ಒಟ್ಟು 5603 ಕಡೆಗಳಲ್ಲಿ , 119 ದಾಸರು , 4020 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಧನ್ಯನಾದೆನಯ್ಯ ನಾನು ಧನ್ಯನಾದೆನುಅನ್ಯಮಾರ್ಗವನುಳಿದು ನಿನ್ನ ಭಕ್ತ ಭಕ್ತನಾಗಿ ಪನಿನ್ನ ಮೂರುತಿಯ ನೋಡಿ ನಿನ್ನ ಗುಣವ ಕೊಂಡಾಡಿನಿನ್ನ ನಾಮಗಳ ಪಾಡಿ ನಿನ್ನ ಮುಂದೆ ಕುಣಿದಾಡಿ 1ಆವ ಜನ್ಮಾರ್ಜಿತ ಪುಣ್ಯ ತಾವೊದಗಿತೊ ನಾ ಕಾಣೆನೀವೊಲಿದರೆ ದುರ್ಲಭ ವಾವುದೀ ಮೂರು ಲೋಕದಿ 2ತಿರುಪತಿ ಕ್ಷೇತ್ರಾಧಿವಾಸ ಪರಮಪುರುಷ ವೆಂಕಟೇಶಗುರು ವಾಸುದೇವಾರ್ಯ ವೇಷ ಮರೆಯೊಕ್ಕೆ ನಾ ನಿನ್ನ ದಾಸ 3ಓಂ ಭೀಷ್ಮ ಮುಕ್ತಿಪ್ರದಾಯಕಾಯ ನಮಃ
--------------
ತಿಮ್ಮಪ್ಪದಾಸರು
ಧನ್ಯನಾದೆನೀದಿನ ನಿನ್ನ ಕಂಡ ಕಾರಣ ಪ. ಪನ್ನಗಾದ್ರಿವಾಸ ಸುಪ್ರಸನ್ನನಾದ್ದರಿಂದ ನಾ ಅ.ಪ. ವ್ರತನೇಮ ಜಪ ತಪ ಹಿತಮಾದುದೈ ಸುತಪ ಕೃತಿಪತಿ ತವ ಕೃಪಾಶತಧೃತಿಲೋಲುಪಾ 1 ವಿದಿಭವಾದಿಗಳಿಂದ ವಿನಮಿತ ವಿಶ್ವಾನಂದ ಪದುಮನಾಭ ಗೋವಿಂದ ಪವನನಯ್ಯ ಮುಕುಂದ 2 ಪ್ರೀಯ ತಪೋವಾಸನನೀಯುವ ದೇವರ ದಾನ ತೋಯಜಾಕ್ಷ ಲಕ್ಷ್ಮೀನಾರಾಯಣ ಪರಾಯಣ 3
--------------
ತುಪಾಕಿ ವೆಂಕಟರಮಣಾಚಾರ್ಯ
ಧನ್ಯನಾದೆನು ಗುರು ನಿಮ್ಮಯ ದಯದೀ ಪ ಹಿಂಗಿತು ಮುನ್ನಿನಂಗವದೋಷವು ಮಂಗಲವಾಗಲು ಇಂಗಿತ ಸುಖದಾ 1 ಸಾರಾಸಾರ ವಿಚಾರದ ತತ್ವದ ದಾರಿಯ ಸುಜನಕ ದೋರುತ ಕರುಣದಿ ಪ್ರೇರಿಸಿ ಸುಮತಿಯ ಶ್ರೀ ರಘುಪತಿ ಸಾ ಕಾರವ ತೋರಿಸಿ ತಾರಿಸಲಾಗಿ 2 ಕರುಣಿ ಅಭಿನವ ತೀರ್ಥ ಮುನಿಕರ ವಾರಿಧಿ ಶ್ರೀ ಸತ್ಯ ಪೂರಣ ಚಂದ್ರರ ಸಾರಲು ಹೋಯಿತು ಮೂರು ತಾಪಗಳು ದೋರಲು ಕಂದಗ ಪಾರದ ಸುಖವು 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಧನ್ಯನು ಶಚಿಪತಿ ಧನ್ಯಳು ಶಚಿಯು ಅ.ಪ ಚಂದ್ರನು ತನ್ನಯ ಸುಂದರ ಬಿಂಬದಿ ನಂದನ ವನದಲಾನಂದಪಡುತಿಹನು 1 ಮಂದಮಾರುತ ಸುಮಗಂಧವ ಬೀರುತ ಮಂದದಿಂದಲಿ ಸುಧೆ ಬಿಂದುಗಳೆಸವುದು 2 ಮಣಿಮಯ ತರುಗಳು ಎಣಿಕೆಗೆ ಬಾರವು ಕುಣಿಯುತಲಿದೆ ಎನ್ನ ಮನದಭಿಲಾಷೆಯು * 3 (ನಂದನವನವನ್ನು ಕಂಡಾಗ ಸತ್ಯಭಾಮೆಯ ಸಂತೋಷ)
--------------
ವಿದ್ಯಾಪ್ರಸನ್ನತೀರ್ಥರು
