ಒಟ್ಟು 8519 ಕಡೆಗಳಲ್ಲಿ , 133 ದಾಸರು , 4842 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ತನ್ನ ತಾ ತಿಳಿಯುವದೆ ಜ್ಞಾನ ಮನಮುಟ್ಟು ಪೂರ್ಣ ಚೆನ್ನಾಗಿ ಸದ್ಗುರುವಿನ ಕೇಳಿರೊ ಖೂನ ಧ್ರುವ ತನು ಮನವಿಟ್ಟು ತಿಳಿವದೀ ಗುರುಗುಟ್ಟು ಧನ ದ್ರವ್ಯಾರ್ಜಿತವನಿಟ್ಟು ಕೇಳಿ ಕಿವಿಗೊಟ್ಟು ಅನುಬವದ್ಹೆಚ್ಚಿ ಮೆಟ್ಟು ಸಾಧಿಸಿ ವೈರಾಗ್ಯ ಕೊಟ್ಟು ಖೂನಮಾಡಿಕೊ ಬೇಕಿಟ್ಟು ಅನುಮಾನ ಬಿಟ್ಟು 1 ಗಿಳಿಯಾಡಿದಂತೆ ನುಡಿಯಾತಕ ಬಾಹುದು ನೋಡಿ ಹೇಳ್ಯಾಡಕೊಂಬುದೀಡ್ಯಾಡಿ ಮಾತಿನ ರೂಢಿ ಬೆಳಗಿನೊಳು ಬೆರದಾಡಿ ಘನಕ ಘನ ಕೂಡಿ 2 ನುಡಿ ನಡಿ ಒಂದಾದರೆ ವಸ್ತು ತಾನಿಹುದು ದೂರ ಬಿಡಲರಿಯದು ಹಾಂಗಾದರ ಎಂದಿಗಾರು ಒಡಗೂಡಿ ನೋಡಿದರೆ ತನ್ನೊಳು ತಾಂ ನಿಜ ಖರೆ ಸಾರ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ತನ್ನ ತಾನು ಕಂಡರೆ ಜೀವಶಿವರೆಂಬ ಭೇದವೆಲ್ಲಿಹುದೋ ಪ ಶ್ರವಣ ಮನನ ನಿದಿಧ್ಯಾಸವು ಬಲಿದರೆ | ಭುವನದ ಜನಪದ ಪುಸಿಯಹುದೊ 1 ರೂಪನಾಮಕ್ರಿಯಾ ವರ್ಣಗಳು | ಕಾಯದಿ ತೋರಲು ನಿಜವಲ್ಲಾ 2 `ತತ್ತ್ವಮಸಿ’ ಮಹಾ ವಾಕ್ಯವು ಬಂದರೆ | ಮಿಥ್ಯೆಗಳೆಲ್ಲಾ ನೀಗುವವು 3 ಆಗಮದಲಿ ಶಿವಯೋಗವ ಮಾಡಲು | ಈಗಲೆ ಜೀವನ್ಮುಕುತಿಯು ಸಿಗುವದೊ 4 ಭವತಾರಕನ ಕರುಣವ ಪಡೆದರೆ | ಜನನ ಮರಣ ಭಯ ಹಿಂಗುವದೊ 5
--------------
ಭಾವತರಕರು
ತನ್ನ ತಿಳಿದು ತಾ ನಿರ್ಲಿಪ್ತನಾದವಗೆ ಇನ್ನೇನಿನ್ನೇನುತನ್ನ ತನ್ನೊಳು ಕಂಡು ತಾನಾದ ಮಹಾತ್ಮಗೆ ಇನ್ನೇನಿನ್ನೇನು ಪ ನಾನು ನೀನೆಂಬ ಹಮ್ಮುಳಿದುಳಿದಾತಗೆ ಇನ್ನೇನಿನ್ನೇನುನಾನು ನೀನೇ ನಿಶ್ಚಯವೆಂದು ನಿಶ್ಚಲನಾದವಗೆ ಇನ್ನೇನಿನ್ನೇನು1 ಸರ್ವವನರಿತು ಸರ್ವವೆ ತಾನಾದವಗೆ ಇನ್ನೇನಿನ್ನೇನುಸರ್ವ ಸರ್ವವು ಆದ ಸರ್ವಾತ್ಮಗೆ ಇನ್ನೇನಿನ್ನೇನು 2 ಮನದ ಮಾಟಗಳಿಗೆ ಮರುಳಾದವಗೆ ಇನ್ನೇನಿನ್ನೇನುಮನವು ತಾನಾದವಗೆ ಮನಕೆ ನಿಲುಕದವಗೆ ಇನ್ನೇನಿನ್ನೇನು 3 ಸುಖ ದುಃಖಗಳಿಗೆ ತಾ ಸಾಕ್ಷಿಯಾದವಗೆ ಇನ್ನೇನಿನ್ನೇನುಸುಖ ದುಃಖ ತೋರದೆ ಸಮಮನನಾದವಗೆ ಇನ್ನೇನಿನ್ನೇನು 4 ಅಗಣಿತ ಮಹಿಮಗೆ ಇನ್ನೇನಿನ್ನೇನು 5 ಎರಡನುಳಿದು ಮತ್ತೆರಡನು ಮರೆತವಗೆ ಇನ್ನೇನಿನ್ನೇನುಎರಡರೊಳು ತಾನೆಡಬಿಡದಿಪ್ಪಗೆ ಇನ್ನೇನಿನ್ನೇನು6 ಮುಟ್ಟು ಚಟ್ಟುಗಳ ಮುಗಿಸಿದಾತಗೆ ಇನ್ನೇನಿನ್ನೇನುಮುಟ್ಟು ಚಟ್ಟಲಿ ಅಡಗಿರುವಾತಗೆ ಇನ್ನೇನಿನ್ನೇನು7 ಸಕಲ ವಿಧವ ನೋಡಿ ಸಂತುಷ್ಟನಾದವಗೆ ಇನ್ನೇನಿನ್ನೇನುಸಕಲದಿ ಬೆರೆತು ಸಂಶಯವಳಿದಿಪ್ಪವಗೆ ಇನ್ನೇನಿನ್ನೇನು 8 ಚಿದಾನಂದ ಗುರುವಿನ ಚಿತ್ತದಿ ಪಿಡಿದಾತಗೆ ಇನ್ನೇನಿನ್ನೇನುಚಿದಾನಂದ ಗುರುವಿನ ಚಿತ್ಸುಖಭರಿತಗೆ ಇನ್ನೇನಿನ್ನೇನು 9
--------------
ಚಿದಾನಂದ ಅವಧೂತರು
ತನ್ನ ತಿಳಿದು ತಾನಾದಂಥ ಗುರುವಿನ ಪಾದವ ಹೊಂದುತನ್ನನರಿಯದ ಗುರುವ ಹೊಂದಬೇಡೆಂದೆಂದು ಪ ನಿನ್ನನು ದೇವನೆಂದೆನ್ನುವಗೆ ಈಗ ಶರಣು ಮಾಡೋಅನ್ಯ ದೇವರನೆಂದೆನ್ನುವನ ಹಾದಿ ಹೋಗಬೇಡೋ 1 ಕೋಟಿರವಿ ತೇಜವ ಕಣ್ಣಲಿ ನೋಡುಬೂಟಿಕ ಕಾಯಕಗಳ ದೂರಮಾಡು 2 ಸೋಹಂ ಮಂತ್ರವ ಹೇಳದವನ ಸೆರಗ ಬಿಟ್ಟು ನೀನುಊಹಿಸುವ ಬೇರೆ ಗುರುವನು ಉತ್ತಮ ಅವನು3 ವಾಸನೆ ಕಳೆದಾತಂಗೆ ಒಪ್ಪಿಸಯ್ಯ ತನುವಆಸೆ ಹಚ್ಚುವವನತ್ತ ಬಿಡಲಿ ಬೇಡ ಮನವ 4 ಚಿದಾನಂದ ಗುರುವ ಹೊಂದು ಚಿನ್ಮಾತ್ರನಹೆ ಮದಮುಖ ಗುರುವ ಹೊಂದದಿರು ತಿಳಿ ಮುಂದೆ ನೀನು ಕೆಡುವೆ 5
--------------
ಚಿದಾನಂದ ಅವಧೂತರು
ತನ್ನ ತಿಳಿಯದವನೇಕೆ ಇನ್ನವನನು ಸುಡಬೇಕು ಪ ವೇದಾರ್ಥಿಯು ತಾನಾಗಿ ವಾದಿಸುತಿಹನೀ ಗೂಗೆಓದಿದ ಓದದು ವ್ಯರ್ಥ ಒಳ್ಳಿತಾಗಿ ಗಳಿಸಿದನರ್ಥ 1 ಆಚಾರದಿ ಒದ್ದಾಡಿ ಅಡವಿಯ ಹಿಡಿದನು ಖೋಡಿಕುಚಾಳಿಯೆ ವ್ಯವಹಾರ ಕುಮಂತ್ರಕೆ ಬಲು ಧೀರ 2 ಮಾನ್ಯರ ಕೋಪದಿ ಝಡಿವಾ ಅವಮಾನ್ಯರ ಕೊಂಡಾಡಿ ನುಡಿವಾಜ್ಞಾನದ ಹಾದಿಯ ಕಾಣ ಗೋಣಿಯ ಹೊರುವ ಕೋಣ3 ಮುಕ್ತಿಯ ತಿಳಿಯಲು ಬಾರ ಮುಂದಿನ ಭವಿತವ ನೋಡಭಕ್ತಿಯೆಂಬುದಿಲ್ಲ ಈ ಕತ್ತೆಗೇನು ಸಲ್ಲ 4 ಕಲ್ಲನೆ ದೇವರು ಎಂಬ ಕಡಮೆಯಲಿಲ್ಲವು ಎಂಬಒಳ್ಳಿತಲ್ಲವು ಅವನಿರವು ಒಲಿದವನೇ ಚಿದಾನಂದ ಗುರುವು 5
--------------
ಚಿದಾನಂದ ಅವಧೂತರು
ತನ್ನ ಮನೆಯಲ್ಲಿ ಬಣ್ಣದ ಭೊಗರಿ ಚಂಡು ಯಿಲ್ಲಾ | ಹಾಸಿಕೆ ಹಾಸಿಕೆ ಎತ್ತ | ಕಾಸೆ ಬಿಸಿ ನೀರು | ದಾಸನ ಕರಿಯೆ | ಸೊಲ್ಲು ಗೋಪಿ 1 ಕುಪ್ಪಸÀ ಕೊಡಬೇಡ ನೀ | ಅಪ್ಪನ ನೋಡ ಬೇಡ | ಚಪ್ಪರದೊಳಗೆ ಕುಳಿತು ಕಾಳು | ಕುಪ್ಪೆ ನಾಡುವ ಈಗ ಪೋಗಿ 2 ಹೊತ್ತು ಹೋಯಿತು ಮಸರುಕಟಿಯಲಿಲ್ಲ್ಯಾಕೆ | ಬಿತಿ ಬಿತಿ ಬೂವಾ ಉಂದೇನು ತುತ್ತು 3 ಅನ್ನಯ್ಯಾ ಬಂದ ತಾರೆ ತನ್ನ ತಲಗೀಯ | ನಿನ್ನೆ ಮಾಡಿದ ವಬ್ಬತು ಕೊದು ಎನ್ನ ಬಟ್ಟಲೊಳಗೆ ಹಾಕ 4 ಹೊಲಗೆ ಅನ್ನಯ್ಯ ಬಿದ್ದಾನೆ ತಲಿಯಲ್ಲೆ ಮನ್ನು | ಶಲಗಿಲಿ ವಲಿಗಿಸುವೇಗ ಬಂದು ತೊಲಿಯೆ ಬಿಸಿ ನೀರಿಂದ ಕೆತರು 5 ಕೆಲಿಗೆ ಹೋದೆನು ಕುಂತಿ ತಾಲೆ ಗೋಪಮ್ಮ | ಕಾಲಿಗೆ ಪಾಪೋತು ಆ ಮೆತ್ತನೆ ವಾಲೆಕಂತ ಕೈಯಲಿ ಹಿದಿಸೊ6 ತೊದಲ ಮಾತಾ ಕೇಳಿ ಮಗನ ವದನ ಮುದ್ದಾ | ಯದುಕುಲ ಪಾವನ ವೆಂದಳು ಗೋಪಿ7
--------------
ವಿಜಯದಾಸ
ತನ್ನ ಸ್ಮರಣೆ ತಾನರಿಯದ ಮನವು ಚಿನುಮಯ ರೂಪನ ಬೆನ್ನವಿಡಿವುದುಂಟೆ ಪ ಹಾವಿನ ಹೆಜ್ಜೆಯ ಹಾವರಿವಂದದಿ ಭಾವಿಸಿಕೊಳ್ಳದೆ ತಗ್ಗು ಮುಗ್ಗುಗಳ ಗೋವಳನಿಲ್ಲದ ಗೋವಿನ ತೆರನಂತೆ ಜೀವನುಂಗುವ ವ್ಯಾಘ್ರನಗ್ರಕೆ ಸುಳಿಯಲು 1 ಕನ್ನಡಿ ಶುದ್ಧವಾಗಿಯೆ ಕಾಣದ ದೃಷ್ಟಿ ಚಿನ್ನವಾರಿಕೆಯನ್ನು ಮಾಡುವ ಪರಿಯು ನಗದ ಮನ ಮನ್ನಣೆಯಿಲ್ಲದ ಮನೆಯೊಳುಂಬರೆ ಹೇಸ2 ಹೇಳಿದ ಮಾತನು ಕೇಳಿ ಮಾನಸದೊಳು ಮೇಳವಾಗುವೆನೆಂದು ಖೂಳತನದಿ ಪೋಗಿ ಕೇಳಿದ ಉತ್ತರಕುತ್ತರ ಹರಿಸದೆ ಆಳು ಬಾವಿಯ ಹಾರಿ ಹೊಳಚುವ ತೆರನಂತೆ 3 ಕಾಗೆಯು ಗರುಡನ ಸರಿಯೆಂದು ಜೂಜಾಡಿ ಸಾಗರವನು ಹಾರಿ ನಡುವೆ ಬಿದ್ದಂದದಿ ಯೋಗಿಯ ಪರಿಯಂತೆ ತಪವೆಂದು ತನ್ನಯ ಮೂಗ ಮುಚ್ಚಲು ಭವರೋಗ ಹಾರುವುದಂತೆ 4 ಮೀಸಲಿಗೊದಗುವ ಶೇಷಗಿರೀಶನ ಆಸೆಯಗ್ರಾಸವ ಬೇಡಿಕೊಳ್ಳದ ಮನ ಸಾಸಿರ ವೆಗಡದ ಭಾಂಡದೊಳೋಗರ ಬೇಯಿಸಿ ಭುಂಜಿಪೆಯೆಂದು ಮೋಸ ಮಾಡುವದಿಂದು 5 ಚಿತ್ರಿಕ ರಚಿಸಿದ ಸೇನೆ ಸೇನೆಗಳಲ್ಲ ಪ್ರಸ್ತುತಕೊದಗುವದೆನುತಿಹ ರಾಯನ ಮುತ್ತಿಕೊಂಡಿಹ ಪರಸೇನೆಯ ಇದಿರೊಳು ಮೃತ್ಯುದೇವತೆ ಬಂದು ಮೂದಲಿಸುವಳೆಂದು6 ಮೊಸರನ್ನ ತನ್ನ ಕೈಯೊಳಗಿದ್ದಂತೆ ಹಸಿವಾದ ವೇಳ್ಯದಿ ಹಸಿಯ ಮೆಲ್ಲುವದೇಕೆ ಕುಶಲದಿ ನೆನೆಯಲು ಹಸನದಿ ಸಲುಹುವ 7
--------------
ವರಹತಿಮ್ಮಪ್ಪ
ತನ್ನೊಳಗಿಹುದು ತನಗೆ ತಿಳಿಯದು | ತನ್ನಂಥ ಮಹಿಮಗೆತೋರುವದು | ಇನ್ನೊಬ್ಬ ಮೂಢಗೆ ತೋರಿಸೆನೆಂದರೆಸಕ್ಕರಿಯೊಳಗಿನ ಸವಿ ಇದ್ಧಾಂಗೆ | ಹಾಂಗೆ ನಿಜವಸ್ತು 1 ನೂಕದು ಪೀಕದು ದೇಹಕ್ಕೆ ತಾಕದು | ಏಕಾಗಿ ಇಹುದುಮಾತಾಡದು ಪ್ರಾಕೃತ ಜನರಿಗೆ | ಮುಸುಕು ಹಾಕಿಹುದು ಕಾಷ್ಠದ ಒಳಗಿನ ಅಗ್ನಿ ಇದ್ಧಾಂಗೆ | ಹಾಂಗೆ ನಿಜವಸ್ತು 2 ಕಣ್ಣಿಗೆ ತೋರದು ಬೈಲಾಗಿ ಹೋಗದು | ಕಣ್ಣಿಗೆ ಕಣ್ಣಾಗಿ ನಿಂತಿಹುದು | ಹೆಣ್ಣಿಗೆ ಗಂಡಿಗೆ ಕುಣಿಸ್ಯಾಡುತಿಹುದು | ಕುಸುಮದ ಒಳಗಿನ ಪರಿಮಳದ್ಹಾಂಗೆ | ಹಾಂಗೆ ನಿಜವಸ್ತು 3 ಕೆಳಗದ ಮೇಲದ ಎಡಕದ ಬಲಕದ ಹಿಂದದ ಮುಂದದ ಜಡವದ | ಒಳ ಹೊರಗೆ ತುಂಬೇದ ಬ್ರಹ್ಮಾಂಡ ಮೀರೇದ | ಚಂದ್ರನ ಒಳಗಿನ ಬೆಳದಿಂಗಳ್ಹಾಂಗ ಹಾಂಗೆ ನಿಜವಸ್ತು 4 ನರಸಿಂಹ ಸದ್ಗುರು ರಾಮನ ದಯದಿಂದ ಪರವಸ್ತು ಎನಗೆ ಪ್ರಕಟಾಯಿತೊ ಪರರ ಮುಖದಿಂದಹೇಳುವದಲ್ಲ | ಪರವಸ್ತು ತಿಳಿದಂಥ ಯೋಗಿಯೆಬಲ್ಲಾ || ಹಾಂಗೆ ನಿಜವಸ್ತು 5
--------------
ನರಸಿಂಹ
ತಪ್ಪ ಪಾಲಿಸಯ್ಯ ತಿಮ್ಮಯ್ಯ ತಪ್ಪ ಪಾಲಿಸಯ್ಯಪ. ತಪ್ಪ ಪಾಲಿಸದೆಯಿಪ್ಪರೆ ಯೆನ್ನೊಳು ಒಪ್ಪಿಗೆ ಪಟ್ಟೊಲಿಯಪ್ಪ ತಿಮ್ಮಪ್ಪನೆಅ.ಪ. ಜಲಜನಾಭ ನಿನ್ನ ಮಹಿಮೆಯ ನೆಲೆಯನರಿಯದೆನ್ನ ಮನವದು ನೆಲೆಯಿಲ್ಲದ ಭವಜಲಧಿಯೊಳಾಡುತ್ತ ಲಲನಾ ವಿಷಯದ ಬಲೆಗೆ ಮೋಹಿಸಿ ಮನ ಸಿಲುಕಿ ಮಲಿನವಾಯ್ತು ತತ್ವದ ನೆಲೆಯನರಿಯದಾಯ್ತು ಹೀಗೆನ್ನುತ ಕಳೆದುಹೋಯ್ತು ವಿಂಶತಿ ವತ್ಸರಗಳು ತೊಳಲಿ ಸಕಲ ಭವದೊಳಗಾರ್ಜಿತವಹ1 ಹಾಳು ಮನವು ಕೂಡಿ ನಾನಾ ಚಾಳಿ ಮಾಳ್ಪುದಾಡಿ ಬುದ್ಧಿಯ ಪೇಳಿದಷ್ಟು ದುಶ್ಯೀಲವೆ ಮಾಳ್ಪುದು ಆಲೋಚನೆಯೊಳಗೆ ಬಿದ್ದರೆ ಮೇಲಿಲ್ಲವು ಕ್ಷಣಕೆ ತನ್ನಯ ಶೀಲವನೆ ಸ್ವೀಕರಿಸುತಿರುವುದು ಪೇಳಲೇನು ಕರುಣಾಳು ನೀ ಯೆನ್ನಯ2 ನಾನಾ ಕಷ್ಟಪಟ್ಟೆ ಇನ್ನಾದರು ಮಾನಿಸಬೇಕಷ್ಟೆ ಎನ್ನೊಳು ಊನ ಗ್ರಹಿಸಿ ಅನುಮಾನ ಸಾಧಿಸಿದರೆ ನಾನೆಂಬುವದೇನು ಸ್ವತಂತ್ರವ ಕಾಣೆನು ಎನ್ನೊಳಗೆ ಸಂತತ ನೀನೇ ಗತಿಯೆನಗೆ ಇದಕನು- ಮಾನವಿಲ್ಲ ಪಾದಾನತಜನರಾ ಧೀನನೆಂಬ ಬಿರುದಾನಬೇಕಾದರೆ3 ಅಪರಾಧಿಯೆ ನಾನು ಹೇಗೈ ಅಖಿಲಾತ್ಮನು ನೀನು ಹೃದಯದಿ ಕೃಪೆಯ ಬೀರಿ ತೋರಿಪ ಪರಮಾತ್ಮನೆ ಚಪಲನಾಗಿ ಎನ್ನುಪಮೆಗೆಯೊಡ್ಡಿದೆ ಸಫಲವಾಯ್ತು ಎನಗೆ ಕೀರ್ತಿಯು ಅಪಕೀರ್ತಿಯು ನಿನಗೆ ಪಾದವ ಜಪಿಸುವಂತೆ ಕರುಣಿಪುದಿನ್ನಾದರೂ ಕಪಟವಾಯ್ತೆ ಸರೀಸೃಪಗಿರಿರಾಜನೆ4 ದೂಷಣಾರಿ ನಿನ್ನ ಪಾದದ ದಾಸಗೈಯ್ಯೊ ಎನ್ನ ಎನ್ನೊಳು ದೋಷವಿಲ್ಲ ಜಗದೀಶ ಜನಾರ್ದನ ದಾಶರಥಿಯ ಕರುಣಾಶರಧಿಯೊಳಗೆ ಈಸಾಡಿದ ದಾಸ ಕಾರ್ಕಳಾ ಧೀಶ ಶ್ರೀನಿವಾಸ ರವಿಶತ ಭಾಸ ಶ್ರೀಲಕ್ಷ್ಮೀನಾರಾಯಣ ಸ ರ್ವೇಶ ಭಕ್ತಜನಪೋಷ ನೀಯೆನ್ನಯ5
--------------
ತುಪಾಕಿ ವೆಂಕಟರಮಣಾಚಾರ್ಯ
