ಕರುಣದಿ ಪೊರೆಯೆನ್ನ ಪ್ರಭುವೇ ಮೂಲ ಗುರುವೆ ಪ
ಪರಮ ದಯಾನ್ವಿತ ಸುರಕಲ್ಪತರುವೆ ಅ.ಪ.
ಅಂಗಜಪಿತನಾಜ್ಞೆ ಹಿಂಗಾದೆ ನೀಯಾಂತು
ಅಂಗನೆ ಸೀತೆಯ ಅರಸುತ್ತ ಪೋದೆಯೊ
ತುಂಗವಿಕ್ರಮ ನೀನು ಮಂಗಳಾಂಗಿಯ ಕಂಡು
ಶೃಂಗಾರವನವನ್ನೆ ಭಂಗಮಾಡಿದೆಯೊ 1
ಕರಿಪುರದರಸನ ವರಪುತ್ರ ನೀನಾಗಿ
ಕರಿರಾಜವರದಗೆ ಭಾವನಾಗಿ
ಧರಣಿ ಭಾರವೆಲ್ಲ ಹರಿಸಿದೆ ನೀನು 2
ಯತಿಯ ರೂಪವ ತಾಳಿ ಕ್ಷಿತಿಯೊಳು ಚರಿಸುತ
ದಿತಿಜರ ಬಾಯ್ಗಳ ಬಡಿಯುತಲಿ
ಪತಿತ ಪಾವನ ಶ್ರೀ ರಂಗೇಶವಿಠಲನೆ
ಪ್ರತಿಯಿಲ್ಲವೆಂತೆಂಬ ಮತಿಯಿತ್ತದೇವ 3