ಒಟ್ಟು 44 ಕಡೆಗಳಲ್ಲಿ , 25 ದಾಸರು , 38 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಸಿದ್ಧಬಸವ ಪ್ರಸಿದ್ಧನ ಮಹಿಮೆಯ ಕೇಳಿರಿ ನೀವಿನ್ನು |ವಿದ್ಯಾ ಬುದ್ಧಿ ಧನ ಧಾನ್ಯವನು ಸಿದ್ಧಿಸುವವಿನ್ನೂ ಪ ಶಿವನ ಅಪ್ಪಣೆ ತೆಗೆದುಕೊಂಡು ಶಿವಕಂಚಿಯೊಳಗೆ |ಪಾವನ ಚರಿತ ಬ್ರಾಹ್ಮಣನಲ್ಲಿ ಪುಟ್ಟಿದನು ಬೇಗ ||ದಿವಸ ದಿವಸಕೆ ಬೆಳೆದನು ಬಿದಗಿ ಚಂದ್ರಮನ ಹಾಗೆ |ಜಾವ ಜಾವಕೆ ಶಿವನ ಧ್ಯಾನವ ಮಾಡುವ ಮನದೊಳಗೆ 1 ಮುಂಜಿ ಮಾಡಿಸಿಕೊಂಡನು ಸಿದ್ಧನು ಮದುವೆಯಾಗಲಿಲ್ಲ |ರಂಜಿಸುತಿಹನು ಸೂರ್ಯನಂತೆ ತೋರುವ ಜಗಕೆಲ್ಲ ||ಬಂಜೆ ಒಬ್ಬಳು ಇದ್ದಳು ಆಕೆಗೆ ಮಗನ ಕೊಟ್ಟನಲ್ಲ |ಸಂಜೆ ಹಗಲು ಕಾಣದ ಕುರುಡಗ ಕೊಟ್ಟನು ಕಣ್ಣುಗಳ 2 ತಂದೆ ತಾಯಿಗೆ ಹೇಳಿದನಾಗ ಪೋಗುವೆ ನಾನೆಂದು |ಕಂದ ನಮ್ಮನು ಬಿಟ್ಟು ಪೋಗುವದುಚಿತವೆ ನಿನಗೆಂದು ||ಅಂದ ತಾಯಿಗೆ ವಂದಿಸಿ ಹೇಳಿದ ಮಗನಾಗುವೆನೆಂದು |ಸಂದೇಹವು ಬೇಡೆಂದು ಪೇಳುತ ತೆರಳಿದ ದಯಾಸಿಂಧು 3 ಮಹಾಶಿವಾಲಯ ಕಂಡನು ಸಿದ್ಧನು ದೇಶ ತಿರುಗುತಲಿ |ಆ ಸೀಮೆಯಲಿ ಹಳ್ಳದ ನೀರು ನಿರ್ಮಲ ನೋಡುತಲಿ ||ಆಸನ ಹಾಕಿ ಕುಳಿತನು ಶಿವನ ಧ್ಯಾನವ ಮಾಡುತಲಿ |ಆ ಸಮಯದಿ ಬಂದನು ಕರಣಿಕ ಹೊಲಗಳ ನೋಡುತಲಿ 4 ಉದ್ದಂಡ ಸಂತತಿ ಆಗಲಿ ಇನ್ನು 5 ನಿನ್ನಯ ಪೂಜೆಯ ಮಾಡುವದ್ಹೇಗೆ ಹೇಳೋ ನಮಗೀಗ |ಮನ್ನಿಸಿ ಅವಗೆ ಪೇಳಿದ ಸಿದ್ಧ ಪುರುಷನು ತಾ ಬೇಗ ||ಸಣ್ಣ ಬಿಂದಿಗೆಯನಿಟ್ಟು ದ್ವಿಜರ ಪಾದೋದಕವೀಗ |ಸಂಖ್ಯೆಯಿಲ್ಲದ ಕೊಡಗಳ ಹಾಕಲು ತುಂಬದು ಎಂದೀಗೆ 6 ಅಂದಿಗೆ ಉಂಟು ಇಂದಿಗೆ ಇಲ್ಲ ಎನಲಾಗದು ನೀನು |ಸಂದೇಹವಿಲ್ಲ ಆಶ್ವೀನ ವದ್ಯ ದ್ವಿತೀಯದ ದಿನವು ||ಇಂದಿಗೆ ಕರಣಿಕ ವಂಶದವರು ಮಾಡುತಾರೆ ಇನ್ನೂ |ಮುಂದಕೆ ತೆರಳಿ ಕೊಳಕೂರಕೆ ಬಂದ ಸಿದ್ಧ ತಾನು 7 ಗಾಣಿಗರ ಮನೆಯೊಳಗಿದ್ದು ಗಾಣಾ ಹೂಡಿದನು |ಪ್ರಾಣ ತೊಲಗಿದ ಹೆಣ್ಣುಮಗಳಿಗೆ ಪ್ರಾಣವನಿತ್ತಾನು ||ಗೋಣಿಯೊಳಗೆ ಹೊಲಿದು ನದಿಯಲಿ ಪಾಚ್ಛಾ ಹಾಕಿದನು |ಕಾಣಿಸದಂತೆ ಬೇಗನೆ ಹೊರಗೆ ಹೊರಟು ಬಂದಾನು 8 ಹೆಸರು ನಿನ್ನದು ಏನು ಎಂದು ಪಾಚ್ಛಾ ಕೇಳಿದನು |ಹೆಸರು ನನಗೆ ಬಸವನೆಂದು ಕರೆತಾರೆ ಇನ್ನು ||ಪಶು ನೀನಾದರೆ ಸೊಪ್ಪಿಯ ಬೇಗ ತಿನಬಾ ಎಂದನು |ನಸು ನಗುತಲಿ ಸೊಪ್ಪಿಯ ತಿಂದು ಡುರಕಿ ಹೊಡೆದಾನು 9 ಗೊಂಬಿಗೆ ವಸ್ತಾ ಸೀರೆಯನುಡಿಸಿ ಸಿಂಗಾರ ಮಾಡಿದನು |ರಂಭೆಗೆ ಸರಿ ಈ ಹೆಣ್ಣು ಮಗಳಿಗೆ ಮದುವ್ಯಾಗೋ ನೀನು ||ಅಂಬುಜ ಮುಖಿ ಬಾರೆಂದು ಕರೆದನು ಸಿದ್ಧ ಮುನೀಶ್ವರನು |ತುಂಬಿದ ಬಸುರೊಳು ಮಗನ ಪಡೆದಳು ವಂಶಾದೆ ಇನ್ನು 10|| ನೇಮವ ಮಾಡಿ ಕೊಳಕೂರದಿ ಇರುವೆನು ನಾನೆನುತ |ಈ ಮಹಿಮೆಯೊಳಗೆ ಭೀಮಾ ದಕ್ಷಿಣವಾಹಿನಿ ಮಹಾಕ್ಷೇತ್ರ ||ಗ್ರಾಮಸ್ಥರನು ಕರೆದು ಹೇಳಿದನು ಅಡಗುವೆ ನಾನೆನುತ |ನೀವು ಮಾತ್ರ ನಾವಿದ್ದ ಸ್ಥಳವನು ನೋಡಬೇಡೆನುತ 11 ಕಲಿಕಾಲವನು ಕಂಡು ಸಿದ್ಧನು ಅದೃಶ್ಯನಾದನು |ತಿಳಿದು ಭಕ್ತಿ ಮಾಡಿದವರಿಗೆ ವರಗಳ ಕೊಡುತಿಹನು ||ಸುಳಿವನು ಕಣ್ಣಿಗೆ ಸತ್ಪುರುಷರಿಗೆ ಸಿದ್ಧ ಬಸವ ತಾನು |ಹಲವು ಹಂಬಲ ಮಾಡಲು ಬೇಡರಿ ಇರುವೆ ನಾನಿನ್ನೂ 12 ಹನ್ನೆರಡು ನುಡಿ ಸಿದ್ಧನ ಸ್ತೋತ್ರವ ಕೇಳಿದವರಿಗೆ |ಮುನ್ನ ಮಾಡಿದ ಪಾಪವು ನಾಶಾಗಿ ಹೋಗುವದು ಬೇಗ ||ಧನ್ಯನಾಗುವ ಕೀರ್ತಿ ಪಡೆಯುವ ಲೋಕದ ಒಳಗ |ಚನ್ನಾಗಿ ಶ್ರೀಪತಿ ಗುರುವಿಠ್ಠಲನು ಒಲಿವನು ತಾ ಬೇಗ 13
--------------
ಶ್ರೀಪತಿ
ಅಧ್ಯಾಯ ಎರಡು ಪದ ಪದುಮ ನಾಭನ ಸ್ಮರಿಸಿ ಮುದದಿ ಹಿಮಗಿರೀಂದ್ರನು ಮದುವೆಯಕಾರ್ಯಕೆ ತೊಡಗಿದ ಮಗಳ ಹುಡುಕಿದ 1 ಅಲ್ಲೆ ಮನೆಯೊಳಗಿಲ್ಲ ಎಲ್ಲಿ ಹುಡುಕಿದರಿಲ್ಲ ಅಲ್ಲೆ ಇಲ್ಲೆಂದು ಇಲ್ಲ ಎಲ್ಲೆಲ್ಲಿ ಇಲ್ಲಾ 2 ಘನಹಿಮ ಗಿರೀಂದ್ರ ದಮ್ಮನೆ ದಣಿದು ಮಾತಾಡಿದನು ಮನೆಮನೆಯಲ್ಲಿ ಹುಡುಕಿ ಮನದೊಳು ಮಿಡುಕಿ3 ಮಾನವಂತಿ ಮಗಳೆಲ್ಲೆ ತಾನು ಹೋದಳು ನಾನಿ ನ್ನೇನು ಪಾಯವ ಮಾಡಲಿ ಎಲ್ಲೆ ನೋಡಲಿ 4 ಅಚ್ಯುತಾನಂತಾದ್ರೀಶ ನಿಚ್ಛೆ ತಿಳಯದು ಎಂದು ಎಚ್ಚರಿಲ್ಲದೆ ಬಿದ್ದನು ಮೂರ್ಛಿತನಾದನು 5 ಪದ ಏಳೆಏಳೆಂದು ಆಕಾಲದಲಿ ಆಜನರು ಹೇಳಿ ಎಬ್ಬಿಸಲಾಗ ಏಳಲೊಲ್ಲವನು ಆ ಮೇಲೆ ಹಾ ಇದು ಎಂಥ ವೇಳೆ ಬಂದಿತು ಎಂದು ಬಹಳ ಗಾಬರಿಯಿಂದ ಗಾಳಿ ಹಾಕಿದರು ಶ್ರೀಶೈಲೇಂದ್ರ ತಾನು ಆಮೇಲೆ ಏಳುತ ಮೈಮೇಲೆ ಎಚ್ಚರ ಹುಟ್ಟು ಆಲಯದೊಳಗಿರುವ ಶೇಲಾದ ಮಗಳನ್ನು ಕಾಣದಲೆ ಕಣ್ಣು ಕ ಗ್ಗಾಳಿಗೈಯುತ ಶೋಕ ಬಹಳ ಮಾಡಿದನು 1 ಪದ ಎಲ್ಲಿ ಪೋದಳೆಲ್ಲಿ ಹುಡುಕಲಿ ಮಗಳಿಲ್ಲ ಮನೆಯೊಳೆಲ್ಲಿ ಇರುವಳಲ್ಲಿ ಪೋಗಲಿ ಎಲ್ಲಿ ಪೋದಳೆಲ್ಲಿ ಹುಡುಕಲೆಲ್ಲಿ ಮಗಳು ಇಲ್ಲ ಪ್ರಾಣ ನಿಲ್ಲ ಲೊಲ್ಲದಿಲ್ಲೆ ಮನಸು ಕಲ್ಲುಮಾಡಿಯೆಲ್ಲಾ ಬಿಟ್ಟು ಪ ಚಾರು ಮುಖಿಯ ಯಾರು ಒಯ್ದರೋ ವಿಚಾರ ಮಾಳ್ಪರಾರ ಇಲ್ಲ ಚೋರರೊಯಿದರೋ ಕ್ರೂರದೈತ್ಯ ವರ್ಯರೋ ಉದಾರಗಂಧರ್ವರೋ ಪೂರ್ವವಯದ ಪಾರ್ವತಿಯ ಯಾರು ವೈದಿದಾರು ಮತ್ತೆ1 ಇಂದ್ರತಾನು ಬಂದು ಒಯ್ದನೋ ಆ ಚಂದ್ರ ಮುಖಿಯ ಚಂದ್ರ ಬೇಕೆಂದು ಒಯ್ದನೋ ಮುಂದೆ ಯಾರು ಬಂದು ಒಯ್ದರೆಂದು ತಿಳಿಯದಿಂದು ಎನಗೆ ಬಂದ ತಾಪದಿಂದ ಬಹಳ ಬೆಂದೆನಾರ ಮುಂದೆ ಹೇಳಲಿ 2 ಎಂತು ನಾನು ಚಿಂತೆ ಮಾಡಲಿ ಧೀಮಂತ ಮುನಿಗೆ ನಿಂತು ಏನಂತ ಹೇಳಲಿ ಎಂಥ ಕಷ್ಟ ಬಂತÀು ಈ ಚಿಂತೆಗಿನ್ನು ಪ್ರಾಂತಗಾಣೆ ಪ್ರಾಂತಕಾನಂತ ಗಿರಿಯ ಕಾಂತಗೇನಂತ ಹೇಳಲಿ 3 ಪದ್ಯ ಮುನ್ನಯೀಪರಿ ಶೋಕವನ್ನು ಮಾಡುತಲೆದ್ದು ಘನ್ನ ಆ ಗಿರಿರಾಜ ನಿನ್ನೇನು ಗತಿಯೆಂದು ಕಣ್ಣೀರು ಸುರಿಸುತಲೆ ಹೆಣ್ಣು ಮಗಳನು ನೆನಸಿ ಉಣ್ಣದಲೆ ತಾನು ಅರಣ್ಯದಲಿ ನಡೆದ ಕಣ್ಣಿಟ್ಟು ನಾಕುಕಡೆ ಚನ್ನಾಗಿ ನೋಡಿದನು ಮುನ್ನಲ್ಲೆ ಕುಳಿತಿರುವ ತನ್ನ ಮಗಳನು ಕಂಡು ಕನ್ನಡಿಯ ಪರಿಹೊಳೆವ ಮುನ್ನವಳಗಲ್ಲವನು ಚೆನ್ನಾಗಿ ಪಿಡಿದು ಬಹು ಬಣ್ಣಿಸುತ ನುಡಿದ ಪದ ಪ್ರೀತಿ ಮಗಳೆ ನೀನು ಈ ವನದಲ್ಲಿ ಕೂತ ಕಾರಣವೇನು ಅಮ್ಮಯ್ಯಾ ಪ್ರೀತಿಯ ಮಗಳೆ ಇಲ್ಲೇತಕೆ ಬಂದೆ ನೀ ಪ್ರೀತನಾದ ಶ್ರೀನಾಥ ಮನೆಗೆ ನಡಿ ಪ ಮದುವಿ ನಿಶ್ಚಯವಿಂದು ಮಧುಸೂದನನಿಗೆ ನಾ ಮುದದಿ ನಿನ್ನನ್ನು ಕೊಟ್ಟು ಮದುವೆ ಮಾಡುವೆನು ಮುದದಿ ಮನೆಗೆ ನಡಿ 1 ಮನಸಿನೊಳಗೆ ಮಿಡುಕೀ ಮನೆಯ ಬಿಟ್ಟು ವನವನವÀ ಚರಿಸುವರೇ 2 ಮನೆಗೆ ನಡಿಯೆ ನಿನ್ನ ಮನಸಿನಂತಾಯಿತು ಏಸು ಜನ್ಮಕೆ ಬಂದು ಮಾಡಿದ ಪುಣ್ಯರಾಶಿ ಫಲಿಸಿತಿಂದು ವಾಸುದೇವ ಸರ್ವೇಶ ಅನಂತಾದ್ರೀಶ ನೀನ್ನ ಕೈವಶವಾದನಡಿ 3 ಪದ ಪಡೆದ ತಂದೆಯ ಮಾತು ದೃಢವಾಗಿ ಕೇಳುತಲೆ ಬಿಡದೆ ಆ ನಾರದನ ನುಡಿ ಸ್ಮರಿಸಿ ಪಾರ್ವತಿಯು ಎಡವಿದಾ ಬಟ್ಟುಮ ತ್ತೆಡವಿದಂತೆ ದು:ಖ ಬಡುವುತಲೆ ಮನದಲ್ಲೆ ಮಿಡುಕಿದಳು ತಾನು ಅಡವಿಯಲಿ ನಾ ಬಂದು ಅಡಗಿದರು ಇದು ಎನ್ನ ಬಿಡಲಿಲ್ಲ ಮತ್ತಿನ್ನ ತುಡುಗುತನವು ಯಾಕೆ ನುಡಿಬೇಕೆಂದು ತನ್ನ ಒಡಲೊಳಗಯಿದ್ದದ್ದು ಒಡೆದು ಆಡಿದಳಾಗ ಭಿಡೆಯಬಿಟ್ಟು ಪದ ಅಪ್ಪಯ್ಯ ಒಲ್ಲೆ ನಾ ವಿಷ್ಣುವ ಒಲ್ಲೆನಾ ವಿಷ್ಣುವ ಎಲ್ಲಿ ಹುಡುಕಿ ತಂದಿ ಬಲ್ಲಿದ ಶಿವಯೆನ್ನ ವಲ್ಲಭನಯ್ಯಾ ಪ ಧೀರ ಕೇಳವನ ವಿಚಾರಯೆನ್ಹೇಳಲಿ ನೀರು ಮನೆಯಮಾಡಿ ಭಾರವಗೆಲುವ ಮಣ್ಣು ಮೆಲುವಾ ಬಿಟ್ಟು ಅವದಾವ ಚೆಲುವಾ 1 ನಿತ್ಯ ಕ್ರೂರನಾಗಿ ಮತ್ತೆ ಬಲಿಯ ತಳಕೊತ್ತಿ ತುಳಿದನವ ಕುಹಕ ಕುತ್ತಿಗೆ ಕೊಯಿಕಾ ಅವಗೆಲ್ಲಿ ವಿವೇಕಾ 2 ಶುದ್ಧ ಕೋತಿಯ ಕೂಡಿ ಕದ್ದು ಬೆಣ್ಣೆಯ ಬತ್ತ ಲಿದ್ದು ತೇಜಿಯ ಬಿಟ್ಟು ಅನಂತಾದ್ರಿಯಲ್ಲಿಹನು 3 ಪದ ವನದಲ್ಲೆ ಇರುವ ಆ ವನಜ ಮುಖಿ ಪಾರ್ವತಿಯು ವಿನಯದಿಂದೀಶ್ವರನ ಮನದಲ್ಲೆ ಸ್ಮರಿಸುತ್ತಲೆ ಮನಸಿನ ಭಾವವನ್ನು ಅನುಮಾನ ಬಿಟ್ಟು ತನಗನುಕೂಲವಾಗಿ ಘನ ಹಿಮಾಚಲ ಜನಾರ್ದನಗೆ ಕೊಡಬೇಕೆಂದು ಮನದಲ್ಲೆ ಆತನ ನೆನವುತಲೆ ಭಕ್ತಿಯಲಿ ಮುನಿದಿರುವ ಪಾರ್ವತಿಯ ಮನಸಿನ ಭಾವವನು ಮನಸಿಗೆ ತಾರದಲೆ ಮನೆಗೆ ನಡೆಯೆಂದ 1 ಪದ ಮನೆಗೆ ನಡೆಯೆ ಪಾರ್ವತಿ ನೀನು ಎನ್ನ ಮನಸಿನಂತಾದರೆ ಬರುವೆನು 1 ನಿನ್ನ ಮನೋರಥ ವದುಯೇನು ಬಹು ಮನ್ನಿಸಿ ಶಿವಗೆನ್ನ ಕೊಡು ನೀನು 2 ಹರಿಗೆ ನಿಶ್ಚಯ ಮಾಡಿದೆ ನಾನು ಬಿಡು ಹರಗೆ ನಿಶ್ಚಯ ಮಾಡೆಲೋ ನೀನು 3 ಬಾಲೆ ಕೊಟ್ಟ್ಹಣ್ಣು ತಿರುಗೂದಿಲ್ಲೆ ಶಿಶುಪಾಲನ ರುಕ್ಮಿಣಿ ಬಿಡಲಿಲ್ಲೆ 4 ಗೆದ್ದೊಯ್ದ ಆಕೆಯ ಹರಿ ತಾನು ನಾನು ಗೆದ್ದವರಿಗೆ ಮಾಲೆ ಹಾಕುವೆನು 5 ಯಾವ ಪುರುಷ ನಿನ್ನ ಗೆದ್ದವನು ಮಹದೇವನೆ ನಿಶ್ಚಯ ತಿಳಿ ನೀನು 6 ಗೆದ್ದಿಹ ನಿನ್ನಾನಂತಾದ್ರೀಶಾ ನಿನಗದರ ಚಿಂತೆಯಾಕೋ ಶೈಲೇಶಾ7 ಪದ ಅವನು ಹಿಮವಂತನೆಂಬುವನು ತನ್ನ ಮಗಳು ಆದವಳಿಗೀಪರಿ ನುಡಿದಾ ಶಿವನನಾಮದುವೆ ಆಗುವೆನು ಎಂಬುವೆ ನೀನು ಶಿವನುಯೆಂದೆನಿಸಿಕೊಂಬುವನು ಅವ ಮತ ಎಂಥವನು ಪೇಳೆ ಅವನ ಮಾತನು ಕೇಳಿ ಯುವತಿಮಣಿ ಪಾರ್ವತಿಯು ಶಿವನ ಸ್ಮರಿಸುತ ಮತ್ತೆ ಶಿವನ ಸರಿಯಿಲ್ಲ ಈ ಭುವನದೊಳು ಎಂತೆಂದು ಅವನ ಕೊಂಡಾಡುತಲೆ ಸ್ತವನ ಮಾಡುತ ನುಡಿದಳವನ ಪತಿಯೆಂದು 1 ಪದ ಅವನೆ ಪತಿಯು ಶಿವನು ಎನಿಸುವಾ ಅಪ್ಪಯ್ಯ ಕೇಳೋ ಅವನೆ ಪತಿಯು ಶಿವನು ಎನಿಸುವವನು ಸರ್ವÀಭುವನದೊಡೆಯ ಅವನೆ ಯನಗೊಪ್ಪುವನು ಸತ್ಯ ಅವನೀಶನೆ ಯೆನ್ನವಗರ್ಪಿಸು ಪ ಭಕ್ತಪ್ರಿಯ ತ್ರೀನೇತ್ರನಾಥನು ತಾ ನಿತ್ಯ ನದಿಯ ನೆತ್ತಿಯಲಿ ಪೊತ್ತಿಹಾತನು ಪ್ರಖ್ಯಾತನು ಸತ್ಯಶೀಲಕೃತ್ತಿವಾಸಕ್ಲøಪ್ತ ಅವನೆ ಚಿತ್ತದೊಡೆಯ ಅವಗಗತ್ಯ ಕೊಡುನೀ 1 ಬಂದದುರಿತ ಹಿಂದೆ ಮಾಡುವ ಭಕ್ತಿಂದ ನಡದು ನಡದು ಬಂದವರಿಗಾನಂದ ಮಾಡುವ ದಯಮಾಡುವ ತಂದು ಕೊಡುವ ತಂದೆ ಕೇಳಾನಂದಮೂರುತಿ ನಂದಿವಾಹನ ಚಂದ್ರಶೇಖರ ಅಂಥ ಇಂಥ ಕಾಂತನಲ್ಲವೋ ಭೂಪ್ರಾಂತದೊಳವನಂಥ ದಯಾವಂತರಿಲ್ಲವೋಸುಳ್ಳಲ್ಲವೋ ಕಂತುಪಿತ ಅನಂತಾದ್ರೀಶನಂಥ ಕಪಟವಂತರಿಲ್ಲ ಅಂತರಂಗದ ಕಾಂತ ಶಿವನೇ ಚಿಂತೆಯಾಕ್ಹಿಮವಂತ ಇನ್ನು ಪದ ಇಂಥ ಮಾತನು ಕೇಳಿ ಸಂತೋಷದಲಿ ಹಿಮವಂತ ರಾಜೇಂದ್ರ ತಾನು ಮಾತಾಡಿದನು 1 ಮನೆಗೆ ಬಂದನು ಉದ್ರೇಕದಲ್ಲಿ ಸ್ನೇಹಬದ್ಧಾಗಿ ಸ್ವಯಂವರ ದುದ್ಯೋಗ ಮಾಡಿದನು 2 ಲೇಸಾಗಿ ತಾ ಸರ್ವದೇಶಕ್ಕೆ ದುಂದುಭಿ ಘೋಷವ ಮಾಡಿಸಿದಾ ತೋಷದಿ ಸರ್ವಲೋಕೇಶರನೆಲ್ಲಾ ಕರೆ ಕಳುಹಿದಾ 3 ಇಂದ್ರ ತಾ ಬಂದ ಅಲ್ಲಿಂದ ಅಗ್ನಿಯು ಬಂದಾ ಮುಂದೆ ಆ ಯಮನು ಬಂದಾ ಬಂದಾ ನಿರುತಿಮತ್ತೆ ಬಂದ ವರುಣ ವಾಯು ಬಂದ ಕುಬೇರ ತಾನು 4 ನಿಲ್ಲದೆ ಸ್ವಯಂವರಕೆ ಬಲ್ಲಿದನಂತಾದ್ರಿ ವಲ್ಲಭ ತಾ ಬಂದ ಎಲ್ಲರು ಬಂದರಾಗ 5 ಪದ ಗಿರಿರಾಜ ಮುಂದೆ ಆ ಸುರರಲ್ಲಿ ಬಹುಸ್ನೇಹ ಸುರಿಸುತಲೆ ಆಸನವ ತರಿಸಿ ಎಲ್ಲರನು ಕುಳ್ಳಿರಿಸಿ ಕರಗಳ ಮುಗಿದು ಹರಿ ಮೊದಲು ಮಾಡಿಕೊಂ- ಡ್ಹರುಷದಿಂದಲಿ ಸರ್ವ ಸುರರಿಗರ್ಚಿಸಿದ ಸುರಸಾದ ಈ ಕಥೆಯ ಸರಸಾಗಿ ಕೇಳಿದರೆ ಸುರರು ವೊಲಿವುವರೆಲ್ಲ ಸರಸಿಜಾಕ್ಷಿಯ ಸ್ವಯಂವರಕೆ ಬಂದಿಹ ಸರ್ವ ಸುರರನುಗ್ರಹದಿಂದ ಸರಸರನೆ ಮುಗಿದಿತಿಲ್ಲಿಗೆರಡು ಅಧ್ಯಾಯ
--------------
ಅನಂತಾದ್ರೀಶ - ಕಥನಕಾವ್ಯಗಳು
ಅಧ್ಯಾಯ ಏಳು ಜ್ಞಾಪಿತೋ ಬಕುಲಾವಾಕ್ಯಾಚ್ಛುಕ ಜೀವಾನು ಮೋದಿತಃ ಭೂಪೇನ ನಿಶ್ಚಿತೋ ಮಾಯಾದ್ವಿಪಹಾ ಯೋವರೋ ಹರಿಃ ವಚನ ಅರಸಿ ತನ್ನ ತೊಡೆಯಲಿರುವ ಪರಿಯು ಮಾತಾಡಿದಳು ಕೊರವಿ ಮಾತಿನರಗಿಳಿಯೆ ನೀನು ಅರಸಿ ಮಾತಿಗೆ ಬಾಯ ತೆರೆದು ಮಾತಾಡದಲೆ ಪರಮಗಂಭೀರ ಳಾಗಿರುವ ಪದ್ಮಾವತಿಯ ಕರಪಿಡಿದು ಏಕಾಂತ ದಲಿ ಕೇಳಿದಾಗ ಪರಮ ಅಂತ:ಕರಣೆ ಪರವಶದಿ ಆಗ 1 ರಾಗ:ಭೈರವಿ ಅಟತಾಳ ನಾ ಕೊಡಲೋಪ ಪ್ರೀತಿಯ ಮಗಳೆ ನಿನ್ನ ಮಾತಿಗೆ ಹೊರ್ತಿಲ್ಲ ಖ್ಯಾತೀಲೆ ವೇಂಕಟನಾಥ ನೆಂತೆನಿಪಗೆ ಅ.ಪ ಅರಸಗೆ ಪೇಳಲ್ಯೊ ನಾ ಬಲ್ಲಂಥ ಹಿರಿಯರ ಕೇಳಲ್ಯೊ ಸರಿ ಬಂದವರ ನೋಡಿಕಳಹಲ್ಯೊ 1 ಮಂದಿಯ ಕೇಳಲ್ಯೋ ನಾ ಕೊಡಲಾರದೆ ಜರಿಯಲÉ್ಯೂೀ 2 ಮಿತ್ರೇರ ಸಂಗತಿಯೋ ಅದು ಮಿಥ್ಯವೋ 3 ವಚನ ಕಾಮಜನಕರ ಸ್ಮರಿಸುತಲೆ ಜನರಮುಂದ್ಹೇಳುವದಕನು ಬಂದದÀು ತಾನೆ ಅನು ಅಪಹಾಸ್ಯವನು ಒಬ್ಬರನೋವು ತನಗೆಂಬುವದÀು ಹೇಳುವದಕನುಮಾನವ್ಯಾಕೆ 1 ರಾಗ:ನೀಲಾಂಬರಿ ಭಿಲಂದಿತಾಳ ಪತಿ ಅವನ ಸರಿಯಿಲ್ಲವನಿಯೊಳಗ ಅವನೇ ಜಗಜ್ಜೀವನನೆ ಪ ಮಂಜುಳಮಾತಿಗೆ ರಂಜ ಪಾದ ಕಂಜಕೆ ಅರ್ಪಿಸು ಅಂಜುವದ್ಯಾಕಮ್ಮ ಅಂಜನಾದ್ರೀಶಗೆ ಅಂಜಲುಬೇಡ ನಿರಂಜನೆ ಭಯಭಂಜನೆ 1 ಹೂವಿನ ತೋಟಕೆ ಪೋಗಲು ಚಿತ್ತಪಲ್ಲಟವಾಗಿ ನೀಟಾಗಿ ನಿರ್ಮಿಸಿ ಆಟವಮಾಡುವ ಕಪಟ ನಾಟಕನೆ 2 ಭೂಷಣ ಉರದಲ್ಲಿ ಶ್ರೀವತ್ಸವು ಚಲ್ವಿಕೆ ನೋಡಲು ಎಲ್ಲ ಜ್ಯೋತಿಗಳವನಲ್ಲಿ ನಿವಾಳಿಸಿ ಚಲ್ಲವುದು ಅಲ್ಲೇನಿಲ್ಲೆಂದು ಮತ್ತೆಲ್ಲಿ ಹಂಬಲಿಸದೆ ಅಲ್ಯವಗರ್ಪಿಸು ಆಹ್ಲಾದದಿಂದಲ್ಲೇ ಬಲ್ಲಿದನಾಂತಾದ್ರಿಯಲ್ಲಿರುವ ಎನ್ನೊಲ್ಲಭನೆ ಪ್ರಾಣದೊಲ್ಲಭನೆ 3 ವಚನ ಮಗಳಿಗÉಂದಳು ನಾ ನಿನ್ನ ಜಗ ಗಗನ ರಾಜನ ರಾಣಿ ಸುಗುಣ ಬಕುಲಾ ಬರುವರ ಕೂಡಿ ಬರುವಳಾ ಅಗಸಿಯೊಳಗೆ 1 ಹೊರಳಿ ನೋಡಿದ ಬರುವಳಿವಳ್ಯಾರೆಂದು ಕೊರವಿ ಕರೆಸಿದಳು ಬೇಗ ಸರಸಿ- ಎಂದು ಸುರಿಸಿ ಅಮೃತದ ವಾಣಿ ಬೆರೆಸಿ ಸ್ನೇಹವ ಮತ್ತೆ ತರಿಸಿ ರತ್ನದಪೀಠ ಇರಿಸಿ ಕೂಡೆಂದು ಕುಳ್ಳಿರಿಸಿ ಕೇಳಿದಳಾಗ ಹರುಷದಿಂದಾ2 ರಾಗ:ಗೌರಿ ಆಟತಾಳ ಲಲನೆ ನೀ ದಾರಮ್ಮ ಹೆಸರೇನು? ಶೇಷಾ ಚಲವಾಸಿ ಬಕುಲಾವತಿ ನಾನು 1 ಎಲ್ಲಿಗ್ಹೋಗುವೆ ಮುಂದೆ ನೀನು? ತಿಳಿ ಇಲ್ಲಿಗೆ ಬಂದೆ ನೇಮಿಸಿ ನಾನು 2 ನಿನ್ನ ಮನದ ಕಾರ್ಯಗಳೇನು? ಮುಖ್ಯ ಕನ್ಯಾರ್ಥಿಯಾಗಿ ಬಂದೆನು ನಾನು 3 ದಾವಾತ ವರನಾಗಿರುವನು?ದಿವ್ಯ ದೇವ ನೆಂದೆನಿಸುವ ತಿಳಿ ನೀನು4 ಕೃಷ್ಣವೇಣಿಯೆ ಅವನ್ಹೆಸರೇನು? ಶ್ರೀ ಕೃಷ್ಣನೆಂದೆನಿಸುವ ತಿಳಿ ನೀನು5 ತಾಯಿ ತಂದೆಗಳೆಂಬುವರಾರು?ತಿಳಿ ದೇವಕಿ ವಸುದೇವರು ಅವರು 6 ಚಂದಾಗಿ ಕುಲದಾವದ್ಹೇಳಮ್ಮ ಶುಭ ಚಂದ್ರಮನ ಕುಲಕೇಳಮ್ಮ 7 ಶ್ರೇಷ್ಠವಾಗಿಹ ಗೋತ್ರದಾವದು?ವಾ ಶಿಷ್ಠ ನಾಮಕವಾಗಿರುತಿಹುದು 8 ನಕ್ಷತ್ರ ಪೇಳು ಪನ್ನಗವೇಣಿ ಶ್ರವಣ ನಕ್ಷತ್ರ ತಿಳಿ ರಾಜನ ರಾಣಿ 9 ವಿದ್ಯೆಯಿಂದ ಹ್ಯಾಂಗಿರುವ? ಬ್ರಹ್ಮ ವಿದ್ಯೆಯಿಂದಲಿ ಗಮ್ಯ ಎನಿಸುವ 10 ಧನವಂತನೇನಮ್ಮ ಗುಣನಿಧಿಯೇ? ಬಹು ಧನವಂತರಾಗುವರವನಿಂದೆ 11 ಕಣ್ಣುಮೂಗಿಲೆ ಹ್ಯಾಗಿರುವವ?ಕೋಟಿ ಮನ್ಮಥ ಲಾವಣ್ಯ ಎನಿಸುವ 12 ಹೆಣ್ಣಿನ ಮನಸೀಗೆ ಬಂದೀತೇ? ಅವನ ಕಣ್ಣಿಲಿ ಕಂಡರೆ ತಿಳಿದೀತೆ 13 ಅದಾವು ದಿವಸೆಷ್ಟು ಪೇಳಮ್ಮಾ?ಇಪ್ಪ- ತ್ತೈದರ ಮೇಲಿಲ್ಲ ತಿಳಿಯಮ್ಮ 14 ಚಿಕ್ಕಂದು ಮದುವೆ ಇಲ್ಯಾಕಮ್ಮ?