ಒಟ್ಟು 22 ಕಡೆಗಳಲ್ಲಿ , 17 ದಾಸರು , 22 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಶ್ರೀಮದ್ರಾಮಾಯಣ ಮಂಗಳಂ ಮಂಗಳಂ ಮಹಾನುಭಾವಗೆ ಮಂಗಳಂ ಲೋಕಮಾತೆ ಸೀತೆಗೆ ಮಂಗಳಂ ಶತ್ರುಘ್ನ ಭರತಗೆ ಮಂಗಳಂ ಸೌಮಿತ್ರಿರಾಮಗೆ ಪ ದಶರಥನ ಉದರದಲಿ ಜನಿಸುವೆನೆಂದು ವರವನಿತ್ತ ರಾಮಚಂದ್ರಗೆ 1 ಭರತಸಹವಾಗಿ ಜನಿಸಿದ ರಾಮಚಂದ್ರಗೆ 2 ಜಾತಕರ್ಮವು ನಾಮಕರಣವು ಚೌಲ ಉಪನಯನಗಳ ಮಾಡಿ ವಿಶ್ವಾ ಮಿತ್ರರೊಡನೆ ಸಕಲ ವಿದ್ಯವ ಕಲಿಯೆ ಪೊರಟ ರಾಮಗೆ3 ಬಲ ಅತಿಬಲವೆಂಬ ವಿದ್ಯವ ವಿಶ್ವಾಮಿತ್ರರೊಡನೆ ಕಲಿತು ಅಶ್ವಿನಿದೇವತೆಗಳಂದದಿ ಬಂದ ಸೌಮಿತ್ರಿರಾಮ್ರಗೆ 4 ಭರದಲಿ ಅನಂಗನಾಶ್ರಮವನು ಪೊಕ್ಕು ಸರಯು ನದಿಯನು ದಾಟಿ ಬರದೂಷಣಜಾ ದೇಶದೊಳಗುಳ್ಳ ತಾಟಕಾಂತಕ ರಾಮಚಂದ್ರಗೆ 5 ಅಸ್ತ್ರವನ್ನು ಗ್ರಹಿಸಿ ಬೇಗನೆ ಸಿದ್ಧಾಶ್ರಮಕ್ಕೆ ನಡೆತಂದು ಸುಭಾಹುವ ನು ಸಂಹರಿಸಿ ಭರದಿ ಮಾರೀಚನ ಹಾರಿಸಿದ ರಾಮಗೆ 6 ವಿಶ್ವಾಮಿತ್ರರ ಯಜ್ಞ ಪಾಲಿಸಿ ಕುಶನ ವಂಶವಿಸ್ತಾರವ ಕೇಳಿ ಆಸರ [ಯು]ನದಿಯ ದಾಟಿ ಭರದದಿತಿಯಾಶ್ರಮಕೆ ಬಂದ ರಾಮಗೆ 7 ಮರುತ್ತ ಜನ್ಮವ ಕೇಳಿ ಅಹಲ್ಯೆಯನ್ನು ಪಾವನ ಮಾಡಿ ಬಂದ ರಾಮಗೆ 8 ಜನಕ ವಂದಿಸಿ ಧನ್ಯನೆನ್ನಲು ವಿಶ್ವಾಮಿತ್ರರು ವೃತ್ತಾಂತ ಹೇಳಿ ಧನುವ ತರಿಸಲು ನೋಡಿ ಕ್ಷಣದಿಮುರಿದಾ ರಾಮಚಂದ್ರಗೆ 9 ಕರವ ಪಿಡಿದು ಪೊರಟ ರಾಮಗೆ 10 [ಬೇಗ]ಮಾತಾಪಿತರ ಮಾತನಡೆಸಿ ಪ್ರೀತಿತೋರಿದ ಸೀತಾರಾಮಗೆ 11 ಕಂಡವರ ಮನದಲ್ಲಿ ರಮಿಸುವ ಪುಂಡರೀಕಾಕ್ಷನಿಗೆ ರಾಜ್ಯವ ಕೊಡುವೆನೆ[ನುತ] ದಶರಥ ವ್ರತವನಾಚರಿಸಿದ ರಾಮಚಂದ್ರಗೆ 12 ಕೈಕೆ ಪೂರ್ವದ ವರವ ಸ್ಮರಿಸಿ ಭರತನಿಗೆ ರಾಜ್ಯವನು ಬೇಡಿ ರಾಮನರ ಣ್ಯಕ್ಕೆ ಪೋಗೆನೆ ಬೇಗ ಪೊರಟ ಶ್ರೀರಾಮಚಂದ್ರಗೆ 13 ಮಾತೆಯನು ಬಹುವಿಧದಿ ಮನ್ನಿಸಿ ಪಿತನ ಪ್ರತಿಜ್ಞೆಯನು ಪಾಲಿಸಿ ಸೀತೆಲಕ್ಷ್ಮಣರೊಡನೆ ವನವಾಸಕ್ಕೆ ಪೊರಟ ರಾಮಚಂದ್ರಗೆ 14 ಪುರದ ಜನರನು ಸಂತವಿಟ್ಟು ಗುಹನ ಸಖ್ಯದಿ ನದಿಯ ದಾಟಿ ಭರದಿ ಭಾರದ್ವಾಜರ ಕಂಡು ಚಿತ್ರಕೂಟಕ್ಕೆ ಬಂದ ರಾಮಗೆ 15 ಅರಸು ಸ್ವರ್ಗವನೈದೆ ಭರತನಕರಸಿ ಕರ್ಮವನೆಲ್ಲ ಕಳೆದು [ವರ] ಮಾತೆಗೆ ಭಾಷೆ ಕೊಟ್ಟು ತಮ್ಮನಾಲಿಂಗಿಸಿದ ರಾಮಗೆ 16 ಭರತನಂಕದೊಳಿಟ್ಟು ಪ್ರೇಮದಿ ಮನ್ನಸಿ ಮೃದುವಾಕ್ಯದಿಂದ ಗುರುಗಳನುಮತದಿಂದ ಪಾದುಕೆಯಿತ್ತು ಕಳುಹಿದ ರಾಮಚಂದ್ರಗೆ 17 ಬೇಗನೆ ಚಿತ್ರಕೂಟವ ಬಿಟ್ಟು ಅತ್ರಿ ಯಾಶ್ರಮಕೆ ಬಂದು ಅಂಗರಾಗಾರ್ಪಣವನೆಲ್ಲ ಅಂಗೀಕರಿಸಿದ ರಾಮಚಂದ್ರಗೆ 18 ದಂಡಕಾರಣ್ಯವನ್ನು ಪೊಕ್ಕು ಉದ್ದಂಡವಿರಾಧನ್ನ ಕೊಂದು ಕಂಡು ಇಂದ್ರನ ಶರಭಂಗರಿಗೆ ಮುಕ್ತಿಯನಿತ್ತ ಶ್ರೀರಾಮಚಂದ್ರಗೆ 19 ಋಷಿಗಳಿಗೆ ಅಭಯವನು ಇತ್ತು ಲೋಕಮಾತೆಯ ನುಡಿಯ ಕೇಳಿ ಋಷಿಮಂಡಲವನು ಪೊಕ್ಕು ಬಂದು ಸುತೀಕ್ಷ್ಣರ ಕಂಡ ರಾಮಗೆ 20 ಅಸ್ತ್ರವನು ಕೊಡಲು ಗ್ರಹಿಸಿ ಪಂಚವಟಿಗೆ ಬಂದ ರಾಮಗೆ 21 ಶೂರ್ಪನಖಿ ರಘುಪತಿಯ ಮೋಹಿಸೆ ಕರ್ಣನಾಸಿಕವನ್ನು ಛೇದಿಸಿ ದುರುಳ ಖರದೂಷಣರ ಕೊಂದು ಸತಿಯನಾಲಿಂಗಿಸಿದ ರಾಮಗೆ 22 ದುರುಳ ಖಳನು