ಕಂಗೆಡದಿರು ಮನವೆ
ಕಂಗೆಡದಿರು ಒಡನೊಡನೆ ನೆರೆದು ಬಂದು ಪ
ಜನಕೆ ಗ್ರಾಸವೆಂತಹುದೆಂದು
ಅನುಮಾನ ಹಚ್ಚಿಕೊಂಡು
ಬಡವಾಗದಿರೆಲೆ ಆಲೋಚನೆ ಮಾಡು
ನಿನ್ನೊಳಗೆ ತಿಳಿದು ಮರಳಿ ಮರಳಿ
ಘನಮಹಿಮ ನಾರಾಯಣ ಅನಾದಿ ಸ್ವಾಭಾವಿಕ
ಚಿನುಮಯ ಸತ್ಯಸಂಕಲ್ಪ ದೇವ| 1
ಇನಿತು ಜೀವಿಗಳಿಗೆ ಕಾಲಕಾಲಕೆ
ಗ್ರಾಸ ಮಾಡಿಯಿಪ್ಪಾ
ಕ್ಷಣಮಿರಗೊಡದೆ ಆವಲ್ಲಿಯಿದ್ದರೂ
ವುಣಿಸುವ ಉಚಿತವನ್ನೆ ತಿಳಿದು ನೋಡಿ
ದಿನ ದಿನಕೆ ಅಧಿಕವಿಲ್ಲಾ ತತ್ಪೂರ್ವ ಚೇತನಕೆ
ನಿರ್ಮಾಣ ಮಾಡಿದಂತೆ ಬೊಮ್ಮಾ2
ಫಣಿತಿಯಲ್ಲಿ ಬರೆದಿರುವ ಆಯು:ಕರ್ಮವಿದ್ಯಾ
ಧನ ನಿಧಾನನೆನೆಸಿ ಶ್ರೀಹರಿಯ ಆಜ್ಞಾದಿ
ಜನಿಸುವಾಗಲೆ ಅವರವರವಾಡಿಪನಾ
ಕೊನೆಯ ಸೆರಗಿನಲಿ ಕಟ್ಟಿಹನೋ
ನಿನಗೆ ಕಾಣಬಾರದೋ ಪದಶಾಸ್ತ್ರಗಳಿಂದೆ
ಗುಣಿಸಿ ನೋಡಿದರೆ ಕಾರುಣಿಕÀವಹುದೊ 3
ಅಣುಮಾತ್ರನಿಂ ನಿಂದಾ ಆಗುವಾ ಶೌರ್ಯವೇನೋ
ಅನುಭವಕೆ ತಂದುಕೊಂಡು ಗ್ಲಾನಿಯಾಗೋ
ಮಿನುಗು ಚಿಂತೆಗಳಿಂದಾ ಬರುವ ಲಾಭವೇ ಕಾಣೆ
ತನುವ ಶೋಷಿಸಿ ವಿರೋಧಾವಾಗಿ ಕೊಂಬೆ
ಸಿರಿ ನಮ್ಮ ವಿಜಯವಿಠಲರೇಯಾ
ಮನುಜಾದಿ ದೇಹಿಗಳಿಗೆ ಸ್ವಾಮಿಯಾಗಿಪ್ಪನೋ