ಒಟ್ಟು 29 ಕಡೆಗಳಲ್ಲಿ , 17 ದಾಸರು , 29 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಅಂಕಿತ-ಗಿರಿಧರಸುತ ಗುರುಮಹೀಪತಿರಾಯಾ | ಕೊಡು ಎನಗೆ ಸುಮತಿಯಾ ಪ ಭಕ್ತರ ಸುರಧೇನು | ಐಗಳಿ ವೃತ್ತಿಯನು | ಮನಕೆ ತಾರದೆ ಘನ ವ್ಯಾಪರವನು | ಮಾಡುತ ಭಾಗ್ಯವನು | ಮಾಡಲು ತಿಮ್ಮವ್ವನು 1 ಭಾಸ್ಕರ ಮುನಿ ಬಂದು | ಧಾರುಣಿ ಜನರುದ್ಧರಿಸಲಲ್ಲೆ ನಿಂದು | ಇರಲು ದಯಾಸಿಂಧು | ನಾರಿಶಿರೋಮಣಿ ದರುಶನಕ್ಕೆ ತಂದು | ನೀನೆ ಗತಿಯೆಂದು | ಆರು ತಿಂಗಳಾರಾಧಿಸೆ ಸಲಹೆಂದು | ದೀನಜನ ಬಂಧು | 2 ಸತಿಪತಿಗಳ ಚಿತ್ತಾ | ಆಗುದು ಎನೆ ವನಿತಾ | ನಮಿಸಲು ಗುರುತಾತ | ಆತರಿದನು ತವ ಮುಖವನು ಈಕ್ಷಿಸುತಾ ಪಕ್ವಾಫಲವೆನುತಾ 3 ಮಂದಹಾಸದಿಂ ನುಡಿದನು ನಿಜಗುಟ್ಟು | ವ್ಯಾಪಾರವ ಬಿಟ್ಟು | ಚಂದದಿ ಯಾಚಕ ವೃತ್ತಿಲಿ ಮನನಟ್ಟು | ಎನೆ ಸಮ್ಮತ ಬಟ್ಟು | ಮಂದಿ ಕುದುರಿಗೆಲ್ಲರಿಗಪ್ಪಣೆ ಕೊಟ್ಟು | ನಿಲ್ಲದ್ಹರುಷ ತೊಟ್ಟು | ಉಪದೇಶವ ಕೊಟ್ಟು 4 ಯೋಗಧಾರಣದ ಕೀಲವ ದೋರಿಸಲು | ದೂದಿಯವೋಲ್ | ನಾನಾ ಬಯಕೆಗಳು | ತ್ಯಾಗವ ಮಾಡುವ ಅನ್ನ ಉದಕಗಳು | ಕ್ಲಪ್ತಕೆ ನಿಲ್ಲಿಸಲು | ಮುಗಿದವು ಹಸ್ತಗಳು 5 ಭ್ರೂಮಧ್ಯದ್ವಿದಳದಾ | ದ್ವಾರವ ತ್ಯಜಿಸುತ್ತಾ | ತ್ರಿಕುಟ ಶ್ರೀಹಟ ಗೋಲ್ಹಟ ಗೋಪುರದಾ | ನೋಡುತ ಸಂಭ್ರಮದಾ | ಪಂಕಜದೊಳಗಿದ್ದ 6 ನಿತ್ಯ ಪ್ರಭೆಯು ಅನುದಿನಾ | ಕಾಣುತ ಸಂಪೂರ್ಣಾ | ತಿಳಕೊಂಡ್ಯೋ ಪ್ರವೀಣಾ | ದಿಂದಲೇ ಭಯಹರಣಾ 7 ಅಂತಹದು ಬೇಗ | ನೋಡೆಂದನು ಅನಘಾ | ನಿನ್ನಲ್ಲೇ ಈಗಾ | ದುಷ್ಕøತ ತರುನಾಗಾ 8 ಆಗುದು ನಿರ್ಧಾರಾ | ನಿನ್ನುದರದಿ ಕುವರಾ | ಸಂಶಯ ಬಿಡು ಅದರಾ | ಭಕ್ತರ ಸಹಕಾರಾ 9 ಮುನಿವರನಾಜ್ಞೆದಿ ಸ್ವಸ್ಥಾನಕೆ ಬರುತಾ | ಕೆಲ ದಿವಸಲ್ಲಿರುತಾ | ಸತ್ಪುರುಷರೆನಿಸುತಾ | ಇರಲು ದಯವಂತಾ | ವೇಧಿಯು ಬಂತೆನುತಾ 10 ಅಂತರಂಗದಲಿ ತಿಳಿಯತಲಾಗ್ರಾಮ | ತ್ಯಜಿಸಿದೆ ನಿಸ್ಸೀಮಾ | ಧಾಮಾ ಮಾಡಿದೆ ನಿಷ್ಕಾಮಾ | ಬಟ್ಟರು ಬಹುಪ್ರೇಮಾ | ಗುರುಸಾರ್ವಭೌಮಾ 11 ಅಲ್ಲಿ ಮೂರು ಸಂವತ್ಸರ ಇರಲಾಗಿ | ಶರಣ್ಹಾಳಿಯು ಬಾಗಿ | ಇಲ್ಲಿ ನೀವು ದಯಮಾಡುವದೊಳಿತಾಗಿ | ಸರಿ ಬಾರದಾಗಿ | ಬಂದ್ಯೋ ಮಹಾತ್ಯಾಗಿ | ಬರಲು ವರಯೋಗಿ12 ಕರೆದೊಯ್ದರು ಸ್ತುತಿಸಿ | ಕರಣಿಕ ತನ್ನಯ ಸ್ಥಳದಲಿ ಗೃಹ ರಚಿಸಿ | ಕೊಡಲಂಗೀಕರಿಸಿ | ಹರುಷದಿ ವರಭಾಸ್ಕರ ಮುನಿಕರ ಸರಿಸಿ | ರುಹಜಾತನೆನಿಸಿ | ಇರುತಿರೆ ತೋರಿತು ಸಂತತಿ ಉದ್ಭವಿಸಿ | ಗುರುವಾಕ್ಯಫಲಿಸಿ 13 ಆರಿಂದಾಗದು ನೈರಾಶ್ಯಾಚಾರಾ | ನಡೆಸಿದೆ ಗಂಭೀರಾ | ಧಾರುಣಿ ಜನರಿಂದಧಿಕೃತ ಸಂಸಾರ | ಜಲ ಪದ್ಮಪ್ರಕಾರಾ | ಅನುದಿನ ವೈರಾಗ್ಯದಾಗರಾ | ಸಂಪತ್ತು ಅಪಾರಾ | ತಿಳಿದ್ಯೋ ಸುಕುಮಾರಾ 14 ಕೊಟ್ಟರ್ಹಿಡಿಯಲಿಲ್ಲ ಓರ್ವರ ಧನವು | ಪೂರ್ವದ ಸಂಗ್ರಹವು | ಸತಿಸುತ ಪರಿವಾರವು | ಭಕ್ತರ ಸಮುದಾಯವು | ಮೃಷ್ಟಾನ್ನ ಭೋಜನವು 15 ತುಕ್ಕವ್ವಳು ನಿಮ್ಮತ್ತಿಗೆ ಭಾವಿಕಳು | ಪ್ರೀತಿಯ ಶೇವಕಳು | ಫಕ್ಕನೆ ವಿನಯದಿ ಮೃದು ಮಾತಾಡಿದಳು | ಸತ್ಪುರುಷರಿಳೆಯೊಳು | ಅಕ್ಕರದಲಿ ದೋರುವರು ಶಿದ್ಧಿಗಳು ನೀವೇನಿಲ್ಲೆನಲು | ಆದೀತೆಂದೆನಲು16 ಸೊಸಿಯೊಳು | ತುಕ್ಕವ್ವ ತಿಳಿಸಲು | ಕೈಯ್ಯನೆಳೆಯಲು | ನೋಡುತ ಬೆರಗಾದಳು 17 ಲೋಕವನುದ್ಧರಿಸಲು ನೀನವತರಿಸಿ | ಜಡದೇಹವ ಧರಿಸಿ | ಕೊಟ್ಯೋ ಗುಣರಾಶಿ | ಕೊಂಡ್ಯೋ ಸುಖವಾಸಿ | ಬಹು ನರಕದ ವಾಸಿ 18 ಜಗದೊಳಗಿಹ ಶಿದ್ಧರ ಮುಕುಟದ ಮಣಿಯೇ | ಸಾಧಕರೊಳಗೆಣೆಯೆ | ದುರಿತಾಂಧ ದ್ಯುಮಣಿಯೆ | ಕುಹಕರಿಗೇನ್ಹೊಣೆಯೆ | ವರಸತ್ವದ ಗುಣಿಯೆ 19 ಕಾಲ ತಪ್ಪಿಸುವದೇನೈ ನಿಮಗರಿದೆ | ಮನದೊಳು ನೀನರಿದೆ | ತಾಳಿದ ದೇಹವ ಸಾಕೆನುತಲಿ ಜರಿದೆ | ಚಿದ್ರೂಪವ ಬೆರೆದೆ | ಬಹು ಭಕ್ತರ ಪೊರೆದೆ | ತಡಮಾಡಗೊಡದೆ20
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಅಂತರಂಗದಲಿ ಹರಿಯ ಕಾಣದವನೆಹುಟ್ಟು ಕುರುಡನೋ ಪ ಸಂತತ ಸಿರಿಕೃಷ್ಣ ಚರಿತೆ ಕೇಳದವನೆಜಡಮತಿ ಕಿವುಡನೊ ಎಂದೆಂದಿಗುಅ.ಪ. ಹರುಷದಲಿ ನರಹರಿಯ ಪೂಜೆಯ ಮಾಡದವನೆ ಕೈ ಮುರಿದವನೊಕುರುವರ ಸೂತನ ಮುಂದೆ ಕೃಷ್ಣಾಯೆಂದುಕುಣಿಯದವನೆ ಕುಂಟನೋನರಹರಿ ಚರಣೋದಕ ಧರಿಸದ ಶಿರನಾಯುಂಡ ಹೆಂಚು ಕಾಣೊಸುರವರ ಕೃಷ್ಣ ಪ್ರಸಾದವಿಲ್ಲದ ಊಟಸೂಕರ ಭೋಜನವೋ ಎಂದೆಂದಿಗು 1 ಅಮರೇಶ ಕೃಷ್ಣಗರ್ಪಿತವಿಲ್ಲದಾ ಕರ್ಮಅಸತಿಯ ವ್ರತನೇಮವೋರಮೆಯರಸಗೆ ಪ್ರೀತಿಯಿಲ್ಲದ ವಿತರಣೆರಂಡೆ ಕೊರಳ ಸೂತ್ರವೊಕಮಲನಾಭನ ಪಾಡಿ ಪೊಗಳದ ಸಂಗೀತಗಾರ್ಧಭ ರೋದನವೊಮಮತೆಯಿಂದಲಿ ಕೇಶವಗೆ ನಮಸ್ಕಾರಮಾಡದವನೆ ಮೃಗವೊ, ಎಂದೆಂದಿಗು2ಜರೆ ಪುಟ್ಟು ಮರಣವ ತೊಡೆವ ಸುಧೆಯ ಬಿಟ್ಟುಸುರೆಯ ಸೇವಿಸಬೇಡವೊಸುರಧೇನುವಿರಲಾಗಿ ಸೂಕರ ಮೊಲೆಹಾಲುಕರೆದು ಕುಡಿಯಬೇಡವೊಕರಿರಥಾ ತುರಗವಿರಲು ಬಿಟ್ಟು ಕೆಡಹುವಕತ್ತೆಯೇರಲಿಬೇಡವೊಪರಮ ಪದವನೀವ ಸಿರಿಕೃಷ್ಣನಿರಲಾಗಿನರರ ಸೇವಿಸಬೇಡವೊ, ಎಂದೆಂದಿಗು 3
--------------
ವ್ಯಾಸರಾಯರು
ಈ ಧರಣಿಯೊಳ್ ಹದಿನಾರು ಸಾವಿರ ಮಂದಿ ಆಳುತ ದ್ವಾರಕೆಯಲ್ಲಿ ವಿನೋದದಿ ಕುಳಿತಿದ್ದ ಹರಿಯು 1 ಅಂಬುಜೋದ್ಭವನ ಅಂಕದಲುದಿಸಿದ ಸುತ ಚೆಂದ ಚೆಂದ ವೀಣೆ ಪಿಡಿದು ಕಂದರ್ಪಪಿತ (ನಲ್ಲಿಗೆ) ನಲಿನಲಿದಾಡುತ ಬಂದ ನಾರಂದ ಹರುಷದಲಿ2 ಬಂದ ನಾರಂದನ ಕಂಡು ಕಮಲನಾಭ ಚೆಂದದಿಂದಲಿ ಅಘ್ರ್ಯ ಪಾದಪೂಜೆಯ ಮಾಡಿ ನಾ- ರಂದಗೆ ಎರಗಿದನಾಗ3 ದೇವಾಧಿದೇವನೆ ದೇವಲೋಕದಿ ಸುತ್ತಿ ಈ ಪಾರಿಜಾತವ ತಂದೆ ದೇವಿ ರುಕ್ಮಿಣಿಗೀಗ ಮುಡಿಸೆಂದು ನಾರಂದ ಸ್ವಾಮಿಯ ಚರಣಕ್ಕರ್ಪಿಸಿದ 4 ತಕ್ಷಣದಿ ಜಗನ್ಮಾತೆ ಮಾಲಕ್ಷುಮಿ ಸಾಕ್ಷಾತ ಶ್ರೀನಾರಾಯಣನು ವಕ್ಷಸ್ಥಳದಲಿ ಹೊಂದಿರುವ ರುಕ್ಮಿಣಿಯನು ಸ್ತೋತ್ರ ಮಾಡಿದನು ನಾರದನು 5 ಕಡಲಶಯನ ಕಡೆಗಣ್ಣ ನೋಟಗಳಿಂದ ಕಡುಮುದ್ದು ಸುರಿವೊ ರುಕ್ಮಿಣಿಯ ಬಡನಡುವಿನ ಭಾಮಿನಿರನ್ನೆ ಬಾರೆಂದು ತೊಡೆಯ ಮ್ಯಾಲಿಟ್ಟ ಶ್ರೀಕೃಷ್ಣ 6 ದುಂಡುಮಲ್ಲಿಗೆ ಗೊಂಡ್ಯ ಚೌರಿ ರಾಗಟೆ ಜಡೆ- ಅಂಗನೆ ರುಗ್ಮಿಯಾಲಿಂಗನೆ ಮಾಡುತ ರಂಗ ತಾ ಮುಡಿಸಿದ ಸತಿಗೆ 7 ಸರಿಸವತೇರ ಬಿಟ್ಟು ಸುರಪಾರಿಜಾತವ ಗರುವಿಕೆಯಿಂದ ನೀ ಮುಡಿದೆ ಹರದಿ ಸತ್ಯಭಾಮೆ ಕೇಳಿ ಮುನಿದರಿನ್ನು ಅರಿಯೆನು ನಾ ಇದಕೆ ಉಪಾಯ 8 ಗಾಡಿಕಾರನು ಕೃಷ್ಣ ಆಡುವೊ ಮಾತನು ಕೇಳಿ ರುಕ್ಮಿಣಿ ನಗುತಿರಲು ಓಡುತ ಬಂದು