ಒಟ್ಟು 1 ಕಡೆಗಳಲ್ಲಿ , 1 ದಾಸರು , 1 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಗುರುಭಜಕರಿಗೆ ದುರಿತ ಕರ್ಮ ಉಂಟೆ || ಆಗಮದಿ ನಡೆವವಗೆ ಅನ್ಯ ಮಾರ್ಗವುಂಟೆ | ರೋಗವಿಲ್ಲದವನಿಗೆ ಪಥ್ಯ ಉಂಟೆ 1 ವೇದಾಂತ ತಿಳಿದವಗೆ ಭೇದಬುದ್ಧಿಗಳುಂಟೆ | ಸಾಧು ಸಂಗದಲಿ ದುರ್ವಾದವುಂಟೆ | ಬೋಧ ನೆಲೆಗೊಂಡವಗೆ ಕ್ರೋಧ ಜನಿಸುವದುಂಟೆ | ನಾದ ಬಿಂದು ಕಳಾತೀತಗೆಣೆಯುಂಟೆ 2 ತಂದೆ ಭವತಾರಕನ ಹೊಂದಿರಲು ಭಯವುಂಟೆ | ಇಂದುಧರನಲ್ಲಿ ಸಂದೇಹವುಂಟೆ | ಕುಂದು ಹೆಚ್ಚೆಂಬೋದು ಅಲ್ಲಿ ಜನಿಸುವದುಂಟೆ | ಒಂದೆ ಬ್ರಹ್ಮವ ಕಂಡ ಮಹಿಮಗೆರಡುಂಟೆ ? 3
--------------
ಭಾವತರಕರು