ಒಟ್ಟು 9 ಕಡೆಗಳಲ್ಲಿ , 6 ದಾಸರು , 8 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಎನಗೆ ನೀನೇ ಬಂಧು ಎಲೆಲೆ ಕರುಣಾಸಿಂಧುಎನ್ನ ಮನವೇ ನಿನ್ನ ಮನೆಯೆಂದು ನೆನೆದು ಬಾರೊ ತಂದೆ ಪ. ಮಕ್ಕಳ ಕೊಡುವೆ ಕಂಡ ಸುಜನರ್ಗೆ ಮಗ ನಾನುಅಕ್ಕರಿಂದ ಬೇಡುವವರ ರಕ್ಷಿಸಿಕೊಂಡು ತಂದೆಅಕ್ಷಿಹೀನರಿಗೆ ಪೊಸಚಕ್ಷುವನೀವೆ ಎನಗಿರ್ದಅಕ್ಷಿದೋಷವ ಕಳೆದು ರಕ್ಷಿಸಿಕೊಡು ತಂದೆ 1 ಪೋದ ಗಂಟ ತರಿಸಿಕೊಡುವುದು ನಿನ್ನ ಬಿರುದು ನಿನ್ನಬೋಧನೆಂಬ ಧನದ ಗಂಟು ನಾನು ನನ್ನ ರಕ್ಷಿಸಿಕೊಈ ಧರೆಯ ಕುಂಟರ ಬಲುಬಂಟರ ಮಾಡಿ ನಡೆಸಿದೆಮೋದನಿಧಿ ನಿನ್ನ ಭಕ್ತನ ಕುಂಟುತನವ ಬಿಡಿಸೊ 2 ಸಿರಿಹಯವದನ ತಿಮ್ಮ ನೀ ನಿಧರ್Àನರ್ಗೆ ಧನವಿತ್ತುಕರುಣಿ ಎನ್ನ ಧೈರ್ಯಧÀನವನು ಕೊಡೆಯದೇಕೆಧರೆಯೊಳೆನ್ನಾಜ್ಞೆಯನು ನಿಲಿಸಿಕೊಳಬೇಕಾದರೆಧುರದಿ ಅನನ್ಯಾಶ್ಚಿಂತಯೆಂತೋ ಎಂದ ಮಾತ ಸಲಿಸೋ 3
--------------
ವಾದಿರಾಜ
ಕಂಜನಯನನ ಕಂಡೆ ಕಾಮನಯ್ಯನ ಪ. ಮಂಜುಗುಣಿಯೊಳಿಪ್ಪನ ತಿಮ್ಮಪ್ಪನಅ.ಪ ಪುಟ್ಟ ಪಾವುಗೆಯೊಳ್ಮೆಟ್ಟಿ ತೊಟ್ಟಂಬುಚಕ್ರವಕಟ್ಟಿದ ಕಠಾರಿಯಿಂದ ದುಷ್ಟರ ಹುಡಿಗುಟ್ಟುವ 1 ಚಕ್ರ ಶಂಖಧರನಾಗಿ ಕಕ್ಕಸರ ರಕ್ಕಸರಶಿಕ್ಷಿಸಿ ಶಕ್ರಮುಖ್ಯರ ಅಕ್ಕರಿಂದ ರಕ್ಷಿಸುವ 2 ಆಗಮವೈರಿಯನು ಕೊಂದಾಗ ಹಯವದನನ್ನಈಗ ಮಾನಿಸರಿಗೆ ಸೌಭಾಗ್ಯವೀವ ದೇವನ3
--------------
ವಾದಿರಾಜ
ಕಂಡೆನೋ ನಿನ್ನ ಚರಣ ಕಮಲವ ಸೊಂಡಿಲಿಂದಿಹ ಗಣಪತಿ ಕೊಡು ವರವ ಪ ಮಣಿ ಕುಂಡಲ ಭೂಷಾ ಉಂಡಲಿಗೆ ಚಕ್ಕುಲಿಯೊಳಗೆ ಸಂತೋಷ ಚಂಡ ಪ್ರಬಲನಲ ಅಖಂಡ ಪ್ರಕಾಶ ಭೂ ಮಂಡಲದೊಳು ನಿನ್ನ ಕೀರ್ತಿ ವಿಶೇಷ 1 ಚಂದನಾಗರು ಧೂಪ ದೀಪಾವಳಿಯಿಂದಾ ನಂದದಿಂದಲಿ ಪೂಜಿಪೆ ಭಕ್ತಯಿಂದ ನಂದಿವಾಹನನಿಗೆ ಮೋಹದ ಕಂದ ಮಂದಮತಿಯ ಬಿಡಿಸೈಯ್ಯ ನೀ ಮುದದಿಂದ 2 ಚಿಕ್ಕ ಮೂಷಿಕವೇರಿ ಗಕ್ಕಾನೆ ಬರುವೆ ಅಕ್ಕರಿಂದಲಿ ಭಕ್ತರೆಲ್ಲಾರ ಪೊರೆವೆ ಮಿಕ್ಕ ಮಾತುಗಳೇನೋ ಪೊಗಳಲೆನ್ನಳವೇ ಇಕ್ಕೇರಿಯೊಳು ಟೆಂಕಸಾಲೆಯೊಳಿರುವೆ 3
--------------
ಕವಿ ಪರಮದೇವದಾಸರು
ದಾನಧರ್ಮವ ಮಾಡಿ ಸುಖಯಾಗು ಮನವೆ ಪ ಹೀನ ವೃತ್ತಿಯಲಿ ನೀ ಕೆಡಬೇಡ ಮನವೆ ಅ ಎಕ್ಕನಾತಿ ಯಲ್ಲಮ್ಮ ಮಾರಿ ದುರ್ಗಿ ಚೌಡಿಯಅಕ್ಕರಿಂದಲಿ ಪೂಜೆ ಮಾಡಲೇಕೆಗಕ್ಕನೆಯೆ ಯಮನ ದೂತರೆಳೆದೊಯ್ಯುವಾಗಶಕ್ತೇರು ಬಿಡಿಸಿಕೊಂಡಾರೇನೊ ಮರುಳೆ 1 ಸಂಭ್ರಮದಲಿ ಒಂದ್ಹೊತ್ತು ನೇಮದೊಳಗಿದ್ದುತಂಬಿಟ್ಟಿನಾ ದೀಪ ಹೊರಲೇತಕೆಕೊಂಬು ಹೋತು ಕುರಿ ಕೋಣಗಳನ್ನು ಬಲಿಗೊಂಬದೊಂಬಿ ದೈವಗಳ ಭಜಿಸದಿರು ಮನವೆ2 ಚಿಗುರೆಲೆ ಬೇವಿನ ಸೊಪ್ಪುಗಳ ನಾರಸೀರೆಬಗೆಬಗೆಯಿಂದ ಶೃಂಗಾರ ಮಾಡಿನೆಗೆನೆಗೆದಾಡುತ ಕುಣಿಯುತಿರೆ ನಿನಗಿನ್ನುಮಿಗಿಲಾದ ಮುಕ್ತಿಯುಂಟೇ ಹುಚ್ಚು ಮನವೆ 3 ದಾನಧರ್ಮ ಪರೋಪಕಾರವ ಮಾಡುದೀನನಾಗಿ ನೀ ಕೆಡಬೇಡವೊಜ್ಞಾನವಿಲ್ಲದೆ ಹೀನ ದೈವವ ಭಜಿಸಿದರೆಏನುಂಟು ನಿನಗಿನ್ನು ಎಲೆ ಹುಚ್ಚು ಮನವೆ 4 ನರಲೋಕದಲಿ ಯಮನ ಬಾಧೆಯನು ಕಳೆಯಲುವರ ಪುಣ್ಯ ಕಥೆಗಳನು ಕೇಳುತಲಿಸಿರಿ ಕಾಗಿನೆಲೆಯಾದಿ ಕೇಶವನ ನೆರೆ ನಂಬಿಸ್ಥಿರ ಪದವಿಯನು ಪಡೆ ಹುಚ್ಚು ಮನವೆ5
--------------
ಕನಕದಾಸ
ಪಾರಿಜಾತ ಶ್ಲೋಕ : ದ್ವಾರಾವತಿಯಲಿ ದÀನುಜದಲ್ಲಣ ಮುಕುಂದ ಸಾರೆ ರುಕ್ಮಿಣಿಸಹಿತ ಆನಂದದಿಂದ ವಾರಿಜಾಂಬಕ ವಾಲಗದೊಳು ಚಂದ ನಾರಂದಮುನಿ ತಾ ಪಾರಿಜಾತವ ತಂದ 1 ಪದ : ಬಲ್ಲಿದ ಮುನಿಯ ಕುಳ್ಳಿರಿಸಿದ ಸತ್ಕರಿಸಿದ ಪುಷ್ಪಯಾರಿಗೆ ಎಂದ ವಲ್ಲಭೆರುಕ್ಮಿಣಿಗಲ್ಲದೆ ಬ್ಯಾರೆ ಸಲ್ಲದು ಎಲ್ಲ ನೀನು ಬಲ್ಲದೆ ಇಂತೆಂದ ಈ ಸುದ್ದಿ ಸತ್ಯಭಾಮೆಗೆ ತಂದು ಹೇಳಿದರಂದು ಕೇಳಿದಳಾಕೆ ನಿಂದು ಮನದಲ್ಲಿ ಅತಿನೊಂದು 1 ಶ್ಲೋಕ : ಇಂದ್ರಲೋಕದ ಚಂದದ ಕುಸುಮವನ್ನು ಮಂದಗಮನೆಯ ಮುಡಿಗೆ ತಾ ಮುಡಿಸಿದನು ಎರವು ಇಲ್ಲವು ಕಾಣಿ ಇಂದು ಮಾಡಿದ ಕುಹಕವ ಕೃಷ್ಣ ತಾನು 2 ಇನ್ನಾರಿಗೆ ಪೇಳುವೆನು ರುಕ್ಮಿಣಿ ತನ್ನ ಜೀವ ಬಹುಪ್ರೀತಿ ಬಡಿಸಿದ ಠಕ್ಕುಠವಳಿಗಳಿಲ್ಲಿ 2 ಶ್ಲೋಕ : ಮೆಚ್ಚಿ ಬಂದೆನೆ ಮೋಹಕ್ಕೆ ಮರುಳಾದೆನೆ ಹಚ್ಚಿರೆ ಮಾತ ಹರಿಯು ತಾ ಕೇಳಿದನೆ ನೆಚ್ಚಿ ಇದ್ದೆನೆ ಎನ್ನೊಳು ವಂಚಿಸಿದನೆ ರಚ್ಚಿಗಿಕ್ಕಿದ ರಂಪು ಮಾಡಿದ ಕಾಣೆ 3 ಪದ : ಮಾರನಟ್ಟುಳಿ ತಾಳಲಾರೆನೆ ಮುಖದೋರನೆ ಇನ್ನೇನು ತೆರನೆ ಕಂತು ಕಮಲಜನಯ್ಯ ಏನೆಂದು ತಿಳಿಯದು ಬಹು ಪ್ರೀತಿ ಇದ್ದವ[ಳ] 3 ಶ್ಲೋಕ : ಮಳೆ ಇಲ್ಲದ ಮೇಘವಿದ್ಯಾತಕ್ಮಮ್ಮ ಬೆಳೆ ಇಲ್ಲದ ಭೂಮಿ ಮತ್ಯಾತಕಮ್ಮ ಗಿಳಿಇಲ್ಲದ ಗೂಡು ತಾನ್ಯಾತಕಮ್ಮ ತಾಳಲಾರೆನೊ ಶ್ರೀ ಕೃಷ್ಣನಿಲ್ಲದೆ ಎಮ್ಮ 4 ಮಾತೆನ್ನ್ಯಾಕ ಪಡೆದಳೊ ಕುಹಕ ಮೂರುಲೋಕ ಪ್ರಸಿದ್ಧ ಓಡಿ ತನಗ್ಯಾಕಿದು ಬ್ಯಾಡಿ 4 ಶ್ಲೋಕ : ಬಿಸಜಾಕ್ಷನ ಬಹಳ ನಂಬಿದ್ದೆ ನಾನು ವಶವಾದನೆ ಒಲಿದು ರುಕ್ಮಿಣಿಗೆ ತಾನು ಅಟ್ಟುಳಿ ಇದೇನು ಆಸೆಬಟ್ಟೆನೆ ಬಹಳ ವಸುದೇವ ಸುತಗೆ 5 ಎಲ್ಲರೊಡನೆ ಕೋಪಿಸುತ ಮನದೊಳು ಮರುಗುತ ಸುರಪಾರಿಜಾತವೆ 5 ಶ್ಲೋಕ :ದೇವಲೋಕದ ಹೂವ ತನಗಿಲ್ಲವಲ್ಲ ಭಾವೆ ಎನ್ನೊಳು ಮುನಿಯದೆ ಬಿಡುವಳಲ್ಲ ಆವ ಪರಿಯಲಿ ತಿಳಿದು ಹೇಳುವೆನು ಸೊಲ್ಲ ಜೀವದೊಲ್ಲಭೆಯೊಡನೆ ಪಂಥವು ಸಲ್ಲ 6 ಎನ್ನೊಡನೆ ನುಡಿಯಳೊ ಇಂದು ಅಪ್ರಬುದ್ಧನಾದರೆ ಕೋಪವನು ತಾಳುವಳೊ ಇಂ ಬಾಗಿಲೊಳು ನಿಂದನು 6 ಶ್ಲೋಕ :ಚಿತ್ತದೊಲ್ಲಭೆ ಚದÀುರೆ ಮೋಹನಾಕಾರೆ ಮುತ್ತುರತ್ನವ ಮನೆಯೊಳಗೆಲ್ಲ ಬೀರಿ ಎತ್ತ ಹೋದಳೊ ಎನ್ನ ಪ್ರಾಣದ ನಾರಿ ಸತ್ಯಭಾಮೆಯ ಸುಳುಹು ಕಾಣೆನು ತೋರಿ 7 ಕೋಕಿಲವಾಣಿಯ ಇನ್ನೆಲ್ಲಿ ಹೋದಳು ತೋರಿಸೆ ಹತ್ರ ಸೇರಿಸೆ ಬಂದೆನು ಹಾರೈಸಿ ನಿಂತವರು ಕಣ್ಣು ಮಾ[ತಾ]ಡಿ 7 ಶ್ಲೋಕ :ಹಾಸಿ ಮಲಗಿದ್ದ ಸತಿಯ ಕಂಡು ಬೀಸಣಿಕೆಯಲಿ ಬೀಸಿದ ಕೃಷ್ಣ ತಾನು ಸೂಸು ಪರಿಮಳ[ದ] ಪಾರಿಜಾತದ ಹೂವ ಹಾ- ರÉೈಸಿ ಕಂಗಳು ತೀರ[ವು] ನೋಡಿದಳು ಕಾಂತೆ 8 ಫಲ್ಗುಣನ ಸಾರಥಿಯ ಇದು ಏನು ಸೋಗೆಂದು ಹಿಂಡು ಸ್ತ್ರೀಯರ ಶಿರೋರನ್ನಳೆ ಮೋಹನ್ನಳೆ ಮುನಿಸ್ಯಾತಕೆನ್ನೊಡನೆ ಅಪರಾಧವ ಕ್ಷಮಿಸೆ 8 ಶ್ಲೋಕ :ಅಕ್ಕರಿಂದಲೆ ರುಕ್ಮಿಣಿಗೆ ಇತ್ತ ಹೂವ ಮಿಕ್ಕ ಸತಿಯರಿಗ್ಯಾತಕೆಂಬ ಭಾವ ಕಕ್ಕುಲಾತಿಯ ಕಂಡೆ ನಿನ್ನಲ್ಲಿ ಜೀವ ಸೊಕ್ಕಬ್ಯಾಡವೊ ಸಾಕು ಹೋಗೆಲೊ ಗೋವ 9 ಮನ್ನಿಸೆ ಕೃಪಾಸಿಂಧು ಕೋಕಿಲಸ್ವರಗಾನೆ ಕುಳ್ಳಿರಿಸಿದ ಹೆಳವನಕಟ್ಟೆಯ ರಂಗನು ಕೃಪಾಂಗನು ದೇವೋತ್ತುಂಗ ವಿಕ್ರಮನು 9
--------------
ಹೆಳವನಕಟ್ಟೆ ಗಿರಿಯಮ್ಮ
ಬಂದ ಶ್ರೀಕೃಷ್ಣ ನಲಿಯುತ್ತ ನಸುನಗೆ-ಯಿಂದ ಬೇಗ ಯಶೋದೆಯಿದ್ದೆ[ಡೆಗೆ] ಪ. ಉದಯದೊಳೆದ್ದು ಮೊಸರ ಕಡೆವಾಗ ತನ್ನಅದುಭುತ ಬಾಲಲೀಲೆಗಳ ಪಾಡೆಮುದದಿ ನಯನದಿ ಜಲ ತುಳುಕಾಡುತಿರೆ ಕಂಡುಮದನನಯ್ಯನು ನಚ್ಚಿ ಬೆಣ್ಣೆಯ ಬೇಡುತ್ತ1 ಮಕ್ಕಳುಗಳ ಕೂಡಿ ಮನೆಮನೆಯೊಳಗಾಡಿಮಿಕ್ಕುಮೀರಿದ ರಕ್ಕಸರನೀಡ್ಯಾಡಿಅಕ್ಕರಿಂದಲಿ ತಾಯ ಮುಖವನೀಕ್ಷಿಸುತಲಿಗಕ್ಕನೆ ಸೆರಗ ಪಿಡಿದು ಮೊಲೆಯ ಕೊಡೆನ್ನುತ2 ಕುರುಳಕೂದಲು ಅರಳೆಲೆ ಮಾಗಾಯಿಕೊರಳಪದಕ ಹಾರ ಎಸೆಯುತಿರೆಚರಣದಂದುಗೆ ಗೆಜ್ಜೆ ಘಲುಘಲುಕೆನ್ನುತಲಿಸಿರಿಯರಸ ಹಯವದನನೆನಿಪ ಮೋಹನಾಂಗ 3
--------------
ವಾದಿರಾಜ
ಸಂದಿತಯ್ಯ ಪ್ರಾಯವು |ಸಂದಿತಯ್ಯ ಪ್ರಾಯವು ಪಮೂರು ತಿಂಗಳುಸಂದುಹೋಯಿತು ತಿಳಿಯದೆ ||ಬಂದೆ ತಾಯಿಯ ಜಠರದಲಿ ಮ-|ತ್ತೊಂದು ಬುದ್ಧಿಯನರಿಯದೆ ||ಬೆಂದೆ ನವಮಾಸದಲಿ ಗರ್ಭದಿ |ಒಂದು ದಿವಸವು ತಡೆಯದೆ ||ಕುಂದದೀಪರಿಯೊಂದು ವರುಷವು |ಇಂದಿರೇಶನೆ ಕೇಳು ದುಃಖವ 1ಕತ್ತಲೆಯೊಳಿರಲಾರೆನೆನುತಲಿ |ಹೊತ್ತೆ ಹರಕೆಯ ನಿನ್ನನು ||ಮತ್ತೆ ಜನಿಸಲು ಭೂಮಿಯೊಳು ನಾ |ಅತ್ತುನಿನ್ನನು ಮರೆತೆನು ||ಮತ್ತೆ ಮಲ-ಮೂತ್ರದೊಳು ಬಾಲ್ಯದಿ |ಹೊತ್ತು ದಿನಗಳ ಕಳೆದೆನು ||ಮತ್ತೆ ನರಕದೊಳುರುಳುತುರುಳುತ |ಉತ್ತಮೋತ್ತಮ ನಿನ್ನ ನೆನೆಯದೆ 2ಚಿಕ್ಕತನವನು ಮಕ್ಕಳಾಟದಿ |ಅಕ್ಕರಿಂದಲಿ ಕಳೆದೆನು ||ಸೊಕ್ಕಿ ಹದಿನಾರಲಿ ನಾನತಿ |ಮಿಕ್ಕಿ ನಡೆದೆನು ನಿನ್ನನು ||ಸಿಕ್ಕಿ ಬಹು ಸಂಸಾರ ಮಾಯೆಯ |ಕಕ್ಕುಲಿತೆಯೊಳು ಬಿದ್ದೆನು ||ಹೊಕ್ಕುದಿಲ್ಲವು ನಿನ್ನ ಪಾದವ |ರಕ್ಕಸಾರಿಯೆ ಕೇಳು ದುಃಖವ 3ಸುಳಿದೆ ಮನೆಮನೆ ಕಳೆದೆ ಕಾಲವ |ಉಳಿದ ಯೋಚನೆ ಮಾಡದೆ ||ಬೆಳೆದೆ ತಾಳೆಯ ಮರದ ತೆರದಲಿ ||ಉಳಿವ ಬಗೆಯನು ನೋಡದೆ ||ಎಳೆಯ ಮನದೊಳೆ ಇಳೆಯ ಜನರೊಳು |ಬಳಕೆ ಮಾತುಗಳಾಡಿದೆ ||ಕಳೆದೆ ಈ ಪರಿಯಿಂದ ಕಾಲವ |ನಳಿನನಾಭನೆ ನಿನ್ನ ನೆನೆಯದೆ 4ಎಡೆಬಿಡದೆಅನುದಿನದಿ ಪಾಪದ |ಕಡಲೊಳಗೆ ನಾನಾಳ್ದೆನು ||ದರವ ಕಾಣೆದೆ ಮಧ್ಯದಲಿ ಎ-|ನ್ನೊಡಲೊಳಗೆ ನಾನೊಂದನು ||ದೃಢದಿ ನಿನ್ನಯ ಧ್ಯಾನವೆಂಬಾ |ಹಡಗವೇರಿಸು ಎನ್ನನು ||ಒಡೆಯ ಪುರಂದರವಿಠಲ ಎನ್ನನು |ಬಿಡದೆ ಕಾಯೈ ಬೇಗ ಶ್ರೀಹರಿ5
--------------
ಪುರಂದರದಾಸರು
ಹಿಂದಿನ ಪುಣ್ಯ ಫಲವೆಂತೊಇಂದಿರೇಶಾನಂದದ ಲೀಲೆ ಅರುಹಿದ ಪ.ಚಿತ್ರವಿಚಿತ್ರ ಮಹಿಮೆಯ ತೋರುತಖಳದೈತ್ಯರನೆಲ್ಲ ಮಡುಹಿದದೈತ್ಯರನೆಲ್ಲ ಮಡುಹಿ ಬಳಲ್ದನೆಂದುಕಸ್ತೂರಿ ತೈಲವೆರಸಿ ತಂದು 1ಶಂಕಿನಿ ಪದ್ಮಿನಿಯರೊಂದಾಗಿ ಕೃಷ್ಣನಪಂಕಜಾಸನದಲಿ ಕುಳ್ಳಿರಿಸಿಪಂಕಜಾಸನದಲಿ ಕುಳ್ಳಿರಿಸಿ ತಮ್ಮ ಒಲ್ವಕಂಕಣಗೈಯ ಮೌಳಿಯೊಳಿಟ್ಟು 2ಈರೇಳು ಲೋಕದ ದೊರೆಯಾಗು ಭಕುತರಸಿರಿಯಾಗು ದಿತಿಜರರಿಯಾಗುಸಿರಿಯಾಗು ಭಕ್ತರ ದಿತಿಜಾರಿಯಾಗೆನುತಹರಸಿದರರ್ಥಿ ಮಿಗಿಲಾಗಿ 3ಕುಂಭಕುಚದ ಕಾಮಿನಿಯರು ಹರುಷದಿಅಂಬುಜಾಕ್ಷನ ಪೂಸಿ ಕಿರುಬೆಮರಿಅಂಬುಜಾಕ್ಷನ ಪೂಸಿ ಕಿರುಬೆಮರಿ ದಣಿಯದೆ ಕದಂಬ ಕಡಿದಟಕಾಳಿಯ ತಂದು 4ವಿಕ್ರಮಾನ್ವಿವತವಾದವ್ಯಾಕೃತ ಗಾತ್ರಕೆಅಕ್ಕರಿಂದೆ ತೈಲನಾಶನವಅಕ್ಕರಿಂದಲಿ ತೈಲನಾಶನವ ಪೂಸಿ ಜಗುಳಲುಘಕ್ಕನಂಬರವ ಬಿಗಿದುಟ್ಟ 5ಹದವಾದ ಬಿಸಿನೀರ ಪೊಂಬಂಡೆಯೊಳುತುಂಬಿಪದುಮಗಂಧೆಯರು ನೀರೆರೆದರುಪದುಮಗಂಧೆಯರು ನೀರೆರೆವ ಸಂಭ್ರಮಕ್ಕೆಮುದದಿಸುರರುಹೂಮಳೆಗರೆದರು6ಮುಂಬರಿಯುತ ಬಾಲೆಯರುತಕದಿಂದಅಂಬುಧಾರೆಯ ನಿಲ್ಲಗುಡದೆರೆದುಅಂಬುಧಾರೆಯ ನಿಲ್ಲಗುಡದೆರೆದುಜಾಂಬೂನದಾಂಬರವುಡಿಸಿ ಕರೆತಂದು 7ಚಿತ್ರಮಂಟಪಕೆ ನವರತ್ನ ತೆತ್ತಿಸಿದ ಕಂಭಕಸ್ತೂರಿ ಕಾರಣೆ ರಚನೆಯಕಸ್ತೂರಿ ಕಾರಣೆ ರಚನೆಯ ಮಧ್ಯದಿಮುತ್ತಿನ ಹಸೆಯೊಳು ಕುಳ್ಳಿರಿಸಿ 8ನೀಲಮಾಣಿಕಮೋಘದಿಂದಲೊಪ್ಪುವ ಪದಕಲೋಲನೇತ್ರೆಯರಳವಡಿಸಿದರುಲೋಲನೇತ್ರೆಯರು ಅಳವಡಿಸಿ ಅಂಗುಲಿಗೆಲ್ಲ ಮುದ್ರಿಕೆನಿಟ್ಟು ನಲಿದರು 9ಮುಕುಟಕೌಸ್ತುಭಮಣಿಯುಕುತ ಭೂಷಣವಿಟ್ಟುರುಕುಮಿಣಿ ಸತ್ಯರೆಡಬಲದಿರುಕುಮಿಣಿ ಸತ್ಯರೆಡಬಲದಿ ಕುಳ್ಳಿರೆನಿತ್ಯಮುಕುತಗಾರತಿಯ ಬೆಳಗಲು 10ಚಿನ್ನದ ಹರಿವಾಣದಿ ರನ್ನದಾರತಿಯಿಟ್ಟುಕನ್ನೇರು ಕಿರುನಗೆ ಬೀರಿದರುಕನ್ನೇರು ಕಿರುನಗೆ ಬಿರಿಯುತ ಪಣೆಯೊಳುಪೊನ್ನಿನಾಕ್ಷತೆಯಿಟ್ಟು ಲಲಿತವ 11ಜಯ ರಾಮ ತ್ರೈಧಾಮ ಜಯ ಜೀಮೂತಶಾಮಜಯ ಪೂರ್ಣಕಾಮ ಸಾಸಿರನಾಮಜಯ ಪೂರ್ಣಕಾಮ ಸಾಸಿರನಾಮನೆಂದುಭಯರಹಿತಗಾರತಿಯ ಬೆಳಗಿದರು 12ಚಿತ್ತಜನಯ್ಯಗೆ ಚಿನುಮಯ ದೇಹಗೆಉತ್ತಮಗುಣಗಣ ಭರಿತಗೆಉತ್ತಮಗುಣಗಣ ಭರಿತಗೆ ಪರಮಪವಿತ್ರೇರಾರತಿಯ ಬೆಳಗಿದರು 13ಪನ್ನಗಾದ್ರಿವಾಸ ಪ್ರಸನ್ನವೆಂಕಟೇಶಕನ್ನೆ ಲಕ್ಷ್ಮಿಯ ಕೂಡಿ ಆರೋಗಣೆಯಕನ್ನೆ ಲಕ್ಷ್ಮಿಯ ಕೂಡ ಆರೋಗಣೆಯ ಮಾಡಿತನ್ನ ಭಕ್ತರಿಗೆಲ್ಲ ಸುಖಪ್ರೀತ 14
--------------
ಪ್ರಸನ್ನವೆಂಕಟದಾಸರು