ಒಟ್ಟು 6899 ಕಡೆಗಳಲ್ಲಿ , 128 ದಾಸರು , 4614 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ದೇವ ನೀನಹುದೋ ದೇವರದೇವ ನೀನಹುದೋ ಪ ದೇವ ರಿಪುವನದಾವ ದುರಿತಾಖ್ಯನಾವ ನಮಿತರ ಕಾವ ಕರುಣಸಂಜೀವ ಜಿತಪೂರ್ಣಕಾಮ ಅ.ಪ ದೇವಕಿಯಲ್ಲವತರಿಸಿ ಗೋಕುಲವನ್ನು ಪಾವನವನ್ನು ಮಾಡಿ ಮಡುಹಿ ಮಾವನ ಮಧು- ರಾವನಿಯನುಗ್ರಸೇನಗಿತ್ತು ದೈತ್ಯಾಳಿಯ ಸವರಿ ಜೀವ ಸಖನಾಗಿ ಪಾಂಡವರಿಗೆ, ಪಾರ್ಥ ಸೇವೆಯಲಿ ಸಂದು ಕೀಲಿಸಿ ಕೌರವರನ್ನು ಭೂವರನ ಹಯಮೇಧಕೊಲಿದು ಬಂದಾ 1 ಧರ್ಮರಾಜನ ಯಜ್ಞತುರಗ ರಕ್ಷೆಗೆ ಕೃತ- ವರ್ಮಜರು ಕೂಡಿ ನಡಸಿ ನೀಲಾಂಕನ ಮರ್ಮವರಿತು ಸೋಲಿಸಿ ಹಂಸಧ್ವಜರನ್ನು ಮಾಮಳಿದಡರಿ ಕರ್ಮವಶದಿಂದ ಬಭ್ರುವಾಹನನ ಕೈಯ ದುರ್ಮರಣವಾದ ವಿಜಯ ಕರ್ಣರನು ನಿತ್ಯ ನಿರ್ಮಳಿಕನಹುದೊ 2 ಮುಂತೆ ನಡೆದರ್ಜುನಿಯ ಗೂಡಿ ತಾಮ್ರಧ್ವ ಜಂ ತುಡುಕಿ ಬರೆ ದ್ವಿಜನಾಗಿ ಶಿಖಿ ದಂತಿಪುರಕೆ ಬಂದರಸನ ಹಯಮೇಧ- ಮಂ ಪಾಲಿಸಿ ತ್ರಿಜಗವನು ಪಾಂಡವರಿ- ಗಿತ್ತೊಲಿದು ಸುರಪುರವ ಪೊರೆವ ಲಕ್ಷ್ಮೀಕಾಂತ ನೀನಹುದೋ 3
--------------
ಕವಿ ಲಕ್ಷ್ಮೀಶ
ದೇವ ನೀನುಪಕಾರ ಅಪಾರ ಮಾಡಿದೆ ಕಾವ ಕರುಣಾ ಸ್ವಭಾವ ಕೇಳು ಪೇಳುವೆ ಪ ನವಯುವತಿ ಶಿಲೆ ಕೊರಳಿಗೆ ಕಟ್ಟಿಕೊಂಡು ಭವ ಸಾಗರದೊಳು ಮುಳುಗಿ ಪೋಗುವ ನಾ ಅವಸರಕೊದಗಿ ಪಿಡಿದು ದಡ ಸೇರಿಸಿ ದವನಾಗಿ ಎಚ್ಚರಿಕೆ ತಂದಿತ್ತೆ ದಯಾಳೊ 1 ಭಾರ ತಾಳದು ಎಂದು ಸೂತ್ರವೂ ಶಿಖಿಯೊ ನಿ ವಾರಿಸಿ ತನುವಿಗೆ ಲಘುವು ಮಾಡಿದೇಯೆ ಭಾರಮಯತಾ ರಜ್ಜು ಮನಕೆ ಸುತ್ತಿದೆ ಆಶಾಂ- ಕುರ ಕೇಶಗಳು ಬೆಳದಿವೆ ಪರಿಹರಿಸು 2 ಲಕ್ಷ್ಯವಿಲ್ಲದೆ ಅನ್ನ ಮೊದಲಾಗಿ ಕೊಡುವಂಗೆ ಶಿಕ್ಷಿಸಿ ಗರ್ವವು ಕಳೆದು ಈಗ ಭಿಕ್ಷುಕನ ಮಾಡಿದೆ ನಿನ್ನದೆ ಬೇಡುವೆ ಲಕ್ಷ್ಮೀಪತಿಯೆ ಅಂತರಂಗದ ಗೃಹಸ್ಥ 3 ಏಳು ಮನೆಗಳನ್ನು ಕೇಳೋದು ಯತಿಧರ್ಮ ಏಳಲಾರಿನೊ ವೃದ್ಧ ಕೇಳಲಾರೆ ಕೇಳುವೆ ನಿನ್ನನೇ ಏಳು ಭಿಕ್ಷವ ನೀಡು ಬಾಳುವೆ ಬಹುಕಾಲ ನಿನ್ನ ಕೊಂಡಾಡುತ 4 ಶ್ರೋತ್ರಕ್ಕೆ ನಿನ್ನ ಕಥೆ ನಾಸಕೆ ನಿನ್ನ ಗಂಧ ನೇತ್ರಕ್ಕೆ ನಿನ್ನ ರೂಪ ರಸನಿಗೆ ನಾಮಾಮೃತ ಗಾತ್ರಕ್ಕೆ ನಿನ್ನ ಪಾದಸ್ಪರುಷ ಮನೋಬುದ್ಧಿ ಮಾತ್ರಕ್ಕೆ ಗುಣಕರ್ಮ ಕೊಡು ವಾಸುದೇವವಿಠಲ5
--------------
ವ್ಯಾಸತತ್ವಜ್ಞದಾಸರು
ದೇವ ಬೆಳಗಾಯಿತೋ ಎನ್ನಯ ಸೇವಾ ಪ ಸ್ವೀಕರಿಸೋ ಮಹಾನುಭಾವ ದೇವ ಅ.ಪ ಮಧುರ ಗಾನವೇ ಗಂಗಾಸ್ನಾನ ಹೃದಯ ಶುದ್ಧಿಯೇ ಬದರಿಸ್ನಾನ ಬದಿಯಲಿರುವ ಭಕುತರ ಸಹವಾಸವೇ ನದಿನದಗಳವಗಾಹನ ಸ್ನಾನವೋ 1 ಹಾಲಿಗೆ ಕರದಲಿ ಥಾಲಿಯ ಪಿಡಿದು ಕೋಲಾಹಲ ಕಲಭಾಷಣ ಮಾಡುವ ಬಾಲರ ನಗುಮೊಗ ನೋಡಲು ಕೃಷ್ಣನ ಲೀಲೆಯ ಸಂದರ್ಶನಾನಂದವೋ 2 ಮಲ್ಲಿಗೆ ಸಂಪಿಗೆ ಜಾಜಿ ಸೇವಂತಿಗೆ ಕುಸುಮ ರಾಶಿಯ ಚಿಲ್ಲೆ ಪಲ್ಲೆಗಳ ಬಹುರೂಪದಿ ಶ್ರೀ ನಲ್ಲ ನಿನಗೆ ಸಲ್ಲಿಸುವುದೇ ಭಾಗ್ಯವೋ 3 ತಾತನೆಂದು ಮೊರೆಯಿಡುವರು ನೀ ಅನ್ನ ದಾತನೆಂದು ಮೊರೆಯುತಿಹರೋ ತಾತನ ಕಿವಿಗೀ ಮಾತನು ತಿಳಿಸಲು ದೂತನು ನಾ ಕಾದಿಹೆನೊ ಪ್ರಸನ್ನನೇ 4
--------------
ವಿದ್ಯಾಪ್ರಸನ್ನತೀರ್ಥರು
ದೇವ ಹನುಮಶೆಟ್ಟ | ರಾಯ ಜಗಜಟ್ಟಿ ಪರಮೇಷ್ಟಿ ಪ ಪಾವನಚರಿತ ಸಂಜೀವನ ಗಿರಿಧರ ಪಾವಮಾನಿ ಕರುಣಾವಲೋಕನದಿ ನೀ ನಲಿಯುತಲಿ ಸದಾವಕಾಲ ತವ ತಾವರೆ ಪದಯುಗ ಸೇವೆಯ ಕರುಣಿಸೊ ಅ.