ಒಟ್ಟು 10 ಕಡೆಗಳಲ್ಲಿ , 4 ದಾಸರು , 10 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಜಯದೇವಿ ಜಯದೇವಿ ಜಯಭಗವದ್ಗೀತೆ | ಶ್ರಯ ಸುಖದಾಯಕಮಾತೇ ಶೃತಿ ಸ್ಮøತಿ ವಿಖ್ಯಾತೇ ಪ ಮೋಹ ಕಡಲೋಳಗರ್ಜುನ ಮುಳುಗುತ ತೇಲುತಲಿ | ಸೋಹ್ಯವ ಕಾಣದೆತನ್ನೊಳು ತಾನೇ ಮರೆದಿರಲೀ| ಬೋಧ ಪ್ರತಾಪದಲೀ| ಮಹಾ ಸುಜ್ಞಾನದ ತೆಪ್ಪದಿ ದಾಟಿಸಿದವನಿಯಲಿ 1 ಅಂದಿಗಿಂದಿಗೆ ಋಷಿ ಮುನಿ ಸಜ್ಜನ ಮೊದಲಾಗಿ | ಕುಂದದಿ ಪಂಡಿತರೆಲ್ಲರು ಮತಿ ಯುಕ್ತಿಯಲೊದಗಿ | ಸುಂದರ ಟೀಕೆಯ ಮಾಡುತ ಪಾಡುತ ಅನುವಾಗಿ | ಚಂದದಿ ನಿಂತರು ಅನುಭವದಲಿ ವಿಸ್ಮಿತರಾಗಿ 2 ಆವನು ಭಾವದಿ ಪೂಜಿಸಿ ಓದಿಸಿ ಕೇಳುವನು| ಸಾವಿರ ಸಾಧನವೇತಕೆ ಜೀವನ್ಮುಕ್ತವನು | ದೇವಮನುಜರಿಗೆ ತಿಳಿಯದು ಪದಪದ ಮಹಿಮೆಯನು | ಆವಗು ಸ್ಮರಿಸುವ ಮಹೀಪತಿ ನಂದನು ನಿಮ್ಮವನು 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ತಿಳಿ ಆದೆ ದೇವನು ಇರುತಿಹೆ ನೀ ಪ ಅದು ಕೊನೆಯಾಚೆಗೆ ಬೇರಿಲ್ಲ ಅದು ಮನಸಿಗೆ ನಿಲುಕುವದಲ್ಲ ಅದನನು ಭವದಲಿ ತಿಳಿಯಲ್ಲ ಬಿಡು ಮನಸಿನ ಗೊಡವೆಯನೆಲ್ಲ ಇದೆ ಜ್ಞಾನಾಗ್ನಿಯು ಸುಡುತಿಹುದೋ ಒದಗಿದ ಕರ್ಮದ ಕಾಷ್ಮಗಳ 1 ಮನವಡಗಿದ ಪದ ಪರಿಚಯವ ತನಿನಿದ್ರೆಯ ಮೀರಿದ ಸ್ಥಿತಿಯ ಅನುಭವದಲಿ ತರುವುದೆ ಯೋಗ ಅದನೇ ಯತ್ನದಿ ಸಾಧಿಸು ತಾ ನನಸಿನಲೇ ಗುರು ಮುಖದಿಂದ ಕೇಳಿ ನಿವೇಕದಿ ತಿಳಿ ಬೇಗಾ 2 ಎಚ್ಚರವಿದು ತಿಳಿ ಕನಸೆಂದು ಅಚ್ಚಳಿಯದ ಸ್ಥಿತಿ ನಾನೆಂದು ನಿಚ್ಚಳದಲಿ ನಿಶ್ಚಯಿಸುವದು ತುಚ್ಛದ ತೋರಿಕೆ ಎಂದು ತಿಳಿ ಸಚ್ಚಿತ್‍ಶಂಕರ ಬೋಧವನಾ 3
--------------
ಶಂಕರಭಟ್ಟ ಅಗ್ನಿಹೋತ್ರಿ
ದೇಹದ ಭಾವಾ ಮೋಹವಾ ಕಳೆ ನಾನೀನೆನ್ನುವ ಭೇದವಾ ಪ ತನು ಮೂರರ ಸಾಕ್ಷೀ ನೀನಿಹೆ ಘನ ಚಿನ್ಮಯರೂಪಾ ನೀನಿಹೆ ಅನುಮಾನಿಸದೀಪರಿ ಯೋಚಿಸು ನೀ ಮನವಾರೆ ಇದೇ ನಿಜವೆಂದೆನುತಾ ಅನುದಿನದಲಿ ನಿಶ್ಚಯಗೊಳಿಸುತಲಿ ಅನುಭವದಲಿ ತಿಳಿ ಈ ಬೋಧವಾ ಕಳೆ ನಾನೀನೆನ್ನುವ ಭೇದವಾ 1 ಇದು ತೋರಿ ಅಡಗುವಾ ಕಲ್ಪನೆ ಅದು ತೋರಿಕೆಯಳಿದ ಆತ್ಮನೇ ಪರಿ ಈ ಜಗವೆಲ್ಲ ಅದು ನೀನಿರುವಿ ಇದು ನೀನಲ್ಲ ಇದೆ ತಿಳಿವಿಕೆಯಿಂದಲಿ ಮುಕುತಿ ಕಣಾ ಇದೆ ಶಂಕರಗುರುವಿನ ಬೋಧವಾ ತಿಳಿದಾನಂದಿಸು ನೀನೇ ಶಿವಾ 2
--------------
ಶಂಕರಭಟ್ಟ ಅಗ್ನಿಹೋತ್ರಿ
ಧ್ಯಾನಿಸುವ ಸುಜನರಿಳೆಯೊಳೇನು ಧನ್ಯರೊ ಪ ಶ್ರೀನಿಧಿ ನಮ್ಮ ನಾರಾಯಣನ ಚರಣಕಮಲವ ಅ.ಪ ಬ್ರಹ್ಮ ರುದ್ರ ಪ್ರಮುಖ ಸುರರಿಗೇನು ಮೂಲವೊ ಸಮ್ಮತಿ ವೇದ ಶಾಸ್ತ್ರ ಪುರಾಣವೇನು ಪೇಳ್ವುದೊ 1 ಕಾಲಕರ್ಮ ಜೀವ ಮಾಯ ಯಾರಧೀನವೊ ಮೇಲೆ ಅನುಭವದಲಿ ತಿಳಿವುದದುವೆ ಜ್ಞಾನವೊ 2 ಅರ್ಥ ಚತುಷ್ಠಯವ ಕೊಡುವ ಪಾರ್ಥಸಾರಥಿ ಕರ್ತಾ ಭೋಕ್ತಾ ಗುರುರಾಮವಿಠಲ ಮೂರುತಿ3
--------------
ಗುರುರಾಮವಿಠಲ
ನೆನೆ ಕಂಡ್ಯ ಮನವೆ ಸದ್ಗುರು ದಿವ್ಯಪಾದ ಖೂನ ತೋರುವದಿದೆ ನಿಜಬೋಧ ದ್ರುವ ನೆನೆಯಬೇಕೊಂದೆ ಭಾವದಿಂದೆ ತಾನೆತಾನಾಗುವ ಗುರು ತಾಯಿತಂದೆ 1 ಘನ ಸುಖ ಕೊಡುವ ಅನುಭವದಲಿಡುವ ಜನನ ಮರಣದ ಬಾಧಿಯ ಮೂಲಗಡೆವ 2 ಗುರುವಿಂದಧಿಕ ಬ್ಯಾರಿಲ್ಲ ಸುಖ ತಿರುಗಿ ನೋಡಲು ತನ್ನೊಳಾದ ತಾ ಕೌತುಕ 3 ಇದೆ ನಿಜಬೋಧ ಸ್ವಸುಖದ ಭೇದಿಸಿದವರಿಗಿದೆ ಸುಪ್ರಸಾದ 4 ಗುರುತಾ ತೋರುವ ಸುರಿಮಳೆಗರೆವ ಅನುದಿನ ಹೊರೆವ5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ನೆಲೆಯು ನೋಡಿ ಧ್ರುವ ಕರ್ಮಕ ಮಂದದಿ ಸಿಲುಕಲಿ ಬ್ಯಾಡಿ ವರ್ಮನರುವ್ಹ ಗುರುಯೋಗ ಧರ್ಮವ ಮಾಡಿ ನಿರ್ಮನದಲಿ ನಿಜಘನ ಬೆರೆದಾಡಿ ನಿರ್ಮಳ ನಿಶ್ಚಳ ನಿರ್ಗುಣ ಆತ್ಮನ ಕೂಡಿ 1 ಅನುದಿನ ಅನುಭವಾಮೃತವನು ಸೂರ್ಯಾಡಿ ತನುಮನಧನ ಶ್ರೀಗುರುವಿನರ್ಪಣೆ ಮಾಡಿ ಅನುಭವದಲಿ ಆತ್ಮದ ನೆಲೆನಿಭ ನೋಡಿ ಘನಬ್ರಹ್ಮಾನಂದದ ಸುಖದಲಿ ಲೋಲ್ಯಾಡಿ2 ಮಹಾಮಹಿಮನ ಸುಸೇವೆಯ ಮಾಡಿ ಮಹಿಪತಿ ಒಡಿಯನ ಶ್ರೀಪಾದವ ನೋಡಿ ಇಹಪರ ಸಾಯೋಜ್ಯ ಸದ್ಗತಿ ಮುಕ್ತಿಯ ಕೂಡಿ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಪರ ಅಕ್ಷರವ ಧ್ರುವ ಕ್ಷರ ಅಕ್ಷರವ ಸೆÉರಗ ಪಿಡಿಯೋ ಗುರು ಮುಖದಲಿ ನೀ ಪೂರ್ಣ ಪರಮಾನಂದ ಸುಖದೋರುವ ಬಗೆ ಅರಿಯೋ ಕೂಟ ಸ್ಥಳದಲಿ ಪ್ರಾಣಿ 1 ರೇಚಕ ಪೂರ್ವಕದನುಭವ ತಿಳಿದು ಯೋಚಿಸಿ ನೋಡಲಿಂದ ಸೂಚಿಸಿ ತಾನೆ ಭಾಸುವ ಕ್ರಮವಿದು ಅಚರಿಸೋ ಅನುಭವದಲಿ ಪ್ರಾಣಿ 2 ಕ್ಷರ ಅಕ್ಷರವ ತಿಳಿಯದೆ ಬರೆÀವಾ ಅಕ್ಷರದಾ ಖೂನ್ಯಾಕ ಎರಡೇ ಮಾತಿನ ಅರಿವೇ ಅದರೆ ಪರಲೋಕಕ್ಕೆ ಸೋಪಾನವಿದು ಪ್ರಾಣಿ 3 ಇದೇ ಹೇಳಿದ ಗೀತೆಯಲ್ಲಿ ಶ್ರೀಕೃಷ್ಣನೆ ತಾಂ ಅರ್ಜುನಗೆ ಇದರಿಟ್ಟಿದು ಘನಸುಖ ಆ ಮಹಿಮನೆ ಇದರಿಂದಲಿ ತಿಳಿವದು ನೀ ಪ್ರಾಣಿ 4 ಇಡಾ ಪಿಂಗಳ ನಾಡಿ ನಡುವಿದು ಸಾಧಿಸಿ ಮಾತಿನ ಖೂನ ಎಡಬಲ ನೋಡದೆ ಪಡಕೋ ಮಹಿಪತಿ ಒಡನೆ ನಿನ್ನೊಳು ನಿಧಾನ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಮಂಗಲಂ ಗುರುರಾಜಗೆ ಮಂಗಲ ಪರಮಾನಂದಸ್ವರೂಪಗೆ ಪ ಜೀವÀಪರಮರೈಕ್ಯವ ತಿಳುಹಿಸುವಾ ದೇವನೆ ನೀನೆನ್ನುತ ಬೋಧಿಸುವಾ ಸಾವು ಸಂಕಟಗಳ ಮೂಲವ ಕಡಿಯುವಾ ಪಾವನಾತ್ಮ ಘನಜ್ಞಾನರೂಪಗೆ 1 ಶೋಧಿಸಿ ದೇಹತ್ರಯಗಳ ಕಳಹಿ ಬಾಧರಹಿತ ಪರಮಾತ್ಮನ ಅರಿವನು ಬೋಧಿಸಿ ಅನುಭವದಲಿ ನೆಲೆಸಿದಗೆ 2 ತೋರಿಕೆ ಅನಿಸಿಕೆ ಎನಿಸುವ ದ್ವೈತವ ಧೀರತನದಿ ಸುಳ್ಳೆಂದು ತಿಳಿಸುವಾ ನಾರಾಯಣಗುರುವರನ ಕೃಪಾಪ್ರಿಯ ಪೂರಣಬ್ರಹ್ಮಸ್ವರೂಪ ಶಂಕರಗೆ 3
--------------
ಶಂಕರಭಟ್ಟ ಅಗ್ನಿಹೋತ್ರಿ
