ಒಟ್ಟು 5 ಕಡೆಗಳಲ್ಲಿ , 4 ದಾಸರು , 5 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಉಗಾಭೋಗ ಹಿಂದಿನ ಊರಿಗೆ ಹಿಂತಿರುಗುವುದಿಲ್ಲ ಮುಂದಿನ ಊರಿನಾನಂದವ ಕಂಡಿಲ್ಲ ಇದ್ದಿದ್ದ ಊರೊಳು ಇರುವ ಹಾಗೆ ಇಲ್ಲ ನಂದ್ಯಾವ ಊರೆಂಬೊದನ್ಯರಿಗಳವಲ್ಲ ಸಂದಗ್ಧವಾದಂಥ ಇದರ ಅರ್ಥಗಳನು ತಂದೆ ಮುದ್ದುಮೋಹನರ ಬಿಂಬಶ್ರೀ ಸುಂದರ ಗೋಪಾಲಕೃಷ್ಣವಿಠ್ಠಲ ಬಲ್ಲ
--------------
ಅಂಬಾಬಾಯಿ
ನಿನ್ನ ದಾಸನು ನಾನು ಎಂತಾಹೆನಯ್ಯಅನ್ನಂತ ಅಪರಾಧಕಾಕರಾದವನು ಪ. ಅರುಣೋದಯವ ಜರಿದು ಆಹ್ನಿಕ ಕರ್ಮವ ತೊರೆದುಪೊರೆವ ನಿನ್ನಡಿಯ ಮರೆದುದುರುಳರಿಗೆ ಬಾಯ್ದೆರೆದು ದೈನ್ಯದಲಿ ಪಲ್ಗಿರಿದುಮರಿಯಾದೆಗೆಟ್ಟು ತಿರಿದುಇರುಳು ಹಗಲೆನ್ನದೆ ಈ ವಿಧದಿ ಹೊಟ್ಟೆಯಹೊರೆದು ಇದು ಪುಣ್ಯ ಇದು ಪಾಪವೆಂದರಿಯದವ 1 ಜಟ್ಟಿಗಳ ಮನೆಯ ನಾಯಂತೆ ಒಳ್ಳೆಬಟ್ಟೆಗಳತೊಟ್ಟವರ ಹಿಂದೆ ತಿರುಗಿಅಟ್ಟುಂಡು ಬಾಳಿಬದುಕಿದ ತಮ್ಮ ಹಿರಿಯರುಕೆಟ್ಟು ಮುರಿದುದನು ಪೇಳಿಉಟ್ಟ ಅರಿವೆಯ[ಕೋರಿ] ಹೊಟ್ಟೆ ಬಾಯನೆ ತೋರಿಕೊಟ್ಟುದಕೆÉ ತೃಪ್ತನಾಗದೆ ಅವರ ಬಯ್ವವನು 2 ವೃತ್ತಿ ಅಲ್ಲದ ಶೂದ್ರ ವೃತ್ತಿಗಳನನುಸರಿಸಿ ಅ-ಕೃತ್ಯ ಶತಗಳನು ಮಾಡಿಸತ್ಯ ಶೌಚಂಗಳ ಬಿಟ್ಟು ಶ್ರವಣ ಮನನಾದಿ ಪ್ರ-ಸಕ್ತಿಗಳ ಹೋಗಲಾಡಿಉತ್ತಮರು ತಾಯಿತಂದೆ ಗುರುಹಿರಿಯರುಗಳಅರ್ಥಗಳನಪಹರಿಸಿ ಅವರ ನಿಂದಿಸುವನು 3 ಪರ್ವ ಉಪರಾಗ ದ್ವಾದಶಿ ಅಯನಗಳಲ್ಲಿಸರ್ವವಿಹಿತಗಳ ಮೀರಿಉರ್ವಿಯೊಳು ಉಳ್ಳ ಯೋಗ್ಯರನೆಲ್ಲ ಹಳಿದೆನ್ನನಿರ್ವಾಹಗಳನೆ ತೋರಿದುರ್ವಿಚಾರದಿ ಸ್ವಲ್ಪಧನಕಾಗಿ ಎನ್ನೊಳಿಹಪೂರ್ವಸಂಚಿತಮಂತ್ರ ತುಚ್ಛರಿಗೆ ಮಾರಿದವ 4 ಛಲ ಚಾಡಿ ಡಂಭ ಮಿಥ್ಯಾಜ್ಞಾನ ದುರ್ವಿಷಯಕುಲಸತಿಯ ಕೂಡೆ ಕಲಹಕಳವು ಕಠಿಣೋಕ್ತಿ ದುಷ್ಟಾನ್ನಭೋಜನ ಮದುವೆ-ಗಳ ಮುರಿವ ಪಾಪಚಿಂತೆಹಳಿವ ಹರಿವಾಸರ ವ್ರತಭಂಗದಿಂದ ನಾನಾಗಿಸುಲಭ ಹಯವದನನ್ನ ಮರೆತ್ಹಾಳುಹರಟೆಯವ 5
--------------
ವಾದಿರಾಜ
ಪರಸೌಖ್ಯ ಪ್ರದ ವಿಠಲ | ಪೊರೆಯ ಬೇಕಿವಳಾ ಪ ದುರಿತ ದುಷ್ಕøತವೆಲ್ಲ | ದೂರ ಓಡಿಸುತಾ ಅ.ಪ. ಅಚ್ಯುತ ಕ್ಷಿತಿ ರಮಣ ಸೇವಾ 1 ಸಾಧನಕೆ ಸಹಕಾರಿ | ಸಾಧು ಜನ ಸತ್ಸಂಗನೀ ದಯದಿ ಒದಗಿಸುತ | ಕಾಪಾಡೊ ಹರಿಯೇ |ಮೋದ ತೀರ್ಥರ ಮತವ | ಭೋಧಿಸುತ ಇವಳೀಗೆಮೋದ ಪಾಲಿಸಿ ಹರಿಯೆ ಉದ್ಧಾರ ಮಾಡೋ2 ಮಾತೃದತ್ತವು ಎನ್ನೆ | ವೆಂಕಟೇಶನ ಪೂಜೆಸಾರ್ಥಕೆನಿಪುದು ಹರಿಯೆ | ಪಾರ್ಥ ಸಾರಥಿಯೇಕಾರ್ತಸ್ವರ ಮೊದಲಾದ | ಅರ್ಥಗಳ ಯೋಚಿಸಳುವಾರ್ತೆ ಎನ್ನನು ಭವವು ಆರ್ತರುದ್ಧರಣಾ 3 ತಂದೆ ಮುದ್ದು ಮೋಹನ್ನ | ಗುರುವನುಗ್ರಹವಿಹುದುಇಂದು ನಿಮ್ಮದಿ ನಮಿಸಿ | ಅಂಕಿತದ ಪದವಾಛಂದದಲ್ಯುದ್ಧರಿಸಿ | ಉಪದೇಶಿಸುತ್ತಿಹೆನುಮಂದನುದ್ಧಟ ತನವ | ತಂದೆ ಮನ್ನಿಪುದೋ 4 ಇಂದು ಮುಖಿ ಹೃದಯದಾ | ಅಂಬರದಿ ಪ್ರಕಾಶಿಸೆನೆನಂದ ತೀರ್ಥಸುವಂದ್ಯ | ಪ್ರಾರ್ಥಿಸುವೆ ನಿನಗೇತಂದೆ ಮುದ್ದು ಮೋಹನ್ನ | ವಿಠ್ಠಲನೆ ಗುರು ಗೋ-ವಿಂದ ವಿಠ್ಠಲ ಎನ್ನ | ಭಿನ್ನಪವ ಸಲಿಸೋ 5
--------------
ಗುರುಗೋವಿಂದವಿಠಲರು
ಪಾದ | ಜಯ ಮುಖ್ಯ ಪ್ರಾಣ ಮೋದ | ತೀರ್ಥಾರ್ಯ ಎನ್ನ ಹಂಬಲಿಗೆ ಕೊಡೊ ಭೇದ | ಅರ್ಥಗಳ ವಾದ ಪ. ಪಾದ ಹೃದಯ ನಿತ್ಯ ಹರಿಯ ಬಿಂಬ ತೋರಿಸಿ ಎನ್ನ ಭವದ ಅಂಬುಧಿ ಕಡೆ ಮಾಡು ವೇಗದಿ ಅ.