ಪ ವಾನರ ಕುಲನಾಯಕ | ಜಾನಕಿಶೋಕ ನಿವಾರಕ ಕಾನನ ತೃಣಪಾವಕ | ಹೀನ ಕೌರÀವ ನಾಶಕ | ಸನ್ಮಾನಿ ತಿಲಕ ಆನಂದತೀರ್ಥನಾಮಕ | ಕ್ಷೋಣಿಯೊಳಗೆ ಎಣೆ | ಗಾಣಿ ಪಿಡಿದು ಪೊರೆ ಗೀರ್ವಾಣ ವಿನುತ ಜಗತ್ಪ್ರಾಣ ಕಲ್ಯಾಣ ಮೂರುತಿ 1 ಮರುತನಂದನ ಹನುಮ | ಪುರಹರರೋಮ ಪರಮಪುರುಷ ಶ್ರೀ ಭೀಮಾ ಕರುಣಸಾಗರ ಜಿತಕಾಮ | ಸದ್ಗುಣ ಭೌಮ ಪರವಾದಿ ಮತವ ನಿರ್ನಾಮ ಗರಿಸುತ ಪಾಲಕ ಜರಿಜ ವಿನಾಶಕ || ದುರಿತ ವಿಮೋಚಕ ಸುರತರು ಭಾರತಿವರ ಮರಿಯದೆ ಪಾಲಿಸೊ ನಿರುತ ಮಮ ಚರಿತ 2 ಧಿಟ್ಟ ಶಾಮಸುಂದರ ವಿಠಲ ಕುವರ ದುಷ್ಟರಾವಣ ಮದಹರ ಜಿಷ್ಣುಪೂರ್ವಜ ವೃಕೋದರ | ರಣರಂಗಶೂರ ಶಿಷ್ಟ ಜನರುದ್ಧಾರ | ನಿಷ್ಟೆಯಿಂದ ಮನಮುಟ್ಟಿ ನಿನ್ನಪದ ಥಟ್ಟನೆ ಪಾಡುವ ಶ್ರೇಷ್ಠ ಸುಜನರೋಳ್ | ಇಟ್ಟು ಸಲಹೊ ಸದಾ ಸೃಷ್ಟಿಮಂಡಲದಿ | ಪುಟ್ಟಗ್ರಾಮ ಬಲ್ಲಟಿಗಿವಾಸ 3
--------------
ಶಾಮಸುಂದರ ವಿಠಲ
ದೇವಗಂಗೆಯು ಹರಿಯುತಿರಲು ತೀರದಲ್ಲಿ ನಾ ಬಾವಿಯನು ತೋಡುತಲಿ ಬಲು ಬಳಲಿದೆ ಪ ಗೋವು ಕರೆಯುವ ಕ್ಷೀರ ಕೊಡಕೊಡದಿ ತುಂಬಿರಲು ಬೇವಿನೆಣ್ಣೆಯ ಬಯಸಿ ಬಳಲಿ ಬೆಂದೆ ಅ.ಪ ಅರಸುತನದಲಿ ಆಳುತಿರುವ ಸ್ಥಾನವನು ನಾ ಮರೆತು ಕಡು ಹೇಡಿಯಂದದಿ ನಡೆದೆನೊ ದುರಿತರಾಶಿಗಳನ್ನು ತರಿವ ಮಂತ್ರಗಳರಿತು ಕುರುಬ ಹೊದ್ದಿರುವ ಕಂಬಳಿ ಬಯಸಿದೆ 1 ವೇದಾಂತ ಸಾಮ್ರಾಜ್ಯದಧಿಕಾರದಲಿ ಕುಳಿತು ಕಾದ ಮರುಭೂಮಿ ರಾಜ್ಯವ ಬಯಸಿದೆ ಆದರದಿ ಕರೆದು ಬಡಿಸುವರ ಭೋಜನ ತೊರೆದು ಮೂದಲಿಸುವರನು ಬೇಡಿದೆನನ್ನವ 2 ನೀಗಿ ಪುಣ್ಯವು ನಿನ್ನ ದಯವು ತಪ್ಪಿದ ಮೇಲೆ ಕೈಗೊಂಬೆ ಕರಡಿಯಾಗುವುದು ಕ್ಷಣದಿ ರಾಗಗಳ ಕಳೆದು ಮನವಚನ ಕಾಯಗಳನ್ನು ಬೇಗ ನಿನ್ನಡಿಗಳಿಗೆ ಸೆಳೆಯಲೋ ಪ್ರಸನ್ನ 3
--------------
ವಿದ್ಯಾಪ್ರಸನ್ನತೀರ್ಥರು
ದೇವತಾ ಸ್ತುತಿ ಕಂತುಪಿತನ ಸತಿಯಳೆ ನೀ ಸಂತೈಸನುದಿನಾ ಪ ಸ್ತುತಿಸುವಳೆ ಅ.ಪ. ನಾಶರಹಿತ ಶ್ರೀ ಹನುಮೇಶ ವಿಠಲನನುದಿನಾ ಸೋಸಿಲಿ ನೂತನ ಗುಣಗಳ ಬೇಸರಿಯದೆ ಸ್ತುತಿಸಿದ ಸಂ- ತೋಷ ಪಡುವ ವರಲಕುಮಿಯೇ 1
