ಒಟ್ಟು 18 ಕಡೆಗಳಲ್ಲಿ , 10 ದಾಸರು , 18 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಇಂದು ಬನ್ನಿ ಇಂದಿರೇಶಾ ಇಂದುವಾರದಲಿ ಬಲು | ಅಂದದಿಂದ ಮೆರೆವನಂದವ ನೋಡಾ ಪ ಮುತ್ತಿನ ಕಿರೀಟ ಮೇಲೆ ಸುತ್ತಿದ ಲತೆ ತಳಲು | ರತ್ನಗಂಬಳಿ ಕಲ್ಲಿಯ ಬುತ್ತಿ ಪೆಗಲೂ || ತೂತ್ತುತೂರಿ ಎಂದು ಸ್ವರ | ವೆತ್ತಿ ಊದುವ ಕೊಳಲು | ಉತ್ತಮ ಶೋಕ್ಲವನು ಮೆರೆಯುತ್ತಲಿಪ್ಪುದು 1 ಉಂಗುರಗೂದಲು ಪುಬ್ಬು ಸಿಂಗಾಡಿ ಅಂದದಿ ಒಪ್ಪೆ | ಅಂಗಾರ ಕಂಕಣ ಮಂಗಳಾಂಗ ನಿಸ್ಸಂಗ | ರಂಗ ತುಂಗ ಮಹಿಮ ತಾರಂಗ ಅಂಗುಲಿಲಿ ರತ್ನ | ದುಂಗುರವ ಯಿಟ್ಟ ಸುಖಂಗಳ ನೋಡಾ 2 ಉಂಗುರವ ನಡು ಮೇಲು ಕಂಗಳ ಕುಡಿನೋಟ | ಗೋಪಾಂಗನೇರ ಮನಕೆ ಮೋಹಂಗಳ ತೋರೆ | ಅಂಗಜನ್ನೆನೆಸಿ ತಾಪಂಗಳು ವೆಗ್ಗಳದಿಂದ | ಹಂಗೀಗರಾಗೆ ನಗುವ ಗಂಗಾಜನಕ 3 ಲೋಕ ಬೆಲೆಗೊಂಬ ಅಲೌಕೀಕ ಮಣಿನಾಸದಲ್ಲಿ | ರಾಕಾಬ್ಜಾನಂದದಿ ಮೊಗಾನೇಕ ಲೋಕೇಳಾ | ನಿತ್ಯ ಬೇಕೆಂದು ಜಪಿಸಲು ದೊರಕದ ದೊಂಬಲು ಬಾ ಯದುಕುಲಾಂಬರಾ4 ಕುಂಡಲ ಕರ್ಣ ಶ್ರೀಗಂಧ ಪೂಸಿದ ವಕ್ಷ | ಪೂಗೊಂಚಲು ಸಣ್ಣನಾಮ ಆ ಗೆಜ್ಜೆಧ್ವನಿ | ಆಗಮನ ಸೋಲಿಸೆ ನಾನಾ ಭೋಗಾದಲ್ಲಿಯಿಪ್ಪ | ಮಧ್ವ | ಯೋಗಿಪ್ರಿಯಾ ವಿಜಯವಿಠ್ಠಲಾ ಗುಣನಿಧಿ 5
--------------
ವಿಜಯದಾಸ
ಒಂದಾನೊಂದು ದಿವಸದಲ್ಲಿ ಗುರುವ್ಯಾಸರಾಯರು | ಪ ಅಂದದಿಂದ ಪುರಂದರದಾಸರಿ | ಗಿಂದು ಭೋಜನಕ್ಕೆ ಬನ್ನಿರೆಂದು ಕರೆದರೂ ಅ.ಪ ಪೇಳಿತೆಂದು ದಾಸರು ಪೋಗಿ ತಾವು ನಿರ್ಮಲ ಸ್ನಾನ ಜಪಮಂತ್ರ ಹರಿಪೂಜೆಯನೆ ಮಾಡಿ || ಧಳಥಳಿಸುವ ವಿಠಲನ ದಿವ್ಯ ಪಾದ ಗಳ ಧ್ಯಾನಿಸಿ ಕುಳಿತರು ಜನಗಳೆಲ್ಲ ಕೇಳಿ 1 ವಿಠಲನ ದಿವ್ಯ ಮೂರ್ತಿಯ ಪಾಡಿ ದೃಷ್ಟಿಯಿಂದಲಿ ನೋಡಿ | ಮುಟ್ಟಿ ಮುಂದೊಲಿದು ಕುಣಿಕುಣಿದಾಡಿ || ಥಟ್ಟನೆ ವೇದಕ್ಕೆ ಸಮನಾದ ಪದಗಳು | ನಿಷ್ಠೆಯಿಂದ್ಹೇಳಿ ಅಭೀಷ್ಟವ ಪಡೆದರು2 ಎಡೆಯೊಳು ಷಡ್ರಸದನ್ನವ ನೀಡೆ | ಕಡು ಮಮತೆಗಳಿಂದ | ಬಿಡದೆ ದಾಸರ ದಾರಿಯ ನೋಡಿ || ಯೆಡ ಬಲದಷ್ಟ ದಿವ್ಯದಿಂಡೆಯರೆಲ್ಲಾ | ಕಡೆಯದೆಶೆ ಧರಿಸಿದರು ದಾಸರಾ 3 ಹಗಲು ಒಂಭತ್ತು ತಾಸಾಗಿರಲು | ಆಗೆದ್ದು ಬೇಗ ಗುರುಗಳ ಸಮೀಪಕ್ಕೆ ಬರಲು || ಮುಗಿದು ಕರಯುಗ್ಮವ ಬಗೆ ಬಗೆ ಸ್ತುತಿಸುತಾ | ಜಗದೊಳು ನಾನಪರಾಧಿಯೆಂದರೂ 4 ಭೋಜನವ ಮಾಡಿ ಗುರುಗಳಂದು