ಒಟ್ಟು 22 ಕಡೆಗಳಲ್ಲಿ , 2 ದಾಸರು , 20 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಅಧ್ಯಾಯ ಒಂದು ಜಯ ವಿಬುಧನುತರ ಚರಣ ಜಯತು ನಾಗಾಭರಣ ಜಯ ಭಕ್ತ ಜನ ಶರಣ ಜಯ ದುಃಖಹರಣ 1 ಜಯತು ಖಳಕೃತಕದನ ಜಯಜಯತು ಜಿತಮದನ ಜಯ ಜಯತು ಸುಖಸದನ ಜಯ ಪಂಚವದನ2 ಜಯತು ಶ್ರೀಶಕೈಲಾಸ ಜಯ ಭಜಕವಿಶ್ವಾಸ ಜಯ ಅನಂತಾದ್ರೀಶ ಪ್ರಿಯಪಾರ್ವತೀಶ 3 ಪದ ಮುಂಚೆ ನುತಿಸುವೆ ಭಕುತಿಯಿಂದಲಿ ಪಂಚವದನನ ಪಾದಪಂಕಜ ಚಂಚಲಾಗದಲಿರಲಿ ಮನ ಮತಿ ಮುಂಚೆ ಕೊಡುಯೆಂದು ಹಿಂಚೆ ಕುಲ ದೇವಾದಿ ಪದಯುಗ ವಂಚನೆಯು ಇಲ್ಲದಲೆ ನುತಿಸುವೆ ಹಂಚಿಕಿಂದಲಿ ಕುಶಲಬುದ್ಧಿ ಪ್ರಪಂಚ ಕೊಡುಯೆಂದು 1 ಮನಸಿಜನ ಗೆದ್ದವರು ಮೇದಿನಿಯ ಹುಡಿಕಿದರಿಲ್ಲಾ ಮತ್ತೀಮನಸು ಗೆದ್ದವರುಂಟೆಯೆಲ್ಲರಿ ಗನುಭವಾಗಿಹುದು ಮನಸಿಜನ ಗೆದ್ದಂಥ ರುದ್ರನು ಮನಕೆ ತಾ ಅಭಿಮಾನಯಾಗಿಹ ನೆನುತ ಮೊದಲಾತನನ ನುತಿಸಿದೆ ಮನಸಿನೊಳಗಿಟ್ಟು 2 ಸಾರಲಿಂಗ ಪುರಾಣದರ್ಥದ ಸಾರಿ ತಿಳುವುತ ಮತ್ತೆ ಗ್ರಂಥ ವಿ ಚಾರ ಮಾಡುತ ಅದರ ಅರ್ಥವ ಪೂರ್ಣ ತಿಳಕೊಂಡು 'ಶ್ರೀರತಾನಂತಾದ್ರಿ' ರಮಣನ ಸಾರ ಕೃಪೆಯಿಂದಲೆಯೆ ಪೇಳುವೆ ಪಾರ್ವತೀಶಗೆ ಪ್ರೀತಿಕರ ಶಿವ ಪಾರಿಜಾತವನು 3 ಪದ ಪೂರ್ವದಲ್ಲಿ ಪಾರ್ವತಿಯು ಪರ್ವತಶ್ರೇಷ್ಠ ಹಿಮ ಪರ್ವತದ ಮಧ್ಯದಲ್ಲಿ ಸರ್ವಗುರು ಕೈಲಾಸ ಪಾರ್ವತೀಶನ ಮನ:ಪೂರ್ವಕದಿ ಬಯಸುತಲ ಪೂರ್ವ ತಪ ಮಾಡುತಿರುವಳಲ್ಲೆ ಪಾರ್ವತಿಯ ಕಷ್ಟ ಹಿಮಪರ್ವತನು ತಾ ನೋಡಿ ಸರ್ವ ಕಾರ್ಯವ ಬಿಟ್ಟು ಇರುವ ಬಲು ಚಿಂತೆಯಲಿ ಸರ್ವಸಂಪನ್ನಳಾಗಿರುವಳೆನ್ನ ಮಗಳು ಈ ಪಾರ್ವತಿಗೆ ತಕ್ಕ ವರನಿರುವನಾರೆಂದು 1 ಬಂದನಾಗಲ್ಲವನ ಮಂದಿರಕೆ ನಾರದನು ಮುಂದೆ ಗಿರಿರಾಜ ಅಲ್ಲಿಂದ ಆತನಕಂಡು ಇಂದು ಇಲ್ಲಿಗೆ ನೀವು ಬಂದು ಕಾರಣವೇನುಯೆಂದು ಕೇಳಿದನು ಅಂದ ಮಾತನ್ನು ಕೇಳಿ ಮುಂದೆ ಮುನಿರಾಜ ತಾ ಮಂದಹಾಸದಿ ನಗುತವೊಂದೊಂದು ಕಥೆ ಪೇಳಿ ಛಂದದಲಿ ಮನಸಿಗಾನಂದ ಬಡಿಸುತ ನುಡಿದ ಬಂದ ಕಾರ್ಯವ ಅವನ ಮುಂದೆ ವಿಸ್ತರದಿ 2 ಪದ ತಿಳಿಯೋ ನೀ ಗಿರಿರಾಜ ನಾ ಬಂದ ಕಾರ್ಯವ ತಿಳಿಯೋ ನೀ ಗಿರಿರಾಜ ಭೋರಾಜರಾಜಾ ತಿಳಿಯೋ ನಿನಗೊಬ್ಬಳಿಯ ಬಂದಿಹ ನಳಿಯನಾಗಿ ಮುಖಕಳೆಯು ಉಳ್ಳವ ಇಳೆಯೊಳಿಂಥಾ ಅಳಿಯನ ಸಮ ಅಳಿಯನಿಲ್ಲ ಕಾಲ್ಗಳೆಯುದಲೆ ಇರು ಪ ಹರಿಯಿರುವ ಪ್ರಖ್ಯಾತಾ ಸರ್ವರಿಗೆ ಆತನೆ ದೊರೆಯೆನಿಸಿಕೊಂಬಾತಾ ಕರಿರಾಜ ಕೂಗುತ ಕರೆಯಲೊದಗಿದನಾತಾ ತನ್ನ ಸ್ಮರಿಸಿದವರನು ಮರೆಯದಲೆ ಪೊರೆವಾತಾ ಅನಾಥಾನಾಥ ಧರೆಯೊಳಗೆ ಶ್ರೀಹರಿಯ ಮೂರ್ತಿಯ ಸರಿಯುಯಿಲ್ಲವು ಮರೆಯದಲೆ ಆ ಸಿರಿಯ ರಮಣನ ಕರೆಯ ಕಳಿಸುತ ಹಿರಿಯ ಮಗಳನು ಹರಿಗೆ ಅರ್ಪಿಸು1 ಬಡವನಲ್ಲವು ಆತಾ ಬಹುಬಡವ ಭಕ್ತರ ದೃಢವ ನೋಡುವನಾತಾ ತಾ ಬಿಡದೆ ಕರವನು ಪಿಡಿವ ಸ್ನೇಹ ಸಮೇತಾ ಬೇಡಿದ್ದು ತ್ವರದಲಿ ಕೊಡುವನವ ಬಹು ದಾತಾ ಲಕ್ಷ್ಮಿಯಸತ್ತಾ ದೃಢವಿರಲಿ ಮನ ಪೊಡವಿರಲಿ ಉಂಬುಡುವ ಮಗಳನು ತಡವು ಮಾಡದೆ2 ಕೊಡುವದುಚಿತವು ಒಡವೆಗಳು ಬಹಳಿಡುವುತಲೆ ಸುಖಪಡುವಳಾಕೆಯು ಎಂಥವನು ಅವ ತಾನು ಎಂಬಂಥ ಮನಸಿನ ಭ್ರಾಂತಿ ಬಿಡು ಎಲೋ ನೀನು ಅತ್ಯಂತವಾಗಿಹ ಶಾಂತ ಮೂರುತಿ ತಾನು ಎಂತೆಂಥವರಿಗವ ನಂತ ತಿಳಿಯದು ಇನ್ನು ಮತ್ಹೇಳಲೇನು ಇಂಥ ಶ್ರೀಮದನಂತಾದ್ರೀಶನು ಕಾಂತಿಯಿಂದಿರುವಂಥ ಮಗಳಿಗೆ ನಿಶ್ಚಿಂತೆಯಿಂದಿರು 3 ಪದ ಮುನಿಯ ಮಾತನು ಕೇಳಿ ಮನಸಿನೊಳು ಹಿಗ್ಗುತಲೆ ಮನದ ಚಿಂತೆಯ ಬಿಟ್ಟು ಮನಸಿಜಪಿತನು ಎನ್ನ ಮನಿ ಅಳಿಯನಾದ ಎನ್ನ ಜನುಮ ಸಾರ್ಥಕವಾಯಿ ತೆನುತ ತಿಳಿದನು ತಾನು ಘನ ಹಿಮಾಚಲನು ಅನುದಿನವು ತನ್ನಲ್ಲಿ ಅನು ಕೂಲವಾಗುತಲೆ ತನಗೆ ಹಿತಮಾಡುತಿಹ ಜನರೊಳಗೆ ಮ- ತ್ತಾಪ್ತ ಜನರನ್ನು ಕೇಳದಲೆ ಅನುಮಾನ ಬಿಟ್ಟು ಹೀಗೆನುತ ಮಾತಾಡಿದನು ಮುನಿಯ ಮುಂದೆ ಪದ ಕೊಡುವೆನು ಆ ವಿಷ್ಣುವಿಗೆ ಮಗಳನ್ನು ಕೊಡುವೆನು ಕೊಡುವೆನು ಸಂತೋಷ ಬಡುವೆನಾತನ ಪಾದಾ ಹಿಡಿವೆನು ಚಿಂತೆಯ ಬಿಡುವೆನು ಮಗಳನ್ನು ಪ ನಾರದ ನಿನಮಾತು ಇನ್ನು ಸರಿ ಬಾರದು ಆರಿಗೆ ಮುನ್ನ ನೀರದ ವರ್ಣನ ತೋರಿದ ಬುದ್ಧಿ ವಿ ಶಾರದ ನಿನ್ನ ಮಾತು ಮೀರದೆ ಮಗಳನ್ನು ಕೊ....1 ನಿನ್ನ ಮಹಿಮೆ ಬಲ್ಲೆ ನಾಲ್ಕುಲೋಕ ಮಾನ್ಯರಿಗತಿಮಾನ್ಯ ನೀನು ನಿನ್ನ ಚಿತ್ತಕೆ ಬಂದರಿನ್ನೇಕೆ ತಡಬಹು ಚೆನ್ನಾತ ಆತಗೆ ಮನ್ನಿಸಿ ಮಗಳನ್ನು ಕೊ....... 2 ಭಾಷೆಯು ಅದು ಸುಳ್ಳಲ್ಲ ಲೇಸಾಗಿ ನಾನಿನ್ನ ಭಾಷೆಗೆ ಮೆಚ್ಚಿ ಉಲ್ಲಾಸದಿ `ಅನಂತಾದ್ರೀಶಗೆ ' ಮಗಳನ್ನು ಕೊಡುವೆನು3 ಪದ ಬ್ರಹ್ಮಪುತ್ರ ಕೇಳಿ ಸಂಭ್ರಮ ಬಡವುತ ನಮ್ಮ ಕಾರ್ಯ ಆಯಿತೆಂದು ಸುಮ್ಮನಿರುವುತ 1 ಒಮ್ಮಿಂದೊಮ್ಮೆಲೆದ್ದು ಮತ್ತೊಮ್ಮೆ ಹೇಳುತ ರಮಿಸದಲೆ ನಡೆದ ತನ್ನ ಜಿವ್ಹೆ ತೋರುತ 2 ಹೋಳು ತಂಬೂರಿ ತಂತಿಗಳನು ಮೀಟುತ ಚೆಲುವ ಮುನಿಯ ನಡೆದ ಬಾಗಿಲವ ದಾಟುತ 3 ಚೆಂದವಾಗಾನಂದ ಭಾರದಿಂದ ಮಣಿವುತ ಮುದೆ ಪಾರ್ವತಿಯ ಬಳಿಗೆ ಬಂದು ಕುಣಿಯುತ 4 ಮುನ್ನ ನುಡಿದ ಮದುವೆಯ ಸುದ್ದಿಯನು ನಗವುತ ಚೆನ್ನಿಗ`ನಂತಾದ್ರೀಶ'ನನ್ನು ಸ್ಮರಿಸುತ 5 ಪದ ಕೇಳಮ್ಮ ಹೊಸಸುದ್ದಿ ಪಾರ್ವತಿ ನಿನಗೆ ಹೇಳಬಂದೆನು ಎನಗಿದು ಪ್ರೀತಿಪ ಪಂಕಜನಾಭ ಬರುವನಂತೆ ನಿನ್ನ ಕಂಕಣಕಯ್ಯ ಪಿಡಿವನಂತೆ ಪಂಕಜಮುಖಿಯೆ ನಿಶ್ಚಯವಂತೆ ನಿ ಶ್ಯಂಕೆಯಿಂದಿರು ಯಾತಕೆ ಚಿಂತೆ 1 ನಕ್ಕು ಆಡುವನಲ್ಲವು ನಾನು ಎ ನ್ನಕ್ಕಯ್ಯ ನಿನಗೆ ಹಿತ ಪೇಳುವೆನು ಮಿಕ್ಕ ಮಾತುಗಳಿಂದ ಫಲವೇನು ನಿನ್ನ ತಕ್ಕ ಪುರುಷ ಅವ ತಿಳಿ ನೀನು 2 ಶ್ರೀಮದನಾಂತಾದ್ರಿವಾಸಗೆ ನಿನ್ನ ನೇಮಿಸಿದ ಹಿಮವಂತನು ಈಗ ಕೋಮಲಾಂಗಿಯೇ ಎನ್ನ ಮನಸಿಗೆ ಬಂತು ಈ ಮಾತು ಸತ್ಯವಾಗಲಿ ಬೇಗ 3 ಪದ ಪರಿ ಸುದ್ದಿಯುಂಟೆಂದು ಪೇಳುತಲೆ ಟಣ್‍ಟಣನೆ ಜಿಗಿವುತು ತ್ಕಂಠzಲ್ಲಿ ಅಲ್ಲಿಂದ ಹೊರಟು ಮುನಿಬಂದು ವೈ ಕುಂಠದಲಿ ತಾ ನುಡಿದ ಉಂಟಾದ ಸುದ್ದಿ ವೈಕುಂಠಪತಿಗೆ ಎಂಟೆಂಟು ಕಳೆಯಿಂದ ಉಂಟಾದ ಪಾರ್ವತಿಯ ಗಂಟು ಹಾಕಿದೆಯೆನಲು ತಂಟಕನೋ ನೀ ಕಲಹಗಂಟಕನೋ ಸರಿಯಿನ್ನು ಭಂಟನಹುದೆಂದು ವೈಕುಂಠಪತಿನಕ್ಕ 1 ನಾರದನ ಮಾತು ಸರಿಬಾರದೆ ಪಾರ್ವತಿಯು ತೀರದಂಥಾ ದು:ಖವಾರಿಧಿಯಲಿ ಮುಳುಗಿ ಸಾರಿದಳು ತನ್ನೊಳಗೆ ಘೋರಾದ ಚಿಂತೆ ಬಂತಾರಿದನು ಬಿಡಿಸುವರು ತೋರದೆನಗೆ ತೋರದಿರಬೇಕು ನಾ ದೂರದಲಿ ಇಲ್ಲೆ ಇರಬಾರದೆಂತೆಂದು ಸುಖ ತೋರದಲೆ ತನ್ನ ಮಾತು ಮೀರದಲೆ ಇರುವ ಸುವಿ ಶಾರದಳು ಸಖಿಯೊಡನೆ ಘೋರಾದರಣ್ಯವನು ಸೇರಿದಳು ತಾನು ಮುಂದೆ ಮತ್ತಾಕೆಯ ಮುಂದೆ ಮಾತಾಡದಲೆ ನೊಂದು ತನ್ನೊಳಗೆ ತಾ ತಂದು ಆ ವನದಲ್ಲಿ ಮುಂದೇನು ಮಾಡಲೆಂತೆಂದು ತಿಳಿಯದೆ ಮರುಗಿ ಮಂದಗಮನೆಯು ಚಿಂತೆಯಿಂದ ಮಲಗಿದಳು ಮುಂದೆ ಆ ಸಖಿ ನೋಡಿ ಸಂದೇಹ ಬಡುತ ತ್ವರ ದಿಂದ ಬದಿಯಲಿ ತಾನು ಬಂದು ಹಾ ಇದುಯೇನು ಇಂದು ಮುಖಿ ಹೀಗೆಯೆಂದೆಂದು ಮಲಗುವಳಲ್ಲ ಇಂದೇನು ಬಂತು ಇಂತೆಂದು ಚಿಂತಿಸುತ ಹೀಗೆಂದಳಾಗ 2 ಪದ ಇಲ್ಲೇಕೆ ಮಲಗಿದೆ ಹೇಳಮ್ಮ ನೀ ಇಲ್ಲೇಕೆ ಎಲ್ಲಾನು ಬಿಟ್ಟು ವನದಲ್ಲಿಯೆ ಪಾರ್ವತಿ ಮಂದಿರ ಪ ಬಿಟ್ಟು ಇಲ್ಲಿ ಮಲಗುವರೆ ನಿನಗೆ ಬಂದಿಹದೇನು ಹೇಳದಿರುವರೆ ನಿನ್ನ ತಂದೆ ತಾಯಿಗಳೆಷ್ಟು ಮರಗುವರೆ ಇಂದು ಮುಖಿಯಳೆ ಯಾರೇನಂದರೇನೆ ಗೆಳತಿ ನಿನಗೆ 1 ನಿನ್ನ ಪ್ರಾಣದ ಸಖಿನಾನಲ್ಲೆ ನಿನ ಗಿನ್ನಾರಿರುವರು ಹಿತವರು ಇಲ್ಲೆ ನಾ ನಿನ್ನ ಕಾರ್ಯವ ಮಾಡುವಳಲ್ಲೆ ಚಿನ್ನದಂಥವಳೆ ನೀ ಘನ್ನಾರಣ್ಯಕೆ ಬಂದು 2 ನಿದ್ರೆ ಬಂದಿಹುದೇನೆ ನಿನಗಿಂದು ಅಥವಾ ಬುದ್ಧಿ ಹೋಯಿತೆ ಮತ್ತೆ ನಿನ್ನದು ಇಂದು ತಿಳಿಯದು ಬುದ್ಧಿವಂತಿಯೆ ಅನಂತಾದ್ರೀಶನಾಣೆ ನಿನಗೆ 3 ಪದ ಇಂದು ಮುಖಿ ಪಾರ್ವ ತಿಯು ಹಿತದಿಂದ ಆಡಿದ ಮಾತು ಒಂದೊಂದು ಸ್ಮರಿಸುತಲೆ ಛಂದಾಗಿ ಮನಸಿಗೆ ತಂದು ನೋಡಿದಳು ಇಂದು ಯೆನ್ನ ಭಾಗ್ಯಕ್ಕೆ ತಂದೆ ತಾಯಿಗಳಿಲ್ಲ ಬಂಧು ಬಾಂಧವರಿನ್ನು ಮುಂದೆಲ್ಲಿ ಬರುವವರು ಸಂದೇಹವೇಕೆ ಸಖಿ ಯಿಂದಧಿಕ ಮತ್ತಿಲ್ಲ ವೆಂದು ದು:ಖವ ಸಖಿಯ ಮುಂದ ಹೇಳಿದಳು 1 ಪದ ಏನು ಹೇಳಲಿಸಖಿ ಇನ್ನೇನು ಹೇಳಲಿ ನಾನು ಖೂನದಿ ತಂದೆಯು ಹರಿಗೆಯೆನ್ನನು ನೇಮಿಸಿದಾ ಪ ಮೃತ್ಯುಂಜಯ ಮೃಡನೆ ಎನ್ನ ಚಿತ್ತಕೊಪ್ಪುವ ಪತಿಯು ಸತ್ಯದಿ ಆಗಲಿಯೆಂದು ಚಿತ್ತದಿ ಬಯಸುತಲೆ ನಿತ್ಯದಿ ಬಹುದಿನ ಬಿಡದಲೆ ಅರ್ಥಿಲೆ ಮಾಡಿರುವಂಥ ಪಾರ್ಥೇಶ್ವರನಾ ಪೂಜೆಯು ವ್ಯರ್ಥಾಯಿತಲ್ಲೆ 1 ನಾರದ ಮುನಿಯಿ ಮಾತು ಸಾರಿದ ನನ್ನಲಿ ಬರಿದು ಬಾರದೆನ್ನ ಮನಸಿಗೆ ಅದು ತಾರದೆ ನಾ ಬಂದೆ ಮೀರಿದ ಕೆಲಸವು ತೀರಲಾರದು ಅದು ಎಂದು ಸೇರಿದೆ ವನವನು ನಾಕಾಲೂರದೆ ಮನೆಯಲ್ಲೆ2 ಹೃದ್ರೋಗದಿ ಬಳಲುವಳಿಗೆ ನಿದ್ರೆಯೆಂಬುವದೆಲ್ಲೆ ಭದ್ರಾಂಗಿಯು ಸತಿ ನಾನು ಉದ್ರೇಕದಿ ಮೈಮರೆತು, ಹಿಮಾದ್ರಿಯು ಎನ್ನನು ಕೈಲಾ ಸಾದ್ರೀಶನ ಬಿಟ್ಟು ಅನಂತಾದ್ರೀಶಗೆ ಕೊಡುವ3 ಪದ ಪರಿ ಮಾತುನು ಕೇಳಿ ಆ ಪ್ರಾಣದ ಸಖಿ ತಾನು ಪರಿ ಮಾತಾಡಿದಳು ಆ ಪಾರ್ವತಿಯ ಮುಂದೆ ಏ ಪಾರ್ವತಿಯೇ ಬಿಡುಸಂತಾಪವ ನಿನಗೊಂದು ಹೇಳುವೆ ಆ ಪಿತಗರಿಯದೆ ನಡೆ ನೀ ತಾಪಸವನದಲ್ಲೆ 1 ಈ ರೀತಿಯ ನುಡಿ ಕೇಳಿ ಹಾರೈಸುತ ಸಖಿಕೂಡಿ ಪಾರ್ವತಿ ತಾ ನಡೆದಳು ಘೋರಾರಣ್ಯದಲಿ ಇರ್ವಳು ಆಳುPದೆÀಲಿಂಗಾಕಾರವು ಪೂಜಿಸುತಲ್ಲೆ ಚಾರ್ವಾಂಗಿಯು ತಾ ನಿದ್ರಾಹಾರವು ಇಲ್ಲದಲೆ2 ದೀನೋದ್ಧಾರಕ ಶಿವನು ತಾನೆ ಅಲ್ಲಿಗೆ ಬಂದು ಏನು ಬೇಡುವೆ ಪಾರ್ವತಿ ನೀನು ಬೇಡೆಂದ ಏನು ಧೇನಿಸುವೇ ಬಿಡು ಮಾನಿನಿಯೆ ಭಕ್ತಾ ಧೀ ನಾನಂತಾದ್ರೀಶನ ಆಣೆ ನಿನಗುಂಟು 3 ಪದ ಹರನ ಮಾತನು ಕೇಳಿ ಹರಿಣಾಕ್ಷಿ ಪಾರ್ವತಿಯು ತ್ವರದಿಂದ ಎದ್ದು ಪರಮ ನಾಚಿಕೆಯಿಂದ