ತಪ್ಪ ಪಾಲಿಸಿಕೊಳ್ಳೊ ಜೀಯಾ ತಿಮ್ಮಪ್ಪ ವೆಂಕಟಗಿರಿರಾಯ ಪ. ಬಪ್ಪ ತನ್ನಯ ಭಕ್ತ ಜನರ ಬವಣೆಗಳ ನೊಪ್ಪನೆಂಬ ಬಿರುದಿಪ್ಪ ಭಾಸುರಕಾಯ ಅ.ಪ. ಅರವಿಂದ ಸಖನುದಯಿಸಲು ಅಜ ಗರನಂತೆ ಬೀಳುವ ತಪ್ಪು ಗುರು ಹಿರಿಯರ ಜರಿವಂಥ ತಪ್ಪು ನಿನ್ನ ಸ್ಮರಣೆಯ ಮಾಡದ ತಪ್ಪು ನಿತ್ಯ ಕರ್ಮಗಳ ಬಿಡುವ ತಪ್ಪು ಸ್ಥಿರ ಚಿತ್ತದಲಿ ನಿನ್ನ ಚರಣಾರಾಧಿಸದಂಥ 1 ಸಂಧ್ಯಾ ಕೃತ್ಯಗಳ ಕಾಲದಲಿ ಪರ ನಿಂದೆಯ ಮಾಡುವ ತಪ್ಪು ದಿವ್ಯ ಶ್ರೀ ಗಂಧ ಶ್ರೀ ತುಳಸಿ ಪುಷ್ಪಗಳ ತಾನೆ ತಂದಿರಿಸದ ಮಹಾ ತಪ್ಪು ಮಿಂದು ಮಡಿಯೊಳಿದ್ದು ಮರುಳನಾಗಿ ನಿಜ ಮಂದಗಮನೆಯಳ ಮಾತನಾಲಿಸುವಂಥ 2 ಮನ ವಚನಾದಿಗಳಿಂದ ಪರ ವನಿತೇರ ಸ್ಮರಿಸುವ ತಪ್ಪು ಪುಣ್ಯ ದಿನಗಳ ತ್ಯಜಿಸುವ ತಪ್ಪು ಪರ ಧನಾಭಿಲಾಶಿಯ ತಪ್ಪು ಕನಸಿಲಾದರು ನಿನ್ನ ನೆನೆಯದೆ ಸತಿಸುತ ತನುವೆನ್ನದೆಂಬ ಚಿಂತನೆಯಿಂದ ಬಳಲುವ 3 ನೇಮ ವ್ರತಗಳೆಲ್ಲ ಮರತು ಸೌಖ್ಯ ಕಾಮುಕನಾಗಿಹ ತಪ್ಪು ಬಹು ಪಾಮರವೃತ್ತಿಯ ತಪ್ಪು ನಿನ್ನ ದಯ ಶೋಭಿಸದಂಥ ತಪ್ಪು ಆ ಮಹಾ ಮಂತ್ರಗಳ ಜಪಿಸದ ತಪ್ಪು ಕಾಮಿನಿಯರ ಮೋಹಕ್ಕೊಳಗಾಗಿ ಬಳಲುವ 4 ನರಗುರಿಯಾದೆನ್ನ ತಪ್ಪ ನೋಡೆ ಹುರುಳು ಗಾಣುವುದುಂಟೆನಪ್ಪ ಸರ್ವ ಸ್ಥಿರ ಚರಾದಿಗಳೊಳಗಿಪ್ಪ ಲಕ್ಷ್ಮೀ ವರನಿತ್ಯ ಸತ್ಯ ಸಂಕಲ್ಪ ಪರಮ ಪಾವನ ಶ್ರೀಮದುರಗೇಂದ್ರ ಗಿರಿವಾಸ ಕರುಣದಿಂದೆನ್ನನುದ್ಧರಿಸಿ ರಕ್ಷಿಸು ಬೇಗ 5
--------------
ತುಪಾಕಿ ವೆಂಕಟರಮಣಾಚಾರ್ಯ
ತಪ್ಪು ಕ್ಷಮೆ ಮಾಡೊ ಕೃಪೆಯಿಂದ ನೋಡೊ ಧ್ರುವ ನೀನೆ ದಯಾನಿಧಿ ನಾನೆ ಅಪರಾಧಿ ಖೂನ ದೋರು ಹಾದಿ ಸ್ಥಾನ ನಿಜಗಾದಿ 1 ಅನಾಥನೆಂದು ನೋಡಿ ಸುನಾಥ ಎನ್ನ ಮಾಡಿ ಸ್ವಾನಂದ ಸುಖ ನೀಡಿ ಮನ್ನಾಥ ನಿಜಗೂಡಿ 2 ಹೆಳಲಾರೆ ಬಹಳ ಕೇಳೋ ನೀ ದಯಾಳ ತಾಳಿ ಎನ್ನ ತೋಳ ಬಾಳ ವಿಶ್ವಪಾಲ 3 ಸೇವೆ ಇದೆ ನಮ್ಮ ಭಾವಿಸುದು ನಿಮ್ಮ ಪಾವನಗೈಸು ವರ್ಮ ಸುವಿದ್ಯ ಪರಬ್ರಹ್ಮ 4 ಬಂದ ಮ್ಯಾಲೆ ಶರಣಕುಂದಬ್ಯಾಕೊ ಪೂರ್ಣ ಕಂದ ಮಹಿಪತಿ ಗುಣ ಚಂದಮಾಡೊ ಕರುಣ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ತಪ್ಪು ಕ್ಷಮೆ ಮಾಡೋ ಕೃಪೆಯಿಂದ ನೋಡೋ ಪ ನೀನೆದಯಾನಿಧಿ ನಾನು ಅಪರಾದಿ ಖೂನದೋರೋ ಹಾದಿ ಸ್ಥಾನ ನಿಜಾನಾದಿ 1 ಅನಾಥನೆಂದು ನೋಡಿ ಸನಾಥನೆನ್ನಮಾಡಿ ಸ್ವಾನಂದ ಸುಖನೀಡಿ ಮನ್ನಾಥ ನಿಜಗೂಡಿ2 ಹೇಳಲಾರೆ ಬಹಳಾ ಕೇಳೋನೀದಯಾಳಾ ತಾಳಿಯನ್ನ ತೋಲಾಬಾಲವಿಶ್ವಷಾಲಾ 3 ಸೇವಿ ಇದೇನಮ್ಮ ಭಾವಿಸುದು ನಿಮ್ಮ ಪಾವನ್ನಗೈಸು ವರ್ಮಾ ಸುನಿತ್ಯ ಪರಬ್ರಹ್ಮಾ 4 ಬಂದ ಮ್ಯಾಲೆ ಶರಣಾ ಕುಂದವ್ಯಾಕೋ ಪೂರ್ಣ ಕಂದ ಮಹಿಪತಿಗುಣಾ ಛಂದ ಮಾಡೋಕರುಣಾ 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ತಪ್ಪು ಮಾಡುವದು ಮನುಜ ಧರ್ಮ | ನಮ್ಮದು ಬೇಡುವದು ಕಾಡುವದು ಪ ನಡೆ ನುಡಿಗೆ ತಪ್ಪು ನೋಡುವದು ನ್ಯಾಯವೇ ನಿನಗೆ ||ಬಡವರಾಟಗಳೆಂದು ಸಲುಹಯ್ಯ | ಮಾಡಲಬೇಡ ತಡವ |ಕಡಿದ್ಹಾಕು ಕಮಳಲೋಚನಾ | ಎನ್ನ ನಿನ್ನಡಿಗೆಸೇರಿಸು | ಕಡಲಶಯನ ಮೋಹನ್ನಾ 1 ಮಡಹಿ ಮಲ್ಲನ ಕೆಡವಿ | ಜೋಡು ಮತ್ತಿಯ ಮರವ ತಡವಿ | ಮಧು ಮೊದಲಾದವರನ್ನು | ಅಡವಿ ಕಿಚ್ಚವ ನುಂಗಿ | ಕಡುವಿ ಮಡುವ ಧುಮುಕಿ | ಬಡವಿ ಕುಬ್ಜಿಯ ಕೈಪಿಡಿದು ಯಶವ ಪಡೆದಿ 2 ನಡೆವವನು ಎಡವುವನೆಂದು | ಅಪರಾಧಗಳನುಬಡಿದಾಡದೆ ಒಡಲೊಳಗೆ ಹಿಡಿವ | ಮಡದಿಯನುನಿಮ್ಮ ಜಡೆಯಲಿರಿಸಿದ ಮನೆಯಲಿ ಎನ್ನ |ಸಡಗರದ ರುಕ್ಮದಿಂದಿಡಿದು ಲಾಲಿಸು 3
--------------
ರುಕ್ಮಾಂಗದರು
ತಪ್ಪುಗಳೆಣಿಸಾದೆನ್ನಪ್ಪ ಕಾಯಲಿಬೇಕು |ಸರ್ಪಶಯನನ ದೂತಾ ||ಇಪ್ಪತು ಒಂದು ಕುಭಾಷ್ಯ ಮುರಿದ | ರಾ ಮ |ತ ಪ್ರವರ್ತಕ ರಾಘವೇಂದ್ರ ಮುನಿಪ ಮಹಾ ಪ ಪ್ರತಿ ವರುಷಕೆ ಬಂದು ಸನುತಿಸಿ ಪೋಗು ಎಂದು |ನತ ಸ್ವಪ್ನದಲಿ ನೀ ಬಂದೂ ||ಹಿತದಿಂದ ಪೇಳಲು ರತನಾಗಿ ಧನದಿ ಮ |ರತು ಬಿಟ್ಟೆ ನಿಮ್ಮನು ಯತಿಕುಲೋತ್ತಮ ಇಂಥಾ 1 ಸ್ನಾನ ಸಂಧ್ಯಾನ ಸುಜಪತಪ ವ್ರತಹೋಮ |ಮೌನ ಮಾರ್ಗಗಳರಿಯೆ ||ಜ್ಞಾನಿಗಳಾನು ಸಂಧಾನ ಪೂರ್ವಕ ಪೂಜೆ |ಯಾನು ಮಾಡದೆ ದುಷ್ಟ ಮಾನವರೊಳಗಿದ್ದೆ 2 ಏಸು ಜನ್ಮದಿ ಬಂದಾ ದೋಷವ ಕಳದು ವಿ |ಶೇಷ ಸುಖವ ಕೊಡುವಾ ||ಈ ಸುವಾರ್ತಿಯ ಕೇಳಿ ಮೊರೆಹೊಕ್ಕೆ ಗುರು ಪ್ರಾ ||ಣೇಶ ವಿಠಲನ ದೂತಾ ಮತಪ್ರೀತಾ 3
--------------
ಗುರುಪ್ರಾಣೇಶವಿಠಲರು
ತಪ್ಪುಗಳೆಲ್ಲವು ಒಪ್ಪುಗೊಳ್ಳಯ್ಯ ಶ್ರೀ ಚಪ್ಪರ ಶ್ರೀನಿವಾಸಪ. ಸರ್ಪರಾಜಗಿರಿಯಪ್ಪ ತಿಮ್ಮಪ್ಪನೆ ದರ್ಪಕತಾತನೆ ತಾ ಸಜ್ಜನಪ್ರೀತಅ.ಪ. ಮಾಧವ ನಿನ್ನಯ ಮಹಿಮೆ ತಿಳಿಯದಪ- ರಾಧವ ಮಾಡಿದೆ ದಾರಿದ್ರ್ಯದ ಪಾದ ದರುಶನದ ಗಾದಿಯ ಕಾಣದಾದೆ ನಾ ದ್ರೋಹಿಯಾದೆ1 ತ್ರಾಣವಿರುವಾಗ ಕಾಣಿಕೆ ಹಾಕಿದೆ ದೀನದಾರಿದ್ರ್ಯದ ಹೊತ್ತಿನಲಿ ಮೇಣದರಿಂದಲಿ ತೆಗೆದು ತೆಗೆದು ಪಂಚ ಪ್ರಾಣಕ್ಕಾಹುತಿಯ ಕೊಟ್ಟೆ ಅಪರಾಧ ಪಟ್ಟೆ2 ಮಂದವಾರದಿಕ್ಕೊಂದೂಟವ ಸತ್ತ್ವ ದಿಂದಿರುವಾಗ ನಾ ನೇಮಗೈದೆ ಮಂದಭಾಗ್ಯ ಜ್ವರದಿಂದ ಪೀಡಿತನಾದ- ರಿಂದೆರಡೂಟವನೂ ಮಾಡಿದೆ ನಾನು3 ಶನಿವಾರಕ್ಕೊಂದಾಣೆ ಕಾಣಿಕೆ ಹಾಕುತ್ತ ಮಿನುಗುವ ಡಬ್ಬಿಯ ನಾ ಮಾಡಿದೆ ಎನಗೆ ದಾರಿದ್ರ್ಯವ ಕೊಟ್ಟ ಕಾರಣದಿಂದ ಹಣವೆಲ್ಲ ಗುಣ ನುಂಗಿತು ಪಾದಕೆ ಗೊತ್ತು4 ದೊಡ್ಡದಾರಿದ್ರ್ಯದ ಗುಡ್ಡೆ ಬಿದ್ದುದರಿಂದ ದುಡ್ಡೆಲ್ಲ ತೆಗೆದೆ ನಾ ದಡ್ಡನಾಗಿ ಅಡ್ಡಬಿದ್ದು ಕೈಯೊಡ್ಡಿ ಬೇಡುವೆ ಸ್ವರ್ಣ ಗುಡ್ಡೆಯ ಮೇಲಿರುವ ಮಹಾನುಭಾವ5 ಭಂಡಾರದ್ರೋಹ ಬ್ರಹ್ಮಾಂಡಪಾಪಾಗ್ನಿಯು ಮಂಡೆಯೊಳುರಿವುದು ಖಂಡಿತದಿ ಪುಂಡರೀಕಾಕ್ಷನೆ ಕರುಣಾಮೃತರಸ ಕುಂಡದೊಳ್ ಮೀಯಿಸಯ್ಯ ವೆಂಕಟರಾಯ6 ದೃಢಭಕ್ತಿಯನು ಕೊಟ್ಟು ಸಲಹಬೇಕಲ್ಲದೆ ಕೆಡುಕು ಮಾಡುವುದೇನು ಜಡಜನಾಭ ಕಡಲಶಯನ ಲಕ್ಷ್ಮೀನಾರಾಯಣ ನ- ಮ್ಮೊಡೆಯ ಪಡುತಿರುಪತೀಶ ರವಿಕೋಟಿಭಾಸ7
--------------
ತುಪಾಕಿ ವೆಂಕಟರಮಣಾಚಾರ್ಯ