ಕ್ಲೇಶಮಾಡಲಿ ಬೇಡ ಮನವೆ ನೀನೂ
ದೇಶದೊಳಗೆ ಕೇಳು ಜ್ಞಾನಿಗಳ ಸಮ್ಮತಾ ಪ
ವಸಿಷ್ಠ ಮಹಾಋಷಿಗೆ ನೂರುಮಂದಿ ಸುತರು
ಅಸಮಸಾಹಸರು ಬಲು ಶೀಲಜ್ಞರು
ಕಾಲ ಮೃತ್ಯುವಿನ ಕೈ
ವಶವಾಗಿ ಹೋದರದು ನೋಡು ದು:ಖವ ಬಿಡು 1
ಕೃಷ್ಣ ಸೋದರಮಾವ ಮತ್ತೆ ಭೀಮಸೇನ
ಜೇಷ್ಠಪಿತ, ಪಾರ್ಥನು ಪಡೆದ ಶೂರ
ಇಷ್ಟು ಜನ ಇರಲಾಗಿ ಅಭಿಮನ್ಯು ದೇಹವನು
ಬಿಟ್ಟು ಪೋಗಲು ಒಬ್ಬರಾದರು ಉಳುಹಿದರೆ2
ಇಂಥವರಿಗೀತ್ಯರನು ನಿನಗಾವ ಸ್ವಾತಂತ್ರ್ಯ
ಸಂತೋಷವೆ ಬಡು ಧೈರ್ಯದಲ್ಲಿ
ಕಂತು ಜನಕ ನಮ್ಮ ವಿಜಯವಿಟ್ಠಲನಂಘ್ರಿ
ಅಂತರಂಗದಲಿಡು ಮುಂದಿನಗತಿ ಬೇಡು 3