ನ್ಯಾಯದ ನುಡಿ ನರಲೀಲೆಗಿದು ಬಲ್ಲವರಲಿ ಸಲ್ಲದು
ನ್ಯಾಯದ ನುಡಿ ನರಲೀಲೆಗಿದು ಪ.
ಮಾಯಾತೀತ ಮನೋಭವತಾತ ಪ
ರಾಯಣ ತವ ಗುಣ ನಾನೆಂತರಿವೆನು ಅ.ಪ.
ಪಾದ ಶ್ರೀದ
ಚೆಲುವೆ ರಮಾಕರನಳಿನಾಶ್ರಯಕರಮಾದ
ಜಲಜಭವಾದಿ ಸುರಾಳಿಗಳರ್ಚಿಪ
ಸುಲಲಿತ ತವ ಪದದೊಲವೆಂತರಿವೆನು 1
ಶರಣಾಗತಜನ ದುರಿತನಿವಾರಣ ನೀನು ಇನ್ನೇನು
ತರುಣೀಮಣಿಯಳ ಸೆರೆಯನು ಬಿಡಿಸುವದಿನ್ನು
ಕರುಣಾಕರ ನಿನ್ನ ಸ್ಮರಿಸುವಳನುದಿನ
ಸ್ಥಿರಚರ ಜೀವಾಂತರ ಪರಿಪೂರ್ಣನೆ2
ಆಕ್ಷೇಪಿಸದಿರು ರಕ್ಷಿಸು ರಘುಕುಲಚಂದ್ರ ರಾಜೇಂದ್ರ
ಲಕ್ಷ್ಮೀನಾರಾಯಣ ಸದ್ಗುಣ ಗಣಸಾಂದ್ರ
ಈಕ್ಷಿಸು ಕರುಣಾಕಟಾಕ್ಷದಿ ಪೂರ್ವದ
ಲಕ್ಷಣ ಹೊಂದಲಿ ಲಕ್ಷ್ಮಣಾಗ್ರಜನೆ3