--------------
ಅನಂತಾದ್ರೀಶ - ಕಥನಕಾವ್ಯಗಳು
ಈ ಸುದ್ದಿ ಹೇಳಮ್ಮಇಂದಿರೇಶಗೆ ಹೋಗಿಶ್ರೀಶನ ತಂಗಿಯರು ಮುಯ್ಯಾಸೋಸಿಲೆ ತಂದರೆಂದು ಪ. ಸತ್ಯ ಲೋಕದ ದೊರೆಯುತಾನು ಮತ್ತೆ ಪಾಂಡವರ ಕೂಡಿಅರ್ಥಿಲೆ ಬಂದು ಇಳಿದಾರೆಂದುಸತ್ಯಭಾಮೆಯ ರಮಣಗೆ 1 ಸ್ವರ್ಗದರಸು ಭೀಮರಾಯನ ಅಗ್ರಜಅನುಜರ ಕೂಡಿ ಶೀಘ್ರದಿಬಂದಿಳಿದಾರೆಂದುರುಕ್ಮಿಣಿ ರಮಣಗೆ2 ವೈವಸ್ವತನು ರಾಮೇಶನ ವೈಭವವ ನೋಡುವೆನೆಂದುತಾವಿಭವ ಸಹಿತ ಬಂದು ದೇವಾಧಿ ದೇವನ ಮುಂದೆ3
--------------
ಗಲಗಲಿಅವ್ವನವರು
ಕೋಲ ನವರಂಗದ ಕೋಲ ನಳನಳಿಸುವಕೋಲಶ್ರೀಲೋಲನೆಂದು ಹೊಗಳುವ ಕೋಲ ಪ. ಛsÀತ್ರ ಚಾಮರ ವಿಚಿತ್ರದ ಬಾಣ ಬಿರಸುನೃತ್ಯವಾದ್ಯಗಳು ಹೊಗÀಳುವನೃತ್ಯವಾದ್ಯಗಳು ಹೊಗÀಳುವ ಬಂಧಿಗಳಿಂದ ಅರ್ಥಿಲೆ ನಿಮ್ಮ ಕರೆಸುವ ಕೋಲ 1 ಶಂಕಿನಿ ಪದ್ಮಿನಿಯರು ಕುಂಕುಮ ಅರಿಷಿಣವಪಿಡಿದು ಪಂಕÀಜನಾಭನೆದುರಿಗೆ ಕೋಲಪಂಕಜನಾಭನೆದುರಿಗೆ ಕರೆಯಲುಅಲಂಕಾರವಾಗಿ ಬರುತಾರೆ ಕೋಲ2 ಗಂಧ ಕೇಶರದ ಚಂದದೋಕುಳಿ ತುಂಬಿಮಂದಗಮನೆಯರು ಹಿಡಕೊಂಡುಮಂದಗಮನೆಯರು ಹಿಡಕೊಂಡು ಐವರಿಗೆಬಂದು ನಿವಾಳಿ ತೆಗಿಸುವೆವು ಕೋಲ 3 ಚಿತ್ತಜನಯ್ಯಗ ಮಿತ್ರೆಯರು ಕರೆಯಲುಮುತ್ತಿನಾರತಿಯ ಹಿಡಕೊಂಡುಮುತ್ತಿನಾರತಿಯ ಹಿಡಕೊಂಡು ಐವರಿಗೆ ಎತ್ತಬೇಕೆಂಬೊ ಭರದಿಂದ ಕೋಲ4 ಅರಳು ಅರಳು ಫಲಗಳು ಐವರಿಗೆ ಭರದಿಂದ ಸೂರ್ಯಾಡಿ ಬರತೇವ ಕೋಲ 5 ರಥ ಕುದುರೆಗಳೆಷ್ಟು ರಥಿಕರು ಸೊಬಗೆಷ್ಟು ರತಿಯಿಟ್ಟು ನೋಡೊ ಜನರೆಷ್ಟು ಕೋಲರತಿಯಿಟ್ಟು ನೋಡೊ ಸೊಬಗೆಷ್ಟು ಸಖಿಯೆನಮ್ಮ ಅತಿಶಯವಾದ ಸೊಬಗೆಷ್ಟು ಕೋಲ6 ವೀರ ರಾಮೇಶನು ಭೇರಿ ದುಂಧುಭಿ ಹೊಯ್ಸಿಭೋರೆಂಬೊ ಕಾಳಿ ಹಿಡಿಸುತ ಭೋರೆಂಬೊ ಕಾಳಿ ಹಿಡಿಸುತ ಐವರವಾರಿಜನಾಭ ಕರೆಸುವ ಕೋಲ7
--------------
ಗಲಗಲಿಅವ್ವನವರು
ಚಿತ್ತಜನೈಯನ ಕೂಡ ಅರ್ಥಿಲೆ ಹೋಗುವಾಗ ಹಸ್ತಿನಾವತಿಯ ಕಂಡರು ಜತ್ತಾಗಿ ಜನರು ಪ. ನದ ನದಿಗಳ ದಾಟಿ ಮುದದಿಂದ ಮುಯ್ಯಕ್ಕೆ ಬರಲು ಅದ್ಭುತವಾಗಿ ಬೆಳಗೋದೆಅದ್ಭುತವಾಗಿ ಬೆಳಗೋದೆ ನಗರಿಯುಇದೇ ವೈಕುಂಠ ಹೌದೇನ1 ತರಣಿ ತರಣಿ ಸರೋವರ ಇವ ನೋಡಗಗನಕ್ಕೆ ಸರಳಾಗಿ ಬೆಳೆದ ಮರನೋಡ2 ಆಲ ಅಶ್ವತ್ಥ ಶಾಲ ಶಾಬರವೃಕ್ಷ ಸಾಲು ಮಂಟಪ ನೋಡ ಸಾಲು ಮಂಟಪ ಇವ ನೋಡ ದೇವಾಲಯವು ವಿಶಾಲವಾಗಿದ್ದ ಬಗಿ ನೋಡ3 ಪ್ಯಾಟಿ ಬಾಜಾರ ಸಾಲು ಥಾಟಾಗಿ ತೋರುವುದೆ ಕೋಟಿ ಸೂರ್ಯರ ಬೆಳಕಿಲೆಕೋಟಿ ಸೂರ್ಯರ ಬೆಳಕಿಲೆ ಒಪ್ಪೊ ನಗರಿಯ ಮಾಟ ವರ್ಣಿಸಲು ವಶವಲ್ಲ4 ಹತ್ತಿ ಗೋಪುರ ಕೋಟಿ ಹಚ್ಚಿದೆ ಧ್ವಜ ಕೋಟಿಮತ್ತ ಪತಾಕೆಗೆ ಮಿತಿ ಇಲ್ಲಮತ್ತ ಪತಾಕೆಗೆ ಮಿತಿಯಿಲ್ಲ ಹರಿಣಾಕ್ಷಿಸತ್ಯ ಲೋಕವು ಹೌದೇನ5 ಅಟ್ಟಾಲದ ಮ್ಯಾಲೆ ಧಿಟ್ಟಾದ ಗೊಂಬೆಗಳು ಕೃಷ್ಣಗೆ ಕೈಯ್ಯ ಮುಗಿವಂತೆ ಕೃಷ್ಣಗೆ ಕೈಯ್ಯ ಮುಗಿವಂತೆ ನಿಲ್ಲಿಸಿದ್ದುಎಷ್ಟು ವರ್ಣಿಸಲು ವಶವಲ್ಲ6 ಜತ್ತಾದ ಮನೆಗಳಿಗೆ ರತ್ನದ ಶೋಭೆ ನೋಡಹತ್ತು ದಿಕ್ಕುಗಳ ಬೆಳಗೋವೆÉಹತ್ತು ದಿಕ್ಕುಗಳ ಬೆಳಗೋವೆÉ ಸ್ವರ್ಗವಎತ್ತಿಟ್ಟರೇನ ಐವರು7 ಚಂದದ ಮನೆಗಳಿಗೆ ಮುತ್ತಿನ ಹಂದರ ತೋರಣUಳೆಷ್ಟುಶ್ರೀ ಗಂಧದ ಥಳಿಯ ಸೊಬಗೆಷ್ಟುಶ್ರೀ ಗಂಧದ ಥಳಿಯ ಸೊಬಗೆಷ್ಟ ರಂಗವಾಲಿಅಂದವಾಗಿದ್ದ ಜಗುಲಿ ಎಷ್ಟ 8 ತಾರಕ್ಕಿ ಹೊಳವಂತೆ ತೋರೋದೀವಿಗೆ ಎಷ್ಟನೀರೆ ನಿಲಿಸಿದ್ದ ಕನ್ನಡಿ ಎಷ್ಟನೀರೆ ನಿಲಿಸಿದ್ದ ಕನ್ನಡಿ ಎಷ್ಟ ಉಪ್ಪರಿಗಿಏರಿ ನೋಡುವ ಜನರೆಷ್ಟ 9 ಶ್ರೀಶನ ಮುಖವನೆ ಸೋಸಿಲೆ ನೋಡುತ ಈಜಾಡಿ ಸುಖದ ನದಿಯೊಳು ಈಜಾಡಿ ಸುಖದ ನದಿಯೊಳುಬಹುಜನ್ಮಕ ಲೇಸಾದ ಪುಣ್ಯ ಫಲಿಸಿತು10 ಮೇಲಾದ ಮನೆಗಳ ಮ್ಯಾಲೆ ಸಾಲು ಗೊಂಬಿಗಳ ನೋಡ ಶ್ರೀಲೋಲ ರಾಮೇಶಗೆ ಕೈ ಮುಗಿವಂತೆಶ್ರೀಲೋಲ ರಾಮೇಶಗೆ ಕೈ ಮುಗಿದುಹರಿಣಾಕ್ಷಿ ಕಾಲಿಗೆ ಎರಗುವ ಪರಿಯಂತೆ 11
--------------
ಗಲಗಲಿಅವ್ವನವರು
ನಾಗಲೋಕದ ಕಾಳಿ ಈಗಳೆ ಹಿಡಿಸುತನಾಗವೇಣಿಯರೆಲ್ಲ ಸಾಗಿ ಹೆಜ್ಜೆ ನಿಕ್ಕುತ ಈಗ ನೋಡುಣು ಬಾರೆ ಬ್ಯಾಗಸೆ ದ್ವಾರಕಾಸಾಗರ ಶಯನನಿನ್ನು ಪ. ಅಂಬುಜಾಕ್ಷನು ತಾನು ಅತಿ ಬೇಗ ಹೊಯ್ಸಿದ ಜಂಬುದ್ವೀಪದ ಜಯಭೇರಿಜಂಬುದ್ವೀಪದ ಜಯಭೇರಿ ಹೊಯಿಸಲು ಕುಂಭಿಣಿ ಜನರೆಲ್ಲ ಕೂಡಿತು ಎಲೆ ಸಖಿ 1 ಏಳು ಲೋಕದ ಕಾಳಿಭಾಳೆ ರೌಸದಿ ಹಿಡಿಯೆಕಾಳಿ ಮರ್ದನನ ಮನೆಮುಂದೆಕಾಳಿ ಮರ್ದನನ ಮನೆಮುಂದೆ ಹಿಡಿಸಲುಏಳು ಲೋಕದ ಜನ ಮೇಳವ ನಮಗೆ ಎಲೆ ಸಖಿ2 ಕೋಟಿ ಕೋಟಿ ಹಿಲಾಲು ಥಾಟಾಗಿ ತೋರುವ ಹಾಟಗಾಂಬರನ ಮನೆಮುಂದೆ ಹಾಟಗಾಂಬರನ ಮನೆಮುಂದೆ ಬೆರಗಾಗಿಪಾಟಿಸಿ ನೋಡೋ ಪ್ರಜರೆಷ್ಟ ಎಲೆ ಸಖಿ 3 ಹತ್ತು ಕೋಟಿ ಹಿಲಾಲು ಜತ್ತಾಗಿ ತೋರುತಚಿತ್ತಜನೈಯನ ಮನೆಮುಂದೆಚಿತ್ತಜನೈಯನ ಮನೆಮುಂದೆ ಬೆರಗಾಗಿಅರ್ಥಿಲೆ ನೋಡೋ ಪ್ರಜರೆಷ್ಟ ಎಲೆ ಸಖಿ4 ನೂರು ನೂರು ಸಾವಿರ ತೋರುವ ಬಾಣ ಬಿರುಸುವಾರಿಜಾಕ್ಷನ ಮನೆಮುಂದೆ ವಾರಿಜಾಕ್ಷನ ಮನೆಮುಂದೆ ಈ ಸೊಬಗುಆರುವರ್ಣಿಸಲು ವಶವಲ್ಲ ಎಲೆಸಖಿ5 ಸಿಡಿಲು ಫರ್ಜಿಸಿದಂತೆ ಬಿಡುವ ಬಾಣಗಳೆಷ್ಟಧಡ ಧಡ ಹಾರುವ ಬಿರುಸೆಷ್ಟಧಡ ಧಡ ಹಾರುವ ಬಿರುಸೆಷ್ಟು ಮುಯ್ಯದ ಬೆಡಗವರ್ಣಿಸಲು ವಶವಲ್ಲ ಎಲೆಸಖಿ6 ಗರುಡನ ಆಭರಣವ ಮೃಡನು ವರ್ಣಿಸಲಾರ ಜಡಿದ ರತ್ನಗಳು ಝಳಪಿಸುತಜಡಿದ ರತ್ನಗಳು ಝಳಪಿಸುವÀ ವಾಹನವೇರಿಒಡೆಯ ರಾಮೇಶ ಕುಳಿತಾನೆ ಎಲೆಸಖಿ 7
--------------
ಗಲಗಲಿಅವ್ವನವರು
ಭಾಗೀರಥಿ ಭಾಗೀರಥಿಬಾಗುವವರಿಗೆ ದಯವಾಗಿರತಿ ಪ. ಗಂಗೆ ಗೌತುಮೆ ತುಂಗೆ ಮಂಗಳೆ ಕೃಷ್ಣಿ ನಿನ್ನಹಿಂಗದೆ ಅವರನ ರಂಗಿಸುವರೆ ತಾಯಿ 1 ಮಾನಸ ಸರೋವರನಾನಾ ತೀರ್ಥಗಳೆಲ್ಲಧೇನಿಸಿ ನಿನ್ನಯ ಮಾನ್ಯವ ಪಡೆದಿವೆ2 ಬ್ರಮ್ಹಾಂಡ ಬಿಚ್ಚಿ ಪರಬೊಮ್ಮಗ ಮಗಳಾದಿಬೊಮ್ಮನ ತಂಗಿ ನಾವು ನಿನ್ನನು ನೆನೆದೆವು3 ಸತ್ಯ ಲೋಕವ ಸ್ಮರಿಸಿ ಮತ್ತೆ ಸ್ವರ್ಗಕೆ ಬಂದಿಪ್ರಾರ್ಥಿಸಿದ ದೈವ ನಿನ್ನ ಅರ್ಥಿಲೆ ಗೆಲಿಸಮ್ಮ 4 ಭಗೀರಥ ಕರೆಯಲು ನಗದಲ್ಲಿ ಬಿದ್ದು ಕಾಶಿನಗರಕ್ಕೆ ಬಂದ ರಮಿ ಮಗಳ ಬಲಗೊಂಬೆ 5
--------------
ಗಲಗಲಿಅವ್ವನವರು
ಮಲ್ಲೆ ಮಲ್ಲಿಗೆ ಕೋಲ ಝಲ್ಲಿ ಮುತ್ತಿನ ಕೋಲನಲ್ಲೆಯರು ನಲಿ ನಲಿದು ಚಲುವ ರಂಗನ ಪಾಡಿಉಲ್ಲಾಸ ಬಡುವ ಕೋಲ ಅಮ್ಮಯ್ಯಪ. ಚಾರು ವÀದನಳೆ ದಿವ್ಯಥೋರ ಕುಚಗಳ ಆ ಭಾರಕೆ ಬಳಕುವಳೆ ವಿಸ್ತಾರ ಜಘನಳೆ ಚಲ್ವಳೆ ಅಮ್ಮಯ್ಯ 1 ನಾರಿಕೇಲದಂತೆ ಕರಗಳೆ ಉರಗಳೆ ವರಜಾನು ಜಂಗಿಗಳ ಚರಣಗಳ ನಖಗಳಬೆರಳುಗಳಿಗೆ ಎರಗುವೆನು ಅಮ್ಮಯ್ಯ 2 ಕಟಿ ಕಂಬು ನಮ್ಮಯ್ಯ 3 ಅಂಬುಜಾಂಬಳ ಪಾದವೆಂಬೊ ಕಮಲಗಳಬೆರಳೆಂಬೊ ಹವಳಗಳ ನಖವೆಂಬೊ ಚಂದ್ರಗಳ ಸಂಭ್ರಮದಿ ಎರಗುವೆ ನಮ್ಮಯ್ಯ4 ಸಿಂಧು ಸಪ್ತದಿಗಂಧರ್ವ ಲೋಕದಲಿಲ್ಲ ಹಿಂದಿಲ್ಲ ಮುಂದಿಲ್ಲವೆಂದೆ ನಮ್ಮಯ್ಯ 5 ಮಂದಾರ ಗಿರಿಮೇರು ಮಂದಾರದÀಲೆ ಮೇಲೆಂಬೊ ಮಾರ್ಜನ ತಪ ಒಂದು ಲೋಕದಲಿಲ್ಲವೆಂದು ದ್ರೌಪತಿಗ್ಹೇಳಿ ಬಂದೆನಮ್ಮಯ್ಯ 6 ಮಿತ್ರೆಯರ ಮುಯ್ಯಕ್ಕೆ ಮತ್ತೆಲ್ಲಿ ಸರಿಯಿಲ್ಲ ಸತ್ಯಲೋಕದಲಿಲ್ಲಮೃತ್ಯು ಲೋಕದಲಿಲ್ಲ ಅತ್ಯಂತ ತೆಳಗಿಹೊ ರತ್ನ ಲೋಕದಲಿಲ್ಲಹತ್ತು ದೆಸೆಗಿಲ್ಲವೆಂದೇ ನಮ್ಮಯ್ಯ 7 ಭಕ್ತವತ್ಸಲ ಸ್ವಾಮಿ ಅತ್ಯಂತ ಪ್ರೇಮದಲೆ ಸತ್ಯಭಾಂವೆರ ಅರಸು ಅರ್ಥಿಲೆ ಬಂದದ್ದುಚಿತ್ತಕ್ಕೆ ತಾ ಎಂದೆ ನಮ್ಮಯ್ಯ 8 ವೈಭವದ ಮುಯ್ಯವು ವೈಕುಂಠದಲಿಲ್ಲ ಕೈವಲ್ಯವೆನಿಪ ಸೇತುದ್ವೀಪದೊಳಗಿಲ್ಲಭಯವಿಲ್ಲವೆನಿಪ ಅನಂತಾಸನದಲಿಲ್ಲಐವರ ಅರಸಿಗೆ ಹೇಳಿಬಂದೆನಮ್ಮಯ್ಯ 9 ಕೈವಲ್ಯಪತಿ ತಾನು ದಯಮಾಡಿ ಬಂದದ್ದುದಯವ ಬಹಳಮ್ಮ ಐವರದು ಎನುತಲೆ ಕೈಮುಗಿದು ಹೇಳಿ ಬಂದೆ ನಮ್ಮಯ್ಯ10 ನಲ್ಲೆಯರ ಮುಯ್ಯಕ್ಕೆ ಎಲ್ಲೆಲ್ಲೂ ಸರಿಯಿಲ್ಲ ಸಪ್ತದ್ವೀಪದಲಿಲ್ಲಮೇರುವಿನಲಿಲ್ಲ ಈ ಭಾಗ್ಯವೆಲ್ಲ ಸ್ವರ್ಗದಲಿಲ್ಲಚಲ್ವಿ ದ್ರೌಪತಿಗೆ ಹೇಳಿ ಬಂದೆ ನಮ್ಮಯ್ಯ 11 ಬಲ್ಲಿದ ಅತಳ ವಿತಳ ಸುತಳ ಮಹಾತಳ ತಳಾತಳ ರಸಾತಳದಲಿಲ್ಲಈ ಮುಯ್ಯಕ್ಕೆಲ್ಲಿ ಸರಿ ಹೇಳಿ ಬಂದೆನಮ್ಮಯ್ಯ12 ಬೊಮ್ಮ ಲೋಕದಲಿಲ್ಲಸುಮನ ಸಾರಿರುವೋ ಸ್ವರ್ಗಲೋಕದಲಿಲ್ಲ ಅಮ್ಮಿಳ್ಳ ಪಾತಾಳವೆಂದೆ ನಮ್ಮಯ್ಯ13 ರಮಿಯರಸನು ತಂದ ಜಮ್ಮನೇ ನಿಮ್ಮ ಭಾಗ್ಯವು ಬಹಳ ಅಮ್ಮ ದ್ರೌಪತಿ ಎಂದು ಜುಮ್ಮನೆ ಹೇಳಿ ಬಂದೆನಮ್ಮಯ್ಯ 14
--------------
ಗಲಗಲಿಅವ್ವನವರು
ರಾಜ ರಾಜರ ಗಂಡ ರಾಜಗೋಪಾಲ ಪ. ಅರ್ಥಿಲೆ ಏರಿ ಕುಳಿತ ಮತ್ತೆ ಗೋಪಾಲ 1 ಬಂದ ಜನರ ಸಹಿತ ತಂದೆ ಗೋಪಾಲ 2 ವಿಪ್ರರಿಂದಲೆ ಕುಳಿತ ಅಪ್ಪ ಗೋಪಾಲ3 ಬೆಳಕು ತುಂಬಿಸಿ ತಾನು ಕುಳಿತ ಗೋಪಾಲ 4 ಅರ್ಥಿಲೆ ಏರಿ ಕುಳಿತ ಮತ್ತೆ ಗೋಪಾಲ5 ಮೂರ್ತಿ ಗೋಪಾಲ 6 ಬಂದ ಜನಕೆ ಆನಂದವ ಪಡಿಸುತ ಚಂದ್ರನಂತಲೆ ಕುಳಿತ ಬಂದು ರಾಮೇಶ 7
--------------
ಗಲಗಲಿಅವ್ವನವರು
ಶಕುನವೆ ಬಲು ಶಕುನವೆ ಸಖ ಕೃಷ್ಣನ ಮುದ್ದು ಮುಖವ ಕಾಂಬುವೆ ನೀಗ ಪ. ಹಾಲು ಮೊಸರಿನ ಕುಂಭ ಮೇಲಾದ ಘ್ರತÀ ಬೆಣ್ಣಿಸಾಲುಸಾಲಾಗಿ ಎದುರಾಗಿ ಇಂದೀವರಾಕ್ಷಿಸಾಲುಸಾಲಾಗಿ ಎದುರಾಗಿ ರಂಗನ ಕಾಲಿಗೆಶಿರವ ನೀಡುವಂತೆ ಇಂದೀವರಾಕ್ಷಿ 1 ಕೋಟಿ ಜನರು ಕೂಡಿ ತ್ವಾಟ ಪಟ್ಟಿಗಳದಾಟಿ ನೀಟಾದ ಹಂಸ ಗಿಳಿವಿಂಡುನೀಟಾದ ಹಂಸ ಗಿಳಿ ವಿಂಡು ನಡೆದವುಹಾಟಕಾಂಬರನ ದಯವಿದು ಇಂದೀವರಾಕ್ಷಿ 2 ಜತ್ತಾಗಿ ದ್ವಾರಕೆಯ ಹತ್ತಿರ ಬರುತಿರೆಮುತ್ತಿನ ಹೇರು ಇದುರಾಗಿ ಇಂದೀವರಾಕ್ಷಿಮುತ್ತಿನ ಹೇರು ಇದುರಾಗಿ ರಂಗಯ್ಯಹಸ್ತಲಾಘವ ಕೊಡುತಾನೆ ಇಂದೀವರಾಕ್ಷಿ3 ಸಾವಿರ ಅಂಗಡಿ ಸಾಲಾದ ಬಾಜಾರ ನೇರಳೆ ಹಣ್ಣು ಇದುರಾಗಿ ಇಂದೀವರಾಕ್ಷಿನೇರಳೆ ಹಣ್ಣು ಇದುರಾಗಿ ರಂಗಯ್ಯಮೇಲು ಕರುಣದಲಿ ಕರೆಸುವನು ಇಂದೀವರಾಕ್ಷಿ 4 ಹಸ್ತಿನಾಪುರದವರು ಸಪ್ತಪ್ರಾಕಾರ ದಾಟಿಮತ್ತೆ ಶ್ರೀಗಂಧ ಇದುರಾಗಿ ಇಂದೀವರಾಕ್ಷಿಮತ್ತೆ ಶ್ರೀಗಂಧ ಎದುರಾಗಿ ಬಲರಾಮಅರ್ಥಿಲೆ ಬಂದು ಕರೆವÀನು ಇಂದೀವರಾಕ್ಷಿ5 ವ್ಯಾಲಾಶಯನನ ಮನೆಯ ಏಳು ಬಾಗಿಲದಾಟಿಬಾಳೆಯ ಹಣ್ಣು ಇದುರಾಗ ಇಂದೀವರಾಕ್ಷಿಬಾಳೆಯ ಹಣ್ಣು ಇದುರಾಗ ರಂಗಯ್ಯಕೇಳೋನು ಕ್ಷೇಮ ಕುಶಲವ ಇಂದೀವರಾಕ್ಷಿ6 ನಾಗಶಯನನ ಮನೆಯ ಬಾಗಿಲು ಹೊಗಲಿಕ್ಕೆನಾಗಸಂಪಿಗೆಯ ಮುಡಿದವರು ಇಂದೀವರಾಕ್ಷಿನಾಗಸಂಪಿಗೆಯ ಮುಡಿದವರು ಬಂದರು ಈಗರಾಮೇಶನ ದರುಶನಕೆ ಇಂದೀವರಾಕ್ಷಿ 7
--------------
ಗಲಗಲಿಅವ್ವನವರು
ಶಾರದೆ ನಿನ್ನ ಪಾದವ ಆರಾಧಿಸುವೆವುವಾರಿಜ ಭವಕ್ಕೆ ಸೇರಿಸು ಹರಸು ಪ. ನಿತ್ಯ ಭಜಿಸುವೆವುಸಚ್ಚಿದಾನಂದನ ಚಿತ್ತದಿ ನಿಲ್ಲಿಸ1 ರಂಭೆ ನಮ್ಮಯ ಹೃದಯ ಅಂಬರದೊಳು ನಿಂತುಅಂಬುಜನಾಭನ ತುಂಬಿಸು ಮನದಿ2 ಅರಿಷಿಣ ಕುಂಕುಮ ಬೆರೆಸಿದ ಪರಿಮಳಸರಸದಿ ಕೈ ಕೊಂಡು ಅರಸಿಯರ ಗೆಲಿಸ 3 ಅತ್ತಿ ಹೂವಿನಸೀರೆ ಮುತ್ತಿನಾಭರಣವಅರ್ಥಿಲೆ ಕೈ ಕೊಂಡು ಮಿತ್ರೆಯರ ಗೆಲಿಸ4 ಪತಿ ಸೌಭಾಗ್ಯವ ರಚಿಸಲುಶೀಘ್ರದಿ ತೋರಿಸೆ ಕುಗ್ಗದೆ ನಮಗೆ 5 ಪತಿ ನಿತ್ಯ ರಾಮೇಶನ ತತ್ವವ ರಚಿಸುವೆ ಸತ್ಯವ ನುಡಿಸೆ ಶಾರದಾದೇವಿ6
--------------
ಗಲಗಲಿಅವ್ವನವರು
ಶ್ರೀಶನ ಭೇರಿ ನಾದಗಳಿಂದ ಬೃಹಸ್ಪತಿ ಬಂದ ಪ. ಮಿತ್ರೆಯರು ಬೃಹಸ್ಪತಿಗೆ ಮುತ್ತಿನ ಗದ್ದಿಗೆಯನಿಟ್ಟುಅರ್ಥಿಲೆ ಚರಣಕ್ಕೆರಗಿದರುಅರ್ಥಿಲೆ ಚರಣಕ್ಕೆರಗಿದರು ಬೃಹಸ್ಪತಿಉತ್ತಮ ತಿಥಿಯು ಬರಬೇಕು1 ಜಾಣೆಯರು ಬೃಹಸ್ಪತಿಗೆ ಮಾಣಿಕದಕ್ಷತೆನಿಟ್ಟುಅಣಿ ಮುತ್ತಿಟ್ಟು ಮೊರ ತುಂಬಿಅಣಿ ಮುತ್ತಿಟ್ಟು ಮೊರತುಂಬಿ ಸುಭದ್ರಆಣಿಯ ಬಿಡಿಸೋ ತಿಥಿ ಬೇಕು2 ಶುಭ ತಿಥಿಯ3
--------------
ಗಲಗಲಿಅವ್ವನವರು
ಆನಂದ ಭರಿತರಾಗಿ ಆಚಾರ್ಯರುಆನಂದ ಭರಿತರಾಗಿಕುಂದಣರತ್ನ ದೊಸ್ತಚಂದದ ವಸ್ತ್ರನಮಗೆ ಅಂದಣವ ಕೊಟ್ಟರು ಪ.ವ್ಯಾಲಾಶಯನನ ಕಥೆಕೇಳುತ ಬೆಳತನಕಭಾಳಹರುಷದಿಂದಉಚಿತವ ಕೊಟ್ಟರು 1ಮುತ್ತು ಮಾಣಿಕದೊಸ್ತಮತ್ತೆ ಕುದರಿಯ ಸಾಲುಛsÀತ್ರ ಚಾಮರ ನಮಗೆಅರ್ಥಿಲೆ ಕೊಟ್ಟರು 2ಬರಿಯ ಮಾಣಿಕ ದೊಸ್ತಜರದಪಟ್ಟಾವಳಿವಸ್ತ್ರಹಿರಿಯರಿಗೆ ಮುತ್ತಿನಸರಗಳ ಕೊಟ್ಟರು 3ಅಚ್ಚ ಮುತ್ತಿನ ವಸ್ತಹೆಚ್ಚಿನ ಜರತಾರಿ ವಸ್ತ್ರಹೆಚ್ಚಿನ ಕುದುರೆ ನಮಗೆಉಚ್ಛವದಿಕೊಟ್ಟರು4ರಮಿಯರಸನ ಕಥೆತಮ್ಮ ಮನ ಉಬ್ಬಿಕೇಳಿಅಮ್ಮ ರತ್ನದ ಕವಚನಮಗೆ ಕೊಟ್ಟರು 5
--------------
ಗಲಗಲಿಅವ್ವನವರು
