ಮನೆ ಮನೆಯು ಹರಿಯ ಆಲಯವಾಗಬೇಕು ಪ
ಜನಗಳು ಸದಾಚಾರ ಶೀಲರಾಗಬೇಕು ಅ.ಪ
ಭೂತ ಸರ್ಗದಲಿ ಹೊಸ ನೀತಿಗಳ ಕಲ್ಪನೆಯು
ಘಾತಕವು ಲೋಕಹಿತಕೆಂದರಿಯದೆ
ಜಾತಿ ಬೇಡೆನ್ನುವರ ರೀತಿನೀತಿಗಳು ಆ
ಪಾತರ ರಮಣೀಯವೆಂಬುದ ತೋರಬೇಕು 1
ಅಸ್ತವಾಗಲಿ ಜಾತಿ ಮತ ಭೇದವೆಲ್ಲವು
ಸ್ವಸ್ಥವಾಗುವುದೆಂದು ಭಾರತವು ಎನ್ನುವರು
ಮಸ್ತಕದಿ ಕರವಿಟ್ಟು ಕುಳಿತುಕೊಳ್ಳುವ ತೆರದಿ 2
ಬಹುಮತವು ಎಮ್ಮದೆಂಬುವ ಮದವು ಬೆಳೆಯುತಿರೆ
ಸಹನವೇ ಸಾಧುಜನಗಳಿಗೆ ಶರಣ
ಇಹಪರಗಳಲ್ಲಿಯೂ ಪ್ರಸನ್ನ ಹರಿ ಸಲಹುವನು
ಕುಹಕ ಮಾರ್ಗವು ಬೇಧ ಸಹಜ ಧರ್ಮಗಳಿಂದ 3