ಒಟ್ಟು 5 ಕಡೆಗಳಲ್ಲಿ , 5 ದಾಸರು , 5 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕಂಡೆ ಕನಸಿನಲಿ ಕಾರುಣ್ಯ ಮೂರುತಿ ಹರಿಯ ಪ ಪುಂಡರೀಕಾಕ್ಷ ಪುರುಷೋತ್ತಮನ ಸಿರಿಯ ಅ.ಪ ಚಂಡು ರನ್ನದ ತಾಯ್ತಿ ಮಲುಕು ಅರಳೆಲೆ ಹೊನ್ನಗೊಂಡೆಗಳ ಬಿಗಿದ ಶಿಖಿ ದಾರದೆಡೆಯದುಂಡು ಮಲ್ಲಿಗೆಯ ಪರಿಮಳವು ಘಮಘಮಿಪ ಅಳಿ-ವಿಂಡುಗಳ ಜರಿವಂಥ ಸುಳಿಗುರುಳಿನಿರವ1 ಸಿರಿ ನಾಮ ಕಸ್ತೂರಿ ತಿಲಕದಎಸೆವ ಕುಡಿ ಹುಬ್ಬುಗಳ ಕುಂಡಲದ ಕಾಂತಿಗಳದÉಸೆದೆಸೆಗೆ ಬೆಳಗುತಿಹ ವರದೀಪ್ತಿಗಳನು 2 ಕೆತ್ತನೆಯ ಪದಕೆ ಕೆಲಬಲಕೆ ಒಲಿದಾಡುತಿಹಮುತ್ತು ಮಾಣಿಕದ ಹುಲಿಯುಗುರು ಸರದ ಮಣಿ ಒತ್ತಿನಲಿ ಶಿರಿವತ್ಸ ವೈಯಾರದಿರವ 3 ತÉೂೀಳ ಬಳೆ ತಾಯ್ತಿ ಕಡಗ್ಹವಳ ಕಂಕಣವಾಕು ನೀಲ ಮಾಣಿಕ್ಯದ ಬೆರಳುಂಗುರಗಳ ಸಾಲು ಗಂಟೆಗಳ ರಂಜಿಸುವ ಕಾಂತಿಗಳ ಈ- ರೇಳು ಭುವನಗಳ ಧರಿಸಿದ ಉದರವನು 4 ಬಟ್ಟದೊಡೆಗಳಿಗೆ ಬಿಗಿದುಟ್ಟ ಚಲ್ಲಣ ಮೈಯ ತೊಟ್ಟ ಜರತಾರದಂಗಿಯ ಚರಣದಿ ಕಾಲ ಕಡಗಗಳ ದಟ್ಟಡಿಯನಿಡುತ ಬಹ ಪುಟ್ಟ ಗೋಪಾಲಕನ 5 ಬಾಲಕನು ಕರೆಯೆ ಬಹು ಕಂಬದಲಿ ಬಂದೊಡೆದು ಬಾಲಕನ ತರಿದು ಸಾಂದೀಪಗಿತ್ತ ಬಾಲೆ ಚೀರಿದರೆ ಅಕ್ಷಯವಿತ್ತ ದೇವಕಿಯ ಬಾಲಕನ ಬಹು ಬಗೆಯ ಲೀಲೆಗಳನೆಲ್ಲ 6 ಪೊಗಳಲೆನ್ನಳವಲ್ಲ ಪೊಸಬಗೆಯ ಮಹಿಮೆಗಳ ಅಘಹರನ ಅಗಣಿತದ ಗುಣ ಗಣಗಳ ನಿಗಮ ನಿಕರಕೆ ಮೈಯಗೊಡದ ಉಡುಪಿನ ಕೃಷ್ಣ ನೊಗುಮಿಗೆಯ ಉನ್ನತದ ವೈಯಾರಗಳನು 7
--------------
ವ್ಯಾಸರಾಯರು
