ಒಟ್ಟು 6420 ಕಡೆಗಳಲ್ಲಿ , 135 ದಾಸರು , 4140 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ನಮಿಸುವೆನು ನಮಿಸುವೆನು | ವಿಜಯದಾಸರಿಗೇ ಪ ಅಮಮ ಮಹಿಮೆಗಳ್ನಿಮ್ಮ | ವರ್ಣಿಸಲು ಅಳವೇ ಅ.ಪ. ಕವಚ ವಿಜಯವ ಪಠಿಸಿ | ಅವನಿಯೊಳು ಸಜ್ಜನರುಬವಣೆಗಳ ಕಳಕೊಂಡು | ಸುಖದಿಂದ ಜೀವಿಪರೋ |ಅವರನುಗ್ರಹದಿಂದ | ಭವಣೆ ಎನೆ ಮದ್ಭಯವುಸವೆದು ಪೋಗುತ ಗ್ರಂಥ | ಮುದ್ರಣವ ಮುಂಬರಿಸಿದೆ 1 ಹಯಾಸ್ಯ ನಂಘ್ರಿಯಲಿಕಾರ್ಯಮುಂಬರಿಸಿರುವ | ಮಹ ಕಾರುಣ್ಯ ಮೂರ್ತೇ 2 ಹರಿಗುರು ಗೋವಿಂದ | ವಿಠಲ ಚರಣಬ್ಜವನುಪರಿಪರಿಯಲಿಂದತುತಿಸಿ | ಮರಳಿ ಕಾಂಬುವ ಸುಹವನಾವರ ವಿಜಯ ದಾಸಾರ್ಯಾ | ಕರುಣಿಸೆನೆ ಬಿನ್ನಪವಕರಗತವ ಮಾಡುವುದು | ಉರುಕರುಣ ಸಂಪನ್ನಾ 3
--------------
ಗುರುಗೋವಿಂದವಿಠಲರು
ನಮಿಸುವೆನು ನಮಿಸುವೆನು ವಿಶ್ವಪ್ರಿಯಾರ್ಯ |ಅಮದು ನಿಮ್ಮಯ ಮಹಿಮೆ ಪಾಮರನಿಗಳವೇ ಪ ಪಾದ ಭಜಕ 1 ಸ್ವಪ್ನದ್ರಷ್ಟ್ರುಗಳೆನಿಸಿ ಅಪ್ಪಹಯ ಮುಖದಯದಿಅಪ್ಪುತಲಿ ಜಾತಿಸ್ಮøತಿ ಗೊಪ್ಪವೆಂದೆನಿಪ |ಸ್ವಪ್ನದಾಖ್ಯಾನವನು ಪ್ರಕರಣಗಳಂದೆನಿಸಿಕೃಪ್ಪೆಯಲಿ ವ್ಯಕ್ತಿಗಳ ಪರಿಚಯವ ಗೈದೇ 2 ನಿರಶಾನದಿ ವ್ರತವು ಮರಳಿ ಶಿಬಿಕಾರೋಹಪುರಟ ಸಂಪುಟಗತವು ಮಧ್ಯವಾಟಸ್ಥ |ಹರಿಪ್ರತಿಮೆ ಕೃಷ್ಣ ಬಳಿ ಅರ್ಚಿಸುತ ಭಾವೀಂದ್ರಮೆರೆದೆ ಗುರುಗೋವಿಂದ ವಿಠಲ ಭಕ್ತೇಶ3
--------------
ಗುರುಗೋವಿಂದವಿಠಲರು
ನಮಿಸುವೆನು ಭಕ್ತಿಯಲಿ ಚನ್ನಕೇಶವನೇ ಮೂರ್ತಿ ಅಜಸುರಾರ್ಚಿತನೇ ಪ ಕರಿರಾಜ ಖಲನಕ್ರ ಭಾಧೆಯಿಂ ಮರೆಹೊಗಲು ಕರಿಯನ್ನು ಸಲಹಿ ನಕ್ರಕೆ ಮೋಕ್ಷವವಿತ್ತೇ ಕರು ನೃಪತಿಯನುಜ ದ್ರೌಪದಿ ಮಾನ ಕಳೆಯುತಿರೆ ಶರಣೆಂದ ಮಾನಿನಿಗೆ ಅಕ್ಷಯವನಿತ್ತೇ 1 ಮಂದರವ ಪೊತ್ತೆ ನೀ ಸುರರಿಗಮೃತವ ನಿತ್ತೆ ಚಂದದಿಂದಜಮಿಳಗೆ ಅಂತ್ಯದಲಿ ವಲಿದೇ 2 ದಾಸಗೊಲಿಯುವಿಯಂತೆ ಭಕ್ತಜನರಿಗೆ ನಿತ್ಯ ಭಾಸವಾಗುವಿಯಂತೆ ವಿಶ್ವರೂಪದಲ್ಲಿ
--------------
ಕರ್ಕಿ ಕೇಶವದಾಸ