--------------
ಹನುಮೇಶವಿಠಲ
ದೇವದೇವತಾಸ್ತುತಿ ಅಜಸುರಸನ್ನುತ ಸುಜನವಂದಿತ ಹರೇ ಭುಜಗ ಭೂಷಣ ಪ್ರಿಯ ಪ ಅತಿಶಯ ಕಾಮದಿ ಸತಿಯನಪಹರಿಸಿದ ಪತಿತ ರಾವಣನನು ಖತಿಯಲಿ ಕೊಂದೆ ನೀಂ 1 ಪರಿ ಪರಿಸಲು ವಾಲಿಯ ತರಿದೆಯೊ ಶರದಿಂದ 2 ದಶರಥನುದರದಿ ದಶರಥನಾಗಿಯು ಪಶುಪತಿ ಮಿತ್ರನೆ ಜನಿಸಿದೆ ಕರುಣದಿ 3 ಮಾನವ ಜಿತಾಸುರ ಮಾನವ ರೂಪನೆ ಪೊರೆ 4 ಧೇನುನಗರಪತಿ ದಾನವಖಂಡನ ಧ್ಯಾನ ಸ್ವರೂಪನೆ ಜ್ಞಾನವ ಪಾಲಿಸು 5
--------------
ಬೇಟೆರಾಯ ದೀಕ್ಷಿತರು
ದೇವದೇವತೆಗಳ ಸ್ತುತಿ ವೀರನ ನೋಡಿರೈ ನರಮೃಗಾಕಾರನ ಪಾಡಿರೈ ಪ ಕಾರ್ಪರ ಋಷಿ ತಪಕೊಲಿದು ಅಶ್ವತ್ಥದಿ ಮೆರೆವಾ ಭಕುತರ ಪೊರೆವಾ ಅ.ಪ ದುರಿತ ತಿಮಿರಕೆ ಸವಿತ ವ್ರಾತ ಸೇವಿತ ತ್ವರಿತ ಮಧ್ಬಂಧು ಪೊರೆಯೊನೀನೆಂದು ಪ್ರಾರ್ಥಿಸುವರಿಗಭೀಷ್ಟಿಯಗರಿಯಲು ದೇವ ತರುಸ್ವಭಾವ 1 ಉಗ್ರನಾದರು ಭಕುತಾಗ್ರಣಿಗಳಿಗೆ ಅನುಗ್ರ ಒಲಿವನು ಶೀಘ್ರ ವಾಗ್ಧೇವಿಯರ ಸನಾಜ್ಞದಿ ನಮಿಸಿ ಪ್ರಹ್ಲಾದ ಸ್ತುತಿಸಲು ಒಲಿದ ಉಗ್ರವದನ ಶಾಲಿಗ್ರಾಮಗಳ ರೂಪದಲಿ ವೃ- ಭಾರ್ಗವಿ ಪ್ರಕಟನಾಗಿಹನ 2 ತೋರಿಸುವದಕೆ ಅಸುರನ ಮಥಿಸಿ ನೆಲಸಿಕರುಣದಿ ದಿವಿಜರೊಡೆಯನ3 ಪೋಪುದು ವೃಜಿನ ತಿಳಿವದು ಮುನ್ನ ಭಾನು ಕರ್ಕಾಟಸ್ಥಾನದಿ ಬರುವ ಕಾಲದಲಿ ತೀರ್ಥಗಳಲ್ಲಿ ಹೃದಯದಿ ಪೊಳಿವ 4 ತರುವರ ಸಂಸ್ಥಾ ಚರಿತ ತ್ರಿಗುಣಾತೀತ ಪದಯುಗಲ ಬಿಡದನುಗಾಲ ಸಾರಿ ಭಜಿಪರಿಗಪಾರ ಸೌಖ್ಯಗಳ ಗರಿವ ವಿಘ್ನವ ತರಿವ5
--------------
ಕಾರ್ಪರ ನರಹರಿದಾಸರು
