘ್ನ ನೀಡಯ್ಯಗುರ್ವಂತರಾತ್ಮ ಗುರು | ಗೋವಿಂದ ವಿಠಲಾ 5
--------------
ಗುರುಗೋವಿಂದವಿಠಲರು