ಅವನ ತಕ್ಕ ಹೆಂಡತಿ ಇರುತಿಹಳಮ್ಮ 15 ಮುಖ್ಯಳಿರಲು ಮದುವ್ಯಾಕಮ್ಮ?ತಿಳಿ ಮಕ್ಕಳಿಲ್ಲದ ಕಾರಣವಮ್ಮ 16 ನೇಮದಿಂದಿರುತಿಹ ತಾನೆಲ್ಲಿ ತಿಳಿ ಶ್ರೀಮದನಂತಾದ್ರಿಯಲಿ 17 ರಾಗ:ಯರಕಾಲ ಕಾಂಬೋದಿ ಭಿಲಂದಿತಾಳ ಕಾಂತನ ಮುಂದ್ಹೇಳಿದಳೇ ಅಂತರಂಗದೊಳು ಚಿಂತೆ ಮಾಡಲು ಬೇಡ ಕೇಳು ಸಂತೋಷದ ಸುದ್ದಿ 1 ಕೊರವಿ ಬಂದಿದ್ದಳು ಮರಗುತ ಮಲಗಿದ ಕೊರವಿ ಕಾಲ್ಗುಣದಿ 2 ಪರಿ ಕೊರವಿ ನಾಡ ಸಖಿಯರ ಕೂಡಿ ಪ್ರೌಢ ಪುರುಷನ 3 ಪ್ರಾಕೃತ ಪುರುಷನಲ್ಲ ಜ್ವರಮಗಳಿಗೆ ಬಂತೆಂದು ಕಾಮಜ್ವರವಂತೆ ಕೇಳು 4 ನಾಶಾವಾಯಿತು ಇನ್ನು ನಿತ್ಯನಿವಾಸಿಯೆನಿಸುವ ಅವಗೆ ತೋಷದಿ ಕೊಟ್ಟರೆ ಜ್ವರ ನಿಶ್ಯೇಷ ಹೋಗುವದು 5 ಎನ್ನ ಮನೆಯಲಿ ಚೆನ್ನಾಗಿ ಪೇಳುವಳು ಚೆನ್ನಿಗವನನ್ಯಾರೆಂದು 6 ಪೇಳುವಳು ಇನ್ಯಾತಕೆ ಸಂಶಯ ಮಾಡಿನ್ನು ಶುಭಶೀಘ್ರಾ 7 ವಚನ ಸಂಭ್ರಮದಿ ಆನಂದವೆಂಬ ತುಂಬ ರೋಮಗಳುಬ್ಬಿ ರಂಭೆ ಪೂರ್ವದ ಪುಣ್ಯ ಎಂಬುವರು ಮುಕ್ತ ಬಹಳ ಗಂಭೀರ ಅಂಬುಜೋದ್ಬವ ಪಿತನ ತುಂಬಿ ಕುಳಿತದ್ದು ಕಣ್ಣುತುಂಬ ನೋಡೇನು ಎಂದು ಅಂಬುಜಾಕ್ಷಿ 1 ಆಕಾಶಪರಿವೃಡನು ಕ್ಲೇಶದ ಮಗಳಿದ್ದಲ್ಲೆ ನಡೆದು ಒಡೆದು ಆಡಿದನು ಹರುಷ ಹಿಡಿಯಲಾಗದು ನಿನ್ನೊಳು ನೀನೆ ಮಿಡುಕಿ ಬೇಡ ಎನ್ಹಡೆದವ್ವನೆ ನೀನು ಮೂಡಲಗಿರಿ ಒಡೆಯ ವೇಂಕಟಪತಿಗೆ ಕೊಡುವೆ ನಿನ್ನ 2 ಶುಭ ಪತ್ರವನು ಕೊಟ್ಟು ಬೃಹಸ್ಪತಿಯು ವೃತ್ರಾರಿ ಧರಿತ್ರೀಯಲ್ಲೀ ಪೃಥ್ವೀಶ ತಾನು ನತಿಸಿ ವಿಧಿಯುಕ್ತ ಪೂಜೆ ಉತ್ತಮನೆ ನೀ ಕೇಳು ಸತ್ಯ ನಿತ್ಯ ನೀನೆ 3 ಪನ್ನಗಾಚಲದಲ್ಲಿ ನಿನ್ನ ಅನುಮತಿಯಿಂದ ಬಿನ್ನಹದ ನುಡಿ ಕೇಳಿ ಮನಸಿಗೆ ಹರುಷ ಪೇಳುವೆ ಕೇಳು ಚನ್ನಾಗಿ 4 ನಿತ್ಯ ಅವನ ಆ ವಿಸ್ತಾರವೆಲ್ಲ ಪಂಚಕೋಶದಲಿ ಇಲ್ಲಿರುವ ಅವನೇ ಶ್ರೀ ಶುಕಾಚಾರ್ಯ
--------------
ಅನಂತಾದ್ರೀಶ - ಕಥನಕಾವ್ಯಗಳು
ಅಧ್ಯಾಯ ಮೂರು ಜನ್ಮನಾಕಾಶನಂದಾ ವಸುಧಾನಾಗ್ರಜಾ ನಿಜಾನ್ ಪದ್ಮಾವತೀ ಪದ್ಮಭವಾ ವನಕ್ರೀಡಾರತ್ಯಾವತಾತ್ ವಚನ ಸಂದರ್ಶನಾದದ್ದು ತಂದೆಯ ಕಥೆಸ್ಮøತಿಗೆ ತಂದು ಅದು ವಿಸ್ತಾರದಿಂದ ಪೇಳುವೆನು ಸುಧರ್ಮನೆಂದು ಇರವನು ಅವಗೆ ಮುಂದೆ ಇಬ್ಬರು ಸುತರು ಚಂದದಲಿ ಆಕಾಶನೆಂದು ತೊಂಡಮಾನಸೆನಿಸುವನು 1 ವ್ಯಾಕುಲದಿ ಹೀಗೆ ಇಲ್ಲೆಂದು ಶೋಕದಲಿ ಕಣ್ಣೀರು ಹಾಕಿ ಸ್ಮರಿಸಿದ ದೇವಲೋಕ ಗುರುವ ಯಾಕೆ ಸ್ಮರಿಸಿದೆ ಎನ್ನನೀಕಾಲದಲಿ ಏನುಬೇಕು ಬೇಡಲೋನೀನು ನಾ ಶೋಕವನು ನುಡಿದಾ2 ಪಾಪಿಷ್ಠ ಏನು ಇದ್ದೇನು ನಾನು ಮಾಡಿದ ಪೇಳೋ ಹೀನಬುದ್ಧಿ ಕೊಲಿಸಿದೆನೇನು ಏನು ಕಾರಣ ಸಂತಾನ ಕಣ್ಣಿಲಿ ಕಾಣೆ ನಾನು ಅಯ್ಯಯ್ಯೊ 3 ಮಕ್ಕಳಾಡಿದರೆ ಬಹಳಕ್ಕರತೆ ಜೀವಕ್ಕೆ ಮಕ್ಕಳಿಲ್ಲದೆ ಮತ್ತೆ ಮಿಕ್ಕರಸ ಮಕ್ಕಳಿÀಂದಲೆ ಹಬ್ಬ ಹುಣ್ಣಿಮೆಯು ಉಲ್ಲಾಸ ಮಕ್ಕಳಿಂದಲೆ ಮುಂಜಿ ಮದುವೆಯ ಧರೆಯೊಳಗಿಲ್ಲ ಮಕ್ಕಳಿಂದಲೆ ಇಹವು ಮಕ್ಕಳಿಂದಲೆ ಪರವು ಮಕ್ಕಳಿಲ್ಲೆನ್ನ ಭಾಗ್ಯಕ್ಕೆ ಅಯ್ಯಯ್ಯ 4 ನೋಡಿಲ್ಲ ಮಕ್ಕಳಾಡಿದ ಮಾತು ನಕ್ಕು ಕೇಳಿಲ್ಲ ನಾ ಮಕ್ಕಳಿಂದಲೆ ಕೂಡಿ ಅಕ್ಕರದಿ ಉಣಲಿಲ್ಲ ಮಕ್ಕಳನು ಎತ್ತಿ ಮುದ್ದಿಕ್ಕಿದವನಲ್ಲ ಮಕ್ಕಳಿಲ್ಲದ ಮನುಜ ಲೆಕ್ಕದಾವದರೊಳಗೆ ಬೆಕ್ಕು ಮೊದಲಾದಂಥ ಮಿಕ್ಕ ಪ್ರಾಣಿಗಳೆಲ್ಲ ಮಕ್ಕಳಾಡಿದ ಬಹಳ ಚಕ್ಕಂದವನು ನೋಡಿ ಸೌಖ್ಯ ಪಡುತಿಹದಯ್ಯ ಧಿಕ್ಕರಿಸು ಎನ ಜನ್ಮ ಅದಕ್ಕಿಂತ ವ್ಯರ್ಥ 5 ಮುನ್ನ ನಮ್ಮೊಳಗಾರು ಉಣ್ಣದಲೆ ಈ ಬದುಕು ಮಣ್ಣು ಪಾಲಾಗುವದು ಘನ್ನ ಈ ಚಿಂತಿಯಲಿ ಬಣ್ಣಗೆಟ್ಟೆನು ಕುದ್ದು ಸುಣ್ಣಾದೆನಯ್ಯ ಉಭಯಕುಲ ತಾರಿಸುವಂಥ ನಾನು ಅಣ್ಣತಮ್ಮರ ಒಳಗೆ ಪುಣ್ಯ ಇಲ್ಲೊಬ್ಬನಲಿ ಪುಣ್ಯಗುರುವೆ 6 ರಾಗ:ಶಂಕರಾಭರಣ ಆದಿತಾಳ ಇಂಥ ಮಾತಿಗೆ ಜೀಯ ಹೀಗಂತ ನುಡಿದನು ಚಿಂತೆ ಮಾಡಬೇಡ ಭೂಕಾಂತ ಎಂದನು 1 ಪುತ್ರ ಕಾಮೇಷ್ಟಿಮಾಡು ಭಕ್ತಿಯಿಂದಲಿ ಪುತ್ರನಾಗುವನು ನಿಮಗೆ ಸತ್ಯ ನೀ ತಿಳಿ 2 ಗುರುವಿನ ಮಾತುಕೇಳಿ ಪರಮ ಹರುಷದಿಂದಲಿ ಅರಸ ಬ್ರಾಹ್ಮಣರನೆಲ್ಲ ಕರೆಸಿದಾಗಲೇ 3 ಮುಂದೆ ಯಜ್ಞ ಮಾಡಬೇಕು ಎಂದÀು ತ್ವರದಲಿ ಒಂದು ಭೂಮಿ ಶೋಧಿಸಿದನು ಚಂದದಲಿ 4 ಚಲುವ ನೇಗಿಲ ಜಗ್ಗಿ ಎಳೆವ ಕಾಲಕೆ ಹೊಳೆವ ಪದ್ಮ ಬಂತು ಅಲ್ಲಿ ಸುಳಿದು ಮೇಲಕೆ 5 ಇರುವಳೊಬ್ಬಳಲ್ಲಿ ಮತ್ತೆ ಪರಮಸುಂದರಿ ಅರಸನೋಡಿ ಬೆರಗಿನಿಂತ ಸ್ಮರಿಸಿ ಪರಿಪರಿ 6 ಕಾಣಿಸಿದಲೆ ಗಗನದಲಿ ವಾಣಿಯಾಯಿತು ಕಾಣದಿದ್ದರೂ ಈಗ ಸಕಲಪ್ರಾಣಿ ಕೇಳಿತೊ 7 ಇನ್ನು ಚಿಂತೆ ಮಾಡಬೇಡ ಧನ್ಯ ಅರಸ ನೀ ನಿನ್ನ ಮಗಳು ಎಂದು ಚೆನ್ನಾಗಿ ತಿಳಿಯೋ ನೀ8 ಕ್ಲೇಶ ಹಿಂದೆ ಬಿಡುವಿಯೊ ಮುಂದೆ ಮುಂದಕಿನ್ನು ಆನಂದ ಬಡವಿಯೊ9 ಗಗನ ವಾಣಿಯನ್ನು ಕೇಳಿ ಅರಸ ಬಗೆಯಲಿ ಮಗಳ ನೆತ್ತಿಕೊಂಡನಾಗ ಮುಗಳು ನಗೆಯಲಿ 10 ತಂದೆ ಮಗಳ ಜನ್ಮ ಪದ್ಮದಿಂದ ತಿಳಿದನು ಮುಂದೆ ಪದ್ಮಾವತಿಯೆಂದು ಕರೆದನು11 ಮಗಳಕಾಲಗುಣದಿ ಮುಂದೆ ಮಗನು ಆದನು ಅವನ ಕರೆದ ವಸುಧಾನನೆಂದು ಗಗನರಾಜನು 12 ತಕ್ಕವಾಗಿ ಅರಸಗ್ಹೀಗೆ ಮಕ್ಕಳಾದರು ಸೌಖ್ಯದಿಂದ ಮುಂದೆ ದಿನದಿನಕ್ಕೆ ಬೆಳೆದರು13 ಬಂತು ಯೌವನವು ಭೂಕಾಂತ ಪುತ್ರಿಗೆ ಬಂತು ಆಗ ಮತ್ತೆ ಬಹಳ ಚಿಂತೆ ಅರಸಗೆ 14 ಇಂಥ ಮಗಳಿಗಿನ್ನು ತಕ್ಕಂಥ ಪುರುಷನು ಪ್ರಾಂತದೊಳಗೆ ಇಲ್ಲದಿವ್ಯ ಕಾಂತಿ ಮಂತನು 15 ಎಂತು ನೋಡಲಿನ್ನು ಹುಡುಕಿ ಶ್ರಾಂತನಾದೆನು ಚಿಂತೆಯೊಳಗೆ ಬಿದ್ದು ಮುಂದೆ ಪ್ರಾಂತಗಾಣೇನು 16 ಅಂತರಂಗದೊಳಗೆ ಹೀಗಂತ ಅನುದಿನ ಚಿಂತಿಸಿದನು ಮರೆತು ಅನಂತಾದ್ರೀಶನ17 ವಚನ ಚಂದಾದ ಕುಸುಮಗಳ ಕೂಡಿ ಮುಂದೆ ಇಂದು ಮುಖಿಯು ನೋಡುತಲೆ ಮುಂದೆ ತೆಗೆದು ತ್ವರದಿಂದ ಆಭರಣಗಳ ಮುಂದೆ ತರಿಸಿದಳು1 ಕೆತ್ತಿಸಿದ ರಾಗುಟಿಯ ಒತ್ತಿ ಮೊದಲ್ಹಾಕಿ ಹತ್ತೊತ್ತಿದಳು ಸಾಲ್ಹಿಡಿದು ಇತ್ತಿತ್ತು ಮತ್ತೆ ತುದಿಗೆ ಅತ್ತಿತ್ತ ಮತ್ತ ಮೇಲರಿಸಿನವ ಚಿತ್ತಗೊಟ್ಟಚ್ಚಿದಳು ಚಿತ್ತಾರ ಬರೆದಂತೆ ಮತ್ತ ಗಜಗಮನೆ 2 ಥಳಥಳನೆ ಜಾತಿಯಿಂದ್ಹೊಳೆವ ಮುತ್ತಿನ ಭವ್ಯ ಎಳೆಯ ಇಮ್ಮಡಿ ಮಾಡಿ ನಳಿನಾಕ್ಷಿ ಬೈತಲಗೆ ಅಳತೆಯಿಂದ್ಹಾಕಿದಳು ತಳಪಿನಲಿ ಎಡಬಲಕೆ ಎಳೆದು ಕಟ್ಟಿದಳ್ಹಿಂದೆ ಹೆರಳಿಗ್ಹಾಕಿ ತೊಳೆದ ಮುತ್ತಿನ ಬುಗಡಿ ಪೊಳೆವ ಮೀನ್ಬಾವಲಿಯು ಝಳಿ ಝಳಿತವಾಗಿರುವ ಗಿಳಿಗಂಟಿ ಚಳತುಂಬುಗಳ ನಿಟ್ಟು ಕರ್ಣದಲಿ ಉಳಿದ ದ್ರಾಕ್ಷಾಲತೆಯ ಎಳೆದು ಬಿಗಿದಳು ಮೇಲೆ ಸುಳಿಗುರಳಿನಲ್ಲಿ 3 ಇದ್ದ ಮುತ್ತುಗಳ್ಹಚ್ಚಿ ತಿದ್ದಿ ಮಾಡಿದ ನತ್ತು ಉದ್ರೇಕದಿಂದಿಡಲು ಮುದ್ದು ಸುರಿವುತ ಮುಂಚೆ ಇದ್ದ ಮುಖ ಮತ್ತೆ ಎದ್ದು ಕಾಣಿಸಿತು ಪ್ರದ್ಯುಮ್ನ ಚಾಪದಂತೆರಡÀು ಹುಬ್ಬುಗಳ ಮಧ್ಯೆ ನೊಸಲಿನ ಮೇಲೆ ಶುದ್ಧ ಕಸ್ತೂರಿಯನ್ನು ತಿದ್ದಿ ತಿಲಕವನಿಟ್ಟು ತಿದ್ದಿದಳು ಕಾಡಿಗೆಯ ಪದ್ಮಲೋಚನಗಳಿಗೆ ಪದ್ಮಜಾತೆ 4 ಚಂದ್ರಗಾವಿಯನ್ನುಟ್ಟು ಚಂದಾದ ಕುಪ್ಪಸವ ಮುಂದೆ ಬಿಗಿ ಬಿಗಿತೊಟ್ಟು ಮುಂದಲೆಗೆ ಶೋಭಿಸುವ ಚಂದ್ರಸೂರ್ಯರನಿಟ್ಟು ಚೆಂದಾಗಿ ಬೈತಲೆಗೆ ಚಂದಿರವ ಸುರಿದಳು ಚಂದ್ರಮುಖಿಯು ಪರಿ ಗೀರು ಗಂಧವನು ಕೈಗ್ಹಚ್ಚಿ ಮುಂದೆ ಕೊರಳಿಗೆ ಒರಿಸಿ ಚಂದ್ರಸರ ಮುಂದೆ ಹಾಕಿದಳು 5 ಮೇಲಿಟ್ಟು ಚಿಂತಾಕವನು ಕಟ್ಟಿ ತಾಯತ ಬಟ್ಟಕುಚಗಳ ಏಕಾವಳಿಯ ಇಟ್ಟು ಪುತ್ಥಳಿ ಸರವು ಅಷ್ಟು ಸರಗಳನೆಲ್ಲ ಮೆಟ್ಟಿ ಮೇಲ್ಮೆರೆವಂಥ ಶ್ರೇಷ್ಠ ಸರಿಗಿಯತರಿಸಿ ಇಟ್ಟಳಾಕೆ6 ಟೊಂಕದಲಿ ಒಡ್ಯಾಣ ಮುಂದಲಂಕರಿಸಿದಳು ಪೊಂಕದಿಂದಿಟ್ಟು ಅಕಳಂಕ ಕೊಂಕವನು ಮಾಡುತಲೆÉ ಕಿಂಕಿಣಿಪೈಜಣ ಇಟ್ಟಳಾಕೆ7 ಪಿಲ್ಲೆ ಮೇಲಾದ ಮುಸುಕಿಕ್ಕಿ ಬಹು ಬಾಲೆಯರು ಕೊಟ್ಟ ಕೂಡಿ ಭಾಳ ಹರುಷದಿ ಹೊರಟಳಾಕಾಲದಲ್ಲಿ. 8 ವಚನ ಪರಿ ಗಜಗಮನದಿಂದಾ ವನ ಮದನ ಸತಿಯಂತಿಪ್ಪ ತರುಣಿರೂಪವ ತಾಳಿ ವನಮಧ್ಯದಲ್ಲಿ ತಾಂ ಬೆಸಗೊಂಡಳು ಯಾರಲೆ ಬಾಲೆ ನೀ ಬಾಲಚಂದ್ರ ಲಲಾಟೆ ಕಾಳಾಹಿ ವೇಣೀ ನೀ ಜಾತೆಯರ ಕೂಡಿ ಬಳಗವು ಕಾಂತನ್ಯಾರು ಪೇಳೆಂದು 1 ಧ್ವನಿ ಕೇಳೆ ಕುಸುಮಕ್ಕೆ ನಾ ಬಂದೆ ತಿಳಿಯೆ ಮಾತಿನರಗಿಳಿಯೆ 1 ಅಸಮ ತೋಂಡಮಾನನೆಂಬುವನು ನಮ್ಮ ಕಕ್ಕನು 2 ನಾ ಖೂನವನು ಪೇಳಿದೆ ಸಾರಿ ಪೇಳಿದೆ &ಟಿ
--------------
ಅನಂತಾದ್ರೀಶ - ಕಥನಕಾವ್ಯಗಳು
ಅವಗೆಲ್ಲಿಹುದೋ ನಿಜ ಮುಕ್ತಿ | ದಾವಗಿಲ್ಲವೋ ಗುರುಪಾದ ಭಕ್ತಿ ಪ ತಂದಿ ತಾಯಿ ಗುರು ಬಂಧು ಬಳಗಾ | ಎಂದು ಹಂಬಲಿಡದೆ ಮನಲೀಗಾ 1 ಗುರು ಕಂಡಾಗಳೆವೆ ಶರಣೆಂಬಾ | ತಿರುಗಿ ನೋಡಲು ಮರವನು ಡೊಂಬಾ2 ಹೊರಗ ದೋರುವ ಡೊಂಬ ಅನೇಕ | ಗುರುಸೇವೆಗೆ ಹೋದನು ಹೋಕಾ 3 ಪೂಜೆ ಸರ್ವೋಪಚಾರದಿ ಮಾಡಿ | ತ್ಯಾಜ ಪಡಿಯನು ಗುರುದಯ ಕೂಡಿ4 ಪರಮ ಗತಿಗಿದೇ ಕಾರಣವೆಂದು | ಗುರುಮಹಿಪತಿ ಬೋಧಿಸಿದನಿಂದು5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಇಂದು ಇಂದು ಇಲ್ಲಿ ಚಂದ್ರವದನೆ ಇಂದಿರಾದೇ'ಗಂಡುಗಲಿಯ ವೇಶತಾಳಿ ಗೆಂಡಾಸುರನ ಕೊಂದು ನಗುತಅ.ಪಜಗದೀಶನ ಮಡದಿಯಂತೆ ಮಗಗೆ ನಾಲ್ಕು ಮುಖಗಳಂತೆಮಗನ ಮಗ ಬೈರಾಗಿಯಂತೆ ಅಗಜೆ ಅವಗೆ ಒಲಿದಳಂತೆ 1ಹರಿಯ ಹೃದಯದಲ್ಲಿ ಸದಾ ಅಗಲದೆ ತಾ ಇರುಳಂತೆಆದಿಮಾಯಾ ಶಕ್ತಿಯಾಗಿ ಜಗದ ವ್ಯಾಪಾರ ಮಾಡುವಳಂತೆ 2ಕೋಟಿ ಕೋಟಿ ಭೃತ್ಯರಿರಲು ಹಾಟಕಾಂಬರಸೇವೆಸಾಟಿಇಲ್ಲದೆ ಮೂಡಿ ಪೂರ್ಣ ನೋಟದಿಂದ ಸುಖಿಪಳಂತೆ 3ಛಕ್ರಚಾಮರ ವ್ಯಜನ ಪರ್ಯಂಕ ಪಾತ್ರರೂಪದಲ್ಲಿನಿಂತುಚಿತ್ತಚರಿತನಾದ ಹರಿಯ ನಿತ್ಯ ಸೇವೆ ಮಾಡುವಳಂತೆ4ಗಂಡ ಹೆಂಡಿರ ಜಗಳವಂತೆ ಕೊಲ್ಹಾಪುರದಿ ಇರುವಳಂತೆಗಂಡ ವೈಕುಂಠ ಮಂದಿರಬಿಟ್ಟು ವೆಂಕಟಗಿರಿಯಲಿ ಇರುವನಂತೆ5'ೀರಪುರುಷ ವೇಷವಂತೆ ಕ್ರೂರ ದೈತ್ಯನ ಸೀಳಿದಳಂತೆಯಾರಿಗು ಗೊತ್ತಾಗದಂತೆ ರಾತ್ರಿ ಊರೊಳಗೆ ಬರುವಳಂತೆ 6ಭಾರತಹುಣ್ಣಿಮೆ ಜಾತ್ರಿಯಂತೆ ಭಾರಿಜನರು ಕೂಡುವರಂತೆಭಾರಿ ಡೊಳ್ಳು ಹೊಡಿವರಂತೆ ಭೂಪತಿ'ಠ್ಠಲ ನಗುವನಂತೆ 7ಹನುಮಂತದೇವರು
--------------
ಭೂಪತಿ ವಿಠಲರು
ಉಪಾಧಿ ರಹಿತ ಧ್ರುವ ಆಶ್ರೈಸಿಹ್ಯ ದಾವನು ಶ್ರಯಧೇನು ನಾಸ್ತಿಕ್ಯವಗೆಲ್ಲಿಹುದು ತಾನು 1 ಇವ್ಹದಾವನು ಸುರತರುವಿನ ಬಲಿ(ಳಿ?) ಯು ಅವಗೆಲ್ಲಿಹುದುದರದ ಕಳವಳಿಯು 2 ಸುರನದಿಯಲ್ಲಿ ದಾವನ ಸಹವಾಸ ಧರೆಯೊಳಗವಗೆಲ್ಲಿಹ ಮಹಾ ದೋಷ 3 ರವಿ ಪ್ರಭೆಯೊಳು ದಾವನಿಹನು ಕೂಡಿ ಅವಗೆಗೆಲ್ಲಿಯ ಕಗ್ಗತ್ತಲೆ ನೋಡಿ 4 ದಾವ ಮಹಿಪತಿ ಗುರು ಪಾದ್ಹೊಂದಿಹ್ಯ ಅವಗೆಲ್ಲಿಹದು ತಾ ಭವಬಂಧ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಎನ್ನ ಕಂಗಳಿಗೆ ತೋರೊ ಶ್ರೀಕೃಷ್ಣಪ. ಕರಿಯ ಮೊರೆ ಲಾಲಿಸಿದಿ ಬೇಗನೆನೆರೆದ ಸಭೆಯಲಿ ದ್ರೌಪದಿಗೆ ಅಭಯವನಿತ್ತಿ ಅಡವಿಅರಣ್ಯದಿ ಅಹಲ್ಯೆಯ ಸಲಹಿದಿಮುಚುಕುಂದನ ರಕ್ಷಿಸಿದಿ 1 ಸೂರ್ಯನುದಿಸುತ ಅಂತ್ಯಕಾಲದಿಶರತಲ್ಪದಲಿ ಅವಗೆ ತೋರಿದಿಶರಣು ಕಾಳೀಪಣೆಯ ಮೇಲಿಟ್ಟ ಮುದ್ದುಚರಣವ ತೋರೊ ರಂಗನಾಥ 2 ಪುಟ್ಟ ಪ್ರಹ್ಲಾದನ ಸಲಹಿದಿಪಟ್ಟವನು ವಿಭೀಷಣನಿಗೆ ಸ[ಲಿಸಿ]ದಿನೆಟ್ಟನಡವಿಲಿ ಬಂದ ಧ್ರುವನಆದರಿಸಿ ಕಾಯ್ದಿ ರಂಗನಾಥ 3 ಘನವಾಗಿ ಕ್ಷೀರಾಬ್ಧಿಯಲಿ ನಿಂತಿಉನ್ನಂತವಾಗಿದ್ದ ಸತ್ಯಲೋಕವನಾಳಿದಿ ಪ್ರಸನ್ನನಾಗಿಕ್ಷ್ವಾಕು ಕಾಯಗೆಒಲಿದ ಪಾದವ ತೋರೊ ರಂಗನಾಥ 4 ಎಷ್ಟು ಹೇಳಲಿ ನಿಮ್ಮ ಮಹಿಮೆಯಸೃಷ್ಟಿಸ್ಥಿತಿಲಯವನ್ನು ಅಳೆದೀ ಪುಟ್ಟ ಪಾದವ ಎನ್ನ ಮನದಲಿಇಟ್ಟು ದಯಮಾಡೊ ಶ್ರೀಕೃಷ್ಣ ರಂಗನಾಥ 5 ದÀಕ್ಷಿಣಮುಖವಾಗಿ ಪವಡಿಸಿದಿ ದೇವಶಿಖಾಮಣಿ ಏಳೈ ಬಂದ ಭಕ್ತರಿ-ಗೆಲ್ಲ ಅಭಯ ಹಸ್ತವ ಕೊಡುವಿರಾಜೀವನೇತ್ರ ಹಯವದನ[ರಂಗನಾಥ] 6
--------------
ವಾದಿರಾಜ
ಕರುಣಿಸುವ ಹರಿ ನಿರಂತರವು ಮನವೆ ಪಾದ ಸ್ಮರಣಿಯನು ನೆರೆನಂಬು ಪ ಕಂದ ಪ್ರಹ್ಲಾದನ ತಂದೆ ಭಾಧಿಸಲು ಗೋ ವಿಂದ ಘನ ಸ್ತಂಭದೊಳ್ ಬಂದು ತಾಮುದದಿ ಮಂದ ದನುಜನ ಬಿಡದೆ ಕೊಂದ ಶ್ರೀವರ ಮುಚು ಕುಂದ ವರದ ಯೆಂದು ನೀ ಭಜಿಸು 1 ಛಲದಿಂದ ಮಲತಾಯಿ ಸಲೆ ಧ್ರುವನ ಕಾನನಕೆ ಕಳುಹಲಾಕ್ಷಣವೆ ಶ್ರೀ ನಳಿನನಾಭ ಒಲಿದು ಪೊರಿದನು ಮಹಾಒಳಿತೆಂದು ಅವಗೆ ನಿಶ್ಚಲ ಪದವಿಯನು ಇತ್ತ ಜಲನಿಧಿಶಯನ 2 ಅರಸು ಮುನಿಶಾಪದಲಿ ಕರಿಯಾಗಿ ಜನಿಸಿ ಮ- ಕರ ಬಾಧೆಗೆ ಶಿಲ್ಕಿ ಮೊರೆಯನಿಡಲು ತ್ವರದಿ ಪೊರದಂಥ ಹೆನ್ನೆಪುರ ಲಕ್ಷ್ಮೀನರಶಿಂಹ ಸಿರಿ ಕೃಷ್ಣಾ 3
--------------
ಹೆನ್ನೆರಂಗದಾಸರು
ಕೈಕೊಂಡ - ನೃಹರಿ ಕೈಕೊಂಡ ಪ ಕೈಕೊಂಡ ಪೂಜೆಯ ನೃಹರಿ | ತ್ರೈಲೋಕ್ಯಕನಾಥನು ಅಸುರಾರಿ | ಆಹತೋಕನ ಸಲಹಲು | ಏಕಮೇವನ ಲೀಲೆಕೈಕೊಂಡ ಅವತಾರ | ಆ ಕಂಬೋದ್ಭವನಾಗಿಅ.ಪ. ಭಕ್ತಿ ಭಾವದಿ ಪರಾಶರ | ಬಹುತಪ್ತ ಭಾವದಿ ಕೃಷ್ಣೇ ತೀರ | ದಲ್ಲಿಸಕ್ತನಿರೆ ಧ್ಯಾನ ಗೋಚರ | ನಾಗಿವ್ಯಕ್ತನು ಷೋಡಶಕರ | ಆಹದೃಪ್ತ ದಾನವ ಧ್ವಂಸಿ | ದೀಪ್ತಾನಂತ ತೇಜಮೂರ್ತಿ ಕಾಣಿಸಿದನ | ವ್ಯಕ್ತನಾಗಿದ್ದಂಥ 1 ಕಟಿಸೂತ್ರ ಸ್ಮರ ಕೋಟಿ ಲಾವಣ್ಯಕರ ಪಾಶ ಅಸಿಕುಂತ | ವರದಾ ಭಯವು ಹಸ್ತ 2 ಕಂಬು ಚಕ್ರ ಚರ್ಮಕರ | ಮತ್ತೆಅಂಬುಜ ಶಾಂಙÁ್ರ್ಞದಿಧರ | ಗದಸಂಭೃತ ತುಳಸಿಯ ಹಾರ | ಮತ್ತೆಇಂಬಿನ್ವ್ಯೊ ಜಯಂತಿ ಹಾರ | ಆಹಅಂಬುಜದಳ ನೇತ್ರ | ಇಂಬಾಗಿ ಕರಪಾತ್ರತುಂಬ ಪೀಯುಷಧಿ | ಪೊಂಬಸಿರ ವಂದ್ಯನು 3 ಶ್ರೀವತ್ಸ ಲಾಂಛನ ಭೂಷ | ತನ್ನಭ್ರೂವಿಲಾಸದಿ ಬ್ರಹ್ಮ ಈಶ | ರಿಗೆತಾವೊಲಿದೀವ ಆವಾಸ | ಯೆನುತವ ವೇದಂಗಳು ಅನಿಶ | ಆಹಮಾವಿನೋದಿಯ ಗುಣ | ಸಾವಕಾಶಿಲ್ಲದೆಸಾರ್ವದ ಪೊಗಳುತ್ತ | ಭಾವದೊಳ್ಹಿಗ್ಗುವವು 4 ಪೊತ್ತು ರೂಪವ ಬಲಪಾದ | ಚಾಚುತ್ತ ರಕ್ಕಸನೊಡಲಗಾಧ | ಇಟ್ಟುವತ್ತುತ ತೊಡೆಯಲ್ವಿನೋದ | ದ್ವಯಹಸ್ತ ನಖದಿ ಉದರ ಬಗೆದ | ಆಹಕಿತ್ತುತ ಕರುಳನ್ನ | ಕತ್ತಿನೊಳ್ಹಾಕುತಭಕ್ತನ ಸಂಬಂಧ | ಎತ್ತಿ ತೋರ್ದ ಜಗಕೆ 4 ಪಂಚ ಮೋಕ್ಷಪ್ರದ ಹರಿ | ಆಯ್ತುಪಂಚಾಮೃತಭಿಷೇಕ ಅವಗೆ | ಮತ್ತೆಪಂಚಕಲಶಾರ್ಚನವು ಆವಗೆ | ಆಯ್ತುಪಂಚ ಕುಂಭಾಭಿಷೇಕವಗೆ | ಆಹಸಂಚಿಂತಿಸುತ ಹೃ | ತ್ಪಂಕಜದೊಳು ನೋಡೆಸಂಚಿಂತಾಗಮ ನಾಶ | ಕೊಂಚವು ಪ್ರಾರಬ್ಧ 6 ಶಾಲಿಗ್ರಾಮದ ಶಿಲ ಏಕ | ಪೊತ್ತುಪೋದಕ ಬಾಹು ಅಲೀಕ | ಶತಶಾಲೀವಾಹನವೆಂಬ ಶಕ | ದೊಳುಜ್ವಾಲಾ ನರಹರಿ ನಾಮಕ | ಆಹಯೇಳು ಐದೊರ್ಷದ | ಭಾಳ ತಪಕೆ ಮೆಚ್ಚಿಶೀಲ ದ್ವಿಜ ದಂಪತಿ | ಗೊಲಿದು ಪೇಳಿದ ಹೀಗೆ 7 ಭೀಮಕ ರಾಜಗೆ ಪೇಳು | ತೃಣಜಾಲವ ಹಾಕೆ ನೀರೊಳು | ಅಲ್ಲಿಜ್ವಾಲೆ ಉದ್ಭವಿಸಲು ಬಲು | ನೀರಮೇಲಕ್ಕೆ ಒಳಗಿಂದ ಬರಲು | ಆಹತೋಳೆರಡಲಿ ರಾಜ | ಮೇಲೆತ್ತೆ ಬರುವನುತಾಳ ಮೇಳ್ವೈಭವ | ದೊಳಗೆ ಸ್ಥಾಪಿಸಲೆಂದು 8 