ನಮಿಸುವೆನು ಮನ್ಮಾತೆ ಪದಯುಗಳಕೇ ಪ ಅಮಮ ಎನ್ನಲಿ ನಿಮ್ಮ | ಮಮತೆ ಎಷ್ಟಮ್ಮಾ ಅ.ಪ. ಭಾಗವತ | ಮೊದಲಾದ ಶಾಸ್ತ್ರಶೃತೆಖೇದ ಮೋದಾದಿ ಎನೆ | ದ್ವಂದ್ವಗಳ ಸಹಿಷ್ಣುತೆಸಾಧನೋತ್ತಮಗೈದೆ | ಈ ದೇಹ ದಾತೇ 1 ಸಿರಿ ವೆಂಕಟನ | ಬೆಟ್ಟಕ್ಕ ತ್ರೈಬಾರಿಕಷ್ಟದಲಿ ಸಾಧನ | ಸ | ಹಿಷ್ಣುತೆಯು ಎಷ್ಟಮ್ಮಾ 2 ಸೇತು ರಾಮೇಶ್ವರದ | ಯಾತ್ರೆಗಳ ಗೈದು ಸ-ತ್ಪಾತ್ರರನ್ನಾದರಿಸಿ | ಕಾತುರತೆಯಲ್ಲೀ |ವಾತಾಂತರಾತ್ಮ ಗುರು | ಗೋವಿಂದ ವಿಠ್ಠಲನಕೀರ್ತನೆಯ ಚತುರೆ ತವ | ಪಾದಕಾ ನಮಿಪೇ 3
--------------
ಗುರುಗೋವಿಂದವಿಠಲರು
ನಮಿಸುವೆನು ವಿಶ್ವಪ್ರಿಯರ ಪ ಕೃಷ್ಣನ ದಯದಿ ದ್ವಾದಶಾಬ್ದಗಳಲ್ಯುಪೋಷಣ ಭೂಪನು ರತ್ನ ಮಂಟಪವನ್ನೆ ನಿಮಗರ್ಪಿಸಿದನು 1 ನಿಮ್ಮೊಳಗೋದಿ ಪಂಡಿತವರ್ಯ- ನೆನಿಸುತ ವೀರ ವಿಷ್ಣುಭಕ್ತನಾದನು 2 ನಿಮಗೆಣೆ ನಾ ಕಾಣೆನು ರಾಜರಾಜರು ಪೊಂದದಿರುತಿಹ ನಾಕಿನಾಥನ ಪದವನೇರುವ ಗುರುವರ್ಯರನೆ ನಮಿಪೆ 3
--------------
ವಿಶ್ವೇಂದ್ರತೀರ್ಥ
ನಮಿಸುವೆನು ವ್ಯಾಸಾರ್ಯ | ಸುಮನಸರಿಗತಿ ಪ್ರೀಯ ವಿಮಲಕೀರ್ತಿ ಸುಶಯ್ಯ ಯತಿವರಾರ್ಯ ಪ ಅಮಮ ನಿಮ್ಮಯ ಕೀರ್ತಿ ಪೊಗಳಲಳವೇ ಎನಗೆಸುಮನಸ ಮುನಿಯನುಗ್ರಹೀತಾ - ಖ್ಯಾತಾ ಅ.ಪ. ಕನಕ ಕಶ್ಯಿಪು ಸುತನೆ | ಧನಕನಕ ತೃಣಗಣನೆಅಣು ಘನನ ಶ್ರೀ ಚರಣ | ವನಜ ಭ್ರಮರಾ |ಮನುಜಮೃಗ ವೇಷ | ಶ್ರೀ ನರಹರಿಯ ಮೂರ್ತಿಯನುಘನವಾದ ಸ್ತಂಭದೊಳು | ಕರೆದು ತೋರಿಸಿದೇ 1 ಮತ್ತೆ ನೀ ತ್ರೇತೆಯಲಿ | ಹತ್ತು ತಲೆ ರಾವಣನಭ್ರಾತೃವಾಗವತರಿಸಿ | ಕೀರ್ತಿಯಲಿ ಮೆರೆದೇ |ಭೃತ್ಯ ಭಾವದಿ ನಮಿಸಿ | ಸತ್ಯಾತ್ಮ ಶ್ರೀಹರಿಯವಿಸ್ತರದ ಕೀರ್ತಿಯಲಿ | ಲಂಕ ಪತ್ತನವಾಳ್ದ 2 ನರಪ ಪ್ರತೀಪನಾ | ಪರಸೂನು ವೆಂದೆನಿಸಿ ಕುರುಪತಿಯ ಋಣಸೇವೆ | ಸರಿಯಾಗಿ ಸಲಿಸೀ |ಮರುತಾತ್ಮ ಭೀಮನಿಂ | ವರವನೇ ಪಡೆಯುತ್ತವರ ಕಲೀಯಲಿಯತಿ | ವರನೆನಿಸಿ ಮೆರೆದೇ 3 ಬ್ರಹ್ಮಣ್ಯಯತಿ ಕರಜ | ಬ್ರಹ್ಮ ಬ್ರಾಹ್ಮಣ ಪ್ರೀಯಬ್ರಹ್ಮಣ್ಯ ಪ್ರೀಯ ಸು | ಬ್ರಹ್ಮಣ್ಯನಾವೇಶನೇ |ಬ್ರಹ್ಮಾಸ್ಮಿ ಎಂದೆನಿಪ | ಬ್ರಹ್ಮದ್ವೇಷಿಯ ನಿಕರಬ್ರಹ್ಮಾಂಡದಲಿ ತರಿದೇ | ಬ್ರಾಹ್ಮಣರ ಪೊರೆದೇ 4 ಭಾಗವತ ಪ್ರೀಯ 5
