ಒಟ್ಟು 3 ಕಡೆಗಳಲ್ಲಿ , 2 ದಾಸರು , 2 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ರಾಜೀವದಳನೇತ್ರ ರಾಮಚಂದ್ರನೆ ಶುಭ- ನಾಮಧೇಯನೆ ನಿನಗಾನಮಿಸುವೆನು ಪ ರಾಮರಾಕ್ಷಸಕುಲ ಭಯಂಕರ ರಾಮದಶರಥ ಪುತ್ರನೆ ವರ ಸಾಮಗಾನ ವಿಲೋಲ ಶ್ರೀವರ ರಾಮ ಭರತ ಶತ್ರುಘ್ನ ಪಾಲಕ ಅ.ಪ ಸುರರೆಲ್ಲ ನೆರೆದು ಋಷಿವರರೆಲ್ಲ ಒಂದಾಗಿ ವರ ಕ್ಷೀರಾಂಬುಧಿಯ ಸಾರುತ ವೇಗದಿ ಪರಮಾತ್ಮ ನಿನ ಕಂಡು ಪರಿಪರಿ ಸ್ಮರಿಸುತ ನೆರೆದರು ದೇವ ಗಂಧರ್ವ ನಾರದರೆಲ್ಲ ಗರುಡ ಗಮನನೆ ಉರಗಶಯನನೆ ಪರಮ ಪುರುಷನೆ ಪುಣ್ಯಚರಿತನೆ ತ್ವರದಿ ಎಮ್ಮಯ ಮೊರೆಯ ಕೇಳೆಂದು ಭರದಿ ಪ್ರಾರ್ಥನೆ ಮಾಡುತಿಹರು 1 ಖೂಳ ದೈತ್ಯರು ನಮ್ಮ ಬಾಳಗೊಡರೊ ದೇವ ಭಾಳ ವ್ಯಾಕುಲರಾಗಿ ದು:ಖಿಪೆವು ಕೇಳಿ ತಡಮಾಡದೆ ಪಾಲಿಸಿ ಸಲಹಯ್ಯ ಶ್ರೀಲೋಲ ಶ್ರೀವರ ಶ್ರೀವತ್ಸಲಾಂಛನ ಶ್ರೀಶ ಶ್ರೀ ಭೂದೇವಿ ರಮಣನೆ ಮಾತುಳಾಂತಕ ಮದನಜನಕನೆ ವಾಸುದೇವನೆ ಭಜಿಪ ಭಕ್ತರ ಸೋಸಿನಲಿ ರಕ್ಷಿಸುತ ಪೊರೆಯುವೆ 2 ಭಕ್ತವತ್ಸಲ ಸ್ವಾಮಿ ಭಕ್ತರ ಸುರಧೇನು ಯುಕ್ತ ಮಾತುಗಳಾಡಿ ಸಂತಯಿಸಿ ಸತ್ಯ ಸಂಕಲ್ಪನು ಮತ್ತವರನು ಕಳುಹಿ ಸತ್ಯಸಂಧನ ದಶರಥನುದರದಿ ಪುಟ್ಟಿ ಮತ್ತೆ ವಿಶ್ವಾಮಿತ್ರ ಬರಲು ಅರ್ಥಿಯಲಿ ಯಾಗವನೆ ನಡೆಸಲು ಸುತ್ತಿ ಬರುವ ಸುರರನೆ ಸದೆದು ಮತ್ತೆ ಯಾಗ ನಿರ್ವಿಘ್ನ ಮಾಡಿದ 3 ಸೀತಾಸ್ವಯಂವರಕ್ಕಾಗಿ ಬರುತಿರಲಾಗವರು ಗೌತಮ ಸತಿಯ ಶಾಪಹರಿಸಿ ಪಾತಕಿ ತಾಟಕಿಯನು ಕೊಂದು ಹರುಷದಿ ನಿ- ರ್ಭೀತನಾಗಿ ಮಿಥಿಲಾಪುರಕೆ ಸೇರಲು ಬಂದು ಆತ ಲಕ್ಷ್ಮಣನೊಡನೆ ಶಿವಧನು ನೀತಿಯಿಂದೆತ್ತುತಲಿ ಸೀತೆಯು ಪ್ರೀತಿಯಲಿ ವನಮಾಲೆ ಹಾಕಲು ಆಕೆಯ ಕೈಪಿಡಿದ ರಾಮನೆ 4 ರಾಮಲಕ್ಷ್ಮಣ ಭರತ ಶತ್ರುಘ್ನರಿಗೆ ಲಗ್ನ ನೇಮದಿಂದಲಿ ಮಾಡಿ ಕಳುಹಲಾಗ ಸಾಮಜವರ ಅಯೋಧ್ಯಾಪುರದಿ ಭಕ್ತ- ಸ್ತೋಮವನೆರಹಿ ರಾಜ್ಯಾಭಿಷೇಕವ ನಡಸೆ ಆ ಮಹಾಮುನಿ ಸ್ತೋಮ ಸುರಗಣ ರಾಮನಿಗೆ ಪಟ್ಟವೆನುತ ಹರುಷಿಸೆ ಆ ಮಹಾಕೈಕೆ ವರವ ಬೇಡುತ ರಾಮನಿಗೆ ವನವಾಸವೆನಲು 5 ವನವನ ಚರಿಸುತ ಘನರಕ್ಕಸರ ಕೊಂದು ವನಜಾಕ್ಷಿ ಮಾಯಾಮೃಗವೆ ಬೇಡಲು ವನಮೃಗ ಬೆನ್ನಟ್ಟಿ ತರುವೆನೆನುತ ಪೋಗಿ ಬಣಗು ರಾವಣ ಸೀತಾಹರಣವ ಮಾಡಲು ಕುರುಹು ಕಾಣದೆ ಸೀತೆಯ ವನವನದಿ ಚರಿಸುವ ಸಮಯದಲಿ ಕಪಿ ವರರ ಸೈನ್ಯವ ಕಳುಹಿ ಮುದ್ರಿಕೆ ಇತ್ತು ಜನಕ ಜಾತೆಯ ನೋಡಿ ಬರಲು 6 ಕಡಲ ಕಟ್ಟುತ ಸೈನ್ಯ ನಡಿಸಿ ಯುದ್ಧವ ಮಾಡೆ ಬಿಡದೆ ರಾವಣ ಸಹಿತೆಲ್ಲರನು ಕೊಂದು ಕಡು ಭಕ್ತನಿಗೆ ಲಂಕಾಪುರದಲಿ ಪಟ್ಟವ ಕಟ್ಟಿ ಮಡದಿ ಸಹಿತ ಪುಷ್ಪಕವನೇರಿ ಬರುತಿರೆ ಸಡಗರದಿ ಹನುಮಂತ ಭರತಗೆ ಒಡೆಯ ಬರುತಿಹನೆಂದು ಪೇಳಲು ಕಡುಹರುಷದಿ ಅಯೋಧ್ಯೆಯನಾಳಿದ ಕಡಲೊಡೆಯ ಕಮಲನಾಭ ವಿಠ್ಠಲನೆ 7 ಬಂದ ಶ್ರೀರಾಮಚಂದ್ರ ಭಾಗವತರ ಕೂಡಿಇಂದಿರೆ ಜಾನಕಿ ಸೌಮಿತ್ರಿ ಸಹಿತದಿ
--------------
ನಿಡಗುರುಕಿ ಜೀವೂಬಾಯಿ