ಪ. ನೂರ ತೊಂಭತ್ತಷ್ಟ | ಕಲ್ಪದಲಿ ಹರಿಯ ಆರಾಧಿಸಿದೆಯೊ ಶ್ರೇಷ್ಠ | ಅಲ್ಲಿಂದ ಮುಂದೆ ಸ- ವಿೂರ ಪದಕೆ ದಿಟ್ಟ | ಬಂದೆಯೊ ಉತ್ಕøಷ್ಟ ಪಾದ ಭಜಿಸಿ ಮೂರು ಅವತಾರವನೆ ಧರಿಸಿ ವೀರ ಕಪಿರೂಪದಲಿ ರಾಮರ ವಾರಿಜಾಂಘ್ರಿಯ ಭಜಿಸಿ1 ಭುಜ ಪರಾಕ್ರಮ ಭೀಮ | ನೆಂದೆನಿಸಿ ಕೌರವ ಧ್ವಜವ ಕೆಡಹಿದ್ಯೊ ಸೋಮ | ವಂಶಕೆ ತಿಲುಕ ನೀ ಧ್ವಜ ಕಪಿಗೆ ಬಹುಪ್ರೇಮ | ನಿನ್ನಲಿ ಹರಿಯ ಧಾಮ ದ್ವಿಜನ ಉದರದಿ ಜನಿಸಿ ಅಲ್ಲಿಂ ಕುಜನ ಮತವನು ತರಿದು ಹರಿಯ ಪಾದ ಭಜನೆ ನಿಜಗತಿಗೆ ಬಹು ಶ್ರೇಷ್ಠವೆನಿಸಿದೆ 2 ವ್ಯಾಪಕನೊ ನೀ ಎಲ್ಲಾ | ಕಡೆಯಲಿ ನಿನ್ನ ರೂಪ ತುಂಬಿಹದಲ್ಲಾ | ಎನಗದನು ತೋರೊ ಪತಿ ಗೋಪಾಲಕೃಷ್ಣವಿಠ್ಠಲ | ಲೀಲ ನೀ ಪರಿಪರಿಯಿಂದ ತಿಳಿಸಿ ತಾಪ ಹರಿಸೊ ಮೂರು ವಿಧದ ಪಾಪಿ ಎಂದು ಎನ್ನ ನೂಕದೆ ಕಾಪಾಡೊ ಪಂಚರೂಪ ಮೂರುತಿ 3
--------------
ಅಂಬಾಬಾಯಿ
ಮಾಡುಸಾಧು ಸೇವೆಯ ಬೇಡು ಆಭಯಕೂಡು ನಂತರ ನೀ ನಿರಂತರೀಡಾಡಿದರೆಅಂಜಿ ಓಡದೆ ಆತ್ಮ ಪ.ಸಂತರೊಳು ಕುತರ್ಕ ಕಲ್ಪಾಂತ ರೌರವನರ್ಕಸಂತರೊಳು ಉಗ್ರ ಮನಸು ಆದ್ಯಂತ ಪಾಪದ ಬೆಳಸುಸಂತರ ಕೂಡ ದುಶ್ಚಿತ್ತ ದೇಹಾಂತ ಪ್ರಾಯಶ್ಚಿತ್ತಸಂತರಾಧೀನನಾದರೆಹರಿತಾ ಸಂತೋಷದಿಂದ ಒಲಿವನುನಿತ್ಯ1ತೀರ್ಥ ಸ್ನಾನವು ಹಲವು ಕಾಲೋತ್ತರಕಾಹುದು ಫಲವುಮೂರ್ತಿಔಪಾಸನವು ಧರ್ಮಾರ್ಥ ಮುಂದಣ ಅನುವುಅರ್ಥಗಳ ವಿತರಣವು ಶೂನ್ಯಾರ್ಥ ಸಮಯಕೆ ದಣಿವುಸಾಥರ್Àಕವು ಸಧ್ಯ ಸಾಧುನಿಕರದಗಾತ್ರಕ್ಷೇತ್ರಯಾತ್ರೆಯ ಬಿಡದೆ2ಸಾಧುಸಂಗವಗಿಲ್ಲ ಮುಕ್ತಿಯ ಹಾದಿ ಅವನಿಂಗಿಲ್ಲಸಾಧುರದಾವಹಳಿವ ತಮಸಕೈದುವುದು ಅವನ ಕುಲವುಸಾಧುಕೃಪೆ ದಾವಗುಂಟು ಎಲ್ಲಿ ಹೋದರಾನಂದದ ಗಂಟುಸಾಧುಪ್ರಿಯ ಪ್ರಸನ್ವೆಂಕಟರಮಣನು ಸಾಧುರ ಮೆಚ್ಚಿದವರಿಗೆಮೆಚ್ಚುವನು 3
--------------
ಪ್ರಸನ್ನವೆಂಕಟದಾಸರು