ಸಿಂಹಾಸನದಲ್ಲಿ | ರಾಜಿಸುತ್ತ ಬಂದು ಕುಳಿತಿರಲಂದೂ || ಆ ಜನದೊಡಗೀ ದಾಸರು ಕರೆಯಲು | ನೈಜಭಾವದಿಂದು ಬಂದು ಕುಳಿತರೂ 5 ಪದಗಳು ಬರದ ವಹಿಯಕೊಂಡು ಪೋಗಿ | ಮಧ್ವಶಾಸ್ತ್ರದ ಮೇಲೆ ಕುಳ್ಳಿರಲಾಗ || ಅದನರಿಯದೆ ದಿಂಡೆಯನೊಬ್ಬನು ಆ | ಪದವಹಿಯ ತೆಗೆದು ಬಿಸುಟನಾಗಾ 6 ಯೆರಡಾವರ್ತಿ ತೆಗೆಯಲು ಆಗ | ತಿರುತಿರುಗಿ ಬಂದು ವರಪುಸ್ತಕದ ಮ್ಯಾಲೆ ಕುಳ್ಳಿರಲಂದೂ || ಗುರು ವ್ಯಾಸರಾಯರು ನೋಡಿ ಹರುಷದಿಂದ | ಕರೆದು ಬೈದರವಗೆ ಕಡು ಮೂರ್ಖನೆಂದೂ 7 ಪದದೊಹಿ ತೆಗೆದು ಬಿಸಾಡಿದರೆ ತಿರುತಿರು ಗ್ಯದರಮ್ಯಾಲೆ ವರನಾಲ್ಕು ವೇದಾರ್ಥದರೊಳಗುಂಟು || ನರರುತ್ತಮರೆಲ್ಲ ನೋಡಿ ಹರುಷದಿಂದ | ಪುರಂದರ ಉಪನಿಷತ್ತೆಂದರೂ 8 ಗುರುರಾಯರು ದಾಸರ ನೋಡಲಾಗ ಭರದಿಂದ ಯೆದ್ದು | ಅರಿವೆಯ ಕೈಯಿಂದೊರಸಲು ಆಗ || ತ್ವರಿತದಿ ಕೇಳಲು ವಿಠಲನ ಗುಡಿಯೊಳು | ಪಡದಗುರಿ ಹತ್ತವು ವರಿಸಿದೆವೆಂದರು 9 ಹಾಗೆಂದು ನುಡಿದಾಕ್ಷಣದಲಿ ಬೇಗ ಶಿಷ್ಯರಿಗೆ | ಹೋಗಿ ನೋಡಿ ಬಾರೆಂದೆನಲಾಗಿ || ಬೇಗದಿಂದಲಿ ಬಂದು ಕೇಳಲು ಅವರು | ಈಗ ದಾಸರು ಬಂದು ಪರಿಹರಿಸಿದರೆಂದು 10 ಆ ಮಾತು ಕೇಳಿದಾಕ್ಷಣದಿ ಬೇಗ | ಪ್ರೇಮದಿ ಬಂದು ಸ್ವಾಮಿರಾಯರಿಗೆ ಪೇಳಲು ಆಗ || ನಾಮವ ಸ್ಮರಿಸುತ ಪ್ರೇಮಾಲಿಂಗನವಿತ್ತು | ಕಾಮಿತಾರ್ಥ ಫಲವೀವ ಕಲ್ಪತರುವೆಂದರೂ 11 ಇಂತು ಅನುಭವ ಮಾತುಗಳನಾಡಿ ಲಕ್ಷ್ಮೀಕಾಂತನ | ಅಂತರಂಗದಲಿ ಅತಿಮಾನವ ಮಾಡಿ || ಮೂರ್ತಿ | ಶಾಂತತ್ವದಿ ನೋಡುತ ಶರಣು ಮಾಡಿದರೂ 12 ಗಜಪುರದಲ್ಲಿ ಇರುವರು ಕೂಡಿ ವಿಜಯವಿಠ್ಠಲನ್ನ | ಭಜನೆಯಿಂದ ದಿನ ದಿನ ಪೊಗಳಿ || ತ್ರಿಜಗದೊಡೆಯ ಗುರು ಪುರಂದರವಿಠಲನ | ನಿಜ ವೈಕುಂಠದ ಮುಕ್ತಿಯೈದಿದರೂ 13
--------------
ವಿಜಯದಾಸ
ಕೋಲು ಕೋಲೆನ್ನ ಕೋಲೆ ಕೋಲು ಕೋಲೆನ್ನ ಕೋಲೆ ಕೋಲು ಶ್ರೀಹರಿಯಾ ಬಲಗೊಂಬೆ ಕೋಲೆ ಪ ಮೊದಲು ನಮ್ಮ ಗುರು ರಘುಪತಿಯ ಪಾದಕ್ಕೆ ಮುದದಿಂದ ಎರಗಿ ಬಿನ್ನೈಪೆ ಕೋಲೆ ಮುದದಿಂದ ಎರಗಿ ಬಿನ್ನೈಪೆ ಮನದಲ್ಲಿ ಪದಮನಾಭನ್ನ ತೋರೆಂದು ಕೋಲೆ1 ಜನುಮ ಜನುಮದಲ್ಲಿ ಅನಿಮಿತ್ಯ ಬಂಧು ನೀಯನಗೀಯೋ ನಮ್ಮ ಸೇವೆಯ ಕೋಲೆ ಎನಾಗಿಯೋ ನಿಮ್ಮ ಸೇವೆಯ ತವ ಪಾದವನು ಧ್ಯಾನ ಮರಿಯಾದೆ ಕೋಲೆ2 ಮೂಢನಾದ ಎನ್ನನೋಡಿ ಕರುಣವನು ಮಾಡಿ ಹರಿಚರಣ ತೋರಿದ ಕೋಲೆ ಮಾಡಿ ಹರಿಚರಣ ತೋರಿದ ನಿಮ್ಮ ದಯ ಕೀಡುಂಟೆ ಜಗದಿ ಗುರುವರ್ಯ ಕೋಲೆ3 ಪತಿಪಾದ ಮಹಿಮೆ ತೋರಿಸಿ ಕೋಲೆ ಪತಿಪಾದ ಮಹಿಮಾ ತೋರಿಸಿ ಸ ದ್ಗತಿ ಪಥsÀವನ್ನು ವಿಡಿಸಿದ ಕರುಣಿಯೆ ಕೋಲೆ 4 ಅನಾಥ ರಕ್ಷಕ ಆಪತ್ತು ಬಾಂಧವ ಶ್ರೀನಿವಾಸನ್ನ ನಿಜದಾಸ ಕೋಲೆ ಶ್ರೀನಿವಾಸನ್ನ ನಿಜದಾಸ ಮಮಕುಲ ಸ್ವಾಮಿಗೆ ನಮಿಪೆ ಮನದಲ್ಲಿ ಕೋಲೆ 5 ಲಕುಮೀಶ ಹರಿ ದೇವಕಿ ತನಯಗೆ ಸಕಲಾ ಕರ್ಮಗಳಾ ಅರ್ಪಿಸೆ ಕೋಲೆ ಸಕಲಾ ಕರ್ಮಗಳಾ ಅರ್ಪಿಪೆ ನಮ್ಮಗುರು ಸುಖನಿಧಿಗಳಿಗೆ ನಮಿಸುವೆ ಕೋಲೆ 6 ಆನಮಿಸುವೆ ಮಹಾನುಭಾವ ಗುರು ನೇಮಕಲ್ಲಾರ್ಯರ ಚರಣಕ್ಕೆ ಕೋಲೆ ನೇಮಕಲ್ಲಾರ್ಯರ ಚರಣಕ್ಕೆ ಕೋಸಗಿ ಸ್ವಾಮಿರಾಚಾರ್ಯರ ಪಾದಕ್ಕೆ ಕೋಲೆ 7 ಪುರಂದರಾದಿ ದಾಸವರ್ಯರ ಸುಂದರ ಚರಣಕ್ಕೆ ಎರುಗುವೆ ಭರದಿಂದ ಕೋಲೆ ಭರದಿಂದ ಮುದಮುನಿ ಇವರನ್ನು ತೋರಿ ಪೊರೆಯಂದು ಕೋಲೆ 8 ಅಂದದಿಂದ ಆನಂದತೀರ್ಥ ರಾಘ ವೇಂದ್ರಾದಿ ಸಕಲ ವಿಭುದಾದಿ ಕೋಲೆ ರಾಘವೇಂದ್ರಾದಿ ಸಕಲ ವಿಭುದ ಆ ಕರ್ಮಂ ದೀಗಳಿಗೆ ನಮಿಸುವೆ ಕೋಲೆ 9 ವಾದಿರಾಜರ ದಿವ್ಯ ಪಾದಕ್ಕೆ ನಮಿಸುವೆ ಸಾಧಿಸಿ ಕೊಡಲಿ ಸತತಾದಿ ಕೋಲೆ ಸಾಧಿಸಿ ಕೊಡಲಿ ಸತತಾದಿ ಹರಿದಾಸ ರಾದವರ ಸೇವೆಯನಗೆಂದು ಕೋಲೆ 10 ಗಣಪಾದಿಗಳು ಸುರಮುನಿ ಪಾದಗಳಿಗಾ ನಮಿಸುವೆ ಮನಸಿಜ ಸುರಪಾಗ ಕೋಲೆ ನಮಿಸುವೆ ಮನಸಿಜ ಸುರಪಾಗ ಭೂತ ಗಣಪತಿ ಶೇಷರಪಾದ ಕಮಲಕ್ಕೆ ಕೋಲೆ 11 ಭಾರತೀವಾಣಿ ಗುರು ಮಾರುತಿ ಪಾದಕೆ ಪರಿ ಮಣಿಯುವೆ ಕೋಲೆ ಪರಿ ಮಣಿಯುತ ಹರಿಪಾದ ತೋರುತ ಮನದಲ್ಲಿ ನಿಲಿಸೆಂದು ಕೋಲೆ 12 ಲಕ್ಷ್ಮೀದೇವಿಯೆ ಲಕ್ಷಣವಂತಿಯೆ ಪಕ್ಷಿವಾಹನನ ಅರ್ಧಾಂಗಿ ಕೋಲೆ ಪಕ್ಷಿವಾಹನನ ಅರ್ಧಾಂಗಿ ಭವದಿಂದ ರಕ್ಷಿಸಲೆನ್ನ ತವಕಾದಿ ಕೋಲೆ 13 ಶಿರಿಗೋವಿಂದವಿಠಲ ವಿಶ್ವವ್ಯಾಪಕ ಮರುತಾಂತರ್ಗತನೆ ಮುರರಿಪು ನಮ್ಮ ಗುರುವರ್ಯರ ಪ್ರೀಯ ಸಲಹಯ್ಯ ಕೋಲೆ14
--------------
ಅಸ್ಕಿಹಾಳ ಗೋವಿಂದ
ಗುರುವೆ ನಮ್ಮ ತಾಯಿ ತಂದೆ | ಗುರುವೆ ನಮ್ಮ ಬಂಧುಬಳಗಗುರುವೆ ನಮ್ಮ ಸರ್ವಸ್ವವು ಗತಿಗೋತ್ರರಯ್ಯಾ ಪ ತಂದೆ ತಾಯಿ ಮಗುವಿಗಾಗಿ | ನೊಂದಿ ಬಳಲಿ ಸಾಕುವಂತೆಎಂದೆಂದು ಅವರೆ ನಮ್ಮ ಸದುಪದೇಶದೀ |ಬಂಧನಕ್ಕೊಳಗಾಗದಂತೆ | ಮಂದರೋದ್ಧರನ ನಾಮಅಂದದಿಂದ ಬೋಧಿಸುತ್ತ | ಉದ್ಧರಿಸುವರಯ್ಯಾ 1 ಮುದ್ದು ಮೋಹನದಾಸರಿಂದ | ಬದ್ಧಶಿಷ್ಯರೆನಿಸಿಕೊಂಡುಶುದ್ಧರು ಅವಧೂತರು | ಹರಿಯನ್ನೆ ಕಂಡೂ |ಗೆದ್ದು ತಾವು ಬಂಧದಿಂದ | ಉದ್ಧರಿಸಲನ್ಯರನುಸಿದ್ಧರಾಗಿ ಕರಿಗಿರೀಲಿ | ದಾಸಕೂಟ ನೆರೆಸೀದ 2 ಸನ್ನುತ ಪರ | ವಸ್ತುವೆಂದು ಬೋಧಿಸಿದ 3