ಶ್ರೀಹರಿದಾಸವೃಂದ ಸ್ತೋತ್ರ ದಾಸವರ್ಯರಿಗೊಂದಿಪೆ ದಾಸವರ್ಯರಿಗೆರಗಿ ಜನ್ಮಾಂತರದ ದೋಷವ ಪರಿಹರಿಸಿಕೊಂಬೆ ಪ ನಾರದ ಮುನಿಹರಿಯಾಜ್ಞ್ಞೆಯಿಂದಲೆ ಪುರಂ - ದರ ದಾಸರಾಗಿಜನಿಸಿದ ದಾ - ನಾರಾಯಣನ ದಿವ್ಯನಾಮದ ಮಹಿಮೆಯ ಮೂರು ಲೋಕಗಳಲ್ಲಿ ಹರಹಿದ 1 ಭಜಿಸುವ ಭಕುತರ ಅಗಣಿತದೋಷವ ನಿಜವಾಗಿ ಪರಿಹರಿಸುವಂಥ ದಾಸ - ಸುಜನ ಪೋಷಕ ದುಷ್ಟಕುಜನ ಕುಠಾರ ಶ್ರಿ ವಿಜಯರಾಯರ ಪಾದಕ್ಕೆರಗುವೆ 2 ಕೋಪರಹಿತಭಕ್ತ ಪಾಪವಿದೂರಕ ಭೃಂಗ ದಾ - ತಾಪ ಸೋತ್ತುಮಭವ ತಾಪನಿವಾರಕ ಗೋಪಾಲದಾಸರಿಗೆರಗುವೆ 3 ಧರಿಯಸುರರ ಉದ್ಧರಿಸಲೋಸುಗ ದಿವ್ಯ ಹರಿಕಥಾಮೃತ ಸಾರಗ್ರಂಥವದಾ - ವಿರಚಿಸುತಙÁ್ಞನಪರಿಹರಿಸಿದಂಥ ಹರಿಭಕ್ತಾಗ್ರಣಿ ಶ್ರೀ ಜಗನ್ನಾಥ 4 ಧರೆಯೊಳು ಹರಿಲೀಲಾಮೃತ ವೃಷ್ಟಿಗರೆಯಲು ಪರಿಪರಿ ಕಥೆಗಳ ರಚಿಸಿದ ದಾ - ವರದೇಂದ್ರ ಮುನಿಗಳ ಪಾದಸಾರಸಭೃಂಗ ಪರನುಸುಚರಿತ ಶ್ರೀ ಪ್ರಾಣೇಶ 5 ಹರಿಭಕ್ತಿ ಮಾರ್ಗವ ಪರಿಪರಿಶಿಷ್ಯರಿ ಗರುಹಿ ಕರುಣದಿಂದುದ್ಧರಿಸಿದ ದಾ - ಪರಮತತಿಮರಕ್ಕೆ ತರಣಿಸ್ವರೂಪ ಶ್ರೀ ಗುರುಪ್ರಾಣೇಶಾರ್ಯರಿಗೆರಗುವೆ6 ಗುರುಪಾದ ಸೇವೆಯ ಪರಿಪರಿಗೈದು ಈ ಧರಿಯೊಳು ಧನ್ಯರೆಂದೆನಿಸಿದ ದಾ - ಹರಿದಾಸ ಕುಲರತ್ನ ಸರುವ ಸದ್ಗುಣ ಪೂರ್ಣ ವರಶ್ರೀಪ್ರಾಣೇಶದಾಸಾರ್ಯ 7 ಗುರುಪ್ರಾಣೇಶರ ಕರಸರಸಿಜ ಸಂಜಾತ ಪರಮಭಾಗವತರೆನಿಸಿದ ದಾ ಮರುತಮತದ ತತ್ವವರಿದಂಥ ಸುಖದ ಸುಂ - ಮೋದ ವಿಠಲರೆಂಬ 8 ಭೂಮಿಯೋಳ್ ವರದೇಶ ವಿಠ್ಠಲನ ನಿಜಭಕ್ತ ಸ್ತೋಮಕ್ಕೆ ಶಿರಬಾಗಿ ನಮಿಸುವೆ ದಾ ಆ ಮಹಾತ್ಮರಪಾದರಜಾದೊಳೆನ್ನನು ದೇವ ನೇಮದಿಂದಲಿ ಹೊರಳಾಡಿಸೊ 9
--------------
ವರದೇಶವಿಠಲ
ಸೇರಿ ಬದುಕುವೆ ನಮ್ಮ ಸ್ವಾಮಿಯಂಘ್ರಿಯನುಭೂರಿ ದೋಷಗಳನ್ನು ಬಯಲ ಮಾಳ್ಪುದನು ಪನಿರ್ಗುಣದ ರೂಪವದು ನಿಲುಕದೆಂದಿಗೂ ಮನಕೆದುರ್ಗುಣದ ಪುಂಜಕ್ಕೆ ದೊರಕುವುದೆ ಹುಡುಕೆಅರ್ಗಳದ ವೃತ್ತಿಗಳಲಾಳಿ ಮುಳುಗಿರಲಿದಕೆಮುಗ್ಗಿ ಮೋಹಿಪ ನಾನು ಮಥಿಸಲಿನ್ನೇಕೆ 1ಸಗುಣಮೂರ್ತಿಯ ನೋಡೆ ಸ್ಥಿರದಿ ಬುದ್ಧಿಯು ನಿಲದುಅಗಣಿತದ ವಾಸನೆಯೊಳತಿಬದ್ಧವಡೆದುಬಿಗಿ ಭದ್ರವಾಗಿರಲು ಬಹು ಕರ್ಮವೆಳೆದೆಳೆದುಬಗೆಯದನು ನೆರೆ ನೋಡಿ ಬಿಟ್ಟದನು ಜರೆದು 2ಧ್ಯಾನಿಪರು ಧ್ಯಾನಿಸಲಿ ಧೈರ್ಯದಲಿ ಬ್ರಹ್ಮವನುಜ್ಞಾನಿಗಳು ತಿಳಿಯಲಾ ಗೂಢ ತತ್ವವನುಮಾನರಹಿತರು ಹರಿಗೆ ಮಾಡಲಾ ಕರ್ಮವನುನಾನೊಂದನೊಡಬಡೆನು ನೋಡಿ ಕಠಿಣವನು 3ವೇದಶಾಸ್ತ್ರಗಳೋದಿ ವಾದಿಸಲಿ ವಾದಿಗಳುಸಾಧಿಸಲಿ ಸ್ವರ್ಗವನು ಸಕಲ ಶ್ರೌತಿಗಳುಬೋಧಿಸಲಿ ಪರರಿಂಗೆ ಬಹುತತ್ವಭೇದಿಗಳುಮಾಧವನಿಗೆರಗುವದೆ ಮತವೆನಗೆ ಕೇಳು 4ಪಾದಪದ್ಮವನಂಬಿ ಪಡೆದರಮಿತರು ಗತಿಯ ಓದಿದವರೈದಿದರು ವಾಸನೆಯ ಬಗೆಯಕಾದು ರಕ್ಷಿಪುದಂಘ್ರಿ ಕೊಡುವುದಮಿತದ ಸಿರಿಯವಾದಿಸದೆ ನಂಬಿದೆನು ವಿಧಿಜನಕನಡಿಯ 5ಇದು ತಾನೆ ಲೋಕಗಳನೆಲ್ಲವಾಳುವ ದೊರೆಯುಇದು ತಾನೆ ಯೋಗಿಗಳಿಗಿದಿರಾದ ಬಗೆಯುಇದು ವಿಷಯದೊಳಗಿರುವರೆಬ್ಬಿಸುತ್ತಿಹ ಸುಧೆಯುಇದನೆ ನಾನಂಬಿದೆನು ಯಾಕೆ ಕರೆಕರೆಯು 6ತರುಬಿ ನಿಂದಿದೆ ಲೋಕ ತತ್ಪಾದಪದ್ಮವನುಹೊರೆಯುತಿಹುದಾ ಜನವ ಹೊಣೆಯಾಗಿ ತಾನು ತಿರುಪತೀಶ್ವರ ನನಗೆ ತೋರ್ದನೀ ಮತಿಯನ್ನುವರದೇಶ ನನಗೊಲಿದವೊಡೆಯ ವೆಂಕಟನು 7ಓಂ ತೀರ್ಥಪಾದಾಯ ನಮಃ
--------------
ತಿಮ್ಮಪ್ಪದಾಸರು