ಲವಕುಶರ ಹಾಡು ಹರಿಹರ ಬ್ರಹ್ಮ ತ್ರಿಮೂರ್ತಿಗಳ ಬಲಗೊಂಡು *ಗುರುಹಿರಿಯರ ಪಾದಕ್ಕೆರಗೀ | ಅಜನ ಪಟ್ಟದ ಶ್ರೀ ಸರಸ್ವತಿಯನೆ ಬಲಗೊಂಡು ತೊಡಗುವೆ ರಾಮರ ಕಥೆಯಾ 1 ಬಣ್ಣದ ಅಕ್ಷತೆ ಕಣ್ಣು ತುಂಬೆ ಪುಷ್ಪ ಸು ವರ್ಣ ದಕ್ಷಿಣೆ ತಾಂಬೂಲಾ | ಉಮ್ಮಿಯ ಪುತ್ರ ಗಣೇಶಗೆ ಅರ್ಪಿಸಿ ವರ್ಣಿಪೆ ಲವಕುಶರ ಕಥೆಯಾ 2 ಕುಲದ ಸ್ವಾಮಿ ಕದ್ರಿ ನರಸಿಂಹನ ಬಲಗೊಂಡು | ಗುರು ಮಧ್ವರಾಯರ ನೆನೆದು | ಮನದಲ್ಲಿ ವಿಷ್ಣು ದೇವತೆಗಳ ಬಲಗೊಂಡು ತೊಡಗುವೆ ರಾಮರ ಕಥೆಯಾ 3 ವೇದಪಾರಾಯಣ ಅಂತ್ಯದ ಪೀಠಕ ಮಾಧವ ಹರಿ ಸುಗೋತ್ರ | ವೇದ ಮೂರುತಿ ಕೊಂಡಪ್ಪನ ಪುತ್ರಿಕೆಗೆ (?) ಹೇಳಿದಳುಹರಿನಾಮ ಕಥೆಯಾ 4 ಯಗ್ನ ಸಂತತಿಯೂ ಪೀಠಕವೂ | ಅಜ್ಞಾನಿ ಮೂಢಜೀವರಿಗೆ 5 ಹರುವುಳ್ಳ ನಿರಯಾಗಿಗಳೂ | ಹರವುಳ್ಳ ಕೈ(?)ಮುನಿವಳ್ಳೇರು ಜಾಣರು ತಿಳಿವೂದು ಅರ್ಥಸಂದೇಶ 6 ನಾಡನ ಕಥೆಯಲ್ಲ ಬೇಡುಂಬ ಪದನಲ್ಲ ನಾಡೊಳಗೆ ಹರಿನಾಮ ಕೇಳಿದ ಜನರಿಗೆ | ವಿಲ್ಲವಾಗುವುದು 7 ಪ್ರಚಂಡರು ರಾಮಲಕ್ಷ್ಮಣರು | ಇತ್ತಬೇಟೆಯನಾಡುವ ಕ್ರಮಗಳ ಚಂದವಿನ್ನೆಂತು ವರ್ಣಿಸಲೆ 8 ತಾಂಬೂಲ ಶ್ರೀಮೊಗದಿಂದೆ | ಇಂದುವದನೆಯ ಬಿಗಿದಪ್ಪಿ ಮುದ್ದಾಡಿದ ಇಂದುವದನೆ ಗರ್ಭವೆಂದ 9 ನಳಿನನಾಭನು ತನ್ನ ಲಲನೇಯ ಮುಖನೋಡಿ ಲಲನೆ ನಿನ್ನ ಪ್ರೇಮವೇನೆ | ಮುನಿಯು ಆಮುನಿಗಳು ಕೂಡಿದ ನಂತ್ರ ವನಭೋಜನ ತನಗೆಂದ್ಲೂ 10 ಹಲವು ಕಾಲವು ಸೀತೆ ಅಸುರರ ವಡನಾಡಿ ನೆನದಳು ಋಷಿಗಳಾಶ್ರಮವಾ | ಹಸನವಲ್ಲವು ಸೀತೆ ಇನ್ನು ನೀನುಳಿವದು ಋಷಿಗಳಾಶ್ರಮಕೆ ಹೋಗೆಂದಾ 11 ಅಯೋಧ್ಯಾಪುರದ ವಾನರರೆಲ್ಲಾ ಬಿಟ್ಟು ಕೈಹಿಡಿದ ಪುರುಷನ ಬಿಟ್ಟು | ನೆನದಾಳು ಋಷಿಗಳಾಶ್ರಮವ 12 ಅಂದು ಶ್ರೀರಾಮರು ಬೇಟೆಗ್ಹೋದೇವೆಂದು