ಜಾನಕಿಯ ಕದ್ದೊಯ್ಯೆ ಮಾರಿಚನ್ನ ಕೊಂದು ಬರುತ ಮಾರ್ಗದಿ ಗೃಧ್ರರಾಜಗೆ ಮುಕ್ತಿಯಿತ್ತ ಶ್ರೀರಾಮಚಂದ್ರಗೆ 23 ಕಬಂಧನಾ ವಾಕ್ಯವನು ಕೇಳಿ ಮಾರ್ಗದಲಿ ಅಯಮುಖಿಯ ಭಂಗಿಸಿ ಶಬರಿ ಭಕ್ತಿಯೊಳಿತ್ತ ಫಲವನು ಸವಿದು ಮುಕ್ತಿಯನಿತ್ತ ರಾಮಗೆ 24 ಸೀತೆಯರಸುತ ಮಾರ್ಗದಲಿ ಋಷ್ಯಮೂಕಪರ್ವತವ ಸೇರಿ ಪಂ ಪಾತೀರದಿ ತಮ್ಮನೊ[ಂದಿ]ಗೆ ನಿಂತ ಶ್ರೀರಘುರಾಮಚಂದ್ರಗೆ 25 ಪಂಪಾಪುಳಿನದ ವನವಕಂಡು ಪಂಕಜಾಕ್ಷಿಯ ನೆನೆದು ವಿರಹ [ತಾಪದರೆ] ಬಂದ ಆಂಜನೇಯಗೆ ಸಖ್ಯ ನೀಡಿದ ರಾಮಚಂದ್ರಗೆ 26 ಅಭಯವನು ಇತ್ತು ರವಿಜಗೆ ಏಳು ತಾಳೇಮರವ ಛೇದಿಸಿ ದುಂ ದುಭಿಯ ಕಾಯವನು ಒಗೆದ ಇಂದಿರಾಪತಿ ರಾಮಚಂದ್ರಗೆ 27 ಇಂದ್ರಸುತನು ರವಿಜನೊಡನೆ ದ್ವಂದ್ವಯುದ್ಧವ ಮಾಡುತಿರಲು ಒಂದುಬಾಣದಿಂದ ವಾಲಿಯ ಕೊಂದು ಕೆಡಹಿದ ರಾಮಚಂದ್ರಗೆ 28 ಮುದ್ರೆಯುಂಗುರವಿತ್ತು [ಅ]ಸಾಧ್ಯ ಇವನೆಂತೆಂದ ರಾಮಗೆ 29 ಬೆಳೆದ ಹನುಮಗೆ 30 ಶತ್ರುಪಟ್ಟಣವ ಕಂಡು ಛಾಯೆಯ ಕುಟ್ಟಿ ಸುರಚಿಯುಪಾಯದಿಮನ್ನಿ ಸುತ್ತ ಮೈನಕನ ಭರದಲಿ ಲಂಕಿಣಿಯನಡಗಿಸಿದ ಹನುಮಗೆ 31 [ವೀರ] ಹನುಮಗೆ 32 ದುರುಳ ರಾ ವಣನ ನಿಂದಿಸಿ ಪುರವಸುಟ್ಟಾ ವೀರಹನುಮಗೆ 33 ಸೀತೆಯೊಡನೆ ಗುರುತಕೇಳಿ ಸಮುದ್ರತೀರಕೆ ಬಂದು ಬೇಗನೆ ಜಾಂಬ ವಂತ ಅಂಗದರ ಕೂಡಿ ಮಧುವನವ ಭಂಗಿಸಿದ ಹನುಮಗೆ 34 ಕಂಡೆ ಲೋಕಮಾತೆಯನನ್ನೆನ್ನುತ ಬಂದು ಮುದದಿ ವಂದಿಸಿ ಇತ್ತ ಹನುಮನನಾಲಿಂಗಿಸಿದವಗೆ 35 ಬಂದ ರಾಮಗೆ 36 [ಭಕ್ತ] ವಿಭೀಷಣಗೆ ಅಭಯವನಿತ್ತು ಶರಧಿಗೆ ಸೇತುವೆಯನ್ನು ಬಂಧಿಸಿ ಮುತ್ತಿ ಲಂಕಾಪುರವ ಸಂಧಿಗೆ ಅಂಗದನ ಕಳುಹಿಸಿದ ರಾಮಗೆ 37 ಇಂದ್ರ[ಜಿತ್ತು]ವೊಡನೆ ಕಾದಿ ಸರ್ಪಾಸ್ತ್ರದಿಂದ ಬಿಡಿಸಿಕೊಂಡು [ಆ]ದುರುಳ ರಾವಣನ ನಡುಗಿಸಿ ಕಿರೀಟವನು ಭಂಗಿಸಿದ ರಾಮಗೆ 38 ಕುಂಭಕರ್ಣನ ತುಂಡುತುಂಡಾಗಿ ಕೊಂದುಕೆಡಹಿದ ರಾಮಚಂದ್ರಗೆ 39 ಕೊಂದು ವಜ್ರದಂಷ್ಟ್ರ ಆಕಂಪ ದೇವಾಂತಕ ನರಾಂತಕರನ್ನು ಮ ಹೋದರ ಮಹಾಪಾಶ್ರ್ವ ಅತಿಕಾಯ ತ್ರಿಶಿರಸ್ಸನ್ನು ಕೊಂದ ರಾಮಗೆ 40 ಮಾಯೆಯುದ್ಧದಿ ಮೇಘನಾಥನು [ಅನುಜನ] ಬ್ರಹ್ಮಾಸ್ತ್ರದಲಿ ಕಟ್ಟಲು ವಾಯುನಂದನನಿಂದ ಸಂಜೀವನವ ತರಿಸಿದ ರಾಮಚಂದ್ರಗೆ 41 ಮಾಯಾಸೀತೆಯ ಶಿರವನರಿಯಲು ವಿಭೀಷಣನ ಉ ಪಾಯದಿಂದ ಇಂದ್ರಜಿತ್ತು ಶಿರವಕಡಿದ ತಮ್ಮನಾಲಂಗಿಸಿದ ರಾಮಗೆ 42 ಮೂಲಬಲವನು ಕಡಿದು ರಾವಣನೊಡನೆ ಯುದ್ಧವ ಯೋಚಿಸೆ ಕಡಿದ ರಾಮಗೆ 43 ರಾವಣಾನೆಂಬ ಗಂಧಹಸ್ತಿಯ ರಾಮಕೇಸರಿ ಬಂದು ಮುರಿಯಲು ಸುರರು ಶಿರದಿ ಧರಿಸಿದ ರಾಮಚಂದ್ರಗೆ 44 ವಿಭೀಷಣಗೆ ಪಟ್ಟವನು ಕಟ್ಟಿ ಸೀತೆಯೊಡನೆ ಪ್ರತಿಜ್ಞೆ ಮಾಡಿ ರೆ ಬ್ರಹ್ಮರುದ್ರಾದಿಗಳು ಸ್ತುತಿಸಲು ತಂದೆಗೆರಗಿದ ರಾಮಚಂದ್ರಗೆ 45 ಸೀತೆಯಂಕದೊಳಿಟ್ಟು ಕಪಿಗಳಸಹಿತ ಪುಷ್ಪಕವೇರಿ ಭರದಿ [ಬ ರುತ್ತ] ಭಾರದ್ವಾಜರಿಗೆರಗಿ ಭರತನ ಮನ್ನಿಸಿದ ರಾಮಗೆ 46 ಕೈಕೆಸುತ ಕೈಮುಗಿದು ಕಿಶೋರ ಭಾರವ ತಾಳಲಾಗದೆಂದಾ ಳುತ [ಲಾ]ಯಿತ್ತ ರಾಜ್ಯವನ್ನು ಕೊಡಲು ಗ್ರಹಿಸಿದ ರಾಮಚಂದ್ರಗೆ 47 ಉಟ್ಟ ಮಡಿಯ ಜಟೆಯನುತಾ ಶೋಧಿಸೆ ಸೀತೆ ಸಕಲಾಭರಣ ತೊಟ್ಟು ಸುಗ್ರೀವ ಸಕಲರೊಡನೆ ರಥವನೇರಿದ ರಾಮಚಂದ್ರಗೆ 48 ಸರಮೆಪತಿ ಸೌಮಿತ್ರಿ ಚಾಮರ ಪಿಡಿಯೆ ಶತ್ರುಘ್ನ ಛತ್ರಿಯನು ಭರತ ಸಾರಥ್ಯವನು ಮಾಡಲು ಪುರಕೆತೆರಳಿದ ರಾಮಚಂದ್ರಗೆ 49 ರಾಜಗೃಹವನು ತೋರಿ ರವಿಜಗೆ ಶರಧಿಯುದಕಗಳೆಲ್ಲ ತರಿಸಿ [ವಿ ರಾಜಿಸಿ] ಪೀಠದಿ ಸೀತೆಯೊಡನೆ ವೊಪ್ಪಿದಾ ರಘುರಾಮಚಂದ್ರಗೆ 50 ವಸಿಷ್ಠ ಮೊದಲಾದ ಸಪ್ತ ಋಷಿಗಳು ಲಕ್ಷ್ಮೀಪತಿಗಭಿಷೇಕ ಮಾಡಲು ರಾಮಚಂದ್ರಗೆ 51 ಪಾದ ಪಿಡಿದಿಹ ರಾಮಚಂದ್ರಗೆ
--------------
ಯದುಗಿರಿಯಮ್ಮ
ಎಂದು ಕಾಂಬುವೆ ನಿನ್ನ ಚರಣ ನಾರಾಯಣತಂದು ತೋರಯ್ಯ ನಾ ಬಂದೆನು ಶರಣ ಪ ನಿತ್ಯ ಒತ್ತುವ ಚರಣತೋರ ಗಂಗೆಗೆ ಜನ್ಮ ಕೊಟ್ಟಂಥ ಚರಣಮೂರು ಲೋಕವ ಹಿಡಿದ ಚರಣನಾರಿ ಅಹಲ್ಯೆಯ ಪೊರೆದ ಚರಣ 1 ಪ್ರ್ರಳಯ ಕಾಲದಿ ನೆಕ್ಕುತಿಹ ಚಿಕ್ಕ ಚರಣಇಳೆಗೆ ಸುಯೋಧನನಿಳಿಸಿದ ಚರಣಎಳೆಯ ಧ್ರುವ ತಾ ಕಂಡ ಚರಣತುಳಸಿ ವನದಲಿ ಕುಣಿದ ಚರಣಸುಳಿದು ಭಕ್ತರ ಪೊರೆವ ಚರಣ 2 ಅಖಿಲಾಂಡದ ಸೃಷ್ಟಿ ಸ್ಥಿತಿ ಲಯ ಕಾರಣಭಕುತರು ಕರೆಯಲೋಡುವ ದಿವ್ಯ ಚರಣಶಕಟ ದೈತ್ಯನ ಒದೆದ ಚರಣಯುಕುತಿ ಶಕುತಿಗೆ ಬರದ ಚರಣಯುಕುತಿ ಪಥವನು ತೋರ್ಪ ಚರಣಪ್ರಖರ ಗದುಗಿನ ವೀರನಾರಾಯಣ 3
--------------
ವೀರನಾರಾಯಣ
ಎನ್ನ ಕಂಗಳಿಗೆ ತೋರೊ ಶ್ರೀಕೃಷ್ಣಪ. ಕರಿಯ ಮೊರೆ ಲಾಲಿಸಿದಿ ಬೇಗನೆನೆರೆದ ಸಭೆಯಲಿ ದ್ರೌಪದಿಗೆ ಅಭಯವನಿತ್ತಿ ಅಡವಿಅರಣ್ಯದಿ ಅಹಲ್ಯೆಯ ಸಲಹಿದಿಮುಚುಕುಂದನ ರಕ್ಷಿಸಿದಿ 1 ಸೂರ್ಯನುದಿಸುತ ಅಂತ್ಯಕಾಲದಿಶರತಲ್ಪದಲಿ ಅವಗೆ ತೋರಿದಿಶರಣು ಕಾಳೀಪಣೆಯ ಮೇಲಿಟ್ಟ ಮುದ್ದುಚರಣವ ತೋರೊ ರಂಗನಾಥ 2 ಪುಟ್ಟ ಪ್ರಹ್ಲಾದನ ಸಲಹಿದಿಪಟ್ಟವನು ವಿಭೀಷಣನಿಗೆ ಸ[ಲಿಸಿ]ದಿನೆಟ್ಟನಡವಿಲಿ ಬಂದ ಧ್ರುವನಆದರಿಸಿ ಕಾಯ್ದಿ ರಂಗನಾಥ 3 ಘನವಾಗಿ ಕ್ಷೀರಾಬ್ಧಿಯಲಿ ನಿಂತಿಉನ್ನಂತವಾಗಿದ್ದ ಸತ್ಯಲೋಕವನಾಳಿದಿ ಪ್ರಸನ್ನನಾಗಿಕ್ಷ್ವಾಕು ಕಾಯಗೆಒಲಿದ ಪಾದವ ತೋರೊ ರಂಗನಾಥ 4 ಎಷ್ಟು ಹೇಳಲಿ ನಿಮ್ಮ ಮಹಿಮೆಯಸೃಷ್ಟಿಸ್ಥಿತಿಲಯವನ್ನು ಅಳೆದೀ ಪುಟ್ಟ ಪಾದವ ಎನ್ನ ಮನದಲಿಇಟ್ಟು ದಯಮಾಡೊ ಶ್ರೀಕೃಷ್ಣ ರಂಗನಾಥ 5 ದÀಕ್ಷಿಣಮುಖವಾಗಿ ಪವಡಿಸಿದಿ ದೇವಶಿಖಾಮಣಿ ಏಳೈ ಬಂದ ಭಕ್ತರಿ-ಗೆಲ್ಲ ಅಭಯ ಹಸ್ತವ ಕೊಡುವಿರಾಜೀವನೇತ್ರ ಹಯವದನ[ರಂಗನಾಥ] 6
--------------
ವಾದಿರಾಜ
ಕರವ ಮುಗಿವೆ ಚರಣಕ್ಕೆರಗುವೆ ಭರದಿ ರಕ್ಷಿಸು ಬಿಡದೇ ಶ್ರೀ ಪ ಮಾನವ ಕಾಯ್ದೆಯೊ ಹೀನರ ಮದಗರ್ವವನೆಲ್ಲ ಅಳಿದೆಯೊ ಧ್ಯಾನ ಮಾಡುವ ಸ್ವಾನುಭವಿಗಳ ಸ್ಥಾನ ಹೃದಯವಾಸ ಶ್ರೀ 1 ಧ್ಯಾನಿಸಿವಂಥಾ ಗಜರಾಜನ ಕಾಯ್ದೆ ಮಾನಿನಿ ಅಹಲ್ಯೆಯ ಪಾದದೊಳುದ್ಧರಿಸಿದೆ ದೀನರಕ್ಷಕ ಬಿರುದ ಪೊತ್ತ ವಿ ಜ್ಞಾನದೊಳಗಿರಿಸೆನ್ನಾ 2 ಶಬರಿಯ ಭಕ್ತಿಗೆ ಮೆಚ್ಚನೀ ಬಂದೆಯೊ ಬದರಿಯ ಹಣ್ಣನೆ ಸವಿಸವಿ ದುಂಡೆಯೊ ವಿಭು ಪರಮಾನಂದಾ ಪ್ರಭೆಯೊಳಗಿರಿಸಿದೆ 3 ಸ್ವರ್ಣಕಶ್ಯಪನ ಸೊಕ್ಕಗಿಸಿದೆ ದೇವಾ ಮನ್ನಿಸಿ ಪಾಂಡವರೈವರ ಸಲಹುವಾ ಚನ್ನ ಗೋಪಿಯರ ಕೂಡಿ ಮನ್ನಣೆಕ್ರೀಡೆಯ ನಾಡಿ 4
--------------
ಶಾಂತಿಬಾಯಿ
ದಾಮೋದರ ವಿಠಲನೆ | ಸಲಹ ಬೇಕಿವಳಾ ಪ ಸನ್ನುತ ಹರಿಯೆ | ಸ್ವಾಮಿ ಪಾಲಿಪುದೊ ಅ.ಪ. ತರಳೆ ದ್ರೌಪತಿ ವರದ | ಕರಿಯು ಮೊರೆಯಿಡೆ ಕಾಯ್ದವರ ಅಹಲ್ಯೆಯ ಪೊರೆದ | ತರಳ ಧ್ರುವ ವರದಕರುಣದಿಂದಲಿ ಮನದ | ಪರಿಪರಿಯ ಸತ್ಕಾಮಗರೆದು ಪಾಲಿಪುದಿವಳ | ಶಿರಿ ರಾಮಚಂದ್ರಾ 1 ಪತಿ ಸೇವೆ ಪರಳೆನಿಸು | ಗತಿಗೋತ್ರ ನೀನೆನಿಸುಸತತ ನಿನ್ನಯ ನಾಮ | ಸ್ಮøತಿಗೊದಗಿಸೊತತುವೇಶರೊಲಿಮೆಯಲಿ | ಸತತ ಗೈಯ್ಯುವ ಕಾರ್ಯವಿತತವಾಗಲಿ ನಿನ್ನ | ಹಿತಸೇವೆ ಎಂದೂ 2 ಕಾಲ ಕಾಲಕೆ ನಿನ್ನಓಲಯಿಪ ಭಾಗ್ಯದಲಿ | ಕೀಲಿಪುದು ಮನವಾ 3 ಮೂರೆರಡು ಭೇದಗಳ | ತಾರತಮ್ಯವನರುಹಿತೋರೊ ತವರೂಪ ಹೃ | ದ್ವಾರಿಜದನಡುವೇಕಾರುಣಿಕ ನೀನೆಂದು | ಸಾರುತಿವೆ ವೇದಗಳುಮಾರಾರಿ ಸಖ ನಿನ್ನ | ಕಾರುಣ್ಯ ತೋರೋ 4 ಪಾವಮಾನಿಯ ಪ್ರೀಯ | ಭಾವದಲಿ ಪ್ರಾರ್ಥಿಸಲುಪೂವನಿತ್ತಭಯವನು | ಓದಿ ಪಾಲಿಸಿಹೇಕೇವಲಾ ನಂದಮಯ | ಗೋವಿದಾಂಪತಿಯೆ ಗುರುಗೋವಿಂದ ವಿಠ್ಠಲನೆ | ಭಿನ್ನಪವ ಸಲಿಸೋ 5
--------------
ಗುರುಗೋವಿಂದವಿಠಲರು
ದೂರದಿ ನಿಲ್ಲೆಲೆ ಬಾಲೆ ಎನ್ನ ಜಾರನು ಎಂದು ತಿಳಿದೆಯಾ ಜಾರೆ ಅಹಲ್ಯೆಯ ನಾರಿ ಮಾಡಿದ ಬ್ರಹ್ಮಚಾರಿಯೆಂದರಿತೆನೊ 1 ಅಂಗಸಂಗ ಯಾಚಿಸಲು ಎನ್ನ ಅ ನಂಗನೆಂದು ಭ್ರಮಿಸಿದೆಯಾ ಸಂಗದಿಂದ ಪಾಪಭಂಗ ಮಾಡುವ ಅ ನಂಗಜನಕನೆಂದರಿತೆ 2 ಪತಿಯನು ಬಿಟ್ಟು ನೀ ಬಂದು ಬಾಲೆ ಪತಿತಳಾಗದಿರು ಇಂದು ಪತಿತ ಪಾವನ ಜಗತ್ಪತಿಯು ಎನಗೆ ನೀನೆ ಪತಿಯೆಂದು ತಿಳಿದು ಬಂದಿರುವೆ 3 ನಿಂದಿಸರೇ ನಿನ್ನ ಜನರು ಬಾಲೆ ಹಿಂದು ಮುಂದು ನುಡಿಗಳಲಿ ಮುಕುಂದನೆ ಪ್ರಿಯಳನು ನಿಂದಿಪ ಜನರೆಲ್ಲ ಮಂದಮತಿಗಳಲ್ಲವೇನೊ 4 ನಿನ್ನ ನಡತೆ ತರವಲ್ಲ ಬಾಲೆ ಚೆನ್ನಾಗಿ ಯೋಚಿಸು ಎಲ್ಲ ಇನ್ನು ತಾಳಲಾರೆ ಕನ್ಯೆಯ ಮೇಲೆ ಪ್ರ ಸನ್ನನಾಗೋ ಶ್ರೀಕೃಷ್ಣ 5
--------------
ವಿದ್ಯಾಪ್ರಸನ್ನತೀರ್ಥರು
ನವವಿಧ ಭಕುತಿ ಶ್ರವಣದಿಂದಲಿ ಪಾಪಹರಣವಾಗುವುದೆಂದು ಕವಿಗಳೆಲ್ಲರು ಕೂಗಿ ಒದರುತಿಹರು ಕಿವಿಗಳಿಗಾನಂದದಾಭರಣದಂತಿಹುದು ಶ್ರೀ- ಹರಿಯ ದಿವ್ಯನಾಮಾಮೃತದರಸವು ಮಾಧವನ ಮೂರ್ತಿಯನು ನೋಡದಿಹ ಕಂಗಳು ನವಿಲು ಕಣ್ಣುಗಳೆಂದು ಪೇಳುತಿಹರು ಕಮಲನಾಭ ವಿಠ್ಠಲನ ಮಹಿಮೆ ಪೊಗಳೆ ಫಣಿರಾಜನಿಗೆ ವಶವಲ್ಲ ದೇವಾ 1 ಕೀರ್ತನವು ಮಾಡಲು ಪಾತಕವು ಪರಿಹರವು ಮಾತುಳಾಂತಕನ ಮಹಿಮೆ ಘನವು ಶ್ರೀಶನನು ಮನದಣಿಯ ಸ್ತೋತ್ರವನು ಮಾಡಲು ನಾಶಗೈವನು ದುರಿತರಾಶಿಗಳನು ಮಾಡಿದಪರಾಧಗಳ ಮಾಧವನು ಮನ್ನಿಸುವ ಶ್ರೀಧರನ ಸ್ತುತಿಸಿ ಕೊಂಡಾಡುತಿಹರ ಕರುಣಾಕರ ಕಮಲನಾಭವಿಠ್ಠಲ ದುರಿತದೂರನು ಕಾಯ್ವ ಶರಣಜನರ 2 ಸ್ಮರಣೆಯನು ಮಾಡುತಿಹ ಮನುಜರಿಗೆ ಇಹಪರದಿ ಪರಮ ಮಂಗಳನೀವ ಪರಮಾತ್ಮನು ದುರಿತ ದೂರನ ಪಾದಸ್ಮರಣೆ ಮಾಡುವರಿಗೆ ಪರಿಪರಿಯ ಸೌಖ್ಯಗಳ ಕೊಡುವ ದೇವ ಮಧುವೈರಿಯನು ಸ್ಮರಿಸೆ ಮುದದಿ ಸಂಪದವೀವ ಮೂರ್ತಿ ಶ್ರೀಮಾಧವ ಕನಕಗರ್ಭನ ಪಿತನು ಕರುಣಾನಿಧಿಯು ಕಮಲನಾಭ ವಿಠ್ಠಲ ಕಾಯ್ವ ಸುಜನರ3 ಶಿಲೆಯಾದ ಅಹಲ್ಯೆಯ ಪರಿಪಾಲಿಸಿದ ಪಾದ ಧರಣಿ ಈರಡಿಗೈದ ದಿವ್ಯಪಾದ ಫಣಿ ಹೆಡೆಯ ತುಳಿದ ಪಾದ ವರ ಋಷಿಗಳೆಲ್ಲ ವಂದಿಸುವ ಪಾದ ಇಂದಿರಾದೇವಿ ಬಹುಚಂದದಿಂದೊತ್ತುತ ಕಂದರ್ಪನಯ್ಯನಿಗೆ ಪಾದಸೇವ ಚಂದದಿಂದಲಿ ಮಾಡಿ ಮಾಧವನಿಗೆ ನಂದಗೋಪಿಯ ಕಂದ ಸಲಹುಎನಲು ಸುಂದರ ಶ್ರೀ ಕಮಲನಾಭ ವಿಠ್ಠಲನು ಒಲಿವ 4 ಅರ್ಚಿಸುತ ಮೆಚ್ಚಿಸುತ ಸಚ್ಚಿದಾನಂದನನು ಸ್ವಚ್ಛ ಭಕುತಿಲಿ ಸ್ತೋತ್ರ ಮಾಡುತಿಹರ ಅಷ್ಟ ಐಶ್ವರ್ಯಪ್ರದನು ನಿತ್ಯಮುಕ್ತಳ ಕೂಡಿ ಭಕ್ತರ ಹೃದಯದಲಿ ಪೊಳೆವ ದೇವ ಸತ್ಯ ಸಂಕಲ್ಪನಿಗೆ ಕಸ್ತೂರಿ ತಿಲಕವು ಮತ್ತೆ ಪಾವಡಿ ಥಳಥಳನೆ ಹೊಳೆಯೆ ಸುತ್ತ ಬ್ರಹ್ಮಾದಿಗಳ ಸ್ತುತಿಗೆ ದೇವ ಚಿತ್ತವಿಟ್ಟು ಕೇಳ್ವ ಮಾಧವನು ಮುದದಿ ಕರ್ತೃ ಕಮಲನಾಭ ವಿಠ್ಠಲನು ಕಾಯ್ವ 5 ವಂದನೆಯನು ಮಾಡೆ ಮುಕುಂದನು ಒಲಿವನು ಮುದದಿ ಕಂದರ್ಪನಯ್ಯ ಕಮಲಾಕ್ಷ ಹರಿಯೂ ಸುಂದರಾಂಗ ಶ್ರೀಹರಿಗೆ ಗಂಧ ಪೂಸಿದಳಾಗ ಇಂದೀವರಾಕ್ಷಿ ನಸುನಗುತ ಬೇಗ ಇಂದ್ರಾದಿ ಸುರರೆಲ್ಲ ಕೊಂಡಾಡೆ ಮಾಧವನ ವಂದಿಸುತ ಸಿರಬಾಗಿ ಚಂದದಿಂದ ಮಂದಾರ ಪಾರಿಜಾತಗಳ ತಂದು ತಂದೆ ಕಮಲನಾಭ ವಿಠ್ಠಲನ ಮುಡಿಗೆ ಸಂಭ್ರಮದಿ ಮಳೆಗರೆಯೆ ಚಂದದಿಂದ 6 ದಾಸ್ಯವನು ಕೈಕೊಂಬ ದಾಸ್ಯಜನರನು ಪೊರೆವ ಮೀಸಲಾಗಿಹನು ಹರಿದಾಸ ಜನಕೆ ಪೋಷಿಸೆಂದೆನುವವರ ದೋಷಗಳನೀಡಾಡಿ ದೋಷರಹಿತನು ಪೊರೆವ ಸರ್ವಜನರ ಪೂಸಿ ಪರಿಮಳ ದ್ರವ್ಯ ಶ್ರೀಸಹಿತ ಮೆರೆವ ವಾಸುಕೀಶಯನ ಸಜ್ಜನರ ಪೊರೆವ ಮುರಳೀಧರ ಮಾಧವನು ಕರುಣದಿಂದ ಶರಣ ಜನರನು ಪೊರೆವ ಮರೆಯದೀಗ ಕಮಲನಾಭವಿಠ್ಠಲನು ಕಾಯ್ವದೇವ 7 ಸಖ್ಯ ಸ್ನೇಹಗಳಿಂದ ಮುತ್ತಿನ್ಹಾರಗಳನು ಕೃಷ್ಣನ ಕೊರಳಿಗ್ಹಾಕುತಲಿಬೇಗ ಅರ್ಥಿಯಿಂದಲಿ ರತ್ನ ಮುತ್ತಿನ ಚಂಡುಗಳ ವಿಚಿತ್ರದಿಂದಾಡುತಿರೆ ನೋಡಿ ಸುರರು ಮುತ್ತಿನಕ್ಷತೆಗಳನು ಮಾಧವನ ಸಿರಿಮುಡಿಗೆ ಅರ್ಥಿಯಿಂದ ಸುರಿಸುತಿರೆ ಹರುಷದಿಂದ ಅಪ್ರಮೇಯನು ಶ್ರೀಶ ಶ್ರೀನಿವಾಸ ಸರ್ಪಶಯನನು ಕಮಲನಾಭ ವಿಠ್ಠಲ ನಿತ್ಯ ತೃಪ್ತನು ಪೊಳೆವ ಭಕ್ತರ ಹೃದಯದಲಿ 8 ನಿತ್ಯ ತೃಪ್ತಗೆ ಮಾಡಿ ಅರ್ಥಿಯಲಿ ಅಪ್ರಮೇಯನನು ಸ್ತುತಿಸಿ ಮುತ್ತು ಮಾಣಿಕ್ಯ ಬಿಗಿದ ತಟ್ಟೆಯಲಿ ತಾಂಬೂಲ ಅಚ್ಚುತಾನಂತನಿಗೆ ಅರ್ಪಿಸುತಲಿ ಭಕ್ತಿಯಲಿ ವಂದನೆಯ ಭಕ್ತವತ್ಸಲನಿಗೆ ನಿತ್ಯ ಮುಕ್ತಳು ಮಾಡಿ ಹರುಷದಿಂದ ಸತ್ಯ ಸಂಕಲ್ಪ ಶ್ರೀ ಮಾಧವನಿಗೆ ಮುತ್ತಿನಾರತಿ ಬೆಳಗಿ ಅರ್ಥಿಯಿಂದ ಕರ್ತೃ ಶ್ರೀ ಕಮಲನಾಭ ವಿಠ್ಠಲನ ಕೊಂಡಾಡಿ9
--------------
ನಿಡಗುರುಕಿ ಜೀವೂಬಾಯಿ
ನೆನೆಮನವನುದಿನ ಹನುಮದೀಶನ ಕನಸಿನಲಿ ತನುಸುಖವನು ಬಯಸದೆ ನಿ ಪ. ಮನಸಿಜ ಪಿತನನೆ ನೆನೆನೆನೆದ್ಹಿಗ್ಗುತ ನಿನ ಹೃದಯದಲ್ಹರಿಯನು ನಿಲಿಸುತಲೆ ತನುಮನವರ್ಪಿಸೆ ಜನುಮ ಜನುಮದಘ ವನು ಕಳೆವನು ರಾಮನುಮಾನವೇಕೆ 1 ಆರು ಅರಿಯದ ತೋರಿ ಭಕ್ತಿಯೇ ಬಾರಿ ಪಾಶದಿ ಕಟ್ಟಿಹ ಹನುಮ ವಾರಿಜನಾಭನು ಹಿಗ್ಗಿ ನಿಲುತಲೆ ಚಾರುಸೇವೆಗೆ ಬಹೆ ಎನೆ ರಾಮನ ನೆನೆ2 ಕಲ್ಲಾಗಿದ್ದ ಅಹಲ್ಯೆಯ ರಾಮನು ನಲ್ಲೆಯ ಮಾಡಿದನರಿಯೆಯ ಮನವೆ ಚೆಲ್ಲುತ ಕರುಣವ ಶಬರಿಯ ಎಂಜಲನುಂಡ ರಮಾ ವಲ್ಲಭ ಶ್ರೀ ಶ್ರೀನಿವಾಸ ಕರುಣಿಯೊ ನೆನೆ 3
--------------
ಸರಸ್ವತಿ ಬಾಯಿ
ರಾಮ ರಾಮ ಎಂಬೆರಡಕ್ಷರ | ಪ್ರೇಮದಿ ಸಲುಹಿತು ಸುಜನರನು ಪ ಹಾಲಾಹಲವನು ಪಾನವಮಾಡಿದ | ಫಾಲಲೋಚನನೆ ಬಲ್ಲವನು || ಆಲಾಪಿಸುತ್ತ ಶಿಲೆಯಾಗಿದ್ದ | ಬಾಲೆ ಅಹಲ್ಯೆಯ ಕೇಳೇನು 1 ಅಂಜಿಕೆಯಿಲ್ಲದೆ ಗಿರಿಸಾರಿದ ಕಪಿ-| ಕುಂಜರ ರಮಿಸುತÀ ಬಲ್ಲವನು || ಎಂಜಲ ಫಲಗಳ ಹರಿಗರ್ಪಿಸಿದ | ಕಂಜಲೋಚನೆಯ ಕೇಳೇನು 2 ಕಾಲವರಿತು ಸೇವೆಯ ಮಾಡಿದ ಲೋಲ ಲಕ್ಷ್ಮಣನೆ ಬಲ್ಲವನು || ವ್ಯಾಳಶಯನ ಶ್ರೀ ವಿಜಯವಿಠ್ಠಲನ ಲೀಲೆ ಶರಧಿಯ ಕೇಳೇನು3
--------------
ವಿಜಯದಾಸ
ರಾಮಚಂದ್ರ ನೀ ದಯಮಾಡೊಪ್ರೇಮದಿಂದಲಿ ಹರಕೆಯ ನೀಡೋ ಪ ನಿನ್ನ ಜನುಮದ ದಿನವಿದು ನೋಡೊಘನ್ನ ತರದ ಸಂತೋಷ ನೀಡೊಬನ್ನವನ್ನು ನೀನಿಂತೀಡಾಡೊಮನ್ನಿಸಿ ಎನ್ನನು ದಯದಿ ಕಾಪಾಡೊ 1 ವನಿತೆ ಅಹಲ್ಯೆಯ ಶಾಪವ ಹರಿದೆದನುಜರುಪಟಳ ತಾಪವ ತರಿದೆಮನುಜರೆಲ್ಲರ ಧರ್ಮದಿ ಪೊರೆದೆಘನ ಸೌಖ್ಯವ ಭೋಗಿಸುವಂತಿರದೆ 2 ಕುಣಿಯುವದು ಮುದದಲಿ ಭಕ್ತರ ಗಡಣದಣಿಯದು ನೋಡೈ ಸೀತಾರಮಣಗುಣಿ ನೆ ಸುಖವಕೊಡು ಕರುಣಾಭರಣಮಣಿವೆ ಗದುಗಿನ ವೀರನಾರಾಯಣ 3
--------------
ವೀರನಾರಾಯಣ
ರಾಮನ ನೋಡಿದೆ ರಘುಕುಲ ತಿಲಕನ ಕಾಯ ಕೌಸಲ್ಯ ತನಯನ ಪ ತಾಮಸ ದೈತ್ಯರ ಲೀಲೆಯಲಿ ಕೊಂದು ಭೂಮಿ ಭಾರವನಿಳುಹಿದ ನಿಸ್ಸೀಮನಅ.ಪ. ತಾಟಕಾದಿಗಳ ಘೋರಾಟವಿಯಲಿ ಪಾಟುಪಡಿಸಿದ ಹಾಟಕಾಂಬರನ ತೋಟಿಗೊದಗಿದ ಮಾರೀಚಾದಿಗಳ ಆಟನಾಡಿಸಿದ ನೀಟುಗಾರ 1 ಹಲವು ಕಾಲದಿ ಶಿಲೆಯಾಗಿರ್ದ ಲಲನೆ ಅಹಲ್ಯೆಯ ಶಾಪವ ಹರಿಸಿ ಕಲುಷವ ಕಳೆಯುತ ಕುಲಸತಿ ಮಾಡಿದ ನಳಿನ ನಯನನ 2 ಹರನ ಧನುವನು ಸ್ಮರನ ಧನುವಿನಂತೆ ತ್ವರದಿ ಮುರಿದು ನಿಂದ ಸುಕುಮಾರನ ಧರಣಿಪ ಜನಕನ ಭಕ್ತಿಗೆ ಒಲಿದು ಧರಣಿಜೆಯ ವರಿಸಿ ಹರುಷವಿತ್ತನ 3 ತಾತನ ಭಾಷೆಯ ಪ್ರೀತಿಯಿಂ ಸಲಿಸೆ ಸೀತೆ ಸಹಿತ ಭ್ರಾತ ಲಕ್ಷ್ಮಣವೆರಸಿ ಆತುರದಿಂದಲಿ ಅರಣ್ಯವನೈದಿ ಕೌತುಕ ತೋರುತ ಚರಿಸಿದವನ4 ಖರದೂಷಣ ತ್ರಿಶಿರಾದಿ ರಕ್ಕಸರ ಅರೆಕ್ಷಣದಲಿ ತರಿದು ಬಿಸುಟವನ ಹಿರಣ್ಯಮೃಗವ ಬೆನ್ನಟ್ಟಿ ಕೆಡಹುತ ವರ ಜಟಾಯು ಶಬರಿಗೆ ಒಲಿದವನ 5 ವಾತಸುತನ ಕಂಡಾತನ ಪದುಳಿಸಿ ತರಣಿ ಸುತಗೆ ಅಭಯವನಿತ್ತ ಜಾತವೇದನೆದುರಲಿ ಸಖ್ಯವ ಮಾಡಿ ಘಾತಕ ವಾಲಿಯ ನಿಗ್ರಹಿಸಿದನ 6 ಕೋತಿ ಕರಡಿಗಳ ಹಿಂಡನು ಕೂಡಿಸಿ ಸೇತುವೆಗಟ್ಟಿಸಿ ಜಲಧಿಯ ದಾಟಿ ಪಾತಕಿ ರಾವಣನÀ ಶಿರಗಳ ಕಡಿದು ಸೀತೆಯ ಸೆರೆಯನು ಬಿಡಿಸಿದಾತನ 7 ಮೊರೆಯನು ಪೊಕ್ಕಾ ವರ ಭೀಷಣನ ಕರುಣದಿ ಕರೆದು ಕರವನು ಪಿಡಿದು ಧರೆಯಿದು ಸ್ಥಿರವಾಗಿರುವ ಪರಿಯಂತ ದೊರೆತನ ಮಾಡೆಂದ್ಹರಸಿದಾತನ 8 ಅಕ್ಕರೆಯಿಂದಲಿ ಅರ್ಚಿಸುವರಿಗೆ ತಕ್ಕಂತೆ ವರಂಗಳ ನೀಡುತಲಿ ಮಿಕ್ಕು ರಾಜಿಸುತಿಹ ಪಂಪಾಪುರದ ಚಕ್ರತೀರ್ಥದಿ ನೆಲೆಸಿಹನ 9 ಕಂತುವೈರಿ ವಿರುಪಾಕ್ಷಗೆ ತಾರಕ ಮಂತ್ರ ನಾಮಕನಾಗಿರುತಿರ್ಪನ ಯಂತ್ರೋದ್ಧಾರನಾಗಿರುವ ಹನುಮನ ಮಂತ್ರಿಯ ಮಾಡಿಕೊಂಡು ರಾಜಿಪನ 10 ದುಷ್ಟ ರಕ್ಕಸ ದಮನವ ಮಾಡಿ ಶಿಷ್ಟ ಜನರುಗಳಿಷ್ಟವ ಸಲಿಸುತ ಶ್ರಿಷ್ಟಿಗೊಡೆಯನೆನಿಸಿ ಮೆರೆಯುತಲಿರುವ ದಿಟ್ಟ ಶ್ರೀ ರಂಗೇಶವಿಠಲನ 11
--------------
ರಂಗೇಶವಿಠಲದಾಸರು
