ಒಟ್ಟು 4671 ಕಡೆಗಳಲ್ಲಿ , 110 ದಾಸರು , 2562 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಬ್ರಾಹ್ಮಣನುಣಲಿಕೆ ರಾಗಿ ಹಿಟ್ಟು ತನ್ನ ಬಂಧು ಜನಕ್ಕೆ ಒಬ್ಬಟ್ಟು ಪ ಪಾಮರ ಜನರಲಿ ವಾಡಿಕೆಯಿದು | ಶ್ರೀ ರಾಮನೊಲಿವನೆ ಎಂದಿಗಾದರು ಅ.ಪ ಮಾತು ಮಾತಿಗೆ ಸಾಲಮಾಡಿ | ಬಹ ಳಾತುರದಲಿ ಓಡಾಡಿ ಜಾತುಕನಂದದಿ ಜನಗಳ ಮೆಚ್ಚಿಸಿ ಪಾತಕವಾದರು ಲಾಭವಧಿಕ 1 ದೊಡ್ಡದಾಗಿ ಮನೆಕಟ್ಟಿದರೆ -ಸಾಲ ಹೆಡ್ಡಗಾದರು ಹುಟ್ಟುವುದು ದುಡ್ಡುದೇವರಿಗಿಂತ ದೊಡ್ಡದೇವರು ಯಾವುದು? ಬಡ್ಡಿ ಹಚ್ಚು ಬರುವನೆ ಮಹರಾಯನು2 ಹೊಟ್ಟೆಗೆ ತಿಂಬುವದ್ಯಾರು ಬಲ್ಲರು? ವುಟ್ಟ ಬಟ್ಟೆಯಲ್ಲರು ನೋಡುವರು ಸಿಟ್ಟು ಬಂದರೆ ಬೆಂಕಿಯಂತವ ನಾನು ಹೊಟ್ಟೆ ಚಿಕ್ಕದು ಕಣ್ಣು ದೊಡ್ಡದು 3 ಪರಲೋಕವು ಉಂಟೆಂದು ಪೇಳು ವರರಿಯದವರು ತಾವು ಮುಂದು ನರಕವುಸ್ವರ್ಗವು ಯಾರು ನೋಡಿರುವರು ಪುರಾಣ ಶಾಸ್ತ್ರಗಳು ಯಾತಕೆ ಬಿಡಿ4 ಅತಿಥಿಗಳಿಗೆ ನೀರುಮಜ್ಜಿಗೆ | ಮೊಸರು ಸತಿಸುತರಿಗೂ ಮತ್ತು ತನಗೆ ಯಿತರರಿಗೆಲ್ಲಾ ಎಣ್ಣೆಕರೆದ ಭಕ್ಷ್ಯ ಘೃತಭಕ್ಷ ತನಗೆ ಮಾತ್ರ 5 ಎಣ್ಣೆಯು ಬಲುರುಚಿ ನಮಗೆ | ತುಪ್ಪ ವಿನ್ನೇತಕೆ ಹೆಚ್ಚು ಬೆಲೆಗೆ ಕಣ್ಣಲಿ ಕಂಡದು ಮಾತ್ರ ಸತ್ಯ | ನಾ ವನ್ಯರ ನುಡಿ ನಂಬುವುದಿಲ್ಲವು 6 ವೊರಿಗೆಲ್ಲ ನಾ ಮೇಟಿ | ಯನ್ನ ನಾರು ಪೋಲುವರು ಸಾಟಿ ನೂರೆಲೆ ಬೀಳ್ವುದು ನಮ್ಮ ಮನೇಲೀ ಘೋರ ಕ್ಷಾಮದಲಿ ನಾನೆ ಪೊರೆವೆ 7 ಪರರಂತೆ ನಾನಿರಬೇಕು | ಶ್ರೀ ಹರಿ ಇಷ್ಟು ಕೊಟ್ಟರೆ ಸಾಕು ಗುರುಹಿರಿಯರು ನುಡಿಯೇತಕವರು ಮುದು- ಕರು ಏನು ಬಲ್ಲರು ಲೌಕೀಕವ 8 ಗುರುರಾಮವಿಠಲೆಲ್ಲಿ ಭ್ರಾಂತು -ಈ ಕರೆಕರೆ ನಮಗೇಕೆ ಬಂತು ಸೇರಿತು ಬಡವರಾವು 9
--------------
ಗುರುರಾಮವಿಠಲ
ಭಕುತರಪರಾಧವ ಬಗೆಯನೀ ದೇವಭಕುತರು ತಪ್ಪಿದರೆ ಬಲು ಭಯವೀವ ಪ . ಇಟ್ಟುಣಿಸಿದ ಬಲಿ ಕಟ್ಟಿದ ಯಶೋದೆಗೆಇಷ್ಟಾರ್ಥಗಳನಂದು ಕೊಟ್ಟು ಕಾಯನೆದುಷ್ಟತನದಿ ಧೃತರಾಷ್ಟ್ರತನಯ ತನ್ನಕಟ್ಟಲು ಹವಣಿಸೆ ಕಷ್ಟವನುಣಿಸನೆ 1 ಕಾಲಲಿ ತನ್ನ ಅಂಗವನೊದ್ದ ಮುನಿಪನಮೂಲೋಕವರಿಯೆ ಮುದ್ದಿಸಿ ಮೆರೆಯನೆತಾಳದೆ ನೃಪತಿಯ ತಾನೆಂದು ತಿಳಿಯನುಕಾಲಯವನ ಬಂದು ಕಾಳು ಮಾಡಿಸನೆ 2 ಪರವಶಚಿತ್ತನಾಗಿಫಲುಗುಣ ಜರೆಯಲುಹರಿ ದೂರಾಗದೆ ಹರಣವ ಕಾಯನೆಅರಸೆಂಬ ಗರ್ವದಿಂದ ಅರಿಭಟ ಪೌಂಡ್ರಕನಧುರಕೆ ಗುರಿಯ ಮಾಡಿ ಧುರದಿ ಕೊಲಿಸನೆ3 ಶರಕೆ ಗುರಿಯ ಮಾಡಿ ಸಮರದೊಳೊಡ್ಡಿದಸುರವ್ರತÀಗಂದು ಶುಭವನೀಯನೆಹರನ ಮೆಚ್ಚಿಸಿ ತನ್ನ ಗೆಲುವ ಬಿಲ್ಲ ಬೇಡಿದಶರೀರ ಸಂಬಂಧಿಯ ಕೊಲಿಸನೆ 4 ಮಕುಟವ ಕದ್ದೊಯ್ಯಲು ಮಹಾಬಲಿಯ ಬಾಗಿಲಅಕಳಂಕನಂದು ಕಾವುದ ಬಿಟ್ಟನೆಈ ಕೃಷ್ಣ ಹಯವದನನಿಂದುಡುಪಿನ ಜನಕೆಶೋಕವಿತ್ತ ಕಳ್ಳನಿಗೆ ಶೂಲಗತಿಯೀಯನೆ5
--------------
ವಾದಿರಾಜ
ಭಕುತರಿಗಾಶೀರ್ವಾದಗಳು ಕುಶಲಕೆ ಬರೆಯುತಲಿರಿ ಎನಗೆ ಪ ಯುಕುತಿಗಳನು ಬರೆದಿಹೆನಿಲ್ಲ ಅ.ಪ ಬೆರೆಯಬೇಡಿ ಈ ಜಗದ ರಗಳೆಯಲಿ ಮರೆಯಬೇಡಿ ಎನ್ನನು ಕ್ಷಣವು ಬೆರೆಯದೆ ಮರೆಯದೆ ಇರುವ ಧೀರರನು ಪೊರೆಯುವುದೇ ಎನ್ನಯ ಗುರಿಯು 1 ನಾಳೆಗೆ ಅಣಿಮಾಡಲು ಕೈಲಾಗದೆ ಗೋಳೇತಕೆ ನಾನೊದಗಿಸುವೆ ಕಾಲು ಕೈಗಳೊದ್ದಾಡುವತನಕ ಮೇಲೆತ್ತುವುದಳವೇ ಎನಗೆ 2 ಬಿಸಿಲು ಗಾಳಿ ಮಳೆಗಳು ಸಿದ್ಧೌಷಧ ಹಸನ ಮುಖವೆ ನಿಮ್ಮಯ ಪಥ್ಯ ರಸ ಕವಳವು ಬೇಕಾದರೆ ಕೊಳೆಯುವ ರಸವನು ತಿನ್ನಲು ಬಯಸದಿರಿ 3 ಕತ್ತಲಿನಲಿ ಓಡÀುತಲಿರುವಿರಿ ಸತ್ತಿರುವುದೆ ನಿಮ್ಮಯ ಬಲವು ಅತ್ತರೇನು ಫಲ ಎತ್ತಿನೋಡಿ ತಲೆ ಹತ್ತಿರದಿ ನಾನಿಹೆ ಸತತ 4 ಭಯವೇತಕೆ ದಾರಿದ್ರ್ಯದಲಿ ಭಯವೇತಕೆ ಜನರನು ಬಿಡಲು ಭಯವೇತಕೆ ಲೌಕಿಕವಿರದಿರಲು ಅಭಯ ಪ್ರಸನ್ನನಿರೆ ಹೃದಯದಲಿ 5 ಬೊಗಳುವರಿರುವರು ಹೊಗಳುವರಿರುವರು ಹಗರಣವೇತಕೆ ಮಾನಸದಿ ಒಗೆಯಿರಿ ಹಗೆತನ ನಗುತ ನಗುತಲಿರಿ ಜಗವೆ ಹೊಸ ಮೊಗ ತೋರುವುದು6
--------------
ವಿದ್ಯಾಪ್ರಸನ್ನತೀರ್ಥರು
ಭಕುತಿ ಸುಲಭವಲ್ಲ ಶ್ರೀ ಹರಿ ಭಕುತಿ ಸುಲಭವಲ್ಲ ಪ ಮುಕುತಿಗೆ ಯುಕುತಿ ಬೇರೆಯಿಲ್ಲ ಶ್ರೀ ಹರಿ ಅ.ಪ ಉರುತರ ಕ್ಲೇಶಕೆ ಗುರಿಯಾಗುತಿರಲು ಹರಿ ಹರಿಯೆನ್ನುತ ಕಿರುಚುತ ಸತತವು ಕ್ಲೇಶ ಹರಿಯನು ಸುಲಭದಿ ಮರೆವುದು ಭಕುತಿಯ ತರವಾಗುವುದೇ 1 ಭುವಿಯಲಿ ಬಹು ವಿಧ ಸುವಿನೋದಗಳ ಸವಿಯನು ಪೊಂದಲು ವಿವಿಧ ಭಾಗ್ಯಗಳ ಸುವಿನಯದಲಿ ಮಾಧವನನು ಬೇಡಲು ಹವನ ಹೋಮಗಳು ಭಕುತಿಯಾಗುವುದೇ 2 ಶ್ರವಣ ಮನನ ವಿಧಿಧ್ಯಾಸಗಳಿಂ ಸಿರಿಪತಿ ಗುಣಗಣದಲಿ ದೃಢಮತಿಯನು ಮಾಡುತ ತನುಮನಗಳನÀರ್ಪಣೆಯನು ಮಾಡುತ ಮನಸಿಜ ಜನಕ ಪ್ರಸನ್ನನಾಗುವಂಥ 3