ಇಂದು ಡಂಗುರವ ಸಾರಿದರೂ | ಒಂದು ಗಳಿಗೆ ಮುಹೂರ್ತತಡೆಯಲಾಗದು ಎಂದು ಮಂದಿ ಮಕ್ಕಳ ಕರಸಿದರೂ 13 ಬಂದರು ಮಂತ್ರಿ ಮಾನ್ಯರು ಪ್ರಹಸ್ತರು ಬಂದರು ಪ್ರಧಾನೇರು | ಬಂದರು ರವಿಗುರಿನವಿಗುರಿಕಾರರು (?) ಬಂದರು ವಾಲಗದೋರೊಪ್ಪಿದರು 14 ಆಟಪಾಟದೋರು ನೋಟಕ್ಕೆ ದಾರಾರು ಸೂತ್ರದವರು ಸುವ್ವಿಯವರು | ಪಾಟಕ್ಕೆ ದಾರಾರು ಪೊಗಳುವ ಭಂಟರು ರಘು ನಾಥನೋಲಗದಲೊಪ್ಪಿದರೂ 15 ಹೊನ್ನು ಹಲಗೆಯವರು ಬೆನ್ನಬತ್ತಲೆಯವರು ಚಿನ್ನಬಿನ್ನಾಣನಾಯಕರೂ | ಚೆನ್ನಿಗರಾಮರ ಪೊಗಳುವ ಭಂಟರು ಬಿನ್ನಾಣದಿಂದೊಪ್ಪುತಿಹರೂ 16 ಪಟ್ಟಾವಳಿ ಹೊಸಧೋತರವು ಇಟ್ಟರು ಆಭರಣವನ್ನೂ | ಮಕರಕುಂಡಲ ಕಿರೀಟವೂ ಇಟ್ಟರು ನೊಸಲ ಕಸ್ತುರಿಯಾ 17 ಹಾರಮಾಣಿಕನಿಟ್ಟು ಕಾಲುಪೆಂಡೆಯನಿಟ್ಟು ನ್ಯಾವಳದ ಉಡುದಾರನಿಟ್ಟು ಸೂರ್ಯನ ಕುಲದ ಕುಮಾರರು ನಾಲ್ವರು ಏರಿದರು ಹೊನ್ನ ರಥವಾ 18 ವಾಯುವೇಗ ಮನೋವೇಗವೆಂಬೋ ರಥ ಏರಿದರೆ ರಾಮಲಕ್ಷ್ಮಣರೂ | ಸೂರ್ಯ ತಾನೆ ರಥವ ನಡೆಸೆ ಕೂಡ ಬೇಟೆಗೆ ತೆರಳಿದರು 19 ಅತ್ತಿ ಆಲದ ಮರ ಸುತ್ತ ಹೆದ್ದುಮ್ಮರಿ ಉತ್ತತ್ತಿ ಬೆಳಲು ದಾಳಿಂಬ ಉತ್ತಮ ಅಶ್ವತ್ಥ ಇಪ್ಪಿಯ ವನಗಳು ವಿಸ್ತರವನವೊಪ್ಪುತಿಹವೂ 20 ನಾರಂಗ ಬೆರಸಿದ ಕಿತ್ತಳಿ ಹರಿಸಿಣದ ತೋಪು ಎಲಿತ್ವಾಟ ಅರಸುಮಕ್ಕಳು ರಾಮಲಕ್ಷ್ಮಣರೆಲ್ಲರು ಬೆರಸಿ ಬೇಟೆಯ ನಾಡುತಿಹರೂ 21 ಯಾರಾಡಿಗಿಡಗಳು ಕ್ಯಾದೀಗಿವನಗಳು ನಾಗಸಂಪಿಗೆಯ ತೋಪುಗಳು | ಜೋಡೀಲಿ ಭರತ ಶತ್ರುಘ್ನರೆಲ್ಲರು ಕಾಲಾಳು ಬೇಟೆನಾಡಿದರೂ 22 ಉದ್ದಂಡ ಕೇಕಾಪಕ್ಷಿ ಚಂದಾದ ಬಕನ ಪಕ್ಷಿಗಳೂ | ಅಂದಾದ ಆಲಿವಾಣ ಆಲಹಕ್ಕಿಯು ರಾಮ ಚಂದ್ರನು ಬೇಟೆಯಾಡಿದನು 23 ಬೇಟೆನಾಡಿ ಬಂದು ನಿಂತಾರು ನೆರಳಲ್ಲಿ ಒಂದುಗಳಿಗೆ ಶ್ರಮವ ಕಳೆದು ನಂದನವನದಲ್ಲಿ ತನಿಹಣ್ಣು ಮೆಲುವೋರು ಗಂಗೆಯ ಉದಕ ಕುಡಿಯುವೋರು 24 ನಳಿನನಾಭನು ತಾನು ಬಳಲಿ ಬೇಟೆಯನಾಡಿ ನೆರಳಲ್ಲಿ ತುರಗ ಮೇಯಿಸಿದ ಕಿರಿಯಲಕ್ಷ್ಮಣ ದೇವ ತೊಡೆಯನ್ನೆ ಕೊಡು ಎಂದು ಮಲಗೀದ ಒಂದು ನಿಮಿಷವನೂ 25 ಮುಂದಿನ ಆಗೆಂತ್ರವ(?) ಕಂಡನು ಕನಸಿನಲಿ ರಾಮ ಕಂಗೆಟ್ಟು ಮೈಮುರಿದೆದ್ದಾ | ಕಂದ ಲಕ್ಷ್ಮಣ ಕೇಳೊ ಇಂದೆನ್ನ ಸೊಪ್ನದಲಿ ಬಂದಿಹಳೊಬ್ಬ ತಾಟಕಿಯೂ 26 ಇಂದುವದನೆಮುಡಿ ಪಿಡಿದಳೆವೊ ದುಕಂಡೆ ತುಂಡರಾವಣ ಕುಯೋದು ಕಂಡೆ | ಇಂದು ನೀ ಸೀತೆಯ ಕರೆದೊಯಿದು ಕಾನನದಿ ದಿಂಜಾರಿಳಿಸೋದು ಕಂಡೆ 27 ಮುನ್ನ ಅರಿಯದೆ ನಾವು ಬಂದೆವೋ ಲಕ್ಷ್ಮಣ ಇನ್ನು ಸೀತೆಗೆ ಜಯವಿಲ್ಲಾ | ಅಂದು ಶ್ರೀರಾಮರಾ ಬೇಟೆ ಮೂಲಕದಿಂದೆ ಬಂದಾಳು ಮಾಯದ ಗರತಿ | 28 ಬಂದು ಅಯೋಧ್ಯಾಪುರದ ಬೀದಿಯವಳಗೆ ಚಂದದಿ ಕುಣಿದಾಡುತಿಹಳು | ಅಂದು ಶ್ರೀ ರಾಮರ ಅರಮನೆ ಬಾಗಿಲಿಗೆ ಚಂದುಳ್ಳ ದ್ವಾರಪಾಲಕರೂ 29 ಬಂದು ಅಸುರೆ ನಿನ್ನ ಬಿಡವಲ್ಲೆನೆಂದರೆ ಬಂದಡರಿದಳರಮನೆಗೆ ಕಂಡು ಜಾನಕಿ ತಾನು ಕರಸಿದಳಾಗಲೆ ಬಂದಳು ಮಾಯದ ಗರತಿ 30 ಬಂದು ಪಾದಕ್ಕೆರಗಿ ಕೈಮುಗಿದು ನಿಂತಳು ತಂದಳು ನಾಗ ಸಂಪಿಗೆಯಾ | ಅಂಗನೆ ಜಾನಕಿ ನೀಮುಡಿಯೆಂದು ಕೊಟ್ಟರೆ ಸಂದೇಹ ಬಟ್ಟಳಾ ಸೀತೆ 31 ಈನಾಡ ಗರತಿ ನೀನಲ್ಲ | ದಾರು ಬಂಧುಗಳುಂಟು ದಾರ ಬಳಿಗೆ ನೀ ಬಂದೀ 32 ಈರೇಳು ಲೋಕವ ಸುತ್ತಿ ತಿರುಗಿ ಬಂದೆ ನಾಗಲೋಕಕ್ಕೆ ಬಾಹೆನೆಂದು ನಾಗಲೋಕದಿಂದ ದೇವಲೋಕಕ್ಕೆ ಬಂದೆ ದೇವಿಗೆ ಕಾಣಿಕೆ ತಂದೇ 33 ಹೊನ್ನು ಹಣವನೀವೆ ಅನ್ನವಸ್ತ್ರವನೀವೆ ಇನ್ನು ನೀವಲಿದದ್ದು ಈವೆ | ಇನ್ನು ನೀವಲಿದದ್ದು ಚೆನ್ನಾಗಿ ಕೊಡುವೆನು ಬಿನ್ನವಿಸೆ ಗರತಿ ನೀ ಅಂದ್ಲೂ 34 ಹೊನ್ನು ಹಣವನೊಲ್ಲೆ ಅನ್ನವಸ್ತ್ರವನೊಲ್ಲೆ ನಿನ್ನ ಭಾಗ್ಯವು ನಾನೊಲ್ಲೆ | ಮುನ್ನಿನ ಅಸುರರೂಪ ಇನ್ನು ನೀಬರೆದರೆ ಹರಣ ಹೊರುವೆನು 35 ಮುನ್ನವನು ಕಂಡು ಕೇಳರಿಯ | ಪನ್ನಂಗಧರ ರಾಮ ಬಂದರೆ ಬೈದಾರು ಗಮನ ಮಾಡಂದ್ಲೂ36 ಅಂದರೆ ಸೀತೆ ತನ್ನಂಗಕ್ಕೆ ಬರಲೆಂದು ತಂದು ತೊಡೆದಳು ಭಸುಮವನು | ಅಂದೆನ್ನ ವನಕೆ ಪ್ರದಕ್ಷಿಣೆ ಬರುವಾಗ ಉಂಗುಷ್ಟವನು ಕಂಡುಬಲ್ಲೆ 37 ಉಂಗುಷ್ಟದಂದಕ್ಕೆ ಮುಂದೆ ಪಾದವ ಬರಿ ಹಿಂದೆ ಹಿಂಬುಡ ಮೊಣಕಾಲು | ಹೊಂದಿಸಿ ಬರೆ ಎಂದಳವಳು 38 ಚಂದಾದ ಕಾಗದ ಲೆಕ್ಕಣಿಕೆ ಪಿಡಿದು ತಂದು ಕೊಟ್ಟಳು ಸೀತೆ ಕೈಗೆ | ಒಂದು ಕಾಯಕೆ ಹತ್ತು ಸಿರಗಳ ಬರೆದಳು ಮುಂದೆರಡು ಪಾದವ ಬರೆದಳು 39 ಒಂದರ ಹಿಂದೊಂದು ವರ್ಣಿಸಿ ಬರೆದಳು ತಂದು ನಿಲಿಸಿದಳು ರಾವಣನಾ | ಚಂದವಾಯಿತು ದೇವಿ ವರವಕೊಡೆನುತಲಿ ಎಂದೆಂದಿಗೂ ಅಳಿಯದ್ಹಾಗೇ 40 ಅಳಿದು ಉಳಿಯದಿರು ಉಳಿದು ನೀ ಕೆಡದಿರು ಧರಿಯವಳಗೆ ಅಡಗದಿರು | ಕಿರಿಯ ಲಕ್ಷ್ಮಣದೇವ ಹೊಡೆದರೆ ಮಡಿ ಎಂದು ವರವ ಕೊಟ್ಟಳು ಸೀತೆ ಪಠಕೆ 41 ಮರೆ
--------------
ಹೆಳವನಕಟ್ಟೆ ಗಿರಿಯಮ್ಮ