ಎತ್ತಿರೆಕೋಲಅರ್ಥಿಲೆಕೆಲದೆಯರು ಸತ್ಯ ಕನ್ಯಳೆ ದ್ರೌಪತಿ ಎಂದು ಪ.ಮತ್ತೆ ಅಭಿಮಾನಿಯೆಂದುನಿತ್ಯಉತ್ಪತ್ತಿಯೆಂದುಸತ್ಯ ಕನ್ಯಳೆ ದ್ರೌಪತಿಯೆಂದು 1ಒಂದೇ ಮಂದಿರದಲ್ಲಿ ಪೊಂದಿದ್ದ ಜನರಂತೆಅವರಿಂದ ಹೊರಗಾಗುವಳೆ ಜಾಣೆ 2ಧರ್ಮ ಶ್ಯಾಮಲೆ ಬೆರಿಯೆ ಅಮ್ಮ ದ್ರೌಪತಾದೇವಿಸುಮ್ಮನಿಹಳೇ ಬಾರೆ ನೀರೆ 3ವನಜಾಕ್ಷಿ ಭೀಮ ಬರಲು ತನುಮನ ಸೂರೆಗೊಂಡುಘನಮಹಿಮನ ಬೆರೆಯೋಳೆ4ಅರ್ಜುನ ಶಚಿಯು ಬೆರಿಯೆ ನಿರ್ಜರೋತ್ತಮಳು ತಾನುವರ್ಜಿಸಿ ಸುಖವ ದೂರಾಗಿಹೋಳು 5ಮತ್ತೆ ಸಹದೇವ ನಕುಲ ಪತ್ನಿಯ ಬೆರೆಯಲುಪ್ರತ್ಯಕ್ಷ ಇಹಳು ಚತುರಳು 6ಕಾಂತ ರಮಣನುಕೇಳಿಸಂತೊಷ ಬಡಲು ಭಾಗ್ಯಸಂತಾನ ಕೊಡುವ ರಮಿ ಅರಸು 7
--------------
ಗಲಗಲಿಅವ್ವನವರು
ಕುಸುಮನಾಭನ ಮಡದಿಯರುಹೆಸರ್ಹೇಳ ಅರ್ಥಿಲಿಹಸುಳೆಯರು ಹಾಡಿ ಪಾಡಿಕುಶಲದಿಕೋಲಹೊಯ್ದುಪ.ಬಂದು ರುಕ್ಮಿಣಿ ಭಾವೆಗೆವಂದಿಸಿ ಭದ್ರೆ ದ್ರೌಪತಿಮಂದಾರಮಲ್ಲಿಗೆ ಸಂಪಿಗೆಚಂದದಿಸೂರ್ಯಾಡಿ1ಕೃಷ್ಣನರಸಿಯರು ಇಬ್ಬರುಬುಕ್ಕಿಟ್ಟುಸೂರ್ಯಾಡಿಗಟ್ಟಿ ಕಂಕಣದ ಕರದಲೆಮುಟ್ಟಿ ಆಲಂಗಿಸುತ 2ಹರದಿರುಕ್ಮಿಣಿ ಕೈಯಮರಿಯದಲೆ ಹಿಡಿದು ದ್ರೌಪತಿದೊರೆಯರ ಹೆಸರ್ಹೇಳಿಮುಂದಕೆ ಬರಬೇಕೆಂದರು 3ಸತ್ಯಭಾಮೆಯ ಕೈಯಅರ್ಥಿಲೆ ಹಿಡಿದು ದ್ರೌಪತಿಮತ್ತೆ ಪತಿಗಳ ಹೆಸರುವಿಸ್ತರಿಸೆಂದರು 4ವಾರಿಜಾಕ್ಷನಹೆಸರುನಾರಿಯರಿಬ್ಬರು ಹೇಳಿಶ್ರೀ ರಾಮೇಶನ ಮಡದಿಯರುಏರಿದರು ಆಸನವ 5
--------------
ಗಲಗಲಿಅವ್ವನವರು
ಕೊಟ್ಟ ಉಡುಗೊರೆಉತ್ಕøಷ್ಟ ಗೋಪಾಲಧಿಟ್ಟ ಪಾಂಡವರಿಗೆ ಉಚಿತವಕೆಲದಿಪ.ಏಸವೊ ಮಾಣಿಕದೊಸ್ತ ದೆಸೆಗೆಲ್ಲ ಬೆಳಗುವ ವಸ್ತಹೊಸ ಮುತ್ತಿನ ರಥ ಹಿಡಿದೇಜಿಕೆಲದಿಹೊಸ ಮುತ್ತಿನ ರಥ ಹಿಡಿದೇಜಿ ಶೂರಪಾಲಿಅಶ್ವತ್ಥ ನರಸಿಂಹಗೆಹರಿಕೊಟ್ಟಕೆಲದಿ1ಪಟ್ಟಾವಳಿಯ ಸೀರೆ ಧಿಟ್ಟಾದ ಪಲ್ಲಕ್ಕಿಬಟಮುತ್ತಿನ ರಥ ಹಿಡಿದೇಜಿಬಟಮುತ್ತಿನ ರಥ ಹಿಡಿದೇಜಿ ಶೂರಪಾಲಿಕೃಷ್ಣಾ ಭಾಗೀರಥಿಗೆ ಹರಿಕೊಟ್ಟಕೆಲದಿ2ಏಸವೊ ಮಾಣಿಕದೊಸ್ತ ಹಸಿರು ಪಟ್ಟಾವಳಿವಸ್ತ್ರಕುಶಲದ ಪುಸ್ತಕವ ನಡುವಿಟ್ಟುಕೆಲದಿಕುಶಲದ ಪುಸ್ತಕವ ನಡುವಿಟ್ಟು ಶ್ರೀಕೃಷ್ಣಋಷಿಗಳಿಗುಚಿತವಹರಿಕೊಟ್ಟಕೆಲದಿ3ಸಾರಾವಳಿ ಸೀರೆ ಥೋರ ಮುತ್ತಿನ ಸರಹಾರ ಭಾರಗಳು ನಡುವಿಟ್ಟುಕೆಲದಿಹಾರ ಭಾರಗಳು ನಡುವಿಟ್ಟು ಉಚಿತವನಾರಿ ಕುಂತೆಮ್ಮಗೆ ಹರಿಕೊಟ್ಟಕೆಲದಿ4ಲೆಕ್ಕವಿಲ್ಲದೆ ವಸ್ತ್ರ ಸಂಖೆವಿಲ್ಲದ ರಥಆಕ್ಷಆನೆಗಳು ರಥಗಳುಕೆಲದಿಅಕ್ಷಅನೆ ರಥಗಳು ಬಿಲ್ಲು ಬಾಣಮುಖ್ಯ ಧರ್ಮನಿಗೆಹರಿಕೊಟ್ಟಕೆಲದಿ5ಮಿತಿಯಿಲ್ಲದೆ ಬಾಣ ಬಿಲ್ಲುಗಳು ರಥ ಕುದುರೆಗಳುಅತಿಶಯ ಬೆಳಗುವ ಆಭರಣಕೆಲದಿಅತಿಶಯ ಬೆಳಗುವ ಆಭರಣಪಟ್ಟಾವಳಿಕುಂತಿಸುತ ಭೀಮ ರಾಯಗೆ ಹರಿಕೊಟ್ಟಕೆಲದಿ6ಮದ ಸೊಕ್ಕಿದಾನೆಗಳು ರಥ ಬಿಲ್ಲುಗಳು ಬಾಣಅದ್ಬುತ ಬೆಳಗುವ ಆಭರಣವಕೆಲದಿಅದ್ಬುತವಾಗಿ ಬೆಳಗುವ ಪೀತಾಂಬರಚದುರ ಪಾರ್ಥಗೆ ಹರಿಕೊಟ್ಟಕೆಲದಿ7ಆನೆಹಯರಥಗಳು ಏನೆಂಬೊ ಬಿಲ್ಲಾಳುನಾನಾ ರತ್ನಗಳು ಆಭರಣವೆಕೆಲದಿನಾನಾ ರತ್ನ ಆಭರಣವೆ ನಕುಲಗೆಮಾನದ ವಸ್ತ್ರಗಳು ಹರಿಕೊಟ್ಟಕೆಲದಿ8ಉತ್ತಮ ಕುದುರೆಗಳು ಹತ್ತುವ ರಥ ಕೋಟಿಮತ್ತೆ ಬಿಲ್ಲುಗಳು ಆಭರಣಕೆಲದಿಮತ್ತೆ ಬಿಲ್ಲು ಆಭರಣವಸ್ತ್ರಗಳಸಹದೇವಗೆಅರ್ಥಿಲೆ ರಾಮೇಶ ಇವು ಕೊಟ್ಟಕೆಲದಿ9
--------------
ಗಲಗಲಿಅವ್ವನವರು