ಒಟ್ಟು 1 ಕಡೆಗಳಲ್ಲಿ , 1 ದಾಸರು , 1 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕಂಡೆವಯ್ಯ ಗುರುನಿಮ್ಮ ಶ್ರೀಪಾದ ಸಂದಿಸಿತು ಎನ್ನ ಭೇದಾಭೇದ ಮಂಡಲದೊಳಾಯಿತಯ್ಯ ಸುಬೋಧ ಕೊಂಡಾಡುವೆ ಕೀರ್ತಿ ಅಖಂಡವಾದ 1 ಸ್ಮರಿಸುವೆ ನಿಮ್ಮ ಕ್ಷಣ ಕ್ಷಣ ಸ್ಮರಿಸುವೆ ನಿಮ್ಮ ಶ್ರೀಚರಣ ಸ್ಮರಿಸುವೆ ನಿಮ್ಮ ಸಗುಣ ನಿರ್ಗುಣ ಅನುದಿನ 2 ಸ್ಮರಿಸದೆ ನಿಮ್ಮ ಸ್ವರೂಪ ನಿರ್ವಾಣ ಅರಘಳಿಗಿರಲಾರದೆನ್ನ ಪ್ರಾಣ ಪಥ ನಿಮ್ಮ ವಿನಾ ಮೊರೆ ಹೊಕ್ಕಿದೆ ನಾ ಪರಿಪೂರ್ಣ 3 ಆವಾವ ಪರಿಯಲಿನಿಮ್ಮ ಕೀರ್ತಿ ದಿವಾರಾತ್ರೆಯಲಿ ಕೇಳುವ ಸುವಾರ್ತಿ ಭಾವಿಸುವೆ ನಿಮ್ಮ ನಿಜಾನಂದ ಮೂರ್ತಿ ಜೀವನ ಮಾಡುವೆÀ ನಾ ಮಂಗಳಾರ್ತಿ 4 ಬಾಹ್ಯಾಂತ್ರ ನಿಮ್ಮ ಧ್ಯಾನಿಸುವೆ ನಿತ್ಯಾ ಮಹಾಗುರು ನಿಮ್ಮ ಕೃಪೆವಿದು ಸತ್ಯ ಗುಹ್ಯ ಮಹಾವಾಕ್ಯವಾಯಿತು ಪಥ್ಯ ಮಹಿಪತಿ ಆದ ನೋಡಿ ತಾ ಕೃತಕೃತ್ಯ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು