ಒಟ್ಟು 2 ಕಡೆಗಳಲ್ಲಿ , 1 ದಾಸರು , 2 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಗಂಗೆ ಸನ್ಮಂಗಳಾಂಗೆ ರಂಗನಂಘ್ರಿಯ ಸಂಗೆ ತುಂಗೆ ಕಾರುಣ್ಯ ಪಾಂಗೆ ಅಸಿತಾಂಗೆ ತಿಂಗಳಾನನೆ ಪ ಪರಮೇಷ್ಟಿ ಪಾತ್ರಜಾತೆ ವರುಣನ್ನ ನಿಜದೈಯಿತೆ ಸುರ ಮುನಿಗಣವಿನುತೆ ವರದಾತೆ ಸರ್ವಖ್ಯಾತೆ ತರಣಿಸುತನ ಉದ್ಧರಿಸಿದೆ ಕರುಣದಿ ಧರೆಯೊಳು ನಿನಗೆ ಎ ದುರುಗಾಣೆ ಶರಣಾ 1 ಭಯ ಪಾಪ ತಾಪದೊರೆ ಜಯ ಜಯ ಗುಣಸಾರೇ ತ್ರಯಭುವನ ಉದ್ಧಾರೆ ಆಯುತಾರ್ಕವರ್ನ ನೀರೆ ನಯವ ಭಕುತಿ ಹೃ ದಯದೊಳಗಿತ್ತು ಸಹಾಯ ದಿನ ದಿನ ನಯನ ಶ್ರವಣವೇಣಿ 2 ಘನ್ನ ವಾರಣಾಸಿ ಕಾಸಿವನ ಆನಂದ ನಿವಾಸಿ ಪ್ರಣತ ಜನರಘನಾಶ ಮಣಿಭೂಷೆ ಸೌಖ್ಯರಾಸಿ ಅನನುತ ವಿಜಯವಿಠ್ಠಲನ ಮನಸಿನಲಿ ನೆನೆಸುವ ಸಾಧನ ಕೊಡು ವಿರಜೇ 3
--------------
ವಿಜಯದಾಸ
ಸಾಕು ಇಹಕೆನ್ನ ನೂಕದಿರು ತಂದೆ ಪರಾಕು ಮಾಡದೆ ಸಾಕು ದಯದಿಂದನೇಕ ಮಹಿಮನೆ ಏಕಾಮೇವಾದ್ವಿತೀಯ ಪ ಮಂಗಳಾಂಗ ಮಾತಂಗವರದ ವಿ- ಹಂಗಗಮನ ಭುಜಂಗಶಯನ ತು- ರಂಗವದನ ಶುಭಾಂಗ ರಿಪುಕುಲ- ಭಂಗ ಅಸಿತಾಂಗ ಅ.ಪ. ಶೃಂಗಾರಾಂಬುಧಿ ರಂಗ ನಿನ್ನಯ ಅಂಗಸಂಗಕ್ಕೆ ಅಂಗೀಕರಿಸಿದ ಸಂಗಿತರ ಚರಣಂಗಳಬ್ಜಕೆ ಭೃಂಗನಪ್ಪೆನೆಂತೊ 1 ಮಾನವಾವುದು ಸುಮ್ಮನಿರೆ ಪವ- ಮಾನವಂದಿತ ನಿನ್ನ ಪೋಲ್ವ ಸ- ಮಾನರಾರನು ಕಾಣೆ ಎನ್ನಭಿ- ಮಾನವಾಧೀಶ ಮಾನವಮಾನ- ಮಾನದಿಂದ ಕ್ರಮಾನುಸಾರನು ಮಾನಗೊಳಿಸದೆ ಮಾನವಿತ್ತು ದು- ಮ್ಮಾನವನೆ ಬಿಡಿಸೊ 2 ಬಲ್ಲೆ ನಿನ್ನಯ ಎಲ್ಲ ಪರಿಯಲಿ ಬಲ್ಲಿದರಿಗತಿ ಬಲ್ಲಿದನು ಸಿರಿ- ವಲ್ಲಭಾ ನೀನಲ್ಲದಿಲ್ಲೆಂದು ಎಲ್ಲ ತುತಿಸುತಿದೆ ಸೊಲ್ಲುವೊಂದನು ನಿಲ್ಲುತಲಿ ಕೇಳು ಎಲ್ಲು ಬಯಸದೆ ಇಲ್ಲಿಗೇ ಬಂದೆ ಕೊಲ್ಲು ಕಾಯ್ಸಿರಿ ವಿಜಯವಿಠ್ಠಲ ಬಲ್ಲದನು ಮಾಡೋ3
--------------
ವಿಜಯದಾಸ