ಅಂಗಹೀನರೆ ಕೇಳಿ ಆವ | ನಿಮ್ಮಭಂಗಿಪ ಮೂಕಾಂಧ ಭಾವ | ನೀಗಿಶೃಂಗಾರ ರೂಪ ಸ್ವಭಾವ | ನರಸಿಂಗ ಕೊಡುವೆನು ಸೇವ | ಆಹ ಹಿಂಗದೆ ಕೊಡುವೆನು | ಅಂಗಜ ಪಿತ ನರಸಿಂಗಪುರವೆಂದು | ಸಂಗೀತವಾಗಲಿ 9 ವತ್ಸರ ಸೌಮ್ಯವು ಪುಷ್ಯ | ದಿನದರ್ಶ ವ್ಯಾಸತೀರ್ಥ ಶಿಷ್ಯ | ಆದರ್ಶ ದಾಸರ ದಿನ ಭವ್ಯ | ಭಕ್ತವತ್ಸಲ ಸ್ವೀಕಾರ ಆಲ್ಪ್ಯ | ಆಹಉತ್ಸವ ಕೊಳ್ಳುತ | ಉತ್ಸಾಹವೆನಗಿತ್ತುಮತ್ಸ್ಯಾದಿ ದಶರೂಪಿ | ಕೃತ್ಸ್ನ ಕಾರುಣ್ಯನು 10 ಪರಾಶರಗೊಲಿದ ಸುಶೀಲ | ಖಗವರನು ಭೂದೇವಿಯು ಬಲ | ಎಡವರಲಕ್ಷ್ಮೀ ಪ್ರಹ್ಲಾದ ಬಾಲ | ಸುರವರರಿಂದ ಸ್ತುತ್ಯ ವಿಶಾಲ | ಆಹಗುರು ಗೋವಿಂದ ವಿಠ್ಠಲ | ಗುರು ಬಿಂಬ ನರಸಿಂಗಶರಣರ ಅಪಮೃತ್ಯು | ಹರಿಸಿ ಸಂತತ ಕಾಯ್ವ11
--------------
ಗುರುಗೋವಿಂದವಿಠಲರು
ಗೋವಿಂದ ವಿಠಲ ನಿನ್ನ ವಂದಿಸುವೆ ಸ್ವಾಮಿನೀ ಒಲಿದು ರಕ್ಷಿಸುವುದು ಜೀವಿ ಇವ ಬಹುಕಾಲಸಾವ ಸಾವ ನಿನ್ನ ಸೇವೆಯೊಳಗೆ ಇಟ್ಟು ಕಾವುದು ನಿರುತ ಪ. ಆವ ಈ ಯುಗದಲ್ಲಿ ನಿನ್ನ ವಿಷಯರಾಗಿಈವ ಸುಜನರು ಸ್ವಲ್ಪರು ತಾ ವ್ಯಾಪಿಸಿ ಇಹರುಅಸುರರೆ ಬಹುಳಾಗಿ ಆವದವಸ್ಥೆಗಳಲಿನೀ ವರವನು ಕಲಿಗೆ ಇತ್ತ ಕಾರಣ ಉಪಜೀವರ ವ್ಯಾಪಾರಈ ವಿಧದಲಿ ತಳೆದು ನಿನ್ನ ಹುಡುಕುತಲಿನ್ನುಜೀವಿ ಸಾತ್ವಿಕನು ಮೊರೆಯಿಡಲು ಬಿನ್ನಯಿಸಿದೆನೊ 1 ಏನು ಸಾಧನವನು ಖೂಳವನು ಕಂಡಿನ್ನುನೀನು ವಂದಿಸಿವೆಂದರೆ ಜ್ಞಾನಭಕುತಿ ಉಳ್ಳಜ್ಞಾನಿಗಳಲಿವಗೆ ನಾನು ಕಂಡೆನು ಭಕುತಿಯಕ್ಷೋಣಿಯಲಿ ಭಕುತಿ ನಿನ್ನಲಿ ಪುಟ್ಟಲಿಬಹುದುಜ್ಞಾನಿಗಳ ದುರ್ಲಭ ನೀನು ಒಲಿವುವ ಅವಗೆನಾನವರಲಿ ಭಕುತೀವೆ ನಾನಾಸಾಧನ ಫಲವಿದೆ ನೋಡಾ 2 ಪ್ರಾರ್ಥಿಸುವೆ ನಾ ನಿನ್ನ ಪ್ರೇರಣೆಯ ಅನುಸಾರಕೀರ್ತಿ ನಿನ್ನದು ಜಗದೊಳು ಪಾತ್ರ ಇವನೆಂದುನಿನ್ನ ಚಿತ್ತದಲಿ ಇತ್ತೆ ಸಾರ್ಥಕನ ಮಾಡು ಚೆಂ ಸ್ವಾ ?ಕೀರ್ತನೆಯ ಮಾಡಿಸು ನಿನ್ನ ಪರವಾಗಿ ನಿಜಸ್ಫೂರ್ತಿಸಖರಂಗ ಗೋಪಾಲವಿಠಲ ಶ್ರುತಿಶಾಸ್ತ್ರಾರ್ಥವನುಸಾರ ಪ್ರಾಪ್ತಿ ನೀನಾಗಿವಗೆ3
--------------
ಗೋಪಾಲದಾಸರು
ಜಯ ಜಯ ಮಂಗಳ ಮಹಿಮ ಸುದಾತ ಜಯ ಜಯ ಸ್ವಾಮಿ ಶ್ರೀಗುರು ಅವಧೂತ ಧ್ರುವ ನೀನಹುದೊ ಮುನಿಜನ ಪ್ರತಿಪಾಲ ಅನಾಥ ಬಂಧು ದೀನದಯಾಳ 1 ಪತಿತಪಾವನ ಯತಿಜನಪ್ರಿಯ ಅತಿಶಯಾನಂದ ನೀನಹುದೊ ನಮ್ಮಯ್ಯ 2 ಭಾವಿಕರಿಗೆ ನೀ ಜೀವಕೆ ಜೀವ ಅವಗೆ ಮಹಿಪತಿ ಕಾವ ನೀ ದೈವ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ದಾವಗಿಲ್ಲ ಖೂನ ತನ್ನೊಳಗ ಅವಗೆಲ್ಲಿಯ ಜ್ಞಾನ ಜಗದೊಳಗ ಧ್ರುವ ತಿಳಿದುಕೊಳ್ಳದವ ಆತ್ಮವಿಚಾರ ಕಳೆದು ಕೊಂಡವನೆ ಹಿತ ಅಪಾರ ಹೊಳಿಯದವಗ ಎಂದು ವಸ್ತುದಾಧಾರ 1 ದಾವಗಿಲ್ಲ ಖೂನ ಗುರುಮುಖ ಅವನೆ ತಾಳಿ ಬಾಹ್ವ ಜನ್ಮ ಅನೇಕ ಭಾವಿಸದು ದಾವಗಿನ್ನ ವಿವೇಕ ಅವಗೆಲ್ಲಿಹದು ನೋಡಿ ಸ್ವಸುಖ 2 ಖೂನ ತನ್ನ ತಿಳಿವದು ತ್ವರಿತ ಅನುಭವಕಿದೆ ತಾಮ ಸನ್ಮತ ದೀನ ಮಹಿಪತಿಗೆ ಸ್ವಹಿತ ಭಾನು ಕೋಟೆ ತೇಜನಾದ ಉದಿತ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಧ್ಯಾನ ಮಾಳ್ಪುದು ಮನಸಾ | ಹೃದಯಾರವಿಂದದಿಸಾನು ಕೂಲಿಪ ಅರಸ | ವಿಸ್ತರಿಸಿ ಗುಣಗಳಮೌನಿಯಾಗುತ ಸಹಸ | ಚಿಂತಿಸೆಲೊ ಅನಿಶಾ ಪ ಸಾನು ರಾಗದಿ ರೂಪಗುಣಗಳ | ಮಾನಮೇಯ ಜ್ಞಾನ ಸಹಿತದಿಏನು ಫಲದನು ರಾಗವಿಲ್ಲದೆ | ಶ್ರೀನಿವಾಸನ ಭಕುತಿಯಿಂದಲಿ ಅ.ಪ. ನತ ನಾ | ಸಾಗ್ರದಲಿ ದೃಷ್ಟಿಯನೆ ಇಡುತ 1 ಮಾನವ ಪ್ರಾಣ ನಿಯಮನ ವಾರ್ತಿ | ತಿಳಿಯುತ ಮನದಲಿಪ್ರಾಣ ರೇಚಕ ನೀತಿ | ಪೂರಕವು ಕುಂಭಕಜಾಣ ತನದಲಿ ಪೂರ್ತಿ | ಗೈದೋಂಕಾರ ಕೀರ್ತಿ ||ಪ್ರಾಣ ನಿರುತದಿ ಮಾಳ್ಪ ಅನು ಸಂಧಾನ ತಿಳಿದಾ ಚರಿಸೆ ವಿಹಿತದಿಪ್ರಾಣ ಸಂಯವ ಭಕ್ತಿ ಪೂರ್ವ ವಿ | ಧಾನ ಮಾಡಲು ವೇಗ ವಲಿದನು|2| ಹತ್ತು ಸಲ ಪ್ರತಿಸವನ | ಪ್ರಾಣನ್ನ ಸಂಯವ ಕರ್ತೃ ಹೀಗೆ ತ್ರಿಸದನ ಮಾಸಕ್ಕೆ ಮುಂಚೆಯೆಭರ್ತೃವಾಗಿಹ ಪ್ರಾಣ | ವಶನ ಹನು ಅವಗೆಂದುಉಕ್ತವಿದು ಸನ್ಮಾನ | ತಿಳಿದಾ ಚರಿಸು ಧ್ಯಾನ ||ಪೊತ್ತು ಕದಳಿಯ ಮೊಗ್ಗಿನಾಕೃತಿ | ಮತ್ತೆ ನಡು ಸತ್ಕರ್ಣಿಕವು ಇಹಹೃತ್ಸ ಅಷ್ಟದಳಾಖ್ಯ ಕಮಲವ | ಎತ್ತುವುದು - ಉದಯಾರ್ಕ ಮಂತ್ರದಿ |3| ಚಿಂತೆ ಕರ್ಣಕೆಯಲ್ಲಿ | ಮಾರ್ತಾಂಡ ಮಂಡಲಅಂತೆ ಅದರುಪರೀಲಿ | ತಾರೇಶ ಮಂಡಲಚಿಂತೆ ತದ್ದುಪರೀಲಿ | ಮಂಡಲ ವಿಭಾವಸುಅಂತೆ ತನ್ನಡುವೀಲಿ | ಹರಿಪದಾಜ್ಜಾಳಿ ||ಯಂತೆ ಚಿತ್ತ ಸ್ಥೈರ್ಯದಿಂದಲಿ | ಚಿಂತಿಸುತ ಗುಣರೂಪ ಕ್ರಿಯೆಗಳಕ್ರಾಂತನಾಗುವ ಹರಿಯ ಚರಣದಿ | ಶಾಂತ ಸತ್ಸಮಾಧಿಯನು ಪಡೆ 4 ಕಂಬು ಕುಂಡಲ ಮಕರ | ಶೋಭಿ ಕರ್ಣಾಪಾರ ||ಮಾರಪಿತ ಶಿರಿವತ್ಸ ಲಾಂಛನ | ಶ್ರೀ ರಮಾಪತೆ ಶ್ಯಾಮಸುಂದರಕಾರಣಿಕ ಕನಕಾಂಬರಾಧರ | ಹಾರ ಸುಮನ ವಿಶಾಲ ವಕ್ಷನ 5 ಕಂಬು ಕಟಿ ಸೂತ್ರಾಂಗದೈರ್ಯುತ | ವಸ್ತು ಸರ್ವಾಧಾರ ಹೃದ್ಯನ 6 ಧ್ಯಾನ ಬಹು ದುರ್ಭಾವ್ಯ | ಶ್ರೀಹರಿ ವಿಭೂತಿಯುಮನಕೆ ದುರ್ವಿಜ್ಞೇಯ | ಪೆಸರಿಹುದು ಕಾರಣಅನಘನಂಗವು ದೇಹ | ಒಂದೊಂದು ಸ್ಥಿರ ಪಡೆಪುನಹ ಸರ್ವಾವಯದ ಸ್ಥಿರ ತೆರದಿ ಧೇಯ ||ಎಣಿಸು ಪ್ರತ್ಯಾಹರಣ ಕಾರ್ಯವ | ವಿನಹವಿದು ಮನಸ್ಥೈರ್ಯವಾಗದುಅನಿಲದಯ ಸಂಪಾದಿಸುತ್ತಲಿ | ಗುಣಿಸು ನೈರಂತರ್ಯವೀತೆರ 7 ಶಿಷ್ಟನಾಗುತಲಿನ್ನು | ಅನ್ಯತ್ರ ಮನವನುಸುಷ್ಠು ಸೆಳೆಯುತಲಿನ್ನು | ಹರಿಪಾದ ವನಜದಿಘಟ್ಟ ಇಡುತಲಿ ಮುನ್ನ | ಸುಸ್ಥಿರದ ಚಿತ್ತದಿ ||ಪ್ರೇಷ್ಟ ತಮ ಅವನೆನ್ನು | ಸರ್ವಕಧಿಕೆನುನಷ್ಟವಾಗುತ ಭ್ರಾಮಕ ತ್ರಯ | ಶ್ರೇಷ್ಠ ಧ್ಯಾನಾಸಕ್ತನಾಗಲು ದೃಷ್ಟಿಸುತಲಿ ತತ್ವಪತಿಗಳ | ಇಷ್ಟ ಮೂರ್ತಿಯ ಕಾಂಬೆ ಕೊನೆಗೆ8 ಯೋಗವಿಹುದು ಸಮಾಧಿ | ಅಭ್ಯಾಸ ಸಾಧ್ಯ ನಿಯೋಗಿಸಿದನ ನಿರುತದಿ | ಸುಸ್ಥಿರದಿ ಚಿತ್ತವಯೋಗಿಸ್ಹರಿ ಚರಣದಿ | ಏನೊಂದು ಬೇಡದೆವೇಗ ಹರಿ ರೂಪದಿ | ನೋಡವನ ದಯದಿ ||ಆಗಮೈಕ ಸುವೇದ್ಯ ಭಕ್ತಿಯ | ಯೋಗ ಕೊಲಿಯುತ ಸಾಧಕಂಗೆಯೋಗಿ ಗುರು ಗೋವಿಂದ ವಿಠ್ಠಲ | ವೇಗತನ ದರ್ಶನವ ಪಾಲಿಪ 9
--------------
ಗುರುಗೋವಿಂದವಿಠಲರು
ನಂದಪುತ್ರನ ಆಜ್ಞೆಯಿಂದಲುದ್ಧವ ಬ್ಯಾಗ ಬಂದು ಗೋಕುಲ ಹೊಕ್ಕಾನಂದದಿಂದಲಿ 1 ಬಾಲನ್ವಾರ್ತೆಯ ಕೇಳೆಶೋದ ಗೋಪನು ಕೊಂ- ಡಾಡಿ ಗುಣಗಳ ಮನಕೆ ತಾಳಿದರ್ಹರುಷವ 2 ತಾಪ ಬಿಡದಲೆ ಅಗಲಿ ಶ್ರೀಪತಿ ಕಾಣದೆ ಸಂತಾಪದಿಂದಿರೆ 3 ಸತಿಯರೆಲ್ಲರು ಗೋಪಿಸುತನ ಪಾಡುತ ದಧಿಯ ಮಥಿಸಿ ಕದವನೆ ತೆಗೆಯೆ ರಥವ ಕಂಡರು 4 ದಾವ ಕಾರಣ ನಮ್ಮ ಭಾವಭಕ್ತಿಗೆ ಸ್ವಾಮಿ ತಾನೆ ಬಂದಾನೋ ತನ್ನಕ್ರೂರನ ಕಳಿಸ್ಯಾನೊ 5 ಭದ್ರೆರೆಲ್ಲರೂ ಕೂಡಿ ಎದ್ದು ಬರುತಿರೆ ಮಧ್ಯಮಾರ್ಗದಿ ಅಲ್ಲುದ್ಧವನ ಕಂಡರು 6 ಕಾಂತೇರೆಲ್ಲರು ಕೂಡೇಕಾಂತ ಸ್ಥಳದಲ್ಲಿ ನಿಂತು ಕಂತುನಯ್ಯನು ಲಕ್ಷ್ಮೀಕಾಂತ ಕ್ಷೇಮವೆ 7 ಇಂದಿರೇಶನ ಬಿಟ್ಟಗಲಿ ವ್ರಜದೊಳು ಕಾಲ ಹಿಂದೆ ಕಳೆವೋದ್ಹ್ಯಾಗಿನ್ನ ್ಹಗಲು ಇರುಳನೆ 8 ಮುಂದೆ ಕಾಣದೆ ನೇತ್ರ ಅಂಧಕರಂದದಿ ಮು- ಕ್ಕುಂದನಿಂದಲಿ ರಹಿತರೆಂದಿಗಾದೆವೊ 9 ತೊಡಿಗೆ ಬಂಗಾರ ಶಿರದಿ ಮುಡಿವೊ ಮಲ್ಲಿಗೆ ದೇಹ- ಕ್ಕುಡಿಗೆ ಭಾರವೊ ಬಿಟ್ಟು ಪೊಡವಿಗೊಡೆಯನ 10 ಉದ್ಧವ ನಾವು ಜಾಳು ಸ್ತ್ರೀಯರು ಒಲ್ಲದೆ ಕಾಳಿಮರ್ದನ ಕಾಲಲೊದ್ದು ಪೋದನು 11 ಜಾರಸ್ತ್ರೀಯರುಯೆಂದು ನಗದಿರುದ್ಧವ ಬಿಗಿದ ಮೋಹಪಾಶದಿ ಈ ವಿಚಾರ ಮಾಡಿದ 12 ಬಲೆಯಗಾರಗೆ ಸಿಕ್ಕು ಬಳಲಿದಾಕ್ಷಣ ಅದರ ಕೊ- ರಳ ಕೊಯ್ಯದೆ ಅವಗೆ ಕರುಣ ಬರುವುದೆ 13 ಎಷ್ಟು ಹೇಳಲೊ ಅವನ ಗಟ್ಟಿಯೆದೆಗಳ ಒಲ್ಲದೆ ಬಿಟ್ಟು ನಮ್ಮನು ಮಧುರಾಪಟ್ಟಣ ಸೇರಿದ 14 ಭ್ರಮರಕುಂತಳೆ ಒಂದು ಭ್ರಮರಕಾಣುತ ಬ್ಯಾಡ ಕಮಲನಾಭನ ವಾರ್ತೆ ಕಿವಿಗೆ ಸೊಗಸದು 15 ಮದನಮೋಹನ ಹೋಗಿ ಮಧುರಾಪುರಿಯಲಿ ಅಲ್ಲಿ ಚÉದುರೆರಿಂದಲಿ ಅವಗೆ ಸೊಗಸು ಸಮ್ಮತ 16 ಕ್ರೂರನೆನ್ನದೆ ಇವಗಕ್ರೂರನೆನುತಲಿ ದಾರ್ಹೆಸರಿಟ್ಟರೋ ನಮಗೆ ತೋರಿಸೊ ಅವರನು 17 ಯಾತಕ್ಹೇಳುವಿ ಅವನ ವಾರ್ತೆ ಸೊಗಸದು ಹರಿಯು ಪ್ರೀತಿ ವಿಷಯನು ನಮಗೆ ಘಾತಕನೆನಿಸಿದ 18 ಜಲನ ಭೇದಿಸಿ ಹಯನ ಕೊಂದು ವೇದವ ಹ್ಯಾಗೆ ಹರಣ ಮಾಡಿದ 19 ಕ್ಷೀರ ಮಥನವ ಮಾಡಿ ಸ್ತ್ರೀಯರೂಪದಿಂದಸುರರ ಮೋಹಿಸಿದ್ವಂಚನೆ ನಮಗೆ ಪೂರ್ಣ ತಿಳಿಸಿದ 20 ಭೂಮಿ ಬಗಿದನು ತನ್ನ ಕ್ವಾರೆಯಿಂದಲಿ ನಮ್ಮನ್ನು ಸೀಳಿ ಪೋದರೆ ಇನ್ನೀ ಘೋರ ತಪ್ಪುವುದು21 ಕಂದ ಕರೆಯಲು ಕಂಬದಿ ಬಂದು ಸಲಹಿದನೆಂದು ನಂಬಿ ಕೆಟ್ಟೆವೊ ಇನ್ನಿವನ ಹಂಬಲ ಸಾಕಯ್ಯ 22 ಕೊಟ್ಟ ದಾನವ ಬಲಿಯ ಕಟ್ಟಿ ಪಾಶದಿಂದವನ ಮೆಟ್ಟಿದ ಪಾತಾಳಕಿಂಥಾಕೃತ್ಯಮರುಂಟೇನೊ 23 ಕೊಡಲಿ ಕೈಯ್ಯೊಳು ಪಿಡಿದು ಹಡೆದ ಮಾತೆಯ ಶಿರವ ಕಡಿದ ಪುರುಷಗೆ ನಮ್ಮೊಳು ಕರುಣ ಬರುವುದೆ 24 ಬಂದ ಸತಿಯಳ ಮೋರೆ ಅಂಗ ಕೆಡಿಸಿದ ತ- ನ್ನಂಗನೆ ಕಾಣದೆ ತಿರುಗಲೆಮಗೆ ಸನ್ಮತ 25 ಪತಿಯ ಸುತರನೆ ಬಿಟ್ಟೆವಶನ ವಸನವ ಅಗಲಿದ್ವಸುನಂದನಗೆ ನಮ್ಮೆಲ್ಲರುಸುರು ಮುಟ್ಟಲ್ಯೊ 26 ಬೌದ್ಧರೂಪದಿ ಸ್ತ್ರೀಯರ ಲಜ್ಜೆಗೆಡಿಸಿದನೆಂಬೊ ಸುದ್ದಿ ಬಲ್ಲೆವೊ ನಾವಿಲ್ಲಿದ್ದವರುದ್ಧವ 27 ಕಲಿಯ ಮನಸಿರೆ ಇವಗೆ ಕಲ್ಕ್ಯನೆಂಬೋರೊ ಕತ್ತಿ ಪಿಡಿದ ಪುರುಷಗೆ ನಮ್ಮೊಳು ಕರುಣ ಬರುವುದೆ 28 ಬ್ಯಾಡವೆನುತಲಿ ಅವಗೆ ಬೇಡಿಕೊಂಡೆವೊ ಗಾಡಿಕಾರನು ನಮ್ಮ ನೋಡದ್ಹೋದನು 29 ನಮ್ಮ ವಚನವ ಹೋಗಿ ಮನ್ನಿಸುದ್ಧವ ಪನ್ನಂಗಶಯನನ ಪಾದಕ್ಕಿನ್ನು ನಮಿಸೆವೊ 30 ಬಿಟ್ಹ್ಯಾಗಿರುವೊಣೋ ಭೀಮೇಶಕೃಷ್ಣನ ನಮ್ಮ ದೃಷ್ಟಿಗೆ ತೋರಿಸೊ ಮುಕ್ತಿ ಕೊಡುವೊ ದಾತನ31
--------------
ಹರಪನಹಳ್ಳಿಭೀಮವ್ವ