ನಾರದ ಸತ್ಯಭಾಮೆ- ಗಲ್ಲದ ವಾರ್ತೆಗಳರುಹಿದನು 9 ಅಲ್ಲಿಂದ ದೇವಲೋಕವ ಸುತ್ತಿ ತಂದೇನೆ ಚೆಲ್ವೆನಗೆ ತಕ್ಕ ಕುಸುಮ ಗೊಲ್ಲ ಕೃಷ್ಣನ ಕೈಯಲ್ಲಿ ಕೊಟ್ಟರೆ ತನ್ನ ನಲ್ಲೆ ರುಕ್ಮಿಣಿಗೆ ಮುಡಿಸಿದನು 10 ಕೇಳುತ ಭಾಮೆ ತಲ್ಲಣಿಸಿ ಕೋಪಗಳಿಂದ ಹೇಮಮಾಣಿಕ್ಯದ್ವಜ್ರಾಭರಣ ಹಾರ ಪದಕ ಕಠಾಣಿಮುತ್ತನೆ ಚೆಲ್ಲಿ ಭೂಮಿಲಿ ಬಿದ್ದೊ ್ಹರಳಿದಳು 11 ಮಲ್ಲಿಗೆ ದವನ ಕ್ಯಾದಿಗೆ ಶಾವಂತಿಗೆ ಬಿಟ್ಟು ಒಲ್ಲೆನೆಂದೊರೆಸಿ ಕಸ್ತೂರಿಯ ವಲ್ಲಭನೊಲ್ಲದೀ ಸೊಗಸ್ಯಾತಕೆನುತಲಿ ಗಲ್ಲದ್ವಿಳ್ಯವನುಗುಳಿದಳು 12 ಸರ್ಪನಂದದಿ ಉಸುರ್ಹಾಕುತ ಭಾಮೆ ತಾ ನೇತ್ರದಿ ಜಲವ ಸುರಿಸುತಲಿ ಸರ್ಪಶಯನನೊಲ್ಲದೀ ದೇಹವ್ಯಾಕೆಂದು ಪಟ್ಟೆ ಮಂಚದಲೊರಗಿದಳು 13 ನಿಂತು ನೋಡುತ ಸತ್ಯಭಾಮೆ ಮಾಡುವೊದು ಇ- ನ್ನೆಂತು ಮಾಡಲಿಯಿದಕೆಂದು ಅಂತರಂಗದಲಿ ಯೋಚನೆ ಮಾಡಿ ನಾರಂದ ಶ್ರೀ- ಕಾಂತನ ಮನೆಮಾರ್ಗ ಹಿಡಿದ 14 ತಿರುಗಿ ಬಂದ್ಹರಿಯ ಮುಂದರುಹಿದ ನಾರಂದ ತೊರೆವೋಳು ತನ್ನ ಪ್ರಾಣವನು ಮರುಗುತ ಸೊರಗಿ ಬಿದ್ದಿರುವೊ ಭಾಮೆಯ ನೋಡಿ ಕರುಣವಿಲ್ಲೇನೊ ಶ್ರೀ ಕೃಷ್ಣ 15 ಮುನಿಯ ಮಾತನು ಕೇಳಿ ಮುಗುಳು ನಗೆಯ ನಕ್ಕು ಪರಿ ಬವಣೆಗೆ ಒಳಗಾದೆ ಧರೆಯ ಒಳಗೆ ಇಬ್ಬರ್ಹೆಂಡರಾಳುವೋರಿನ್ನು ಪರಮ ಮೂರ್ಖರು ಅವರೆಂದ 16 ಹೊದ್ದ ಪೀತಾಂಬರ ಅಲೆಯುತ ಶ್ರೀಕೃಷ್ಣ ಹದ್ದನೇರದೆ ನಡೆಯುತಲಿ ಮುದ್ದು ರುಕ್ಮಿಣಿಯ ಮುಂದಕೆ ಕರೆದ್ಹೇಳದೆ ಎದ್ದು ಬಂದನು ಭಾಮೆಮನೆಗೆ 17 ಅರ್ಕನಂತ್ಹೊಳೆಯುತ ಹೊಕ್ಕ ತನ್ನರಮನೆ ಕಕ್ಕಬಿಕ್ಕ್ಯಾಗಿ ನೋಡುತಲಿ ದಿಕ್ಕು ದಿಕ್ಕಿಗೆ ಬಿದ್ದಾಭರಣವಾರಿಸಿ ರತ್ನ ದೆಕ್ಕಿಲೇ(?) ಬಂದು ತಾ ಕುಳಿತ 18 ಮಿಂಚು ಸೂರ್ಯಗೆ ಮಿಗಿಲಾಗಿದ್ದ ಮುಖ ಬಾಡಿ ಸಂಪಿಗೆ ಸರವ ಈಡ್ಯಾಡಿ ಚಿಂತೆಮಾಡುವರೆ ಚಿನ್ನದ ಗೊಂಬೆ ಏಳೆಂದು ಮಂಚದ ಮ್ಯಾಲೆ ತಾ ಕುಳಿತ 19 ಬೆವರಿದ್ದ ಮುಖವ ಮುಂಜೆರಗಿಲಿಂದೊರೆಸುತ ಹ- ರವಿದ ಹಾರ ಹಾಕುತಲಿ ಪರಮ ಪ್ರೀತಿಲಿ ತನ್ನ ಕರಗಳಿಂದ್ಹಿಡಿದೆತ್ತೆ- ನ್ನರಗಿಳಿ ಏಳೆಂದೆಬ್ಬಿಸಿದ 20 ಸಿಟ್ಟಿಲಿಂದೆದ್ದು ಶ್ರೀ ಕೃಷ್ಣನ ಒಳೆಯಿಕ್ಕೆ ಬಿಟ್ಟವರಾರು ಈಗೆನುತ ದೃಷ್ಟಿ ತೆಗೆದು ಕೋಟಿಸೂರ್ಯ ಪ್ರಕಾಶನ ಇ- ಕ್ಕದ್ಹಾಗೆವೆಯ ನೋಡಿದಳು 21 ಇಷ್ಟು ಕ್ರೋಧಗಳ್ಯಾತಕೀ ಚಾಡಿ ನಾರಂದ ಹಚ್ಚಿ ಹೋದನೆ ಕದನವನು <ಈಔಓಖಿ size=
--------------
ಹರಪನಹಳ್ಳಿಭೀಮವ್ವ
ಉದ್ಧಾರ ಮಾಡಯ್ಯ ಉಡುಪಿ ನಿಲಯ ಹೃದ್ವನಜದಲಿ ನೆಲಸಿ ಅನುಗಾಲ ನಿನ ತೋರಿ ಪ. ಬಂದೆ ಬಹುದೂರದಲಿ ನಿಂದೆ ತವಚರಣದಡಿ ತಂದೆ ಮುದ್ದುಮೋಹನ ಗುರುಕರುಣದಿಂದ ಕುಂದುಗಳನೆಣಿಸದೆಲೆ ಸಿಂಧುಶಯನನೆ ಹೃದಯ ಮಂದಿರದಿ ಮನೆ ಮಾಡು ಸುಂದರಾತ್ಮನೇ 1 ಜನ್ಮಜನ್ಮಾಂತರದ ಅಜ್ಞಾನಗಳ ಕಳೆದು ಕರ್ಮಸಾಸಿರ ಕಡಿದು ಕರುಣದಿಂದ ರಮೆಯರಸನೆ ನಿನ್ನ ಅನುಗಾಲ ಸ್ಮರಿಪಂಥ ಸನ್ಮಾರ್ಗವನೆ ತೋರೊ ಸರ್ವಲೋಕೇಶ 2 ಜಪತಪಗಳೊಂದರಿಯೆ ವ್ರತ ನೇಮಗಳ ಕಾಣೆ ಉಪವಾಸದುಪಟಳವು ಗತಿ ತೋರದೆನಗೆ ಗುಪಿತಮಾರ್ಗದಿ ನಿನ್ನ ನಾಮಾಮೃತವನುಣಿಸಿ ಅಪಹಾಸಗೊಳಿಸದಲೆ ಆದರಿಸೊ ಜೀಯ 3 ಬೇಡಲೇನನು ನಿನ್ನ ಕಾಡಲೇತಕೆ ನಾನು ದಾತ ನೀ ಸರ್ವಜ್ಞನಿರಲು ಮಾಡುವೆನು ಸಾಷ್ಟಾಂಗ ಬೇಡುವೆನು ಪದದಾಸ್ಯ ನೋಡು ಕರುಣಾದೃಷ್ಟಿಯಿಂದೆನ್ನ ಕಡೆಗೆ 4 ಅಂತರಂಗದಲಿಪ್ಪ ಸರ್ವಾಂತರಾತ್ಮಕನೆ ಚಿಂತನೆಗೆ ನೆಲೆತೋರು ಚಿನ್ಮಯಾತ್ಮಕನೆ ಕಂತುಪಿತ ಗೋಪಾಲಕೃಷ್ಣವಿಠ್ಠಲನೆ ಸಿರಿ ಕಾಂತ ಕಾಪಾಡು ಕಡು ಕರುಣಿ ಮಧ್ವೇಶ 5