--------------
ವಿದ್ಯಾಪ್ರಸನ್ನತೀರ್ಥರು
ಭಕ್ತವತ್ಸಲ ಹರಿ ಎಂಬ ಬಿರುದು ನಿನ ಗಿತ್ತವರ್ಯಾರಯ್ಯಾ ಹೇ ಜೀಯಾ ಪ ತತ್ತರಿಸುತಲಿಹರು ಈ ಜಗದೊಳು ಅ.ಪ ಪರಿಪರಿಯಲಿ ನಿನ್ನ ಮೊರೆಯ ಹೊಕ್ಕಿರುವ ಪರಮ ಸುಜನರುಗಳು ಈ ಧರೆಯೊಳು ಒರಳಿಗೊಡ್ಡಿರುವ ಶಿರಗಳುಳ್ಳವರಂತೆ ದುರುಳರ ಭಯದಿಂದ ನರಳುತಿರೆ 1 ವಾಸಕೆ ಗೃಹವಿಲ್ಲ ಲೇಶ ಸುಖಕೆ ಅವ ಕಾಶ ಇವರಿಗಿಲ್ಲ ಈ ಭುವಿಯೊಳು ಶ್ರೀಶನಾಗಿರೆ ನಿನ್ನ ದಾಸರೊಳಗೆ ಪರಿ ಹಾಸ ಮಾಡುತಲಿಹೆಯೋ ಜಗದೀಶ 2 ಪರಿ ಘನ್ನಬಿರುದುಗಳು ಇನ್ನು ಉಳಿವುದೆಂತೋ ನಾ ಕಾಣೆ ಸನ್ನುತಿಸುವವರಿಗೆ ಇನ್ನಾದರು ಸುಖ ವನ್ನು ನೀ ದಯಮಾಡೋ ಪ್ರಸನ್ನ 3
--------------
ವಿದ್ಯಾಪ್ರಸನ್ನತೀರ್ಥರು
ಭಕ್ತಿ ಗೀತಾವಳಿ ಸರಸ್ವತಿ ಸ್ತುತಿಗಳು 1 ಜಯ ಜಯ ಜನನಿ ಜಗದುಜ್ಜೀವಿನಿ ಪ ಜಯ ಬ್ರಹ್ಮಾಣಿ ಅ.ಪ ಆವಳ ಕೃಪೆಯಿಂ ಜೀವಿಪೆಮೋ ಮ ತ್ತಾವಳ ವ್ಯಾಪನೆಯಿಂ ದೈವಿಕ ಗುಣಸಂಭಾವಿತರಪ್ಪೆವೋ ಭಾವಿಪೆವಾದೇವಿಯ ನಾವ್ 1 ಉಡುವುದು ತೊಡುವುದು ಕೊಡುವುದು ಹಿಡಿವುದದಾರಿಂದಂ ನುಡಿವೆಣ್ಣೆನಿಸಿದವಳಾವಳೋ ನಾವವ ಳೆಡಬಿಡದೆರೆವೋಂ 2 ತಾಯೆಮಗರಿವಂ ಕಾಯಕೆಬಲಮಂ ಮಾಯೆಯೆ ಬಿಡಿಸಿನ್ನು ಕಾಯಜಪಿತ ಶೇಷಾದ್ರೀಶನೆ ನೆನೆವಾಸನ್ಮತಿಯೆಂದೆಂದುಂ 3
--------------
ನಂಜನಗೂಡು ತಿರುಮಲಾಂಬಾ
ಭಕ್ತಿಯು ಸುಲಭ ತಾನಲ್ಲ ನಿಜಭಕ್ತಿ ದೊರಕಲವಗಾಗುವುದು ಎಲ್ಲ ಪ ಎಲ್ಲ ಸಂಗವ ಬಿಡಬೇಕು ತಾನುಬಲ್ಲ ಗುರುವ ಸೇವೆ ಮಾಡಬೇಕುಎಲ್ಲಕೆ ತಾನಿರಬೇಕು ಭಕ್ತಿಬಲ್ಲವನಿಂದ ನಿತ್ಯದಿ ಹೆಚ್ಚಬೇಕು 1 ಹೇಳಿದಲ್ಲಿಗೆ ಹೋಗಬೇಕು ಮನಕೇಳದಿರಲು ಬುದ್ಧಿಯ ಹೇಳಬೇಕುಕಾಳರಾತ್ರೆಯೆನ್ನದಿರಬೇಕು ನಿತ್ಯಬಾಲಕನಂತೆ ತೋರುತಲಿರಬೇಕು 2 ಹಸಿವು ತೃಷೆಯ ಬಿಡಬೇಕು ತಾನುಎಸಗಿ ಗುರುಸೇವೆ ಮಾಡಬೇಕುಬಿಸಿಲು ಮಳೆ ಎನ್ನದಿರಬೇಕು ಧೈರ್ಯವೆಸಗಿ ಭಯಕೆ ಬೆಚ್ಚದಲಿರಬೇಕು 3 ಗುರುವಿನನಡೆ ನೋಡಬೇಕು ಆಗುರುವಿನ ನಡೆಯ ಕಂಡಂತಿರಬೇಕುಕರಣ ವಿಷಯ ಹೋಗಬೇಕು ನಿತ್ಯಭರಿತವಾನಂದವಾಗಿರಬೇಕು 4 ಕರವ ನೀಡುವನು ಏ-ನೆಂತು ಪೇಳಲಿ ತನ್ನೊಳೆರಕ ಮಾಡುವನು 5
--------------
ಚಿದಾನಂದ ಅವಧೂತರು