--------------
ಗುರುಗೋವಿಂದವಿಠಲರು
ನಮೋ ನಮಸ್ತೇ ಉಮಾತನಯ ಕುಮಾರಾಗ್ರಜ ಪ. ಅಮೋಘ ಶಮದಮಾದಿಗುಣ ಸಮೂಹ ಗತವಿಮೋಹ ಸದಾ ಅ.ಪ. ಭಾರತವ ಬಾದರಾಯಣನು ಪೇಳಿದಂತೆ ಬರೆದೆ ಭಾರತವ ಮಾರಜ ಭ್ರಮೆಯ ದೂರಗೈದ ಸುವಿ- ಚಾರಧೀರ ಸುರವಾರವಿನುತ ಪದ 1 ವೃಂದಾರಕೇಂದ್ರ ತವಚರಣಕೆ ವಂದಿಸುವೆ ವೃಂದಾರ ಮಂದಾರ ಚಂದನಚರ್ಚಿತ ಚಂದ್ರಚೂಡ ಮನೋನಂದ ಮೂರುತಿಯೆ 2 ಸುಜನ ಮುಮುಕ್ಷುಜನಪ್ರಿಯ ಸುಕ್ಷೇಮದ ಲಕ್ಷ್ಮೀನಾರಾಯಣ ಲಕ್ಷಿತಾತ್ಮನೆ ವಿ- ಪಕ್ಷರಕ್ಷೋಗಣಶಿಕ್ಷ ಸೂಕ್ಷ್ಮ ಮತೆ 3
--------------
ತುಪಾಕಿ ವೆಂಕಟರಮಣಾಚಾರ್ಯ
ನಮೋ ನಮಸ್ತೇ ನರಸಿಂಹ ದೇವಾ ಸ್ಮರಿಸುವವರ ಕಾವಾ ಪ ಸುಮಹಾತ್ಮ ನಿನೆಗೆಣೆ ಲೋಕದೊಳಾವಾ ತ್ರಿಭುವನ ಸಂಜೀವಾ ಉಮೆಯರಸನ ಹೃತ್ಕಮಲದ್ಯುಮಣಿ ಮಾ ರಮಣ ಕನಕ ಸಂಯಮಿ ವರವರದಾ ಅ ಕ್ಷೇತ್ರಜ್ಞ ಕ್ಷೇಮಧಾಮ ಭೂಮಾ ದಾನವ ಕುಲಭೀಮಾ ಸನ್ನುತ ಬ್ರಹ್ಮಾದಿ ಸ್ತೋಮಾ ಸನ್ಮಂಗಳ ನಾಮಾ ಚಿತ್ರ ಮಹಿಮನಕ್ಷತ್ರನೇಮಿಸ ರ್ವತ್ರಮಿತ್ರ ಸುಚರಿತ್ರ ಪವಿತ್ರ 1 ಅಪರಾಜಿತ ಅನಘ ಅನಿರ್ವಿಣ್ಣ ಲೋಕೈಕ ಶರಣ್ಯ ಶಫರಕೇತು ಕೋಟಿಲಾವಣ್ಯ ದೈತ್ಯೇಂದ್ರ ಹಿರಣ್ಯಕ ಶಿಪುಸುತನ ಕಾಯ್ದಪೆನೆನುತಲಿ ನಿ ಷ್ಕಪಟ ಮನುಜಹರಿವಪುಷ ನೀನಾದೆ 2 ತಪನ ಕೋಟಿ ಪ್ರಭಾವ ಶರೀರಾ ದುರಿತೌಘವಿದೂರಾ ಪ್ರಪಿತಾಮಹ ಮಂದಾರ ಖಳವಿಪಿನ ಕುಠಾರಾ ಕೃಪಣಬಂಧು ತವ ನಿಪುಣತನಕೆ ನಾ ನುಪಮೆಗಾಣೆ ಕಾಶ್ಯಪಿವರವಾಹನಾ 3 ವೇದವೇದಾಂಗವೇದ್ಯಾ ಸಾಧ್ಯ ಅಸಾಧ್ಯ ಶ್ರೀದ ಮುಕ್ತಾಮುಕ್ತರಾರಾಧ್ಯಾ ಅನವದ್ಯ ಮೋದಮಯನೆ ಪ್ರಹ್ಲಾದವರದ ನಿ ತ್ಯೋದಯ ಮಂಗಳ ಪಾದಕಮಲಕೆ 4 ಅನಿಮಿತ್ತ ಬಂಧು ಜಗನ್ನಾಥ ವಿಠಲ ಸಾಂಪ್ರತ ನಿನಗೆ ಬಿನ್ನೈಸುವೆ ಎನ್ನಯ ಮಾತಾ ಲಾಲಿಸುವುದು ತಾತಾ ಗಣನೆಯಿಲ್ಲದವ ಗುಣವೆನಿಸಿದೆ ಪ್ರತಿ ಕ್ಷಣಕೆ ಕಥಾಮೃತ ಉಣಿಸು ಕರುಣದಿ 5
--------------
ಜಗನ್ನಾಥದಾಸರು