ಮಾನವನಾದ ಮ್ಯಾಲ ತಾನಾರೆಂದರಿಯಬೇಕು ಪ ಅನುಭವಿಗಳ ಕಂಡೆರಗಲಿಬೇಕು | ತನುಮನದಲಿ ನಿಷ್ಠೆಯು ಬಂದಿರಬೇಕು | ತನು ಧನ ಮದದಲಿ ಹೊರತಾಗಿರಬೇಕು | ಉಣಲುಡುವಲಿ ಹರಿಯಚ್ಚರಬೇಕು 1 ಎಲ್ಲಿಂದ ಧರೆಯೊಳು ಜನ್ಮಕ ಬಂದೇ | ಇಲ್ಲ್ಲಿಂದ ಪಯಣವು ಎಲ್ಲಿಗೆ ಮುಂದೇ | ಎಲ್ಲ ವಿಚಾರಿಸು ಗುರು ಮುಖದಿಂದಾ | ಫುಲ್ಲನಾಭನೆ ಸೇರಿ ಬದುಕಬೇಕೆಂದ 2 ತನ್ನ ತಾ ಮರೆದು ನೀ ತಿರುಗಲಿ ಬೇಡಾ | ಅನ್ಯರ ನಿಂದ್ಯಪಸ್ತುತಿ ಮಾಡಬೇಡಾ | ಚನ್ನಾಗಿ ಶಾಂತಿಯ ನೆಲೆಬಲಿ ಬೇಡಾ | ಕಣ್ಣಿದ್ದು ಕುರುಡ ನೀನಾಗಲಿ ಬೇಡಾ 3 ಏನು ತೋರುವದೆಲ್ಲಾ ಹರಿಯಾಜ್ಞೆದೆಂದು | ನಾನೇನು ಕರ್ತನಲ್ಲಿದಕೆಂದು | ಅನುಭವದಲಿ ಸಮದೃಷ್ಠಿಗೆ ಬಂದು | ಘನ ಗುರು ಪಾದಕ ಭಾವದಿ ಹೊಂದು 4 ಹೊತ್ತು ಹೋಗದ ಮಾತ ನಾಡಲೀ ಬೇಡಾ | ಮುತ್ತಿನಂಥಾ ಜನ್ಮ ದೊರಿಯದುಗಡಾ | ಸತ್ಯಜ್ಞಾನಾಮೃತ ನುಂಡವ ಪ್ರೌಢಾ | ಕರ್ತ ಮಹಿಪತಿ ಸುತ ಸುರಿದ ನೋಡಾ 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಸಾಧಕರೊಳು ಸಿದ್ಧನು | ಹರಿಪಾದಕಮಲ ಕಾಣಬೇಕೆಂದು ಬಯಸುವವ ಪ ಭಕ್ತಿಯ ಹಡಗವ ಸಾರಿ ಭವಾಂಬುಧಿ | ಯುಕ್ತಿಲಿ ದಾಟಿ ಮನೋರಥದಾ | ಮುಕ್ತಿಯ ಪಟ್ಟಣದಲ್ಲಿಹ ನಿಜಘನಾ | ಸಕ್ತಿಲಿ ಪಡಕೊಂಡು ಸುಖದಲಿ ಕುಳಿತಾ 1 ಉಣಲಾಡುವಲ್ಲಿ ಸರ್ವ ಅನುಭವದಲಿ ಹರಿ | ನೆನೆಯದೆ ಅರ್ಪಣೆಯಾಗುವದು | ಜನದೊಳು ಅವರವರಂತೆ ಸೋಪಾಧಿಕ | ಯೋಗಿ 2 ಕ್ಷೀರ ನೀರ ಭೇದ ಮಾಡುವ ಹಂಸ ವಿ | ಚಾರದಿ ಸಾರಾಸಾರವ ತಿಳಿದು | ಪ್ರಾರಬ್ಧ ಗತಿಯಲಿ ಸ್ವಾನಂದದಿಂದಿಹ | ಧಾರುಣಿ ಜನರನು ತಾರಿಸುವಾ 3 ಪುಣ್ಯದ ಫಲದಾಶೆಯಾತಕ ಬಾಲಗ | ಹೊನ್ನ ತಾ ಗುಂಬೆಂಬ ತ್ಯರನಂದದಿ | ಪರಿ | ಚೆನ್ನಾಗಿ ತಿಳಿದಿಹ ನಿದ್ವಂದಿಯೋ 4 ಬಲ್ಲವಿಕೆಯ ದೋರಿ ಸೊಲ್ಲಿಗೆ ಬಾರದೆ | ಬೆಲ್ಲಸವಿದ ಮೂಕನಂದದಲಿ | ಪುಲ್ಲನಾಭನು ಇರುವೆಲ್ಲರೊಳಗೆ ನೋಡಿ | ನಿಲ್ಲವ ಗುರು ಮಹಿಪತಿ ಪ್ರಭು ಶರಣಾ 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು