ಒಟ್ಟು 17 ಕಡೆಗಳಲ್ಲಿ , 12 ದಾಸರು , 16 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಅನಾಥ ನನ್ನಿಂದ ಆಗುವುದು ಏನು ನೀನೆ ದಯಾಮಾಡಿ ಎನ್ನ ನೋಡಿದರೆ ಸರಿಯಲ್ಲದೆ ಪ ಸ್ನಾನ ಸಂಧ್ಯಾವನ ವೆಂಬ ಸತ್ಕರ್ಮ ವಿಧಿಹೋಗೆ ಧ್ಯಾನಮೌನ ಜಪತಪ ನಿಧಾನ ಹೋಗೆ ಕಾನನದೊಳಗಿನ ಕೊಂಡೆತ್ತಿ ನಂದದಿ ಏನು ಅರಿಯದ ವ್ಯರ್ಥ ಹೀನನಾಗಿರುವಂಥ 1 ಮಾಧವಾ ನಿಮ್ಮ ಸ್ಮರಣೆ ಮಹಾಮಹಿಮ ಸೇವೆ ಹೋಗೆ ವೇದ ಶಾಸ್ತ್ರಗಳಲ್ಲಿ ಇರುವ ಮರ್ಮ ಹೋಗೆ ಭೋಧ ಗುರುಕರ್ಣ ಪೂರ್ಣವು ಎಂಬದದು ಹೋಗೆ ----------- ಂದರಿಯದೆ ಹೆಡ್ಡನಾದಂಥಾ 2 ಹರಿ ನಿಮ್ಮ ಭಕ್ತರ ಅನುಗ್ರಹಕ್ಕೆ ಪಾತ್ರಹೆಂಗೊ ಹರಿ ನಿನ್ನ ಚರಿತಗಳು ಅರುವದ್ಹೇಗೊ ಕರುಣಿಸು ಕೈ ಹಿಡಿದು ಕಾಯ್ದರೆ ಸರಿ ಅಲ್ಲದೆ ವರ 'ಹೊನ್ನ ವಿಠ್ಠಲ’ ನೀನೆಂದು ನಾನರಿಯದಾ 3
--------------
ಹೆನ್ನೆರಂಗದಾಸರು
ಇಷ್ಟು ಮಾಡಿ ಕೈ ಬಿಟ್ಟು ಕೂಡ್ರುವದು ಶಿಷ್ಟರ ನಡತೆಲ್ಲೆಲ್ಲೂ ಗುರುವೇ ಬಲು ಕಷ್ಟದೊಳಗೆ ನಾ ಮುಳುಗಿರುವೆ ನೀ ಕೊಟ್ಟ ಅಭಯದಿಂ ಬದುಕಿರುವೆ ಸಿಟ್ಟು ಮಾತ್ರ ನೀನಾಗ ಬೇಡ ಪೊರೆ ಜಿಷ್ಣುಸಾರಥಿಯ ಪ್ರೀಯ ಮಗುವೆ ಬಾ ಬಾ ಗುರುವೆ ಪ ಇತ್ತರು ಸರಿಯಿಲ್ಲ ಈ ಮಾತು ಹೊರಗೆ ಪೇಳುವವಲ್ಲಾ ನಾ ನಿದ್ದೆ ಪೂರ್ವದಲಿ ಅತಿ ಖುಲ್ಲಾ ಶಿಲೆಯನು ಸುಂದರ ಮೂರ್ತಿಗೈದತೆರ ಬಲು ವಿಧದಲಿ ಸಲಹಿದಿಯಲ್ಲ ಹರಿಬಲ್ಲಾ ಜ್ಞಾನವಿತ್ತಿ ಹರಿಪಾದದಲ್ಲಿ ಅಭಿಮಾನವಿತ್ತಿ ಸುಖವೆಲ್ಲಾ ಬಲುಹೇಯವೆಂದು ತಿಳಿಸಿದಿಯಲ್ಲಾ ಮೇಲ್ವರದಿ ರಂಗನೊಲಿಯುವ ಸೊಲ್ಲಾ ಅಸನ ವಸನಗಳು ಕೊಟ್ಟು ಕೊನೆಗೆ ತುಚ್ಛಿಸುವ ನಿನ್ನ ಗುಣ ತಿಳಿಯಲಿಲ್ಲಾ ಇದು ಥsÀರವಲ್ಲಾ ನಿನ್ನ ಪಾದವೇ ಸಡಗರ ಸಿರಿ ಮೇಲೆ ಸುರಪುರಿ ಜ್ಞಾನನಿಧಿ ಥsÉರಿ ಕಾಶಿ ಗಯಾ ಮಧುರಿ ಹರಿ ಓಂ ಓಂ ಓಂ ನಿನ್ನ ನಾಮ ದುರಿತವೆಂಬೊ ಕರಿ ಕುಲಕೆ ಘನ ಹರಿ ಪರಿ ತಿಳಿದೆನೆಲೊಧೊರಿ ಹರಿ ಓಂ ಓಂ ಓಂ ಇನ್ನಾದರು ಕೋಪವತ್ವರಿ ಕರುಣಿ ಕಣ್ತೆರಿ ಸುತಗೆ ಸುಖಗರಿ ತೋರೋ ನಿನ್ನ ಮಾರಿ ಹರಿ ಓಂ ಓಂ ಓಂ ಎನ್ನಯ ಬಿsÀಷ್ಟಗಳನ್ನು ನೀಡದಿರೆ ನಿನ್ನ ವಿಮಲ ಕೀರ್ತಿಗೆ ಗುರುವೆ ಕುಂದನ್ನು ಬಿಡದೆ ತಿಳಿ ನಾ ತರುವೆ ಸಿಟ್ಟು ಮಾತ್ರ ನೀನಾಗ ಬೇಡ ಪೊರೆ ಜಿಷ್ಣು ಸಾರಥಿಯ ಪ್ರಿಯ ಮಗುವೆ ಬಾ ಬಾ ಗುರುವೆ 1 ಪಂಥವೇ ಹೇ ಮಹಾಕಾಂತ ಪ್ರಿಯ ನಿನ್ನ ಸಂತತಿಯೊಳು ಸೂರಿಗಳೊಡೆಯ ನೀನೆಂತು ಪೊಂದಿದೈ ನಿರ್ಭಿಡಿಯಾ ಇದು ಸಂತರು ಕೇಳಿದರಾಶ್ಚರ್ಯ ವಂತರು ಆಗರೆ ಸಾಕು ಮುಂದೆಯನ್ನಂತರಂಗವೇ ತವನಿಲಯ ಆಗಲಿ ಜೀಯಾ ಕಂದನ ಕಾಯುವದಂತು ಸಹಜ ಸಿರಿ ಹಿಂದಕೆ ಪಾಂಡವನೆಂಭಿರಿಯಾ ಆ ಗಂಧರ್ವನ ಮಗನಾದ ಗಯಾ ತಾ ಬಂದು ಹೋಗಲವನನು ಮೊರೆಯ ಸಿಂಧು ಜಪನ ಸಹ ಲಕ್ಷಿಸದಲೆ ತ್ವರ ತಂದು ಕೊಟ್ಟನವನಿಗೆ ವಿಜಯಾ ಮೇಲ್ಹರಿಯದಯಾ ಇದು ಅಲ್ಲದೆ ಬಹು ಭಕ್ತರು ಜ್ಞಾನಯುಕ್ತರು ಸುಧಿಯ ಭೋಕ್ತರು ನೆನೆದವರ ದು:ಖ ಬಿಡಿಸಿದರು ಸುಧೆಯ ಬಡಿಸಿದರು ಹರಿ ಓಂ ಓಂ ಓಂ ಬಲು ಹಿತದಿ ಶುಭವ ಕೋರಿದರು ತಾಪ ಹೀರಿದರು ವಾಕ್ಯ ಸಾರಿದರು ಹರಿಯ ತೋರಿದರು ಹರಿ ಓಂ ಓಂ ಓಂ ನೀನಾದರೂ ಬಹಳರ ಪೊರದಿ ಈ ಹೀನ ಓರ್ವ ನಿನ್ನಗೆಯರವೆ ಮರಿಯಬ್ಯಾಡ ಕರುಣೆ ಕರವ ಮುಗಿವೆ ಸಿಟ್ಟು ಮಾತ್ರ ನೀನಾಗ ಬೇಡ2 ಪರ ಖರೆ ಗುರುವಿಲ್ಲದ ಗತಿಯನ್ನು ಧರೆತ್ರಯದಿ ತೋರು ತುಸು ನೋಡೋಣ ಗಿರಿಧರಿಯ ಬಿಟ್ಟು ನಿಲ್ಲುವುದೇನು ಗುರುವೆ ತ್ರಿಟಿಯ ಬಿಟ್ಟೊರುಷವಾಗುತದೆ ಹಿರಿಯರಿ ಪೇಳ ವದಿನ್ನೇನು ಹೇ | ಸುರಧೇನು ಗುರುವೆ ಸುಖದ ಖಣಿ ಗುರುತನುಮಣಿ ಮಣಿ ತಿಳಿದೆ ನಾ ಮನದಾಗೆ ಪರಕಿಸಿದೆನ್ನನು ಪೊರೆಯೆ ಯನುತ ಬಾ ಯ್ತೆರೆಯುತ ಮಣಿಸುವೆ ಶಿರನಿನಗೆ ಮೂಜಗದಾಗೆ | ನಿನ್ನಿಂದ ಎನಗೆ ಸದ್ಬುದ್ಧಿ ಯೋಗದಾಸಿದ್ಧಿ ಕಾರ್ಯದಾಸಿದ್ಧಿ ಸ್ವರ್ಗದಾಸಿದ್ಧಿ ಹರಿ ಓಂ ಓಂ ಓಂ ನಿನ್ನಿಂದ ಪಡೆದ ವಿಜ್ಞಾನ ಹರಿಯರಾ ಖೂನಾ ಲೋಕದೊಳು ಮಾನ ಮುಕ್ತಿ ಸೋಪಾನ ಹರಿ ಓಂ ಓಂ ಓಂ ನೀನೇವೆ ಯನಗೆ ಆಭರಣ ಝಗಝಗಿಪ ವಸನ ಶ್ರೀಹರಿಯ ಚರಣ ವಿರಜಾನದಿ ಸ್ನಾನ ಹರಿ ಓಂ ಓಂ ಓಂ ನಿನ್ನೊಮ್ಮೆ ನೆನಸೆ ಪವಮಾನ ಕಾಯ್ವ ಪ್ರತಿದಿನ ಇದಕೆ ಅನುಮಾನ ಇಲ್ಲ ಏನೇನ ಹರಿ ಓಂ ಓಂ ಓಂ ಗಡ ಕೇಳ್ವಡೆಯನೆ ಕಡೆ ನುಡಿಯನ್ನದು ಭಿಡೆಯ ಇಡದೆ ನಾನುಡಿವೆ ಎನ್ನ ಮರೆತರೆ ಮಂಗನು ನೀ ನಿಜವೆ 3
--------------
ಅಸ್ಕಿಹಾಳ ಗೋವಿಂದ
ಈ) ರುದ್ರದೇವರು ವೃಷಭನೇರಿದ ವಿಷಧರನ್ಯಾರೆ ಪೇಳಮ್ಮಯ್ಯ ಪ ಹಸುಳೆ ಪಾರ್ವತಿಯ ತಪಸಿಗೆ ಮೆಚ್ಚಿದಜಟಾಮಂಡಲಧಾರಿ ಕಾಣಮ್ಮ ಅ.ಪ. ಕೈಲಾಸಗಿರಿಯ ದೊರೆಯಿವನಮ್ಮ-ಅದು ಅಲ್ಲದೆ ಕೇಳೆಬೈಲು ಸ್ಮಶಾನದಿ ಮನೆಯಿವಗಮ್ಮ-ಸಂಕರ್ಷಣನೆಂದುಕೇಳೆ ಮಹಿಯೊಳು ಜನ ಪೊಗಳುವರಮ್ಮ-ಇದು ನಿಜವಮ್ಮನಾಲಿಗೆ ಸಾಸಿರ ಫಣಿಭೂಷಣ ನಮ್ಮರಮೆಯರಸಗೆ ಇವ ಮೊಮ್ಮಗನಮ್ಮ 1 ಪತಿ ಇವನಮ್ಮ-ಮಾವನ ಯಾಗದಲಿಬ್ಹಾಳ ಕೃತ್ಯಗಳನು ನಡೆಸಿದನಮ್ಮ-ಸಾಗರದಲಿ ಹುಟ್ಟಿದಕಾಳಕೂಟವ ಭಕ್ಷಿಸಿದನಮ್ಮ-ರಾಮನ ದಯವಮ್ಮಮೇಲೆ ಉಳಿಯಲು ಶೇಷಗರಳವುನೀಲಕಂಠನೆಂದೆನಿಸಿದನಮ್ಮ2 ಹರನೊಂದಿಗೆ ವೈಕುಂಠಕೆ ಬರಲು-ತಾತಗೆ ವಂದಿಸುತತರುಣೀರೂಪವ ನೋಡ್ವೆನೆನಲು-ಹರಿ ತಾ ನಸುನಗುತಕರೆದು ಸೈರಿಸಲಾರೆ ನೀ ಎನಲು-ಹಠದಿ ಕುಳ್ಳಿರಲುಕರುಣೆಗಳರಸನು ಹರನ ಮೊಗವ ನೋಡಿಅರುಣೋದಯಕೆ ಬಾರೆಂದು ಕಳುಹಿದ 3 ಅರುಣೋದಯಕೆ ಗಂಗಾಧರ ಬರಲು-ಹದಿನಾರು ವರುಷದ ತರುಣೀರೂಪದಿ ಹರಿ ವನದೊಳಗಿರಲು-ಚರಣನಖಾಗ್ರದಿಧರಣೀ ಬರೆಯುತ್ತ ನಿಂತಿರಲು-ಸೆರಗ ಪಿಡಿಯೆ ಬರಲುಕರದಿ ಶಂಖ ಗದೆ ಚಕ್ರವ ತೋರಲುಹರನು ನಾಚಿ ತಲೆತಗ್ಗಿಸಿ ನಿಂತ4 ಮಂಗಳಾಂಗನೆ ಮಾರಜನಕ-ನಾ ಮಾಡಿದ ತಪ್ಪಹಿಂಗದೆ ಕ್ಷಮಿಸೊ ಯದುಕುಲ ತಿಲಕ-ವಕ್ಷದಲೊಪ್ಪುವ ನಿನ್ನಂಗನೆ ಅರಿಯಳು ನಖಮಹಿಮಾಂಕ-ಹೀಗೆನುತಲಿ ತವಕರಂಗವಿಠಲನ ಪದಂಗಳ ಪಿಡಿದು ಸಾಷ್ಟಾಂಗವೆರಗಿ ಕೈಲಾಸಕೆ ನಡೆದ 5
--------------
ಶ್ರೀಪಾದರಾಜರು
ಏನಬೇಡಲಿ ನಿನ್ನ ನಾ ಬಯಸಿ ಸ್ವಾಮಿ ಐಹಿಕ ಸುಖ ನಿಖಿಲ ಪುಸಿಯಾಗಿ ಪ ವನಿತೆಯನು ಬೇಡಲೆ ತನಗೆ ಅಲ್ಲದೆ ಮತ್ತೆ ಮನೆತುಂಬ ಮರಿಮಾಡಿ ತಿನಿಸಿಗ್ಹಾಕೆಂದು ಅನುಗಾಲ ಬೆನ್ನ್ಹತ್ತಿ ತಿನುತಿಹ್ಯಳು ಹರಿದ್ಹರಿದು ಬಿನುಗರಲಿ ಬಿನುಗೆನಿಸಿ ಘನತೆಯನು ಕೆಡಿಸಿ 1 ಘನವೆಂದು ನಂಬಿ ನಾ ಧನವನಾಪೇಕ್ಷಿಸಲೆ ಸನುಮತದಿ ಒತ್ತಟ್ಟಕ್ಷಣ ಕೂಡ್ರಗೊಡದೆ ದಣಿವಿಕಿಲ್ಲದೆ ದುಡಿಸಿ ಅಣುಮಾತ್ರ ಸುಖಕೊಡದೆ ಚಿನುಮಯಾತ್ಮನೆ ನಿನ್ನ ನೆನವೆ ಮರೆಸುವುದು 2 ಭೂಮಿಯನು ಬೇಡಲೆ ಸ್ವಾಮಿಯಂತೆ ಸೇವೆಗೊಂಡು ತಾಮಸದಿ ನೂಕಿ ಬಲು ಪಾಮರೆನಿಸುವುದು ಸ್ವಾಮಿಯೆನ್ನಯ ಸಕಲ ಕಾಮಿತ ಕಡಿದು ನಿಮ್ಮ ನಾಮಬಲ ಕರುಣಿಸು ಶ್ರೀರಾಮ ಪ್ರಭುತಂದೆ3
--------------
ರಾಮದಾಸರು
ಕೊರಡು ಎಂಬೆನು ಇಂಥವನ ಕಂಡು ಕೊರಡು ಎಂಬೆಹುಸಿಯದೆಕೊರಡು ಅಲ್ಲದೆ ಶಿವನಿರೆ ಜೀವನೆಂಬುವನ ಕೊರಡು ಎಂಬೆ ಪ ಹಿರಿಯರು ಬರಲು ಏಳದವನನು ಕಂಡು ಕೊರಡು ಎಂಬೆಮರೆತು ತನ್ನನು ಕಲ್ಲ ಪೂಜಿಪ ಕಂಡು ಕೊರಡು ಎಂಬೆಅರಿತು ತನ್ನನು ಅಹುದಲ್ಲವೋ ಎಂಬುವನ ಕೊರಡು ಎಂಬೆಗುರುಪಾದ ಹೊಂದಿ ತನ್ನನು ತಿಳಿಯದವನು ಕೊರಡು ಎಂಬೆ 1 ತನ್ನೊಳು ಪರಮಾತ್ಮನಿರಲು ಕಾಣದವನನು ಕೊರಡು ಎಂಬೆಅನ್ನವ ಬಿಟ್ಟು ತೊಪ್ಪಲ ತಿಂಬನ ಕಂಡು ಕೊರಡು ಎಂಬೆತಿನ್ನುವನಿರುಲು ಉಪವಾಸ ಬೀಳ್ವನ ಕಂಡು ಕೊರಡು ಎಂಬೆಚೆನ್ನಾಗಿ ಹಮ್ಮಳಿಯದೆ ಶ್ರೇಷ್ಠನೆಂಬುವನ ಕೊರಡು ಎಂಬೆ 2 ನೀನಾರು ಎಂಬುವನ ಅದಾರೆನ್ನದನ ಕಂಡು ಕೊರಡು ಎಂಬೆವೇದಶಿರವನೋದಿನರ ತನ್ನನೆಂಬನ ಕೊರಡು ಎಂಬೆವಾದಕ್ಕೆ ಠಾವಿಲ್ಲ ಖೇದ ಮಾಡುವನ ಕಂಡು ಕೊರಡು ಎಂಬೆಬೋಧ ಚಿದಾನಂದನಿರೆ ಕಾಣದವನನು ಕೊರಡು ಎಂಬೆ 3
--------------
ಚಿದಾನಂದ ಅವಧೂತರು
ತಾಪ ಬ್ರಹ್ಮೇತಿ ಶ್ರೀ ಪುರುಷ ಬಾಲ ಅಣುರೇಣುತ್ರಿಣಗಳಿಗೆಲ್ಲ ಪ ಸಿಂಧು ಕಾವೇರಿ ಕೃಷ್ಣವೇಣಿ ಗೋದೆ ತುಂಗೆ ನರ್ಮದಾ ಇಷ್ಟು ಮಹಾನದಿಯಲ್ಲಿ ಮುಣಗಿ ಮಿಂದರೇನು ಕಾಷ್ಟಕಭ್ಯಾಂಗವನು ಮಾಡಿ ನೀರೆರದಂತೆ1 ಭಕುತಿಯಲಿ ನಡೆದು ಭವಿಷೊತ್ತರ ಪೇಳಿದರೇನೊ ವಿಕಳಮತಿಯಲಿಟ್ಟು ವರನಾದರೇನು ಕಕುಲಾತಿ ತೊರೆದು ನಿಷ್ಕಳಂಕನಾದರೆ ಏನು ಶುಕಪಕ್ಷಿ ಅನುಗಾಲ ಓದಿ ತಿಳಿದಂತೆ 2 ಜ್ಞಾನದಲ್ಲಿ ಪರರಿಗೆ ನ್ಯಾಯ ಪೇಳಿದರೇನು ಹಾನಿ ನೆನೆಸಿ ಕೀರ್ತಿಯ ಪಡೆದರೇನು ಧ್ಯಾನದಲಿ ಮಾನಸ ಪೂಜೆ ಮಾಡಿದರೇನು ಶ್ವಾನದಲಿ ಬೂದಿಯೊಳಗೆ ವರಗಿ ಇದ್ದಂತೆ 3 ಯಾತ್ರೆ ತೀರ್ಥಂಗಳು ತೊಳಲಿ ತಿರುಗಿದರೇನು ಪಾತ್ರಾಪಾತ್ರನರಿದು ನಡೆದರೇನು ಗಾತ್ರವನು ಬಳಲಸಿ ನೇಮ ಮಾಡಿದರೇನು ಮೂತ್ರದಲಿ ತೊಳೆದು ಅಮೃತನ್ನ ಉಂಡಂತೆ 4 ವಡೆವ ಮಡಕಿಗೆ ಚಿಂತಾಮಣಿ ತಂದು ಹಚ್ಚಲು ಗಡಿಗಿ ಅಲ್ಲದೆ ಅದು ಪರುಶಾಗೋದೆ ಬಿಡದೆ ಕೋಪಿಷ್ಠನು ಬಲು ಶಾಂತನೆನೆಸಿದರೆ ಸಿರಿ ವಿಜಯವಿಠ್ಠಲನೊಲಿದು ಮೆಚ್ಚನಯ್ಯಾ 5
--------------
ವಿಜಯದಾಸ
ನಿನ್ನ ನಾನೇನೆಂದೆನೊ | ಗುರುವೆ ಜಗದ್ಗುರುನಿನ್ನ ನಾನೇನೆಂದೆನೋ ಪ ನಿನ್ನ ನಾನೇನೆಂದೆ ನಿಖಿಲ ಜೀವರ ಒಡೆಯಪನ್ನಗ ನಗಧೀಶ ಪತಿತೋದ್ಧಾರನ ದೂತಅ.ಪ. ವಾರಿಧಿಯನೆ ದಾಟಿ | ನಾರಿ ಚೋರನ ಜರೆದುನಾರಿಗೋಸುಗ ಕೌರವರ ಸವರೀ ||ಮಾರಮಣನೆ ಸಾರತಮನೆಂಬ ವೇದಾಂತಸಾರ ಪೇಳ್ದಗೆ ಶರಣೆಂದೆನು ಅಲ್ಲದೇ ||ಭಾರಿ ಕೋತಿಯು ಎಂದೆನೆ - ಕುಪ್ಪುಸ ತೊಟ್ಟುನಾರಿಯಾದವನೆಂದೆನೆ - ಕಾವಿಯನುಟ್ಟುಪೋರಯತಿಯು ಎಂದನೆ - ಕುಭಾಷ್ಯಗಳಾರು ಮೂರೆರಡೊಂದರರಿ ಎಂದೆನಲ್ಲದೆ 1 ನೆರಹಿ ಕಪಿ ಸೈನ್ಯವ | ಶರಧಿಯ ಬಂಧಿಸಿದುರುಳ ರಕ್ಕಸರ ಸಂಹರಿಸೀ ||ಜರೆಯ ಸುತನ ಸೀಳಿ ಬದರೀಗೆತೆರಳೀದವಗೆ ನಮೋ ಎಂದನು ಅಲ್ಲದೇ ||ಗಿರಿಯ ಪೊತ್ತವನೆಂದನೆ - ರಕ್ಕಸಿಯಬೆರೆದ ನೆಂದವನೆಂದೆನೆ - ಕೌಪೀನವಧರಿಸಿದವನು ಎಂದೆನೆ - ಸುಜನರ್ಗೆಪರತತ್ವ ಪೇಳವನೆಂದೆನು ಅಲ್ಲದೆ 2 ಕರ್ತು ಹರಿಯೆ ಎಂದುನೀಚೋಚ್ಛ ತರತಮ ಪೇಳ್ದೆ ಎಂದೆಲ್ಲದೆ ||ಖೇಚರ ನೀನೆಂದೆನೆ - ವಿರಾಟನೊಳ್‍ಪಾಸಚಕ ನೀನೆಂದೆನೆ - ಭವಾಟವಿಮೋಚಕನೇ ಗುರು ಗೋವಿಂದ ವಿಠಲಅರ್ಚಕನೆಂದು ಸ್ತುತಿಗೈದೆನಲ್ಲದೆ 3
--------------
ಗುರುಗೋವಿಂದವಿಠಲರು
