ಒಟ್ಟು 1 ಕಡೆಗಳಲ್ಲಿ , 1 ದಾಸರು , 1 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಪಾಲಿಸು ದಯಾಕರನೆ ನೀಲಮೇಘಶ್ಯಾಮ ಪಾಲಿಸು ದಯಾಕರನೆ ಪ ಪಾಲಿಸು ಎನ್ನ ಕರುಣಾಳು ವ್ಯಾಲಮಾಲ ಬಾಲನ ದಯದಿಂ ಮಾಲತುಲಸೀವನ ಅ.ಪ ಬಂದುಬಿದ್ದೆನಯ್ಯ ಸಂಸಾರ ದಂದುಗ ವೆಂಬ ಮಾಯಬಲೆಯೊಳು ನೊಂದು ಕಾಯ ಬಂಧನಿವಾರಿಸಯ್ಯ ನೊಂದಿಸಿ ಅರ್ಥವ ತಂದು ಸತಿಯು ಸುತ ರೆಂದು ಸಲಹಿ ಯಮ ಬಂಧಕೀಡಾದೆನು ಮುಂದೆ ಇಂಥ ಬವಣಿಂದೆ ತಾರದೆನ್ನ 1 ರಿಣವೆಂಬ ಸೂತಕಿದು ಎನ್ನಗೆ ಘನವಾಗಿ ಕಾಡುವುದು ಇನ್ನಿದು ಜನು ಜನುಮದಿ ಬಿಡದು ಬೆನ್ನತ್ತಿ ಬರ್ಪುದು ಗನ್ನಗತಕನಾಗಿನ್ನು ಭವಭವಂಗ ಬನ್ನ ಬಡಲಿಬೇಕೊ ಮನ್ನಿಸಿ ದಯದಿಂ ನಿನ್ನ ಕೃಪೋದಕ ವನ್ನು ತಳೆದು ಬೇಗೆನ್ನ ಶುದ್ಧಮಾಡು 2 ಆಗಿಹೋದದ್ದ್ಹೋಯ್ತು ಮುಂದಿಹ್ಯ ಭೋಗ ಬೇಡ ಜಗತ್ತು ಪಾಲನೆ ಬಾಗುವೆ ಮನವರಿತು ಚರಣಕೆ ಶಿರವಿತ್ತು ಭೋಗಭಾಗ್ಯದಾಸೆ ನೀಗಿಸಿ ಈ ಭವ ಸಾಗರ ದಾಂಟಿಸು ಯೋಗಿಗಳರಸನೆ ನಾಗಶಯನ ದಯಮಾಡಿ ದಾಸನ ದು ರ್ಭೋಗ ದೂರಮಾಡು ಜಗಮೋಹ ಶ್ರೀರಾಮ 3
--------------
ರಾಮದಾಸರು