ಧರಣಿಪತಿ ನಿನ್ನಯ ಕರುಣವೆಂಬುದೆ ಸಾಕು ಪ ಉರಗಾದ್ರಿನಿಲಯ ವಾಸಾ ಧರೆ ನರಾಧಮರೆನ್ನ ಪರಿಪರಿ ಪೀಡಿಸಿ ಜರಿದುಗೈವರು ಪರಿಹಾಸ ಅ.ಪ. ಮಾನವನು ಬಿಡದೆ ಕಾಯ್ದ ಕಂದು ಗೊರಳನ ಬೆನ್ನಟ್ಟಿಬರೆ ರಕ್ಕಸನು ಪೆಣ್ಣಾಗಿಯವನುರುಹಿದಿ ನರನನುಡಿ ನಿಜಮಾಡಿದಿ ಗೀತವಾದಿ ಕೃಷ್ಣ 1 ಭರದಿಯವನುದ್ಧರಿಸಿದೀ ಪಾಂಡವರಿಗೊಲಿದು ಪೊಂದಿ ನಿಜ ಬೆರಳಿನಲ್ಲಿ ಗೋವರ್ಧನವ ಪಿಡಿದೆತ್ತಿ ಗೋವಿಂಡು ಸಂತೈಸಿದಿ ಕರುಣ ಶರಧೀ ಕೃಷ್ಣಾ2 ಉಣಿಸಿ ದೇಹವ ಬೆಳೆಸಿದೆ ಸುರಿದು ಆಯುಷ್ಯ ಗಳಿಸಿದೆ ವಿಷಯದಲ್ಯಭಿಮಾನ ತಾಳಿ ಮೆರೆದೆ ಕಲಿಯ ಬಾಧೆ ಕೃಷ್ಣಾ 3
--------------
ನರಸಿಂಹವಿಠಲರು
ಧರೆಯನಾಳುವನೊಬ್ಬ ದೊರೆ ಜೈಶೀಲನಾ ಹರದಿ ಮಂಜುಳೆಯಿರಲು ಮಕ್ಕಳಿಗಾಗಿ ಮರುಗುತ ಸೊರಗಿರಲು ಈ ಪರಿಯ ನೋಡುತ ಹರನು ಬ್ಯಾಗ ತಾ ತಿಳಿದವರ ಮನ ತಿರುಕನಂದದಿ ಬರಲು ಧಾನ್ಯವ ಕರೆದು ನೀಡಿದರೊಲ್ಲದಾಗಲೆ ತಿರುಗಿ ಪೋದನೆ ಉರಗಭೂಷಣ ಮಂಗಳ ಜಯವೆನ್ನಿ ಮಂಗಳ ಶುಭವೆನ್ನಿ ಮಂಗಳಾಂಗಿಯರು ಬ್ಯಾಗ 1 ನಂದಿವಾಹನನ ಪೂಜಿಸಿ ಫಲಗಳ ಬೇಡೆ ಕಂದನಿಗಾಯುಷ್ಯವು ಐದರಾ ಮ್ಯಾಲ್ ಹ- ನ್ನೊಂದು ವರುಷವೆನಲು ವರ ನೀಡುತಿರಲು ಮಂಜುಳೆಯು ಗರ್ಭವನೆ ಧರಿಸಲು ಬಂಧುಗಳು ಹೂ ಮುಡಿಸಿ ಪರಮಸಂಭ್ರಮದಿ ಸೀ- ಮಂತ ಮಾಡಲು ತುಂಬಿತಾ ನವಮಾಸವಾಗಲೆ 2 ಜಾತವಾಗಲು ನಾಮಕರಣ ಮಾಡುತ ಚಂದ್ರಶೇಖರ- ನೆಂದ್ಹೆಸರಿಡುತ ಜಾವಳ ಜುಟ್ಟು ಪ್ರೀತಿಂದುಪನಯನ ಮಾಡುತ ವಿದ್ಯೆಗಳ ಕಲಿಸುತ ಆತಘದಿನಾರ್ವರುಷ ಬರುತಿರೆ ಪ್ರೀತಿಯಿಂದ್ಹಣಕೊಟ್ಟು ಕಾಶಿಯಾತ್ರೆಗೆನುತಲಿ ಕಳುಹೆ ಬ್ಯಾಗನೆ3 ಒಂದಾಗಿ ಅಳಿಯ ಮಾವಂದಿರು ಬರುತಿರೆ ಕಂಡಿಳಿದರು ತೋಟವ ಗೆಳತಿಯರು ಬಂದು ಹೂವಿಗೆ ಆಟವಾಡುತಲಿ ಕೋಪಿಸೆ ಒಂದಕ್ಕೊಂದು ಮಾತಾಡೆ ರಾಜ ನಂದನೆಯು ತಾ ನೊಂದುಕೊಳ್ಳದೆ ನಂದಿವಾಹನನರಸಿ ದಯವಿರಲೆಂದು ನಡೆದಳು ಮಂದಿರಕೆ 4 ಬಂದ ರಾಜನ ಮಗಳಿಗೆ ನಿಬ್ಬಣವು ಕರೆ- ತಂದರಸುಕುಮಾರನ ಧಾರೆಯನೆರೆದು ಮಂಗಳ ಸೂತ್ರವನು ಬಂಧನವ ಮಾಡಿದ- ರÀಂದದಿಂದಲಿ ಲಾಜಹೋಮವ ಬಂಧುಗಳ ಸಹಿತುಂಡು ಭೌಮವ ಚೆಂದದಿಂದಲಿ ಸುತ್ತಿಸಾಡ್ಯವ ಅಂದಿನಿರುಳಲಾನಂದವಾಗಿರೆ 5 ಸತಿಪತಿಯರು ಭಾಳ ಹಿತದಿಂದ ಮಲಗಿರೆ ಅತಿ ಹಸಿವೆನಗೆನಲು ಲಡ್ಡಿಗೆ ತಂದು ಘೃತ ಬಟ್ಟಲೊಳು ಕೊಡಲು ತಿಂದಿಡಲು ಮುದ್ರಿಕಾ ಸತಿ ಸಹಿತ ಸುಖನಿದ್ರೆಲಿರೆ ಪಾ- ರ್ವತಿಯು ಬಂದಾ ಖದ್ರುದೇವಿಸುತ ಬರುವನೆಂದ್ಹೇಳೆ ಕಳಸವ ಅತಿಬ್ಯಾಗದಿ ತುಂಬಿಟ್ಟಳುರಗವ 6 ಅತ್ತೆ ಕಾಶಿಗೆ ಪೋಗಿ ಅಳಿಯ ಮಾವಂದಿರು ಕ್ವಾಷ್ಟನ ಕರೆದು ತಂದು ಕುಳಿತಿರಲಾಗ್ವಿಚಿತ್ರ- ಭೂಷಿತಳು ಬಂದು ನೋಡುತಲಿ ನಿಂದು ಥಟ್ಟನೆದ್ದು ತಾ ತಿರುಗಿ ಪೋಗೆನ್ನ ಪಟ್ಟದರಸಿವನಲ್ಲವೆನುತಲಿ ಹೆತ್ತಜನಕ ನೀ ಅನ್ನಕ್ಷೇತ್ರವ ಇಟ್ಟು ನಡೆಸೀಗ್ವೀಳ್ಯಗಳ ಕೊಡುವುದು 7 ತಂದು ಭೋಜನಮಾಡುತ ಕುಳಿತಿರಲಾಗ ತಂದು ವೀಳ್ಯವ ಕೊಡುತ ಮುಖ ನೋಡಿ ನಗುತ ಸಂದೇಹಿಲ್ಲದೆ ಎನ್ನಪತಿ ಹೌದೆಂದು ನುಡಿದಳು ಬಂದು ಜನರು ನಿಂದು ಗುರುತೇನೆಂದು ಕೇಳಲು ತಂದು ತೋರಿದುಂ(ದಳುಂ?) ಗುರವ ಜನರಿಗೆ 8 ನಿನ್ನ ಗುರುತು ಏನ್ಹೇಳೆನ್ನಲು ಸಭೆಯೊಳು ಪನ್ನಂಗದ ಕಳಸವನು ತೆಗೆಯಲು ಬಾಯಿ ರನ್ನ ಮುತ್ತಿನ ಸರವು ಆಗಿರಲು ಉರಗವು ಕನ್ನೆಯರು ಹರಸ್ಹಾಕೆ ಕೊರಳಿಗೆ ಮನ್ನಿಸುತ ಮಹಾರಾಜ ಮಗಳನು ಚಿನ್ನದಾಭರಣಗಳು ಉಡುಗೊರೆ ತನ್ನಳಿಯಗುಪಚಾರ ಮಾಡುತ 9 ಸತಿಪತಿಯರು ತಮ್ಮ ಪಿತರ ಅಪ್ಪಣೆಗೊಂಡು ರತುನದಂದಣವೇರಲು ಮಾರ್ಗದಿ ಗೌರೀ- ವ್ರತ ಮಾಡಿ ನಡೆತರಲು ಪಿತಗ್ಹೇಳಿ ಕಳುಹಲು ಸುತನು ಬಂದರಮನೆಗೆ ಭಾಗೀ- ರಥಿಯು ಮಾತುಳ ಮಡದಿ ಸಹಿತ ಹಿತದಿ ಬಂದೆರಗಿದರೆ ಸೊಸೆಮಗ ಅತಿಹರುಷದಿಂದಪ್ಪಿ ಕೇಳುತ 10 ದಾವ ಪುಣ್ಯದ ಫಲದಿಂದ ನಿನ್ನರಸನ ಪ್ರಾಣ ಪಡೆದಿಯೆನಲು ಮಂಗಳಗೌರಿ ದೇವಿ- ದಯವಿರಲೆಂದು ಹೇಳಲು ಶ್ರೀಗೌರಿಕಥೆಯನು ಕಾಮಿತವನದೊಳಗೆ ದ್ರೌಪದಿಗ್ಹೇಳಿದನು ಭೀಮೇಶಕೃಷ್ಣನು ಮಾಡಿದರೆ ಮುತ್ತೈದೆತನಗಳ ಬೇಡಿದಿಷ್ಟಾರ್ಥಗಳ ಕೊಡುವೋಳು ಮಂಗಳ ಜಯವೆನ್ನಿ ಮಂಗಳ ಶುಭವೆನ್ನಿ ಮಂಗಳಾಂಗಿಯರು ಬ್ಯಾಗ 11
--------------
ಹರಪನಹಳ್ಳಿಭೀಮವ್ವ
ಧರೆಯೊಳಗೆ ವ್ಯಾಸಮುನಿವರನ ಸಂಸ್ಥಾನಕಿ ನ್ನೆರಡನೆಯದಾವುದುಂಟು ಪ. ಪರಿಪರಿಯಲಿ ನೋಡೆ ಪರಮ ವೈಭವದಿಂದ ಧರಣಿಯೊಳು ಮೆರೆಯುತಿಹುದು ಇಹುದುಅ.ಪ. ಹಂಸನಾಮಕನಿಂದ ಹರಿದು ಬಂದಂಥ ಯತಿ ಸಂಸ್ಥಾನ ಸುರನದಿಯೊ ಕಂಸಾರಿಪ್ರಿಯ ಶ್ರೀ ಮಧ್ವಮುನಿ ಮತ ಸಾರ ಹಂಸಗಳು ಸುರಿಯುತಿರಲು ಸಂಶಯವ ಪರಿಹರಿಸಿ ಸದ್ಗ್ರಂಥಗಳ ಸ- ದ್ವಂಶರಿಗೆ ಸಾರುತಿರಲು ಅಂಶ ಹರಿಪರ್ಯಂಕ ಸಹಿತ ಬಾಹ್ಲೀಕ ಯತಿ ವಂಶದಲಿ ಉದಿಸಿ ಬರಲು ಬರಲು 1 ಬನ್ನೂರು ಸ್ಥಳದಲ್ಲಿ ಜನ್ಮವೆತ್ತುತಲಿ ಬ್ರ ಹ್ಮಣ್ಯರಾ ಕರದಿ ಬೆಳೆದು ಚಿಣ್ಣತನದಲಿ ಮೌಂಜಿಧರಿಸಿ ಕಿತ್ತೊಗೆಯುತಲಿ ಧನ್ಯಯತಿಯಾಗಿ ಮೆರೆದು ಘನ್ನ ಶ್ರೀಪಾದರಾಯರಲಿ ಸದ್ಗ್ರಂಥಗಳ ಚನ್ನಾಗಿ ಮನನಗೈದು ಸಣ್ಣ ಪೆಟ್ಟಿಗೆಯೊಳಡಗಿದ್ದ ಶ್ರೀ ಕೃಷ್ಣನ ತನ್ನ ಭಕ್ತಿಯೊಳ್ ಕುಣಿಸಿ ನಲಿದು 2 ಪಡೆದು ಪರಿಪರಿಯ ಮಹಿಮೆಗಳ ತೋರುತಲಿ ದುರ್ವಾದಿ ದುರುಳ ಮತಗಳನೆ ಮುರಿದು ಮರುತ ಮತ ಶೀತಾಂಶುಕಿರಣ ಚಂದ್ರಿಕೆಯನ್ನು ಹರಹಿ ಪ್ರಕಾಶಗೈದು