--------------
ಅಂಬಾಬಾಯಿ
ಎಂತು ಪೊಗಳಲಳವೇ ದ್ವಾರಾವತಿಯ ದೊರೆಯನ್ನು ಕಂತುಪಿತ ಶ್ರೀಕೃಷ್ಣ ಮೂರುತಿಯಾ ಪ. ಅಂತರಂಗದಲಿ ನಿಂತು ಪೊರೆಯುವ ಏಕಾಂತ ಮೂರುತಿಯ ಕರುಣಾನಿಧಿಯಾ ಅ.ಪ. ಆಲದೆಲೆಯ ಮೇಲೆ ಮಲಗಿದ ಸಿಂಧು ನಲಿಯುತ ಕನಕನ ಕಿಂಡಿಯಲಿ ನಿಂದು ಒಲಿದು ವರಗಳನೀವ ಗುಣಸಿಂಧು 1 ಕಂಠದಲಿ ಮುತ್ತಿನಹಾರ ವಜ್ರದಂಗಿಯ ಅಲಂಕಾರ ಕಂಟೀಪದಕ ವಿಸ್ತಾರ ಕರದಲಿ ವಜ್ರದುಂಗೂರ ಸೊಂಟಪಟ್ಟಿಯ ಕಟ್ಟಿದಾ ಚಂದ ನಾಭೀ ಕಮಲದಾನಂದ 2 ಕಡೆಕಣ್ಣು ಕಂಗಳಾ ನೋಟ ಕಸ್ತೂರಿ ಲಲಾಟ ಕುಡಿಹುಬ್ಬುಗಳ ನೀಟಾ ವಜ್ರಮಾಣಿಕ್ಯದ ಕಿರೀಟ ಪಿಡಿದಿರುವ ಕಡಗೋಲು ಕರದಿ ರುಕ್ಮಿಣೀಶ ವಿಠಲ 3
--------------
ಗುಂಡಮ್ಮ
ಎಲ್ಲಿ ನೋಡಿದರಲ್ಲಿ ಚನ್ನಕೇಶವನು ಪುಲ್ಲಲೋಚನನಾದ ಶ್ರೀ ಕೃಷ್ಣನು ಪ ಭೂತಳ ಪಾತಾಳ ಸಕಲ ಲೋಕಗಳಲ್ಲಿ ಭೂತ ಪ್ರೇತಾಳ ಕ್ರಿಮಿ ಜಂತುಗಳಲ್ಲಿ ಮಾತು ಚೇಷ್ಟಗಳಲ್ಲಿ ಕೆರೆ ಭಾವಿ ವನದಲ್ಲಿ ಕೋತಿ ಖಗವೃಂದ ಪಶುವರ್ಗಂಗಳಲ್ಲಿ 1 ವೇದ ಶಾಸ್ತ್ರಗಳಲ್ಲಿ ಸರ್ವ ಧರ್ಮಗಳಲ್ಲಿ ಬೋಧಕ ಮೊದಲಾದ ಗುರು ವರ್ಗದಲ್ಲಿ ಪಾದ ಪಾದಗಳಲ್ಲಿ ಸಾಧು ಸಜ್ಜನರಲ್ಲಿ ವಾದ್ಯ ಮೃದಂಗಾಗಿ ನಾದಂಗಳಲ್ಲಿ 2 ಕಣ್ಣುಗಳಿಗೆಸೆಯುವ ಸಕಲ ವಸ್ತುಗಳಲ್ಲಿ ಮಣ್ಣಿನಲಿ ಸರ್ವತ್ರ ಘನ ಸೃಷ್ಟಿಯಲ್ಲಿ ಬಣ್ಣಿಸಲ್ಕಾಗದ ಹರಿ ಕೀರ್ತನೆಗಳಲ್ಲಿ ಹೆಣ್ಣು ಹೊನ್ನು ಮಣ್ಣು ತ್ರಿವರ್ಗದಲ್ಲಿ 3 ಸಕಲ ಚರ ಪ್ರಾಣಿಯಲಿ ಅಚರ ಜೀವಗಳಲ್ಲಿ ಸಕಲ ಸ್ತ್ರೀ ಪುರುಷರಲಿ ಸುರದನುಜರಲ್ಲಿ ಸಕಲ ಧಾನ್ಯಗಳಲಿ ತಿಂಡಿ ತಿನಸುಗಳಲ್ಲಿ ಸುಖ ದುಃಖ ಬಹಿರಂಗ ಅಂತರಂಗದಲಿ 4 ದಿನದಲ್ಲಿ ನಿಶೆಯಲ್ಲಿ ಅನ್ನಪಾನಗಳಲ್ಲಿ ಅಣುರೇಣು ತೃಣಕಾಷ್ಟ ಸರ್ವ ದಿಕ್ಕಿನಲೀ ಕನಸಿನಲಿ ಮನಸಿನಲಿ ಪಂಚ ಭೂತಗಳಲ್ಲಿ ಜನನ ಮರಣಾತೀತ ಚನ್ನಕೇಶವನು 5
--------------
ಕರ್ಕಿ ಕೇಶವದಾಸ
ಒಂದಾನೊಂದು ದಿವಸದಲ್ಲಿ ಗುರುವ್ಯಾಸರಾಯರು | ಪ ಅಂದದಿಂದ ಪುರಂದರದಾಸರಿ | ಗಿಂದು ಭೋಜನಕ್ಕೆ ಬನ್ನಿರೆಂದು ಕರೆದರೂ ಅ.ಪ ಪೇಳಿತೆಂದು ದಾಸರು ಪೋಗಿ ತಾವು ನಿರ್ಮಲ ಸ್ನಾನ ಜಪಮಂತ್ರ ಹರಿಪೂಜೆಯನೆ ಮಾಡಿ || ಧಳಥಳಿಸುವ ವಿಠಲನ ದಿವ್ಯ ಪಾದ ಗಳ ಧ್ಯಾನಿಸಿ ಕುಳಿತರು ಜನಗಳೆಲ್ಲ ಕೇಳಿ 1 ವಿಠಲನ ದಿವ್ಯ ಮೂರ್ತಿಯ ಪಾಡಿ ದೃಷ್ಟಿಯಿಂದಲಿ ನೋಡಿ | ಮುಟ್ಟಿ ಮುಂದೊಲಿದು ಕುಣಿಕುಣಿದಾಡಿ || ಥಟ್ಟನೆ ವೇದಕ್ಕೆ ಸಮನಾದ ಪದಗಳು | ನಿಷ್ಠೆಯಿಂದ್ಹೇಳಿ ಅಭೀಷ್ಟವ ಪಡೆದರು2 ಎಡೆಯೊಳು ಷಡ್ರಸದನ್ನವ ನೀಡೆ | ಕಡು ಮಮತೆಗಳಿಂದ | ಬಿಡದೆ ದಾಸರ ದಾರಿಯ ನೋಡಿ || ಯೆಡ ಬಲದಷ್ಟ ದಿವ್ಯದಿಂಡೆಯರೆಲ್ಲಾ | ಕಡೆಯದೆಶೆ ಧರಿಸಿದರು ದಾಸರಾ 3 ಹಗಲು ಒಂಭತ್ತು ತಾಸಾಗಿರಲು | ಆಗೆದ್ದು ಬೇಗ ಗುರುಗಳ ಸಮೀಪಕ್ಕೆ ಬರಲು || ಮುಗಿದು ಕರಯುಗ್ಮವ ಬಗೆ ಬಗೆ ಸ್ತುತಿಸುತಾ | ಜಗದೊಳು ನಾನಪರಾಧಿಯೆಂದರೂ 4 ಭೋಜನವ ಮಾಡಿ ಗುರುಗಳಂದು ಸಿಂಹಾಸನದಲ್ಲಿ | ರಾಜಿಸುತ್ತ ಬಂದು ಕುಳಿತಿರಲಂದೂ || ಆ ಜನದೊಡಗೀ ದಾಸರು ಕರೆಯಲು | ನೈಜಭಾವದಿಂದು ಬಂದು ಕುಳಿತರೂ 5 ಪದಗಳು ಬರದ ವಹಿಯಕೊಂಡು ಪೋಗಿ | ಮಧ್ವಶಾಸ್ತ್ರದ ಮೇಲೆ ಕುಳ್ಳಿರಲಾಗ || ಅದನರಿಯದೆ ದಿಂಡೆಯನೊಬ್ಬನು ಆ | ಪದವಹಿಯ ತೆಗೆದು ಬಿಸುಟನಾಗಾ 6 ಯೆರಡಾವರ್ತಿ ತೆಗೆಯಲು ಆಗ | ತಿರುತಿರುಗಿ ಬಂದು ವರಪುಸ್ತಕದ ಮ್ಯಾಲೆ ಕುಳ್ಳಿರಲಂದೂ || ಗುರು ವ್ಯಾಸರಾಯರು ನೋಡಿ ಹರುಷದಿಂದ | ಕರೆದು ಬೈದರವಗೆ ಕಡು ಮೂರ್ಖನೆಂದೂ 7 ಪದದೊಹಿ ತೆಗೆದು ಬಿಸಾಡಿದರೆ ತಿರುತಿರು ಗ್ಯದರಮ್ಯಾಲೆ ವರನಾಲ್ಕು ವೇದಾರ್ಥದರೊಳಗುಂಟು || ನರರುತ್ತಮರೆಲ್ಲ ನೋಡಿ ಹರುಷದಿಂದ | ಪುರಂದರ ಉಪನಿಷತ್ತೆಂದರೂ 8 ಗುರುರಾಯರು ದಾಸರ ನೋಡಲಾಗ ಭರದಿಂದ ಯೆದ್ದು | ಅರಿವೆಯ ಕೈಯಿಂದೊರಸಲು ಆಗ || ತ್ವರಿತದಿ ಕೇಳಲು ವಿಠಲನ ಗುಡಿಯೊಳು | ಪಡದಗುರಿ ಹತ್ತವು ವರಿಸಿದೆವೆಂದರು 9 ಹಾಗೆಂದು ನುಡಿದಾಕ್ಷಣದಲಿ ಬೇಗ ಶಿಷ್ಯರಿಗೆ | ಹೋಗಿ ನೋಡಿ ಬಾರೆಂದೆನಲಾಗಿ || ಬೇಗದಿಂದಲಿ ಬಂದು ಕೇಳಲು ಅವರು | ಈಗ ದಾಸರು ಬಂದು ಪರಿಹರಿಸಿದರೆಂದು 10 ಆ ಮಾತು ಕೇಳಿದಾಕ್ಷಣದಿ ಬೇಗ | ಪ್ರೇಮದಿ ಬಂದು ಸ್ವಾಮಿರಾಯರಿಗೆ ಪೇಳಲು ಆಗ || ನಾಮವ ಸ್ಮರಿಸುತ ಪ್ರೇಮಾಲಿಂಗನವಿತ್ತು | ಕಾಮಿತಾರ್ಥ ಫಲವೀವ ಕಲ್ಪತರುವೆಂದರೂ 11 ಇಂತು ಅನುಭವ ಮಾತುಗಳನಾಡಿ ಲಕ್ಷ್ಮೀಕಾಂತನ | ಅಂತರಂಗದಲಿ ಅತಿಮಾನವ ಮಾಡಿ || ಮೂರ್ತಿ | ಶಾಂತತ್ವದಿ ನೋಡುತ ಶರಣು ಮಾಡಿದರೂ 12 ಗಜಪುರದಲ್ಲಿ ಇರುವರು ಕೂಡಿ ವಿಜಯವಿಠ್ಠಲನ್ನ | ಭಜನೆಯಿಂದ ದಿನ ದಿನ ಪೊಗಳಿ || ತ್ರಿಜಗದೊಡೆಯ ಗುರು ಪುರಂದರವಿಠಲನ | ನಿಜ ವೈಕುಂಠದ ಮುಕ್ತಿಯೈದಿದರೂ 13
--------------
ವಿಜಯದಾಸ
ಕೊಲ್ಹಾಪುರದ - ವಾಸಿನೀ | ಹೇ ಮಹಾಲಕ್ಷ್ಮಿಸೊಲ್ಲ ಲಾಲಿಸೇ ಮಾನಿನೀ ಪ ಬಲ್ಲವರಲ್ಲಿಗೆ ನಿಲ್ಲದೆ ತೆರಳಿಸೆಖುಲ್ಲರ ದಲ್ಲಣ | ನಲ್ಲರಿಸೆ ಮನ ಅ.ಪ. ಭೃಗುಮುನಿಯೂ ತಾ ಬರುತಾ | ವಕ್ಷಘಾತವಾಗಲು ತವ ತಾಣ - ತಾಡಿತ |ಅಗಡ ಮುನೀಗೆ ಪ್ರೀತಾ | ನಾಗುತಲಕುಮಿಗೆ ಅವನು - ಆದ್ರುತದೃಗಜಲಜಿಗಿಸುತ | ಹಗರಣಗೆಯ್ಯುತಜಗಳವ ನಟಿಸುತ | ನಗಧರನಲಿ ನೀನುಜಗದೊಡೆಯನ ಮನ | ಬಗೆಯನು ತಿಳಿಯುತಸೃಗಾಲ ಪುರಕಾಗಿ ಆಗಮ ನಿನ್ನದೂ 1 ಇಂಥಹ ನಿಮ್ಮ ಆಟವೂ | ಭಕ್ತರ ಮುಕ್ತಿಪಂಥವೆನಿಪ - ಮಾರ್ಗವೂಸಂತರ ಅಂತರಂಗವೂ | ನಿರ್ಮಲಿನ ಮುಕ್ತಿಕಾಂತೆಯೊಡನೆ ಆಟವೂ |ಅಂತರಂಗದಲಿಪ್ಪ ಗ್ರಂಥಿಸು ಭೇದನಸಂಚಿತಗಳು ನಾಶ | ಮುಂಜೆನ ನಿರ್ಲೇಪಅಂತರಂಗದಿ ಹರಿ | ಕಾಂತಿಯ ದರ್ಶನಎಂತು ನಾ ಪೇಳಲಿ | ಪಂಥಕೀರ್ತಾಳೀ 2 ಕುಂಡಲ ಕಪೋಲೆ | ಕಿರೀಟ ಮೌಳೇತಿಲಾಲಜ ಕರೆ ಕೋಮಲೇ ||ಕೇಳಿಲಿ ಯಮುನಾ ಕೂಲೇ | ಹರಿಯೊಡನೆ ಲೀಲೇತೂಳಿದಾನಂದ ಸುಜಾಲೇ ||ಕಾಲಕೂಟ ಸಮ | ಕೀಳು ವಿಷಯದಲಿಬೀಳುವುದೆನ ಮನ | ಲಾಲಿಸು ಹೇ ತಾಯೇಶೀಲನೆನ ಹರಿ ಗುರು | ಗೋವಿಂದ ವಿಠಲನ ||ಲೀಲೆಯ ತೋರು | ವಿಶಾಲ ಹೃದಯಳೇ 3
--------------
ಗುರುಗೋವಿಂದವಿಠಲರು