ನಮೋ ನಮೋ ಗಣೇಶಾ | ನಮೋ ಸಂಕಟನಾಶಾ | ನಮೋ ದುರಿತವಿನಾಶಾ ಪ ಚರ್ಚಿತ ಸಿಂಧುರ ವದನಾ | ಸುಂದರ ಗುಣಸದನಾ ಗಣೇಶಾ 1 ತ್ರೀಶೂಲ ಅಂಕುಶ ಧೃತಕರ ಕರುಣಾ | ಕಿಸಲಯೋಪಮ ಚರಣಾ ಗಣೇಶಾ 2 ಇಹಪರ ಸುಖದಾತಾ ಗಣೇಶಾ | 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ನಮೋ ನಮೋ ಗುರುರಾಜ ಪ ಭಾಸುರ ಪಂಪಾ ತುಂಗಾ ತೀರವಾಸ | ಪಾಲಿಸೊ ತವದಾಸ ಅ.ಪ. ರತಿಪತಿ ಜನಕನ ವರ ಶಯ್ಯಾಂಶದಲಿ | ವಾಯ್ವಾವೇಶದಲಿ ಜನಿಸುತ ಮೋದದಲಿ ವಿತತನು ವಿಷ್ಣುವು ವಿಶ್ವದೊಳೆನುತಲಿ | ಅತಿಶಯ ಭಕ್ತಿಯಲಿ ಪಿತಗೆ ತೋರ್ದ ಪ್ರಹ್ಲಾದನೆ ಹಿತದಲ್ಲಿ | ಅವತರಿಸಿದೆ ಇಲ್ಲಿ 1 ಧರೆಯೊಳಗೆ ಪ್ರಖ್ಯಾತ ಪರಮಾತ್ಮನ ಪದಶರಣ ವ್ಯಾಸಯೋಗಿ | ಯೆನಿಸುತಲಿ ವಿರಾಗಿ ತರತಮ ಪಂಚಕ ಪ್ರಭೇದವ ಸ್ಥಾಪಿಸಲು | ದುರುಳರ ಖಂಡ್ರಿಸಲು ಪರಿಪರಿ ಶಾಸ್ತ್ರವ ಶ್ರೀ ಪಾದರಾಯರಲಿ | ಓದಿದ್ಯೊ ಭಕ್ತಿಯಲಿ 2 ಪುರಂದರ ಕನಕರಿಗೆ ಆದರದಿಂದಲಿ ಬೋಧಿಸಿ ತತ್ವವನು | ಮಾಡಿ ಪುನೀತರನು ವೇದಶಾಸ್ತ್ರ ತರ್ಕಾದಿ ಗ್ರಂಥಗಳಲಿ | ಕೋವಿದರರಸುತಲಿ ನೀ ದಯದಿಂದಲಿ ಸೇರಿಸಿ ಪರಿಷತ್ತು | ಭಾವಿಸಿ ವಿದ್ವತ್ತು 3 ಅರ್ಥಿಕಲ್ಪಿತ ವರ ಕಲ್ಪವೃಕ್ಷವಾಗಿ | ನಿತ್ಯದಿ ಮಹಯೋಗಿ ಪ್ರಥ್ಯರ್ಥಿ ಮದಕರಿ ಪಂಚವಕ್ತ್ರನಾಗಿ | ಪ್ರತ್ಯಕ್ಷದಿ ತಾಗಿ ಹೊರ ಚೆಲ್ಲುತೆ ನೀನು ಸ್ತುತ್ಯ ಕೃಷ್ಣ ಭೂಮೀಂದ್ರನ ಕುಹುಯೋಗ | ಪರಿಹರಿಸಿದೆ ಬೇಗ 4 ವ್ಯಾಸಾಂಬುಧಿಯನು ಕಟ್ಟಿ ಖ್ಯಾತನಾಗಿ | ದಾಸರ ಚನ್ನಾಗಿ ಪೋಷಿಸುತಲಿ ಶ್ರೀ ಶೇಷಗಿರಿಗೆ ಬಂದು | ಶ್ರೀಶನಲ್ಲಿ ನಿಂದು ಪಡುತ ಹನ್ನೆರಡು ವರುಷ ದೇಶ ದೇಶದಲಿ ಆಶುಗಿಯನು ನಿಲಿಸಿ | ಶಿಷ್ಯರಿಗನುಗ್ರಹಿಸಿ 5 ಕಾಶಿ ಗಧಾಧರ ವಾಜಪೇಯಿ ಲಿಂಗ | ಮಿಶ್ರರು ನರಸಿಂಗ ವಾಸುದೇವ ಪುರಿ ಈಶ್ವರ ಪಂಡಿತರ | ವಾದದಿ ಬಿಗಿವರ ಜೈಸಿ ತಂದ ಜಯ ಪತ್ರಗಳನು ಮುದದಿ | ಶ್ರೀನಿಧಿಗರ್ಪಿಸಿದಿ ಶ್ರೀಸತ್ಯಾ ರುಕ್ಮಿಣಿ ವೇಣುಗೋಪಾಲರನು | ಸ್ತುತಿಸಿ ಪಡೆದೆ ನೀನು 6 ನ್ಯಾಯಾಮೃತ ಬಿಚ್ಚಿ ಚಂದ್ರಿಕೆಯನು ತಂದೆ ಆಯದಿ ಬುಧಮನ ತಾಂಡವಾಡುವಂತೆ | ತರ್ಕತಾಂಡವವಿತ್ತೆ ಕಾಯಜಪಿತ ಶ್ರೀಕಾಂತನ ಸೇವಿಸುತ | ಸುಖಿಸುವೆ ನೀ ಸತತ 7
--------------