ಪತಿ ಪೋದನೆಂದು ಶೋಕಿಸುವುದ್ಯಾಕೆ ಶ್ರೀ - ಪತಿಯು ಇರಲಾಗಿ ಮರುಳೆ ಪ ಪ್ರತಿ ಪ್ರತಿ ಜನ್ಮದಿ ಜತೆ ಮಾಡಿದ ಪಂಚ - ಕಾಯ ಸತ್ಯ ಸ್ಥಿರವಲ್ಲವೇ ಮರುಳೆ ಅ.ಪ ನೋತ ಪುಣ್ಯಾಪುಣ್ಯದ ಫಲ ವ್ರಾತ ಸುಖ ಸುಖವಿತ್ತು ಬರಿದಾಗುವುದು ನಿತ್ಯವಾಗಿ ಸುಖವೆ ಇರಲೆಂದು ಬೇಡಿದರೆ ವ್ಯರ್ಥಧಾವತೆ ಅಲ್ಲದೆ ಸಾರ್ಥಕೆಲ್ಲಿ ಮರುಳೆ 1 ಸೃಷ್ಟಿಯಲಿ ಎಲ್ಲರೂ ನಷ್ಟವಾಗುವರಲ್ಲದೆ ಶ್ರೇಷ್ಠರಾಗಿ ಬಾಳುವರೊಬ್ಬರಿಲ್ಲ ಎಷ್ಟು ಶೋಕಿಸಿದರು ಪೋದ ಕಾಷ್ಠ ಬರಲರಿಯದು ಎ- ಳ್ಳಷ್ಟು ಲಾಭ ಇದರಿಂದ ಇಲ್ಲ ಮರುಳೆ2 ಮುಟ್ಟಿ ಕಟ್ಟಿದ ತಾಳಿಯ ಸಂಬಂಧ ಕೊಟ್ಟ ಹರಿ ತಾ ತಟ್ಟನೆ ಒಯ್ದ ಮೇಲೆ ದುಷ್ಟವೆನ್ನದಲೆ ಇಷ್ಟವೆಂದೆಣಿಸಲು ಸೃಷ್ಟಿಪತಿಯು ತುಷ್ಟನಾಗುವ ಮರುಳೆ 3 ಸರಿಯಲ್ಲಾ ಬರಿದೆ ಚಿಂತಿಸುವುದು ನಿನಗೆ ಕರೆಕರೆಯು ಹೆಚ್ಚುವುದು ಮುಂದೆ ಬಹಳ ಹರಿಕಥೆಯ ಕೇಳು ಹರಿದಾಸರೊಳ್ ಬೀಳು ಹರಿಗೆ ಪೇಳು ನಿನ್ನಯ ಗೋಳು 4 ಇನ್ನಾದರೂ ನೀನು ಹರಿಯ ಸಂಕಲ್ಪವಿದೆಂದು ನಿನ್ನ ಮನದೊಳು ತಿಳಿದುಕೊಂಡು ಘನ್ನ ಮಹಿಮಾ ವಿಜಯ ರಾಮಚಂದ್ರವಿಠಲನ್ನ ಸನ್ನುತಿಸಲು ಮುನ್ನೆ ಹತಿಯಾಗುವುದು ಮರುಳೆ 5
--------------
ವಿಜಯ ರಾಮಚಂದ್ರವಿಠಲ
ಪ್ರಾಣರಾಯನೆ ನಿನಗೆಣೆಯುಂಟೆ ಪಾಲಿಪ ಕ ರುಣಾಶಾಲಿಗಳನ್ನು ಪಣೆಗಣ್ಣ ಮೊದಲಾದಮರ ಗಣದೊಳು ಇನ್ನು ನಾ ಕಾಣೆ ಮುನ್ನ ಪ ಗುಣನಿಧಿಯೆ ಎಣಿಯಿಲ್ಲ ನಿನ್ನಯ ಅಣು ಮಹಘನರೂಪ ಕ್ರಿಯಗಳು ಕ್ಷಣಬಿಡದೆ ನೀನಖಿಳಜೀವರ ತ್ರಿ- ಗುಣ ಕಾರ್ಯವ ಗೈವೆ ಮುಖ್ಯ ಅ.ಪ ಕರ್ಮ ಜೀವರೊಳು ನೀನೆಸಗಿ ತೋರ್ಪುದೆ ಧರ್ಮ ನಾನರಿಯೆ ಪ್ರತಿ ಕರ್ಮ ಎನ್ನನುಭವಕೆ ತಂದಿಡುವುದೇ ನಿನ್ನ ಧರ್ಮ ನಾ ಕಾಣೆ ಮರ್ಮ ಜನುಮ ಕೋಟಿಗಳಿಂದಲಿ ಅನುಸರಿಸಿ ಬಂದಿಹ ಎನ್ನ ಕರ್ಮವ ಅನಿಲದೇವ ನಿನ್ನಿಂದ ಅಲ್ಲದೆ ಎನಿತು ಇತರನಿಮಿಷರು ಮಾಳ್ವರು ಜ್ಞಾನದಾಯಕ ನೀನೆ ಎನ್ನಯ ಮನದಲಿಹ ಜಂಜಡವ ಕಳೆದು ಹೀನಕರ್ತನು ತಾನು ಅಲ್ಲದೆ ನೀನೆ ಸರ್ವರ ಕರ್ತನೆಂಬುವ ಜ್ಞಾನಿ ಧ್ಯಾನ ಸ್ಮರಣೆಯನು ಸಾನುರಾಗದಿ ಇತ್ತು ನಿನ್ನ ಮತಾನುಗರಲ್ಲನವರತ ಇಡು ಅನೇಕ ಜನುಮಜನುಮಾಂತರದೊಳು 1 ಶ್ವಾಸನಾಮಕ ನೀನು ಜಗದೀಶ ನೀ ಜೀ- ವೇಶ ಸರ್ವಶಕ್ತಾನು ನೀ ತಾಸಿಗೊಂಭೈನೂರು ಶ್ವಾಸಗಳನ್ನು ಈ ಶರೀರದಿ ಜೀವರಿಂ ದೆಸಗುವೆಯೊ ನೀನು ಉಸುರಲೇನಿನ್ನು ವಾಸುದೇವಗೆ ಪ್ರೀತನಾಗಿ ಅ- ಶೇಷತತ್ತ್ವಕ್ಕೀಶನಾಗಿಹೆ ವಾಸವಾದಿಗಳೆಲ್ಲರೊಳು ಇನ್ನು ಈಸುಭಾಗ್ಯವು ಕಾಣಲಿಲ್ಲ ಏಸುಕಾಲಕು ನೀನೇ ಗತಿಯೆಂದು ಈಶ ಶೇಷ ಖಗೇಶ ಪ್ರಮುಖರು ದಾಸರಾಗಿಹಗರಯ್ಯ ಬಿಡದೆ ದೇಶಕಾಲಗಳಲ್ಲಿ ನಿನ್ನೊಳು ಸೂಸುವಾ ಅತಿಭಕುತಿಯಿಂದಲಿ ಈಶ ತಪದಲಿ ನಿನ್ನ ಮೆಚ್ಚಿಸೆ ಶೇಷಪದವಿಯ ಕೊಟ್ಟು ಶ್ರೀಶ- ನ ಶಯನಸೇವೆ ಸಂಪದವನಿತ್ತೆ 2 ಭಕುತ ಜನರ ಬಂಧೂ ಶ್ರೀಹರಿಗೆ ನೀ ಪ್ರಥ- ಮಾಂಗನಹುದೆಂದೂ ಈ ಸಕಲ ಜಗದಾ ಚೇಷ್ಟಪ್ರದನೆಂತೆಂದೂ ನೀನೆ ಭಗವತ್ಕಾರ್ಯಸಾಧಕನೆಂದೂ ಸಾರುತಿದೆ ಶ್ರುತಿ ಇಂದೂ ಲೋಕಮಾತೆಗೆ ನಮಿಸಿ ದಶಶಿರ ನಂದನನ ಸಂಹರಿಸಿ ಮಹದಾನಂದ ನೀ ವನವ ಭಂಗಿಸಿ ರಘುನಂದನಗೆ ಮುದದಿಂದ ವಂದಿಸಿ ನೊಂದ ದೃ- ಪದನಂದನೇಯಳಾ- ನಂದಪಡಿಸಲು ಕೊಂದೆ ಕೌರವ ವೃಂದವೆಲ್ಲವ ಸವರಿ ನಂದನಂದನಿಗಾನಂದ ಪಡಿಸಿದೆ ಇಂದಿರೇಶ ಶ್ರೀ ವೇಂಕಟೇಶನೆ ಎಂದಿಗೂ ಪರದೈವವೆಂದು ಬಂದು ಬೋಧೆಯನಿತ್ತ ಆ- ನಂದತೀರ್ಥ ನೀ ಸಮರ್ಥಾ3
--------------
ಉರಗಾದ್ರಿವಾಸವಿಠಲದಾಸರು
ಯಾಕೆ ನಿನಗೆ ಮನವೆ ವ್ಯಥೆಯು ಎಷ್ಟು ಲೋಕನಾಯಕ ಶ್ರೀಲೋಲ ಲಕ್ಷ್ಮಯ್ಯಾ ರಮಣ ಶ್ರೀಕಪರೇಯಾ ನಿನ್ನನ್ನೇ ಸ್ಮರಿಸುವುದು ಬಿಟ್ಟೂ ಪ ಹಲವು ಹಂಬಲಿಸಿದರೇನು ಫಲಾ ವ್ಯರ್ಥಾ ಬಳಲುವದೊಂದೇ ಅಲ್ಲದೆ ಬಾಧೆಯಿಂದಾ ಅಜ ಬ್ರಹ್ಮಾಂಬರದ ವರ-----ಆರಾರಿಗ್ವಶನಲ್ಲಾ ನಳಿನಾನಾಭನಾ ದಿವ್ಯನಾಮಾ ಭಜನೆಯ ತೊರೆದು 1 ಹರಿಶ್ಚಂದ್ರಾ ನಳರಾಜಾ-------ದಶರಥ ಮೊದಲು ಪುರಾಕೃತ ಕರ್ಮಾದಿ ಭಂಗಾ ಬಡಲಿಲ್ಲೇನೋ ಅರಿತೂನೀ ಹೃದಯಾದಿ ಅನ್ಯಚಿಂತನೆ ಹಿಡಿದು ಪರಮಾತ್ಮ ಪರಬ್ರಹ್ಮನ ಪಾದಧ್ಯಾನವೇ ಬಿಟ್ಟು 2 ಧರೆಯೊಳಾಧಿಕನಾದ ಧೋರಿ 'ಹೊನ್ನವಿಠಲನ’ ಚರಣವೇ ಗತಿಯೆಂದು ಚಿತ್ತಾದಲೆ ಸ್ಥಿರವಾಗಿ ಪೂಜಿಸಿ ಸೇವೆಯನೆ ಮಾಡಿ ಪರಮಹರುಷದಿಂದ ಪಡೆಯಾದೆ ಹರಿಕರುಣಾ 3
--------------
ಹೆನ್ನೆರಂಗದಾಸರು
ಯೆಂದು ಪಿಡಿಯುವಿ ಕೈಯ್ಯ ಇಂದಿರೇಶ ಚಲುವ ಕೃಷ್ಣನೆ ಪ ಮುಂದೆ ಹೋಗಲು ಬಂಧಮಾಡುತ ಕುಂದು ಅಳಿಯುತ ತಂದೆ ದಯೆತೊರಿ ಅ.ಪ ಮಂದ ನಾನಯ್ಯ ಕಂದಿ ಕುಂದಿದೆ ಭವದಿ ಕೇಳಯ್ಯ ಬಂಧು ಬಳಗವು ಯಾರು ಇಲ್ಲಯ್ಯ ನಿಂದು ಮುಂದಿನ ದಾರಿ ನಡೆಸಯ್ಯ ಜೀಯಾ ಅಂದು ಸಭೆಯೊಳು ಮಂದಗಮನೆಯ ಒಂದು ನೊಡದೆ ಬಂದು ಸಲಹಿದ ಸಿಂಧು ಶಯನಾನಂದ ಮೂರುತಿ ನಂದನಂದನ ಶ್ಯಾಮಸುಂದರ ಬಂಧು ಸರ್ವರ ಬಂಧಮೋಚಕ ಮಂದರಾದ್ರಿ ಧರನೆ ಯದುಕುಲ ಚಂದ್ರ ಶೋಭಾಸಾಂದ್ರ ಕೃಷ್ಣನೆ ಬಂದು ಚಂದದಿ ಸಲಹಿ ಎನ್ನನು 1 ಬಾಲತನದಲ್ಲಿ ಲೀಲೆಗೋಷ್ಠಿಲಿ ಮೆರೆದೆ ನಾನಲ್ಲಿ ಮೇಲೆ ಯೌವನ ಒಡನೆ ಬಂತಲ್ಲಿ ಲಲನೆ ಕೇಳಿಲಿ ಮುಳುಗಿ ಹೋದೆನು ಅಲ್ಲಿ ಮೆಲ್ಲಮೆಲ್ಲನೆ ಮುಪ್ಪು ಬಂತಲ್ಲಿ ಕಾಲಕಳೆದೆನು ಪಗಡೆ ಜೂಜಿನಲಿ ಮಲ್ಲಮರ್ದನ ಮಾತುಲಾಂತಕ ಚಲ್ವಸೂಕರ ಪುಲ್ಲಲೊಚನ ಪುಲ್ಲನಾಭನೆನಲ್ಲ ಸರ್ವರ ಬಿಂಬರೂಪನೆ ಎಲ್ಲ ಕಾಲದಿ ಎಲ್ಲಮಾಡುತ ನಿಲ್ಲದೆಜಗ ಸಾರ ಶ್ರೀ ನಲ್ಲ ನಿನ್ನಯ ಎಲ್ಲ ಬಲ್ಲವರಿಲ್ಲ ಎಲ್ಲಿಯೂ ಬುದ್ಧ ಕಲ್ಕಿಯೆ ಸೊಲ್ಲು ಲಾಲಿಸಿ ಒಲಿದು ಬಂದ ನಾರಸಿಂಹನೆ ಇಲ್ಲ ಸಮರು ಅಧಿಕರೈಯ್ಯ ಪೂರ್ಣದೇವನೆ2 ಮೂರು ತಾಪವ ಹರಿಪ ಬಗೆಯೇನೋ ವೈರಿ ಆರರ ಭರದಿ ತರಿ ನೀನೂ ಮೂರು ಋಣಗಳು ಉಳಿಯೆಗತಿಯೇನು ಮೂರು ಕರ್ಮದಿ ಬಿಡಿಸಿ ಹೊರೆಯನ್ನು ಭಕ್ತಸುರಧೇನು ಸಾರಸಜ್ಜನ ಪ್ರಾಪ್ಯ ಶುಭಗುಣ ಸಾರ ಕರುಣಾ ಪೂರ್ಣವಾರಿಧಿ ಮಾರಜನಕನೇ ಋಷಭಮಹಿದಾಸ ತೋರು ಜ್ಞಾನವ ಬಾದರಾಯಣ ಮೀರಲಾರೆನು ವಿಷಯವಾಸನೆ ಭಾರತೀಶನ ಒಡೆಯ ಕೃಷ್ಣನೆ ಭಾರ ನಿನ್ನದು ಎನ್ನ ಪೊರೆವದು ಮತ್ಸ್ಯ ವಾಮನ ಧೀರ ಧೃವನಾ ಪೊರೆದ ವರದನೆ ಬೀರಿ ಭಕ್ತಿ ಜ್ಞಾನ ವೈರಾಗ್ಯ 3 ಎನ್ನ ಯೋಗ್ಯತೆ ನೋಡಿ ಫಲವೇನು ನಿನ್ನ ಘನತೆ ತೋರಿ ಪೊರೆ ನೀನು ನಿನ್ನ ದಾಸನ ಮಾಡು ಎನ್ನನ್ನು ಅನ್ಯಹಾದಿಯ ಕಾಣೆ ನಾ ನಿನ್ನು ಬೆನ್ನು ಬಿದ್ದೆನು ಇನ್ನೂಮುನ್ನೂ ಮಾಧವ ವಿಶ್ವ ತೈಜಸ ಪ್ರಾಜ್ಞತುರಿಯ ಹಂಸ ವಿಷ್ಣುವೇ ಜ್ಞಾನ ಭೋಧಕ ಸನತ್ಕುಮಾರನೇ ಮೌನಿ ದತ್ತಾತ್ರೇಯ ಹಯಮುಖ ದೀನವತ್ಸಲ ಯಜ್ಞ ಧನ್ವಂತ್ರಿ ಶ್ರೀನಿವಾಸ ರಾಮ ಕಪಿಲನೆ ಜ್ಞಾನ ನಿಧಿ ಮುನಿ ನಾರಾಯಣನೆ ನೀನೆ ಅನಿರುದ್ಧಾದಿ ರೂಪನು ಧ್ಯಾನಗೊಚರ ಶಿಂಶುಮಾರನೆ ಸಾನುಕೂಲದಿ ನೀನೆ ವಲಿಯುತ ಕರ್ಮ ಸಂಚಯ4 ಆದಪೊದ ಮಾತು ಏಕ್ಕಯ್ಯ ಮಧ್ವರಾಯರ ಪ್ರೀಯ ಶೃತಿಗೇಯ ಮೋದದಾಯಕ ಮುಂದೆ ಸಲಹೈಯ್ಯ ಪಾದಪದ್ಮದಿ ಶರಣು ಅಲ್ಲದೆ ಏನು ಮಾಡಲಿ ಜೀಯ ಅಯ್ಯ ತಿದ್ದಿ ಮನವನು ಕದ್ದು ಅಘವನು ಒದ್ದು ಲಿಂಗವ ಶುದ್ಧಜ್ಞಾನದ ಸಾಧು ಜಯಮುನಿ ವಾಯುವಂತರ ಮಾಧವ ಶ್ರೀ ಕೃಷ್ಣವಿಠಲನೆ ಪಾದ ಮಧುಪರ ವೃಂದ ಮಧ್ಯದಿ ವೇದ ಸಮ್ಮತ ಗಾನ ಸುಧೆಯನು ಶುದ್ಧಭಕ್ತಿ ಜ್ಞಾನದೊಡಗೂಡಿ ಮೆದ್ದು ಪಾಡುತ ಕುಣಿವ ಭಾಗ್ಯವ ಮುದ್ದು ಕೃಷ್ಣನೆ ನೀನೆ ಎನಗಿತ್ತು 5
--------------
ಕೃಷ್ಣವಿಠಲದಾಸರು
ವ್ಯರ್ಥ ಹೋರಾಟವಲ್ಲದೆ ಇದು ನಿಜವಲ್ಲಾ ಕರ್ತೃ ಶ್ರೀಹರಿ ಮಾಡಿದರ್ಥವೆ ಸರಿ ಅಲ್ಲದೆ ಪ ಪುರಾಕೃತ ಸಂಚಿತಾರ್ಥ ಪುಣ್ಯ ಪಾಪಗಳಿಂದ ಪರಿ ಅನುಭವ ಬಡುತಾ ಇನ್ನೂ ಇರುವೆಯಲ್ಲದೆ ಘಣಿಯಲಿ ವಿರಂಚಿ ಬರೆದ ಭಂಗ ಬಡುತಲಿಷ್ಟು 1 ಎಂದೆಂದೂ ನಿನ್ನ ಹಿಂದೆ ಒಂದೂ ಬರುವುದಿಲ್ಲ ಮುಂದುಗಾಣದೆ ಇನ್ನು ಮೋಹಕೆ ಸಿಲುಕಿ ನಂದೆಂದು ಪರಿಯಿಂದ ಘಳಿಸಿದ ದ್ರವ್ಯದ ಬಿಂದಿಗೆ ದಾರೋ ನೀದಾರೋ ಪಾಮರ ಮೂಢಾ 2 ನನ್ನ ಹೆಂಡತಿ ಮಕ್ಕಳು ನನ್ನ ಮನೆ ಬಾಗಿಲು ನನ್ನ----ಯು ವೃತ್ತಿ ನನ್ನದೆಂದೂ ನಿತ್ಯ ಒಂದಾಡುವೆ ನೀದಾರೋ ಮೂಢಾ 3 ತಂದೆ ತಾಯಿಯ ಗರ್ಭದಿಂದ ಪುಟ್ಟಿರುವಂದೇ ತಂದೆಲ್ಲೊ ತಾಯೆಲ್ಲೊ ತಾನೆಲ್ಲೊ ಮರುಳೆ ಹಿಂದೆ ಆದವರ ಚರ್ಯವ ವಿವರಿಸಿ ನೋಡಿನೋಡಿ ಕುಂದು ಇಲ್ಲದೆ ಮುಕ್ಕುಂದನ ಸ್ಮರಿಸು ಗಾಢಾ 4 ಮಾಯಾ ಪ್ರಪಂಚದೋಳ್ ಮಗ್ನನಾಗಿ ಇನ್ನು ಕಾಯಾ ಅಸ್ಥಿರವೆಂದು ಕಾಣೋ----- ಶ್ರೀಯರಸ 'ಹೆನ್ನ ವಿಠ್ಠಲ’ರಾಯನ ಕರ್ಮ ಧ್ಯಾನವು ಬಿಟ್ಟು 5
--------------
ಹೆನ್ನೆರಂಗದಾಸರು
ಸುವ್ವಿ ಸುವ್ವಿ ನಮ್ಮ ಶ್ರೀರಮಣಗೆ ಸುವ್ವಿ ಸುವ್ವಿ ಸುವ್ವಿ ನಮ್ಮ ಭೂರಮಣಗೆ ಸುವ್ವಿ ಸುವ್ವಿ ಎಂದು ಪಾಡಿ ಸಜ್ಜನರೆಲ್ಲ ಕೇಳಿ ಪ. ಹರಿಗೆ ಶರಣೆಂಬೆ ಸಿರಿಗೆ ಶರಣೆಂಬೆ ವರ ವಾಣಿರಮಣಗೆ ಶರಣೆಂಬೆ ಸುವ್ವಿ ವರ ವಾಣಿರಮಣಗೆ ಶರಣೆಂದು ಪೇಳಿದ ಗುರುವಾದಿರಾಜೇಂದ್ರನ ಕೃತಿಯೆಂದು ಸುವ್ವಿ 1 ¥ಕ್ಕಿವಾಹನ್ನ ಜಗಕ್ಕೆ ಮೋಹನ್ನ ರಕ್ಕಸದಾಹನ್ನನಿವ ಸುವ್ವಿ ರಕ್ಕಸದಾಹನ್ನನಿವ ತನ್ನ ಮರೆ- ಹೊಕ್ಕರ ಕಾಯ್ವ ಪ್ರಸನ್ನನಿವ ಸುವ್ವಿ 2 ಯಶೋದೆಯ ಕಂದ ತನ್ನ ವಿಷವನುಣ್ಣೆಂದ ಕರ್ಕಶದ ಪೂತನಿಯ ಶಿಶುವಾಗಿ ಸುವ್ವಿ ಕರ್ಕಶದ ಪೂತನಿಯ ಶಿಶುವಾಗಿ ಕೊಂದ ನಮ್ಮ ಎಸೆವ ಗೋವಿಂದ ಪಾಲಿಸ ಬಂದ ಸುವ್ವಿ 3 ಶಕಟಾಸುರನ್ನ ಮೆಟ್ಟಿ ಕೊಂದ ಬಲು ವಿಕಟ ದೈತ್ಯನ್ನ ಕೊರಲೆತ್ತಿ ಸುವ್ವಿ ವಿಕಟದೈತ್ಯನ್ನ ಕೊರಲೆತ್ತಿ ಕೊಂದು ಸರ್ಪನ ಮ- ಸ್ತಕದಮೇಲೆ ನಲಿವುತ ನಿಂದ ಸುವ್ವಿ4 ಕರುಗಳ ಕಣ್ಣಿಯ ಬಿಡುವಾಗ ನಾರಿಯರೆಲ್ಲರು ಪೊರವಡಲು ತಾ ಪೊಕ್ಕು ಪಾಲ್ಮೊಸರನೆ ಸುವ್ವಿ ಪೊರವಡಲು ತಾ ಪೊಕ್ಕು ಪಾಲ್ಮೊಸರನೆ ಸುರಿದು ಅವರ್ಬರಲು ಬೆಣ್ಣೆಯ ಕೊಂಡೋಡುವ ಸುವ್ವಿ 5 ಮತ್ತಿಯ ಮರಗಳ ಕಿತ್ತುವಾಗ ಅಲ್ಲಿ ಭೃತ್ಯರಿಗೊಲಿದು ವರವಿತ್ತ ಸುವ್ವಿ ಭೃತ್ಯರಿಗೊಲಿದು ವರವಿತ್ತ ತನ್ನ ಮಿತ್ರಜನಕಾಗಿ ಗಿರಿಯೆತ್ತಿದನೆ ಸುವ್ವಿ 6 ವೃಂದಾವನದಿ ನಿಂದು ಚಂದದಿ ನಲಿವಾಗ ತನ್ನ [ಕೊಂದಪೆ]ನೆಂದು ಬಂದ ಬಕನ ಸುವ್ವಿ [ಕೊಂದಪೆ]ನೆಂದು ಬಂದ ಬಕನ ಸೀಳಿ ಪುಲ್ಲಂದದಿ ಕೊಂದು ಬಿಸುಟಾನೆ ಸುವ್ವಿ 7 ಕಲ್ಪತರುವಂತೆ ನಮ್ಮ ತನ್ನಧರಿಂದ ಕೊಳಲನೂದುವ ಚೆಲುವಗೆ ಸುವ್ವಿ ಕೊಳಲನೂದುವ ಚೆಲುವ ಗಾನಲೋಲ ಗೋ- ಪಾಲಕೃಷ್ಣನಿಗೆ ಶರಣೆಂಬೆ ಸುವ್ವಿ 8 ರಂಗ ರಾಸಕ್ರೀಡೆಯೆಂಬ ಶೃಂಗಾರರಸ ಬಸಿವ ಮಂಗಳ ವಿಲಾಸವನು [ರಚಿಸಿದ]ಸುವ್ವಿ ಮಂಗಳ ವಿಲಾಸವನು ರಚಿಸಿದಾತನ ಕಂಡು ದೇ ವಾಂಗನೆಯರೆಲ್ಲರು ತನುವ ಮರೆತರು ಸುವ್ವಿ 9 ಮಧುರೆಗೆ ಪೋಗಿ ಮಲ್ಲರಸುವ ನೀಗಿ ಮದಾಂಧ ಮಾವನ್ನ ಮಡುಹಿದ ಸುವ್ವಿ ಮದಾಂಧ ಮಾವನ್ನ ಮಡುಹಿದ ಶ್ರೀಕೃಷ್ಣ ಮುದದಿ ತನ್ನವರ ಮುದ್ದಿಸಿದ ಸುವ್ವಿ 10 ಧರ್ಮವ ಬಿಡಬೇಡ ದುಷ್ಕರ್ಮ ಮಾಡಬೇಡ ದುರ್ಮನವ ಬಿಡದೆ ಹರಿಯಲಿಡು ಸುವ್ವಿ ದುರ್ಮನವ ಬಿಡದೆ ಹರಿಯಲಿಡು ಮನವ ಕಾಮಿನಿಯೊಳಾಡಿ ಕೆಡಬೇಡ ಸುವ್ವಿ 11 ದುರುಳರ ನೋಡಿ ದೂರಕ್ಕೋಡು ಹರಿ- ಶರಣಡಿಗೆ ಪೊಡಮಡು ಸುವ್ವಿ ಶರಣರಡಿಗೆ ಪೊಡಮಡು ಶ್ರೀಕೃಷ್ಣನ ಸು- ಚರಿತವ ಪಾಡುವರೊಳಗಾಡು ಸುವ್ವಿ 12 ಏರಲರಿಯದವ ಮರನೇರಿ ಬಿದ್ದು ಸಾವಂತೆ ನೀರ ಮೀನುಗಳು ಕರಗುವಂತೆ ಸುವ್ವಿ ನೀರ ಮೀನುಗಳು ಕರಗುವಂತೆ ಮನುಜ ನೀ ಬಾರದ ಭಾಗ್ಯಕ್ಕೆ ಹೋರಬೇಡ ಸುವ್ವಿ 13 ಹಿಂದೆ ಪುಣ್ಯದ ಬೀಜವ ಕುಂದದೆ ಬಿತ್ತಿದರೆ ಇಂದು[ಬಾಹದೈಶ್ವರ್ಯ ಮುಂದಿಪ್ಪೋದು] ಸುವ್ವಿ ಇಂದು [ಬಾಹದೈಶ್ವರ್ಯ ಮುಂದಿಪ್ಪೋದು] ಬರಿದೆ ನೀ ನೊಂದು ವಿಧಿಯ ಬೈದರೆ ಎಂದೆಂದು ಕೆಡುವೆ ಸುವ್ವಿ 14 ದುರುಳ ಕೀಚಕ ಕೆಟ್ಟ ಪರಧನಕೆ ಮರುಳಾಗಿ ಕುರುರಾಯ ಸುವ್ವಿ ಪರಧನಕೆ ಮರುಳಾಗಿ ಕುರುರಾಯ ಕೆಟ್ಟನೆಂದು ಒರೆವ ಭಾರತವ ನಿರುತ ಕೇಳು ಸುವ್ವಿ 15 ವಾದಿಯೂ ಹರಿಯಾದ ಪ್ರತಿವಾದಿಯೂ ಹರಿಯಾದ ಭೇದವಿಲ್ಲವೆಂಬ ಮತದಲ್ಲಿ ಸುವ್ವಿ ಭೇದವಿಲ್ಲವೆಂಬ ಮತದಲ್ಲಿ ತಾನೊಬ್ಬನೇ ಕಾದಿ ಗೆದ್ದಾನೆಂತು ಬಿದ್ದಾನೆಂತು ಸುವ್ವಿ 16 ಎಲ್ಲ ಒಂದಾಂದರೆ ಶಾಲ್ಯಾನ್ನನುಂಬುವರು ಪುಲ್ಲನ್ಯಾಕೆ ಮೆದ್ದು ಬದುಕರು ಸುವ್ವಿ ಪುಲ್ಲನ್ಯಾಕೆ ಮೆದ್ದು ಬದುಕರು ಸ್ಥಳಚರರು ಜಲದೊಳು ಚರಿಸೆ ಅಳುವದ್ಯಾಕೆ ಸುವ್ವಿ 17 ವರ್ತಿಯ ಸಂಸಾರ ವ್ಯವಹಾರಕ್ಕೀಗ ಸ- ರ್ವತ್ರ ಜೀವ ಭೇದವುಂಟೆಂಬುವಗೆ ಸುವ್ವಿ ಸ- ರ್ವತ್ರ ಜೀವ ಭೇದವುಂಟೆಂಬುವಗೆ ಭೇದ ಸತ್ಯವಾದರೈಕ್ಯ ಎತ್ತಿಹೋದು ಸುವ್ವಿ 18 ಅತ್ತೆ ಸೊಸೆಯರಿದ್ದಾಗ ಮನೆಯೊಳು ಮತ್ಸರವು ಕತ್ತೆನಾಯಿಗಳಂತೇಕೆ ಬೆರಸರು ಸುವ್ವಿ ಕತ್ತೆನಾಯಿಗಳಂತೇಕೆ ಬೆರಸರು ಅದರಿಂದ ಪ್ರತ್ಯೇಕ ಜೀವರ ಇರವು ಸುವ್ವಿ 19 ಮಿಥ್ಯಾ ಭೇದಾದರೆ ಅದು ಶುಕ್ತಿರೂಪದಂತೆ ತ- ನ್ನರ್ಥವ ತಾ ಕಾಣಲರಿಯನು ಸುವ್ವಿ ತ- ನ್ನರ್ಥವ ತಾ ಕಾಣಲರಿಯನು ಅದರಿಂದ ನಾ- ವೆತ್ತಿದ ದೂಷಣೆಗೆ ಉತ್ತರವಿಲ್ಲ ಸುವ್ವಿ 20 ಬೊಮ್ಮ ಮಿಥ್ಯವಲ್ಲವೋ ನಿನ್ನ ಮಿಥ್ಯ ಶಶಶೃಂಗ ಸತ್ಯವಲ್ಲ ಸುವ್ವಿ ಮಿಥ್ಯಶ ಶಶೃಂಗ ಸತ್ಯವಲ್ಲ ಶೃಂಗ್ಯೆರಡು ಜ- ಗತ್ತಿನೊಳು ಕೂಡವು ಕುಯುಕ್ತಿಯ ನಿನಗಾವ ಕಲಿಸಿದ ಸುವ್ವಿ 21 ಸತ್ತ ಪೆಣನುಂಟು ಸಾಯದ ವಸ್ತುಂಟು ಸತ್ತು ಸಾಯದ ಮತ್ರ್ಯರಿಲ್ಲ ಸುವ್ವಿ ಸತ್ತು ಸಾಯದ ಮತ್ರ್ಯರಿಲ್ಲ ಮತ್ರ್ಯನಾಗಿ ನಿನ್ನ [ಮಿಥ್ಯಾವಾದ]ವೆಂತು ನಿತ್ಯವಹುದು ಸುವ್ವಿ 22 ಸತ್ಯವೆಂದರುಂಟು ಮಿಥ್ಯವೆಂದರಿಲ್ಲ ಎಂ- ಬರ್ಥ ತಾ ಕೂಡಲರಿಯದು ಸುವ್ವಿ ಎಂ- ಬರ್ಥ ತಾ ಕೂಡಲರಿಯದು ಅದರಿಂದ ಅರ್ಥವಪೇಳೆ ಮಿಥ್ಯಕೆ ನಾಮಾಂತರ ಸುವ್ವಿ23 ಭರ್ತೃಯಿಲ್ಲದವಳ ಮುತ್ತೈದೆಯೆಂಬಂತೆ ನಿನ್ನ ಮಿಥ್ಯಜಗಕಿಟ್ಟ ಸತ್ಯನಾಮ ಸುವ್ವಿ ಮಿಥ್ಯಜಗಕಿಟ್ಟ ಸತ್ಯನಾಮ ನಿನ್ನ ಯುಕ್ತಿಶೂನ್ಯನೆಂದು ಸುತ್ತ ನಗುತಿಪ್ಪುದು ಸುವ್ವಿ 24 ಇಲ್ಲ ಜಗವೆಂಬುದನು ಈಗ ಕಂಡದ ಕಾರಣ ಇಲ್ಲವಾತನ ವಾದಕ್ಕೆ ಪೊಗಳಲರಿಯದು ಸುವ್ವಿ ಇಲ್ಲವಾತನ ವಾದಕ್ಕೆ ಪೊಗಳಲರಿಯದ ಹೊಲೆಯನ [ಎಲ್ಲರರಿಯದಿದ್ದರೆ] ಹೊಲೆಜಾತಿ ಹೋಕ ಸುವ್ವಿ 25 ಗಿರಿಯ ಪಿರಿಯ ಗುಹೆಯೊಳು ದಳ್ಳುರಿಯ ಬೇಗೆಗೆ ಬೆಂದ ಕರಿಯನರಿಯದ ಕಾರಣ ಮರನ ಮುರಿವುದೆ ಸುವ್ವಿ ಕರಿಯನರಿಯದ ಕಾರಣ ಮರನ ಮುರಿವುದೆ ವಾದಿಯೀ ಪರಿಯಲಿ ನಿನ್ನ ಮಿಥ್ಯದಿ ಕಾರ್ಯವಾಗದು ಸುವ್ವಿ 26 ಹಳೆಯ ಮಲವೆಲ್ಲವು ಮಲವೆ ಅಲ್ಲದೆ ಮತ್ತೆ ಜಲಜಾಕ್ಷಿಯರ ಸಂಗಕ್ಕೆ ಪರಿಮಳವೀವುದೆ ಸುವ್ವಿ ಜಲಜಾಕ್ಷಿ ್ಷಯರ ಸಂಗಕ್ಕೆ ಪರಿಮಳವೀವುದೆ ಶೂಲದಿ ಸತ್ತ[ಪೆಣನು] ಸುಳಿವುತಿಪ್ಪುದೆ ಸುವ್ವಿ 27 ನಾಸ್ತಿಯೆಂಬ ವಸ್ತುವ ನಾಸ್ತಿಯೆಂದರಿಯದೆ ಆಸ್ತಿಯೆಂದು ಕಂಡರೆ ಅತಿಮೂರ್ಖ ಸುವ್ವಿ ಆಸ್ತಿಯೆಂದು ಕಂಡರೆ ಅತಿಮೂರ್ಖ ಅಕಟಕಟ ಜ- ಗತ್ತಿನ ಮಹಂತರ ಉನ್ಮತ್ತರ ಮಾಡಿದ ಸುವ್ವಿ 28 ಏಕಾಕಿ ನ ರಮತೆಯೆಂಬ ವೇದವಾಕ್ಯ ವಿ- ವೇಕಿಗಳೆಲ್ಲ ಬಲ್ಲರು ಸುವ್ವಿ ವಿ- ವೇಕಿಗಳೆಲ್ಲ ಬಲ್ಲರು ಅದರಿಂದ ನಿನ್ನ ಮುಕ್ತಿ ಏಕಾಕಿಯಾದರೆ ಶೋಕಕ್ಕೊಳಗಾದೆ ಸುವ್ವಿ 29 ಲೋಕದೊಳು ಹಾಳೂರ ಹಂದಿಯ ಬೇಸರದೆ ನೋಡೊ ನಿ- ನ್ನ ಕೈವಲ್ಯದ ಘಸಣೆ ಸಾಕು ಸಾಕು ಸುವ್ವಿ ನಿ- ನ್ನ ಕೈವಲ್ಯದ ಘಸಣೆ ಸಾಕು ಸಾಕು ನಮ್ಮ ಶ್ರೀ ವೈಕುಂಠದ ವಾಸನೆ ಲೇಸು ಸುವ್ವಿ 30 ಅಲ್ಲಿ ಸಹಬ್ರಹ್ಮಣಾ ಸರ್ವಕ ಮಂಗಳೆಂಬಾರಂತೆ ಅಲ್ಲಿ ಸರ್ವೇನಂದತಿ ಎಂಬ ಶ್ರುತಿಯು ಸುವ್ವಿ ಅಲ್ಲಿ ಸರ್ವೇನಂದತಿ ಎಂಬ ಶ್ರುತಿಯು ನೀ ಕೇಳು ಎಲ್ಲ ಮತ್ರ್ಯರಲ್ಲಿ ಹರಿಯನುವ್ರತರಂತೆ ಸುವ್ವಿ 31 ಅಲ್ಲಿ ನರ ನಾರಿಯರು ಚಿನುಮಯ ಚೆಲುವರಂತೆ ಅಲ್ಲಿ ಚತುರ್ಬಾಹುಗಳಾಗಿಪ್ಪರಂತೆ ಸುವ್ವಿ ಅಲ್ಲಿ ಚತುರ್ಬಾಹುಗಳಾಗಿಪ್ಪರಂತೆ ಅವರ ಶ್ರೀ- ವಲ್ಲಭ ಲಾಲಿಸಿ ಪಾಲಿಸುವನಚಿಂತೆ ಸುವ್ವಿ 32 ನಗರ ಕೃಷ್ಣಗೆ ಘನೋದಕದ ಮೇಲೆ ಮಿಂಚುತಿಪ್ಪುದು ಸುವ್ವಿ ಘನೋದಕದ ಮೇಲೆ ಮಿಂಚುತಿಪ್ಪುದು ಅಲ್ಲಿ ಮನೆ ಮನೆಯಲಿ ಮುಕ್ತರ ಸಂದಣಿ ಸುವ್ವಿ34 ಇಂತು ಹಯವದನ ನಿಶ್ಚಿಂತ ಜಗತ್ಕಾಂತ ಸಂತರನು ಸದಾ ಸಲಹುವ ಸುವ್ವಿ ಸಂತರನು ಸದಾ ಸಲಹುವ ಮಾರಾಂತರ ಕೃ- ತಾಂತನ ಬಳಿಗೆ ಕಳುಹುವ ಸುವ್ವಿ 35
--------------
ವಾದಿರಾಜ
ಸಂಸಾರ ಸಂಸಾರವೆಂಬೆರಿ ಸರ್ವದಿವಾರಾತ್ರಿಯಲಿಸಂಸಾರ ಎನಗೊಂದೆ ಅಲ್ಲದೆ ಸಂಸಾರ ಎನಗುಂಟೇನಯ್ಯಪಸತ್ಯವೆಂಬುದೆನ್ನಸತಿಯು ಶಾಂತವೆಂಬುದೆನ್ನಸುತನುಸತ್ಯವೆಂಬುದೆನ್ನ ಸೊಸೆಯು ನಿಜವಿದೀಗಅತ್ಯಧಿಕ ಗುಣಿಯೆಂಬ ಅಗಣಿತದ ಪಿತನಿರಲುಮಿಥ್ಯವಾದ ಸಂಸಾರದಲಿ ಮಗ್ನರಹರೇ1ಬುದ್ಧಿ ಎಂಬುದೆನ್ನಭ್ರಾತೃ ಭಾವನೆ ಎಂಬುದೆನ್ನಭಾವಅದ್ವೈತವೆಂಬ ಅತ್ತೆ ಅಂತಃಕರಣವೆಂಬ ಮಾವಶುದ್ಧಾತ್ಮವೆಂಬ ಬಂಧು ಸಂಬಂಧವೆನಗಿರಲಾಗಿಈ ದ್ವೈತಸಂಸಾರದಲ್ಲಿ ಮಗ್ನರಹರೇ2ಇಂತು ಸಂಸಾರ ಸುಖ ನಿಜದೊಳಗೆನಗಿರಲುಭ್ರಾಂತದಲ್ಲವೆ ನಿಮ್ಮ ಮಾತಿದೆಲ್ಲಚಿಂತಯಕ ಚಿದಾನಂದ ಚಿನ್ಮಯನೆ ತಾ ಬಲ್ಲಅಂತರಂಗದ ಮಾಟಕೆ ಅವನೆ ಸಾಕ್ಷಿ3
--------------
ಚಿದಾನಂದ ಅವಧೂತರು
ಸ್ತ್ರೀಯ ತ್ಯಜಿಸಲು ಬೇಕು ಶಿವಧ್ಯಾನಕೆಬಯ್ಯಬೇಡಿರಿ ಬುದ್ಧಿ ಎಂದೆನ್ನಿರಯ್ಯಪಮಹಿಳೆಯ ಮೋಹದಲಿ ಮಗನು ತನ್ನವನೆಂಬೆಮಹಿಳೆಯು ತೆರಳೆ ಮಗನಿಗಾರೋಇಹುದು ಪ್ರಪಂಚವೆಲ್ಲ ಎಲ್ಲ ಸತಿಯಿಂದಲಿಮಹಾದೇವ ಚಿಂತನೆಗೆ ಮರೆವೆ ಸ್ತ್ರೀಯಯ್ಯಾ1ಮಗನು ಶಿಶುವಾಗಿರಲು ಮಾನಿನಿಯ ಬಡಿವನುಮಗ ಬಲಿಯೆ ಮುರಿವನು ನಿನ್ನೆಲುಬನುಮಗನು ಯಾರವ ಹೇಳು ಮನೆಯು ಯಾರದು ಹೇಳುನಗುವು ಅಲ್ಲದೆ ನನ್ನದೆಂತೆನಲಿಕಯ್ಯಾ2ಪತ್ನಿಯನು ಬಯ್ಯೆ ಮಗ ಬಡಿವನು ಎಂಬಹೆತ್ತಾಕೆ ಬಯ್ಯೆ ಹೇವಿಲ್ಲದಿಹನುತೊತ್ತಿನ ಮಗನಾಗಿ ನಿನ್ನ ತಳ್ಳುವನುಮಿತ್ರನಾಗಿಹನವನು ತಾಯಿಗಯ್ಯಾ3ಮನೆಯು ಸವತಿಯವಳದು ಮಕ್ಕಳೆಲ್ಲ ಸವತಿಯದುಎನಿತೆನಿತು ಭಾಗ್ಯ ಸೊದೆ ಎಲ್ಲ ಸವತಿಯಳದುಮನಕೆ ಹೇಸಿಗೆ ಹುಟ್ಟಿ ಮಹಾತ್ಮನಾಗಲುತನ್ನ ಹಿಂದೆ ತಿರುಗುವರೆ ತಿಳಿದು ನೋಡಯ್ಯ4ಸಂಗತಿಯ ಮೂಲದಲಿ ಸುತ್ತಿಹುದು ಪ್ರಪಂಚಕಂಗಳೊಳು ಕಸ ಚೆಲ್ಲಿದಂತೆ ಇಹುದುಮಂಗಳ ಚಿದಾನಂದಮುಕ್ತತಾನಾಗುವುದಕೆಅಂಗನೆಯ ಬಿಡಬೇಕು ಚಿಂತೆ ಯಾಕಯ್ಯಾ5
--------------
ಚಿದಾನಂದ ಅವಧೂತರು