ಒಟ್ಟು 4 ಕಡೆಗಳಲ್ಲಿ , 2 ದಾಸರು , 4 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ನಂದ ತೀರಥರಾಯ ಅಸ್ಮದ್ಗುರೋರ್ಗುರು ಕಾಯ ಪೊರೆಯಯ್ಯ ಜೀಯಾ ಪ ಪಾದ ಕಮಲಕೆ ನಂದ ಮಧುಕರ ನಂದದಲಿ ನಿಜ ಮಂದ ಜನರಿಗೆ ನಂದ ಕೊಡುವಾ ಮೂರ್ತಿ ಆನಂದಕಾರಿಯೆ ಅ.ಪ ಮಧ್ಯಮನಿ ದ್ವಿಜನಲ್ಲಿ ಉದ್ಭವಿಸಿ ನೀನೂ ಮಧ್ವಮುನಿ ಪೆಸರಲ್ಲಿ ದುರ್ವಾದಿಗಳ ಅ - ಶುದ್ಧ ಭಾಷ್ಯಗಳಲ್ಲಿ ಜಯಪಡೆದ ನಿನ್ನಾ ಶುದ್ಧ ಭಾಷ್ಯಗಳಲ್ಲಿ ಭಕ್ತಿಯಿಂದಲ್ಲಿ ಶುದ್ಧ ಶ್ರೀ ಹರಿಮತದ ಶುಭ ಸಿದ್ಧಾಂತ ಸ್ಥಾಪಿಸಿ ಜಗದಿ ಜೀವರ ಸಿದ್ಧಗಣಕಧಿನಾಥನೆಂದೂ ಪ್ರ - ಸಿದ್ಧಗೈಸಿದಿ ಶುದ್ಧ ಮೂರುತಿ 1 ಬದರಿಕಾಶ್ರಮವನ್ನು ಐದಿದ್ಯೊ ಮುದದಿ ಪದುಮನಾಭನನ್ನು ಬಲಗೈಸಿ ನಿನ್ನ ಬದಿಗ ಜನರಿಗಿನ್ನೂ ಸುವಾಕ್ಯ ದಿಂದಲಿ ಪೇಳಿದದು ನಿಜ ಪದುಮನಾಭನೆ ಪರಮದೈವನು ಪದುಮೆ ಮೊದಲು ಬ್ರಹ್ಮಾಂತ ಜೀವರ ಪದದಿ ಗುಣದ ತಾರತಮ್ಯವ ಹೃದಯ ಮಂದಿರದಲ್ಲಿ ಪೇಳಿದ 2 ಘನ್ನಮಹಿಮನೆ ಎನ್ನಮನ ವಚನ ಕಾಯದಿ ಇನ್ನು ಮಾಡುವುದನ್ನು ಸ್ವೀಕರಿಸಿ ಹರಿಗೆ ಮುನ್ನ ನೀಡೆಲೊ ಚೆನ್ನವಾಗಿ ನಿಜಫಲ ನಿನ್ನ ಜನರೀಗಿನ್ನ ನೀಡಯ್ಯ ಮುನ್ನ ನಿನ್ನ ಒಳಗೆ ನಿರುತ ಇರುವ ಘನ್ನ ಗುರುಜಗನ್ನಾಥವಿಠಲನ ಎನ್ನ ಮನದಲಿ ತೋರಿಸೆಂದು ನಿನ್ನ ಪದಯುಗವನ್ನು ಭಜಿಸಿದೆ 3
--------------
ಗುರುಜಗನ್ನಾಥದಾಸರು
ಮುದ್ದು ಮೋಹನರಾಯಾ | ಅಸ್ಮದ್ಗುರೋರ್ಗುರುಶುದ್ಧ ಜನ ಸಂಪ್ರೀಯ | ನಿಮಗೊಂದಿಸುವೆ ಭವಬಂಧ ಪರಿಹರಿಸಯ್ಯಾ | ಬುಧರಿಂದಗೇಯಾ ಪ ಪಂಕಜ ಮೋದ ಪಾದ ನಂಬಿದೆ ಅ.ಪ. ದೇವಮುನಿನುತ ಪೀಠಾ | ವರ ಚಿಪ್ಪಿಗಿರಿಯಲಿ ದಿವ್ಯ ಭವಹರ ಮಂತ್ರಾ | ಅಂಕಿತ ಸುತಾರಕಪ್ರವರ ಪೊಂದಿದೆ ಪೋತ | ಜಪಿಸುತ್ತ ಮನದೀಶರ್ವವಂದ್ಯ ವಿಧಾತಾ | ಪಾದಾಬ್ಜ ಭಕುತಾ ||ಶ್ರೀ ವರರ ಕರಕಮಲಜಾತನೆ ಭುವಿಯ ಸತ್ತೀರ್ಥಗಳ ಚರಿಸುತ ಪಾವಮಾನಿ ಮತಾಬ್ಧಿಜಾತರ | ಪಾವನವ ಮಾಡ್ಯವನಿಯಲಿಮೆರೆದೆ 1 ಭೃಂಗ ಮುದ್ದು ಮೋಹನಾರ್ಯ ಗುರುರೂಪದೇಶವ ವಿಹಿತ ಮಾರ್ಗದಿಗೈದು ತಂದೆ ಮುದ್ದು ಮೋಹನಾಭಿಧನೆಂದು ಕರೆದೆಯೊ 2 ಗುರುವಿನಾಣತಿಯನ್ನಾ | ಪೊಂದುತಲಿಸ್ವಪ್ನದಿಸಿರಿವಿಜಯ ವಿಠಲನ್ನಾ | ನಿಜಪುರದಿ ನಿಲಿಸಿನಿರುತ ಅರ್ಚನೆಯನ್ನಾ | ಸ್ಥಿರಪಡಿಸಿ ಮುನ್ನಅರಿತು ಮನದಲಿ ನಿನ್ನ | ಉತ್ಕ್ರಮಣವನ್ನಾ ||ಶೌರಿ ದಾಮೋದರನ ಮಾಸದಿ | ವರದತುರ್ದಶಿ ಅಸಿತಪಕ್ಷದಿಸಿರಿ ಗುರೂ ಗೋವಿಂದ ವಿಠಲನ | ಚರಣ ಸರಸಿಜ ಸೇರಿ ಮೆರೆದೆ 3
--------------
ಗುರುಗೋವಿಂದವಿಠಲರು
ಮುದ್ದು ಮೋಹನರೇಯ | ಅಸ್ಮದ್ಗುರೋರ್ಗುರುಮುದ್ದು ಮೋಹನ ಪ್ರೀಯ | ಲೋಕೈಕ ವಂದ್ಯನೆಮಧ್ವಮುನಿ ಸಂಪ್ರೀಯ | ಕಾಯಯ್ಯ ಜೀಯ ಪ ಉದರ ವಾಸಿತ ಸೃಜ್ಯ ಜೀವರ | ಸದಯದಿಂದಲಿ ಸೃಜಿಸಲೋಸುಗಮುದದಿ ಬಯಸುತ ಶ್ರೀಧರ ಹರಿ | ವದಗಿ ಚತುರ ವ್ಯೂಹ ರಚಿಸಿದ ಅ.ಪ. ಮಾಧವಗೆ ಪ್ರಿಯೆ ಅಂಭ್ರಣೀ | ಪ್ರಲಯಾಬ್ದಿ ಶಯನನಆದರದಿ ತ್ರಯಕಭಿಮಾನಿ | ತುತ್ತಿಸಲು ಜಗವನುಮೋದದಲಿ ಸೃಜಿಸುವ ಹವಣೀ | ಶ್ರೀಹರಿಯು ತಾನುಗೈದು ರೂಪ ಸುಧಾರಣೀ | ವಾಸುದೇವಭಿಧಾನಿ ||ಆದಿ ಸೃಷ್ಟಿಯ ಮಾಡಲೋಸುಗ | ಆದಿ ಮಾಯಾತ್ಮಿಕೆಯು ಲಕ್ಷ್ಮಿಯಮೋದದಿಂದಲಿ ಕೂಡುತಲೆ ತಾ | ಸಾಧಿಸಿದ ತಾರತಮ್ಯ ಸೃಷ್ಟಿಯ 1 ಕೃತಿ ಕೃತಿ ಶ್ರದ್ಧೆಯರಾಗ ಸೃಜಿಸಿದ 2 ಸೂತ್ರ ಶ್ರದ್ಧೆಯರಿಂದ | ಕಾಲಮಾನಿಯ ನಂದಗರುಡನ್ನ ಸೃಜಿಸುತ ನಂದ | ಬೆರೆದು ಶಾಂತಿಯಲಿಂದ ||ಧೀರ ಗುರು ಗೋವಿಂದ ವಿಠಲನು | ಶೂರ ಅನಿರುದ್ದಾಭಿಧಾನದಿನಾರ ವಾಣಿ ಬ್ರಹ್ಮರಿಂದಲಿ | ಮೂರು ವಂದರ ವ್ಯೂಹ ರಚಿಸಿದ 3
--------------
ಗುರುಗೋವಿಂದವಿಠಲರು
ವ್ಯಾಸರಾಯಾ ಅಸ್ಮದ್ಗುರೋ ವ್ಯಾಸರಾಯಾ ಪವಿಶೇಷ ಙ್ಞÕನ ಭಕ್ತಿ ಲೇಸಾಗಿ ಸಲಿಸಯ್ಯಾ ಅ.ಪದಾಸನಾಮಕದ್ವಿಜದೇಶಮುಖನ ಮನಿ-ಕೂಸಾಗಿ ಜನಿಸಿದೆ ಭೂಸ್ಪರ್ಶವಿಲ್ಲದೆ 1ಶ್ರೀಪಾದರಾಯರು ಈಪರಿನಿನ್ನನುಕಾಪಾಡಿ ನವವರ್ಷ ಭೂಪತಿ ಮಾಡಿದರೋ 2ವಸುದೇವ ಸುತನನ್ನು ಸುಸಮಾಧಿಯಲಿ ಪಡೆದೆ 3ಕಲೆಯಂತೆ ದಿನದಿನದಲಿ ವೃದ್ಧನಾದೆ ನೀ 4ಚಂಪಕತರುಮುಖ್ಯ ಕಂಪಿತ ನದಿಯುತಪಂಪಾಕ್ಷೇತ್ರದಿ ಮಹಾ ಸಂಪತ್ತಿನಿಂದಿದ್ದೆ 5ತರ್ಕಿಸಿ ಯಂತ್ರಸ್ಥ ಚಕ್ರದಿ ಬಂಧಿಸಿದೆ 6ಮಧ್ವರಾಯರ ತಂದು ಸಿದ್ಧಮಾಡಿ ಇಟ್ಟೆ 7ಮಂದಜನಕೆÀ ಸುಧಾ ಛಂದಾಗಿ ಇದರರ್ಥಪೊಂದದೆಂದು ನೀನು ಚಂದ್ರಿಕೆ ರಚಿಸಿದೆ 8ಇನಿತೆ ಮಹಾಮಹಿಮೆ ಘನವಾಗಿ ಜನರಿUಅನುಭವ ಮಾಡಿಸಿದೆ ಅನುಪಮ ಚರಿತನೆ 9ಶುಭಮಯ ಸ್ಥಳದಲ್ಲಿ ಅಭಯನಾಗಿ ನಿಂತೆ ನೀ 10ಛಂದದ ನವಶುಭವೃಂದಾವನದೊಳಿದ್ದೆ 11ಇಂದುನಿಮ್ಮಯಪಾದಪೊಂದಿ ಎನ್ನಯವೃಜಿನ-ವೃಂದ ಪೋದವು ಅರ್ಕನಿಂದ ತಿಮಿರದಂತೆ 12ವಂದಿಸಿ ಬೇಡುವೆ ನಂದದಿ ಸಲಹಯ್ಯ 13ಇಂದುರಕ್ಷಕರಿಲ್ಲವೆಂದು ನಿನ್ನನು ಸಾರ್ದೆ14ಯಿಂದ ಕರೆದು ಕಾಯೋ ನಂದಾದಾಯಕ ನೀನೆ 15ದೃಷ್ಟಿ ಪಾಲಿಸೊ ಸರ್ವೋತ್ಕøಷ್ಟ ಮಹಿಮ ನೀನೆ 16ಮಾತು ಲಾಲಿಸೊ ನಿಜತಾತ ನೀನೆ ಸೀತಾ -ನಾಥ ಗುರುಜಗನ್ನಾಥವಿಠಲನಾಣೆ 17
--------------
ಗುರುಜಗನ್ನಾಥದಾಸರು