ಲಕ್ಷ್ಮೀನಾರಯಣರಾಯರು
ನಮೋ ನಮೋ ನಾರಾಯಣ ಸನ್ನುತ ಸುಗುಣ ಗುಣಾರ್ಣವ ಸುಮನಪತಿ ಶ್ರೀ ಭೂದುರ್ಗಾರಮಣ ಮಾಂಪಾಹಿ ಪ ಲೋಕೇಶ ವಿಧಾತಜನಕ ರ ತ್ನಾಕರಮಥನ ಜಗದಾಘಪಹ ಶ್ರೀಕಂಠ ಪಿತಾಮಹ ಮದನನೇಕ ಸುಲಾವಣ್ಯ ಆಕಾಶ ತರಂಗಿಣಿ ಪಿತ ಕರುಣಾಕರ ಕೌಮೋದಕಿಧರ ಧರಣಿ ಕುವರಾಂತಕ ಕರುಣದಿ ಚಿತ್ತೈಸು ನೀ ಹಸಿಗೆ ಶೋಭಾನೆ 1 ಅರದೂರಾಬ್ಜ ಭವಾಂಡೋದರ ಶರಣಾಗತ ಸವಿ ಪಂಜರ ಅಂ ಬರ ಭೂ ಪಾತಾಳದಿ ವ್ಯಾಪ್ತಾ ಜರಮೃತ್ಯು ವಿದೂರ ಕರಿವರ ಪ್ರಭಂಜನ ಪೀತಾಂ ಬರಧರ ಖಳಕುಲವನ ವೈಶ್ವಾ ನರ ನಾರದನುತ ಮಹಿಮನೆ ಚಿತ್ತೈಸು [ಹಸೆಗೆ] 2 ಸತ್ವರಜಸ್ತಮ ಜೀವರ ತತ್ ಸಾಧನವರಿತವರಗತಿ ಗ ಳಿತ್ತು ಪೊರೆವ ವಿಬುಧವರದ ವರಸತ್ಯವತಿ ಸೂನು ಉತ್ತಮ ಪುರುಷನೆ ಚೇತನ ಜಡದ ತ್ಯಂತವಿಭಿನ್ನ ವಿಜಯ ಸಖ ಸತ್ಯಸುಕಾಮ ಕಮಲನಯನನೆÉ ಚಿತ್ತೈಸೊ [ಹಸೆಗೆ]3 ವಾಸವತನುಸಂಭವ ಸಾರಥಿ ವೀಶುದ್ಭುಜ ವಿಧೃತ ಸುದರ್ಶನ ದಶಾರ್ಹ ದಿವಕರನಿಭ ಸಂಕಾಶÀ ಸುಭದ್ರಾತ್ಮಾ ವಾಸುಕಿ ಪರ್ಯಂಕಶಯನ ಹರಿ ವ್ಯಾಸಕಪಿಲ ದತ್ತಾತ್ರಯ ಮಹಿದಾಸ ವೃಷಭರೂಪ ರಮೆಯರಸ ಚಿತ್ತೈಸು [ಹಸೆಗೆ]4 ಪಾಂಡವ ಸಖ ಪತಿತ ಸುಪಾವನ ಚಂಡಾಂಶು ನಿಶಾಕರ ಪಾವಕ ಮಂಡಲದೊಳಗತಿ ಬೆಳಗುವ ಕೋದಂಡ ಧೃತ ಕರಾಬ್ಜ ಕುಂಡಲ ಮಂಡಿತ ಗಂಡಸ್ಥಳ ಖಂಡಮಹಿಮ ಖೇಚರ ಪುರಹರ ಗಂಡುಗಲಿ ಜಗನ್ನಾಥ ವಿಠಲ ಚಿತ್ತೈಸೋ [ಹಸೆಗೆ]5
--------------
ಜಗನ್ನಾಥದಾಸರು
ನಮೋ ನಮೋ ನಾರಾಯಣ ನಮೋ ಶ್ರುತಿ ನಾರಾಯಣ ನಮೋ ಬಾದರಾಯಣ ನರನ ಪ್ರಾಣ ಪ ಶಿವನ ಮೋದದಲಿ ಪಡೆದೆ ಶಿವರೂಪದಲಿ ನಿಂದೆ ಶಿವನೊಳಗೆ ಏರಿದೆ ಶಿವನಿಗೊಲಿದೆ ಶಿವಗೆ ನೀ ಮಗನಾದೆ ಶಿವ ತಾತನೆನೆಸಿದೆ ಶಿವನ ಮಗನಾ ಪಡೆದೆ ಶಿವನ ಕಾಯ್ದೆ1 ಶಿವಗೆ ಸಹಾಯಕನಾದೆ ಶಿವನ ಕಂಗಡಿಸಿದೆ ಶಿವನ ಧನುವನು ಮುರಿದೆ ಶಿವನೊಲಿಸಿದೆ ಶಿವನ ಜಡ ಮಾಡಿದೆ ಶಿವನ ಒಡನೆ ಬಂದೆ ಶಿವಮುನಿಗೆ ಉಣಿಸಿದೇ ಕೇಶವನೆನಿಸಿದೇ 2 ಶಿವನ ಜಡೆಯೊಳಗಿದ್ದ ಶಿವಗಂಗೆಯ ಪೆತ್ತೆ ಶಿವನ ಕೂಡಲಿ ಕಾದಿದವನ ಭಾವ ಶಿವ ಭಕ್ತನ್ನ ನಿನ್ನವನಿಂದ ಕೊಲ್ಲಿಸಿದೆ ಶಿವನ ಶೈಲವನೆತ್ತಿದವನ ವೈರಿ3 ಶಿವ ನುಂಗಿದದ ನುಂಗಿದವನ ಒಡನಾಡುವ ಶಿವ ಪರಾಶಿವ ನಿನ್ನ ಶಿವ ಬಲ್ಲನೇ ಯವೆ ಇಡುವನಿತರೊಳಗೆ ಧವಳ ಹಾಸಾ4 ಶಿವನ ಮೇಲಿದ್ದ ಸಹಭವೆ ರಮಣ ಸರ್ವದಾ ಶಿವನೊಳಗಿಳಿದ ಶಿಷ್ಯನಿವ ಹರಾತೀ ತಲ್ಪ ಶಿವ ಸಮಾನಿಕ ರೂಢ ಶಿವನ ಮನೆ ತೊಲಗಿಸುವ ಶಿವ ಬಾಂಧವಾ 5 ಶಿವನ ಧೊರಿಯೆ ಜ್ಞಾನ ಶಿವ ಹಚ್ಚುವದೆ ಕೊಡು ಶಿವಮಣಿ ಎನಿಸುವ ಸ್ತವ ಪ್ರಿಯನೇ ವಾಹನ ವೈರ ಶಿರವ ತರಿಸಿದೆ ದೇವ ಶಿವ ಪ್ರತಿಷ್ಠಿಸಿದೆ ಶಿವಗೆ ಕಾಣಿಸದಿಪ್ಪೆ6 ಶಿವನ ಸೋಲಿಸಿದವನ ಜವಗೆಡಿಸಿದೆ ಶಿವನು ಕುದರಿಯ ಹೆರವ ಅವನು ಕಾಯಿದ ಗೋವ ಶಿವನವತಾರ ಶಸ್ತ್ರವನು ಹಳಿದೆ 7 ಶಿವನಧರ್Àನಾಗಿ ದಾನವನು ಕೊಂದ ಮಹಿಮಾ ಶಿವಋಷಿ ಪೇಳಿದ ಯುವತಿ ರಮಣಾ ಶಿವನ ವೀರ್ಯವ ಧರಿಸಿದವನ ಮುಖದಲಿ ಉಂಬ ಅವರ ಬೆಂಬಲವೇ ಯಾದವಕುಲೇಶಾ 8 ಶಿವಗೆ ತ್ವಂಚ ಬಾಹುಯೆಂದು ಪೇಳಿ ಮೋಹ ದಿವಿಚಾರಿಗಳ ತಮಸಿಗೆ ಹಾಕುವೆ ಶಿವಮೂರುತಿ ನಮ್ಮ ವಿಜಯವಿಠ್ಠಲರೇಯ ಶಿವನಾಳು ಮಾಡಿ ಆಳುವ ದೈವವೇ9
--------------
ವಿಜಯದಾಸ
ನಮೋ ನಮೋ ನಾರಾಯಣನೇ ಓಂ ನಮೋ ಚನ್ನಕೇಶವನೆ ಪ ಅಚ್ಯುತ ಪಾದದಿ ಸೇರಿಸೊ ಅನಂತ ಅ.ಪ ನಮೋ ನಮೋ ವೆಂಕಟರಮಣನೆ ಸಂಕಟಹರಿಸೋ ಶ್ರೀವರನೆ 1 ನಮೋ ನಮೋ ವರದರಾಜನೆ ವರವ ನೀಡೋ ಪುರುಷೋತ್ತಮನೆ 2 ನಮೋ ನಮೋ ಶ್ರೀರಂಗನಾಥನೆ ಸುರಕ್ಷೆಯ ಕೊಡೊ ಭಕ್ತವತ್ಸಲನೆ 3 ನಮೋ ನಮೋ ಸಂಪತ್ಕುಮಾರನೆ ಸಂಪತ್ತನು ಹರಿಸೋ ಶ್ರೀಹರಿಯೆ 4 ನಮೋ ನಮೋ ಮುದಿಗೆರೆ ರಂಗನೆ ಮುದದಿ ಕಾಪಾಡೋ ಮಾಧವನೆ 5 ನಮೋ ನಮೋ ಯದುಗಿರಿ ಚಲುವನೆ ಸದಯದಿ ಸಲಹೋ ದಾಮೋದರನೆ 6 ನಮೋ ನಮೋ ಜಾಜಿಪುರೀಶನೆ ನೀ ಜೋಪಾನಮಾಡೆನ್ನ ಪರಮಪಾವನನೆ 7
--------------
ನಾರಾಯಣಶರ್ಮರು
ನಮೋ ನಮೋ ಭೀಮಾ | ಜೀವೋತ್ತುಮಾಪ್ತ ಜನ ಪ್ರೇಮಾ ಪ ಕುಮಾನ ಜನ ಸುಪ್ರಮೋದ ವಿನಾಶಕ ಶಮಾದಿ ಗುಣನಿಧೆ | ಕ್ಷಮಾಪಣಂ ಕುರು ಅ.ಪ. ಕಾನನ ಸುಕುಠಾರ ||ಭ್ರಾಂತ ದುಶ್ಯಾಸನ | ಅಂತ್ಯವ ಕಾಣಿಸಿಕಾಂತಾ ಮಣೀಯನು | ಸಂತೋಷ ಪಡಿಸಿದೆ 1 ಗೋಪಿ | ನಂದಾನಗತಿ ಪ್ರೀಯವಂದೀಸಿ ಬೇಡುವೆ | ಕುಂದೂಗಳೆನ್ನಯನೊಂದಾನು ಎಣಿಸಿದೆ | ನಂದನ ಪಾಲಿಸೊ 2 ಕಾಯ ಭವ ಮುಖಾದಿ ಗೇಯ ||ಅವಿರತದಿ ಗುರು | ಗೋವಿಂದ ವಿಠಲನಸ್ತವನ ಗೈವನ | ಭವವ ಕಳೆಯುವ 3
--------------
ಗುರುಗೋವಿಂದವಿಠಲರು
ನಮೋ ನಮೋ ಶ್ರೀ ಮಧ್ವಾಚಾರ್ಯ ಆರ್ಯಾ ಪ ಭೃಗು ಕುಲೋತ್ತಮ ರಾಮ ಭೂಸುರರಿಗೆ ಸರ್ವ ಜಗವೆಲ್ಲ ಧಾರಿಯನು ಯೆರದು ಸಂಹ್ಯಾ ನಗದಲ್ಲಿ ನಿಂದು ಸಮುದ್ರನ್ನ ಹಿಂದಕ್ಕೆ ತೆಗಿಸಿ ಈ ಭೂಮಿಯನು ಸಾಧಿಸಿದನು1 ಮೂರ್ತಿ ಅಲ್ಲಿಗಲ್ಲಿಗೆ ಕ್ಷೇತ್ರ ಗತಿ ತಪ್ಪಿದಂತೆ ನಿರ್ಮಾಣ ಮಾಡಿ ಸತಿಪತಿಯ ಉದ್ಧರಿಸಿ ಬರುತ ಕಂಡನು ಉ ನ್ನತವಾದ ಪರ್ವತವು ಯೋಜನವಿರೆ 2 ಬೆರಗಾಗಿ ಪರಶುರಾಮನು ಬಂದು ಈ ಗಿರಿಯಲ್ಲಿ ನಿಂದು ಅಗ್ರಭಾಗವೈದೆ ತರಹರಿಸಲಾರದೇ ಭೂಮಿಗಿಳಿಯಿತು ಅದ್ರಿ ನಿರೀಕ್ಷಿಸಿ ಸುಜನರು ಇದ್ದನಿತು3 ಸಿರಿರೂಪ ದುರ್ಗಾನಾಮಕಳಾದ ದೇವಿಯನು ಕರದು ಈ ಸ್ಥಾನದಲಿ ಇರ ಹೇಳಿದಾ ಅರವು ಮಾಡದೆ ಮುಂದೆ ಕಲಿಯುಗದಲಿ ನೆರದು ದುರುಳರಾತಿಯರ ಸಂಹರಿಸುಯೆಂದು 4 ಅನಿತರೊಳಾಕಾಶದಲಿ ಜಯ ಜಯವೆಂದು ಅನಿಮಿಷರು ಕೊಂಡಾಡಿ ನಗುತ ದಿವ್ಯ ಮಣಿಮಯ ವಿಮಾನದಿಂದಾ ಗಿರಿಗೆ ವೇಗದಿ ಸು ಮ್ಮನರಾಗಿ ಬಂದು ತುತಿಸಿದರು ಹರಿಯಾ 5 ಅಂದಿನಾರಭ್ಯವಾಗಿ ಇದೇ ವಿಮಾನಗಿರಿ ಯೆಂದು ಕರೆಸಿತು ಶ್ರುತಿ ಯುಕ್ತಿಯಲ್ಲಿ ಎಂದೆಂದಿಗೆ ಇದನೆ ನೋಡಿದವರಿಗೆ ದೋಷ ಗಂಧವಾದರು ಇಲ್ಲಾ ಇಲ್ಲ ಇಲ್ಲಾ6 ಈ ಮಹಿಮೆಯನು ಕೇಳಿ ಧರ್ಮ ತಪವನು ಮಾಡಿ ಸೋಮಾರ್ಕ ಪ್ರಭಯಂತೆ ಕೀರ್ತಿಯನು ಪಸರಿಸಿ ಪಾಮರರ ಉದ್ಧರಿಸಬೇಕು ಯೆಂದು7 ಪರಿ ಶ್ರೀಹರಿಯ ಧ್ಯಾನವನು ಮಾಡಲು ಶ್ರೀಪತಿ ವರವಿತ್ತ ಮುಂದೆ ಮಹ ಪಾಪಿ ಪುಟ್ಟುವನು ಅವನಗೋಸುಗ ವಾಯು ತಾ ಪರಮ ಪ್ರೀತಿಯಲಿ ಜನಿಸುವನು 8 ಅಂದ ಮಾತಿಗೆ ಯಮನು ಬಹುಕಾಲದಲಿದ್ದ ಛಂದದಿಂದದಿ ಪೋದ ತನ್ನ ಪುರಕೆ ಇಂದಿರಾಪತಿ ನೇಮಿಸಿದ ಪರಿಯಂತೆ ಆ ನಂದತೀರ್ಥರಾಗಿ ಜನಿಸಿದರು 9 ಏನು ಪೇಳಲಿ ಪುಣ್ಯ ಚರಿತಯನು ಚನ್ನಾಗಿ ಜ್ಞಾನದಲಿ ಅಧಿಕಾರಾಗಿ ಇಷ್ಟಾನಿಷ್ಟ ಪುಣ್ಯ ಮಾನದಲಿ ಕೊಂಡಾಡಿ ಸುಖಿಪರಲ್ಲಿ10 ಹುರಳಿ ಗುಗ್ಗರಿ ಮೆದ್ದ ಅದ್ಧುತವ ಕೇಳಿದರೆ ಉರಳಿ ಹೋಗುವದು ಜನ್ಮಾಂತರದ ದುಷ್ಕರ್ಮ ಮರಳಿ ಬಲಿ ಬಾಲವನು ಪಿಡಿದದು ನೆನಸಿದರೆ ಸುರರು ಮುಕ್ತಿಯಿನಿತ್ತು 11 ಧರಣಿಧರದಿಂದ ಧುಮುಕಿದ ಪಾದಯುಗ ನೋಡೆ ಎರಡೊಂದು ಏಳು ಕುಲತೃಪ್ತರಹರೊ ಅರೆ ಮ್ಯಾಲೆ ಸಾಲವನು ತಿದ್ದಿದಾ ವಾರ್ತಿ ಕೇಳಿ ಎರಡೊಂದು ಋಣದಿಂದ ಕಡೆಗಾಗುವ 12 ತಲೆಕೆಳಕಾಗಿ ಬೆಳೆದಾ ವೃಕ್ಷವನು ನೋಡಿ ಬಲಿವನು ಸುರದ್ರುಮದಂತೆ ರಂಗ ಛಲದಿಂದ ಸರ್ಪನ ವರಸಿದ ಸ್ಥಳ ಕಾಣೆ ಬಲು ವಿಷಗಳು ಪೋಗಿ ನಿರ್ಮಲಹರೋ 13 ಧೂಳಿ ಅಕ್ಷರ ಬರೆದ ಪ್ರದೇಶ ನೋಡಲು ವಾಲಯಾ ಶುಭವಿದ್ಯ ಫಲಿಸುವದು ಲೀಲೆಯಿಂದ ಗ್ರಂಥ ಅಭ್ಯಾಸಕೆ ಪೋಗಿ ಬರುವ ಶೀಲತೆಯು ಕೇಳೆ ಮನೋ ವಾಯುವೇಗ 14 ಬುತ್ತಿಯ ಉಂಡ ಸ್ಥಳವನ್ನು ಕೊಂಡಾಡಲು ತೃಪ್ತನಾಗುವ ಮನುಜ ಮೃಷ್ಟಾನ್ನದಿ ನಿತ್ಯ ಬಾಲಕ್ರೀಡೆ ಆಡಿದ್ದು ಪಾಡಲು ಪುತ್ರೋತ್ಸವಗಳಿಂದ ಬಾಳುತಿಪ್ಪ15 ಚಾಪ ಗದ ಪದುಮ ಎರಡೊಂದು ತೀರ್ಥಗಳು ಇರುತಿಪ್ಪ ವಾಸುದೇವನೆಂಬೊ ನಾಮಾ ಸರೋವರದಲಿ ಮಿಂದು ಸ್ತೋತ್ರ ಮಾಡಿದ ನರಗೆ ವಿರಜೆಯಲಿ ಸ್ನಾನ ಸಂದೇಹವಿಲ್ಲ 16 ಜನಿಸಿ ಮೊದಲು ಮಹಾ ಬದರಿಗೆ ಪೋದಾರಭ್ಯ ಎಣಿಕೆ ಇಲ್ಲದೆ ಚರಿತೆ ಅನುದಿನದಲಿ ಗುಣಿಸಿ ಗುಣದಲಿ ತಿಳಿದು ಕೀರ್ತನೆಯನೆಸಗಿದಾ ಮನುಜರಿಗೆ ಸತ್ಕೀರ್ತಿ ಬರುವುದಯ್ಯಾ 17 ಮಧ್ವ ಮಧ್ವ ಎಂಬೋ ನಾಮವನು ನುಡಿದರೆ ಬದ್ಧವಾಗಿದ್ದ ಭವಾಬ್ಧಿಯಿಂದ ಎದ್ದು ಕಡಿಗೆ ಬಿದ್ದು ಸಂಚಿತಾಗಾಮಿಯಿಂದ ಗೆದ್ದು ಚರ್ಮ ದೇಹದಿಂದ ನಲಿವ 18 ಶ್ರೀ ಪೂರ್ಣಬೋಧ ಗುರುಶೇಖರ ಸುಗುಣಧಾಮ ಆಪನ್ನ ಪರಿಪಾಲ ಅಮೃತಫಲದ ವ್ಯಾಪುತ ನಾನಾ ಸ್ಥಾನ ಹನುಮ ಭೀಮ ಸರ್ವ ರೂಪಾತ್ಮಕ ಪ್ರಾಣ ಭಾರತೀಶ19 ಕೇಳಿ ಹರುಷಿತನಾಗಿ ಬಂದ ವೈಭವದಂತೆ ಕಾಲ ಹಿಂಗಳಿಯದೇ ನಿತ್ಯದಲ್ಲಿ ಲೀಲೆಯಲಿ ವಾಸವಾಗಿರಲೆಂದು ಅಂದು ಪೇಳಲಾ ಮೌಳಿಯನು ತೂಗಿ ಸರ್ವರು ನಿಂತರು20 ಪುಂಜಕಾಸ್ಥಳ ಬಂದು ತಪವು ಮಾಡಲು ಕ್ಷೇತ್ರ ರಂಜನವಾಯಿತು ಇದೇ ನಾಮದಲ್ಲಿ ಕುಂಜರ ವರದ ನಮ್ಮ ವಿಜಯವಿಠ್ಠಲನಂಘ್ರಿ ಕಂಜವನು ಭಜಿತ ಗುರುರಾಜ ಜಯತು 21
--------------
ವಿಜಯದಾಸ