ಶ್ರೀ ರಾಮಚಂದ್ರ ರಘುರಾಮಾ ರಘುರಾಮಾ ಕರವ ಎನ್ನಫ ಓಡಿಸಿ ಪೊರೆ ಪ ಕ್ಷಿತಿ ಭಾರಕೆÀ ಖಳ ತತಿ ಸಂಹರಿಸಲು ದ್ವಿತಿಯ ಯುಗದಿ ದಶರಾಥಸುತನೆನಿಸಿದ 1 ಶಿಲೆಯಾದ ಅಹಲ್ಯೆಯ ತುಳಿದ ಪಾದದಿಂ ಕಲುಷಿತ ಕಳೆದುಸಿರದೆ ಸಲುಹಿದ ಕರುಣಿ 2 ಧನುಮುರಿದು ಕ್ಷೋಣಿ ಕುಮಾರಿಯ ಪಾಣಿ ಪಿಡಿದ ಮೂರುತಿಯೇ 3 ಪ್ರೀತಿಯಿಂದ ರವಿಜಾತನ ಭ್ರಾತಗೆ ಭೀತಿಯ ಬಿಡಿಸಿದ ವಾತಜ ನಮಿತ 4 ದುರುಳ ದುಶ್ಯಾಸನನ ಧುರದಿ ತರಿದು ಘನ ಸುರರಿಗೆ ಸೌಖ್ಯವಗರೆದ ಮಹಾತ್ಮ 5 ನಿನ್ನ ದರುಶನದಿಲೆನ್ನ ಜನ್ಮ ಪಾವನ್ನವಾಯತೈ ಸನ್ನುತ ಮಹಿಮಾ6 ಶಿಂಧಶತಪುರ ಮಂದಿರ ಶಾಮ ಸುಂದರವಿಠಲ ಬಂಧುರ ಚರಿತ 7
--------------
ಶಾಮಸುಂದರ ವಿಠಲ
ಸತಿ ಸಹಿತ ಕಶ್ಯಪರು ರತುನದಾರತಿ ಪಿಡಿದು ರತಿಪತಿಪಿತನಿಗೆ ಅತಿಹರುಷದಿ ಅತಿಶಯದ ಮಹಿಮೆಗಳ ಪೊಗಳುತಲಿ ಶ್ರೀಹರಿಗೆ ಕುಶಲದಾರತಿ ಎತ್ತಿಬೆಳಗಿದರು ನಿತ್ಯ ಶುಭ ಮಂಗಳಂ 1 ಅನಸೂಯ ಸಹಿತ ಅತ್ರಿಯರು ಬೇಗನೆ ಬಂದು ನಳಿನಾಕ್ಷನ ಚರಣಕ್ಕೆರಗಿ ನಿಂದು ವಿಧವಿಧದ ಆಟಗಳ ಆಡಿದ ಶ್ರೀಹರಿಗೆ ಪದುಮದಾರತಿ ಎತ್ತಿ ಬೆಳಗಿದರು ನಿತ್ಯ ಶುಭಮಂಗಳಂ 2 ಶೀಲವತಿಯಾದ ಸುಶೀಲೆ ಸಹಿತ ಭಾರದ್ವಾಜ ಋಷಿಗಳು ತಮ್ಮ ಆಶ್ರಮದಲಿ ಶ್ರೀಲಕುಮಿವಲ್ಲಭಗೆ ಶೀಘ್ರದಿಂದಲಿ ತಾವು ಗೋಮೇಧಿಕದಾರುತಿ ಬೆಳಗಿದರು ನಿತ್ಯ ಶುಭಮಂಗಳಂ 3 ಕುಮುದ್ವತಿ ಸಹಿತ ವಿಶ್ವಾಮಿತ್ರ ಋಷಿಗಳು ಕನಕ ಮಂಟಪದಿ ಮೆರೆಯುವ ದೇವಗೆ ಸನಕಾದಿವಂದ್ಯನಿಗೆ ವನಜಾಕ್ಷಿಯರಸನಿಗೆ ಕನಕದಾರತಿ ಎತ್ತಿ ಬೆಳಗಿದರು ನಿತ್ಯ ಶುಭಮಂಗಳಂ 4 ಪ್ರಹ್ಲಾದವರದನಿಗೆ ಅಹಲ್ಯೆಯ ಸಹಿತದಿ ಫುಲ್ಲಲೋಚನಪ್ರಿಯಗೆ ಋಷಿಗೌತಮ ಮಲ್ಲಿಗೆಹಾರಗಳು ಧರಿಸಿ ಶೋಭಿಪ ಹರಿಗೆ ಚಲ್ವನವರತ್ನದಾರತಿ ಎತ್ತುತಾ ನಿತ್ಯ ಶುಭಮಂಗಳಂ 5 ರೇಣುಕಾ ಸಹಿತ ಜಗದಗ್ನಿ ಋಷಿಗಳು ತಮ್ಮ ಧ್ಯಾನಗೋಚರನಾದ ಪರಮಾತ್ಮನ ಮಾನಿನಿಮಣಿ ಲಕುಮಿಯೊಡನೆ ಶ್ರೀಕೃಷ್ಣನಿಗೆ ನೀಲಮಾಣಿಕ್ಯದ ಆರತಿ ಎತ್ತುತ ನಿತ್ಯ ಶುಭಮಂಗಳಂ 6 ಸತಿ ಸಹಿತ ವಶಿಷ್ಠ ಋಷಿಗಳು ಇಷ್ಟಮೂರುತಿಯಾದ ವರಕಮಲನಾಭ ವಿಠ್ಠಲನ ಸ್ಮರಿಸುತ ನಿತ್ಯ ನವರತ್ನದಾರತಿ ಬೆಳಗಿದರು ನಿತ್ಯ ಶುಭಮಂಗಳಂ 7 ಮಂಗಳಂ ಸಪ್ತಋಷಿಗಳು ಪರ್ಣಶಾಲೆಯೊಳು ಗಾಂಗೇಯನುತನ ಪೂಜಿಸಿ ಹರುಷದಿ ಸಂಗೀತಲೋಲನಿಗೆ ಶೃಂಗಾರ ಪುರುಷನಿಗೆ ರಂಗಿನಾರತಿಯೆತ್ತಿ ಬೆಳಗಿದರು ನಿತ್ಯ ಶುಭಮಂಗಳಂ 8
--------------
ನಿಡಗುರುಕಿ ಜೀವೂಬಾಯಿ
ಸಾರಸ ನಯನ ಶ್ರೀರಾಮಚಂದ್ರನ ಚರಿತೆ ಸಾರ ಹೃದಯ ಶ್ರೀ ಪ ಭವ ಮುಖರರ ಮೊರೆಯ ಕೇಳಿ ಧಾರುಣಿಯೊಳಗವತಾರ ಮಾಡಿದನಮ್ಮಾ ಅ.ಪ. ದಶರಥ ಸುತನೆನಿಸಿ ವಸುಧೆಯೊಳವತರಿಸಿ ಕುಶಿಕಸುತನ ಯಜ್ಞವ ನೆರೆಪಾಲಿಸಿ ಅಶಮವಾಗಿದ್ದ ಅಹಲ್ಯೆಯ ಶಾಪ ಪರಿಹರಿಸಿ ವಸುಧೀಶ ಜನಕನಾಸ್ಥಾನ ಪ್ರವೇಶಿಸಿ ಪಶುಪತಿಯ ಕೋದಂಡ ಖಂಡಿಸಿ ಶಶಿವದನೆ ಜಾನಕಿಯನೊಲಿಸಿ ಅಸಮ ಭಾರ್ಗವನೊಡನೆ ಸರಸವ ನೆಸಗಿ ಜಗದೊಳು ಲೀಲೆ ತೋರಿದ 1 ಜನಕನಾಜ್ಞೆಯ ತಾಳಿ ಜನಕ ಸುತೆಯ ಸಹಿತ ಅನುಜನೊಡನೆ ಹೊರಟು ವನವಾಸಕೆ ಘನಭಕ್ತಿ ಭರಿತ ಶ್ರೀ ಭರತಗೆ ಪಾದುಕೆ ನೀನು ಕರುಣಿಸಿ ಮುಂದೆ ವನದಂಡಕವ ಪೊಕ್ಕು ದುರುಳ ವಿರಾಧಮುಖರನು ಹನನಗೈದಾ ಬಳಿಕ ಶರಭಂಗ ಮುನಿಗೆ ಸದ್ಗತಿಯಿತ್ತಗಸ್ತ್ಯನ ವಿನುತ ಅಸ್ತ್ರಗಳನು ಪಡೆದನಾ 2 ಪಂಚವಟಿಯೊಳಗೆ ಸಂಚುಗೈಯುತ ಬಂದ ಕಾಂಚನಮೃಗವನು ಪಂಚಕಗೊಳಿಸಿ ಕುಂಚಿತ ಮತಿಯ ದ್ವಿಪಂಚಶಿರನು ಬರಲು ವಂಚನೆಯಿಂದಪರಿಹರಿಸಲು ಸೀತೆಯ ಸಂಚುಕಾಣದೆ ವನವನದೊಳು ಸಂಚರಿಸುತಲಿ ಶೋಕ ತೋರುತ ಪಂಚಶರಹತನಂತೆ ಬಳಲುತ ಪಂಚಶರ ಪಿತ ಬಂದ ಪಂಪೆಗೆ 3 ಮಾರುತಸುತನ ವಿನಯಭರಿತ ವಾಕ್ಯಕೆ ಮೆಚ್ಚಿ ತರಣಿಸುತನ ಕೂಡೆ ಸಖ್ಯವ ಬೆಳೆಸಿ ದುರಿತವಗೈದ ವಾಲಿಯ ನಿಗ್ರಹಿಸಿ ಕಪಿ ವರ ಸುಗ್ರೀವಗೆ ರಾಜ್ಯಕರುಣಿಸಿದಾ ಬಳಿಕ ಪರಮ ವಜ್ರಶರೀರಿ ಪವನಜ ಶರಧಿಯ ಲಂಘಿಸಿ ಧರಣಿತನಯಳಿ ಗರುಹಿ ಕುಶಲವ ಮುದ್ರಿಕೆಯನಿತ್ತು ಉರುಹಿ ಲಂಕೆಯ ಬರಲು ಒಲಿದನು 4 ಭಕ್ತ ವಿಭೀಷಣನಿಗೆ ಇತ್ತು ಅಭಯವನು ಶರಧಿ ಬಂಧಿಸಿ ದಾಟಿ ಹತ್ತು ತಲೆಯವನ ಪುರವ ಪ್ರವೇಶಿಸಿ ದೈತ್ಯಶೂರರನ್ನೆಲ್ಲ ಮೃತ್ಯು ವಶವ ಮಾಡಿ ಮತ್ತೆ ಕುಂಭಕರ್ಣೇಂದ್ರಜಿತ್ ಮುಖ ದೈತ್ಯರನು ಸಂಹರಿಸಿ ರಣದೊಳು ಶತ್ರು ಭಯಂಕರನಾಗಿ ಮೆರೆದನು ಸ್ತುತ್ಯ ಮಹಿಮ ಶ್ರೀ ಕರಿಗಿರೀಶನು 5
--------------
ವರಾವಾಣಿರಾಮರಾಯದಾಸರು
ಸುಂದರ ಮೂರುತಿ ಹರಿಯೆ ಬಾ- ರೆಂದು ಕಶ್ಯಪ ಋಷಿ ಅದಿತಿಯರು ಮಂದಹಾಸದಿ ನಮ್ಮ ಮಂದಿರಕೀಗ ಗೋ- ವಿಂದ ಬಾ ಶ್ರೀಮುಕುಂದ ಬಾ ಯಾದವ ವೃಂದ ಬಾ ಬಲುಮುದದಿಂದ ಬಾ ಬಾ- ರೆಂದು ಕರದಾರು ಶೋಭಾನೆ 1 ಅಚ್ಚುತಾನಂತ ಶ್ರೀಹರಿ ನೀನು ಸಚ್ಚಿದಾನಂತಾತ್ಮನೆ ನೀನು ಮಿತ್ರೆ ಲಕುಮಿ ಒಡಗೂಡುತ ಬಾರೆಂದು ಅತ್ರಿಯರು ಸ್ತುತಿಪರು ಮಿತ್ರೆಯರು ಪಾಡ್ವರು ಕೀರ್ತಿಪರು ಅನಸೂಯಾತ್ರಿಯರು ಬಾರೆಂದು ಕರೆದಾರು ಶೋಭಾನೆ 2 ಭಾಗವತರ ಪ್ರಿಯ ಬಾರೆಂದು ಭಾರದ್ವಾಜರು ಭಕ್ತಿಯಲಿ ಸತಿ ಸುಶೀಲೆ- ಯರು ಸುಂದರ ನಾರಿಯರು ಕರೆವರು ಕಂಸಾರಿ ಬಾರೆಂದು ಕರದಾರು ಶೋಭಾನೆ 3 ಹಸ್ತಿವರದ ಹರಿ ಬಾರೆಂದು ವಿಶ್ವಾಮಿತ್ರರು ಹರುಷದಲಿ ಸತಿ ಸಹಿತದಿ ಕರೆವರು ಭಕ್ತಿಯಲಿ ಪರಮಾಸಕ್ತಿಯಲಿ ಹರಿಯನು ಸ್ತೋತ್ರದಲಿ ಭೂ ರಮಾ ಪಾರ್ಥಸಾರಥಿಯ ಕರದಾರು ಶೋಭಾನೆ 4 ಕೌಶಿಕ ಯಜ್ಞಪಾಲನೆ ಬಾ ಕಂಸನ ಸಭೆಯಲಿ ಸೆಳೆದನೆ ಬಾ ಹಂಸವಾಹನಪಿತ ಬಾರೆಂದು ಕರೆವರು ಗೌತಮರು ಪತ್ನಿ ಅಹಲ್ಯೆಯರು ಪಾಡುತ ಪ್ರಾರ್ಥಿಪರು ಮುರಹರಿ ಗೋಪಾಲ ಬಾರೆಂದು ಕರದಾರು ಶೋಭಾನೆ 5 ಜಗದುದರನೆ ಶ್ರೀ ಹರಿಯೆ ಬಾ ನಿಗಮತಂದು ಸುತಗಿತ್ತನೆ ಬಾ ಝಗಿಝಗಿಸುವ ಆಭರಣಗಳ್ಹೊಳೆಯುತ ಬಾರೆಂದು ಜಯ ಜಯವೆನ್ನುವರು ಋಷಿ ಜಗದಗ್ನಿಯರು ರೇಣುಕ ಸಹಿತ ಶ್ರೀಶನ ಕರದಾರು ಶೋಭಾನೆ 6 ಮದನ ಗೋಪಾಲನಿಗೆ ಮಂಗಳ ಯದುಕುಲ ತಿಲಕನಿಗೆ ಮಂಗಳ ಕಮಲಾನಾಭ ವಿಠ್ಠಲನಿಗೆ ಸತಿ ಅ- ರುಂಧತಿಯರು ಜಯ ಜಯ ಮಂಗಳವೆಂದು ಕರದಾರು ಶೋಭಾನೆ7 ಶೋಭನವೆನ್ನಿರೆ ಶ್ರೀಹರಿಗೆ ಶೋಭನವೆನ್ನಿರೆ ಮಾಧವಗೆ ಶೋಭನವೆನ್ನಿರಿ ಸೊಬಗುಳ್ಳ ದೇವಗೆ ಶೋಭಾನೆ ಸಿರಿಯರಸಗೆ ದಿವ್ಯ ಶೋಭಾನೆ ಪರಮಪುರುಷನಿಗೆ ಶೋಭಾನೆ ಶೋಭನ ಗರುಡಗಮನಗÉಶೋಭನವೆನ್ನಿರೆ ಶೋಭಾನೆ 8
--------------
ನಿಡಗುರುಕಿ ಜೀವೂಬಾಯಿ