ಸರ್ವ ಸಜ್ಜನರ ಮನದಂದಕಾರವ ಕಳೆದು ಸಿರಿವರನ ಪ್ರೀತಿ ಪಡೆದು ತಿರುವೆಂಗಳೇಶನ ಪರಮ ಮಂಗಳ ಪೂಜೆ ವರುಷ ದ್ವಾದಶವಗೈದು ಮೆರೆದು 3 ಆರಸನಿಗೆ ಬಂದಂಥ ಆಪತ್ಕುಯೋಗ ಪರಿ ಹರಿಸಿ ಸಂಸ್ಥಾನ ಪಡೆದು ಪರಮ ಸಾಮ್ರಾಜ್ಯ ಪಟ್ಟಾಭಿಷೇಕವ ತಳೆದು ಪರಮ ವೈಭವದಿ ಮೆರೆದು ಚಿರಕಾಲ ವಿಜಯನಗರವು ಮೆರೆಯಲೆಂದ್ಹರಸಿ ಅರಸನಿಗೆ ರಾಜ್ಯವೆರೆದು ಕರುಣಾಳುವೆನಿಸಿ ವೈರಾಗ್ಯ ಶಿಖರದಿ ಮೆರೆದು ಮೊರೆಪೊಂದಿದವರ ಪೊರೆದು ಬಿರುದು 4 ಎಲ್ಲೆಲ್ಲಿ ನೋಡಲಲ್ಲಲ್ಲಿ ಶ್ರೀ ಮರುತನ್ನ ನಿಲ್ಲಿಸುತ ಪೂಜೆಗೈದು ನಿಲ್ಲದಿರೆ ಹಂಪೆಯಲಿ ಪ್ರಾಣಾರಾಯನು ಯಂತ್ರ ದಲ್ಲಿ ಬಂಧನವಗೈದು ಚಲ್ಲಾಡಿ ಸುವರ್ಣವೃಷ್ಟಿಯಿಂ ದುರ್ಭಿಕ್ಷ ನಿಲ್ಲಿಸದೆ ದೂರಗೈದು ಎಲ್ಲ ಕ್ಷೇತ್ರಗಳ ಸಂಚರಿಸಿ ಬಹುದಿನ ಹಂಪೆ ಯಲ್ಲಿ ಶಿಷ್ಯರನು ಪಡೆದು ನಿಂದು 5 ನವಕೋಟಿ ಧನಿಕ ವೈರಾಗ್ಯ ಧರಿಸುತ ಭವದ ಬವಣೆಯಲಿ ನೊಂದು ಬಂದು ನವ ಜನ್ಮಕೊಟ್ಟು ಉದ್ಧರಿಸಬೇಕೆಂದೆರಗೆ ಅವನಂತರಂಗವರಿದು ಪವಮಾನ ಮತವರುಹಿ ತಪ್ತ ಮುದ್ರಾಂಕಿತದಿ ನವ ಜನ್ಮವಿತ್ತು ಪೊರೆದು ಪವನ ಗ್ರಂಥಾಂಬುಧಿಯೊಳಡಗಿದ್ದ ದಾಸ್ಯ ರ ತ್ನವ ಪೂರ್ವಗುರುವಿಗೊರೆದು ಸುರಿದು 6 ಪುರಂದರ ಕನಕರೆಂ ಬತುಲ ಶಿಷ್ಯರ ಕೂಡುತಾ ಸತತ ಹರಿ ಚರ್ಯ ಮಹಿಮಾದಿಗಳ ಸ್ಮರಿಸುತ್ತ ಸ್ಮøತಿ ಮರೆದು ಕುಣಿದಾಡುತಾ ರತಿಪಿತನ ಗಾನ ಭಕ್ತಿಯಲಿ ಕನ್ನಡ ಕವನ ಮತಿಯೊಳ್ ನಾಲ್ವರುಗೈಯುತಾ ಕ್ಷಿತಿಯಲ್ಲಿ ದಾಸಪದ್ಧತಿ ಬಾಳಲೆಂದೆನುತ ಯತಿವರರ ಸೃಷ್ಟಿಸುತ್ತಾ | ಸತತ 7 ಅಂದು ವಿಜಯೀಂದ್ರರನು ಯತಿವರರು ಬೇಡÉ ಆನಂದದಲಿ ಭಿಕ್ಷವಿತ್ತ ಬಂದು ಕೈ ಸೇರಿದಾ ರಾಜ್ಯವನು ಕ್ಷಿತಿಪನಿಗೆ ಮುಂದಾಳಲೆನುತಲಿತ್ತ ಪತಿ ವೆಂಕಟೇಶನ್ನ ಪೂಜೆ ವರ ಕಂದನಿಗೆ ಒಲಿದು ಇತ್ತ ಒಂದೊಂದು ವೈಭವವು ಕೈ ಸೇರೆ ವೈರಾಗ್ಯ ತಂದು ಅಭಿರೂಪ ಬಿಡುತಾ | ಕೊಡುತ 8 ನವವಿಧದÀ ಭಕ್ತಿಯಲಿ ಜ್ಞಾನ ವೈರಾಗ್ಯದಲಿ ಕವನದಲಿ ಶಾಂತತೆಯಲಿ ನವಗ್ರಂಥ ನಿರ್ಮಾಣ ಪವನ ಗ್ರಂಥೋದ್ಧಾರ ಸವಿನಯವು ಸದ್ಗುಣದಲೀ ಸುವಿವೇಕ ಸತ್ಕರ್ಮ ಅಂತರ್ಮುಖ ಧ್ಯಾನ ಅವನಿ ಸಂಚಾರದಲ್ಲಿ ಇವರ ಸರಿಯಿಲ್ಲ ದಾಸ ವ್ಯಾಸ ಕೂಟದಲಿ ಭುವನದಲಿ ಮೆರೆದ ಧನ್ಯಾ | ಮಾನ್ಯ 9 ಪಾಪಿಗಳ ಸಲಹಿ ಪಾವನ್ನಗೈಯುತ ಭವದ ಕೂಪದಿಂದುದ್ಧರಿಸಿದಾ ಆಪಾರ ಮಹಿಮೆ ಆದ್ಯಂತ ವರ್ಣಿಸಲಳವೆ ಶ್ರೀಪಾದ ಪದುಮ ರಜದಾ ವ್ಯಾಪಾರವೆನ್ನ ಗುರು ದಯದಿ ಎನ್ನೊಳು ನಿಂದು ತಾ ಪಾಲಿಸುತ ನುಡಿಸಿದ ಗೋಪಾಲಕೃಷ್ಣವಿಠಲ ಧ್ಯಾನದಲಿ ಹಂಪೆ ಗೋಪ್ಯಸ್ಥಳದಲಡಗಿದಾ 10
--------------
ಅಂಬಾಬಾಯಿ
ಧರ್ಮ ದೊಡ್ಡದಯ್ಯ ನಿಮ್ಮ ಸ್ವಾಮಿ ಸದ್ಗುರುರಾಯ ಬ್ರಹ್ಮಾನಂದ ವಸ್ತು ನೀನೆ ಸಮಸ್ತ ಜನಪ್ರಿಯ ಧ್ರುವ ಮೊರೆಯನಿಟ್ಟ ಧ್ರುವಗೆ ನೀನು ಕೊಟ್ಟ್ಯೋ ಪದ ಆಢಳ ಕರಿಯ ಮೊರೆಯ ಕೇಳಿ ನೀನು ಸೆರಿಯ ಬಿಡಿಸಿದ್ಯೊ ದಯಾಳು ಶರಣು ಹೊಕ್ಕ ತರಳಗಿನ್ನು ಪಡದ್ಯೊ ಪ್ರಾಣ ನಿಶ್ಚಳ ಸ್ಮರಣೆಗೊದಗಿ ಬಂದ್ಯೊ ಪಾಂಡವರಿಗೆ ತಾತ್ಕಾಳ 1 ಮೊರೆಯನಿಟ್ಟ ದ್ರೌಪದಿಗೆ ವಸ್ತ್ರ ಪೂರಿಸಿದ್ಯೊ ಪೂರ್ಣ ಧರೆಯೊಳು ಶಿಲೆಯಾಗಿದ್ದ ಸತಿಗೆ ಮಾಡಿದ್ಯೊ ಉದ್ದರಣ ಪರಿ ಹೊರೆವ ಪೂರ್ಣ ಭಕ್ತರ ಪ್ರಾಣ ವರ್ಣಿಸಲಾಗದೊ ನಿಮ್ಮ ದಯವೃತ್ತಿ ನಿಜಗುಣ 2 ವಾಸುದೇವ ನಿಶ್ಚಯ ಭಾಸ್ಕರ ಕೋಟಿ ತೇಜ ಭಾಸುತಿಹ ನಿಮ್ಮ ದಯ ಲೇಸಾಗಿ ಪಾಲಿಸೊ ಪೂರ್ಣ ದಾಸ ಮಹಿಪತಿಯ ವಿಶ್ವದೊಳಾನಂದದಿಂದ ರಕ್ಷಿಸುವ ನಿಮ್ಮ ಭಯ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಧರ್ಮವೆಂದೆನಿಪ ಮಾರ್ಗವನು ಬಿಟ್ಟುಕರ್ಮವೆಂದೆನಿಪ ಕಾನನವ ಪೊಕ್ಕುದುರ್ಮಾರ್ಗದಲಿ ನಡೆದವಗೆ ಘೋರವ್ಯಾಧಿಕರ್ಮಪಾಕದಲಿ ಸಾರುತಿದೆ ಜಗದಿ ಪ ಹರಿಹರ ವಿಭೇದಗೈದವಂಗೆ ದಂತಚ್ಯುತವುಗುರುದೈವಗಳ ನಿಂದೆಗೈದವಗೆ ಉನ್ಮದವುಪರಸತಿಯ ಕಾಮಿಸಿದವಗೆ ಪಾಂಡು ರೋಗವುಕೆರೆಗಳನು ಒಡೆಸಿದಾತಗೆ ಶೀತಜ್ವರವುಹಿರಿಯರನು ಜರಿದವಗೆ ಪೀನಾಶಿ ರೋಗವುಧರೆಯನಳಿಸಿದವಗೆ ಸರ್ವಾಂಗ ಪರಿಶ್ವೇತವುಪುರ ಅಗ್ರಹಾರ ಕೆಡಿಸಿದವಗೆ ರಾಜರೋಗವೆಂದುಅರಿವುದು ಸಕಲ ಜನರು 1 ಕಥೆ ಪುರಾಣಗಳ ಹಳಿದವಗೆ ಕಾಸಶ್ವಾಸಮತಭೇದವನು ಮಾಡಿದವಗೆ ಮೂಲವ್ಯಾಧಿಪಿತಮಾತೆಯರ ಸಲಹದವಗೆ ಗಂಡಾಮಾಲೆಯತಿಗಳನು ನಿಂದಿಸಿದವಗೆ ಸನ್ನಿಪಾತ - ಪರಸತಿಯರಿಗೆ ಅಳುಪಿದಾತಗೆ ಮೂತ್ರ ಕೃಚ್ರಪತಿವ್ರತೆಯರ ಪೀಡಿಸಿದವಗೆ ಅತಿಸಾರಮತಿಗೇಡಿ ಮೂರ್ಖನಿಗೆ ಕ್ಷಯರೋಗ - ಇದುಕ್ಷಿತಿಯೊಳಗೆ ಸಿದ್ಧಾಂತ 2 ಶಿಶು ಹತ್ಯೆ ಗೈದವಗೆ ಕುಕ್ಷಿಶೂಲೆಪಶುಗಳನು ಮರ್ದಿಸಿದವಗೆ ಪ್ರಮೇಹವುಉಸಿರಲೇಕಿನ್ನು ಸ್ವಾಮಿದ್ರೋಹಿಗೆ ಬಹುಮೂತ್ರಪುಸಿಯನಾಡುವ ಪುರುಷಗೆ ರಕ್ತ ಕಾಳಿಹಸಿದವರಿಗನ್ನವಿಕ್ಕದವಗೆ ಆಮ್ಲಪಿತ್ತವೃಷಭವನು ಒದ್ದವಗೆ ಬಿಗರುವಾತಮುಸುಕುವುದು ವಿಶ್ವಾಸಘಾತಕಗೆ ನರರೋಗಪುಸಿಯಲ್ಲವಿದು ಕೇಳಿ ಜನರು 3 ಕೊಟ್ಟು ಭಾಷೆಯ ತಪ್ಪಿದವಗೆ ಉಪಜಿಹ್ವೆಕೊಟ್ಟು ತುಪ್ಪಿದವಗೆ ಕರಕಂಪನಕೊಟ್ಟರೂ ಕೊಡಲಿಲ್ಲವೆಂಬವಗೆ ಉದರರೋಗಕೊಟ್ಟವರಿಗೆರಡು ಬಗೆವಗೆ ಮೇಹರೋಗಅಷ್ಟಮದದಿಂದ ಮೆರೆವವಗೆ ಬೆರಗಿನ ರೋಗಬಟ್ಟೆಯೊಳು ಮುಳ್ಳು ಹರಡಿದವಗೆ ನೇತ್ರವ್ಯಾಧಿಹುಟ್ಟುವುದು ಕಂಕಣ ಕಂಟಕಗೆ ಕುಷ್ಠರೋಗಕಟ್ಟಿಟ್ಟ ಬುತ್ತಿ ಇದು4 ಕರ್ಮ ಬಲ್ಲವರಾರುಎಂದು ಮಂದಮತಿಗಳಾಗಿ ಕೆಟ್ಟಳಿಯದಿರೆಹಿಂದಣದೆಲ್ಲವೂ ಬಹದೆಂಬುದಕೆ ಸಾಕ್ಷಿಇಂದು ಕಣ್ಣೆದುರೆ ಜಗದೊಳಗೆ ತೋರುತಿಹುದಿಗೊಚಂದದಲಿ ತಾಯಿ ಮಗುವಿಗೆ ಮೊಲೆಯ ಹಾಲುಣಿಸುವಂದದಲಿ ಉಣಿಸಿದಲ್ಲದೆ ಬಿಡದು ಮರೆಯದಿರಿಕಂದರ್ಪಪಿತ ಸೊಂಡೆಕೊಪ್ಪದಾದಿಕೇಶವನಮುಂದರಿತು ಭಜಿಸಿ ಮುಕ್ತಿಯ ಪಡೆಯಿರಣ್ಣ5
--------------
ಕನಕದಾಸ
ಧೀಂಧೀಂಧೀಂಧಿಂ ಧೀರು | ಮಜರೆ ಸಂಭ್ರಮದ | ಅಂದು ಶ್ರೀಕೃಷ್ಣ ರುಕ್ಮಿಣಿಯ ಪಾಣಿ | ಗ್ರಹಣ | ದಿಂದ ದ್ವಾರಕೆಯ ಹುಗುವ ಸಮಯದಲಿ ಪ ಚಪಳ ವಾಜಿಗಳು | ಬೆರೆಬೆರೆದು ಕುಣಿವಾಟಾದಿಂದಾ ಇಡಿಯೇ | ತೆರೆಹಿಲ್ಲ | ಸಿಂಧು ಗುರಿ ಪತಾಕೆಗಳ ಹೊಳೆವ | ರೂಪಿಯೇ | ಮೆರೆವ ತಮ್ಮಟ ಭೇರಿನಾದ ಕಹಳೆಗಳಿಂದ | ಹರಿಪದದಿ ಪ್ರತಿ ಶಬ್ದವು ನುಡಿಯೇ 1 ಭಟ್ಟರು ಗಾಯಕವಂದಿ ಬಿರುದು ಕೊಂಡಾಡು ತಲಿಹ | ನಟನೆ ದಿವ್ಯಾಂಗ-ನೆಯರಾ ಮುಂದ | ಘಟನೇ ಪುಟುವೆರಸೀ ಸ್ವಸ್ತಿ ವಚನಾದಿಂದ ನಟನುಗ್ರಶೇನ ತಾಯಿ | ತಂದಿ ದಂಪತಿಗಳ ಕುಟಿಲೀರ್ವ ಸಾಂಬ ಕೃತ ವವರ್ಮನಾ | ರ್ಭಟೆಯ ಬಲರಾಮ ನೋಡನೀ ವೃಂದ 2 ಹೃದಯ ಮಧ್ಯದ ಪದಕದಂತೆ ಬರಿತಿಹ ನಡುವೆ ವಧು ಇದಿರು ಗೊಂಬುವ ಸಂಭ್ರಮದ ಪಟ್ಟಣದಲಾರು ತುದಿ ಮೊದಲ ಬಣ್ಣಿಸುವಾ ಸಿರಿಯಾ | ವದಗಿ ಮುಂದಕ ಹೋಗಿ ಮಂಗಳಾರುತಿಗಳನು ಸುದತಿಯರು ತಂದೆ ತ್ತಲು ತ್ವರಿಯು | ಮುದದಿಂದ ಗೃಹ ಪ್ರವೇಶವ ಮಾಡಿದನು ಸರ್ವಾ | ವಿದಿತ ಮಹಿಪತಿ ನಂದನಾ ಧೂರೆಯು 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಧೀಮಂತರ ದಯಪಡೆದು ಮಾಧವನ ಪದ ವಿಡಿದು | ಪ್ರೇಮದಿ ಭಜಿಸೆನ್ನ ಮನವೇ | ಪ ಕಾರ್ಮುಗಿಲದುಗ್ಧರಾಶಿಯನು ಶೃತಿಗೆ ಬೀಳಲ್ಪ | ಯೋರ್ಮನದಿ ಸಂತೋಷಿಪಂತೇ ನಿರ್ಮಳಾಂಗಣ ಕಥೆಯ ಘೋಷವೇನು ಕೇಳಿ ಅತಿ | ಪೆರ್ಮೆಯಿಂದಲೆ ನಲಿದು ಬಾಳು 1 ನೋಡಲಾಕ್ಷಣ ತನ್ನ ಮಾತೆಯನು ಮುದದಲಿಂ | ಲೋಡಿ ಬಪ್ಪುವ ಶಿಶುವಂತೆ | ರೂಢಿಯೊಳು ಸಜ್ಜನರ ಕಂಡಾಕ್ಷಣಕ ತನುವ | ನೀಡಿ ಸಾಷ್ಟಾಂಗದಿಂದೆರಗು 2 ಮಿಗಿಲಾಸೆಯನು ತ್ಯಜಿಸಿ ದಾಗಸದ-ಲಿಂಬರ್ವ | ನಿಗಳುಂಬ ಚಾತಕನ ತೆರದಿ | ಮುಗಳೆ ದಯದಿಂದ ಸಜ್ಜನ ಮುಖದಿ ಬಪ್ಪಬೋ | ಧೆಗಳ್ಪೊತನು-ವಾನುಗ್ರಹಿಸು ಧರಿಸು 3 ಮಣಿ ದೀಪವಾದಂತೆ ಸ | ಪಾದ ಕಮಲಗಳಾ | ಅತ್ಯಧಿಕ ಹರುಷದಿಂ ಹೃದಯದೊಳ್ ಧರಿಸಲ್ಕೆ | ಮೊತ್ತದ ಜ್ಞಾನ ತೊಳಗುವದು 4 ಗರ ಹೊಡೆದು | ಧರಿಯೊಳಗ ಗರ್ವಿಸಲಿ ಬ್ಯಾಡಾ | ಸಿರಿಯು ತೊಲಗಲು ಕುನ್ನಿಯಂತನ್ನ ದಾಸಿಂಗೆ | ಪರರು ಮನವಡಿದು ಬಳಲದಿರು 5 ಕಮಲಜನ ಪದಕ ಕತ್ತದೀವರ ಅನುಮತದ | ವಿಮಲಮಾರ್ಗ ಹೊಲಬ ನರಿದು | ಅಮಲೂಧ್ರ್ಪ ಪೌಂಡ್ರ ಹರಿ ಲಾಂಛನವು ತುಳಸಿ ಸರ ಕ್ರಮದಿಂದ ಧರಿಸಿ ಸುಖಿಯಾಗು 6 ಹರಿಪರದೈವವೆಂದು ಅರಿತು ಭಾವದಿ ನಿಂದು | ಹರಿ ಕೋಟಿ ನಿಭಕ ಮಿಗಿಲೆನಿಸಿ | ಮೆರೆವ ಮಹಿಪತಿ ನಂದನೋಡಿಯ ನಾಮಂಗಳನು | ಸ್ಮರಿಸಿ ಇರಳ್ಹಗಳ ಕೊಂಡಾಡು 7
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಧುಮ್ಮಸಾಲೆನ್ನಿರೈಯ್ಯಾ | ಒಮ್ಮೆ ಸಾಧು ಜನರು | ಬೊಮ್ಮನ ಪದವಪಡದ | ನಮ್ಮ ಮುಖ್ಯ ಪ್ರಾಣನ ಪ ನಷ್ಟರಾವಣನ ಬಾಲಕ್ಕಿಟ್ಟ ಬೆಂಕಿಯಿಂದ ಲಂಕಾ | ಪಟ್ಟಣವ ಸುಟ್ಟು ಬೊಬ್ಬೆ ನಿಟ್ಟ ಹನುಮಪ್ಪನಾ 1 ಪಾಪಕರ್ಮಕೀಚಕಾದಿ | ಕಾಪುರುಷ ಕೌರವರಾ | ಕೋಪಾಗ್ನಿಯಲಿ ಸುಟ್ಟ | ಭೂಪ ಭೀಮನಾ 2 ಉದ್ಧಟ ದುರ್ವಾದಿಗಳಾ | ಸಿದ್ಧಾಂತವೆಂಬ ವಹ್ನಿಯಲ್ಲಿ | ಬುದ್ಧಿಯಿಂದ ಉರಹಿದಾಪ್ರ | ಸಿದ್ಧಮಧ್ವರಾಯನಾ 3 ಮೂಲ ಗುರುವಾಗಿ ಜಗ | ಪಾಲಿಸುವಾ ಮಹಿಪತಿ | ಸಿರಿ | ಲೋಲನಿಜ ದಾಸನಾ 4
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಧುಮ್ಮಸಾಲೆನ್ನಿರ್ಯೋ ಶ್ರೀ ಗುರುವಿನ ಬಳಗವೆ ಧುಮ್ಮಸಾಲೆನ್ನಿ ಸದ್ಗುರುವಿನ ಬಳಗವೆ ಧ್ರುವ ಗುರುವಿನ ಬಳಗವೆಂದು ಗುರುತುವಿಟ್ಟು ನೋಡಿರ್ಯೋ ಅರುಹಿನೊಳು ಮುಣಗಿ ಪರಮಸುಖ ಸೂರ್ಯಾಡಿರ್ಯೋ ಗರ್ವಿನಾಹರಿಗೆ ಬಿಟ್ಟು ಹರಿದುಹೋಗ ಬ್ಯಾಡಿರ್ಯೋ ಪರ್ವಣಿದೆ ಗುರುಕರುಣ ಪಡೆದು ಪೂರ್ಣಕೂಡಿರ್ಯೋ 1 ಧುಮ್ಮಸಾಲೆನ್ನಿರ್ಯೋ ಬೆರದು ಬ್ರಹ್ಮ ಸುಖವ ಸಮ್ಯಙÁ್ಞನದಿಂದ ದೂರಮಾಡಿ ಭವದು:ಖವ ನಿಮ್ಮ ನಿಮ್ಮೊಳು ನೋಡಿ ಘನ ಕೌತುಕವ ಹ್ಯಮ್ಮಿಯೊಳಗಾಗಿ ನೀವು ಹೋಗಬ್ಯಾಡಿ ಹೋಕುವ 2 ಕಣ್ಣದ್ಯರದು ನೋಡಿರ್ಯೊ ಚಿನ್ನುಮಯ ರೂಪವ ಭಿನ್ನವೆಲ್ಲದ್ಯದೆ ತನ್ನೊಳು ಸಮೀಪವ ಪುಣ್ಯ ಹಾನಿ ಮಾಡಿಕೊಂಡು ಹಿಡಯಬ್ಯಾಡಿ ಕೋಪವ ಕಣ್ಣ ದ್ಯರಸಿಕುಡುವ ಹಚ್ಚಿ ಗುರು ತಾನ ದೀಪವ 3 ನಮ್ಮ ನಿಮ್ಮ ದ್ಯಾವರೆಂದು ಹೊಯಿದಾಡಬ್ಯಾಡಿರ್ಯೋ ಬೊಮ್ಮನ ಪಡದ ಪರಬ್ರಹ್ಮನೊಬ್ಬ ನೋಡಿರ್ಯೋ ಇಮ್ಮನಕ ಹೋಗದೆ ಒಮ್ಮನವ ಮಾಡಿರ್ಯೋ ಸುಮ್ಮನೆ ಸುವಿದ್ಯದೊಳು ಬೆರದು ನಿಜಗೂಡಿರ್ಯೋ 4 ಸುಗ್ಗಿಯೋ ಸುಗ್ಗಿಯೋ ಸುಙÁ್ಞನದ ಲಗ್ಗಿಯೋ ಭಾಗ್ಯವಿದೆ ನೋಡಿ ಭಕ್ತಿ ಙÁ್ಞನ ವೈರಾಗ್ಯಯೋ ಬಗ್ಗಿ ನಡವ ಸಾಧುಸಂತ ಜನರಿಗಿದು ಯೋಗ್ಯಯೋ ಹಿಗ್ಗಿ ಹರುಷಪಡುವ ಮಹಿಪತಿಯ ನಿಜ ಸ್ರಾಘ್ಯಯೋ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಧುಮ್ಮಸಾಲೆಯ ನೋಡಿ ಧುಮ್ಮಸಾಲೆಯಾ ಪ ಧುಮ್ಮಸಾಲೆಯ ನೋಡಿ ಘಮ್ಮವಾದ ಪ್ರಾಣಿಗಳು | ತಮ್ಮ ಸುದ್ದಿ ತಮಗಿಲ್ಲಾ ಹಮ್ಮಿನಿಂದಲಿ | ಧಿಮ್ಮಹಿಡಿದು ಭವದೊಳು ಸುಮ್ಮನೆವೆ ಕೆಟ್ಟು ಹೋದ | ಗ್ಯಾದರೆಯು ಪರಬೊಮ್ಮನಾಮ ನೆನೆಯಿರೋ 1 ವಿದ್ಯೆಯಿಂದ ವಾದಿಸುತ ಮುದ್ದಿಯಿಂದ ಕಣ್ಣು ಮುಚ್ಚಿ | ಸದ್ಯ ಶಕ್ತಿ ಯೌವನದಿ ಗುದ್ದಿ ಹೆಟ್ಟು ತಾ | ಪರಿ ನಿಜ | ಬುದ್ಧಿ ಹೋಗಾಡಿಸಿ ಅನಿರುದ್ಧನನ ಮರೆತಿರೋ 2 ಒಂದು ಕವಡಿಯಲಾಭ ತಮಗೆ ಹೊಂದದಿದ್ದರೆ ಸರಿ | ಬಂದು ನಿಂದು ಒಳ್ಳೆವರಾ ನಿಂದೆ ಮಾಡುತಾ | ಇಂದು | ಕೂಪ ಲಿಟ್ಟರೋ 3 ಉಡಗಿ ಬಿಟ್ಟು ಹುಡಿಯಹಚ್ಚಿ ಜಡಿಯಬಿಟ್ಟು ಸಿದ್ಧಗಾಗಿ | ಪೊಡವಿಲಿನ್ನು ಲಾಭಾ ಲಾಭಾ ನುಡಿಯ ಹೇಳುವಾ | ತುಡುಗರಿಗೆ ಹೋಗಿಕಾಲ ವಿಡಿದು ಗೋಂದಲ್ಹಾಕುವರು | ಕಡಲಶಯನನ ಭಜಿಸದೆವೆ ಅಡಲು ಬಿಟ್ಟು ಹೋದರೋ 4 ಸಿರಿಯ ಸುಖಗೀಪರಿ ಪರಿಯ ವೃತ ತಪದಿಂದಾ | ಚರಿಸಿ ನೋಡು ಕಣ್ಣು ವಿದ್ದು ಕುರುಡರಾದರೋ | ಗುರುಮಹಿಪತಿ ಸ್ವಾಮಿ ಚರಣ ನಂಬಿಯಚ್ಚರದಿ | ನಿರಪೇಕ್ಷ ಭಕ್ತಿಯಿಂದಾ ತರಣೋಪಾಯ ನೋಡರೋ 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಧೂಪವಿಡುವನ ಬಳಿಗೇ ದೀಪವಿಡುವ ಆ ಪರಮ ಕರುಣಾಳು ಶ್ರೀಪತಿಯ ನೆನೆನೆನೆದು ಪ ವಸುಮತಿಯನಿತ್ತವನ ಹೊಸಲಬಳಿಯಾಳಾದ ಬಸಿವಲೆಯನಿತ್ತಳಿಗೆ ವಸನಗಳನಿತ್ತ ಬಿಸಜವೊಂದಿತ್ತವನ ಹೊಸಖೇಚರನಗೈದು ಬಿಸವುಂಡ ಬಾಲಕನ ಜಸವ ಚಿರಗೈದ 1 ಅವಲಕ್ಕಿ ಇತ್ತವಗೆ ನಿಧಿಯನೇ ಅರ್ಪಿಸಿದ ಸವಿಗಂಧವಿತ್ತವಳ | ಸುಂದರಿಯ ಗೈದ ನವನೀತವಿತ್ತವರನೆಲ್ಲ ತನ್ನೊಳೆ ಹುಗಿದ ಭವವ ಪರಿಹರಿಸಲ್ಕೆ ಬೇಸರಿಹುದೇ ಹರಿಗೆ 2 ಅವನ ಜಾನಿಪ ಜನರ ಮರೆಯನಾ ನೀಲಾಂಗ ಅವನ ಪೂಜಿಪ ನರರ ಮುನ್ನಿಲುವನಾಗಾಗ ಅವನ ಕಥೆ ಕೇಳ್ವರ್ಗೆ ಉಂಟವನ ಸತ್ಸಂಗ ಅವನೆ ಗತಿಯೆಂದವನಿಗೊಲಿವ ಮಾಂಗಿರಿರಂಗ 3
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್