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ತುಂಬಿ ಬಂದಾಗ) ನಂಬಿದೆನೊ ಸ್ವಾಮಿ ನಂಬಿದೆನೊ ಪ. ಅಂಬುಜಾಕ್ಷ ಸ್ವಪ್ನದಿ ನೀ ತುಂಬಿದಾನಂದ ವಾರ್ತೆಯ ಅ.ಪ. ಈರೇಳು ಲೋಕದ ಜನಕೆ ಮೂರಾವಸ್ಥೆಗಳಲಿ ನೀನೆ ಪ್ರೇರೇಪಿಸುವನೆಂದು ವೇದ ಸಾರವಾಗಿದೆ ನಾರದಾದಿ ಸಕಲ ಮುನಿ ವೀರರೆಲ್ಲ ಸ್ವಪ್ನವು ನಿ- ಸ್ಸಾರವಲ್ಲವೆಂದು ಪೇಳ್ವಾಧಾರದಿಂದ ಭ್ರಮೆಯ ಬಿಟ್ಟು 1 ನಾನು ನನ್ನದೆಂಬ ಬಹು ಹೀನ ಮತಿಯ ಪೇಳ್ವ ನರಗೆ ತಾನಾಗಿ ಬಂದುಸುರಲನುಮಾನಕರವೆಂದು ಶ್ರೀನಿಕೇತನ ನಿನ್ನ ಚರಣ ಮಾನಿಯೆಂದು ಮನ್ನಿಸಿ ಸ್ವಪ್ನಾನುಸರಿಸಿ ಶುಭವ ಪೇಳಿ ದೀನಭಾವ ಕಳೆವಿಯೆಂದು 2 ಇಂದಿರೇಶ ಎನ್ನೊಳಿರುವ ಕುಂದನೊಂದನೆಣಿಸದೆ ಈ ಅಂದದಿಂದಲೆಂದೆಂದಿಗು ತಂದೆ ಕರುಣಿಸು ಸುಂದರಾಂಗ ಶೇಷಗಿರಿ ಮಂದಿರ ನಿನ್ನ ಪಾದಾರ ವಿಂದ ಭಕ್ತಿ ಇತ್ತು ನಿತ್ಯಾನಂದಗೊಳಿಸಿ ಸಲಹೊ ಬೇಗ 3
--------------
ತುಪಾಕಿ ವೆಂಕಟರಮಣಾಚಾರ್ಯ
ಧ್ಯಾನವನೆ ಮಾಡಿ ನವರತ್ನ ಸಿಂಹಾಸನಸಾನಂದದಿಂದ ನಿಮಗರ್ಪಿಸುವೆನುಶ್ರೀ ನಿಧಿಯೆ ಪಾದ್ಯಾಘ್ರ್ಯ ಮಧುಪರ್ಕಗಳನು ಸು-ಮ್ಮಾನದಿಂದರ್ಪಿಸುವೆ ಗೌರಿ ದೇವಿ ಜಯ 1 ತುಂಗಭಧ್ರಾ ಸರಸ್ವತಿ ಯಮುನೆ ಕಾವೇರಿಗಂಗಾದಿ ಶುಭತೀರ್ಥ ಸಲಿಲದಿಂದಮಂಗಲಸ್ನಾನವನೆ ರಚಿಸಿ ಜಡೆವೆಣೆದು ಕುಸುಮಂಗಳಂ ಮುಡಿಗೆ ಮುಡಿಸುವೆನಂಬಿಕೆ 2 ಚಂದ್ರಗಾವಿಯ ಸೀರೆ ಕುಪ್ಪಸವ ತೊಡಿಸುವೆನುಚಂದದಿಂದರಿಸಿನವ ಲೇಪಿಸುವೆನುಚಂದ್ರಕಸ್ತೂರಿ ತಿಲಕ ಕುಂಕುಮದ ರೇಖೆಯನುಅಂದದಿಂದಿಡುವೆ ಶ್ರೀ ಗೌರಿ ನಿಮಗೆ3 ಕಣ್ಣ ಕಪ್ಪಿಟ್ಟು ಕರಯುಗಕೆ ಗಂಧವ ತಿವುರಿಚಿನ್ನದಾಭರಣ ನಿಕರವನಿಡುವೆನುರನ್ನ ದುಂಗುರ ಹಾರ ಪದಕದಿಂದ ಶೃಂಗರಿಸಿನಿನ್ನ ಪದಯುಗವ ಪೂಜಿಪೆನು ಗೌರಿ ಜಯ4 ಚಾರು ಪುನ್ನಾಗ ಪೂಗಸಿರಿಸ ಸುರಹೊನ್ನೆ ಸಂಪಗೆ ಮೊದಲಾದ ಪೂಸರವ ಸಿರಿಮುಡಿಗೆ ಮುಡಿಸುವೆನು ಗೌರಿ ಜಯ 5
--------------
ಕೆಳದಿ ವೆಂಕಣ್ಣ ಕವಿ
ಯಾಕೋ ಕೋಪ ಕೃಷ್ಣಾ ನಿನಗೆ ಎನ್ನ ಮೇಲೆ ಎಲ್ಲ ಸಾಕಬೇಕು ಎಂಬ ನಿಜವಾ ಪ ಲೋಕನಾಯಕನಾದ ಲಕ್ಷ್ಮೀಲೋಲಗೋವಿಂದ ಅನೇಕ ಅವತಾರಗಳೆತ್ತಿದ ಹರಿಯೆ ಮುಕುಂದಾ -------ಜನರೊಳಗಿನ್ನು ಹೀನನ ಮಾಡಿ ಬಿಡಿಸಿ ------------------------------ 1 ತಂದೆತಾಯಿ ಬಂಧು ಬಳಗ ದೈವ ನೀನೆಂದು ಇನ್ನು ಎಂದೆಂದು ಭಕ್ತರ ಸಲಹೊ ಇಂದು ನಿನ್ನ ದ್ವಂದ್ವ ಚರಣಾನಂದದಿಂದ ಹೊಂದಿದವನು ಕಂದನೆಂದು--------- ಅಂದದಿಂದ ಪೊರೆಯದಿರುವದು ಹೇಗೊ 2 ಅಷ್ಟು ಜಗಕಾಧ್ಯಕ್ಷನಾದ ಆದಿಮೂರುತಿ ನಿಷ್ಟ ನೀನು ಶಿಷ್ಟ ಜನರ ಹೃದಯದಿರುತಿ ಇಷ್ಟು ಕಷ್ಟ ಬಡುತ ನಾನು ಇಷ್ಟದಿಂದ ಮೊರೆಯ ಹೊಕ್ಕರೆಸೃಷ್ಟಿಗೊಡೆಯನಾದ 'ಹೊನ್ನವಿಠ್ಠಲ’ ನಿನ್ನ ಇಷ್ಟ ಇಲ್ಲದೆಲ್ಲಾ 3
--------------
ಹೆನ್ನೆರಂಗದಾಸರು
ಯಾವ ಲೋಕಕೆ ಎನ್ನ ಎಳತಂದೆ ಹರಿಯೇ ದೇವಕೀ ಕಂದ ಗೋಪಾಲ ನಾನರಿಯೇ ಪ ನಳಧರ್ಮನೃಪ ಹರಿಶ್ಚಂದ್ರಾದಿಗಳು ಜನಿಸಿ ಖಳರನ್ನು ದಂಡಿಸೇ ಶಿಷ್ಟರನು ಹರಿಯೇ ಸಲಹ ಸುಜನರಿಗೆಲ್ಲ ಮಾನವಂ ಕೊಟ್ಟು ತಾ ವಿಳೆಯ ಸತ್ಯದೊಳಾಳಿದಾ ರಾಜ್ಯವಲ್ಲಾ 1 ಹಿಂದೆ ದುರ್ಜನರನ್ನು ತರಿಯಲೋಸುಗ ನೀನು ಅಂದದಿಂದೊಂಬತ್ತು ಅವತಾರವೆತ್ತಿ ಬಂದು ಸುಜನರ ಪೊರೆದು ಧರ್ಮವನು ನೆಲೆಗೊಳಿಸಿ ಚಂದದಿಂ ರಕ್ಷಿಸಿದ ಲೋಕವಿದು ಅಲ್ಲಾ 2 ಮನ್ನಿಸದೆ ಧರ್ಮವನು ನಿತ್ಯಕರ್ಮವ ಬಿಟ್ಟು ಹೀನ ಪಥಗಳ ಪಿಡಿದು ಬಂಜೆಯನು ಆಸೀ ಚನ್ನಕೇಶವ ನಿಮ್ಮ ನಾಮ ಸಂಕೀರ್ತನೆಯ ದೈನ್ಯದಿಂ ಗೈಯದ ರಾಜ್ಯವಿದು ಹರಿಯೇ 3
--------------
ಕರ್ಕಿ ಕೇಶವದಾಸ
ರಕ್ಷೆಸೆನ್ನ ಈ ಕ್ಷಣದಲುಪೇಕ್ಷೆ ಮಾಡದೆ ಪಕ್ಷಿವಾಹನ ಪರಮಪುರುಷ ಲಕ್ಷ್ಮಿನಾಯಕ ಪ ಅಂದಂದಿಂದ ಕೈಯಹಿಡಿದು ಚಂದದಿಂದ ಎನ್ನಬಿಡದೆ ಇಂದು ನಿನ್ನ ದ್ವಂದ್ವ ಚರಣಕ್ಹೊಂದಿದ ದಾಸನು ಎಂದು 1 ಕಷ್ಟಿ ಇವನು ಎಂದು ಕರುಣ ದೃಷ್ಟಿಯನೆ ತೋರುಬೇಗ ಸೃಷ್ಟಿಗೊಡೆಯ ನಾದ ಶ್ರೀ ಕೃಷ್ಣಮೂರುತಿ ನೀನೆ ಗತಿ 2 ಇಂದು ಮಾಡಿದಂಥದೆಂಥಾ ದೋಷವೊ ಹರಿಯೆ ಇಂದು ಎನ್ನ ಬಾಧಿಸುವುದು ಏನು ಕಾರಣವೊ ಕೃಷ್ಣಾ 3 ಸಜ್ಜನರ ರಕ್ಷಕ ದೇವ ಸರ್ವಜನರ ಪೋಷಕ ನೀನೆ ದುರ್ಜನರ ಖಂಡಿಸಿದ ಮೂಜ್ಜಗ ಪಾಲಕ ನೀನೇ ಎಂದೂ 4 ಪುಂಡರೀಕವರದ ಭೂಮಂಡಲಾಧಿಪತಿಯೆನಿಸಿ ಮಹಿಮವುಳ್ಳದೇವ 5 ಭಾವಜನಯ್ಯ ಭವ ಸ್ತೋತ್ರ ಪ್ರೀಯಾ ಪೊರೆಯದಲಿರುವದು ದೇವಾ 6 ಗಂಗೆ ಜನಕ ಮಂಗಳಾಂಗ ಕರುಣಾಸಾಗರ ಘನಗಂಭೀರಾ ರಂಗ `ಹೆನ್ನವಿಠಲ' ಕೃಪಾಂಗ ದೇವೋತ್ತುಂಗ ಹರಿಯೆ7
--------------
ಹೆನ್ನೆರಂಗದಾಸರು
ರಂಗ ಕೊಳಲನೂದುತ ಬಂದಯಶೋದೆಯ ಕಂದ ಪ ಕೊಳಲ ಧ್ವನಿಗೆ ವಿರಹವು ನಾರಿಯರಿಗೆಕಳಕಳÀವಾಗಲು ಕಳಕಳಿಸುತ ಅ.ಪ. ಶೃಂಗಾರ ಕೊಳಲ ಗಾಯನ ಮಾಡೆಸ್ತ್ರೀಯರು ನೋಡೆ ರಂಗನ ಪಾದದಲಿ ಮನ ಹೂಡೆಭೃಂಗಾಮೃತ ತೈಲದಿಅಂಗನೆಯರು ಝಳಕವ ಮಾಡೆದೇವರ್ಕಳು ನೋಡೆತುಂಗವಿಹಂಗ ಭುಜಂಗ ನವಿಲು ಸಾ -ರಂಗ ಗಿಣಿಯು ಮಾತಂಗ ಮರಿಯು ಕು-ರಂಗ ಮಧ್ಯೆ ಚರಣಂಗಳೆಡೆಗೆ ವೇ-ದಂಗಳೆರಗೆ ಕಾಮಂಗಳಲುಗೆ ನೇ-ತ್ರಂಗಳಿಗತಿ ಚಿತ್ರಂಗಳಾಗೆ ಆರಂಗನೂದ್ವ ಸಾರಂಗ ಕೇಳಿ ಋಷಿಪುಂಗಸಹಿತ ತಾವುಗಳು ಬರೆ ನರ-ಸಿಂಗನೂದಿದ ಜಗಂಗಳ ಮೋಹಿಸಿ1 ಬಂಗಾರ ಬಟ್ಟಲೊಳಗೆ ಅಂದುಕ್ಷೀರವ ತಂದು ರಂಗಗರ್ಪಿಸುವೆವು ನಾವೆಂದುಹರುಷದೊಳಂದು ಅಂಗನೆಯರು ಮೈಮರೆತು ನಿಂದುಒಲಿಯಬೇಕೆಂದು ಮಂಗಳ ಮಹಿಮನು ನೀನೆಂದುಅತಿಭಕುತಿಯೊಳಂದುತುಂಗ ವಿಕ್ರಮನ ಪದಂಗಳಿಗೆರಗಲುರಂಗ ನೆಗಹಿ ಕರಂಗಳ್ಹಿಡಿಯ ಮೋ-ಹಂಗಳಿಂದ ವಿರಹಗಳ್ಹೆಚ್ಚಿ ರವಿಕೆಂಗಳುಡೆಯ ಕುಚಂಗಳು ಬಿಟ್ಟಾ-ಲಿಂಗಿಸುತಿರೆ ಶ್ರೀ ಮಂಗಳಾಂಗಗೆ ಪು-ಷ್ಪಂಗಳಿಂದ ವರುಷಂಗಳು ಮೇಲ್ ಸುರ-ರಂಗಳು ಸುರಿಯೆ ಉತ್ತುಂಗ ಮಹಿಮ ಹರುಷಂಗಳ ಬೀರುತ ಅಂಗನೆಯರಿಗೆ 2 ಮಂದಿರ ಮಾನಿನಿಯರು ಬಿಟ್ಟುಮನದಲಿ ಕಂಗೆಟ್ಟುಮಂದರೋದ್ಧರನಲ್ಲೆ ಮನವಿಟ್ಟುಕರೆಕರೆಯ ಬಿಟ್ಟುಚಂದದಿ ಕರ್ಪೂರ ವೀಳ್ಯವನಿಟ್ಟುಸಡಗರವ ತೊಟ್ಟುಒಂದಾಗಿ ಚೆದರುತ ತೋಷವ ತೊಟ್ಟುತ್ವರೆ ಬರುವರು ಅಷ್ಟುಅಂದದಿಂದಲಾನಂದವೇರಿ ಮು -ಕುಂದನಂಘ್ರಿ ಮುದದಿಂದ ಸ್ಮರಿಸಿ ಬರು-ವಂದ ನೋಡಿ ಗೋವಿಂದ ಕೊಳಲ ಬಹುಅಂದದೊಳಿಡೆ ಈ ಇಂದುವದನೆಯರುಚಂದ್ರನುದಯವಾದಂತೆ ಆಯ್ತು ಮನಗಂಧ ಕಸ್ತೂರಿ ತಂದು ಆಗ ಹರಿಕಂದರದೊಳಗಿಡೆ ರಂಗವಿಠಲ ದಯದಿಂದ ನೋಡ್ದ ಪುರಂಧ್ರಿಯರನ್ನು3
--------------
ಶ್ರೀಪಾದರಾಜರು
ರಾಮ ರಾಮ ರಾಮ ಶ್ರೀರಾಮನೆನ್ನಿರೊ ಪ್ರೇಮದಿಂದ ಶ್ರೀ ಜಾನಕಿ ಪ್ರೇಮನನೆನೆಯಿರೊ ಪ ಅಂದದಿಂದ ಈ ದಶರಥನಂದನೆಂದು ---- ಚಂದದಿಂದ ಚಲನೆಯಿಲ್ಲದೆ ಚಿತ್ತಸ್ವಸ್ಥದಿ ಕಾಲ ಕಳೆಯ ಹೊಂದಿ ದೇವರ ಚರಣ ಕಮಲಾ ನಂದ ಅರ್ಚಿಸುವ ಮಂದಿರದಿ ಭಜಿಸಿರೊ 1 ಕಾಮನಯ್ಯನ ಕಡಲೊಳಾಳ್ದÀ್ದನ ಕೂರ್ಮರೂಪ ವರಾಹನಾದನ ಸ್ವಾಮಿ ನರಹರಿ ವಾಮನ ಪರಶುರಾಮನಾದನಾ ರಾಮಕೃಷ್ನ ಬೌದ್ಧಕಲ್ಕಿ ನಾಮವುಳ್ಳ ನಾರಾಯಣನ ನೇಮದಿಂದ ನಿತ್ಯದಲ್ಲಿ ನಾಮ ಸ್ಮರಿಸಿರೊ 2 ಪಿತೃವಾಕ್ಯ ಪಾಲಿಸಿದವನು ಸತತ ಭಕ್ತರ ಸಲಹುತಿಹನು ಕ್ಷಿತಿಗೆ ಒಡೆಯನಾದ ದೇವನು 'ಶ್ರೀ ಹೊನ್ನ ವಿಠ್ಠಲಾ’ ನತಿಶಯದಿಂದಲಿ ಹೃದಯನಂಬಿ ಇರುವ ನರರಿಗೆ--------ಸದ್ಗತಿಯ ತೋರುವನಧಿಕ ಸಂಪನ್ನ 3
--------------
ಹೆನ್ನೆರಂಗದಾಸರು
ಲಕ್ಷುಮೀನಾರಾಯಣ ಜಯಲಕ್ಷುಮೀ ನಾರಾಯಣ ಲಕ್ಷುಮೀನಾರಾಯಣ ಜಯ ಲಕ್ಷುಮೀ ನಾರಾಯಣ ಪ. ಪಾದ ದಾನವ ಗರ್ವಹರಣ ಗದಾದಿ ಧಾರಣ ಪರ್ವತಾರಿ ವರ ಪ್ರದ 1 ನಂಬಿಕೊಂಡಿಹೆ ನಿನ್ನ ದಿವ್ಯ ಪದಾಂಬುಜಗಳನು ಸರ್ವಕಾಲದಿ ಮನದೊಳಗಿಂಬುಗೊಳು ಕಮಲಾಂಬಕ 2 ಆರು ಸಂಖ್ಯೆಯ ಕಳ್ಳರೆನ್ನನು ಗಾರುಮಾಡುವರಾದರಿಂದತಿ ಧೀರ ನಿನ್ನ ಪದಾರವಿಂದಕೆ ದೂರುವೆನು ರಘುವೀರನೆ 3 ದುರ್ಮತಿಗಳಾದಸುರಹರಣಕೆ ಭರ್ಮಗರ್ಭನು ಬಂದು ಸ್ತುತಿಸಲು ಧರ್ಮಸಂಸ್ಥಾಪಿಸುತ ಬಹು ಶುಭಕರ್ಮ ತೋರುವ ಕರುಣಿಯೆ 4 ಸಪ್ತ ಋಷಿಗಳ ಕೂಡಿಕೊಂಡತಿ ಭಕ್ತಿಯಿಂದಲಿ ನಿನ್ನ ಭಜಿಸಿದ ಸತ್ಯವ್ರತನಿಗೆ ಸಕಲ ಶ್ರುತಿಗಳ ತತ್ವ ತಿಳಿಸಿದ ಮತ್ಸ್ಯನೆ 5 ಮುಳುಗಿಕೊಂಡಿಹ ಅಮಿತಗುರು ಮಂದರವ ಧರಿಸುತ ಅಮೃತರಸ ತೆಗೆದಿತ್ತನೆ 6 ದೈತ್ಯನ ತರಿದು ಬಿಸುಟು ವಿ- ಜನಿತ ಪವಿತ್ರ ಯಜ್ಞ ವರಾಹನೆ 7 ಘಡುಘಡಿಸಿ ಕಂಬದೊಳು ಬಂದ ಸಿಡಿಲಿನಂತಿಹ ನಖದಿ ದೈತ್ಯನ ಒಡಲ ಬಗೆದನು ಕೋಪದಿಂದ 8 ದಾನಕೊಂಡನಾನೆವನದಿ ದಾನವಾಹೃತ ಧರೆಯ ಕಸ್ಯಪಸೂನುಗಳಿಗೊಲಿದಿತ್ತನೆ 9 ದುಷ್ಟಭೂಭುಜಭಾರದಿಂದತಿ ಕಷ್ಟಪಡುತಿಹ ಧರೆಯ ಕರುಣಾ ನೃಪರ ಕಡಿದ 10 ನೀರಜಾವದನಾರವಿಂದ ಮಹಾ ರಸಾಸ್ವಾದನ ಪದ ಕಪಿವೀರನಿಗೆ ಸ್ವಾರಾಜ್ಯ ನೀಡಿದ ಮಾರುತಿಗೆ ದಯ ಮಾಡಿದ 11 ಬಾಲ ಲೀಲೆಯ ತೋರಿ ಗೋಪಕ ಬಾಲೆಯರ ಕೂಡಾಡಿದೆ ಖೂಳಕಂಸನ ಕೆಡಹಿ ದಾನವಮೂಲ ಕಿತ್ತು ಬಿಸಾಡಿದೆ 12 ಜೈನರನು ಮೋಹಿಸುವೆನೆಂದನುಮಾನವಿಲ್ಲದೆ ನಗ್ನನಾಗಿ ಹೀನ ಬುದ್ಧಿಯ ತಿಳಿಸಿ ತ್ರಿಪುರವ ಹಾನಿಗೈಸಿದ ಬೌದ್ಧನೆ 13 ಸುಧೆಯನು ಕರೆದು ಶಿರದಲಿ ತುಂಗ ವಿಷಯ ತರಂಗ ತಪ್ಪಿಸು ಅಂಗಭಂಗವ ಶಿಂಗನೆ 14 ಮಿಂಚಿನೊಡ್ಡಿದ ಮೇಷನಂದದಿ ಪಂಚವರ್ಣದ ತುರಗವೇರಿ ಸಂಚರಿಸಿ ಮ್ಲೇಂಛರನು ಕೊಲ್ಲಿಸಿ ಲಾಂಛಜೀವನ ವರದನೆ 15 ಮಂದಿರದಿ ನೀ ಬಂದು ರಕ್ಷಿಪೆ ಎಂದು ಸಕಲಾನಂದಗೊಂಡಿಹೆ ಇಂದಿರೇಶನೆ ಎಂದಿಗೂ ಈ ಅಂದದಿಂದಲಿನಿಂದ ಸಲಹು 16 ಕೇಶವಾದಿ ದ್ವಿದಶರೂಪವು ಮಾಸಗಳಿಧಿಷ್ಠಾನನಿಗೆ ಪ- ರೇಶ ಕಡೆಯಲಿರುವ ಕಾರ್ತಿಕವಾಸ ದಾಮೋದರ ಹರನೆ 17 ಬಳಲಿ ಕರ್ಮವ ಮಾಡಲಾರೆ ನಳಿನಜಾರ್ಜಿತ ನಿನ್ನ ಪಾದದ ನೆಳಲನಂಬಿ ಸುಮ್ಮನಿರುವೆ 18 ಅಖಿಳದೋಷ ನಿವಾರಣಾದ್ಭುತ ಸಕಲಸದ್ಗುಣಧಾರಣಾ ಕುಂಡಲ ಧಾರಿ ವೆಂಕಟಶಿಖರ ವರ ಸುಖಕಾರಣಾ 19