ಕ್ಲೇಶಮಾಡಲಿ ಬೇಡ ಮನವೆ ನೀನೂ ದೇಶದೊಳಗೆ ಕೇಳು ಜ್ಞಾನಿಗಳ ಸಮ್ಮತಾ ಪ ವಸಿಷ್ಠ ಮಹಾಋಷಿಗೆ ನೂರುಮಂದಿ ಸುತರು ಅಸಮಸಾಹಸರು ಬಲು ಶೀಲಜ್ಞರು ಕಾಲ ಮೃತ್ಯುವಿನ ಕೈ ವಶವಾಗಿ ಹೋದರದು ನೋಡು ದು:ಖವ ಬಿಡು 1 ಕೃಷ್ಣ ಸೋದರಮಾವ ಮತ್ತೆ ಭೀಮಸೇನ ಜೇಷ್ಠಪಿತ, ಪಾರ್ಥನು ಪಡೆದ ಶೂರ ಇಷ್ಟು ಜನ ಇರಲಾಗಿ ಅಭಿಮನ್ಯು ದೇಹವನು ಬಿಟ್ಟು ಪೋಗಲು ಒಬ್ಬರಾದರು ಉಳುಹಿದರೆ2 ಇಂಥವರಿಗೀತ್ಯರನು ನಿನಗಾವ ಸ್ವಾತಂತ್ರ್ಯ ಸಂತೋಷವೆ ಬಡು ಧೈರ್ಯದಲ್ಲಿ ಕಂತು ಜನಕ ನಮ್ಮ ವಿಜಯವಿಟ್ಠಲನಂಘ್ರಿ ಅಂತರಂಗದಲಿಡು ಮುಂದಿನಗತಿ ಬೇಡು 3
--------------
ವಿಜಯದಾಸ
ಚಿಂತ್ರವೇಲಿನಿಲಯ ಭಾರತಿ ಕಾಂತನೆ ಪಿಡಿಕೈಯಾ ಪ ಅಂತರಂಗದಲಿ ಚಿಂತಿಪರಘುÀಕುಲಧ್ವಾಂತದಿವಾಕರ ಸಂತತ ಸ್ಮರಿಸುವೆಅ.ಪ ಲಂಘಿಸಿ ವಾರಿಧಿಯ ಶ್ರೀರಾಮಾಂಗುಲಿ ಮುದ್ರಿಕೆಯ ಅಂಗನಿಗೆ ಕೊಟ್ಟು ಮಂಗಳಾಂಗ ರಘು ಪುಂಗವಗೆ ಕುಶಲ ಸಂಗತಿ ತಿಳಿಸಿದ 1 ಇಂದು ಕುಲದಿ ಜನಿಸಿ ಕುಂತಿಯ ಕಂದ ಭೀಮನೆನಿಸಿ ನಿಂದು ರಣದಿಕುರು ವೃಂದವ ಮಥಿಶ್ಯಾನಂದ ಸುತನೊಲಿಮೆ ಛಂದದಿ ಪಡೆದಿಹ 2 ಮೇದಿನಿಯೊಳು ಜನಿಸಿ ಬಹುದು ರ್ವಾದಿಗಳನು ಜಯಿಸಿ ಮೋದಮುನಿಯೆನಿಸಿ ಭೇದವ ಬೋಧಿಸಿ ಸಾಧು ಜನಕೆ ಬಲು ಮೋದವ ಗರಿದಿ 3 ಶೇಷದಾಸರಿಗೊಲಿದಿ ಅವರಭಿಲಾಷೆಯ ಪೂರ್ತಿಸಿದಿ ಪೋಷಿಸೆನ್ನ ಕರುಣಾ ಸಮುದ್ರ ಭವ ಕ್ಲೇಶವ ಕಳೆಯಾ ಗಿರೀಶ ಮುಖವಿನುತ4 ಭೀತರನ್ನು ಪೊರಿವಿ ಭಜಕರ ಪಾತಕವನು ಕಳೆವಿ ಖ್ಯಾತ ಕಾರ್ಪರ ಕ್ಷೇತ್ರದಿ ನರಮೃಗ ನಾಥನ ಪರಮ ಪ್ರೀತಿಪಡೆದಿಹ 5
--------------
ಕಾರ್ಪರ ನರಹರಿದಾಸರು
ಜೋಜೋ ಶ್ರೀ ಗೋಪಾಲಕೃಷ್ಣ ಮೂರುತಿಯೆ ಪತಿ ಲೋಕ ದೊರೆಯೆ ಜೋಜೋ ಈ ಲೋಕದೊಳು ನಿನಗಿನ್ನು ಸರಿಯೆ ಜೋಜೋ ಶ್ರೀ ಗುರುಕರಾರ್ಚಿತದಿ ಬಂದ್ಹರಿಯೆ ಪ. ತಂದೆ ಮುದ್ದುಮೋಹನರು ಕೊಟ್ಟ ಅಂಕಿತದಿ ಪೊಂದಿದ್ದ ರೂಪ ಗ್ರಹದಲ್ಲಿ ಹೊಂದಿ ಮುಂದೆಂಟು ವತ್ಸರಕೆ ಎನ್ನೊಡನೆ ಬಂದಿ ತಂದೆ ಮುದ್ದುಮೋಹನರ ಕರಸ್ಪರ್ಶ ಪೊಂದಿ 1 ನಮ್ಮ ಹಿರಿಯರ ಪೂಜೆ ಒಮ್ಮೊಮ್ಮೆ ಎಂದು ಒಮ್ಮೆ ದುರುಳನು ಮುಟ್ಟೆ ಮಲಿನಾದೆನೆಂದು ನಮ್ಮ ಗುರು ಕರಸ್ಪರ್ಶದಿಂ ಪುನಃ ಬಂದು ಪತಿ ಎನ್ನ ಕರಪೂಜೆ ಬೇಕೆಂದು 2 ಘನ್ನ ಗುಣರು ನಿನ್ನ ಪೂಜಿಸಿ ಪೋಗಲಂದು ಮನೆ ಪೆಟ್ಟಿಗೆಯೊಳ್ ಸುಮ್ಮನಿರಲಾರೆನೆಂದು ಮನಕೆ ಪ್ರೇರಿಸೆ ದುರುಳರಿಗೆ ಕದ್ದು ಒಯ್ದು ಘನ ಮೂರ್ತಿಗಳು ಪೋಗೆ ನೀನೊಬ್ಬ ಬಂದು 3 ಬಹುದಿವಸ ಮಲಿನವಾಗಿರುತಿರಲು ನೀನು ಮಹಮಹಿಮೆ ಅರಿಯಲಿಲ್ಲಾಗ ನಾನಿನ್ನು ಅಹಹ ನಮ್ಮ ಗುರುಗಳೆರೆಯಲು ಜ್ಞಾನವನ್ನು ಮಹಿಯೊಳೆನ್ನ ಪೂಜೆಯನು ಬಯಸಿದೆಯೊ ನೀನು 4 ಮನದಲ್ಲಿ ಪ್ರೇರಿಸಲು ಘನವಲ್ಲವೆಂದು ಕನಸಿನಲಿ ಎನ್ನ ಹಸ್ತದೊಳ್ ಬಂದು ನಿಂದು ಸನುಮತದಿ ಹರುಷದಲಿ ನಿನ್ನ ನಾ ತಂದು ಘನ ಮಹಿಮ ಗುರುಗಳಿಗೆ ಒಪ್ಪಿಸಲು ಅಂದು 5 ಅಂತರಾತ್ಮನ ಗುರುವು ವಿಗ್ರಹದೊಳಿಟ್ಟು ಸಂತೋಷದಿಂದ ಮನಮುಟ್ಟಿ ಕೊಡಲಷ್ಟು ಅಂತಾಯ್ತು ಮಲಿನ ಕುಂದಿತು ತೇಜವೆಷ್ಟು ನಿಂತೆನ್ನ ಕೈಲಿ ಪೂಜೆಯಗೊಂಬ ಗುಟ್ಟು 6 ದಿನದಿನಕೆ ಭಜನೆ ಪೂಜೆಯನೆಗೊಂಬ ಚಂದ ಘನಭಕ್ತರನು ಪೊರೆವ ಬಿರುದು ಆನಂದ ಮುನಿಜನರ ಮೋಹಕನೆ ಸಚ್ಚಿದಾನಂದ ಎನಗೊಲಿದೆ ಗೋಪಾಲಕೃಷ್ಣ ಗೋವಿಂದ 7 ರಮೆ ಬ್ರಹ್ಮ ಸುರರಿಗೆ ಸರಿ ಪೂಜಿಸುವೆನೆ ಕಮಲಾಕ್ಷ ಅಣು ನಾನು ನಿನ್ನ ಒಲಿಸುವೆನೆ ರಮಣೀಯವಾದ ವಸ್ತುಗಳ ನಾ ತಹೆನೆ ಕ್ಷಮಿಸು ನಿನ್ನ ದಾಸಿ ನನ್ನಪರಾಧಗಳನೆ 8 ಅಂತರಂಗದಲಿಪ್ಪ ಬಿಂಬ ಮೂರುತಿಯೆ ನಿಂತು ಈ ವಿಗ್ರಹದಿ ಈ ರೀತಿ ಮೆರೆಯೆ ಸಂತೋಷ ನೋಳ್ಪರಿಗೆ ಕೊಡು ಭಕ್ತಿ ಹರಿಯೆ ಕಂತುಪಿತ ಕಮಲಾಕ್ಷ ಕಾಯೊ ಸಿರಿದೊರೆಯೆ 9 ಪೂಜ್ಯಪೂಜಕನೆಂದು ಪೂಜೆ ಮಾಡುವೆನೊ ಮೂರ್ಜಗತ್ಪತಿ ನಿನ್ನ ಲಾಲಿ ಪಾಡುವೆನೊ ಪೂಜ್ಯ ಶ್ರೀ ಗೋಪಾಲಕೃಷ್ಣವಿಠ್ಠಲ ನೀನು ಗೋಜು ಬೇಡನ್ಯರದು ಪೊರೆಯೊ ದಾಸರನು 10
--------------
ಅಂಬಾಬಾಯಿ
ಧ್ಯಾನವನು ಮಾಡು ಬಿಂಬ ಮೂರುತಿಯಪ ಆನಂದದಲಿ ಕುಳಿತು ಅಂತರಂಗದಲಿ ಅ.ಪ ಸದಾಚಾರನಾಗಿ ದ್ವಾದಶಗುರುಗಳಿಗೆರಗಿ ಮುದದಿಂದ ಮೂಲಮಂತ್ರವನು ಜಪಿಸಿ ಸದಮಲ ಭಕುತಿಯಲಿ ದೇಹಸ್ಥಿತಿಯನೆ ತಿಳಿದು ಪದಮಾಸನವ ಹಾಕಿ ಪರಮ ವಿಶ್ವಾಸದಲಿ1 ಅಂಗವನು ಚಲಿಸದೆ ಚೆನ್ನಾಗಿ ದೃಢವಾಗಿ ಕಂಗಳನೆ ಮುಚ್ಚಿ ಇಂದ್ರಿಯಗಳನೆ ತೆರೆದು ಮಂಗಳ ಶೋಭಿತ ಅಖಂಡ ಧ್ಯಾನದಂತ ರಂಗದೊಳಗೆ ನಿಲಿಸಿ ಎಲ್ಲವನು ಕಾಣೊ 2 ಭಗವದ್ರೂಪಗಳೆಲ್ಲ ಒಂದು ಬಾರಿ ಸ್ಮರಿಸಿ ಮಗುಳೆ ಪರಮ ಗುರುವಿನ ಮೂರ್ತಿಗೆ ತೆಗೆದು ಆಹ್ವಾನಮಾಡಿ ಅಲ್ಲಿಂದ ಹರುಷದಿ ಸ್ವಗುರು ಬಿಂಬಮೂರ್ತಿಯಲಿ ಐಕ್ಯವನೆ ಮಾಡು3 ತಿರುಗಿ ಮೆಟ್ಟಿಕೆ ಮೂರು ವೇಗದಿಂದಲಿ ನಿನ್ನ ಲ್ಲಿರುವ ಮೂರ್ತಿಯಲ್ಲಿ ಚಿಂತನೆಯ ಮಾಡೊ ಭರದಿಂದ ಎಲ್ಲವನು ತಂದು ಹೃದಯದಲ್ಲಿ ಸ್ಥಿರವಾಗಿ ಇಪ್ಪ ಮೂರುತಿಯೊಡನೆ ಕಲೆಸು 4 ಆತನೆ ಬಿಂಬ ಮೂರುತಿಯೆಂದು ತಿಳಿದುಕೊ ಆ ತರುವಾಯ ನಾಡಿಗಳ ಗ್ರಹಿಸಿ ಆ ತೈಜಸನ ತಂದು ವಿಶ್ವಮೂರ್ತಿಯಲ್ಲಿ ಪ್ರೀತಿಯುಳ್ಳವನಾಗಿ ಪತಿಕರಿಸು ಮರುಳೆ 5 ಜ್ಞಾನ ಪ್ರಕಾಶದಲಿ ಇದ್ದು ನಿನ್ನ ಹೃದಯ ಕಮಲ ಮಧ್ಯ ಮೂರ್ತಿ ನಿಲ್ಲಿಸಿ ಬಾಹ್ಯದಲಿ ಏನೇನು ಪೂಜೆಯನು ಉಳ್ಳದನು ಮಾಡೊ6 ಗುಣ ನಾಲ್ಕರಿಂದಲಿ ಉಪಾಸನವನೆ ಮಾಡು ಕ್ಷಣ ಕ್ಷಣಕೆ ಹರಿಪಾದವನು ನೋಡುತ ಅಣುರೇಣು ಚೇತನಾಚೇತನಕೆ ನೇಮಕ ಫಣಿಶಯನನಲ್ಲದೆ ಮತ್ತೊಬ್ಬರಿಲ್ಲವೆಂದು 7 ಮಮತೆಯನು ತೊರೆದು ಮೇಲೊಂದಪೇಕ್ಷಿಸದೆ ಸಮ ವಿಷಮ ತಿಳಿದೊಂದೆ ಭಕುತಿಯಲ್ಲಿ ಸ-ಮಾಧಿಗೊಳಗಾಗಿ ದಿವ್ಯ ದೃಷ್ಟಿಲಿ ಸರ್ವ ಕ್ರಮ ಅನುಕ್ರಮದಿಂದ ಭರಿತಭಾವುಕನಾಗೊ 8 ಪರಿ ಧೇನಿಸಲು ದೇವ ಕರುಣನ ಮಾಡೆ ಪಾಪ ಸಂಚಿತವು ಪ್ರಾರಬ್ಧ ನಾಶ ಅಪರೋಕ್ಷಿತನಾಗಿ ತನ್ನ ಯೋಗ್ಯತದಷ್ಟು ಗೋಪಾಲ ವಿಜಯವಿಠ್ಠಲನೊಲಿವನಾಗ9
--------------
ವಿಜಯದಾಸ
ನಮ್ಮ ರಂಗ ಮಧುರೆಗೆ ನಡೆತರಲು ಪ ಮಥುರೆಗೆ ನಡೆತರಲು ಅತಿ|ಹರುಷದಲಿ ಅಕ್ರೂರನೊಡನೆ| ರಥದಲಿ ಕುಳಿತು ಫಡ ಫಡಫಡಲೆಂದು| ಪಥದಲಿ ನಡಸ್ಯಾಡುತಲಿ 1 ಬಿಲ್ಲಹಬ್ಬದ ನೆವದಲ್ಲಿ|ಫುಲ್ಲಲೋಚನ ಮೋಹನ ಕೃಷ್ಣ| ಇಲ್ಲಿಗೆ ಬಂದನು ಎನುತಲಿ ಕೇಳಲು| ಎಲ್ಲರು ನಡೆದರು ನೋಡಲಾಗಿ 2 ಆಲಯದೊಳಗೆ ನಿಲ್ಲದೇ|ಬಾಲಕಿಯರು ತಮತಮ್ಮ| ಚಾಲವರುತಿಹಾ ತೊಟ್ಟಿಲೊಳಗಿನಾ|ಬಾಲಕರಿಗೆ ಮೊಲೆಗುಡದೆ 3 ಒಬ್ಬಳು ಅರೆಯಣ್ಣೆತಲೆಯಲಿ|ಒಬ್ಬಳು ತಿಗರವ ಹಚ್ಚಿದ ಮೈಯಲಿ ನಡೆದರು ಸಂಭ್ರಮದಿಂದ4 ಅಚ್ಚಮೈಯಲಿ ಕುಳಿತಿರೆ ಒಬ್ಬಳು|ಬಚ್ಚಲೊಳಗೆ ಮಜ್ಜಕನಾಗಿ ಅಚ್ಯುತನಾತುರದಿಂದಲಿ ಒಬ್ಬಳು ಎಚ್ಚರ ದೇಹದ ಬಿಟ್ಟು ನಡೆದಳು 5 ಎಲೆಳುಶಿಶುವೆಂದು ಬಗಲಿಲಿ|ಅಳತೆಯ ಮಾನವನಿರಿಸಿಕೊಂಡು| ನೆಲೆನೊಡದೇ ನಡೆದಳೊಬ್ಬಳು|ಚೆಲುವ ಕೃಷ್ಣನ ನೋಡಲಾಗಿ6 ಕದವನು ಒತ್ತಿಮುಂದಕ|ಒದಗದಿ ಕೆಲವರು ಮಾಳಿಗೆ ಏರಿ| ಸದಮಲಾನಂದಗ ತಲೆಯನು|ಬಾಗಿ ಪದುಮಕರವ ಮುಗಿದು7 ದಣ್ಣನೆ ನೋಡೀ ನೋಡುತಾ|ಕಣ್ಣುಪಾರಣೆ ಮಾಡಿಕೊಂಡು| ಮುನ್ನಿನ ದೋಷವ ಕರಗುವ ಪರಿಯಲಿ| ಪುಣ್ಯ ಸಾಮಗ್ರಿಯ ಮಾಡಿದರಂದು 8 ಕಂಡಾ ಪರಿಯ ರೂಪವಾ| ಧರಿಸಿಕೊಂಡು ಅಂತರಂಗದಲಿ|ತ್ವರಿತದಿಂದಲಿ ಧ್ಯಾಯಿಸುತಾ9
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಪಥ ಕೇಳಿನ್ನು ಪ ಅಂತರಂಗದಲಿ ಶಾಂತಿಯ ತಾಳಿ | ಅಂತರಾತ್ಮನು ನೀನೆನ್ನು | ಸತಿಸುತರಿಗೆ ಗತಿಯೇ ನಂಬಿದೆ | ಗತಿಯಿದ್ದದ್ದಾಗುವದೆನ್ನು | ಅತಿಶಯ ದುಷ್ಕರ್ಮಿಗಳು ನಿಂದಿಸೆ | ಕೃತ ಪೂರ್ವದ ಫಲವೆನ್ನು || ಸತತ ದ್ರವ್ಯವ ಬಯಸಿ ಗಳಿಸಿದೆ | ಗತಿಯಾಗುವದದು ಏನು ? | ಪತಿತ ಪಾವನ ರಘೂನಾಥನ | ನಾಮವ ಗುಪಿತದಿ ಜಪಿಸೊ ನೀನು 1 ಅಣ್ಣ ತಮ್ಮ ತಾಯಿ ತಂದೆ ಬಳಗದ | ಕಣ್ಣು ಮುಂದಿರಬೇಡಿನ್ನು | ಬಣ್ಣ ಬಣ್ಣ ಮಾತುಗಳಾಡಲು | ಪುಣ್ಯವು ಅದರಲಿ ಏನು ? || ಹೆಣ್ಣು ನೋಡಿ ಮನದಲಿ ಹಿಗ್ಗುವಿ | ಮಣ್ಣು ಕೂಡಿತದು ಏನು ? | ಹಣ್ಣು ಹಾಲು ಮೃಷ್ಟಾನ್ನಕಿಂತ ನೀ | ಉಣ್ಣು ಬ್ರಹ್ಮಾನಂದಾಮೃತವನ್ನು 2 ಅಂಶವುಳಿಯಬೇಕೆಂದರೆ ಈ ಜಗ- | ದಂಶವು ನನ್ನದು ಎನ್ನು | ಮಾಂಸಪಿಂಡ ಮುಖಾಂಡ ದಹನವು ಹುತಾಶನಗಾಹುತಿ ಎನ್ನು | ಕಂಸನ ತಂಗಿಯ ಮಗ ಪಾರ್ಥಗೆ ಹೇಳಿದ | ಸಂಶಯವ್ಯಾತಕೆ ಇನ್ನು | ಹಂಸ ಪರಮರ ಐಕ್ಯವ ತಿಳಿಯದೆ | ಹಂಸೋಹಂ ಎಂದರದೇನು ? 3 ನೋಡಿದುದೆಲ್ಲಾ ಪುಸಿಯೆಂದು | ಮಾಡೋ ನಿಶ್ಚಯವಿನ್ನು | ಆಡಬೇಡ ಅನೃತ ವಚನವನು | ಆಡುತಲಿರು ಸತ್ಯವನು | ಕೂಡಬೇಡ ಕಾಮಂದಿಯ ಸಂಗ | ಕೇಡು ತಪ್ಪದದಿನ್ನು | ರೂಢಿಯೊಳಗೆ ನರನಾಗಿ ಪುಟ್ಟಿ | ಮಾಡುತ ನಡಿ ಧರ್ಮವನು 4 ಮೂರ್ತಿ ಪಡಿ | ನಾದವನಾಲಿಸು ನೀನು 5
--------------
ಭಾವತರಕರು
ಬೂದಿ ಮುಚ್ಚಿದ ಕೆಂಡದಂತಿಪ್ಪರು ಪ ಈ ಧರೆಯ ಮೇಲೆ ಶ್ರೀ ಹರಿಭಕ್ತ ಜನರು ಅ.ಪ ಅಂಗ ನೋಡಲು ಅಷ್ಟಾವಕ್ರವಾಗಿಪ್ಪರು ಕಂಗಳಿಂದಲಿ ನೋಡೆ ಘೋರತರರು ಮಂಗಳಾಂಗನ ಅಂತರಂಗದಲಿ ಭಜಿಸುತ್ತ ಹಿಂಗದೆ ಸಂತಜನ ಸಂಗದೊಳಗಿಹರು 1 ನಾಡ ಜನರುಗಳಂತೆ ನಡೆಯರು ನುಡಿಯರು ಕೂಡರು ಕುಟಿಲಜನ ಸಂಘದಲ್ಲಿ ಒಡಲು ತುಂಬಿಸಿಕೊಳರು ರೂಢಿಯೊಳಗೆಂದೆಂದು ಗೂಢವಾಗಿಹರು2 ಡಂಭಕತನದಿಂದ ಗೊಂಬೆನೆರಹಿಕೊಂಡು ಡೊಂಬ ಕುಣಿದಂತೆ ಕುಣಿದಾಡರು ಹಂಬಲಂಗಳ ಬಿಟ್ಟು ಹರುಷವುಳ್ಳವರಾಗಿ ಬಿಂಬ ಮೂರುತಿಯನ್ನು ಕೊಂಡಾಡುತಿಹರು 3 ಶತ್ರು ಮಿತ್ರರುಗಳ ಸಮನಾಗಿ ಎಣಿಸುವರು ಪುತ್ರ ಮಿತ್ರ ಭ್ರಾತೃಗಳ ನೆಚ್ಚರು ಯಾತ್ರೆ ತೀರ್ಥಂಗಳಿಗೆ ಹೋಗುತ್ತ ಶ್ರೀ ಹರಿಯ ಸ್ತೋತ್ರಗಳ ಮಾಡಿ ಸಾಧನೆ ಮಾಡಿಕೊಂಬುವರು 4 ಕಷ್ಟ ಸೌಖ್ಯಂಗಳನು ಕಲಿವರದಗರ್ಪಿಪರು ಇಟ್ಟುಕೊಟ್ಟಿದ್ದನ್ನ ಹರಿಕೊಟ್ಟನೆಂಬುವರು ಸಿರಿ ವಿಜಯವಿಠ್ಠಲನ ಪದಪದ್ಮಾ ಮುಟ್ಟಿ ಭಜಿಸಿ ಮುಕ್ತ ಸಾಮಾಜ್ರ್ಯ ಪಡೆಯುವರು5
--------------
ವಿಜಯದಾಸ