ಒಟ್ಟು 11 ಕಡೆಗಳಲ್ಲಿ , 7 ದಾಸರು , 11 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಏನಬೇಡಲಿ ನಿನ್ನ ನಾ ಬಯಸಿ ಸ್ವಾಮಿ ಐಹಿಕ ಸುಖ ನಿಖಿಲ ಪುಸಿಯಾಗಿ ಪ ವನಿತೆಯನು ಬೇಡಲೆ ತನಗೆ ಅಲ್ಲದೆ ಮತ್ತೆ ಮನೆತುಂಬ ಮರಿಮಾಡಿ ತಿನಿಸಿಗ್ಹಾಕೆಂದು ಅನುಗಾಲ ಬೆನ್ನ್ಹತ್ತಿ ತಿನುತಿಹ್ಯಳು ಹರಿದ್ಹರಿದು ಬಿನುಗರಲಿ ಬಿನುಗೆನಿಸಿ ಘನತೆಯನು ಕೆಡಿಸಿ 1 ಘನವೆಂದು ನಂಬಿ ನಾ ಧನವನಾಪೇಕ್ಷಿಸಲೆ ಸನುಮತದಿ ಒತ್ತಟ್ಟಕ್ಷಣ ಕೂಡ್ರಗೊಡದೆ ದಣಿವಿಕಿಲ್ಲದೆ ದುಡಿಸಿ ಅಣುಮಾತ್ರ ಸುಖಕೊಡದೆ ಚಿನುಮಯಾತ್ಮನೆ ನಿನ್ನ ನೆನವೆ ಮರೆಸುವುದು 2 ಭೂಮಿಯನು ಬೇಡಲೆ ಸ್ವಾಮಿಯಂತೆ ಸೇವೆಗೊಂಡು ತಾಮಸದಿ ನೂಕಿ ಬಲು ಪಾಮರೆನಿಸುವುದು ಸ್ವಾಮಿಯೆನ್ನಯ ಸಕಲ ಕಾಮಿತ ಕಡಿದು ನಿಮ್ಮ ನಾಮಬಲ ಕರುಣಿಸು ಶ್ರೀರಾಮ ಪ್ರಭುತಂದೆ3
--------------
ರಾಮದಾಸರು
ಕಂಗೆಡದಿರು ಮನವೆ ಕಂಗೆಡದಿರು ಒಡನೊಡನೆ ನೆರೆದು ಬಂದು ಪ ಜನಕೆ ಗ್ರಾಸವೆಂತಹುದೆಂದು ಅನುಮಾನ ಹಚ್ಚಿಕೊಂಡು ಬಡವಾಗದಿರೆಲೆ ಆಲೋಚನೆ ಮಾಡು ನಿನ್ನೊಳಗೆ ತಿಳಿದು ಮರಳಿ ಮರಳಿ ಘನಮಹಿಮ ನಾರಾಯಣ ಅನಾದಿ ಸ್ವಾಭಾವಿಕ ಚಿನುಮಯ ಸತ್ಯಸಂಕಲ್ಪ ದೇವ| 1 ಇನಿತು ಜೀವಿಗಳಿಗೆ ಕಾಲಕಾಲಕೆ ಗ್ರಾಸ ಮಾಡಿಯಿಪ್ಪಾ ಕ್ಷಣಮಿರಗೊಡದೆ ಆವಲ್ಲಿಯಿದ್ದರೂ ವುಣಿಸುವ ಉಚಿತವನ್ನೆ ತಿಳಿದು ನೋಡಿ ದಿನ ದಿನಕೆ ಅಧಿಕವಿಲ್ಲಾ ತತ್ಪೂರ್ವ ಚೇತನಕೆ ನಿರ್ಮಾಣ ಮಾಡಿದಂತೆ ಬೊಮ್ಮಾ2 ಫಣಿತಿಯಲ್ಲಿ ಬರೆದಿರುವ ಆಯು:ಕರ್ಮವಿದ್ಯಾ ಧನ ನಿಧಾನನೆನೆಸಿ ಶ್ರೀಹರಿಯ ಆಜ್ಞಾದಿ ಜನಿಸುವಾಗಲೆ ಅವರವರವಾಡಿಪನಾ ಕೊನೆಯ ಸೆರಗಿನಲಿ ಕಟ್ಟಿಹನೋ ನಿನಗೆ ಕಾಣಬಾರದೋ ಪದಶಾಸ್ತ್ರಗಳಿಂದೆ ಗುಣಿಸಿ ನೋಡಿದರೆ ಕಾರುಣಿಕÀವಹುದೊ 3 ಅಣುಮಾತ್ರನಿಂ ನಿಂದಾ ಆಗುವಾ ಶೌರ್ಯವೇನೋ ಅನುಭವಕೆ ತಂದುಕೊಂಡು ಗ್ಲಾನಿಯಾಗೋ ಮಿನುಗು ಚಿಂತೆಗಳಿಂದಾ ಬರುವ ಲಾಭವೇ ಕಾಣೆ ತನುವ ಶೋಷಿಸಿ ವಿರೋಧಾವಾಗಿ ಕೊಂಬೆ ಸಿರಿ ನಮ್ಮ ವಿಜಯವಿಠಲರೇಯಾ ಮನುಜಾದಿ ದೇಹಿಗಳಿಗೆ ಸ್ವಾಮಿಯಾಗಿಪ್ಪನೋ
--------------
ವಿಜಯದಾಸ
ಕಷ್ಟ ಕಷ್ಟವೋ ಕೃಷ್ಣ ದೃಷ್ಟಿಯಲಿ ನೋಡದಿರೆ ತುಷ್ಟಿಪಡಿಸಲು ನಿನ್ನ ನಾನೆಷ್ಟರವನಯ್ಯ ಪ ಭ್ರಷ್ಟನಾಗಿಹೆ ನಾ ಅಷ್ಟಾಂಗಯೋಗವ ತಿಳಿಯೆ ಒಂ- ದಿಷ್ಟು ಭಕುತಿಯ ಕೊಟ್ಟು ಕಡೆಹಾಯಿಸಯ್ಯ ಅ.ಪ ಸತ್ಯ ಅಸ್ತೇಯ ಬ್ರಹ್ಮಚರ್ಯ ಅಹಿಂಸಾ ಧೃತಿ ದಯಾ ಕ್ಷಮಾರ್ಜಿತ ಮಿತಭುಕ್ತವು ನಿತ್ಯ ಬಾಹ್ಯಾಂತರ ಶೌಚಾದಿ ದಶಗುಣ ಯುತವಾದಯಮ ಉಪಾಸನೆಗಳಿನಿತಿಲ್ಲವೋ ದೇವಾ 1 ನಿಯಮ ಮೊದಲಿಲ್ಲ ಜಪತಪ ಸಂತೃಪ್ತಿ ನಿಯತ ಸಿದ್ಧಾಂತ ಶ್ರವಣ ಲಜ್ಜಮತಿಯು ಶ್ರೀಯಃಪತಿಯ ಪೂಜನ ಆಸ್ತಿಕ್ಯವ್ರತ ದಾನೋ- ಪಾಯವಿಲ್ಲದೇ ಕಡೆ ಹಾಯ್ವುದೆಂತಯ್ಯ 2 ಘಾಸಿಯಾಗಿಹುದಯ್ಯ ಷಡ್ವಿಧಾಸನಗಳೂ ಸ್ವಸ್ತಿಕ ಭದ್ರಪದ್ಮ ಅರ್ಧಾಂಗಾಸನದಿ ಸಿದ್ಧ ಪರ್ಯಂಕಗಳೆಂಬ ಆಸನದಿ ಕುಳಿತು ನಾ ಧೇನಿಸಲರಿಯೆ ಹರಿಯೇ 3 ಪ್ರಾಣಾಯಾಮವ ಕ್ರಮವು ರೇಚಕ ಪೂರಕವು ದಣಿವಿಲ್ಲದೆ ಕುಂಭಕದ ಕ್ರಮವಿಲ್ಲ ತ್ರಾಣವಿಲ್ಲವೋ ವಾಯುಬಂಧ ಮಾಡಲರಿಯೆ ಪ್ರಾಣಪತಿ ನಿನ್ನ ಕರುಣವಿಲ್ಲದಾತನಕ 4 ವಿಷಯಾಭಿಲಾಷೆಯಿಂದ್ಹರಿದು ಹೋಯಿತು ಮನಸು ವಿಷಮವಾಗಿಹುದಯ್ಯ ಮತ್ಸಾಧನ ಪ್ರತ್ಯಾಹಾರ ಸಾಧನವಿಲ್ಲ ಕೃಷಿಮಾಡಿ ಸ್ಥಿರಮನದಿ ಧೇನಿಸಲು ನಾನರಿಯೆ 5 ಧಾರಣೋಪಾಯದೊಳು ಅಣುಮಾತ್ರ ನಾನರಿಯೆ ನರಕ್ರಿಮಿಯಾಗಿ ನಾ ಧರೆಯೊಳುಳಿದೆ ಅರಿಯೆ ಬಾಹ್ಯಾಂತರದಿ ಭೂತಪಂಚಕವಿರುವ ಪರಿ ತಿಳಿದು ಪ್ರಾಣವಾಯು ಸಡಿಲಬಿಡಲರಿಯೆ 6 ಧ್ಯಾನಿಸಲು ಏಕಾಗ್ರಚಿತ್ತವೇ ಎನಗಿಲ್ಲ ಸಂಸ್ತುತಿಸೆ ಸಂಪ್ರಜ್ಞಾ ಅಸಂಪ್ರಜ್ಞವೆಂಬ ಘನಸಮಾಧಿಯೊಳ್ ಪರಿವಿಲ್ಲದಲೆ ನಿನ್ನ ಕರುಣವೆಂತಾಗುವುದೋ ಶ್ರೀ ವೇಂಕಟೇಶಾ 7 ಶುದ್ಧವಾದ ದ್ವೈತತ್ರಯ ತಿಳಿಯದಲೆ ಮುಗ್ಧನಾಗಿಹೆ ನಾನಪರಿಶುದ್ಧನೊ ಶಬ್ದಗೋಚರ ನಿನ್ನ ಪರಿಶುದ್ಧ ಭಾವದಿಂ ಬುದ್ಧಿಪೂರ್ವಕ ತಿಳಿಯೆ ಬದ್ಧಪಾಮರನಯ್ಯ 8 ಕರಣತ್ರಯದಲಿ ಮಾಳ್ವ ಕ್ರಿಯೆಗಳೆಲ್ಲವು ಸತತ ಹರಿಯೇ ಬಿಂಬಕ್ರಿಯವ ನಾನರಿಯದೇ ಕರುಣಶರಧಿಯೆ ನೀ ಕೃಪೆಮಾಡಿ ಪೊರೆಯದಿರೆ ಉರಗಾದ್ರಿವಾಸವಿಠಲ ನಿನ್ನ್ಹ್ಹೊರತು ಗತಿಯುಂಟೆ 9
--------------
ಉರಗಾದ್ರಿವಾಸವಿಠಲದಾಸರು
ತಪ್ಪಲರಿಯದು ಬರೆದ ಬ್ರಹ್ಮನಿರ್ಮತವು ಒಪ್ಪುವದು ಯತಿ ಮುನಿ ಋಷಿಯ ಸಂತತಿಯು ಧ್ರುವ ಆನಿ ಮೊದಲಿರುವೆ ಕಡೆ ಅಣುಮಾತ್ರಾಕಾರವನು ಮುನ್ನ ಬರೆದಂತೆ ತಾನಡೆಯುತಿಹಂದು ಇನ್ನು ಮುತ್ತನ್ಯ ದೈವಕ ಬಯಸಿ ಬೇಡಿದರೆ ಮುನ್ನಿಗೆ ಕೊಡಬಲ್ಲವೆ ಬಿನಗುದೈವವು 1 ಭಿನ್ನವಿಲ್ಲದೆ ತನುವಿನೊಳು ಆನಂದ ಘನ ಉನ್ನತ ಮಹಿಮ ಪರಿಪೂರ್ಣವಿರಲು ಮೂರ್ತಿ ಶ್ರೀಪಾದವನು ಅನುದಿನ ಭಜಿಸಿ ಘನ ಸುಖವ ಪಡಿಯೊ ಮನವೆ 2 ಕಕ್ಕುಲಾತಿಯ ಬಟ್ಟು ಕಂಡವರ ಕಾಲ್ಗೆರಗಿ ಫಕ್ಕಸಾರಿಯ ಧರ್ಮ ಜರಿಯ ಬ್ಯಾಡ ಸಕಲ ಸಹಕಾರ ಮಹಿಪತಿಸ್ವಾಮಿ ನಿನಗಿರಲು ಭಕುತಿ ಮುಕುತಿಯ ಉಂಟು ಮೂಢ ಜನವೆ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ದಿನಗಳನು ಕಳೆವ ಜನರೆ ಸುಜನರು ವನಜನಾಭನ ದಾಸರ ಸಮಾಗಮದಿಂದ ಪ. ಅರುಣೋದಯದಲೆದ್ದು ಆಚಮನ ಕೃತಿಯಿಂದ ಪರಿಶುದ್ಧರಾಗಿ ಇಹಪರಗಳಿಂದ ಎರಡುವಿಧ ಸುಖವೀವ ಗುರುಮಧ್ವಮುನಿವರನ ಪರಮಮತವಿಡಿದು ಹರಿಕಥಾಮೃತ ಸವಿದು 1 ಸ್ನಾನವನು ಮಾಡಿ ಸಂಕಲ್ಪಪೂರ್ವಕದಿ ಸಂ- ಧ್ಯಾನ ಗಾಯಿತ್ರಿ ಗುರು ಮಂತ್ರ ಜಪವು ಭಾನುನಾಮಕನಾದ ಪರಮಾತ್ಮನಂಘ್ರಿಯನು ಧ್ಯಾನವನು ಮಾಡಿ ಅಧ್ಯಯನ ಪಾಠಗಳಿಂದ 2 ವಾಸುದೇವ ಅಡಿಗಡಿಗೆ ನೆನೆದು ಪಾವಕಗೆ ಪ್ರಾತರಾಹುತಿಯನಿತ್ತು ಭಾವಜ್ಞರಲಿ ಸಕಲಪುರಾಣಗಳ ಕೇಳಿ ಹೂವು ಶ್ರೀತುಲಸಿವನಗಳ ಸೇವೆಯನು ಮಾಡಿ 3 ನದನದಿಗಳಲಿ ಸ್ನಾನವನು ಮಾಡಿ ಕಂಠÀದಲಿ ಪದುಮಾಕ್ಷಿ ಶ್ರೀತುಲಸಿ ಮಾಲೆಗಳನು ಮುದದಿಂದ ಧರಿಸಿ ಮಧ್ಯಾಹ್ನ ಕಾಲದಿ ಬ್ರಹ್ಮ ಯ- ಜ್ಞ ದೇವ ಋಷಿ ಪಿತೃಗಳ ತೃಪ್ತಿಯನು ಬಡಿಸಿ4 ಸಾವಧಾನದಿ ತಂತ್ರಸಾರೋಕ್ತ ವಿಧಿಯಿಂದ ದೇವಪೂಜೆಯ ಮಾಡಿ ದೇವೇಶಗೆ ನೈವೇದ್ಯಗಳನಿಟ್ಟು ನಿತ್ಯತೃಪ್ತಗೆ ವೈಶ್ವ- ದೇವ ಬಲಿಹರಣ ಅತಿಥಿ ಪೂಜೆಗಳಿಂದ 5 ಪರಮ ಹರುಷದಿಂದ ದೇವ ಪ್ರಸಾದವನು ವರ ಮಾತೃ ಪಿತೃ ಸೋದರರು ಸಹಿತ ಪರಮ ಸಖರ ಪಂಙÂ್ತ ಪಾವನರೊಡಗೂಡಿ ನರಹರೆ ಎನುತ ಭೋಜನ ಮಾಡಿ ಮೋದಿಸುತ 6 ಸಾಯಾಹ್ನದಲಿ ಸಂಧ್ಯಾನ ಗಾಯಿತ್ರಿ ಜಪ ಶ್ರೀಯರಸನಂಘ್ರಿ ಸೇವೆಯನು ಮಾಡಿ ವಾಯುಸಖನೊಳಗಾಹುತಿಯನಿತ್ತು ಲಕ್ಷ್ಮೀನಾ- ರಾಯಣನ ಗುಣಗಳನು ಪೊಗಳುತಲಿ 7 ತನುಮನವÀ ಶ್ರೀಹರಿಯಾಧೀನವ ಮಾಡಿ ಅನುಸರಿಸಿ ಭಾಗ್ಯಬಡತನ ಎಣಿಸದೆ ಮನವರಿತು ಹರಿಕೊಟ್ಟುದು ತನ್ನದಲ್ಲದೆ ಅಧಿಕ ಅಣುಮಾತ್ರ ಬಾರದೆಂದು ಅಲ್ಪ ಸಂತುಷ್ಟನಾಗಿ8 ಈ ವಿಧದಿ ಅನುದಿನವಾಚರಿಸಿ ರಾತ್ರಿಯಲ್ಲೊಂದು ಜಾವ ಜಾವಕೆ ಎದ್ದು ನೆರೆಹೊರೆಯು ಕೇಳ್ವಂತೆ ಪಾವನ ಚರಿತ್ರ ಹಯವದನನ ನೆನೆದು 9
--------------
ವಾದಿರಾಜ
ನಂಬಿ ನೆಚ್ಚದಿರು ನರಲೋಕ ಸುಖವೆಂಬ, ಅಂಬಲಿ ಪರಮಾನ್ನ ಪ ಹಂಬಲಿಸುವುದು ಹರಿಲೋಕಾನಂದವೆಂಬ ಪೀಯೂಷಪಾನ ಅ.ಪ ನೊಣ ಬೆರಸಿದ ಊಟ ಪರಮಭಾಗವತರ ಪದಸಂಗವೆಂಬುದು ಮಸ್ತಕದ ಮಕುಟ ಕೇವಲ ಯಮಕಾಟ ಪರತತ್ವವಾದ ಶ್ರೀಹರಿಯ ತಿಳಿವುದೆ ವೈಕುಂಠಕೆ ಓಟ 1 ಹಾರಿ ಹೋಗುವ ಹೊಟ್ಟು ಇದ್ದಾಗ ದಾನ ಧರ್ಮಂಗಳ ಮಾಡೋಡು ಕೈವಲ್ಯಕೆ ಮೆಟ್ಟು ಹೊದ್ದಿರುವರ ಕಂಡಾಸೆಯಪಟ್ಟರೆ ಹೋಗುವಿ ನೀ ಕೆಟ್ಟು ಬುದ್ಧಿಹೀನರಿಗೆ ಪೇಳದಿರೆಲೊ ತತ್ವಸಾರ ಸುಂದರ ಗುಟ್ಟು 2 ಅಲ್ಪಾವಕಾಶವು ಈ ಶರೀರವು ಗಾಳಿಗೊಡ್ಡಿದ ದೀಪ ನೋಡು ಹಾಲುಸಕ್ಕರೆ ತುಪ್ಪ ಬಲ್ಪಂಥ ಮಾಡದಿರು ಜನ್ಮಜನ್ಮದಲಿ ಬಿಡದೆಲೊ ಸಂತಾಪ ಸ್ವಲ್ಪಕಾಲಾದರೂ ಮಧ್ವಮತವೊಂದು ಭವವೇ ನಿರ್ಲೇಪ3 ಕರ್ಮ ಆವುದಾದರು ಸೂಳೆಗಿಕ್ಕ್ಕಿದ ವಿತ್ತ ಹರಿಗೆ ವಿಶ್ವಾಸದಿ ಅಣುಮಾತ್ರ ಅರ್ಪಿಸೆ ಅವನೆ ನಿರ್ಮಲ ಚಿತ್ತ ನಿರುತಗ್ರಾಸಕೆ ಚಿಂತೆಮಾಡಲು ಒದಗದು ಪುಣ್ಯವು ನಿನಗೆತ್ತ ಅರೆಮನವಿಲ್ಲದೆ ದೃಢಮನದಿಪ್ಪುದೆ ಸಂಪಾದನೆ ಭತ್ಯ4 ಭಾವವಿರಕ್ತಿಯ ವಹಿಸದಿದ್ದರೆ ನಿನಗಾಗುವುದು ಖೇದ ಪರಿಪರಿಯಾಸ್ವಾದ ದೇವಕಿಸುತ ನಮ್ಮ ವಿಜಯವಿಠ್ಠಲನಂಘ್ರಿ ತೀರುಥ ಪ್ರಾಸಾದ ನಿತ್ಯ ನರಕವಾಸ ಎನ್ನತಲಿದೆ ವೇದ 5
--------------
ವಿಜಯದಾಸ
ನಿನಗಿನಿತು ಮಮಕಾರವಿರಲೆನಗೆ ಭಯವೇನು ಚಿನುಮಯನೆ ಧನ್ಯ ನಾನು ಪಜನಕ ನೀನೆನಗಾದೆ ತನುಜ ನಾ ನಿನಗಾದೆ ಘನಮಹಿಮ ಕಾಮಧೇನು ನೀನು ಅ.ಪಜನ್ಮಕೋಟಿಗಳಲ್ಲಿ ಪುಣ್ಯಕರ್ಮಗಳನ್ನು ಮುನ್ನ ಮಾಡಿಸಿದೆ ನೀನುಮುನ್ನಿನಾ ದೇಹಗಳು ಭಿನ್ನವಾಗಲು ಕರ್ಮವಿನ್ನುಳಿವ ಬಗೆಯದೇನುಚಿನ್ಮಯನೆ ತನುಕರಣ ಭಿನ್ನವಾದರು ಸಾಕ್ಷಿ ನಿನ್ನೊಳಿಂಬಿಟ್ಟೆಯವನುಸನ್ನುತನೆ ಬಾಲಕನಿಗುಣ್ಣ ಕಲಿಸುವ ತೆರದಿ ನಿನ್ನನಿತ್ತುದೇನೆಂಬೆನು ನಾನು 1ದುಷ್ಟಸಂಗವ ಬಿಡಿಸಿ ದುರ್ಬುದ್ದಿಯನು ಕೆಡಿಸಿ ಶಿಷ್ಟರೊಳು ತಂದು ನಿಲಿಸಿಕಷ್ಟಸಾಧನಗಳನು ಮುಟ್ಟಲೀಸದೆ ಸುಲಭ ನಿಷ್ಠೆಯಲಿ ಚಿತ್ತವಿರಿಸಿಹುಟ್ಟುಹೊಂದುಗಳನ್ನು ಕೊಟ್ಟು ಮೋಹಿಸುತಿರುವ ಪುಟ್ಟ ಫಲಗಳ ತೇಲಿಸಿಮುಟ್ಟಿ ನಿನ್ನಯ ಪದವನಿಟ್ಟು ಹೃದಯಾಂಬುಜದಲಿಷ್ಟಮೋಕ್ಷವ ತೋರಿಸಿ ನಿಲಿಸಿ 2ವಿದ್ಯವಿಸ್ತರವಾದರದ್ದುವದು ಗರ್ವದಲಿ ಬುದ್ಧಿ ನಿಲ್ಲದು ನಿನ್ನಲಿಇದ್ದು ವೃದ್ಧರ ಪಥದಿ ಹೊದ್ದಿ ಶುದ್ಧತ್ವವನು ಶ್ರದ್ಧೆ ಸೇರದು ನಿನ್ನಲಿಉದ್ದುರುಟುತನದಿಂದ ಬಿದ್ದು ವಾದದ ಮಡುಹವದ್ದು ಸುಕೃತವ ಕಾಲಲಿಇದ್ದ ನಿಜಸ್ಥಿತಿುವಗೆ ಸಿದ್ಧವಾಗದುಯೆಂದು ನಿರ್ಧರಿಸಿ ನೀನೆ ದಯದಿ ಇಲ್ಲಿ 3ಅನಿಮಿತ್ತ ಬಂಧು ನೀನೆಂಬುದನು ಫಲುಗುಣನು ಮನದೊಳೆಣಿಸಿದುದಿಲ್ಲವೆಅಣುಮಾತ್ರದುಪಕಾರ ಜನರಿಂದ ನಿನಗುಂಟೆ ಮನಕೆ ದೂರ ನೀನಲ್ಲವೆವನಜಭವ ದಿಕ್ಪಾಲ ಮನುಗಳೈಶ್ವರ್ಯಗಳು ನಿನಗೆ ಗಣನೆಗೆ ಬರುವವೆಇನಿತು ಬ್ರಹ್ಮಾಂಡಗಳ ನೆನದು ನಿರ್ಮಿಸಿ ಬಳಿಕ ಕ್ಷಣದೊಳಳಿಸುವದಿಲ್ಲವೆ ನಿಜವೆ 4ನಿನ್ನ ಭಜಿಸುವ ಭಾವವಿನ್ನುಂಟೆ ಜಡಮತಿಗೆ ಅನ್ಯವಿಷಯದಿ ಮೋಹಿಸೆತನ್ನ ಮರೆದತಿದುಃಖದುನ್ನ ತದ ಸಂಸಾರ ವೆನ್ನದೆನ್ನುತ ದುಃಖಿಸೆನಿನ್ನ ನೆನಯದೆ ಬಹಳ ಜನ್ಮವೇಗದ ನದಿಯಲುನ್ನಿಸುವ ಕರ್ಮ ಹೊದಿಸೆಭಿನ್ನ ಬುದ್ಧಿಯಲೊಂದಿ ತನ್ನ ತಾನರಿಯದಿರೆ ನಿನ್ನಿಂದ ಮುಕ್ತನೆನಿಸೆ ನಿಲಿಸೆ 5ಚಲಿಸದಂದದಿ ಮನವ ನಿಲಿಸಿ ನಿನ್ನೊಳು ಬಾಹ್ಯವಳಿವ ಬಗೆುಲ್ಲವಲ್ಲನಳಿನನಾಭನೆ ನೀನು ಸುಲಭನೇ ಯೋಗಿಗಳು ಬಳಲುವರು ಕಾಣರಲ್ಲನಿಲುವೆ ಮನದಲಿ ನೀನೆ ಸಲಹೆಂದು ಭಜಿಸಿದರೆ ಗೆಲರೆ ಸಂಸೃತಿಯನೆಲ್ಲತಿಳುಹಿ ಸುಲಭದ ದಾರಿಯೊಳಗೆನ್ನ ನೀನಿರಲು ಬಳಲುವಿಕೆುಲ್ಲವಲ್ಲಾ ಲಲ್ಲಾ 6ಬಿನುಗು ಭೋಗವನುಂಡು ಜುಣುಗಿ ಮತ್ತದರಲ್ಲಿ ಮನವೆರಗಿ ಮುಳುಗುತಿಹುದುತನುವಿನಭಿಮಾನದಲಿ ನೆನಹು ತಗ್ಗದು ಮತ್ತೆ ಕನಲಿ ಮುರಿದೇಳುತಿಹುದುಅನುವರಿಯದಂಧತಮದಲಿ ತಾನು ನೆರೆಹೊಕ್ಕು ಘನದುಃಖಬಡುತಲಿಹುದುಇನಿತವಸ್ಥೆಯಲಿರುವ ಮನಕೆ ಸಿಕ್ಕಿರಲೆನ್ನ ದಿನಕರನೆ ಕೈವಿಡಿವುದು ಸೆಳೆದು 7ಧ್ಯಾನ ಧಾರಣೆುಂದ ನಿನ್ನ ಮೂರ್ತಿಯ ನಿತ್ಯ ಮಾನಸದಿ ನಿಲಿಸಬೇಕುಧ್ಯಾನಾಂಗ ನಿಯಮಗಳನಭ್ಯಾಸವಂ ಮಾಡಿ ತಾನು ತಾನಾಗಬೇಕುಏನೊಂದ ಕಂಡರೂ ನಾಮರೂಪವ ಬಿಟ್ಟು ನೀನೆಂದು ನಿಲ್ಲಬೇಕುಏನೆಂಬೆನಿವನೆಲ್ಲ ನೀನೆ ಸಾಧಿಸಿಕೊಟ್ಟು ದೀನನನು ಸಲಹಬೇಕು ಸಾಕು 8ಪರಮ ಕರುಣಾನಿಧಿಯೆ ಪರಿಪೂರ್ಣ ಪರಮೇಶ ಪರಮಸಂವಿದ್ರೂಪನೇಶರಣಜನಸುರಧೇನು ದುರಿತಭೂಧರಕುಲಿಶ ಕರಿವರನ ರಕ್ಷಿಸಿದನೇಮರೆಯೊಕ್ಕೆ ನಿನ್ನಡಿಯ ಮರವೆಯನು ಪರಿಹರಿಸು ಅರಿವಿನೊಳು ಪೊಗಿಸು ನೀನೆತಿರುಪತಿಯ ನೆಲೆವಾಸ ವರದ ವೆಂಕಟರಮಣ ಅರವಿಂದದಳನೇತ್ರನೆ ಅಜನೆ 9ಓಂ ಜಲಕ್ರೀಡಾಸಮಾಸಕ್ತಗೋಪೀವಸ್ತ್ರಾಪಹಾರ ಕಾಯ ನಮಃ
--------------
ತಿಮ್ಮಪ್ಪದಾಸರು
ಪಾದ ಪದ್ಮದಲಿಮಾಯೆ ದಾಟಿತು ಮಹಿಮಳೇ ದೇವಿ ಪಕಾಯ ಕರ್ಮಗಳೆಂಬ ಕಾತ್ಯ ಸಮುದಾಯವನುದಾಯದಿಂದಳವಡಿಸಿದೆ ದೇವಿ ಅ.ಪಆಜಸುರಾದಿಗಳಿಂಗೆ ಅಮರಿಸಿಹೆ ಭಾಗ್ಯವನುಭಜಿಸುತಿಹರನವರತವೂ ದೇವಿನಿಜದಿರವನೂ ಕೊಟ್ಟು ನಿಲಿಸಿರಲು ನೀನವರತ್ರಿಜಗ ವಂದಿತರಾದರು ದೇವಿಸುಜನ ವಂದಿತನಾದ ಶ್ರೀಹರಿಯೆ ನೀನಾಗಿರುಜುಕರದಲಾಳುತಿರುವೆ ದೇವಿಕುಜನನಾದರು ನಾನು ಕರವಿಡಿದು ನೀ ಕಾಯ್ದುದ್ವಿಜಜನ್ಮದೆಣಿಕೆದೋರ್ದೆ ದೇವಿ 1ಅಣುಮಾತ್ರವಿರಲಿಲ್ಲ ವಿಷಯ ಭೋಗಕೆ ಬೀಜದಣಿಸಿದುದು ದಾರಿದ್ರವು ದೇವಿಕಣುಗಾಣದಿದ್ದವಗೆ ಕೊಟ್ಟಿಯನ್ನವ ನೀನೆಮಣಿವದನು ಮಾಡ್ದೆ ನೀನೆ ದೇವಿಪ್ರಣತ ರಕ್ಷಾಮಣಿಯೆ ಪರತತ್ವವನ್ನಿತ್ತೆಎಣಿಪುದೆಂತೀ ಮಹಿಮೆಯಾ ದೇವಿಕ್ಷಣಮಾತ್ರ ಪೂಜೆಯನು ಕ್ರಮದಿ ಮಾಡ್ದವನಲ್ಲಭಣಿತೆುದ ಬಗೆವರಾರು ದೇವಿ 2ಪರಿತೃಪ್ತಳಾಗಿರುವೆ ಪರಮಭಾಗ್ಯವನೀವೆನೆರೆ ನೀನೆ ನಿರ್ಮಿಸಿರಲು ದೇವಿಇರಿಸಿದಂತಿರುವರಿಂದೇನಹುದು ಕೊಡುವದಕೆಅರಿಯಲಖಿಳವು ನಿನ್ನದೇ ದೇವಿಮರುಗಿ ನೀನೇ ಕಾಯ್ವೆ ಮಾತೃ ರೂಪಹುದಾಗಿಸುರತರುವಿನುಪಮಾನಳೇ ದೇವಿವರದ ತಿರುಪತಿ ವಾಸ ವೆಂಕಟೇಶನ ರೂಪಧರಿಸಿಹಳೆ ದಿವ್ಯ ಲಕ್ಷ್ಮೀದೇವಿ 3ಕಂ||ಸ್ಥಿರವಾರವಿಂದು ಕೇಶವಸ್ಥಿರವಹುದಿತ್ತಭಯವೆನಗೆ ಭಯವನು ಬಿಡಿಸೈಸ್ಥಿರವಲ್ಲದ ಸಂಸಾರವಸ್ಥಿರವೆಂದೇ ನೊಂದೆನೈಯ ವೆಂಕಟರಮಣಾಓಂ ನಾರಾಯಣಾಯ ನಮಃ
--------------
ತಿಮ್ಮಪ್ಪದಾಸರು
ಹರಿ ಮಾಡ್ದ ಮರ್ಯಾದೆ ಅನುಭವಿಸಲೀ ಬೇಕು ಸರಸಿಜಭವಾದ್ಯರಿಗೆ ಬಿಡದು ಪ ವರಕಲ್ಪ ಕಲ್ಪದಲಿ ಮೀರಿದವರುಂಟೆ ನಿಂ ದಿರದಾವ ಜನುಮವಾಗೆ ಪ್ರಾಣಿ ಅ.ಪ. ವಾರಿಜಭವನ ನೋಡು ಮುನಿಶಾಪದಿಂ ಧಾರುಣಿಯೊಳು ಪೂಜೆ ತೊರೆದ ಪ್ರಾರಬ್ಧ ನಿರ್ದೋಷಿಗಾದರೂ ತಪ್ಪದವ- ತಾರವಿಲ್ಲದವನಾದನೋ ಪ್ರಾಣಿ1 ಜಗಕೆ ಗುರುವೆಂದೆನಿಸಿಕೊಂಡ ಪ್ರಾಣನ ನೋಡು ಯುಗದೊಳಗೆ ಕೋತ್ಯಾದನಲ್ಲೋ ಮಗುಳೆ ಮಾತನು ಕೇಳು ಕಚ್ಚುಟವ ಧರಿಸಿದ ಅಗಣಿತ ಸತ್ವನಿಗೆ ಈ ಪರಿಯೆ ಪ್ರಾಣಿ 2 ಶಿವನ ನೋಡೋ ಮರುಳೆ ದೂರ್ವಾಸ ಮುನಿಯಾಗಿ ಅವನಿಪತಿ ಮೊರೆ ಹೊಕ್ಕನಲ್ಲೊ ಭುವನದೊಳಗೆಂದೆಂದು ವ್ರಣದಿಂದ ದುರ್ಗಂಧ ಸ್ರವಿಸುವುದು ಶಿರಸಿನಲ್ಲೀ ಪ್ರಾಣಿ 3 ಇಂದ್ರ ತರ್ಕವನೋದಿ ನರಿಯಾದ ಪರಸತಿ- ಯಿಂದ ಮೇಷ ವೃಷಣನಾಭ ಕಂದರ್ಪ ಶರೀರದಿಂದ ನಾಶನನಾಗಿ ಬಂದ ಮೀನಿನ ಗರ್ಭದಿಂದ ಪ್ರಾಣಿ4 ಸೂರ್ಯ ಚಂದ್ರರ ನೋಡು ಮೂಲ ರೂಪದಿ ಪರ ಭಾರ್ಯರಿಗೆ ಶಿಲುಕಿ ತಮ್ಮಾ ವೀರ್ಯವನು ಕಳಕೊಂಡು ಬರಿದಾದರೋ ಕರ್ಮ- ಕಾರ್ಯ ವಾರಿಗು ಬಿಡದೆಲೋ ಪ್ರಾಣಿ 5 ಪಾವಕನು ಸರ್ವಭಕ್ಷಕನಾದ ಮಿಕ್ಕಾದ ಅವಾವ ಸುರರ ಕರ್ಮಂಗಳ ಯಾವತ್ತು ವರ್ಣಿಸಲಳವಲ್ಲ ಎಚ್ಚತ್ತು ಪಾವನ್ನ ನೀನಾಗೆಲೋ ಪ್ರಾಣಿ 6 ಆವಾವ ಸ್ಥಳದಲ್ಲಿ ಜನನ ಸ್ಥಿತಿಗತಿ ಮತ್ತೆ ಸಾವು ಸಾಕಲ್ಯದಿ ಮರೆಯದಲೆ ಕ್ಲುಪ್ತ ಮಾಡಿಪ್ಪನೋ ಅದನು ಆವನಾದರು ಮೀರಲೊಳÀವೇ ಪ್ರಾಣಿ 7 ಉಣಬೇಕು ಉಣಬೇಕು ಮತ್ತೆ ಉಣಲೀಬೇಕು ತ್ರಿ-ಗುಣ ಕಾರ್ಯರ ಭವಣೆ ಮನುಜ ತೃಣ ಜನ್ಮ ಬಂದ ಕಾಲಕ್ಕು ತ್ರೈತಾಪಗಳು ಅಣುಮಾತ್ರವೂ ತಪ್ಪವೋ ಪ್ರಾಣಿ 8 ಧೀರನಾಗಲಿ ಮಹಾಶೂರನಾಗಲಿ ಮತ್ತೆ ಧಾರುಣೀಪತಿ ಭಾಗ್ಯನಾಗೆ ಆರಿಗಾದರು ಬಿಡದು ಪರೀಕ್ಷಿತರಾಯನು ನೀರೊಳಗಿದ್ದ ತಿಳಿಯೋ ಪ್ರಾಣಿ 9 ಜಲಗಿರಿವನ ಪೊದೆ ಹೊದರು ಗಹ್ವರ ಹುತ್ತ- ಬಿಲ ಸಪ್ತದ್ವೀಪ ಪಾತಾಳದಿ ನಭ ಸ್ವರ್ಗಾದಿಲೋಕ ಜನನಿಯ ಜಠರ- ದೊಳಗಿರೆ ತಪ್ಪುವುದೆ ಬರಹಾ ಪ್ರಾಣಿ 10 ಅಣಿಮಾದಿ ಅಷ್ಟಾಂಗ ಯೋಗ ಮಾಡಲು ಮಹಾ ಗುಣವಂತ ಜನರು ಒಂದು ಕ್ಷಣವ ಮೀರಲುಬಹುದೆ ಮೃತ್ಯು ಬಂದೆದುರಾಗಿ ಸೆಣಸುತಿರೆ ಬೇರುಂಟೆ ಕಾರ್ಯ ಪ್ರಾಣಿ 11 ಎಲ್ಲೆಲ್ಲೆ ಅನ್ನ ಮತ್ತೆಲ್ಲೆಲ್ಲಿ ಉದಕ ಇ- ನ್ನೆಲ್ಲೆಲ್ಲಿ ನಿದ್ರೆ ಜಾಗರಣಿಯೊ ಎಲ್ಲೆಲ್ಲಿ ಹೆಜ್ಜೆಗಳನಿಡುವ ಪರಿಮಿತಿಯುಂಟೊ ಅಲ್ಲಿಲ್ಲಿಗೊಯ್ಯುವುದೊ ಬಿಡದೆ ಪ್ರಾಣಿ 12 ಧಿಕ್ಕಾರ ಸತ್ಕಾರ ನಿಂದೆ ವಂದನೆಗಳು ರೊಕ್ಕಾ ಸುಖ ದುಃಖ ಕಾರಣಗಳು ಉಕ್ಕೇರಿದಂತೆ ಬರುತಿಹುದೊ ನಮ್ಮ ದೇ- ವಕ್ಕಿ ಕಂದನ ಆಜ್ಞಯಿಂದ ಪ್ರಾಣಿ 13 ಕಾಶಿಯಲ್ಲಿರೆ ಮರಣ ಆವಲ್ಲಿ ಇಪ್ಪುದಾ- ದೇಶಕ್ಕೆ ಒಯ್ಯುವುದು ಕಾಲ ಕಾಶಿರಾಯನ ನೋಡು ಒಡನೆ ಅಪಮೃತ್ಯು ವೇದ- ವ್ಯಾಸರಿದ್ದರು ತಪ್ಪಲಿಲ್ಲ ಪ್ರಾಣಿ 14 ಮಾರುತ ಭಾರತಿ ಶೇಷ ಶಿವ ಪಾರ್ವತಿ- ಸರಸಿಜ ಬಾಂಧವಾಗ್ನಿ ಧರ್ಮ ಕಾಲ ಮೃತ್ಯು ಕಾಲನ ದೂತರು ಅರಸುತಿಪ್ಪರು ಲವ ತೃಟಿಯ ಪ್ರಾಣಿ 15 ಇವರಿವರಿಗುತ್ತಮರು ಇವರಿವರಗಧಮರು ಇವರೆಲ್ಲರಿಗೆ ಶ್ರೀ ಭೂಮಿ ದುರ್ಗಾ ಅವಳಿಗೆ ಶ್ರೀ ಹರಿಯು ತಾನೆ ನಿಯಾಮಕನು ವಿವರದಲಿ ತಿಳಿ ತಾರತಮ್ಯ ಪ್ರಾಣಿ 16 ಲಕುಮಿ ಮೊದಲು ಮಾಡಿ ಇವರೆಲ್ಲರಿಗೆ ಲೇಶ ಶಕುತಿಯಿಲ್ಲವೊ ಕಾಣೊ ಮರುಳೆ ಅಕಟಕಟ ಗುಣಪೂರ್ಣ ಸರ್ವ ಸ್ವಾತಂತ್ರ ವ್ಯಾ- ಪಕ ಸರ್ವಾಂತರ್ಯಾಮಿಯೆನ್ನೋ ಪ್ರಾಣಿ 17 ಕರುಣಾ ಕಟಾಕ್ಷವುಳ್ಳನಕ ಸುರ ನರೋರಗ ಯಕ್ಷಲೋಕದಲ್ಲಿದ್ದವರು ಬರಿದೆ ಕೂಗಿದರೇನು ಆಹುದೋ ಪ್ರಾಣಿ 18 ಕಾಲ ತಪ್ಪಿಸಿ ಕಾವ ಹರಿತಾನು ಸಾವ ಕಾಲವ ಮಾತ್ರ ತಪ್ಪಿಸನೋ ಕಾವ ಕೊಲ್ಲುವ ಸ್ವಾಮಿ ಕಾಲನಾಮಕ ಪುರುಷ ಜೀವಿಗಳು ಮುಖ್ಯವಲ್ಲ ಕಾಣೋ ಪ್ರಾಣಿ 19 ಭಗವವÀಸ್ವತಂತ್ರವನು ತಿಳಿಯದೆ ಮರುಳಾಗಿ ಜಗದೊಳಗೆ ಚರಿಸದಿರೊ ಮಾನವ ಅಘ ದೂರನಾಗೊ ನಾನಾ ಬಗೆಯಿಂದಲ- ನ್ಯಗರ ಚಿಂತೆಗಳಲ್ಲಿ ಬಿಟ್ಟು ಪ್ರಾಣಿ 20 ಹಲವು ಮಾತೇನಿನ್ನು ದಾಸಭಾವವ ವಹಿಸಿ ಕಲಿಯುಗದೊಳಗೆ ಸಂಚರಿಸೆಲೊ ಬಲವಂತ ವಿಜಯವಿಠ್ಠಲನ ಪಾದಾಂಬುಜವ ನಿಲಿಸಿ ವಲಿಸಿಕೊ ಮನಸಿನಲ್ಲಿ ಪ್ರಾಣಿ 21
--------------
ವಿಜಯದಾಸ
ಪ್ರಥಮ ಕೀರ್ತನೆಸತ್ಯ ಬೋಧಾರ್ಯರ ವೃತತಿಜಾಂಘ್ರಿಗಳಲ್ಲಿಸತತ ಶರಣಾದೆ ನಾಹಿತದಿ ಪಾಲಿಪರುಪ್ರತತ ಭೂಮಾದಿ ಗುಣಸಿಂಧು ಪುರುಷೋತ್ತಮನವಿತತ ಮನದಲಿ ಧ್ಯಾನಿಸಿ ಒಲಿಸಿಕೊಂಡ ಪಹಂಸನಾಮಕ ವಿಷ್ಣು ವನರುಹಾಸನಸನಕದೂರ್ವಾಸಮೊದಲಾದಗುರುವಂಶಜಾತದಶಪ್ರಮತಿಸರಸಿಜನಾಭನರಹರಿತೀರ್ಥಬಿಸಜಚರಣಂಗಳಲಿ ಸತತ ನಾ ಶರಣು |1ಮಾಧವಅಕ್ಷೋಭ್ಯ ಜಯವಿದ್ಯಾಧಿರಾಜ ರಾ-ಜೇಂದ್ರ ಕವೀಂದ್ರವಾಗೀಶರಾಮಚಂದ್ರವಿಭುದೇಂದ್ರ ವಿದ್ಯಾನಿಧಿಗಳು ಈ ಸರ್ವಸತಪೋನಿಧಿ ಯತಿವರ್ಯರಿಗೆ ನಮಿಪೆ 2ವೇದಾಂತ ಕೋವಿದರು ರಘುನಾಥ ರಘುವರ್ಯಪದವಾಕ್ಯತತ್ವಜÕ ರಘೂತ್ತಮಾರ್ಯರಿಗೆವೇದವ್ಯಾಸ ಯತಿಗಳಿಗೆ ವಿದ್ಯಾಧೀಶರಿಗೆವೇದನಿಧಿಗಳಿಗೆ ನಾ ಬಾಗುವೆ ಶಿರವ 3ಸತ್ಯವ್ರತ ಸತ್ಯನಿಧಿ ಸತ್ಯನಾಥರಿಗೆಸತ್ಯಭಿನವ ಸತ್ಯ ಪೂರ್ಣರಿಗೆ ನಮಿಪೆಸತ್ಯವಿಜಯರಿಗೆ ಸತ್ಯಪ್ರಿಯ ಸತ್ಯಬೋಧರಿಗೆಭೃತ್ಯನಾ ಎನ್ನ ವಂದನೆಗಳರ್ಪಿಸುವೆ4ಸತ್ಯಬೋಧರ ಮಹಿಮೆ ಬಹು ಬಹು ಬಹುಳವುವೇದ್ಯ ಎನಗೆ ಅತಿ ಸ್ವಲ್ಪ ಮಾತ್ರಆದರಲ್ಲೂ ಬಿಟ್ಟದ್ದು ಬಹು ಇಲ್ಲಿ ಪೇಳಿಹುದುಅತಿ ಕಿಂಚಿತ್ ಅಣುಮಾತ್ರ ಸುಜನರು ಲಾಲಿಪುದು 5ರಾಮಾಚಾರ್ಯರು ಸಣ್ಣ ವಯಸ್ಸಿನವರುನೇಮದಿಂದಾಶ್ರಮೋಚಿತ ಕರ್ಮಪರರುರಾಮ ಹಯಶೀರ್ಷ ನರಸಿಂಹನ ಗುಣರೂಪಸಮ್ಮುದದಿ ಜ್ಞಾನಭಕ್ತಿಯಲಿ ಧ್ಯಾನಿಪರು 6ಈ ರಾಯಚೂರು ರಾಮಾಚಾರ್ಯರೇ ಸತ್ಯಪ್ರಿಯಗುರುಗಳ ಸಂಸ್ಥಾನ ಪೀಠಕ್ಕೆ ಬಂದುಸೂರಿವರ್ಯರು ಸತ್ಯಬೋಧ ತೀರ್ಥರು ಎಂದುಧರೆಯಲ್ಲಿ ಪ್ರಖ್ಯಾತರಾಗಿಹರು ಕರುಣಿ 7ಬಾದರಾಯಣಮಾಧ್ವ ಸಚ್ಛಾಸ್ತ್ರ ಬೋಧಿಸಿಅಧಿಕಾರಿಗಳ ಉದ್ಧರಿಸಿ ಅಲ್ಲಲ್ಲಿವೇದ ವಿರುದ್ದ ದುರ್ವಾದಗಳ ಕತ್ತರಿಸಿಮೇದಿನಿಸಜ್ಜನರ ಪೊರೆದಂಥ ಧೀರ 8ಪೀಠ ಆರೋಹಿಸಿದ ಪೂರ್ವಗುರುಗಳ ಪೋಲುಮಠಕ್ಕೆ ಮಾನ್ಯಗಳ ಅಭರಣಗಳನ್ನಪಟ್ಟಣ ಪ್ರಮುಖರು ಧನಿಕರು ಭೂಪಾಲರುಕೊಟ್ಟದ್ದು ಅಲ್ಲಲ್ಲಿ ಸ್ವೀಕರಿಸಿದರು 9ಸತ್ಯಪ್ರಿಯರಾರಾಧನೆಗಾಗಿ ಬಂದಿದ್ದಸತ್ಯಬೋಧರ ಮಹಿಮೆಯನ್ನು ಲೆಕ್ಕಿಸದೆಬಂಧಿಸಿದ ಶ್ರೀಮಠವ ರಾಮೇಶ್ವರ ರಾಜಬಂತು ಸೈನ್ಯವು ತಿರುಚಿನಾಪಳ್ಳಿಯಿಂದ 10ತಿರುಚಿನಾಪಳ್ಳಿಯಿಂದ ಜಾನೋಜಿರಾವ್ ನಿಂಬಳ್ಕಾರನು ಸೈನ್ಯವನು ಕಳುಹಿಸಿದನುವಿರೋಧ ಬಿಡುಗಡೆ ಮಾಡಿ ಆ ರಾಜನ್ನ ಶಿಕ್ಷಿಸಿಗುರುಗಳ ಕರೆತಂದ ತಿರುಚಿನಾಪಳ್ಳಿಗೆ 11ತಿರುಚಿನಾಪಳ್ಳಿಯ ಮ್ಲೇಛ್ಬರಾಜನು ಈಗುರುಗಳ ಪ್ರಭಾವವ ಅರಿಯದೆ ಮೌಢ್ಯದಲಿವರಧನಾಪಹಾರಿಯು ಎಂದು ಆಪಾದಿಸಿನಿರೋಧಿಸಿದ ಶೋಧನೆ ಮಾಡುವ ನೆವದಿ 12ಪರಿಶೋಧನೆಯಲ್ಲಿ ಮೈಲಿಗೆ ಆಗದಿರೆಗುರುಗಳು ರಾಮದೇವರ ಪೆಟ್ಟಿಗೆಯತಿರುಕಾಟ್ಟು ಪಳ್ಳೀಗೆ ಕಳುಹಿಸಿ ಉಪೋಷಣದಿಹರಿಯ ಮಾನಸ ಪೂಜೆ ಮಾಡುತ ಕುಳಿತರು 13ಜಾನೋಜಿರಾಯನು ವಾದಿಸೆ ಸುಲ್ತಾನತನ್ನ ಸರ್ಕಾರ ಶೋಧಕರ ಕಳುಹಿಸಿದತನ್ನ ಹಿರಿಯರ ಮತ್ತು ಇತರ ರಾಜರುಗಳಚಿಹ್ನೆ ಮುದ್ರಿತ ಒಡವೆ ಮಾತ್ರವೆ ಕಂಡ 14ವಿರೋಧ ನೀಗಿಸಿ ನಿಂಬಳ್ಕರನ ಕೈಯಿಂದಹರಿಪೂಜೆಗುರುಪೂಜೆ ಮಾಡಿಸಿ ಕಾಣಿಕೆಯುಗುರುತರದಿ ಅರ್ಪಿಸಿದ ಆ ಮ್ಲೇಛ್ಭರಾಜನುಗುರುಸತ್ಯಬೋಧರ ಕೀರ್ತಿವರ್ಧಿಸಿತು15ತಿರುಕಾಟ್ಟುಪಳ್ಳಿಯಿಂದಲಿ ಪೂಜೆ ಪೆಟ್ಟಿಗೆಯತರಿಸಿ ಹರಿಪೂಜೆಯ ಮಾಡಿ ಮುದದಿಂದಮರ್ಯಾದೆ ಕಾಣಿಕೆಗಳಕೊಂಡು ದಿಗ್ವಿಜಯಚರಿಸಿದರು ಹರಿಗುರು ತೀರ್ಥಸ್ಥಳಗಳಿಗೆ 16ಮಾರ್ಗದಲಿ ತಂಜಾವೂರಿನ ರಾಜನುಶ್ರೀ ಗುರುಗಳಿಗೆ ಸೇವೆಸÀಲ್ಲಿಸಿದನಗರದಲಿ ಪ್ರಮುಖಪಂಡಿತಗೋಸಾಯಿಯನಿಗಮಾಂತ ವಾದದಲಿ ಸೋಲಿಸಿದರು 17ಕುಂಭಕೋಣದಿ ಬ್ರಾಹ್ಮಣರ ಬೀದಿಯಲ್ಲಿಗಂಭೀರತರ ದೊಡ್ಡ ಮಂಟಪಕಟ್ಟಿಸಂಭ್ರಮದಿ ಹರಿಪೂಜೆಗೈದು ವಿದ್ವಜ್ಜನಸಭೆಯಕೂಡಿ ವಾಕ್ಯಾರ್ಥ ನಡೆಸಿದರು 18ಶ್ರೀರಂಗ ಕ್ಷೇತ್ರ ತಂಜಾವೂರು ತರುವಾಯಸಾರಂಗಪಾಣಿ ಕುಂಭೇಶ್ವರ ಕ್ಷೇತ್ರಪರಿಕಲ್ಲು ತಿರುಕೋಯಿಲೂರು ಮಾರ್ಗದಿ ಬಂದುಸೇರಿದರು ತಿರುಪತಿ ವೇಂಕಟಾಚಲಕ್ಕೆ 19ಶ್ರೀರಂಗನಾಥನಿಗೆ ಶ್ರೀರಂಗನಾಯಕಿಗೆಕ್ಷೀರಾಬ್ಧಿಯಲಿತೋರ್ದ ಧನ್ವಂತರಿಗೆನೀರುಮಧ್ಯದಿ ಇರುವ ಜಂಬುಕೇಶ್ವರನಿಗೆಭಾರಿ ಪುಣ್ಯದೆ ಕಾವೇರಿಗೆ ನಮಿಪೆ 20ಶಾಙ್ರ್ಗಧರಚಕ್ರಧರಕುಂಭೇಶ್ವರಅಂಬಮಂಗಳನಾಯಕಿ ವಿಜಯೀಂದ್ರರಿಗೆನಾಗೇಶ್ವರನಿಗೆ ವಿದ್ಯುಪುರಿ ಶ್ರೀಶನಿಗೆಭೃಗುಸುತಪತಿ ಶ್ರೀನಿವಾಸನಿಗೆ ನಮಿಪೆ 21ಪರಿಕಲ್ಲು ಎಂಬುವ ಗ್ರಾಮದಲಿ ನರಸಿಂಹಶ್ರೀರಮಾಪತಿ ಇಹನು ಸರ್ವೇಷ್ಟದಾತಪರಿಪರಿ ಭಕ್ತರ ಪೀಡೆಗಳ ಪರಿಹರಿಪಶರಣಾದೆ ಶ್ರೀ ಲಕ್ಷ್ಮಿ ನರಸಿಂಹನಲ್ಲಿ 22ತಿರುಕೋಯಿಲೂರಲ್ಲಿ ಮೂರ್ಲೋಕ ಅಳೆದವನಭಾರಿಆಲಯಉಂಟು ಶಿವಕುಮಾರರಿಗೂಪಾತ್ರ ವಿಶಾಲವು ದಕ್ಷಿಣ ಪಿನಾಕಿನಿಯತೀರದಲಿ ಶ್ರೀರಘೂತ್ತಮರು ಕುಳಿತಿಹರು 23ಪಿನಾಕಜಾ ಈ ಪಿನಾಕಿಯಲ್ಲಿಹನುಅನಿಮಿತ್ತ ಬಂಧುಶ್ರೀಕೇಶವ ಸರ್ವೇಶಸ್ನಾನ ಜಪದಾನಗಳು ಪಣ್ಯಪ್ರದತತ್ತೀರವನದಲ್ಲಿ ಶ್ರೀ ರಘೂತ್ತಮರ ವೃಂದಾವನ 24ಶ್ರೀಯುತ ತ್ರಿವಿಕ್ರಮ ವಿಶ್ವರೂಪಗೆ ನಮೋಕಾತ್ಯಾಯನಿ ಶಿವಗೂ ಸ್ಕಂಧವಲ್ಲಿಗೂಕಾಯವಾಕ್ಕು ಮನದಿ ಟೀಕಾಭಾವಬೋಧರಿಗೂಕಾಯಮನ ಶುದ್ಧಿಕರ ಪಿನಾಕಿನಿಗೂ ನಮಿಪೆ 25ತಿರುಕೋಯಿಲೂರಿಗೆ ಕ್ರೋಶತ್ರಯದೊಳಗೇವೆವೀರ ಚೋಳಪುರದಲ್ಲಿ ಶ್ರೀ ಸತ್ಯನಾಥತೀರ್ಥರು ಅಭಿನವ ಚಂದ್ರಿಕಾಕಾರರುಇರುತಿಹರು ವೃಂದಾವನದಲ್ಲಿ ವಂದೇ 26ತಿರುಕೋಯಿಲೂರಿಂದ ತಿರುವಣ್ಣಾಮಲೆಯೆಂಬಅರುಣಾಚಲಕೆ ಪೋಗಿ ಅಲ್ಲಿ ರಾಜಿಸುವಕರುಣಾಬ್ಧಿ ಗಿರಿಜಾರಮಣನ್ನ ವಂದಿಸಿತಿರುಪತಿಗೆ ಹೊರಟರು ಗುರುಸರ್ವಭೌಮ 27ಹೇಮಗರ್ಭನತಾತಶ್ರಿಪತಿ ಜಗನ್ನಾಥಆಮಲಗುಣಗಣಸಿಂಧು ಪ್ರಸನ್ನ ಶ್ರೀನಿವಾಸರಾಮ ಹಯಮುಖವ್ಯಾಸನೃಹರಿಗೆ ಪ್ರಿಯತಮರೆನಿಮ್ಮಲ್ಲಿ ಶರಣಾದೆ ಸತ್ಯಬೋಧಾರ್ಯ 28 ಪ
--------------
ಪ್ರಸನ್ನ ಶ್ರೀನಿವಾಸದಾಸರು
ಪ್ರಸನ್ನ ಶ್ರೀಪಾದರಾಜರ ಅಣು ಚರಿತೆ103ಪ್ರಥಮ ಕೀರ್ತನೆಶ್ರೀ ಪಾದರಾಜಗುರು ಸಾರ್ವಭೌಮರಪಾದನಾಪೊಂದಿ ಶರಣಾದೆ ಎಮ್ಮ ಪಾಲಿಪರುಶ್ರೀಪ ನರಹರಿಶಿಂಶುಮಾರಹಯಮುಖರಾಮಗೋಪಿವಲ್ಲಭ ರಂಗ ಒಲಿದಿಹಮಹಂತಪಶ್ರೀ ಹಂಸ ಲಕ್ಷ್ಮೀಶನಾಭಿಭವಸನಕಾದಿಮಹಂತದೂರ್ವಾಸಾದಿಗಳಗುರುಪರಂಪರೆಯಮಹಾಪುರುಷೋತ್ತಮ ದಾಸ ಶ್ರೀ ಮಧ್ವವನ -ರುಹಪಾದಗಳಲಿನಾ ಶರಣು ಶರಣಾದೆ1ಕಲಿಯುಗದಿ ಸಜ್ಜನರು ದುರ್ಜನರ ದುಸ್ತರ್ಕಕಲುಷವಾದಗಳಲ್ಲಿ ಮನಸೋತು ಪೋಗೆಳಾಳುಕನ ಪರಮಪ್ರಸಾದ ಹೊಂದುವ ಜ್ಞಾನಇಳೆಯಲಿ ಮಧ್ವ ಬೋಧಿಸಿದ ಅವತರಿಸಿ 2ಭಾರತೀಪತಿ ವಾಯು ಭಾವಿ ಬ್ರಹ್ಮನೇ ಮಧ್ವಹರಿಆಜÉÕಯಲಿ ಸುಜನರನುದ್ದರಿಸೆ ಜನಿಸಿಪರಮಸತ್ತತ್ವವಾದ ಅರುಪಿ ಬದರಿಗೆತೆರಳಿದನು ತತ್‍ಪೂರ್ವ ಶಿಷ್ಯರ ನೇಮಿಸಿದ್ದ 3ವೈದಿಕ ಸದಾಗಮದಿ ಬೋಧಿತ ತಾತ್ವಿಕದ್ವೈತ ಸಿದ್ಧಾಂತದ ಆದಿಗುರು ಮಧ್ವಬದರಿಗೆ ತೆರಳಲು ಶ್ರೀಪದ್ಮನಾಭ-ತೀರ್ಥರಾರೋಹಿಸಿದರು ಮಧ್ವಮಠ ಪೀಠ 4ಈ ಆದಿಮಠಗುರುಪರಂಪರೆಯು ನರಹರಿತೀರ್ಥ ಮಾಧವತೀರ್ಥ ಅಕ್ಷೋಭ್ಯ ತೀರ್ಥಮಾಧ್ವಗ್ರಂಥಗಳಿಗೆ ಟೀಕೆಯ ಬರೆದಿರುವಜಗತ್‍ಪ್ರಖ್ಯಾತ ಜಯತೀರ್ಥ ಸಾಧು ಮುನಿವರ್ಯ 5ವಿದ್ಯಾಧಿರಾಜರು ಜಯತೀರ್ಥಜಾತರುವರ್ಧಿಸಿದರು ಈ ಆದಿ ಮಠವನ್ನಆದಿಮಠ ಭಿನ್ನಾಂಶ ಮಠಗಳುಪಂಕಜನಾಭಮಾಧವಾಕ್ಷೋಭ್ಯರಿಂ ಪುಟ್ಟಿ ಇಹುದು 6ಪದುಮನಾಭಾದಿ ಈ ಸರ್ವ ಗುರುಗಳಿಗೆ ನಾಆದರದಿ ಶರಣಾದೆ ಸಂತೈಪರೆಮ್ಮಪದುಮನಾಭರು ತಾವೇ ಸ್ಥಾಪಿಸಿದ ಮಠದಲ್ಲಿಮೊದಲನೇಯವರು ಶ್ರೀ ಲಕ್ಷ್ಮೀಧರರು 7ಶ್ರೀ ಲಕ್ಷ್ಮೀಧರ ತೀರ್ಥ ಸೂರಿಗಳ ವಂಶಜರುಮಾಲೋಲ ಶ್ರೀರಂಗನಾಥನ ಪ್ರಿಯಶೀಲ ಯತಿವರ ಸ್ವರ್ಣವರ್ಣತೀರ್ಥರುಅವರಜಲಜಕರಜಾತ ಶ್ರೀಪಾದರಾಜಾರ್ಯ 8ಶ್ರೀಲಕ್ಷ್ಮೀಧರ ತೀರ್ಥ ಮೊದಲಾದ ಸರ್ವರಕಾಲಿಗೆ ಎರಗುವೆ ಕರುಣಾಶಾಲಿಗಳುಶ್ರೀ ಲಕ್ಷ್ಮೀನಾರಾಯಣಾರ್ಯರ ಪ್ರಭಾವವುಬಲ್ಲನೆ ನಾನು ವರ್ಣಿಸಲು ಘನತರವು 9ಯತಿರಾಜರಿವರ ಮಹಿಮೆ ಬಹು ಬಹು ಬಹಳವೇದ್ಯ ಎನಗೆ ಅತಿ ಸ್ವಲ್ಪವೇವೇಅದರಲ್ಲೂ ಬಿಟ್ಟಿದ್ದು ಇಲ್ಲಿ ಪೇಳಿಹುದುಅತಿಕಿಂಚಿತ್ ಅಣುಮಾತ್ರ ಸುಜನರು ಆಲಿಪುದು 10ಕನ್ನಡ ಪ್ರದೇಶದಲಿ ಮಹಿಸೂರು ರಾಜ್ಯದಲಿಚೆನ್ನಪಟ್ಟಣಕೆರಡು ಕ್ರೋಶದೊಳಗೇವೇಸಣ್ಣ ಗ್ರಾಮವು ಅಬ್ಬೂರು ಎಂಬುದುಂಟುಕಣ್ವತೀರ್ಥಾಭಿಧ ಪುಣ್ಯನದೀತೀರ 11ವಿದ್ಯಾಧಿರಾಜರ ಕರಕಮಲೋತ್ಪನ್ನರುವೇದ ವೇದಾಂತ ಕೋವಿದರುಗಳು ಈರ್ವರುವಿದ್ಯಾಧಿರಾಜ ಈರ್ವರಲಿ ಪೂರ್ವಜರುವಾದಿಗಜ ಸಿಂಹ ರಾಜೇಂದ್ರ ಯತಿವರರು 12ರಾಜೇಂದ್ರ ತೀರ್ಥಜ ಜಯಧ್ವಜರಹಸ್ತಕಂಜಸಂಜಾತ ಪುರುಷೋತ್ತಮ ತೀರ್ಥರುರಾಜರಾಜೇಶ್ವರ ಪಟ್ಟಾಭಿರಾಮನ್ನಪೂಜಿಸುತ ಇದ್ದರು ಅಬ್ಬೂರಿನಲ್ಲಿ 13ಪುರುಷೋತ್ತಮಾರ್ಯರ ಮಹಿಮೆ ನರರಿಂದಅರಿವುದಕೆಸಾಕಲ್ಯಶಕ್ಯವು ಅಲ್ಲಶಿರಿವರನ ಪೂರ್ಣಾನುಗ್ರಹಕೆ ಪೂರ್ಣಪಾತ್ರರಾಗಿಹ ಈ ಕರುಣಿಗೆ ಶರಣು 14ಘೃಣಿಸೂರ್ಯಆದಿತ್ಯ ತೇಜಸ್ಸಲಿ ಬೆಳಗುವವಿನಯ ಸಂಪನ್ನ ಸುಬುದ್ಧಿಮಾನ್ ಬಾಲನ್ನತನ್ನ ಬಳಿ ಕರೆತರಿಸಿ ಬ್ರಹ್ಮಣ್ಯ ತೀರ್ಥಾಖ್ಯಅನಘನಾಮವನಿತ್ತುಪ್ರಣವಉಪದೇಶಿಸಿದರು15ವಾಜಿವಕ್ತ್ರನು ನರಸಿಂಹ ವಿಠಲನುಯಜÕವರಾಹಶ್ರೀರಾಮ ಯದುಪತಿಯಪೂಜಿಸುವ ಬಗ್ಗೆ ಮತ್ತೂಬ್ರಹ್ಮ ವಿದ್ಯಾ ಮಧ್ವಸಚ್ಛಾಸ್ತ್ರ ಬೋಧಿಸುತ್ತಿಹರು ಬ್ರಹ್ಮಣ್ಯರ್ಗೆ 16ಪುರುಷೋತ್ತಮರನ್ನ ಕಾಣಲು ಅಬ್ಬೂರನ್ನಕುರಿತು ಬರುತಿಹರು ಸ್ವರ್ಣವರ್ಣತೀರ್ಥರು ಆಗ ಸಾಯಂಕಾಲ ಇನ್ನೆಷ್ಟುದೂರವೋ ಎಂದು ಶಂಕಿಸಿದರು ಮನದಿ 17ಮಾರ್ಗದಲಿ ದನಗಳ ಮೇಸುವ ಬಾಲಕರೊಳುಅಕಳಂಕ ವರ್ಚಸ್ವಿ ಹುಡುಗ ಓರ್ವನ್ನತಾ ಕಂಡು ಪಲ್ಲಕ್ಕಿ ನಿಲ್ಲಿಸಿ ಕೇಳಿದರುಶ್ರೀಗಳು ಗ್ರಾಮಕ್ಕೆ ದೂರ ಎಷ್ಟೆಂದು 18ಅಹಸ್ಪ್ರಾಂತ ಗಗನಸ್ಥಸೂರ್ಯನ್ನ ನೋಡಿಬಹು ಸಣ್ಣ ವಯಸ್ಸಿನ ಎನ್ನನ್ನು ನೋಡಿಅಹಂಮಾಎಂದು ಕೂಗೋ ಧೇನುಗಳ ನೋಡಿಬಹು ಸಮೀಪವು ಗ್ರಾಮ ಎಂದು ಸೂಚಿಸಿದ 19ಕುಶಾಗ್ರ ಬುದ್ಧಿಯ ಸೂಕ್ಷ್ಮತ್ವವ ನೋಡಿಆ ಸ್ವಾಮಿಗಳಿಗೇ ಈ ಹುಡುಗ ಯಾರೆಂದುಭಾಸವಾಗಿ ಲೋಕರೀತಿಯಲಿ ಕೇಳಿದರುಹೆಸರು ಏನು ಯಾರ ಮಗ ಮನೆ ಎಲ್ಲಿ 20ನಮಿಸಿ ಸ್ವಾಮಿಗಳಿಗೆ ಕರಮುಗಿದು ಪೇಳಿದಅಮ್ಮಗಿರಿಯಮ್ಮನು ತಂದೆಯು ಶೇಷಗಿರಿಲಕ್ಷ್ಮೀನಾರಾಯಣಾಭಿದನು ತಾನೆಂದುಸಮೀಪಸ್ಥ ಹೊಲದಲ್ಲಿ ಮನೆಯ ತೋರಿಸಿದ 21ಕ್ರಮದಿ ಬರೆ ಓದುವಿದ್ಯೆಕಲಿಯದಿದ್ದರೂಸೂಕ್ಮ ಬುದ್ಧಿ ದೇಹಕಾಂತಿ ಮುಖ ವರ್ಚಸ್ಸಸುಮಹಾ ಪೂರ್ವಸಾಧನದಿ ಎಂದರಿತರುಈ ಮಹಾ ಸೂರಿವರ್ಯರು ಶ್ರೀಸ್ವಾಮಿಗಳು 22ಅಬ್ಬೂರು ಸೇರಿ ಪುರುಷೋತ್ತಮರ ಕೈಯಿಂದಉಪಚಾರಗಳನ್ನು ಕೊಂಡು ಬಾಲತಪೋನಿಧಿ ಬ್ರಹ್ಮಣ್ಯರ ಕಂಡು ಅವರಂತೆಒಬ್ಬ ಬಾಲನು ತಮಗೂ ಬೇಕೆಂದರು 23ತಥಾಸ್ತು ಎನ್ನುತಲಿ ಪುರುಷೋತ್ತಮರತಂದೆ ತಾಯಿಗಳನ್ನು ಕರೆತರಿಸಿ ಬೇಗಮುದದಿ ಮಾಡಿದರು ಲಕ್ಷ್ಮೀನಾರಾಯಣಗೆವೇದಾಧಿಕಾರ ಬರುವಂಥ ಉಪನಯನ 24ಬಹ್ಮೋಪದೇಶಾದಿ ಮಂತ್ರೋಪದೇಶಗಳುವಿಹಿತ ರೀತಿಯಲ್ಲಿ ಆದ ತರುವಾಯಬ್ರಹ್ಮಚಾರಿ ಆ ಬಾಲಕನಿಗೆ ಸಂನ್ಯಾಸಮಹಾಪ್ರಣವಉಪದೇಶ ಕೊಟ್ಟರು ಗುರುವು25ಗುರುಸ್ವರ್ಣವರ್ಣ ತೀರ್ಥರು ವಾತ್ಸಲ್ಯವಎರೆಯುತ್ತ ಲಕ್ಷ್ಮೀನಾರಾಯಣ ತೀರ್ಥಆಶ್ರಮೋಚಿತ ನಾಮ ಕೊಟ್ಟು ಬಾಲನ್ನಸೇರಿಸಿಕೊಂಡರು ತಮ್ಮ ಪರಂಪರೇಲಿ 26ಹಿಂದೆ ಶೇಷಗಿರಿಯಪ್ಪ ಗಿರಿಯಮ್ಮ ದಂಪತಿಯಕಂದನು ದನ ಮೇಸೋ ಲಕ್ಷ್ಮೀನಾರಾಯಣಇಂದುಲಕ್ಷ್ಮೀನಾರಾಯಣ ತೀರ್ಥರಾಗಿವೇದಾಂತ ಸಾಮ್ರ್ರಾಜ್ಯ ಯುವರಾಜನಾದ 27ವಿದ್ಯಾಧಿ ರಾಜ ರಾಜೇಂದ್ರ ಜಯಧ್ವಜ ಪುರು -ಷೋತ್ತಮ ಬ್ರಹ್ಮಣ್ಯರಿಗೆ ನಮೋ ಲಕ್ಷ್ಮೀಧರಾದಿ ಗುರುಗಳಿಗೂ ಸುವರ್ಣವರ್ಣರಿಗೂಸದಾ ನಮೋ ಲಕ್ಷ್ಮಿನಾರಾಯಣ ತೀರ್ಥರಿಗೂ 28ರಾಜೀವಭವಪಿತ ರಾಜರಾಜೇಶ್ವರನುರಾಜೀವಾಲಯ ಪತಿಯ ಪ್ರಸನ್ನ ಶ್ರೀನಿವಾಸಪ್ರಜ್ವಲಿಸುತಿಹ ಮಧ್ವರಾಜ ಸಹ ಶ್ರೀಪಾದರಾಜರೊಳು ಇವರಲ್ಲಿ ಶರಣು ಶರನಾದೆ 29 ಪ-ಪ್ರಥಮ ಕೀರ್ತನೆ ಸಂಪೂರ್ಣಂ-ದ್ವಿತೀಯಕೀರ್ತನೆಶ್ರೀ ಪಾದರಾಜಗುರು ಸಾರ್ವಭೌಮರಪಾದನಾಪÉÇಂದಿ ಶರಣಾದೆ ಎಮ್ಮ ಪಾಲಿಪರುಶ್ರೀಪ ನರಹರಿಶಿಂಶುಮಾರಹಯಮುಖರಾಮಗೋಪೀವಲ್ಲಭ ರಂಗ ಒಲಿದಿಹಮಹಂತಪಸ್ವರ್ಣವರ್ಣರೂ ಲಕ್ಷ್ಮೀನಾರಾಯಣರಿಗೆಆಮ್ನಾಯನಿಗಮಾಂತ ವಿದ್ಯೆಗಳ ಕಲಿಸೆಘನಮಹಾಪಾಂಡಿತ್ಯ ಪ್ರೌಢಿಮೆಯನು ಹೊಂದಿಸಣ್ಣ ಯತಿ ಪ್ರಖ್ಯಾತರಾದರು ಜಗದಿ 1ವಿಭುದೇಂದ್ರ ರಘುನಾಥ ಮೊದಲಾದ ಯತಿವರರುಈ ಬಾಲಯತಿಯ ಪಾಂಡಿತ್ಯ ಪ್ರಭಾವವಬಹು ಬಹು ಶ್ಲಾಘಿಸಿ ರಘುನಾಥರಿವರಿನ್ನ'ಶ್ರೀಪಾದ ರಾಜರು&ಡಿsquo; ಎಂದು ವರ್ಣಿಸಿದರು 2ಅಂದಿನಾರಭ್ಯ ಈ ಲಕ್ಷ್ಮೀ ನಾರಾಯಣರಮಂದಿಗಳು ವಿದ್ವಜ್ಜನರು ಸಜ್ಜನರು'ಆನಂದ ಉತ್ಸಾಹದಿ ಶ್ರೀಪಾದರಾಜ&ಡಿsquo;ರೆಂದು ಕರೆಯುವುದು ಅದ್ಯಾಪಿ ಕಾಣುತಿದೆ 3ರಂಗಕ್ಷೇತ್ರಕೆ ಬಂದು ಶ್ರೀ ಪಾದರಾಜ ಸಹರಂಗನಾಥನ್ನ ಕಂಡು ಸ್ಥಾಪಿಸಿ ಮಠವಭಂಗವಿಲ್ಲದೇ ಪೂಜಾ ಪ್ರವಚನವ ಗೈಯುತ್ತತುಂಗಯತಿ ಸ್ವರ್ಣವರ್ಣರು ಕುಳಿತರಲ್ಲೇ 4ವರುಷಗಳು ಜರಗಿತು ಶ್ರೀಪಾದರಾಜರುಊರು ಊರಿಗೆ ದಿಗ್ವಿಜಯವ ಮಾಡುತ್ತಪರಪಕ್ಷ ಕುಮತಗಳ ಛೇದಿಸಿ ಸತ್ತತ್ವಆರುಪಿದರು ಯೋಗ್ಯಾಧಿಕಾರಿಗಳಿಗೆ 5ಮುಳಬಾಗಿಲು ಎಂದು ಆಧುನಿಕರು ಕರೆವಂಥಒಳ್ಳೇ ಕ್ಷೇತ್ರಕ್ಕೆ ಬಂದು ಮಠದಲ್ಲಿ ಇರುತ್ತಬಾಲಕರು ವೃದ್ಧರು ಯತಿಗಳಿಗೂ ಸದ್ವಿದ್ಯಾಕಲಿಸುತ್ತಿದ್ದರು ತಾವೇ ಪಾಠ ಹೇಳುತ್ತಾ 6ಮುಳಬಾಗಿಲು ಕ್ಷೇತ್ರದಲ್ಲಿ ಹನುಮಂತಶ್ರೀ ಲಕ್ಷ್ಮೀಪತಿಯನ್ನು ಸೇವಿಸುತ ಇಹನುಬಾಲೇಂದು ಶೇಖರನು ಗಿರಿಜಾ ಸಮೇತಶೈಲ ತೋಟಗದ್ದೆ ಅಟವಿಗಳು ಇಹವು 7ಊರಿಗೆ ಕ್ರೋಶ ಮಾತ್ರದಿ ಇರುವ ಸ್ಥಳದಲಿವರಮಧ್ವಸಿದ್ಧಾಂತ ಜಯ ಶಿಲಾ ಲಿಖಿತಇರುವುದು ಅದ್ಯಾಪಿ ಕಾಣ ಬಹುದು ಅಲ್ಲೇಭಾರಿತರ ವಾದವು ನಡೆಯಿತು ಹಿಂದೆ 8ಶ್ವೇತಕೇತು ಉದ್ದಾಲಕರ ಸಂವಾದತತ್ವಮಸಿ ವಾಕ್ಯವೇ ವಾದ ವಿಷಯವಾದಿಸಿದರು ವಿದ್ಯಾರಣ್ಯ ಅಕ್ಷೋಭ್ಯರುವೇದಾಂತ ದೇಶಿಕರ ಮಧ್ಯಸ್ಥ ತೀರ್ಮಾನ 9ಛಾಂದೋಗ್ಯ ಉಪನಿಷತ್ತಲಿರುವ ವಾಕ್ಯಸ ಆತ್ಮಾ ತತ್ವಮಸಿ ಎಂಬುವಂಥಾದ್ದುಭೇದ ಬೋಧಕವೋ ಅಭೇದ ಬೋಧಕವೋಎಂದು ವಾದವು ಆ ಈರ್ವರಲ್ಲಿ 10ಆತ್ಮ ಶಬ್ದಿತ ನಿಯಾಮಕಗೂ ನಿಯಮ್ಯ ಜೀವನಿಗೂಭೇದವೇ ಬೋಧಿಸುವುದು ಆ ವಾಕ್ಯವೆಂದುಸಿದ್ಧಾಂತ ಅಕ್ಷೋಭ್ಯರು ಸ್ಥಾಪಿಸಿದರುಸೋತಿತು ವಿದ್ಯಾರಣ್ಯರ ಐಕ್ಯವಾದ 11ಮಧ್ಯಸ್ಥರಾಗಿದ್ದ ವೇದಾಂತ ದೇಶಿಕರುವಿದ್ಯಾರಣ್ಯ ಎಂಬುವ ಮಹಾರಣ್ಯವತತ್ವಮಸಿ ಅಸಿಯಿಂದ ಅಕ್ಷೋಭ್ಯರುಛೇದಿಸಿದರೆಂದು ಬರೆದಿಹರು ತಮ್ಮ ಗ್ರಂಥದಲಿ 12ಶ್ರೀಪಾದರಾಜರ ಮಠವು ಆ ಸ್ಥಳಕೆಸಮೀಪವೇ ಅಲ್ಲುಂಟು ನರಸಿಂಹ ತೀರ್ಥಸುಪವಿತ್ರತ್ರ್ಯೆ ಲೋಕ್ಯಪಾವನೆಗಂಗಾಸುಪ್ರಸನ್ನಳು ಇಲ್ಲಿ ತೋರಿಹಳು ಸ್ಮರಿಸೇ 13ದಿಗ್ವಿಜಯ ಕ್ರಮದಲ್ಲಿ ಕಾಶೀ ಪಂಢರೀಪುರಮುಖ್ಯ ಕ್ಷೇತ್ರಗಳಿಗೆ ಪೋಗಿ ಅಲ್ಲಲ್ಲಿಭಗವಂತ ಶ್ರೀಪತಿಯ ಒಲಿಸಿಕೊಳ್ಳುವಮಾರ್ಗಭಾಗವತಧರ್ಮ ಸಚ್ಛಾಸ್ತ್ರ ಬೋಧಿಸಿದರು14ಅಲ್ಲಲ್ಲಿ ವಾದಿಸಿದುರ್ವಾದಿಕುಮತಿಗಳಸುಳ್ಳು ಸೊಲ್ಲುಗಳನ್ನು ಬಳ್ಳಿಗಳ ತೆರದಿಸೀಳಿ ಛೇದಿಸಿ ಸ್ಥಾಪಿಸಿದರು ಮಧ್ವಮತಶೀಲತ್ವ ಔನ್ನತ್ಯ ವೇದ ಸನ್ನತಿಯ 15ಅಬ್ಬೂರಲ್ಲಿ ಶ್ರೀ ಸ್ವರ್ಣವರ್ಣ ತೀರ್ಥರುಶ್ರೀ ಪುರುಷೋತ್ತಮ ತೀರ್ಥರ ಕೈಯಿಂದಸುಪ್ರೌಢ ಪಾಂಡಿತ್ಯ ಹೊಂದಿ ಪೀಠವ ಏರಿಪರಿಪಾಲಿಸುತ್ತಿದ್ದರು ಯತಿ ಧರ್ಮ 16ಮಹಾಮಹಿಮ ಶ್ರೀ ಪರುಷೋತ್ತಮರು ತಮ್ಮಯಗುಹೆಯೊಳು ಕುಳಿತರು ಏಕಾಗ್ರ ಚಿತ್ತದಲಿಮಹಾರ್ಹ ಕೇಶವನ ಆರಾಧಿಸುತಿಹರುಬಾಹ್ಯ ಜನರ ಸಂಪರ್ಕವಿಲ್ಲದಲೇ 17ಬ್ರಹ್ಮಣ್ಯ ತೀರ್ಥರು ಉದಾರ ಕರುಣಿಗಳುಬ್ರಾಹ್ಮಣ ಶ್ರೇಷ್ಠನ್ನ ಬದುಕಿಸಿ ಅವನಗೃಹಿಣಿಗೆ ಮಾಂಗಲ್ಯ ಭಾಗ್ಯ ವರ್ಧಿಸಿಮಹಾತ್ಮ ಪುತ್ರನ ಹಡೆಯೆವರನೀಡಿದರು18ತಮಗೆ ಆ ಮಗುವನ್ನು ಕೊಡಬೇಕು ಎಂದುಬ್ರಹ್ಮಣ್ಯರು ಪೇಳಿದ್ದ ಅನುಸರಿಸಿಆ ಮಗುವ ದಂಪತಿಗಳ್ ನೀಡೆ ಶಿಶುವುಶ್ರೀ ಮಠದಿ ಬೆಳೆಯಿತು ಗುರುಗಳ ಪಾಲನದಿ 19ಶ್ರೀ ಹರಿಗೆ ಅಭಿಷೀಕ್ತ ಹಾಲುಂಡು ಶಿಶು ಬೆಳೆದುಶ್ರೀಹರಿನೈವೇದ್ಯದಿಂ ವರ್ಧಿಸಿ ಬಾಲವಿಹಿತ ವಯಸ್ಸಲ್ಲೇವೇ ಉಪನಯನವು ಆಗಿಬ್ರಹ್ಮಣ್ಯರ ಕರದಿ ಲಭಿಸಿತು ಸಂನ್ಯಾಸ 20ಸರ್ವೋತ್ತಮ ಇಜ್ಯಪೂಜ್ಯ ಹರಿಸಾರಾತ್ಮಸರ್ವೇಶ ಶ್ರೀವ್ಯಾಸ ಶ್ರೀಶನ ನಾಮವ್ಯಾಸತೀರ್ಥರು ಎಂದು ಈ ಬಾಲಯತಿವರಗೆಆಶ್ರಮ ನಾಮವಿತ್ತರು ಬ್ರಹ್ಮಣ್ಯರು 21ಪ್ರಣವಾದಿ ಮಂತ್ರಗಳ ತಾವೇವೇ ಬೋಧಿಸಿಘನಬ್ರಹ್ಮ ವಿದ್ಯಾದಿ ಸಚ್ಛಾಸ್ತ್ರ ಕಲಿಯೆಸಣ್ಣ ಯತಿವರ ಶ್ರೀ ಪಾದರಾಜರಲಿಬ್ರಹ್ಮಣ್ಯತೀರ್ಥರು ಕಳುಹಿಸಿದರು 22ಶ್ರೀ ಪಾದರಾಜರು ವ್ಯಾಸರಾಯರಿಗೆಸುಪ್ರೀತಿಯಲಿ ಸರ್ವ ವಿದ್ಯೆಗಳ ಕಲಿಸಿತಾಪೋದಕಡೆ ದಿಗ್ವಿಜಯದಿ ಕರದ್ಹೋಗಿಈ ಬಾಲ ಯತಿಗಳ ಪ್ರಭಾವ ಹರಡಿದರು 23ಶ್ರೀಪಾದರಾಜರು ಸ್ವಭಾವದಿ ಕೃಪಾಳುಗಳುಈ ಪುಣ್ಯ ಶ್ಲೋಕ ಶ್ರೀಗಳ ಮಹಿಮೆ ಏನೆಂಬೆಸರ್ಪಬಾಧೆಯು ವ್ಯಾಸರಾಜರಿಗೆ ಸೋಕದೆಕಾಪಾಡಿಹರು ಆ ಆಹಿಯ ಹೋಗೆಂದು 24ಶಂಖತೀರ್ಥದ ಮಹಿಮೆ ಶ್ರೀಪಾದರಾಜರುಶಂಕೆಇಲ್ಲದೇ ತೋರ್ಪಡಿಸಿಹರು ಜಗಕೆಮಂಕುತನದಲಿ ಬ್ರಹ್ಮಹತ್ಯೆ ಮಾಡಿದವನಕಳಂಕ ಕಳೆದರು ಶಂಖತೀರ್ಥ ಪ್ರೋಕ್ಷಣದಿ 25ಸಂದೇಹಪರಿಹರಿಸೆ ಮಠದಿ ಜನತಿಳಿವುದಕೆತಂದಿಟ್ಟ ಕಪ್ಪುವಸ್ತ್ರದ ಮೇಲೆ ಶಂಖತೀರ್ಥ ಪ್ರೋಕ್ಷಿಸಿ ಶುಭ್ರ ಬಿಳಿಯಾಗಿ ಮಾಡಿದರುಸದಾ ಶರಣು ಇವರಿಗೂ ಶಂಖತೀರ್ಥಕ್ಕೂ 26ಕಂಜಭವಪಿತ ಪಾಂಡುರÀಂಗನು ಶ್ರೀಪಾದರಾಜರಿಗೆ ತಾನೇ ಒಲಿದದ್ದೇ ಕ್ಷೇತ್ರದಮಂಜೂಷದಲಿ ಭಾಮಾ ರುಕ್ಮಿಣೀ ಸಮೇತರಾಜೀವೇಕ್ಷಣ ರಂಗವಿಠಲನು ಒಲಿದಿಹನು 27ಸಾಳುವ ನರಸಿಂಹಾದಿ ರಾಜರು ಪ್ರಮುಖರುಪಾಳೆಯಗಾರರು ಮಂಡಲೇಶ್ವರರುಕೇಳಿಈ ಗುರುಗಳ ಪ್ರಭಾವ ನೋಡಿಕಾಲಿಗೆ ಎರಗಿಹರು ಬಹುಭಕ್ತಿಯಿಂದ 28ಮುಳಬಾಗಿಲು ಮಠಕೆ ಐವತ್ತು ಕ್ರೋಶದೊಳುಸಾಳುವ ನರಸಿಂಹ ರಾಜನ ಅರಮನೆಯುಎಲ್ಲ ಕಾರ್ಯಗಳನ್ನು ಶ್ರೀಪಾದರಾಜರಲಿತಿಳಕೊಂಡುಅವರಆಜÉÕಯಿಂದ ಆಳಿದನು29ಚಂದ್ರಗಿರಿ ಎಂಬುವ ಪಟ್ಟಣದಿ ಆ ರಾಜಮಂದಿರವು ವೇಂಕಟಾಚಲಕೆ ಸಮೀಪಚಂದ್ರಸೋದರಿ ರಮಣ ವೇಂಕಟೇಶನ ಪೂಜೆನಿಂತು ಹೋಗದೆ ಏರ್ಪಾಡು ಮಾಡೆಂದ 30ಗುರುಸಾರ್ವಭೌಮರು ಶ್ರೀಪಾದರಾಜರುಆ ರಾಜನ ಬಿನ್ನಹವನ್ನು ಲಾಲಿಸಿತ್ವರಿತದಿ ಶ್ರೀ ವ್ಯಾಸರಾಜರ ಕಳುಹಿಸಿತಿರುಪತಿ ವೇಂಕಟನ ಪೂಜೆಗೈಸಿದರು 31ರಾಜನ ಪ್ರಾರ್ಥನೆಗೆ ಒಪ್ಪಿ ಶ್ರೀಪಾದರಾಜರು ಅರಮನೆಗೆ ಪೋಗಲು ಅಲ್ಲಿಗಜತುರಗವಿಪ್ರಜನ ಪೂರ್ಣಕುಂಭಾದಿ ಸಹರಾಜನು ಸ್ವಾಗತವ ನೀಡಿದನು ಮುದದಿ 32ವೇದ ಘೋಷಗಳೇನು ಮಂಗಳದ್ವನಿ ಏನುವಾದ್ಯಮೇಳಗಳ ಸುಸ್ವರವು ಏನುಬೀದಿಯಲಿ ತೋರಣ ಪುಷ್ಪ ಮಂಟಪವೇನುಆದರದಿ ಸ್ವಾಗತದ ವೈಭವ ಏನೆಂಬೆ 33ಸಾಳುವ ನರಸಿಂಹನು ತನ್ನ ಸಿಂಹಾಸನದಲ್ಲಿ ಶ್ರೀ ಶ್ರೀ ಪಾದರಾಜರನ್ನಕುಳ್ಳಿರಿಸಿ ಕನಕಾಭೀಷೇಕವ ಮಾಡಿದ್ದನ್ನಅಳವೇ ವರ್ಣಿಸಲಿಕ್ಕೆ ನೋಡಲಾನಂದ 34ಶಿರಿ ರಮಣ ಶಿಂಶುಮಾರನ ಪಾದದಲಿ ಸ್ಥಿರಆಶ್ರಿತರು ಆದುದರಿಂದ ಧರೆಯಲ್ಲಿಹರಿಸಮರ್ಪಿತ ಸರ್ವ ಭೋಗ್ಯಭಾಗ್ಯಂಗಳುಅರಣ್ಯದಲ್ಲಿದ್ದರೂ ಜನರಿಗೆ ದೊರೆಯುವವು 35ರಾಜೀವಭವಪಿತ ರಾಜರಾಜೇಶ್ವರನುರಾಜೀವಾಲಯ ಪತಿಯ ಪ್ರಸನ್ನ ಶ್ರೀನಿವಾಸಪ್ರಜ್ವಲಿಸುತಿಹ ಮಧ್ವರಾಜ ಸಹ ಶ್ರೀಪಾದರಾಜರೊಳು ಇವರಲ್ಲಿ ಶರಣು ಶರನಾದೆ 36ತೃತೀಯ ಕೀರ್ತನೆಶ್ರೀ ಪಾದರಾಜಗುರು ಸಾರ್ವಭೌಮರಪಾದನಾಪÉÇಂದಿ ಶರಣಾದೆ ಎಮ್ಮ ಪಾಲಿಪರುಶ್ರೀಪ ನರಹರಿಶಿಂಶುಮಾರಹಯಮುಖರಾಮಗೋಪಿವಲ್ಲಭ ರಂಗ ಒಲಿದಿಹಮಹಂತಪದೀನ ದಯಾಳು ಶ್ರೀ ಪಾದರಾಜರುಜನರು ಭಾಗೀರಥೀಯಾತ್ರೆ ಮಾಡಲಿಕೆಹಣವು ತ್ರಾಣವು ಸಾಲದು ಎಂದು ಅರಿತುಜಾಹ್ನವಿಯ ತರಿಸಿದರು ನೃಸಿಂಹ ತೀರ್ಥದಲಿ 1ಶ್ರೀಮಧ್ವಿಷ್ಣಂಘ್ರಿನಿಷ್ಠಾಃ ಅತಿ ಗುಣಗುರುತಮಶ್ರೀಮದಾನಂದ ತೀರ್ಥಃ ಎಂದು ಸಂಸ್ತುತ್ಯಶ್ರೀಮಧ್ವಾಚಾರ್ಯರ ಪ್ರಿಯತಮರು ಕರೆದಲ್ಲಿಅಮರ ತಟಿನೀ ಬಂದದ್ದೇನು ಆಶ್ವರ್ಯ 2ಶ್ರೀ ಮಧ್ವಿಷ್ಣಂಘ್ರಿ ಸಂಭೂತೆಯು ತನ್ನಯವಿಮಲ ತೀರ್ಥವ ನರಸಿಂಹ ತೀರ್ಥದಲಿಧಿಮು ಧಿಮು ಎಂದು ಪ್ರವಹಿಸಲು ಜನಸರ್ವರೂಸಮ್ಮುದದಿ ಪೂಜಿಸಿದರು ವಿಹಿತ ರೀತಿಯಲಿ 3ಹಿಂದೆ ಇಂದ್ರನು ತನ್ನಯ ವಜ್ರದಿಂದಅದ್ರಿಗಳ ಪಕ್ಷಿಗಳ ಕಡೆದ ತೆರದಿಇಂದುಶ್ರೀಪಾದರಾಜರು ಕುಮತ ಹೀರಿ ಪಕ್ಷಗಳಛೇದಿಸಿದರು ತಮ್ಮ ವಾಗ್ವಜ್ರದಿಂದ 4ಆನಂದ ತೀರ್ಥರ ನಿಜಾನಂದಪ್ರದ ಶಾಸ್ತ್ರಬಂದು ಬೇಡಿದ ಭಾಗ್ಯ ಅಧಿಕಾರಿಗಳಿಗೆಕುಂದುಕೊರತೆ ಏನೂ ಇಲ್ಲದೆ ಬೋಧಿಸಿಇಂದಿರೇಶನ ಪ್ರಸಾದವ ಒದಗಿಸಿಹರು 5ಚಂದ್ರಿಕಾ ನ್ಯಾಯಾಮೃತ ತರ್ಕತಾಂಡವಮೊದಲಾದ ಗ್ರಂಥಗಳ ರಚಿಸಿದ ಪ್ರಖ್ಯಾತವಾದಿಗಳಕೇಸರಿವ್ಯಾಸಮುನಿ ಮುಖ್ಯಮೇದಿನಿಸುರರಿಗೆ ವಿದ್ಯಾ ಕಲಿಸಿಹರು6ಶ್ರೀರಂಗ ವಿಠಲ ರುಕ್ಮಿಣೀ ಸತ್ಯಭಾಮಾತೋರಿ ತಾವೇ ತಮ್ಮ ಪ್ರತೀಕಗಳೊಳಗೆ ನಿಂತುಸೂರಿವರ ಶ್ರೀಪಾದರಾಜರ ಕೈಯಿಂದಭರದಿ ಪೂಜಾ ಸ್ತೋತ್ರ ಕೀರ್ತನೆ ಕೊಂಡಿಹರು 7ಅನುಪಮ ಅನುತ್ತಮ ಗುಣಗಣಾರ್ಣವ ರಮಾ -ನಾಥನು ಜಗಜ್ಜನ್ಮಾದ್ಯಖಿಲೈಕ ಕರ್ತಾವಿಷ್ಣು ಸರ್ವೇಶ್ವರ ಸ್ವತಂತ್ರಅನಘಮಹಿಮಾಕನ್ನಡ ನುಡಿಯಲಿ ಸಹಸ್ರಾರು ಹಾಡಿಹರು 8ಪ್ರತಿಒಂದು ಪದ ವಾಕ್ಯ ನುಡಿ ಪದ್ಯ ಕೀರ್ತನೆಯುಇಂದಿರಾಪತಿಯಲ್ಲಿ ನಿಶ್ಚಲ ಭಕ್ತಿಬಂಧಮೋಚಕ ಜ್ಞಾನ ಸಾಧನವಾಗಿರುವವುಆದರದಿ ಪಠಿಸೆ ಇಹಪರ ಸುಖಪ್ರದವು 9'ಸ್ಮರಿಸಿದವರನುಕಾವನಮ್ಮ ಸೂರ್ಯಾನೇಕ ಪ್ರಭಾವಸುರಮುನಿಗಳ ಸಂಜೀವ ಶ್ರೀ ವೆಂಕಟೇಶ ನಮ್ಮಪೊರೆವ&ಡಿsquo; ಎಂದಾರಂಭಿಸುವ ಕೀರ್ತನೆ ಪಠಿಸೆಸುಶ್ರವಣವು ಮಾಳ್ಪರ ಭಾಗ್ಯವೇ ಭಾಗ್ಯ 10ಶ್ರೀಪಾದರಾಜರು ಶಿರಿ ವೇಂಕಟೇಶನತಾಪೋಗಿ ಕಂಡು ಧ್ಯಾನದಿ ಸದಾ ನೋಡಿಸೌಭಾಗ್ಯ ಪ್ರದ ಈ ಕೀರ್ತನೆ ಹಾಡಿಹರುಸುಪುಣ್ಯ ಭಾಗಿಗಳೇ ಪಠಿಸಿ ಕೇಳುವರು 11ಭಕ್ತಿಯಿಂದ ಪಠಿಸುವ ಕೇಳುವ ಸಜ್ಜನರುಓದಿ ಕೇಳಿದ್ದು ಕೃಷ್ಣಗರ್ಪಿಸಲುಬದಿಯಲ್ಲೇ ತಾನಿದ್ದು ಯೋಗಕ್ಷೇಮವ ವಹಿಪಶ್ರೀದ ವೇಂಕಟ ಜನಾರ್ದನ ಕೃಷ್ಣ ಶ್ರೀಶ 12ಧನ ಧಾನ್ಯ ಆರೋಗ್ಯ ಆಯುಷ್ಯ ಕೀರ್ತಿಯಘನವಿಘ್ನಕಷ್ಟ ಪರಿಹಾರ ಜಯ ಎಲ್ಲೂಜ್ಞಾನ ಉದ್ಭಕ್ತಿ ಸಂತೋಷಹರಿಅಪರೋಕ್ಷಸಾಧನವು ಇವರ ಈ ಕೀರ್ತನೆ ಪಠನ 13ಜಯ ಜಯ ಜಗತ್ರಾಣ ಜಗದೊಳಗೆಸುತ್ರಾಣಅಖಿಲಗುಣಸದ್ದಾಮ ಶ್ರೀ ಮಧ್ವನಾಮಾಜಯಾಸಂಕರುಷಣ ಸಂಭೂತ ಮುಖ್ಯ-ವಾಯು ಹನುಮ ಭೀಮ ಮಧ್ವನ ಸ್ತೋತ್ರ 14ಈ ಮಧ್ವನಾಮಾಖ್ಯ ಸ್ತವರಾಜವನ್ನುನಮ್ಮ ಶ್ರೀಪಾದ ರಾಜಾರ್ಯ ರಚಿಸಿನಮಗೆಲ್ಲರಿಗಿತ್ತು ನಮಗೆ ಸೌಭಾಗ್ಯವಪ್ರೇಮದಿಂದಲಿ ಒದಗಿಸಿಹರು ಕರುಣಾಬ್ಧಿ 15ಸ್ಮರಿಸಲಾಕ್ಷಣ ಕಾಯ್ವಪುರಂದರದಾಸಾರ್ಯರಪರಂಪರೆ ವಿಜಯಾರ್ಯ ಗೋಪಾಲದಾಸಾರ್ಯಸೂರಿಗೋಪಾಲಾರ್ಯ ಶಿಷ್ಯರು ಜಗನ್ನಾಥದಾಸರಾಯರು ಫಲಶ್ರುತಿ ಬರೆದಿಹರು 16ವರಮಧ್ವ ನಾಮಕ್ಕೆ ಬರೆದಿರುವ ಫಲಶ್ರುತಿಯಭರದಿ ಪಠಿಸುವವರು ಶ್ರೀ ಮಧ್ವನಾಮಉತ್ಕøಷ್ಟ ಮಹಾತ್ಮ್ಯ ಉಳ್ಳದ್ದೆಂದರಿವರುಬರುವುದು ಅನುಭವಕೆ ಮಧ್ವನಾಮ ಓದಿ 17ಶ್ರೀ ಲಕ್ಷ್ಮೀನಾರಾಯಣ ರಾಮ ಹಯಶೀರ್ಷಭೈಷ್ಮೀ ಸತ್ಯಾಯುತ ರಂಗ ವಿಠಲಶ್ರೀ ಮದಾಚಾರ್ಯ ಪೂಜಿತ ಗೋಪೀನಾಥನ್ನಸಮ್ಮುದದಿ ಪೂಜಿಸುವ ಯೋಗಿವರ ಆರ್ಯ 18ಗಂಗೆ ಪ್ರತಕ್ಷ ತೋರಲು ಬಾಗಿನ ಕೊಟ್ಟುಜಗ ಜನ್ಮದ್ಯಖಿಳ ಕರ್ತನ್ನ ಪೂಜಿಸುತ್ತಜಗದೇಕ ಗುರುಮಧ್ವ ಸಚ್ಚಾಸ್ತ್ರ ಭೋದಿಸಿಝಗಿ ಝಗಿಪ ತೇಜಸ್ಸಲಿ ಹೊಂದಿದರುಸಮಾಧಿ19ಶಾಲಿಶಕ ಹದಿನಾಲ್ಕುನೂರೆಂಟನೆ ವರುಷಶುಕ್ಲ ಚತುರ್ದಶಿ ಜೇಷ್ಠ ಮಾಸದಲ್ಲಿಶೀಲತಮ ಭಾವದಲಿ ಳಾಳುಕನ ಧ್ಯಾನಿಸುತಕುಳಿತರು ಸಮಾಧಿಯಲಿ ಹರಿಪುರಯೈದಿದರು 20ಶಿಂಶುಮಾರಪುರವನ್ನಯೈದಿತಾ ಮತ್ತೊಂದುಅಂಶದಲಿ ಸುಪವಿತ್ರ ವೃಂದಾವನದಿ ಭಾಸಿಸುತ ಇರುತಿಹರುಬ್ರಹ್ಮ ವಿದ್ಯಾಲಯ - ಶ್ರೀಶಪ್ರಿಯನರಸಿಂಹ ತೀರ್ಥ ಮಂದಿರದಿ 21ದರ್ಶನವು ಪಾಪಹರ ಪ್ರದಕ್ಷಿಣೆ ಹರಿಯಾತ್ರೆವಿಶ್ವಾಸದಿಂದ ನಮಸ್ಕಾರ ಸರ್ವೇಷ್ಟಐಶ್ವರ್ಯ ಜ್ಞಾನಾದಿ ಫಲಪ್ರದವು ಯೋಗ್ಯರಿಗೆಸಂಸ್ಮರಿಸಲು ಸರ್ವ ಸಿದ್ಧಿದಾಯಕವು 22ಸಿಂಧೂರಅಜಮಿಳ ಸುಧಾಮ ಪ್ರಹ್ಲಾದಾದಿಭಕ್ತರ ಪರಿಪಾಲಕರನು ಶ್ರೀರಮಾಪತಿಯಸದಾ ಒಲಿಸಿಕೊಂಡಿಹಮಹಂತಗುರುವರಶ್ರೀಪಾದರಾಜರೇ ನಮೋ ನಮೋಪಾಹಿ23ರಾಜೀವಭವಪಿತ ರಾಜರಾಜೇಶ್ವರನುರಾಜೀವಾಲಯ ಪತಿಯು ಪ್ರಸನ್ನ ಶ್ರೀನಿವಾಸಪ್ರಜ್ವಲಿಸುತಿಹ ಮಧ್ವರಾಜ ಸಹ ಶ್ರೀಪಾದರಾಜರೊಳು ಇವರಲ್ಲಿ ಶರಣು ಶರನಾದೆ 24|| ಇತಿ ಶ್ರೀ ಪಾದರಾಜರ ಅಣು ಚರಿತೆ ಸಂಪೂರ್ಣಂ||
--------------
ಪ್ರಸನ್ನ ಶ್ರೀನಿವಾಸದಾಸರು