ಎನ್ನ ಮನದ ಡೊಂಕ ತಿದ್ದಿ-ಚರಣದಲ್ಲಿ ಸೇರಿಸೋ |ನಿನ್ನ ಸೇವಕನಾದ ಮೇಲೆಇನ್ನು ಸಂಶಯವೇಕೆ ಕೃಷ್ಣ ಪಉದಯವಾದರೆ ಊಟದ ಚಿಂತೆ ಅದರ ಮೇಲೆ ಭೋಗದ ಚಿಂತೆ |ಹದಿನಾಲ್ಕು ಲೋಕಂಗಳನಾಳಬೇಕೆಂಬ ಚಿಂತೆ ||ಇದು ಪುಣ್ಯ ಪಾಪವೆಂದು ಹೃದಯದಲಿ ಭಯವಿಲ್ಲದಲೆ |ಮದ ಮೋಹಿತನಾದೆ ನಿನ್ನ ಪದವ ನಂಬದೆ-ದಯಾಳೊ 1ನೆರೆಮನೆಗಳ ಭಾಗ್ಯವ ನೋಡಿ-ತರಹರಿಸುತ ಅಸೊಯೆಯಿಂದ |ಹರಿಯ ಸ್ಮರಣೆಗೆ ವಿಮುಖನಾದೆ - ನರರಸ್ತುತಿಯ ನಾ ಮಾಡಿದೆ ||ಪರರ ಸತಿಗೆ ಪರರನ್ನಕೆ ತಿರುಗಿ ತಿರುಗಿ ಚಪಲನು ಆದೆ |ಗುರುಹಿರಿಯರ ದೂಷಿಸುತಲಿ ಮರುಳನಾದೆ ದೀನಶರಣ್ಯ 2ಅಗಣಿತಸುಖ ಬಂದರೆ ನಾನು -ಅಗಣಿತದುಃಖಕೆ ಹರಿಯೆನ್ನುವೆನು |ಜಗದೊಳಾವ ಲಾಭವು ಬಂದರು ಧನಿಯು ನಾನೆ ಎಂಬೆ ||ಮಿಗೆ ಹಾನಿಗೆ ಹರಿಯನು ದೂಷಿಸಿನೆಗೆದು ಪತಂಗವು ಕಿಚ್ಚಲಿ ಬೀಳುವ |ಬಗೆ ನಾನಾದೆನುಪುರಂದರವಿಠಲನಖಗರಾಜಸುವಾಹನ ಶ್ರೀ ಕೃಷ್ಣ 3
--------------
ಪುರಂದರದಾಸರು
ಸಂಸಾರ ಸಂಸಾರವೆಂಬೆರಿ ಸರ್ವದಿವಾರಾತ್ರಿಯಲಿಸಂಸಾರ ಎನಗೊಂದೆ ಅಲ್ಲದೆ ಸಂಸಾರ ಎನಗುಂಟೇನಯ್ಯಪಸತ್ಯವೆಂಬುದೆನ್ನಸತಿಯು ಶಾಂತವೆಂಬುದೆನ್ನಸುತನುಸತ್ಯವೆಂಬುದೆನ್ನ ಸೊಸೆಯು ನಿಜವಿದೀಗಅತ್ಯಧಿಕ ಗುಣಿಯೆಂಬ ಅಗಣಿತದ ಪಿತನಿರಲುಮಿಥ್ಯವಾದ ಸಂಸಾರದಲಿ ಮಗ್ನರಹರೇ1ಬುದ್ಧಿ ಎಂಬುದೆನ್ನಭ್ರಾತೃ ಭಾವನೆ ಎಂಬುದೆನ್ನಭಾವಅದ್ವೈತವೆಂಬ ಅತ್ತೆ ಅಂತಃಕರಣವೆಂಬ ಮಾವಶುದ್ಧಾತ್ಮವೆಂಬ ಬಂಧು ಸಂಬಂಧವೆನಗಿರಲಾಗಿಈ ದ್ವೈತಸಂಸಾರದಲ್ಲಿ ಮಗ್ನರಹರೇ2ಇಂತು ಸಂಸಾರ ಸುಖ ನಿಜದೊಳಗೆನಗಿರಲುಭ್ರಾಂತದಲ್ಲವೆ ನಿಮ್ಮ ಮಾತಿದೆಲ್ಲಚಿಂತಯಕ ಚಿದಾನಂದ ಚಿನ್ಮಯನೆ ತಾ ಬಲ್ಲಅಂತರಂಗದ ಮಾಟಕೆ ಅವನೆ ಸಾಕ್ಷಿ3
--------------
ಚಿದಾನಂದ ಅವಧೂತರು