ದೇವದೇವನಾ ಭಜಿಸು ಜಾನಕಿ ಪ್ರೇಮನಾ ಬಿಡದೆ ಇನ್ನು ಪ ಇಂದಿರೇಶನಾ ಸಕಲ ವಿಶ್ವನಾಥನಾ ಸುಂದರ ರೂಪನ ಸುಗುಣ ಸುಜನವಂದ್ಯನಾ ಸಿಂಧು ಶಯನನಾ ಚೆಲುವ ಶ್ರೀನಿವಾಸನಾ ಮಂದರಾದ್ರಿಯನೆ ಪೊತ್ತ ಮಹಿಮಾನಂದನ 1 ವಾರಿಜನಾಬನಾ ಘನ ವಾಸುಕಿಶಯನನಾ ನೀರಜ ನಯನನಾ ಕೃಷ್ಣಾ ನಿಗಮಗೋಚರನಾ ನವನೀತ ಚೋರನಾ ಪಾರಮಾರ್ಥಿಕ ಜ್ಞಾನದಲ್ಲಿ ಪ್ರಬಲವಾಗಿ ಮನವು ನಿಲ್ಲಿಸಿ2 ಪನ್ನಗ ಭೂಷಣನಾದ ಪಾರ್ವತೀಶನಾ ಮನ್ನಿಸಿ ಪೊರೆದನ ಮಹಾಮಹಿಮೆಯುಳ್ಳನಾ ಚಿನ್ಮಯ ರೂಪನಾ ಪರಮ ಚಿದ್ವಿಲಾಸನಾ ಹೆನ್ನ ತೀರನಿಲಯ ಸುಪ್ರಸನ್ನ 'ಹೆನ್ನ ವಿಠ್ಠಲ’ ನಾದ 3
--------------
ಹೆನ್ನೆರಂಗದಾಸರು
ದೇವಾ ಬಾರಯ್ಯಾ ವೈಭವದಿ ರಥವನೇರಿ ಸೇವಿಸುವೆನು ಮಧ್ಭಾವದಿ ನೆಲಸೆಂದು ಪಾವನ ಮಣಿಪುರ ಠಾವಿನೊಳಿಹ ಭೂದೇವ ವರ್ಯ ಸಂಶೇವಿತ ಕೇಶವ ಪ ದೇವಗಂಗೆಯಪೆತ್ತ ಪಾವನಗಾತ್ರಧ್ರುವ ಭೂವರೋÀಪಾಸಿತನಾಗಿ ಈ ವಸುಧಿಗೆ ಬಂದು ಪಾವಮಾನ ಶಾಸ್ತ್ರದಿ ಕೋವಿದಯತಿ ವರ ಶ್ರೀ ವಿದ್ಯಾನಿಧಿ ತೀರ್ಥ ಸೇವಿತ ಸಂಸ್ಥಾಪಿತ ಸೇವಕ ಜನ ಸಂಭಾವಿತ ಕಾಮಿತ ವೀವ ಕಾವ ಸದಶಾವತಾರ ನಮೋ ಶ್ರಿವಿರಂಚಿಮುಖ ದೇವನ ಮಿತ ಕಂಚೀವರದನೆ ಪೊರೆ ಶ್ರೀ ವರಕೇಶವ 1 ಕಡು ಶೋಭಿಸುವ ಬಿಳಿಗೊಡೆ ಚಾಮರಾದಿಗಳ ಪಿಡಿದು ಶೇವಿಪ ಜನರೆಡಬಲದಿ ಬರೆ ಸುರರು ಪಂಥsÀವಿಡಿದು ವೇದಪಠಣ ಬಿಡದೆ ಮಾಡುತ ಬರೆ ನುಡಿವ ವಾದ್ಯಗಳಿಂದ ಸಡಗರದಲಿ ದ್ವಿಜಮಡದಿಯರಾರುತಿ ಪಿಡಿದು ಬೆಳಗುತಿರೆ ಕಡು ವೈಭವದಲಿ ಅಡಿಗೆರಗುವೆ ಪಾಲ್ಗಡಲ ಶಯನ ಮೂ- ರಡಿ ರೂಪನೆ ಜಗದೊಡೆಯ ಕೇಶವ 2 ನಂದ ತೀರ್ಥರ ಮತ ಸಿಂಧುವಿಗೆ ಪೂರ್ಣ ಚಂದ್ರರೆನಿಪಯತೀಂದ್ರ ಸತ್ಯ ಪ್ರಮೋದ ರಿಂದ ಪೂಜಿತ ಪದ ದ್ವಂದ್ವ ಮಧ್ಯದೊಳಿಹ ಮಂದಾಕಿನಿಗೆ ಪಿತನೆಂದು ತೋರಿಸಿದಂಥ ಇಂದಿರೆಯರಸನೆ ಮಂದರಧರ ಗೋ ವಿಂದ ಪಾಹಿ ಮುಕುಂದನೆ ಬಾಬಾ- ರೆಂದು ಕರೆವ ದ್ವಿಜ ವೃಂದಮಧ್ಯದಲಿ ಶ್ಯಂದನ ವೇರಿದ ಸುಂದರ ಕೇಶವ 3 ಅಂಬುಜನಾಭನೆ ನಿತಂಬದಿ ಪೊಳೆವ ಪೀ- ತಾಂಬರ ಧೃತ ಶಾತಕುಂಭ ಮಕುಟವದ- ನಾಂಬೋಜವನು ತೋರೋಕುಂಭೀನಸ ಪರಿಯಂಕ ಶಂಭ್ವಾದಿನಮಿತ ನೀಲಾಂಬುಧ ನಿಭಗಾತ್ರ ಕಂಬುಚಕ್ರಸುತ- ದಾಂಬುಜಧರ ಬಲು ಸಂಭ್ರಮದಲಿ ಮುನಿಕುಂಭಜ ಪೂಜಿತ ಕದಂಬ ದುರಿತ ಕಾದಂಬನಿ ಪವನ ಕೃ ಪಾಂಬುಧೆ ಕೇಶವ 4 ಗರುಡ ಮಾರುತರಿಂದ ಪರಶೇವಿತನೆ ಬಾರೊ ಶರಣು ಜನರ ಸುರತರುವೆ ಚನ್ನಕೇಶವ ಧರೆಯೊಳಧಿಕ ಮಣಿಪುರ ಪಂಡಿತಾಗ್ರಣಿ ಸನ್ನುತ ಸರಸಿಜಾಸನ ಪಿತ ಸಿರಿದೇವಿಯು ಈರೆರಡು ರೂಪದಲಿ ಕರದೊಳಗಾರುತಿ ವರಚಾಮರಗಳ ಧರಿಸಿ ಸಿರಿ ' ಕಾರ್ಪರ ನರಹರಿ ' ರೂಪನೆ ಮಾಂ ಪೊರೆವುದು ಕೇಶವ 5
--------------
ಕಾರ್ಪರ ನರಹರಿದಾಸರು
ದೇವಾದಿ ದೇವ ನಮೋ ಶ್ರೀ ಸತ್ಯದೇವ ಪ ದೇವಾದಿ ದೇವ ಹರಿ ಗೋವಿಂದ ಮುಕುಂದ ಭಾವಜನಕ ಸದ್ಭಾವುಕ ಜನಪ್ರಿಯ ಅ.ಪ. ಶ್ರೀಶಾ ಶಶಿಕೋಟಿ ಸಂಕಾಶ ಸುಶೋಭಿತ ದರಹಾಸ ಸುಜನ ಪರಿಪೋಷ ಸನ್ನುತ ಸರ್ವೇಶ ಈಶಾ ಈ ಸಮಸ್ತ ಜಗದೀಶನೆಂದು ನಿನ್ನ ನಾ ಸ್ತುತಿಸುವೆ ಮನದಾಸೆಯ ಸಲ್ಲಿಸೊ ವಾಸವಾದಿ ಸುರಮಹಿಮ ಪ ರೇಶ ಪೂರ್ಣಗುಣ ದಾಸಜನಾವನ ಕ್ಲೇಶವ ಕಳೆದಿನ್ನು ನೀ ಸರ್ವದ ಎನ್ನ ಪೋಷಿಸು ಕರಿಗಿರಿ ವಾಸ ಶ್ರೀ ನರಹರಿ 1
--------------
ವರಾವಾಣಿರಾಮರಾಯದಾಸರು
ದೇವಾದಿ ದೇವ ನೀನವಧರಿಸು ಭಿನ್ನಪವ ಪ ಈ ವಿವಿಧ ಸುರರೊಳಗೆ ಸರಿಯಲ್ಲ ನಿನಗೆ ಅ.ಪ. ಸರಸಿಜಾಸನ ಶಂಭು ಮೊದಲಾದ ಸುರರೆಲ್ಲಾ ಪರತಂತ್ರರವರಲಿ ಕೊರತೆಯುಂಟು ನಿರ್ದೋಷ ನಿರವಧಿಕ ಕಲ್ಯಾಣಗುಣಪೂರ್ಣ ನಿರ್ದುಃಖ ನಿರತಿಶಯ ನಿರುಪಮಾನಂದಾತ್ಮ ಸರ್ವಜ್ಞ ಸರ್ವೇಶ ಸರ್ವತಂತ್ರ ಸ್ವತಂತ್ರ ಸರ್ವವಸ್ತುಗಳಲಿ ಸರ್ವದಾ ಪರಿಪೂರ್ಣ ಪರಿಪೂರ್ಣಕಾಮ ನಿನ್ನುರದಲೆನಗೆ ಸ್ಥಿರವಾಸಕೆಡೆಯ ನೀ ಕರುಣದಿಂದಿತ್ತು ಹರುಷಪಡಿಸುವುದೆನ್ನ ಶರಧಿಮಂದಿರನೆ ಗಿರಿಯ ಧರಿಸಿದೆ ಕರಿಗಿರೀಶನೆ
--------------
ವರಾವಾಣಿರಾಮರಾಯದಾಸರು
ದೇವಾದಿ ದೇವಗೆಭಕ್ತ ಸಂಜೀವಗೆಶ್ರೀ ವಿಘ್ನೇಶ್ವರಗೆ ಜಯವೆಂದುಜಯವೆಂದು ಪಾರ್ವತೀಪುತ್ರಗೆಪಾವನಗಾತ್ರಗೆಫಣಿಯಜ್ಞ ಸೂತ್ರಗೆಹೂವಿನಾರತಿಯ ಬೆಳಗಿರೆ 1 ಸಿಂಧುರಗಮನೆಯರುಕುಂದಾಭರದನೆಯರುಇಂದುಶೇಖರಗೆ ಜಯವೆಂದುಜಯವೆಂದು ಇಂದ್ರಾದಿವಂದ್ಯಗೆನಿರ್ಜಿತಚಂದ್ರಗೆ ಸದ್ಗುಣಸಾಂದ್ರಗೆಕುಂದಣದಾರತಿಯ ಬೆಳಗಿರೆ 2 ವಾರಣದವನೆಗೆಧೀರಹೇರಂಬಗೆರಾವಣಾಸುರನ ಜಯಿಸಿದಜಯಿಸಿದಶರಣ ಮಂದಾರಗೆಶರಧಿ ಗಂಭೀರಗೆಕೌಸ್ತುಭಹಾರಗೆಮೇರುವೆಯಾರತಿಯ ಬೆಳಗಿರೆ 3 ಸುರರು ಹೂಮಳೆಗರೆಯೆತರುಣಿಯರ್ಪಾಡಲುಸುರದುಂದುಭಿ ಮೊಳಗೆ ಜಯವೆಂದುಜಯವೆಂದುಸಿಂಧುರವರ್ನಗೆಶೂರ್ಪಸುಕರ್ನಗೆಸರ್ವತ್ರಪೂರ್ಣಗೆಕುರುಜಿನಾರತಿಯ ಬೆಳಗಿರೆ 4 ಪಂಕಜಾಂಬಿಕೆಯರುಭೋಂಕನೆ ಪಾಡಲುಶಂಕರನ ಪುತ್ರ ಜಯವೆಂದುಪಾವನವೇಷಗೆವರದ ಗಣೇಶಗೆಕುಂಕುಮದಾರತಿಯ ಬೆಳಗಿರೆ 5 ರಮ್ಯವಾದಲತಿಗೆಯರಸವ ಪಾದಕೆ ತೊಡೆದುಕಮ್ಮೆಣ್ಣೆಯನು ಕಂಠಕನುಲೇಪಿಸಿಸುಮ್ಮಾನದಿಂದ ಪಟವಾಸ ಚೂರ್ಣವತಳಿದುನಿಮ್ಮ ಪೂಜಿಸುವೆನು ಗೌರಿದೇವಿ 6 ವರಧೂಪದೀಪ ಪರಿಪರಿಯ ನೈವೇದ್ಯ ಭಾ-ಸುರ ಸುತಾಂಬೂಲ ಸೀಗುರಿದರ್ಪಣನಿರುಪಮ ಛತ್ರ ಚಮರಾದಿ ಸೇವೆಯನು ಸ್ವೀ-ಕರಿಸಿ ಪಾಲಿಸೆ ಎನ್ನ ಗೌರಿ ದೇವಿ ಜಯ 7 ಇಂತು ಪರಿಪರಿಯ ರಾಜೋಪಚಾರಗಳಿಂದಸಂತತವು ನಿಮ್ಮ ಪಾದವ ಪೂಜಿಸಿನಿಂತು ಕರವನೆ ಮುಗಿದು ಧ್ಯಾನಿಸುತ ನಲಿನಲಿದುಸಂತಸದಿ ನಿಮ್ಮ ಸ್ತುತಿಸುವೆನು ಗೌರಿ ಜಯ 8 ಮತ್ತೇಭಗಮನೆಗೆ ಮಾಹೇಂದ್ರಸನ್ನುತೆಗೆಅತ್ಯಂತ ಪರಮ ಪಾವನ ಚರಿತೆಗೆನಿತ್ಯ ಸೇವೆಯನು ಮಾಡುವರ ರಕ್ಷಿಸುವಂಥಪ್ರತ್ಯಕ್ಷಮೂರ್ತಿ ಶ್ರೀಗೌರಿ ನಿಮಗೆ ಜಯ9 ಕಲಕೀರವಾಣಿಗೆ ಕಾಳಾಹಿವೇಣಿಗೆಕಲಧೌತಕಮಲ ಶೋಭಿತಪಾಣಿಗೆನಳಿನದಳನೇತ್ರೆಗೆ ನಾರಾಯಣೆಗೆ ನಮ್ಮ-ನೊಲಿದು ರಕ್ಷಿಸುವಂಥಾ ಶ್ರೀಗೌರಿಗೆ ಜಯ 10 ಕುಂಭಸಂಭವನುತೆಗೆ ಜಂಭಾರಿಪೂಜಿತೆಗೆರಂಭಾಸುನರ್ತನಪ್ರಿಯೆಗೆ ಶಿವೆಗೆರಂಭೋರುಯುಗಳೆಗೆ ಬಿಂಬಾಧರೆಗೆ ನಮ್ಮಬೆಂಬಿಡದೆ ರಕ್ಷಿಸುವ ಗಿರಿಜಾತೆಗೆ ಜಯ 11 ಮುತ್ತೈದೆತನಗಳನು ನಿತ್ಯಸಂಪದಗಳನುಉತ್ತಮಾಂಬರ ಛತ್ರಚಾರಮವನುಅತ್ಯಂತ ಪ್ರೀತಿಯಿಂದಿತ್ತು ರಕ್ಷಿಸಿ ಭಕ್ತವತ್ಸಲೆ ಶ್ರೀ ಗೌರಿದೇವಿ ತಾಯೆ12 ಎಂದೆಂದು ಈ ಮನೆಗೆ ಕುಂದದೈಶ್ವರ್ಯವನುಚಂದವಾಗಿಹ ಪುತ್ರ ಪೌತ್ರರನ್ನುಸಾಂದ್ರಕೃಪೆಯಿಂದಿತ್ತು ಸಲಹೆ ಕೆಳದಿಯ ಪುರದಿನಿಂದ ಶ್ರೀ ಪಾರ್ವತಾದೇವಿ ತಾಯೆ ಜಯ 13
--------------
ಕೆಳದಿ ವೆಂಕಣ್ಣ ಕವಿ
ದೇವಾಧಿ ದೇವನೀತ ಜೀವ ಪ್ರಾಣನಾಥ ಕಾವ ಕರುಣನೀತ ಹಂಸನಾಥ 1 ದೇಶಿಕರ ದೇವ ಭಾಸಿ ಪಾಲಿಸುವ ವಾಸುದೇವ 2 ಸ್ಮರಿಸುವರ ಜೀವ ಹರಿ ಪರಂ ದೈವ ಪರಮ ಭಕ್ತರಿಗೀವ ಹರುಷವ 3 ಸಾಧು ಹೃದಯವಾಸ ಸದಮಲಾನಂದ ಘೋಷ ಸದೋದಿತ ಪ್ರಕಾಶ ಯಾದವೇಶ 4 ಇಹಪರ ಸಾಹ್ಯನೀತ ಬಾಹ್ಯಾಂತ್ರ ಸದೋದಿತ ಮಹಿಪತಿ ಪ್ರಾಣನಾಥ ಅವಧೂತ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ದೇವಾಧಿದೇವ ನೀನಹುದೊ ಶ್ರೀಹರಿ ಕಾವಕರುಣ ನೀನೆ ಮುರಾರಿ ಧ್ರುವ ಕಮಲಭವಾರ್ಜಿತ ಕಾರುಣ್ಯ ಶೀಲ ವಿಮಲ ವಿರಾಜಿತ ಮದನಗೋಪಾಲ 1 ಕನಕಾಂಬರಧರ ಕಸ್ತೂರಿತಿಲಕ ಸನಕಾದಿವಂದ್ಯ ಶರಣ ರಕ್ಷಕ 2 ಅಗಣಿತ ಮಹಿಮ ಅವರುಜ ನೇತ್ರ ನೀನಹುದೊ ನಿಸ್ಸೀಮ 3 ಮುನಿಜನ ಪಾಲಕ ಮಾಮನೋಹರ ಘನಸುಖದಾಯಕ ಸು ಜನ ಸಹಕಾರ 4 ಭಾನುಕೋಟಿತೇಜ ನೀನೆ ಸುಹೃದಯ ದೀನದಯಾಳು ನೀನಹುದೊ ಮಹಿಪತಿಯ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು