ಒಟ್ಟು 5 ಕಡೆಗಳಲ್ಲಿ , 3 ದಾಸರು , 5 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕದರ ಮಂಡಲಗಿಯ ಕರುಣಿ ಹನುಮರಾಯ |ಸದುಗುಣವಂತನೆ ಹಣುವಂತನೆ ಪ ಅಂಜನೆಯ ವರಸೂನು ಆಶ್ರಿತ ಕಾಮಧೇನುಮಂಜುಳ ಗಾನ ಗೀತ ಪರಮ ವಿಖ್ಯಾತ ಸಂಜೀವನವ ತಂದ ವ್ಯೋಮ ಮಾರ್ಗದಿ ಬಂದಅಂಜದ ಗುಣವಂತನೆ ಹಣುವಂತನೆ1 ಅಮಿತ ಜಾಮಾತ ಮುಖ್ಯ ಪ್ರಾಣನಾಥ ವಿಶಾಲ ಗುಣವಂತನೆ ಹಣುವಂತನೆ 2 ಕ್ಷೋಣಿಯೊಳು ಕನಕದಾಸನ ನೆರಳು ಅನಕ ಏನು ಬಲಿಸಿದೆಯೊ ಔಷಧಿಯ ಕುಣುಕ ನೀನಿದ್ದರೆ ಕನಕ ಪ್ರಾಣ ತೆರಳುವ ತನಕ ಶ್ರೀನಿಧೇ ಆದಿಕೇಶವ ಎನ್ನ ಜನಕ3
--------------
ಕನಕದಾಸ
ನವನೀತ ಜೋರನ ಅವನ ಕಂಡರದೇಳಿ ಹವಣಿಸಿ ಹಿಡಿದುಕೊಂಬಾ ಧ್ರುವ ನಾಕು ಬೀದಿಯೊಳಗೆ ಸಾಕು ಸಾಕು ಮಾಡಿದ ಸೋಂಕದೆ ಕೈಯ್ಯಗೊಡಾ ಬೇಕೆಂದಾರುಮಂದಿಗೆ 1 ಹದಿನೆಂಟು ಸಂಧಿಯೂಳು ಶೋಧಿಸಿನೋಡಿದರೆ ಮದನ ಮೋಹನ ನೋಡಿ 2 ತಾನೆ ಸಿಕ್ಕುವ್ಹಾಗೊಂದು ಮನಗೂಡಬೇಕು ತಂದು ದೀನ ಮಹಿಪತಿ ಸ್ವಾಮಿ ಅನಕಾ ದೋರತಾ ಬಂದು 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಬೇರ್ಯದ ಭಾವ ಮುಕುತಿ ಸುವರ್ಮ ತೋರುವದೊಂದೇ ಸದ್ಗುರು ದಯಾಧರ್ಮ ಧ್ರುವ ನೆನವಿಗೆ ನೆಲೆಗೊಳದೆ ನಿಜಧ್ಯಾನ ಅನಕಾ ದೋರುವಾದ ಸದ್ವಸ್ತುದಾ ಖೂನಾ 1 ಮನದಿಂದಲಿ ಮನವಾಗದೆ ಉನ್ಮನ ತಾನಾಗುವದೆ ಸದ್ಗುರು ಕೃಪೆಜ್ಞಾನ 2 ದೀನ ಮಹಿಪತಿಗೆ ತೋರಿ ನಿಜಗುಟ್ಟು ಭಾನುಕೋಟಿ ತೇಜ ತಾನಾದ ಉಂಟು 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಮನಸಿಲೆ ಮನ ನೋಡಿ ಘನ ಗುರುವಿನ ಸೇವೆಯ ಮಾಡಿ ಧ್ರುವ ತೋರುದ್ಯಾತಕೆ ಶೀಲ ಅನುಭವಾಗದೆ ಙÁ್ಞನದ ಕೀಲ ಜನ ಶೀಲದೆ ಶೂಲ 1 ಮನದಿಂದಲಿ ಮನವಾಗದೆ ಸ್ವಸ್ತ ಘನಕೈಗೂಡುವದೆ ಸಾಭ್ಯಸ್ತ ಅನಕಾ ಮಾಡುವದಸ್ತವ್ಯಸ್ತ ಖೂನಾಗದು ವಸ್ತ 2 ಮಹಿಪತಿ ಗುರುಚರಣ ಭಾನುಕೋಟಿತೇಜನ ಕರುಣ ದೀನ ಉದ್ಧರಣ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಹೆಚ್ಚುಕಡಿಮೆಯೆಂದು ಹೆಣಗಾಡಬೇಡಿ ಸಚ್ಚಿದಾನಂದ ಬ್ರಹ್ಮನ ಗುಟ್ಟು ನೋಡಿ ಪ ಪರಮಾತ್ಮ ಕಾಯದೊಳಿರುತಿರ್ಪತನಕಾ ಪರಿಪರಿ ಹೆಸರಿಂದ ಕರಿವರು ಅನಕಾ ಶರೀರ ಭೋಗವ ತೀರಿಸಿಕೊಂಡು ಹೋಹಾಗೆ ಲ್ಲರಿಗೊಂದೆ ಪೆಸರಿಂದ ಕರೆಯುವರಾಗಾ 1 ಅರಸು ಮಂತ್ರಿ ಕರಣೀಕ ತಳವಾರಾ ಕವಿ ಶಾಸ್ತ್ರಿ ಉದಾರಾ ಪರಿಯ ನಾಮಗಳಿಂದ ಉಪಾಧಿಯೋಗಾ ಪರಮಾತ್ಮ ತೊಲಗಲು ಹೆಣವೆಂಬರಾಗಾ 2 ಪರಮಾತ್ಮನಾಟದ ಲೀಲೆ ಇದೆಲ್ಲಾ ಗುರುಪುತ್ರನಾದ ಮಹಾತ್ಮನೆ ಬಲ್ಲಾ ಗುರು ವಿಮಲಾನಂದ ಶರಧಿಯೊಳಾಡಿ ಹಿರಿದು ಕಿರಿದು ಯಾವಲ್ಯುಂಟೆಂದು ನೋಡಿ 3
--------------
ಭಟಕಳ ಅಪ್ಪಯ್ಯ