ಭಗವಂತನ ಸಂಕೀರ್ತನೆ ಏನಿದು ರೂಪ ಶ್ರೀ ನರಹರೆ ಪ ಏನಿದು ರೂಪವೋ ಮನಸಿಜನಯ್ಯನೇ ನೆನಿಸಿದವರ ಹೃದ್ವನಜದೊಳ್ ಮೆರೆವುದೂ ಅ.ಪ ಮಾರನ ಪಿತನೆಂದು ಕರೆಸಿ ಕೊಂಬುವನಿಗೆ ಮೋರೆಯೊಳ್ ಮೂರು ಕಣ್ಣುಗಳ ಧರಿಸಿರುವುದು 1 ಪರಮ ಶಾಂತನೆಂದು ಮೆರೆಯುವೀ ಶ್ರುತಿಯೊಳು ಕ್ರೂರ ರೂಪದಿಂದ ನರರಿಗೆ ತೋರ್ಪುದು 2 ವರ ವೈಜಯಂತಿಯ ಕೊರಳೊಳ್ ಧರಿಸುವಗೆ ಕರುಳ ಹಾರವ ಧರಿಸಿ ವರ ಶಬ್ದ ಮಾಳ್ವೊದು 3 ನಾನೇ ದೇವರು ಮತ್ತು ಅನ್ಯರಿಲ್ಲೆಂಬುವ ಕನಕ ಕಶ್ಯಪ ಮುಖ್ಯ ದನುಜರ ಸೀಳ್ವುದು 4 ತರಳ ಕರದಾಕ್ಷಣದಿ ವರ ವೈಕುಂಠವ ಬಿಟ್ಟು ನರಹರಿ ಎನಿಸಿ ನೀ ಭರದಿ ಬಂದಿರುವುದು 5
--------------
ಪ್ರದ್ಯುಮ್ನತೀರ್ಥರು
ಭಗವಂತನ ಸಂಕೀರ್ತನೆÀ ಇಂದಿರಾರಮಣ ಆನಂದಮೂರುತಿ ನಿನ್ನ ವಂದಿಸಿ ಕರಗಳ ಬಂಧಿಸಿ ಬೇಡುವೆ ಪ ಎಂದಿಗೂ ಎನ್ನ ಹೃದಯಮಂದಿರ ಬಿಡದಿರೊ ನಂದಮುನ್ನೀಶ್ವರ ವಂದಿತ ಚರಣನೆ ಅ.ಪ ಕೃತಿರಮಣನೇ ಮುನಿಸತಿಯು ಶಾಪದಿ ಶಿಲಾ ಕೃತಿಯಾಗಿರಲು ಶ್ರೀಪತಿಯೇ ನೀ ಬಂದು ರತಿಪತಿಪಿತನೆ ಯುವತಿಯನ್ನೆ ಮಾಡಿದ ಪತಿತಪಾವನ ನೀನಲ್ಲವೇನೊ ಹರಿಯೆ 1 ನಾಕರಾಜನ ಸುತನು ಕಾಕರೂಪದಿ ಬಂದು ಏಕಾಂತದೊಳು ಅವಿವೇಕವ ಮಾಡಲು ಶ್ರೀಕಾಂತ ತೃಣದಿಂದ ಭೀಕರಿಸಿ ಮೂರು ಲೋಕ ಸುತ್ತಿಸಿ ಅವನ ನೀ ಕಾಡಿದೆ ಹರಿಯೆ 2 ಮತ್ತು ಗಜೇಂದ್ರನಾಪತ್ತು ಪರಿಹರಿಸಿ ಉತ್ತಮ ಪದವವಗಿತ್ತು ರಕ್ಷಿಸಿದೆ ಭಕ್ತವತ್ಸಲ ಎನ್ನ ಕುತ್ತುಗಳನು ನೀ ಚಿತ್ತಕೆ ತರದೇ ಸದ್ವøತ್ತನೆಂದೆನಿಸೈ 3 ನೇತ್ರವೆಂಬುದು ನಾರಿಗಾತ್ರದೊಳಿರುವುದು ಶ್ರೋತ್ರವು ಗೀತವ್ರಾತದೊಳಿಹುದು ಚಿತ್ತ ವಿಷಯ ಭೋಗಾಸಕ್ತವು ಗೋಪಿಕಾ ಮಿತ್ರನೇ ಅಂಜಲಿಮಾತ್ರ ನೀನೊಪ್ಪಿಕೋ 4 ವರನಾಮಗಿರಿಲಕ್ಷ್ಮೀನರಸಿಂಹ ಮೂರುತೆ ಚರಣಕಮಲಯುಗ ಸ್ಮರಣೆಯ ಎನಗೆ ಸ್ಥಿರವಾಗಿರುವಂತೆ ವರವಿತ್ತು ಸಲಹೆಲೊ ಪರಮಪುರುಷ ದಿನಕರಕುಲತಿಲಕನೆ 5
--------------
ವಿದ್ಯಾರತ್ನಾಕರತೀರ್ಥರು
ಭಜನೆ ಭಾಗ್ಯ ಒಂದೇ ಸಾಲದೇ | ಹರೀ ಪ. ಭಜಕರಾದವರಿಗೆ ಹಗಲು ಇರುಳು ಮಾಳ್ಪಾ ಭಜನೆ ಭಾಗ್ಯ ಒಂದೇ ಸಾಲದೆ ಅ.ಪ. ಭಕ್ತರೆಲ್ಲರು ಕೂಡೀ ಮುಕ್ತಿಗೊಡೆಯನ ಪಾಡಿ ಭಕ್ತಿ ಭಾಗ್ಯವ ಬೇಡಿ ನೃತ್ಯವ ಗೈಯುವಾ 1 ತಾಳ ತಂಬೂರಿ ಗೆಜ್ಜೆ ಮೇಳನದಿಂದಲೀ ತೋಳುಗಳೆತ್ತಿ ಪಾಡೀ ವೇಳೆಯ ಕಳೆವಂಥಾ 2 ಹಿಂದೆ ಮುಂದಾಡುವ ನಿಂದಕರಾ ನುಡಿ ಒಂದು ತಾರದೆ ಮನಕಾನಂದವ ಬೀರುವಾ 3 ಕಟ್ಟಳೆ ಮೀರದೆ ಬಿಟ್ಟು ಬಿಡದೆ ನಿತ್ಯ ನಿಷ್ಠೆಯಿಂದಲಿ ಗುರು ಕೊಟ್ಟ ಅಜ್ಞೆ ಎಂಬಾ 4 ಮೂರ್ತಿ ನಿಂತು ಒಳಗೆ ಹೊರಗೆ ಸಂತಸಪಡಿಸೆ ಏಕಾಂತ ಭಕ್ತರು ಮಾಳ್ಪ 5 ಸಾಸಿರ ಸತ್ಕರ್ಮ ಮೀಸಲು ಫಲಗಳೂ ಶ್ರೀಶನ ಧ್ಯಾನಕೆ ತ್ರಾಸಿಗೇರದೆಂಬ 6 ಪದ್ಧತಿಯಂತೆ ತಂದೆ ಮುದ್ದುಮೋಹನ್ನ ಗುರು ಪದ್ಮ ಪಾದಕೆ ಸೇರಿ ಪೊದ್ದಿದ ದಾಸ್ಯದ 7 ತ್ರಿಗುಣದ ಕಲ್ಮಶ ವಗೆದು ದೂರಕೆ ಮನ ಮಿಗಿಲಾಗಿ ಹರಿಪದ ತಗಲಿಕೊಂಬುವುದಕ್ಕೆ 8 ನರ್ತಗೈಯ್ಯುತ ಸುತ್ತಿ ಪ್ರದಕ್ಷಿಣೆ ಎತ್ತಿ ಸ್ವರವ ಹರಿ ಮೂರ್ತಿಯ ಪಾಡುವಾ 9 ಶ್ರೇಷ್ಠ ಶ್ರೀ ಗೋಪಾಲಕೃಷ್ಣವಿಠ್ಠಲನನು ಇಟ್ಟು ಹೃತ್ಕಮಲದಿ ಮುಟ್ಟುವೋ ಹರಿ ಪುರ 10
--------------
ಅಂಬಾಬಾಯಿ
ಭಜಿಸಿರೊ ಬಿಡದೆ ವಿರಾಜಮಾನರಾಗಿ ನಿತ್ಯ ಕುಜನರೊಳಾಡದಲೆ ನಿಜ ಭಕುತಿಯಿಂದ ಭುಜಬಲವುಳ್ಳ ಪರಜರಟ್ಟುವ ದಿ ಗ್ವಿಜಯ ಸತ್ಯಪೂರ್ಣರ ಸುಜನರೊಂದಾಗಿಪ ಭರದಿಂದ ಬಂದು ನಿಂದು ನಿರೀಕ್ಷಿಸಿ ನಿರ್ಮಳ ಕರಯುಗಳ ಮುಗಿದು ಶಿರವಾನಿಲ್ಲದೆ ಧರಣಿಯಾ ಮ್ಯಾಲೊಂದು ತೀವರ ಸಾಷ್ಟಾಂಗ ನಮ ಸ್ಕರಿಸಿ ಕೊಂಡಾಡಿ ನಿಂದಿರಲಾನರರಿಗೆಲ್ಲ ಪರಿಹರವೊ ಬಂದರಘಳಿಗೆಯಲಿ ದುರುಳರಿಗಾಯ್ತು ಮರಿಯದೆ ಚೆನ್ನಾಗಿ1 ನೆರೆನಂಬಿ ನಿಮ್ಮಯ ಗೋತುರ ಸಹಿತಕ್ಕೆ ಜ್ಞಾನಾಂ ಕುರವಾಗುವುದು ಇದು ಉರುಕಾಲ ಸಿದ್ಧವೆನ್ನಿ ತರತಮ್ಯ ತತ್ವ ತಾತ್ಪರಿಯ ವಿಧ ತಿಳಿದು ಸುರರು ಮೆಚ್ಚುತಲಿರೆ ಮುರರಿಪು ಚತುರ್ದಶ ಧರಣಿಗೆ ಪರನೆಂದು ಬಿರಿದನು ಎತ್ತಿ ಡಂಗುರವ ಹೊಯಿಸಿ ಡಿಂಗರರಿಗೆ ಸಚ್ಛಾಸ್ತ್ರ ಕೊಡುವ ಯತಿಶಿರೋಮಣಿ ಕರ್ನಾ 2 ಪಾದಾಂಬುಜಾತ ಕೃಷ್ಣಾ ತನು ಭವಸರಿತ ನಿವಾಸಾ ದಿವಿಜೇಶನಾಯುಧ ಕವಚದಿಂದಲಿ ತನ್ನವರನ ಪೊರೆದೆತ್ತಿ ನವವಿಧ ಬಗೆ ತೋರಿ ತವಕದಿ ಕೋಲುಪುರ ಪವಿತುರ ಸ್ಥಳದಲ್ಲಿ ರವಿಯಂತೆ ಪೊಳವರು ಭವದೋಷ ಕಳೆವುತಾ ಕವಿಗಳ ಮನೋಹರ ವಿಜಯವಿಠ್ಠಲನ ಶ್ರವಣ ಮನನ ಧ್ಯಾನವನು ಬಲ್ಲವರಾ3
--------------
ವಿಜಯದಾಸ
ಭಂಡನಾದೆ ಸಂಸಾರಕೊಂಡದೊಳಗೆ ಬಿದ್ದು ಕಂಡುಕಾಣದಂತಿರುವರೇ ಪುಂಡರೀಕನಯನ ಪ ಅಶÀನ ವಸನಕ್ಕಾಗಿ ದೆಸೆಗೆಟ್ಟು ಬಾಯ್ಬಿಡುತ ಅಸುವ ಕರದೊಳ್ಪಿಡಿದು ವಸುಧೆಯ ಜನರ ಬಸವಳಿದು ಬೇಡಲು ಕಣ್ಣೆಸಿದು ಬೈಯಲು ತಲೆಬಾ ಗಿಸಿಕೊಂಡು ನಿಂದೆ ಹರಿ ಉಸುರಲಳವಲ್ಲ 1 ರೊಕ್ಕದ ಆಸೆಗಾಗಿಕ್ಕೆಲದ ಜನರನ್ನು ತರ್ಕಿಸದೆ ದೈನ್ಯದಿಂ ಚಿಕ್ಕಮಗ ನಾ ಎನುತ ಫಕ್ಕನೆ ಕೈತಾಳನಿಕ್ಕುವರು ನಗಲು ಮಹ ದು:ಖದಿಂ ತಿರುಗಿದೆನು ಬಿಕ್ಕಿಬಿಕ್ಕಳುತ 2 ಯರ ಮೋಹಿಸಿ ದಂಡಿಸಿದೆ ಮನೆಸತಿಯ ಕಂಡವರು ತಿದ್ದಿದರು ಚಂಡಿತನವಿಡದೆ ಕಂಡವರ ಅರ್ಥವನು ಮನೆಸೇರಿಸಿ ಬಂಡೆದ್ದು ಜನರೊಳಗೆ ಮಂಡೆಯೆತ್ತದೆಹೋದೆ 3 ತಪದಿಂದ ಹರಿಪಾದ ಜಪಿಸುವುದ ಮರೆದು ನಾ ಕೃಪಣತ್ವಜನಸೇವೆ ಅಪರೂಪಗೈದೆ ಚಪಲತ್ವತನದಿಂದ ಅಪಹರಿಸಿ ಪರರರ್ಥ ಸುಪಥಕ್ಕೆ ದೂರಾಗಿ ಅಪರಾಧಿಯಾದೆ4 ಕದ್ದು ತಿಂದೆ ನೆರಹೊರೆಯ ಬಿದ್ದೆ ದುರ್ಬವಣೆಯೊಳು ಬದ್ಧನಾಗಿ ಧರೆಮೇಲೆ ಹದ್ದಿನಂತೆ ಬಾಳ್ದೆ ತಿದ್ದಿ ನೀ ಎನ್ನ ತಪ್ಪುಬುದ್ಧಿಯನು ಕಲಿಸೆನ್ನೊ ಳಿದ್ದು ಪೊರೆ ದಯದಿಂದ ಮುದ್ದು ಶ್ರೀರಾಮ 5
--------------
ರಾಮದಾಸರು
ಭದ್ರಾಣಿ | ಮನೊ ಮಾನಿ ಪ ಭದ್ರಗತಿಗೆ ಬಹು | ಭದ್ರ ಸುಸಾಧನವೃದ್ಧಿಯ ಗೈವುದ | ಭದ್ರವ ಕಳೆದು ಅ.ಪ. ವಕ್ತ್ರ ಸತಿ1 ಚಂಪಕ ನಾಸಿಕೆ | ಪಂಪಾಭಿಧೆ ಹರಿನೋಂಪಿಗೈವ ಮತಿ | ಗಿಂಪನು ಪಾಲಿಸು 2 ವಾಸವ ಸನ್ನುತೆ 3 ಮಂಗಳ ಮೃಡನಂತ | ರಂಗಳೆ ಗೌರಿಯೆಹಿಂಗಿಸುಯೆನ್ನ ಅ | ಘಂಗಳ ನಿಚಯವ 4 ಜಲಧಿಶಯನ ಗುರು | ಗೋವಿಂದ ವಿಠಲನಒಡಲೊಳು ಜಡಜದಿ | ಬಿಡದಲೆ ತೋರಿಸು5
--------------
ಗುರುಗೋವಿಂದವಿಠಲರು
ಭಯ ನಿವಾರಣ ಸುಳಾದಿ ನಾಕೇಶ ದೇವತತಿ ಆ ಕಮಲನಾಭ ಯತಿ ನಿಕರಗೊಲಿದನೆ ಶ್ರೀಕರವದನ ಸರ್ವಲೋಕಕಧಿಪ ಕೃಪಾ- ಲೋಕನದಲಿ ನೋಡಿ ಸುಖತೀರ್ಥನುತ ಚರಣ ವ್ಯಾಕುಲ ಬಿಡಿಸಿ ನಿನ್ನಾನೇಕ ಮಹಿಮೆ ತಿಳಿಸಿ ಜೋಕೆಯಿಂ ಕಾಯ್ದ ಗುರು ಆಕಾರಂತರ್ಯಾಮಿ ಈ ಕಾಲದಲಿ ಮನ ವ್ಯಾಕುಲಪಡಿಸುವ ಕಾಕು ಭಯವ ಬಿಡಿಸಿ ನೀ ಕಾಯಬೇಕೊ ದೇವ ಲೋಕ ಲೋಕಾದಿಗಳ ಸಾಕುವ ಭಾರಕರ್ತ ಆ ಕಮಲಭವನಭಯ ವ್ಯಾಕುಲ ಬಿಡಿಸಿದೆ ಲೋಕ ಸೃಷ್ಟಿಪ ಶಕ್ತಿ ಏಕಚಿತ್ತವ ಕೊಟ್ಟು ಲೋಕಲೋಕಾಧಿಪರ ನೀ ಕಾಯ್ದೆ ಕರುಣದಿ ಲೋಕವೆಲ್ಲವ ಕೊನೆಗೆ ಏಕಾಪೋಶನಗೈವ ಲೋಕಪತಿಯೆ ಭಕ್ತಾನೀಕಕÀಭಯದಾತ ಭೀಕರ ಬೆನ್ಹತ್ತಿ ತಾಕಿದ ಮನಸಿನ ವ್ಯಾಕುಲ ಭಯಬಿಡಿಸಿ ಜೋಕೆಯಿಂದಲಿ ಕಾಯೊ ಗೋಕುಲಾಂಬುಧಿ ಚಂದ್ರ ಗೋಪಾಲಕೃಷ್ಣವಿಠ್ಠಲ ಈ ಕಾಲಕೊದಗೆ ನಿನ್ನಾನೇಕ ಕೀರ್ತಿಯು ನಿಜವೋ 1 ಭಯ ನಿವಾರಕದೇವ ಭಕ್ತವತ್ಸಲ ನೀನೆ ದಯಮಾಡು ಮನಸಿನಲಿ ತಗುಲಿದ ಭಯವನೆ ಬಿಡಿಸಿ ಭಯಪಡಿಸುತಿರೆ ಖಳನು ಬಾಲಕನ ಪ್ರತಿದಿನದಿ ನಯವಿನಯದಿ ಕಂದ ನಿನ್ನನು ಮೊರೆಯಿಡೆ ಕೇಳಿ ದಯಮಾಡುತ ತರಳನಲಿ ಕನಲುತ ದೈತ್ಯನ ಕೊಂದು ಭಯ ಬಿಡಿಸಿದೆ ಬಾಲಕಗೆ ಭಕ್ತವತ್ಸಲ ನೃಹರೆ ಅಯೋನಿಜೆ ದ್ರೌಪದಿಗೊದಗಿದ ಅನುತಾಪಗಳನೆಲ್ಲ ದಯದಲ್ಲಿ ಪರಿಹರಿಸಿದ ಆಪದ್ಭಾಂಧವ ಸ್ವಾಮಿ ಭಯಪಡಿಸುತ ಭಸ್ಮಾಸುರ ಮೃತ್ಯುವಿನಂದದಿ ಮೃತ್ಯುಂ ಜಯನನು ಬೆನ್ನಟ್ಟಿ ಬರೆ ಹರನು ನಿನ್ನನು ಮೊರೆಹೋಗಲು ಸಂತೈಸಿ ತರುಣಿಯ ರೂಪದಿ ಖಳನ ಕೈಯಿಂದಲೆ ಅವನ ಶಿರ ಉರಿಸುತ ಶಿವನನು ಪೊರೆದೆ ಭಯಹಾರಕ ನರಹರೆ ಶ್ರೀ ಗೋಪಾಲಕೃಷ್ಣವಿಠ್ಠಲ ಜಯವಲ್ಲದೆ ದಾಸರಿಗೆ ಭಯವುಂಟೆ ಪೇಳೋ 2 ನಿತ್ಯ ನಿನ್ನನು ನಂಬಿ ಚಿತ್ತದಿ ನೆನೆವಂಥ ಆಪ್ತವರ್ಗಕೆ ಇನ್ನು ಮೃತ್ಯು ಭಯವು ಉಂಟಿ ಆಪ್ತನಲ್ಲವೆ ನೀನು ಚಿತ್ತಕಂಟಿದ ಭಯ ಮೃತ್ಯು ಪರಿಹರಿಸೈಯ್ಯ ಎತ್ತ ನೋಡಲು ನಿನ್ನ ವ್ಯಾಪ್ತಿ ಸುತ್ತಿರೆ ಜಗದಿ ಮೃತ್ಯುವೆತ್ತಣದೊ ನಿನ್ನುತ್ತಮ ಭಕ್ತರಿಗೆ ಇತ್ತ ದೇಹವು ನಿಂದು ಚಿತ್ತಾದಿಂದ್ರಿಯ ನಿಂದು ನಿತ್ಯ ನಡೆವ ಜೀವಕೃತ್ಯವು ನಿನದೈಯ್ಯ ಸುತ್ತುವೊ ಗ್ರಹಗತಿ ಮೃತ್ಯು ಪರಿವಾರವೆಲ್ಲ ಭೃತ್ಯರಲ್ಲವೆ ನಿನ್ನ ಚಿತ್ತಕ್ಕೆದುರಾಗುವರೆ ಭೃತ್ಯತ್ವದಲ್ಲಿರೆ ಎತ್ತಣ ಭಯವೈಯ್ಯ ಹತ್ತಿಕಾಡುವ ದುಷ್ಟಗ್ರಹಗಳ ಕಡೆಗೆ ನೂಕಿ ಚಿತ್ತ ನಿರ್ಮಲವಿತ್ತು ಮತ್ತೆ ಮಂಗಳವಿತ್ತು ನಿತ್ಯ ಕಾಯಲಿಬೇಕೊ ನಿನ್ನ ಸೇವೆಯನಿತ್ತು ಮೃತ್ಯು ಮೃತ್ಯುವೆ ಮಹಾದೈತ್ಯ ಸಂಹರಣನೆ ಚಿತ್ತದಲ್ಲಿ ನೀನು ಆಪ್ತನಾಗಿರೆ ಬೇರೆ ಹತ್ತಿಕಾಡುವ ಗ್ರಹ ಹತ್ತಿರ ಬರಲುಂಟೆ ಸಿರಿ ಗೋಪಾಲಕೃಷ್ಣವಿಠ್ಠಲ ಹತ್ತಿದ ಮೃತ್ಯು ಭಯ ಕಿತ್ತಿ ಬಿಸುಟು ಕಾಯೊ 3 ವಾಸುದೇವನೆ ನಿನ್ನ ದಾಸನ ಕಾಯುವಂಥ ಈಶನಲ್ಲವೆ ಜೀವರಾಶಿಗಳಿಗೆ ಬಿಂಬ ಸುಷುಪ್ತಿಯಲ್ಲಿ ಕಾವ ಆತ್ಮ ಆನಂದರೂಪ ತಾಸು ತಾಸಿಗೆ ಬಂದ ಭಯವ ಬಿಡಿಸುವದರಿದೆ ದಾಶರಥಿಯೆ ನಿನ್ನ ಅನುಜನ ಜೀವಭಯ ದಾಸ ಹನುಮನಿಂದ ಗಿರಿತರಿಸಿ ಹರಿಸಿದೆ ಆ ಸುಗ್ರೀವನ ಮೊರೆ ಕೇಳಿ ಅಭಯವಿತ್ತು ತೋಷದಿಂದಲಿ ಒಲಿದು ರಾಜ್ಯ ಸುಖವನಿತ್ತೆ ವಾಸವ ಮೊರೆಯಿಡೆ ಒಲಿದು ಅಮೃತವಿತ್ತು ಘಾಸಿಗೊಳಿಪ ಮೃತ್ಯುದೈತ್ಯರ ಸದೆಬಡಿದೆ ನಾಶರಹಿತ ನೃಹರಿ ಗೋಪಾಲಕೃಷ್ಣವಿಠ್ಠಲ ನಾಶದ ಭಯ ಉಂಟೆ ನಿನ್ನ ನಂಬಿದವರಿಗೆ 4 ತರಳತ್ವದಲಿ ಭಯವು ವರ ಯೌವ್ವನದಲಿ ಭಯವು ಜರೆ ಮರಣದಲಿ ಭಯವು ಪರಿಪರಿ ರೋಗದ ಭಯವು ಆರೆಘಳಿಗೆಯು ಬರದಂತೆ ಹರಿ ನೀ ಪರಿಹರಿಸುತಲಿ ಪರತರ ನಿನ್ನಯ ಮಂಗಳ ಚರಿತೆಯ ಸ್ಮರಣೆಯನಿತ್ತು ಹರಿಭಕ್ತರ ಕಾಯುವುದು ಬಿರುದಲ್ಲವೆ ನಿನಗಿನ್ನು ಪರಿಪರಿ ಭಯ ಕ್ಲೇಶಗಳ ಪರಿಹರ ಮಾಡುತ ಕಾಯೊ ವರಯಂತ್ರ ಮಂತ್ರಗಳು ಪರಿಪರಿ ಜಪ ಹೋಮಗಳು ತರತರದೌಷಧ ಪಥ್ಯ ನರಹರಿ ಎಲ್ಲವು ನೀನೆ ಹೊರಗೊಳಗೆಡಬಲದಲ್ಲಿ | ಮರೆವು ಸ್ಮರಣೆಗಳಲ್ಲಿ ಪರಿಪರಿ ಕ್ರೀಡೆಗಳಲ್ಲಿ ಚರಿಸುವ ಕರ್ಮಗಳಲ್ಲಿ ನೆರೆದಿಹ ಜನವೃಂದದಲಿ ಹಗಲಿರುಳು ಸಂಧಿಯಲಿ ಪರಿಪರಿ ಕಾಲಗಳಲ್ಲಿ ಪರಿಪರಿ ದೇಶಗಳಲ್ಲಿ ನರಹರಿ ದುರ್ಗಾಸಹಿತ ವರ ಮೃತ್ಯುಂಜಯ ವರದ ಸಿರಿಭಾರತಿಪತಿಸಹಿತ ಚರಿಸುತ ಬೆಂಬಿಡದಲೆ ನೀ ನಿರುತದಿ ಕಾಯಲಿಬೇಕೊ ಬರಿದನು ಮಾಡದೆ ಸ್ತುತಿಯ ವರ ಸುದರ್ಶನ ಪಾಂಚಜನ್ಯ ಪದ್ಮವ ಪಿಡಿದ ಪರಮ ಮಂಗಳರೂಪ ದೈತ್ಯರಿಗತಿ ಘೋರ ಗುರುಬಿಂಬನೆ ನೀನೆಂದು ಪರಿಪರಿ ಪ್ರಾರ್ಥಿಪೆನಿನ್ನು ಕೊರಗಿಸದಲೆ ಮನವನ್ನು ಹರಿ ಸೌಭಾಗ್ಯವನಿತ್ತು ಕರೆಕರೆಗೊಳಿಸದೆ ಕಾಯೊ ಕರುಣಾಬ್ಧಿಯೆ ದಾಸರನು ವರಭಾಗ್ಯವು ಆಯಸ್ಸು ಆರೋಗ್ಯಂಗಳೂ ಎಲ್ಲ ನಿರುತವಿರಲಿ ಬೇಕೊ ನಿನ್ನವರಿಗೆ ಸಾಧನಕೆ ಕರುಣಾಕರ ಗೋಪಾಲಕೃಷ್ಣವಿಠ್ಠಲ ನಿನ್ನ ಸ್ಮರಿಸಿದ ಮಾತ್ರದಿ ಸಕಲ ಭಯ ಪರಿಹಾರಕವೋ 5 ಜತೆ ನಿತ್ಯ ಮಂಗಳ ನಿನ್ನ ಸ್ಮರಿಪರ ಮನದ ಭಯವ ಕಿತ್ತು ಬಿಸುಟು ಸಲಹೋ ಗೋಪಾಲವಿಠ್ಠಲ
--------------
ಅಂಬಾಬಾಯಿ
ಭಯ ಹಾರಿಣೇ ದಯಾ ಕರುಣೀ ಪ ಜಯಲಕ್ಷ್ಮಿ ನಿನ್ನ ಪದದಿ ಜಯವು ಕೋರಲು ನಿ ರ್ದಯವೇನೆ ಜನನಿ ಅ.ಪ ಏನು ನೀಡಿದಿ ತಾಯಿ ಧ್ಯಾನಿಸಿ ಬೇಡುವಗೆ ಹೀನ ಅಪಜಯವಿದೇನು ಕಾರಣವು 1 ಪರಮಪರತರ ಕಲ್ಪತರುವಿನೊಳ್ಸುಖ ಬಯಸೆ ಪರಮ ಪರಿತಾಪವು ಬರುವುದೇನಮ್ಮ 2 ಸಿರಿಯರಾಮನ ಪ್ರಿಯೆ ಪರಮಮಂಗಳೆ ನಿನ್ನ ಪರಿ ಭಂಗ ಕಳೆಯೆ 3
--------------
ರಾಮದಾಸರು