--------------
ತುಪಾಕಿ ವೆಂಕಟರಮಣಾಚಾರ್ಯ
ಸರಸಿಜಾಕ್ಷ ಸರಸದಿಂದ ಸರಸಿಜೋದ್ಭವಗೊಲಿದು ಬಂದ ಪ ಉರಸಿನ ಮ್ಯಾಲೆ ಸರಸಿಜಾಕ್ಷಿಯನಿರಿಸಿ ಬಂದಅ.ಪ. ಶರಧಿ ಗಂಭೀರ ವರಘನಸಾರ ಕಸ್ತೂರಿ ತಿಲಕಧರಹೀರ ಮೌಕ್ತಿಕ ಕೇಯೂರ ಧರಿಸಿದ ನವನೀತಚೋರ ಬಂದ 1 ನಂದ ಗೋಪಿಗಾನಂದವೂಡಿದ ಕಂದ ಗೋಕುಲದಿ ಬಂದಅಂದದಿಂದ ಸೌಂದರಿಯರ ಗೋವಿಂದ ಮುಕುಂದ 2 ಅಂಗನೆಯರ ಕುಚಗಳಾಲಿಂಗನವ ಮಾಡಿ ನವಮೋಹನಾಂಗರಂಗವಿಠಲನು ನಮ್ಮಂತರಂಗದೊಳಗಿಹ ಕಲ್ಮಷಭಂಗ3
--------------
ಶ್ರೀಪಾದರಾಜರು
ಹಾವಿಗೆಯ ಮಹಾಪೂಜೆ ನೋಡಿ ಪಾಪಾಖ್ಯ ನಿತ್ಯ ಹಾಡಿ ಪ ಮನುಜನ್ನ ಭೋಕ್ತರಿಕಾಯೈದಿ ಧನದಾತ ಸವಸನ ಭೂಷಣ ವಿದ್ಯಾ ಕನಕ ವಿನಯದಿಂದಲಿ ಇಲ್ಲಿ ತನಕ ಬಂದು ಘನವಾಗಿ ಬೇಡುವರು ಮುಕ್ತಿ ಅಹಿಕಾ 1 ಪಾದ ಕರ್ಮ ಭೂ ಮಿವಾಸ ಮಾಳ್ಪೆನೆಂದಲ್ಲಿಂದ ಇಳಿದು ಪಾವಮಾನಿ ಮತ ಪೊಕ್ಕು ಸುಳಿದು 2 ಒಂದೊಂದು ಪರಿಯಲ್ಲಿ ಸಾಗಿ ಸಾರಿ ನಿಂದಿರದೆ ಇಪ್ಪದು ಕಾವ ಲೇಸಾಗಿ ಅಂದದಿಂದಲಿ ಮೌಳಿ ತೂಗಿ ವೇಗ ಕುಂದನಿಷ್ಟವಾಯಿತು ತಾನೆ ಪೋಗಿ3 ಬೇಕಾದರ್ಥವ ಕೊಡುವದು ವಾಕುವರ ಸಿದ್ಧಿ ಲೋಕ ತುಂಬಿದೆ ಇದೆ ಸುಧಿಕೀರ್ತಿ ತಾ ಕೊಂಡಾಡಿದರಾಗೆ ಬಲು ಚಿತ್ತ ಶುದ್ಧಿ 4 ಸತ್ಯಾಗಿ ಸತ್ಯಬೋಧಯತಿ ಕೈಯ ಗುರು ಸತ್ಯಪ್ರೀಯ ಸ್ತೌತ್ಯರಾಮನ್ನ ಹಾವಿಗೆಯ ನಂಬೆ ಭೃತ್ಯವತ್ಸಲ ವಿಜಯವಿಠ್ಠಲ ಸಹಾಯ5
--------------
ವಿಜಯದಾಸ
199ಒಂದೆ ಮನದಲಿ ಭಜಿಸು ವಾಗ್ದೇವಿಯ |ಇಂದುಮತಿಕೊಡುವಳು ಶ್ರೀಹರಿಯ ಧ್ಯಾನದೊಳುಪಹಿಂದೆ ಪ್ರಹ್ಲಾದನು ಕಮಲಜನ ಸತಿಗೆರಗಿ |ಬಂದು ಆರಂಭಿಸಲುಹರಿವಿಶ್ವಮಯನೆಂದು ||ಬಂದವಿಪ್ಲವಕಳೆದು ಭಾವಶುದ್ಧಿಯನಿತ್ತು |ಹೊಂದಿಸಿದಳು ಶ್ರೀ ಹರಿಯ ಚರಣವನು || 1ಅಂದು ದಶಮುಖನನುಜ ವಂದಿಸದೆ ವಾಣಿಯನು |ಬಂದು ತಪವನು ಗೈಯೆ ಬಹುಕಾಲಕೆ ||ಅಂದದಿಂದ ಮೆಚ್ಚಿ ವರವಧಿಕ ಬೇಡೆನಲು |ಬಂದು ಜಿಹ್ವೆಯಲಿ ನಿದ್ರೆಯನು ಬೇಡಿಸಿದಳು 2ಅರಿತು ಭಜಿಸಲು ಬಿಡದೆ ಅಜನರಸಿಯ ನಿತ್ಯ|ಉರುತರವಾದ ವಾಕ್ ಶುದ್ಧಿಯನಿತ್ತು ||ನಿರುತ ಶ್ರೀಪುರಂದರವಿಠಲನ ಸೇವೆಯೊಳು |ಪರತತ್ತ್ವದ ಕಥಾಮೃತವನುಣಿಸಿದಳು 3
--------------
ಪುರಂದರದಾಸರು